Cooking Tips: ಕರಿದ ತಿನಿಸುಗಳು ಹೆಚ್ಚು ಹೊತ್ತು ಗರಿಗರಿ ಆಗಿರಬೇಕೆ? ಹಾಗಾದರೆ ಹೀಗೆ ಮಾಡಿ - Vistara News

ಆಹಾರ/ಅಡುಗೆ

Cooking Tips: ಕರಿದ ತಿನಿಸುಗಳು ಹೆಚ್ಚು ಹೊತ್ತು ಗರಿಗರಿ ಆಗಿರಬೇಕೆ? ಹಾಗಾದರೆ ಹೀಗೆ ಮಾಡಿ

ಕೆಲವೊಮ್ಮೆ ಮಾಡಿದ ತಕ್ಷಣ ತಿಂಡಿ ತಿನ್ನಲು ಸಾಧ್ಯವಾಗುವುದಿಲ್ಲ. ಸ್ವಲ್ಪ ಹೊತ್ತಾದರೂ ಇಡಲೇಬೇಕಾಗುತ್ತದೆ. ಹಾಗಾದರೆ, ಅಂತಹ ಆಹಾರಗಳನ್ನು ತಾಜಾ ಆಗಿ ಉಳಿಯುವಂತೆ ಹೆಚ್ಚು ಕಾಲ ಗರಿಗರಿಯಾಗಿ ಉಳಿಯುವಂತೆ, ತನ್ನ ಕ್ರಿಸ್ಪೀ ಗುಣವನ್ನು ಕಳೆದುಕೊಳ್ಳದಂತೆ ಇಡಲು ಕೆಲವು ಸ್ಮಾರ್ಟ್‌ ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಅದು ಹೇಗೆ? ಇಲ್ಲಿದೆ (cooking tips) ಮಾಹಿತಿ.

VISTARANEWS.COM


on

Cooking tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೆಲವು ತಿನಿಸುಗಳನ್ನು ಗರಿಗರಿಯಾಗಿದ್ದಾಗ ತಿಂದರೇ ರುಚಿ. ಮಾಡಿದ ಕೂಡಲೇ ತಾಜಾ ಆಗಿ ತಿಂದರೆ ರುಚಿ ಹೆಚ್ಚು. ಹೆಚ್ಚು ಹೊತ್ತು ಇಟ್ಟರೆ ಅದು ತನ್ನ ತಾಜಾತನವನ್ನು ಕಳೆದುಕೊಂಡು ಮೆತ್ತಗಾಗಿಬಿಡುತ್ತದೆ. ಗರಿಗರಿಯಾಗಿ ಮಾಡಿದ ಫ್ರೆಂಚ್‌ಫ್ರೈಸ್‌, ಪೊಟೇಟೋ ವೆಜಸ್‌, ಅಥವಾ ಇನ್ಯಾವುದೋ ಪಕೋಡಾ ಹೊರತೆಗೆದ ನಿಮಿಷದಲ್ಲಿ ಮೆತ್ತಗಾಗಿ, ನೀರಸವೆನಿಸಿಬಿಡುತ್ತದೆ. ಎಷ್ಟೇ ರುಚಿಯಾದ ತಿನಿಸೂ ಸ್ವಲ್ಪ ಹೊತ್ತಿನಲ್ಲಿ ತನ್ನ ಮೊದಲ ರುಚಿಯನ್ನು ಕಳೆದುಕೊಳ್ಳುತ್ತದೆ. ಆದರೆ, ಕೆಲವೊಮ್ಮೆ, ಮಾಡಿದ ತಕ್ಷಣ ತಿನ್ನಲು ಸಾಧ್ಯವಾಗುವುದಿಲ್ಲ. ಸ್ವಲ್ಪ ಹೊತ್ತಾದರೂ ಇಡಲೇಬೇಕಾಗುತ್ತದೆ. ಹಾಗಾದರೆ, ಅಂತಹ ಆಹಾರಗಳನ್ನು ತಾಜಾ ಆಗಿ ಉಳಿಯುವಂತೆ ಹೆಚ್ಚು ಕಾಲ ಗರಿಗರಿಯಾಗಿ ಉಳಿಯುವಂತೆ, ತನ್ನ ಕ್ರಿಸ್ಪೀ ಗುಣವನ್ನು ಕಳೆದುಕೊಳ್ಳದಂತೆ ಇಡಲು ಕೆಲವು ಸ್ಮಾರ್ಟ್‌ ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಬನ್ನಿ, ಆ ಸ್ಮಾರ್ಟ್‌ ಉಪಾಯಗಳೇನು (cooking tips) ಎಂಬುದನ್ನು ನೋಡೋಣ.

Wire rack

ವೈರ್‌ ರ‍್ಯಾಕ್‌ ಬಳಸಿ

ನೀವು ಏರ್‌ ಫ್ರೈ ಅಥವಾ ಸಾಂಪ್ರದಾಯಿಕ ಮಾದರಿಯಲ್ಲಿ ಎಣ್ಣೆಯಲ್ಲಿ ಕರಿದು ಮಾಡಿರುವ ತಿನಿಸು ಹೆಚ್ಚು ಹೊತ್ತು ಹಾಗೆಯೇ ಗರಿಗರಿಯಾಗಿ ಉಳಿಯಬೇಕೆಂದರೆ ವೈರ್‌ ರ್ಯಾಕ್‌ ಬಳಸಿ. ಎಲ್ಲ ಬದಿಗಳಲ್ಲೂ ಗಾಳಿಯಾಡುವ ಅವಕಾಶ ಇದರಲ್ಲಿ ಸಿಗುತ್ತದೆ. ಅಥವಾ ತೂತುಗಳಿರುವ ಮೆಶ್‌ನಂಥ ಡಬ್ಬ ಇದ್ದರೆ ಅದರಲ್ಲಿ ಹಾಕಿಡಿ. ಆಗ ಕರಿದ ತುಂಡಿತ ಹಬೆ ಮತ್ತೆ ಅದರ ಮೇಲೆ ಕೂರುವುದಿಲ್ಲ. ಎಲ್ಲ ಬದಿಯಿಂದಲೂ ಗಾಳಿ ತಾಗುವ ಕಾರಣ, ತಣ್ಣಗಾದರೂ ಹೆಚ್ಚು ಹೊತ್ತು ಹಾಗೆಯೇ ಗರಿಯಾಗಿಯೇ ಇರುತ್ತದೆ.

ಮೆತ್ತಗಾಗದಂತೆ ಹೀಗೆ ಮಾಡಿ

ಏರ್‌ಫ್ರೈ ಮಾಡಿದ ಅಥವಾ ಎಣ್ಣೆಯಲ್ಲಿ ಕರಿದ ತಿನಿಸು ಸ್ವಲ್ಪ ಹೊತ್ತಿನಲ್ಲಿ ಮೆತ್ತಗಾಗುತ್ತದೆ ಹಾಗೂ ತನ್ನ ತಾಜಾತನವನ್ನು ಕಳೆದುಕೊಳ್ಳುತ್ತದೆ. ಹೀಗಾಗದಂತೆ ತಡೆಯಲು ಓವನ್‌ನಲ್ಲಿ ವೈರ್‌ ರ್ಯಾಕ್‌ನ ಮೇಲೆ 15 ನಿಮಿಷಗಳ ಕಾಲ ಹಾಗೆಯೇ ಇಡಿ. ಆಗ ಬಹುಬೇಗನೆ ಮೆತ್ತಗಾಗದು.

Cooking

ಮತ್ತೆ ಬಿಸಿ ಮಾಡಬೇಡಿ

ಮೈಕ್ರೋವೇವ್‌ ಓವನ್‌ನಲ್ಲಿ ಮಾಡಿದ ತಿಂಡಿಯನ್ನು ಮತ್ತೆ ಬಿಸಿ ಮಾಡಬೇಡಿ. ಇದು ಆ ಆಹಾರ ವಸ್ತುವಿನಲ್ಲಿ ಇನ್ನಷ್ಟು ಹೆಚ್ಚು ತೇವಾಂಶ ಸೇರಿಕೊಳ್ಳುವಂತೆ ಮಾಡುತ್ತದೆ. ಇದರಿಂದ ಮತ್ತೆ ಬಹುಬೇಗನೆ ಮೆತ್ತಗಾಗಿಬಿಡುತ್ತದೆ.

ಸಾಸ್‌ ಮೊದಲೆ ಹಾಕಬೇಡಿ

ಸಾಸ್‌ ಅಥವಾ ಕೆಚಪ್‌ಗಳನ್ನು ನಿಮ್ಮ ಕ್ರಿಸ್ಟೀ ತಿನಿಸುಗಳನ್ನು ಮಾಡುವಾಗ ಹಾಕಬೇಡಿ. ಇದರಿಂದ ಇದು ಇನ್ನೂ ಬೇಗ ಮೆತ್ತಗಾಗಿಬಿಡುತ್ತದೆ. ಆದರೆ, ಕೆಲವು ಬಗೆಯಲ್ಲಿ ಹಾಕಲೇಬೇಕಾಗಿದ್ದರೆ, ಕೊನೆಯ ಕ್ಷಣದಲ್ಲಿ ಮಾಡು, ಅವಾಗಲೇ ತಿನ್ನಿ. ಹೆಚ್ಚು ಹೊತ್ತು ಇಡಲು ಹೋಗಬೇಡಿ. ಫಟಾಫಟ್‌ ತಿನಿಸಿನ ಸಂದರ್ಭ ಮಾತ್ರ ಇವು ಉಪಯೋಗಕ್ಕೆ ಬರುತ್ತವೆ.

box

ಗಾಳಿಯಾಡದ ಡಬ್ಬದಲ್ಲಿ ಹಾಕಿ

ನೀವು ಇಂತಹ ಕರಿದ ತಿನಿಸುಗಳನ್ನು ಆಫೀಸಿಗೆ ಅಥವಾ ಹೊರಗೆ ಹೋಗುವಾಗ ಡಬ್ಬದಲ್ಲಿ ಪ್ಯಾಕ್‌ ಮಾಡಿ ತೆಗೆದುಕೊಂಡು ಹೋಗಬೇಕಾದ ಸಂದರ್ಭ ಬಂದರೆ ತಿನಿಸನ್ನು ಪೇಪರ್‌ ಟವಲ್‌ನಲ್ಲಿ ರ‍್ಯಾಪ್‌ ಮಾಡಿ ನಂತರ ಗಾಳಿಯಾಡದ ಡಬ್ಬದಲ್ಲಿ ಹಾಕಿ ಮುಚ್ಚು ತೆಗೆದುಕೊಂಡು ಹೋಗಿ. ಆದ ಹೆಚ್ಚಿನ ತೇವಾಂಶ ಪೇಪರ್‌ ರ್ಯಾಮಪ್‌ ಹೀರಿಕೊಳ್ಳುವುದರಿಂದ ಹೆಚ್ಚು ಮೆತ್ತಗಾಗದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

Liquid Nitrogen : ಕಾಟನ್ ಕ್ಯಾಂಡಿ ಬಳಿಕ ಕರ್ನಾಟಕದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿಷೇಧ

Liquid Nitrogen: ಆರೋಗ್ಯಕ್ಕೆ ಕುತ್ತು ತರುವ ಕಾಟನ್‌ ಕ್ಯಾಂಡಿ, ಗೋಬಿ ಮಂಚೂರಿ ಬ್ಯಾನ್‌ ಬಳಿಕ ಇದೀಗ ಆಹಾರದಲ್ಲಿ ಲಿಕ್ವಿಡ್‌ ನೈಟ್ರೋಜನ್‌ ಬಳಕೆಯನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಆದೇಶವನ್ನು ಹೊರಡಿಸಿದೆ. ಆ ಪ್ರಕಾರ ಯಾರಾದರೂ ಲಿಕ್ವಿಡ್‌ ನೈಟ್ರೋಜನ್‌ ಬಳಸಿದ್ರೆ ಜೀವಾವಧಿ ಶಿಕ್ಷೆಯೊಂದಿಗೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

VISTARANEWS.COM


on

By

LIQUID NITROGEN
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆಹಾರ ಪದಾರ್ಥಗಳಲ್ಲಿ ಲಿಕ್ವಿಡ್ ನೈಟ್ರೋಜನ್ (Liquid Nitrogen) ಬಳಕೆ ಮಾಡಿದರೆ 10 ಲಕ್ಷ ರೂ. ದಂಡ, ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ. ಲಿಕ್ವಿಡ್ ನೈಟ್ರೋಜನ್‌ನ ಒಂದು ತುತ್ತು ಜೀವಕ್ಕೆ ಕುತ್ತು ತರಬಹುದು. ಹೀಗಾಗಿ ಕಲರ್ ಕಾಟನ್‌ ಕ್ಯಾಂಡಿ, ಗೋಬಿ ಮಂಚೂರಿ ಬಳಿಕ ಇದೀಗ ರಾಜ್ಯದಲ್ಲಿ ಆಹಾರದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆಯನ್ನು ಬ್ಯಾನ್ ಮಾಡಲಾಗಿದೆ.

ಕೆಲವು ರೆಸ್ಟೋರಂಟ್‌ಗಳಲ್ಲಿ ಫುಡ್‌ ಪ್ರಿಯರನ್ನು ಆಕರ್ಷಿಸಲೆಂದೇ ತರಹೇವಾರಿ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಇತ್ತೀಚೆಗಂತೂ ಆಹಾರ ಪದಾರ್ಥಗಳಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ಹೆಚ್ಚಾಗುತ್ತಿದೆ. ಜನರು ತಮಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಅಪಾಯದ ಬಾಗಿಲು ತಟ್ಟುತ್ತಿದ್ದಾರೆ. ಲಿಕ್ವಿಡ್ ನೈಟ್ರೋಜನ್ ಮೂಲಕ ಸ್ಮೋಕ್‌ ಐಸ್‌ಕ್ರೀಂ, ಸ್ಮೋಕ್‌ ಬಿಸ್ಕತ್ತು, ಬಿಯರ್‌ನಲ್ಲಿ ಬಳಸಲಾಗುತ್ತಿದ್ದು,ಇದು ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದೆ. ಹೀಗಾಗಿ ಲಿಕ್ವಿಡ್ ನೈಟ್ರೋಜನ್ ಬಳಸಿದ ಆಹಾರ ಸೇವಿಸುವ ಮುನ್ನ ಎಚ್ಚರವಾಗಿರಿ.

ಈ ಸ್ಮೋಕಿಂಗ್ ಲಿಕ್ವಿಡ್ ನೈಟ್ರೋಜನ್ ಸೇವನೆಯಿಂದ ಅಂಗಾಂಗಗಳ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ. ಮುಖ್ಯವಾಗಿ ಲಿಕ್ವಿಡ್‌ ನೈಟ್ರೋಜನ್‌ ಸೇವನೆಯಿಂದ ಕರಳು, ಗಂಟಲುಗಳಲ್ಲಿ ಹುಣ್ಣಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿರ್ಬಂಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆದೇಶ ಹೊರಡಿಸಿದೆ. ಲಿಕ್ವಿಡ್ ನೈಟ್ರೋಜನ್ ಬಳಕೆ ಮಾಡಿದರೆ 10 ಲಕ್ಷ ರೂ. ದಂಡ, ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಈಗಾಗಲೇ ಪಕ್ಕದ ತಮಿಳುನಾಡಲ್ಲಿ ಬಿಸ್ಕತ್‌ ಮತ್ತು ಐಸ್‌ಕ್ರೀಮ್‌ನಂತಹ ಆಹಾರ ಪದಾರ್ಥಗಳ ಜತೆ ಲಿಕ್ವಿಡ್‌ ನೈಟ್ರೋಜನ್‌ ನೇರ ಬಳಕೆಯನ್ನು ನಿಷೇಧಿಸಿದೆ. ಇದೀಗ ಕರ್ನಾಟಕದಲ್ಲೂ ಲಿಕ್ವಿಡ್‌ ನೈಟ್ರೋಜನ್‌ ಬಳಕೆಯನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: Cotton Candy Ban : ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ ಬ್ಯಾನ್‌, ಗೋಬಿ ಮಂಚೂರಿಗೂ ಡೇಂಜರ್‌

ಈ ಲಿಕ್ವಿಡ್‌ ನೈಟ್ರೋಜನ್‌ ಅಥವಾ ದ್ರವ ಸಾರಜನಕವನ್ನು ಔಷಧ ಮತ್ತು ರಾಸಾಯನಿಕ ಕಂಪನಿಗಳು ತಮ್ಮ ಉತ್ಪನ್ನಗಳನ್ನು 40 ಡಿಗ್ರಿ ಸೆಂಟಿಗ್ರೇಡ್‌ನಷ್ಟು ತಂಪಾಗಿಸಲು ಬಳಸುತ್ತವೆ. ಅಲ್ಲದೆ, ಫ್ರೀಜ್‌ ಮಾಡುವ ಹಲವು ವಿಧಾನಗಳಲ್ಲಿ ಬಳಸುತ್ತಾರೆ. ಈ ಲಿಕ್ವಿಡ್‌ ನೈಟ್ರೋಜನ್‌ ಸುರಿದರೆ ಥಟ್ಟನೆ ಹಿಗ್ಗಿ ಬಿಳಿಯ ಹೊಗೆಯಂತೆ ಆವಿಯಾಗಿ ಬಿಡುತ್ತದೆ.

ಇನ್ನೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ-2006 ಪ್ರಕಾರ ಲಿಕ್ವಿಡ್‌ ನೈಟ್ರೋಜನ್‌ ಆಹಾರದಲ್ಲಿ ಬಳಸಬಾರದು ಎಂಬುದು ಈ ಮೊದಲಿನಿಂದಲೂ ಇದೆ. ಆದರೂ ಕೆಲವರು ಜನರನ್ನು ಆಕರ್ಷಿಸಲು, ಹೊಸ ಮೆನುವಿಗಾಗಿ ಇದನ್ನು ಬಳಸುತ್ತಿದ್ದಾರೆ. ಇದು ಆರೋಗ್ಯಕ್ಕೆ ಹಾನಿಕಾರಕ. ಇದನ್ನು ಬಳಸುವವರ ವಿರುದ್ಧ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆಹಾರ/ಅಡುಗೆ

Summer Food Tips: ಬೇಸಿಗೆಯಲ್ಲಿ ನಮ್ಮ ದೇಹವನ್ನು ತಂಪಾಗಿರಿಸುವ ಸರಳ ಆಹಾರಗಳಿವು!

ಹೊರಗೆ ಕಾಲಿಟ್ಟರೆ ಸಾಕು, ಸ್ನಾನ ಮಾಡಿದಂತೆ ಬೆವರಿನಿಂದಲೇ ತೊಯ್ದು ಹೋಗುವ ಮಂದಿ ಬಿಸಿಲನ್ನು ನೋಡಿ ಉಸ್ಸಪ್ಪ ಎನ್ನುತ್ತಿದ್ದಾರೆ. ಇಂತಹ ಬಿಸಿಲಿನ ವಿರುದ್ಧ ನಮ್ಮ ದೇಹವನ್ನು ಶಕ್ತವನ್ನಾಗಿ ಮಾಡಲು, ದೇಹವನ್ನು ತಂಪಾಗಿರಿಸಲು ಸೂಕ್ತ ಆಹಾರ ಸೇವನೆಯೂ ಮುಖ್ಯ. ಯಾವೆಲ್ಲ ಸರಳ ಆಹಾರಕ್ರಮ ನಮ್ಮ ದೇಹವನ್ನು ತಂಪಾಗಿರಿಸುತ್ತದೆ ಎಂಬುದನ್ನು ನೋಡೋಣ. ಈ ಆಹಾರ ಸೇವನೆಯಿಂದ ಬೇಸಿಗೆಯಲ್ಲಿ ನೀವು ಅಸಿಡಿಟಿ, ತಲೆಸುತ್ತು, ನಿತ್ರಾಣ, ನಿದ್ರಾಹೀನತೆ, ಹಸಿವಿನ ಕೊರತೆಯಂತಹ (summer food tips) ಸಮಸ್ಯೆಗಳಿಂದಲೂ ಪಾರಾಗಬಹುದು.

VISTARANEWS.COM


on

Summer Food Tips
Koo

ಬಹಳಷ್ಟು ಮಂದಿಯ ಬಾಯಿಯಲ್ಲಿ ಈಗ ಬರುವ ಮಾತು ಒಂದೇ: ಏನು ಸೆಖೆಯಪ್ಪಾ ಈ ಬಾರಿ! ಸೂರ್ಯ ಉದಯಿಸಿದ ಕೆಲವೇ ಗಂಟೆಗಳಲ್ಲಿ ಧಗಧಗಿಸಿ ಉರಿದು ಈ ಬಾರಿಯ ಬಿಸಿಲನ್ನು ಇನ್ನಷ್ಟು ತೀವ್ರಗೊಳಿಸಿದ್ದು ಸುಳ್ಳಲ್ಲ. ಬೆಂಗಳೂರಿಗರೂ ಕೂಡ ಈ ಬಾರಿಯ ಸೆಖೆಯಿಂದ ತತ್ತರಿಸಿ ಹೋಗಿದ್ದಾರೆ. ಹೊರಗೆ ಕಾಲಿಟ್ಟರೆ ಸಾಕು, ಸ್ನಾನ ಮಾಡಿದಂತೆ ಬೆವರಿನಿಂದಲೇ ತೊಯ್ದು ಹೋಗುವ ಮಂದಿ ಬಿಸಿಲನ್ನು ನೋಡಿ ಉಸ್ಸಪ್ಪ ಎನ್ನುತ್ತಿದ್ದಾರೆ. ಇಂತಹ ಬಿಸಿಲಿನ ವಿರುದ್ಧ ನಮ್ಮ ದೇಹವನ್ನು ಶಕ್ತವನ್ನಾಗಿ ಮಾಡಲು, ದೇಹವನ್ನು ತಂಪಾಗಿರಿಸಲು ಸೂಕ್ತ ಆಹಾರ (summer food tips) ಸೇವನೆಯೂ ಕೂಡ ಮುಖ್ಯ. ಹಾಗೆ ನೋಡಿದರೆ ನಾವು ಸಾಂಪ್ರದಾಯಿಕ ಶೈಲಿಯತ್ತ ಮುಖ ಮಾಡಿದರೆ ನಮ್ಮ ಪೂರ್ವಜರು, ಹಿರಿಯರು, ಋತುಮಾನಕ್ಕೆ ಅನುಗುಣವಾಗಿ ಆಹಾರವನ್ನು ತೆಗೆದುಕೊಳ್ಳುವ ಬಗೆಯನ್ನು ನಮಗೆ ದಾಟಿಸಿದ್ದಾರೆ. ಆದರೆ ಬಹಳಷ್ಟು ಬಾರಿ ಅವರ ಅಂತಹ ಸಂದೇಶವನ್ನು ನಾವು ನಿರಾಕರಿಸಿ ನಮ್ಮದೇ ಹಾದಿಯಲ್ಲಿ ಸಾಗಿದ್ದೂ ಕೂಡ ಇಂತಹ ಸಮಸ್ಯೆಗಳಿಗೆ ಕಾರಣವೇನೋ ಅನ್ನಬಹುದು. ನಾವು ಎಸಿ ಸ್ವಿಚ್‌ ಆನ್‌ ಮಾಡಿ ದೇಹವನ್ನು ಹೊರಗಿನಿಂದ ತಂಪಾಗಿಸಬಹುದು ನಿಜವೇ ಆಗಿದ್ದರೂ, ಒಳಗಿನಿಂದ ದೇಹವನ್ನು ತಂಪಾಗಿರಿಸಲು ಕೆಲವು ಆಹಾರ ಸೇವನೆಯ ಮೊರೆ ಹೋಗಲೇಬೇಕು. ಬನ್ನಿ, ಯಾವೆಲ್ಲ ಸರಳ ಆಹಾರಕ್ರಮ ನಮ್ಮ ದೇಹವನ್ನು ತಂಪಾಗಿರಿಸುತ್ತದೆ ಎಂಬುದನ್ನು ನೋಡೋಣ. ಈ ಆಹಾರ ಸೇವನೆಯಿಂದ ಬೇಸಿಗೆಯಲ್ಲಿ ನೀವು ಅಸಿಡಿಟಿ, ತಲೆಸುತ್ತು, ನಿತ್ರಾಣ, ನಿದ್ರಾಹೀನತೆ, ಹಸಿವಿನ ಕೊರತೆಯಂತ ಸಮಸ್ಯೆಗಳ ವಿರುದ್ಧ ಹೋರಾಡಿ ಫಲವನ್ನೂ ಕಾಣಬಹುದು.

Citrus fruits

ಸ್ಥಳೀಯ ಹಣ್ಣುಗಳು

ಬೆಳಗ್ಗಿನ ತಿಂಡಿಯ ನಂತರ ಮಧ್ಯಾಹ್ನದೂಟದ ಮೊದಲು ಏನಾದರೂ ಸ್ನ್ಯಾಕ್ಸ್‌ ತಿನ್ನುವ ಅಭ್ಯಾಸ ನಿಮಗಿದೆ ಎಂದಾದಲ್ಲಿ ಬೇಸಿಗೆಯಲ್ಲಿ ನಿಮ್ಮ ಸ್ಥಳೀಯ ಹಣ್ಣುಗಳನ್ನು ತಿನ್ನಲು ಮರೆಯಬೇಡಿ. ಸ್ಥಳೀಯವಾಗಿ ಸಿಗುವ, ಬೇಸಿಗೆಯಲ್ಲಿ ಮಾತ್ರ ಲಭ್ಯವಿರುವ ಹಣ್ಣುಗಳನ್ನು ಹೊಟ್ಟೆಗಿಳಿಸಿದರೆ ನಿಮ್ಮ ದೇಹ ತಂಪಾಗುತ್ತದೆ. ಬಿಸಿಲಿನಲ್ಲಿ ಓಡಾಡಿದರೂ ದೇಹಕ್ಕೆ ಶಕ್ತಿ ಸಾಮರ್ಥ್ಯ ಬರುತ್ತದೆ. ನಿತ್ರಾಣಗೊಳ್ಳುವ, ತಲೆಸುತ್ತಿ ಬವಳಿ ಬೀಳುವಂಥ ಸಮಸ್ಯೆಗಳು ನಿಮ್ಮನ್ನು ಕಾಡದು. ಉದಾಹರಣೆಗೆ, ತಾಳೆಹಣ್ಣು ಅಥವಾ ತಾಟಿನಿಂಗು, ಕಲ್ಲಂಗಡಿ ಹಣ್ಣು, ಖರ್‌ಬೂಜ, ಸೌತೆಕಾಯಿ ಇತ್ಯಾದಿಗಳ ಸೇವನೆ ಚೈತನ್ಯ ನೀಡುತ್ತದೆ. ಯಾವುದೇ ರಸಭರಿತವಾಗಿರುವ ಹಣ್ಣು ನೀವು ತಿನ್ನಬಹುದು. ಇವು ನಿಮ್ಮ ದೇಹವನ್ನು ಅಷ್ಟೇ ಅಲ್ಲ, ಮನಸ್ಸನ್ನೂ ತಂಪಾಗಿಯೇ ಇರಿಸುತ್ತದೆ. ಯಾವಾಗಲೂ ತಾಜಾ ಆಗಿರಿಸಲು ಸಹಾಯ ಮಾಡುತ್ತದೆ.

Health Benefits Of Curd Rice

ಮೊಸರನ್ನ

ಬಹಳಷ್ಟು ಮಂದಿ ಬೇಸಿಗೆಯಲ್ಲಿ ಹಸಿವನ್ನೇ ಕಳೆದುಕೊಳ್ಳುತ್ತಾರೆ. ಏನಾದರೂ ಕುಡಿದರೆ ಸಾಕು, ತಿನ್ನುವ ಮನಸ್ಸಾಗುವುದೇ ಇಲ್ಲ ಎನ್ನುತ್ತಾರೆ. ಬೇಸಿಗೆಯ ಬಿಸಿಲಿಗೆ ಇದು ಸಹಜ ಕೂಡಾ. ಆದರೆ, ಇಂತಹ ಸಂದರ್ಭ ಬೇಸಿಗೆಯಲ್ಲಿ ನಿಮಗೆ ಒಳ್ಳೆಯದನ್ನೇ ಬಯಸುವ ಅತ್ಯುತ್ತಮ ಮಧ್ಯಾಹ್ನದೂಟ ಎಂದರೆ ಅದು ಮೊಸರನ್ನ. ಮೊಸರನ್ನಕ್ಕೆ ಒಂದಿಷ್ಟು ಉಪ್ಪಿನಕಾಯಿ, ಹಪ್ಪಳ ಸೇರಿಸಿಕೊಂಡು ತಿಂದರೆ ಸ್ವರ್ಗಸುಖ. ಇದಲ್ಲವಾದರೆ ಗಂಜಿ ಉಪ್ಪಿನಕಾಯಿಯ ಊಟವಾದರೂ ಸರಿ, ಒಡನೆಯೇ ದೇಹಕ್ಕೆ ಶಕ್ತಿ ಚೈತನ್ಯವನ್ನು ನೀಡುತ್ತದೆ. ಹೊಟ್ಟೆಯನ್ನು ತಂಪಾಗಿರಿಸುತ್ತದೆ. ಮೊಸರನ್ನ ಒಳ್ಳೆಯ ಪ್ರೊಬಯಾಟಿಕ್‌ ಕೂಡಾ ಆಗಿರುವುದರಿಂದ ಇದು ಉತ್ತಮ ಅನುಭವ ನೀಡುತ್ತದೆ. ಹೊಟ್ಟೆಗೆ ಆರಾಮದಾಯಕ ಆಹಾರದ ಅನುಭವ ನೀಡುತ್ತದೆ.

ಇದನ್ನೂ ಓದಿ: Summer Health Tips: ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

ಗುಲ್ಕಂಡ್‌ ನೀರು

ಬೇಸಿಗೆಯಲ್ಲಿ ಅಸಿಡಿಟಿ, ಹೊಟ್ಟೆಯಲ್ಲಿ ಬೆಂಕಿ ಬಿದ್ದಂತೆ ಉರಿ ಇತ್ಯಾದಿ ಸಮಸ್ಯೆಗಳು ಕಾಣಿಸುತ್ತಿದ್ದರೆ ಹಾಗೂ ನಿಮ್ಮ ನಿದ್ರೆಯ ಗುಣಮಟ್ಟ, ಕಣ್ಣು ಊದಿದಂತಾಗುವುದು, ಕೈಕಾಲು ಜೋಮು ಹಿಡಿದಂತಾಗುವುದು, ಅಲ್ಲಲ್ಲಿ ನೋವು, ಉರಿಯೂತ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಬೇಕೆಂದರೆ ಒಂದು ಚಮಚ ಗುಲ್ಕಂಡ್‌ ಅನ್ನು ನೀರಿನಲ್ಲಿ ಬೆರೆಸಿ ಮಲಗುವ ಮುನ್ನ ಕುಡಿಯಿರಿ. ಈ ಗುಲಾಬಿಯ ದಳದ ಡ್ರಿಂಕ್‌ ನಿಮ್ಮ ಈ ಸಮಸ್ಯೆಗಳಿಂದ ಬಚಾವು ಮಾಡುವುದಷ್ಟೇ ಅಲ್ಲ, ಒಂದು ರಿಲ್ಯಾಕ್ಸ್‌ ಅನುಭವವನ್ನೂ ನೀಡುತ್ತದೆ.

Continue Reading

ಲೈಫ್‌ಸ್ಟೈಲ್

Weight Loss Tips Kannada: ಈ ಐದರಲ್ಲಿ ಒಂದು ಜ್ಯೂಸ್‌ ಕುಡಿಯುತ್ತಿದ್ದರೂ ಸಾಕು, ನಿಮ್ಮ ದೇಹ ತೂಕ ಇಳಿಯುತ್ತದೆ!

ಒಮ್ಮೆ ಹೆಚ್ಚಾದ ತೂಕವನ್ನು ನಿಯಂತ್ರಿಸುವುದು ಬಹು ಕಷ್ಟ. ಆದರೆ ನಿತ್ಯ ಈ ಐದು ಪಾನೀಯಗಳನ್ನು ಸೇವಿಸುವುದರಿಂದ ಉತ್ತಮ ಆರೋಗ್ಯದೊಂದಿಗೆ ದೇಹದ ತೂಕ ನಷ್ಟವನ್ನು (Weight Loss Tips Kannada) ಸುಲಭವಾಗಿ ಮಾಡಬಹುದು. ತೂಕ ಇಳಿಸುವ ಸುಲಭ ವಿಧಾನಗಳ ಪರಿಚಯ ಇಲ್ಲಿದೆ.

VISTARANEWS.COM


on

By

Weight Loss Tips kannada
Koo

ದೇಹದ ತೂಕವನ್ನು ಸಮತೋಲನದಲ್ಲಿ ಇರಿಸುವುದು ಸುಲಭದ ಕೆಲಸವೇನಲ್ಲ. ಅದಕ್ಕಾಗಿ ನಾವು ತಿನ್ನುವ ಆಹಾರ (food), ನಿತ್ಯದ ದೈಹಿಕ ಚಟುವಟಿಕೆ (exercise) ಕೂಡ ಕಾರಣವಾಗುತ್ತದೆ. ಒಮ್ಮೆ ತೂಕ ಹೆಚ್ಚಾದರೆ ಅದನ್ನು ಇಳಿಸುವುದು ಸುಲಭದ ಪ್ರಕ್ರಿಯೆಯಲ್ಲ. ದೇಹದ ತೂಕ ಹೆಚ್ಚಳವು ಸಾಮಾನ್ಯವಾಗಿ ಆತಂಕ ಉಂಟು ಮಾಡುತ್ತದೆ. ಆದರೆ ಸರಿಯಾದ ಆಹಾರ ಮತ್ತು ದೈಹಿಕ ಚಟುವಟಿಕೆಯಿಂದ ದೇಹದ ತೂಕವನ್ನು ನಿಯಂತ್ರಿಸಿ (Weight Loss Tips Kannada) ಮತ್ತೆ ಹಿಂದಿನಂತೆ ಸ್ಮಾರ್ಟ್ ಆಂಡ್ ಸ್ಲಿಮ್ (smart and slim) ಆಗಲು ಸಾಧ್ಯವಿದೆ.

ತೂಕ ಇಳಿಸುವ ಪ್ರಕ್ರಿಯೆಯಲ್ಲಿ ಒಂದು ಆಹಾರದ ಸಲಹೆಯನ್ನು ನಿತ್ಯ ಪಾಲಿಸಿದರೆ ಆರೋಗ್ಯವಾಗಿಯೂ ಇರಬಹುದು ಮತ್ತು ದೇಹದ ತೂಕವನ್ನು ಸಮತೋಲನದಲ್ಲಿಯೂ ಇರಿಸಬಹುದು. ನಿತ್ಯವೂ ಬೆಳಗ್ಗೆ ಖಾಲಿ ಹೊಟ್ಟೆಗೆ ಕೆಲವು ಫ್ರೆಶ್ ಜ್ಯೂಸ್‌ಗಳನ್ನು ಕುಡಿಯುವುದರಿಂದ ದೇಹಕ್ಕೆ ಬೇಕಾದ ಫೈಬರ್, ಖನಿಜಾಂಶ ಮತ್ತು ವಿಟಮಿನ್‌ ಗಳನ್ನು ಪಡೆಯಬಹುದು. ಅಲ್ಲದೇ ಇದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಿ ಆರೋಗ್ಯವನ್ನು ಸುಸ್ಥಿತಿಯಲ್ಲಿ ಇಡುತ್ತದೆ. ದೇಹದ ತೂಕ ಇಳಿಸಬೇಕು ಎನ್ನುವ ಯೋಜನೆ ಇದ್ದರೆ ನಿತ್ಯವೂ ಕುಡಿಯಬೇಕಾದ ಕೆಲವು ಅದ್ಭುತ ಜ್ಯೂಸ್‌ ಗಳಿವೆ.


ಕೊತ್ತಂಬರಿ ನೀರು

ಖಾಲಿ ಹೊಟ್ಟೆಯಲ್ಲಿ ಬೆಳಗ್ಗೆ ಒಂದು ಲೋಟ ಕೊತ್ತಂಬರಿ ಸೊಪ್ಪಿನ ನೀರನ್ನು ಸೇವಿಸಿ. ಕೊತ್ತಂಬರಿ ನೈಸರ್ಗಿಕ ಮೂತ್ರವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ, ದೇಹದಲ್ಲಿ ನೀರಿನ ಧಾರಣವನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ಯಕೃತ್ತಿನ ಆರೋಗ್ಯ ಮತ್ತು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಚಯಾಪಚಯವನ್ನು ಧನಾತ್ಮಕವಾಗಿ ವೃದ್ಧಿಸುತ್ತದೆ.


ನಿಂಬೆ ನೀರು

ತೂಕ ನಷ್ಟ ಮಾಡಬೇಕು ಎಂದು ಬಯಸುವವರು ನಿಂಬೆ ನೀರಿನ ಬಗ್ಗೆ ಸಾಕಷ್ಟು ಕೇಳಿರುತ್ತಾರೆ. ಆದರೆ ಬಹುತೇಕ ಮಂದಿ ಪ್ರಯೋಗ ಮಾಡಿರುವುದಿಲ್ಲ. ಮಾಡಿದ್ದರೂ ಒಂದೆರಡು ದಿನ ಮಾಡಿ ಸುಮ್ಮನಾಗಿರುತ್ತಾರೆ. ನಿಂಬೆ ನೀರು ತೂಕವನ್ನು ಅತ್ಯಂತ ವೇಗವಾಗಿ ನಷ್ಟ ಮಾಡುತ್ತದೆ. ಇದು ದೇಹದಲ್ಲಿ ಚಯಾಪಚಯ ಕ್ರಿಯೆಯನ್ನು ವೃದ್ಧಿಸುತ್ತದೆ.


ನೆಲ್ಲಿಕಾಯಿ ಜ್ಯೂಸ್

ನೆಲ್ಲಿಕಾಯಿ ಚಯಾಪಚಯವನ್ನು ಉತ್ತೇಜಿಸಲು ಮತ್ತು ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ತ್ವರಿತವಾಗಿ ತೂಕವನ್ನು ಕಳೆದುಕೊಳ್ಳಲು ಬಯಸುವವರು ಆರೋಗ್ಯಕರ ಚಯಾಪಚಯವನ್ನು ಹೊಂದಿರುವುದು ಅಗತ್ಯ. ನೈಸರ್ಗಿಕ ಸಕ್ಕರೆಯ ರೂಪದಲ್ಲಿ ಒಂದು ಹನಿ ಜೇನುತುಪ್ಪವನ್ನು ಸೇರಿಸಿ ಸೇವಿಸಿದರೆ ಅದು ದಿನವಿಡೀ ನಮ್ಮನ್ನು ಶಕ್ತಿಯುತವಾಗಿರಿಸುತ್ತದೆ.


ಹಾಗಲಕಾಯಿ ಜ್ಯೂಸ್

ಹಾಗಲಕಾಯಿಯ ರಸವು ತೂಕ ನಷ್ಟಕ್ಕೆ ಉತ್ತಮವಾದ ಕೊಬ್ಬನ್ನು ಸುಡುವ ರಸಗಳಲ್ಲಿ ಒಂದಾಗಿದೆ. ಹಾಗಲಕಾಯಿ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯುವುದರಿಂದ ಚಯಾಪಚಯ ಕ್ರಿಯೆಯಲ್ಲಿ ಸುಧಾರಣೆಯಾಗುತ್ತದೆ. ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ. ತೂಕವನ್ನು ಕಳೆದುಕೊಳ್ಳಲು ಸಾಕಷ್ಟು ಪ್ರಯೋಜನಕಾರಿಯಾಗಿದೆ.


ಇದನ್ನೂ ಓದಿ: Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

ಸೌತೆಕಾಯಿ ಜ್ಯೂಸ್

ನೀರು ಸಮೃದ್ಧವಾಗಿರುವ ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವ ಸೌತೆಕಾಯಿ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಅದ್ಭುತವಾದ ಆಹಾರ. ಇದರಲ್ಲಿರುವ ಅತಿಯಾದ ನೀರು ಮತ್ತು ನಾರಿನಂಶವು ನಿಮ್ಮನ್ನುದೀರ್ಘಕಾಲದವರೆಗೆ ಹಸಿವನ್ನು ತಡೆಯಲು ಸಹಾಯ ಮಾಡುತ್ತದೆ. ಇದರಿಂದಾಗಿ ಅನಗತ್ಯ ಕಡುಬಯಕೆಗಳನ್ನು ನಿಯಂತ್ರಿಸಿ ದೇಹದ ತೂಕ ನಿರ್ವಹಣೆ ಮಾಡಬಹುದು.

Continue Reading

ಆರೋಗ್ಯ

Cooking Oils: ಈ 5 ಅಡುಗೆ ಎಣ್ಣೆಗಳು ನಮ್ಮ ಆರೋಗ್ಯಕ್ಕೆ ಅಪಾಯಕಾರಿ!

ನಿತ್ಯವೂ ಮನೆಗಳಲ್ಲಿ ಅಡುಗೆಗೆ ಒಳ್ಳೆಯ ಎಣ್ಣೆಯನ್ನು ನಾವು ಬಳಕೆ ಮಾಡುತ್ತೇವೆ ಎಂದುಕೊಂಡರೂ, ಹೊರಗಿನಿಂದ ತರುವ ಕುರುಕಲು ತಿಂಡಿಗಳು, ಹೊರಗೆ ತಿನ್ನುವ ಆಹಾರ ಇತ್ಯಾದಿಗಳಲ್ಲಿ ಅತ್ಯಂತ ಹೆಚ್ಚು ಬಳಕೆಯಾಗುವುದು ಸುಲಭವಾಗಿ ಸಿಗುವ ಎಣ್ಣೆಗಳೇ ಆಗಿವೆ. ಹೀಗಾಗಿ, ಒಂದಲ್ಲ ಒಂದು ಬಗೆಯಲ್ಲಿ ಅನಾರೋಗ್ಯಕರ ಎಣ್ಣೆ ನಾವು ಬೇಡವೆಂದರೂ ನಮ್ಮ ಹೊಟ್ಟೆ ಸೇರುತ್ತವೆ. ಈ ಕುರಿತ (Cooking oils) ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

Cooking Oils
Koo

ಎಣ್ಣೆಯ ಬಳಕೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬ ಸತ್ಯ ಎಲ್ಲರಿಗೂ ತಿಳಿದಿರುವ ಸತ್ಯವೇ ಆದರೂ, ಸಾಕಷ್ಟು ಆಹಾರಗಳಲ್ಲಿ ಇಂದು ವ್ಯಾಪಕವಾಗಿ ಎಣ್ಣೆಯ ಬಳಕೆಯಾಗುತ್ತದೆ. ಅದರಲ್ಲೂ ಕೆಲವು ಅಗ್ಗದ ಎಣ್ಣೆಗಳು ಇಂದು ಸಂಸ್ಕರಿಸಿದ ಆಹಾರಗಳ ಮೂಲಕ ನಮ್ಮ ಹೊಟ್ಟೆ ಸೇರುವುದು ನಮಗೆ ಗೊತ್ತೇ ಆಗುವುದಿಲ್ಲ. ನಿತ್ಯವೂ ಮನೆಗಳಲ್ಲಿ ಅಡುಗೆಗೆ ಒಳ್ಳೆಯ ಎಣ್ಣೆಯನ್ನು ನಾವು ಬಳಕೆ ಮಾಡುತ್ತೇವೆ ಎಂದು ನಾವು ಅಂದುಕೊಂಡರೂ, ಹೊರಗಿನಿಂದ ತರುವ ಕುರುಕಲು ತಿಂಡಿಗಳು, ಹೊರಗೆ ತಿನ್ನುವ ಆಹಾರಗಳು ಇತ್ಯಾದಿಗಳಲ್ಲಿ ಅತ್ಯಂತ ಹೆಚ್ಚು ಬಳಕೆಯಾಗುವುದು ಸುಲಭವಾಗಿ ಸಿಗು ಎಣ್ಣೆಗಳೇ ಆಗಿವೆ. ಹೀಗಾಗಿ, ಒಂದಲ್ಲ ಒಂದು ಬಗೆಯಲ್ಲಿ ಅನಾರೋಗ್ಯಕರ ಎಣ್ಣೆ ನಾವು ಬೇಡವೆಂದರೂ ನಮ್ಮ ಹೊಟ್ಟೆ ಸೇರುತ್ತವೆ. ಬನ್ನಿ, ಯಾವೆಲ್ಲ ಎಣ್ಣೆಗಳನ್ನು ನಾವು ನಮ್ಮ ಆಹಾರದಲ್ಲಿ ನಿತ್ಯವೂ ಬಳಸಬಾರದು (Cooking oils) ಎಂಬುದನ್ನು ನೋಡೋಣ.

Palm oil

ಪಾಮ್‌ ಎಣ್ಣೆ

ಇಂದು ಮಾರುಕಟ್ಟೆಯಲ್ಲಿ ಸಿಗುವ ಬಹುತೇಕ ಸಂಸ್ಕರಿಸಿದ ಆಹಾರಗಳಲ್ಲಿ, ಪ್ಯಾಕೇಟ್‌ಗಳಲ್ಲಿ ಬಳಸುವ ಎಣ್ಣೆ ಬಹುಪಾಲು ಪಾಮ್‌ ಎಣ್ಣೆ ಎಂಬುದು ನಿಜವಾದರೂ, ಇದು ಆರೋಗ್ಯಕ್ಕೆ ಕೆಟ್ಟ ಪರಿಣಾಮ ಬೀರುವ ಎಣ್ಣೆಗಳಲ್ಲಿ ಅಗ್ರಸ್ಥಾನದಲ್ಲಿದೆ. ಕಡಿಮೆ ದರ ಹಾಗೂ ಸುಲಭವಾಗಿ ದೊರೆಯಬಲ್ಲ ಅಗ್ಗದ ಎಣ್ಣೆ ಇದಾಗಿರಿವುದರಿಂದ ಇದನ್ನು ಇಂದು ಆಹಾರ ಉದ್ಯಮದಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಆದರೆ, ಇದರಲ್ಲಿ ಅತ್ಯಂತ ಹೆಚ್ಚು ಸ್ಯಾಚುರೇಟೆಡ್‌ ಫ್ಯಾಟ್‌ ಇರುವುದರಿಂದ ಇದು ಎಲ್‌ಡಿಎಲ್‌ ಕೊಲೆಸ್ಟೆರಾಲ್‌ ಮಟ್ಟವನ್ನು ಏರಿಸುವ ಕಾರಣ ಹೃದಯದ ಆರೋಗ್ಯಕ್ಕೆ ಇದು ಅತ್ಯಂತ ಕೆಟ್ಟದ್ದು.

Soybean oil

ಸೋಯಾಬೀನ್‌ ಎಣ್ಣೆ

ಕಡಿಮೆ ವಾಸನೆಯುಳ್ಳ ಹಾಗೂ ಅತ್ಯಂತ ಕಡಿಮೆ ಬೆಲೆಗೆ ವ್ಯಾಪಕವಾಗಿ ದೊರೆಯುವ ಸೋಯಾಬೀನ್‌ ಎಣ್ಣೆಯಲ್ಲಿ ಒಮೆಗಾ 6 ಫ್ಯಾಟಿ ಆಸಿಡ್‌ಗಳು ಹೇರಳವಾಗಿವೆ. ಒಮೆಗಾ 3 ಫ್ಯಾಟಿ ಆಸಿಡ್‌ನ ಅದೇ ಗುಣಗಳನ್ನು ಇದೂ ಹೊಂದಿರುವುದರಿಂದ ಹಾಗೂ ಉರಿಯೂತವನ್ನು ಹೆಚ್ಚಿಸುವ ಸಂಭವ ಇದರಲ್ಲಿ ಹೆಚ್ಚಿರುವುದರಿಂದ ಈ ಎಣ್ಣೆಯ ಬಳಕೆ ಅತಿಯಾಗಬಾರದು. ಒಮೆಗಾ 3 ಫ್ಯಾಟಿ ಆಸಿಡ್‌ನ ಮೂಲಗಳ ಜೊತೆಗೆ ಸಮತೋಲನದಲ್ಲಿ ಇದನ್ನು ಸೇಔಇಸುವುದು ಉತ್ತಮ. ಇದರ ಅತಿಯಾದ ಬಳಕೆ ಸಲ್ಲದು.

Cottonseed oil

ಹತ್ತಿಬೀಜದ ಎಣ್ಣೆ

ಹತ್ತಿಯನ್ನು ತೆಗೆದ ಮೇಳೆ ಅದರ ಬೀಜದಿಂದ ಮಾಡುವ ಎಣ್ಣೆಯಾದ ಕಾಟನ್‌ ಸೀಡ್‌ ಆಯಿಲ್‌ ಅಥವಾ ಹತ್ತಿಬೀಜದ ಎಣ್ಣೆ ಬಹಳಷ್ಟು ಸಂಸ್ಕರಿಸಿದ ಆಹಾರಗಳಲ್ಲಿ ವ್ಯಾಪಕವಾಗಿ ಇಂದು ಬಳಕೆಯಾಗುತ್ತಿದೆ. ಇದರಲ್ಲಿಯೂ ಒಮೆಗಾ 6 ಫ್ಯಾಟಿ ಆಸಿಡ್‌ ಹೇರಳವಾಗಿದೆ. ಹಾಗಾಗಿ ಇದನ್ನು ಅತಿಯಾಗಿ ಬಳಸುವುದರಿಂದ ಉರಿಯೂತ ಹಾಗೂ ಇತರ ಆರೋಗ್ಯದ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

ವೆಜಿಟೆಬಲ್‌ ಆಯಿಲ್

ಈ ಸಾಮಾನ್ಯೀಕರಿಸಿದ ಹೆಸರಿಂದ ಬಹುತೇಕರು ಮೋಸಕ್ಕೆ ಒಳಗಾಗುವುದೇ ಹೆಚ್ಚು. ವೆಜಿಟೆಬಲ್‌ ಆಯಿಲ್‌ ಅಂದಾಕ್ಷಣ, ಆರೋಗ್ಯಕ್ಕೆ ಸಮಸ್ಯೆಯೇನಿಲ್ಲ ಎಂದು ಅಂದುಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದರೂ, ಈ ಎಣ್ಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜೋಳ, ಸೋಯಾಬೀನ್‌ ಹಾಗೂ ಸೂರ್ಯಕಾಂತಿ ಎಣ್ಣೆ ಬಳಕೆಯಾಗುತ್ತದೆ. ತೀರಾ ಕೆಟ್ಟದ್ದೇನೂ ಅಲ್ಲದಿದ್ದರೂ, ರಿಫೈನ್ಡ್‌ ಎಣ್ಣೆ ಇದಾಗಿರುವುದರಿಂದ ಹಾಗೂ ಸಾಕಷ್ಟು ರಾಸಾಯನಿಕಗಳು ಈ ಸಂದರ್ಭ ಬಳಕೆಯಾಗಿರುವುದರಿಂದ, ಒಮೆಗಾ 6 ಫ್ಯಾಟಿ ಆಸಿಡ್‌ ಹೆಚ್ಚಿರುವುದರಿಂದ ಈ ಎಣ್ಣೆಯೂ ಹೆಚ್ಚು ಬಳಕೆ ಮಾಡುವುದು ಒಳ್ಳೆಯದಲ್ಲ. ನಿತ್ಯದ ಉಪಯೋಗಕ್ಕೆ ಈ ಎಣ್ಣೆ ಅಷ್ಟು ಯೋಗ್ಯವಲ್ಲ.

Hydrogenated oils

ಹೈಡ್ರೋಜಿನೇಟೆಡ್‌ ಆಯಿಲ್‌ಗಳು

ಹೈಡ್ರೋಜಿನೇಷನ್‌ ಎಂಬ ಪ್ರಕ್ರಿಯೆಗೆ ಒಳಪಡಿಸುವ ಎಣ್ಣೆಗಳು ಇದಾಗಿದ್ದು, ಇದರಲ್ಲಿ ದ್ರವರೂಪದ ಎಣ್ಣೆಯನ್ನು ಘನರೂಪಕ್ಕೆ ಪರಿವರ್ತಿಸಲಾಗುತ್ತದೆ. ಇಂತಹ ಎಣ್ಣೆಗಳಲ್ಲಿ ಟ್ರಾನ್ಸ್‌ ಫ್ಯಾಟ್‌ ಅಧಿಕವಾಗಿರುವುದಲ್ಲದೆ, ಎಲ್‌ಡಿಎಲ್‌ ಕೊಲೆಸ್ಟೆರಾಲ್‌ ಮಟ್ಟವನ್ನು ಇದು ಏರಿಸುವ ಕಾರಣ ಹೃದಯದ ಆರೋಗ್ಯಕ್ಕೆ ಒಳ್ಳೆಯದಲ್ಲ.

Continue Reading
Advertisement
LIQUID NITROGEN
ಬೆಂಗಳೂರು1 min ago

Liquid Nitrogen : ಕಾಟನ್ ಕ್ಯಾಂಡಿ ಬಳಿಕ ಕರ್ನಾಟಕದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿಷೇಧ

IPL 2024
ಕ್ರೀಡೆ5 mins ago

IPL 2024: ಬಸ್‌ ಕಂಡಕ್ಟರ್‌ಗಳಿಗೆ ವಿಶೇಷ ಉಡುಗೊರೆ ನೀಡಿದ ಚೆನ್ನೈ ಸೂಪರ್​ ಕಿಂಗ್ಸ್

prajwal ravanna case dk shivakumar poster
ಪ್ರಮುಖ ಸುದ್ದಿ20 mins ago

Prajwal Revanna Case: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪೋಸ್ಟರ್ ವಾರ್‌

Naxal activities
ದೇಶ38 mins ago

Naxal activities: 6 ಕುಕ್ಕರ್‌ ಬಾಂಬ್‌, IED ಸ್ಫೋಟಕಗಳು ಪತ್ತೆ; ತಪ್ಪಿದ ಭಾರೀ ನಕ್ಸಲ್‌ ಅಟ್ಯಾಕ್‌

Rohit Sharma
ಕ್ರೀಡೆ55 mins ago

Rohit Sharma: ರೋಹಿತ್ ಶರ್ಮ​ ಕಣ್ಣೀರಿಗೆ ಅಸಲಿ ಕಾರಣ ಇದಂತೆ!

lok sabha election 2024 voting second phase
ಪ್ರಮುಖ ಸುದ್ದಿ1 hour ago

Lok Sabha Election 2024: ಮೊದಲೆರಡು ಗಂಟೆಗಳ ಮತದಾನ ನಿರೀಕ್ಷೆಗಿಂತ ಕಡಿಮೆ, ಇನ್ನೂ ಇಳಿಯುವ ಆತಂಕ; ಎಲ್ಲಿ ಎಷ್ಟು?

T20 World Cup 2024
ಕ್ರೀಡೆ1 hour ago

T20 World Cup 2024: ಮಿನಿ ವಿಶ್ವಕಪ್​ ಸಮರಕ್ಕೆ ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಪೂರ್ಣ; ವಿಡಿಯೊ ವೈರಲ್​

Ramana Avatara Movie
ಸಿನಿಮಾ2 hours ago

Ramana Avatara Movie: ಬಂಪರ್ ಆಫರ್; ಕೇವಲ 99 ರೂ.ಗೆ ಸಿಗಲಿದೆ ‘ರಾಮನ ಅವತಾರ’ ಸಿನಿಮಾ ಟಿಕೆಟ್

Narendra Modi
ದೇಶ2 hours ago

Narendra Modi: ಮತದಾನದ ಬಳಿಕ ಮಗುವನ್ನು ಎತ್ತಿ ಆಡಿಸಿದ ಪ್ರಧಾನಿ ಮೋದಿ; ವಿಡಿಯೋ ನೋಡಿ

IPL 2024
ಕ್ರೀಡೆ2 hours ago

IPL 2024: ಶತಕ ಬಾರಿಸಿ ಟಿ20ಯಲ್ಲಿ ದಾಖಲೆ ಬರೆದ ಸೂರ್ಯಕುಮಾರ್ ಯಾದವ್​​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ16 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ17 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ17 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌