ನಿಮ್ಮಲ್ಲಿ ಕಾಳಜಿ ಎಂಬ ಅಪರೂಪದ ಗುಣವಿದೆಯೇ? - Vistara News

ಲೈಫ್‌ಸ್ಟೈಲ್

ನಿಮ್ಮಲ್ಲಿ ಕಾಳಜಿ ಎಂಬ ಅಪರೂಪದ ಗುಣವಿದೆಯೇ?

ಕಾಳಜಿ ವ್ಯಕ್ತಿಯ ಬದುಕಿನಲ್ಲಿ ಅಗತ್ಯವಾಗಿ ಬೇಕಾದ ಗುಣ. ಕಾಳಜಿಯಿರುವ ಮಂದಿಗೆ ಯಾವತ್ತಿಗೂ ಸ್ನೇಹಿತರ ಬರವಿರುವುದಿಲ್ಲ. ಕಾಳಜಿ ಬೆಳೆಸಿಕೊಳ್ಳುವುದು ಹೇಗೆ?

VISTARANEWS.COM


on

compassion
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
  • ರಾಧಿಕಾ ವಿಟ್ಲ

ಕಾಳಜಿ ಎಂಬ ಗುಣ ಯಾರಲ್ಲೇ ಆದರೂ ಸಾಮಾನ್ಯವಾಗಿ ಕಲಿತು ಬರುವುದಲ್ಲ. ಅದು ತಾನೇ ತಾನಾಗಿ ವ್ಯಕ್ತಿತ್ವದಲ್ಲಿ ಬರುವಂಥದ್ದು. ʻನೀವು ಇಷ್ಟ ಪಡದ ವ್ಯಕ್ತಿಯ ಜೊತೆಗೂ ನೀವು ಪ್ರೀತಿಯಿಂದಲೇ ವ್ಯವಹರಿಸುತ್ತೀರೆಂದಾದಲ್ಲಿ ಅದರರ್ಥ ನೀವು ವಂಚಕ ಎಂದಲ್ಲ. ನಿಮಗೆ ಸಹಿಸಿಕೊಳ್ಳುವ ಹಾಗೂ ಕ್ಷಮಿಸುವ ದೊಡ್ಡ ಗುಣ ಇದೆ ಎಂದರ್ಥʼ ಎಲ್ಲೋ ಕೇಳಿದ ಈ ಮಾತು ಹೌದಲ್ಲ ಅನಿಸದಿರದು.

ಜಗತ್ತಿನಲ್ಲಿ ಎಲ್ಲಕ್ಕಿಂತ ದೊಡ್ಡ ಗುಣ ಕಾಳಜಿ. ಸುತ್ತಮುತ್ತಲ ಜನರೊಂದಿಗೆ ಅವರ ಕಷ್ಟಕ್ಕೆ ಕೈಲಾದಷ್ಟು ಹೆಗಲು ಕೊಡುವ, ಸಮಸ್ಯೆ ಆಲಿಸುವ, ಅವರ ಕಣ್ಣೀರಿಗೆ ಒರಗಲು ಭುಜ ನೀಡುವ ದೊಡ್ಡ ಗುಣವಿದು. ಎಲ್ಲರಲ್ಲೂ ಇರುವಂಥದ್ದಲ್ಲ. ಹೇಳಿಕೊಟ್ಟು ಬರುವಂಥದ್ದಲ್ಲ. ಬಹಳಷ್ಟು ಸಾರಿ, ಪ್ರಪಂಚವೇ ಕೆಟ್ಟು ಹೋಗಿದೆ ಅನ್ನುವ ಸಾರ್ವತ್ರಿಕ ಮಾತು ಕೇಳಿ ಬಂದಾಗ ಅಲ್ಲಲ್ಲಿ, ಇಂಥ ಕಾಳಜಿಯುಕ್ತ ಜನರ ಭೇಟಿಗಳು ನಡೆದು, ಪ್ರಪಂಚ ಚಂದವಿದೆ, ಅದ್ಭುತವಾಗಿದೆ ಅನಿಸಿ, ಕಷ್ಟದ ಸಂದರ್ಭಗಳನ್ನು ಸುಲಭವಾಗಿ ದಾಟಿ, ಬದುಕಿನಲ್ಲಿ ಮತ್ತೆ ಆಶಾಕಿರಣ ಕಾಣುವವರು ಅದೆಷ್ಟೋ ಮಂದಿ.

ಜೀವನದಲ್ಲಿ ಎಲ್ಲ ದಿನಗಳು ಒಂದೇ ತೆರನಾಗಿರುವುದಿಲ್ಲ. ಏಳುಬೀಳುಗಳ ವೈಪರೀತ್ಯ ಸಹಜ. ಇಂತಹ ಒತ್ತಡದಲ್ಲಿದ್ದಾಗಲೂ ನೀವು ನಿಮ್ಮ ತಾಳ್ಮೆ ಮೀರದೆ, ಇತರರ ನೋವಿಗೆ ಬೇಸರಕ್ಕೆ ಸ್ಪಂದಿಸುವ ಗುಣ ಹೊಂದಿದ್ದರೆ ನಿಮ್ಮಲ್ಲಿ ಕಾಳಜಿಯುಕ್ತ ಗುಣ ಇದೆ ಎಂದರ್ಥ. ಕಾಳಜಿಯಿರುವ ಮಂದಿಗೆ ಯಾವತ್ತಿಗೂ ಸ್ನೇಹಿತರ ಬರವಿರುವುದಿಲ್ಲ. ಹಾಗಾಗಿ ಕೊಟ್ಟುದಕ್ಕಿಂತ ದುಪ್ಪಟ್ಟು ಪ್ರೀತಿ ಸ್ನೇಹ ಇತರರಿಂದಲೂ ಸಿಕ್ಕೇ ಸಿಗುತ್ತದೆ.

ನೀವು ನಿಮ್ಮನ್ನು ಕಾಳಜಿಯುಕ್ತ ಜೀವಿ ಎಂದು ಕರೆದುಕೊಳ್ಳುವಿರಾದರೆ ನಿಮಗೆ ತಿಳಿದೋ ತಿಳಿಯದೆಯೋ ಈ ಕೆಳಗಿನ ಗುಣಸ್ವಭಾವಗಳೂ ನಿಮ್ಮದೆಂದರ್ಥ. ನಿಮ್ಮನ್ನು ನೀವು ಒರೆಗೆ ಹಚ್ಚಲು, ಅಥವಾ ಇನ್ನಾದರೂ ಎಚ್ಚೆತ್ತು ಪ್ರೀತಿ ಕಾಳಜಿ ತೋರಿಸುವ ಗುಣವನ್ನು ಬೆಳೆಸಿಕೊಳ್ಳಲು ಇದು ಸಕಾಲ.

1.. ಇತರರನ್ನು ಹೊಗಳುವುದು ಕೂಡಾ ಕಾಳಜಿಯ ಲಕ್ಷಣವೇ. ಜೀವನದ ಸಣ್ಣ ಸಣ್ಣ ಖುಷಿಗಳಲ್ಲಿ, ಯಾರೋ ಒಬ್ಬರು ಚಂದದ ದಿರಿಸು ಹಾಕಿಕೊಂಡಿದ್ದರೆ, ಇಷ್ಟವಾದಲ್ಲಿ ಹೇಳಿದರೆ ತಪ್ಪಿಲ್ಲ. ಹೊಗಳಿದ ತಕ್ಷಣ ನಾವು ಸಣ್ಣವರಾಗುವುದಿಲ್ಲ. ಇನ್ನೊಬ್ಬರ ಮುಖದಲ್ಲೊಂದು ಚಂದದ ನಗೆ ಚಿಮ್ಮಿಸುವುದು ಕೂಡಾ ಕಾಳಜಿಯೇ. ಹಾಗೆಯೇ ಬೇರೆಯವರು ನಿಮ್ಮ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದಾಗಲೂ, ಆದ ಖುಷಿಯನ್ನು ಹಂಚಿಕೊಳ್ಳುವುದು ಕೂಡಾ ಕಾಳಜಿಯೇ.

೨. ತಾಳ್ಮೆ ಎಂಬುದು ಬದುಕಿನ ವರ. ತಾಳ್ಮೆಯನ್ನು ಗುಣವಾಗಿ ದಕ್ಕಿಸಿಕೊಳ್ಳಲೂ ಸಾಕಷ್ಟು ತಾಳ್ಮೆ ಬೇಕು. ಇನ್ನೇನು ದಾಟಿ ಬಿಡುತ್ತೇನೆ ಎಂಬಷ್ಟರಲ್ಲಿ ಸಿಗುವ ರೆಡ್‌ ಸಿಗ್ನಲ್, ಯಾರೋ ಅಡ್ಡ ಬಂದರೆಂದೋ, ಮಕ್ಕಳು ಮಾಡುವ ಕಿರಿಕಿರಿ ಇವೆಲ್ಲವೂ ಪ್ರತಿನಿತ್ಯ ಪ್ರತಿಯೊಬ್ಬರ ತಾಳ್ಮೆಯನ್ನೂ ಪರೀಕ್ಷಿಸಲು ಬರುವ ಸಂದರ್ಭಗಳು. ಇವೆಲ್ಲವುಗಳನ್ನು ದಾಟಿ ಮುಂದೆ ಹೋಗಿದ್ದೀರೆಂದಾದಲ್ಲಿ ನೀವು ಇತರರ ಬಗ್ಗೆ ಕಾಳಜಿ ಹೊಂದಿದ್ದೀರೆಂದೇ ಅರ್ಥ.

೩. ಎಷ್ಟೇ ಪ್ರೀತಿಯ ಸಂಬಂಧವೇ ಆಗಿರಲಿ, ಮತ್ತೊಬ್ಬರ ಖಾಸಗೀತನಕ್ಕೆ ಗೌರವ ಕೊಡುವುದೂ ಕೂಡಾ ಕಾಳಜಿಯ ಇನ್ನೊಂದು ಮುಖವೇ.

ಇದನ್ನೂ ಓದಿ: World Hypertension Day | ಹೈಪರ್‌ಟೆನ್ಷನ್‌ ಗೆಲ್ಲಲು 5 ಸೂತ್ರಗಳು

೪. ಹಿರಿಯರ ಭಾವನೆಗಳಿಗೆ ಬೆಲೆ ಕೊಡುವುದು ಹಾಗೂ ಅವರಿಗೆ ಸಹಾಯ ಮಾಡುವುದು ಕೂಡಾ ಕಾಳಜಿಯ ಸಂಕೇತವೇ. ಬಸ್ಸಿನಲ್ಲಿ ಹಿರಿಯರನ್ನು ಕಂಡಾಗ ಸೀಟಿನಿಂದ ಎದ್ದು ಅವರಿಗೆ ಕೂರಲು ಅವಕಾಶ ಮಾಡಿಕೊಡುವುದು, ದಿನಸಿಗೆ ನಿಂತ ಸಾಲಿನಲ್ಲಿ ತನ್ನ ಹಿಂದೆ ಹಿರಿಯ ವ್ಯಕ್ತಿ ನಿಂತಿದ್ದಲ್ಲಿ ಅವರನ್ನು ಮುಂದೆ ಹೋಗಲು ಅನುವು ಮಾಡಿಕೊಡುವುದು ಇತ್ಯಾದಿ ಸಣ್ಣ ಪುಟ್ಟ ಕಾಳಜಿಗಳು ಕೂಡಾ ಬದುಕಿನ ಖುಷಿಯನ್ನು, ತೃಪ್ತಿಯನ್ನು ಹೆಚ್ಚಿಸುತ್ತದೆ.

೫. ನಗು ಒಂದು ಮಾಂತ್ರಿಕ ಗುಳಿಗೆ. ಒಂದು ನಗುವಿನ ಶಕ್ತಿಯೇ ಅಂಥದ್ದು. ಸಂತೋಷದಲ್ಲಿ ನಕ್ಕಂತೆ ಜೀವನ ನೀಡುವ ಸವಾಲನ್ನೂ ಬದುಕಿನ ಭಾಗವಾಗಿ ಪರಿಗಣಿಸಿ ನಕ್ಕು ಮುಂದೆ ಸಾಗುವುದನ್ನು ಅಭ್ಯಾಸ ಮಾಡಿಕೊಂಡ ವ್ಯಕ್ತಿಯ ಹೃದಯ ಮೃದುವಾಗಿರುತ್ತದೆ. ಸಮಾಜಕ್ಕೆ, ತನ್ನ ಸುತ್ತಲಿನ ಆಗುಹೋಗುಗಳಿಗೆ ಸ್ಪಂದಿಸುತ್ತಾ, ಉತ್ತಮ ನಾಗರಿಕನಾಗಿ, ಸರ್ಕಾರದ ನಿಯಮಗಳನ್ನು ಪಾಲಿಸುತ್ತಾ, ನಾಗರಿಕನಾಗಿ ಜವಾಬ್ದಾರಿಗಳನ್ನು ನಿರ್ವಹಿಸುವುದೂ ಕೂಡಾ ಕಾಳಜಿಯುಕ್ತ ಮಂದಿಯ ಸೌಭಾವವೇ ಆಗಿದೆ.

ಇವೆಲ್ಲವೂ ನಿಮ್ಮದೂ ಆಗಿದ್ದರೆ ಸಂತೋಷ. ಇವೆಲ್ಲವುಗಳ ಪಡೆವ ಹಾದಿಯಲ್ಲಿ ಸ್ವಪ್ರಯತ್ನದಲ್ಲಿದ್ದರೆ ಇನ್ನೂ ಸಂತೋಷ!

ಇದನ್ನೂ ಓದಿ: Motivational story: ವಾಚು ಕದ್ದ ಹುಡುಗ ಮತ್ತು ಮರೆಯಲಾಗದ ಪಾಠ ಕಲಿಸಿದ ಮೇಸ್ಟ್ರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಫ್ಯಾಷನ್

Wedding Fashion: ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾಗಿವೆ ಈ ಮಿರಮಿರ ಮಿನುಗುವ ಲೆಹೆಂಗಾಗಳು!

ಈ ಬಾರಿಯ ವೆಡ್ಡಿಂಗ್‌ ಸೀಸನ್‌ನಲ್ಲಿ (Wedding Fashion) ಮಿರಮಿರ ಮಿನುಗುವ ನಾನಾ ಬಗೆಯ ಗ್ರ್ಯಾಂಡ್‌ ಲೆಹೆಂಗಾಗಳು ಟ್ರೆಂಡಿಯಾಗಿವೆ. ಧರಿಸಿದಾಗ ಗ್ರ್ಯಾಂಡ್‌ ಲುಕ್‌ ನೀಡುವ ಈ ಡಿಸೈನರ್‌ವೇರ್‌ಗಳು ವೆರೈಟಿ ಡಿಸೈನ್‌ನಲ್ಲಿ ಬಂದಿವೆ. ಯಾವ್ಯಾವ ಬಗೆಯವು ಹೆಚ್ಚು ಚಾಲ್ತಿಯಲ್ಲಿವೆ? ಆಯ್ಕೆ ಹೇಗೆ? ಎಂಬುದರ ಬಗ್ಗೆ ಸ್ಟೈಲಿಸ್ಟ್‌ಗಳು ವಿವರಿಸಿದ್ದಾರೆ.

VISTARANEWS.COM


on

Wedding Fashion
ಚಿತ್ರಕೃಪೆ : ಪಿಕ್ಸೆಲ್‌
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು
ಈ ಬಾರಿಯ ವೆಡ್ಡಿಂಗ್‌ ಸೀಸನ್‌ನಲ್ಲಿ (Wedding Fashion) ಮಿರ ಮಿರ ಮಿನುಗುವ ಬಗೆಬಗೆಯ ಗ್ರ್ಯಾಂಡ್‌ ಲೆಹೆಂಗಾಗಳು ಟ್ರೆಂಡಿಯಾಗಿವೆ. ಮದುವೆಯಲ್ಲಿ ಧರಿಸಿದಾಗ ಗ್ರ್ಯಾಂಡ್‌ ಲುಕ್‌ ನೀಡುವ ಈ ಡಿಸೈನರ್‌ವೇರ್‌ಗಳು ಸಾದಾ, ಪ್ರಿಂಟೆಡ್‌, ಲೈನ್ಸ್, ಫ್ಲೋರಲ್‌, ಟ್ರಾಪಿಕಲ್‌ ಹಾಗೂ ಜೆಮೆಟ್ರಿಕಲ್‌ ಸೇರಿದಂತೆ ನಾನಾ ವೆರೈಟಿ ಡಿಸೈನ್‌ನಲ್ಲಿ ಆಗಮಿಸಿವೆ. ಪಾಸ್ಟೆಲ್‌ ಶೇಡ್‌ನವು ಹೆಚ್ಚು ಯುವತಿಯರನ್ನು ಸೆಳೆದಿವೆ. ಒಂದಕ್ಕಿಂತ ಒಂದು ಲೆಹೆಂಗಾಗಳು ಮನಮೋಹಕ ಡಿಸೈನ್‌ನಲ್ಲಿ ಆಗಮಿಸಿದ್ದು, ಹ್ಯಾಂಡ್‌ವರ್ಕ್ ಹಾಗೂ ಮೆಷಿನ್‌ ವರ್ಕ್‌ನಲ್ಲೂ ಪ್ರಚಲಿತದಲ್ಲಿವೆ.

ಟ್ರೆಂಡ್‌ನಲ್ಲಿರುವ ಶಿಮ್ಮರ್‌ ಲೆಹೆಂಗಾಗಳು

ಶಿಮ್ಮರ್‌ ಫ್ಯಾಬ್ರಿಕ್‌ನವು, ಸಾದಾ ವರ್ಣದ ,ಮಾನೋಕ್ರೋಮ್‌ ಸಿಕ್ವೀನ್ಸ್‌ನವು, ಮಲ್ಟಿ ಶೇಡ್‌ ಸಿಕ್ವೀನ್ಸ್, ಪ್ರಿಂಟೆಡ್‌ ಶೈನಿಂಗ್‌ ಡಿಸೈನ್‌ನವು, ಶಿಫಾನ್‌ ಶಿಮ್ಮರ್‌ ಪ್ರಿಂಟ್ಸ್, ಜಾರ್ಜೆಟ್‌ ಶಿಮ್ಮರ್‌ ಲೈನ್ಸ್, ಡಿಸೈನರ್‌ ಬಾರ್ಡರ್‌ ಶಿಮ್ಮರ್‌ನ ಲೆಹೆಂಗಾಗಳು ಈ ವೆಡ್ಡಿಂಗ್‌ ಸೀಸನ್‌ನಲ್ಲಿ ಅತಿ ಹೆಚ್ಚು ಟ್ರೆಂಡಿಯಾಗಿವೆ.

Wedding Fashion

ಪಾಸ್ಟೆಲ್‌ ಶೇಡ್ಸ್‌ಗೆ ಬೇಡಿಕೆ

ಶಿಮ್ಮರ್‌ ಡಿಸೈನ್‌ನಲ್ಲಿ ಪಾಸ್ಟೆಲ್‌ ಶೇಡ್ಸ್‌ನ ಲೆಹೆಂಗಾಗಳು, ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಚಾಲ್ತಿಯಲ್ಲಿವೆ. ರೋಸ್‌, ಪಿಸ್ತಾ ಗ್ರೀನ್‌, ಪೀಚ್‌, ಲೈಟ್‌ ಬ್ಲ್ಯೂ, ಹೀಗೆ ನಾನಾ ತಿಳಿ ವರ್ಣದ ಪಾಸ್ಟೆಲ್‌ ಶೇಡ್‌ನ ಗ್ರ್ಯಾಂಡ್‌ ಲೆಹೆಂಗಾಗಳು ಮದುವೆಯಾಗುವ ಮದುಮಗಳನ್ನು ಮಾತ್ರವಲ್ಲ, ಮದುವೆಯಲ್ಲಿ ಪಾಲ್ಗೊಳ್ಳುವ ಮಾನಿನಿಯರನ್ನು ಸವಾರಿ ಮಾಡತೊಡಗಿವೆ ಎನ್ನುತ್ತಾರೆ ಫ್ಯಾಷನಿಸ್ಟ್‌ಗಳು.

Wedding Fashion

ಗ್ರ್ಯಾಂಡ್‌ ಶಿಮ್ಮರ್‌ ಮಿಕ್ಸ್ ಮ್ಯಾಚ್‌ ಡಿಸೈನ್‌ ದುಪಟ್ಟಾ

ಈ ಶಿಮ್ಮರ್‌ ಲೆಹೆಂಗಾಗಳು ಕಂಪ್ಲೀಟ್‌ ಶೈನಿಂಗ್‌ ಇರಲಿ, ಬಿಡಲಿ, ಇವುಗಳಿಗೆ ಹೊಂದುವಂತಹ ಮಿಕ್ಸ್ ಮ್ಯಾಚ್‌ ಅಥವಾ ಮಾನೋಕ್ರೋಮ್‌ ಶೇಡ್‌ನ ಮಿರಮಿರ ಮಿನುಗುವ ಡಿಸೈನ್‌ ಒಳಗೊಂಡ ದುಪಟ್ಟಾಗಳು ಈ ಶೈಲಿಯ ಲೆಹೆಂಗಾಗಳ ಸೌಂದರ್ಯವನ್ನು ಹೆಚ್ಚಿಸಿವೆ.

ಇದನ್ನೂ ಓದಿ: Summer Star Fashion: ಏನಿದು ನಟಿ ಅದಿತಿ ರಾವ್‌ ಹೈದರಿಯ ಕೋ-ಆರ್ಡ್ ಕೊಸ್ಟಾ ಪ್ಯಾಂಟ್‌ ಟ್ರೆಂಡ್‌?

ಶಿಮ್ಮರ್‌ ಲೆಹೆಂಗಾ ಆಯ್ಕೆಗೆ 7 ಸೂತ್ರ

  • ಒಂದೇ ಶೇಡ್‌ನ ಶಿಮ್ಮರ್‌ ಲೆಹೆಂಗಾಗಳು ಹೆಚ್ಚು ಡಿಸೈನ್‌ನಲ್ಲಿ ಲಭ್ಯ.
  • ಪಾಸ್ಟೆಲ್‌ ಶೇಡ್‌ನವನ್ನು ಸ್ಕಿನ್‌ಟೋನ್‌ಗೆ ತಕ್ಕಂತೆ ಆಯ್ಕೆ ಮಾಡಿ.
  • ದುಪಟ್ಟಾ ಕೂಡ ಗ್ರ್ಯಾಂಡ್‌ ಆಗಿರುವುದನ್ನು ಚೂಸ್‌ ಮಾಡಿ.
  • ಬಾರ್ಡರ್ ಲೆಹೆಂಗಾಗಳು ನೋಡಲು ಆಕರ್ಷಕವಾಗಿ ಕಾಣುತ್ತವೆ.
  • ಸಿಕ್ವಿನ್ಸ್‌ನವು ದುಬಾರಿಯಾದರೂ ನೋಡಲು ಸೆಲೆಬ್ರೆಟಿ ಲುಕ್‌ ನೀಡುತ್ತವೆ.
  • ಆದಷ್ಟೂ ಲೈಟ್‌ವೈಟ್‌ ಗ್ರ್ಯಾಂಡ್‌ ಲೆಹೆಂಗಾ ಆಯ್ಕೆ ನಿಮ್ಮದಾಗಿರಲಿ.
  • ನಿಮ್ಮ ಪರ್ಸನಾಲಿಟಿಗೆ ತಕ್ಕಂತೆ ಲೆಹೆಂಗಾ ನೋಡಿಕೊಳ್ಳಿ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

Continue Reading

ಆರೋಗ್ಯ

Eye Care Tips: ಕಣ್ಣಿನ ಸುಸ್ತಿಗೆ ನೀವು ಇಷ್ಟಾದರೂ ಮಾಡಿ, ಕಣ್ಣಿಗೆ ಅಗತ್ಯ ವಿಶ್ರಾಂತಿ ನೀಡಿ!

ಕಣ್ಣು ನಮ್ಮ ದೇಹದ ಅತ್ಯಂತ ಮುಖ್ಯವಾದ ಅಂಗಗಳಲ್ಲಿ ಒಂದು. ಕಣ್ಣಿನ ಸೌಂದರ್ಯ ಹಾಗೂ ಆರೋಗ್ಯವೂ ಕೂಡ ನಮ್ಮ ಕೈಯಲ್ಲೇ ಇದೆ. ಕಣ್ಣನ್ನು ಆರೋಗ್ಯವಾಗಿ ಇಟ್ಟುಕೊಳ್ಳುವಲ್ಲಿ, ಕಣ್ಣಿಗೆ ಸೂಕ್ತ ವಿಶ್ರಾಂತಿ ನೀಡುವಲ್ಲಿ ನಾವು ಅತ್ಯಂತ ನಿರ್ಲಕ್ಷ್ಯ ಮಾಡುತ್ತೇವೆ. ಕಣ್ಣಿಗೆ ಬೇಕಾದ ವಿಶ್ರಾಂತಿ ನೀಡದೆ, ಅದಕ್ಕೆ ನಿರಂತರ ಕೆಲಸ ನೀಡುತ್ತೇವೆ. ದುಡಿದು ಸುಸ್ತಾದ ದೇಹಕ್ಕೆ ಕಣ್ಣಿನಿಂದ ಮಾಡಬಹುದಾದ ಕೆಲಸವನ್ನೇ ಮಾಡು ವಿಶ್ರಾಂತಿ ಎನ್ನುತ್ತೇವೆ. ಆದರೆ ಕಣ್ಣಿಗೆ, ಮಿದುಳಿಗೆ ವಿಶ್ರಾಂತಿ ಸಿಕ್ಕಿರುವುದಿಲ್ಲ. ಅದಕ್ಕಾಗಿಯೇ ಕಣ್ಣಿನ ಕಾಳಜಿಯನ್ನು ನಾವು ಆಗಾಗ ಮಾಡಬೇಕು. ಈ ಕುರಿತು ಇಲ್ಲಿದೆ (Eye Care Tips) ಆರೋಗ್ಯ ಮಾಹಿತಿ.

VISTARANEWS.COM


on

Eye Care Tips
Koo

ಸೌಂದರ್ಯವು ನೋಡುಗರ ಕಣ್ಣಿನಲ್ಲಿದೆ ನಿಜ. ಆದರೆ ಕಣ್ಣುಗಳಿಗೇ ಬಹಳ ಸುಸ್ತಾದರೆ ಯಾವ ಸೌಂದರ್ಯವೂ ಕಣ್ಣಿಗೆ ಕಾಣದು. ಯಾಕೆಂದರೆ ಕಣ್ಣು ನಮ್ಮ ದೇಹದ ಅತ್ಯಂತ ಮುಖ್ಯವಾದ ಅಂಗಗಳಲ್ಲಿ ಒಂದು. ಕಣ್ಣಿನ ಸೌಂದರ್ಯ ಹಾಗೂ ಆರೋಗ್ಯವೂ ಕೂಡಾ ನಮ್ಮ ಕೈಯಲ್ಲೇ ಇದೆ. ಕಣ್ಣನ್ನು ಆರೋಗ್ಯವಾಗಿ ಇಟ್ಟುಕೊಳ್ಳುವಲ್ಲಿ, ಕಣ್ಣಿಗೆ ಸೂಕ್ತ ವಿಶ್ರಾಂತಿ ನೀಡುವಲ್ಲಿ ನಾವು ಅತ್ಯಂತ ನಿರ್ಲಕ್ಷ್ಯ ಮಾಡುತ್ತೇವೆ. ಕಣ್ಣಿಗೆ ಬೇಕಾದ ವಿಶ್ರಾಂತಿ ನೀಡದೆ, ಅದಕ್ಕೆ ನಿರಂತರ ಕೆಲಸ ನೀಡುತ್ತೇವೆ. ದುಡಿದು ಸುಸ್ತಾದ ದೇಹಕ್ಕೆ ಕಣ್ಣಿನಿಂದ ಮಾಡಬಹುದಾದ ಕೆಲಸವನ್ನೇ ಮಾಡು ವಿಶ್ರಾಂತಿ ಎನ್ನುತ್ತೇವೆ. ಆದರೆ, ಕಣ್ಣಿಗೆ, ಮಿದುಳಿಗೆ ವಿಶ್ರಾಂತಿ ಸಿಕ್ಕಿರುವುದಿಲ್ಲ. ಅದಕ್ಕಾಗಿಯೇ ಕಣ್ಣಿನ ಕಾಳಜಿಯನ್ನು ನಾವು ಆಗಾಗ ಮಾಡಬೇಕು. ಅದರಲ್ಲೂ ಬೇಸಿಗೆಯಲ್ಲಿ ಈ ಬಗ್ಗೆ ತುಸು ಹೆಚ್ಚೇ ಗಮನ ನೀಡಬೇಕು. ಬನ್ನಿ, ಕಣ್ಣಿನ ಆರೈಕೆಯನ್ನು ನೀವು ಹೇಗೆಲ್ಲ ಮಾಡಬಹುದು (Eye Care Tips) ಎಂಬ ಸಲಹೆಗಳು ಇಲ್ಲಿವೆ.

Eyes Treatment with Cloth Mask

ತಣ್ಣೀರ ಸಿಂಚನ

ದುಡಿದು ಸುಸ್ತಾಗಿ ಬಂದಾಗ, ಬೆಳಗ್ಗೆ ಎದ್ದ ಕೂಡಲೇ ಅಥವಾ ಕೆಲಸದ ನಡುವೆ ಕಣ್ಣಿಗೆ ಸುಸ್ತೆನಿಸಿದಾಗ ಆಗಾಗ ಕಣ್ಣಿಗೆ ತಣ್ಣೀರ ಸಿಂಚನ ಮಾಡಿ. ನಳ್ಳಿಯ ನೀರು ತಿರುಗಿಸಿ ಕಣ್ಣಿಗೆ ಚಿಮುಕಿಸಿ. ಹಾಯೆನಿಸುತ್ತದೆ. ಅಥವಾ, ಒಂದು ಕೋಲ್ಡ್‌ ಪ್ಯಾಡನ್ನು ಫ್ರಿಜ್‌ನಲ್ಲಿಟ್ಟುಕೊಂಡಿರಿ. ಅದನ್ನು ತೆಗೆದು ಕಣ್ಣಿನ ಮೇಲೆ ಇಟ್ಟುಕೊಳ್ಳಬಹುದು. ಕೊಂಚ ಕ್ಷಣಗಳ ಈ ನಡೆ ಕೂಡಾ ಕಣ್ಣಿಗೆ ಅಗಾಧ ಚೈತನ್ಯ ತಂದುಕೊಡುತ್ತದೆ.

Aloe vera leaf and aloevera gel on wood table

ಆಲೊವೆರಾ ಜೆಲ್

ಇನ್ನೊಂದು ಬಹಳ ಅದ್ಭುತ ಟಿಪ್ಸ್‌ ಎಂದರೆ, ಕಣ್ಣಿಗೆ ಅಲೊವೆರಾ ಜೆಲ್‌ ಹಚ್ಚುವುದು. ಅಂದರೆ ಕಣ್ಣಿನ ಸುತ್ತಮುತ್ತ ಅಲೊವೆರಾ ಜೆಲ್‌ ಅನ್ನು ನಿತ್ಯವೂ ಹಚ್ಚಿಕೊಳ್ಳುವುದು ಅಭ್ಯಾಸ ಮಾಡಿಕೊಳ್ಳಿ. ಆಲೊವೆರಾದಲ್ಲಿ ತಂಪುಕಾರಕ ಗುಣಗಳಿದ್ದು ಇದು ಕಣ್ಣಿನ ಸುತ್ತಲ ಚರ್ಮದ ಮೇಲೆ ಪದರದಂತೆ ಕಾಯ್ದುಕೊಂಡು ಕಣ್ಣಿನ ಮೇಲೆ ಬೀಳುವ ಸೂರ್ಯನ ಹಾನಿಕಾರಕ ಕಿರಣಗಳಿಂದ ರಕ್ಷಿಸುತ್ತದೆ. ಇದರ ಜೊತೆಗೆ ಆಲೊವೆರಾ ರಸವನ್ನು ಫ್ರೀಜರ್‌ನಲ್ಲಿಟ್ಟು ಅದನ್ನು ಕ್ಯೂಬ್‌ನಂತೆ ಮಾಡಿ ಅದನ್ನು ಸುಸ್ತಾದ ಕಣ್ಣಿನ ಮೇಲೆ ಇಟ್ಟುಕೊಂಡು ಕೊಂಚ ಕಾಲ ಇಟ್ಟುಕೊಂಡು ವಿಶ್ರಾಂತಿ ತೆಗೆದುಕೊಳ್ಳುವುದರಿಂದ ಕಣ್ಣಿಗೆ ಹಾಯೆನಿಸುತ್ತದೆ. ಬಹಳ ಪ್ರಯೋಜನ ಸಿಗುತ್ತದೆ.

Cucumber

ಸೌತೆಕಾಯಿ

ಎಲ್ಲರಿಗೂ ತಿಳಿದಿರುವ ಅತ್ಯಂತ ಫಲಪ್ರದ ಉಪಾಯವೆಂದರೆ ಸೌತೆಕಾಯಿ. ಸೌತೆಕಾಯಿಯಲ್ಲಿರುವ ತಂಫೂಖಾರಕ ಗುಣಗಳು ಕಣ್ಣಿಗೆ ಬಹಳ ಒಳ್ಳೆಯದು. ಇದರಲ್ಲಿ ಹೆಚ್ಚು ನೀರಿನಂಶವೂ ಇರುವುದರಿಂದ ಕಣ್ಣ ಮೇಲೆ ಇಟ್ಟುಕೊಂಡರೆ ತಂಪೆನಿಸುತ್ತದೆ. ಫ್ರಿಡ್ಜ್‌ನಲ್ಲಿಟ್ಟು ತೆಗದೂ ಇದನ್ನು ಸಣ್ಣ ತುಂಡುಗಳನ್ನಾಗಿ ಕತ್ತರಿಸಿ ಕಣ್ಣುಗಳ ಮೇಲಿಡಬಹುದು. ಕಣ್ಣಿನ ಮೇಲಿಟ್ಟು ೧೦ರಿಂದ ೧೫ ನಿಮಿಷ ವಿಶ್ರಾಂತಿ ಪಡೆದು ಎದ್ದರೆ, ರಿಲ್ಯಾಕ್ಸ್‌ ಆಗುತ್ತದೆ. ಕಣ್ಣಿನಲ್ಲಿ ಹೊಸ ಚೈತನ್ಯ ಮೂಡುತ್ತದೆ. ದಣಿದ ಕಣ್ಣುಗಳಿಗೆ ಇದು ದಿವ್ಯೌಷಧ.

Green tea

ಚಹಾ

ಮನೆಯಲ್ಲಿ ಗ್ರೀನ್‌ ಟೀ ಕುಡಿಯುವ ಅಭ್ಯಾಸವಿದ್ದರೆ, ಟೀ ಬ್ಯಾಗ್‌ಗಳನ್ನು ಬಳಸುವ ಅಭ್ಯಾಸವಿದ್ದರೆ ಬ್ಯಾಗುಗಳನ್ನು ಎಸೆಯಬೇಡಿ. ಅದನ್ನು ಬಳಸಿದ ಮೇಲೆ ಅದನ್ನು ಫ್ರಿಡ್ಜ್‌ನಲ್ಲಿಟ್ಟಿರಿ. ಸ್ವಲ್ಪ ನೀರಿನಲ್ಲಿ ಅದ್ದಿ ನಂತರ ಅದನ್ನು ಕಣ್ಣ ಮೇಲೆ ಇಟ್ಟುಕೊಂಡು ಹತ್ತು ನಿಮಿಷ ವಿಶ್ರಾಂತಿ ಪಡೆದರೆ ಕಣ್ಣಿನ ಸುಸ್ತೆಲ್ಲ ಮಾಯ.

rose water

ರೋಸ್‌ ವಾಟರ್

ಏನು ಮಾಡಲು ಸಮಯ ಸಿಗದಿದ್ದರೂ ಇದನ್ನು ಮಾಡಲು ಹೆಚ್ಚು ಸಮಯದ ಅವಶ್ಯಕತೆ ಇಲ್ಲ. ರೋಸ್‌ ವಾಟರ್‌ ಅಥವಾ ಗುಲಾಬಿ ಜಲದ ನಾಲ್ಕೈದು ಬಿಂದುಗಳನ್ನು ಹತ್ತಿಯಲ್ಲಿ ಹಾಕಿ ಅದರಿಂದ ಕಣ್ಣ ಸುತ್ತ ಹಚ್ಚಿಕೊಳ್ಳಿ. ಕೆಲಸದ ನಡುವೆ ಬ್ಯಾಗ್‌ನಲ್ಲೊಂದು ರೋಸ್‌ ವಾಟರ್‌ ಬಾಟಲ್‌ ಇಟ್ಟುಕೊಂಡಿದ್ದರೆ ಅಗತ್ಯ ಬಿದ್ದಾಗ ಕಚೇರಿಯಲ್ಲೂ ಲ್ಯಾಪ್‌ಟಾಪ್‌ ಪರದೆಯನ್ನೇ ನೋಡಿ ಸುಸ್ತಾದಾಗ ಹೀಗೆ ಮಾಡಿಕೊಳ್ಳಬಹುದು.

Continue Reading

ಫ್ಯಾಷನ್

Summer Star Fashion: ಏನಿದು ನಟಿ ಅದಿತಿ ರಾವ್‌ ಹೈದರಿಯ ಕೋ-ಆರ್ಡ್ ಕೊಸ್ಟಾ ಪ್ಯಾಂಟ್‌ ಟ್ರೆಂಡ್‌?

ಈ ಬಾರಿಯ ಸಮ್ಮರ್‌ ಎಂಡ್‌ನಲ್ಲಿ ಕೋ-ಆರ್ಡ್ ಕೊಸ್ಟಾ ಪ್ಯಾಂಟ್‌ ಸೆಟ್‌ಗಳು (Summer Star Fashion) ಬಿಡುಗಡೆಗೊಂಡಿವೆ. ಇದಕ್ಕೆ ಪೂರಕ ಎಂಬಂತೆ, ಬಾಲಿವುಡ್‌ ನಟಿ ಅದಿತಿ ರಾವ್‌ ಹೈದರಿ ಈ ಔಟ್‌ಫಿಟ್‌ ಧರಿಸಿ, ಟ್ರೆಂಡ್‌ ಸೆಟ್‌ ಮಾಡಿದ್ದಾರೆ. ಇದ್ಯಾವ ಬಗೆಯ ಫ್ಯಾಷನ್‌? ಇಲ್ಲಿದೆ ಡಿಟೇಲ್ಸ್.

VISTARANEWS.COM


on

Summer Star Fashion
ಚಿತ್ರಗಳು: ಅದಿತಿ ರಾವ್‌ ಹೈದರಿ, ಬಾಲಿವುಡ್‌ ನಟಿ
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು
ಬಾಲಿವುಡ್‌ ನಟಿ ಅದಿತಿ ರಾವ್‌ ಹೈದರಿ ಧರಿಸಿದ, ಸಮ್ಮರ್‌ ಕೋ ಆರ್ಡ್ ಪ್ರಿಂಟೆಡ್‌ ಕೊಸ್ಟಾ ಪ್ಯಾಂಟ್‌ ಸೆಟ್ ಇದೀಗ ಸೀಸನ್‌ ಎಂಡ್‌ನಲ್ಲಿ ಟ್ರೆಂಡಿಯಾಗಿದೆ. ಅಂದಹಾಗೆ, ಇದ್ಯಾವ ಬಗೆಯ ಕೋ ಆರ್ಡ್ ಸೆಟ್ ಫ್ಯಾಷನ್‌ (Summer Star Fashion) ಎಂದು ಯೋಚಿಸುತ್ತಿದ್ದೀರಾ? ಅಂತಹದ್ದೇನಿಲ್ಲ! ಇವು ಸೆಲೆಬ್ರೆಟಿ ಲುಕ್‌ ನೀಡುವ ಶೋಲ್ಡರ್ಲೆಸ್‌ ಬಟನ್‌ ಟಾಪ್‌ ಹೊಂದಿರುವ ಕೋ ಆರ್ಡ್ ಸೆಟ್‌ಗಳಿವು. ಈಗಾಗಲೇ, ಈ ಬಾರಿಯ ಸಮ್ಮರ್‌ನಲ್ಲಿ ನಾನಾ ಬಗೆಯ ಕೋ ಆರ್ಡ್ ಪ್ಯಾಂಟ್‌ ಸೆಟ್‌ಗಳು ಬಿಡುಗಡೆಗೊಂಡಿದ್ದವು. ಅವುಗಳಲ್ಲಿ, ಇದೀಗ ಬಾಲಿವುಡ್‌ ಸೆಲೆಬ್ರೆಟಿಗಳು ಹಾಗೂ ಫ್ಯಾಷನ್‌ ಕ್ಷೇತ್ರದ ಮಾಡೆಲ್‌ಗಳು ಧರಿಸುತ್ತಿರುವ, ಈ ಡಿಸೈನ್‌ನ ಕೋ ಆರ್ಡ್ ಪ್ಯಾಂಟ್‌ ಸೆಟ್‌ಗಳು ಸದ್ಯ ಟ್ರೆಂಡಿಯಾಗಿವೆ. ಇದಕ್ಕೆ ಪೂರಕ ಎಂಬಂತೆ, ನಟಿ ಅದಿತಿ ರಾವ್‌ ಹೈದರಿ, ಕೂಡ ಈ ಔಟ್‌ಫಿಟ್‌ ಧರಿಸಿದ್ದು, ಪರಿಣಾಮ, ಈ ಶೈಲಿಯ ಪ್ರಿಂಟ್ಸ್ ಇರುವಂತಹ ಕೋ ಆರ್ಡ್ ಕೊಸ್ಟಾ ಪ್ಯಾಂಟ್‌ ಸೆಟ್‌ ಫ್ಯಾಷನ್‌ ಇದ್ದಕ್ಕಿದ್ದಂತೆ ಅಲ್ಟ್ರಾ ಮಾಡರ್ನ್ ಹುಡುಗಿಯರನ್ನು ಆವರಿಸಿಕೊಂಡಿವೆ ಎನ್ನುತ್ತಾರೆ ಫ್ಯಾಷನಿಸ್ಟ್‌ಗಳು.

Summer Star Fashion

ಏನಿದು ಕೊಸ್ಟಾ ಪ್ಯಾಂಟ್‌ ಕೋ -ಆರ್ಡ್ ಸೆಟ್?

ಒಂದೇ ಬಗೆಯ ಶೇಡ್‌ ಅಥವಾ ಪ್ರಿಂಟ್ಸ್ ಇರುವ ಕೋ -ಆರ್ಡ್ ಸೆಟ್‌ ಪ್ಯಾಂಟ್‌ ಫ್ಯಾಷನ್‌ಗೆ ಇವು ಸೇರುತ್ತವೆ. ಆದರೆ, ಪ್ಯಾಂಟ್‌ ಮಾತ್ರ ಪಲ್ಹಾಜೊ ರೀತಿಯಲ್ಲಿರುತ್ತವೆ. ನೋಡಲು ಫ್ಲೇರ್‌ ಇದ್ದರೂ, ಲೂಸಾಗಿರುವುದಿಲ್ಲ. ಬೇಸಿಗೆಗೆ ಹೊಂದುವಂತಿರುತ್ತವೆ. ಇನ್ನು ಇವಕ್ಕೆ ಶೋಲ್ಡರ್ ಲೆಸ್‌ ಅಥವಾ ಬಾರ್ಡಾಟ್ ಶೈಲಿಯ ಬಾಡಿ ಫಿಟ್‌ ಇರುವ ಬಟನ್‌ ಟಾಪ್‌ ಮ್ಯಾಚ್‌ ಮಾಡಲಾಗಿರುತ್ತದೆ. ಈ ಔಟ್‌ಫಿಟ್‌ಗಳನ್ನು ಸೆಲೆಬ್ರೆಟಿಗಳು ಅತಿ ಹೆಚ್ಚಾಗಿ ಧರಿಸುವುದರಿಂದ ಇವು ಸೆಲೆಬ್ರೆಟಿ ಔಟ್‌ಫಿಟ್ಸ್ ಎಂದೇ ಕರೆಸಿಕೊಳ್ಳುತ್ತವೆ. ಆದರೆ, ಇದೀಗ, ಹಾಲಿ ಡೇ, ಔಟಿಂಗ್‌ ಎಂದೆಲ್ಲಾ ಅಲೆದಾಡುವ ಯುವತಿಯರು ಈ ಉಡುಗೆಯನ್ನು ಧರಿಸುವುದು ಸಾಮಾನ್ಯವಾಗತೊಡಗಿದ್ದು, ಸೀಸನ್‌ ಎಂಡ್‌ನ ಟಾಪ್‌ ಲಿಸ್ಟ್‌ನಲ್ಲಿವೆ. ಫ್ಲೋರಲ್‌ ಪ್ರಿಂಟ್ಸ್ ಅಥವಾ ಟ್ರಾಪಿಕಲ್‌ ಪ್ರಿಂಟ್ಸ್‌ನವು ಹೆಚ್ಚು ಬೇಡಿಕೆ ಸೃಷ್ಠಿಸಿಕೊಂಡಿವೆ ಎನ್ನುತ್ತಾರೆ ಫ್ಯಾಷನ್‌ ಡಿಸೈನರ್‌ಗಳು.

Summer Star Fashion

ಅದಿತಿ ರಾವ್‌ ಹೈದರಿ ಸಮ್ಮರ್‌ ಕೋ ಆರ್ಡ್ ಸೆಟ್‌ ಲುಕ್‌

ಇನ್ನು, ಸದ್ಯ ಹೀರಾ ಮಂಡಿ ಬಾಲಿವುಡ್‌ ಚಿತ್ರದಲ್ಲಿ ಎಥ್ನಿಕ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದ, ನಟಿ ಅದಿತಿ ರಾವ್‌ ಹೈದರಿಯವರಿಗೆ ಈ ಇಮೇಜ್‌ನಿಂದ ಕೊಂಚ ಬ್ರೇಕ್‌ ಬೇಕಿತ್ತು. ಹಾಗಾಗಿ ವೆಸ್ಟರ್ನ್ ಲುಕ್‌ ನೀಡುವ ಕೊಸ್ಟಾ ಪ್ಯಾಂಟ್‌ ಔಟ್‌ಫಿಟ್‌ ಧರಿಸಿ ಕಾಣಿಸಿಕೊಂಡಿದ್ದಾರೆ ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕರು.

Summer Star Fashion

ಕೋ -ಆರ್ಡ್ ಕೊಸ್ಟಾ ಪ್ಯಾಂಟ್ ಬಗ್ಗೆ ತಿಳಿದಿರಬೇಕಾದ ಸಂಗತಿಗಳು

  • ಹಾಲಿ ಡೇ, ಔಟಿಂಗ್‌ ಹಾಗೂ ಲಂಚ್‌-ಬ್ರಂಚ್‌ ಪಾರ್ಟಿಗಳಿಗೆ ಧರಿಸಲು ಮಾತ್ರ ಇವು ಸೂಕ್ತ.
  • ಫಿಟ್ಟಿಂಗ್‌ ಸರಿಯಾಗಿದ್ದಲ್ಲಿ ಮಾತ್ರ ಕಂಫರ್ಟಬಲ್‌ ಫೀಲ್‌ ನೀಡಬಲ್ಲವು.
  • ಶೋಲ್ಡರ್ ಲೆಸ್‌ ಆಗಿರುವುದರಿಂದ ಎಕ್ಸ್ಪೋಸ್‌ ಆಗುವ ಸಾಧ್ಯತೆ ಹೆಚ್ಚು.
  • ನೋಡಲು ಆಕರ್ಷಕವಾದರೂ ಟ್ರಯಲ್‌ ನೋಡದೇ ಧರಿಸುವುದು ಸೂಕ್ತವಲ್ಲ.
  • ತೀರಾ ಸ್ಲಿಮ್‌, ತೀರಾ ಪ್ಲಂಪಿ ಇಬ್ಬರಿಗೂ ನಾಟ್‌ ಓಕೆ. ಸರಿಯಾದ ಬಿಎಂಐ ಹೊಂದಿರುವವರಿಗೆ ಚೆನ್ನಾಗಿ ಕಾಣಿಸುತ್ತವೆ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

ಇದನ್ನೂ ಓದಿ: Cannes Star Fashion: ಕ್ರಾಪ್‌ ಟುಕ್ಸೆಡೊ ಧರಿಸಿ ತಾಯಿಗೆ ಶ್ರದ್ಧಾಂಜಲಿ ಅರ್ಪಿಸಿದ ನಟ ಪ್ರತೀಕ್‌ ಬಬ್ಬರ್

Continue Reading

ಪ್ರಮುಖ ಸುದ್ದಿ

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

Corona Virus: ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್‌ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್‌ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.

VISTARANEWS.COM


on

corona virus wave in singapore
Koo

ಬೆಂಗಳೂರು: ಸಿಂಗಾಪುರದಲ್ಲಿ (Singapore) ಹೊಸ ಕೋವಿಡ್‌- 19 (Covid 19 wave) ಅಲೆ ಪತ್ತೆಯಾಗಿದೆ. ಒಂದೇ ವಾರದಲ್ಲಿ ಕೊರೊನಾ ವೈರಸ್‌ (Corona Virus) ಕೇಸುಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಮತ್ತೆ ಮಾಸ್ಕ್‌ (Mask) ಧರಿಸಲು ಸಲಹೆ ನೀಡಲಾಗಿದೆ. ರಾಜ್ಯದಲ್ಲೂ ಆರೋಗ್ಯ ಇಲಾಖೆ (Health department) ಅಲರ್ಟ್‌ ಆಗಿದ್ದು, ಪರಿಸ್ಥಿತಿಯನ್ನು ಗಮನಿಸುತ್ತಿದೆ.

ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್‌ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್‌ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.

ಸಿಂಗಾಪುರದಿಂದ ಬೆಂಗಳೂರು ಹಾಗೂ ಮುಂಬಯಿಗೆ ಆಗಮಿಸುವ ವಿಮಾನಯಾನಿಗಳ ಸಂಖ್ಯೆ ಹೆಚ್ಚು ಇದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಆಯ್ದ ಯಾನಿಗಳ ಆರೋಗ್ಯ ತಪಾಸಣೆ, ಮಾಸ್ಕ್‌ ಧಾರಣೆ ಸೇರಿದಂತೆ ಹಲವು ಕ್ರಮಗಳ ಬಗೆಗೆ ಚರ್ಚಿಸಲಾಗುತ್ತಿದೆ.

ಸಿಂಗಾಪುರದಲ್ಲಿ ಏನಾಗಿದೆ?

ಸಿಂಗಾಪುರದ ಆರೋಗ್ಯ ಸಚಿವ ಓಂಗ್ ಯೆ ಕುಂಗ್, ಸಾರ್ವಜನಿಕ ತಾಣಗಳಲ್ಲಿ ಮುಖವಾಡಗಳನ್ನು ಧರಿಸುವಂತೆ ಸಲಹೆ ನೀಡಿದ್ದಾರೆ. ಸಾಮಾಜಿಕ ನಿರ್ಬಂಧಗಳ ಕುರಿತು ಮಾತನಾಡಿದ ಸಚಿವ ಓಂಗ್, ಸದ್ಯಕ್ಕೆ ಯಾವುದೇ ರೀತಿಯ ಸಾಮಾಜಿಕ ನಿರ್ಬಂಧಗಳ ಯೋಚನೆಯಿಲ್ಲ ಎಂದಿದ್ದಾರೆ. ಏಕೆಂದರೆ ಸಿಂಗಾಪುರದಲ್ಲಿ ಕೋವಿಡ್ -19 ಅನ್ನು ಸ್ಥಳೀಯ ಕಾಯಿಲೆ ಎಂದು ಪರಿಗಣಿಸಲಾಗುತ್ತದೆ.

ಕೋವಿಡ್‌ನ ಹೊಸ ಅಲೆಯ ಪಥವನ್ನು ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ ಎಂದು ಸಿಂಗಾಪುರದ ಆರೋಗ್ಯ ಸಚಿವಾಲಯ ಹೇಳಿದೆ. ಸಚಿವಾಲಯದ ಪ್ರಕಾರ, ಕೋವಿಡ್ -19 ಪ್ರಕರಣಗಳ ಅಂದಾಜು ಸಂಖ್ಯೆಯು ಹಿಂದಿನ ವಾರದಲ್ಲಿದ್ದ 13,700ರಿಂದ 25,900ಕ್ಕೆ ದ್ವಿಗುಣಗೊಂಡಿದೆ. ಅದೇ ಅವಧಿಯಲ್ಲಿ ಸರಾಸರಿ ದೈನಂದಿನ ಕೋವಿಡ್ -19 ಆಸ್ಪತ್ರೆಗೆ ದಾಖಲು ಕೇಸ್‌ಗಳು 181ರಿಂದ ಸರಿಸುಮಾರು 250ಕ್ಕೆ ಏರಿದೆ ಎಂದು ಸಚಿವಾಲಯ ವರದಿ ಮಾಡಿದೆ.

ಆಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು ಸಂರಕ್ಷಿಸಲು, ಸಾರ್ವಜನಿಕ ಆಸ್ಪತ್ರೆಗಳಿಗೆ ತುರ್ತು-ಅಲ್ಲದ ಶಸ್ತ್ರಚಿಕಿತ್ಸೆಗಳನ್ನು ಕಡಿಮೆ ಮಾಡಲು ಮತ್ತು ಸೂಕ್ತವಾದ ರೋಗಿಗಳನ್ನು ಆರೈಕೆ ಸೌಲಭ್ಯಗಳಿಗೆ ವರ್ಗಾಯಿಸಲು ಸೂಚನೆ ನೀಡಲಾಗಿದೆ. “ನಾವು ಅಲೆಯ ಆರಂಭಿಕ ಭಾಗದಲ್ಲಿದ್ದೇವೆ. ಪ್ರಮಾಣ ಸ್ಥಿರವಾಗಿ ಏರುತ್ತಿದೆ” ಎಂದು ಆರೋಗ್ಯ ಸಚಿವ ಓಂಗ್ ಯೆ ಕುಂಗ್ ಹೇಳಿದ್ದಾರೆ.

ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

ನವದೆಹಲಿ: ಕೊರೋನಾ ವೈರಸ್‌(Corona Virus) ಎದುರಿಸಲು ತೆಗೆದುಕೊಂಡಿರುವ ಕೋವಿಶೀಲ್ಡ್‌(Covishield Vaccine) ಲಸಿಕೆ ಅಡ್ಡಪರಿಣಾಮ(Side Effects) ಹೊಂದಿದೆ ಎಂಬುದು ಬಯಲಾದ ಬೆನ್ನಲ್ಲಿ ಕೋವಾಕ್ಸಿನ್‌ (Covaxin) ತೆಗೆದುಕೊಂಡಿರುವ ಜನ ತಮಗೇನು ಅಪಾಯವಿಲ್ಲ ಎಂದು ನಿರಾಳವಾಗಿದ್ದರು. ಆದರೆ ಇದೀಗ ವರದಿಯೊಂದು ಹೊರಬಿದ್ದಿದ್ದು, ಕೋವಾಕ್ಸಿನ್‌ ಪಡೆದಿರುವ ಜನರಿಗೆ ಬಿಗ್‌ ಶಾಕ್‌ ಕೊಟ್ಟಿದೆ. ಕೋವಾಕ್ಸಿನ್‌ ಲಸಿಕೆಯೂ ಅಡ್ಡಪರಿಣಾಮ ಹೊಂದಿದೆ ಎಂಬುದು ಅಧ್ಯಯನದಲ್ಲಿ ಬಯಲಾಗಿದೆ.

ಇತ್ತೀಚೆಗೆ ಕೋವಿಶೀಲ್ಡ್ ಅನ್ನು ಅಭಿವೃದ್ಧಿಪಡಿಸಿದ ಬ್ರಿಟಿಷ್ ಕಂಪನಿಯಾದ ಅಸ್ಟ್ರಾಜೆನೆಕಾ ಇತ್ತೀಚೆಗೆ ಅಲ್ಲಿನ ನ್ಯಾಯಾಲಯದಲ್ಲಿ ಅದರ ಲಸಿಕೆ ಕೆಲವು ಜನರಲ್ಲಿ ಗಂಭೀರ ಕಾಯಿಲೆಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು. ಇದೀಗ ಅದೇ ರೀತಿ ನಮ್ಮ ದೇಶದಲ್ಲಿ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ವರದಿ ಬಂದಿದೆ. ಈ ಲಸಿಕೆಯನ್ನು ಪಡೆದ ಸುಮಾರು ಒಂದು ವರ್ಷದ ನಂತರ, ಅದರ ಅಡ್ಡಪರಿಣಾಮಗಳು ಸಾಕಷ್ಟು ಜನರಲ್ಲಿ ಕಂಡುಬಂದಿದೆ ಎಂದು ಹೇಳಲಾಗಿದೆ.

BHU ಅಧ್ಯಯನ ವರದಿಯಲ್ಲಿ ಬಹಿರಂಗ

ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಈ ವರದಿಯ ಪ್ರಕಾರ, ಕೊವಾಕ್ಸಿನ್‌ ತೆಗೆದುಕೊಂಡಿರುವ ಹದಿ ಹರೆಯದವರು ಮತು ಯುವಕರಲ್ಲಿ ಈ ಅಡ್ಡ ಪರಿಣಾಮ ಹೆಚ್ಚಾಗಿ ಕಂಡು ಬಂದಿದೆ. ಈ ಸಂಶೋಧನೆಗಾಗಿ ಒಟ್ಟು 1024 ಜನರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅವರಲ್ಲಿ 635 ಹದಿಹರೆಯದವರು ಮತ್ತು 391 ಯುವಕರು ಇದ್ದರು. 304 ಹದಿಹರೆಯದವರು ಅಥವಾ ಸುಮಾರು 48 ಪ್ರತಿಶತದಷ್ಟು ಜನರು ಶ್ವಾಸನಾಳದ ಸೋಂಕುಗೆ ತುತ್ತಾಗಿರುವುದು ಅಧ್ಯಯನದಲ್ಲಿ ಬಯಲಾಗಿದೆ.

ಇದನ್ನೂ ಓದಿ: CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

Continue Reading
Advertisement
Harbhajan Singh
ಕ್ರೀಡೆ18 mins ago

Harbhajan Singh : ಭಾರತ ತಂಡದ ಕೋಚ್ ಆಗಲು ಉತ್ಸಾಹ ತೋರಿದ ಹರ್ಭಜನ್​ ಸಿಂಗ್​

Tamil Nadu Officers
ದೇಶ34 mins ago

ಐಎಎಸ್‌ ಆಫೀಸರ್‌ ಆಗಿರುವ ಮಾಜಿ ಪತ್ನಿಯಿಂದ ನನ್ನ ಮನೆಗೆ ವಿದ್ಯುತ್‌ ಕಟ್; ಇದು ಐಪಿಎಸ್‌ ಆಫೀಸರ್‌ ಅಳಲು!

Rameshwaram Cafe Blast
ಕರ್ನಾಟಕ50 mins ago

Rameshwaram Cafe Blast: ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ; 11 ಶಂಕಿತ ಉಗ್ರರು ವಶಕ್ಕೆ

Virat kohli
ಪ್ರಮುಖ ಸುದ್ದಿ57 mins ago

IPL 2024 : ಕೊಹ್ಲಿಯನ್ನು ಗಂಭೀರ್ ಅಪ್ಪಿಕೊಂಡಿದ್ದು ಫೇರ್​ಪ್ಲೇ ಅವಾರ್ಡ್​ಗಾಗಿಯಾ? ಅವರ ಮಾತಲ್ಲೇ ಕೇಳಿ

Phone tapping case and R Ashok demands for CBI investigation
ರಾಜಕೀಯ1 hour ago

Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

Porsche Crash
ದೇಶ1 hour ago

Porsche Crash: 2 ಕಾರು, 4 ನಗರ, 1 ಸಿಮ್‌ ಕಾರ್ಡ್;‌ ಮಗ ಕಾರು ಗುದ್ದಿದ ಬಳಿಕ ಅಪ್ಪನ ಪ್ಲಾನ್‌ ಏನು? ಇಲ್ಲಿದೆ ಭೀಕರ ಮಾಹಿತಿ

IPL 2024
ಕ್ರೀಡೆ2 hours ago

IPL 2024 : ಕೊಹ್ಲಿಯನ್ನೂ ಟೀಕಿಸುವುದರ ನಡುವೆಯೂ ಆರ್​​ಸಿಬಿ ಕಪ್​ ಗೆಲ್ಲುತ್ತದೆ ಎಂದ ಗವಾಸ್ಕರ್​

Road Accident
ಶಿವಮೊಗ್ಗ2 hours ago

Road Accident: ಮರಕ್ಕೆ ಬಸ್‌ ಡಿಕ್ಕಿಯಾಗಿ ಹಲವರಿಗೆ ಗಾಯ; ಆಟೋ ಪಲ್ಟಿಯಾಗಿ ಚಾಲಕ ಸಾವು

Dwayne Bravo
ಪ್ರಮುಖ ಸುದ್ದಿ2 hours ago

Dwayne Bravo : ಅಫಘಾನಿಸ್ತಾನ ತಂಡದಲ್ಲಿ ದೊಡ್ಡ ಜವಾಬ್ದಾರಿ ವಹಿಸಿಕೊಂಡ ಡ್ವೇನ್ ಬ್ರಾವೊ

Narendra Modi
ಪ್ರಮುಖ ಸುದ್ದಿ2 hours ago

Narendra Modi: ಅಂಬೇಡ್ಕರ್‌ ಇರದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ ಎಂದ ಮೋದಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು9 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು10 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌