Food Tips: ಮೊಳಕೆ ಕಾಳುಗಳನ್ನು ಕೆಡದಂತೆ ಹೆಚ್ಚು ಕಾಲ ಇಡಲು ಇಲ್ಲಿವೆ ಟಿಪ್ಸ್‌! - Vistara News

ಆಹಾರ/ಅಡುಗೆ

Food Tips: ಮೊಳಕೆ ಕಾಳುಗಳನ್ನು ಕೆಡದಂತೆ ಹೆಚ್ಚು ಕಾಲ ಇಡಲು ಇಲ್ಲಿವೆ ಟಿಪ್ಸ್‌!

ಒಮ್ಮೆ ಮೊಳಕೆ ಬರಿಸಿದ ಮೇಲೆ ವಾಸನೆ ಬರದಂತೆ, ಹೆಚ್ಚು ಕಾಲ ಹೇಗೆ ಕೆಡದಂತೆ ಇಡಬಹುದು ಎಂಬುದು ಎಲ್ಲರಿಗೂ ಮಿಲಿಯನ್‌ ಡಾಲರ್‌ ಪ್ರಶ್ನೆ. ಹಾಗಾದರೆ ಬನ್ನಿ, ಮೊಳಕೆ ಕಾಳುಗಳನ್ನು ಬೇಸಿಗೆಯಲ್ಲಿ ಹೇಗೆ ಹೆಚ್ಚು ಕಾಲ ಉಳಿಯುವಂತೆ ನೋಡಿಕೊಳ್ಳಬಹುದು (Food Tips) ಎಂಬುದನ್ನು ನೋಡೋಣ.

VISTARANEWS.COM


on

sprouts
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೊಳಕೆ ಕಾಳುಗಳು (sprouts) ನಮ್ಮ ನಿತ್ಯ ಜೀವನದ ಅವಿಭಾಜ್ಯ ಅಂಗ. ಇದರಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪ್ರೊಟೀನ್‌, ವಿಟಮಿನ್‌ಗಳು, ಆಂಟಿ ಆಕ್ಸಿಡೆಂಟ್‌ಗಳು ಹಾಗೂ ಖನಿಜಾಂಶಗಳು ಇರುವುದರಿಂದ ಆರೋಗ್ಯಕರ ಆಹಾರ ಸೇವಿಸಲು ಪ್ರಯತ್ನಿಸುವ ಎಲ್ಲರೂ ತಮ್ಮ ನಿತ್ಯಾಹಾರದಲ್ಲಿ ಮೊಳಕೆ ಕಾಳುಗಳನ್ನೂ ಸೇವಿಸಲು ಬಯಸುವುದು ಸಾಮಾನ್ಯ. ಮುಖ್ಯವಾಗಿ ತೂಕ ಇಳಿಸಿಕೊಂಡು, ಫಿಟ್‌ ಆಗಿರಬಯಸುವ ಮಂದಿ, ಅದರಲ್ಲೂ ಮೊಟ್ಟೆ ಹಾಗೂ ಮಾಂಸಾಹಾರದಲ್ಲಿರುವ ಪ್ರೊಟೀನ್‌ ಸೇವನೆ ಸಾಧ್ಯವಾಗದ ಸಸ್ಯಾಹಾರಿಗಳು ಮುಖ್ಯವಾಗಿ ಪ್ರೊಟೀನ್‌ ಮೂಲಕ್ಕಾಗಿ ಮೊಳಕೆ ಕಾಳುಗಳ ಮೊರೆ ಹೋಗುತ್ತಾರೆ. ಊಟದ ಮಧ್ಯದಲ್ಲಿ ಹಸಿವಾದಾಗ, ಸ್ನ್ಯಾಕ್‌ ಬದಲಿಗೆ ಸಲಾಡ್‌ ಮಾಡಿಕೊಂಡು ತಿನ್ನುವಾಗಲೂ ಮೊಳಕೆ ಕಾಳುಗಳನ್ನು ಹಾಕುತ್ತೇವೆ. ಇಂತಹ ಪೋಷಕಾಂಶಯುಕ್ತ ಮೊಳಕೆ ಕಾಳುಗಳನ್ನು ಬೇಸಿಗೆಯಲ್ಲಿ ಕೆಡದಂತೆ ಕಾಪಿಡುವುದೂ ದೊಡ್ಡ ಸಮಸ್ಯೆ. ಒಮ್ಮೆ ಮೊಳಕೆ ಬರಿಸಿದ ಮೇಲೆ ವಾಸನೆ ಬರದಂತೆ, ಹೆಚ್ಚು ಕಾಲ ಹೇಗೆ ಕೆಡದಂತೆ ಇಡಬಹುದು ಎಂಬುದು ಎಲ್ಲರಿಗೂ ಮಿಲಿಯನ್‌ ಡಾಲರ್‌ ಪ್ರಶ್ನೆ. ಹಾಗಾದರೆ ಬನ್ನಿ, ಮೊಳಕೆ ಕಾಳುಗಳನ್ನು ಬೇಸಿಗೆಯಲ್ಲಿ ಹೇಗೆ ಹೆಚ್ಚು ಕಾಲ ಉಳಿಯುವಂತೆ ನೋಡಿಕೊಳ್ಳಬಹುದು (Food Tips) ಎಂಬುದನ್ನು ನೋಡೋಣ.

1. ಮೊಳಕೆ ಕಾಳುಗಳನ್ನು ಕೆಡದಂತೆ ಇಡುವ ಮೊದಲು ಕಾಳುಗಳನ್ನು ಚೆನ್ನಾಗಿ ಪರೀಕ್ಷೆ ಮಾಡಿ. ರಾಶಿ ಮೊಳಕೆ ಕಾಳುಗಳ ಮಧ್ಯದಲ್ಲಿ ಒಂದೆರಡು ಕೆಟ್ಟ ಅಥವಾ ವಾಸನೆಯುಕ್ತ ಮೊಳಕೆ ಕಾಳೂ ಇದ್ದಾವು. ಇಂತಹ ಹಾಳಾದ ಮೊಳಕೆ ಕಾಳುಗಳು ಬಹುಬೇಗನೆ ಬೇರೆಯ ಕಾಳುಗಳನು ಹಾಳಾಗುವಂತೆ ಮಾಡುತ್ತವೆ. ಅದಕ್ಕಾಗಿ, ಅಂತಹ ಹಾಳಾದ ಕಾಳುಗಳನ್ನು ಸರಿಯಾಗಿರುವ ಕಾಳುಗಳ ಮಧ್ಯೆ ಇರಲು ಬಿಡಬೇಡಿ. ಹಾಳಾದ್ದನ್ನು ಬೇರ್ಪಡಿಸಿ ಬಿಸಾಡಿ.

sprouts

2. ಮೊಳಕೆ ಕಾಳುಗಳು ಸರಿಯಾಗಿ ಮೊಳಕೆ ಬಂದ ಮೇಲೆ ಕೆಲದಿನಗಳು ಕಳೆದಾಗ, ಅದರ ಹೊರಕವಚದಿಂದ ವಾಸನೆ ಬೀರಲಾರಂಭಿಸುತ್ತದೆ. ಹೊರ ಕವಚದಲ್ಲಿ ಹೆಚ್ಚು ನಾರಿನಂಶ ಇರುವುದು ಸತ್ಯವಾದರೂ, ಬೇಗ ಳಾಗದಂತೆ ತಡೆಯಲು ಹೊರಕವಚವನ್ನು ಪ್ರತ್ಯೇಕಿಸಿ. ಇದರಿಂದ ಕಾಳುಗಳು ಹೆಚ್ಚು ದಿನ ಇರಬಲ್ಲದು.

ಇದನ್ನೂ ಓದಿ: Food Tips: ನೆಲ್ಲಿಕಾಯಿ ಎಂಬ ವಿಟಮಿನ್‌ ಸಿಯನ್ನು ತಿಂಗಳುಗಟ್ಟಲೆ ಶೇಖರಿಸಿಡುವುದು ಹೇಗೆ!?

3. ಮೊಳಕೆ ಕಾಳುಗಳು ವಾಸನೆ ಬರಲಾರಂಭಿಸಿದರೆ, ಅದನ್ನು ಹಾಗೆಯೇ ಮತ್ತೆ ಇಡುವ ಬದಲು ಅಥವಾ ಎಸೆಯುವ ಬದಲು, ನೀರಿನಲ್ಲಿ ಚೆನ್ನಾಗಿ ತೊಳೆದು ನೋಡಿ. ಬಹಳಷ್ಟು ಸಾರಿ ನೀರಿನಿಂದ ತೊಳೆದ ಕೂಡಲೇ ವಾಸನೆ ಮಾಯವಾಗಿ ತಿನ್ನಲು ಅಥವಾ ಮತ್ತೆ ಸಂರಕ್ಷಿಸಿ ಫ್ರಿಡ್ಜ್‌ನಲ್ಲಿಡಲು ಯೋಗ್ಯವಾಗುತ್ತದೆ.

4. ನೀರಿನಲ್ಲಿ ಮೊಳಕೆ ಕಾಳನ್ನು ತೊಳೆದುಇಡುವ ಸಂದರ್ಭ ಅವನ್ನು ಕೊಂಚ ಹೊತ್ತು ಗಾಳಿಯಾಡಲು ಬಿಡಿ. ಮೆದುವಾದ ಬಟ್ಟೆಯ ಮೇಳೆ ಹರಡಿ, ಹೆಚ್ಚಿನ ನೀರಿನಂಶ ಆರಲು ಬಿಡಿ. ನೀರು ಅತಿಯಾಗಿ ಇದ್ದಾಗ ಅಥವಾ ತೊಳೆದ ಕೂಡಲೇ ಡಬ್ಬದಲ್ಲಿ ಹಾಕಿ ಫ್ರಿಡ್ಜ್‌ನಲ್ಲಿಡಬೇಡಿ. ಆರಲು ಬಿಟ್ಟು ನೀರಿಲ್ಲದಾಗ ಡಬ್ಬದಲ್ಲಿ ಹಾಕಿ ಫ್ರಿಡ್ಜ್‌ನಲ್ಲಿ ಶೇಖರಿಸಿ.

5. ಫ್ರಿಡ್ಜ್‌ನಲ್ಲಿ ಹೇಗೆ ಇಡುತ್ತೀರಿ ಎಂಬುದೂ ಕೂಡಾ ಮುಖ್ಯ ಪಾತ್ರ ವಹಿಸುತ್ತದೆ. ಗಾಳಿಯಾಡದ ಡಬ್ಬ ಅಥವಾ ಝಿಪ್‌ಲಾಕ್‌ ಕವರ್‌ ಒಳಗಿಡುವುದು ಒಳ್ಳೆಯದು. ಝಿಪ್‌ಲಾಕ್‌ನಲ್ಲಿಡುವಾಗ ಒಂದು ಟಿಶ್ಯೂ ಅಥವಾ ಪೇವರ್‌ ಟವಲ್‌ ಅನ್ನೂ ಇಡಿ. ಇದು ಹೆಚ್ಚುವರಿ ನೀರಿನಂಶವನ್ನು ಹೀರಿಕೊಳ್ಳುತ್ತದೆ.

ಇದನ್ನೂ ಓದಿ: Food Tips: ಗರಿಗರಿ ಫ್ರೆಂಚ್‌ ಫ್ರೈಸ್‌ ಮನೆಯಲ್ಲೇ ಮಾಡಲು ಇಲ್ಲಿವೆ ಪಂಚಸೂತ್ರಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಹಾರ/ಅಡುಗೆ

Health Tips Kannada: ಈ ಆಹಾರಗಳಿಂದ ದೂರವಿದ್ದರೆ ಮೊಡವೆ ಸಮಸ್ಯೆಯಿಂದ ಪಾರಾಗಬಹುದು!

ಒಬ್ಬೊಬ್ಬರ ದೇಹ ಪ್ರಕೃತಿ ಒಂದೊಂದು ಬಗೆ. ಮೊಡವೆಗಳ ಸಮಸ್ಯೆಗೆ ಎಲ್ಲರ ಕಾರಣಗಳೂ ಒಂದೇ ಆಗಿರಬೇಕಾಗಿಲ್ಲ. ಆದರೆ, ಬಹುತೇಕರ ಸಮಸ್ಯೆ ಎಂದರೆ ಎಣ್ಣೆ ಚರ್ಮ. ಚರ್ಮದಲ್ಲಿ ಅತಿಯಾದ ಎಣ್ಣೆ ಸ್ರವಿಸಲ್ಪಡುವುದು ಹಾಗೂ ಇದರಿಂದ ಉಂಟಾಗುವ ಮೊಡವೆಗಳು. ಇದಕ್ಕಾಗಿ ಅನೇಕರು ಬಳಸದ ಕ್ರೀಮ್‌ಗಳಿಲ್ಲ, ಮಾಡದ ಮನೆಮದ್ದುಗಳಿಲ್ಲ, ಹೋಗದ ಪಾರ್ಲರ್‌ಗಳಿಲ್ಲ. ಆದರೆ ಸಮಸ್ಯೆ ಮಾತ್ರ ಎಂದಿನದ್ದೇ. ಹಾಗಾದರೆ ಮೊಡವೆಗಳಿಗೆ ಪರಿಹಾರವೇ ಇಲ್ಲವೇ? ಈ ಲೇಖನ ಓದಿ.

VISTARANEWS.COM


on

Health Tips Kannada Stay away from these foods to get rid of acne
Koo

ಬೆಂಗಳೂರು: ಮೊಡವೆ ಮತ್ತು ಮೊಡವೆಗಳ ಕಲೆಗಳಿಂದ ಬೇಸತ್ತ (Health Tips Kannada) ಮಂದಿ ಏನೆಲ್ಲ ಸರ್ಕಸ್‌ ಮಾಡಿದರೂ ಮೊಡವೆಯಿಂದ ಮುಕ್ತಿ ಸಿಗುವುದಿಲ್ಲ ಎಂದು ಬೇಸರ ಪಡಬಹುದು. ನೂರೆಂಟು ಮಂದಿ ನೂರಾರು (foods to get rid of acne) ಸಲಹೆ ಕೊಡಬಹುದಾದರೂ, ಎಲ್ಲರಿಗೂ ಎಲ್ಲ ಸಲಹೆಗಳೂ ಹೊಂದಲಾರದು. ಕಾರಣ, ಒಬ್ಬೊಬ್ಬರ ದೇಹ ಪ್ರಕೃತಿ ಒಂದೊಂದು ಬಗೆ. ಮೊಡವೆಗಳ ಸಮಸ್ಯೆಗೆ ಎಲ್ಲರ ಕಾರಣಗಳೂ ಒಂದೇ ಆಗಿರಬೇಕಾಗಿಲ್ಲ. ಆದರೆ, ಬಹುತೇಕರ ಸಮಸ್ಯೆ ಎಂದರೆ ಎಣ್ಣೆ ಚರ್ಮ. ಚರ್ಮದಲ್ಲಿ ಅತಿಯಾದ ಎಣ್ಣೆ ಸ್ರವಿಸಲ್ಪಡುವುದು ಹಾಗೂ ಇದರಿಂದ ಉಂಟಾಗುವ ಮೊಡವೆಗಳು. ಇದಕ್ಕಾಗಿ ಅನೇಕರು ಬಳಸದ ಕ್ರೀಮ್‌ಗಳಿಲ್ಲ, ಮಾಡದ ಮನೆಮದ್ದುಗಳಿಲ್ಲ, ಹೋಗದ ಪಾರ್ಲರ್‌ಗಳಿಲ್ಲ. ಆದರೆ ಸಮಸ್ಯೆ ಮಾತ್ರ ಎಂದಿನದ್ದೇ. ಹಾಗಾದರೆ ಮೊಡವೆಗಳಿಗೆ ಪರಿಹಾರವೇ ಇಲ್ಲವೇ ಎಂದು ನೀವು ಕೇಳಬಹುದು. ಖಂಡಿತ ಇದ್ದೇ ಇದೆ. ಮುಖ್ಯವಾಗಿ, ಚರ್ಮದ ಹೊರಗಿನ ಆರೈಕೆಗಿಂತ ಒಳಗಿನ ಆರೈಕೆ ಮುಖ್ಯ. ಒಳಗೆ ತೆಗೆದುಕೊಳ್ಳುವ ಆಹಾರದ ಬಗ್ಗೆಯೂ ಕಾಳಜಿ ಮಾಡಬೇಕು. ಬನ್ನಿ, ಯಾವೆಲ್ಲ ಆಹಾರಗಳ ಬಗ್ಗೆ ಎಚ್ಚರ ಅಗತ್ಯ ಎಂಬುದನ್ನು ನೋಡೋಣ.

ಹಾಲು

ಹಾಲಿನಿಂದ ಮೊಡವೆಗಳುಂಟಾಗಬಹುದು. ಆಶ್ಚರ್ಯವಾದರೂ ಸತ್ಯವೇ. ಹಸುವಿನ ಹಾಲಿನಲ್ಲಿ ಬೆಳವಣಿಗೆಯ ಹಾರ್ಮೋನ್‌ ಐಜಿಎಫ್‌-1 ಹಾಗೂ ಬೊವಿನ್‌ ಇರುವುದರಿಂದ ಇವು ನಮ್ಮ ದೇಹಕ್ಕೆ ಸೇರುವುದರಿಂದ ಇವು ಚರ್ಮದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಇದರಿಂದ ಮುಖದಲ್ಲಿ ಕೂದಲ ಬೆಳವಣಿಗೆ ಹಾಗೂ ಮೊಡವೆಗಳೂ ಉಂಟಾಗುತ್ತದೆ.

ಇದನ್ನೂ ಓದಿ: Food Tips Kannada: ಕಲಬೆರಕೆ ಆಹಾರಗಳಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳೇನು?

ಅಯೋಡಿನ್

ಮೊಡವೆಗಳಿಗೂ ಅಯೋಡಿನ್‌ಗೂ ಅವಿನಾಭಾವ ಸಂಬಂಧವಿದೆ. ಅಂದರೆ, ಉಪ್ಪು ಹೆಚ್ಚಿರುವ ತಿನಿಸುಗಳನ್ನು, ಆಗಾಗ ತಿನ್ನುವ ಆಹಾರಗಳಲ್ಲಿರುವ ಉಪ್ಪಿನ ಪ್ರಮಾಣ ಎಲ್ಲವೂ ನಮ್ಮ ಚರ್ಮದ ಮೇಲೆ ಪ್ರಭಾವ ಬೀರುತ್ತದೆ. ಆದರೆ, ಪೂರ್ತಿಯಾಗಿ ಉಪ್ಪನ್ನು ಬಿಡಬೇಡಿ. ಅಯೋಡಿನ್‌ ಕೊರತೆ ದೇಹಕ್ಕೆ ಆಗಬಾರದು ಎಂಬುದನ್ನೂ ನೆನಪಿನಲ್ಲಿಟ್ಟುಕೊಂಡು ಕೊಂಚ ಕಡಿಮೆ ಪ್ರಮಾಣದಲ್ಲಿ ಉಪ್ಪನ್ನು ತಿನ್ನುವ ಅಭ್ಯಾಸ ರೂಢಿಸಿಕೊಳ್ಳಿ. ಇದು ನಿಮ್ಮ ಚರ್ಮದ ಮೇಲೆ ಮ್ಯಾಜಿಕ್‌ ಮಾಡಬಹುದು.

ಹೆಚ್ಚು ಗ್ಲಿಸೆಮಿಕ್‌ ಇಂಡೆಕ್ಸ್‌ ಇರುವ ಆಹಾರಗಳು

ಕಡಿಮೆ ಗ್ಲಿಸೆಮಿಕ್‌ ಇಂಡೆಕ್ಸ್‌ ಇರುವ ಆಹಾರಗಳ ಸೇವನೆ ನಿಮ್ಮ ಮೊಡವೆಗಳ ಸಮಸ್ಯೆಯನ್ನೇ ಸಂಪೂರ್ಣವಾಗಿ ಇಲ್ಲವಾಗಿಸುತ್ತದೆ ಎನ್ನಲಾಗುತ್ತದೆ. ಕಾರ್ನ್‌ ಸಿರಪ್‌, ಮೈದಾ, ಸಕ್ಕರೆ, ರಿಫೈನ್ಡ್‌ ಧಾನ್ಯಗಳು, ಸಾಸ್‌ ಹಾಗೂ ಕೆಚಪ್‌ಗಳು, ಸ್ಪೋರ್ಟ್ಸ್‌ ಡ್ರಿಂಕ್‌ಗಳು ಸಂಸ್ಕರಿಸಿದ ಮಾಂಸ ಹಾಗೂ ಇತರ ಆಹಾರಗಳು, ಇತರ ಆಹಾರಗಳ ಮೂಲಕ ಗೊತ್ತೇ ಆಗದಂತೆ ದೇಹದೊಳಕ್ಕೆ ಸೇರುವ ಸಕ್ಕರೆ ಎಲ್ಲವೂ ಹೆಚ್ಚು ಗ್ಲಿಸೆಮಿಕ್‌ ಇಂಡೆಕ್ಸ್‌ ಹೊಂದಿವೆ. ಆದಷ್ಟೂ ನೈಸರ್ಗಿಕ ಆಹಾರಗಳು, ಒಣಬೀಜಗಳು, ಹಣ್ಣುಗಳು ಇತ್ಯಾದಿಗಳನ್ನೇ ತಿನ್ನಿ.

ಇದನ್ನೂ ಓದಿ: Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

ಹಾಗಾದರೆ ಏನು ತಿಂದರೆ ಮೊಡವೆಗಳು ಬರದಂತೆ ತಡೆಯಬಹುದು, ಚರ್ಮವನ್ನು ನುಣುಪಾಗಿ ಇರಿಸಬಹುದು ಎನ್ನುತ್ತೀರಾ? ಝಿಂಕ್‌ ಹೆಚ್ಚಿರುವ ಆಹಾರಗಳು ಮೊಡವೆ ಸಮಸ್ಯೆಗೆ ಬಹಳ ಒಳ್ಳೆಯದು. ಇದರಲ್ಲಿರುವ ಆಂಟಿ ಇನ್‌ಫ್ಲಮೇಟರಿ ಗುಣಗಳು ಮೊಡವೆ ಉಂಟು ಮಾಡುವ ಬ್ಯಾಕ್ಟೀರಿಯಾಗಳನ್ನು ಓಡಿಸುತ್ತವೆ. ಕಿಡ್ನಿ ಬೀನ್ಸ್‌, ಓಯ್ಸ್ಟರ್‌, ಕೆಂಪು ಮಾಂಸ ಹಾಗೂ ಸಿಹಿಕುಂಬಳದ ಬೀಜ ಇವುಗಳಲ್ಲಿ ಹೆಚ್ಚು ಝಿಂಕ್‌ ಇವೆ.

ಅಷ್ಟೇ ಅಲ್ಲ, ಒಮೆಗಾ 3 ಇರುವ ಆಹಾರಗಳನ್ನು ಹೆಚ್ಚಿಸಿ ಒಮೆಗಾ ಇರುವ ಆಹಾರಗಳಾದ ಸಂಸ್ಕರಿಸಿದ ಎಣ್ಣೆಗಳು, ಬೇಕ್ಡ್‌ ಆಹಾರಗಳು ಇತ್ಯಾದಿಗಳನ್ನು ಕಡಿಮೆ ಮಾಡಿ. ನದಿಯ ಮೀನನ್ನು ವಾರಕ್ಕೆರಡು ಬಾರಿ ತಿನ್ನಿ. ಚಿಯಾ ಬೀಜಗಳು, ಅಗಸೆ ಬೀಜಗಳನ್ನು ನಿತ್ಯವೂ ಸೇವಿಸಿ. ಆಹಾರ ಸೇವನೆಯ ಪ್ರಮಾಣದ ಮೇಲೆ ಹಿಡಿತವಿರಲಿ. ನೈಸರ್ಗಿಕ ಆಹಾರಗಳನ್ನೇ ಹೆಚ್ಚು ಸೇವಿಸಿ. ಎಲ್ಲ ಪೋಷಕಾಂಶಗಳನ್ನೊಳಗೊಂಡ ಸಂಪೂರ್ಣ ಆಹಾರದೆಡೆಗೆ ಗಮನ ಇರಲಿ. ಇಷ್ಟು ಮಾಡಿದರೆ ಖಂಡಿತವಾಗಿಯೂ ನಿಮ್ಮ ಚರ್ಮವೂ ಆರೋಗ್ಯಕರವಾಗಿ ಫಲಫಳಿಸುತ್ತದೆ ಎನ್ನುತ್ತಾರೆ ವೈದ್ಯರು.

Continue Reading

ಲೈಫ್‌ಸ್ಟೈಲ್

Food Tips Kannada: ಕಲಬೆರಕೆ ಆಹಾರಗಳಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳೇನು?

ಕಲಬೆರಕೆ ಅಂದರೆ ಮಲಿನ ವಸ್ತುಗಳನ್ನು ಅಥವಾ ಕಡಿಮೆ ಗುಣಮಟ್ಟದ ವಸ್ತುಗಳನ್ನು ಒಳ್ಳೆಯದಕ್ಕೆ ಬೆರೆಸುವುದು. ಮೂಲ ವಸ್ತುವಿನ ಬಣ್ಣ, ಘಮ ಇತ್ಯಾದಿಗಳನ್ನು ಹೆಚ್ಚಿಸಲು ಮಾಡುವ ಕಳ್ಳಾಟಗಳು. ಇದು ಗ್ರಾಹಕರಿಗೆ ಮಾಡುವ ವಿಶ್ವಾಸದ್ರೋಹ ಮಾತ್ರವಲ್ಲ, ಅವರ ಆರೋಗ್ಯದ ಮೇಲೂ ಗಂಭೀರ ಪರಿಣಾಮಗಳನ್ನು ಬೀರುತ್ತದೆ. ಕಲಬೆರಕೆಯ ಸುದ್ದಿಗಳು ಸುದ್ದಿಯೇ ಅಲ್ಲ ಎಂಬಂತಾಗಿದೆ. ನಮ್ಮ ಆಹಾರದ ಸುರಕ್ಷತೆಗೆ ನಾವೆಷ್ಟು ಗಮನ ನೀಡುತ್ತೇವೆ ಎಂಬುದಕ್ಕೆ ಇದು ಸಾಕ್ಷಿ. ಏನು ಕಲಬೆರಕೆ ಎಂದರೆ? ಇದರಿಂದ ಏನಾಗುತ್ತದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Food Tips Kannada adulterated food effect health
Koo

ಕಲಬೆರಕೆಯ ಸಮಸ್ಯೆ ಇಂದು ನಿನ್ನೆಯದಲ್ಲ. ಇತ್ತೀಚೆಗೆ ದೇಶದ (Food Tips Kannada) ರಾಜಧಾನಿಯಲ್ಲಿ ವಶಕ್ಕೆ ತೆಗೆದುಕೊಳ್ಳಲಾದ ಸುಮಾರು 15 ಟನ್‌ಗಳಷ್ಟು ಪ್ರಮಾಣದ ನಕಲಿ ಮತ್ತು ಕಲಬೆರಕೆಯ ಮಸಾಲೆ ಅಥವಾ ಸಾಂಬಾರ ಪದಾರ್ಥಗಳ ಸುದ್ದಿ ಬಹಳಷ್ಟನ್ನು ತಿಳಿಸುತ್ತದೆ. ಕೊಳೆತ ಎಲೆಗಳು, ಹುಳು ಹಿಡಿದ ಧಾನ್ಯಗಳು, ಮರದ ಪುಡಿ ಮುಂತಾದ ವಸ್ತುಗಳನ್ನು ಕಲಬೆರೆಕೆಗೆಂದು ಇರಿಸಿದ್ದು, ಆಹಾರ ಸುರಕ್ಷತೆಯ ಬಗ್ಗೆ ನಾವೆಷ್ಟು ಅಜಾಗ್ರತೆ ಮಾಡುತ್ತೇವೆ ಎಂಬುದಕ್ಕೆ ಹಿಡಿದ ಕನ್ನಡಿ. ಏನು ಕಲಬೆರಕೆ ಎಂದರೆ? ಇದರಿಂದ ಏನಾಗುತ್ತದೆ?

ಕಲಬೆರಕೆ ಎಂದರೆ

ಮಲಿನ ವಸ್ತುಗಳನ್ನು ಅಥವಾ ಕಡಿಮೆ ಗುಣಮಟ್ಟದ ವಸ್ತುಗಳನ್ನು ಒಳ್ಳೆಯದಕ್ಕೆ ಬೆರೆಸುವುದು. ಆದರೆ ಇದನ್ನು ಮೂಲ ವಸ್ತುವಿನ ಬೆಲೆಗೆ ಮತ್ತು ಗುಣಮಟ್ಟದ ಖಾತ್ರಿಗೆ ಮಾರಲಾಗುತ್ತದೆ. ಇದಕ್ಕಾಗಿ ಮೂಲ ವಸ್ತುವಿನ ಬಣ್ಣ, ಘಮ ಇತ್ಯಾದಿಗಳನ್ನು ಹೆಚ್ಚಿಸಲು ಮಾಡುವ ಕಳ್ಳಾಟಗಳು. ಇದು ಗ್ರಾಹಕರಿಗೆ ಮಾಡುವ ವಿಶ್ವಾಸದ್ರೋಹ ಮಾತ್ರವಲ್ಲ, ಅವರ ಆರೋಗ್ಯದ ಮೇಲೂ ಗಂಭೀರ ಪರಿಣಾಮಗಳನ್ನು ಬೀರುತ್ತದೆ. ಈ ಬಗ್ಗೆ ವಿಸ್ತೃತವಾದ ಮಾಹಿತಿ ಇಲ್ಲಿದೆ.

ಅಗ್ಗದ ವಸ್ತುಗಳನ್ನು ಸೇರಿಸುವುದು

ಹಾಲಿಗೆ ನೀರು ಸೇರಿಸಿದಷ್ಟೇ ಲೀಲಾಜಾಲವಾಗಿ ಹಿಟ್ಟಿಗೆ ಸೀಮೆಸುಣ್ಣದ ಪುಡಿ ಬೆರೆಸುವುದು, ಅಚ್ಚ ಖಾರದ ಪುಡಿಗೆ ಅಥವಾ ಅರಿಶಿನ ಪುಡಿಗೆ ಬಣ್ಣ ಬರುವಂಥ ರಾಸಾಯನಿಕಗಳನ್ನು ಸೇರಿಸುವುದು, ದುಬಾರಿ ಬೆಲೆಯ ಆಲಿವ್‌ ಎಣ್ಣೆಗೆ ಅಗ್ಗದ ಯಾವುದೋ ಎಣ್ಣೆ ಬೆರೆಸುವುದು, ಅಂದರೆ ದುಬಾರಿ ಬೆಲೆಯ ವಸ್ತುವಿಗೆ ಅದರಂತೆಯೇ ಕಾಣುವ ಅಗ್ಗದ ಯಾವುದಾದರೂ ವಸ್ತುವನ್ನು ಸೇರಿಸಬಹುದು.

ಇದನ್ನೂ ಓದಿ: Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

ಸತ್ವಹೀನ ಮಾಡುವುದು

ವಸ್ತುಗಳ ಸತ್ವಗಳನ್ನು ತೆಗೆದು ಅವುಗಳನ್ನು ಹೊಸ ಹೆಸರಿನಲ್ಲಿ ಮಾರಾಟ ಮಾಡುವುದು. ಅಂದರೆ ಹಾಲಿನ ಕೊಬ್ಬಿನಂಶವನ್ನೆಲ್ಲ ತೆಗೆದು, ಅದನ್ನು ಪ್ರತ್ಯೇಕ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತದೆ, ಜೊತೆಗೆ ʻಸ್ಕಿಮ್‌ ಮಿಲ್ಕ್‌ʼ ಹೆಸರಿನಲ್ಲಿ ಕೊಬ್ಬು ರಹಿತ ಹಾಲನ್ನೂ ಮಾರಾಟ ಮಾಡಲಾಗುತ್ತದೆ. ಇದು ಮಾತ್ರವಲ್ಲ, ಹಲವಾರು ಮಸಾಲೆಗಳ ತೈಲದಂಶವನ್ನು ತೆಗೆಯುವುದು ಸಹ ಇದೇ ಸಾಲಿಗೆ ಸೇರಿಸಲಾಗುತ್ತದೆ.

ರಾಸಾಯನಿಕಗಳ ಬೆರಕೆ

ದೀರ್ಘಕಾಲ ಬಾಳಿಕೆ ಬರುವಂತೆ ಮಾಡಲು ಹಲವು ರೀತಿಯ ಅನಾರೋಗ್ಯಕರ ರಾಸಾಯನಿಕಗಳನ್ನು ಬೆರೆಸಲಾಗುತ್ತದೆ. ಈ ಪೈಕಿ ರಸಗೊಬ್ಬರಗಳು, ಕೀಟನಾಶಗಳು ಮುಂತಾದ ರಾಸಾಯನಿಕಗಳನ್ನು ಕಲಬೆರಕೆಗೆ ಬಳಸಲಾಗುತ್ತದೆ. ಕೆಲವನ್ನು ʻಕಲರ್‌-ಬೆರಕೆʼಯ ಉದ್ದೇಶದಿಂದ ಮಾಡಲಾಗುತ್ತದೆ.

ಮಾಲಿನ್ಯದ ಸಮಸ್ಯೆ

ಆಹಾರಕ್ಕೆ ಕೀಟಗಳು, ಬ್ಯಾಕ್ಟೀರಿಯಗಳು, ಟಾಕ್ಸಿನ್‌ಗಳು, ಭಾರೀ ಖನಿಜಗಳು ಸಹ ಸೇರಬಹುದು. ಇವುಗಳಲ್ಲಿ ಎಲ್ಲವೂ ಉದ್ದೇಶಪೂರ್ವಕವಾಗಿ ಬೆರಕೆಯಾಗುತ್ತವೆ ಎಂದೇನಿಲ್ಲ. ಕೆಲವೊಂದು ಅರಿವಿಲ್ಲದೆಯೇ ಶುದ್ಧ ಆಹಾರಕ್ಕೆ ಸೇರಿರುವ ಸಾಧ್ಯತೆ ಇರುತ್ತದೆ.

ಕೃತಕ ಮಾಗಿಸುವಿಕೆ

ಬಾಳೆಗೊನೆ ತುರ್ತಾಗಿ ಹಣ್ಣಾಗಬೇಕೆ? ಎಥಿಲೀನ್‌ ಸೋಕಿದರಾಯ್ತು, ಬಲುಬೇಗ ಗೊನೆ ಹಳದಿ ಬಣ್ಣಕ್ಕೆ ತಿರುಗುತ್ತದೆ. ಮಾವು ಹಣ್ಣಾಗಬೇಕೆ? ಕ್ಯಾಲ್ಶಿಯಂ ಕಾರ್ಬೈಡ್‌ ಇದೆಯಲ್ಲ. ಹೀಗೆ ಹಲವು ರೀತಿಯ ರಾಸಾಯನಿಕಗಳನ್ನು ಬಳಸಿ, ಕಾಯಿಗಳನ್ನು ಮಾಗಿಸಿ ಹಣ್ಣಾಗಿಸಲಾಗುತ್ತದೆ. ಹಿಂದೆಯೂ ಇಂಥ ಕ್ರಮಗಳು ಬಳಕೆಯಲ್ಲಿದ್ದರೂ, ಅವುಗಳನ್ನು ರಾಸಾಯನಿಕಗಳನ್ನು ಬಳಸುತ್ತಿರಲಿಲ್ಲ. ಬದಲಿಗೆ ಹುಲ್ಲಿನಲ್ಲಿ ಹುದುಗಿಸುವುದು, ಪೆಟ್ಟಿಗೆಯನ್ನು ಉಬ್ಬೆ ಹಾಕುವಂಥ ಕ್ರಮಗಳು ಚಾಲ್ತಿಯಲ್ಲಿದ್ದವು.

ಆರೋಗ್ಯಕ್ಕೇನು ತೊಂದರೆ?

ಆಹಾರದ ಕಲಬೆರಕೆಯಿಂದ ಹೊಟ್ಟೆಯ ಆರೋಗ್ಯ ಬುಡಮೇಲಾಗಬಹುದು. ವಾಂತಿ, ಅತಿಸಾರ ಗಂಟಾಗಬಹುದು. ಹಣ್ಣುಗಳನ್ನು ಮಾಗಿಸಲು ಬಳಸುವ ರಾಸಾಯನಿಕಗಳು ಕ್ಯಾನ್ಸರ್‌ಕಾರಕ ಎಂಬ ಆರೋಪವಂತೂ ಇದ್ದೇಇದೆ. ಬೇಗ ಬೆಳೆಯಲೆಂದು ಕೃತಕ ಹಾರ್ಮೋನುಗಳನ್ನು ನೀಡುವುದರಿಂದ, ಅವು ಗರ್ಭಕೋಶದ ಕ್ಯಾನ್ಸರ್‌ಗೆ ಎಷ್ಟರಮಟ್ಟಿಗೆ ಕಾರಣವಾಗುತ್ತವೆ ಎಂಬ ಬಗ್ಗೆ ಸಂಶೋಧನೆಗಳು ನಡೆಯುತ್ತಿವೆ.

ಪೌಷ್ಟಿಕಾಂಶಗಳ ಕೊರತೆ

ಮೂಲ ಆಹಾರಕ್ಕೆ ಕಳಪೆ ವಸ್ತುಗಳನ್ನು ಸೇರಿಸುವುದರಿಂದ ಪೌಷ್ಟಿಕಾಂಶಗಳ ಕೊರತೆ ಎದುರಾಗುತ್ತದೆ. ಶುದ್ಧ ಅಡುಗೆ ಎಣ್ಣೆಗೆ ಕಲುಷಿತ ಎಣ್ಣೆಗಳನ್ನು ಸೇರಿಸುವುದರಿಂದ ಅಗತ್ಯ ಸತ್ವಗಳ ಕೊರತೆ ಕಾಡುವುದು ಸಾಮಾನ್ಯ. ಮಾತ್ರವಲ್ಲ, ಕೆಟ್ಟ ಕೊಬ್ಬಿನ ಅಂಶವೂ ದೇಹದಲ್ಲಿ ಹೆಚ್ಚಾಗಿ, ಜೀವನಶೈಲಿಯ ರೋಗಗಳೆಲ್ಲ ಬೆನ್ನು ಬೀಳುತ್ತವೆ.

ಅಲರ್ಜಿಗಳು

ಪ್ಯಾಕೇಜಿಂಗ್‌ ಮೇಲೆ ಆಯಾ ವಸ್ತುಗಳಲ್ಲಿ ಏನೇನನ್ನು ಸೇರಿಸಲಾಗಿದೆ ಎಂಬುದನ್ನು ನಮೂದಿಸುವುದು ಕಡ್ಡಾಯ. ಆದರೆ ಕಲಬೆರಕೆ ವಸ್ತುಗಳಲ್ಲಿಇಂಥ ಮಾಹಿತಿಗಳು ಇರುವುದಿಲ್ಲ, ಇದ್ದರೂ ಅದು ಸುಳ್ಳಾಗಿರುತ್ತದೆ. ಇದರಿಂದ ಅಲರ್ಜಿಗಳು ಕಾಣಬಹುದು. ಮುಖ, ಕಣ್ಣು ಅಥವಾ ತುಟಿಗಳು ಊದಿಕೊಳ್ಳಬಹುದು. ತುರಿಕೆ, ಮೈಮೇಲೆಲ್ಲ ಗುಳ್ಳೆಗಳು ಕಾಣಬಹುದು, ಉಸಿರಾಟದ ತೊಂದರೆಗಳು ಬರಬಹುದು.

Continue Reading

Latest

Dietary Guidelines: ಕಡಿಮೆ ದೈಹಿಕ ಚಟುವಟಿಕೆ ಇರುವವರಿಗೆ ಯಾವ ರೀತಿಯ ಆಹಾರ ಸೂಕ್ತ?

ಕಡಿಮೆ ಚಟುವಟಿಕೆಯುಳ್ಳ ಪುರುಷರು ಮತ್ತು ಮಹಿಳೆಯರು ಯಾವ ರೀತಿಯ ಆಹಾರ ಸೇವಿಸಬೇಕು ಎಂಬುದರ ಕುರಿತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಮಾರ್ಗಸೂಚಿಯನ್ನು (Dietary Guidelines) ಬಿಡುಗಡೆ ಮಾಡಿದ್ದು, ಈ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Dietary Guidelines
Koo

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಕಡಿಮೆ ಚಟುವಟಿಕೆ ಹೊಂದಿರುವ ಪುರುಷರು (men) ಮತ್ತು ಮಹಿಳೆಯರು (women) ಆಹಾರದಲ್ಲಿ (food) ಪೌಷ್ಟಿಕಾಂಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದ್ದು, ಇದಕ್ಕಾಗಿ ಇಂಥವರು ಯಾವ ರೀತಿಯ ಆಹಾರ ಸೇವಿಸಬೇಕು ಎಂಬುದರ ಮಾರ್ಗಸೂಚಿಯನ್ನು (Dietary Guidelines) ಬಿಡುಗಡೆ ಮಾಡಿದೆ.

ಉಪಾಹಾರದಲ್ಲಿ ಏನು ಇರಬೇಕು?

ಐಸಿಎಂಆರ್ ಪ್ರಕಾರ ಕಡಿಮೆ ಚಟುವಟಿಕೆ ಹೊಂದಿರುವ ಪುರುಷರ ಉಪಾಹಾರದಲ್ಲಿ ನೆನೆಸಿದ ಮತ್ತು ಬೇಯಿಸಿದ ಬಜ್ರಾ 90 ಗ್ರಾಂ ಮತ್ತು ತರಕಾರಿಗಳು 50 ಗ್ರಾಂ ಒಳಗೊಂಡಿರಬೇಕು. ಅದೇ ರೀತಿ ಮಹಿಳೆಯರಿಗೆ ನೆನೆಸಿದ ಮತ್ತು ಬೇಯಿಸಿದ ಬಜ್ರಾವನ್ನು ಉಪಾಹಾರದಲ್ಲಿ 60 ಗ್ರಾಂ ಮತ್ತು ತರಕಾರಿಗಳು 100 ಗ್ರಾಂ ಸೇರಿಸಿಕೊಳ್ಳಬೇಕು.

ಊಟದಲ್ಲಿ ಏನು ಇರಬೇಕು?

ಮಧ್ಯಾಹ್ನದ ಊಟದಲ್ಲಿ ಪುರುಷರು ಧಾನ್ಯಗಳನ್ನು 100 ಗ್ರಾಂ ಮತ್ತು ಬೇಳೆಕಾಳುಗಳು 30 ಗ್ರಾಂ, ಮಹಿಳೆಯರು ಮಧ್ಯಾಹ್ನದ ಊಟದಲ್ಲಿ ಧಾನ್ಯಗಳು 80 ಗ್ರಾಂ ಮತ್ತು ದ್ವಿದಳ ಧಾನ್ಯಗಳನ್ನು 20 ಗ್ರಾಂ ತೆಗೆದುಕೊಳ್ಳಬಹುದು. ಸಂಜೆ ಇಬ್ಬರಿಗೂ 50 ಮಿಲಿ ಲೀಟರ್ ಹಾಲು ಕುಡಿಯಲು ಸೂಚಿಸಲಾಗುತ್ತದೆ.


ನಮ್ಮ ಆಹಾರ ಹೇಗಿರಬೇಕು?

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಆಧುನಿಕ ಆಹಾರ ಪದ್ಧತಿಗೆ ಸರಿ ಹೊಂದುವಂತೆ ಭಾರತೀಯರಿಗೆ ನವೀಕರಿಸಿದ ಆಹಾರ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದೆ.

ಐಸಿಎಂಆರ್ ನ ಆಹಾರ ಮಾರ್ಗಸೂಚಿಗಳ ಪ್ರಕಾರ ಆರೋಗ್ಯಕರ ಊಟವು ಹೆಚ್ಚಿನ ತರಕಾರಿ, ಸಾಕಷ್ಟು ಧಾನ್ಯ, ಕಾಳು, ಬೀನ್ಸ್, ಬೀಜಗಳು, ಹಣ್ಣುಗಳನ್ನು ಒಳಗೊಂಡಿರುತ್ತದೆ. ಜೊತೆಗೆ ಮೊಸರು ಆಹಾರದಲ್ಲಿ ಸೇರಿಸಿಕೊಳ್ಳುವುದು ಉತ್ತಮ ಆಯ್ಕೆಯಾಗಿದೆ. ಹೆಚ್ಚುವರಿ ಸಕ್ಕರೆಗಳಿಂದ ಮುಕ್ತ ಅಥವಾ ಅತೀ ಕಡಿಮೆ ಪ್ರಮಾಣದಲ್ಲಿ ಎಣ್ಣೆ, ಕೊಬ್ಬು ಮತ್ತು ಉಪ್ಪನ್ನು ಹೊಂದಿರುವ ಆಹಾರ ಒಳ್ಳೆಯ ಆಯ್ಕೆಯಾಗಿರುತ್ತದೆ.

ಆರೋಗ್ಯಕರವಾಗಿರಲು ಆಹಾರ ಮಾತ್ರವಲ್ಲ ದೈಹಿಕವಾಗಿ ಸಕ್ರಿಯವಾಗಿರುವುದು ಕೂಡ ಮುಖ್ಯವಾಗಿರುತ್ತದೆ. ಇದಕ್ಕಾಗಿ ನಿಯಮಿತವಾಗಿ ವ್ಯಾಯಾಮ ಮಾಡಲು ಸೂಚಿಸಲಾಗಿದೆ. ತಾಜಾ ಆಹಾರ ಸೇವಿಸುವುದು ಬಹು ಮುಖ್ಯ. ಆಹಾರ ಸುರಕ್ಷತೆಯ ಕಡೆಗೂ ಗಮನವಿರಬೇಕು. ಕನಿಷ್ಠ ಸಂಸ್ಕರಿಸಿದ ಆಹಾರಗಳ ಆಯ್ಕೆ ಒಳ್ಳೆಯದು ಎಂಬುದನ್ನು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Which Sweetener Is Better: ಸಕ್ಕರೆ, ಬೆಲ್ಲ, ಕಲ್ಲುಸಕ್ಕರೆ- ಯಾವುದು ಒಳ್ಳೆಯದು?

ದೈಹಿಕ ಚಟುವಟಿಕೆ ಹೇಗಿರಬೇಕು?

ಮಾರ್ಗಸೂಚಿಗಳ ಪ್ರಕಾರ ಎಲ್ಲಾ ವಯಸ್ಸಿನ ವ್ಯಕ್ತಿಗಳು ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 30ರಿಂದ 45 ನಿಮಿಷಗಳ ಮಧ್ಯಮ, ತೀವ್ರತೆಯ ದೈಹಿಕ ಚಟುವಟಿಕೆಯನ್ನು ನಡೆಸಲೇಬೇಕು. ಮಕ್ಕಳಲ್ಲಿ ದಿನಕ್ಕೆ ಕನಿಷ್ಠ 60 ನಿಮಿಷಗಳ ನಿಯಮಿತ ದೈಹಿಕ ಚಟುವಟಿಕೆ ಇದ್ದರೆ ಅಧಿಕ ತೂಕ ಮತ್ತು ಸ್ಥೂಲಕಾಯತೆಯನ್ನು ತಡೆಯಬಹುದು ಎನ್ನುತ್ತದೆ ಐಸಿಎಂಆರ್ ಮಾರ್ಗಸೂಚಿ.

Continue Reading

ಆರೋಗ್ಯ

Toxic Shawarma: ಚಿಕನ್‌ ಶವರ್ಮಾ ತಿಂದರೆ ಸಾಯುತ್ತಾರೆಯೆ? ಏನು ಕಾರಣ?

2022ರ ಏಪ್ರಿಲ್‌ನಲ್ಲಿ ‘ವಿಷಕಾರಿ’ ಶವರ್ಮಾ ಸೇವಿಸಿ 52ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಕೇರಳದ ಚೆರುವತ್ತೂರ್‌ನಲ್ಲಿ ಯುವಕ, ಕಳೆದ ವರ್ಷ ತಮಿಳುನಾಡಿನಲ್ಲಿ ಬಾಲಕಿಯೊಬ್ಬಳು ಮೃತಪಟ್ಟಿದ್ದಳು. ಹಾಗಾದರೆ ಶವರ್ಮಾ ಆಹಾರ ಪ್ರಿಯರಿಗೆ ವಿಷಕಾರಿವಾಗುತ್ತಿರುವುದು (Toxic Shawarma) ಯಾಕೆ? ಈ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Toxic Shawarma
Koo

ಮುಂಬಯಿನ (mumbai) ಮಂಖುರ್ದ್ ಪ್ರದೇಶದಲ್ಲಿ 19 ವರ್ಷದ ಯುವಕನೊಬ್ಬ ರಸ್ತೆ ಬದಿಯ ವ್ಯಾಪಾರಿಯಿಂದ ಚಿಕನ್‌ ಶವರ್ಮಾ ಸೇವಿಸಿದ (Toxic Shawarma) ಬಳಿಕ ಹೊಟ್ಟೆನೋವು (stomach pain), ವಾಂತಿ (vomiting) ಕಾಣಿಸಿಕೊಂಡು ಸಾವನ್ನಪ್ಪಿದ ಘಟನೆ ನಡೆದಿತ್ತು. ಶವರ್ಮಾಗೆ ಬಳಸಿದ ಚಿಕನ್ ಕೆಟ್ಟುಹೋಗಿರುವುದು ಇದಕ್ಕೆ ಕಾರಣ ಎನ್ನಲಾಗಿದೆ.

ಪ್ರಥಮೇಶ್ ಭೋಕ್ಸೆ ಮೃತ ಯುವಕ. ಆತ ಸೇವಿಸಿದ ಆಹಾರ ವಿಷಪೂರಿತವಾಗಿತ್ತು ಎಂದು ವೈದ್ಯರು ಹೇಳಿದ್ದಾರೆ. ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಂಡ ಬಳಿಕ ಭೋಕ್ಸೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಬಾರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಅವರು ಮೂರನೇ ಬಾರಿಗೆ ಮತ್ತೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಂಗಳವಾರ ಮೃತಪಟ್ಟಿದ್ದಾರೆ.

ಸ್ಥಳೀಯ ಪೊಲೀಸರು ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಇಬ್ಬರು ಆಹಾರ ಮಾರಾಟಗಾರರನ್ನು ಬಂಧಿಸಿದ್ದಾರೆ. ಆನಂದ್ ಕಾಂಬ್ಳೆ ಮತ್ತು ಅಹ್ಮದ್ ಶೇಖ್ ಬಂಧಿತರು. ಇವರ ವಿರುದ್ಧ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಇದೇ ಮೊದಲಲ್ಲ

ಶವರ್ಮಾದಿಂದ ಸಾವು ಸಂಭವಿಸಿರುವುದು ಇದೇ ಮೊದಲ ಘಟನೆಯಲ್ಲ. 2022ರ ಏಪ್ರಿಲ್‌ನಲ್ಲಿ 52ಕ್ಕೂ ಹೆಚ್ಚು ಮಂದಿ ಶವರ್ಮಾ ಸೇವಿಸಿ ಅಸ್ವಸ್ಥರಾಗಿದ್ದರು. ಕೇರಳದ ಚೆರುವತ್ತೂರಿನಲ್ಲಿ ಶವರ್ಮಾವನ್ನು ತಿಂದು ಒಬ್ಬರು ಮೃತಪಟ್ಟಿದ್ದರು. 16 ವರ್ಷದ ದೇವಾನಂದ ಎಂಬ ಬಾಲಕಿ ಶವರ್ಮಾ ಖಾದ್ಯವನ್ನು ಸೇವಿಸಿದ ಬಳಿಕ ಪ್ರಾಣ ಕಳೆದುಕೊಂಡಿದ್ದಳು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ತಮಿಳುನಾಡಿನ ನಾಮಕ್ಕಲ್‌ನ ರೆಸ್ಟೋರೆಂಟ್‌ನಲ್ಲಿ ಚಿಕನ್ ಶವರ್ಮಾ ಸೇವಿಸಿದ 14 ವರ್ಷದ ಬಾಲಕಿ ತನ್ನ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಇದಲ್ಲದೆ, ಖಾದ್ಯವನ್ನು ಸೇವಿಸಿದ ಅನಂತರ ಸಂತ್ರಸ್ತೆಯ ಕುಟುಂಬದ ನಾಲ್ವರು ಸೇರಿದಂತೆ ಒಟ್ಟು 43 ಮಂದಿ ತೀವ್ರ ಜ್ವರ, ವಾಂತಿ, ಹೊಟ್ಟೆ ನೋವು ಮತ್ತು ಅತಿಸಾರದಿಂದ ಆಸ್ಪತ್ರೆಗೆ ದಾಖಲಾಗಿದ್ದರು.

2023ರ ಅಕ್ಟೋಬರ್‌ನಲ್ಲಿ ಕೊಚ್ಚಿಯ ಯುವಕ ಕೇರಳದ ಮಾವೇಲಿಪುರಂನಲ್ಲಿರುವ ರೆಸ್ಟೋರೆಂಟ್‌ನಿಂದ ಶವರ್ಮಾ ಸೇವಿಸಿದ ಅನಂತರ ಸಾವನ್ನಪ್ಪಿದರು. 22 ವರ್ಷದ ಯುವಕನ ಮರಣೋತ್ತರ ಪರೀಕ್ಷೆಯ ವರದಿಯು ಅವನ ಸಾವಿಗೆ ಕಾರಣವನ್ನು ಸೆಪ್ಟಿಸೆಮಿಯಾ ಎಂದು ಉಲ್ಲೇಖಿಸಿದೆ. ಇದು ಗಂಭೀರ ರಕ್ತಪ್ರವಾಹದ ಸೋಂಕಾಗಿದೆ.


ಶವರ್ಮಾ ಏಕೆ ಸಾವಿಗೆ ಕಾರಣ?

ಶವರ್ಮಾ ಭಕ್ಷ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ಅದರಲ್ಲಿ ಬಳಸುವ ಪದಾರ್ಥಗಳು ಇದಕ್ಕೆ ಕಾರಣವಾಗಿದೆ. ವಿಶೇಷವಾಗಿ ಕೋಳಿಮಾಂಸವನ್ನು ತಯಾರಿಸುವ, ನಿರ್ವಹಿಸುವ ಮತ್ತು ಸಂಗ್ರಹಿಸುವ ವಿಧಾನ ಸರಿಯಾಗಿ ಇಲ್ಲದೇ ಇದ್ದುದರಿಂದ ಶವರ್ಮಾವನ್ನು ತಿಂದ ಬಳಿಕ ಹಲವು ಮಂದಿ ಸಾವನ್ನಪ್ಪಿದ್ದಾರೆ. ಕಡಿಮೆ ಬೇಯಿಸಿದ ಮಾಂಸ ಅಥವಾ ಮಾಂಸದ ಅಸಮರ್ಪಕ ಶೈತ್ಯೀಕರಣದ ಕಾರಣದಿಂದಾಗಿ ಆಹಾರ ವಿಷವಾಗಿದೆ.

ಬೇಯಿಸದ ಮಾಂಸ ಕಾರಣ

ಶವರ್ಮಾಕ್ಕೆ ಬಳಸಲಾಗುವ ಮಾಂಸವನ್ನು ಆಳವಾಗಿ ಭೇದಿಸದ ಜ್ವಾಲೆಯನ್ನು ಬಳಸಿ ಗಂಟೆಗಳ ಕಾಲ ನಿಧಾನವಾಗಿ ಹುರಿಯಲಾಗುತ್ತದೆ. ಇದರಿಂದ ಹೆಚ್ಚಿನ ಗ್ರಾಹಕರು ಹಲವು ಸಂದರ್ಭದಲ್ಲಿ ಸರಿಯಾಗಿ ಬೇಯಿಸದ ಮಾಂಸವನ್ನು ಪಡೆಯುತ್ತಾರೆ. ಶವರ್ಮಾದಿಂದ ಆಹಾರ ವಿಷಕ್ಕೆ ಮಾಂಸದ ಅಸಮರ್ಪಕ ಶೈತ್ಯೀಕರಣ, ಮಾಲಿನ್ಯ, ಅಥವಾ ಸಾಲ್ಮೊನೆಲ್ಲಾ ಅಥವಾ ಇ. ಕೋಲಿಯಂತಹ ಹಾನಿಕಾರಕ ಬ್ಯಾಕ್ಟೀರಿಯಾಕ್ಕೆ ಕಾರಣವಾಗುತ್ತದೆ. ಇದು ಆಹಾರವನ್ನು ವಿಷಗೊಳಿಸುವುದು ಮಾತ್ರವಲ್ಲ ಗಂಭೀರವಾದ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ವೈದ್ಯರೊಬ್ಬರು ಹೇಳುತ್ತಾರೆ.

ಅನೈರ್ಮಲ್ಯ, ಸರಿಯಾಗಿ ಬೇಯಿಸದ ಅಥವಾ ಕಲುಷಿತ ಆಹಾರ ಕರುಳಿನ ಸೋಂಕನ್ನು ಉಂಟುಮಾಡಬಹುದು. ಅದು ತುಂಬಾ ಸಾಂಕ್ರಾಮಿಕವಾಗಿರುತ್ತದೆ. ಅಲ್ಲದೇ ಕಲುಷಿತ ಪಾತ್ರೆಗಳು, ಅಸಮರ್ಪಕ ಸಾಸ್ ಅಥವಾ ಪದಾರ್ಥಗಳ ಬಳಕೆ ಗಂಭೀರ ಆರೋಗ್ಯ ಪರಿಸ್ಥಿತಿಗಳಿಗೆ ಕಾರಣವಾಗಬಹುದು. ಫ್ರಿಡ್ಜ್‌ ನಲ್ಲಿ ಮಾಂಸವನ್ನು ದೀರ್ಘಕಾಲದವರೆಗೆ ಬಿಟ್ಟರೂ ಅದು ಹಾನಿಕಾರಕ ಬ್ಯಾಕ್ಟೀರಿಯಾಗಳ ಸಂತಾನೋತ್ಪತ್ತಿಗೆ ಕಾರಣವಾಗುತ್ತದೆ.

ಇದನ್ನೂ ಓದಿ: Juices Side Effect: ಅಂಗಡಿಯಲ್ಲಿ ಸಿಗುವ ಜ್ಯೂಸ್‌ ಕುಡಿದರೆ ಏನಾಗುತ್ತದೆ?

ಸುರಕ್ಷಿತ ಶವರ್ಮಾ ಸೇವಿಸಿ

ಶವರ್ಮಾ ತಿನ್ನಬೇಕಿದ್ದರೆ ಉತ್ತಮ ಆಹಾರ ಸುರಕ್ಷತಾ ಅಭ್ಯಾಸಗಳ ಇತಿಹಾಸ ಹೊಂದಿರುವ ಆರೋಗ್ಯಕರ ಮತ್ತು ಪ್ರತಿಷ್ಠಿತ ಆಹಾರ ಮಳಿಗೆಗಳು ಮತ್ತು ಮಾರಾಟಗಾರರನ್ನು ಆಯ್ಕೆ ಮಾಡಿ. ಹೊಟೇಲ್‌ನಲ್ಲಿನ ಶುಚಿತ್ವ ಮತ್ತು ಆಹಾರ ನಿರ್ವಹಣೆಯ ಬಗ್ಗೆ ಗಮನ ಕೊಡಿ. ಮಾಂಸದ ಬಗ್ಗೆ ಜಾಗರೂಕರಾಗಿರಿ. ವಿಶೇಷವಾಗಿ ಅದು ಕಚ್ಚಾ ಅಥವಾ ಕಡಿಮೆ ಬೇಯಿಸಿರುವುದನ್ನು ತಿನ್ನಬೇಡಿ.

Continue Reading
Advertisement
Modi Roadshow Live
ದೇಶ2 mins ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Viral Video
ದೇಶ7 mins ago

Viral Video: ಜೊತೆಗಿದ್ದ ಬೆಂಬಲಿಗನನ್ನೇ ವೇದಿಕೆಯಿಂದ ತಳ್ಳಿದ ಲಾಲೂ ಪುತ್ರ; ಎಲ್ಲೆಡೆ ಭಾರೀ ಖಂಡನೆ

Naxals
ದೇಶ25 mins ago

Naxals: ಮತ್ತೆ ಮೂವರು ನಕ್ಸಲರ ಹತ್ಯೆ, ಎನ್‌ಕೌಂಟರ್‌ನಲ್ಲಿ ಈ ವರ್ಷ ಶತಕ ಬಾರಿಸಿದ ಭದ್ರತಾ ಸಿಬ್ಬಂದಿ!

sslc result
ಶಿಕ್ಷಣ29 mins ago

SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

Pavithra Jayaram died in the accident may alive if the ambulance arrived
ಸಿನಿಮಾ33 mins ago

Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

Sequins partywear fashion
ಫ್ಯಾಷನ್33 mins ago

Sequins Partywear Fashion: ಪಾರ್ಟಿಪ್ರಿಯರಿಗೆ ಬಂತು ಮಿರಮಿರ ಮಿನುಗುವ ಸಿಕ್ವೀನ್ಸ್‌ ಔಟ್‌ಫಿಟ್ಸ್‌

Prajwal Revanna Case
ಕರ್ನಾಟಕ46 mins ago

Prajwal Revanna Case: ಪೆನ್‌ಡ್ರೈವ್, ವಿಡಿಯೊ ಇದ್ದವರನ್ನೆಲ್ಲ ಬಂಧಿಸ್ತಾರಾ?; ಆಪ್ತರ ಬಂಧನದ ಬಗ್ಗೆ ಪ್ರೀತಂ ಗೌಡ ಫಸ್ಟ್‌ ರಿಯಾಕ್ಷನ್

Pushpa 2 Allu Arjun fan recreates hook step on graduation day
ಟಾಲಿವುಡ್46 mins ago

Pushpa 2: ಪದವಿ ಪ್ರದಾನ ವೇಳೆ ‘ಪುಷ್ಪ 2’ ಹುಕ್ ಸ್ಟೆಪ್ ಹಾಕಿದ ವಿದ್ಯಾರ್ಥಿ: ವಿಡಿಯೊ ವೈರಲ್‌

IPL 2024
ಪ್ರಮುಖ ಸುದ್ದಿ52 mins ago

IPL 2024 : ಮೈದಾನದಿಂದಲೇ ಅನುಷ್ಕಾಗೆ ಕೈ ಸನ್ನೆ ಮಾಡಿದ ಕೊಹ್ಲಿ; ಇಲ್ಲಿದೆ ವಿಡಿಯೊ

Maldives
ದೇಶ1 hour ago

Maldives: ಭಾರತದ ಯುದ್ಧವಿಮಾನ ಹಾರಿಸುವ ತಾಕತ್ತು ನಮ್ಮ ಪೈಲಟ್‌ಗಳಿಗಿಲ್ಲ ಎಂದ ಮಾಲ್ಡೀವ್ಸ್, ಎಂಥಾ ದುಸ್ಥಿತಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi Roadshow Live
ದೇಶ2 mins ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ11 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ13 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ23 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ24 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ24 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ2 days ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

ಟ್ರೆಂಡಿಂಗ್‌