Festive makeup | ಹಬ್ಬದ ಆಕರ್ಷಕ ಮೇಕಪ್‌ಗೆ 5 ಐಡಿಯಾ - Vistara News

ಗಣೇಶ ಚತುರ್ಥಿ

Festive makeup | ಹಬ್ಬದ ಆಕರ್ಷಕ ಮೇಕಪ್‌ಗೆ 5 ಐಡಿಯಾ

ಹಬ್ಬದಂದು ಹೆಣ್ಣುಮಕ್ಕಳು ಆಕರ್ಷಕವಾಗಿ ಕಾಣಲು ಮೇಕಪ್‌ ಎಕ್ಸ್‌ಪಟ್ರ್ಸ್ 5 ಸಿಂಪಲ್‌ ಐಡಿಯಾಗಳನ್ನು ನೀಡಿದ್ದಾರೆ.

VISTARANEWS.COM


on

Festive makeup
ಚಿತ್ರಗಳು: ರಾಶಿ ಸೃಜನ್‌ ಮೇಕಪ್ & ಹೇರ್‌ ಸ್ಟುಡಿಯೋ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು

ಹಬ್ಬಕ್ಕೆ ಟ್ರೆಡಿಷನಲ್‌ ಲುಕ್‌ ನೀಡುವ ಮೇಕಪ್‌ ನಿಮ್ಮದಾಗಲಿ ಎನ್ನುತ್ತಾರೆ ಮೇಕಪ್‌ ಎಕ್ಸ್‌ಪಟ್ರ್ಸ್ .

ಹಬ್ಬದಂದು ಹೆಣ್ಣುಮಕ್ಕಳು ಮಾಡುವ ಮೇಕಪ್‌ ನೋಡಲು ಆಕರ್ಷಕವಾಗಿರಬೇಕು. ಕುಟುಂಬ ಹಾಗೂ ಸ್ನೇಹಿತರೊಂದಿಗೆ ಆಚರಿಸುವ ಸಮಯವಾದ್ದರಿಂದ ಆದಷ್ಟೂ ಮೇಕಪ್‌ ಎಲಿಗೆಂಟ್‌ ಲುಕ್‌ ನೀಡಬೇಕು ಎನ್ನುತ್ತಾರೆ ಮೇಕಪ್‌ ತಜ್ಞೆ ರಾಶಿ ಮೇಘನಾ. ಈ ಗೌರಿ-ಗಣೇಶ ಹಬ್ಬದ ಮೇಕಪ್‌ಗೆ ಒಂದೈದು ಸಿಂಪಲ್‌ ಸಲಹೆಗಳನ್ನು ನೀಡಿದ್ದಾರೆ.

Festive makeup
  1. ಟ್ರೆಡಿಷನಲ್‌ ಉಡುಪಿಗೆ ತಕ್ಕಂತಿರಲಿ ಮೇಕಪ್‌

ಧರಿಸುವ ಟ್ರೆಡಿಷನಲ್‌ ಉಡುಪು ಹಾಗೂ ಸೀರೆಗೆ ಮೇಕಪ್‌ ಮ್ಯಾಚ್‌ ಆಗಬೇಕು. ಸೀರೆಯೊಂದಿಗೆ ಮೇಕಪ್‌, ಹೇರ್‌ಸ್ಟೈಲ್‌ ಹಾಗೂ ಜುವೆಲ್‌ ವೇರ್‌ ಮಾಡಿದಲ್ಲಿ ಲುಕ್‌ ಕಂಪ್ಲೀಟ್‌ ಆಗುವುದು. ಸೀರೆಗಾದಲ್ಲಿ ಮೇಕಪ್‌ ಕಂಪ್ಲೀಟ್‌ ಟ್ರೆಡಿಷನಲ್‌ ಆಗಿ ಕಾಣಿಸುವಂತಿರಬೇಕು. ಇನ್ನು ಸಲ್ವಾರ್‌ ಕಮೀಝ್‌, ಗಾಗ್ರ, ಲೆಹೆಂಗಾ, ಲಂಗ-ದಾವಣಿಗಾದಲ್ಲಿ ಕೊಂಚ ನ್ಯಾಚುರಲ್‌ ಲುಕ್‌ ನೀಡಬಹುದು.

  1. ಸ್ಕಿನ್‌ಟೋನ್‌ಗೆ ತಕ್ಕಂತೆ ಮೇಕಪ್‌

ಹಬ್ಬದಂದು ಮಾಡುವ ಮೇಕಪ್‌ ಕಣ್ಮನ ಸೆಳೆಯಬೇಕು. ನೋಡುಗರಿಗೆ ಖುಷಿಯಾಗಬೇಕು. ಹಾಗಾಗಿ ಮೇಕಪ್‌ ಮಾಡುವವರು ತಮ್ಮ ಸ್ಕಿನ್‌ ಟೋನ್‌ಗೆ ಮ್ಯಾಚ್‌ ಆಗುವ ಮಾನ್ಸೂನ್‌ ಸೀಸನ್‌ಗೆ ಸೂಟ್‌ ಆಗುವಂತದ್ದನ್ನು ಆಯ್ಕೆ ಮಾಡಬೇಕು

  1. ಬ್ಲಷರ್ಸ್ ಬಳಸಿ

ಹಬ್ಬದಂದು ಧರಿಸುವ ಉಡುಪು ಮತ್ತು ಆಭರಣಗಳಿಗೆ ಹೊಂದುವ ಫೌಂಡೇಷನ್‌ ಮತ್ತು ಬ್ಲಷರ್ಸ್‌ ಬಳಸಿದಾಗ ಮುಖದ ಅಂದ ಹೆಚ್ಚುವುದು. .ಮ್ಯಾಟ್‌ ಫಿನಿಶ್‌ ಫೌಂಡೇಷನ್‌ ಹಾಗೂ ಗ್ಲಾಸಿ ಲುಕ್‌ ಕೊಡುವ ಬ್ಲಷರ್ಸ್‌ ಬಳಸುವುದು ಉತ್ತಮ.

Festive makeup
  1. ಐ ಮೇಕಪ್‌ ಹೀಗಿರಲಿ

ಝಗಮಗಿಸುವ ಸೀರೆಯಾದಲ್ಲಿ ಗೋಲ್ಡನ್‌ ಅಥವಾ ಸಿಲ್ವರ್‌ ಕಲರ್‌ ಫೌಂಡೇಷನ್‌ ಮತ್ತು ಗ್ಲಿಟರ್‌ ಐ ಶ್ಯಾಡೋ ಬಳಸಬಹುದು. ಕಣ್ಣಿಗೆ ಐ ಲೈನರ್‌ ಬಳಸಬಹುದು. ರೆಪ್ಪೆಗಳ ಗಾಢತೆ ಹೆಚ್ಚಿಸಲು ಆರ್ಟಿಫಿಶಿಯಲ್‌ ಲ್ಯಾಶಸ್‌ ಸ್ಟಿಕ್‌ ಮಾಡಬಹುದು. ಕಣ್ಣಿಗೆ ಕಾಡಿಗೆ ಹಬ್ಬದ ಅಂದ ಹೆಚ್ಚಿಸುವುದು.

Festive makeup
  1. ಹೊಂದುವ ಲಿಪ್‌ಸ್ಟಿಕ್‌ ಲೇಪಿಸಿ

ಎಲ್ಲದಕ್ಕಿಂತ ಹೆಚ್ಚಾಗಿ ಸ್ಕಿನ್‌ಟೋನ್‌ಗೆ ಹೊಂದುವಂತಹ ಲಿಪ್‌ಸ್ಟಿಕ್‌ ಲೇಪಿಸಬೇಕು. ಯಾವುದೇ ಕಾರಣಕ್ಕೂ ಟ್ರೆಂಡ್‌ ಹೆಸರಲ್ಲಿ ಗಾಢ ವರ್ಣದ ಲಿಪ್‌ಶೇಡ್ ಬಳಕೆ ಬೇಡ. ಮಾನ್ಸೂನ್‌ ಸೀಸನ್‌ನಲ್ಲಿ ಬಂದಿರುವ ಮ್ಯಾಟ್‌ ಲಿಪ್‌ಶೇಡ್‌ ಬಳಕೆ ಮಾಡಬಹುದು.

(ಲೇಖಕಿ: ಫ್ಯಾಷನ್‌ ಪತ್ರಕರ್ತೆ)

ಇದನ್ನೂ ಓದಿ| Festive Shopping | ವಾರಕ್ಕೂ ಮುನ್ನವೇ ಆರಂಭವಾದ ಗೌರಿ-ಗಣೇಶನ ಹಬ್ಬದ ಶಾಪಿಂಗ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಗಣಪತಿ ವಿಸರ್ಜನೆ ಮಾಡುವಾಗ ನೀರಲ್ಲಿ ಮುಳುಗಿ ಬಾಲಕ ಸಾವು

Drowned in River : ಸ್ನೇಹಿತರೊಂದಿಗೆ ಗಣೇಶ ವಿಸರ್ಜನೆ (Ganesha chaturthi) ಮಾಡುವಾಗ ಬಾಲಕನೊರ್ವ ಹಳ್ಳದಲ್ಲಿ ನೀರಿನ ಆಳ ಅರಿಯದೇ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

VISTARANEWS.COM


on

By

nishal tej
ಮೃತ ಬಾಲಕ ನಿಶಾಲ್‌ ತೇಜ್
Koo

ಚಿಕ್ಕಬಳ್ಳಾಪುರ : ಇಲ್ಲಿನ ಚಿಕ್ಕಕಾಡಿಗೇನಹಳ್ಳಿ ಗ್ರಾಮದಲ್ಲಿರುವ ಶ್ರೀರಾಮಕುಂಟೆ ಹಳ್ಳದಲ್ಲಿ (Drowned) ಗಣಪತಿ ವಿಸರ್ಜನೆ (Ganesha chathurthi) ಮಾಡಲು ಹೋಗಿ ಬಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕಡಶೀಗೇನಹಳ್ಳಿ ಗ್ರಾಮದ ನಿಶಾಲ್ ತೇಜ್ (12) ಮೃತ ಬಾಲಕ.

ಸೆ.29ರಂದು ಸ್ನೇಹಿತರೊಂದಿಗೆ ನಿಶಾಲ್‌ ತೇಜ್‌ ಗಣಪತಿ ವಿಸರ್ಜನೆಗೆ ತೆರಳಿದ್ದ. ಈ ವೇಳೆ ಗಣೇಶ ವಿಸರ್ಜನೆ ಮಾಡುವ ಉತ್ಸಾಹದಲ್ಲಿ ಹಳ್ಳದ ಆಳ ಅರಿಯದೇ ನೀರಿಗೆ ಇಳಿದಿದ್ದಾನೆ. ಆದರೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿದ್ದಾನೆ. ಆತನ ಮೃತದೇಹವು ಕೂಗಳತೆ ದೂರದಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Doctor death : ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯೆ ನಿಗೂಢ ಸಾವು; ಪಕ್ಕದಲ್ಲೇ ಸಿರಿಂಜ್‌ ಪತ್ತೆ!

ಆಟವಾಡುವಾಗ ಕಾಲು ಜಾರಿ ನಾಲೆಗೆ ಬಿದ್ದ ಬಾಲಕಿ ದಾರುಣ ಸಾವು

ಹಾಸನ: ಇಲ್ಲಿನ ಅರಕಲಗೂಡು ತಾಲ್ಲೂಕಿನ ಮಧುರನಹಳ್ಳಿ ಗ್ರಾಮದಲ್ಲಿ ಸ್ನೇಹಿತರೊಂದಿಗೆ ಆಟವಾಡುವಾಗ ಬಾಲಕಿ ಕಾಲು ಜಾರಿ ನಾಲೆ ಬಿದ್ದು (Drowned In Canal) ಮೃತಪಟ್ಟಿರುವ ಘಟನೆ ನಡೆದಿದೆ. ಸುಪ್ರೀತಾ (5) ಮೃತ ದುರ್ದೈವಿ.

ಗ್ರಾಮದ ರೇವಣ್ಣ-ಭಾಗ್ಯ ದಂಪತಿ ಪುತ್ರಿ ಸುಪ್ರೀತಾ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇತ್ತು. ಹೀಗಾಗಿ ಗ್ರಾಮದ ಸಮೀಪವಿರುವ ನಾಲೆಯ ಬಳಿ ಸ್ನೇಹಿತರೊಂದಿಗೆ ಸುಪ್ರೀತಾ ಆಟವಾಡುತ್ತಿದ್ದಳು. ಈ ವೇಳೆ ಅಚಾನಕ್‌ ಆಗಿ ಕಾಲುಜಾರಿ ನಾಲೆಗೆ ಬಿದ್ದಿದ್ದಾಳೆ. ನಾಲೆಯಲ್ಲಿ ಹರಿಯುತ್ತಿದ್ದ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.

ಹಾರಂಗಿ ಬಲದಂಡೆ ನಾಲೆಯಲ್ಲಿ ಮುಳುಗಿರುವ ಬಾಲಕಿ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಈಗಾಗಲೇ ಅಗ್ನಿಶಾಮಕ ದಳದ ಸಿಬ್ಬಂದಿ 6 ಕಿ.ಮೀವರೆಗೂ ಶೋಧಕಾರ್ಯ ನಡೆಸಿದ್ದಾರೆ. ಆದರೆ ಮೃತದೇಹವು ಪತ್ತೆಯಾಗಿಲ್ಲ. ಹಳ್ಳಿ ಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Food Poisoning : ಗಣೇಶ ವಿಸರ್ಜನೆಯಲ್ಲಿ ಪ್ರಸಾದ ಸೇವಿಸಿದ 28ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Tumkur News : ತುಮಕೂರಲ್ಲಿ ಗಣೇಶ ವಿಸರ್ಜನೆ (Ganesh Chaturthi) ವೇಳೆ ಪ್ರಸಾದ ಸೇವಿಸಿದ 20ಕ್ಕೂ ಹೆಚ್ಚು ಜನರು (Food Poisoning) ಅಸ್ವಸ್ಥಗೊಂಡಿದ್ದಾರೆ. ಹಲವರು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

By

Food Poisoning
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರು
Koo

ತುಮಕೂರು: ಇಲ್ಲಿನ ಶೆಟ್ಟಪ್ಪನಹಳ್ಳಿಯಲ್ಲಿ ಆಹಾರ ಸೇವಿಸಿದ 28ಕ್ಕೂ ಹೆಚ್ಚು ಮಂದಿ (Food Poisoning) ಅಸ್ವಸ್ಥಗೊಂಡಿದ್ದಾರೆ. ಭಾನುವಾರ (ಸೆ.24) ಗಣೇಶ ವಿಸರ್ಜನೆ ಸಮಯದಲ್ಲಿ ಪ್ರಸಾದ ಸೇವಿಸಿದ್ದರೂ ಜತೆಗೆ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿರುವ ಶಂಕೆ ವ್ಯಕ್ತವಾಗಿದೆ.

6 ಮಂದಿ ಆರೋಗ್ಯವು ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಯಲಕ್ಷ್ಮಿ (35), ಬೋರಮ್ಮ (68), ಬೈರಪ್ಪ(80), ಗಂಗಮ್ಮ (70), ನಂಜಮ್ಮ(85) ಎಂಬುವವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 20ಕ್ಕೂ ಹೆಚ್ಚು ಜನರಿಗೆ ಗೂಳೂರು ಪ್ರಾಥಮಿಕ ವೈದ್ಯರಿಂದ ಗ್ರಾಮದಲ್ಲೇ ಚಿಕಿತ್ಸೆ ಮುಂದುವರಿದಿದೆ.

ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿ ಗ್ರಾಮದಲ್ಲಿ ಸುಮಾರು 54 ಮನೆಗಳಿದ್ದು, ಕಳೆದ ಭಾನುವಾರ ಗ್ರಾಮದ ಓರ್ವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ನಿನ್ನೆ ಬೆಳಗ್ಗೆ (ಸೆ.25) 10 ಗಂಟೆ ಸುಮಾರಿಗೆ 6 ಜನರ ಆರೋಗ್ಯದಲ್ಲಿ ಏರುಪೇರಾಗಿದೆ. ಅಸ್ವಸ್ಥರು ಗೂಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಈ ವೇಳೆ ಎಚ್ಚತ್ತ ಆರೋಗ್ಯ ಅಧಿಕಾರಿಗಳು ವೈದ್ಯರ ತಂಡ ಸಮೇತ ಶೆಟ್ಟಪ್ಪನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿದ್ದಾರೆ. ಇದುವರೆಗೆ ಸುಮಾರು 28ಮಂದಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಗ್ರಾಮದಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಅಸ್ವಸ್ಥಗೊಂಡಿರುವವರ ಮನೆಗೆ ತೆರಳಿ ಚಿಕಿತ್ಸೆ ನೀಡುತ್ತಿದ್ದಾರೆ. ಅಸ್ವಸ್ಥಗೊಂಡಿದ್ದ 28 ಜನರಲ್ಲಿ 24 ಜನರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುತ್ತಿದ್ದಾರೆ. ಅಣಬೆ ಸೇವಿಸಿದ್ದ ಬಗ್ಗೆಯೂ ಶಂಕೆ ಇದೆ. ಮೇಲ್ನೋಟಕ್ಕೆ ಕುಡಿಯುವ ನೀರು ಕಲುಷಿತಗೊಂಡಿರಬಹುದು, ಆಹಾರದಲ್ಲಿ ವ್ಯತ್ಯಾಸಗೊಂಡಿರಬಹುದೆಂದು ಅಂದಾಜಿಸಲಾಗಿದೆ. ಕುಡಿಯುವ ನೀರನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ. ಬಳಿಕ ಪ್ರಕರಣದ ಸತ್ಯಸಂಗತಿ ಹೊರಬರಲಿದೆ. ಗ್ರಾಮಸ್ಥರಲ್ಲಿ ಸಾಂಕ್ರಾಮಿಕ ರೋಗದ ಆತಂಕವು ಹೆಚ್ಚಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಗಣೇಶ ಚತುರ್ಥಿ

Ganesh Chaturthi : ನಾಳೆ-ನಾಡಿದ್ದು ಈ ರೂಟ್‌ನಲ್ಲಿ ವಾಹನ ಸಂಚಾರ ಬಂದ್‌!

Ganesh Chaturthi : ಗಣೇಶ ಮೂರ್ತಿಗಳ ಮೆರವಣಿಗೆ ಹಾಗೂ ವಿಸರ್ಜನಾ ಇರುವುದರಿಂದ ಬೆಂಗಳೂರಿನ ಕೆಲವು ಕಡೆ ವಾಹನ ಸಂಚಾರವನ್ನು (Traffic advisory) ನಿರ್ಬಂಧಿಸಲಾಗಿದೆ.

VISTARANEWS.COM


on

By

Ganesh Chaturthi Vehicular traffic on this route to be restricted tomorrow
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರ್.ಟಿ. ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮುನಿರೆಡ್ಡಿಪಾಳ್ಯದಲ್ಲಿ ಸೆ. 23ರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ (Ganesh Chaturthi) ಮೆರವಣಿಗೆ ನಡೆಯಲಿದೆ. ಹೀಗಾಗಿ ಶನಿವಾರ ಸಂಜೆ 06 ಗಂಟೆಯಿಂದ ಮರುದಿನ ಬೆಳಗ್ಗೆ 08 ಗಂಟೆಯವರೆಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ವಾಹನ ಸಂಚಾರ ಬಂದ್‌ ಆಗಲಿದೆ.

ಈ ಮಾರ್ಗಗಳಲ್ಲಿ ತಾತ್ಕಾಲಿಕ ನಿರ್ಬಂಧ

ದೇವೇಗೌಡ ರಸ್ತೆ, ಜೆ.ಸಿ.ನಗರ ಮುಖ್ಯರಸ್ತೆ, ಮಠದಹಳ್ಳಿ ಮುಖ್ಯರಸ್ತೆ, ದೇಸ್‌ರಾಜ್ ಅರಸ್ ರಸ್ತೆಗಯಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ದಿಣ್ಣೂರಿಗೆ ಹೋಗಲು ಈ ದಾರಿ ಬಳಸಿ

1) ಸುಲ್ತಾನ್‌ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳು ಹೀಗಿವೆ.
ದಿಣ್ಣೂರು ಮುಖ್ಯರಸ್ತೆಯಿಂದ ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್‌ನಲ್ಲಿ ಎಡತಿರುವು ಪಡೆಯಬೇಕು. ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಗುಂಡುರಾವ್‌ ಮನೆ ಜಂಕ್ಷನ್‌, ಬೆಂಗಳೂರ ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್ ಸರ್ವೀಸ್ ರಸ್ತೆಯಲ್ಲಿ ಎಡತಿರುವು ಪಡೆದು ಜಯಮಹಲ್ ರಸ್ತೆಯಲ್ಲಿ ನೇರವಾಗಿ ಕಂಟೋನ್ಮೆಂಟ್‌ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

  1. ಕಂಟೋನ್ಮೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ – ಸುಲ್ತಾನ್ ಪಾಳ್ಯ – ಕಾವಲ್‌ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಜಯಮಹಲ್‌ ರಸ್ತೆ ಮೂಲಕ ಮೇಖ್ರಿ ಸರ್ಕಲ್ ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ವಾಸ್ ಮೂಲಕ ಆರ್.ಟಿ.ನಗರ ಮುಖ್ಯರಸ್ತೆ- ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್ ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  2. ಯಶವಂತಪುರ ಕಡೆಯಿ೦ದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್‌ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಮೇಕ್ರಿ ಸರ್ಕಲ್‌ನಲ್ಲಿ ಎಡತಿರುವು ಪಡೆದು ಬೆಂಗಳೂರು ಬಳ್ಳಾರಿ ರಸ್ತೆ, ಸಿಬಿಐ ಅಂಡರ್ ಪಾಸ್ ಬಲತಿರುವು ಪಡೆದು ಆರ್.ಟಿ.ನಗರ ಪೊಲೀಸ್ ಠಾಣೆ ಜಂಕ್ಷನ್-ಎಡತಿರುವು ಪಡೆದು ದಿಣ್ಣೂರು ರಸ್ತೆಯ ಮೂಲಕ ಸಂಚರಿಸಬಹುದು.
  3. ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಮೇಖ್ರಿಸರ್ಕಲ್ ಅಂಡರ್ ಪಾಸ್, ಬೆಂಗಳೂರು ಬಳ್ಳಾರಿ ರಸ್ತೆ, ಸಿ.ಬಿ.ಐ. ಜಂಕ್ಷನ್ ನಂತರ ಕರ್ನಾಟಕ ಸ್ಪೀರಿಟ್‌ನಲ್ಲಿ ಬಲ ತಿರುವು ತೆಗೆದುಕೊಂಡು ಬಿಬಿ ಸರ್ವೀಸ್‌ ರಸ್ತೆ, ಸಿ.ಬಿ.ಐ ರಸ್ತೆ ಡೆಡ್ ಎಂಡ್ ಬಲತಿರುವು ಮೂಲಕ ದಿಣ್ಣೂರು ರಸ್ತೆಯ ಮೂಲಕ ಹೋಗಬಹುದು.

ಸೆ.24ರಂದು ಈ ಮಾರ್ಗದಲ್ಲಿ ಸಂಚಾರ ಬಂದ್

‌ಸೆ.24ರಂದು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಸಂಚಾರ ನಿರ್ಬಂಧ ಮಾಡಲಾಗಿದೆ.
-ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
-ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೂ ಸಂಚಾರ ಬಂದ್‌ ಆಗಲಿದೆ.
-ಕೆನ್ಸಿಂಗ್‌ಟನ್‌ ಕಡೆಯಿಂದ ಎಂ.ಇ.ಜಿ ಮೂಲಕ ಹಲಸೂರು ಲೇಕ್ ಕಡೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಆದರೆ ಎಂಇಜಿ ಕಡೆಯಿಂದ ಕೆನ್ಸಿಂಗ್‌ಟನ್ ಕಡೆಗೆ ಏಕಮುಖ ಸಂಚಾರ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Ganesh Chaturthi: ನಾಳೆ ಗಣೇಶ ಮೂರ್ತಿಗಳ ವಿಸರ್ಜನೆ; ‌ಬೆಂಗಳೂರಿನ ಹಲವೆಡೆ ರಸ್ತೆ ಮಾರ್ಗ ಬದಲಾವಣೆ

Ganesh Chaturthi: ಬೆಂಗಳೂರಿನ ಆರ್.ಟಿ. ನಗರ ಸಂಚಾರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಸೆ.21ರಂದು ಸಂಜೆ 6 ಗಂಟೆಯಿಂದ ಸೆ.22 ಬೆಳಗ್ಗೆ 7 ಗಂಟೆಯವರೆಗೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

VISTARANEWS.COM


on

Ganesh visarjan
Koo

ಬೆಂಗಳೂರು: ನಗರದಲ್ಲಿ ಸೆ.21ರಂದು ಗಣೇಶ ಮೂರ್ತಿಗಳ ವಿಸರ್ಜನೆ (Ganesh Chaturthi) ‌ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಆರ್.ಟಿ. ನಗರ ಸಂಚಾರ ಪೊಲೀಸ್‌ ಠಾಣಾ ಸರಹದ್ದಿನಲ್ಲಿ ಸುಗಮ ಸಂಚಾರಕ್ಕಾಗಿ ಹಲವೆಡೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಸೆ.21ರಂದು ಗುರುವಾರ ರಾತ್ರಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಗುರುವಾರ ಸಂಜೆ 6 ಗಂಟೆಯಿಂದ ಶುಕ್ರವಾರ ಬೆಳಗ್ಗೆ 7 ಗಂಟೆಯವರೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಅದ್ದರಿಂದ ವಾಹನ ಸವಾರರು ಬದಲಿ‌ ಮಾರ್ಗದಲ್ಲಿ ಸಾಗುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ | Ganesh Chaturthi : ಸೆ. 22, 24ಕ್ಕೆ ಸಂಚಾರ ಬದಲಿಸಿ; ಇದು ಗಣಪನ ಎಫೆಕ್ಟ್‌

ಎಲ್ಲಾ ಮಾದರಿಯ ವಾಹನಗಳು ಪರ್ಯಾಯ ರಸ್ತೆಯಲ್ಲಿಯೇ ಸಂಚರಿಸಬೇಕಾಗಿದ್ದು, ಇದಕ್ಕಾಗಿ ಸಂಚಾರ ಪೋಲಿಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸೂಕ್ತ ಸ್ಥಳಗಳಲ್ಲಿ ಅಧಿಕಾರಿಗಳ ನಿಯೋಜನೆ ಮತ್ತು ಬಂದೋಬಸ್ತ್ ಮಾಡಲಾಗಿದೆ.

ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾದ ರಸ್ತೆಗಳ ವಿವರ

  1. ದಿಣ್ಣೂರು ಮುಖ್ಯರಸ್ತೆ
  2. ಆರ್.ಟಿ ನಗರ ಮುಖ್ಯರಸ್ತೆ.
  3. ಸಿಬಿಐ ಮುಖ್ಯರಸ್ತೆ.

ಮಾರ್ಗ ಬದಲಾವಣೆ ವಿವರಗಳು

1.ಸುಲ್ತಾನ್ ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್‌ಮೆಂಟ್ ರೈಲು ನಿಲ್ದಾಣದ ಕಡೆಗೆ ಹಾಗೂ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

ಸುಲ್ತಾನ್ ಪಾಳ್ಯ ಮುಖ್ಯರಸ್ತೆ – ದಿಣ್ಣೂರು ಜಂಕ್ಷನ್‌-ಎಡತಿರುವು – ದೇವೇಗೌಡ ಮುಖ್ಯರಸ್ತೆ – ಪಿ.ಆರ್.ಟಿ.ಸಿ ಜಂಕ್ಷನ್- ಬಲ ತಿರುವು – ವಾಟರ್ ಟ್ಯಾಂಕ್ ಜಂಕ್ಷನ್ – ಎಡ ತಿರುವು- ಟಿ.ವಿ ಟವರ್ – ಎಡ ತಿರುವು-ಜಯಮಹಲ್ ಮುಖ್ಯರಸ್ತೆ- ರಸ್ತೆಯಲ್ಲಿ ನೇರವಾಗಿ ಕಂಟೋನೆಂಟ್ ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.

2.ಸುಲ್ತಾನ್ ಪಾಳ್ಯ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನ ಸವಾರರು ಸಂಚರಿಸಬೇಕಾದ ಮಾರ್ಗಗಳು:

ಸುಲ್ತಾನ್ ಪಾಳ್ಯ ಮುಖ್ಯರಸ್ತೆ – ದಿಣ್ಣೂರು ಜಂಕ್ಷನ್-ಎಡತಿರುವು – ದೇವೇಗೌಡ ಮುಖ್ಯರಸ್ತೆ – ಪಿ.ಆರ್.ಟಿ.ಸಿ ಜಂಕ್ಷನ್- ಬಲ -ತಿರುವು – ವಾಟರ್ ಟ್ಯಾಂಕ್ ಜಂಕ್ಷನ್ -ಬಲ ತಿರುವು- ಮಠದಹಳ್ಳಿ ಮುಖ್ಯರಸ್ತೆ- ಗುಂಡೂರಾವ್ ಸರ್ಕಲ್ – ಎಡ ತಿರುವು – ತರಳಬಾಳು ರಸ್ತೆ – ಎಡತಿರುವು- ಬೆಂಗಳೂರು ಬಳ್ಳಾರಿ ರಸ್ತೆ ಮೇಕ್ರಿ ಸರ್ಕಲ್ – ಬೆಂಗಳೂರು ನಗರದ ಕಡೆಗೆ ಸಂಚರಿಸಬಹುದಾಗಿದೆ.

    3.ಕಂಟೋನ್ಸೆಂಟ್ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು. – ಸುಲ್ತಾನ್ ಪಾಳ್ಯ – ಕಾವಲ್‌ ಭೈರಸಂದ್ರ ಕಡೆಗೆ:

    ಜಯಮಹಲ್ ರಸ್ತೆ- ಜೆ.ಸಿ ನಗರ ಪಿ.ಎಸ್ ಜಂಕ್ಷನ್ – ಟಿವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್ ಬಲ ತಿರುವು) – ವಾಟರ್ ಟ್ಯಾಂಕ್ ಜಂಕ್ಷನ್ – ಬಲ ತಿರುವು – ಪಿ.ಆರ್.ಟಿ.ಸಿ ಜಂಕ್ಷನ್ – ಎಡ ತಿರುವು- ದೇವೆಗೌಡ ರಸ್ತೆ – ದಿಣ್ಣೂರು ಜಂಕ್ಷನ್ ಬಲ ತಿರುವು -ಸುಲ್ತಾನ್ ಪಾಳ್ಯ – ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

      4.ಯಶವಂತಪುರ ಕಡೆಯಿಂದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು:

      ಮೇಕ್ರಿ ಸರ್ಕಲ್‌- ಜಯಮಹಲ್ ಮುಖ್ಯರಸ್ತೆ – ಟಿ.ವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ವಾಟರ್‌ ಟ್ಯಾಂಕ್ ಜಂಕ್ಷನ್ – ಪಿ.ಆರ್.ಟಿ.ಸಿ ಜಂಕ್ಷನ್ – ಎಡ ತಿರುವು- ದೇವೇಗೌಡ ರಸ್ತೆ – ದಿಣ್ಣೂರು ಜಂಕ್ಷನ್ ಬಲ- ತಿರುವು ಸುಲ್ತಾನ್ ಪಾಳ್ಯ – ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

      5.ಬೆಂಗಳೂರು ನಗರದ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಅನುಸರಿಸಬೇಕಾದ ಮಾರ್ಗಗಳು:

      ಮೇಕಿ ಸರ್ಕಲ್- ಬಲ ತಿರುವು – ಜಯಮಹಲ್‌ ಮುಖ್ಯರಸ್ತೆ ಟಿ.ವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ವಾಟರ್ ಟ್ಯಾಂಕ್ ಜಂಕ್ಷನ್‌ – ಎಡ ತಿರುವು ಮಠದಹಳ್ಳಿ ಮುಖ್ಯ ರಸ್ತೆ – ಸರ್ಕಲ್ – ಆರ್.ಟಿ.ನಗರ ಮುಖ್ಯರಸ್ತೆ ಮೂಲಕ ಸಂಚರಿಸಬಹುದು.

      6.ಹೆಬ್ಬಾಳ ಪಿ.ಎಸ್ ಜಂಕ್ಷನ್‌ನಿಂದ ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು – ಸಂಚರಿಸಬೇಕಾದ ಮಾರ್ಗಗಳು:

      ಹೆಬ್ಬಾಳ ಪಿ.ಎಸ್ ಜಂಕ್ಷನ್‌ನಿಂದ – ಬೆಂಗಳೂರು ಬಳ್ಳಾರಿ ರಸ್ತೆ- ಸಿಬಿಐ ಜಂಕ್ಷನ್‌ – ಸಂಜಯನಗರ ಕ್ರಾಸ್- ತರಳಬಾಳು ರಸ್ತೆ ಎಡತಿರುವು- ದೇಸ್ವರಾಜ್ ರಸ್ತೆ -ಗುಂಡೂರಾವ್ ಸರ್ಕಲ್ ಬಲತಿರುವು- 1 – ಮಠದಹಳ್ಳಿ ರಸ್ತೆ ವಾಟರ್ ಟ್ಯಾಂಕ್ ಜಂಕ್ಷನ್‌ ಎಡ ತಿರುವು -ಪಿ.ಆರ್.ಟಿ.ಸಿ ಜಂಕ್ಷನ್ – ದೇವೆಗೌಡ ರಸ್ತೆ – ದಿಣ್ಣೂರು ಸಂಚರಿಸಬಹುದು. – ಎಡ ತಿರುವು ದಿಣ್ಣೂರು ಜಂಕ್ಷನ್ ಬಲ ತಿರುವು ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ.

        Continue Reading
        Advertisement
        Narendra Modi
        ದೇಶ1 hour ago

        PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

        Rajakaluve
        ಸಂಪಾದಕೀಯ2 hours ago

        ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

        IPL 2024
        ಪ್ರಮುಖ ಸುದ್ದಿ2 hours ago

        IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

        DCM D K Shivakumar instructed to test drinking water everywhere including Bengaluru
        ಕರ್ನಾಟಕ2 hours ago

        Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

        Naxals
        ದೇಶ2 hours ago

        Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

        IPL 2024
        ಪ್ರಮುಖ ಸುದ್ದಿ3 hours ago

        IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

        arecanut price
        ಕರ್ನಾಟಕ3 hours ago

        Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

        Self Harming Husband commits suicide for taking his wife home
        ಕರ್ನಾಟಕ3 hours ago

        Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

        WhatsApp AI
        ತಂತ್ರಜ್ಞಾನ4 hours ago

        WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

        T20 world cup 2024
        ಕ್ರೀಡೆ4 hours ago

        T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

        Sharmitha Gowda in bikini
        ಕಿರುತೆರೆ8 months ago

        Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

        Kannada Serials
        ಕಿರುತೆರೆ7 months ago

        Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

        Bigg Boss- Saregamapa 20 average TRP
        ಕಿರುತೆರೆ7 months ago

        Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

        galipata neetu
        ಕಿರುತೆರೆ6 months ago

        Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

        Kannada Serials
        ಕಿರುತೆರೆ8 months ago

        Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

        Kannada Serials
        ಕಿರುತೆರೆ8 months ago

        Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

        Bigg Boss' dominates TRP; Sita Rama fell to the sixth position
        ಕಿರುತೆರೆ7 months ago

        Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

        geetha serial Dhanush gowda engagement
        ಕಿರುತೆರೆ5 months ago

        Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

        varun
        ಕಿರುತೆರೆ6 months ago

        Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

        Kannada Serials
        ಕಿರುತೆರೆ8 months ago

        Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

        dina bhavishya read your daily horoscope predictions for May 23 2024
        ಭವಿಷ್ಯ20 hours ago

        Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

        Karnataka Weather Forecast
        ಮಳೆ2 days ago

        Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

        Karnataka Rain
        ಮಳೆ2 days ago

        Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

        Love Case Father throws hot water on man who loved his daughter for coming home
        ಕೊಡಗು3 days ago

        Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

        Contaminated Water
        ಮೈಸೂರು3 days ago

        Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

        Karnataka Rain
        ಮಳೆ3 days ago

        Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

        Karnataka Rain
        ಮಳೆ4 days ago

        Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

        Karnataka rain
        ಮಳೆ4 days ago

        Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

        Karnataka Rain
        ಮಳೆ4 days ago

        Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

        Prajwal Revanna Case JDS calls CD Shivakumar pen drive gang
        ರಾಜಕೀಯ6 days ago

        Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

        ಟ್ರೆಂಡಿಂಗ್‌