Explainer: ಬಿರುಗಾಳಿ ಎಬ್ಬಿಸ್ತಾ ಇರೋದೇಕೆ 10 minutes delivery ? - Vistara News

EXPLAINER

Explainer: ಬಿರುಗಾಳಿ ಎಬ್ಬಿಸ್ತಾ ಇರೋದೇಕೆ 10 minutes delivery ?

10 ನಿಮಿಷದಲ್ಲಿ ಫುಡ್‌ ಡೆಲಿವರಿ ಕೊಡುವ ಜೊಮ್ಯಾಟೊ ಸಂಸ್ಥೆಯ ಪ್ಲಾನ್‌, ಭಾರಿ ಚರ್ಚೆಗೆ ಕಾರಣವಾಗಿದೆ. ಸದ್ಯ ಯಾರ್ಯಾರು 10 minutes delivery ಕೊಡ್ತಿದಾರೆ? ಆಕ್ಷೇಪಗಳು ಏನೇನು? ನೋಡೋಣ,

VISTARANEWS.COM


on

10 minutes delivery
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈ ಮೊದಲು ಜೊಮ್ಯಾಟೋ ಹಾಗೂ ಸ್ವಿಗ್ಗಿಯಂಥ ಫುಡ್‌ ಡೆಲಿವರಿ ಆನ್‌ಲೈನ್‌ ಕಂಪನಿಗಳು, ಗ್ರೋಸರಿ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸೋ ಕಂಪನಿಗಳು ತಮ್ಮ ಆಪ್‌ಗಳಲ್ಲಿ ಅರ್ಧ ಗಂಟೆಯಲ್ಲಿ ಗ್ರಾಹಕರಿಗೆ ಎಲ್ಲಾ ಬಗೆಯ ಸಾಮಗ್ರಿ ಒದಗಿಸುವುದಾಗಿ ಭರವಸೆ ಕೊಡ್ತಾ ಇದ್ದವು. ಅರ್ಧ ಗಂಟೆಯಲ್ಲಿ ಗಿರಾಕಿಗಳಿಗೆ ವಸ್ತುಗಳನ್ನು ಕೊಡೋದಕ್ಕಾಗಿ ಡೆಲಿವರಿ ಬಾಯ್ಸ್‌ ಹತ್ತಾರು ಕಿಲೋಮೀಟರ್‌ ಬಹು ವೇಗದಿಂದ ಬೈಕ್‌ಗಳನ್ನು ಓಡಿಸೋದು, ಸಿಗ್ನಲ್‌ ಜಂಪ್‌ ಮಾಡ್ತಿದ್ದರು. ಕಳೆದ ಕೆಲವು ದಿನಗಳಿಂದ ಇವರ ಲೈಫು ಇನ್ನಷ್ಟು ಸ್ಪೀಡ್‌ ಆಗ್ತಾ ಇದೆ. ಡೆಲಿವರಿಗೆ ಇಳಿದಿರೋ ಕೆಲವು ಹೊಸ ಕಂಪನಿಗಳು, ಹತ್ತೇ ನಿಮಿಷದಲ್ಲಿ ನಿಮಗೆ ಗ್ರೋಸರಿಗಳನ್ನು ತಂದುಕೊಡುತ್ತೇವೆ ಎಂದು ಪ್ರಚಾರ ಶುರು ಮಾಡಿದವು. ನಮ್ಮ ಜನ ಎಷ್ಟು ಪುರುಸೊತ್ತಿಲ್ಲದವರಾಗಿದ್ದಾರೆ ಅಂದ್ರೆ, ಮನೆಯಲ್ಲಿ ಅಡುಗೆ ಮಾಡೋದು ಬಿಡಿ, ನೀವು ತಂದುಕೊಟ್ಟದ್ದನ್ನು ಬಿಡಿಸಿ ನೋಡೋಕೂ ಸಮಯವಿಲ್ಲದೆ ಬಾಯಿಗಿಡುತ್ತಿದ್ದಾರೆ. ಇಂಥವರ ನಡುವೆ ಹತ್ತು ನಿಮಿಷದಲ್ಲಿ ತಂದುಕೊಡ್ತೀನಿ ಅಂದ್ರೆ ಬೇಡ ಅನ್ನುವವರು ಇರ್ತಾರಾ? ಸಹಜವಾಗಿಯೇ ಅದೂ ಜನಪ್ರಿಯ ಆಗ್ತಾ ಇದೆ. ಈಗಾಗಲೇ ಎಸ್ಟಾಬ್ಲಿಷ್‌ ಆಗಿರೋ ಡೆಲಿವರಿ ಕಂಪನಿಗಳಿಗೂ ಈ ಹೊಸ ಪೈಪೋಟಿಗೆ ಇಳಿಯಲೇಬೇಕಾದ ಸಂದರ್ಭ ಬಂದಿದೆ. ಇದರ ನಡುವೆ ಫುಡ್‌ ಅನ್ನು ಕೂಡ ಟೆನ್‌ ಮಿನಿಟ್ಸ್‌ ಡೆಲಿವರಿ ಕೊಡೋಕೆ ಕೆಲವು ಕಂಪನಿಗಳು ಮುಂದಾಗಿವೆ.

10 minutes delivery

ಇದೆಲ್ಲ ಹೇಗೆ ಶುರು ಆಯ್ತು?
ಈ 10 ಮಿನಿಟ್ಸ್‌ ಡೆಲಿವರಿ ಅನ್ನೋ ಹವಾ ಮೊದಲು ಶುರು ಮಾಡಿದವರು ಬ್ಲಿಂಕಿಟ್‌ ಅನ್ನೋ ಕಂಪನಿ. ಗುರುಗ್ರಾಮ್‌ ಮೂಲದ ಈ ಕಂಪನಿ, ಹತ್ತೇ ನಿಮಿಷಗಳಲ್ಲಿ ಗ್ರಾಹಕರಿಗೆ ದಿನಸಿ ಸಾಮಗ್ರಿಗಳನ್ನು ತಲುಪಿಸ್ತೀವಿ ಅಂತ ಪ್ರಚಾರ ಶುರು ಮಾಡಿದರು. ಅರ್ಧ ಗಂಟೆಯಲ್ಲಿ ಬರುತ್ತಿದ್ದ ಮನೆ ಸಾಮಾನು ಹತ್ತೇ ನಿಮಿಷದಲ್ಲಿ ಸಿಗುತ್ತೆ ಅಂದ್ರೆ ಯಾರು ಬೇಡ ಅಂತಾರೆ? ಮುಂಬಯಿ ಮೂಲದ ಝೆಪ್ಟೋ (Zepto) ಅನ್ನುವ ಕಂಪನಿ ಕೂಡ ಈ ಸ್ಪರ್ಧೆಗೆ ಇಳಿಯಿತು. ಸ್ಟಾನ್‌ಫರ್ಡ್‌ ಯೂನಿವರ್ಸಿಟಿ ಡ್ರಾಪೌಟ್‌ಗಳಾದ ಇಬ್ಬರು 2020ರಲ್ಲಿ ಸ್ಥಾಪಿಸಿದ ಈ ಕಂಪನಿ ಹತ್ತು ನಿಮಿಷಗಳಲ್ಲಿ ಗ್ರೋಸರಿ ಹಾಗೂ ರೆಡಿಮೇಡ್‌ ಫುಡ್‌ ಕೊಡುವ ಕಂಪನಿಯಾಗಿ ಜನಪ್ರಿಯವಾಯಿತು. ಇದು ಮುಂಬಯಿ ಮಹಾನಗರದಲ್ಲಿ ಟೀ, ಕಾಫಿ, ಬಿಸ್ಕಿಟ್‌, ಸ್ಯಾಂಡ್‌ವಿಚ್‌, ಪ್ಯಾಕೇಜ್ಡ್‌ ಸ್ನ್ಯಾಕ್ಸ್‌ ಮತ್ತು ಪ್ಯಾಕೇಜ್ಡ್‌ ಡ್ರಿಂಕ್‌ಗಳನ್ನು ಡೆಲಿವರಿ ಮಾಡೋಕೆ ಶುರುಮಾಡಿತು. ಬಹುಬೇಗ ಈ ಟ್ರೆಂಡ್‌ ಜನಕ್ಕೆ ಇಷ್ಟವಾಯಿತು. ಪಿಜ್ಝಾ ಡೆಲಿವರಿ ಮಾಡುವ ಡೊಮಿನೋಸ್‌ ಪಿಜ್ಝಾ ಕಂಪನಿ, ತಾನು ಡೆಲಿವರಿ ಸಮಯವನ್ನು 30 ನಿಮಿಷಗಳಿಂದ 20 ನಿಮಷಕ್ಕೆ ಇಳಿಸುವುದಾಗಿ ಕಳೆದ ವರ್ಷವೇ ಹೇಳಿತ್ತು.

ಇದನ್ನು ನೋಡಿ ಇದೇ ವ್ಯವಹಾರದಲ್ಲಿರೋ ಇತರ ಹಲವು ಕಂಪನಿಗಳಿಗೆ ದಿಗಿಲು ಶುರು ಆಯಿತು. ತಾವೂ ಕೂಡ ಈ ಪೈಪೋಟಿಗೆ ಇಳಿಯದೇ ಹೋದರೆ ಗ್ರಾಹಕರು ತಮ್ಮ ಕೈ ಬಿಡಬಹುದು ಎಂದು ಅನಿಸಿದ್ದೇ ತಡ, ಇತರ ಕಂಪನಿಗಳೂ ಒಂದೊಂದಾಗಿ ಹತ್ತು ನಿಮಿಷದ ಪೈಪೋಟಿಗೆ ಇಳಿದವು. ಸ್ವಿಗ್ಗಿ ಕಂಪನಿಯ ಇನ್‌ಸ್ಟಂಟ್‌ ಸರ್ವಿಸ್‌ಬೆಂಗಳೂರು ಸೇರಿದಂತೆ ಹಲವಾರು ನಗರಗಳಲ್ಲಿ ಹದಿನೈದರಿಂದ ಮೂವತ್ತು ನಿಮಿಷದ ಒಳಗೆ ದಿನಸಿ ವಸ್ತುಗಳನ್ನು ಕೊಡಲು ಆರಂಭ ಮಾಡಿತು. ಟಾಟಾ ಡಿಜಿಟಲ್‌ ಮಾಲಿಕತ್ವದ ಬಿಗ್‌ಬಾಸ್ಕೆಟ್‌ ಕಂಪನಿ ತನ್ನ ಬಿಬಿ ಆಪ್‌ ಮೂಲಕ ಕೇವಲ ಹತ್ತರಿಂದ ಇಪ್ಪತ್ತು ನಿಮಿಷದಲ್ಲಿ ಗ್ರೋಸರಿಗಳನ್ನು ಕೊಡೋಕೆ ಶುರು ಮಾಡಿತು. ಟ್ರಾಫಿಕ್‌ ಜಾಮ್‌ ಮುಂತಾದ ಕಾರಣಗಳಿಗಾಗಿ ನಿಗದಿತ ಸಮಯದಲ್ಲಿ ವಸ್ತುಗಳನ್ನು ತಲುಪಿಸೋಕೆ ಸಾಧ್ಯವಾಗದೇ ಇದ್ದಲ್ಲಿ ಶೇ.5ರಷ್ಟು ಅಮೌಂಟ್‌ ವಾಪಸ್‌ ಕೊಡುವುದಾಗಿ ಹೇಳಿತು. ಇದರ ಜೊತೆಜೊತೆಗೇ ಭವಿಷ್‌ ಅಗರ್‌ವಾಲ್‌ ಅವರ ಓಲಾ ಕೂಡ, ಓಲಾ ಡ್ಯಾಶ್‌ (0la dash) ಅನ್ನುವ ವಿಭಾಗ ಶುರು ಮಾಡಿ ಕ್ವಿಕ್‌ ಆಗಿ ಗ್ರೋಸರಿ ತಲುಪಿಸೋಕೆ ಶುರು ಮಾಡಿತು.

ಕ್ಯೂ ಕಾಮರ್ಸ್‌
ಇದೆಲ್ಲದರ ಹಿನ್ನೆಲೆಯಲ್ಲಿ ಹೀಗೆ ಕ್ವಿಕ್‌ ಆಗಿ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಗೆ ಕ್ಯೂ ಕಾಮರ್ಸ್‌ ಅಂತ ಕೂಡಾ ಕರೆಯಲಾಯಿತು. ಈಗ ಹೆಚ್ಚಿನ ಎಲ್ಲ ಆನ್‌ಲೈನ್‌ ಡೆಲಿವರಿ ಸಂಸ್ಥೆಗಳು ತಮ್ಮದೇ ಆದ ಕ್ಯೂ ಕಾಮರ್ಸ್‌ ವಿಭಾಗವನ್ನು ಹೊಂದಿವೆ.

ಇದೆಲ್ಲದರ ನಡುವೆ ಇನ್ನೊಂದು ಬಿರುಗಾಳಿಯನ್ನು ಈಗ ಆರಂಭಿಸಿರೋದು ಜೊಮ್ಯಾಟೋ ಕಂಪನಿ. ತಾನು ಹತ್ತು ನಿಮಿಷದಲ್ಲಿ ಫುಡ್‌ ಡೆಲಿವರಿ ಕೊಡುವುದಾಗಿ ಈ ಕಂಪನಿ ಪ್ರಚಾರ ಮಾಡಿದೆ. ಝೆಪ್ಟೋಗಿಂತ ಈ ವಿಚಾರದಲ್ಲಿ ತುಸು ಮುಂದೆ ಹೋಗಿರೋ ಜೊಮ್ಯಾಟೋ, ರೆಡಿಮೇಡ್‌ ಪ್ಯಾಕೇಜ್‌ ಫುಡ್‌ಗಳ ಜೊತೆಗೆ ಕೆಲವು ಫ್ರೆಶ್‌, ಬಿಸಿಬಿಸಿ ಆಹಾರಗಳನ್ನು ಆಯ್ದ ಔಟ್‌ಲೆಟ್‌ಗಳಿಂದ ಗ್ರಾಹಕರಿಗೆ ವಿತರಿಸುವುದಾಗಿ ಹೇಳಿಕೊಂಡಿದೆ. ಉದಾಹರಣೆಗೆ ಬಿರಿಯಾನಿ, ಮೋಮೋಸ್‌, ಇನ್‌ಸ್ಟಂಟ್‌ ನ್ಯೂಡಲ್ಸ್‌, ಬ್ರೆಡ್‌ ಆಮ್ಲೆಟ್‌ ಮುಂತಾದ ಕೆಲವು ನಿರ್ದಿಷ್ಟ ಆಹಾರಗಳನ್ನು ಹತ್ತೇ ನಿಮಿಷದಲ್ಲಿ ಆಯ್ದ ರೆಸ್ಟೋರೆಂಟ್‌ಗಳಿಂದ ತಾನು ತರಿಸಿಕೊಡ್ತೀನಿ ಅಂತ ಜೊಮ್ಯಾಟೋ ಗ್ರಾಹಕರಿಗೆ ವಾಗ್ದಾನ ಮಾಡಿದೆ.

ತರಾತುರಿ ಏಕೆ?
ಹತ್ತೇ ನಿಮಿಷದಲ್ಲಿ ಡೆಲಿವರಿ ಕೊಡಬೇಕು ಎಂಬ ಹಠಕ್ಕೆ ಬಿದ್ದಿರೋದ್ಯಾಕೆ ಈ ಕಂಪನಿಗಳು? ಇದರಿಂದ ಅವುಗಳಿಗೆ ಏನು ಲಾಭ? ಇಷ್ಟೊಂದು ಅವಸರದಲ್ಲಿ ಗುಣಮಟ್ಟದ ಸೇವೆ ಕೊಡೋಕೆ ಆಗುತ್ತಾ? ಈ ಎಲ್ಲ ಪ್ರಶ್ನೆಗಳೂ ಇವೆ.

ಮುಖ್ಯವಾಗಿ, ಮೆಟ್ರೋ ನಗರದಲ್ಲಿನ ಬದುಕು ಇಂದು ತುಂಬಾ ಫಾಸ್ಟಾಗಿ ನಡೆಯುತ್ತಿದೆ. ಇಪ್ಪತ್ತನಾಲ್ಕು ಗಂಟೆಯೂ ಕೆರಿಯರ್‌ ಉದ್ಯೋಗ ಅಂತ ಬ್ಯುಸಿಯಾಗಿರುವ ಮಂದಿಗೆ ಅಡುಗೆ ಮಾಡಲು, ಒಟ್ಟಿಗೆ ಕುಳಿತು ಊಟಾ ಮಾಡಲು ಸಮಯ ಇಲ್ಲ. ಗ್ರೋಸರಿ ಶಾಪ್‌ಗೆ ಹೋಗಿ ಶಾಪಿಂಗ್‌ ಮಾಡಲೂ ಸಮಯವಿಲ್ಲ. ಇದರಿಂದಾಗಿ ದಿನಸಿ ಸಾಮಗ್ರಿಗಳ ಡೋರ್‌ ಡೆಲಿವರ್‌ ಆಪ್‌ಗಳು ತುಂಬಾ ಬೇಗನೆ ಜನಪ್ರಿಯತೆ ಗಳಿಸಿದವು. ನಂತರದ ಹಂತದಲ್ಲಿ ಬಂದ ಫುಡ್‌ ಡೆಲಿವರಿ ಆಪ್‌ಗಳಂತೂ ಮನೆಯಲ್ಲೇ ರೆಸ್ಟೋರೆಂಟ್‌ ಫುಡ್‌ ತಿನ್ನಬಯಸುವವರಿಗೆ ಹಬ್ಬವೇ ಆಯ್ತು. ಸಾಮಾನ್ಯವಾಗಿ ಎಲ್ಲ ಫುಡ್‌ ಡೆಲಿವರಿ ಆಪ್‌ಗಳೂ ಅರ್ಧ ಗಂಟೆಯಿಂದ ಮುಕ್ಕಾಲು ಗಂಟೆಯಲ್ಲಿ ಗ್ರಾಹಕರಿಗೆ ಆಹಾರ ತಲುಪಿಸುತ್ತವೆ. ಆರ್ಡರ್‌ ರಿಸೀವ್‌ ಮಾಡಿ, ಅದನ್ನು ಡೆಲಿವರಿ ಬಾಯ್‌ಗೆ ನಿಗದಿ ಮಾಡಿ, ಆತ ರೆಸ್ಟೋರೆಂಟ್‌ ತಲುಪಿ, ಅಲ್ಲಿ ಆರ್ಡರ್‌ ಆಗಿರುವ ಆಹಾರ ತಯಾರಾಗುವವರೆಗೆ ಕಾದು, ಅದನ್ನು ಗಾಡಿಗೆ ಏರಿಸಿಕೊಂಡು ವಾಹನಗಳು ತುಂಬಿರೋ ನಮ್ಮ ನಗರಗಳ ರಸ್ತೆಗಳಲ್ಲಿ ಬ್ಯಾಲೆನ್ಸ್‌ ಮಾಡ್ತಾ ಅದನ್ನು ಗ್ರಾಹಕರ ಮನೆ ಹುಡುಕಿ ಅದನ್ನು ತಲುಪಿಸೋ ಹಂತದವರೆಗೆ ಕನಿಷ್ಠ ಅರ್ಧ ಗಂಟೆಯಾದರೂ ಹೋಗುತ್ತೆ.

ಇದನ್ನೂ ಓದಿ: Explainer: Sex work ಲೀಗಲ್‌ ಅಂದರೆ ಏನರ್ಥ?

ಹತ್ತು ನಿಮಿಷದಲ್ಲಿ ಹೇಗೆ ತಲುಪಿಸ್ತಾರೆ?
ಯಾವುದೆ ನಗರದಲ್ಲಿ ಹೈ ಆರ್ಡರ್‌ಡೆನ್ಸಿಟಿ ಏರಿಯಾಗಳು ಅಂತ ಇರುತ್ತವೆ. ಇಲ್ಲಿ ಕೆಲವು ಹೊತ್ತಿನಲ್ಲಿ ಕೆಲವು ಅಪಾರ್ಟ್‌ಮೆಂಟ್‌ಗಳು ಅಥವಾ ವಸತಿ ಪ್ರದೇಶಗಳಲ್ಲಿ ಕೆಲವು ನಿರ್ದಿಷ್ಟ ರೆಸ್ಟೋರೆಂಟ್‌ಗಳಿಂದ ಫುಡ್‌ ತರಿಸಿಕೊಳ್ಳುವವರು ಹೆಚ್ಚು ಇರುತ್ತಾರೆ. ಇಂಥ ಸಂದರ್ಭದಲ್ಲಿ ಆ ಸ್ಥಳದಲ್ಲಿ ಕಂಪನಿ ಹೆಚ್ಚಿನ ಡೆಲಿವರಿ ಬಾಯ್‌ಗಳನ್ನು ನಿಯೋಜಿಸಿದ್ದರೆ ಅಲ್ಲಿ ಟೆನ್‌ ಮಿನಿಟ್ಸ್‌ ಡೆಲಿವರಿ ಕೊಡೋದು ಸುಲಭ. ಆದರೆ ಇನ್ನ ಕೆಲವು ಪ್ರದೇಶಗಳಿಗೆ ಸರಿಯಾದ ರಸ್ತೆಗಳು ಇರೋದಿಲ್ಲ, ಸಿಗ್ನಲ್‌ಗಳು ಹೆಚ್ಚು ಇರುತ್ತವೆ, ಟ್ರಾಫಿಕ್‌ ಜಾಮ್‌ ಇರುತ್ತದೆ- ಇಂಥ ಸಂದರ್ಭದಲ್ಲಿ ಟೆನ್‌ ಮಿನಿಟ್ಸ್‌ ಡೆಲಿವರಿ ಸಾಧ್ಯವಿಲ್ಲ. ಇದನ್ನು ಕಂಪನಿಗಳು ಸ್ಪಷ್ಟವಾಗಿ ತಮ್ಮ ವೆಬ್‌ಸೈಟ್‌ಗಳಲ್ಲಿ ಹೇಳಿವೆ. ಕೆಲವು ಕಂಪನಿಗಳು, ಅನಿವಾರ್ಯ ಕಾರಣಗಳಿಂದ ತಡವಾದರೆ ಆರ್ಡರ್‌ನಲ್ಲಿ ಕೆಲವು ಪರ್ಸೆಂಟ್‌ ಹಣವನ್ನು ಮರಳಿ ಗ್ರಾಹಕನಿಗೆ ಕೊಡುತ್ತವೆ. ಇನ್ನು ಕೆಲವು ಫ್ರೀ ಡೆಲಿವರಿ ಕೊಡೋದೂ ಉಂಟು.

ಡೆಲಿವರಿ ಬಾಯ್ಸ್‌ ಸಾಮಾನ್ಯವಾಗಿ ಈ ಕಂಪನಿಗಳ ಕಾಯಂ ಕೆಲಸಗಾರರು ಆಗಿರುವುದಿಲ್ಲ. ಇವರು ಯಾವುದೇ ಆರ್ಡರ್‌ ಅನ್ನು ಪರಿಶೀಲಿಸಿ ಅಂಗೀಕರಿಸಬಹುದು. ತಾನು ಆರ್ಡರ್‌ ಕಲೆಕ್ಟ್‌ ಮಾಡಿಕೊಳ್ಳಬೇಕಾದ ರೆಸ್ಟೋರೆಂಟ್‌ ಹಾಗೂ ಸಾಗಬೇಕಾದ ದಾರಿ, ತಲುಪಿಸಬೇಕಾದ ಗುರಿ, ಇದೆಲ್ಲವನ್ನೂ ನೋಡಿ, ನಿಗದಿತ ಸಮಯದಲ್ಲಿ ಅದನ್ನು ತಲುಪಿಸಬಹುದು ಎನಿಸಿದರೆ ಆರ್ಡರ್ ಅನ್ನು ತಾನು ಪಡೆದುಕೊಳ್ಳಬಹುದು. ಅಥವಾ ನಿರಾಕರಿಸಬಹುದು. ಆದರೆ, ಹೀಗೆ ಪದೇ ಪದೇ ನಿರಾಕರಿಸುವ ಡೆಲಿವರಿ ಬಾಯ್‌ಗಳು ಸಂಬಳ ಕಡಿತ, ಇನ್ಸೆಂಟಿವ್‌ಗಳ ಕೊರತೆ, ನೆಗೆಟಿವ್‌ ರಿಮಾರ್ಕ್‌ಗಳನ್ನು ಎದುರಿಸಬೇಕಾಗುತ್ತೆ.

ಕ್ಯೂ ಕಾಮರ್ಸ್‌ ಕಂಪನಿಗಳು ಟೆನ್‌ ಮಿನಿಟ್ಸ್‌ ಡೆಲಿವರಿ ಹಿಂದೆ ಬಿದ್ದಿರೋದನ್ನು ನೋಡಿ ಜನ ಮಿಶ್ರ ರೀತಿಯಲ್ಲಿ ಪ್ರತಿಕ್ರಿಯಿಸ್ತಾ ಇದ್ದಾರೆ. ಬಹುತೇಕ ಮಂದಿ ಇದೊಂದು ಗಿಮಿಕ್‌ ಅಂತಾರೆ. ಇನ್ನಷ್ಟು ಮಂದಿ ಇದೊಂದು ಇನ್ನೋವೇಟಿವ್‌ ಐಡಿಯಾ, ಇದರಿಂದ ಮುಂದಿನ ದಿನಗಳಲ್ಲಿ ಒಟ್ಟಾರೆ ಕ್ಯೂ ಕಾಮರ್ಸ್‌ ಚಿತ್ರಣವೇ ಬದಲಾಗುತ್ತೆ ಅಂತ ಮಾತಾಡ್ತಾರೆ. ಬದಲಾಗ್ತಿರೋದೂ ನಿಜ. ಟರ್ಕಿಯಲ್ಲಿ ಗೆಟಿರ್‌, ಗೋರಿಲ್ಲಾಸ್‌, ಬ್ರಿಟನ್‌ನಲ್ಲಿ ದಿಜಾ, ಅಮೆರಿಕದಲ್ಲಿ ಗೋಪಫ್‌ ಮುಂತಾದ ಕಂಪನಿಗಳು ಈ ವಿಷಯದಲ್ಲಿ ಒಟ್ಟಾರೆ ಚಿತ್ರಣವನ್ನೇ ಬದಲಾಯಿಸಿವೆ. ಭಾರತದಲ್ಲಿ ಡಂಜೋ ಸೇರಿದಂತೆ ಹಲವಾರು ಡೆಲಿವರಿ ಕಂಪನಿಗಳು ತಮ್ಮ ವೇರ್‌ಹೌಸ್‌ಗಳನ್ನು ನಗರದ ಅಲ್ಲಲ್ಲಿ ತೆರೆಯುತ್ತಿವೆ ಹಾಗೂ ಸರ್ವಿಸ್‌ ಅನ್ನು ಸ್ಪೀಡ್‌ ಮಾಡುತ್ತಿವೆ. ಅಗತ್ಯವಾದ ಎಲ್ಲ ತಂತ್ರಜ್ಞಾನವನ್ನೂ ಅಳವಡಿಸಲಾಗ್ತಾ ಇದೆ.

ಮತ್ಯಾಕೆ ಕೆಲವರು ಸಿಟ್ಟಾಗಿದ್ದಾರೆ?
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ ಸಂಸದೆ ಮೋಹುವಾ ಮೋಯಿತ್ರಾ ಅವರು ಈ ಬಗ್ಗೆ ಅಸಮಾಧಾನದಿಂದ ಟ್ವೀಟ್‌ ಮಾಡಿದ್ದಾರೆ. ಈ ಟೆನ್‌ ಮಿನಿಟ್ಸ್‌ ಡೆಲಿವರಿ ಅನ್ನೋದು ಕಂಪನಿಗಳು ಮಾರುಕಟ್ಟೆ ಗಳಿಸಿಕೊಳ್ಳೋಕೆ ಮಾಡಿರೋ ಗಿಮಿಕ್‌ ಅಲ್ಲದೇ ಮತ್ತೇನಲ್ಲ. ಇದರಿಂದ ಡೆಲಿವರಿ ಬಾಯ್‌ಗಳಿಗೆ ಒತ್ತಡ ಉಂಟಾಗುತ್ತೆ, ಅವರು ಅತಿವೇಗದಿಂದ ಡ್ರೈವ್‌ ಮಾಡೋದರಿಂದಾಗಿ ಅಪಘಾತ ಇತ್ಯಾದಿ ಉಂಟಾಗಬಹುದು. ನಾನು ಇದನ್ನು ಸಂಸತ್‌ನಲ್ಲಿ ಪ್ರಸ್ತಾಪ ಮಾಡ್ತೀನಿ ಅಂತ ಹೇಳಿದ್ದಾರೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಸಾಕಷ್ಟು ಇಂಟರೆಸ್ಟಿಂಗ್‌ ಆದ ವಾದ ವಿವಾದ ನಡೆದಿದೆ.

ಇನ್ನಷ್ಟು ಓದಿಗಾಗಿ: ವಿಸ್ತಾರ Explainer: ಕೇಂದ್ರ ಸರಕಾರ ಪೆಟ್ರೋಲ್‌, ಡೀಸೆಲ್‌ ಮೇಲೆ ಅಬಕಾರಿ ಸುಂಕವನ್ನು ಗಣನೀಯ ಇಳಿಸಿದ್ದೇಕೆ?

ಹತ್ತು ನಿಮಿಷದಲ್ಲಿ ನಿಮಗೆ ಫುಡ್‌ ಡೆಲಿವರಿ ಕೊಡೋಕೆ ಸಾಧ್ಯ ಇದೆ ಅಂತಾದ್ರೆ ಸಾಯ್ತಾ ಇರೋರ ಬಳಿಗೆ ಆಂಬುಲೆನ್ಸ್‌ ತಲುಪಿಸೋಕೆ ಸಾಧ್ಯ, ಮೆಡಿಸಿನ್‌ ತಲುಪಿಸೋಕೆ ಸಾಧ್ಯ ಆಗಬೇಕು. ಈಗ ನಮಗೆ ಕಾಣಬರ್ತಾ ಇರೋದೇನೆಂದರೆ, ಬೆಂಗಳೂರೂ ಸೇರಿದಂತೆ ಹಲವಾರು ನಗರಗಳಲ್ಲಿ ಆಗ್ತಿರೋ ಅಪಘಾತಗಳಲ್ಲಿ ಡೆಲಿವರಿ ಬಾಯ್‌ಗಳು ಸಾಯ್ತಾ ಇದಾರೆ. ಯಾವಾಗ್ಲೂ ದೊಡ್ಡ ವಾಹನ ಮತ್ತು ಡೆಲಿವರಿ ಬಾಯ್‌ಗಳ ಪುಟ್ಟ ಬೈಕ್‌ಗಳ ನಡುವೆ ಉಂಟಾಗೋ ಆಕ್ಸಿಡೆಂಟ್‌ನಲ್ಲಿ ಡೆಲಿವರಿ ಬಾಯ್‌ಗಳೇ ಜೀವ ಕಳೆದುಕೊಳ್ಳೋದು, ಅವರೇ ಕೈಕಾಲು ಮುರಿದುಕೊಳ್ಳೋದು. ಇದಕ್ಕೆ ಕಾರಣ ಅನಾವಶ್ಯಕ ನಾವು ಅವರ ಮೇಲೆ ಹೇರ್ತಾ ಇರುವಂಥ ಸಮಯದ ಒತ್ತಡ. ಬೇಗನೆ ಸಾಮಗ್ರಿ ತಲುಪಿಸಬೇಕು ಎಂಬ ಒತ್ತಡವನ್ನು ಅತ್ತ ಗ್ರಾಹಕರು ಮತ್ತು ಇತ್ತ ಕಂಪನಿ ಅವರ ಮೇಲೆ ಹೇರುವುದರಿಂದ, ಮಿತಿ ಮೀರಿದ ಸ್ಪೀಡಿನಲ್ಲಿ ಗಾಡಿ ಓಡಿಸುವುದು, ಸಿಗ್ನಲ್‌ಗಳನ್ನು ಲೆಕ್ಕಿಸದೆ ಜಂಪ್‌ ಮಾಡುವುದು, ಅಪಾಯಕಾರಿಯಾಗಿ ಓವರ್‌ಟೇಕ್‌ ಮಾಡುವುದು ಮುಂತಾದವುಗಳನ್ನು ಕಾಣ್ತೇವೆ. ಇದು ಇವರ ಮೇಲೆ ದೈಹಿಕ ಹಾಗೂ ಮಾನಸಿಕ ದುಷ್ಪರಿಣಾಮ ಬೀರ್ತಿದೆ. ಮಾತ್ರ ಅಲ್ಲ, ಅದು ಟ್ರಾಫಿಕ್‌ನಲ್ಲಿ ಇರೋ ಇತರರಿಗೂ ಅಪಾಯ. ಯಾರದೋ ಅವಸರಕ್ಕೆ ಇನ್ಯಾರೋ ಜೀವ ಕಳೆದುಕೊಳ್ಳೋದು ಎಷ್ಟು ಸರಿ ಅಂತ ಹೆಚ್ಚಿನವರು ವಾದಿಸಿದ್ದಾ.

ಜೊತೆಗೆ, ಹತ್ತೇ ನಿಮಿಷದಲ್ಲಿ ನಮಗೆ ಸಿಗೋ ಆಹಾರ ಫ್ರೆಶ್‌ ಆಗಿರುತ್ತೆ ಅಂತ ಏನು ಗ್ಯಾರಂಟಿ? ಮೊದಲೇ ತಯಾರಿಸಿಟ್ಟಿರೋ ಆಹಾರವನ್ನು ನಮಗೆ ತಲುಪಿಸೋ ಕೆಲಸವನ್ನು ಮಾತ್ರ ಈ ಕಂಪನಿಗಳು ಮಾಡ್ತಾ ಇವೆಯಾ ಅಂತ ಕೂಡ ಕೇಳಿದ್ದಾರೆ. ಇನ್ನು ರೆಸ್ಟೋರೆಂಟ್‌ಗಳು ಕೂಡ ಈ ವಿಚಾರದಲ್ಲಿ ಪಾಸಿಟಿವ್‌ ಅಭಿಪ್ರಾಯ ಹೊಂದಿಲ್ಲ. ಹತ್ತೇ ನಿಮಿಷದಲ್ಲಿ ಆಹಾರ ತಲುಪಿಸ್ಬೇಕು ಅಂದ್ರೆ ಆರ್ಡರ್‌ ಬಂದ ಐದೇ ನಿಮಿಷದ ಒಳಗೆ ಆಹಾರ ರೆಡಿ ಮಾಡಬೇಕು. ಇದು ಆಗೋ ಹೋಗೋ ಮಾತಲ್ಲ, ಇದರಿಂದ ಆಹಾರದ ಗುಣಮಟ್ಟ ಕಾಪಾಡೋಕೆ ಆಗಲ್ಲ, ಹಾಗಾದರೆ ರೆಸ್ಟೋರೆಂಟಿಗೆ ಕೆಟ್ಟ ಹೆಸರು ಬರುತ್ತೆ- ಅಂತ ರೆಸ್ಟೋರೆಂಟ್‌ ಮಾಲಿಕರು ಅಭಿಪ್ರಾಯಪಡುತ್ತಾರೆ.

ಡೆಲಿವರಿ ಬಾಯ್‌ಗಳಿಗೂ ಸಮಸ್ಯೆ

ಇದಲ್ಲದೆ ಡೆಲಿವರಿ ಬಾಯ್‌ಗಳಿಗೆ ಸಂಬಂಧಪಟ್ಟಂತೆ ಇತರ ಸಮಸ್ಯೆಗಳೂ ಇವೆ. ಇವರಿಗೆ ಈಗ ಕೊಡಲಾಗ್ತಿರೋ ಸಂಬಳ ಬಹಳ ಕಡಿಮೆ ಇದೆ. ಇವರ ಡ್ಯೂಟಿ ಸಮಯ ಒಂಬತ್ತೂವರೆ ಗಂಟೆಗಿಂತ್ಲೂ ಹೆಚ್ಚು. ದಿನಕ್ಕೆ ಹದಿನಾರರಿಂದ ಮೂವತ್ತು ಡೆಲಿವರಿಗಳವರೆಗೂ ಅವರಿಂದ ಮಾಡಿಸಲಾಗ್ತಿದೆ. ಮೂವತ್ತು ಡೆಲಿವರಿ ಮಾಡಿದರೆ ಸಿಗೋದು 1,900 ರೂಪಾಯಿ ಮಾತ್ರ. ಈ ಗುರಿಯನ್ನು ಸಾಧಿಸೋಕೆ ಕೆಲವರು 24 ಗಂಟೆ ದುಡೀತಾರೆ. ಈಗ ಟೆನ್‌ ಮಿನಿಟ್ಸ್‌ ಡೆಲಿವರಿ ಟಾರ್ಗೆಟ್‌ಗಳನ್ನು ತೆಗೆದುಕೊಂಡ್ರೆ ಇನ್ನೂ ಹೆಚ್ಚಿನ ದುಡಿಮೆ ಮಾಡಬಹುದು ಎಂಬ ಆಮಿಷವೂ ಹೊಸದಾಗಿ ಹುಟ್ಟಿಕೊಂಡಿದೆ. ಆದ್ರೆ ಇವರು ಅಪಘಾತಕ್ಕೆ ಒಳಗಾಗಿ ಆಸ್ಪತ್ರೆ ಸೇರಬೇಕಾಗಿ ಬಂದ್ರೆ, ಅವರ ಕಂಪನಿ ಅವರಿಗೆ ಯಾವುದೇ ನೆರವು ಕೊಡಲ್ಲ. ಇವರಿಗೆ ಇನ್ಶೂರೆನ್ಸ್‌ ಇತ್ಯಾದಿ ಸೌಲಭ್ಯವಿಲ್ಲ.

ಹಾಗಿದ್ರೆ ಇದಕ್ಕೆ ಪರಿಹಾರ ಏನು? ಅನಾರೋಗ್ಯಕರವಾದ ಟೆನ್‌ ಮಿನಿಟ್ಸ್‌ ಡೆಲಿವರಿಯನ್ನು ಕೈಬಿಡೋದು ಎಲ್ಲರ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು ಅಂತ ಕೆಲವರು ಹೇಳಿದ್ರೆ, ಕ್ಯೂ ಕಾಮರ್ಸ್‌ ಈಗಷ್ಟೇ ನಮ್ಮ ದೇಶದಲ್ಲಿ ಅಭಿವೃದ್ಧಿಯಾಗ್ತಿದೆ. ನಿಧಾನವಾಗಿ ಇಲ್ಲಿ ಗ್ರಾಹಕನಿಗೆ ಅನುಕೂಲವಾದ ಒಳ್ಳೇ ರೂಢಿಗಳು ಉಳಿದು, ಉಳಿದದ್ದು ಹೊರಟುಹೋಗ್ತವೆ ಅಂತ ಇನ್ನು ಕೆಲವರು ಹೇಳ್ತಾರೆ. ನೀವೇ ನಿರ್ಧರಿಸಿ, ಮುಂದಿನ ಸಲ ಫುಡ್‌ ಆರ್ಡರ್‌ ಮಾಡುವಾಗ ಹತ್ತೇ ನಿಮಿಷದ ಆಯ್ಕೆ ಮಾಡುತ್ತೀರಾ? ಯೋಚಿಸಿ ನಿರ್ಧರಿಸಿ.

ಇದನ್ನೂ ಓದಿ: ವಿಸ್ತಾರ Explainer: ಅಮೆರಿಕದ ಯುವಕರೇಕೆ ಕಿಲ್ಲರ್ ಆಗುತ್ತಿದ್ದಾರೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

EXPLAINER

Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

Dubai Airport: ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

VISTARANEWS.COM


on

Dubai Airport
Koo

ನವದೆಹಲಿ: 2.92 ಲಕ್ಷ ಕೋಟಿ ರೂಪಾಯಿ (35 ಬಿಲಿಯನ್ ಡಾಲರ್) ವೆಚ್ಚದಲ್ಲಿ 400 ಗೇಟ್ ಗಳು ಮತ್ತು ಐದು ಸಮಾನಾಂತರ ರನ್ ವೇಗಳಿರುವ ವಿಶ್ವದ ಅತ್ಯಂತ ದೊಡ್ಡ ಏರ್​ಪೋರ್ಟ್​​ ನಿರ್ಮಾಣ (Dubai Airport) ಮಾಡುವುದಾಗಿ ದುಬೈ ಆಡಳಿತ ಭಾನುವಾರ ಪ್ರಕಟಿಸಿದೆ. ಅದಕ್ಕೆ ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ ಎಂದು ಹೆಸರಿಡುವುದಾಗಿ ಹೇಳಿದೆ.

“ಇಂದು, ನಾವು ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪ್ರಯಾಣಿಕರ ಟರ್ಮಿನಲ್​ಗಳ ವಿನ್ಯಾಸಗಳನ್ನು ಅನುಮೋದಿಸಿದ್ದೇವೆ. ದುಬೈ ಏವಿಯೇಷನ್ ಕಾರ್ಪೊರೇಷನ್​​ನ ಕಾರ್ಯತಂತ್ರದ ಭಾಗವಾಗಿ 128 ಬಿಲಿಯನ್ ಡಾಲರ್ ವೆಚ್ಚದಲ್ಲಿ ಕಟ್ಟಡದ ನಿರ್ಮಾಣವನ್ನು ಪ್ರಾರಂಭಿಸಿದ್ದೇವೆ” ಎಂದು ದುಬೈ ಆಡಳಿತಗಾರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರಧಾನಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಪ್ರಕಟಿಸಿದ್ದಾರೆ.

“ಅಲ್ ಮಕ್ತೌಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತಿದೊಡ್ಡ ಸಾಮರ್ಥ್ಯವನ್ನು ಹೊಂದಿರುತ್ತದೆ, 2.6 ಕೋಟಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸಲಿದೆ. ಇದು ಪ್ರಸ್ತುತ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗಾತ್ರಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ. ಮುಂಬರುವ ವರ್ಷಗಳಲ್ಲಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎಲ್ಲಾ ಕಾರ್ಯಾಚರಣೆಗಳನ್ನು ಅದಕ್ಕೆ ವರ್ಗಾಯಿಸಲಾಗುವುದು” ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಈ ವಿಮಾನ ನಿಲ್ದಾಣ ವಿಶ್ವದ ಅತಿ ದೊಡ್ಡ ನಿಲ್ದಾಣವಾಗುವ ವೇಳೆ ಅಲ್ಲಿ ಇರಬಹುದಾದ ಕೆಲವೊಂದು ಸೌಲಭ್ಯಗಳು ಹಾಗೂ ಇನ್ನಿತರ ಮಾಹಿತಿಗಳ ಬಗ್ಗೆ ಕುತೂಹಲ ಸೃಷ್ಟಿಯಾಗಿದೆ. ಆ ಕುರಿತು ಇಲ್ಲಿದೆ ಸಂಕ್ಷಿಪ್ತ ವಿವರ ಇಲ್ಲಿದೆ.

ಸಾಮರ್ಥ್ಯ ಎಷ್ಟು?


ಅಲ್ ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಹೆಚ್ಚು ಸಾಮರ್ಥ್ಯ ಹೊಂದಿರುವ ವಿಮಾನ ನಿಲ್ದಾಣವಾಗಲಿದೆ. ವಾರ್ಷಿಕವಾಗಿ 2.6 ಕೋಟಿ (260 ಮಿಲಿಯನ್) ಪ್ರಯಾಣಿಕರು ಈ ವಿಮಾನದ ಮೂಲಕ ಪ್ರಯಾಣ ಮಾಡಲಿದ್ದಾರೆ.

ಗಾತ್ರ ಎಷ್ಟು?
ಇದು ಪ್ರಸ್ತುತ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಂತ ಐದು ಪಟ್ಟು ದೊಡ್ಡದಾಗಿರುತ್ತದೆ.

ಮೂಲಸೌಕರ್ಯ ಹೇಗಿರುತ್ತದೆ?

ವಿಮಾನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣವು 400 ವಿಮಾನ ಗೇಟ್ ಗಳನ್ನು ಹೊಂದಿರುತ್ತದೆ. ಏಕಕಾಲಕ್ಕೆ ಇಲ್ಲಿ ಅಷ್ಟೊಂದು ವಿಮಾನಗಳು ಪ್ರವೇಶಿಸಬಹುದು.

ರನ್ ವೇಗಳು ಎಷ್ಟು?

ವಿಮಾನಗಳ ಸಂಚಾರವನ್ನು ಸಮರ್ಥವಾಗಿ ನಿರ್ವಹಿಸಲು ಇದು ಐದು ಸಮಾನಾಂತರ ರನ್ ವೇಗಳನ್ನು ಹೊಂದಿರುತ್ತದೆ. ಒಂದೇ ಬದಿಯಲ್ಲಿ ಅಷ್ಟೊಂದು ವಿಮಾನಗಳು ಏಕಕಾಲಕ್ಕೆ ಟೇಕ್​ಆಫ್​ ಅಥವಾ ಲ್ಯಾಂಡಿಂಗ್ ಆಗಬಹುದು.

ಹೊಸತೇನು?

ಈ ವಿಮಾನ ನಿಲ್ದಾಣದಲಲಿ ಹೊಸ ವಾಯುಯಾನ ತಂತ್ರಜ್ಞಾನಗಳನ್ನು ಪರಿಚಯಿಸಲಾಗುತ್ತದೆ ಎಂದು ಅವರು ಹೇಳದಿ್ದಾರೆ. ಇದು ವಾಯುಯಾನ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಎಂದು ಹೇಲಾಗಿದೆ.

ವೆಚ್ಚ ಎಷ್ಟು?

ಈ ಯೋಜನೆಗೆ ಸುಮಾರು 2.9 ಲಕ್ಷ ಕೋಟಿ ರೂ. ವೆಚ್ಚವಾಗಲಿದೆ.

ಮುಗಿಯುವುದು ಯಾವಾಗ?

ವರ್ಷಕ್ಕೆ 150 ಮಿಲಿಯನ್ ಪ್ರಯಾಣಿಕರಿಗೆ ಸ್ಥಳಾವಕಾಶ ಕಲ್ಪಿಸುವ ಸಾಮರ್ಥ್ಯವಿರುವ ಮೊದಲ ಹಂತವು 10 ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಮುಂದುವರಿದ ಭಾಗವು ಆ ಬಳಿಕ ಸಾಗಲಿದೆ.

ಇದನ್ನೂ ಓದಿ: Pro-Khalistan slogan : ಕೆನಡಾ ಪ್ರಧಾನಿ ಟ್ರುಡೊ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ!

ಲಾಜಿಸ್ಟಿಕ್ಸ್ ಮತ್ತು ವಾಯು ಸಾರಿಗೆ ಕ್ಷೇತ್ರಗಳಲ್ಲಿ ವಿಶ್ವದ ಪ್ರಮುಖ ಕಂಪನಿಗಳಿಗೆ ಆತಿಥ್ಯ ವಹಿಸುವ “ದುಬೈ ದಕ್ಷಿಣದ ವಿಮಾನ ನಿಲ್ದಾಣದ ಸುತ್ತಲೂ” ಅವರು ಇಡೀ ನಗರವನ್ನು ನಿರ್ಮಿಸುತ್ತಿದ್ದಾರೆ. ಒಂದು ಮಿಲಿಯನ್ ಜನರಿಗೆ ಉಳಿದುಕೊಳ್ಳುವುದಕ್ಕೂ ಅವಕಾಶ ಮಾಡಿಕೊಡುತ್ತೇವೆ ಎಂದು ಆಡಳಿತಗಾರ ಹೇಳಿದ್ದರೆ.

“ನಾವು ಭವಿಷ್ಯದ ಪೀಳಿಗೆಗಾಗಿ ಹೊಸ ಯೋಜನೆಯನ್ನು ನಿರ್ಮಿಸುತ್ತಿದ್ದೇವೆ ನಮ್ಮ ಮಕ್ಕಳು ಮತ್ತು ಅವರ ಮಕ್ಕಳಿಗೆ ನಿರಂತರ ಮತ್ತು ಸ್ಥಿರ ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಿದ್ದೇವೆ. ದುಬೈ ವಿಶ್ವದ ವಿಮಾನ ನಿಲ್ದಾಣ, ಅದರ ಬಂದರು, ಅದರ ನಗರ ಕೇಂದ್ರ ಮತ್ತು ಅದರ ಹೊಸ ಜಾಗತಿಕ ಕೇಂದ್ರವಾಗಲಿದೆ.

Continue Reading

Lok Sabha Election 2024

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

Lok Sabha Election 2024: ಜೈಲಿನಲ್ಲಿರುವ ಇಬ್ಬರು ಖೈದಿಗಳಲ್ಲಿ ಒಬ್ಬರಿಗೆ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತಿಲ್ಲ. ಏನಿದು ಚುನಾವಣೆ ಆಯೋಗದ ನಿಯಮ? ಇಲ್ಲಿದೆ ವಿಸ್ತೃತ ವಿವರಣೆ.

VISTARANEWS.COM


on

By

Lok Sabha Election-2024
Koo

ನವದೆಹಲಿ: ಪ್ರಪಂಚದಾದ್ಯಂತ ಚುನಾವಣೆಗಳಲ್ಲಿ (election) ವಿರೋಧಾಭಾಸಗಳು ಎದುರಾಗುತ್ತವೆ. ಇದರಲ್ಲಿ ಭಾರತವೂ ಹೊರತಾಗಿಲ್ಲ. ಇದೀಗ ಜೈಲಿನಲ್ಲಿರುವ (jail) ಇಬ್ಬರು ಕೈದಿಗಳಲ್ಲಿ (locked up) ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಸಿಕ್ಕಿದ್ದರೆ, ಇನ್ನೊಬ್ಬರಿಗೆ ಮತದಾನ (voting) ಮಾಡಲೂ ಅವಕಾಶ ನೀಡಲಾಗಿಲ್ಲ.

2024ರ ಲೋಕಸಭಾ ಚುನಾವಣೆಯ (Lok Sabha Election‌ 2024) ವೇಳೆ ಭಾರತದಲ್ಲಿ (india) ಅಂತಹ ಒಂದು ವಿರೋಧಾಭಾಸ ಕಾಣಿಸಿಕೊಂಡಿದೆ. 2,300 ಕಿ.ಮೀ. ದೂರದಲ್ಲಿರುವ ಎರಡು ವಿಭಿನ್ನ ಜೈಲುಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿದ್ದರೆ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ಸಿಕ್ಕಿಲ್ಲ.

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ (Amritpal Singh) ಅಸ್ಸಾಂನ ದಿಬ್ರುಗಢ್ ಜೈಲಿನಲ್ಲಿದ್ದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನು ಅನುಮತಿ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಂತಹ ಲಕ್ಷಾಂತರ ವಿಚಾರಣಾಧೀನ ಕೈದಿಗಳು ಮತ ಚಲಾಯಿಸಲು ಅನುಮತಿ ನೀಡಲಾಗಿಲ್ಲ. ಯಾಕೆಂದರೆ ಭಾರತ ಕಾನೂನು ಪ್ರಕಾರ ಭಾರತದಲ್ಲಿ ಜನರು ಜೈಲಿನಲ್ಲಿ ಇದ್ದು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಜೈಲಿನಿಂದ ಮತ ಚಲಾಯಿಸಲು ಸಾಧ್ಯವಿಲ್ಲ!


ಅಮೃತ್ ಪಾಲ್ ಸ್ಪರ್ಧೆ

2023ರ ಏಪ್ರಿಲ್ 23ರಿಂದ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರು ಪಂಜಾಬ್‌ನ ಖಾದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ದಿಬ್ರುಗಢ ಕೇಂದ್ರ ಕಾರಾಗೃಹದಲ್ಲಿ ಭಾಯಿ ಸಾಹೇಬ್ ಅಮೃತಪಾಲ್ ಅವರನ್ನು ನಾನು ಭೇಟಿ ಮಾಡಿದ್ದೇನೆ. ಖಾಲ್ಸಾ ಪಂಥ್‌ನ ಹಿತಾಸಕ್ತಿಯಿಂದ ಅವರು ಈ ಬಾರಿ ಸಂಸದರಾಗಲು ಖದೂರ್ ಸಾಹಿಬ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ನಾನು ಅವರಿಗೆ ವಿನಂತಿಸಿದೆ ಎಂದು ಅಮೃತಪಾಲ್ ಅವರ ವಕೀಲ ರಾಜದೇವ್ ಸಿಂಗ್ ಖಾಲ್ಸಾ ಈ ಹಿಂದೆ ಹೇಳಿದ್ದು, ಭಾಯಿ ಸಾಹೇಬ್ ಒಪ್ಪಿದ್ದಾರೆ ಮತ್ತು ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದರು.

ಬಂಧನಕ್ಕೆ ಒಳಗಾಗಿರುವುದು ಏಕೆ?

ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್‌ನ ಮೋಗಾ ಜಿಲ್ಲೆಯ ರೋಡ್ ಗ್ರಾಮದಲ್ಲಿ ವರ್ಷದ ಹಿಂದೆ ಬಂಧಿಸಲಾಗಿತ್ತು. ಅಮೃತ್‌ಪಾಲ್ ಸಿಂಗ್ ಅವರು ಬೆಂಬಲಿಗರೊಂದಿಗೆ ಬಂದೂಕು ಮತ್ತು ಕತ್ತಿಗಳನ್ನು ಹಿಡಿದುಕೊಂಡು ಅಮೃತಸರದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದರಿಂದ ಅವರನ್ನು ಬಂಧಿಸಲಾಯಿತು. ಪ್ರತ್ಯೇಕತಾವಾದಿ ಈತ.

ಜೈಲಿನಿಂದ ಸ್ಪರ್ಧಿಸಿದವರು, ಗೆದ್ದವರಿವರು

1996 ರಲ್ಲಿ, ಡಾನ್- ಟರ್ನ್ಡ್ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರು ಜೈಲಿನಲ್ಲಿದ್ದಾಗ ಬಿಎಸ್ಪಿ ಟಿಕೆಟ್‌ನಲ್ಲಿ ಉತ್ತರ ಪ್ರದೇಶದ ಮೌ ಅಸೆಂಬ್ಲಿ ಸ್ಥಾನಕ್ಕೆ ಸ್ಪರ್ಧಿಸಿದರು. ಕಳೆದ ತಿಂಗಳು ನಿಧನರಾದ ಅನ್ಸಾರಿ ಅವರು ಜೈಲಿನಿಂದಲೇ ಚುನಾವಣೆಯಲ್ಲಿ ಗೆದ್ದಿದ್ದರು.

2005ರಲ್ಲಿ ಸೆರೆವಾಸದಲ್ಲಿದ್ದ ಮುಖ್ತಾರ್ ಅನ್ಸಾರಿ ಅವರು ಜೈಲಿನಿಂದ 2007, 2012 ಮತ್ತು ಮತ್ತೆ 2017 ರಲ್ಲಿ ಒಟ್ಟು ಮೂರು ಬಾರಿ ಮೌ ಅಸೆಂಬ್ಲಿ ಸ್ಥಾನವನ್ನು ಗೆದ್ದರು.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ 1998ರ ಲೋಕಸಭೆ ಚುನಾವಣೆ ವೇಳೆ ಮೇವು ಹಗರಣದಲ್ಲಿ ಜೈಲು ಸೇರಿದ್ದರು. ಬಿಹಾರದ ಮಾಧೇಪುರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಜೈಲಿನಲ್ಲಿದ್ದೇ ಗೆದ್ದಿದ್ದರು.


ಕೇಜ್ರಿವಾಲ್ ಮತದಾನ ಸಾಧ್ಯವಿಲ್ಲ

ಅಪರಾಧಗಳ ಆರೋಪ ಹೊತ್ತಿರುವ ಜನರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ಅಪರಾಧಿಗಳೆಂದು ಸಾಬೀತಾಗದ ವಿಚಾರಣಾಧೀನ ಕೈದಿಗಳು ತಮ್ಮ ಮತವನ್ನು ಚಲಾಯಿಸಲು ಸಾಧ್ಯವಿಲ್ಲ.

ತಪ್ಪಿತಸ್ಥರೆಂದು ಸಾಬೀತಾಗದವರಿಗೂ ಭಾರತದಲ್ಲಿ ಜೈಲುಗಳಿಂದ ಮತದಾನ ಮಾಡಲು ಯಾವುದೇ ಅವಕಾಶವಿಲ್ಲ. 2019 ರ ಪ್ರವೀಣ್ ಕುಮಾರ್ ಚೌಧರಿ ವಿರುದ್ಧ ಭಾರತ ಚುನಾವಣಾ ಆಯೋಗದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕೈದಿಗಳಿಗೆ ಮತದಾನದ ಹಕ್ಕನ್ನು ಹೊಂದಿಲ್ಲ ಎಂದು ಪುನರುಚ್ಚರಿಸಿದೆ.

ಮೇ 25ರಂದು ದೆಹಲಿ ಮತದಾನ ನಡೆಯಲಿದೆ. ಏಪ್ರಿಲ್ 29 ರಂದು ಸುಪ್ರೀಂ ಕೋರ್ಟ್‌ ನೀಡುವ ತೀರ್ಪಿನ ಮೇಲೆ ಕೇಜ್ರಿವಾಲ್ ಮತ ಚಲಾಯಿಸಬಹುದೇ ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.

ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಕೇಜ್ರಿವಾಲ್, ಬಹು ಕಸ್ಟಡಿ ವಿಸ್ತರಣೆಗಳು ಮತ್ತು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಅನಂತರ ಅವರನ್ನು ನವದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಿಡುಗಡೆಯಾಗದೆ ಇದ್ದರೆ ಹೇಮಂತ್ ಸೊರೆನ್ ಗೂ ಅವಕಾಶ ಇಲ್ಲ

ಭಾರತದಲ್ಲಿ ಐದು ಲಕ್ಷಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದು, ಅವರಿಗೂ ಮತ ಚಲಾಯಿಸಲು ಸಾಧ್ಯವಿಲ್ಲ. ಅಂತೆಯೇ, ಭೂ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶಿಸದಿದ್ದರೆ ಮತದಾನ ಮಾಡಲಾಗುವುದಿಲ್ಲ.

ತನ್ನ ಬಂಧನವನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಯಾಕೆ ಈ ತಾರತಮ್ಯ?

2021 ರ ರಾಷ್ಟ್ರೀಯ ಅಪರಾಧ ವರದಿಗಳ ಬ್ಯೂರೋ (NCRB) ವರದಿಯ ಪ್ರಕಾರ, ಭಾರತದಾದ್ಯಂತ ವಿವಿಧ ಜೈಲುಗಳಲ್ಲಿ ಒಟ್ಟು 5,54,034 ಕೈದಿಗಳನ್ನು ಬಂಧಿಸಲಾಗಿದೆ. ಅಮೃತಪಾಲ್ ಸಿಂಗ್ ಅವರಿಗೆ ಇನ್ನೂ ಶಿಕ್ಷೆಯಾಗದ ಕಾರಣ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಶಿಕ್ಷೆಗೊಳಗಾದವರು ಕೂಡ ಜೈಲು ಶಿಕ್ಷೆ ಮುಗಿದ ಆರು ವರ್ಷಗಳ ಬಳಿಕ ಚುನಾವಣೆಗೆ ಸ್ಪರ್ಧಿಸಬಹುದು.

ಅಮೃತಪಾಲ್ ಸಿಂಗ್ ಅವರಂತಹ ಜೈಲಿನಲ್ಲಿರುವ ವ್ಯಕ್ತಿಗಳು ತಮ್ಮ ಪ್ರತಿನಿಧಿಯ ಸಹಾಯದಿಂದ ಜೈಲಿನಿಂದಲೇ ನಾಮಪತ್ರ ಸಲ್ಲಿಸಬಹುದು. ಒಂದು ವೇಳೆ ಜೈಲಿನಲ್ಲಿರುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದರೆ, ತಜ್ಞರ ಪ್ರಕಾರ ಜೈಲಿನೊಳಗೆ ಪ್ರಮಾಣ ವಚನ ಬೋಧಿಸಲು ಅವಕಾಶವಿಲ್ಲದ ಕಾರಣ, ಪ್ರಮಾಣ ವಚನ ಸ್ವೀಕರಿಸಲು ಜೈಲಿನಿಂದ ಬಿಡುಗಡೆ ಮಾಡಬಹುದು.

ಆದರೆ ಜೈಲಿನಲ್ಲಿರುವ ವ್ಯಕ್ತಿಯ ಪರವಾಗಿ ಬೇರೆಯವರು ಮತವನ್ನು ಚಲಾಯಿಸಲು ಸಾಧ್ಯವಿಲ್ಲ. ಪತಿ ಅರವಿಂದ್ ಕೇಜ್ರಿವಾಲ್ ಬಂಧನದ ಅ ನಂತರ ಗಮನ ಸೆಳೆದಿರುವ ಸುನೀತಾ ಕೇಜ್ರಿವಾಲ್, ಎಎಪಿ ಪರ ಪ್ರಚಾರ ಮಾಡಲಿದ್ದಾರೆ.

ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 62 (5) ಪ್ರಕಾರ ಯಾವುದೇ ವ್ಯಕ್ತಿ ಪೊಲೀಸರ ಕಾನೂನುಬದ್ಧ ವಶದಲ್ಲಿದ್ದರೆ ಅಥವಾ ಜೈಲಿನಲ್ಲಿ ಬಂಧಿಯಾಗಿದ್ದಲ್ಲಿ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ.

Continue Reading

ಆರೋಗ್ಯ

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯು ಭಾರತದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯತ್ತ ಮಹತ್ವದ ಹೆಜ್ಜೆ. ದುರ್ಬಲ ಕುಟುಂಬಗಳಿಗೆ ಹೆಚ್ಚು ಅಗತ್ಯವಿರುವ ಆರ್ಥಿಕ ರಕ್ಷಣೆಯನ್ನು ನೀಡುತ್ತದೆ. ಇದರ ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ, ಇದರಿಂದ ಸಿಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Bharat Yojana
Koo

ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ ಜಾರಿಯಾಗಿರುವ ಆಯುಷ್ಮಾನ್ ಯೋಜನೆ ಇನ್ನೂ ಹಲವು ಮಂದಿಗೆ ಸರಿಯಾಗಿ ಅರ್ಥವೇ ಆಗಿಲ್ಲ. ಇದರಿಂದ ಸಾಕಷ್ಟು ಪರಿಣಾಮಕಾರಿಯಾಗಿ ಎಲ್ಲರನ್ನು ತಲುಪುವುದು ಸಾಧ್ಯವಾಗಿಲ್ಲ. ಭಾರತದಂತಹ ವಿಶಾಲ ಮತ್ತು ವೈವಿಧ್ಯಮಯವಾದ ದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವುದು ಸವಾಲಾಗಿದೆ. ಇದನ್ನು ಗುರುತಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಆಯುಷ್ಮಾನ್ ಭಾರತ್ ಯೋಜನೆಯು ಏನನ್ನು ಒಳಗೊಳ್ಳುತ್ತದೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಅದರ ಪ್ರಯೋಜನಗಳಿಗಾಗಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದರ ಮಾಹಿತಿ ಇಲ್ಲಿದೆ.


ಏನಿದು ಆಯುಷ್ಮಾನ್ ಭಾರತ್ ಯೋಜನೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪರಿಚಯಿಸಿದ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿಗಳು ನಿಗದಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಮೊತ್ತದವರೆಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಪಡೆಯಬಹುದು.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ನೋಂದಣಿ ಹೇಗೆ?

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಮೊದಲು ಅದರ ಬಗ್ಗೆ ತಿಳಿದುಕೊಳ್ಳಿ.

ಅರ್ಹತೆಯನ್ನು ಪರಿಶೀಲಿಸಿ

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಣಿ ನಡೆಸುವ ಮೊದಲು ಆಯುಷ್ಮಾನ್ ಭಾರತ್ ಯೋಜನೆ ಪಡೆಯುವ ಅರ್ಹತೆ ನಿಮಗಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಇದು ಪ್ರಾಥಮಿಕವಾಗಿ ಸಾಮಾಜಿಕ ಆರ್ಥಿಕ ಅಂಶಗಳು ಮತ್ತು ಮನೆಯ ಆದಾಯವನ್ನು ಆಧರಿಸಿರುತ್ತದೆ.


ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ

ಆಯುಷ್ಮಾನ್ ಭಾರತ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಾಮಾನ್ಯ ಸೇವಾ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿಮ್ಮ ಪ್ರದೇಶದಲ್ಲಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರಗಳನ್ನು ಪತ್ತೆ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಲ್ಲಿಗೆ ಭೇಟಿ ಮಾಡಿ.

ಅಗತ್ಯ ದಾಖಲೆಗಳನ್ನು ಒದಗಿಸಿ

ನೋಂದಣಿ ಪ್ರಕ್ರಿಯೆಯಲ್ಲಿ ನಿಮ್ಮ ಅರ್ಹತೆಯನ್ನು ಸ್ಥಾಪಿಸಲು ನೀವು ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವುಗಳು ಗುರುತಿನ ಪುರಾವೆ, ವಿಳಾಸ ಪುರಾವೆ ಮತ್ತು ಆದಾಯ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

ಸಂಪೂರ್ಣ ನೋಂದಣಿ ಅರ್ಜಿ

ಒದಗಿಸಿದ ಮಾಹಿತಿಯ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಸೇವಾ ಕೇಂದ್ರದಲ್ಲಿ ಒದಗಿಸಲಾದ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ಕುಟುಂಬದ ಸದಸ್ಯರು, ಆದಾಯ ಮತ್ತು ಇತರ ಸಂಬಂಧಿತ ಮಾಹಿತಿಯ ಕುರಿತು ವಿವರಗಳನ್ನು ಒದಗಿಸಿ.

ಪರಿಶೀಲನೆ ಪ್ರಕ್ರಿಯೆ

ನೋಂದಣಿ ಫಾರ್ಮ್ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ ಅಧಿಕಾರಿಗಳು ಆಯುಷ್ಮಾನ್ ಭಾರತ್ ಯೋಜನೆಗೆ ನಿಮ್ಮ ಅರ್ಹತೆಯನ್ನು ಪರಿಶೀಲಿಸುತ್ತಾರೆ. ಈ ಪರಿಶೀಲನಾ ಪ್ರಕ್ರಿಯೆಯು ಸರ್ಕಾರಿ ಡೇಟಾಬೇಸ್‌ಗಳೊಂದಿಗೆ ಒದಗಿಸಲಾದ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡುವುದನ್ನು ಒಳಗೊಂಡಿರುತ್ತದೆ.

ಆಯುಷ್ಮಾನ್ ಕಾರ್ಡ್ ಸ್ವೀಕರಿಸಿ

ಅರ್ಹತೆಯ ಯಶಸ್ವಿ ಪರಿಶೀಲನೆಯ ಅನಂತರ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಿರುವ ಆಯುಷ್ಮಾನ್ ಕಾರ್ಡ್ ಅನ್ನು ನಿಮಗೆ ನೀಡಲಾಗುತ್ತದೆ. ಈ ಕಾರ್ಡ್ ಯೋಜನೆಯಲ್ಲಿ ನಿಮ್ಮ ದಾಖಲಾತಿಗೆ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆಗಳನ್ನು ಪ್ರವೇಶಿಸಲು ಅನುಮತಿ ನೀಡುತ್ತದೆ.

doctor

ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಿ

ಆಯುಷ್ಮಾನ್ ಕಾರ್ಡ್‌ನೊಂದಿಗೆ ನೀವು ಇದೀಗ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಯಾವುದೇ ಎಂಪನೆಲ್ ಮಾಡಲಾದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯಬಹುದು. ನಗದು ರಹಿತ ಚಿಕಿತ್ಸಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿಮ್ಮ ಕಾರ್ಡ್ ಅನ್ನು ಆಸ್ಪತ್ರೆಯ ಸ್ವಾಗತ ವಿಭಾಗದಲ್ಲಿ ನೀಡಿ.

ಪ್ರಯೋಜನಗಳು ಏನೇನು?

ಆಯುಷ್ಮಾನ್ ಕಾರ್ಡ್‌ ಹೊಂದಿರುವುದರಿಂದ ಪ್ರಮುಖ ಪ್ರಯೋಜನಗಳು ಇಂತಿವೆ.

ದುರ್ಬಲ ಕುಟುಂಬಗಳಿಗೆ ರಕ್ಷಣೆ

ಆಯುಷ್ಮಾನ್ ಭಾರತ್ ಯೋಜನೆಯು ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಚ್ಚಿನ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕ ರಕ್ಷಣೆ ನೀಡುತ್ತದೆ.

ನಗದು ರಹಿತ ಚಿಕಿತ್ಸೆ

ಯೋಜನೆಯ ಫಲಾನುಭವಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ ನಿಗದಿತ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು.

ವ್ಯಾಪಕ ಆಸ್ಪತ್ರೆ ನೆಟ್‌ವರ್ಕ್

ಅಯುಷ್ಮಾನ್ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳನ್ನು ಒಳಗೊಂಡಂತೆ ನಿಗದಿತ ಆಸ್ಪತ್ರೆಗಳ ವ್ಯಾಪಕ ಜಾಲವನ್ನು ಹೊಂದಿದೆ. ಇದು ದೇಶದಾದ್ಯಂತ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸಹಕರಿಸುತ್ತದೆ.

Ayushman Card

ಆಯುಷ್ಮಾನ್ ಕಾರ್ಡಗೆ ಅಗತ್ಯವಿರುವ ದಾಖಲೆಗಳು

1. ನಿವಾಸದ ಗುರುತು ಪತ್ರ
2. ವಯಸ್ಸು ಮತ್ತು ಗುರುತಿನ ಪುರಾವೆ- ಉದಾಹರಣೆಗೆ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್
3. ಜಾತಿ ಪ್ರಮಾಣಪತ್ರ
4. ಸಂಪರ್ಕ ಮಾಹಿತಿ- ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ
5. ಆದಾಯ ಪ್ರಮಾಣ ಪತ್ರ
6. ಪ್ರಸ್ತುತ ಕುಟುಂಬದ ಸ್ಥಿತಿಯನ್ನು ಸೂಚಿಸುವ ದಾಖಲೆಗಳು

Continue Reading

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading
Advertisement
Rohit Sharma
ಕ್ರೀಡೆ8 seconds ago

Rohit Sharma: ರೋಹಿತ್ ಶರ್ಮ​ ಕಣ್ಣೀರಿಗೆ ಅಸಲಿ ಕಾರಣ ಇದಂತೆ!

lok sabha election 2024 voting second phase
ಪ್ರಮುಖ ಸುದ್ದಿ13 mins ago

Lok Sabha Election 2024: ಮೊದಲೆರಡು ಗಂಟೆಗಳ ಮತದಾನ ನಿರೀಕ್ಷೆಗಿಂತ ಕಡಿಮೆ, ಇನ್ನೂ ಇಳಿಯುವ ಆತಂಕ; ಎಲ್ಲಿ ಎಷ್ಟು?

T20 World Cup 2024
ಕ್ರೀಡೆ35 mins ago

T20 World Cup 2024: ಮಿನಿ ವಿಶ್ವಕಪ್​ ಸಮರಕ್ಕೆ ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಪೂರ್ಣ; ವಿಡಿಯೊ ವೈರಲ್​

Ramana Avatara Movie
ಸಿನಿಮಾ38 mins ago

Ramana Avatara Movie: ಬಂಪರ್ ಆಫರ್; ಕೇವಲ 99 ರೂ.ಗೆ ಸಿಗಲಿದೆ ‘ರಾಮನ ಅವತಾರ’ ಸಿನಿಮಾ ಟಿಕೆಟ್

Narendra Modi
ದೇಶ40 mins ago

Narendra Modi: ಮತದಾನದ ಬಳಿಕ ಮಗುವನ್ನು ಎತ್ತಿ ಆಡಿಸಿದ ಪ್ರಧಾನಿ ಮೋದಿ; ವಿಡಿಯೋ ನೋಡಿ

IPL 2024
ಕ್ರೀಡೆ1 hour ago

IPL 2024: ಶತಕ ಬಾರಿಸಿ ಟಿ20ಯಲ್ಲಿ ದಾಖಲೆ ಬರೆದ ಸೂರ್ಯಕುಮಾರ್ ಯಾದವ್​​

chikkaballapur road accident
ಕ್ರೈಂ1 hour ago

Road Accident: ಕಲ್ಲು ಸಾಗಿಸುತ್ತಿದ್ದ ಕ್ಯಾಂಟರ್‌ ಪಲ್ಟಿಯಾಗಿ ಮೂವರ ಸಾವು

World Asthma Day
ಆರೋಗ್ಯ1 hour ago

World Asthma Day: ಅಸ್ತಮಾದಿಂದ ಪಾರಾಗಲು ಈ ಸಂಗತಿ ತಿಳಿದುಕೊಂಡಿರಿ

IPL 2024 Points Table
ಕ್ರೀಡೆ2 hours ago

IPL 2024 Points Table: ಕೊನೆಯ ಸ್ಥಾನದಿಂದ ಮೇಲೆದ್ದ ಮುಂಬೈ ಇಂಡಿಯನ್ಸ್​

Lok Sabha Election 2024
Lok Sabha Election 20242 hours ago

Lok Sabha Election 2024: ಮತ ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ; ಮತದಾನ ಮಾಡಲು ಕನ್ನಡದಲ್ಲೇ ಕರೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ15 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ16 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ16 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌