2023 ಮುನ್ನೋಟ | ಹೊಸ ವರ್ಷದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಏನೆಲ್ಲ ಬದಲಾವಣೆ, ಯಾವೆಲ್ಲ ಟ್ರೆಂಡ್? - Vistara News

ಆರೋಗ್ಯ

2023 ಮುನ್ನೋಟ | ಹೊಸ ವರ್ಷದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಏನೆಲ್ಲ ಬದಲಾವಣೆ, ಯಾವೆಲ್ಲ ಟ್ರೆಂಡ್?

2023 ಹೊಸ ವರ್ಷವನ್ನು ಸ್ವಾಗತಿಸಲು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಹೊಸ ವರ್ಷದಲ್ಲಿ ಸಾಕಷ್ಟು ನಿರೀಕ್ಷೆಗಳು ಸಹಜ. ಅದೇ ರೀತಿ, ಆರೋಗ್ಯ ವಲಯದಲ್ಲಿನ ಬೆಳವಣಿಗೆಗಳೂ ಕುತೂಹಲಕಾರಿಯಾಗಿವೆ(2023 ಮುನ್ನೋಟ).

VISTARANEWS.COM


on

Health @ 2023 Munnota
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರ್ಷದ ಕೊನೆ ಬಂತೆಂದರೆ ಕಳೆದು ಹೋದ ದಿನಗಳ ಮೆಲುಕು ಸಹಜ. ಮಾತ್ರವಲ್ಲ, ಮುಂಬರುವ ವರ್ಷದಲ್ಲಿ ಏನೇನಾಗಬಹುದು ಎಂಬ ನಿರೀಕ್ಷೆಗಳ ಪಟ್ಟಿಯೂ ಇರಬಹುದು. ಇದೀಗ ಬರುವ ವರ್ಷದಲ್ಲಿ ಆರೋಗ್ಯ ಸೇವಾ ಕ್ಷೇತ್ರದಲ್ಲಿ ಏನೆಲ್ಲಾ ಟ್ರೆಂಡಿಂಗ್‌ ಇರಬಹುದು, ಜನ ಯಾವುದಕ್ಕೆಲ್ಲಾ ಮಣೆ ಹಾಕಲಿದ್ದಾರೆ ಮತ್ತು ಏನೆಲ್ಲಾ ಬದಲಾವಣೆಗಳು ಈ ಕ್ಷೇತ್ರದಲ್ಲಿ ಆಗಲಿವೆ? ಆ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ(2023 ಮುನ್ನೋಟ).

ಸ್ವಾಸ್ಥ್ಯ
ಈ ಶಬ್ದ ಇತ್ತೀಚಿನ ವರ್ಷಗಳಲ್ಲಿ ಎಂದಿಗಿಂತ ಹೆಚ್ಚು ಕೇಳಿಬರುತ್ತಿದೆ. ಕೆಲವರು ತಮ್ಮ ಖಾಸಗಿ ಸ್ವಾಸ್ಥ್ಯದತ್ತ ಹೆಚ್ಚು ಗಮನ ಹರಿಸಿದರೆ, ಇಡೀ ಸಮಾಜದ ಮತ್ತು ಭೂಮಿಯ ಸ್ವಾಸ್ಥ್ಯದ ಬಗ್ಗೆ ಲಕ್ಷ್ಯ ಕೊಡುವವರ ಸಂಖ್ಯೆಯೂ ಈಗೀಗ ಹೆಚ್ಚುತ್ತಿದೆ. ನಮ್ಮ ದೇಹ ಮತ್ತು ಮನಸ್ಸಿಗೆ ಬೇಕಾಗಿರುವುದೇನು ಎಂಬ ಜನ ಲಕ್ಷ್ಯಕೊಟ್ಟು ಬದುಕನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಕೋವಿಡ್‌ ಮತ್ತು ನಂತರದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸ್ಥಿತಿಗತಿಗಳು ಬದುಕನ್ನು ಬೇರೆಯದೇ ರೀತಿಯಲ್ಲಿ ನೋಡಲು ಜನರನ್ನು ಪ್ರೇರೇಪಿಸುತ್ತಿವೆ.

ಧ್ವನಿ ಚಿಕಿತ್ಸೆ
ಸೌಂಡ್‌ ಸ್ಕೇಪ್‌ಗಳೆನ್ನಬಹುದಾದ ಸಣ್ಣ ಧ್ವನಿದೃಶ್ಯಗಳ ಮೂಲಕ ಮಾನಸಿಕ ಆಯಾಸ, ಒತ್ತಡವನ್ನು ನಿವಾರಿಸಿ, ಮೆದುಳನ್ನು ಧನಾತ್ಮಕ ದಿಕ್ಕಿನೆಡೆಗೆ ತಿರುಗಿಸುವ ಚಿಕಿತ್ಸೆಯಿದು. ಇದರಲ್ಲಿ ಪ್ರಮುಖವಾಗಿ ಬೈನೌರಲ್‌ ಬೀಟ್ಸ್‌ ಮತ್ತು ಐಸೋಕ್ರೋನಿಕ್‌ ಧ್ವನಿಗಳು ಬಳಕೆಯಲ್ಲಿವೆ. ಎರಡೂ ಕಿವಿಗಳಿಗೆ ಬೇರೆಬೇರೆ ಫ್ರಿಕ್ವೆನ್ಸಿಯ ಶಬ್ದಗಳನ್ನು ಒಟ್ಟಿಗೇ ಕೇಳಿಸಿದಾಗ, ತನ್ನದೇ ಆದ ಮೂರನೆಯ ಮತ್ತು ಭಿನ್ನವಾದ ಶಬ್ದ ಅಥವಾ ರಿದಂ ಅನ್ನು ಮೆದುಳು ಸೃಷ್ಟಿಸಿಕೊಳ್ಳುತ್ತದೆ. ಇದನ್ನು ಬೈನೌರಲ್‌ ಬೀಟ್ಸ್‌ ಎಂದು ಕರೆಯಲಾಗುತ್ತದೆ. ಮಾನಸಿಕ ಸ್ವಾಸ್ಥ್ಯವನ್ನು ಸುಧಾರಿಸಿ, ಒತ್ತಡ ನಿವಾರಿಸಿ, ಗಮನ ಕೇಂದ್ರೀಕರಿಸುವಲ್ಲಿ ಅತ್ಯುತ್ತಮ ಪರಿಣಾಮ ಬೀರುವ ತಂತ್ರವಿದು.

ವಿಶ್ರಾಂತಿ
ಉಗುರಿನಿಂದ ಹೋಗುವುದಕ್ಕೆ ಕೊಡಲಿ ತೆಗೆದುಕೊಳ್ಳುವ ಈ ದಿನಗಳಲ್ಲಿ, ಕೆಲವು ಸರಳ ಮತ್ತು ಪ್ರಾಚೀನ ತಂತ್ರಗಳು ನಮ್ಮ ಬದುಕನ್ನು ಗುಣಾತ್ಮಕವಾಗಿ ಬದಲಿಸಬಲ್ಲವು ಎಂಬುದನ್ನು ಮತ್ತೆ ಕಂಡುಕೊಳ್ಳಲಾಗುತ್ತಿದೆ. ಇದೇ ನಿಟ್ಟಿನಲ್ಲಿ, ದೇಹಕ್ಕೆ ಪುನಶ್ಚೈತನ್ಯ ನೀಡುವ ಯೋಗ ಮತ್ತು ಅದರದ್ದೇ ಮಾದರಿಯ ಇತರ ವಿದ್ಯೆಗಳಿಗೆ ಜನಪ್ರಿಯತೆ ಹೆಚ್ಚಬಹುದು. ಮಾತ್ರವಲ್ಲ, ನಿದ್ದೆಯಂಥ ಸರಳ ವಿಶ್ರಾಂತಿಯೂ ನಮಗೆಷ್ಟು ಅತ್ಯಗತ್ಯ ಎಂಬುದು ಜನರಿಗೆ ಮನದಟ್ಟಾಗುತ್ತಿರುವ ದಿನಗಳಿವು. ಹಾಗೆಂದೇ ಯೋಗ ನಿದ್ರೆ, ಧ್ಯಾನ ನಿದ್ರೆ, ನಿದ್ದೆ ಮಾಡಿಸಲೆಂದೇ ರೂಪಿಸಲಾದ ಧ್ವನಿಮುದ್ರಿಕೆಗಳು, ಹಾಡು-ಕಥೆಗಳು- ಇಂಥ ಸಕಲೆಂಟು ಮಾದರಿಗಳು ಜನರಿಗೆ ಅಚ್ಚುಮೆಚ್ಚಾಗುತ್ತಿವೆ. ಕೈಯಲ್ಲಿರುವ ತಂತ್ರಜ್ಞಾನಕ್ಕೆ ಶರಣಾಗಿ ನಿದ್ದೆ ಬಿಡುತ್ತಿರುವ ಜನರನ್ನು ನಿದ್ದೆ ಮಾಡಿಸಲು ಈಗ ಅಂಗೈಗೊಂಬೆಗಳೇ ಸಜ್ಜಾಗಿವೆ.

ಮಾನಸಿಕ ದೃಢತೆ
ಈಗಿನ ಫಿಟ್ನೆಸ್‌ ಮಾದರಿಗಳು ಬದಲಾಗುತ್ತಿವೆ. ದೇಹ ದಂಡಿಸಿ ಅದಕ್ಕೊಂದು ಸರಿಯಾದ ರೂಪ ಕೊಡುವುದು ಮಾತ್ರವೇ ಅಲ್ಲ, ಮಾನಸಿಕವಾಗಿ ದೃಢತೆಯನ್ನು (ಅಂದರೆ, Emotional resilience) ನಮಗದು ನೀಡಬೇಕು. ಹಾಗಾಗಿ “ಈ ವರ್ಕೌಟ್‌ನಿಂದ ನಾನು ಹೇಗೆ ಕಾಣುತ್ತೇನೆ?” ಎನ್ನುವ ಪ್ರಶ್ನೆಗಿಂತಲೂ, “ಇದರಿಂದ ನನಗೇನು ಅನಿಸುತ್ತಿದೆ ಮತ್ತು ಬದುಕು ಎಷ್ಟು ಬದಲಾಗುತ್ತದೆ?” ಎಂಬ ಪ್ರಶ್ನೆ ಮುನ್ನೆಲೆಗೆ ಬರುತ್ತಿದೆ.

ತೇಲುವ ಕೊಳಗಳು
ಇದೊಂದು ಹಳೆಯ ಮತ್ತು ಸರಳ ತಂತ್ರಜ್ಞಾನ. ಎಪ್ಸಂ ಉಪ್ಪನ್ನು ಸೇರಿಸಿದ ನೀರಿನಲ್ಲಿ ತೇಲುವುದಕ್ಕೆ ಸಣ್ಣ ಕೊಳಗಳನ್ನು ಸೃಷ್ಟಿಸಲಾಗುತ್ತದೆ. ಇದರಲ್ಲಿ ಒಂದೆರಡು ತಾಸು ದೇಹ ತೇಲುತ್ತಿರಬೇಕು- ದೇಹ ಎಂದರೆ, ಜೀವಂತ ವ್ಯಕ್ತಿಗಳೇ ಹೊರತು ಅನ್ಯಥಾ ಭಾವಿಸಬೇಡಿ! ಇದರಿಂದ ಮಾನಸಿಕ ಒತ್ತಡ ನಿವಾರಣೆಯಂತೂ ಸರಿಯೇ; ಜೊತೆಗೆ, ಮಾಂಸಖಂಡಗಳ ಮೇಲಿನ ಒತ್ತಡ (ಮನಸ್ಸಿನ ಒತ್ತಡದಲ್ಲಿ ದೇಹವನ್ನು ಬಿಗಿ ಹಿಡಿಯುವುದರಿಂದ ಉಂಟಾಗುವಂಥದ್ದು), ಖಿನ್ನತೆ, ವಿವರಿಸಲಾಗದ ನೋವು- ಇಂಥ ಹಲವು ಸಮಸ್ಯೆಗಳು ಶಮನವಾಗುತ್ತವೆ.

ಕ್ರಯೋಥೆರಪಿ ಮತ್ತು ತಣ್ಣೀರಿನ ಚಿಕಿತ್ಸೆ
ಇದೂ ಸಹ ಹೊಸ ಸೀಸೆಯಲ್ಲಿರುವ ಹಳೆದ ಮಧುವೇ! ಮಾಂಸಖಂಡಗಳಲ್ಲಿನ ನೋವು ಮತ್ತು ಉರಿಯೂತಕ್ಕೆ ಕ್ರೀಡಾಪಟುಗಳು ಮೊದಲಿನಿಂದ ಐಸ್‌ ಇಡುವ ಕ್ರಮವನ್ನು ಬಳಸುತ್ತಿದ್ದಾರೆ. ಇದೇ ತಂತ್ರಜ್ಞಾನ ಆಧರಿಸಿ ರೂಪಿಸಲಾಗಿರುವುದು ಕ್ರಯೋಥೆರಪಿ- ಅತ್ಯಂತ ತಣ್ಣಗಿನ ದ್ರವ ಅಥವಾ ಉಪಕರಣವನ್ನು ಬಳಸಿ, ಅನಗತ್ಯ ಅಂಗಾಂಶಗಳನ್ನು ತೆಗೆಯಲಾಗುತ್ತದೆ. ಮಾತ್ರವಲ್ಲ, ಹೃದ್ರೋಗ ಚಿಕಿತ್ಸೆಗೆ, ರಕ್ತ ಪರಿಚಲನೆಯ ಸಮಸ್ಯೆಗೆ, ಮೈಗ್ರೇನ್‌ ಮತ್ತು ಮೂಡ್‌ ಏರುಪೇರುಗಳಿಗೆ- ಹೀಗೆ ಹತ್ತು ಹಲವು ರೀತಿಯಲ್ಲಿ ಚಿಕಿತ್ಸೆಗಾಗಿ ಇದೀಗ ಬಳಕೆಗೆ ಬರುತ್ತಿದೆ.

ಧ್ಯಾನ
ಇದಂತೂ ನಮ್ಮ ಪ್ರಾಚೀನ ಅಸ್ತ್ರ. ಪ್ರತಿದಿನ ನಿಯಮಿತವಾಗಿ ಧ್ಯಾನ ಅಥವಾ mindfulness meditation ಬದುಕಿನಲ್ಲಿ ನಿಧಾನವಾಗಿ, ಆದರೆ ದೊಡ್ಡ ಮಟ್ಟದಲ್ಲಿ ಬದಲಾವಣೆ ತರಬಲ್ಲದು ಎಂಬುದೀಗ ವೈಜ್ಞಾನಿಕವಾಗಿ ಸಾಬೀತಾಗಿದೆ. ನಮ್ಮ ದೇಹದ ಬಹಳಷ್ಟು ನೋವು-ನಷ್ಟಗಳಿಗೆ ಮಾನಸಿಕ ಒತ್ತಡ, ತುಮುಲಗಳೇ ಕಾರಣ ಎಂಬುದನ್ನು ತಜ್ಞರೂ ಒಪ್ಪುತ್ತಾರೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ l ನಮ್ಮ ಕ್ಲಿನಿಕ್; ಆರೋಗ್ಯ ಕ್ಷೇತ್ರದ ಸುಧಾರಣೆಯತ್ತ ಮಹತ್ವದ ಹೆಜ್ಜೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Nosebleeds In Summer: ಬೇಸಿಗೆಯ ತಾಪಕ್ಕೆ ಮೂಗಿನಲ್ಲಿ ರಕ್ತಸ್ರಾವವೇ? ತಡೆಯಲು ಇಲ್ಲಿವೆ ಸರಳ ಉಪಾಯ

ಬೇಸಿಗೆಯಲ್ಲಿ ಕಾಡುವ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ಪೈಕಿ ಮೂಗಿನಲ್ಲಿ ರಕ್ತ ಸೋರುವುದೂ ಒಂದು. ಅತಿ ಬಿಸಿಯಾದ ಮತ್ತು ಶುಷ್ಕ ವಾತಾವರಣವಿದ್ದಾಗ ಈ ಸಮಸ್ಯೆ ಕಾಡುವುದು ಹೆಚ್ಚು. ಅತಿಯಾದ ಚಳಿಯ ಜೊತೆಗಿನ ಒಣ ಹವೆ ಇದ್ದರೂ ಈ ತೊಂದರೆ ಕಾಡಬಹುದು. ಆದರೆ ಹೆಚ್ಚಿನ ಜನ ಬೇಸಿಗೆಯಲ್ಲಿ ಈ ಸಮಸ್ಯೆಯನ್ನು ಎದುರಿಸುತ್ತಾರೆ. ಅಲ್ಪಸ್ವಲ್ಪ ರಕ್ತ ಸೋರುತ್ತಿದ್ದರೆ ಇದನ್ನು ತಡೆಯುವುದಕ್ಕೆ ಕೆಲವು ಮನೆಮದ್ದುಗಳು ಸಹಾಯ ಮಾಡಬಹುದು. ಆದರೆ ಮೂಗಿನಲ್ಲಿ ಹೆಚ್ಚು ರಕ್ತಸ್ರಾವ (Nosebleeds In Summer) ಆಗುತ್ತಿದ್ದರೆ ವೈದ್ಯರನ್ನು ಕಾಣಬೇಕಾದೀತು.

VISTARANEWS.COM


on

Nosebleeds In Summer
Koo

ಚಳಿಗಾಲದಲ್ಲಿ ಮಾತ್ರವಲ್ಲ, ಬೇಸಿಗೆಯಲ್ಲೂ ಮೂಗಿನಲ್ಲಿ ರಕ್ತಸ್ರಾವ ಆಗುವುದು ಸಾಮಾನ್ಯ. ಆದರೆ ಹಾಗೇಕಾಗುತ್ತದೆ? ಹಾಗೆ ಆಗದಂತೆ ತಡೆಯುವುದಕ್ಕೆ ಸಾಧ್ಯವಿಲ್ಲವೇ- ಈ ಎಲ್ಲ ಮಾಹಿತಿಗಳ ಜೊತೆಗೆ ಅದನ್ನು ತಡೆಯುವ ಸರಳ (Nosebleeds In Summer) ಉಪಾಯಗಳು ಇಲ್ಲಿವೆ. ಬೇಸಿಗೆಯಲ್ಲಿ ಕಾಡುವ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ಪೈಕಿ ಮೂಗಿನಲ್ಲಿ ರಕ್ತ ಸೋರುವುದೂ ಒಂದು. ಅತಿ ಬಿಸಿಯಾದ ಮತ್ತು ಶುಷ್ಕ ವಾತಾವರಣವಿದ್ದಾಗ ಈ ಸಮಸ್ಯೆ ಕಾಡುವುದು ಹೆಚ್ಚು. ಅತಿಯಾದ ಚಳಿಯ ಜೊತೆಗಿನ ಒಣ ಹವೆ ಇದ್ದರೂ ಈ ತೊಂದರೆ ಕಾಡಬಹುದು. ಆದರೆ ಹೆಚ್ಚಿನ ಜನ ಬೇಸಿಗೆಯಲ್ಲಿ ಈ ಸಮಸ್ಯೆಯನ್ನು ಎದುರಿಸುತ್ತಾರೆ. ಅಲ್ಪಸ್ವಲ್ಪ ರಕ್ತ ಸೋರುತ್ತಿದ್ದರೆ ಇದನ್ನು ತಡೆಯುವುದಕ್ಕೆ ಕೆಲವು ಮನೆಮದ್ದುಗಳು ಸಹಾಯ ಮಾಡಬಹುದು. ಆದರೆ ಮೂಗಿನಲ್ಲಿ ಹೆಚ್ಚು ರಕ್ತಸ್ರಾವ ಆಗುತ್ತಿದ್ದರೆ ವೈದ್ಯರನ್ನು ಕಾಣಬೇಕಾದೀತು. ಮೂಗಿನಲ್ಲಿ ರಕ್ತ ಸೋರುವುದಕ್ಕೆ ಕಾರಣಗಳನ್ನು ಮೊದಲು ಅರ್ಥ ಮಾಡಿಕೊಳ್ಳೋಣ. ಒಣಗಿದ ಬಿಸಿ ಹವೆಯಿಂದಾಗಿ ಮೂಗಿನ ಒಳ ಭಾಗದಲ್ಲಿರುವ ಸೂಕ್ಷ್ಮ ರಕ್ತನಾಳಗಳು ಒಡೆದಾಗ ಉಂಟಾಗುವ ಸಮಸ್ಯೆಯಿದು. ಕೆಲವೊಮ್ಮೆ ಸೋಂಕಿನಿಂದಲೂ ಈ ಸಮಸ್ಯೆ ಕಾಣಬಹುದು. ಅತಿಯಾಗಿ ರಕ್ತಸ್ರಾವ ಆಗುತ್ತಿದ್ದರೆ, ಬೇರೆಯದೇ ಸಮಸ್ಯೆಯನ್ನಿದು ಸೂಚಿಸಬಹುದು. ಆದರೆ ಬೇಸಿಗೆಯ ಕಾರಣದಿಂದಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರೆ, ಕೆಲವು ಮನೆಮದ್ದುಗಳು ಇದಕ್ಕೆ ಉಪಶಮನ ನೀಡುತ್ತವೆ.

drink Water night

ನೀರು ಕುಡಿಯಿರಿ

ಇದಕ್ಕಿರುವ ಅತ್ಯಂತ ಸರಳವಾದ ಮದ್ದೆಂದರೆ ನೀರು ಕುಡಿಯುವುದು. ಹೆಚ್ಚಿನ ನೀರು ದೇಹ ಸೇರಿದಂತೆ ಕೋಶಗಳಲ್ಲಿರುವ ಶುಷ್ಕತೆ ಕಡಿಮೆಯಾಗುತ್ತದೆ. ಇದರಿಂದ ಮೂಗಿನಲ್ಲಿರುವ ಮ್ಯೂಕಸ್‌ ಕೋಶಗಳು ಸಹ ತಮ್ಮ ತೇವವನ್ನು ಕಾಪಿಟ್ಟುಕೊಳ್ಳುವುದಕ್ಕೆ ಸಹಾಯವಾಗುತ್ತದೆ. ಅಂದರೆ, ಒಣ ಹವೆಯ ಪ್ರತಿಕೂಲ ಪರಿಣಾಮ ಬೀರದಂತೆ ತಡೆಯುವುದಕ್ಕೆ ಇದು ಸುಲಭದ ಉಪಾಯ.

ಹ್ಯುಮಿಡಿಫಯರ್‌

ಬೇಸಿಗೆಯ ನೆವದಿಂದ ಎಷ್ಟೋ ಬಾರಿ ಅತಿಯಾಗಿ ಫ್ಯಾನ್‌ ಅಥವಾ ಎಸಿ ಬಳಸುತ್ತೇವೆ. ಇದರಿಂದ ಮನೆಯ ಅಥವಾ ಕಚೇರಿಯ ವಾತಾವರಣದಲ್ಲಿ ಶುಷ್ಕತೆ ಹೆಚ್ಚಾಗುತ್ತದೆ. ನೈಸರ್ಗಿಕವಾದ ಬಿಸಿ ಗಾಳಿಯ ಜೊತೆಗೆ ಇದೂ ಸಹ ಸಮಸ್ಯೆಗಳನ್ನು ಹೆಚ್ಚಿಸಬಹುದು. ಹಾಗಾಗಿ ವಾತಾವರಣದ ತೇವಾಂಶವನ್ನು ಹೆಚ್ಚಿಸುವಂಥ ಹ್ಯುಮಿಡಿಫಯರ್‌ ಬಳಸುವುದು ಇನ್ನೊಂದು ಮಾರ್ಗ. ಇದರಿಂದ ಮೂಗಿನ ಅಂಗಾಂಶಗಳು ಹಾನಿಗೊಳ್ಳುವುದನ್ನು ತಡೆಯಬಹುದು.

Moisturizer

ಮಾಯಿಶ್ಚರೈಸರ್‌ ಬಳಕೆ

ಮೂಗಿನ ಒಳ ಭಾಗ ಒಣಗಿ ಬಿರಿಯದಂತೆ ತಡೆಯಲು ಮಾಯಿಶ್ಚರೈಸರ್‌ ಬಳಕೆ ಮಾಡುವುದು ಉಪಯುಕ್ತ. ಇದಕ್ಕಾಗಿ ಇರುವ ಜೆಲ್‌ ಇಲ್ಲವೇ ಸ್ಟ್ರೇ ಬಳಸಬಹುದು. ಸಾಲೈನ್‌ ಸ್ಪ್ರೇ ಬಳಕೆಯೂ ಉಪಯುಕ್ತವಾದೀತು. ಇವನ್ನೆಲ್ಲ ಹೊಸದಾಗಿ ಖರೀದಿಸಿ ತರುವಷ್ಟು ವ್ಯವಧಾನ ಇಲ್ಲದಿದ್ದರೆ, ಸರಳವಾಗಿ ಕೊಬ್ಬರಿ ಎಣ್ಣೆಯನ್ನು ಮೂಗಿನ ಒಳಭಾಗದ ಅಂಗಾಂಶಗಳಿಗೆ ಹೆಚ್ಚಿ. ಇದು ಪರಿಣಾಮಕಾರಿಯಾಗಿ ತೇವವನ್ನು ಹಿಡಿದಿಡುತ್ತದೆ.

ಮುಚ್ಚಿಕೊಳ್ಳಿ

ತೀವ್ರ ತಾಪದ ಹೊತ್ತಿನಲ್ಲಿ ಮನೆಯಿಂದ ಹೊರಗೆ ಹೋಗುವಾಗ ಮುಖಕ್ಕೆ ಮಾಸ್ಕ್‌ ಹಾಕುವುದು ಸಹಾಯಕ. ಇದರಿಂದ ಒಣ ಹವೆಯನ್ನು ಉಸಿರಾಡುವುದು ಸ್ವಲ್ಪ ಮಟ್ಟಿಗಾದರೂ ತಪ್ಪಿಸಬಹುದು. ತಿಳಿ ಬಣ್ಣದ ದೊಡ್ಡ ಹ್ಯಾಟ್‌ ಧರಿಸುವುದರಿಂದ ಮುಖದ ಮೇಲೆ ಬಿಸಿಲು ನೇರವಾಗಿ ಬೀಳದಂತೆ ಮಾಡಬಹುದು. ಈ ಕ್ರಮಗಳೆಲ್ಲ ಸಣ್ಣವೇ ಆದರೂ, ಒಟ್ಟಾರೆಯಾಗಿ ಸಮಸ್ಯೆಯನ್ನು ದೂರ ಮಾಡುವಲ್ಲಿ ನೆರವಾಗುತ್ತವೆ.

ಇದನ್ನೂ ಓದಿ: Mango For Diabetes: ಮಧುಮೇಹಿಗಳೂ ಮಾವಿನಹಣ್ಣಿನ ರುಚಿ ಸವಿಯಬಹುದೇ? ಇಲ್ಲಿದೆ ಉತ್ತರ!

ಮಾಡಬೇಡಿ

ಮೂಗನ್ನು ಶುಚಿಗೊಳಿಸುವ ನೆವದಲ್ಲಿ ನಾಸಿಕದ ಮೇಲೆ ಯಾವುದೇ ರೀತಿಯಲ್ಲೂ ತೀರಾ ಒತ್ತಡ ಹಾಕಬೇಡಿ. ಈಗಾಗಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರಂತೂ ಈ ಬಗ್ಗೆ ಹೆಚ್ಚಿನ ಎಚ್ಚರ ವಹಿಸಿ. ಮೂಗಿನ ಮೇಲೆ ಒತ್ತಡ ಹಾಕಿದರೆ ಬಿರಿದ ಕೋಶಗಳು ದುರಸ್ತಿಯಾಗುವುದು ನಿಧಾನವಾಗುತ್ತದೆ ಅಥವಾ ಇನ್ನಷ್ಟು ಬಿರಿದು ಸಮಸ್ಯೆಯನ್ನೇ ಸೃಷ್ಟಿಸುತ್ತವೆ. ಅಲರ್ಜಿಗಳನ್ನು ಹತ್ತಿಕ್ಕಿ. ದಿನವಿಡೀ ಜೋರಾಗಿ ಸೀನುತ್ತಲೇ ಇದ್ದರೆ, ಮೂಗು ಸೋರುವಾಗ ರಕ್ತಸ್ರಾವ ಆಗುವುದು ಖಚಿತ.

Winter transitions to summer

ಆಹಾರ

ಆರೋಗ್ಯಕರವಾದ ಆಹಾರವನ್ನು ಕಡ್ಡಾಯವಾಗಿ ಪಾಲಿಸಿ. ಸೆಕೆಯ ನೆವವೊಡ್ಡಿ ಅತಿಯಾದ ತಣ್ಣಗಿನ ಪೇಯಗಳನ್ನು ಕುಡಿಯುವುದು, ಐಸ್‌ಕ್ರೀಮ್‌ ಮೆಲ್ಲುವುದು- ಇವೆಲ್ಲ ಮೂಗಿನ ಸಮಸ್ಯೆಗಳನ್ನು ಹೆಚ್ಚಿಸಬಹುದು; ಗಂಟಲಿನ ಸೋಂಕಿಗೆ, ಶೀತ-ನೆಗಡಿಗೆ ಕಾರಣವಾಗಬಹುದು. ವಿಟಮಿನ್‌ ಸಿ ಹೆಚ್ಚಿರುವ ಆಹಾರವನ್ನು ವಿಫುಲವಾಗಿ ಸೇವಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ.

Continue Reading

ಆರೋಗ್ಯ

Hair Growth Tips: ಕೂದಲು ಉದುರುವುದಕ್ಕೆ ಬೀಟಾ ಕ್ಯಾರೊಟಿನ್‌ ಮದ್ದು!

ಕೂದಲು ಉದುರುವ ಸಮಸ್ಯೆ ಈಗ ಯಾರಿಗಿಲ್ಲ ಹೇಳಿ? ಹಾಗೆಂದು ಇದಕ್ಕೆ ಮದ್ದೇ ಇಲ್ಲ ಎಂದು ಹೇಳಲೂ ಆಗದು. ಬೀಟಾ ಕ್ಯಾರೊಟಿನ್‌ನಂಥ ಉತ್ಕರ್ಷಣ ನಿರೋಧಕಗಳು ಕೂದಲಿನ ಆರೋಗ್ಯ ವರ್ಧನೆಯಲ್ಲಿ ಮಹತ್ವದ ಕೆಲಸ ಮಾಡಬಲ್ಲವು. ಈ ಬಗೆಗಿನ (Hair Growth Tips) ವಿವರಗಳು ಇಲ್ಲಿವೆ.

VISTARANEWS.COM


on

Hair Growth Tips
Koo

ದೇಹದ ಆರೋಗ್ಯ ರಕ್ಷಣೆಯಲ್ಲಿ ಉತ್ಕರ್ಷಣ ನಿರೋಧಕಗಳ ಪಾತ್ರ ಹಿರಿದು. ರೋಗಗಳನ್ನು ದೂರ ಇರಿಸುವುದು ಮಾತ್ರವಲ್ಲ, ಹಲವು ವಿಷಯಗಳು ಏರುಪೇರಾಗದಂತೆ ನಿರ್ವಹಿಸಲು ಸಹಾಯವನ್ನೂ ಮಾಡುತ್ತದೆ. ಉದಾಹರಣೆಗೆ ಹೇಳುವುದಾದರೆ, ಕೂದಲು ಉದುರದಂತೆ ಕಾಪಾಡಿಕೊಳ್ಳಲು ನಮಗೆ ಬೀಟಾ ಕ್ಯಾರೊಟಿನ್‌ ಎಂಬ ಉತ್ಕರ್ಷಣ ನಿರೋಧಕ ಸಹಾಯ ಮಾಡುತ್ತದೆ. ಆದರೆ ಆ ಸತ್ವ ನಮಗೆ ದೊರೆಯುವುದು ಹೇಗೆ? ಯಾವ ಆಹಾರಗಳಿಂದ ಅದು ದೊರೆಯುತ್ತದೆಂದು ತಿಳಿದರೆ, ಕೂದಲು ಉದುರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಕೂದಲಿನ ಸಮಸ್ಯೆಗೆ ಬೀಟಾ ಕ್ಯಾರೊಟಿನ್‌ ಹೇಗೆ ನೆರವಾಗುತ್ತದೆ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳೋಣ. ಈ ಸತ್ವವನ್ನು ವಿಟಮಿನ್‌ ಎ ಆಗಿ ದೇಹ ಪರಿವರ್ತಿಸಿಕೊಳ್ಳುತ್ತದೆ. ಎ ಜೀವಸತ್ವವು ತಲೆಯ ಚರ್ಮದ ತೇವವನ್ನು ಕಾಪಾಡಿಕೊಂಡು, ಕೂದಲಿನ ಬುಡವನ್ನು ಸುದೃಢಗೊಳಿಸುತ್ತದೆ. ಬೇರು ಭದ್ರವಾಗಿದ್ದಾಗ ಸತ್ವಗಳನ್ನು ಪಡೆಯುವುದು ಕಷ್ಟವಲ್ಲ. ಹೀಗೆ ಕೂದಲು ಉದುರುವುದು ಕಡಿಮೆಯಾಗಿ, ನಯವಾದ, ಹೊಳಪಿನ ಕೂದಲನ್ನು ಪಡೆಯಬಹುದು. ಇದಕ್ಕೆ ಬೇಕಾದ (Hair Growth Tips) ಆಹಾರಗಳು ಯಾವುವು?

Sweet potatoes have the ability to control diabetes and prevent cancer

ಗೆಣಸು

ವಿಟಮಿನ್‌ ಎ ಆಗಿ ಪರಿವರ್ತನೆ ಆಗಬಲ್ಲಂಥ ಬೀಟಾ ಕ್ಯಾರೊಟಿನ್‌ಗಳು ಇದರಲ್ಲಿ ಹೇರಳವಾಗಿವೆ. ಜೊತೆಗೆ, ಪ್ರೊಟೀನ್‌, ಕಬ್ಬಿಣ, ವಿಟಮಿನ್‌ ಸಿಯಂಥ ಸತ್ವಗಳು ಇದರಲ್ಲಿ ತುಂಬಿವೆ. ಇದರಿಂದ ತಲೆಯ ಚರ್ಮದ ಆರೋಗ್ಯವನ್ನು ಸುಧಾರಿಸುವುದು ಮಾತ್ರವಲ್ಲ, ಕೂದಲು ದುರ್ಬಲವಾಗಿ ತುಂಡಾಗದಂತೆಯೂ ತಡೆಯಬಹುದು. ಹೀಗಾಗಿ ಕೂದಲು ಉದುರುವುದು ನಿಂತು, ಗಾತ್ರದಲ್ಲೂ ಸುಧಾರಣೆ ಆಗುತ್ತದೆ.

Yellow capsicum

ದಪ್ಪ ಮೆಣಸು

ಇವುಗಳಲ್ಲಿ ಕೆಂಪು ಬಣ್ಣದವುಗಳಲ್ಲಿ ಉತ್ಕರ್ಷಣ ನಿರೋಧಕಗಳು ಹೆಚ್ಚು. ಇದಲ್ಲಿರುವ ಬೀಟಾ ಕ್ಯಾರೊಟಿನ್‌ ಮತ್ತು ವಿಟಮಿನ್‌ ಸಿ ಅಂಶಗಳು ಹೆಚ್ಚಿನ ಪ್ರಮಾಣದ ಕೊಲಾಜಿನ್‌ ಉತ್ಪಾದನೆಗೆ ನೆರವಾಗುತ್ತವೆ. ಕೊಲಾಜಿನ್‌ ಹೆಚ್ಚು ಉತ್ಪಾದನೆ ಆದಷ್ಟಕ್ಕೂ ಕೂದಲಿನ ಬಲವರ್ಧನೆಯಾಗುತ್ತದೆ. ಈ ಮೂಲಕ ಉದುರುವುದನ್ನು ಕಡಿಮೆ ಮಾಡಬಹುದು.

Spinach

ಪಾಲಕ್‌ ಸೊಪ್ಪು

ಕೇವಲ ಪಾಲಕ್‌ ಮಾತ್ರವಲ್ಲ, ಯಾವುದೇ ಹಸಿರು ಸೊಪ್ಪುಗಳ ಸೇವನೆ ಕೂದಲಿನ ಆರೋಗ್ಯದಲ್ಲಿ ಸುಧಾರಣೆಯನ್ನು ತರಬಲ್ಲದು. ಇದರಲ್ಲಿರುವ ವಿಟಮಿನ್‌ ಸಿ, ಇ, ಕಬ್ಬಿಣದ ಸತ್ವಗಳು ಕೂದಲಿನ ಒಟ್ಟಾರೆ ಆರೋಗ್ಯಕ್ಕೆ ಬಹಳಷ್ಟು ಒಳಿತು ಮಾಡುತ್ತವೆ. ಕೂಲಿನ ಬುಡವನ್ನು ಭದ್ರಮಾಡಿ, ತುಂಡಾಗದಂತೆ ನೋಡಿಕೊಂಡು, ಬೆಳವಣಿಗೆಗೆ ಪ್ರೋತ್ಸಾಹ ನೀಡುತ್ತವೆ. ಹಾಗಾಗಿ ಪಾಲಕ್‌ ಸೇರಿದಂತೆ ಯಾವುದೇ ಹಸಿರು ಸೊಪ್ಪುಗಳ ಸೇವನೆ ಕೂದಲಿನ ಬೆಳವಣಿಗೆಗೆ ಉಪಯುಕ್ತ.

Carrot

ಕ್ಯಾರೆಟ್‌

ಬೀಟಾ ಕ್ಯಾರೊಟಿನ್‌ ಸಾಂದ್ರತೆಯ ವಿಷಯದಲ್ಲಿ ಗಜ್ಜರಿ ಸಾಕಷ್ಟು ಹೆಸರಾಗಿದೆ. ಇದು ಕೂದಲಿನ ಬೆಳವಣಿಗೆಗೆ ಮಾತ್ರವಲ್ಲ, ತಲೆಯ ಚರ್ಮದ ಆರೋಗ್ಯ ಸುಧಾರಣೆಯಲ್ಲೂ ಮಹತ್ವದ ಕೊಡುಗೆ ನೀಡುತ್ತದೆ. ಕೂದಲಿನ ಬಲ ವೃದ್ಧಿಸಿ, ಗಾತ್ರವನ್ನು ಹೆಚ್ಚಿಸುತ್ತದೆ.

Melons

ಮೆಲನ್‌ಗಳು

ಈ ಹಣ್ಣುಗಳಲ್ಲಿ ವಿಟಮಿನ್‌ ಸಿ, ಬೀಟಾ ಕ್ಯಾರೊಟಿನ್‌ ಸೇರಿದಂತೆ ಹಲವು ರೀತಿಯ ಉತ್ಕರ್ಷಣ ನಿರೋಧಕಗಳು ಇವೆ. ಕೂದಲಿನ ಬುಡದ ತೇವವನ್ನು ಕಾಪಾಡಲು ಇವು ಸಹಕಾರಿ. ಅಂದರೆ ಇವೆಲ್ಲ ನೈಸರ್ಗಿಕ ಕಂಡೀಶನರ್‌ಗಳಂತೆ ಕೆಲಸ ಮಾಡುತ್ತವೆ. ಇದರಿಂದ ಕೂದಲಿನ ಕೋಶಗಳು ಆರೋಗ್ಯಯುತವಾಗಿದ್ದು, ಕೇಶರಾಶಿ ನಳನಳಿಸುತ್ತದೆ.

ಇದನ್ನೂ ಓದಿ: Mango For Diabetes: ಮಧುಮೇಹಿಗಳೂ ಮಾವಿನಹಣ್ಣಿನ ರುಚಿ ಸವಿಯಬಹುದೇ? ಇಲ್ಲಿದೆ ಉತ್ತರ!

ವಿಟಮಿನ್‌ ಸಿ ಆಹಾರಗಳು

ಬೆರ್ರಿಗಳು ಮತ್ತು ಸಿಟ್ರಸ್‌ ಹಣ್ಣುಗಳು ಈ ಪಟ್ಟಿಯಲ್ಲಿ ಮೊದಲು ನಿಲ್ಲುತ್ತವೆ. ಇವುಗಳಲ್ಲಿ ವಿಟಮಿನ್‌ ಎ ಮಾತ್ರವಲ್ಲ, ಹಲವು ರೀತಿಯ ಖನಿಜಗಳು, ಫ್ಲೆವನಾಯ್ಡ್‌ಗಳು ವಿಫುಲವಾಗಿವೆ. ಇವೆಲ್ಲವೂ ಕೊಲಾಜಿನ್‌ ಉತ್ಪಾದನೆಗೆ ನೆರವಾಗಿ, ಕೂದಲಿನ ಆಯಸ್ಸನ್ನೂ ಹೆಚ್ಚಿಸುತ್ತವೆ. ಇಂಥವುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಕೂದಲಿನ ಆರೋಗ್ಯಕ್ಕೆ ಮಾತ್ರವೇ ಅಲ್ಲ, ದೇಹದ ಒಟ್ಟಾರೆ ಆರೋಗ್ಯ ಸುಧಾರಣೆಯನ್ನೂ ಸಾಧಿಸಬಹುದು.

Continue Reading

ಆರೋಗ್ಯ

Tamarind Fruit Benefits: ಜೀರ್ಣಶಕ್ತಿ ಹೆಚ್ಚಿಸಿ ತೂಕ ಇಳಿಸಲು ಹುಣಸೇ ಹಣ್ಣು ಸುಲಭದ ಉಪಾಯ!

ಜೀವನಶೈಲಿ, ಕೆಲಸದ ಒತ್ತಡ, ಹೊರಗೆ ತಿನ್ನುವ ಅಭ್ಯಾಸ, ಚಟುವಟಿಕೆಗಳಿಲ್ಲದ ಕೆಲಸ, ಹಾರ್ಮೋನ್‌ ಸಮಸ್ಯೆ, ರಾತ್ರಿಪಾಳಿ ಸೇರಿದಂತೆ ಅನೇಕ ವಿಚಾರಗಳು ಇಂದು ತೂಕ ಏರಿಕೆಗೆ ಕಾರಣವಾಗುತ್ತದೆ. ಆದರೆ ಇಳಿಸುವ ಬಗ್ಗೆ ಪ್ರಯತ್ನಕ್ಕೆ ತಕ್ಕ ಫಲ ದೊರೆಯುವುದು ಕಡಿಮೆ. ಎಲ್ಲರ ಸಮಸ್ಯೆಯೂ ಇದೇ. ವ್ಯಾಯಾಮ, ಜಾಗಿಂಗ್‌, ಯೋಗ ಇತ್ಯಾದಿ ಮಾಡಿದರೂ ತೂಕ ಮಾತ್ರ ಇಳಿಯುವುದಿಲ್ಲ ಎಂಬುದು. ಏನೆಲ್ಲ ಪ್ರಯತ್ನಿಸಿ ನೋಡಿದ ನೀವು ಹುಣಸೆ ಹಣ್ಣನ್ನೂ (Tamarind Fruit Benefits) ಯಾಕೆ ಒಮ್ಮೆ ಪ್ರಯತ್ನಿಸಿ ನೋಡಬಾರದು?

VISTARANEWS.COM


on

Tamarind Fruit Benefits
Koo

ತೂಕ ಇಳಿಸುವುದು ಹೇಗೆ ಎಂಬುದು ಸದ್ಯ ಎಲ್ಲರ ನಡುವೆ ಚರ್ಚೆಯಾಗುವ ಅತ್ಯಂತ ಸಾಮಾನ್ಯ ವಿಷಯ. ಜೀವನಶೈಲಿ, ಕೆಲಸದ ಒತ್ತಡ, ಹೊರಗೆ ತಿನ್ನುವ ಅಭ್ಯಾಸ, ಚಟುವಟಿಕೆಗಳಿಲ್ಲದ ಕೆಲಸ, ಹಾರ್ಮೋನ್‌ ಸಮಸ್ಯೆ, ರಾತ್ರಿಪಾಳಿ ಸೇರಿದಂತೆ ಅನೇಕ ವಿಚಾರಗಳು ಇಂದು ತೂಕ ಏರಿಕೆಗೆ ಕಾರಣವಾಗುತ್ತದೆ. ಆದರೆ ಇಳಿಸುವ ಬಗ್ಗೆ ಪ್ರಯತ್ನಕ್ಕೆ ತಕ್ಕ ಫಲ ದೊರೆಯುವುದು ಕಡಿಮೆ. ಎಲ್ಲರ ಸಮಸ್ಯೆಯೂ ಇದೇ. ವ್ಯಾಯಾಮ, ಜಾಗಿಂಗ್‌, ಯೋಗ ಇತ್ಯಾದಿ ಮಾಡಿದರೂ ತೂಕ ಮಾತ್ರ ಇಳಿಯುವುದಿಲ್ಲ ಎಂಬುದು. ಏನೆಲ್ಲ ಪ್ರಯತ್ನಿಸಿ ನೋಡಿದ ನೀವು ಹುಣಸೆ ಹಣ್ಣನ್ನೂ ಯಾಕೆ ಒಮ್ಮೆ ಪ್ರಯತ್ನಿಸಿ ನೋಡಬಾರದು? ಹುಣಸೆಹಣ್ಣಿಗೂ ತೂಕಕ್ಕೂ ಏನು ಸಂಬಂಧ ಅಂತೀರಾ? ಸಂಬಂಧ ಇದೆ. ಹುಳಿಯಾದ ಹುಣಸೇಹಣ್ಣನ್ನು ನೀವು ಚಿಕ್ಕವರಿದ್ದಾಗ ಚಪ್ಪರಿಸಿ ತಿಂದಿರಬಹುದು, ಈಗ ಕ್ಯಾಂಡಿಗಳ ರೂಪದಲ್ಲೋ, ಚಟ್ನಿ ರೂಪದಲ್ಲೋ, ಅಥವಾ ಅಡುಗೆಗೆ ಬಳಸುವ ಮೂಲಕ ಮಾತ್ರ ಹುಣಸೆ ಹಣ್ಣನ್ನು ಬಳಸುತ್ತಿರಬಹುದು. ಆದರೆ ಹುಣಸೆ ಹಣ್ಣಿನ (Tamarind Fruit Benefits) ನೀರನ್ನು ತೂಕ ಇಳಿಕೆಗೆ ನೀವು ಬಳಸಿಲ್ಲವಾದರೆ ಒಮ್ಮೆ ಬಳಸಿ ನೋಡಿ. ಇದೂ ಕೂಡಾ ತೂಕ ಇಳಿಸಲು ನೆರವಾಗುತ್ತದೆ.

Tamarind Fruit

ಕಡಿಮೆ ಕ್ಯಾಲರಿಯಿದೆ

ಹುಣಸೆ ಹಣ್ಣಿನ ನೀರು ಅತ್ಯಂತ ಕಡಿಮೆ ಕ್ಯಾಲರಿಯನ್ನು ಹೊಂದಿದೆ. ಒಂದು ಹುಣಸೆಹಣ್ಣಿನಲ್ಲಿ ಕೇವಲ ಐದರಿಂದ ಆರು ಕ್ಯಾಲರಿ ಇರುತ್ತದಂತೆ. ಹಾಗಾಗಿ ಇದರ ಮೂಲಕ ಕ್ಯಾಲರಿ ಹೆಚ್ಚು ತೆಗೆದುಕೊಂಡ ಭಯವಿಲ್ಲ. ಇದಕ್ಕೆ ಸಿಹಿ ಹಾಗೂ ಮಸಾಲೆಗಳನ್ನು ಸೇರಿಸಿದರೆ ಖಂಡಿತವಾಗಿಯೂ ಕ್ಯಾಲರಿ ಬದಲಾವಣೆಯಾಗುತ್ತದೆ.

healthy internal organs of human digestive system

ಜೀರ್ಣಕ್ರಿಯೆಗೆ ಒಳ್ಳೆಯದು

ತೂಕ ಇಳಿಕೆಯ ಹಾದಿಯಲ್ಲಿ ಜೀರ್ಣಕ್ರಿಯೆಯ ಸಮಸ್ಯೆ ಯಾವತ್ತಿಗೂ ಇರಬಾರದು. ಆಹಾರ ಚೆನ್ನಾಗಿ ಜೀರ್ಣವಾಗಬೇಕು. ನಿಮ್ಮ ಜೀರ್ಣಕ್ರಿಯೆಯ ಆರೋಗ್ಯವನ್ನು ಹೆಚ್ಚಿಸಬೇಕಾದರೆ, ಬಹುಬೇಗನೆ ಸರಿಯಾಗಿ ಆಹಾರ ಜೀರ್ಣವಾಗಬೇಕೆಂದರೆ ಈ ಹುಣಸೇ ಹಣ್ಣಿನ ನೀರು ಸಹಾಯ ಮಾಡುತ್ತದೆ. ಇದು ಪಚನಕ್ರಿಯೆಯನ್ನು ಚುರುಕಾಗಿಸುವ ಮೂಲಕ ತೂಕ ಇಳಿಕೆಗೆ ಸಹಾಯ ಮಾಡುತ್ತದೆ.

ನಾರಿನಂಶವಿದೆ

ಹುಣಸೇಹಣ್ಣಿನಲ್ಲಿ ಸಾಕಷ್ಟು ನಾರಿನಂಶ ಇದೆ. ನಾರಿನಂಶವು ಜೀರ್ಣಕ್ರಿಯೆಗೆ ಒಳ್ಳೆಯದು. ಅಷ್ಟೇ ಅಲ್ಲ, ಇದು ತೂಕವನ್ನೂ ಇಳಿಸುತ್ತದೆ. ಹೊಟ್ಟೆ ತುಂಬಿರುವ ಫೀಲ್‌ ನೀಡುವುದರಿಂದ ಬೇರೆ ತಿನ್ನುವ ಬಯಕೆಯಾಗುವುದಿಲ್ಲ.

ಇದನ್ನೂ ಓದಿ: Mint Leaf Water: ಪುದಿನ ಎಲೆಗಳ ನೀರನ್ನು ನಿತ್ಯವೂ ಕುಡಿಯಿರಿ, ಈ ಲಾಭಗಳನ್ನು ಪಡೆಯಿರಿ!

ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿದೆ

ಹುಣಸೇ ಹಣ್ಣಿನ ನೀರನ್ನು ಯಾಕೆ ಕುಡಿಯಬೇಕು ಎಂದರೆ ಹುಣಸೇಹಣ್ಣಿನಲ್ಲಿ ಆಂಟಿ ಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಹುಣಸೆಯಲ್ಲಿ ಟಾರ್ಟಾರಿಕ್‌ ಆಸಿಡ್‌ ಎಂಬ ಶಕ್ತಿಯುತವಾದ ಆಂಟಿ ಆಕ್ಸಿಡೆಂಟ್‌ ಇದ್ದು ಇದು ಫ್ರೀ ರ್ಯಾಡಿಕಲ್‌ಗಳ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ. ಆಂಟಿ ಆಕ್ಸಿಡೆಂಟ್‌ನಿಂದ ಸಮೃದ್ಧವಾಗಿರುವ ಆಹಾರವು ಆರೋಗ್ಯವನ್ನು ಹೆಚ್ಚಿಸಿ, ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚು ಮಾಡಿ ತೂಕವನ್ನು ಇಳಿಸುತ್ತದೆ. ಹಾಗಾದರೆ, ಹುಣಸೆ ಹಣ್ಣಿನ ನೀರನ್ನು ಮಾಡುವುದು ಹೇಗೆ ಅಂತೀರಾ? ಇದೇನೂ ಬ್ರಹ್ಮವಿದ್ಯೆಯಲ್ಲ. ಹುಣಸೆ ಹಣ್ಣಿನ ಒಂದು ಸಣ್ಣ ತುಂಡನ್ನು ಬಿಸಿನೀರಿನಲ್ಲಿ ಹದಿನೈದರಿಂದ ಇಪ್ಪತ್ತು ನಿಮಿಷಗಳ ಕಾಲ ನೆನೆಸಿಡಿ. ಇದು ಮೆತ್ತಗಾದ ಮೇಲೆ ಇದನ್ನು ಸ್ವಲ್ಪ ಕಿವುಚಿ ರಸ ಹಿಂಡಿ. ಹಿಂಡಿದ ಮೇಲೆ ಉಳಿದ ರಸಹೀನ ಹುಣಸೇ ಹಣ್ಣನ್ನು ಎಸೆಯಿರಿ. ನಂತರ ಈ ಹುಣಸೇ ಹಣ್ಣಿನ ನೀರಿಗೆ ನಿಮಗೆ ಬೇಕಾದಷ್ಟು ರುಚಿಗೆ ತಕ್ಕಂತೆ ನೀರು ಸೇರಿಸಿ ಕುಡಿಯಿರಿ. ರುಚಿಯಾಗಿ ಕುಡಿಯಬೇಕೆಂಬ ಬಯಕೆಯಿದ್ದರೆ, ಬೆಲ್ಲದ ಪುಡಿ, ಕಾಳು ಮೆಣಸಿನ ಪುಡಿ ಅಥವಾ ಚಾಟ್‌ ಮಸಾಲಾ ಹಾಕಿಯೂ ಕುಡಿಯಬಹುದು. ಆದರೆ ಇದು ನಿಮ್ಮ ರುಚಿಗೆ ಬಿಟ್ಟದ್ದು. ಹೀಗೆ ಮಾಡಿದಾಗ ಖಂಡಿತವಾಗಿ ನೀವು ಸೇವಿಸುವ ಕ್ಯಾಲರಿಯಲ್ಲಿ ವ್ಯತ್ಯಾಸವಾಗುತ್ತದೆ. ತೂಕ ಇಳಿಕೆಯ ಲಾಭ ಪಡೆಯಬೇಕೆಂದಿದ್ದರೆ ಬೆಳಗ್ಗಿನ ಹೊತ್ತು, ಇದಕ್ಕೆ ಸಿಹಿ, ಮಸಾಲೆ ಸೇರಿಸದೆ ಹಾಗೆಯೇ ಕುಡಿಯಿರಿ

Continue Reading

ಆರೋಗ್ಯ

World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ದೇಹದ ಸ್ವಾಸ್ಥ್ಯ ಹೆಚ್ಚಿಸಿಕೊಳ್ಳುವ ದಾರಿಯಲ್ಲಿ ಜೀರ್ಣಾಂಗಗಳ ಆರೋಗ್ಯ ರಕ್ಷಣೆ ಎಷ್ಟು ಮಹತ್ವದ್ದು ಎಂಬುದನ್ನು ಜನರಿಗೆ ಮನದಟ್ಟು ಮಾಡಿಸುವುದು ವಿಶ್ವ ಜೀರ್ಣಾಂಗಗಳ ಆರೋಗ್ಯ ದಿನದ ಉದ್ದೇಶ. ಪ್ರತಿ ವರ್ಷ ಮೇ ತಿಂಗಳ 29ನೇ (World Digestive Health Day) ದಿನವನ್ನು ಇದಕ್ಕಾಗಿ ಮೀಸಲಿಡಲಾಗಿದೆ. ಜೀರ್ಣಾಂಗ ಆರೋಗ್ಯ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

World Digestive Health Day
Koo

ಸರ್ವ ರೋಗಕ್ಕೂ ಹೊಟ್ಟೆಯೇ ಮೂಲ (Gut is the butt of every problem) ಎಂಬ ಮಾತೊಂದಿದೆ. ಈ ಮಾತು ಸುಳ್ಳೇನಲ್ಲ, ದೇಹದ ಹಲವು ಸಮಸ್ಯೆಗಳಿಗೆ ನಮ್ಮ ಆಹಾರ ಪದ್ಧತಿಗಳು, ಜೀರ್ಣಾಂಗದ ಏರುಪೇರುಗಳು ಕಾರಣವಾಗುತ್ತವೆ. ಬೊಜ್ಜು, ಮಧುಮೇಹದಂಥ ಸಮಸ್ಯೆಗಳಿಂದ ಹಿಡಿದು ಎಷ್ಟೋ ಸಮಸ್ಯೆಗಳು ಕಾಡುವುದು ದೇಹದ ಚಯಾಪಚಯ ಸರಿಯಿಲ್ಲದ ಸಂದರ್ಭಗಳಲ್ಲೇ. ದೇಹದ ಸ್ವಾಸ್ಥ್ಯ ಹೆಚ್ಚಿಸಿಕೊಳ್ಳುವ ದಾರಿಯಲ್ಲಿ ಜೀರ್ಣಾಂಗಗಳ ಆರೋಗ್ಯ ರಕ್ಷಣೆ ಎಷ್ಟು ಮಹತ್ವದ್ದು ಎಂಬುದನ್ನು ಜನರಿಗೆ ಮನದಟ್ಟು ಮಾಡಿಸುವುದು ವಿಶ್ವ ಜೀರ್ಣಾಂಗಗಳ ಆರೋಗ್ಯ ದಿನದ ಉದ್ದೇಶ. ಪ್ರತಿ ವರ್ಷ ಮೇ ತಿಂಗಳ 29ನೇ ದಿನವನ್ನು (World Digestive Health Day) ಇದಕ್ಕಾಗಿ ಮೀಸಲಿಡಲಾಗಿದೆ. ಎಲ್ಲರ ಕರುಳಿನಲ್ಲೂ ಅಸಂಖ್ಯಾತ ಬ್ಯಾಕ್ಟೀರಿಯಗಳಿರುತ್ತವೆ. ಇವುಗಳನ್ನು ಒಳ್ಳೆಯವು ಮತ್ತು ಕೆಟ್ಟವೆಂದು ವಿಂಗಡಿಸಲಾಗಿದೆ. ಜೀರ್ಣಾಂಗಗಳಲ್ಲಿ ಒಳ್ಳೆಯ ಬ್ಯಾಕ್ಟೀರಿಯಗಳ ಸಂಖ್ಯೆ ಹೆಚ್ಚಿದಷ್ಟೂ ದೇಹ ಸ್ವಾಸ್ಥ್ಯ ಚೆನ್ನಾಗಿರುತ್ತದೆ. ಕೆಟ್ಟ ಬ್ಯಾಕ್ಟೀರಿಯಗಳ ಪ್ರಮಾಣ ಹೆಚ್ಚಿದಷ್ಟೂ ದೇಹ ರೋಗಗಳ ಗೂಡಾಗುತ್ತದೆ. ಜೀರ್ಣಾಂಗಗಳ ಆರೋಗ್ಯ ಚೆನ್ನಾಗಿದ್ದರೆ ತೂಕ ನಿರ್ವಹಣೆ, ಸತ್ವಗಳನ್ನು ಹೀರಿಕೊಳ್ಳುವುದು, ಚೋದಕಗಳ ನಿರ್ವಹಣೆ, ಉರಿಯೂತ ನಿವಾರಣೆ, ಚಯಾಪಚಯ ಸರಿಪಡಿಸುವಂಥ ಕೆಲಸಗಳು ಕಷ್ಟವಿಲ್ಲದೆ ನೆರವೇರುತ್ತವೆ. ಹಾಗಾದರೆ ಜೀರ್ಣಾಂಗಗಳ ಆರೋಗ್ಯ ನಿರ್ವಹಣೆಗೆ ಏನು ಮಾಡಬೇಕು? ಯಾವ ಕ್ರಮಗಳನ್ನು ಅನುಸರಿಸಬೇಕು?

Vegetables and Fruits

ವೈವಿಧ್ಯಮವಾಗಿರಲಿ

ಋತುಮಾನಕ್ಕೆ ಸರಿಯಾದ ಹಣ್ಣು-ತರಕಾರಿಗಳು, ಕಾಯಿ-ಬೀಜಗಳು, ಕಾಳು-ಬೇಳೆಗಳು, ಇಡೀ ಧಾನ್ಯಗಳು, ಡೇರು ಉತ್ಪನ್ನಗಳಿಂದ ಆಹಾರ ಸಮೃದ್ಧವಾಗಿರಬೇಕು. ಇದರಿಂದ ಕರುಳಿನ ಒಳ್ಳೆಯ ಬ್ಯಾಕ್ಟೀರಿಯಗಳಿಗೆ ಬೇಕಾದ ಆಹಾರ ದೊರೆತು ಅವುಗಳ ಸಂಖ್ಯೆ ಹೆಚ್ಚುತ್ತದೆ. ಅಷ್ಟೇ ಅಲ್ಲ, ಕರುಳಿನಲ್ಲಿರುವ ಒಳ್ಳೆಯ ಸೂಕ್ಷ್ಮಾಣುಗಳೂ ವೈವಿಧ್ಯಮಯವಾಗುತ್ತವೆ. ಇದರಿಂದ ಬಗೆಬಗೆಯ ಪ್ರಯೋಜನಗಳಿವೆ.

ಪ್ರಿಬಯಾಟಿಕ್‌, ಪ್ರೊಬಯಾಟಿಕ್

ಜೀರ್ಣಾಂಗಗಳ ಆರೋಗ್ಯ ನಿರ್ವಹಣೆಗೆ ಇದು ಪ್ರಧಾನ ಪಾತ್ರ ವಹಿಸುತ್ತದೆ. ಹುದುಗು ಬಂದಿರುವಂಥ ಮೊಸರು, ಮಜ್ಜಿಗೆಯಂಥ ಆಹಾರಗಳು, ಹಸಿಯಾದ ಮೊಳಕೆ ಕಾಳುಗಳಂಥ ಆಹಾರಗಳು ಅಗತ್ಯವಾದ ಪ್ರಿಬಯಾಟಿಕ್‌ ಮತ್ತು ಪ್ರೊಬಯಾಟಿಕ್‌ ಅಂಶಗಳನ್ನು ಒದಗಿಸುತ್ತವೆ. ಕರುಳಿನ ಸೂಕ್ಷ್ಮಾಣುಗಳ ಸಮತೋಲನಕ್ಕೆ ಇದು ಅತಿ ಮುಖ್ಯ.

ನೀರು-ನಾರು-ನಿದ್ದೆ

ಇವೆಲ್ಲವೂ ಸಾಕಷ್ಟು ಬೇಕು. ದಿನಕ್ಕೆ ಮೂರು ಲೀ. ನೀರು ಜೀರ್ಣಾಂಗಗಳನ್ನು ಸುಸ್ಥಿತಿಯಲ್ಲಿ ಇರಿಸಬಲ್ಲದು. ಇದರೊಂದಿಗೆ ನಾರಿನಂಶವೂ ಸಾಕಷ್ಟು ಸೇರಿದರೆ ಅಜೀರ್ಣ, ಮಲಬದ್ಧತೆಯಂಥ ತೊಂದರೆಗಳು ಮಾಯವಾಗುತ್ತವೆ. ರೆಸ್ಟ್‌-ಡೈಜೆಸ್ಟ್‌ ಎಂಬುದು ದೇಹಕ್ಕೆ ಚೆನ್ನಾಗಿ ಅರ್ಥವಾಗುವ ವಿಚಾರ. ಹಾಗಾಗಿ ದಿನಕ್ಕೆ ಏಳೆಂಟು ತಾಸಿನಷ್ಟು ನಿದ್ದೆ ಮಾಡಿದರೆ ಜೀರ್ಣಾಂಗಗಳ ರಿಪೇರಿ ಕೆಲಸ ಸಾಂಗವಾಗಿ ನೆರವೇರುತ್ತದೆ.

Best Food To Eat At Night

ಮುಕ್ಕಬೇಡಿ

ಆಹಾರ ಸೇವನೆಗೊಂದು ಕ್ರಮವಿದೆ. ಈಗಿನ ದರ್ಶಿನಿ ಸಂಸ್ಕೃತಿಯಲ್ಲ ತಿನ್ನುವಾಗ ಬೇಕಿರುವುದು. ಅಂದರೆ ಗಡಿಬಿಡಿಯಲ್ಲಿ ಒಂದಿಷ್ಟು ಮುಕ್ಕಿ ಓಡುವುದಲ್ಲ. ನೆಮ್ಮದಿಯಿಂದ ಕುಳಿತು, ಚೆನ್ನಾಗಿ ಅಗಿದು ತಿನ್ನಿ. ಇದರಿಂದ ಅತಿಯಾಗಿ ತಿನ್ನುವುದು, ಅಗತ್ಯಕ್ಕಿಂತ ಹೆಚ್ಚು ತಿನ್ನುವುದನ್ನೆಲ್ಲ ಕಡಿಮೆ ಮಾಡಬಹುದು. ಜೊತೆಗೆ, ಆಹಾರ ತಿಂದ ತೃಪ್ತಿಯೂ ದೊರೆಯುತ್ತದೆ.

Cooking Oils

ಆರೋಗ್ಯಕರ ಎಣ್ಣೆ

ಗಾಣದ ಎಣ್ಣೆಗಳು ಅಥವಾ ಕೋಲ್ಡ್‌ ಪ್ರೆಸ್‌ ಮಾಡಿದ ಎಣ್ಣೆಗಳು ಬಳಕೆಗೆ ಹೆಚ್ಚು ಸುರಕ್ಷಿತ. ರಿಫೈನ್‌ ಮಾಡಿದ ಎಣ್ಣೆಗಳು, ಮರು ಬಳಕೆಯ ಎಣ್ಣೆಗಳು ಸೂಕ್ತವಲ್ಲ. ಇಂಥವುಗಳಿಂದ ದೇಹದಲ್ಲಿ ಉರಿಯೂತ ಹೆಚ್ಚುತ್ತದೆ. ಹಾಗಾಗಿ ತಾಜಾ ಮತ್ತು ಆರೋಗ್ಯಕರ ಎಣ್ಣೆಗಳನ್ನೇ ಅಡುಗೆಗೆ ಬಳಸಿ. ಪಚನಾಂಗಗಳ ಆರೋಗ್ಯ ರಕ್ಷಣೆಗೆ ಇವೂ ಮುಖ್ಯವಾದವು.

stress

ಒತ್ತಡ

ಮಾನಸಿನ ಒತ್ತಡ ಹೆಚ್ಚಿದಷ್ಟೂ ಜೀರ್ಣಾಂಗಗಳ ಏರುಪೇರು ಹೆಚ್ಚುತ್ತದೆ. ಇವೆರಡರ ನಡುವೆ ನೇರ ಸಂಬಂಧವಿದೆ. ಹಾಗಾಗಿ ಮಾನಸಿನ ಒತ್ತಡ ನಿರ್ವಹಣೆಗೆ ಧ್ಯಾನ, ಯೋಗ, ಪ್ರಾಣಾಯಾಮ, ಆರೋಗ್ಯ ಹವ್ಯಾಸಗಳನ್ನು ರೂಢಿಸಿಕೊಳ್ಳುವಂಥ ಕೆಲಸಗಳು ಒಳ್ಳೆಯ ಪರಿಣಾಮ ಬೀರುತ್ತವೆ. ಇಂಥ ಕ್ರಮಗಳಿಂದಲೂ ಕರುಳಿನ ಆರೋಗ್ಯ ಸುಧಾರಿಸಬಹುದು.

ಇದನ್ನೂ ಓದಿ: AC Side Effects: ಅತಿಯಾದ ಎಸಿ ಬಳಕೆಯಿಂದ ಏನಾಗುತ್ತದೆ ಎಂಬ ಅರಿವಿರಲಿ

ಇವುಗಳು ಬೇಡ

ಪ್ರತಿ ದಿನ ಒಂದೇ ರೀತಿಯ ಆಹಾರವನ್ನು ಸೇವಿಸಬೇಡಿ. ಆರೋಗ್ಯಕರವಾದ ವೈವಿಧ್ಯಮಯ ಆಹಾರಗಳು ಜೀರ್ಣಾಂಗಗಳ ಸ್ಥಿತಿಯನ್ನು ಸುಧಾರಿಸುತ್ತವೆ. ಸಂಸ್ಕರಿತ ಆಹಾರಗಳು ಬೇಡ. ಇದರಿಂದ ಕರುಳಿನ ಉರಿಯೂತ ಹೆಚ್ಚುತ್ತದೆ. ಗಬಗಬ ತಿನ್ನುವುದರ ಬದಲು, ಸಾವಧಾನವಾಗಿ ತಿನ್ನುವುದನ್ನು ರೂಢಿಸಿಕೊಳ್ಳಿ. ಕೃತಕ ಸಿಹಿ, ರುಚಿ, ಬಣ್ಣಗಳೆಲ್ಲ ಉರಿಯೂತ ಹೆಚ್ಚಿಸುತ್ತವೆ. ಬದಲಿಗೆ ನೈಸರ್ಗಿಕ ರುಚಿ, ಬಣ್ಣಗಳಿಗೆ ಆದ್ಯತೆ ನೀಡಿ.

Continue Reading
Advertisement
Assault Case in Shivamogga
ಕ್ರೈಂ5 mins ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Team India Dream 11
ಕ್ರಿಕೆಟ್7 mins ago

Team India T20 World Cup: ಚಿಂಟುವಿನ ಆಸೆ ನೆರವೇರಿಸಲು ಟೀಮ್​ ಇಂಡಿಯಾ ಜತೆ ನ್ಯೂಯಾರ್ಕ್​ಗೆ ತೆರಳಿದ ತಾಯಿ

Shiva Rajkumar support Tamil Movie Non Voilance Cinema
ಸ್ಯಾಂಡಲ್ ವುಡ್12 mins ago

Shiva Rajkumar: ತಮಿಳಿನ ‘ನಾನ್ ವೈಲೆನ್ಸ್’ ಸಿನಿಮಾಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್: ಫಸ್ಟ್ ಲುಕ್ ಔಟ್‌!

Narendra Modi
Lok Sabha Election 202412 mins ago

Narendra Modi: ಲೋಕಸಭಾ ಚುನಾವಣೆ ಫಲಿತಾಂಶದ 6 ತಿಂಗಳ ಬಳಿಕ ‘ರಾಜಕೀಯ ಭೂಕಂಪ’; ಮೋದಿನ ಮಾತಿನ ಮರ್ಮವೇನು?

Valmiki Corporation Scam
ಪ್ರಮುಖ ಸುದ್ದಿ15 mins ago

Valmiki Corporation Scam: ಹಗರಣದ ಆರೋಪಿ ಜೊತೆಗೆ ಸಚಿವ ನಾಗೇಂದ್ರ ಕ್ಲೋಸ್‌? ಫೋಟೋ ಬಿಡುಗಡೆ ಮಾಡಿದ ಬಿಜೆಪಿ

Mansoon
ದೇಶ24 mins ago

Monsoon: ವಾಡಿಕೆಗಿಂತ ಮುನ್ನವೇ ಲಗ್ಗೆ ಇಟ್ಟ ಮಾನ್ಸೂನ್‌; ಕೇರಳದಲ್ಲಿ ಮುಂಗಾರು ಆರಂಭ

Ravichandran Birthday Premaloka 2 update
ಸ್ಯಾಂಡಲ್ ವುಡ್36 mins ago

Ravichandran Birthday: `ಪ್ರೇಮಲೋಕ 2’ಬಗ್ಗೆ ಅಪ್‌ಡೇಟ್‌ ಹಂಚಿಕೊಂಡ ‘ಕ್ರೇಜಿ ಸ್ಟಾರ್’ ರವಿಚಂದ್ರನ್‌!

cylinder blast in Bengaluru
ಕ್ರೈಂ56 mins ago

Fire Accident : ಗಾಢ ನಿದ್ರೆಯಲ್ಲಿರುವಾಗಲೇ ಸಿಲಿಂಡರ್‌ ಸ್ಫೋಟ; ಬೆಂಕಿಯ ಕೆನ್ನಾಲಿಗೆಗೆ ಐವರು ಗಂಭೀರ

T20 World Cup 2007
ಕ್ರಿಕೆಟ್1 hour ago

T20 World Cup 2007: ಚೊಚ್ಚಲ ಟಿ20 ವಿಶ್ವಕಪ್ ಭಾರತ-ಪಾಕ್​ ಫೈನಲ್​ ಪಂದ್ಯದ ಮೆಲುಕು ನೋಟ

Gold Rate Today
ಚಿನ್ನದ ದರ1 hour ago

Gold Rate Today: ತುಸು ಇಳಿಕೆ ಕಂಡ ಚಿನ್ನದ ಬೆಲೆ; ಇಲ್ಲಿದೆ ದರದ ವಿವರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ5 mins ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌