Health Tips: ಮತ್ತೆ ಮತ್ತೆ ಬಿಸಿ ಮಾಡಿ ಸೇವಿಸುವುದರಿಂದ ಇವು ದೇಹಕ್ಕೆ ವಿಷವಾಗಬಹುದು ಎಚ್ಚರ! - Vistara News

ಆಹಾರ/ಅಡುಗೆ

Health Tips: ಮತ್ತೆ ಮತ್ತೆ ಬಿಸಿ ಮಾಡಿ ಸೇವಿಸುವುದರಿಂದ ಇವು ದೇಹಕ್ಕೆ ವಿಷವಾಗಬಹುದು ಎಚ್ಚರ!

ಆಹಾರವನ್ನು ತಾಜಾವಾಗಿ ಸೇವಿಸಿದರೆ ಮಾತ್ರ ಒಳ್ಳೆಯ ಪರಿಣಾಮ (Health Tips) ಬೀರುತ್ತದೆ. ಆದರೆ ಹೆಚ್ಚಿನವರು ಆಹಾರವನ್ನು ಅನೇಕ ಬಾರಿ ಬಿಸಿ ಮಾಡಿ ಸೇವಿಸುತ್ತಾರೆ. ಇದು ಒಳ್ಳೆಯದಲ್ಲ. ಕೆಲವು ಆಹಾರಗಳನ್ನು ಪದೇಪದೇ ಬಿಸಿ ಮಾಡುವುದು ಅದರಲ್ಲೂ ಮುಖ್ಯವಾಗಿ ಚಹಾ, ಪಾಲಕ್, ಅಕ್ಕಿ, ಅಣಬೆ, ಅಡುಗೆ ಎಣ್ಣೆಯನ್ನು ಬಿಸಿ ಮಾಡಿದರೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟು ಮಾಡುತ್ತದೆ. ಈ ಅಭ್ಯಾಸಗಳು ಯಾಕೆ ಒಳ್ಳೆಯದಲ್ಲ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

Health Tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗ್ಗೆ ಮಾಡಿರುವ ಅನ್ನ, ಸಾಂಬಾರ್ ಬಿಸಿಬಿಸಿಯಾಗಿರಬೇಕು ಎಂದು ಹಲವಾರು ಮನೆಗಳಲ್ಲಿ ಪದೇಪದೇ ಬಿಸಿ ಮಾಡುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಇನ್ನು ಕೆಲವರು ರಾತ್ರಿ ಉಳಿದ ಅಡುಗೆಯನ್ನು (food) ಬಿಸಿ ಮಾಡಿ (reheat) ಮರುದಿನ ಸೇವಿಸುತ್ತಾರೆ. ಹೀಗೆ ಆಹಾರ ಬಿಸಿ ಮಾಡಿ ತಿನ್ನುವುದು ಅದರಲ್ಲೂ ವಿಶೇಷವಾಗಿ ಕೆಲವೊಂದು ಆಹಾರಗಳನ್ನು ಎರಡನೇ ಬಾರಿ ಬಿಸಿ ಮಾಡುವುದು ಆರೋಗ್ಯಕ್ಕೆ (Health Tips) ಒಳ್ಳೆಯದಲ್ಲ ಎನ್ನುತ್ತಾರೆ ತಜ್ಞರು.

ಕೆಲವು ಆಹಾರವನ್ನು ಬಿಸಿ ಮಾಡಿದಾಗ ಅದು ವಿಷವಾಗಬಹುದು. ಇನ್ನು ಕೆಲವು ಆಹಾರಗಳಲ್ಲಿರುವ ಪೌಷ್ಟಿಕಾಂಶ ನಷ್ಟವಾಗಬಹುದು ಎನ್ನುತ್ತಾರೆ ಆಹಾರ ಪರಿಣತರು. ಕೆಲವು ಆಹಾರ ಪದಾರ್ಥಗಳನ್ನು ಎರಡನೇ ಬಾರಿ ಬಿಸಿ ಮಾಡಲೇಬಾರದು. ಅವು ಯಾವುದು ಎನ್ನುವ ಕುರಿತು ಇಲ್ಲಿದೆ ಮಾಹಿತಿ.

Health Tips
Health Tips


ಚಹಾ

ಚಹಾದಲ್ಲಿ ಆಂಟಿಆಕ್ಸಿಡೆಂಟ್‌ಗಳು ಮತ್ತು ಪಾಲಿಫಿನಾಲ್‌ಗಳಂತಹ ಸೂಕ್ಷ್ಮ ಸಂಯುಕ್ತಗಳಿರುತ್ತವೆ. ಇದು ಚಹಾಕ್ಕೆ ಸುವಾಸನೆ ಮತ್ತು ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಕೊಡುತ್ತದೆ. ಚಹಾವನ್ನು ಆರಂಭದಲ್ಲಿ ತಯಾರಿಸಿದಾಗ ಇದು ಟ್ಯಾನಿನ್‌ ಮತ್ತು ಕ್ಯಾಟೆಚಿನ್‌ಗಳನ್ನು ಒಳಗೊಂಡಂತೆ ವಿವಿಧ ಸಂಯುಕ್ತಗಳನ್ನು ಬಿಡುಗಡೆ ಮಾಡುತ್ತದೆ. ಚಹಾವನ್ನು ಮತ್ತೆ ಬಿಸಿ ಮಾಡುವುದರಿಂದ ಈ ಸಂಯುಕ್ತಗಳು ನಷ್ಟವಾಗುತ್ತದೆ. ಇದರಿಂದ ಚಹಾ ಸುವಾಸನೆಯನ್ನು ಕಳೆದುಕೊಳ್ಳುತ್ತದೆ ಮತ್ತು ಅದರಲ್ಲಿರುವ ಒಳ್ಳೆಯ ಅಂಶಗಳು ನಷ್ಟವಾಗುತ್ತದೆ.

ಚಹಾವು ಕೆಫೀನ್ ಅನ್ನು ಹೊಂದಿರುತ್ತದೆ. ಇದನ್ನು ಪುನಃ ಬಿಸಿ ಮಾಡುವುದರಿಂದ ಇದು ಹೆಚ್ಚಾಗಿ ಜಿಗುಪ್ಸೆ, ನಿದ್ರಾಹೀನತೆಯಂತಹ ಅಡ್ಡ ಪರಿಣಾಮವನ್ನು ಉಂಟು ಮಾಡುತ್ತದೆ. ಚಹಾವನ್ನು ಮತ್ತೆ ಬಿಸಿ ಮಾಡಿ ಸೇವಿಸುವುದು ಆಮ್ಲೀಯತೆಯನ್ನು ಹೆಚ್ಚಿಸಬಹುದು.

ಇದಲ್ಲದೇ ಚಹಾವನ್ನು ಕುದಿಸಿದ ಬಳಿಕ ದೀರ್ಘಕಾಲದವರೆಗೆ ಇಡುವುದು ಕೂಡ ಒಳ್ಳೆಯದಲ್ಲ. ಚಹಾವನ್ನು ಮಾಡಿ ಹತ್ತು ನಿಮಿಷಗಳ ಒಳಗೆ ಸೇವಿಸಬೇಕು. ಇಲ್ಲವಾದರೆ ಅದು ಹೆಚ್ಚು ಆಮ್ಲೀಯವಾಗಬಹುದು. ಇದು ಹೊಟ್ಟೆಗೆ ಸಂಬಂಧಿಸಿದ ಕೆಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ.


ಪಾಲಕ್

ಪಾಲಕ್ ಸೊಪ್ಪು ನೈಟ್ರೇಟ್‌ಗಳನ್ನು ಹೊಂದಿರುತ್ತದೆ. ಇದನ್ನು ಮತ್ತೆ ಬಿಸಿ ಮಾಡಿದಾಗ ನೈಟ್ರೈಟ್‌ಗಳಾಗಿ ಪರಿವರ್ತನೆಯಾಗುತ್ತದೆ. ನೈಟ್ರೈಟ್‌ಗಳು ಅನಂತರ ಅಮೈನೋ ಆಮ್ಲಗಳೊಂದಿಗೆ ಪ್ರತಿಕ್ರಿಯಿಸಿ ನೈಟ್ರೊಸಮೈನ್‌ ಗಳಾಗುತ್ತವೆ. ಅವುಗಳು ಕ್ಯಾನ್ಸರ್ ಜನಕಗಳಾಗಿವೆ. ಪಾಲಕ್ ಅನ್ನು ಮತ್ತೆ ಬಿಸಿ ಮಾಡುವುದರಿಂದ ವಿಟಮಿನ್ ಸಿ ಮತ್ತು ಬಿ ವಿಟಮಿನ್‌ಗಳು ನಷ್ಟವಾಗುತ್ತದೆ. ಅದರ ಪೌಷ್ಟಿಕಾಂಶದ ಮೌಲ್ಯ ಕುಗ್ಗುತ್ತದೆ.

ಪಾಲಕ್ ಕಬ್ಬಿಣದ ಸಮೃದ್ಧ ಮೂಲವಾಗಿದೆ. ಪಾಲಕ್ ಸೊಪ್ಪನ್ನು ಬೇಯಿಸಿ ಮತ್ತೆ ಬಿಸಿ ಮಾಡಿದಾಗ ಕಬ್ಬಿಣವು ಗಾಳಿಯಲ್ಲಿ ಆಮ್ಲಜನಕದ ಸಂಪರ್ಕಕ್ಕೆ ಬಂದಾಗ ರಾಸಾಯನಿಕ ಕ್ರಿಯೆಯು ಸಂಭವಿಸಿ ಕಬ್ಬಿಣದ ಆಕ್ಸೈಡ್‌ಗಳ ರಚನೆಗೆ ಕಾರಣವಾಗಬಹುದು. ಇದು ಪಾಲಕ್ ನ ಬಣ್ಣ ಮತ್ತು ರುಚಿಯನ್ನು ಬದಲಾಯಿಸುತ್ತದೆ.

ಪಾಲಕ್ ನಲ್ಲಿರುವ ಕಬ್ಬಿನಾಂಶದ ಆಕ್ಸಿಡೀಕರಣವು ಅದರ ಪೌಷ್ಟಿಕಾಂಶದ ಮೌಲ್ಯದ ಮೇಲೆ ಪರಿಣಾಮ ಬೀರಬಹುದು. ಆಕ್ಸಿಡೀಕೃತ ಕಬ್ಬಿಣವು ದೇಹದಲ್ಲಿ ಸುಲಭವಾಗಿ ಹೀರಲ್ಪಡುವುದಿಲ್ಲ. ಮತ್ತೆ ಮತ್ತೆ ಪಾಲಕ್ ಅನ್ನು ಬಿಸಿ ಮಾಡುವುದು ಲೋಳೆಯ ರಚನೆ ಮತ್ತು ಕಹಿ ರುಚಿಯನ್ನು ಉಂಟು ಮಾಡುತ್ತದೆ. ಹೀಗಾಗಿ ಪಾಲಕ್‌ನಲ್ಲಿರುವ ಪೋಷಕಾಂಶಗಳನ್ನು ಪಡೆಯಲು ಅದನ್ನು ತಾಜಾ ಆಗಿ ಸೇವಿಸುವುದು ಉತ್ತಮ.


ಅಡುಗೆ ಎಣ್ಣೆ

ಅಡುಗೆ ಎಣ್ಣೆಯನ್ನು ಮತ್ತೆ ಬಿಸಿ ಮಾಡಿದಾಗ ಅದರ ಗುಣಮಟ್ಟ ಮತ್ತು ಸುರಕ್ಷತೆ ಕೆಡಿಸುವ ರಾಸಾಯನಿಕ ಬದಲಾವಣೆಗಳಿಗೆ ಒಳಗಾಗುತ್ತದೆ. ಇದು ಟ್ರಾನ್ಸ್ ಕೊಬ್ಬುಗಳು ಮತ್ತು ಅಲ್ಡಿಹೈಡ್‌ಗಳಂತಹ ಹಾನಿಕಾರಕ ಸಂಯುಕ್ತಗಳ ರಚನೆಗೆ ಕಾರಣವಾಗಬಹುದು. ಇದು ಉರಿಯೂತ ಮತ್ತು ಹೃದಯರಕ್ತನಾಳದ ಕಾಯಿಲೆಯನ್ನು ಉಂಟು ಮಾಡುತ್ತದೆ. ಅಡುಗೆ ಎಣ್ಣೆಯ ಸಮಗ್ರ ಪ್ರಯೋಜನ ಪಡೆಯಲು ಪ್ರತಿ ಬಾರಿಯೂ ತಾಜಾ ಎಣ್ಣೆಯನ್ನು ಬಳಸುವುದು ಮತ್ತು ತೈಲವನ್ನು ಅನೇಕ ಬಾರಿ ಬಿಸಿ ಮಾಡುವುದನ್ನು ತಪ್ಪಿಸುವುದು ಒಳ್ಳೆಯದು.


ಅಣಬೆ

ಅಣಬೆಗಳು ಮತ್ತೆ ಬಿಸಿ ಮಾಡುವುದರಿಂದ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಆಹಾರದಿಂದ ಹರಡುವ ಅನಾರೋಗ್ಯದ ಅಪಾಯವನ್ನು ಹೆಚ್ಚಿಸುತ್ತದೆ. ಅಣಬೆಗಳು ಪಾಲಿಸ್ಯಾಕರೈಡ್‌ಗಳಂತಹ ಕೆಲವು ಸಂಯುಕ್ತಗಳನ್ನು ಹೊಂದಿರುತ್ತವೆ. ಇದು ಮತ್ತೆ ಬಿಸಿ ಮಾಡಿದಾಗ ಕಿಣ್ವಕ ಪ್ರತಿಕ್ರಿಯೆಗಳಿಗೆ ಒಳಗಾಗಬಹುದು. ಅವುಗಳ ರುಚಿ ಮತ್ತು ವಿನ್ಯಾಸವನ್ನು ಬದಲಾಯಿಸುತ್ತದೆ.

ಮತ್ತೆ ಬಿಸಿ ಮಾಡಿದ ಅಣಬೆಗಳನ್ನು ಸೇವಿಸುವುದರಿಂದ ತಾಜಾತನ ಮತ್ತು ರುಚಿಯನ್ನು ಕಳೆದುಕೊಳ್ಳಬಹುದು. ಅಣಬೆಗಳು ಕಿಣ್ವ, ರಚನಾತ್ಮಕ ಪ್ರೋಟೀನ್‌ಗಳನ್ನು ಒಳಗೊಂಡಂತೆ ವಿವಿಧ ಪ್ರೋಟೀನ್‌ಗಳನ್ನು ಹೊಂದಿರುತ್ತವೆ. ಇದು ಅವುಗಳ ವಿನ್ಯಾಸ ಮತ್ತು ಪೌಷ್ಟಿಕಾಂಶದ ಪ್ರೊಫೈಲ್‌ಗೆ ಕೊಡುಗೆ ನೀಡುತ್ತದೆ. ಅಣಬೆಗಳನ್ನು ಬೇಯಿಸಿದಾಗ, ಈ ಪ್ರೋಟೀನ್ ಗಳು ಡಿನಾಟರೇಶನ್ ಎಂಬ ಪ್ರಕ್ರಿಯೆಯ ಮೂಲಕ ರಚನಾತ್ಮಕ ಬದಲಾವಣೆಗಳಿಗೆ ಒಳಗಾಗುತ್ತವೆ. ಅಣಬೆಗಳನ್ನು ಮತ್ತೆ ಬಿಸಿ ಮಾಡಿದ ಅನಂತರ ಪ್ರೋಟೀನ್ ಸಂಯೋಜನೆಯಲ್ಲಿ ಮತ್ತಷ್ಟು ಬದಲಾವಣೆಗಳನ್ನು ಉಂಟುಮಾಡುತ್ತದೆ.

ಇದು ಅಣಬೆಗಳ ವಿನ್ಯಾಸ, ಸುವಾಸನೆ ಮತ್ತು ಪೌಷ್ಟಿಕಾಂಶದ ಗುಣಲಕ್ಷಣಗಳಲ್ಲಿ ವ್ಯತ್ಯಾಸವನ್ನು ಉಂಟು ಮಾಡುತ್ತದೆ. ಅಣಬೆಗಳನ್ನು ಮತ್ತೆ ಬಿಸಿ ಮಾಡುವುದರಿಂದ ಜಲವಿಚ್ಛೇದನೆಯಂತಹ ಪ್ರಕ್ರಿಯೆಗಳ ಮೂಲಕ ಸಣ್ಣ ಪೆಪ್ಟೈಡ್‌ಗಳು ಮತ್ತು ಅಮೈನೋ ಆಮ್ಲಗಳಾಗಿ ಕೆಲವು ಪ್ರೋಟೀನ್ ಅಣುಗಳ ವಿಭಜನೆಗೆ ಕಾರಣವಾಗಬಹುದು. ಇದು ಅಣಬೆಗಳ ಒಟ್ಟಾರೆ ಪ್ರೋಟೀನ್ ಅಂಶ ಮತ್ತು ಸಂಯೋಜನೆಯ ಮೇಲೆ ಪರಿಣಾಮ ಬೀರುತ್ತದೆ. ಇದು ಅವುಗಳ ರುಚಿ ಮತ್ತು ಜೀರ್ಣಸಾಧ್ಯತೆಯ ಮೇಲೆ ಪರಿಣಾಮ ಬಿರುವುದು. ಅಣಬೆಗಳ ಗುಣಮಟ್ಟವನ್ನು ಕಾಪಾಡಲು, ಅವುಗಳನ್ನು ದೀರ್ಘಕಾಲದವರೆಗೆ ಬಿಸಿ ಮಾಡದೇ ಇರುವುದು ಒಳ್ಳೆಯದು ಎನ್ನುತ್ತಾರೆ ಆಹಾರ ತಜ್ಞರು.


ಇದನ್ನೂ ಓದಿ: Intermittent Fasting: ಇಂಟರ್‌ ಮಿಟೆಂಟ್‌ ಫಾಸ್ಟಿಂಗ್‌ ಡಯಟ್‌ ಮಾಡುವವರೇ ಹುಷಾರ್! ಈ ಸಂಗತಿ ಗೊತ್ತಿರಲಿ


ಅಕ್ಕಿ

ಅಕ್ಕಿಯಲ್ಲಿ ಸಾಮಾನ್ಯವಾಗಿ ಕಂಡುಬರುವ ಬ್ಯಾಸಿಲಸ್ ಸೆರಿಯಸ್ ಎಂಬ ಬ್ಯಾಕ್ಟೀರಿಯಂ ಅಡುಗೆ ಪ್ರಕ್ರಿಯೆಯಲ್ಲಿ ಬದುಕುಳಿಯುತ್ತದೆ. ಅನ್ನ ಮಾಡಿ ಅದನ್ನು ದೀರ್ಘಕಾಲದವರೆಗೆ ಇಟ್ಟರೆ ಅದು ದ್ವಿಗುಣವಾಗುತ್ತಾ ಹೋಗುತ್ತದೆ. ಅನ್ನವನ್ನು ಮತ್ತೆ ಬಿಸಿ ಮಾಡುವುದರಿಂದ ಯಾವಾಗಲೂ ಬ್ಯಾಕ್ಟೀರಿಯಾ ಮತ್ತು ಅವುಗಳ ವಿಷಕಾರಿ ಅಂಶಗಳು ಹೋಗುವುದಿಲ್ಲ. ಇದು ಆಹಾರವನ್ನು ವಿಷವಾಗಿಸುತ್ತದೆ. ಬಿಸಿ ಮಾಡಿದ ಅನ್ನ ತೇವಾಂಶ, ಪೌಷ್ಟಿಕಾಂಶ ಕಳೆದುಕೊಳ್ಳುತ್ತದೆ. ಆಹಾರದಿಂದ ಹರಡುವ ಅನಾರೋಗ್ಯವನ್ನು ತಡೆಗಟ್ಟಲು ಬೇಯಿಸಿದ ಅನ್ನವನ್ನು ರೆಫ್ರಿಜರೇಟರ್ ನಲ್ಲಿ ಸರಿಯಾಗಿ ಸಂಗ್ರಹಿಸುವುದು ಮತ್ತು ಒಂದೆರಡು ದಿನಗಳಲ್ಲಿ ಅದನ್ನು ಸೇವಿಸುವುದು ಮುಖ್ಯವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Indian Dessert 2024: ವಿಶ್ವದ ಪ್ರಸಿದ್ಧ ʼಸಿಹಿತಿಂಡಿ ತಾಣʼಗಳ ಪಟ್ಟಿಯಲ್ಲಿ ಸ್ಥಾನ ಪಡೆದ 10 ಭಾರತೀಯ ಸ್ವೀಟ್‌ ಸ್ಟಾಲ್‌ಗಳಿವು

Indian Dessert 2024: ಪಾಕಶಾಲೆಯ ಮಾರ್ಗದರ್ಶಿ ʼಟೇಸ್ಟ್ ಅಟ್ಲಾಸ್ʼ ಇತ್ತೀಚೆಗೆ 2024ರ ವಿಶ್ವದ ಅತ್ಯಂತ ಪ್ರಸಿದ್ಧ ಸಿಹಿತಿಂಡಿ ತಯಾರಿಸುವ ಸ್ಥಳಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಜಗತ್ತಿನಾದ್ಯಂತ ವಿಶೇಷವಾದ ಸಿಹಿತಿಂಡಿಗಳು ಮತ್ತು ಪೇಸ್ಟ್ರಿಗಳನ್ನು ತಯಾರಿಸುವಂತಹ ಸ್ಥಳಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಇವುಗಳಲ್ಲಿ, 10 ಭಾರತೀಯ ತಿನಿಸುಗಳು ಸ್ಥಾನವನ್ನು ಗಳಿಸಿವೆ. ಆ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Indian Dessert 2024
Koo


ವಿಶ್ವದ ಹಲವು ಕಡೆಗಳಲ್ಲಿ ಬಗೆಬಗೆಯ ತಿನಿಸುಗಳನ್ನು ತಯಾರಿಸುತ್ತಾರೆ. ಒಂದೊಂದು ತಿಂಡಿ ಒಂದೊಂದು ರೀತಿಯ ರುಚಿಯನ್ನು ಹೊಂದಿರುತ್ತದೆ. ಆದರೆ ತಿಂಡಿ ಪ್ರಿಯರಿಗೆ ಯಾವ ತಿಂಡಿ ತುಂಬಾ ರುಚಿಕರವಾಗಿರುತ್ತದೆ ಮತ್ತು ಅದು ಎಲ್ಲಿ ಸಿಗುತ್ತದೆ ಎಂಬ ಮಾಹಿತಿ ತಿಳಿದಿರುವುದಿಲ್ಲ. ಹಾಗಾಗಿ ಅಂಥವರಿಗಾಗಿ ಪಾಕಶಾಲೆಯ ಮಾರ್ಗದರ್ಶಿ ಟೇಸ್ಟ್ ಅಟ್ಲಾಸ್ ಇತ್ತೀಚೆಗೆ 2024ರ ವಿಶ್ವದ ಅತ್ಯಂತ ಪ್ರಸಿದ್ಧ ಸಿಹಿತಿಂಡಿ ತಯಾರಿಸುವ ಸ್ಥಳಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಜಗತ್ತಿನಾದ್ಯಂತ ವಿಶೇಷವಾದ ಸಿಹಿತಿಂಡಿಗಳು ಮತ್ತು ಪೇಸ್ಟ್ರಿಗಳನ್ನು ತಯಾರಿಸುವಂತಹ ಸ್ಥಳಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಇವುಗಳಲ್ಲಿ, 10 ಭಾರತೀಯ ತಿನಿಸುಗಳು (Indian Dessert 2024) ಸ್ಥಾನವನ್ನು ಗಳಿಸಿವೆ. ಆ 10 ಭಾರತೀಯ ತಿನಿಸುಗಳು ಮತ್ತು ಅವುಗಳು ಯಾವ ಸ್ಥಾನ ಪಡೆದುಕೊಂಡಿದ್ದಾವೆ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

Indian Dessert 2024
Indian Dessert 2024

1. ಕಯಾನಿ ಬೇಕರಿ, ಪುಣೆ

ಈ ಪಟ್ಟಿಯಲ್ಲಿ ಜಾಗತಿಕವಾಗಿ 18ನೇ ಸ್ಥಾನ ಪಡೆದುಕೊಂಡ ಕಯಾನಿ ಬೇಕರಿ 1955ರಲ್ಲಿ ಪ್ರಾರಂಭವಾಗಿತ್ತು. ಪುಣೆಯ ಕಯಾನಿ ಬೇಕರಿ ಶ್ರೂಸ್ಬರಿ ಬಿಸ್ಕತ್ತುಗಳು ಮತ್ತು ಮಾವಾ ಕೇಕ್‍ಗಳಿಗೆ ಹೆಸರುವಾಸಿಯಾಗಿದೆ.

ಪುಣೆಗೆ ಭೇಟಿ ನೀಡುವ ಅನೇಕ ಪ್ರವಾಸಿಗರು ಆಗಾಗ್ಗೆ ಈ ಬೇಕರಿ ಬಳಿ ಈ ಸಿಹಿತಿಂಡಿಗಳನ್ನು ಖರೀದಿಸುತ್ತಾರೆ.

Indian Dessert 2024
Indian Dessert 2024

2. ಕೆ.ಸಿ.ದಾಸ್, ಕೋಲ್ಕತಾ

ಪಟ್ಟಿಯಲ್ಲಿ 25ನೇ ಸ್ಥಾನ ಪಡೆದುಕೊಂಡ ಕೆ.ಸಿ.ದಾಸ್ 1866ರಲ್ಲಿ ಪ್ರಾರಂಭವಾಗಿತ್ತು. ಕೆ.ಸಿ.ದಾಸ್‌ ರಸಗುಲ್ಲಾಗಳಿಗೆ ಸಮಾನಾರ್ಥಕ ಹೆಸರು ಎಂಬ ಖ್ಯಾತಿ ಹೊಂದಿದೆ.

ಕೋಲ್ಕತ್ತಾ ಮೂಲದ ಈ ಮಿಠಾಯಿ ತಯಾರಕರು ಪ್ರವಾಸಿಗರಿಗೆ ಪ್ರಿಯವಾದ ಬಂಗಾಳಿ ಪಾಕಪದ್ಧತಿಯ ಮೂಲಕ ಸಿಹಿತಿಂಡಿಗಳನ್ನು ತಯಾರಿಸುತ್ತಾರೆ.

Indian Dessert 2024
Indian Dessert 2024

3. ಫ್ಲೂರಿಸ್, ಕೋಲ್ಕತಾ

ಪಟ್ಟಿಯಲ್ಲಿ 26ನೇ ಸ್ಥಾನ ಪಡೆದುಕೊಂಡ ಕೋಲ್ಕತ್ತಾದ ಜನಪ್ರಿಯ ಟೀ ರೂಮ್ ಮತ್ತು ಬೇಕರಿಯಾದ ಫ್ಲೂರಿಸ್ 1927ರಿಂದ ಸ್ವಿಸ್ ಚಾಕೊಲೇಟ್‍ಗಳು ಮತ್ತು ಪ್ಯಾಟಿಸ್ಸೆರಿಯನ್ನು ಒದಗಿಸುತ್ತಿದೆ. ಈ ಐತಿಹಾಸಿಕ ಸಂಸ್ಥೆಗೆ ಭೇಟಿ ನೀಡುವವರು ಒಮ್ಮೆ ಇಲ್ಲಿ ಸಿಗುವ ರಮ್ ಬಾಲ್ ಸವಿಯಲೇಬೇಕು.

Indian Dessert 2024
Indian Dessert 2024

4. ಕರಾಚಿ ಬೇಕರಿ, ಹೈದರಾಬಾದ್

ಪಟ್ಟಿಯಲ್ಲಿ 29ನೇ ಸ್ಥಾನ ಪಡೆದುಕೊಂಡಿರುವ ಹೈದರಾಬಾದ್‍ನ ಕರಾಚಿ ಬೇಕರಿ ಹಣ್ಣಿನ ಬಿಸ್ಕತ್ತುಗಳು ಮತ್ತು ಇತರ ಬೇಯಿಸಿದ ಆಹಾರಗಳಿಗೆ ಹೆಸರುವಾಸಿಯಾಗಿದೆ.

ಇದು 1953ರಿಂದ ಜನರ ಗಮನ ಸೆಳೆದಿದೆ. ಬೇಕರಿಯ ವೈವಿಧ್ಯಮಯ ತಿಂಡಿತಿನಿಸುಗಳು ಸಿಹಿತಿಂಡಿ ಪ್ರಿಯರನ್ನು ಸಂತೋಷಪಡಿಸುತ್ತಲೇ ಇವೆ.

Indian Dessert 2024
Indian Dessert 2024

5. ಬಿ&ಆರ್ ಮುಲ್ಲಿಕ್, ಕೋಲ್ಕತಾ

ಪಟ್ಟಿಯಲ್ಲಿ 37ನೇ ಸ್ಥಾನ ಪಡೆದುಕೊಂಡ ಕೋಲ್ಕತ್ತಾದ ಬಿ&ಆರ್ ಮಲ್ಲಿಕ್ 1978ರಿಂದ ಪ್ರಾರಂಭವಾಗಿದೆ. ಬಲರಾಮ್ ಮುಲ್ಲಿಕ್ ಮತ್ತು ರಾಧಾರಮಣ್ ಮುಲ್ಲಿಕ್ ಎಂಬುವವರು ತನ್ನ ಸಾಂಪ್ರದಾಯಿಕ ಬಂಗಾಳಿ ಸಿಹಿತಿಂಡಿಗಳಿಗೆ ಹೆಸರುವಾಸಿಯಾಗಿದ್ದಾರೆ, ಇದು ಕೋಲ್ಕತ್ತಾದಲ್ಲಿ ವಿಶೇಷ ಸಿಹಿ ತಿಂಡಿಗಳು ದೊರೆಯುವ ಪ್ರಮುಖ ಸ್ಥಳವಾಗಿದೆ.

Indian Dessert 2024
Indian Dessert 2024

6. ಕೆ ರುಸ್ತುಂ ಅಂಡ್ ಕೋ, ಮುಂಬೈ

ಪಟ್ಟಿಯಲ್ಲಿ 49ನೇ ಸ್ಥಾನದಲ್ಲಿರುವ ಮುಂಬೈನ ಕೆ ರುಸ್ತುಂ ಅಂಡ್ ಕೋ 1953ರಲ್ಲಿ ಪ್ರಾರಂಭವಾಗಿದೆ. ಇದು ಮುಂಬೈನ ಪ್ರಸಿದ್ಧ ಐಸ್‌ಕ್ರೀಮ್ ಪಾರ್ಲರ್ ಆಗಿದೆ. ಇಲ್ಲಿ ಸಿಗುವ ವಿಶಿಷ್ಟ ಐಸ್‌ಕ್ರೀಮ್ ಸ್ಯಾಂಡ್ ವಿಚ್‍ಗಳು ಸ್ಥಳೀಯರಿಗೆ ಮತ್ತು ಸಂದರ್ಶಕರಿಗೆ ಬಹಳ ಅಚ್ಚುಮೆಚ್ಚು.

Indian Dessert 2024
Indian Dessert 2024

7. ಕುರೆಮಾಲ್ ಕುಲ್ಫಿ, ನವದೆಹಲಿ

ಪಟ್ಟಿಯಲ್ಲಿ 67ನೇ ಸ್ಥಾನದಲ್ಲಿದ್ದ ನವದೆಹಲಿಯ ಕುರೆಮಾಲ್ ಕುಲ್ಫಿ ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ಸಿಹಿತಿಂಡಿಗಳನ್ನು ಮಾರಾಟ ಮಾಡುತ್ತಿದೆ. ಇದು ರುಚಿಕರವಾದ ವಿಶೇಷವಾದ ಕುಲ್ಫಿಗಳಿಗೆ ಹೆಸರುವಾಸಿಯಾಗಿದ್ದು, ಇಲ್ಲಿ ಸ್ಟಫ್ಡ್ ಮಾವಿನ ಕುಲ್ಫಿಯನ್ನು ಸಿಗುತ್ತದೆ.

Indian Dessert 2024
Indian Dessert 2024

8. ಪ್ರಕಾಶ್ ಕುಲ್ಫಿ, ಲಕ್ನೋ

ಪಟ್ಟಿಯಲ್ಲಿ 77ನೇ ಸ್ಥಾನ ಪಡೆದುಕೊಂಡ ಲಕ್ನೋದ ಪ್ರಕಾಶ್ ಕುಲ್ಫಿ 1956ರಿಂದ ಪ್ರಾರಂಭವಾಗಿದ್ದು, ಇಲ್ಲಿ ಕ್ರೀಂ ಕುಲ್ಫಿಗಳು ಸಿಗುತ್ತವೆ. ಇದು ಎಲ್ಲಾ ಕಡೆಗಳಲ್ಲಿ ಸಿಗುವಂತಹ ಕುಲ್ಫಿಗಿಂತ ಹೆಚ್ಚು ರುಚಿಕರವಾಗಿದೆ.. ಹಾಗಾಗಿ ಇದು ಕುಲ್ಫಿ ಪ್ರಿಯರ ನೆಚ್ಚಿನ ಸ್ಥಳವಾಗಿದೆ.

Indian Dessert 2024
Indian Dessert 2024

9. ಚಿಟಾಲೆ ಬಂಧು, ಪುಣೆ

ಪಟ್ಟಿಯಲ್ಲಿ 85ನೇ ಸ್ಥಾನದಲ್ಲಿರುವ ಪುಣೆಯ ಚಿಟಾಲೆ ಬಂಧು ಸಿಹಿತಿಂಡಿಗಳು ಮತ್ತು ಬಕರ್ವಾಡಿಯಂತಹ ರುಚಿಕರವಾದ ತಿಂಡಿಗಳಿಗೆ ಹೆಸರುವಾಸಿಯಾಗಿದೆ. ಇದು 1950ರಿಂದ ಪುಣೆಯಲ್ಲಿ ಪ್ರಾರಂಭವಾಗಿದೆ.

Indian Dessert 2024
Indian Dessert 2024

10. ಜಿಲೇಬಿ ವಾಲಾ, ನವದೆಹಲಿ

ಪಟ್ಟಿಯಲ್ಲಿ 93ನೇ ಸ್ಥಾನ ಪಡೆದುಕೊಂಡ ನವದೆಹಲಿಯ ಹೃದಯಭಾಗದಲ್ಲಿರುವ ಜಿಲೇಬಿ ವಾಲಾ 1884ರಿಂದ ಹೊಸದಾದ ವಿಧಾನದಲ್ಲಿ ತಯಾರಿಸಿದ ಜಿಲೇಬಿಗಳನ್ನು ನೀಡುತ್ತಿದೆ. ಈ ಸ್ಥಳವು ಸ್ಥಳೀಯರಿಗೆ ಮತ್ತು ಸಂದರ್ಶಕರಿಗೆ ಅಚ್ಚುಮೆಚ್ಚಿನದಾಗಿದೆ.

ಇದನ್ನೂ ಓದಿ:  ಶ್ರಾವಣ ಶನಿವಾರದ ವಿಶೇಷ ಏನು? ಇದನ್ನು ಹೇಗೆ ಆಚರಿಸಿದರೆ ದೋಷ ನಿವಾರಣೆಯಾಗುತ್ತದೆ?

ಸಿಹಿತಿಂಡಿಗಳ ವಿಷಯಕ್ಕೆ ಬಂದಾಗ, ಭಾರತದ ಶ್ರೀಮಂತ ಮತ್ತು ವೈವಿಧ್ಯಮಯ ಪಾಕಶಾಲೆಯ ಸಂಪ್ರದಾಯಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿವೆ ಎಂಬುದನ್ನು ಈ 10 ಭಾರತೀಯ ತಿನಿಸುಗಳು ಸಾಬೀತುಪಡಿಸಿವೆ. ಈ ಪ್ರತಿಯೊಂದು ಸ್ಥಳಗಳು ಭಾರತದ ಸಿಹಿ ಪಾಕವಿಧಾನದಲ್ಲಿ ವಿಶಿಷ್ಟ ರುಚಿಯನ್ನು ನೀಡುತ್ತವೆ.

Continue Reading

ಆರೋಗ್ಯ

High Calcium Foods: ದೇಹಕ್ಕೆ ಮುಖ್ಯವಾದ ಅಧಿಕ ಕ್ಯಾಲ್ಶಿಯಂ ಆಹಾರಗಳನ್ನು ಪಡೆಯುವುದು ಹೇಗೆ?

High Calcium Foods: ಕ್ಯಾಲ್ಶಿಯಂ ಆಹಾರ ಎನ್ನುತ್ತಿದ್ದಂತೆ ನಮಗೆ ನೆನಪಾಗುವುದು ಡೇರಿ ಉತ್ಪನ್ನಗಳು. ಆದರೆ ಕ್ಯಾಲ್ಶಿಯಂ ಆಹಾರಗಳು ಅದಷ್ಟೇ ಅಲ್ಲ, ಇನ್ನೂ ಎಷ್ಟೋ ಬೇರೆಯ ಆಹಾರಗಳು ಒಂದು ಸರ್ವಿಂಗ್‌ನಲ್ಲಿ ಒಂದು ಗ್ಲಾಸ್‌ ಹಾಲಿಗಿಂತಲೂ ಹೆಚ್ಚಿನ ಕ್ಯಾಲ್ಶಿಯಂ ಒದಗಿಸುತ್ತವೆ ದೇಹಕ್ಕೆ. ಯಾವ ಆಹಾರಗಳವು? ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

High Calcium Foods
Koo

ಕ್ಯಾಲ್ಶಿಯಂ ಖನಿಜ (High Calcium Foods) ನಮ್ಮ ಆರೋಗ್ಯಕ್ಕೆ ಅಗತ್ಯ ಎಂಬುದು ನಮಗೆಲ್ಲ ಗೊತ್ತು. ಹಲ್ಲು, ಮೂಳೆಗಳಿಂದ ಹಿಡಿದು ನಮ್ಮಿಡೀ ದೇಹದ ಸ್ವಾಸ್ಥ್ಯ ರಕ್ಷಣೆಗೆ ಇದು ಅಗತ್ಯ. ನರಗಳ ಆರೋಗ್ಯ ಚೆನ್ನಾಗಿರಿಸಲು, ಸ್ನಾಯುಗಳ ವಿಕಸನಕ್ಕೆ, ರಕ್ತ ಹೆಪ್ಪುಗಟ್ಟಲು… ಹೀಗೆ ಬಹಳಷ್ಟು ಕೆಲಸಗಳಿಗೆ ಕ್ಯಾಲ್ಶಿಯಂ ಅಗತ್ಯವಿದೆ. ಕ್ಯಾಲ್ಶಿಯಂ ಆಹಾರ ಎನ್ನುತ್ತಿದ್ದಂತೆ ನಮಗೆ ನೆನಪಾಗುವುದು ಡೇರಿ ಉತ್ಪನ್ನಗಳು. ಸಸ್ಯಾಹಾರಿಗಳಂತೂ ಹಾಲು, ಚೀಸ್‌, ಪನೀರ್‌ ಮುಂತಾದವುಗಳನ್ನೇ ಕ್ಯಾಲ್ಶಿಯಂ ಪೂರೈಕೆಗೆ ನೆಚ್ಚಿಕೊಂಡಿರುತ್ತಾರೆ. ಆದರೆ ಕ್ಯಾಲ್ಶಿಯಂ ಆಹಾರಗಳು ಅದಷ್ಟೇ ಅಲ್ಲ, ಇನ್ನೂ ಎಷ್ಟೋ ಬೇರೆಯ ಆಹಾರಗಳು ಒಂದು ಸರ್ವಿಂಗ್‌ನಲ್ಲಿ ಒಂದು ಗ್ಲಾಸ್‌ ಹಾಲಿಗಿಂತಲೂ ಹೆಚ್ಚಿನ ಕ್ಯಾಲ್ಶಿಯಂ ಒದಗಿಸುತ್ತವೆ ದೇಹಕ್ಕೆ. ಯಾವ ಆಹಾರಗಳವು?

Greens vegetables

ಹಸಿರು ಸೊಪ್ಪುಗಳು

ಪಾಲಕ್‌ ಸೊಪ್ಪು, ಲೆಟೂಸ್‌, ಸ್ವಿಸ್‌ ಚಾರ್ಡ್‌, ಸಾಸಿವೆ ಸೊಪ್ಪುಗಳು, ಟರ್ನಿಪ್‌ ಸೊಪ್ಪು, ಕೆಲವು ಬಗೆಯ ಎಲೆಕೋಸು ಮುಂತಾದ ಹಲವು ಬಗೆಯ ಸೊಪ್ಪುಗಳಲ್ಲಿ ಕ್ಯಾಲ್ಶಿಯಂ ಅಂಶ ಅಧಿಕವಾಗಿದೆ. ಒಂದು ಕಪ್‌ ಬೇಯಿಸಿದ ಸೊಪ್ಪಿನಲ್ಲಿ 265 ಮಿ.ಗ್ರಾಂನಷ್ಟು ಕ್ಯಾಲ್ಶಿಯಂ ದೊರೆಯುತ್ತದೆ. ಅದೇ ಒಂದು ಕಪ್‌ (160 ಎಂ.ಎಲ್‌) ಹಾಲಿನಲ್ಲಿ 250 ಮಿ.ಗ್ರಾಂ.ನಷ್ಟು ಕ್ಯಾಲ್ಶಿಯಂ ಇರುತ್ತದೆ. ಹಾಗಾಗಿ ಇಂಥ ಸೊಪ್ಪುಗಳನ್ನು ಹೆಚ್ಚಾಗಿ ತಿನ್ನುವುದರಿಂದ ಕ್ಯಾಲ್ಶಿಯಂ ಮಾತ್ರವಲ್ಲ, ಅವುಗಳಿಂದ ದೊರೆಯುವ ಸೂಕ್ಷ್ಮ ಪೋಷಕಾಂಶಗಳು ದೇಹದ ಆರೋಗ್ಯ ಹೆಚ್ಚಿಸುವಲ್ಲಿ ಮಹತ್ವದ ಕೆಲಸ ಮಾಡುತ್ತವೆ.

Mackerel fish on ice
Broccoli

ಮೀನು

ಮೀನುಗಳಲ್ಲಿರುವ ಲೀನ್‌ ಮೀಟ್‌ ಆರೋಗ್ಯಕ್ಕೆ ಸೂಕ್ತವಾದದ್ದು. ಅದರಲ್ಲೂ ಭೂತಾಯಿಯಂಥ ಮೀನಿನಲ್ಲಿ ಕ್ಯಾಲ್ಶಿಯಂ ಪ್ರಮಾಣ ಅಧಿಕ 3.75 ಔನ್ಸ್‌ ಮೀನಿನಿಂದ 325 ಎಂ.ಜಿ. ಕ್ಯಾಲ್ಶಿಯಂ ದೊರೆಯುತ್ತದೆ. ಇದರಲ್ಲಿ ಕ್ಯಾಲ್ಶಿಯಂ ಮಾತ್ರವಲ್ಲ, ಹಲವು ಬಗೆಯ ಖನಿಜಗಳು ಮತ್ತು ಒಮೇಗಾ 3 ಕೊಬ್ಬಿನಾಮ್ಲವೂ ಇದರಿಂದ ವಿಫುಲವಾಗಿ ಸಿಗುತ್ತದೆ.

Health Benefits Of Tofu

ತೋಫು

ಸೋಯಾ ಉತ್ಪನ್ನವಾದ ತೋಫುವಿನಲ್ಲೂ ಅಧಿಕ ಪ್ರಮಾಣದಲ್ಲಿ ಕ್ಯಾಲ್ಶಿಯಂ ಇದೆ. ಇದರ ಸಂಸ್ಕರಣೆಯಲ್ಲಿ ಕ್ಯಾಲ್ಶಿಯಂ ಸಲ್ಫೇಟ್‌ ಬಳಸಲಾಗಿದ್ದರೆ, ಅರ್ಧ ಕಪ್‌ ತೋಫುವಿನಿಂದ 250ರಿಂದ 850 ಎಂ.ಜಿ.ವರೆಗೂ ಕ್ಯಾಲ್ಶಿಯಂ ದೊರೆಯುತ್ತದೆ. ನೋಡುವುದಕ್ಕೆ ಪನೀರ್‌ನಂತೆಯೇ ಇರುವ ಇದನ್ನು ಹಲವು ರೀತಿಯ ಅಡುಗೆಗಳಲ್ಲಿ ಬಳಸಿ, ಕ್ಯಾಲ್ಶಿಯಂ ಸೇವನೆಯನ್ನು ಹೆಚ್ಚಿಸಿಕೊಳ್ಳಬಹುದು.

Black Chia Seed

ಚಿಯಾ ಬೀಜಗಳು

ನೋಡುವುದಕ್ಕೆ ತೀರಾ ಸಣ್ಣದಾಗಿರು ಈ ಬೀಜಗಳು ಸತ್ವದಲ್ಲಿ ತ್ರಿವಿಕ್ರಮನಂತೆ. ಕೇವಲ ಎರಡು ಟೇಬಲ್‌ ಚಮಚ ಚಿಯಾ ಬೀಜಗಳಿಂದ 180 ಎಂ.ಜಿ. ಕ್ಯಾಲ್ಶಿಯಂ ದೊರೆಯುತ್ತದೆ. ಇವುಗಳನ್ನು ನೀರಿನಲ್ಲಿ ನೆನೆಸಿ, ನಂತರ ಸ್ಮೂದಿ, ಸಲಾಡ್‌ ಮುಂತಾದ ಯಾವುದಕ್ಕೇ ಆದರೂ ಸೇರಿಸಿಕೊಳ್ಳಬಹುದು. ಇವುಗಳಲ್ಲಿ ನಾರು ಮತ್ತು ಒಳ್ಳೆಯ ಕೊಬ್ಬು ವಿಫುಲವಾಗಿವೆ.

sesame-seeds

ಎಳ್ಳು

ಇದನ್ನು ಅಂತೆಯೇ ತಿನ್ನುವುದಕ್ಕಿಂತ ಚಟ್ನಿಯಂತೆ ರುಬ್ಬಿ ತಿನ್ನುವುದು ಹೆಚ್ಚು ಪರಿಣಾಮಕಾರಿ. ಯಾವುದೇ ರೀತಿಯಲ್ಲಿ ಎಳ್ಳನ್ನು ರುಬ್ಬಿ ಅಡುಗೆಗೆ ಸೇರಿಸಿಕೊಳ್ಳಬಹುದು. ಎರಡು ಟೇಬಲ್‌ ಚಮಚ ಎಳ್ಳಿನಿಂದ 130 ಎಂ.ಜಿ.ಯಷ್ಟು ಕ್ಯಾಲ್ಶಿಯಂ ದೊರೆಯುತ್ತದೆ.

Broccoli

ಬ್ರೊಕೊಲಿ

ವಿಟಮಿನ್‌ ಸಿ ಮತ್ತು ಕೆ ಹೆಚ್ಚಾಗಿರುವ ಈ ತರಕಾರಿಯನ್ನು ಯಾವುದೇ ರೂಪದಲ್ಲಿ ತಿಂದರೂ ಆರೋಗ್ಯಕ್ಕೆ ಒಳ್ಳೆಯದು. ಒಂದು ಕಪ್‌ ಬೇಯಿಸಿದ ಬ್ರೊಕೊಲಿಯಿಂದ 62 ಎಂ.ಜಿ. ಕ್ಯಾಲ್ಶಿಯಂ ದೊರೆಯುತ್ತದೆ. ಉಳಿದೆಲ್ಲ ಹಸಿರು ಸೊಪ್ಪುಗಳ ಜೊತೆಗೆ ಇದನ್ನೂ ಲೆಕ್ಕಕ್ಕೆ ತೆಗೆದುಕೊಳ್ಳಬಹುದು.

ಇದನ್ನೂ ಓದಿ: Water For Health: ಆರೋಗ್ಯವಾಗಿರಬೇಕೆಂದರೆ ನಾವು ದಿನಕ್ಕೆಷ್ಟು ನೀರು ಕುಡಿಯಬೇಕು?

ಬಾದಾಮಿ, ಅಂಜೂರ

ಒಂದು ಔನ್ಸ್‌ ಬಾದಾಮಿಯಲ್ಲಿ (ಅಂದಾಜು 23 ಬಾದಾಮಿ) 76 ಎಂ.ಜಿ.ಯಷ್ಟು ಕ್ಯಾಲ್ಶಿಯಂ ದೊರೆಯುತ್ತದೆ. ಅದಲ್ಲದೆ, ಈ ಬೀಜಗಳಲ್ಲಿ ಆರೋಗ್ಯಕರ ಕೊಬ್ಬು, ಪ್ರೊಟೀನ್‌ ಮತ್ತು ಇತರ ಖನಿಜಗಳು ಧಾರಾಳವಾಗಿವೆ. ಅಂಜೂರವೂ ಇದಕ್ಕಿಂತ ಕಡಿಮೆಯೇನಿಲ್ಲ. ಕಾಲು ಕಪ್‌ನಷ್ಟು ಅಂಜೂರದಲ್ಲಿ ಸುಮಾರು 90 ಎಂ.ಜಿಯಷ್ಟು ಕ್ಯಾಲ್ಶಿಯಂ ದೊರೆಯುತ್ತದೆ. ಇದರಲ್ಲಿ ನಾರಿನಂಶವೂ ಸಾಕಷ್ಟಿದ್ದು, ಜೀರ್ಣಾಂಗಗಳ ಆರೋಗ್ಯವನ್ನು ವೃದ್ಧಿಸುತ್ತದೆ.

Continue Reading

ಕರ್ನಾಟಕ

Davanagere Benne Dose: ದಾವಣಗೆರೆ ಬೆಣ್ಣೆ ದೋಸೆಗೆ ಜಿಐ ಟ್ಯಾಗ್‌ ಕೊಡಲ್ಲ ಎಂದ ಕೇಂದ್ರ; ಯಾಕೆಂದರೆ…

Davanagere Benne Dose: “ದಾವಣಗೆರೆ ಹೊರತುಪಡಿಸಿಯೂ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದನ್ನು ತಯಾರಿಸಿ ಮಾರಾಟ ಮಾಡುವುದರಿಂದ ಇದನ್ನು ಸಾಮಾನ್ಯ ವಸ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ, ಜಿಐ ಟ್ಯಾಗ್‌ ನೀಡಲಾಗುವುದಿಲ್ಲ”ಎಂದು ಕೇಂದ್ರ ಸರಕಾರ ಹೇಳಿದೆ.

VISTARANEWS.COM


on

davanagere benne dose
Koo

ಬೆಂಗಳೂರು: ಬಿಸಿಯಾದ, ಗರಿಗರಿಯಾದ, ಪಕ್ಕದಲ್ಲಿ ಆಲೂ ಪಲ್ಯವನ್ನಿಟ್ಟುಕೊಂಡ, ಮೇಲೊಂದು ಕರಗುತ್ತಿರುವ ಬೆಣ್ಣೆಯ ಮುದ್ದೆ ಇಟ್ಟು ನೀಡುವ ದಾವಣಗೆರೆ ಬೆಣ್ಣೆ ದೋಸೆ (Davanagere Benne Dose) ಅದೆಷ್ಟೋ ವರ್ಷಗಳಿಂದ ಕರ್ನಾಟಕದಾದ್ಯಂತ (Karnataka) ಆಹಾರಪ್ರೇಮಿಗಳನ್ನು ತೃಪ್ತಿಪಡಿಸುತ್ತಿದೆ. ಆದರೆ ಈ ʼದಾವಣಗೆರೆ ಬೆಣ್ಣೆ ದೋಸೆʼ ಎಂಬ ಖಾದ್ಯಕ್ಕೆ ಜಿಐ ಟ್ಯಾಗ್‌ (GI tag) ಅರ್ಥಾತ್‌ ʼಭೌಗೋಳಿಕ ಗುರುತಿನʼ (Geographical Indication) ಟ್ಯಾಗ್‌ ನೀಡಲು ಸಾಧ್ಯವಿಲ್ಲವಂತೆ.

ಹೌದು, ಇದು ಕರ್ನಾಟಕದಾದ್ಯಂತ ಲಭ್ಯವಿದೆ ಎಂಬ ಅಂಶವೇ ಈ ಜನಪ್ರಿಯ ದೋಸೆಗೆ ಭೌಗೋಳಿಕ ಸೂಚಕ (ಜಿಐ) ಟ್ಯಾಗ್ ಪಡೆಯುವ ದಾರಿಯಲ್ಲಿ ಮುಳ್ಳಾಗಿದೆ. ʼದಾವಣಗೆರೆ ಬೆಣ್ಣೆ ದೋಸೆ ಯಾವುದೇ ಒಂದು ಸೀಮಿತ ಪ್ರದೇಶಕ್ಕೆ ನಿರ್ದಿಷ್ಟವಾಗಿಲ್ಲದ ಕಾರಣ GI ಟ್ಯಾಗ್‌ಗೆ ಅರ್ಹತೆ ಪಡೆಯುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ದಾವಣಗೆರೆಯ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ (davanagere MP Prabha Mallikarjun) ಅವರು ಸದನದಲ್ಲಿ ಕೋರಿದ ಪ್ರಶ್ನೆಗೆ ಕೇಂದ್ರ ಸರ್ಕಾರ ಉತ್ತರಿಸಿದ್ದು, ಈ ವಿಷಯ ತಿಳಿಸಿದೆ. ತಮ್ಮ ಜಿಲ್ಲೆಯ ಸುಪ್ರಸಿದ್ಧವಾದ ದೋಸೆಗೆ GI ಟ್ಯಾಗ್ ಒದಗಿಸಿಕೊಡುವ ಕುರಿತು ಪ್ರಭಾ ಪ್ರಶ್ನಿಸಿದ್ದರು.

“ದಾವಣಗೆರೆ ಹೊರತುಪಡಿಸಿಯೂ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದನ್ನು ತಯಾರಿಸಿ ಮಾರಾಟ ಮಾಡುವುದರಿಂದ ಇದನ್ನು ಸಾಮಾನ್ಯ ವಸ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ, ಜಿಐ ಟ್ಯಾಗ್‌ ನೀಡಲಾಗುವುದಿಲ್ಲ. ಜಿಐ ಟ್ಯಾಗ್‌ ಪಡೆಯಲು ನಿರ್ದಿಷ್ಟ ಪ್ರದೇಶವು ವಿಶಿಷ್ಟತೆಯ ಅಂಶವಾಗಿ ಅಪೇಕ್ಷಿತವಾಗಿದೆ. ಇದು ಹಲವಾರು ಸ್ಥಳಗಳಲ್ಲಿ ಉತ್ಪಾದನೆಯಾಗುತ್ತಿರುವ ಕಾರಣ ನಿರ್ದಿಷ್ಟ ಪ್ರದೇಶಕ್ಕೆ ಹೆಚ್ಚು ವಿಶಿಷ್ಟವಾಗಿಲ್ಲ” ಎಂದು ವಾಣಿಜ್ಯ ಮತ್ತು ಕೈಗಾರಿಕೆ ಸಹಕಾರ ಸಚಿವ ಜಿತಿನ್ ಪ್ರಸಾದ ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಉತ್ತರದ ನಂತರ, ಜಿಐ ಟ್ಯಾಗ್‌ಗೆ ನೋಂದಣಿಗೆ ಕನಿಷ್ಠ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ದಾವಣಗೆರೆ ಜಿಲ್ಲಾಧಿಕಾರಿಗೆ ಈಗಾಗಲೇ ನಿರ್ದೇಶನ ನೀಡಿದ್ದೇನೆ ಎಂದು ಪ್ರಭಾ ಅವರು ತಿಳಿಸಿದ್ದಾರೆ.

“ರಸಗುಲ್ಲಾ, ಲೋನಾವಳ ಚಿಕ್ಕಿ ಮತ್ತು ಇತರ ಉತ್ಪನ್ನಗಳಿಗೆ ಈಗಾಗಲೇ ಜಿಐ ಟ್ಯಾಗ್ ಇದೆ. ಇದನ್ನು ಭಾರತದಾದ್ಯಂತ ವ್ಯಾಪಕವಾಗಿ ಉತ್ಪಾದಿಸಲಾಗುತ್ತದೆ ಮತ್ತು ಮಾರಾಟ ಮಾಡಲಾಗುತ್ತದೆ. ಅದೇ ರೀತಿ ದಾವಣಗೆರೆ ಬೆಣ್ಣೆ ದೋಸೆ ಕೂಡ ರಾಜ್ಯಾದ್ಯಂತ ಮಾರಾಟವಾಗುತ್ತಿದೆ. ಈ ಕಾರಣಕ್ಕಾಗಿ ಈ ವಿಶಿಷ್ಟ ಉತ್ಪನ್ನಕ್ಕಾಗಿ ಜಿಐ ಟ್ಯಾಗ್ ಅನ್ನು ಪಡೆದುಕೊಳ್ಳುವುದು ತಪ್ಪಬಾರದು” ಎಂದು ಪ್ರಭಾ ಹೇಳಿದ್ದಾರೆ.

“ದಾವಣಗೆರೆಯ ಯಾವುದೇ ವ್ಯಕ್ತಿ ದೇಶದ ಯಾವುದೇ ಸ್ಥಳಕ್ಕೆ ಹೋದರೆ ಅಲ್ಲಿ ಆತನನ್ನು ಮೊದಲು ಬೆಣ್ಣೆ ದೋಸೆಯ ಬಗ್ಗೆ ಕೇಳಲಾಗುತ್ತದೆ. ಈ ಉತ್ಪನ್ನಕ್ಕೆ ಅಂತಹ ಕ್ರೇಜ್ ಇದೆ. ನಾನು ಸಂಸತ್ತಿಗೆ ಹೋದ ಮೊದಲ ದಿನ, ದೇಶದ ವಿವಿಧ ಭಾಗಗಳಿಂದ ಬಂದ ನನ್ನ ಎಲ್ಲಾ ಸಹೋದ್ಯೋಗಿಗಳು ದಾವಣಗೆರೆ ಬೆಣ್ಣೆ ದೋಸೆಯ ಬಗ್ಗೆ ನನ್ನನ್ನು ಕೇಳಿದರು. ಆಗ, ಜಿಐ ಟ್ಯಾಗ್ ಪಡೆಯುವುದು ಎಷ್ಟು ಮುಖ್ಯ ಎಂದು ನಾನು ಅರಿತುಕೊಂಡೆ” ಎಂದು ಅವರು ಹೇಳಿದರು.

ಬೆಣ್ಣೆ ದೋಸೆಯ ಮೂಲವನ್ನು ನಾಲ್ಕು ಸಹೋದರರಲ್ಲಿ ಕಾಣಲಾಗುತ್ತದೆ. ಕೋಠಿನ್ ಶಾಂತಪ್ಪ, ಮಹದೇವಪ್ಪ, ಶಂಕರಪ್ಪ ಮತ್ತು ಬಸವಂತಪ್ಪ. ಇವರು ಬೆಳಗಾವಿ ಜಿಲ್ಲೆಯ ರಾಮದುರ್ಗದ ಬೀಡ್ಕಿ ಗ್ರಾಮದಿಂದ 1928ರಲ್ಲಿ ದಾವಣಗೆರೆಗೆ ಉದ್ಯೋಗದ ಹುಡುಕಾಟದಲ್ಲಿ ವಲಸೆ ಬಂದವರು. ತಮ್ಮ ತಾಯಿ ಚೆನ್ನಮ್ಮ ಅವರಿಂದ ದೋಸೆ ತಯಾರಿಕೆಯ ಕಲೆಯನ್ನು ಕಲಿತರು. ಇವರ ಅಮ್ಮ ತಮ್ಮ ಮಕ್ಕಳಿಗೆ ರುಚಿಕರವಾದ ರಾಗಿ ದೋಸೆಯನ್ನು ತಯಾರಿಸುತ್ತಿದ್ದರಂತೆ. ಈ ಸೋದರರಿಂದ ಮಸಾಲೆ ಸಹಿತದ ಬೆಣ್ಣೆ ದೋಸೆ ಜನಪ್ರಿಯವಾಯಿತು. ಇವರ ಮೊದಲ ದೋಸೆ ಆರು ಪೈಸೆಗೆ ಮಾರಾಟವಾಯಿತು. ಈಗ ಈ ಅಂಗಡಿಗಳನ್ನು ನಡೆಸುತ್ತಿರುವ ಅವರ ಮಕ್ಕಳು, ಮೊಮ್ಮಕ್ಕಳು ತಯಾರಿಸುತ್ತಿರುವ ದೋಸೆಗೆ 55ರಿಂದ 65 ರೂ. ಬೆಲೆಯಿದೆ.

ಕರ್ನಾಟಕದಲ್ಲಿ ನಂಜನಗೂಡು ರಸಬಾಳೆ, ಚನ್ನಪಟ್ಟಣದ ಮರದ ಗೊಂಬೆಗಳು, ಮೈಸೂರು ಮಲ್ಲಿಗೆ, ಮೈಸೂರು ರೇಷ್ಮೆ, ಬೀದರ್‌ನ ಬಿದರಿ ಕಲೆ, ಇಳಕಲ್‌ ಹಾಗೂ ಮೊಳಕಾಲ್ಮುರು ಸೀರೆಗಳು, ಕೊಡಗಿನ ಕಿತ್ತಳೆ, ಅಪ್ಪೆಮಿಡಿ ಮಾವು, ಧಾರವಾಡ ಪೇಡಾ, ಬಾಬಾಬುಡನ್‌ಗಿರಿಯ ಅರೇಬಿಕಾ ಕಾಫಿ ಮುಂತಾದವು ಜಿಐ ಟ್ಯಾಗ್‌ ಪಡೆದಿವೆ.

ಇದನ್ನೂ ಓದಿ: PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

Continue Reading

ಬೆಂಗಳೂರು

Chemicals in Food: ಹೋಟೆಲ್‌, ಮಾಲ್‌ಗಳಲ್ಲಿ ಆಹಾರದಲ್ಲಿ ಕೆಮಿಕಲ್‌, ಕಲರ್‌ ಬಳಸಿದರೆ ಕ್ರಮ; ತರಕಾರಿ ಮಾರಾಟಗಾರರಿಗೂ ಲೈಸೆನ್ಸ್‌ ಕಡ್ಡಾಯ

Chemicals in Food: ತರಕಾರಿ ಮಾರಾಟಗಾರರಿಗೂ ಲೈಸನ್ಸ್ ಪಡೆಯುವುದು ಕಡ್ಡಾಯವಾಗಲಿದೆ. ಎಲ್ಲಾ ತರಕಾರಿ ವ್ಯಾಪಾರಿಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಲೈಸೆನ್ಸ್ ಪಡೆಯಬೇಕು. ತರಕಾರಿಗಳ ಸ್ಯಾಂಪಲ್‌ಗಳನ್ನು ಅಗತ್ಯ ಬಿದ್ದರೆ ಪರೀಕ್ಷೆ ನಡೆಸಬೇಕು.

VISTARANEWS.COM


on

chemicals in food
Koo

ಬೆಂಗಳೂರು: ರಾಜಧಾನಿಯ (Bangalore) ಹೋಟೆಲ್ (Hotels) ಹಾಗೂ ಮಾಲ್‌ಗಳಲ್ಲಿ (Mall) ನೀಡಲಾಗುವ ಆಹಾರದಲ್ಲಿ ಕೃತಕ ಕಲರ್‌ (Added colour) ಹಾಗೂ ಕೆಮಿಕಲ್ (Chemicals in Food) ಬಳಕೆ ಮಾಡದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಹಾಗೂ ಆರೋಗ್ಯ ಸಚಿವರು (Health minister) ಎಚ್ಚರಿಕೆ ನೀಡಿದ್ದಾರೆ.

ಮಾಲ್‌ಗಳು ಹಾಗೂ ಹೋಟೆಲ್ ಮಾಲೀಕರ ಜೊತೆಗೆ ಸಭೆ ನಡೆಸಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ಈ ಕುರಿತು ಸೂಚನೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರತಿ ಆಹಾರದಲ್ಲೂ ಕಲರ್ ಬಳಕೆ, ರಾಸಾಯನಿಕ ಬಳಕೆ ಮಾಡಲಾಗುತ್ತಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತನಿಖೆ ಮಾಡಿದಾಗ ಮಾಲ್‌ಗಳಲ್ಲಿನ ಫುಡ್ ಕಳಪೆ ಎಂದು ಪತ್ತೆಯಾಗಿದೆ. ಇದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಎಲ್ಲರೂ ಆಹಾರದಲ್ಲಿ ಶುಚಿತ್ವ ಕಾಪಾಡುವಂತೆ ಹಾಗೂ ಕಲರ್ ಮುಕ್ತ ಆಹಾರ ನೀಡುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.

ಇದರ ಜೊತೆಗೆ ತರಕಾರಿ ಮಾರಾಟಗಾರರಿಗೂ ಲೈಸನ್ಸ್ ಪಡೆಯುವುದು ಕಡ್ಡಾಯವಾಗಲಿದೆ. ಎಲ್ಲಾ ತರಕಾರಿ ವ್ಯಾಪಾರಿಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಲೈಸೆನ್ಸ್ ಪಡೆಯಬೇಕು. ತರಕಾರಿಗಳ ಸ್ಯಾಂಪಲ್‌ಗಳನ್ನು ಅಗತ್ಯ ಬಿದ್ದರೆ ಪರೀಕ್ಷೆ ನಡೆಸಬೇಕು. ತರಕಾರಿ- ಹಣ್ಣು ಮಾರುವಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ಕೆಲವು ಕಡೆಗಳಲ್ಲಿ ಸಾವಯವ ತರಕಾರಿ ಮಾರುತ್ತೇವೆ ಎಂದು ಹೆಚ್ಚಿನ ದರದಲ್ಲಿ ಕಳಪೆ ತರಕಾರಿ ಹಣ್ಣುಗಳನ್ನು ಮಾರುತ್ತಿರುವುದು ಕಂಡುಬರುತ್ತಿದೆ. ಇದರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

UGCET 2024: ಇಂದು ಮಧ್ಯಾಹ್ನ 2 ಗಂಟೆಗೆ ಸಿಇಟಿ ಅಣಕು ಸೀಟು ಹಂಚಿಕೆ ಪ್ರಕಟ ಸಾಧ್ಯತೆ

ಬೆಂಗಳೂರು: ಇಂಜಿನಿಯರಿಂಗ್ (Engineering) ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ (UGCET 2024) ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಿರುವ ಸಿಇಟಿ ರ‍್ಯಾಂಕಿಂಗ್ (CET Ranking) ಅಭ್ಯರ್ಥಿಗಳಿಗೆ ಇಂದು (August 7) ಮಧ್ಯಾಹ್ನ 2 ಗಂಟೆಗೆ ಅಣಕು ಸೀಟು ಹಂಚಿಕೆ (Mock Seat Sharing) ಸಾಧ್ಯತೆ ಇದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಕುರಿತು ಅಪ್‌ಡೇಟ್‌ ನೀಡಲಿದೆ.

ಅಭ್ಯರ್ಥಿಗಳಿಗೆ ತಮ್ಮ ಆಪ್ಷನ್ ದಾಖಲಿಸಲು ಆಗಸ್ಟ್ 4 ಕೊನೆಯ ದಿನವಾಗಿತ್ತು. ಇಂಜಿನಿಯರಿಂಗ್, ಯೋಗ, ನ್ಯಾಚುರೋಪಥಿ, ಪಶುವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜ್‌ಗಳ ಆಯ್ಕೆ ಆಪ್ಷನ್‌ ಮೂಲಕ ನಡೆದಿದೆ. ಇಂದು ಅಣಕು ಸೀಟು ಹಂಚಿಕೆ ಬಳಿಕ ನೈಜ ಸೀಟು ಹಂಚಿಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಲಾಗಿತ್ತು. ಜು.30ರಂದು ಕೊನೆಯಾಗಲಿದ್ದ ಅದನ್ನು ಅಭ್ಯರ್ಥಿಗಳ ಮನವಿ ಮೇರೆಗೆ ಮತ್ತೂ ವಿಸ್ತರಿಸಲಾಗಿತ್ತು. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿತ್ತು. ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

ಇದನ್ನೂ ಓದಿ: B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌

Continue Reading
Advertisement
Independence Day 2024
ದೇಶ3 mins ago

Independence Day 2024: 2036ರಲ್ಲಿ ಭಾರತದಲ್ಲೇ ಒಲಿಂಪಿಕ್ಸ್ ಕ್ರೀಡಾಕೂಟ? ಪ್ರಧಾನಿ ಮೋದಿ ಮಹತ್ವದ ಘೋಷಣೆ

Self Harming
ಹಾಸನ5 mins ago

Self Harming : ಮಗಳೊಂದಿಗೆ ಹೇಮಾವತಿ ನಾಲೆಗೆ ಹಾರಿ ದಂಪತಿ ಆತ್ಮಹತ್ಯೆ

Gold Rate Today
ಚಿನ್ನದ ದರ19 mins ago

Gold Rate Today: ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತವಿಲ್ಲ; ಇಂದಿನ ದರ ಇಷ್ಟಿದೆ

jyothi poorvaaj jyothi rai says she blocked 1 thousand accounts
ಸ್ಯಾಂಡಲ್ ವುಡ್33 mins ago

Jyothi Rai: ಕೆಟ್ಟ ಮೆಸೇಜ್‌ ಮಾಡಿದ 1 ಸಾವಿರ ಅಕೌಂಟ್‌ಅನ್ನು ಬ್ಲಾಕ್‌ ಮಾಡಿದ ಜ್ಯೋತಿ ರೈ!

bike wheeling
ಬೆಂಗಳೂರು ಗ್ರಾಮಾಂತರ37 mins ago

Bike Wheeling: ಸ್ವಾತಂತ್ರ್ಯ ದಿನಾಚರಣೆ ಹೆಸರಲ್ಲಿ ಹೈವೇಯಲ್ಲಿ ಡೆಡ್ಲಿ ವ್ಹೀಲಿಂಗ್‌!

Independence Day 2024
ಕರ್ನಾಟಕ44 mins ago

Independence Day 2024: ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ತಾರತಮ್ಯ: ಸಿದ್ದರಾಮಯ್ಯ ಗಂಭೀರ ಆರೋಪ

Independence Day 2024
ಕರ್ನಾಟಕ1 hour ago

Independence Day 2024: ಎಸ್‌ಸಿ, ಎಸ್‌ಟಿ ಸಮುದಾಯದ ಅಭಿವೃದ್ಧಿಗೆ ರಾಜ್ಯ ಬದ್ಧ; ಸಿದ್ದರಾಮಯ್ಯ

Laughing Buddha Trailer out Pramod Shetty Diganth Rishab Shetty
ಸ್ಯಾಂಡಲ್ ವುಡ್2 hours ago

Pramod Shetty: ‘ಲಾಫಿಂಗ್ ಬುದ್ಧ’ ಟ್ರೈಲರ್‌ ಔಟ್‌; ಕಚಗುಳಿ ಇಡುವಂತಿದೆ ಪೊಲೀಸಪ್ಪನ ಕತೆ!

Independence Day 2024
ಕರ್ನಾಟಕ2 hours ago

ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದ ಗ್ಯಾರಂಟಿ ಯೋಜನೆ ಮುಂದುವರಿಯಲಿದೆ; ಧ್ವಜಾರೋಹಣ ನೆರವೇರಿಸಿ ಸಿಎಂ ಸಿದ್ದರಾಮಯ್ಯ

Independence Day 2024
ದೇಶ2 hours ago

Independence Day 2024: ಜಾತ್ಯಾತೀತ ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ7 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ7 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ7 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌