Eating Style: ಉಣ್ಣುವ ರೀತಿ ನಾವು ಎಂಥವರು ಎನ್ನುವುದನ್ನು ಬಯಲು ಮಾಡುತ್ತದೆ! ಅದು ಹೇಗೆ? - Vistara News

ಲೈಫ್‌ಸ್ಟೈಲ್

Eating Style: ಉಣ್ಣುವ ರೀತಿ ನಾವು ಎಂಥವರು ಎನ್ನುವುದನ್ನು ಬಯಲು ಮಾಡುತ್ತದೆ! ಅದು ಹೇಗೆ?

ನಮ್ಮ ಹಲವಾರು (Eating Style) ಅಭ್ಯಾಸಗಳಿಂದ, ಕೈಯ ರೇಖೆಗಳಿಂದ, ನಡೆಯುವ ವಿಧಾನದಿಂದ, ಬೆರಳಿನ ಉದ್ದದಿಂದ, ದೇಹದ ಆಕಾರದಿಂದ, ಬರೆಯುವ ಶೈಲಿಯಿಂದ, ಹಸ್ತಾಕ್ಷರದಿಂದ ಹೀಗೆ ಹಲವಾರು ವಿಧಾನಗಳಿಂದ ಪ್ರತಿಯೊಬ್ಬರ ವ್ಯಕ್ತಿತ್ವ, ಭವಿಷ್ಯ ಇತ್ಯಾದಿಗಳನ್ನು ಲೆಕ್ಕಾಚಾರ ಹಾಕುವ ವಿಧಾನವಿದೆ. ಆದರೆ ಉಣ್ಣುವ ವಿಧಾನದಿಂದಲೂ ನಿಮ್ಮ ವ್ಯಕ್ತಿತ್ವವನ್ನು ಅಳೆಯಬಹುದು ಎಂಬುದು ತಿಳಿದಿದೆಯೇ? ಹೌದು, ನೀವು ಹೇಗೆ ಉಣ್ಣುತ್ತೀರಿ ಎಂಬುದನ್ನು ಆಧರಿಸಿಯೂ ನಿಮ್ಮ ವ್ಯಕ್ತಿತ್ವ ಹೀಗೆ ಎಂದು ಹೇಳಬಹುದಂತೆ! ಈ ಬಗ್ಗೆ ಈ ಲೇಖನ (Eating Style) ಓದಿ.

VISTARANEWS.COM


on

Eating Style
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಒಬ್ಬ ವ್ಯಕ್ತಿತ್ವ ಒಟ್ಟಾರೆ (Eating Style) ಹೇಗೆ ಎಂದು ತಿಳಿಯಲು ಹಲವಾರು ಮಾನದಂಡಗಳಿರುತ್ತವೆ. ಒಮ್ಮೆ ಒಬ್ಬ ವ್ಯಕ್ತಿಯನ್ನು ಭೇಟಿಯಾದ ತಕ್ಷಣ ಈತ ಹೀಗೆಯೇ ಎಂದು ನಾವು ಹೇಳಲಾಗುವುದಿಲ್ಲ. ಒಂದಿಷ್ಟು ಕಾಲ ಜೊತೆಗೆ ಪಳಗಬೇಕು. ಆದರೆ, ವ್ಯಕ್ತಿತ್ವ ಹೀಗೆ ಎಂದು ಹೇಳಲು ಜ್ಯೋತಿಷ್ಯ ಸೇರಿದಂತೆ ಹಲವಾರು ವಿಧಾನಗಳಿವೆ. ನಮ್ಮ ಹಲವಾರು ಅಭ್ಯಾಸಗಳಿಂದ, ಕೈಯ ರೇಖೆಗಳಿಂದ, ನಡೆಯುವ ವಿಧಾನದಿಂದ, ಬೆರಳಿನ ಉದ್ದದಿಂದ, ದೇಹದ ಆಕಾರದಿಂದ, ಬರೆಯುವ ಶೈಲಿಯಿಂದ, ಹಸ್ತಾಕ್ಷರದಿಂದ ಹೀಗೆ ಹಲವಾರು ವಿಧಾನಗಳಿಂದ ಪ್ರತಿಯೊಬ್ಬರ ವ್ಯಕ್ತಿತ್ವ, ಭವಿಷ್ಯ ಇತ್ಯಾದಿಗಳನ್ನು ಲೆಕ್ಕಾಚಾರ ಹಾಕುವ ವಿಧಾನವಿದೆ. ಆದರೆ ಉಣ್ಣುವ ವಿಧಾನದಿಂದಲೂ ನಿಮ್ಮ ವ್ಯಕ್ತಿತ್ವವನ್ನು ಅಳೆಯಬಹುದು ಎಂಬುದು ತಿಳಿದಿದೆಯೇ? ಹೌದು, ನೀವು ಹೇಗೆ ಉಣ್ಣುತ್ತೀರಿ ಎಂಬುದನ್ನು ಆಧರಿಸಿಯೂ ನಿಮ್ಮ ವ್ಯಕ್ತಿತ್ವ ಹೀಗೆ ಎಂದು ಹೇಳಬಹುದಂತೆ. ಬನ್ನಿ, ಈ ಕೆಳಗಿನವರಲ್ಲಿ ನೀವು ಯಾವುದನ್ನು ಹೋಲುತ್ತೀರಿ ಎಂದು ಕಂಡುಕೊಳ್ಳಿ.

Family eating lunch

ನಿಧಾನವಾಗಿ ಉಣ್ಣುವವರು

ನಮ್ಮ ಪರಿಚಿತ ವರ್ಗದಲ್ಲಿ, ಸ್ನೇಹವರ್ಗದ ಗುಂಪಿನಲ್ಲಿ ಕೆಲವರಿರುತ್ತಾರೆ. ಅವರು ನಿಧಾನವಾಗಿ ಉಣ್ಣುವವರು. ಜೊತೆಗೆ ಕೂತರೆ, ಎಲ್ಲರೂ ಉಂಡ ನಂತರ ಕೊನೆಯಲ್ಲಿ ಊಟ ಮುಗಿಸಿ ಏಳುವವರು. ನಿಧಾನವಾಗಿ ಉಣ್ಣುವವರು ಯಾವಾಗಲೂ ಸವಿದು, ಪ್ರತಿ ತುತ್ತನ್ನೂ ಅನುಭವಿಸಿ ಉಣ್ಣುತ್ತಾರೆ. ಜೊತೆಯಲ್ಲಿ ಒಂದಿಷ್ಟು ಹರಟುತ್ತಾರೆ. ಎಲ್ಲಿಯದೋ ಸುದ್ದಿಯನ್ನು ಚಪ್ಪರಿಸಿ ಮಾತನಾಡುವ ಜೊತೆಗೆ ಊಟದಲ್ಲೂ ಮಾತಿನಲ್ಲೂ ಕಳೆದು ಹೋಗುತ್ತಾರೆ. ಬೇಗ ಉಣ್ಣುವುದೆಂದರೆ ಇವರಿಗೆ ಆಗದು. ಬೇಗ ಉಂಡರೆ ಸುಸ್ತಾಗಿಬಿಡುವ ಇವರು ಬಹಳ ಆತ್ಮವಿಶ್ವಾಸ ಉಳ್ಳವರು. ಆದರೆ ಪ್ರದರ್ಶನ, ಶೋಆಫ್‌ ಇವರಿಗೆ ಇಷ್ಟವಾಗದು. ನಾಯಕತ್ವ ಗುಣವೂ ಇವರಿಗಿದ್ದು, ಅಂತಹ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಾರೆ. ಆದರೆ, ತಮ್ಮದೇ ಆದ ಸಮಯವನ್ನು ಇಷ್ಟಪಡುವವರು.

ಬೇಗ ಉಣ್ಣುವವರು

ಬೇಗ ಉಣ್ಣುವವರು ಯಾವಾಗಲೂ ಉಳಿದವರು ಅರ್ಧ ಉಂಡು ಮುಗಿಸುವಷ್ಟರಲ್ಲಿ ತಮ್ಮ ಊಟವನು ಮುಗಿಸಿರುತ್ತಾರೆ. ಇಂತಹ ಮಂದಿ ಯಾವಾಗಲೂ ಇನ್ನಷ್ಟು ಬೇಕು ಎಂಬ ಹಸಿವಿನಿಂದ ಕೂಡಿರುವ ವ್ಯಕ್ತಿತ್ವ ಉಳ್ಳವರು. ಬಹಳ ಮಹತ್ವಾಕಾಂಕ್ಷೆಯಿರುವ ಈ ಮಂದಿ ಸದಾ ಕೆಲಸ ಮಾಡಿಕೊಂಡಿರುವವರು. ಅವರು ಸಮಯಕ್ಕೆ ಬಹಳ ಮಹತ್ವ ಕೊಡುತ್ತಾರೆ. ಹಾಗೂ ಕೆಲವೊಮ್ಮೆ ತಮ್ಮ ಸಂತೋಷದ ಕ್ಷಣವನ್ನೂ ಬದಿಗೊತ್ತಿಬಿಡುವ ಗುಣದವರು.

Indian girl eating rice

ಕುತೂಹಲದಿಂದ ಉಣ್ಣುವವರು

ಸದಾ ಹೊಸ ಬಗೆಯ ಊಟಕ್ಕೆ, ಹೊಸ ಅಡುಗೆಯ ಬಗ್ಗೆ ಕುತೂಹಲ ಉಳಿಸಿಕೊಂಡಿರುವವರು. ಹೊಸದರ ಅನ್ವೇಷಣೆಯಲ್ಲಿರುವ, ಹೊಸತನಕ್ಕೆ ತುಡಿಯುವ ಮನಸ್ಥಿತಿಯ ಮಂದಿ ಇವರು. ಬಗೆಬಗೆಯ ಕಾಂಬಿನೇಶನ್‌ಗಳಲ್ಲಿ ಆಹಾರವನ್ನು ತಿಂದು ನೋಡುವ, ಹೊಸತನ್ನು ಟ್ರೈ ಮಾಡುವ ಮಂದಿ ಇವರು. ಇಂತಹ ಮಂದಿ ಹೃದಯ ಶ್ರೀಮಂತಿಕೆಯ ಮಂದಿ. ಜೀವನವನ್ನು ಚೆನ್ನಾಗಿ ಅನುಭವಿಸಬೇಕು, ಸುಖವಾಗಿ ಇರಬೇಕು ಎಂದು ಆ ಕ್ಷಣದ ಸುಖವನ್ನು ಅನುಭವಿಸುವವರು. ತಮ್ಮ ಕಂಫರ್ಟ್‌ ಝೋನ್‌ನಿಂದ ಹೊರಗೆ ಹೋಗುವುದಕ್ಕೆ ಇವರು ಹಿಂದೆಮುಂದೆ ನೋಡಲಾರರು.

ಇದನ್ನೂ ಓದಿ: Benefits of Poppy Seeds: ಗಸೆಗಸೆ ನಿದ್ದೆಗಷ್ಟೇ ಅಲ್ಲ, ಪೌಷ್ಟಿಕಾಂಶಗಳ ಆಗರವೂ ಹೌದು!

ಆಯ್ದು ತಿನ್ನುವವವರು

ಇಂತಹ ಮಂದಿ ಏನೇ ಕೊಟ್ಟರೂ ಅದರಲ್ಲಿ ಒಂದಿಷ್ಟು ಆಹಾರವನ್ನು ಎತ್ತಿಡುತ್ತಾರೆ. ಒಂದಿಷ್ಟನ್ನು ಮಾತ್ರ ಹೆಕ್ಕಿ ತಿಂದು ಉಳಿದುದನ್ನು ತಟ್ಟೆಯಲ್ಲಿ ಹಾಗೆಯೇ ಬಿಟ್ಟು ಏಳುತ್ತಾರೆ. ಈ ಮಂದಿ ಎಲ್ಲೇ ಹೋದರೂ ಒಂದಿಷ್ಟು ಬಗೆಯ ಆಹಾರವನ್ನು ಮಾತ್ರ ತಿನ್ನುತ್ತಾರೆ. ಇಂಥವರು ಆಹಾರದಲ್ಲಿ ಪ್ರಯೋಗಶೀಲ ಮನಸ್ಸನ್ನು ಹೊಂದಿರುವುದಿಲ್ಲ. ಹೊಸತನ್ನು ಟ್ರೈ ಮಾಡಲು ಅತೀವ ಆಸಕ್ತಿ ಇರುವುದಿಲ್ಲ. ಇಂತಹ ಮಂದಿ ಜೀವನದಲ್ಲಿ ನಿರ್ಧಿಷ್ಟ ಗುರಿಯನ್ನು ಹೊಂದಿರುತ್ತಾರೆ. ಆದರೆ, ಅತಿಯಾದ ಯೋಚನೆ, ಅತಿಯಾದ ಪ್ಲಾನಿಂಗ್‌ ಇವರು ಮಾಡುವುದಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Serial Bride: ಹಲವು ಜನರನ್ನು ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ; ಮಾಜಿ ವರಗಳಿಗಾಗಿ ಶೋಧ!

Serial Bride: ಅರೇಂಜ್‌ ಮ್ಯಾರೇಜ್‌ ಹೆಸರಿನಲ್ಲಿ ಮಹಿಳೆಯು ಹಲವರಿಗೆ ವಂಚಿಸಿದ್ದಳು. ತಾನು ಸೇರಿ ಏಳು ಜನರ ಗ್ಯಾಂಗ್‌ ಕಟ್ಟಿದ್ದ ಮಹಿಳೆಯು, ವಯಸ್ಸಾದರೂ ಮದುವೆಯಾಗದವರು, ಕಂಕಣ ಭಾಗ್ಯ ಕೂಡಿ ಬರದವರು, ಹೆಂಡತಿ ತೀರಿಕೊಂಡ ಬಳಿಕ ಒಂಟಿಯಾದವರನ್ನು ಗುರುತಿಸಿ, ಅವರನ್ನು ಮದುವೆಯಾಗುತ್ತಿದ್ದಳು. ಬಳಿಕ ಅವರ ಹಣ, ಚಿನ್ನ ಕದ್ದು ಪರಾರಿಯಾಗುತ್ತಿದ್ದಳು. ಈಗ ಈಕೆ ಜೈಲಿನಲ್ಲಿದ್ದು, ಎಚ್‌ಐವಿ ದೃಢಪಟ್ಟಿದೆ. ಇದು ಈಗ ಪೊಲೀಸರು ಹಾಗೂ ವೈದ್ಯಾಧಿಕಾರಿಗಳಿಗೆ ಹೊಸ ಆತಂಕ ತಂದೊಡ್ಡಿದೆ.

VISTARANEWS.COM


on

Serial Bride
Koo

ಲಖನೌ: ದೇಶದ ಹಲವೆಡೆ ಹತ್ತಾರು ಜನರನ್ನು ನಂಬಿಸಿ, ಅವರನ್ನು ಮದುವೆಯಾಗಿ, ಬಳಿಕ ಅವರ ಚಿನ್ನ ಹಾಗೂ ನಗದನ್ನು ದೋಚಿ ಪರಾರಿಯಾಗುತ್ತಿದ್ದ, ಸೀರಿಯಲ್‌ ಬ್ರೈಡ್‌ (ಸರಣಿ ಮದುಮಗಳು ಅಥವಾ Serial Bride) ಎಂದೇ ಖ್ಯಾತಿಯಾಗಿದ್ದ ಮಹಿಳೆಗೆ ಈಗ ಎಚ್‌ಐವಿ ದೃಢಪಟ್ಟಿರುವುದು ವೈದ್ಯಕೀಯ ವರದಿಗಳಿಂದ ಸಾಬೀತಾಗಿದೆ. ಇದು ಈಗ ಪೊಲೀಸರಿಗೆ ಮತ್ತೊಂದು ಸವಾಲಾಗಿದ್ದು, ಈಕೆಯನ್ನು ಮದುವೆಯಾಗಿದ್ದ ಮಾಜಿ ಪತಿಯರನ್ನು ಹುಡುಕಲು ಉತ್ತರ ಪ್ರದೇಶ (Uttar Pradesh) ಹಾಗೂ ಉತ್ತರಾಖಂಡದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಅರೇಂಜ್‌ ಮ್ಯಾರೇಜ್‌ ಹೆಸರಿನಲ್ಲಿ ಮಹಿಳೆಯು ಹಲವರಿಗೆ ವಂಚಿಸಿದ್ದಳು. ತಾನು ಸೇರಿ ಏಳು ಜನರ ಗ್ಯಾಂಗ್‌ ಕಟ್ಟಿದ್ದ ಮಹಿಳೆಯು, ವಯಸ್ಸಾದರೂ ಮದುವೆಯಾಗದವರು, ಕಂಕಣ ಭಾಗ್ಯ ಕೂಡಿ ಬರದವರು, ಹೆಂಡತಿ ತೀರಿಕೊಂಡ ಬಳಿಕ ಒಂಟಿಯಾದವರನ್ನು ಗುರುತಿಸಿ, ಅವರನ್ನು ಮದುವೆಯಾಗುತ್ತಿದ್ದಳು. ಮದುವೆಯಾದ ಬಳಿಕ ಗ್ಯಾಂಗ್‌ನ ಸದಸ್ಯರನ್ನು ತನ್ನ ಸಂಬಂಧಿಕರು ಎಂದು ನೂತನ ವರಗಳಿಗೆ ಪರಿಚಯ ಮಾಡಿಸುತ್ತಿದ್ದಳು. ಇದಾದ ಬಳಿಕ, ಆ ವ್ಯಕ್ತಿಯ ಬಳಿಯ ನಗದು, ಚಿನ್ನಾಭರಣಗಳನ್ನು ಕದ್ದು ಪರಾರಿಯಾಗುತ್ತಿದ್ದಳು.

World Aids Vaccine Day

ಹೀಗೆ, ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ಹಲವರಿಗೆ ಮೋಸ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಹಿಳೆ ಹಾಗೂ ಆರು ಆರೋಪಿಗಳನ್ನು ಬಂಧಿಸಿದ್ದರು. ಮಹಿಳೆಯ ಸೇರಿ ಏಳು ಜನರನ್ನು ಮುಜಫ್ಫರ್‌ನಗರ ಜೈಲಿನಲ್ಲಿ ಇರಿಸಲಾಗಿದೆ. ಇತ್ತೀಚೆಗೆ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಜಿಲ್ಲಾಸ್ಪತ್ರೆಯ ವೈದ್ಯರು ನೀಡಿದ ವರದಿಯಲ್ಲಿ, ಮಹಿಳೆಗೆ ಏಡ್ಸ್‌ ಇರುವುದು ಪತ್ತೆಯಾಗಿದೆ. ಇದು ಈಗ ಭೀಕರ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆಯನ್ನು ತಂದೊಡ್ಡಿದೆ.

“ಮಹಿಳೆಯು ಹಲವು ಜನರಿಗೆ ವಂಚಿಸಿದ್ದು, ಹತ್ತಾರು ಜನರು ಈಕೆಯ ಜತೆ ದೈಹಿಕ ಸಂಪರ್ಕಕ್ಕೆ ಬಂದಿದ್ದಾರೆ. ಈಗ ಮಹಿಳೆಗೆ ಎಚ್‌ಐವಿ ಇದೆ ಎಂಬುದು ಇತ್ತೀಚಿನ ವೈದ್ಯಕೀಯ ವರದಿಯಿಂದ ತಿಳಿದುಬಂದಿದೆ. ಈಕೆಯ ಜತೆ ಲೈಂಗಿಕ ಸಂಪರ್ಕ ಹೊಂದಿದವರು, ಮದುವೆಯಾದವರನ್ನು ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಹುಡುಕಲಾಗುತ್ತಿದೆ” ಎಂದು ಮುಜಫ್ಫರ್‌ನಗರ ಜೈಲು ಎಸ್‌ಪಿ ಸೀತಾರಾಮ್‌ ಶರ್ಮಾ ಅವರು ಸುದ್ದಿಗಾರರರಿಗೆ ಮಾಹಿತಿ ನೀಡಿದ್ದಾರೆ. ಇನ್ನು, ಈಕೆಯನ್ನು ಮದುವೆಯಾದವರು ಕೂಡಲೇ ಎಚ್‌ಐವಿ ತಪಾಸಣೆ ಮಾಡಿಸಿಕೊಳ್ಳಿ ಎಂಬುದಾಗಿ ವೈದ್ಯಾಧಿಕಾರಿಗಳು ಕರೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Sebi Fines: ವಂಚನೆ ಪ್ರಕರಣ; ಟಿವಿ ನಿರೂಪಕ, ವಿಶ್ಲೇಷಕನಿಗೆ ತಲಾ 1 ಕೋಟಿ ರೂ. ದಂಡ ವಿಧಿಸಿದ ಸೆಬಿ

Continue Reading

ಫ್ಯಾಷನ್

Monsoon Rain Boots Fashion: ಮಕ್ಕಳ ಮಾನ್ಸೂನ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಬಗೆಯ ರೈನ್‌ ಬೂಟ್ಸ್

Monsoon rain boots fashion: ಮಾನ್ಸೂನ್‌ ಆಗಮಿಸುತ್ತಿದ್ದಂತೆಯೇ ಮಕ್ಕಳ ಫುಟ್‌ವೇರ್‌ ಫ್ಯಾಷನ್‌ನಲ್ಲಿ ರೈನ್‌ ಬೂಟ್ಸ್‌ಗಳು ಸದ್ದು ಮಾಡಿವೆ. ಮಳೆಯಲ್ಲಿ ಬಿಂದಾಸ್‌ ಆಗಿ ಆಟವಾಡಲು ಅನುವು ಮಾಡಿಕೊಡುವಂತಹ ಸ್ಟೈಲಿಶ್‌ ಬೂಟ್ಸ್ ಈ ಸೀಸನ್‌ನಲ್ಲಿ ಟ್ರೆಂಡಿಯಾಗಿವೆ. ಈ ಕುರಿತಂತೆ ಇಲ್ಲಿದೆ ಡಿಟೇಲ್ಸ್.

VISTARANEWS.COM


on

Monsoon Rain Boots Fashion
ಚಿತ್ರಕೃಪೆ: ಪಿಕ್ಸೆಲ್‌
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ಕಿಡ್ಸ್ ರೈನ್‌ ಬೂಟ್ಸ್ ಇದೀಗ (Monsoon rain boots fashion) ಟ್ರೆಂಡಿಯಾಗಿವೆ. ಹೌದು, ಮಾನ್ಸೂನ್‌ ಆಗಮಿಸುತ್ತಿದ್ದಂತೆಯೇ ಮಕ್ಕಳ ಫುಟ್‌ವೇರ್‌ ಫ್ಯಾಷನ್‌ನಲ್ಲಿ ರೈನ್‌ ಬೂಟ್ಸ್‌ಗಳು ಸದ್ದು ಮಾಡತೊಡಗಿವೆ. ಬಿಂದಾಸ್‌ ಆಗಿ ಮಳೆಯಲ್ಲಿ ಚಿಣ್ಣರು ತೊಯ್ದು ಆಟವಾಡಲು, ಔಟಿಂಗ್‌ನಲ್ಲಿ ಓಡಾಡಲು ಸಾಥ್‌ ನೀಡುತ್ತಿವೆ.

Monsoon Rain Boots Fashion

ರೈನ್‌ ಬೂಟ್ಸ್ ಫ್ಯಾಷನ್‌

ಮಾನ್ಸೂನ್‌ನಲ್ಲಿ ಸ್ಟೈಲಿಶ್‌ ಆಗಿರುವ ಮಕ್ಕಳ ಫುಟ್‌ವೇರ್‌ಗಳನ್ನು ಹಾಕುವುದೇ ಪೋಷಕರಿಗೆ ಬೇಸರದ ಸಂಗತಿ. ಯಾಕೆಂದರೆ, ಮಳೆಗೆ ತೊಯ್ದ ಚಿಣ್ಣರ ರೆಗ್ಯುಲರ್‌ ಫುಟ್‌ವೇರ್‌ಗಳು ಎಷ್ಟೇ ಒಣಗಿಸಿದರೂ ಬಲುಬೇಗ ಒದ್ದೆಯಾಗುತ್ತವೆ. ಅಲ್ಲದೇ, ಇವುಗಳ ಕಲರ್‌ ಕೂಡ ಮಾಸುತ್ತವೆ. ಇನ್ನು ಡಿಸೈನ್‌ ಇರುವಂತವು ಬಲು ಬೇಗ ಕಿತ್ತು ಹೋಗುತ್ತವೆ. ಅಲ್ಲದೇ, ಹಳತರಂತೆ ಕಾಣಿಸಲಾರಂಭಿಸುತ್ತವೆ. ಹಾಗಾಗಿ ಈ ಸೀಸನ್‌ನಲ್ಲಿ ಮಳೆ ಬರುತ್ತಿದ್ದಲ್ಲಿ, ಆ ಸಂದರ್ಭಕ್ಕೆ ಹೊಂದುವಂತಹ ಫುಟ್‌ವೇರ್‌ ಅದರಲ್ಲೂ ಬೂಟ್ಸ್ ಆಯ್ಕೆ ಮಾಡುವುದು ಉತ್ತಮ ಎನ್ನುತ್ತಾರೆ ಮಕ್ಕಳ ಸ್ಟೈಲಿಸ್ಟ್ಸ್. ಇದಕ್ಕೆ ಪೂರಕ ಎಂಬಂತೆ, ಮಾನ್ಸೂನ್‌ನಲ್ಲಿ ಚಾಲ್ತಿಯಲ್ಲಿರುವ ಮೂರು ಬಗೆಯ ಕಿಡ್ಸ್ ರೈನ್‌ ಬೂಟ್‌ಗಳ ಮಾಹಿತಿ ಇಲ್ಲಿದೆ.

Monsoon Rain Boots Fashion

ಫ್ಯಾನ್ಸಿ ಕಲರ್‌ ಗಮ್‌ ಬೂಟ್ಸ್

ಮೊದಲೆಲ್ಲಾ ಗದ್ದೆ-ತೋಟದಲ್ಲಿ ಬಳಸಲಾಗುತ್ತಿದ್ದ, ಗಮ್‌ ಬೂಟ್‌ಗಳು ಇದೀಗ ಮಕ್ಕಳ ಫುಟ್‌ವೇರ್‌ ಲೋಕದಲ್ಲಿ ಹೊಸ ರೂಪ ಪಡೆದು ಬಿಡುಗಡೆಗೊಂಡಿವೆ. ಮಕ್ಕಳ ಇಷ್ಟಕ್ಕೆ ಅನುಸಾರವಾಗಿ ಅವರಿಗೆ ಪ್ರಿಯವಾಗುವಂತಹ ಎದ್ದು ಕಾಣುವಂತಹ ಫ್ಯಾನ್ಸಿ ಕಲರ್‌ಗಳಲ್ಲಿ ದೊರೆಯುತ್ತಿವೆ. ಬ್ಲ್ಯಾಕ್‌ ಬಣ್ಣ ಹೊರತುಪಡಿಸಿ, ಲೆಕ್ಕವಿಲ್ಲದಷ್ಟು ಬಗೆಯ ಶೇಡ್‌ನವು ಟ್ರೆಂಡ್‌ನಲ್ಲಿವೆ.

Monsoon Rain Boots Fashion

ಕಲರ್‌ಫುಲ್‌ ರಬ್ಬರ್‌ ರೈನ್‌ ಬೂಟ್ಸ್

ನಾನಾ ಬಗೆಯ ವಿನ್ಯಾಸ ಹಾಗೂ ಡಿಜಿಟಲ್‌ ಪ್ರಿಂಟ್‌ ಇರುವಂತಹ ರಬ್ಬರ್‌ ರೈನ್‌ ಬೂಟ್ಸ್ ಮಕ್ಕಳ ಫುಟ್‌ವೇರ್‌ ಲೋಕದಲ್ಲಿ ಲಗ್ಗೆ ಇಟ್ಟಿವೆ. ಹುಡುಗಿಯರಿಗೆ ಪಿಂಕ್‌, ರೆಡ್‌, ಯೆಲ್ಲೋ ಶೇಡ್‌ಗಳಲ್ಲಿ ಕಾಟೂರ್ನ್‌ ಚಿತ್ತಾರಗಳಲ್ಲಿ ಬಂದಿದ್ದರೇ, ಹುಡುಗರಿಗೆ ಇಷ್ಟವಾಗುವಂತಹ ಬ್ಲ್ಯೂ, ಬ್ಲ್ಯಾಕ್‌, ಗ್ರೇ ಹಾಗೂ ಮಿಕ್ಸ್ ಡಿಸೈನ್‌ಗಳಲ್ಲಿ ಕಲರ್‌ಗಳಲ್ಲಿ ಎಂಟ್ರಿ ನೀಡಿವೆ.

Monsoon Rain Boots Fashion

ಲೈಟ್‌ವೈಟ್‌ ವಾಟರ್‌ ಪ್ರೂಫ್‌ ಬೂಟ್ಸ್

ಇನ್ನು, ಪುಟ್ಟ ಕಂದಮ್ಮಗಳಿಗೆ ಪಾದಗಳಿಗೆ ಸಾಫ್ಟ್ ಎಂದೆನಿಸುವಂತಹ ಸಾಫ್ಟ್ ಫ್ಯಾಬ್ರಿಕ್‌ನ ಲೈಟ್‌ವೈಟ್‌ ಇರುವಂತಹ ವಾಟರ್‌ಪ್ರೂಫ್‌ ಬೂಟ್ಸ್‌ಗಳು ಶಾಪ್‌ಗಳಲ್ಲಿ ಲಭ್ಯ. ಕೆಲವು ಸ್ಟೈಲಿಶ್‌ ಲುಕ್‌ನಲ್ಲಿದ್ದರೇ, ಇನ್ನು ಕೆಲವು ಕಾರ್ಟೂನ್‌ ಕ್ಯಾರೆಕ್ಟರ್‌ ಅಥವಾ ಸ್ಟೋರಿ ಟೆಲ್ಲಿಂಗ್‌ ಚಿತ್ರಗಳನ್ನು ಒಳಗೊಂಡಿವೆ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

ಇದನ್ನೂ ಓದಿ: Balloon Denim Frock Fashion: ಹುಡುಗಿಯರ ಮಾನ್ಸೂನ್‌ ಫ್ಯಾಷನ್‌ಗೆ ಕಾಲಿಟ್ಟ ಬಲೂನ್‌ ಡೆನಿಮ್‌ ಡ್ರೆಸ್

Continue Reading

ಆರೋಗ್ಯ

Weight Loss Tips: ನಲವತ್ತರ ನಂತರ ತೂಕ ಇಳಿಸುವುದು ಹೇಗೆ?

Weight loss Tips: ವಯಸ್ಸೆಂಬುದು ಒಂದು ಸಂಖ್ಯೆ ಮಾತ್ರ ಎನ್ನುವವರು ಲೋಕದ ತುಂಬೆಲ್ಲ ಇದ್ದಾರೆ. ಹಾಗಾದರೆ ವಯಸ್ಸೆಷ್ಟು ಎಂದು ಕೇಳಿದರೆ, ಅದೊಂದು ಸಂಖ್ಯೆಯನ್ನು ಹೇಳಲು ಸಿದ್ಧರಿರುವುದಿಲ್ಲ! ವಯಸ್ಸನ್ನು ಹೇಳಿದರೂ ಹೇಳದಿದ್ದರೂ ಆಗುವುದಂತೂ ಹೌದಲ್ಲ? ಅದರಲ್ಲೂ ನಮ್ಮ ಅಂಗಾಂಗಗಳು ತಮ್ಮ ಕ್ಷಮತೆಯಲ್ಲಿ ಅದನ್ನು ತೋರಿಸಿಯೇ ಬಿಡುತ್ತವೆ. ಉದಾ, ಹಿಂದೊಮ್ಮೆ ಕಲ್ಲನ್ನಾದರೂ ತಿಂದು ಕರಗಿಸುತ್ತಿದ್ದ ಹೊಟ್ಟೆ, ಈಗೀಗ ಊಟವನ್ನೇ ಅರಗಿಸುವುದಕ್ಕೆ ಉಸ್ಸಪ್ಪ ಎನ್ನುವುದಾದರೆ, ವಯಸ್ಸು 40 ದಾಟಿದ್ದು ಹೌದು ಎಂದರ್ಥ. ಹಾಗಾದರೆ ಪ್ರಾಯ 40 ಆದ ಮೇಲೆ ದೇಹದ ಕೊಬ್ಬು ಕರಗಿಸುವುದು ಹೇಗೆ?

VISTARANEWS.COM


on

Weight Loss Tips
Koo

ಹಿಂದೆ ಕಲ್ಲನ್ನಾದರೂ ತಿಂದು (Weight loss Tips) ಕರಗಿಸುತ್ತಿದ್ದ ಹೊಟ್ಟೆ, ಈಗೀಗ ಊಟವನ್ನೇ ಅರಗಿಸುವುದಕ್ಕೆ ಉಸ್ಸಪ್ಪ ಎನ್ನುವುದಾದರೆ, ವಯಸ್ಸು 40 ದಾಟಿದ್ದು ಹೌದು ಎಂದರ್ಥ. ಈ ಗುಟ್ಟನ್ನು ದೇಹದ ಚಯಾಪಚಯ ಹೇಳಿಯೇ ಬಿಡುತ್ತದೆ. ತಿಂದಿದ್ದು ಕರಗುತ್ತಿಲ್ಲ ಎಂದಾದರೆ ಆ ಕೊಬ್ಬೆಲ್ಲ ಕುಳಿತುಕೊಳ್ಳುವುದು ದೇಹದಲ್ಲೇ ತಾನೆ? ಹಾಗಾದರೆ ಪ್ರಾಯ 40 ಆದ ಮೇಲೆ ದೇಹದ ಕೊಬ್ಬು ಕರಗಿಸುವುದು ಹೇಗೆ?

Weight Loss Benefits Of Eating Roasted Peanuts Daily

ವಯಸ್ಸೆಂಬುದು ಒಂದು ಸಂಖ್ಯೆ ಮಾತ್ರ ಎನ್ನುವವರು ಲೋಕದ ತುಂಬೆಲ್ಲ ಇದ್ದಾರೆ. ಹಾಗಾದರೆ ವಯಸ್ಸೆಷ್ಟು ಎಂದು ಕೇಳಿದರೆ, ಅದೊಂದು ಸಂಖ್ಯೆಯನ್ನು ಹೇಳಲು ಸಿದ್ಧರಿರುವುದಿಲ್ಲ! ಇರಲಿ, ವಿಷಯ ಅದಲ್ಲ. ವಯಸ್ಸನ್ನು ಹೇಳಿದರೂ ಹೇಳದಿದ್ದರೂ, ಆಗುವುದಂತೂ ಹೌದಲ್ಲ. ಅದರಲ್ಲೂ ನಮ್ಮ ಅಂಗಾಂಗಗಳು ತಮ್ಮ ಕ್ಷಮತೆಯಲ್ಲಿ ಅದನ್ನು ತೋರಿಸಿಯೇ ಬಿಡುತ್ತವೆ. ಉದಾ, ಹಿಂದೊಮ್ಮೆ ಕಲ್ಲನ್ನಾದರೂ ತಿಂದು ಕರಗಿಸುತ್ತಿದ್ದ ಹೊಟ್ಟೆ, ಈಗೀಗ ಊಟವನ್ನೇ ಅರಗಿಸುವುದಕ್ಕೆ ಉಸ್ಸಪ್ಪ ಎನ್ನುವುದಾದರೆ, ವಯಸ್ಸು ೪೦ ದಾಟಿದ್ದು ಹೌದು. ಈ ಗುಟ್ಟನ್ನು ದೇಹದ ಚಯಾಪಚಯ ಹೇಳಿಯೇ ಬಿಡುತ್ತದೆ. ತಿಂದಿದ್ದು ಕರಗುತ್ತಿಲ್ಲ ಎಂದಾದರೆ ಆ ಕೊಬ್ಬೆಲ್ಲ ಕುಳಿತುಕೊಳ್ಳುವುದು ದೇಹದಲ್ಲೇ ತಾನೆ? ಹಾಗಾದರೆ ಪ್ರಾಯ 40 ಆದ ಮೇಲೆ ದೇಹದ ಕೊಬ್ಬು ಕರಗಿಸುವುದು ಹೇಗೆ? ಹೆಚ್ಚಿನ ಸಾರಿ ತೂಕ ಕರಗಿಸುವ ಭರದಲ್ಲಿ ಚುಟುಕು ಡಯೆಟ್‌ಗಳ ಮೊರೆ ಹೋಗುತ್ತೇವೆ. ಆಗದಿರುವಂಥ ಸರ್ಕಸ್‌ಗಳಲ್ಲಿ ತೊಡಗಿಸಿಕೊಳ್ಳುತ್ತೇವೆ. ಇದರ ಪರಿಣಾಮವೇನೆಂದರೆ ದೇಹದಲ್ಲಿ ಕೊಬ್ಬು ಕರಗುವ ಬದಲು, ನೀರಿನಿಂದ ಇರುವಂಥ ತೂಕ ಮಾತ್ರವೇ ಕ್ಷಿಪ್ರವಾಗಿ ಕರಗುತ್ತದೆ. ಅದೂ ಇಲ್ಲದಿದ್ದರೆ ಸ್ನಾಯುಗಳು ಮಾಯವಾಗಿ ದೇಹ ತೊಂದರೆಗೆ ಸಿಲುಕುತ್ತದೆ. ಇದರ ಜೊತೆಗೆ ತಪ್ಪಾಗಿ ವ್ಯಾಯಾಮಗಳನ್ನೂ ಮಾಡಿದರೆ, ಗಾಯಗಳ ಸಮಸ್ಯೆ ತಲೆದೋರುತ್ತದೆ. ಪ್ರಾಯ ಹೆಚ್ಚುತ್ತಿದ್ದಂತೆ ಗಾಯ ಮಾಯುವುದು ನಿಜಕ್ಕೂ ಕಷ್ಟ. ಹಾಗಾದರೆ ಸುಸ್ಥಿರವಾಗಿ ಮತ್ತು ಸುರಕ್ಷಿತವಾಗಿ ತೂಕ ಇಳಿಸುವುದಕ್ಕೆ 40ರ ನಂತರ ಏನು ಮಾಡಬೇಕು?

Dieting concept. Healthy Food. Beautiful Young Asian Woman

ಆಹಾರದ ಬಗ್ಗೆ ಗಮನ

ಬೆಳಗಿನ ಉಪಾಹಾರದಲ್ಲಿ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪ್ರೊಟೀನ್‌ ಒದಗಿಸಬೇಕು ಜೊತೆಗೆ ಕ್ಯಾಲರಿ ಇಳಿಸಬೇಕು. ಅಂದರೆ, ನಿಮಗೆ ಬೆಳಗ್ಗೆ 1200 ಕ್ಯಾಲರಿಯ ಆಹಾರ ಬೇಕು ಎಂದಿದ್ದರೆ, ಅದನ್ನು ಅಂದಾಜು 900 ಕ್ಯಾಲರಿಗಳಿಗೆ ಇಳಿಸುವುದು. ಈ ಆಹಾರದಲ್ಲಿ ಪ್ರೊಟೀನ್‌ ಮತ್ತು ಸಂಕೀರ್ಣ ಪಿಷ್ಟಗಳು ಭರಿತವಾಗಿ ಇರಬೇಕು. ಇದರಿಂದ ಶರೀರ ಸೊರಗುವುದಿಲ್ಲ ಮತ್ತು ಹಸಿವೂ ಆಗುವುದಿಲ್ಲ. ದೇಹಕ್ಕೆ ಬೇಕಾದ ಉಳಿದ 300 ಕ್ಯಾಲರಿಯನ್ನು ಶರೀರ ತನ್ನ ಕೊಬ್ಬಿನ ದಾಸ್ತಾನಿನಿಂದ ತೆಗೆದುಕೊಳ್ಳುತ್ತದೆ. ಇದನ್ನು ಎಲ್ಲಾ ಹೊತ್ತಿನ ಆಹಾರಗಳಲ್ಲೂ ಕ್ರಮೇಣ ಅಳವಡಿಸಿಕೊಳ್ಳಬಹುದು. ಋತುಮಾನದ ಸೊಪ್ಪು-ಹಣ್ಣು-ತರಕಾರಿಗಳು ಊಟದಲ್ಲಿ ಸಾಕಷ್ಟಿರಲಿ. ಇದರಿಂದ ನಾರು ಭರಪೂರ ದೊರೆಯುತ್ತದೆ. ಖನಿಜಗಳು ಕೊರತೆಯಾಗದಂತೆ ನೋಡಿಕೊಳ್ಳಲು ಇದಿಷ್ಟು ಆಹಾರಗಳು ಸಾಕಾಗುತ್ತವೆ. ಜೊತೆಗೆ ಚೆನ್ನಾಗಿ ನೀರು ಕುಡಿಯಿರಿ.

Asia woman doing yoga fitness exercise Inflammation

ವ್ಯಾಯಾಮ

ಯೋಗದಂಥ ವ್ಯಾಯಾಮಗಳು ಸರಳ ಎನ್ನಿಸಿದರೂ ಹಲವು ರೀತಿಯಲ್ಲಿ ಪ್ರಯೋಜನಕಾರಿ. ದೇಹ-ಮನಸ್ಸುಗಳನ್ನು ಶಾಂತವಾಗಿಸುವುದರ ಜೊತೆಗೆ, ದೇಹದ ವಿವಿಧ ಸ್ನಾಯುಗಳನ್ನು ಸಶಕ್ತಗೊಳಿಸುತ್ತವೆ. ಕೀಲುಗಳ ಆರೋಗ್ಯ ಸುಧಾರಿಸಿ ದೇಹದ ನಮ್ಯತೆಯನ್ನೂ ಹೆಚ್ಚಿಸುತ್ತದೆ. ಇವೆಲ್ಲ ಕ್ರಮೇಣ ನೆರವಾಗುವುದು ದೇಹದ ಕೊಬ್ಬು ಕರಗಿಸುವಲ್ಲಿ.

ಇದನ್ನೂ ಓದಿ: Seeds For Men Sexual Power: ಪುರುಷರ ಲೈಂಗಿಕ ಶಕ್ತಿ ಹೆಚ್ಚಳಕ್ಕೆ ಈ ಬೀಜಗಳು ಪರಿಣಾಮಕಾರಿ!

ಕಾರ್ಡಿಯೊ

ಇದಕ್ಕಾಗಿ ಥ್ರೆಡ್‌ಮಿಲ್‌ಗಳ ಮೇಲೆ ಉಸಿರುಗಟ್ಟಿ ಓಡಬೇಕೆಂದಿಲ್ಲ. ಸರಳವಾಗಿ ಬೀಸು ನಡಿಗೆ, ಜಾಗಿಂಗ್‌ ಸಹ ಸಾಕಾಗುತ್ತದೆ. ನಿಮ್ಮಿಷ್ಟದ ಇಂಥ ಯಾವುದೇ ವ್ಯಾಯಾಮ ಮಾಡಬಹುದು. ಕಾರ್ಡಿಯೊ ವ್ಯಾಯಾಮಗಳು ದೇಹಕ್ಕೆ ಆಮ್ಲಜನಕದ ಪ್ರಮಾಣವನ್ನು ಹೆಚ್ಚಿಸಿ, ಹೃದಯದ ಆರೋಗ್ಯ ಹೆಚ್ಚಿಸುತ್ತವೆ. ಎಲ್ಲಕ್ಕಿಂತ ಮುಖ್ಯವಾಗಿ ಕ್ಯಾಲರಿ ಕರಗುವ ಪ್ರಮಾಣವನ್ನು ಅಧಿಕಗೊಳಿಸುತ್ತವೆ.

May Improve Sleep Quality Fish Benefits

ನಿದ್ದೆ

ಆರೋಗ್ಯದ ವಿಷಯ ಹೇಳುವಾಗ ನಿದ್ದೆಯನ್ನುಳಿದು ಮುಂದೆ ಹೋಗುವಂತೆಯೇ ಇಲ್ಲ. ತೂಕ ಇಳಿಸುವುದು, ಫಿಟ್‌ನೆಸ್‌ ಇತ್ಯಾದಿಗಳ ವಿಷಯ ಮಾತಾಡುವಾಗ ನಿದ್ದೆಯನ್ನು ಸಂಪೂರ್ಣ ಮರೆತೇ ಬಿಟ್ಟಿರುತ್ತೇವೆ. ದೇಹದ ರಿಪೇರಿಗೆ ಅಗತ್ಯ ಅವಕಾಶವನ್ನು ನೀಡದಿದ್ದರೆ ಯಾವುದೂ ಸರಿಯಾಗಿ ಆಗುವುದಿಲ್ಲ. ಆದರೆ ದಿನಕ್ಕೆ ಕಡ್ಡಾಯ 7-8 ತಾಸು ನಿದ್ದೆ ಮಾಡಿ. ಜೊತೆಗೆ, ನಿದ್ರೆಗೆಟ್ಟರೆ ತೂಕ ಹೆಚ್ಚುತ್ತದೆ. ನಿದ್ದೆ ಇಲ್ಲದಿದ್ದರೆ ಮಾನಸಿಕ ಒತ್ತಡ ಹೆಚ್ಚುತ್ತದೆ, ಇದರಿಂದಲೂ ತೂಕ ಏರುತ್ತದೆ. ಮತ್ತೆ ತೂಕ ಇಳಿಸುವುದು ಹೇಗೆ ಸಾಧ್ಯ?

Continue Reading

ಫ್ಯಾಷನ್

Paris Fashion Week: ಪ್ಯಾರಿಸ್‌ ಹಾಟ್‌ ಕೌಚರ್‌ ಫ್ಯಾಷನ್‌ ವೀಕ್ 2024ರ ಹೈಲೈಟ್ಸ್

Paris fashion week: ಪ್ರತಿಬಾರಿಯಂತೆ ಈ ಬಾರಿಯೂ ಕೂಡ ಪ್ಯಾರಿಸ್‌ ಹಾಟ್‌ ಕೌಚರ್‌ಫ್ಯಾಷನ್‌ ವೀಕ್‌ನಲ್ಲಿ, ಸೆಲೆಬ್ರೆಟಿಗಳ ಚಿತ್ರ-ವಿಚಿತ್ರ ಡಿಸೈನರ್‌ವೇರ್‌ಗಳು ಫ್ಯಾಷನ್‌ ಪ್ರಿಯರ ಹುಬ್ಬೇರಿಸಿದವು. ಇದರೊಂದಿಗೆ ನಮ್ಮ ದೇಸಿ ಸ್ಟಾರ್‌ಗಳು ಹೇಗೆಲ್ಲಾ ಮೆರುಗು ಹೆಚ್ಚಿಸಿದರು? ಎಂಬುದರ ಬಗ್ಗೆ ಫ್ಯಾಷನ್‌ ವಿಮರ್ಶಕರು ಚಿಕ್ಕ ಚಿತ್ರಣ ನೀಡಿದ್ದಾರೆ.

VISTARANEWS.COM


on

Paris Fashion Week
ಚಿತ್ರಗಳು: ಪ್ಯಾರಿಸ್‌ ಹಾಟ್‌ ಕೌಚರ್‌ ಫ್ಯಾಷನ್‌ ವೀಕ್‌ 2024 ಚಿತ್ರಗಳು
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ಪ್ಯಾರಿಸ್‌ ಹಾಟ್‌ ಕೌಚರ್‌ ಫ್ಯಾಷನ್‌ ವೀಕ್‌ 2024 ಎಂದಿನಂತೆ (Paris fashion week) ಹೊಸ ಪ್ರಯೋಗಾತ್ಮಕ ಡಿಸೈನರ್‌ವೇರ್‌, ವೇರಬಲ್‌-ನಾನ್‌ ವೇರಬಲ್‌ ಉಡುಗೆ-ತೊಡುಗೆಗಳಿಗೆ ಸಾಕ್ಷಿಯಾಯಿತು. ದೇಶ-ವಿದೇಶದಿಂದ ಆಗಮಿಸಿದ್ದ ಸೆಲೆಬ್ರೆಟಿ ಡಿಸೈನರ್‌ಗಳು, ಬ್ರಾಂಡ್‌ ಡಿಸೈನರ್‌ಗಳು ಈ ಫ್ಯಾಷನ್‌ ವೀಕ್‌ನಲ್ಲಿ ತಮ್ಮದೇ ಆದ ಪ್ರಯೋಗಾತ್ಮಕ ಡಿಸೈನರ್‌ವೇರ್‌ಗಳನ್ನು ಯಶಸ್ವಿಯಾಗಿ ಪ್ರದರ್ಶಿಸಿದರು. ಹೌದು, ಪ್ರತಿಬಾರಿಯಂತೆ ಈ ಬಾರಿಯೂ ಕೂಡ ಪ್ಯಾರಿಸ್‌ ಫ್ಯಾಷನ್‌ ವೀಕ್‌ನಲ್ಲಿ ವಾಕ್‌ ಮಾಡಿದ ಹಾಗೂ ಕಾಣಿಸಿಕೊಂಡ ಸೆಲೆಬ್ರೆಟಿಗಳ ಚಿತ್ರ-ವಿಚಿತ್ರ ಡಿಸೈನರ್‌ವೇರ್‌ಗಳು ಜಗತ್ತಿನಾದಾದ್ಯಂತ ಕಾತುರದಿಂದ ಕಾಯುತ್ತಿದ್ದ ಫ್ಯಾಷನ್‌ ಪ್ರಿಯರ ಹುಬ್ಬೇರಿಸಿದವು. ಇದಕ್ಕೆ ನಾವೇನೂ ಕಡಿಮೆ ಇಲ್ಲ ಎಂಬಂತೆ, ನಮ್ಮ ದೇಸಿ ಸ್ಟಾರ್‌ಗಳು ಭಾಗವಹಿಸಿ ಹಿರಿಮೆ ಹೆಚ್ಚಿಸಿದರು ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕರು.

ದೇಸಿ ಸ್ಟಾರ್‌ಗಳ ಕಲರವ

ಡಿಸೈನರ್‌ ರಾಹುಲ್‌ ಮಿಶ್ರಾ ಅವರ ಡಿಸೈನರ್‌ವೇರ್‌ನಲ್ಲಿ, ಬಾಲಿವುಡ್‌ ನಟಿ ಜಾನ್ವಿ ಕಪೂರ್‌ ಮೊತ್ತ ಮೊದಲ ಬಾರಿಗೆ ಪ್ಯಾರೀಸ್‌ನ ಫ್ಯಾಷನ್‌ ವೀಕ್‌ನಲ್ಲಿ ಭಾಗವಹಿಸಿದರೇ, ನಟಿ ರಾಧಿಕಾ ಆಪ್ಟೆ ಕೂಡ ಅವರ ಡಿಸೈನರ್‌ವೇರ್‌ನಿಂದಲೇ ಎಲ್ಲರ ಗಮನಸೆಳೆದರು. ಇನ್ನು ನಟಿ ಪ್ರೀತಿ ಜಿಂಟಾ, ಐವರಿ ಒಂಬ್ರೆ ವಿನ್ಯಾಸದ ಶೋಲ್ಡರ್‌ಲೆಸ್‌ ಬಾಡಿಕಾನ್‌ ಗೌನ್‌ ಸೇರಿದಂತೆ ನಾನಾ ಡಿಸೈನರ್‌ವೇರ್‌ಗಳಲ್ಲಿ ಫ್ಯಾಷನ್‌ ವೀಕ್‌ನ ಮುಂದಿನ ಸಾಲಿನ ಅತಿಥಿಯಾಗಿ ಆಗಮಿಸಿ, ವೀಕ್ಷಿಸಿದರು. ನಟಿ ಸೋನಂ ಕಪೂರ್‌ ಕೂಡ ಇದೇ ಕೆಲಸವನ್ನು ಮಾಡಿದರು. ಒಟ್ಟಾರೆ, ಇವರೆಲ್ಲರೂ ಟ್ರೆಂಡಿ ಔಟ್‌ಫಿಟ್‌ನಲ್ಲಿ ಕಾಣಿಸಿಕೊಂಡರು. ದೇಸಿ ಔಟ್‌ಫಿಟ್‌ಗಳನ್ನು ಧರಿಸದಿದ್ದರೂ, ನಾವೇನು ಕಡಿಮೆ ಇಲ್ಲ ಎಂಬಂತೆ, ಇಂಟರ್‌ನ್ಯಾಷನಲ್‌ ಶೋನಲ್ಲಿ ಭಾಗವಹಿಸಿದ್ದು, ಜಾಗತೀಕ ಮಟ್ಟದಲ್ಲಿ ಮತ್ತೊಮ್ಮೆ ಭಾರತವೂ ಫ್ಯಾಷನ್‌ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿತು ಎನ್ನುತ್ತಾರೆ ಫ್ಯಾಷನ್ ವಿಮರ್ಶಕರಾದ ಮಿಂಚು.

Paris Fashion Week

500 ಅಡಿ ಉದ್ದದ ಡ್ರೆಸ್‌ ಟೇಲ್‌

ತಮ್ಮ ಆಲ್ಬಂನ ಪ್ರಮೋಷನ್‌ ಮಾಡಲು ವಿದೇಶಿ ಸ್ಟಾರ್‌ ಕೆಟಿ ಪೆರಿ ಆಯ್ಕೆ ಮಾಡಿಕೊಂಡದ್ದು ತಾನು ಧರಿಸಿದ ಮಿನಿ ವೆಲ್ವೆಟ್‌ ರೆಡ್‌ ಡ್ರೆಸ್‌. ಅದರ ಬಾಲದಂತಿರುವ ಟೇಲ್‌ ನ 500 ಅಡಿ ಉದ್ದದ ಡಿಸೈನ್‌ನಲ್ಲಿ ಹಾಡಿನ ಸಾಲುಗಳನ್ನು ಪ್ರಿಂಟ್‌ ಮಾಡಲಾಗಿತ್ತು. ಈ ಔಟ್‌ಫಿಟ್‌ನ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುವುದರೊಂದಿಗೆ ಹೀಗೂ ಉಂಟಾ ಎಂದೆನಿತು! ಎನ್ನುತ್ತಾರೆ ಫ್ಯಾಷನ್‌ ವಿಮರ್ಶಕ ಜಾನ್‌.

Paris Fashion Week

ಜಡೆ ಸೂಟ್‌ನ ಟೈ ಆದಾಗ

ಇನ್ನು, ನಟಿ ಸಲ್ಮಾ ಬ್ಲೈರ್‌ ತಾವು ಧರಿಸಿದ್ದ ಸೂಟ್‌ಗೆ ಟೈ ಧರಿಸುವ ಬದಲು ಆರ್ಟಿಫಿಶಿಯಲ್‌ ಹೇರ್‌ನ ಟೈ ಧರಿಸಿದ್ದು ಎಲ್ಲರ ಹುಬ್ಬೇರಿಸಿತು. ಒಟ್ಟಾರೆ, ಡಿಯೋರ್‌ ಬ್ರಾಂಡ್‌ನಿಂದಿಡಿದು ಶಾಪೊರೆಲಿಯಂತಹ ನಾನಾ ಹೈ ಫ್ಯಾಷನ್‌ ಬ್ರಾಂಡ್‌ಗಳು ಈ ಫ್ಯಾಷನ್‌ ವೀಕ್‌ನಲ್ಲಿ ಭಾಗವಹಿಸಿ, ಮುಂಬರುವ ಡಿಸೈನರ್‌ವೇರ್‌ಗಳ ಪ್ರದರ್ಶನ ಮಾಡಿದವು.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

ಇದನ್ನೂ ಓದಿ: Paris Fashion Week: ಪ್ಯಾರಿಸ್‌ ಹಾಟ್‌ ಕೌಚರ್‌ ಫ್ಯಾಷನ್‌ ವೀಕ್‌ನಲ್ಲಿ ಮೊದಲ ಬಾರಿ ಹೆಜ್ಜೆ ಹಾಕಿದ ಜಾನ್ವಿ ಕಪೂರ್‌!

Continue Reading
Advertisement
Serial Bride
ದೇಶ7 mins ago

Serial Bride: ಹಲವು ಜನರನ್ನು ಮದುವೆಯಾಗಿ ವಂಚಿಸಿದ್ದ ಮಹಿಳೆಗೆ ಎಚ್‌ಐವಿ; ಮಾಜಿ ವರಗಳಿಗಾಗಿ ಶೋಧ!

Demand to provide job reservation for Kannadigas; Massive Dharani sathyagraha on July 1 from Karave
ಕರ್ನಾಟಕ39 mins ago

Bengaluru News: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ; ಕರವೇಯಿಂದ ಜು.1ರಂದು ಬೃಹತ್ ಧರಣಿ ಸತ್ಯಾಗ್ರಹ

Attica Babu
ಕರ್ನಾಟಕ1 hour ago

Attica Babu: ಕದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

Terrorists Killed
ಪ್ರಮುಖ ಸುದ್ದಿ2 hours ago

Terrorists Killed: ಆಪರೇಷನ್‌ ಆಲ್‌ಔಟ್ ಯಶಸ್ವಿ; ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

DCM Dk shivakumar statement in bagilige bantu sarkara sevege irali sahakara programme in channapattana
ಕರ್ನಾಟಕ2 hours ago

DK Shivakumar: ಸರ್ಕಾರಿ ಅಧಿಕಾರಿಗಳು ಗುಲಾಮರೆಂದ ಮಾಜಿ ಶಾಸಕ; ಕ್ಷಮೆ ಕೇಳಿದ ಡಿ.ಕೆ. ಶಿವಕುಮಾರ್

MEIL got the opportunity to implement Kaiga nuclear power generation project
ಕರ್ನಾಟಕ3 hours ago

MEIL: ಕೈಗಾ ಪರಮಾಣು ವಿದ್ಯುತ್‌ ಉತ್ಪಾದನೆ ಯೋಜನೆ ಜಾರಿ ಅವಕಾಶ ಗಿಟ್ಟಿಸಿದ ಎಂ.ಇ.ಐ.ಎಲ್‌

DCM DK Shivakumar statement about milk price hike
ಕರ್ನಾಟಕ3 hours ago

DK Shivakumar: ಹಾಲಿನ ದರ ಕಡಿಮೆಯಾಯಿತು, ಇನ್ನೂ ಹೆಚ್ಚಿಸಬೇಕಿತ್ತು ಎಂದ ಡಿ.ಕೆ. ಶಿವಕುಮಾರ್

Union Minister HD Kumaraswamy latest statement in New Delhi
ಬೆಂಗಳೂರು3 hours ago

HD Kumaraswamy: ನನ್ನ ಹೃದಯದಲ್ಲಿ ಕೆಂಪೇಗೌಡರಿದ್ದಾರೆ, ಆಹ್ವಾನ ಬೇಕಿಲ್ಲ; ಕುಮಾರಸ್ವಾಮಿ

NEET UGC NET Exam irregularities protest demanding investigation
ರಾಯಚೂರು3 hours ago

Raichur News: ನೀಟ್, ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ; ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

kempegowda Jayanti
ಪ್ರಮುಖ ಸುದ್ದಿ3 hours ago

Kempegowda Jayanti: ಕೆಂಪೇಗೌಡ ಜಯಂತಿಗೆ ದೇವೇಗೌಡ, ಎಚ್‌ಡಿಕೆಗೆ ಸಿಗದ ಆಹ್ವಾನ; ಸರ್ಕಾರದ ವಿರುದ್ಧ ತಿರುಗಿಬಿದ್ದ ಒಕ್ಕಲಿಗರ ಸಂಘ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌