Food Tips: ಅಡುಗೆ ಅಂದುಕೊಂಡದ್ದಕ್ಕಿಂತ ಹೆಚ್ಚು ಖಾರವಾಯಿತೇ? ಖಾರ ತಗ್ಗಿಸಲು ಇಲ್ಲಿವೆ ಫಟಾಫಟ್‌ ಟಿಪ್ಸ್‌! - Vistara News

ಆಹಾರ/ಅಡುಗೆ

Food Tips: ಅಡುಗೆ ಅಂದುಕೊಂಡದ್ದಕ್ಕಿಂತ ಹೆಚ್ಚು ಖಾರವಾಯಿತೇ? ಖಾರ ತಗ್ಗಿಸಲು ಇಲ್ಲಿವೆ ಫಟಾಫಟ್‌ ಟಿಪ್ಸ್‌!

ಅಡುಗೆ ರುಚಿಯಾಗಿ ಆಯ್ತು, ಆದರೆ, ಖಾರ ಆಗ್ಬಿಟ್ಟಿದ್ಯಲ್ಲಾ ಎಂದು ತಲೆಬಿಸಿಯಾದರೆ ಮಾಡಿದ ಅಡುಗೆಯನ್ನು ಎಸೆಯಲು ಯಾರಿಗೆ ತಾನೇ ಮನಸು ಬಂದೀತು. ಹಾಗಾದರೆ, ಅತಿಯಾಗಿ ಖಾರವಾದ ಅಡುಗೆಯನ್ನು ಸರಿಪಡಿಸುವುದು ಹೇಗೆ ಎಂಬ ಯೋಚನೆ ನಿಮಗಿದ್ದರೆ, ಅದಕ್ಕೆ ಕೆಲವು ಸುಲಭ ಪರಿಹಾರೋಪಾಯಗಳಿವೆ.

VISTARANEWS.COM


on

spicy food
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾವತ್ತಾದರೂ ಇವತ್ತೊಂದು ಒಳ್ಳೆಯ ಅಡುಗೆ ಮಾಡಬೇಕು ಎಂಬ ಉಮೇದು ಬಂದು ಅಡುಗೆಗೆ ಹೊರಟ ದಿನವೇ ಅಡುಗೆಯಲ್ಲಿ ಏನಾದರೂ ಎಡವಟ್ಟಾದ ಅನುಭವ ನಿಮಗಿದೆಯೇ? ಎಲ್ಲ ಅಂದುಕೊಂಡ ಹಾಗೆಯೇ ಆಯ್ತು, ಇನ್ನೇನು ಸ್ವಲ್ಪ ಅಚ್ಚಕಾರದ ಪುಡಿ ಹಾಕಿದರೆ ಮುಗೀತು ಎಂದು ಒಂದೆರಡು ಚಮಚ ಹಾಕುವ ಬದಲು ಡಬಲ್‌ ಹಾಕಿ ಅಯ್ಯೋ ಎಂಥಾ ತಪ್ಪು ಮಾಡಿಬಿಟ್ಟೆ ಎಂಬ ಅನುಭವ ನಿಮಗೇನಾದರೂ ಆಗಿದೆಯೇ? ಅಡುಗೆ ರುಚಿಯಾಗಿ ಆಯ್ತು, ಆದರೆ, ಖಾರ ಆಗ್ಬಿಟ್ಟಿದ್ಯಲ್ಲಾ ಎಂದು ತಲೆಬಿಸಿಯಾದರೆ ಮಾಡಿದ ಅಡುಗೆಯನ್ನು ಎಸೆಯಲು ಯಾರಿಗೆ ತಾನೇ ಮನಸು ಬಂದೀತು. ಹಾಗಾದರೆ, ಅತಿಯಾಗಿ ಖಾರವಾದ ಅಡುಗೆಯನ್ನು ಸರಿಪಡಿಸುವುದು ಹೇಗೆ ಎಂಬ ಯೋಚನೆ ನಿಮಗಿದ್ದರೆ, ಅದಕ್ಕೆ ಕೆಲವು ಸುಲಭ ಪರಿಹಾರೋಪಾಯಗಳಿವೆ.

1. ನೀರು ಹಾಕಿ: ಖಾರದ ಅಡುಗೆಯಲ್ಲಿ ಖಾರ ಕಡಿಮೆ ಮಾಡುವ ಸುಲಭ ವಿಧಾನ ಎಂದರೆ ನೀರು ಹಾಕುವುದು. ಬಹುತೇಕ ಎಲ್ಲರೂ ಮಾಡುವ ಸರಳ ಕ್ರಮವಿದು. ಇದು ಒಂದು ಮಟ್ಟಿಗೆ ಸಹಾಯ ಮಾಡಬಹುದು. ಆದರೆ, ಅಂದುಕೊಂಡ ಹಾಗೆ ಪೂರ್ತಿ ಸರಿಯಾಗದು. ಆದರೆ, ಹೊಟ್ಟೆಯ ಉರಿಯನ್ನು ಕಡಿಮೆ ಮಾಡಬಹುದು. ಕೊಂಚ ಮಟ್ಟಿನ ಪ್ರಯೋಜನ ಇದರಿಂದ ಸಿಗಬಹುದು.

2. ಸಕ್ಕರೆ ಸೇರಿಸಿ: ಸಕ್ಕರೆ ಕೆಲವೊಮ್ಮೆ ಮ್ಯಾಜಿಕ್ಕನ್ನೇ ಮಾಡುತ್ತದೆ. ಹೆಚ್ಚು ಖಾರವಾಗಿದ್ದರೆ ಸಕ್ಕರೆ ಅಥವಾ ಇನ್ನಾವುದೇ ಸಿಹಿ ಪದಾರ್ಥವನ್ನು ಸೇರಿಸಿದರೆ ಖಾರದ ತೀವ್ರತೆ ಕಡಿಮೆಯಾಗಬಹುದು. ಆದರೆ, ಅಡುಗೆ ಕೊಂಚ ಸಿಹಿ ರುಚಿಯತ್ತ ವಾಲಬಹುದು. ಸಿಹಿ ಇಷ್ಟವಾಗದ ಮಂದಿಗೆ ಇದು ಇಷ್ಟವಾಗಲಿಕ್ಕಿಲ್ಲ. ಅಂಥವರು ಕೊಂಚ ಟೊಮೇಟೋ ಕೆಚಪ್‌ ಅನ್ನು ಕೂಡಾ ಸೇರಿಸಿ ನೋಡಬಹುದು.

3. ಹಿಟ್ಟಿನುಂಡೆ ಸೇರಿಸಿ: ಚಪಾತಿ ಮಾಡಲೆಂದು ಹಿಟ್ಟು ಕಲಸಿ ಉಂಡೆಗಳನ್ನಾಗಿ ಮಾಡಿ ಫ್ರಿಡ್ಜ್‌ನಲ್ಲಿ ಇಟ್ಟಿದ್ದೀರೆಂದಾದಲ್ಲಿ, ನಾಲ್ಕೈದು ಸಣ್ಣ ಸಣ್ಣ ಉಂಡೆಗಳನ್ನು ಅದಕ್ಕೆ ಹಾಕಿ. ಖಾರವಾದ ಅಡುಗೆಯಲ್ಲಿ 20ರಿಂದ 30 ನಿಮಿಷಗಳ ಕಾಲ ಇದ್ದರೆ, ಉಂಡೆಗಳು ಅಡುಗೆಯಲ್ಲಿರುವ ಖಾರವನ್ನು ಹೀರಿಕೊಂಡು, ಅಡುಗೆ ಕೊಂಚ ಸರಿಯಾಗುತ್ತದೆ. ನಂತರ ಉಂಡೆಗಳನ್ನು ಅದರಿಂದ ತೆಗೆಯಿರಿ. ನಂತರ ಬೇಕಿದ್ದರೆ ನೀರು ಸೇರಿಸಬಹುದು.

ಇದನ್ನೂ ಓದಿ: Food Tips: ಸೀದು ಕೆಂಪಾದ ಆಹಾರ ಸೇವನೆಗೆ ಯೋಗ್ಯವೇ?

4. ಹಾಲು ಅಥವಾ ಹಾಲಿನ ಉತ್ಪನ್ನಗಳು, ತೆಂಗಿನ ಹಾಲು ಸೇರಿಸಿ: ಅಡುಗೆಯಲ್ಲಿ ಖಾರ ಹೆಚ್ಚಾದಾಗ ಖಾರ ತಗ್ಗಿಸಲು ಸಹಾಯ ಮಾಡುವ ಇನ್ನೊಂದು ಪ್ರಮುಖ ಆದರೆ ಅಷ್ಟೇ ಸರಳ ಉಪಾಯ ಎಂದರೆ ಹಾಲು. ಹಾಲು ಅಥವಾ ಹಾಲಿನ ಉತ್ಪನ್ನಗಳಾದ ಮೊಸರು, ಕ್ರೀಂ, ಚೀಸ್‌ ಟೋಫು ಇತ್ಯಾದಿಗಳನ್ನು ಸೇರಿಸಬಹುದು. ತೆಂಗಿನಕಾಯಿಯ ಹಾಲು ಕೂಡಾ ಸೇರಿಸುವುದರಿಂದ ಖಾರ ಕಡಿಮೆ ಮಾಡಬಹುದು.

5. ಆಲೂಗಡ್ಡೆ ಹಾಕಿ: ಅತ್ಯಂತ ಸುಲಭ ಹಾಗೂ ಪರಿಣಾಮಕಾರಿ ಉಪಾಯ ಎಂದರೆ ಆಲೂಗಡ್ಡೆ ಹಾಕುವುದು. ನಾಲ್ಕೈದು ಆಲೂಗಡ್ಡೆ ತುಂಡುಗಳನ್ನು ಹಾಕಬಹುದು. ಆಲೂಗಡ್ಡೆಯ ತುಂಡುಗಳ ಮೇಲೆ ನಾಲ್ಕೈದು ತೂತುಗಳನ್ನು ಮಾಡಿ ಅಡುಗೆಗೆ ಹಾಕಿ. ಅದು ಅಡುಗೆಯ ಜೊತೆಗೆ ಚೆನ್ನಾಗಿ ಬೇಯಲಿ. ಆಲೂಗಡ್ಡೆ ಖಾರದ ಅಡುಗೆಯಲ್ಲಿರುವ ಖಾರವನ್ನು ಹೀರಿಕೊಳ್ಳುತ್ತದೆ. ಬೆಂದ ಮೇಲೆ ಬೇಡವಾಗಿದ್ದರೆ ಆಲೂಗಡ್ಡೆಯನ್ನು ಹೊರತೆಗೆಯಿರಿ.

6. ನಿಂಬೆಹಣ್ಣು ಹಿಂಡಿ: ಅಸಿಡಿಕ್‌ ವಸ್ತುಗಳು ಖಾರದ ಅಡುಗೆಯ ಜೊತೆಗೆ ಚೆನ್ನಾಗಿ ಹೊಂದಿಕೊಳ್ಳುತ್ತದೆ. ಖಾರ ಹೆಚ್ಚಾದ ಅಡುಗೆಗೆ ಕೊಂಚ ನಿಂಬೆಹಣ್ಣಿನ ರಸ ಹಿಂಡುವುದರಿಂದ, ಅಥವಾ ಸ್ವಲ್ಪ ವಿನೆಗರ್‌ ಹಾಕುವುದರಿಂದ ಖಾರವನ್ನು ತಗ್ಗಿಸಬಹುದು.

ಇದನ್ನೂ ಓದಿ: Food Tips: ಬೇಸಿಗೆಯಲ್ಲಿ ನೀವು ಟ್ರೈ ಮಾಡಲೇಬೇಕಾದ ಐಸ್‌ಕ್ರೀಂ ಜೋಡಿಗಳಿವು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

High Calcium Foods: ದೇಹಕ್ಕೆ ಮುಖ್ಯವಾದ ಅಧಿಕ ಕ್ಯಾಲ್ಶಿಯಂ ಆಹಾರಗಳನ್ನು ಪಡೆಯುವುದು ಹೇಗೆ?

High Calcium Foods: ಕ್ಯಾಲ್ಶಿಯಂ ಆಹಾರ ಎನ್ನುತ್ತಿದ್ದಂತೆ ನಮಗೆ ನೆನಪಾಗುವುದು ಡೇರಿ ಉತ್ಪನ್ನಗಳು. ಆದರೆ ಕ್ಯಾಲ್ಶಿಯಂ ಆಹಾರಗಳು ಅದಷ್ಟೇ ಅಲ್ಲ, ಇನ್ನೂ ಎಷ್ಟೋ ಬೇರೆಯ ಆಹಾರಗಳು ಒಂದು ಸರ್ವಿಂಗ್‌ನಲ್ಲಿ ಒಂದು ಗ್ಲಾಸ್‌ ಹಾಲಿಗಿಂತಲೂ ಹೆಚ್ಚಿನ ಕ್ಯಾಲ್ಶಿಯಂ ಒದಗಿಸುತ್ತವೆ ದೇಹಕ್ಕೆ. ಯಾವ ಆಹಾರಗಳವು? ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

High Calcium Foods
Koo

ಕ್ಯಾಲ್ಶಿಯಂ ಖನಿಜ (High Calcium Foods) ನಮ್ಮ ಆರೋಗ್ಯಕ್ಕೆ ಅಗತ್ಯ ಎಂಬುದು ನಮಗೆಲ್ಲ ಗೊತ್ತು. ಹಲ್ಲು, ಮೂಳೆಗಳಿಂದ ಹಿಡಿದು ನಮ್ಮಿಡೀ ದೇಹದ ಸ್ವಾಸ್ಥ್ಯ ರಕ್ಷಣೆಗೆ ಇದು ಅಗತ್ಯ. ನರಗಳ ಆರೋಗ್ಯ ಚೆನ್ನಾಗಿರಿಸಲು, ಸ್ನಾಯುಗಳ ವಿಕಸನಕ್ಕೆ, ರಕ್ತ ಹೆಪ್ಪುಗಟ್ಟಲು… ಹೀಗೆ ಬಹಳಷ್ಟು ಕೆಲಸಗಳಿಗೆ ಕ್ಯಾಲ್ಶಿಯಂ ಅಗತ್ಯವಿದೆ. ಕ್ಯಾಲ್ಶಿಯಂ ಆಹಾರ ಎನ್ನುತ್ತಿದ್ದಂತೆ ನಮಗೆ ನೆನಪಾಗುವುದು ಡೇರಿ ಉತ್ಪನ್ನಗಳು. ಸಸ್ಯಾಹಾರಿಗಳಂತೂ ಹಾಲು, ಚೀಸ್‌, ಪನೀರ್‌ ಮುಂತಾದವುಗಳನ್ನೇ ಕ್ಯಾಲ್ಶಿಯಂ ಪೂರೈಕೆಗೆ ನೆಚ್ಚಿಕೊಂಡಿರುತ್ತಾರೆ. ಆದರೆ ಕ್ಯಾಲ್ಶಿಯಂ ಆಹಾರಗಳು ಅದಷ್ಟೇ ಅಲ್ಲ, ಇನ್ನೂ ಎಷ್ಟೋ ಬೇರೆಯ ಆಹಾರಗಳು ಒಂದು ಸರ್ವಿಂಗ್‌ನಲ್ಲಿ ಒಂದು ಗ್ಲಾಸ್‌ ಹಾಲಿಗಿಂತಲೂ ಹೆಚ್ಚಿನ ಕ್ಯಾಲ್ಶಿಯಂ ಒದಗಿಸುತ್ತವೆ ದೇಹಕ್ಕೆ. ಯಾವ ಆಹಾರಗಳವು?

Greens vegetables

ಹಸಿರು ಸೊಪ್ಪುಗಳು

ಪಾಲಕ್‌ ಸೊಪ್ಪು, ಲೆಟೂಸ್‌, ಸ್ವಿಸ್‌ ಚಾರ್ಡ್‌, ಸಾಸಿವೆ ಸೊಪ್ಪುಗಳು, ಟರ್ನಿಪ್‌ ಸೊಪ್ಪು, ಕೆಲವು ಬಗೆಯ ಎಲೆಕೋಸು ಮುಂತಾದ ಹಲವು ಬಗೆಯ ಸೊಪ್ಪುಗಳಲ್ಲಿ ಕ್ಯಾಲ್ಶಿಯಂ ಅಂಶ ಅಧಿಕವಾಗಿದೆ. ಒಂದು ಕಪ್‌ ಬೇಯಿಸಿದ ಸೊಪ್ಪಿನಲ್ಲಿ 265 ಮಿ.ಗ್ರಾಂನಷ್ಟು ಕ್ಯಾಲ್ಶಿಯಂ ದೊರೆಯುತ್ತದೆ. ಅದೇ ಒಂದು ಕಪ್‌ (160 ಎಂ.ಎಲ್‌) ಹಾಲಿನಲ್ಲಿ 250 ಮಿ.ಗ್ರಾಂ.ನಷ್ಟು ಕ್ಯಾಲ್ಶಿಯಂ ಇರುತ್ತದೆ. ಹಾಗಾಗಿ ಇಂಥ ಸೊಪ್ಪುಗಳನ್ನು ಹೆಚ್ಚಾಗಿ ತಿನ್ನುವುದರಿಂದ ಕ್ಯಾಲ್ಶಿಯಂ ಮಾತ್ರವಲ್ಲ, ಅವುಗಳಿಂದ ದೊರೆಯುವ ಸೂಕ್ಷ್ಮ ಪೋಷಕಾಂಶಗಳು ದೇಹದ ಆರೋಗ್ಯ ಹೆಚ್ಚಿಸುವಲ್ಲಿ ಮಹತ್ವದ ಕೆಲಸ ಮಾಡುತ್ತವೆ.

Mackerel fish on ice
Broccoli

ಮೀನು

ಮೀನುಗಳಲ್ಲಿರುವ ಲೀನ್‌ ಮೀಟ್‌ ಆರೋಗ್ಯಕ್ಕೆ ಸೂಕ್ತವಾದದ್ದು. ಅದರಲ್ಲೂ ಭೂತಾಯಿಯಂಥ ಮೀನಿನಲ್ಲಿ ಕ್ಯಾಲ್ಶಿಯಂ ಪ್ರಮಾಣ ಅಧಿಕ 3.75 ಔನ್ಸ್‌ ಮೀನಿನಿಂದ 325 ಎಂ.ಜಿ. ಕ್ಯಾಲ್ಶಿಯಂ ದೊರೆಯುತ್ತದೆ. ಇದರಲ್ಲಿ ಕ್ಯಾಲ್ಶಿಯಂ ಮಾತ್ರವಲ್ಲ, ಹಲವು ಬಗೆಯ ಖನಿಜಗಳು ಮತ್ತು ಒಮೇಗಾ 3 ಕೊಬ್ಬಿನಾಮ್ಲವೂ ಇದರಿಂದ ವಿಫುಲವಾಗಿ ಸಿಗುತ್ತದೆ.

Health Benefits Of Tofu

ತೋಫು

ಸೋಯಾ ಉತ್ಪನ್ನವಾದ ತೋಫುವಿನಲ್ಲೂ ಅಧಿಕ ಪ್ರಮಾಣದಲ್ಲಿ ಕ್ಯಾಲ್ಶಿಯಂ ಇದೆ. ಇದರ ಸಂಸ್ಕರಣೆಯಲ್ಲಿ ಕ್ಯಾಲ್ಶಿಯಂ ಸಲ್ಫೇಟ್‌ ಬಳಸಲಾಗಿದ್ದರೆ, ಅರ್ಧ ಕಪ್‌ ತೋಫುವಿನಿಂದ 250ರಿಂದ 850 ಎಂ.ಜಿ.ವರೆಗೂ ಕ್ಯಾಲ್ಶಿಯಂ ದೊರೆಯುತ್ತದೆ. ನೋಡುವುದಕ್ಕೆ ಪನೀರ್‌ನಂತೆಯೇ ಇರುವ ಇದನ್ನು ಹಲವು ರೀತಿಯ ಅಡುಗೆಗಳಲ್ಲಿ ಬಳಸಿ, ಕ್ಯಾಲ್ಶಿಯಂ ಸೇವನೆಯನ್ನು ಹೆಚ್ಚಿಸಿಕೊಳ್ಳಬಹುದು.

Black Chia Seed

ಚಿಯಾ ಬೀಜಗಳು

ನೋಡುವುದಕ್ಕೆ ತೀರಾ ಸಣ್ಣದಾಗಿರು ಈ ಬೀಜಗಳು ಸತ್ವದಲ್ಲಿ ತ್ರಿವಿಕ್ರಮನಂತೆ. ಕೇವಲ ಎರಡು ಟೇಬಲ್‌ ಚಮಚ ಚಿಯಾ ಬೀಜಗಳಿಂದ 180 ಎಂ.ಜಿ. ಕ್ಯಾಲ್ಶಿಯಂ ದೊರೆಯುತ್ತದೆ. ಇವುಗಳನ್ನು ನೀರಿನಲ್ಲಿ ನೆನೆಸಿ, ನಂತರ ಸ್ಮೂದಿ, ಸಲಾಡ್‌ ಮುಂತಾದ ಯಾವುದಕ್ಕೇ ಆದರೂ ಸೇರಿಸಿಕೊಳ್ಳಬಹುದು. ಇವುಗಳಲ್ಲಿ ನಾರು ಮತ್ತು ಒಳ್ಳೆಯ ಕೊಬ್ಬು ವಿಫುಲವಾಗಿವೆ.

sesame-seeds

ಎಳ್ಳು

ಇದನ್ನು ಅಂತೆಯೇ ತಿನ್ನುವುದಕ್ಕಿಂತ ಚಟ್ನಿಯಂತೆ ರುಬ್ಬಿ ತಿನ್ನುವುದು ಹೆಚ್ಚು ಪರಿಣಾಮಕಾರಿ. ಯಾವುದೇ ರೀತಿಯಲ್ಲಿ ಎಳ್ಳನ್ನು ರುಬ್ಬಿ ಅಡುಗೆಗೆ ಸೇರಿಸಿಕೊಳ್ಳಬಹುದು. ಎರಡು ಟೇಬಲ್‌ ಚಮಚ ಎಳ್ಳಿನಿಂದ 130 ಎಂ.ಜಿ.ಯಷ್ಟು ಕ್ಯಾಲ್ಶಿಯಂ ದೊರೆಯುತ್ತದೆ.

Broccoli

ಬ್ರೊಕೊಲಿ

ವಿಟಮಿನ್‌ ಸಿ ಮತ್ತು ಕೆ ಹೆಚ್ಚಾಗಿರುವ ಈ ತರಕಾರಿಯನ್ನು ಯಾವುದೇ ರೂಪದಲ್ಲಿ ತಿಂದರೂ ಆರೋಗ್ಯಕ್ಕೆ ಒಳ್ಳೆಯದು. ಒಂದು ಕಪ್‌ ಬೇಯಿಸಿದ ಬ್ರೊಕೊಲಿಯಿಂದ 62 ಎಂ.ಜಿ. ಕ್ಯಾಲ್ಶಿಯಂ ದೊರೆಯುತ್ತದೆ. ಉಳಿದೆಲ್ಲ ಹಸಿರು ಸೊಪ್ಪುಗಳ ಜೊತೆಗೆ ಇದನ್ನೂ ಲೆಕ್ಕಕ್ಕೆ ತೆಗೆದುಕೊಳ್ಳಬಹುದು.

ಇದನ್ನೂ ಓದಿ: Water For Health: ಆರೋಗ್ಯವಾಗಿರಬೇಕೆಂದರೆ ನಾವು ದಿನಕ್ಕೆಷ್ಟು ನೀರು ಕುಡಿಯಬೇಕು?

ಬಾದಾಮಿ, ಅಂಜೂರ

ಒಂದು ಔನ್ಸ್‌ ಬಾದಾಮಿಯಲ್ಲಿ (ಅಂದಾಜು 23 ಬಾದಾಮಿ) 76 ಎಂ.ಜಿ.ಯಷ್ಟು ಕ್ಯಾಲ್ಶಿಯಂ ದೊರೆಯುತ್ತದೆ. ಅದಲ್ಲದೆ, ಈ ಬೀಜಗಳಲ್ಲಿ ಆರೋಗ್ಯಕರ ಕೊಬ್ಬು, ಪ್ರೊಟೀನ್‌ ಮತ್ತು ಇತರ ಖನಿಜಗಳು ಧಾರಾಳವಾಗಿವೆ. ಅಂಜೂರವೂ ಇದಕ್ಕಿಂತ ಕಡಿಮೆಯೇನಿಲ್ಲ. ಕಾಲು ಕಪ್‌ನಷ್ಟು ಅಂಜೂರದಲ್ಲಿ ಸುಮಾರು 90 ಎಂ.ಜಿಯಷ್ಟು ಕ್ಯಾಲ್ಶಿಯಂ ದೊರೆಯುತ್ತದೆ. ಇದರಲ್ಲಿ ನಾರಿನಂಶವೂ ಸಾಕಷ್ಟಿದ್ದು, ಜೀರ್ಣಾಂಗಗಳ ಆರೋಗ್ಯವನ್ನು ವೃದ್ಧಿಸುತ್ತದೆ.

Continue Reading

ಕರ್ನಾಟಕ

Davanagere Benne Dose: ದಾವಣಗೆರೆ ಬೆಣ್ಣೆ ದೋಸೆಗೆ ಜಿಐ ಟ್ಯಾಗ್‌ ಕೊಡಲ್ಲ ಎಂದ ಕೇಂದ್ರ; ಯಾಕೆಂದರೆ…

Davanagere Benne Dose: “ದಾವಣಗೆರೆ ಹೊರತುಪಡಿಸಿಯೂ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದನ್ನು ತಯಾರಿಸಿ ಮಾರಾಟ ಮಾಡುವುದರಿಂದ ಇದನ್ನು ಸಾಮಾನ್ಯ ವಸ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ, ಜಿಐ ಟ್ಯಾಗ್‌ ನೀಡಲಾಗುವುದಿಲ್ಲ”ಎಂದು ಕೇಂದ್ರ ಸರಕಾರ ಹೇಳಿದೆ.

VISTARANEWS.COM


on

davanagere benne dose
Koo

ಬೆಂಗಳೂರು: ಬಿಸಿಯಾದ, ಗರಿಗರಿಯಾದ, ಪಕ್ಕದಲ್ಲಿ ಆಲೂ ಪಲ್ಯವನ್ನಿಟ್ಟುಕೊಂಡ, ಮೇಲೊಂದು ಕರಗುತ್ತಿರುವ ಬೆಣ್ಣೆಯ ಮುದ್ದೆ ಇಟ್ಟು ನೀಡುವ ದಾವಣಗೆರೆ ಬೆಣ್ಣೆ ದೋಸೆ (Davanagere Benne Dose) ಅದೆಷ್ಟೋ ವರ್ಷಗಳಿಂದ ಕರ್ನಾಟಕದಾದ್ಯಂತ (Karnataka) ಆಹಾರಪ್ರೇಮಿಗಳನ್ನು ತೃಪ್ತಿಪಡಿಸುತ್ತಿದೆ. ಆದರೆ ಈ ʼದಾವಣಗೆರೆ ಬೆಣ್ಣೆ ದೋಸೆʼ ಎಂಬ ಖಾದ್ಯಕ್ಕೆ ಜಿಐ ಟ್ಯಾಗ್‌ (GI tag) ಅರ್ಥಾತ್‌ ʼಭೌಗೋಳಿಕ ಗುರುತಿನʼ (Geographical Indication) ಟ್ಯಾಗ್‌ ನೀಡಲು ಸಾಧ್ಯವಿಲ್ಲವಂತೆ.

ಹೌದು, ಇದು ಕರ್ನಾಟಕದಾದ್ಯಂತ ಲಭ್ಯವಿದೆ ಎಂಬ ಅಂಶವೇ ಈ ಜನಪ್ರಿಯ ದೋಸೆಗೆ ಭೌಗೋಳಿಕ ಸೂಚಕ (ಜಿಐ) ಟ್ಯಾಗ್ ಪಡೆಯುವ ದಾರಿಯಲ್ಲಿ ಮುಳ್ಳಾಗಿದೆ. ʼದಾವಣಗೆರೆ ಬೆಣ್ಣೆ ದೋಸೆ ಯಾವುದೇ ಒಂದು ಸೀಮಿತ ಪ್ರದೇಶಕ್ಕೆ ನಿರ್ದಿಷ್ಟವಾಗಿಲ್ಲದ ಕಾರಣ GI ಟ್ಯಾಗ್‌ಗೆ ಅರ್ಹತೆ ಪಡೆಯುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ದಾವಣಗೆರೆಯ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ (davanagere MP Prabha Mallikarjun) ಅವರು ಸದನದಲ್ಲಿ ಕೋರಿದ ಪ್ರಶ್ನೆಗೆ ಕೇಂದ್ರ ಸರ್ಕಾರ ಉತ್ತರಿಸಿದ್ದು, ಈ ವಿಷಯ ತಿಳಿಸಿದೆ. ತಮ್ಮ ಜಿಲ್ಲೆಯ ಸುಪ್ರಸಿದ್ಧವಾದ ದೋಸೆಗೆ GI ಟ್ಯಾಗ್ ಒದಗಿಸಿಕೊಡುವ ಕುರಿತು ಪ್ರಭಾ ಪ್ರಶ್ನಿಸಿದ್ದರು.

“ದಾವಣಗೆರೆ ಹೊರತುಪಡಿಸಿಯೂ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದನ್ನು ತಯಾರಿಸಿ ಮಾರಾಟ ಮಾಡುವುದರಿಂದ ಇದನ್ನು ಸಾಮಾನ್ಯ ವಸ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ, ಜಿಐ ಟ್ಯಾಗ್‌ ನೀಡಲಾಗುವುದಿಲ್ಲ. ಜಿಐ ಟ್ಯಾಗ್‌ ಪಡೆಯಲು ನಿರ್ದಿಷ್ಟ ಪ್ರದೇಶವು ವಿಶಿಷ್ಟತೆಯ ಅಂಶವಾಗಿ ಅಪೇಕ್ಷಿತವಾಗಿದೆ. ಇದು ಹಲವಾರು ಸ್ಥಳಗಳಲ್ಲಿ ಉತ್ಪಾದನೆಯಾಗುತ್ತಿರುವ ಕಾರಣ ನಿರ್ದಿಷ್ಟ ಪ್ರದೇಶಕ್ಕೆ ಹೆಚ್ಚು ವಿಶಿಷ್ಟವಾಗಿಲ್ಲ” ಎಂದು ವಾಣಿಜ್ಯ ಮತ್ತು ಕೈಗಾರಿಕೆ ಸಹಕಾರ ಸಚಿವ ಜಿತಿನ್ ಪ್ರಸಾದ ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಉತ್ತರದ ನಂತರ, ಜಿಐ ಟ್ಯಾಗ್‌ಗೆ ನೋಂದಣಿಗೆ ಕನಿಷ್ಠ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ದಾವಣಗೆರೆ ಜಿಲ್ಲಾಧಿಕಾರಿಗೆ ಈಗಾಗಲೇ ನಿರ್ದೇಶನ ನೀಡಿದ್ದೇನೆ ಎಂದು ಪ್ರಭಾ ಅವರು ತಿಳಿಸಿದ್ದಾರೆ.

“ರಸಗುಲ್ಲಾ, ಲೋನಾವಳ ಚಿಕ್ಕಿ ಮತ್ತು ಇತರ ಉತ್ಪನ್ನಗಳಿಗೆ ಈಗಾಗಲೇ ಜಿಐ ಟ್ಯಾಗ್ ಇದೆ. ಇದನ್ನು ಭಾರತದಾದ್ಯಂತ ವ್ಯಾಪಕವಾಗಿ ಉತ್ಪಾದಿಸಲಾಗುತ್ತದೆ ಮತ್ತು ಮಾರಾಟ ಮಾಡಲಾಗುತ್ತದೆ. ಅದೇ ರೀತಿ ದಾವಣಗೆರೆ ಬೆಣ್ಣೆ ದೋಸೆ ಕೂಡ ರಾಜ್ಯಾದ್ಯಂತ ಮಾರಾಟವಾಗುತ್ತಿದೆ. ಈ ಕಾರಣಕ್ಕಾಗಿ ಈ ವಿಶಿಷ್ಟ ಉತ್ಪನ್ನಕ್ಕಾಗಿ ಜಿಐ ಟ್ಯಾಗ್ ಅನ್ನು ಪಡೆದುಕೊಳ್ಳುವುದು ತಪ್ಪಬಾರದು” ಎಂದು ಪ್ರಭಾ ಹೇಳಿದ್ದಾರೆ.

“ದಾವಣಗೆರೆಯ ಯಾವುದೇ ವ್ಯಕ್ತಿ ದೇಶದ ಯಾವುದೇ ಸ್ಥಳಕ್ಕೆ ಹೋದರೆ ಅಲ್ಲಿ ಆತನನ್ನು ಮೊದಲು ಬೆಣ್ಣೆ ದೋಸೆಯ ಬಗ್ಗೆ ಕೇಳಲಾಗುತ್ತದೆ. ಈ ಉತ್ಪನ್ನಕ್ಕೆ ಅಂತಹ ಕ್ರೇಜ್ ಇದೆ. ನಾನು ಸಂಸತ್ತಿಗೆ ಹೋದ ಮೊದಲ ದಿನ, ದೇಶದ ವಿವಿಧ ಭಾಗಗಳಿಂದ ಬಂದ ನನ್ನ ಎಲ್ಲಾ ಸಹೋದ್ಯೋಗಿಗಳು ದಾವಣಗೆರೆ ಬೆಣ್ಣೆ ದೋಸೆಯ ಬಗ್ಗೆ ನನ್ನನ್ನು ಕೇಳಿದರು. ಆಗ, ಜಿಐ ಟ್ಯಾಗ್ ಪಡೆಯುವುದು ಎಷ್ಟು ಮುಖ್ಯ ಎಂದು ನಾನು ಅರಿತುಕೊಂಡೆ” ಎಂದು ಅವರು ಹೇಳಿದರು.

ಬೆಣ್ಣೆ ದೋಸೆಯ ಮೂಲವನ್ನು ನಾಲ್ಕು ಸಹೋದರರಲ್ಲಿ ಕಾಣಲಾಗುತ್ತದೆ. ಕೋಠಿನ್ ಶಾಂತಪ್ಪ, ಮಹದೇವಪ್ಪ, ಶಂಕರಪ್ಪ ಮತ್ತು ಬಸವಂತಪ್ಪ. ಇವರು ಬೆಳಗಾವಿ ಜಿಲ್ಲೆಯ ರಾಮದುರ್ಗದ ಬೀಡ್ಕಿ ಗ್ರಾಮದಿಂದ 1928ರಲ್ಲಿ ದಾವಣಗೆರೆಗೆ ಉದ್ಯೋಗದ ಹುಡುಕಾಟದಲ್ಲಿ ವಲಸೆ ಬಂದವರು. ತಮ್ಮ ತಾಯಿ ಚೆನ್ನಮ್ಮ ಅವರಿಂದ ದೋಸೆ ತಯಾರಿಕೆಯ ಕಲೆಯನ್ನು ಕಲಿತರು. ಇವರ ಅಮ್ಮ ತಮ್ಮ ಮಕ್ಕಳಿಗೆ ರುಚಿಕರವಾದ ರಾಗಿ ದೋಸೆಯನ್ನು ತಯಾರಿಸುತ್ತಿದ್ದರಂತೆ. ಈ ಸೋದರರಿಂದ ಮಸಾಲೆ ಸಹಿತದ ಬೆಣ್ಣೆ ದೋಸೆ ಜನಪ್ರಿಯವಾಯಿತು. ಇವರ ಮೊದಲ ದೋಸೆ ಆರು ಪೈಸೆಗೆ ಮಾರಾಟವಾಯಿತು. ಈಗ ಈ ಅಂಗಡಿಗಳನ್ನು ನಡೆಸುತ್ತಿರುವ ಅವರ ಮಕ್ಕಳು, ಮೊಮ್ಮಕ್ಕಳು ತಯಾರಿಸುತ್ತಿರುವ ದೋಸೆಗೆ 55ರಿಂದ 65 ರೂ. ಬೆಲೆಯಿದೆ.

ಕರ್ನಾಟಕದಲ್ಲಿ ನಂಜನಗೂಡು ರಸಬಾಳೆ, ಚನ್ನಪಟ್ಟಣದ ಮರದ ಗೊಂಬೆಗಳು, ಮೈಸೂರು ಮಲ್ಲಿಗೆ, ಮೈಸೂರು ರೇಷ್ಮೆ, ಬೀದರ್‌ನ ಬಿದರಿ ಕಲೆ, ಇಳಕಲ್‌ ಹಾಗೂ ಮೊಳಕಾಲ್ಮುರು ಸೀರೆಗಳು, ಕೊಡಗಿನ ಕಿತ್ತಳೆ, ಅಪ್ಪೆಮಿಡಿ ಮಾವು, ಧಾರವಾಡ ಪೇಡಾ, ಬಾಬಾಬುಡನ್‌ಗಿರಿಯ ಅರೇಬಿಕಾ ಕಾಫಿ ಮುಂತಾದವು ಜಿಐ ಟ್ಯಾಗ್‌ ಪಡೆದಿವೆ.

ಇದನ್ನೂ ಓದಿ: PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

Continue Reading

ಬೆಂಗಳೂರು

Chemicals in Food: ಹೋಟೆಲ್‌, ಮಾಲ್‌ಗಳಲ್ಲಿ ಆಹಾರದಲ್ಲಿ ಕೆಮಿಕಲ್‌, ಕಲರ್‌ ಬಳಸಿದರೆ ಕ್ರಮ; ತರಕಾರಿ ಮಾರಾಟಗಾರರಿಗೂ ಲೈಸೆನ್ಸ್‌ ಕಡ್ಡಾಯ

Chemicals in Food: ತರಕಾರಿ ಮಾರಾಟಗಾರರಿಗೂ ಲೈಸನ್ಸ್ ಪಡೆಯುವುದು ಕಡ್ಡಾಯವಾಗಲಿದೆ. ಎಲ್ಲಾ ತರಕಾರಿ ವ್ಯಾಪಾರಿಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಲೈಸೆನ್ಸ್ ಪಡೆಯಬೇಕು. ತರಕಾರಿಗಳ ಸ್ಯಾಂಪಲ್‌ಗಳನ್ನು ಅಗತ್ಯ ಬಿದ್ದರೆ ಪರೀಕ್ಷೆ ನಡೆಸಬೇಕು.

VISTARANEWS.COM


on

chemicals in food
Koo

ಬೆಂಗಳೂರು: ರಾಜಧಾನಿಯ (Bangalore) ಹೋಟೆಲ್ (Hotels) ಹಾಗೂ ಮಾಲ್‌ಗಳಲ್ಲಿ (Mall) ನೀಡಲಾಗುವ ಆಹಾರದಲ್ಲಿ ಕೃತಕ ಕಲರ್‌ (Added colour) ಹಾಗೂ ಕೆಮಿಕಲ್ (Chemicals in Food) ಬಳಕೆ ಮಾಡದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಹಾಗೂ ಆರೋಗ್ಯ ಸಚಿವರು (Health minister) ಎಚ್ಚರಿಕೆ ನೀಡಿದ್ದಾರೆ.

ಮಾಲ್‌ಗಳು ಹಾಗೂ ಹೋಟೆಲ್ ಮಾಲೀಕರ ಜೊತೆಗೆ ಸಭೆ ನಡೆಸಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಈ ಕುರಿತು ಸೂಚನೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರತಿ ಆಹಾರದಲ್ಲೂ ಕಲರ್ ಬಳಕೆ, ರಾಸಾಯನಿಕ ಬಳಕೆ ಮಾಡಲಾಗುತ್ತಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತನಿಖೆ ಮಾಡಿದಾಗ ಮಾಲ್‌ಗಳಲ್ಲಿನ ಫುಡ್ ಕಳಪೆ ಎಂದು ಪತ್ತೆಯಾಗಿದೆ. ಇದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಎಲ್ಲರೂ ಆಹಾರದಲ್ಲಿ ಶುಚಿತ್ವ ಕಾಪಾಡುವಂತೆ ಹಾಗೂ ಕಲರ್ ಮುಕ್ತ ಆಹಾರ ನೀಡುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.

ಇದರ ಜೊತೆಗೆ ತರಕಾರಿ ಮಾರಾಟಗಾರರಿಗೂ ಲೈಸನ್ಸ್ ಪಡೆಯುವುದು ಕಡ್ಡಾಯವಾಗಲಿದೆ. ಎಲ್ಲಾ ತರಕಾರಿ ವ್ಯಾಪಾರಿಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಲೈಸೆನ್ಸ್ ಪಡೆಯಬೇಕು. ತರಕಾರಿಗಳ ಸ್ಯಾಂಪಲ್‌ಗಳನ್ನು ಅಗತ್ಯ ಬಿದ್ದರೆ ಪರೀಕ್ಷೆ ನಡೆಸಬೇಕು. ತರಕಾರಿ- ಹಣ್ಣು ಮಾರುವಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ಕೆಲವು ಕಡೆಗಳಲ್ಲಿ ಸಾವಯವ ತರಕಾರಿ ಮಾರುತ್ತೇವೆ ಎಂದು ಹೆಚ್ಚಿನ ದರದಲ್ಲಿ ಕಳಪೆ ತರಕಾರಿ ಹಣ್ಣುಗಳನ್ನು ಮಾರುತ್ತಿರುವುದು ಕಂಡುಬರುತ್ತಿದೆ. ಇದರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

UGCET 2024: ಇಂದು ಮಧ್ಯಾಹ್ನ 2 ಗಂಟೆಗೆ ಸಿಇಟಿ ಅಣಕು ಸೀಟು ಹಂಚಿಕೆ ಪ್ರಕಟ ಸಾಧ್ಯತೆ

ಬೆಂಗಳೂರು: ಇಂಜಿನಿಯರಿಂಗ್ (Engineering) ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ (UGCET 2024) ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಿರುವ ಸಿಇಟಿ ರ‍್ಯಾಂಕಿಂಗ್ (CET Ranking) ಅಭ್ಯರ್ಥಿಗಳಿಗೆ ಇಂದು (August 7) ಮಧ್ಯಾಹ್ನ 2 ಗಂಟೆಗೆ ಅಣಕು ಸೀಟು ಹಂಚಿಕೆ (Mock Seat Sharing) ಸಾಧ್ಯತೆ ಇದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಕುರಿತು ಅಪ್‌ಡೇಟ್‌ ನೀಡಲಿದೆ.

ಅಭ್ಯರ್ಥಿಗಳಿಗೆ ತಮ್ಮ ಆಪ್ಷನ್ ದಾಖಲಿಸಲು ಆಗಸ್ಟ್ 4 ಕೊನೆಯ ದಿನವಾಗಿತ್ತು. ಇಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜ್‌ಗಳ ಆಯ್ಕೆ ಆಪ್ಷನ್‌ ಮೂಲಕ ನಡೆದಿದೆ. ಇಂದು ಅಣಕು ಸೀಟು ಹಂಚಿಕೆ ಬಳಿಕ ನೈಜ ಸೀಟು ಹಂಚಿಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಲಾಗಿತ್ತು. ಜು.30ರಂದು ಕೊನೆಯಾಗಲಿದ್ದ ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ಮತ್ತೂ ವಿಸ್ತರಿಸಲಾಗಿತ್ತು. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿತ್ತು. ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

ಇದನ್ನೂ ಓದಿ: B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌

Continue Reading

ಆರೋಗ್ಯ

Shravan Recipes: ಶ್ರಾವಣ ಮಾಸದಲ್ಲಿ ಸಾಬುದಾನದ ಈ 5 ಖಾದ್ಯಗಳನ್ನು ಮಾಡಿ ನೋಡಿ

Shravan Recipes: ಶ್ರಾವಣ ಮಾಸದಲ್ಲಿ (Shravan 2024) ಉಪವಾಸ ವ್ರತಗಳನ್ನು ಆಚರಿಸುವವರು ಏನು ತಿನ್ನಬೇಕು, ಏನು ತಿನ್ನಬಾರದು ಎನ್ನುವ ನಿಯಮಗಳಿವೆ. ಉಪವಾಸ ನಿರತರಿಗೆ ತಾಜಾ ತರಕಾರಿ ಮತ್ತು ಹಣ್ಣುಗಳ ಜೊತೆಗೆ, ಸಾಬುದಾನವು ಭಾರತದಲ್ಲಿ ಅತ್ಯಂತ ಜನಪ್ರಿಯ ಆಹಾರವಾಗಿದೆ. ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಸಾಬುದಾನವನ್ನು ಪ್ರತಿ ದಿನ ಒಂದೇ ರೀತಿಯಾಗಿ ತಿನ್ನುವುದು ಬೇಸರ ಮೂಡಿಸಬಹುದು. ಅದಕ್ಕಾಗಿ ಸಾಬುದಾನದ ವಿವಿಧ ರೀತಿಯ ಖಾದ್ಯಗಳ ವಿವರ ಇಲ್ಲಿದೆ.

VISTARANEWS.COM


on

By

shravan foods
Koo

ಭಾರತದಲ್ಲಿ ಶ್ರಾವಣ ಮಾಸವು ಹೆಚ್ಚಿನ ಪ್ರಾಮುಖ್ಯತೆಯನ್ನು (Shravan Recipes) ಹೊಂದಿದೆ. ಶಿವನ ಆಶೀರ್ವಾದವನ್ನು ಪಡೆಯಲು ಹೆಚ್ಚಿನ ಭಕ್ತರು (Shravan 2024) ಉಪವಾಸ ವ್ರತಾಚರಣೆ (fast) ಮಾಡುತ್ತಾರೆ. ಉಪವಾಸ ನಿರತರು ಸಾತ್ವಿಕ ಆಹಾರವನ್ನು (fasting food) ಮಾತ್ರ ಸೇವಿಸುತ್ತಾರೆ. ಉಪವಾಸ ವ್ರತಗಳನ್ನು ಆಚರಿಸುವವರು ಏನು ತಿನ್ನಬೇಕು, ಏನು ತಿನ್ನಬಾರದು ಎನ್ನುವ ನಿಯಮಗಳಿವೆ. ಉಪವಾಸ ನಿರತರಿಗೆ ತಾಜಾ ತರಕಾರಿ (Vegetables) ಮತ್ತು ಹಣ್ಣುಗಳ (fruits) ಜೊತೆಗೆ, ಸಾಬುದಾನವು (Sabudana) ಭಾರತದಲ್ಲಿ ಅತ್ಯಂತ ಜನಪ್ರಿಯ ಉಪವಾಸದ ಆಹಾರವಾಗಿದೆ.

ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಸಾಬುದಾನವನ್ನು ಪ್ರತಿ ದಿನ ಒಂದೇ ರೀತಿಯಾಗಿ ತಿನ್ನುವುದು ಬೇಸರ ಮೂಡಿಸಬಹುದು. ಅದಕ್ಕಾಗಿ ಸಾಬುದಾನದ ವಿವಿಧ ರೀತಿಯ ಖಾದ್ಯಗಳನ್ನು ಮಾಡಿ ಸೇವಿಸಬಹುದು.

ಮರಗೆಣಸಿನ ಬೇರುಗಳಿಂದ ತಯಾರಿಸುವ ಸಾಬುದಾನ ವ್ರತ ಸ್ನೇಹಿ ಆಹಾರಗಳಲ್ಲಿ ಒಂದು. ಇದನ್ನು ಉಪವಾಸ ನಿರತರು ಸೇವಿಸುವುದರಿಂದ ಹೆಚ್ಚು ಕಾಲ ಹೊಟ್ಟೆ ತುಂಬಿದ ಅನುಭವವನ್ನು ಪಡೆಯಬಹುದು. ಹಲವಾರು ಪೋಷಕಾಂಶಗಳನ್ನು ಹೊಂದಿರುವ ಸಾಬುದಾನ ನಂಬರ್ ಒನ್ ಫಾಸ್ಟಿಂಗ್ ಫುಡ್ ಎಂದೇ ಪರಿಗಣಿಸಲಾಗಿದೆ.

ಟಪಿಯೋಕಾ ಮುತ್ತುಗಳು ಎಂದೂ ಕರೆಯಲ್ಪಡುವ ಸಾಬುದಾನವು ಅನೇಕ ಭಾರತೀಯ ಮನೆಗಳಲ್ಲಿ ಪ್ರಧಾನವಾಗಿ ಬಳಸಲಾಗುತ್ತದೆ. ವಿಶೇಷವಾಗಿ ನವರಾತ್ರಿ, ಜನ್ಮಾಷ್ಟಮಿ ಮತ್ತು ಶ್ರಾವಣ ಮಾಸದ ಉಪವಾಸದ ಅವಧಿಯಲ್ಲಿ ಇದನ್ನು ಹೆಚ್ಚಾಗಿ ಬಳಸಲಾಗುತ್ತದೆ.

ಸಾಬುದಾನ ಅಥವಾ ಸಾಗೋ ಮೂಲತಃ ಸಣ್ಣ ಪಿಷ್ಟದ ಮುತ್ತುಗಳು. ಇದರಲ್ಲಿ ಹೆಚ್ಚಿನ ಪಿಷ್ಟದ ಅಂಶವಿರುವುದರಿಂದ ಸುಲಭವಾಗಿ ಬೇಯಿಸಬಹುದು. ಸಿಹಿ ಮತ್ತು ಖಾರ ಎರಡಕ್ಕೂ ಹೊಂದಿಕೆಯಾಗುವ ಸಾಗುವಿನ ರುಚಿ ಮಕ್ಕಳಿಂದ ಹಿಡಿದು ವೃದ್ಧರಿಗೂ ಪ್ರಿಯವಾಗುವುದು.

ಆರೋಗ್ಯ ಪ್ರಯೋಜನಗಳು ಏನು?

ಉಪವಾಸ ನಿರತರು ಸಾಮಾನ್ಯವಾಗಿ ಆಹಾರ ಸೇವಿಸದೇ ದೀರ್ಘಕಾಲದವರೆಗೆ ಇರಬೇಕಾಗುತ್ತದೆ. ಹೀಗಾಗಿ ನಿರಂತರ ಶಕ್ತಿಯನ್ನು ಒದಗಿಸುವ ಯಾವುದನ್ನಾದರೂ ಸ್ವಲ್ಪ ಸಾತ್ವಿಕ ಆಹಾರ ಸೇವಿಸುವುದು ಬಹುಮುಖ್ಯವಾಗಿರುತ್ತದೆ. ಆದ್ದರಿಂದ ಪ್ರಾಥಮಿಕವಾಗಿ ಕಾರ್ಬೋಹೈಡ್ರೇಟ್‌ಗಳನ್ನು ಒಳಗೊಂಡಿರುವ ಸಬುದಾನವು ದಿನವಿಡೀ ನಮ್ಮನ್ನು ಶಕ್ತಿಯುತವಾಗಿರಿಸುತ್ತದೆ.

ಉಪವಾಸದ ಸಮಯದಲ್ಲಿ ಸಾಬುದಾನಕ್ಕೆ ಆದ್ಯತೆ ನೀಡಲು ಮತ್ತೊಂದು ಪ್ರಮುಖ ಕಾರಣವೆಂದರೆ ಅದು ಸುಲಭವಾಗಿ ಜೀರ್ಣವಾಗುತ್ತದೆ. ಹೊಟ್ಟೆಯನ್ನು ಭಾರಗೊಳಿಸುವುದಿಲ್ಲ. ಹೊಟ್ಟೆಗೆ ಸಂಬಂಧಿಸಿ ಯಾವುದೇ ಅಸ್ವಸ್ಥತೆ ಅಥವಾ ಉಬ್ಬುವಿಕೆಯನ್ನು ಉಂಟುಮಾಡುವುದಿಲ್ಲ.

ಸಾಬುದಾನದಲ್ಲಿ ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಖನಿಜಗಳಲ್ಲಿ ಸಮೃದ್ಧವಾಗಿದೆ. ಹೀಗಾಗಿ ಇದರ ಸೇವನೆ ಉಪವಾಸ ನಿರತರಿಗೆ ಅತ್ಯಗತ್ಯ.


1. ಸಾಬುದಾನ ಖಿಚಡಿ

ಬೆಳಗ್ಗಿನ ಉಪಾಹಾರ, ಸಂಜೆಯ ಫಲಾಹಾರಕ್ಕೆ ಸಾಬುದಾನ ಖಿಚಡಿ ಒಂದು ಜನಪ್ರಿಯ ಉಪವಾಸ ಖಾದ್ಯ. ರಾತ್ರಿಯಿಡೀ ನೆನೆಸಿಟ್ಟ ಸಾಬುದಾನಕ್ಕೆ ಹುರಿದ ಕಡಲೆಕಾಳು, ಜೀರಿಗೆ, ಹಸಿರು ಮೆಣಸಿನಕಾಯಿ ಮತ್ತು ಬೇಯಿಸಿದ ಆಲೂಗಡ್ಡೆಯನ್ನು ಬೆರೆಸಿ ಖಿಚಿಡಿ ತಯಾರಿಸಲಾಗುತ್ತದೆ.


2. ಸಾಬುದಾನ ವಡಾ

ಉಪವಾಸದ ವೇಳೆ ಗರಿಗರಿಯಾದ ಮತ್ತು ರುಚಿಕರವಾದ ತಿಂಡಿಗಳನ್ನು ತಿನ್ನಲು ಬಯಸುವವರು ಸಾಬುದಾನ ವಡಾವನ್ನು ತಯಾರಿಸಬಹುದು. ನೆನೆಸಿದ ಸಾಬುದಾನವನ್ನು ಬೇಯಿಸಿದ ಆಲೂಗಡ್ಡೆ, ಹುರಿದ ಕಡಲೆಕಾಯಿಗಳು ಮತ್ತು ವಿವಿಧ ಮಸಾಲೆಗಳೊಂದಿಗೆ ಬೆರೆಸಿ, ಅನಂತರ ಆಕಾರ ಕೊಟ್ಟು ಎಣ್ಣೆಯಲ್ಲಿ ಕರಿಯಿರಿ. ಇದನ್ನು ಹುಣಸೆ ಹಣ್ಣಿನ ಚಟ್ನಿ ಅಥವಾ ಮಸಾಲೆಯುಕ್ತ ಹಸಿರು ಚಟ್ನಿಯೊಂದಿಗೆ ಸೇವಿಸಲು ರುಚಿಯಾಗಿರುತ್ತದೆ.


3. ಸಾಬುದಾನ ಖೀರ್

ಸಿಹಿ ತಿನ್ನಲು ಬಯಸುವವರಿಗೆ ಸಾಬುದಾನದ ಖೀರ್‌ ಅತ್ಯುತ್ತಮ ಆಯ್ಕೆಯಾಗಿದೆ. ಇದು ಸಾಗು, ಹಾಲು ಮತ್ತು ಸಕ್ಕರೆ ಹಾಕಿ ಇದನ್ನು ತಯಾರಿಸಲಾಗುತ್ತದೆ. ಇದಕ್ಕಾಗಿ ಸಾಬುದಾನವನ್ನು ಮೊದಲು ನೆನೆಸಿ ಇಡಬೇಕು. ಬಳಿಕ ಹಾಲಿನಲ್ಲಿ ಬೇಯಿಸಿ ಸಕ್ಕರೆ, ಏಲಕ್ಕಿ ಸೇರಿಸಿ. ಜೊತೆಗೆ ಒಂದೆರಡು ಕೇಸರಿ ದಳಗಳು, ಕತ್ತರಿಸಿದ ಬೀಜಗಳನ್ನು ಹಾಕಿದರೆ ಸಾಬೂದಾನದ ಖೀರ್ ಸವಿಯಲು ಸಿದ್ಧ.


4. ಸಾಬುದಾನ ದೋಸೆ

ಸಾಬುದಾನ ದೋಸೆಯು ದಕ್ಷಿಣ ಭಾರತದ ಸಾಂಪ್ರದಾಯಿಕ ಉಪಹಾರದ ವಿಶಿಷ್ಟ ಮತ್ತು ಆರೋಗ್ಯಕರ ತಿನಿಸು. ಅಕ್ಕಿಯ ಬದಲಿಗೆ ನೆನೆಸಿದ ಸಾಬುದಾನ, ಹಿಸುಕಿದ ಆಲೂಗಡ್ಡೆ ಮತ್ತು ಮಸಾಲೆಯನ್ನು ಸೇರಿಸಿ ಇದನ್ನು ತಯಾರಿಸಲಾಗುತ್ತದೆ. ಈ ದೋಸೆಯು ಗ್ಲುಟನ್ ಮುಕ್ತವಾಗಿದೆ ಮತ್ತು ಪೋಷಕಾಂಶಗಳಿಂದ ತುಂಬಿರುತ್ತದೆ. ಇದನ್ನು ತೆಂಗಿನಕಾಯಿ ಚಟ್ನಿಯೊಂದಿಗೆ ಬಿಸಿಯಾಗಿ ಸವಿಯಬಹುದು.

ಇದನ್ನೂ ಓದಿ: Shravan 2024: ಶ್ರಾವಣ ಮಾಸದಲ್ಲೇಕೆ ಮಾಂಸಾಹಾರ ಮಾಡಬಾರದು? ಇದಕ್ಕಿದೆ ವೈಜ್ಞಾನಿಕ ಕಾರಣ!


5. ಸಾಬುದಾನದ ಲಡ್ಡು

ಸಕ್ಕರೆ ಮತ್ತು ತುಪ್ಪದಿಂದ ತಯಾರಿಸಿದ ಸಾಬುದಾನದ ಲಡ್ಡು ರುಚಿಯ ಜೊತೆಗೆ ಪೌಷ್ಟಿಕ ಖಾದ್ಯವಾಗಿದೆ. ಸಕ್ಕರೆ ಪುಡಿ, ಏಲಕ್ಕಿ ಮತ್ತು ಗೋಡಂಬಿ ಮತ್ತು ಬಾದಾಮಿಗಳಂತಹ ಬೀಜಗಳನ್ನು ಲಡ್ಡುವಿನಲ್ಲಿ ಸೇರಿಸಬಹುದು. ಇದು ತ್ವರಿತ ಶಕ್ತಿಯ ವರ್ಧಕವೂ ಹೌದು.

Continue Reading
Advertisement
Abhishek Bachchan confirms divorce with Aishwarya Rai Bachchan
ಬಾಲಿವುಡ್5 mins ago

Abhishek Bachchan: ಐಶ್ವರ್ಯಾ ಮತ್ತು ನಾನು ವಿಚ್ಛೇದನ ಪಡೆಯುತ್ತಿದ್ದೇವೆ ಎಂದ ಅಭಿಷೇಕ್ ಬಚ್ಚನ್; ವಿಡಿಯೊ ಇಲ್ಲಿದೆ!

Paris Olympics
ಕ್ರೀಡೆ8 mins ago

Paris Olympics: “ಇಂಡಿಯಾ ಹೌಸ್‌”ನಲ್ಲಿ ನೀರಜ್​ ಚೋಪ್ರಾ ಸೇರಿ ಪದಕ ವಿಜೇತರನ್ನು ಗೌರವಿಸಿದ ನೀತಾ ಅಂಬಾನಿ

Vinay Rajkumar KRG will distribute 'Pepe' movie
ಸ್ಯಾಂಡಲ್ ವುಡ್19 mins ago

Vinay Rajkumar: ವಿನಯ್ ರಾಜ್ ಕುಮಾರ್ ‘ಪೆಪೆ’ ಸಿನಿಮಾ ವಿತರಣೆ ಮಾಡಲಿದೆ ಕೆ ಆರ್ ಜಿ!

Munich Massacre
ವಿದೇಶ23 mins ago

Munich Massacre: 11 ಇಸ್ರೇಲಿ ಅಥ್ಲೀಟ್‌ಗಳ ಹತ್ಯೆಯ ಪ್ರತಿಕಾರ ರೋಚಕ! ʼಮೊಸಾದ್‌ʼ ಏಜೆಂಟರ ಆಪರೇಷನ್‌ ಹೀಗಿತ್ತು

Varamahalakshmi Festival 2024
ಧಾರ್ಮಿಕ28 mins ago

Varamahalakshmi Festival 2024: ವರಮಹಾಲಕ್ಷ್ಮಿ ಪೂಜೆಗೆ ಮನೆಯನ್ನು ಸುಂದರವಾಗಿ ಅಲಂಕರಿಸಲು ಇಲ್ಲಿದೆ ಟಿಪ್ಸ್‌

Tungabhadra Dam
ಕರ್ನಾಟಕ48 mins ago

Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

Independence day Fashion 2024
ಫ್ಯಾಷನ್58 mins ago

Independence day Fashion 2024: ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್‌ಗೆ ಕಾಲಿಟ್ಟ ಸಿಂಪಲ್‌ ಎಥ್ನಿಕ್‌ ವೇರ್‌ಗಳಿವು

MNS v/s Shiv Sena
ದೇಶ60 mins ago

MNS v/s Shiv Sena: MNS ಕಾರ್ಯಕರ್ತರ ಪುಂಡಾಟ; ಉದ್ಧವ್‌ ಠಾಕ್ರೆ ಬೆಂಗಾವಲು ವಾಹನದ ಮೇಲೆ ದಾಳಿ

Almonds
ಆರೋಗ್ಯ2 hours ago

Almonds Benefits: ಈ 9 ಕಾರಣಗಳಿಗಾಗಿ ನೆನೆಸಿದ ಬಾದಾಮಿಯನ್ನು ಖಾಲಿ ಹೊಟ್ಟೆಯಲ್ಲಿ ನಿತ್ಯ ಸೇವಿಸಬೇಕು!

Vastu Tips
ಧಾರ್ಮಿಕ3 hours ago

Vastu Tips: ವಿದ್ಯುತ್ ಕಂಬದಿಂದ ಮನೆಗೆ ನಕಾರಾತ್ಮಕ ಶಕ್ತಿ ತಟ್ಟಬಹುದು ಎನ್ನುತ್ತಾರೆ ವಾಸ್ತು ಪರಿಣತರು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ7 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌