Breast Cancer: ಮಹಿಳೆಯರೇ ಹುಷಾರ್‌; 2040ರ ವೇಳೆಗೆ ಸ್ತನ ಕ್ಯಾನ್ಸರ್‌ಗೆ 10 ಲಕ್ಷ ಜನ ಬಲಿಯಾಗಲಿದ್ದಾರಂತೆ! - Vistara News

ಲೈಫ್‌ಸ್ಟೈಲ್

Breast Cancer: ಮಹಿಳೆಯರೇ ಹುಷಾರ್‌; 2040ರ ವೇಳೆಗೆ ಸ್ತನ ಕ್ಯಾನ್ಸರ್‌ಗೆ 10 ಲಕ್ಷ ಜನ ಬಲಿಯಾಗಲಿದ್ದಾರಂತೆ!

Breast Cancer: ಕ್ಯಾನ್ಸರ್ ಎಂಬ ಹೆಸರು ಕೇಳಿದರೆ ಯಾರ ಮೈ ನಡುಗಲ್ಲ ಹೇಳಿ! ದೇಹದ ಭಾಗದಲ್ಲಿ ಚಿಕ್ಕ ನೋವಿದ್ದರೂ ವೈದ್ಯರ ಬಳಿ ಓಡಿ ಹೋಗೋಣ ಅನಿಸುತ್ತದೆ. ಇನ್ನು ಮಹಿಳೆಯರನ್ನು ಹಿಂಡಿ ಹಿಪ್ಪೆ ಮಾಡುವ ಕಾಯಿಲೆಯೆಂದರೆ ಅದು ಸ್ತನ ಕ್ಯಾನ್ಸರ್. 2040ರ ವೇಳೆಗೆ ಈ ಕಾಯಿಲೆ ಮತ್ತಷ್ಟು ಮಹಿಳೆಯರನ್ನು ಬಲಿ ತೆಗೆದುಕೊಳ್ಳಲಿದೆ ಎಂದು ಸಮೀಕ್ಷೆಯೊಂದು ಹೇಳಿದೆ.

VISTARANEWS.COM


on

Breast Cancer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕ್ಯಾನ್ಸರ್ ಒಂದು ಮಾರಕವಾದ ಕಾಯಿಲೆಯಾಗಿದೆ. ಇದರಿಂದ ಬದುಕುಳಿದವರಿಗಿಂತ ಜೀವ ಕಳೆದುಕೊಂಡವರೇ ಹೆಚ್ಚು. ಹಾಗಾಗಿ ಜನರು ಕ್ಯಾನ್ಸರ್ (Breast Cancer) ಎಂದಾಗ ಬೆಚ್ಚಿ ಬೀಳುತ್ತಾರೆ. ಬಹಳ ಹಿಂದಿನ ಕಾಲದಲ್ಲಿ ಇದನ್ನು ಶ್ರೀಮಂತರ ರೋಗ ಎಂದು ಕರೆಯುತ್ತಿದ್ದರು. ಯಾಕೆಂದರೆ ಇದು ಹೆಚ್ಚು ಶ್ರೀಮಂತರಲ್ಲಿ ಕಂಡುಬರುತ್ತಿತ್ತು, ಆದರೆ ಇತ್ತೀಚಿನ ದಿಗಳಲ್ಲಿ ಕ್ಯಾನ್ಸರ್ ರೋಗ ಎಲ್ಲಾ ಜನರಲ್ಲೂ ಕಂಡುಬರುತ್ತಿದೆ.

ದೇಹದ ಜೀವಕೋಶಗಳು ಅನಿಯಂತ್ರಿತವಾಗಿ ಬೆಳೆಯಲು ಶುರು ಮಾಡಿದಾಗ ಅದು ಕ್ಯಾನ್ಸರ್ ಆಗಿ ಬದಲಾಗುತ್ತದೆ. ನಂತರ ಇದು ದೇಹದ ಇತರ ಭಾಗಗಳಿಗೂ ಹರಡುತ್ತದೆ. ಕ್ಯಾನ್ಸರ್ ನಲ್ಲಿ ಹಲವು ವಿಧಗಳಿವೆ. ಸ್ತನ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್, ಲಿವರ್ ಕ್ಯಾನ್ಸರ್, ಬಾಯಿ ಕ್ಯಾನ್ಸರ್, ಗಂಟಲು ಕ್ಯಾನ್ಸರ್, ಗರ್ಭಕೋಶದ ಕ್ಯಾನ್ಸರ್, ಮೆದುಳು ಕ್ಯಾನ್ಸರ್, ಪ್ರಾಸ್ಟೇಟ್ ಕ್ಯಾನ್ಸರ್ ಮುಂತಾದ ಕ್ಯಾನ್ಸರ್ ಇದೆ. ಆದರೆ ಇವುಗಳಿಗೆ ಸರಿಯಾದ ಚಿಕಿತ್ಸೆ ನೀಡಬೇಕು. ಇಲ್ಲವಾದರೆ ಇದು ಜೀವವನ್ನೇ ತೆಗೆಯುತ್ತದೆ.

ಆದರೆ ಸ್ತನ ಕ್ಯಾನ್ಸರ್ ಈಗ ಜಗತ್ತಿನಲ್ಲಿ ಸಾಮಾನ್ಯವಾಗಿ ಕಂಡುಬರುತ್ತಿರುವಂತಹ ಕಾಯಿಲೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಜಗತ್ತಿನಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಸ್ತನ ಕ್ಯಾನ್ಸರ್ ನಿಂದ ಸಾವನಪ್ಪುತ್ತಿದ್ದಾರೆ. ಹಾಗಾಗಿ 2040ರ ವೇಳೆ ಸ್ತನ ಕ್ಯಾನ್ಸರ್ ಮಿಲಿಯನ್‌ಗಟ್ಟಲೆ ಜನರನ್ನು ಬಲಿ ತೆಗೆದುಕೊಳ್ಳಲಿದೆ ಎಂಬುದಾಗಿ ಆಯೋಗವೊಂದು ಕಂಡುಕೊಂಡಿದೆ.

ಲ್ಯಾನ್ಸೆಟ್ ಆಯೋಗದ ಪ್ರಕಾರ, 2020ರಲ್ಲಿ ಸುಮಾರು 7.8 ಮಿಲಿಯನ್ ಮಹಿಳೆಯರು ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದರೆ, ಮತ್ತು ಸುಮಾರು 685000 ಮಹಿಳೆಯರು ಈ ಕಾಯಿಲೆಯಿಂದ ಜೀವ ಕಳೆದುಕೊಂಡಿದ್ದಾರೆ. ಹಾಗಾಗಿ ಇಡೀ ಜಗತ್ತಿನಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು 2020 ರಲ್ಲಿ 2.3 ಮಿಲಿಯನ್ ನಿಂದ 2040ರ ವೇಳೆಗೆ 3 ಮಿಲಿಯನ್ ಗಿಂತಲೂ ಹೆಚ್ಚಾಗಬಹುದು. ಹಾಗೇ 2040ರ ವೇಳೆಗೆ ಸ್ತನ ಕ್ಯಾನ್ಸರ್ ನಿಂದ ಸಾವನಪ್ಪಿದವರ ಸಂಖ್ಯೆ ವರ್ಷಕ್ಕೆ 1 ಮಿಲಿಯನ್ ಆಗುತ್ತದೆ. ಅದರಲ್ಲೂ ಅಭಿವೃದ್ಧಿ ಹೊಂದುತ್ತಿರುವ ಮತ್ತು ಅಭಿವೃದ್ಧಿ ಹೊಂದದ ದೇಶದ ಜನರು ಇದಕ್ಕೆ ಬಲಿಯಾಗಲಿದ್ದಾರೆ ಎಂಬುದಾಗಿ ತಿಳಿಸಿದೆ.

ಹಾಗಾಗಿ ಸ್ತನ ಕ್ಯಾನ್ಸರ್ ಸಾವಿನ ಪ್ರಮಾಣವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಆಯೋಗವು ರೋಗಿಗಳು ಮತ್ತು ಆರೋಗ್ಯ ಸಲಹೆಗಾರರ ನಡುವೆ ಉತ್ತಮ ಸಂವಹನ ನಡೆಸಲು ನಿರ್ಣಯಿಸಿದೆ. ಆ ಮೂಲಕ ರೋಗ ಲಕ್ಷಣಗಳು, ಚಿಕಿತ್ಸೆ ಮತ್ತು ಉತ್ತಮ ಜೀವನಶೈಲಿಯನ್ನು ಅನುಸರಿಸುವುದರ ಮೂಲಕ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎನ್ನಲಾಗಿದೆ.

ಅದಕ್ಕಾಗಿ ಪ್ರತಿಯೊಬ್ಬ ಆರೋಗ್ಯ ಸಲಹೆಗಾರರು ಕೆಲವು ರೀತಿಯ ಸಂವಹನ ಕೌಶಲ್ಯಗಳ ತರಬೇತಿಯನ್ನು ಪಡೆಯಬೇಕು. ಇದರಿಂದ ರೋಗಗಳು ಮತ್ತು ಆರೋಗ್ಯ ಸಲಹೆಗಾರರ ನಡುವಿನ ಸಂವಹನದ ಗುಣಮಟ್ಟದಲ್ಲಿ ಸುಧಾರಣೆ ಕಂಡುಬರುತ್ತದೆ. ಇದು ರೋಗಿಗಳ ಮೇಲೆ ಸಕರಾತ್ಮಕ ಪರಿಣಾಮ ಬೀರಬಹುದು ಎಂದು ಆಯೋಗವು ತಿಳಿಸಿದೆ.

ಇದನ್ನೂ ಓದಿ: Right To Sleep: ನಿದ್ದೆ ಮನುಷ್ಯನ ಹಕ್ಕು, ಯಾರೂ ಕಸಿಯುವಂತಿಲ್ಲ ಎಂದು ಹೈಕೋರ್ಟ್‌ ಆದೇಶ!

ಹಾಗೇ ಮಹಿಳೆಯರಿಗೆ ಹೆಚ್ಚು ವ್ಯಾಯಾಮಗಳನ್ನು ಮಾಡಲು ಪ್ರೋತ್ಸಾಹಿಸಬೇಕು ಮತ್ತು ಅವರು ತಮ್ಮ ಆರೈಕೆಯ ಬಗ್ಗೆ ಹೆಚ್ಚು ಕಾಳಜಿ ವಹಿಸುವಂತೆ ನಿರ್ಧಾರ ಮಾಡಬೇಕು ಎಂದು ತಿಳಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Namma Clinic: ಬಸ್‌ ನಿಲ್ದಾಣ ಸೇರಿದಂತೆ 254 ಕಡೆ ʼನಮ್ಮ ಕ್ಲಿನಿಕ್‌ʼ ಸ್ಥಾಪನೆ

Namma Clinic: ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್‌ಗಳನ್ನು ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಹಾಗೂ ಸ್ಥಳ ಗುರುತಿಸುವ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡುವಂತೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

VISTARANEWS.COM


on

Namma Clinic
Koo

ಬೆಂಗಳೂರು: ಬಸ್ ನಿಲ್ದಾಣಗಳು ಸೇರಿದಂತೆ (Namma Clinic) ಸಾರ್ವಜನಿಕ ಸ್ಥಳಗಳಲ್ಲಿ ʼನಮ್ಮ ಕ್ಲಿನಿಕ್‌ʼಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಗುರುವಾರ ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ನೂತನ ನಮ್ಮ ಕ್ಲಿನಿಕ್‌ಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ 15 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್‌ಗಳನ್ನು ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್‌ಗಳನ್ನು ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Glasses or Lenses?: ಕನ್ನಡಕವೋ ಕಾಂಟ್ಯಾಕ್ಟ್‌ ಲೆನ್ಸ್‌ ಬೇಕೋ? ಇದನ್ನು ಓದಿ, ನೀವೇ ನಿರ್ಧರಿಸಿ!

ಸ್ಥಳ ಗುರುತಿಸುವ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡುವಂತೆ ತಿಳಿಸಿದ ಸಚಿವರು, ವಿಶೇಷವಾಗಿ ಜೈಲುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ, ನಮ್ಮ ಕ್ಲಿನಿಕ್‌ಗಳನ್ನ ಆರಂಭಿಸುವ ಕುರಿತು ಸ್ಥಳ ಗುರುತಿಸುವ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳಿಸಿ ಕ್ಯಾಬಿನೆಟ್ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅನೀಲ್ ಕುಮಾರ್ ಎನ್.ಎಚ್.ಎಂ ಎಂ.ಡಿ ನವೀನ್ ಭಟ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರಿಗೆ ಸೂಚಿಸಿದರು.

15 ನೇ ಹಣಕಾಸಿನಲ್ಲಿ ಆರೋಗ್ಯ ಯೋಜನೆಗಳ ಸ್ಥಿತಿಗತಿಗಳ ಕುರಿತು ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಯೋಜನೆಗಳ ಶೀಘ್ರ ಕಾರ್ಯಗತಗೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ವಿಳಂಬ ನೀತಿಯನ್ನು ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: SSLC Examination 2 : 700ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಶುರು

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ತಿ ಕಾರ್ಯಗಳು, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 15ನೇ ಹಣಕಾಸಿನಲ್ಲಿ ಸಿಗುವ ಅನುದಾನವನ್ನು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ವೇಳೆ ಆರೋಗ್ಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

Continue Reading

ದೇಶ

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Reliance Retail: ರಿಲಯನ್ಸ್ ರೀಟೇಲ್‌ಗೆ ಸೇರಿದ ಸೌಂದರ್ಯ ರೀಟೇಲ್ ಪ್ಲಾಟ್‌ಫಾರ್ಮ್ ಟಿರಾ ಬುಧವಾರ ತನ್ನ ಚರ್ಮರಕ್ಷಣೆ ಬ್ರಾಂಡ್‌ ಆದ “ಅಕೈಂಡ್” (Akind) ಬಿಡುಗಡೆ ಘೋಷಣೆ ಮಾಡಿದೆ. ಮುಂಬೈನ ಜಿಯೋ ವರ್ಲ್ಡ್‌ ಡ್ರೈವ್‌ನಲ್ಲಿರುವ ಟಿರಾ ಮಳಿಗೆಯಲ್ಲಿ ಅಕೈಂಡ್ ಸಹ ಸಂಸ್ಥಾಪಕಿ ಮೀರಾ ಕಪೂರ್ ಅವರು ಅಕೈಂಡ್ ಅನ್ನು ಅನಾವರಣ ಮಾಡಿದರು.

VISTARANEWS.COM


on

Reliance Retail Tira unveils skin care brand Akind
Koo

ಮುಂಬೈ: ರಿಲಯನ್ಸ್ ರೀಟೇಲ್‌ಗೆ (Reliance Retail) ಸೇರಿದ ಸೌಂದರ್ಯ ರೀಟೇಲ್ ಪ್ಲಾಟ್‌ಫಾರ್ಮ್ ಟಿರಾ (Tira) ಬುಧವಾರ ತನ್ನ ಚರ್ಮರಕ್ಷಣೆ ಬ್ರಾಂಡ್ ಆದ “ಅಕೈಂಡ್” (Akind) ಬಿಡುಗಡೆ ಬಗ್ಗೆ ಘೋಷಣೆ ಮಾಡಿದೆ. ಮುಂಬೈನ ಜಿಯೋ ವರ್ಲ್ಡ್‌ ಡ್ರೈವ್‌ನಲ್ಲಿರುವ ಟಿರಾ ಮಳಿಗೆಯಲ್ಲಿ ಅಕೈಂಡ್ ಸಹ ಸಂಸ್ಥಾಪಕಿ ಮೀರಾ ಕಪೂರ್, ಅಕೈಂಡ್ ಅನ್ನು ಅನಾವರಣ ಮಾಡಿದರು.

ಚರ್ಮದ ಆರೈಕೆಗೆ ಅಕೈಂಡ್

ಪ್ರತಿ ವ್ಯಕ್ತಿಯೂ ತನ್ನ ಚರ್ಮದ ಆರೈಕೆ ಬಗ್ಗೆ ವಿಶೇಷ ಕಾಳಜಿ ತೆಗೆದುಕೊಳ್ಳಲೇಬೇಕಾಗುತ್ತದೆ. ಏಕೆಂದರೆ ವ್ಯಕ್ತಿಯಿಂದ ವ್ಯಕ್ತಿಗೆ ಚರ್ಮವು ವಿಭಿನ್ನ ಹಾಗೂ ವಿಶಿಷ್ಟವಾಗಿರುತ್ತದೆ. ವೈಯಕ್ತಿಕವಾಗಿ ಪ್ರತ್ಯೇಕ ಆರೈಕೆ ಮಾಡಬೇಕಾಗುತ್ತದೆ. ಈ ಸಂಗತಿ “ಅಕೈಂಡ್” ಅರ್ಥ ಮಾಡಿಕೊಳ್ಳುತ್ತದೆ. ಇನ್ನು ಪ್ರತಿ ವ್ಯಕ್ತಿಯ ಚರ್ಮದ ಅಗತ್ಯಗಳನ್ನು ಅರಿತು, ಆರೈಕೆಯನ್ನು ಸರಳಗೊಳಿಸಲಾಗುತ್ತದೆ. ಈ ನಿಶ್ಚಿತ ಗುರಿಯ ವಿಧಾನದ ಮೂಲಕವಾಗಿ ಈ ಬ್ರ್ಯಾಂಡ್ ಪ್ರತಿ ವ್ಯಕ್ತಿಯ ಚರ್ಮ ಕಾಳಜಿಯ ಗುರಿಯನ್ನು ಸಾಧಿಸಲು ಬಲ ತುಂಬುತ್ತದೆ. ಅಕೈಂಡ್‌ನಲ್ಲಿ ಇರುವಂಥ ಪ್ರತಿ ಸೂತ್ರವು ವಿಶಿಷ್ಟ ಉದ್ದೇಶವನ್ನು ಈಡೇರಿಸಿ, ಚರ್ಮದ ಆರೋಗ್ಯಕ್ಕೆ ಇರುವ ಅಡೆತಡೆಗಳನ್ನು ನಿವಾರಿಸುತ್ತದೆ ಮತ್ತು ಅದು ಮೂರು ವರ್ಗಗಳ ಅಡಿಯಲ್ಲಿ ಬರುತ್ತದೆ.

3 ಹಂತಗಳಲ್ಲಿ ಚರ್ಮದ ರಕ್ಷಣೆ

ಬಿಲ್ಡ್, ಬ್ಯಾಲೆನ್ಸ್ ಹಾಗೂ ಡಿಫೆನ್ಸ್ ಹೀಗೆ ಮೂರು ಶ್ರೇಣಿಗಳಿವೆ. ಅದರಲ್ಲಿ ಮೊದಲನೆಯ ಶ್ರೇಣಿಯಾದ ಬಿಲ್ಡ್ ಚರ್ಮದ ಅಡೆತಡೆಗಳನ್ನು ನಿವಾರಿಸಿ, ಅದರ ಸಹಜ ಸ್ಥಿತಿಗೆ ತರುವ ಕಡೆಗೆ ಗಮನ ಕೇಂದ್ರೀಕರಿಸುತ್ತದೆ. ಇನ್ನು ಎರಡನೆಯ ಶ್ರೇಣಿ ಚರ್ಮದ ಅಡೆತಡೆಗಳನ್ನು ನಯವಾಗಿ ನಿರ್ವಹಿಸುತ್ತದೆ, ಯಥಾ ಸ್ಥಿತಿಯಲ್ಲಿ ಇರಿಸುತ್ತದೆ, ಅದರ ಫಲಿತವಾಗಿ ಆರೋಗ್ಯಪೂರ್ಣವಾಗಿ, ಹೊಳೆಯುವಂಥ ಚರ್ಮವನ್ನು ಕಾಪಾಡುತ್ತದೆ. ಇನ್ನು ಮೂರನೆಯ ಶ್ರೇಣಿಯು ಮಾಲಿನ್ಯ, ಜೀವನಶೈಲಿ ಸಂಗತಿಗಳು ಹಾಗೂ ಸೂರ್ಯನ ಕಿರಣದಿಂದ ಆಗುವಂಥ ಹಾನಿಯಿಂದ ತಡೆಯಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Glasses or Lenses?: ಕನ್ನಡಕವೋ ಕಾಂಟ್ಯಾಕ್ಟ್‌ ಲೆನ್ಸ್‌ ಬೇಕೋ? ಇದನ್ನು ಓದಿ, ನೀವೇ ನಿರ್ಧರಿಸಿ!

ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕಿ ಇಶಾ ಅಂಬಾನಿ ಈ ಕುರಿತು ಮಾತನಾಡಿ, “ಟಿರಾದ ಮೊದಲ ಚರ್ಮ ಆರೈಕೆ ಬ್ರ್ಯಾಂಡ್ ಆದ ಅಕೈಂಡ್ ಅನ್ನು ಸ್ವಂತ ಬ್ರಾಂಡ್‌ಗಳ ಪೋರ್ಟ್‌ಫೋಲಿಯೊದಲ್ಲಿ ಪರಿಚಯಿಸಲು ನಾವು ಉತ್ಸುಕರಾಗಿದ್ದೇವೆ. ಈಗ ಮಾಡಿರುವ ಉತ್ಪನ್ನದ ಬಿಡುಗಡೆಯು ಟಿರಾದ ಪಯಣದಲ್ಲಿ ಮಹತ್ವದ ಮೈಲುಗಲ್ಲು ಎನಿಸುತ್ತದೆ. ನಾವು ವಿಸ್ತರಿಸುವುದನ್ನು ಮತ್ತು ವಿಕಸನಗೊಳ್ಳುವುದನ್ನು ಮುಂದುವರಿಸಿದಂತೆ, ನಾವೀನ್ಯತೆ ಮತ್ತು ಉತ್ಕೃಷ್ಟತೆಗೆ ಬದ್ಧರಾಗಿರುತ್ತೇವೆ. ಪ್ರತಿ ಕೊಡುಗೆಯು ನಮ್ಮ ಗ್ರಾಹಕರ ಸೌಂದರ್ಯದ ಅನುಭವವನ್ನು ಹೆಚ್ಚಿಸುತ್ತದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ.

ಅಕೈಂಡ್ ಸಹ-ಸಂಸ್ಥಾಪಕಿ ಮೀರಾ ಕಪೂರ್ ಮಾತನಾಡಿ, ಬಹಳ ಹಿಂದೆಯೇನೂ ಅಲ್ಲ, ನನ್ನದೇ ಚರ್ಮ ರಕ್ಷಣೆಯ ಬಗ್ಗೆ ಪ್ರಶ್ನೆ ಕೇಳಿಕೊಳ್ಳುತ್ತಾ ಚರ್ಮದ ರಕ್ಷಣೆಯ ಈ ಪ್ರಯಾಣವು ನಿಜವಾಗಿಯೂ ಪ್ರಾರಂಭವಾಯಿತು. ಅಕೈಂಡ್ ಶ್ರೇಣಿಯು ಎಚ್ಚರಿಕೆಯಿಂದ, ಪ್ರಯೋಗಗಳಿಂದ ಮತ್ತು ತಪ್ಪುಗಳಿಂದ ಹಾಗೂ ನಿರ್ದಿಷ್ಟ ಸಮಸ್ಯೆಗಳಿಗೆ ಉದ್ದೇಶಿತ ಪರಿಹಾರವಾಗಿ ಕಾರ್ಯನಿರ್ವಹಿಸುವ ಉನ್ನತ-ಪರಿಣಾಮಕಾರಿ ಪದಾರ್ಥಗಳ ಬಗ್ಗೆ ವ್ಯಾಪಕವಾದ ಸಂಶೋಧನೆಯೊಂದಿಗೆ ನಿಖರವಾಗಿ ರೂಪಿಸಲಾಗಿದೆ ಮತ್ತು ಕ್ಯುರೇಟೆಡ್‌ ಬ್ರ್ಯಾಂಡ್‌ಗಳ ಪಾಲಿ ಅಂತಿಮ ತಾಣದಂತೆ ಇರುವ ಟಿರಾ ಮೂಲಕ ನಾವು ತಲುಪುವುದಕ್ಕಿಂತ ಉತ್ತಮವಾದ ಮಾರ್ಗ ಯಾವುದಿದೆ. ಇದರಿಂದ ನಮ್ಮ ದೃಷ್ಟಿ ಹೆಚ್ಚು ವ್ಯಾಪಿಸುತ್ತದೆ ಹಾಗೂ ಉದ್ದೇಶವನ್ನು ಜೀವಂತ ಇರಿಸುತ್ತದೆ. ಅಕೈಂಡ್ ಜತೆಗೆ, ಹೇಗೆ ನನಗೆ ಅತ್ಯುತ್ತಮ ಚರ್ಮ ರಕ್ಷಣೆಯ ಮಾರ್ಗ ದೊರೆಯಿತೋ ಅದು ಎಲ್ಲರ ಜತೆಗೂ ಈ ಚರ್ಮರಕ್ಷಣೆ ಸಂತೋಷವನ್ನು ಹಂಚಿಕೊಳ್ಳಲು ನಾನು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

ಟಿರಾ ಟೂಲ್ಸ್ (Tira Tools) ಯಶಸ್ವಿ ಬಿಡುಗಡೆಯ ನಂತರ, ಖಾಸಗಿ ಲೇಬಲ್ ಅಡಿಯಲ್ಲಿ ಪ್ರೀಮಿಯಂ ಕ್ಯುರೇಟೆಡ್ ಸೌಂದರ್ಯ ಪರಿಕರಗಳು ಮತ್ತು ನೈಲ್ಸ್ ಅವರ್ ವೇ, ರೋಮಾಂಚಕ ಉಗುರು ಬಣ್ಣಗಳು ಮತ್ತು ಕಿಟ್‌ಗಳ ವಿಶೇಷ ಶ್ರೇಣಿಯ ಮೂಲಕವಾಗಿ ರಿಲಯನ್ಸ್ ರಿಟೇಲ್ ಲಿಮಿಟೆಡ್ (RRL) ತನ್ನ ನವೀನ ಕೊಡುಗೆಗಳನ್ನು ವಿಸ್ತರಿಸುವುದನ್ನು ಮುಂದುವರಿಸಿದೆ.

ಇದನ್ನೂ ಓದಿ: SSLC Examination 2 : 700ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಶುರು

ಅದರ ಮೊದಲ ಚರ್ಮರಕ್ಷಣೆ ಬ್ರಾಂಡ್‌ನ ಸೇರ್ಪಡೆ, ಅಕೈಂಡ್ ಸೌಂದರ್ಯ ಮತ್ತು ವೈಯಕ್ತಿಕ ಆರೈಕೆ ವಿಭಾಗಗಳಾದ್ಯಂತ ಗ್ರಾಹಕರಿಗೆ ಉತ್ತಮ-ಗುಣಮಟ್ಟದ, ವೈವಿಧ್ಯಮಯ ಮತ್ತು ಟ್ರೆಂಡ್-ಸೆಟ್ಟಿಂಗ್ ಉತ್ಪನ್ನಗಳನ್ನು ಒದಗಿಸುವ ಟಿರಾ ಬದ್ಧತೆಯನ್ನು ಒತ್ತಿ‌ ಹೇಳುತ್ತದೆ.

Continue Reading

ಫ್ಯಾಷನ್

Celebrity Fashion: ಬ್ಲೇಜರ್‌ನಲ್ಲಿ ನಟ ಸುದೀಪ್‌ ಪುತ್ರಿ ಸಾನ್ವಿ ಕ್ಲಾಸಿ ಲುಕ್‌!

ನಟ ಸುದೀಪ್‌ ಅವರ ಪುತ್ರಿ ಹಾಗೂ ಗಾಯಕಿ ಸಾನ್ವಿ ಸುದೀಪ್‌ ಅವರ ಇತ್ತೀಚಿನ ಬ್ಲೇಜರ್‌ ಲುಕ್‌ ಕ್ಲಾಸಿಯಾಗಿದೆ. ಫಾರ್ಮಲ್‌ ಲುಕ್‌ಗೆ (Celebrity Fashion) ಸ್ಯಾಟೀನ್‌ ಜಾರ್ಗರ್ಸ್ ಪ್ಯಾಂಟ್‌ ಮಿಕ್ಸ್ ಮ್ಯಾಚ್‌ ಮಾಡಿರುವುದು ಅವರಿಗೆ ಕ್ಲಾಸಿ ಇಮೇಜ್‌ ನೀಡಿದೆ. ಅವರ ಈ ಲುಕ್‌ ಬಗ್ಗೆ ಫ್ಯಾಷನ್‌ ವಿಮರ್ಶಕರು ಏನು ಹೇಳಿದ್ದಾರೆ? ಇಲ್ಲಿದೆ ಡಿಟೇಲ್ಸ್.

VISTARANEWS.COM


on

Celebrity Fashion
ಚಿತ್ರಗಳು: ಸಾನ್ವಿ ಸುದೀಪ್‌, ಸಿಂಗರ್‌
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ಸಾನ್ವಿ ಸುದೀಪ್‌ರ ಕ್ಲಾಸಿ ಲುಕ್‌ ಫ್ಯಾಷನ್‌ (Celebrity Fashion) ಪ್ರಿಯರನ್ನು ಸೆಳೆದಿದೆ. ಹೌದು, ಸ್ಯಾಂಡಲ್‌ವುಡ್ ನಟ ಸುದೀಪ್‌ ಅವರ ಪುತ್ರಿ ಹಾಗೂ ಸಿಂಗರ್‌ ಸಾನ್ವಿ ಸುದೀಪ್‌ ಅವರ ಈ ಲುಕ್‌ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ಅವರ ಅಭಿಮಾನಿಗಳನ್ನು ಆಕರ್ಷಿಸಿದೆ. “ಸಾನ್ವಿ ಸಿಂಪಲ್‌ ಹುಡುಗಿ. ಆಗಾಗ ಅವರು ತಮ್ಮದೇ ಆದ ಫ್ಯಾಷನ್‌ ಹಾಗೂ ಸ್ಟೈಲ್‌ ಸ್ಟೇಟ್‌ಮೆಂಟ್‌ಗಳನ್ನು ಬದಲಿಸುತ್ತಿರುತ್ತಾರೆ. ಹೈ ಫ್ಯಾಷನ್‌ನಲ್ಲೂ ಸಿಂಪಲ್‌ ಸ್ಟೈಲ್‌ ಸ್ಟೇಟ್‌ಮೆಂಟ್‌ಗಳನ್ನು ಅಳವಡಿಸಿಕೊಳ್ಳುತ್ತಿರುತ್ತಾರೆ. ಇದರೊಂದಿಗೆ ಅವರ ಪ್ರೊಫೆಷನ್‌ಗೆ ಮ್ಯಾಚ್‌ ಆಗುವಂತಹ ಡ್ರೆಸ್‌ಕೋಡ್‌ನಲ್ಲೂ ಕಾಣಿಸುತ್ತಿರುತ್ತಾರೆ. ಈ ಜನರೇಷನ್‌ನ ಆಯ್ಕೆ ಕಂಪ್ಲೀಟ್‌ ಡಿಫರೆಂಟ್‌ ಎಂಬುದು ಅವರ ನಾನಾ ಫ್ಯಾಷನ್‌ ಡ್ರೆಸ್‌ಕೋಡ್‌ಗಳಲ್ಲಿ ಕಾಣಬಹುದು” ಎನ್ನುವ ಫ್ಯಾಷನ್‌ ವಿಮರ್ಶಕರಾದ ಜಾನ್‌, ಸಾನ್ವಿಯವರ ಬ್ಲೇಜರ್‌ ಲುಕ್‌ಗೆ ಫುಲ್‌ ಮಾರ್ಕ್ಸ್ ನೀಡಿದ್ದಾರೆ.

Celebrity Fashion

ಸಾನ್ವಿ ಸುದೀಪ್‌ ವಾಯ್ಸ್

ಅಂದಹಾಗೆ, ಸಾನ್ವಿಯವರು ಸಿಂಗರ್‌ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಚೆನ್ನಾಗಿ ಹಾಡುತ್ತಾರೆ. ಇದಕ್ಕೆ ತಂದೆಯ ಸಪೋರ್ಟ್ ಕೂಡ ಇದೆ. ತಾನು ಕೂಡ ಇಂಡಿಪೆಂಡೆಂಟ್‌ ಆರ್ಟಿಸ್ಟ್ ಆಗಿ ಬೆಳೆಯಬೇಕೆಂಬ ಸಾನ್ವಿಯವರ ಉತ್ಸಾಹ ಆಗಾಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಅವರ ಹಾಡು ಕೇಳಿದವರಿಗೆ ತಿಳಿದುಬರುತ್ತದೆ.

Celebrity Fashion

ಮಿಕ್ಸ್ ಮ್ಯಾಚ್‌ ಬ್ಲೇಜರ್‌ ಲುಕ್‌

ನೀವು ಗಮನಿಸಿರಬಹುದು, ಈ ಜನರೇಷನ್‌ನವರ ಲುಕ್‌ ಸದಾ ಕಂಪ್ಲೀಟ್‌ ಡಿಫರೆಂಟ್‌ ಚಾಯ್ಸ್ ಹೊಂದಿರುತ್ತದೆ. ಇದೇ ರೀತಿ, ಸಾನ್ವಿಯವರ ಬ್ಲೇಜರ್‌ ಲುಕ್‌ನಲ್ಲೂ ಕಾಣಬಹುದು. ಸ್ಟ್ರೇಟ್‌ಕಟ್‌ ಅಥವಾ ಫಾರ್ಮಲ್ ಪ್ಯಾಂಟ್‌ ಬ್ಲೇಜರ್‌ಗೆ ಧರಿಸುವ ಬದಲು ಅವರು ಸ್ಯಾಟಿನ್‌ನ ಜಾಗರ್ಸ್ ಶೈಲಿಯ ಬ್ಲಾಕ್‌ ಶೇಡ್‌ನ ಪ್ಯಾಂಟ್‌ ಬ್ಲೇಜರ್‌ನೊಂದಿಗೆ ಮ್ಯಾಚ್‌ ಮಾಡಿದ್ದಾರೆ. ಬ್ಲ್ಯಾಕ್‌ ಮಾನೋಕ್ರೋಮ್‌ ಶೇಡ್‌ಗೆ ಮಿಡ್‌-ರೈಸ್‌-ಫ್ಲಾಟ್‌ ಫ್ರಂಟ್‌ ಲುಕ್‌ ನೀಡುವ ಬೂದು ಬಣ್ಣದ ಚೆಕ್ಸ್ ಪ್ಲೈಡ್ ಬ್ಲೇಜರ್‌ ಧರಿಸಿದ್ದಾರೆ. ಬ್ಲೇಜರ್‌ನ ಲುಕ್‌ ಕಂಪ್ಲೀಟ್‌ ಕ್ಲಾಸಿಯಾಗಿದೆ. ತಕ್ಷಣಕ್ಕೆ ರೆಟ್ರೋ ಜಾಕೆಟ್‌ನಂತಹ ಲುಕ್‌ ಕೂಡ ನೀಡುತ್ತದೆ. ಆದರೆ, ಇದು ಬ್ಲೇಜರ್‌ ಆಗಿರುವುದರಿಂದ ಮಿಕ್ಸ್ ಮ್ಯಾಚ್‌ ಮಾಡಿದರೂ ಕೂಡ ಕ್ಲಾಸಿ ಲುಕ್‌ ನೀಡಿದೆ ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕರು.

Celebrity Fashion

ಸಾನ್ವಿಯವರ ಮೂಗುತಿ

ಇನ್ನು, ಮೂಗಿಗೆ ಧರಿಸಿರುವ ಡಬ್ಬಲ್‌ ಹೂಪ್‌ ವಿನ್ಯಾಸದಂತಿರುವ ಮೂಗುತಿ ಸಾನ್ವಿಯವರಿಗೆ ಡಿಫರೆಂಟ್‌ ಇಮೇಜ್‌ ನೀಡಿದೆ.

ಇದನ್ನೂ ಓದಿ: Fish Spa Awareness: ಫಿಶ್‌ ಸ್ಪಾಗೂ ಮುನ್ನ ನೂರು ಬಾರಿ ಯೋಚಿಸಿ!

ಟ್ಯಾಟೂ ಪ್ರೇಮ

ಇತ್ತೀಚೆಗಷ್ಟೇ ಕಿವಿಯ ಹಿಂದೆ ಪುಟ್ಟ ಟ್ಯಾಟೂಗಳನ್ನು ಹಾಕಿಸಿಕೊಂಡಿರುವ ಸಾನ್ವಿಯವರ ಫ್ಯಾಷನ್‌ ಹಾಗೂ ಸ್ಟೈಲ್‌ ಸ್ಟೇಟ್ಮೆಂಟ್‌ಗಳು ಕೊಂಚ ವಿಭಿನ್ನವಾಗಿದ್ದರೂ, ನೋಡಲು ಆಕರ್ಷಕವಾಗಿದೆ ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕರು.

Continue Reading

ಆರೋಗ್ಯ

Glasses or Lenses?: ಕನ್ನಡಕವೋ ಕಾಂಟ್ಯಾಕ್ಟ್‌ ಲೆನ್ಸ್‌ ಬೇಕೋ? ಇದನ್ನು ಓದಿ, ನೀವೇ ನಿರ್ಧರಿಸಿ!

ಕನ್ನಡಕ ಧರಿಸುವುದೋ ಅಥವಾ ಕಾಂಟ್ಯಾಕ್ಟ್‌ ಲೆನ್ಸ್‌ ಬಳಸುವುದೋ? ಈ ಪ್ರಶ್ನೆ ದೃಷ್ಟಿದೋಷ ಇರುವಂಥ ಹಲವರನ್ನು ಕಾಡಿರಬಹುದು. ಇವೆರಡಕ್ಕೂ ಅದರದ್ದೇ ಆದ ಇತಿ-ಮಿತಿಗಳಿವೆ. ನಿಮ್ಮ ಆದ್ಯತೆ ಯಾವುದು ಎನ್ನುವುದನ್ನು ನಿರ್ಧರಿಸುವುದಕ್ಕೆ ಬೇಕಾದ ಮಾಹಿತಿಗಳು (Glasses or Lenses) ಇಲ್ಲಿವೆ.

VISTARANEWS.COM


on

Glasses or Lenses
Koo

ಕಣ್ಣಿಗೆ ಪವರ್‌ ಇದ್ದರೆ ಆಗಾಗ ಕಾಡುವ ಪ್ರಶ್ನೆ- ಕನ್ನಡಕ ಹಾಕಬೇಕೆ ಅಥವಾ ಕಾಂಟ್ಯಾಕ್ಟ್‌ ಲೆನ್ಸ್‌ ಹಾಕಬೇಕೆ? ಇವೆರಡರಲ್ಲಿ ಯಾವುದನ್ನು ಆಯ್ಕೆ ಮಾಡಿಕೊಂಡರೂ ದೃಷ್ಟಿದೋಪ ಸರಿಪಡಿಸುವುದು ಇದರ ಪ್ರಧಾನ ಉದ್ದೇಶವೆಂಬುದು ನಿಜ. ಆದರೆ ಜೊತೆಗೊಂದಿಷ್ಟು ಇದೆಯಲ್ಲ… ಕೊಸರು! ಇವೆರಡಕ್ಕೂ ಅವುಗಳದ್ದೇ ಆದ ಇತಿ-ಮಿತಿಗಳಿವೆ. ಅದರಲ್ಲೂ ಜೇಬಿಗೆಷ್ಟು ಭಾರ, ಯಾವುದು ಆರಾಮದಾಯಕ, ಧರಿಸುವವರ ಆದ್ಯತೆಗಳೇನು, ಜೀವನಶೈಲಿಗೆ ಹೊಂದುತ್ತದೆಯೇ ಎಂಬ ಹಲವು ವಿಷಯಗಳನ್ನು ಆಧರಿಸಿಯೇ ಆಯ್ಕೆ ಮಾಡುವುದಲ್ಲವೇ? ಇವೆಲ್ಲವುಗಳ ಜೊತೆಗೆ, ಕಣ್ಣಿನ ಆರೋಗ್ಯಕ್ಕೆ ಯಾವುದು ಹಿತ ಎನ್ನುವ ಪ್ರಶ್ನೆ ಮಹತ್ವದ್ದಾಗುತ್ತದೆ. ಯಾವುದು ಹಿತ ಈ (Glasses or Lenses) ಎರಡರೊಳಗೆ?

Glasses

ಕನ್ನಡಕ

ಶತಮಾನಗಳಿಂದ ಎಲ್ಲರ ದೃಷ್ಟಿದೋಷವನ್ನು ಸರಿಪಡಿಸುತ್ತ ಬಂದಿರುವ ಕನ್ನಡಕಗಳು ಯಾವುದೇ ತಲೆಬಿಸಿ ನೀಡದಂಥವು. ನಿಯಮಿತವಾಗಿ ನೇತ್ರವೈದ್ಯರಲ್ಲಿ ಹೋಗಿ ತಪಾಸಣೆ ಮಾಡಿಸಿಕೊಂಡು, ಕಣ್ಣಿನ ಪವರ್‌ ಎಷ್ಟಿದೆ ಎಂಬುದನ್ನು ನೋಡಿಕೊಂಡರಾಯಿತು. ಇರುವ ಕನ್ನಡಕವನ್ನು ಬದಲಾಯಿಸಬೇಕು ಎಂದಿದ್ದರೆ ವೈದ್ಯರೇ ಅದನ್ನು ಸೂಚಿಸುತ್ತಾರೆ. ಅದರಂತೆ ಕನ್ನಡದ ಬದಲಾಯಿಸಿದರೆ, ಮತ್ತಿನ್ನೇನೂ ಮಾಡಬೇಕಿಲ್ಲ. ಕನ್ನಡದ ಗಾಜನ್ನು ಒರೆಸಿ ಸ್ವಚ್ಛ ಮಾಡುವುದಕ್ಕಿಂತ ಹೆಚ್ಚಿನ ನಿರ್ವಹಣೆಯನ್ನು ಅದು ಬೇಡುವುದಿಲ್ಲ. ಇದು ದೃಷ್ಟಿ ದೋಷಕ್ಕೆ ಮದ್ದಷ್ಟೇ ಅಲ್ಲ, ಧೂಳು, ಬಿಸಿಲು, ಹಾನಿಕಾರಕ ಕಿರಣಗಳಿಂದಲೂ ರಕ್ಷಣೆಯನ್ನು ನೀಡಬಲ್ಲದು. ಅದರಲ್ಲೂ ಕೆಲವು ಸುಧಾರಿತ ಫೋಟೋಕ್ರೋಮಿಕ್‌ ಕನ್ನಡಕಗಳು ನೂರು ಪ್ರತಿಶತ ಅತಿನೇರಳೆ ಕಿರಣಗಳನ್ನು ತಡೆಗಟ್ಟಬಲ್ಲವು. ಈ ಕೆಲಸವನ್ನು ಯಾವುದೇ ಲೆನ್ಸ್‌ಗಳೂ ಮಾಡಲಾರವು. ಅವರವರ ಮುಖಮಂಡಲಕ್ಕೆ ಕಳೆಗಟ್ಟಿಸುವಂಥ ಸುಂದರ ಫ್ರೇಮ್‌ಗಳನ್ನು ಆಯ್ದುಕೊಂಡರೆ, ಕನ್ನಡಕವೂ ಫ್ಯಾಷನ್‌ ಘೋಷಣೆಯನ್ನು ಹೊರಡಿಸಬಲ್ಲದು. ಆದರೊಂದು, ಕನ್ನಡಕವನ್ನು ಹಾಕುವುದು ಅನಿವಾರ್ಯ ಎಂದಾಗ, ಕೆಲವೊಮ್ಮೆ ಅದು ಸಮಸ್ಯೆಯನ್ನೂ ಸೃಷ್ಟಿಸಬಲ್ಲದು. ಉದಾ, ಆಡುವುದು, ಓಡುವುದು ಮುಂತಾದ ದೈಹಿಕ ಚಟುವಟಿಕೆಗಳು ಮುಖ್ಯವಾಗಿದ್ದಾಗ ಕನ್ನಡಕ ತೊಡಕೆನಿಸುತ್ತದೆ. ನೃತ್ಯ, ನಟನೆಯಂಥ ಕಲೆಗಳಲ್ಲಿ ಕನ್ನಡಕ ಅಡಚಣೆ ಕೊಡುತ್ತದೆ. ಹೀಗೆ ಬಳಕೆದಾರರ ಮಿತ್ರ ಎನಿಸುವ ಕನ್ನಡಕವೂ ಕೆಲವೊಮ್ಮೆ ಕಣ್‌ ಕಣ್‌ ಬಿಡಿಸುತ್ತದೆ.

 Lenses

ಕಾಂಟ್ಯಾಕ್ಟ್‌ ಲೆನ್ಸ್‌

ಶತಮಾನಗಳ ಇತಿಹಾಸವಿಲ್ಲದ ಇದು, ಆಧುನಿಕ ಕಾಲದ್ದು. ಇಂದಿನ ಹಲವು ರೀತಿಯ ಅಗತ್ಯಗಳು ಮತ್ತು ಬದಲಾವಣೆಗಳಿಗೆ ಹೇಳಿ ಮಾಡಿಸಿದಂತದ್ದು. ಕನ್ನಡಕದ ಭಾರದಿಂದ ಮುಕ್ತಿ ನೀಡುವ ಇದು, ಮುಖದ ಸೌಂದರ್ಯವನ್ನು ಇದ್ದಂತೆಯೇ ಉಳಿಸುತ್ತದೆ. ಮದುವೆ, ನಾಮಕರಣದಂಥ ಸಾಮಾಜಿಕ ಕಾರ್ಯಕ್ರಮಗಳಿರಲಿ, ಆಟ, ಓಟದಂಥ ದೈಹಿಕ ಚಟುವಟಿಕೆಗಳಿರಲಿ, ನೃತ್ಯ-ನಟನೆಯಂಥ ಸಾಂಸ್ಕೃತಿಕ ಕಾರ್ಯಕ್ರಮಗಳಿರಲಿ- ಸಂದರ್ಭ ಯಾವುದೇ ಆದರೂ ಕಾಂಟ್ಯಾಕ್ಟ್‌ ಲೆನ್ಸ್‌ ಬಳಕೆ ಸೂಕ್ತವಾದದ್ದು. ವಾತಾವರಣದಲ್ಲಿ ತೇವ ಹೆಚ್ಚಿದ್ದಾಗ ಅಥವಾ ಮಾಸ್ಕ್‌ ಧರಿಸಿದಾಗ ಕನ್ನಡಕದ ಗಾಜಿನಂತೆ ಲೆನ್ಸ್‌ ಮಸುಕಾಗುವುದಿಲ್ಲ. ಹಾಗಾಗಿ ಕ್ರಿಯಾತ್ಮಕ ದೃಷ್ಟಿಯಿಂದಲೂ ಇದು ಕನ್ನಡಕಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸುತ್ತದೆ. ಕಾಂಟ್ಯಾಕ್ಟ್‌ ಲೆನ್ಸ್‌ ಬಳಸುವುದರಲ್ಲಿ ಇನ್ನೂ ಕೆಲವು ಲಾಭಗಳಿವೆ. ದೃಷ್ಟಿಯ ವ್ಯಾಪ್ತಿ ಕನ್ನಡಕ ಹಾಕಿದ ಸಂದರ್ಭಕ್ಕಿಂತ ಹೆಚ್ಚು ವಿಶಾಲವಾಗಿರುತ್ತದೆ ಲೆನ್ಸ್‌ನಲ್ಲಿ. ಜೊತೆಗೆ ನಿಖರತೆ ಮತ್ತು ಸ್ಪಷ್ಟತೆಯೂ ಅಧಿಕ. ಅದರಲ್ಲೂ ತೀವ್ರ ಅಸ್ಟಿಗ್ಮ್ಯಾಟಿಸಂ ಇರುವವರಲ್ಲಿ ದೃಷ್ಟಿಯ ನಿಖರತೆಯನ್ನು ಕನ್ನಡಕಕ್ಕಿಂತ ಸಾಕಷ್ಟು ಹೆಚ್ಚಿಸಬಲ್ಲದು ಕಾಂಟ್ಯಾಕ್ಟ್‌ ಲೆನ್ಸ್‌. ಎಲ್ಲಕ್ಕಿಂತ ಮುಖ್ಯವಾಗಿ ದೃಷ್ಟಿ ದೋಷ ಇರುವುದನ್ನು ಜಗಜ್ಜಾಹೀರು ಮಾಡದೆಯೇ, ಇದನ್ನು ಬಳಸಬಹುದು.

ಇದನ್ನೂ ಓದಿ: Rock Salt Or Powder Salt: ಬೆಳ್ಳನೆಯ ಪುಡಿ ಉಪ್ಪು ಆರೋಗ್ಯಕರವೇ ಅಥವಾ ಕಲ್ಲುಪ್ಪೇ?

ಜಾಗ್ರತೆ ಅಗತ್ಯ

ಕಾಂಟ್ಯಾಕ್ಟ್‌ ಲೆನ್ಸ್‌ಗಳು ತುಟ್ಟಿ. ಕನ್ನಡಕಗಳಂತೆ ಕಿಸೆಗೆ ಹಗುರವಲ್ಲ ಇವು. ಜೊತೆಗೆ ಇವುಗಳನ್ನು ಸದಾ ಬಳಸುತಿದ್ದರೆ ಕಣ್ಣುಗಳು ತೇವ ಕಳೆದುಕೊಂಡು ಶುಷ್ಕವಾಗುವ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇವುಗಳನ್ನು ಬಳಸುವಾಗ ಕೈಗಳ ಸ್ವಚ್ಛತೆಯ ಬಗ್ಗೆ ಜಾಗ್ರತೆ ಅಗತ್ಯ. ಹಾಗಿಲ್ಲದಿದ್ದರೆ ಕಣ್ಣಿಗೆ ಸೋಂಕು ಉಂಟಾಗಬಹುದು. ಈ ಕಾರಣದಿಂದಲೇ ಕನ್ನಡಕಗಳಿಗೆ ಹೋಲಿಸಿದರೆ, ಲೆನ್ಸ್‌ ಬಳಕೆದಾರರಲ್ಲಿ ಸೋಂಕಿನ ಪ್ರಮಾಣ ಹೆಚ್ಚು. ಲೆನ್ಸ್‌ಗಳು ಮತ್ತು ಅವುಗಳ ಡ್ರಾಪ್ಸ್‌ ವ್ಯಾಲಿಡಿಟಿಯನ್ನು ಆಗಾಗ ಪರಿಶೀಲಿಸುವುದು ಬಹುಮುಖ್ಯ. ಲೆನ್ಸ್‌ ಧರಿಸಿ ಈಜುವುದು, ರಾತ್ರಿ ನಿದ್ದೆ ಮಾಡುವುದು ಮುಂತಾದವು ಸಲ್ಲದು.

Continue Reading
Advertisement
Jammu Kashmir
ದೇಶ3 hours ago

Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

Forest department agrees to give 500 acres for yEttina hole project work says DCM DK Shivakumar
ಕರ್ನಾಟಕ3 hours ago

DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

Maharaj
ಸಿನಿಮಾ3 hours ago

Maharaj: ಹಿಂದುಗಳಿಗೆ ಅವಮಾನ; ಆಮೀರ್‌ ಖಾನ್‌ ಪುತ್ರನ ‘ಮಹಾರಾಜ್’‌ ಸಿನಿಮಾ ಬಿಡುಗಡೆಗೆ ಕೋರ್ಟ್‌ ತಡೆ

ISIS Terrorists
ಕರ್ನಾಟಕ4 hours ago

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

Actress Ramya
ಕರ್ನಾಟಕ5 hours ago

Actress Ramya: ಕಾನೂನಿಗಿಂತ ಯಾರೂ ದೊಡ್ಡೋರಲ್ಲ; ದರ್ಶನ್‌ಗೆ ಮತ್ತೆ ನಟಿ ರಮ್ಯಾ ಕ್ಲಾಸ್!

Namma Clinic
ಕರ್ನಾಟಕ5 hours ago

Namma Clinic: ಬಸ್‌ ನಿಲ್ದಾಣ ಸೇರಿದಂತೆ 254 ಕಡೆ ʼನಮ್ಮ ಕ್ಲಿನಿಕ್‌ʼ ಸ್ಥಾಪನೆ

Maruti Suzuki
ಆಟೋಮೊಬೈಲ್6 hours ago

Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

Reliance Retail Tira unveils skin care brand Akind
ದೇಶ6 hours ago

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Union Budget 2024
ದೇಶ6 hours ago

Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

AIDSO protest demanding investigation into corruption in NEET entrance exam
ರಾಯಚೂರು6 hours ago

Raichur News: ನೀಟ್ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಮಾನ್ವಿಯಲ್ಲಿ ಎಐಡಿಎಸ್ಒ ಪ್ರತಿಭಟನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌