Beauty Parlor Syndrome: ಬ್ಯೂಟಿಪಾರ್ಲರ್‌ ಸಿಂಡ್ರೋಮ್‌! ಇದೇನೆಂದು ನಿಮಗೆ ಗೊತ್ತೆ? - Vistara News

ಆರೋಗ್ಯ

Beauty Parlor Syndrome: ಬ್ಯೂಟಿಪಾರ್ಲರ್‌ ಸಿಂಡ್ರೋಮ್‌! ಇದೇನೆಂದು ನಿಮಗೆ ಗೊತ್ತೆ?

ಇನ್ನು ಮುಂದೆ ಪಾರ್ಲರಿನಲ್ಲಿ (Beauty parlor syndrome) ಹೋಗಿ ಹೇರ್‌ವಾಷ್‌ ಮಾಡಿಕೊಂಡು ಬರುವ ಮಂದಿ ಇದ್ದರೆ ಖಂಡಿತಾ ಎಚ್ಚೆತ್ತುಕೊಳ್ಳಿ! ಯಾಕೆಂದರೆ ಇದು ಕೆಲವೊಮ್ಮೆ ಅತ್ಯಂತ ಗಂಭೀರವಾದ, ಪ್ರಾಣಕ್ಕೇ ಅಪಾಯವಾಗುವ ಸಂದರ್ಭವನ್ನೂ ತರಬಹುದು!

VISTARANEWS.COM


on

Beauty Parlor Syndrome
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಹಳಷು ಮಂದಿ ಚರ್ಮ, ಕೂದಲ ಕಾಂತಿಗೆ ಆಗಾಗ ಬ್ಯೂಟಿ ಪಾರ್ಲರಿಗೆ (Beauty parlor syndrome) ಹೋಗೋದು ರೂಢಿ. ಪಾರ್ಲರಿನಲ್ಲಿ ಕೂತು, ಚರ್ಮವನ್ನು ಲಕಲಕನೆ ಹೊಳೆಯುವ ಅನೇಕ ಟ್ರೀಟ್‌ಮೆಂಟ್‌ಗಳನ್ನು ತೆಗೆದುಕೊಂಡು ಕನ್ನಡಿ ನೋಡಿ ಖುಷಿ ಪಡುವುದು ಸಾಮಾನ್ಯ. ನಮ್ಮ ಚರ್ಮ ಕೂದಲು ಆರೋಗ್ಯವಾಗಿ ಹೊಳೆಹೊಳೆಯುತ್ತಾ ಇರಬೇಕೆಂಬ ಆಸೆ ಯಾರಿಗೆ ತಾನೇ ಇರುವುದಿಲ್ಲ ಹೇಳಿ! ಕೂದಲಿಗೂ ಬಗೆಬಗೆಯ ಸ್ಪಾ, ಟ್ರೀಟ್‌ಮೆಂಟ್‌ಗಳನ್ನು ಮಾಡಿಕೊಂಡು ಕೂದಲನ್ನು ಅಲ್ಲೇ ತೊಳೆದುಕೊಂಡು, ಒಣಗಿಸಿ, ಸೆಟ್‌ ಮಾಡಿಸಿಕೊಂಡು ಒಂದಿಷ್ಟೂ ಕೂದಲು ಕೊಂಕದಂತೆ ಕಚೇರಿಗೋ, ಕಾರ್ಯಕ್ರಮಗಳಿಗೋ ಹೋಗುವುದು ಊಗ ಬಹಳ ಸಾಮಾನ್ಯ ವಿಚಾರ. ಕೆಲವರು ಪದೇ ಪದೇ ಇಂಥವುಗಳನ್ನು ಪಾರ್ಲರಿನಲ್ಲಿ ಮಾಡಿಸಿಕೊಂಡರೆ, ಇನ್ನೂ ಕೆಲವರು ತಿಂಗಳಿಗೊಮ್ಮೆಯಾದರೂ ಮಾಡಿಸಿಕೊಂಡು ರಿಲ್ಯಾಕ್ಸ್‌ ಆಗಿರಬಯಸುವರು. ಅಂತಹ ಎಲ್ಲ ಮಂದಿಯೂ ಇಲ್ಲಿ ಕೇಳಿ! ಇನ್ನು ಮುಂದೆ ಪಾರ್ಲರಿನಲ್ಲಿ (Beauty parlor syndrome) ಹೋಗಿ ಹೇರ್‌ವಾಷ್‌ ಮಾಡಿಕೊಂಡು ಬರುವ ಮಂದಿ ಇದ್ದರೆ ಖಂಡಿತಾ ಎಚ್ಚೆತ್ತುಕೊಳ್ಳಿ! ಯಾಕೆಂದರೆ ಇದು ಕೆಲವೊಮ್ಮೆ ಅತ್ಯಂತ ಗಂಭೀರವಾದ, ಪ್ರಾಣಕ್ಕೇ ಅಪಾಯವಾಗುವ ಸಂದರ್ಭವನ್ನೂ ತರಬಹುದು!

Hair Dye at Beauty Salon

ಪಾರ್ಲರಿಗೆ ಹೋಗಿ ಇಂತಹುಗಳನ್ನೆಲ್ಲ ಮಾಡಿಸಿಕೊಂಡು ಬರುವುದರಿಂದ ಮನಸ್ಸಿಗೂ, ದೇಹಕ್ಕೂ ಖುಷಿ ಸಿಗುತ್ತದೆ ಎಂಬುದು ನಿಜವಾದರೂ, ಇಂತಹುಗಳನ್ನು ಮಾಡಿಸುವಾಗ ಕೆಲವು ಬಗೆಯ ಅಪಾಯಗಳಿರುವುದನ್ನು ನೆನಪಿಟ್ಟುಕೊಳ್ಳಿ. ಮುಖ್ಯವಾಗಿ ಇತ್ತೀಚೆಗೆ ಇಂಥ ಪ್ರಕರಣಗಳ ವರದಿಗಳು ಹೆಚ್ಚಾಗಿದ್ದು, ಬ್ಯೂಟಿ ಪಾರ್ಲರ್‌ ಸಿಂಡ್ರೋಮ್‌ ಎಂಬ ಹೊಸ ಆರೋಗ್ಯ ಸಮಸ್ಯೆಯೊಂದರ ಬಗೆಗೆ ಎಲ್ಲೆಡೆ ಹೆಚ್ಚು ಚರ್ಚೆಯಾಗುತ್ತಿವೆ.

ಏನಿದು ಬ್ಯೂಟಿ ಪಾರ್ಲರ್‌ ಸಿಂಡ್ರೋಮ್‌ ಎನ್ನುತ್ತೀರಾ? ಪಾರ್ಲರಿನಲ್ಲಿ ಮಾಡುವ ಹೇರ್‌ವಾಷ್‌ ಮಾಡುವ ಕ್ರಮದಿಂದಾಗಿ ಇತ್ತೀಚೆಗೆ ಪಾರ್ಶ್ವವಾಯುವಿಗೆ ತುತ್ತಾಗಿರುವ ಪ್ರಕರಣಗಳು ಕಂಡುಬಂದಿದ್ದು, ಈ ಬಗ್ಗೆ ಮೊದಲೇ ಎಚ್ಚರಿಕೆ ವಹಿಸಲು ತಜ್ಞರು ಹೇಳುತ್ತಾರೆ.

ಬ್ಯೂಟಿ ಪಾರ್ಲರ್‌ಗಳಲ್ಲಿ ಒಂದು ನಿಗದಿತ ಭಂಗಿಯಲ್ಲಿ ಕೂರಿಸಿ, ಕತ್ತನ್ನು, ವಾಷ್‌ ಬೇಸಿನ್‌ಗೆ ಒರಗಿಸಿ ಹೇರ್‌ವಾಷ್‌ ಮಾಡುವ ಕ್ರಮವಿದೆ. ಈ ಭಂಗಿಯಲ್ಲಿ ಬಹಳ ಹೊತ್ತು ಕತ್ತನ್ನು ಒಂದೇ ಭಂಗಿಯಲ್ಲಿ ಇಟ್ಟುಕೊಳ್ಳಬೇಕಾಗಿ ಬರುವುದರಿಂದ ಮಿದುಳಿಗೆ ಸರಿಯಾಗಿ ರಕ್ತ ಸಂಚಾರವಾಗಲು ತಡೆಯಾಗುತ್ತದೆ. ಇದರಿಂದ ಪಾರ್ಶ್ವವಾಯುವಿನಂಥ ಸಮಸ್ಯೆಯೂ ಎದುರಾಗಬಹುದು. ಹಲವರು ಈ ಸಮಸ್ಯೆಗೆ ತುತ್ತಾದ ಪ್ರಕರಣಗಳು ಇತ್ತೀಚೆಗೆ ಹೆಚ್ಚು ವರದಿಯಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಹಾಗಾದರೆ, ಇಂತಹ ಪರಿಸ್ಥಿತಿಯ ಅರಿವಾಗುವುದು ಹೇಗೆ ಎನ್ನುತ್ತೀರಾ? ಮುಖ, ಕೈಕಾಲು ಜೋಮು ಹಿಡಿದಂತಾಗುವುದು, ತಲೆಸುತ್ತು, ಮಾತನಾಡಲು ಕಷ್ಟವಾಗುವುದು, ಕೆಲವು ಶಬ್ದಗಳನ್ನು ಸರಿಯಾಗಿ ಉಚ್ಛರಿಸಲು ಕಷ್ಟವಾಗುವುದು, ಅತಿಯಾದ ತಲೆನೋವು ಇತ್ಯಾದಿಗಳು ನಿಮಗಾದರೆ, ಖಂಡಿತವಾಗಿಯೂ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು.

Brazilian woman in a beauty parlor

ಹಾಗಾದರೆ, ಈ ಬ್ಯೂಟಿ ಪಾರ್ಲರ್‌ ಸಿಂಡ್ರೋಮ್‌ನಿಂದ ಬಚವಾಗುವುದು ಹೇಗೆ ಅಂತೀರಾ?

ತಜ್ಞರ ಪ್ರಕಾರ, ಬ್ಯೂಟಿ ಪಾರ್ಲರಿನಲ್ಲಿ ಕೂದಲನ್ನು ತೊಳೆಸಿಕೊಳ್ಳುವುದು, ಅವರಿಂದಲೇ ಮಸಾಜ್‌ ಮಾಡಿಸಿಕೊಳ್ಳುವುದು, ಹೇರ್ ಟ್ರೀಟ್‌ಮೆಂಟ್‌ ತೆಗೆದುಕೊಳ್ಳುವುದು ನಿಮಗೆ ಸೌಭಾಗ್ಯವೆಂದು ಅನಿಸಿದರೂ, ಇದರಿಂದ ಖುಷಿ, ಸಂತೋಷ, ರಿಲ್ಯಾಕ್ಸೇಶನ್‌ ಸಿಕ್ಕಿದರೂ, ಪ್ರತಿ ಬಾರಿಯೂ, ನಿಮ್ಮಕತ್ತು ಹೆಚ್ಚು ಬಗ್ಗಿಸಲಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಿ. ಪಾರ್ಲರಿನ ಮಂದಿ ನಿಮ್ಮನ್ನು ಅವರಿಗೆ ಬೇಕಾದ ಭಂಗಿಯಲ್ಲಿ ಕೂರಿಸಿಕೊಂಡರೂ, ನೀವು ನಿಮಗೆ ಕಂಫರ್ಟ್‌ ಆಗಿ ಆ ಭಂಗಿ ಇದೆಯೇ ಎಂಬುದನ್ನು ಮೊದಲು ಮನದಟ್ಟು ಮಾಡಿಕೊಳ್ಳಿ. ಕತ್ತು ನೋಯುವಂತೆ ಕತ್ತನ್ನು ಅವರೆಡೆಗೆ ಚಾಚಬೇಡಿ. ಕಷ್ಟಪಟ್ಟು ಒಂದೇ ಭಂಗಿಯಲ್ಲಿ ಹೆಚ್ಚು ಹೊತ್ತು ಕೂರಬೇಡಿ. ಈ ಸಂದರ್ಭ ಮಧ್ಯದಲ್ಲಿ ಏನೇ ಕಷ್ಟವೆನಿಸಿದರೂ, ಆರಾಮವೆನಿಸುತ್ತಿಲ್ಲ ಅನಿಸಿದರೂ, ಕೂಡಲೇ ಅವರಿಗೆ ತಿಳಿಸಿ.

ಎಲ್ಲಕ್ಕಿಂತ ಮುಖ್ಯವಾಗಿ, ಹೇರ್‌ವಾಷ್‌ಗೆ ಬ್ಯೂಟಿ ಪಾರ್ಲರಿಗೆ ಹೋಗುವುದನ್ನು ಆದಷ್ಟು ಕಡಿಮೆ ಮಾಡಿ, ನಿಮ್ಮ ಮನೆಯಲ್ಲಿಯೇ ನೀವೇ ಸ್ನಾನ ಮಾಡಿಕೊಳ್ಳಿ. ನಿಮಗೆ ಹಿತವಾದ ಭಂಗಿಯಲ್ಲಿ ನೀವು ತಲೆಗೆ ಸ್ನಾನ ಮಾಡುವುದು ಒಳ್ಳೆಯದು. ಒಂದು ವೇಳೆ, ಮುಖದಲ್ಲಿ ನಿಮಗೆ ಏನೇ ಬದಲಾವಣೆ ಅನಿಸಿದರೂ, ಕೂಡಲೇ ವೈದ್ಯರನ್ನು ಭೇಟಿಯಾಗಿ. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ.

ಇದನ್ನೂ ಓದಿ: Health Benefits Of Curd Rice: ಮೊಸರನ್ನ ಎಂಬ ಅಮೃತ: ಹೊಟ್ಟೆಗೂ ಹಿತ, ದೇಹಕ್ಕೂ ಹಿತ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

ICMR Good Health Guidelines: ಆರೋಗ್ಯವಾಗಿರಲು ಎಷ್ಟು ಗಂಟೆ ನಿದ್ದೆ ಮಾಡಬೇಕು, ಎಷ್ಟು ಗಂಟೆ ಕೆಲಸ ಮಾಡಬೇಕು? ಆಹಾರ ಏನಿರಬೇಕು?

ಆರೋಗ್ಯಕರ ಜೀವನಕ್ಕೆ ದೈಹಿಕ ಚಟುವಟಿಕೆ ಬಹುಮುಖ್ಯ. ಜೊತೆಗೆ ವಿಶ್ರಾಂತಿಯು ಬೇಕು. ಇದಕ್ಕಾಗಿ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ತನ್ನ ಮಾರ್ಗಸೂಚಿಯಲ್ಲಿ (ICMR  Good Health Guidelines) ಏನು ಹೇಳಿದೆ ಗೊತ್ತೇ? ನಿತ್ಯ ಜೀವನದಲ್ಲಿ ಪಾಲಿಸಲೇಬೇಕಾದ ಉಪಯುಕ್ತ ಸಲಹೆಗಳ ಪಟ್ಟಿ ಇಲ್ಲಿದೆ.

VISTARANEWS.COM


on

By

ICMR  Good Health Guidelines
Koo

ಆರೋಗ್ಯವಾಗಿರಲು (healthy) ದೈಹಿಕ ಚಟುವಟಿಕೆಯೊಂದಿಗೆ (activity) ಸರಿಯಾಗಿ ವಿಶ್ರಾಂತಿ (rest) ಪಡೆಯುವುದು ಬಹುಮುಖ್ಯ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR  Good Health Guidelines) ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ. ದಿನಕ್ಕೆ ಎಂಟು ಗಂಟೆಗಳ ನಿದ್ರೆ ಮತ್ತು ಎಂಟು ಗಂಟೆಗಳ ಕೆಲಸವನ್ನು ಅದು ಶಿಫಾರಸು ಮಾಡಿದೆ.

ಮಕ್ಕಳು ಮತ್ತು ಹದಿಹರೆಯದವರು (children and youth) ದಿನಕ್ಕೆ ಕನಿಷ್ಠ 60 ನಿಮಿಷಗಳ ವರೆಗೆ ಮಧ್ಯಮದಿಂದ ಹುರುಪಿನ ವ್ಯಾಯಾಮ ನಡೆಸಬೇಕು. ಅದೇ ರೀತಿ ವಯಸ್ಕರು (aged) ವಾರದಲ್ಲಿ ಕನಿಷ್ಠ ಐದು ದಿನಗಳವರೆಗೆ ದಿನಕ್ಕೆ 30- 60 ನಿಮಿಷಗಳ ಮಧ್ಯಮ-ತೀವ್ರತೆಯ ಏರೋಬಿಕ್ ವ್ಯಾಯಾಮ ಅಥವಾ 15 ನಿಮಿಷಗಳ ತೀವ್ರವಾದ- ತೀವ್ರತೆಯ ಏರೋಬಿಕ್ ವ್ಯಾಯಾಮವನ್ನು ನಡೆಸಲು ಐಸಿಎಂಆರ್ ಶಿಫಾರಸು ಮಾಡಿದೆ.

ಯಾಕೆ?

ಪ್ರತಿ ನಿತ್ಯ ಯೋಗ, ದೈಹಿಕ ವ್ಯಾಯಾಮ ಮಾಡುವುದರಿಂದ ಒಳ್ಳೆಯ ಆರೋಗ್ಯ ಮತ್ತು ಆರೋಗ್ಯಕರ ಜೀವನವನ್ನು ನಡೆಸಬಹುದು. ಇದು ದೇಹದ ತೂಕ ಕಾಪಾಡಲು, ಮಾಂಸಖಂಡಗಳ ಶಕ್ತಿ ವೃದ್ಧಿಸಲು, ಎಲುಬಿನ ಆರೋಗ್ಯ, ಕೀಲುಗಳ ಜೋಡಣೆಯನ್ನು ಆರೋಗ್ಯವಾಗಿ ಇರಿಸುತ್ತದೆ. ನಿತ್ಯವೂ ಯೋಗ, ದೈಹಿಕ ಚಟುವಟಿಕೆ ನಡೆಸುವುದರಿಂದ ದೀರ್ಘಕಾಲದ ಕೆಲವು ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಬಹುದು.

ಯಾವ ರೀತಿ?

ನಡಿಗೆ, ಜಿಮ್, ಸ್ವಿಮ್ಮಿಂಗ್, ಜಾಗಿಂಗ್, ಸ್ಕಿಪ್ಪಿಂಗ್, ಸೈಕ್ಲಿಂಗ್ ಮೊದಲಾದವುಗಳಲ್ಲಿ ಯಾವುದಾದರೂ ಒಂದೆರಡನ್ನು ನಮ್ಮ ನಿತ್ಯದ ಚಟುವಟಿಕೆಯಲ್ಲಿ ಅಳವಡಿಸಿಕೊಳ್ಳಬೇಕು. ಇದರೊಂದಿಗೆ ಪ್ರಾಣಾಯಾಮ, ಧ್ಯಾನವನ್ನು ಅಳವಡಿಸಿಕೊಳ್ಳಲು ಐಸಿಎಂಆರ್ ಸೂಚಿಸಿದೆ.

ಅಲ್ಲದೇ ಮನೆ ಕೆಲಸ, ಮನೆ ಸುತ್ತಮುತ್ತ ಸುತ್ತಾಡೋದು, ಮೆಟ್ಟಿಲುಗಳನ್ನು ಹತ್ತಿ ಇಳಿಯೋದು, ಉದ್ಯಾನ ಕೆಲಸಗಳು, ಹೊರಾಂಗಣ, ಒಳಾಂಗಣ ಕ್ರೀಡೆಗಳನ್ನು ಸೇರಿಸಿಕೊಳ್ಳಬೇಕು. ಕಾರ್ಡಿಯೋ ಚಟುವಟಿಕೆಗಳನ್ನು ನಡೆಸಲು ಮರೆಯದಿರಿ.

ವೈದ್ಯರನ್ನು ನೋಡಿ

ದೈಹಿಕ ಚಟುವಟಿಕೆ ಎಷ್ಟೇ ಮಾಡಿದರೂ ಅನಾರೋಗ್ಯ ಕಾಡಿದಾಗ ವೈದ್ಯರನ್ನು ಕಾಣಲೇಬೇಕು. ಅದರಲ್ಲೂ ಮುಖ್ಯವಾಗಿ ಉಸಿರಾಟದ ತೊಂದರೆ, ದೇಹದ ಭಾಗದಲ್ಲಿ ನೋವು, ವಾಕರಿಕೆ, ಸುಸ್ತು, ತಲೆನೋವು ಕಡಿದಾಗ ದೇಹಕ್ಕೆ ವಿಶ್ರಾಂತಿಯನ್ನು ಬಯಸುತ್ತದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು.

ಇದನ್ನೂ ಓದಿ: ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ


ಯಾವುದು ಎಷ್ಟು ಚಟುವಟಿಕೆ ಬೇಕು?

ನಿದ್ದೆ 8 ಗಂಟೆ, ಕಚೇರಿ ಕೆಲಸ – 8 ಗಂಟೆ, ಮನೆ ಕೆಲಸ- 3.30 ಗಂಟೆ, ತಿನ್ನುವುದು, ಟಿವಿ ನೋಡುವುದು, ತಮ್ಮನ್ನು ತಾವು ತಯಾರಿ ಮಾಡುವುದಕ್ಕೆ- 3 ಗಂಟೆ, ವ್ಯಾಯಾಮ- 60 ನಿಮಿಷ, ಏರೋಬಿಕ್ ವ್ಯಾಯಾಮ- 20 ನಿಮಿಷವನ್ನು ಮೀಸಲಿಡುವಂತೆ ಐಸಿಎಂಆರ್ ಸೂಚಿಸಿದೆ.

ಊಟ, ಉಪಾಹಾರದಲ್ಲಿ ಏನಿರಬೇಕು?

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಕಡಿಮೆ ಚಟುವಟಿಕೆ ಹೊಂದಿರುವ ಪುರುಷರು ಮತ್ತು ಮಹಿಳೆಯರು ಆಹಾರದಲ್ಲಿ (food) ಪೌಷ್ಟಿಕಾಂಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದ್ದು, ಇದಕ್ಕಾಗಿ ಇಂಥವರು ಯಾವ ರೀತಿಯ ಆಹಾರ ಸೇವಿಸಬೇಕು ಎಂಬುದರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಐಸಿಎಂಆರ್ ಪ್ರಕಾರ ಕಡಿಮೆ ಚಟುವಟಿಕೆ ಹೊಂದಿರುವ ಪುರುಷರ ಉಪಾಹಾರದಲ್ಲಿ ನೆನೆಸಿದ ಮತ್ತು ಬೇಯಿಸಿದ ಬಜ್ರಾ 90 ಗ್ರಾಂ ಮತ್ತು ತರಕಾರಿಗಳು 50 ಗ್ರಾಂ ಒಳಗೊಂಡಿರಬೇಕು. ಅದೇ ರೀತಿ ಮಹಿಳೆಯರಿಗೆ ನೆನೆಸಿದ ಮತ್ತು ಬೇಯಿಸಿದ ಬಜ್ರಾವನ್ನು ಉಪಾಹಾರದಲ್ಲಿ 60 ಗ್ರಾಂ ಮತ್ತು ತರಕಾರಿಗಳು 100 ಗ್ರಾಂ ಸೇರಿಸಿಕೊಳ್ಳಬೇಕು.

ಮಧ್ಯಾಹ್ನದ ಊಟದಲ್ಲಿ ಪುರುಷರು ಧಾನ್ಯಗಳನ್ನು 100 ಗ್ರಾಂ ಮತ್ತು ಬೇಳೆಕಾಳುಗಳು 30 ಗ್ರಾಂ, ಮಹಿಳೆಯರು ಮಧ್ಯಾಹ್ನದ ಊಟದಲ್ಲಿ ಧಾನ್ಯಗಳು 80 ಗ್ರಾಂ ಮತ್ತು ದ್ವಿದಳ ಧಾನ್ಯಗಳನ್ನು 20 ಗ್ರಾಂ ತೆಗೆದುಕೊಳ್ಳಬಹುದು. ಸಂಜೆ ಇಬ್ಬರಿಗೂ 50 ಮಿಲಿ ಲೀಟರ್ ಹಾಲು ಕುಡಿಯಲು ಸೂಚಿಸಲಾಗುತ್ತದೆ.

Continue Reading

ಮಹಿಳೆ

French Yoga Teacher: ಹಸಿರು ಸೀರೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ 101 ವರ್ಷದ ವಿದೇಶಿ ಯೋಗ ಶಿಕ್ಷಕಿ!

ಫ್ರಾನ್ಸ್ ನ 101 ವರ್ಷದ ಯೋಗ ಶಿಕ್ಷಕಿಯೊಬ್ಬರು (French Yoga Teacher) ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಶ್ರೀ ಪುರಸ್ಕಾರ ಪಡೆದಿದ್ದಾರೆ. ಈ ಕುರಿತು ರಾಷ್ಟ್ರಪತಿ ಭವನದಿಂದ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.

VISTARANEWS.COM


on

By

French Yoga Teacher
Koo

ನವದೆಹಲಿ: ವಯಸ್ಸು ಕೇವಲ ಒಂದು ಸಂಖ್ಯೆ ಮಾತ್ರ ಎಂಬುದನ್ನು ಇದೀಗ 101 ವರ್ಷದ ಫ್ರೆಂಚ್ ಯೋಗ ಶಿಕ್ಷಕಿ (French Yoga Teacher) ಸಾಬೀತು ಪಡಿಸಿದ್ದಾರೆ. ವಯಸ್ಸಿನ ಮಿತಿ ನಿಯಮಗಳನ್ನು ಮೀರಿ ಸುಮಾರು ನಾಲ್ಕು ದಶಕಗಳ ಕಾಲ ಯೋಗಕ್ಕೆ ಅವರು ನೀಡಿರುವ ಅಸಾಧಾರಣ ಕೊಡುಗೆಯನ್ನು ಗೌರವಿಸಿ ಶಾರ್ಲೆಟ್ ಚಾಪಿನ್ (Charlotte Chopin) ಅವರಿಗೆ ಭಾರತದ (India) ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ ( Padma Shri award) ಅನ್ನು ನೀಡಿ ಗೌರವಿಸಲಾಯಿತು.

ನವದೆಹಲಿಯ (new delhi) ರಾಷ್ಟ್ರಪತಿ ಭವನದಲ್ಲಿ ( Rashtrapati Bhawan) ಗುರುವಾರ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಹಸಿರು ಸೀರೆಯನ್ನು ಧರಿಸಿದ ಶಾರ್ಲೆಟ್ ಚಾಪಿನ್ ವೇದಿಕೆಯತ್ತ ನಡೆದು ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಯೋಗ ಕ್ಷೇತ್ರದಲ್ಲಿ ಶಾರ್ಲೆಟ್ ಚಾಪಿನ್ ಅವರ ಪ್ರಯತ್ನವನ್ನು ಶ್ಲಾಘಿಸಿ ರಾಷ್ಟ್ರಪತಿಯವರ ಕಚೇರಿಯು ಎಕ್ಸ್ ನಲ್ಲಿ ಟ್ವೀಟ್ ಮಾಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಯೋಗ ಕ್ಷೇತ್ರದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಶಾರ್ಲೆಟ್ ಚಾಪಿನ್ ಅವರಿಗೆ ಪ್ರದಾನ ಮಾಡಿದರು. ಅವರು ಪ್ರಸಿದ್ಧ ಫ್ರೆಂಚ್ ಯೋಗ ಶಿಕ್ಷಕಿಯಾಗಿದ್ದಾರೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯೋಗವನ್ನು ಕಲಿಸುತ್ತಿದ್ದಾರೆ ಮತ್ತು 101ನೇ ವಯಸ್ಸಿನಲ್ಲಿ ಯೋಗ ಶಿಕ್ಷಕರಾಗಿ ಸಕ್ರಿಯರಾಗಿದ್ದಾರೆ ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.


ಶಾರ್ಲೆಟ್ ಚಾಪಿನ್ ಯಾರು?

ಚಾಪಿನ್ ಫ್ರಾನ್ಸ್ ಮೂಲದವರಾಗಿದ್ದು, ಪ್ರಸ್ತುತ ಯೋಗ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲಾ ವಯಸ್ಸಿನ ಮಿತಿಯ ಮಾನದಂಡಗಳನ್ನು ಮೀರಿ ಚಾಪಿನ್ ಅವರು 50 ವರ್ಷ ವಯಸ್ಸಿನ ಅನಂತರ ಯೋಗವನ್ನು ಕಲಿತರು. 1982 ರಲ್ಲಿ ಫ್ರಾನ್ಸ್ ನಲ್ಲಿ ಕಲಿಸಲು ಪ್ರಾರಂಭಿಸಿದರು. ಅವರು ದೇಶದಲ್ಲಿ ಯೋಗದ ಅಲೆಯನ್ನು ಸೃಷ್ಟಿಸಿದರು. ಇದು ಪ್ರಸಿದ್ಧ ಫಿಟ್ನೆಸ್ ಅಭ್ಯಾಸವನ್ನು ಮಾಡಿದರು. ಅವರು ಫ್ರೆಂಚ್ ಟಿವಿ ಶೋ, ‘ಫ್ರಾನ್ಸ್ ಗಾಟ್ ಇನ್‌ಕ್ರೆಡಿಬಲ್ ಟ್ಯಾಲೆಂಟ್’ ನಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

2023ರ ಜುಲೈನಲ್ಲಿ ಅವರು ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪಾಲ್ಗೊಳ್ಳಲು ಫ್ರೆಂಚ್ ಪ್ರವಾಸದಲ್ಲಿದ್ದಾಗ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೊದಲ ಬಾರಿಗೆ ಪ್ಯಾರಿಸ್‌ನಲ್ಲಿ ಭೇಟಿಯಾದರು. ಯೋಗ ಕ್ಷೇತ್ರದಲ್ಲಿ ಅವರ ಅಸಾಧಾರಣ ಕೆಲಸದಿಂದ ಪ್ರಭಾವಿತರಾದ ಪ್ರಧಾನಿ, ಯೋಗದಲ್ಲಿ ಚಾಪಿನ್ ಅವರ ಆಳವಾದ ನಂಬಿಕೆ ಮತ್ತು ಫ್ರಾನ್ಸ್‌ನಲ್ಲಿ ಯೋಗವನ್ನು ಉತ್ತೇಜಿಸಲು ಅವರ ಪ್ರಯತ್ನಗಳನ್ನು ಶ್ಲಾಘಿಸಿದರು.

ಯೋಗವು ಸಂತೋಷವನ್ನು ತರುತ್ತದೆ ಮತ್ತು ಸಮಗ್ರ ಯೋಗಕ್ಷೇಮವನ್ನು ಉತ್ತೇಜಿಸುತ್ತದೆ ಎಂದು ಜುಲೈನಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದಾಗ ಚಾಪಿನ್ ಹೇಳಿದ್ದರು.

Continue Reading

ಆರೋಗ್ಯ

Mental Health Awareness Month: ಮಾನಸಿಕ ಆರೋಗ್ಯ ಜಾಗೃತಿ ಮಾಸ; ಮತ್ತೆ ಮಗುವಿನಂತಾಗಲು ಪ್ರಯತ್ನಿಸಿ!

ನಮ್ಮೊಳಗಿನ ಮಗು ಅಥವಾ ಇನ್ನರ್‌ ಚೈಲ್ಡ್‌ (Mental Health Awareness Month) ಎಂದರೇನು? ಅದರೊಂದಿಗೆ ನಂಟು ಬೆಸೆಯಲು ಸಾಧ್ಯವೇ? ಎಂದೋ ಕಳೆದ ಬಾಲ್ಯ ಈಗ ಯಾಕೆ ಬರಬೇಕು… ಮುಂತಾದ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಉದ್ದೇಶದಿಂದ ಮೇ ತಿಂಗಳನ್ನು ಮಾನಸಿಕ ಆರೋಗ್ಯ ಜಾಗೃತಿ ಮಾಸವನ್ನಾಗಿ ಆಚರಿಸಲಾಗುತ್ತದೆ. ಈ ಕುರಿತ ಸಲಹೆಗಳು ಇಲ್ಲಿವೆ.

VISTARANEWS.COM


on

Mental Health Awareness Month
Koo

ಮತ್ತೆ ಮಗುವಿನಂತಾಗಲು (Mental Health Awareness Month) ಸಾಧ್ಯವೇ? ಪ್ರಶ್ನೆಯೇ ಬಾಲಿಶ ಎನಿಸಬಹುದು. ಆದರೆ ನಮ್ಮ ಒಳಗಿನ ಮಗುವಿನೊಂದಿಗೆ ಮತ್ತೆ ನಂಟು ಬೆಸೆಯಲು ಸಾಧ್ಯವಾದರೆ ಮಾನಸಿಕ ಸ್ವಾಸ್ಥ್ಯ ಸಾಧಿಸುವಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಿದಂತಾಗುತ್ತದೆ ಎನ್ನುವುದು ಸ್ವಾಸ್ಥ್ಯ ತಜ್ಞರ ಮಾತು. ನಮ್ಮೊಳಗಿನ ಮಗು ಅಥವಾ ಇನ್ನರ್‌ ಚೈಲ್ಡ್‌ ಎಂದರೇನು? ಅದರೊಂದಿಗೆ ನಂಟು ಬೆಸೆಯಲು ಸಾಧ್ಯವೇ? ಎಂದೋ ಕಳೆದ ಬಾಲ್ಯ ಈಗ ಯಾಕೆ ಬರಬೇಕು… ಮುಂತಾದ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಉದ್ದೇಶದಿಂದ ಮೇ ತಿಂಗಳನ್ನು ಮಾನಸಿಕ ಆರೋಗ್ಯ ಜಾಗೃತಿ ಮಾಸವನ್ನಾಗಿ ಆಚರಿಸಲಾಗುತ್ತದೆ.

Mental health image. Various emotion and maind.

ಬಾಲ್ಯದ ನಂಟೇಕೆ?

ನಮ್ಮೆಲ್ಲರ ಬಾಲ್ಯದ ಅನುಭವಗಳೇ ನಮ್ಮನ್ನು ಭವಿಷ್ಯದಲ್ಲಿ ರೂಪಿಸುವಂಥವು. ಬಾಲ್ಯ ಸಿಹಿಯಾಗಿದ್ದರೆ ಮುಂದಿನ ಬದುಕಿನಲ್ಲಿ ಆತ್ಮವಿಶ್ವಾಸ ಹೆಚ್ಚಿರುವಂತೆಯೇ, ಕಹಿ ಬಾಲ್ಯಗಳು ಭವಿಷ್ಯವನ್ನು ದಿಕ್ಕೆಡಿಸಬಹುದು ಎಂಬುದೂ ನಿಜ. ಹಾಗಾಗಿ ಎಳೆತನದ ದಿನಗಳೊಂದಿಗೆ ಮತ್ತೆ ನಂಟು ಬೆಸೆಯುವ ಅಗತ್ಯವನ್ನು ಮಾನಸಿಕ ಸ್ವಾಸ್ಥ್ಯದ ತಜ್ಞರು ಪುನರುಚ್ಚರಿಸುತ್ತಾರೆ. ಒಳ್ಳೆಯ ಅನುಭವಗಳು ಮರುಕಳಿಸಿದರೆ ಬದುಕಿನ ಸೊಗಸು ಮತ್ತೆ ಬಂದಂತೆ. ಒಂದೊಮ್ಮೆ ಅನುಭವಗಳು ಕಹಿಯಾಗಿದ್ದರೆ, ಆ ನೆನಪುಗಳನ್ನು ತೊಡೆಯುವುದು ಸಹ ʻಹೀಲಿಂಗ್‌ʼ ಎನ್ನುವ ಪ್ರಕ್ರಿಯೆಯ ಭಾಗ. ಅದಲ್ಲದೆ ಇನ್ನೇನು ಪ್ರಯೋಜನ?

Woman Meditating in the Workplace Sitting in Front of a Laptop Practicing Stress Relief Exercises Diabetes Control

ಒತ್ತಡ ನಿವಾರಣೆ

ಇಂದಿನ ಪ್ರೆಷರ್‌ ಕುಕ್ಕರ್‌ನಂಥ ಬದುಕಿನಲ್ಲಿ ಬೇಡದ್ದನ್ನೇ ತಲೆಯಲ್ಲಿ ತುಂಬಿಸಿಕೊಳ್ಳುವುದು, ಬದುಕಿನ ಹೊರೆಯನ್ನು ಹೆಚ್ಚಿಸುತ್ತದೆ. ಇದರಿಂದ ಒತ್ತಡದ ಹಾರ್ಮೋನುಗಳಾದ ಕಾರ್ಟಿಸೋಲ್‌ಗಳ ಸ್ರವಿಸುವಿಕೆ ಹೆಚ್ಚುತ್ತದೆ. ಈ ಕಾರ್ಟಿಸೋಲ್‌ ಪ್ರಮಾಣವನ್ನು ಕಡಿಮೆ ಮಾಡದಿದ್ದರೆ, ಅದರ ಅಡ್ಡ ಪರಿಣಾಮಗಳು ಹಲವು ರೀತಿಯಲ್ಲಿ ಕಂಡುಬರುತ್ತದೆ. ಬದಲಿಗೆ, ಮನಸ್ಸನ್ನು ಉಲ್ಲಸಿತವಾಗಿ ಇರಿಸಲು ಯತ್ನಿಸುವುದರಿಂದ ಒತ್ತಡವನ್ನು ಕಡಿಮೆ ಮಾಡಲು ಸಾಧ್ಯವಿದೆ.,ಕೆಲವೊಮ್ಮೆ ಉದ್ಯೋಗದ ಒತ್ತಡಗಳು ಮುಂದೆ ಯೋಚಿಸಲೇ ಆಗದಷ್ಟು ತಲೆಯನ್ನು ಖಾಲಿ ಮಾಡಿಬಿಡುತ್ತವೆ. ಇಂಥ ಸಂದರ್ಭದಲ್ಲಿ ಮನಸ್ಸಿಗೆ ಮುದ ನೀಡುವ ವಿಷಯಗಳ ಬಗ್ಗೆ ಯೋಚಿಸುವುದು ಮತ್ತು ಎಳೆತನದ ಹುಡುಗಾಟಿಕೆಗಳೊಂದಿಗೆ ಬೆಸೆಯುವುದು, ಹೊಸ ಆಲೋಚನೆಗಳಿಗೆ ದಾರಿ ಮಾಡುತ್ತವೆ. ಮಕ್ಕಳು ಎಂದಿಗೂ ಬದುಕುವುದು ವರ್ತಮಾನದಲ್ಲಿ. ನಿನ್ನೆಯದ್ದು ಅವುಗಳಿಗೆ ನೆನಪಿರುವುದಿಲ್ಲ, ನಾಳೆಯದ್ದು ಗೊತ್ತಿರುವುದಿಲ್ಲ. ಹಾಗಾಗಿ ತಾವಿದ್ದಂತೆಯೇ ತಮ್ಮನ್ನು ಖುಷಿಯಿಂದ ಒಪ್ಪಿಕೊಂಡೂ ಬಿಡುತ್ತವೆ ಆ ಮಕ್ಕಳು. ತಾನು ಅವರಂತೆ ಇಲ್ಲ, ಇವರಲ್ಲಿ ಇರುವಂಥದ್ದು ತನಗಿಲ್ಲ ಎಂದೆಲ್ಲ ಕೊರಗುವುದಿಲ್ಲ. ಇದನ್ನೇ ಮರಳಿ ಕಲಿಯಬೇಕು ನಾವು.

ಇದಕ್ಕಾಗಿ ಏನು ಮಾಡಬೇಕು?

ಹ್ಯಾಪಿ ಹಾರ್ಮೋನುಗಳು ಬಿಡುಗಡೆಯಾಗುವ ದಾರಿಗಳನ್ನು ಹುಡುಕಿ. ಎಳೆತನದ ಆಟಗಳನ್ನು ನೆನಪಿಸಿಕೊಳ್ಳಿ. ಚನ್ನೆಮಣೆ, ಚೌಕಾಬಾರ ಆಡಿ ಗೊತ್ತಿದ್ದರೆ ಸರಿ. ಅದಿಲ್ಲದಿದ್ದರೆ ಮನೆಯ ಮಕ್ಕಳೊಂದಿಗೆ ಕಣ್ಣಾಮುಚ್ಚಾಲೆ, ಅದಲುಬದಲು ಮುಂತಾದ ಹುಡುಗಾಟದ ಆಟಗಳು ಮನಸ್ಸಿನ ಉಲ್ಲಾಸ ಹೆಚ್ಚಿಸಬಲ್ಲವು. ಸಾಧ್ಯವಾದಷ್ಟು ಹೊತ್ತು ಹಿಂದಿನ-ಮುಂದಿನ ಕ್ಷಣಗಳನ್ನು ಮರೆತು ಬದುಕಲು ಪ್ರಯತ್ನಿಸಿ. ಇದರಿಂದ ಒತ್ತಡ ಕಡಿಮೆ ಮಾಡಲು ನಿಶ್ಚಿತವಾಗಿ ಸಾಧ್ಯವಿದೆ.

ಕಲಿಯಿರಿ

ಎಂದೋ ಏನೋ ಕಲಿಯುವ ಆಸೆ ಮನದಲ್ಲಿ ಇನ್ನೂ ಸುಪ್ತವಾಗಿ ಕುಳಿತಿದೆಯೇ? ಗಿಟಾರ್‌, ಡ್ರಮ್‌, ಪೇಟಿಂಗ್‌ ಅಥವಾ ಏನಾದರೂ ಸರಿ, ಕಲಿಯಬೇಕೆಂಬ ಬಯಕೆ ಇದ್ದರೆ ಅದಕ್ಕೆ ವಯಸ್ಸಿನ ಹಂಗನ್ನು ಅಂಟಿಸಬೇಡಿ. ಆವತ್ತು ಆಗದಿದ್ದರೇನು, ಇವತ್ತಾದರೂ ಸಾಧ್ಯವಾಗುತ್ತಿದೆ ಎಂಬ ಬಗ್ಗೆ ಖುಷಿ, ಹೆಮ್ಮೆ- ಎರಡೂ ಇರಲಿ.

Mental health issues concept.

ನಿಸರ್ಗದ ಸಾಂಗತ್ಯ

ಅದಕ್ಕಾಗಿ ಹಿಮಾಲಯಕ್ಕೇ ಚಾರಣ ಹೋಗಬೇಕೆಂದಿಲ್ಲ. ಯಾವುದಾದರೂ ಬೀಚಿನ ಮರಳಿನಲ್ಲಿ ಮನೆ ಕಟ್ಟುವುದು, ಬೀಚ್‌ನಲ್ಲಿ ಚೆಂಡು ಆಡುವುದು, ರಾತ್ರಿ ಮಹಡಿ ಮೇಲೆ ಮಲಗಿ ನಕ್ಷತ್ರ ಎಣಿಸುವುದು, ಪಾಟಿನಲ್ಲಿ ಒಂದಿಷ್ಟು ಬೀಜ ಬಿತ್ತಿ ದಿನಾ ಅದು ಮೊಳೆಯುವುದನ್ನು ಗಮನಿಸುವುದು- ಇಂಥ ಸರಳ ಚಟುವಟಿಕೆಗಳು ಮನಸ್ಸನ್ನು ಆರೋಗ್ಯಪೂರ್ಣವಾಗಿ ಇರಿಸುತ್ತವೆ.
ನೆನಪಿಡಿ, ಈ ಯಾವುವೂ ನಮ್ಮ ಗುರಿಯಲ್ಲ, ಗುರಿ ತಲುಪುವ ದಾರಿ. ನಮ್ಮ ಗುರಿ ಮನಸ್ಸಿನ ಆರೋಗ್ಯವನ್ನು ಹೆಚ್ಚಿಸಿಕೊಳ್ಳುವುದು, ಈ ಮೂಲಕ ಬದುಕಿನ ಸ್ವಾಸ್ಥ್ಯವನ್ನು ವೃದ್ಧಿಸಿಕೊಳ್ಳುವುದು. ಇದು ಜಾಗೃತಿ ಮಾಸದಲ್ಲಿ ಮಾತ್ರವಲ್ಲ, ಜೀವನದುದ್ದಕ್ಕೂ ನಡೆಸಿಕೊಂಡು ಬರಬೇಕಾದ ಪ್ರಕ್ರಿಯೆ.

Continue Reading

ವಿದೇಶ

Pig Kidney: ಹಂದಿಯ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ 2 ತಿಂಗಳ ಬಳಿಕ ಸಾವು

Pig Kidney: ಆನುವಂಶಿಕವಾಗಿ ಮಾರ್ಪಡಿಸಿದ ಹಂದಿಯ ಮೂತ್ರಪಿಂಡ ಕಸಿ ಪಡೆದ ಮೊದಲ ವ್ಯಕ್ತಿ, ಇಂಗ್ಲೆಂಡ್‌ನ ವೇಮೌತ್‌ನ ನಿವಾಸಿ 62 ವರ್ಷದ ರಿಕ್ ಸ್ಲೇಮನ್ ಶಸ್ತ್ರ ಚಿಕಿತ್ಸೆ ನಡೆದ ಸುಮಾರು ಎರಡು ತಿಂಗಳ ನಂತರ ನಿಧನ ಹೊಂದಿದ್ದಾರೆ. ಆದರೆ ಅವರ ನಿಧನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕಿಡ್ನಿ ಕಸಿಯ ಪರಿಣಾಮದಿಂದ ಅವರು ನಿಧನ ಹೊಂದಿದ್ದಾರೆ ಎಂಬುದಕ್ಕೆ ನಮಗೆ ಯಾವುದೇ ಸೂಚನೆ ಸಿಕ್ಕಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

VISTARANEWS.COM


on

Pig Kidney
Koo

ಬೋಸ್ಟನ್: ಆನುವಂಶಿಕವಾಗಿ ಮಾರ್ಪಡಿಸಿದ ಹಂದಿಯ ಮೂತ್ರಪಿಂಡ (Pig Kidney) ಕಸಿ ಪಡೆದ ಮೊದಲ ವ್ಯಕ್ತಿ, ಇಂಗ್ಲೆಂಡ್‌ನ ವೇಮೌತ್‌ನ ನಿವಾಸಿ 62 ವರ್ಷದ ರಿಕ್ ಸ್ಲೇಮನ್ (Rick Slayman) ಶಸ್ತ್ರ ಚಿಕಿತ್ಸೆ ನಡೆದ ಸುಮಾರು ಎರಡು ತಿಂಗಳ ನಂತರ ನಿಧನ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಮೆರಿಕದ ಬೋಸ್ಟನ್‌ನ ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆಯಲ್ಲಿ ಈ ವರ್ಷದ ಮಾರ್ಚ್‌ನಲ್ಲಿ ರಿಕ್ ಸ್ಲೇಮನ್ ಅವರಿಗೆ ಹಂದಿಯ ಮೂತ್ರಪಿಂಡ ಕಸಿ ಮಾಡಲಾಗಿತ್ತು. ʼʼಹಂದಿ ಮೂತ್ರಪಿಂಡವು ಕನಿಷ್ಠ ಎರಡು ವರ್ಷಗಳವರೆಗೆ ಕಾರ್ಯ ನಿರ್ವಹಿಸುತ್ತದೆ ಎಂದು ನಂಬಿದ್ದೆವು. ಆದರೆ ರಿಕ್ ಸ್ಲೇಮನ್ ಅವರ ಹಠಾತ್‌ ನಿಧನ ಆಘಾತ ತಂದಿದೆʼʼ ಎಂದು ವೈದ್ಯರು ತಿಳಿಸಿದ್ದಾರೆ.

“ರಿಕ್ ಸ್ಲೇಮನ್ ಅವರ ಹಠಾತ್ ನಿಧನದಿಂದ ತೀವ್ರ ದುಃಖವಾಗಿದೆ. ಕಿಡ್ನಿ ಕಸಿಯ ಪರಿಣಾಮದಿಂದ ಅವರು ನಿಧನ ಹೊಂದಿದ್ದಾರೆ ಎಂಬುದಕ್ಕೆ ನಮಗೆ ಯಾವುದೇ ಸೂಚನೆ ಸಿಕ್ಕಿಲ್ಲ. ಸ್ಲೇಮನ್ ಅವರನ್ನು ವಿಶ್ವಾದ್ಯಂತದ ಕಿಡ್ನಿ ಸಮಸ್ಯೆ ಇರುವವರ ಭರವಸೆ ಎಂದೇ ಪರಿಗಣಿಸಲಾಗುತ್ತದೆ. ಸ್ಲೇಮನ್ ಅವರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತಿದ್ದೇವೆʼʼ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಅಂತಿಮ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಸ್ಲೇಮನ್ ಅವರಿಗೆ ಮಾರ್ಚ್ 16ರಂದು ಶಸ್ತ್ರಚಿಕಿತ್ಸೆ ನಡೆಸಿ ಆನುವಂಶಿಕವಾಗಿ ಮಾರ್ಪಡಿಸಿದ ಹಂದಿಯ ಮೂತ್ರಪಿಂಡ ಕಸಿ ಮಾಡಲಾಗಿತ್ತು. ಟೈಪ್ 2 ಮಧುಮೇಹಿಯಾಗಿದ್ದ ಅವರು ಈ ಹಿಂದೆ 2018ರಲ್ಲಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದರು. ಆದಾಗ್ಯೂ ಐದು ವರ್ಷಗಳ ನಂತರ ಕಸಿ ಮಾಡಿಸಿಕೊಂಡಿದ್ದ ಮೂತ್ರಪಿಂಡ ವಿಫಲವಾಗಲು ಪ್ರಾರಂಭಿಸಿತು ಮತ್ತು ಅಂದಿನಿಂದ ಅವರು ಡಯಾಲಿಸಿಸ್‌ನಲ್ಲಿದ್ದರು.

ಕೊನೆಗೆ ಅವರು ಹಂದಿಯ ಮೂತ್ರಪಿಂಡವನ್ನು ಕಸಿ ಮಾಡಿಸಿಕೊಳ್ಳಲು ಒಪ್ಪಿಗೆ ನೀಡಿದ್ದರು. ಈ ವೇಳೆ ಅವರು ಇದು ತಾನು ಎದುರಿಸುವಂತಹ ಸಮಸ್ಯೆ ಇರುವವರಿಗೆ ಭರವಸೆಯ ಬೆಳಕನ್ನು ಒದಗಿಸಲಿದೆ ಎಂದು ಹೇಳಿದ್ದರು. ಅದರಂತೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

ವೈದ್ಯರ ಪ್ರಯೋಗ ಯಶಸ್ವಿಯಾಗಿತ್ತು. ಆ ಮೂಲಕ ರಿಕ್ ಸ್ಲೇಮನ್ ಹಂದಿ ಮೂತ್ರಪಿಂಡ ಕಸಿ ಸ್ವೀಕರಿಸಿದ ವಿಶ್ವದ ಮೊದಲ ವ್ಯಕ್ತಿ ಎನಿಸಿಕೊಂಡಿದ್ದರು. ಶಸ್ತ್ರಚಿಕಿತ್ಸೆಯ ಬಳಿಕ ಸುಮಾರು ಎರಡು ವಾರಗಳ ಕಾಲ ಆಸ್ಪತ್ರೆಯಲ್ಲಿದ್ದು, ಬಳಿಕ ಮನೆಗೆ ತೆರಳಿದ್ದರು. ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡು ಬಂದಿದೆ. ಮನೆಯಲ್ಲಿ ಚಿಕಿತ್ಸೆ ಮುಂದುವರಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದರು. ʼʼಸ್ಲೇಮನ್‌ಗೆ ಕಸಿ ಮಾಡಲಾದ ಹಂದಿಯ ಮೂತ್ರಪಿಂಡವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ರಕ್ತದಲ್ಲಿನ ತ್ಯಾಜ್ಯವನ್ನು ತೆಗೆದು ಹಾಕುತ್ತಿದ್ದು, ಮೂತ್ರವನ್ನು ಉತ್ಪಾದಿಸುತ್ತದೆ. ದೇಹದ ದ್ರವಗಳನ್ನು ಸಮತೋಲನಗೊಳಿಸುತ್ತದೆʼʼ ಎಂದು ಅಂದು ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಇದರಿಂದ ಮುಂಬರುವ ದಿನಗಳಲ್ಲಿ ಮಾನವನ ಮೇಲೆ ಪ್ರಾಣಿಗಳ ಅಂಗಾಂಗ ಕಸಿಯ ಪ್ರಯೋಗದ ಹೊಸ ಯುಗವೊಂದು ಪ್ರಾರಂಭವಾಗುವ ಸಾಧ್ಯತೆಯಿದೆ ಎಂದೇ ವಿಶ್ಲೇಷಿಸಲಾಗಿತ್ತು.

ಈ ಹಿಂದೆ ಹಂದಿಯ ಹೃದಯವನ್ನು ಕಸಿ ಮಾಡಿದ ಕೆಲವೇ ವಾರಗಳಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಹೀಗಾಗಿ ಈ ಪ್ರಯೋಗ ಭರವಸೆ ಮೂಡಿತ್ತು.

ಇದನ್ನೂ ಓದಿ: Pig kidney: ಮನುಷ್ಯನಿಗೆ ಹಂದಿಯ ಕಿಡ್ನಿ ಅಳವಡಿಕೆ ಸಕ್ಸೆಸ್! ರೋಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್

Continue Reading
Advertisement
karnataka politics eknath shinde
ಪ್ರಮುಖ ಸುದ್ದಿ34 mins ago

Karnataka Politics: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಮಹತ್ವದ ಸುಳಿವು!

Vijayapura news Drowned in water
ವಿಜಯಪುರ36 mins ago

Vijayapura News: ನಾಪತ್ತೆಯಾಗಿದ್ದ ಮೂವರು ಮಕ್ಕಳು ಚರಂಡಿ ಶುದ್ಧೀಕರಣ ಕೇಂದ್ರಕ್ಕೆ ಬಿದ್ದು ಸಾವು

Road Accident between Bolero and bike Couple dies on the spot
ಕಲಬುರಗಿ44 mins ago

Road Accident: ಬೊಲೇರೋ – ಬೈಕ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಆಳಂದದ ದಂಪತಿ ಸಾವು

Arvind Kejriwal
ದೇಶ54 mins ago

Arvind Kejriwal: ಕೇಜ್ರಿವಾಲ್‌ಗೆ ಮತ್ತೊಂದು ರಿಲೀಫ್‌; ಸಿಎಂ ಸ್ಥಾನ ವಜಾಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ

Assault case Cubbon park
ಬೆಂಗಳೂರು1 hour ago

Cubbon park: ಕಬ್ಬನ್‌ ಪಾರ್ಕ್‌ನಲ್ಲಿ ಯುವಕನನ್ನು ಅಟ್ಟಾಡಿಸಿ ಚಪ್ಪಲಿಯಿಂದ ಹೊಡೆದ ಮಹಿಳೆಯರು!

A Manju and Naveen Gowda
ಕ್ರೈಂ1 hour ago

Prajwal Revanna Case: ಪೆನ್‌ ಡ್ರೈವ್‌ ಹಂಚಿಕೆ ಆರೋಪ ಮಾಡಿದ್ದ ನವೀನ್‌ ಗೌಡ ಮೇಲೆ ಶಾಸಕ ಮಂಜು ದೂರು

Viral Video
ದೇಶ1 hour ago

Viral Video: ಸಾಲಿನಲ್ಲಿ ಬನ್ನಿ ಅಂದಿದ್ದೇ ತಪ್ಪಾಯ್ತಾ? ಮತದಾರನಿಗೆ MLA ಕಪಾಳಮೋಕ್ಷ

POK Explainer in Kannada
ರಾಜಕೀಯ1 hour ago

POK Explainer in Kannada: ಪಾಕ್ ಆಕ್ರಮಿತ ಕಾಶ್ಮೀರ ಕುರಿತ 15 ಕುತೂಹಲಕಾರಿ ಸಂಗತಿಗಳು

Vijay Surya changes his name on mothers day
ಕಿರುತೆರೆ2 hours ago

Vijay Surya: ತಾಯಂದಿರ ದಿನ ತನ್ನ ಹೆಸರನ್ನೇ ಬದಲಿಸಿಕೊಂಡ ʻಅಗ್ನಿಸಾಕ್ಷಿ’ ನಟ! ಹೊಸ ಹೆಸರೇನು?

gold rate today 34
ಚಿನ್ನದ ದರ2 hours ago

Gold Rate Today: ಬಂಗಾರದ ಬೆಲೆಯಲ್ಲಿ ಇಳಿಕೆ; ರಾಜ್ಯ ಮಾರುಕಟ್ಟೆಯಲ್ಲಿ ಚಿನ್ನ- ಬೆಳ್ಳಿ ದರಗಳು ಹೀಗಿವೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ8 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ10 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ20 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ21 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ21 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌