Festive diet | ಹಬ್ಬದ ನಂತರ ಹೊಟ್ಟೆಯ ಮೇಲೆ ನಿಗಾ ಇಡಲು ಇವನ್ನು ತಿನ್ನಿ! - Vistara News

ಆಹಾರ/ಅಡುಗೆ

Festive diet | ಹಬ್ಬದ ನಂತರ ಹೊಟ್ಟೆಯ ಮೇಲೆ ನಿಗಾ ಇಡಲು ಇವನ್ನು ತಿನ್ನಿ!

ಹಬ್ಬ ಎಂದು ಯದ್ವಾತದ್ವಾ ಹೊಟ್ಟೆಗೆ ಸಿಹಿ, ಕುರುಕಲು ಹಾಕಿದ ಪರಿಣಾಮದಿಂದಾಗಿ ಹೊಟ್ಟೆ ಕೆಟ್ಟಿರುತ್ತದೆ. ಹಾಗಾದರೆ, ಈ ಹೊಟ್ಟೆಯನ್ನು ಮರಳಿ ಯಥಾಸ್ಥಿತಿಗೆ ತರಬೇಕಲ್ಲಾ ಎನಿಸಿದರೆ ಈ ಆಹಾರಗಳನ್ನು ದಿನನಿತ್ಯದ ಬಳಕೆಯಲ್ಲಿ ಸೇರಿಸಿ.

VISTARANEWS.COM


on

hydrating diet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವರಾತ್ರಿ, ದೀಪಾವಳಿ ಎಂದು ಸಾಲು ಸಾಲು ಹಬ್ಬಗಳು ಬಂದರೆ ಬಹಳಷ್ಟು ಮಂದಿಯ ಡಯಟ್‌ ಧ್ಯಾನವೆಲ್ಲ ಭಂಗವಾಗುವುದು ನಿಜವೇ. ಮನೆಯಲ್ಲೇ ಹಬ್ಬದ ಸಂಭ್ರಮದಲ್ಲಿ ಮಾಡುವ ಸಿಹಿತಿಂಡಿಗಳು, ಬಹಳ ಅಪರೂಪಕ್ಕೆ ವರ್ಷದಲ್ಲೊಮ್ಮೆ ಮಾಡಿ ಸಂಭ್ರಮಿಸುವ ಕರಿದ ತಿಂಡಿಗಳು, ನೆಂಟರಿಷ್ಟರು, ಬಂಧುಬಳಗ ಎಂದೆಲ್ಲ ಮನೆಗೆ ಬಂದವರು ಕೊಟ್ಟ ಸಿಹಿತಿಂಡಿಗಳು ಹೀಗೆ ಹೊಟ್ಟೆ ಸೇರಿದ ತಿನಿಸುಗಳಿಗೆ ಲೆಕ್ಕ ಇಡುವವರಾರು! ವರ್ಷದಲ್ಲೊಮ್ಮೆ ತಾನೇ ಎಂದು ತಿನ್ನುವುದು ನಿಜವೇ ಆಗಿದ್ದರೂ, ಯದ್ವಾತದ್ವಾ ಹೊಟ್ಟೆಗೆ ಸಿಹಿ, ಕುರುಕಲು ಹಾಕಿದ ಪರಿಣಾಮದಿಂದಾಗಿ ಹೊಟ್ಟೆ ಕೆಟ್ಟಿರುತ್ತದೆ. ತೀರಾ ಕೆಡದೇ ಇದ್ದರೂ ಉಬ್ಬರಿಸಿದಂಥ ಅನುಭವವಂತೂ ಬಹುತೇಕ ಎಲ್ಲರದ್ದು. ಹಾಗಾದರೆ, ಈ ಹೊಟ್ಟೆಯನ್ನು ಮರಳಿ ಯಥಾಸ್ಥಿತಿಗೆ ತರಬೇಕಲ್ಲಾ ಎನಿಸಿದರೆ ಈ ಕೆಳಗಿನ ಆಹಾರಗಳನ್ನು ದಿನನಿತ್ಯದ ಬಳಕೆಯಲ್ಲಿ ಸೇರಿಸಿ. ಆರೋಗ್ಯ ಯಥಾಸ್ಥಿತಿಗೆ ಮರಳುತ್ತದೆ.

೧. ಶುಂಠಿ: ಹೊಟ್ಟೆ ಸಂಬಂಧೀ ತೊಂದರೆಗಳಿಗೆ ಶುಂಠಿಯನ್ನು ಅನಾದಿಕಾಲದಿಂದಲೂ ಮನೆಮನೆಗಳಲ್ಲೂ ಬಳಸಿರುವಂಥದ್ದೇ. ಹೊಟ್ಟೆ ಕೆಟ್ಟಾಗ, ಹೊಟ್ಟೆಯಲ್ಲಿ ಜೀರ್ಣ ಸಂಬಂಧೀ ತೊಂದರೆಗಳು ಕಾಡಿದಾಗ ಶುಂಠಿ ಉಪಯೋಗಕ್ಕೆ ಬರುತ್ತದೆ. ಉಬ್ಬರಿಸಿದ ಹೊಟ್ಟೆಯ ಸಮಸ್ಯೆಯಿದ್ದರೆ, ಶುಂಠಿ ತಂಬುಳಿ ಮಾಡಿ ಉಣ್ಣಬಹುದು. ಒಂದಿಷ್ಟು ಕಾಯಿತುರಿ, ಒಂದು ತುಂಡು ಶುಂಠಿ ಹಾಗೂ ಮಜ್ಜಿಗೆ, ರುಚಿಗೆ ತಕ್ಕಷ್ಟು ಉಪ್ಪು ಇವನ್ನು ಸೇರಿಸಿ ರುಬ್ಬಿ ಅನ್ನದ ಜೊತೆಗೆ ಕಲಸಿ ಉಣ್ಣುವ ಮೂಲಕ ಹೊಟ್ಟೆ ಹಗುರಾಗಿಸಬಹುದು. ಅಥವಾ ಶುಂಠಿ ಟೀ ಮಾಡಿ ಸ್ವಲ್ಪ ನಿಂಬೆರಸ ಸೇರಿಸಿ ಕುಡಿಯುವ ಮೂಲಕ ಜೀರ್ಣಕ್ರಿಯೆಯನ್ನು ಚುರುಕುಗೊಳಿಸಬಹುದು.

೨. ಬೀಟ್‌ರೂಟ್‌: ಹಬ್ಬದ ಸಂದರ್ಭ ಮೂರ್ನಾಲ್ಕು ದಿನ ಸಿಕ್ಕಾಪಟ್ಟೆ ತಿಂದಿದ್ದೇನೆ, ಇನ್ನು ಸ್ವಲ್ಪ ಆಹಾರದ ಬಗ್ಗೆ ಹತೋಟಿ ಬೇಕು ಅನಿಸುತ್ತಿದ್ದರೆ, ಹಬ್ಬದ ನಂತರ ಬೀಟ್‌ರೂಟ್‌ ಅಡುಗೆ ಮಾಡಬಹುದು. ಇದರಲ್ಲಿ ಪೊಟಾಶಿಯಂ ಅಂಶ ಹೆಚ್ಚಿರುವುದರಿಂದ ಇದು, ದೇಹದಲ್ಲಿ ಉಪ್ಪಿನ ಅಂಶವನ್ನು ಸಮತೋಲನಕ್ಕೆ ತರುವುದಲ್ಲದೆ, ಹೊಟ್ಟೆ ಉಬ್ಬರಿಸಿದಂತಾಗುವುದನ್ನೂ ನಿಯಂತ್ರಣಕ್ಕೆ ತರುತ್ತದೆ.

೩. ಬಾಳೆಹಣ್ಣು: ಬಾಳೆಹಣ್ಣು ಪೊಟಾಶಿಯಂನ ಇನ್ನೊಂದು ಮೂಲ. ಇದೂ ಕೂಡಾ ಬೀಟ್‌ರೂಟ್‌ನಂತೆಯೇ ದೇಹದಲ್ಲಿ ಹೆಚ್ಚಿರುವ ಉಪ್ಪಿನಂಶವನ್ನು ಹೊರಗೆ ಕಳಿಸಿ, ದೇಹದಲ್ಲಿ ನೀರಿನಂಶವನ್ನು ಸಮತೋಲನಕ್ಕೆ ತರುತ್ತದೆ. ಹೊಟ್ಟೆಯುಬ್ಬರದಂತ ಸಮಸ್ಯೆ ಬಂದಾಗ ಪೊಟಾಶಿಯಂ ಅಧಿಕವಿರುವ ಆಹಾರ ಒಳ್ಳೆಯದು.

೪. ಮೊಸರು: ಮೊಸರು ಹಾಗೂ ಮಜ್ಜಿಗೆಯಂತಹ ಪ್ರೊಬಯಾಟಿಕ್‌ ಆಹಾರ ಕೂಡಾ ಇಂತಹ ಸಂದರ್ಭ ಒಳ್ಳೆಯದೇ. ಕರುಳಿನ ಆರೋಗ್ಯ ಕಾಪಾಡುವಲ್ಲಿ ಇವುಗಳ ಪಾತ್ರ ದೊಡ್ಡದು. ಹೊಟ್ಟೆಯನ್ನು ತಂಪಾಗಿರಿಸಲು ಇವು ಸಹಕಾರ ನೀಡುವುದಲ್ಲದೆ, ಹೊಟ್ಟೆಯುಬ್ಬರವನ್ನೂ ಶಮನಗೊಳಿಸುವ ತಾಕತ್ತು ಇವಕ್ಕಿದೆ.

ಇದನ್ನೂ ಓದಿ | Diabetes Diet | ಮಧುಮೇಹ ನಿಯಂತ್ರಣಕ್ಕೆ ಇದೊಂದು ಸೂತ್ರ ನೆನಪಿಟ್ಟುಕೊಳ್ಳಿ

೫. ಬಸಳೆ: ಬಸಳೆಯಲ್ಲಿರುವ ಜೀವಸತ್ವಗಳು ಹಾಗೂ ನಾರಿನಂಶ, ಹಬ್ಬದ ನಂತರದ ಎಲ್ಲ ಪರಿಣಾಮಗಳಿಗೂ ರಾಮಬಾಣವಾಗುವ ತಾಕತ್ತು ಇದಕ್ಕಿದೆ. ಹೊಟ್ಟೆಯುಬ್ಬರವನ್ನು ತಗ್ಗಿಸುವುದಲ್ಲದೆ, ನಾರಿನಂಶ, ದೇಹದಲ್ಲಿ ಎಲ್ಲವನ್ನೂ ಕರಗಿಸಿ, ಬೇಡದ ಕಶ್ಮಲವನ್ನು ಸುಲಭವಾಗಿ ಹೊರಗೆ ಕಳಿಸಿ ಹೊಟ್ಟೆಯನ್ನು ಶುಚಿಗೊಳಿಸುತ್ತದೆ. ಆರಾಮದಾಯಕ ಅನುಭವ ನೀಡುತ್ತದೆ.

೬. ನಿಂಬೆಹಣ್ಣು: ಅಜೀರ್ಣದಂತಹ ತೊಂದರೆಯಾಗಿದ್ದರೆ, ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ದೇಹಕ್ಕೆ ಬೇಕಾದ ನೀರಿನಂಶವನ್ನು ಪೂರೈಕೆ ಮಾಡಿ, ಆಸಿಡ್‌ ಅಂಶವನ್ನೂ ನೀಡಿ ಬೇಗ ಕರಗಿಸುವಿಕೆಯಲ್ಲಿ ಸಹಾಯ ಮಾಡುತ್ತದೆ.

೭. ಗ್ರೀನ್‌ ಟೀ: ಗ್ರೀ ಟೀ ಸೇವನೆ ಇಂತಹ ಸಂದರ್ಭದಲ್ಲಿ ಮಾತ್ರವಲ್ಲ, ಪ್ರತಿನಿತ್ಯವೂ ಒಳ್ಳೆಯದೇ. ಆದರೆ ಇಂತಹ ಸಮಯದಲ್ಲಿ ಇವುಗಳ ಪಾತ್ರ ದೊಡ್ಡದು. ಇದರಲ್ಲಿರುವ ಶಮನಕಾರೀ ಗುಣಗಳು ಹಾಗೂ ಕೆಫಿನ್‌ ಅಂಶ ಹೊಟ್ಟೆಯುಬ್ಬರವನ್ನು ತಗ್ಗಿಸುತ್ತವೆ.

೮. ಸೌತೆಕಾಯಿ: ನೀರಿನಿಂದ ಕೂಡಿರುವ ಸೌತೆಕಾಯಿ ದೇಹದಲ್ಲಿ ನೀರಿನ ಪ್ರಮಾಣವನ್ನು ಸಮತೋಲನಕ್ಕೆ ತರುವ ಮೂಲಕ ಅಜೀರ್ಣ ಹಾಗೂ ಹೊಟ್ಟೆಯುಬ್ಬರವನ್ನು ನಿಯಂತ್ರಿಸುತ್ತದೆ. ಜೀರ್ಣಕ್ರಿಯೆಯನ್ನು ಸುಲಭವಾಗಿಸುತ್ತದೆ ಹಾಗೂ ತೂಕ ನಿಯಂತ್ರಣದಲ್ಲೂ ಪಾತ್ರ ವಹಿಸುತ್ತದೆ.

ಇದನ್ನೂ ಓದಿ | Festive diet | ಹಬ್ಬದ ಸವಿ: ಯಾವುದು ಬೇಕು, ಎಷ್ಟು ಸಾಕು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading

ಆಹಾರ/ಅಡುಗೆ

Eating Bread: ನಿತ್ಯವೂ ಬ್ರೆಡ್‌ ತಿನ್ನುತ್ತೀರಾ? ಹಾಗಿದ್ದರೆ ಖರೀದಿಸುವ ಮುನ್ನ ಇವಿಷ್ಟು ತಿಳಿದಿರಲಿ

ಹೆಚ್ಚು ತಲೆಬಿಸಿಯಿಲ್ಲದೆ, ಬಹುಬೇಗನೆ ಉಪಾಹಾರವೆಂಬ ಕೆಲಸವನ್ನು ಮುಗಿಸಿಕೊಂಡು ಆಫೀಸ್‌ ಹೊರಡಲು, ಮಕ್ಕಳಿಗೆ ಟಿಫನ್‌ ಕಟ್ಟಿಕೊಡಲು ಬ್ರೆಡ್‌ ಸರಳವಾಗಿ ದಕ್ಕುವ ಆಹಾರಗಳಲ್ಲಿ ಒಂದು. ಬಹುತೇಕರಿಗೆ ಇದು ನಿತ್ಯಾಹಾರವೂ ಹೌದು. ಆದರೆ, ಸಂಸ್ಕರಿಸಿದ ಆಹಾರವಾದ ಬ್ರೆಡ್‌ ನಿಜಕ್ಕೂ ಆರೋಗ್ಯಕರವೇ ಎಂಬ ಪ್ರಶ್ನೆಗೆ ಇಂದು ಎಲ್ಲರಿಗೂ ಉತ್ತರ ಗೊತ್ತೇ ಇದ್ದರೂ, ಬ್ರೆಡ್‌ ತಿನ್ನದೆ ಇರಲು ಸಾಧ್ಯವಿಲ್ಲ ಎಂಬ ಉತ್ತರವೂ ಸಿದ್ಧವಾಗಿರುತ್ತದೆ. ಈ ಬಗ್ಗೆ (Eating Bread) ಇಲ್ಲಿದೆ ಮಾಹಿತಿ.

VISTARANEWS.COM


on

Eating Bread
Koo

ಪಾಶ್ಚಾತ್ಯ ಬೆಳಗಿನ ಉಪಾಹಾರದ ಶೈಲಿ ಇದಾದರೂ, ಭಾರತೀಯ ಮನೆಗಳಲ್ಲೂ ಇಂದು ಬ್ರೆಡ್‌ ಸಾಮಾನ್ಯವಾಗಿದೆ. ಗಡಿಬಿಡಿಯಲ್ಲಿ ಆಫೀಸ್‌ ಹೊರಡುವಾಗ, ಅಡುಗೆ ಮಾಡಿಕೊಳ್ಳಲು ಸಮಯವಿಲ್ಲದಿರುವಾಗ, ಹೊಟ್ಟೆಗೇನೂ ರುಚಿಸದೆ ಇದ್ದಾಗ, ಮಕ್ಕಳಿಗೆ ರುಚಿರುಚಿಯಾದ ಸ್ಯಾಂಡ್‌ವಿಚ್‌ ಮಾಡಿಕೊಡಲು, ಹೀಗೆ ಬ್ರೆಡ್‌ ತಿನ್ನಲು ನಮಗೆ ನಾನಾ ಕಾರಣಗಳು. ಹೆಚ್ಚು ತಲೆಬಿಸಿಯಿಲ್ಲದೆ, ಬಹುಬೇಗನೆ ಉಪಹಾರವೆಂಬ ಕೆಲಸವನ್ನು ಮುಗಿಸಿಕೊಂಡು ಆಫೀಸ್‌ ಹೊರಡಲು, ಮಕ್ಕಳಿಗೆ ಟಿಫನ್‌ ಕಟ್ಟಿಕೊಡಲು ಬ್ರೆಡ್‌ ಸರಳವಾಗಿ ದಕ್ಕುವ ಆಹಾರಗಳಲ್ಲಿ ಒಂದು. ಬಹುತೇಕರಿಗೆ ಇದು ನಿತ್ಯಾಹಾರವೂ ಹೌದು. ಆದರೆ, ಸಂಸ್ಕರಿಸಿದ ಆಹಾರವಾದ ಬ್ರೆಡ್‌ ನಿಜಕ್ಕೂ ಆರೋಗ್ಯಕರವೇ ಎಂಬ ಪ್ರಶ್ನೆಗೆ ಇಂದು ಎಲ್ಲರಿಗೂ ಉತ್ತರ ಗೊತ್ತೇ ಇದ್ದರೂ, ಬ್ರೆಡ್‌ ತಿನ್ನದೆ ಇರಲು ಸಾಧ್ಯವಿಲ್ಲ ಎಂಬ ಉತ್ತರವೂ ಸಿದ್ಧವಾಗಿರುತ್ತದೆ. ಹಾಗಾದರೆ, ನಾವು ನಿತ್ಯವೂ ಬಳಸುವ ಬ್ರೆಡ್‌ನ ಬಗ್ಗೆ, ಅದರಲ್ಲಿ ಬಳಸಲಾದ ವಸ್ತುಗಳ ಬಗ್ಗೆ ನಾವು ಸ್ವಲ್ಪ ಹೆಚ್ಚು ಜಾಗೃತರಾಗಿದ್ದರೆ ನಮ್ಮ ಹೊಟ್ಟೆ ಸೇರಿದ ಬ್ರೆಡ್‌ನ ಗುಣಮಟ್ಟ ನಮಗೆ ತಿಳಿಯುತ್ತದೆ. ಹಾಗಾದರೆ ಬನ್ನಿ, ನೀವು ಬ್ರೆಡ್‌ ಖರೀದಿಸುವ ಮುನ್ನ ಯಾವೆಲ್ಲ ಅಂಶಗಳನ್ನು ಗಮನಿಸಬೇಕು (Eating Bread) ಎಂಬುದನ್ನು ನೋಡೋಣ.

Bread Foods You Should Never Refrigerate

ಬ್ರೆಡ್‌ ಕೊಳ್ಳುವಾಗ ಗಮನಿಸಿ

ಬ್ರೆಡ್‌ ಮಾಡುವ ಸಂದರ್ಭ ಸಕ್ಕರೆ ಹಾಕಿಯೇ ಇರುತ್ತಾರೆ ಎಂಬ ಸತ್ಯ ಈಗ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿದೆ ನಿಜ. ಯಾಕೆಂದರೆ ಬ್ರೆಡ್‌ಗಾಗಿ ಬಳಸುವ ಈಸ್ಟ್‌ ಅನ್ನು ಆಕ್ಟಿವೇಟ್‌ ಮಾಡಲು ಸಕ್ಕರೆ ಬೇಕೇ ಬೇಕು. ಹಾಗಾಗಿ ನೀವು ಯಾವಾಗಲೂ ಬ್ರೆಡ್‌ ಖರೀದಿಸುವ ಮೊದಲು ಕೆಲವು ಅಂಶಗಳನ್ನು ನೆನಪಿಟ್ಟುಕೊಳ್ಳಲೇಬೇಕು. ಬ್ರೆಡ್‌ನ ಹಿಂಬದಿಯಲ್ಲಿ ಬರೆದ ಪಟ್ಟಿಯಲ್ಲಿ ಸಕ್ಕರೆ ಎಷ್ಟು ಬಳಸಿದ್ದಾರೆಂದು ಪರೀಕ್ಷಿಸಿ. ಒಂದಲ್ಲ ಒಂದು ವಿಧದಲ್ಲಿ ಕೆಲವೊಮ್ಮೆ ಬೇರೆ ಮೂಲಗಳ ಮೂಲಕವೂ ಸೇರಿಸಲ್ಪಟ್ಟಿರುತ್ತದೆ. ಕೇವಲ ಸಕ್ಕರೆಯಷ್ಟೇ ಅಲ್ಲ, ಎಲ್ಲ ಮೂಲಗಳ ಮೂಲಕ ಸಕ್ಕರೆ ಎಷ್ಟು ಸೇರಿದೆ ಎಂಬುದನ್ನು ಪರೀಕ್ಷಿಸಿಕೊಳ್ಳಿ. ಸಾಮಾನ್ಯವಾಗಿ ಫ್ಯಾಕ್ಟರಿಗಳಲ್ಲಿ ಮಾಡುವ ಬ್ರೆಡ್‌ನಲ್ಲಿ ಹೆಚ್ಚು ಸಕ್ಕರೆ ಇರುತ್ತದೆ. ಅಲ್ಲದೆ, ಕಬ್ಬಿನ ಹಾಲು, ಜೇನುತುಪ್ಪ ಅಥವಾ ಇನ್ನಾವುದೇ ಮೂಲಗಳ ಮೂಲಕವೂ ಸಕ್ಕರೆ ಸೇರಿರಬಹುದು.

ಉಪ್ಪಿನ ಪ್ರಮಾಣ ಎಷ್ಟಿದೆ ನೋಡಿ

ಬ್ರೆಡ್‌ ಮಾಡುವ ಸಂದರ್ಭ ಅದಕ್ಕಾಗಿ ಬಳಸಿದ ಸಕ್ಕರೆಯಂತೆ ಉಪ್ಪಿನ ಪ್ರಮಾಣವೂ ಗಮನದಲ್ಲಿರಲಿ. ಬ್ರೆಡ್‌ ಮಾಡಲು ಬಳಸಿದ ವಸ್ತುಗಳ ಪಟ್ಟಿಯಲ್ಲಿ ಉಪ್ಪು ಎಷ್ಟು ಸೇರಿಸಲಾಗಿದೆ ಎಂದು ಪರೀಕ್ಷಿಸಿಕೊಳ್ಳಿ. ಬಹಳಷ್ಟು ಸಾರಿ ರುಚಿಯನ್ನು ಹೆಚ್ಚಿಸಲು, ಅಗತ್ಯಕ್ಕಿಂತಲೂ ಹೆಚ್ಚು ಉಪ್ಪನ್ನು ಫ್ಯಾಕ್ಟರಿಗಳು ಬಳಸುತ್ತವೆ. ಒಂದು ಅಂದಾಜಿನ ಪ್ರಕಾರ ಸಂಶೋಧನೆಯೊಂದು ಹೇಳಿದಂತೆ ಒಂದು ಬ್ರೆಡ್‌ ಸ್ಲೈಸ್‌ನಲ್ಲಿ 100ರಿಂದ 200 ಎಂಜಿ ಸೋಡಿಯಂಗಿಂತ ಹೆಚ್ಚಿರಬಾರದು. ಹಾಗಾಗಿ ಇದನ್ನು ಪರೀಕ್ಷೆ ಮಾಡಿಕೊಂಡೇ ಖರೀದಿಸಿ.

ಯಾವ ಪದಾರ್ಥ ಬಳಸಿದ್ದಾರೆ ನೋಡಿ

ಉಪ್ಪು ಹಾಗೂ ಸಕ್ಕರೆಯಷ್ಟೇ ಅಲ್ಲ, ನೀವು ಖರೀದಿಸಿದ ಬ್ರೆಡ್‌ನಲ್ಲಿ ಯಾವೆಲ್ಲ ಪದಾರ್ಥಗಳನ್ನು ಬಳಸಲಾಗಿದೆ ಎಂದು ನೋಡಿ. ಬಿಳಿಯಾದ ಮೈದಾದ ಬ್ರೆಡ್‌ನ ಬದಲು ಗೋಧಿಯ ಬ್ರೆಡ್‌ ಬಳಸಿ. ಬಹಳಷ್ಟು ಸಾರಿ ಗೋಧಿಯ ಬ್ರೆಡ್‌ನಲ್ಲೂ ಕಡಿಮೆ ಪ್ರಮಾಣದಲ್ಲಿ ಗೋಧಿ ಬಳಕೆಯಾಗಿರುತ್ತದೆ ಎಂಬ ಸತ್ಯವೂ ನಿಮಗೆ ಗೊತ್ತಿರಲಿ. ಹೀಗಾ ಗಿ ಶೇ.100ರಷ್ಟು ಗೋಧಿ ಅಥವಾ ಹೋಲ್‌ ವೀಟ್‌ ಬ್ರೆಡ್‌ ಎಂದು ಬರೆದಿರುವ ಬ್ರೆಡ್‌ ಖರೀದಿಸಿ. ಅಥವಾ ಮಲ್ಟಿಗ್ರೈನ್‌ ಬ್ರೆಡ್‌ ಖರೀದಿಸಿ.

Image Of Bread Health Benefits

ತಯಾರಿ ದಿನ ಗಮನಿಸಿ

ಬ್ರೆಡ್‌ ಖರೀದಿಸುವಾಗ ಎಲ್ಲಕ್ಕಿಂತ ಮೊದಲು ಪರೀಕ್ಷಿಸಬೇಕಾದ್ದು ಅದನ್ನು ತಯಾರಿಸಿದ ದಿನಾಂಕ ಹಾಗೂ ಎಷ್ಟು ದಿನ ಬಳಸಬಹುದೆಂಬ ದಿನಾಂಕ. ದಿನಾಂಕ ಮುಗಿದುಹೋದ ಬ್ರೆಡ್‌ನನ್ನು ಬಳಸಲೇಬೇಡಿ. ಹಾಳಾಗಿರದಂತೆ ಕಂಡರೂ ಬಳಸಬೇಡಿ. ಆದಷ್ಟೂ ತಾಜಾ ಬ್ರೆಡ್ಡನ್ನೇ ಖರೀದಿಸಿ. ಕೆಲವೊಮ್ಮೆ ಅಂಗಡಿಗಳಲ್ಲಿ ಇಟ್ಟಿರುವ ಬ್ರೆಡ್‌ ಅನ್ನು ಇಲಿಯೋ, ಕೀಟವೋ ಕಡಿದು ಸಣ್ಣ ತೂತುಗಳೂ ಆಗಿರುತ್ತವೆ. ಗಡಿಬಿಡಿಯಲ್ಲಿ ಖರೀದಿಸುವಾಗ ಇವು ಕಾಣುವುದಿಲ್ಲ. ಹೀಗಾಗಿ, ಬ್ರೆಡ್‌ನ ಪ್ಯಾಕ್‌ಗೆ ಯಾವುದೇ ಹಾನಿಯಾಗಿಲ್ಲ ಎಂಬುದನ್ನು ಖರೀದಿಸುವಾಗಲೇ ಖಚಿತಪಡಿಸಿಕೊಳ್ಳಿ.

ಕೃತಕ ಪ್ರಿಸರ್ವೇಟಿವ್‌ ಗಮನಿಸಿ

ಬ್ರೆಡ್‌ನಲ್ಲಿ ಬಳಸಲಾದ ಕೃತಕ ಪ್ರಿಸರ್ವೇಟಿವ್‌ಗಳನ್ನು ಗಮನಿಸಿ. ಆದಷ್ಟೂ ತಾಜಾ ಬ್ರೆಡ್ಡನ್ನೇ ಖರೀದಿಸಿ. ಹೆಚ್ಚು ದಿನ ಉಳಿಯಬಲ್ಲ ಬ್ರೆಡ್‌ಗಳಲ್ಲಿ ಖಂಡಿತವಾಗಿಯೂ ಪ್ರಿಸರ್ವೇಟಿವ್‌ಗಳಿರುತ್ತವೆ.

Dietary Fiber Bread Health Benefits Whole grain bread is rich in dietary fiber, which aids in digestion, helps maintain bowel regularity, and can contribute to a feeling of fullness, potentially aiding in weight management.

ನಾರಿನಂಶ ಮುಖ್ಯ

ಬ್ರೆಡ್‌ನಲ್ಲಿ ಎಷ್ಟು ನಾರಿನಂಶ ಇದೆ ಎಂದು ಪರೀಕ್ಷಿಸಿಕೊಳ್ಳಿ. ಸಾಮಾನ್ಯವಾಗಿ ಬ್ರೆಡ್‌ ಮಾಡಿದ ಮೇಲೆ ನಾರಿನಂಶವನ್ನು ಕಳೆದುಕೊಳ್ಳುತ್ತದೆ. ನಾರಿನಂಶ ಹೆಚ್ಚಿರುವ ಬ್ರೆಡ್‌ ಯಾವಾಗಲೂ ಉತ್ತಮ ಆಯ್ಕೆ.

ಇದನ್ನೂ ಓದಿ: Baking Powder: ಬೇಕಿಂಗ್‌ ಪುಡಿ ಹುಟ್ಟಿದ ಕತೆ ಕುತೂಹಲಕರ! ಅಡುಗೆ ಮಾಡುವ ಮೊದಲು ಇದರ ಹಿನ್ನೆಲೆ ಗೊತ್ತಿರಲಿ

Continue Reading

ಆಹಾರ/ಅಡುಗೆ

Top 10 Puddings: ಭಾರತದ ಫಿರ್ನಿ, ಖೀರು, ಸಿಹಿ ಪೊಂಗಲ್‌ಗೆ ವಿಶ್ವದ ಟಾಪ್‌ 10 ತಿಂಡಿ ಪಟ್ಟಿಯಲ್ಲಿ ಸ್ಥಾನ!

ಭಾರತ ತನ್ನ ಸಿಹಿತಿಂಡಿಯ (Top 10 Puddings) ವಿಚಾರದಲ್ಲೂ ವಿಶ್ವಮಟ್ಟದಲ್ಲಿ ಹೆಸರು ಮಾಡಿದೆ. ಟೇಸ್ಟ್‌ ಅಟ್ಲಾಸ್‌ ನಡೆಸುವ ಸ್ಪರ್ಧೆಯಲ್ಲಿ ವಿಶ್ವದ ಅತ್ಯಂತ ರುಚಿಕರ ಟಾಪ್‌ 10 ರೈಸ್‌ ಪುಡ್ಡಿಂಗ್‌ಗಳ ಪೈಕಿ ಭಾರತದ ಮೂರು ಬಗೆಯ ಪುಡ್ಡಿಂಗ್‌ ಸ್ಥಾನ ಪಡೆದಿರುವುದು ವಿಶೇಷ. ಆ ಮೂಲಕ ನಮ್ಮ ಸರಳವಾದ ಸಿಹಿತಿನಿಸುಗಳ ಪೈಕಿ ಒಂದಾದ ತಮಿಳುನಾಡಿನ ಸಿಹಿ ಪೊಂಗಲ್‌, ಪಂಜಾಬಿನ ಫಿರ್ನಿ ಹಾಗೂ ಒಡಿಶಾದ ಖೀರ್‌ ವಿಶ್ವಮಟ್ಟದಲ್ಲಿ ಸಿಹಿರುಚಿಯ ಮಾನ್ಯತೆ ಪಡೆದಿವೆ.

VISTARANEWS.COM


on

Top 10 Puddings
Koo

ಭಾರತ ಪಾಕಶಾಸ್ತ್ರದಲ್ಲಿ (Top 10 Puddings) ಹೆಸರು ಮಾಡಿದ ದೇಶ. ಭಾರತದ ಬಗೆಬಗೆಯ ಆಹಾರಗಳು, ತಿನಿಸುಗಳು, ವೈವಿಧ್ಯಮಯ ಸಿಹಿತಿಂಡಿಗಳು ಪ್ರಪಂಚದಾದ್ಯಂತ ಹೆಸರು ಮಾಡಿದೆ. ದೇಶವಿದೇಶಗಳಿಂದ ಇಲ್ಲಿನ ಆಹಾರ ಸವಿಯಲೆಂದೇ ಪ್ರವಾಸಿಗರು ಬರುತ್ತಾರೆ. ಸಿಹಿತಿಂಡಿ ಇಲ್ಲಿನ ಜನರ ನಿತ್ಯದ ಆಹಾರಾಭ್ಯಾಸ. ಹಬ್ಬಗಳು ಬಂದರಂತೂ ಈ ಸಿಹಿ ತಿನಿಸುಗಳ ಸಡಗರ ಇನ್ನೂ ಹೆಚ್ಚುತ್ತದೆ. ಬೇರೆ ಬೇರೆ ರಾಜ್ಯಗಳ, ಬೇರೆ ಬೇರೆ ಧರ್ಮಗಳ, ಬೇಋಎ ಬೇರೆ ಆಚರಣೆಗಳನ್ನು ಹೊಂದಿದ ಜನರ ಬಗೆಬಗೆಯ ಆಹಾರಾಭ್ಯಾಸಗಳು, ತಿನಿಸುಗಳು ಭಾರತದ ವೈವಿಧ್ಯಮಯ ಸಂಸ್ಕೃತಿಗೆ ಸಾಕ್ಷಿ. ಇದೀಗ, ಭಾರತ ತನ್ನ ಸಿಹಿತಿಂಡಿಯ ವಿಚಾರದಲ್ಲೂ ವಿಶ್ವಮಟ್ಟದಲ್ಲಿ ಹೆಸರು ಮಾಡಿದೆ. ಟೇಸ್ಟ್‌ ಅಟ್ಲಾಸ್‌ ನಡೆಸುವ ಸ್ಪರ್ಧೆಯಲ್ಲಿ ವಿಶ್ವದ ಅತ್ಯಂತ ರುಚಿಕರ ಟಾಪ್‌ 10 ರೈಸ್‌ ಪುಡ್ಡಿಂಗ್‌ಗಳ ಪೈಕಿ ಭಾರತದ ಮೂರು ಬಗೆಯ ಪುಡ್ಡಿಂಗ್‌ ಸ್ಥಾನ ಪಡೆದಿರುವುದು ವಿಶೇಷ. ಆ ಮೂಲಕ ನಮ್ಮ ಸರಳವಾದ ಸಿಹಿತಿನಿಸುಗಳ ಪೈಕಿ ಒಂದಾದ ತಮಿಳುನಾಡಿನ ಸಿಹಿ ಪೊಂಗಲ್‌, ಪಂಜಾಬಿನ ಫಿರ್ನಿ ಹಾಗೂ ಒಡಿಶಾದ ಖೀರ್‌ ವಿಶ್ವಮಟ್ಟದಲ್ಲಿ ಸಿಹಿರುಚಿಯ ಮಾನ್ಯತೆ ಪಡೆದಿವೆ. ಹಬ್ಬ ಹರಿದಿನಗಳಲ್ಲಿ ಸಾಮಾನ್ಯವಾಗಿ ಅಕ್ಕಿ ಪಾಯಸ ಅಥವಾ ಖೀರ್‌ ಮಾಡುವುದು ಸಾಮಾನ್ಯ. ಈ ಅಕ್ಕಿ ಪಾಯಸಕ್ಕೆ ಐದನೇ ಸ್ಥಾನ ಸಿಕ್ಕಿದರೆ, ನಾಲ್ಕನೇ ಸ್ಥಾನದಲ್ಲಿ ಫಿರ್ನಿ ಇದೆ. ಒಂಭತ್ತನೇ ಸ್ಥಾನದಲ್ಲಿ ತಮಿಳುನಾಡಿನ ಪ್ರಸಿದ್ಧ ಸಕ್ಕರೆ ಪೊಂಗಲ್‌ ಅಥವಾ ಸಿಹಿ ಪೊಂಗಲ್‌ ಆಯ್ಕೆಯಾಗಿದೆ.
ಸಾಂಪ್ರದಾಯಿಕ ತಿನಿಸು ಫಿರ್ನಿಯನ್ನು ಸಾಮಾನ್ಯವಾಗಿ ಪುಟ್ಟ ಪುಟ್ಟ ಮಣ್ಣಿನ ಮಡಕೆಗಳಲ್ಲಿ ಹಾಕಿ ಫ್ರಿಡ್ಜ್‌ನಲ್ಲಿಟ್ಟು ತಣ್ಣಗೆ ತಿನ್ನುವುದು ರೂಢಿ. ಬೇಸಿಗೆಯಲ್ಲಿ ಐಸ್‌ಕ್ರೀಂನಂತೆ ಹಿತವಾಗಿರುವ ಸಾಂಪ್ರದಾಯಿಕ ಶೈಲಿಯ ಸಿಹಿತಿನಿಸಿದು. ಗುಲಾಬಿ ದಳಗಳು, ಪಿಸ್ತಾ ಬಾದಾಮಿಯ ಚೂರುಗಳಿಂದ ಅಲಂಕರಿಸಿ ಕೊಡಲಾಗುತ್ತದೆ.

Sweet kheer

ಸಿಹಿಯಾದ ಖೀರು

ಅಕ್ಕಿಯನ್ನು ಬಳಸಿ ಮಾಡಲಾಗುವ ಸಿಹಿಯಾದ ಖೀರು, ಯಾವುದೇ ಶುಭ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ದೇವರಿಗೆ ನೈವೇದ್ಯ ಇಡಲು ಮಾಡಲಾಗುತ್ತದೆ. ಅಕ್ಕಿಯನ್ನು ಬೇಯಿಸಿ ಹಾಲು ಹಾಕಿ ಕೇಸರಿಯನ್ನು ಉದುರಿಸಿ ಮಾಡುವ ಸರಳವಾದ ಪಾಯಸವಿದು. ಉತ್ತರ ಭಾರತ, ದಕ್ಷಿಣ ಭಾರತವೆಂಬ ಬೇಧವಿಲ್ಲದೆ, ಈ ಸಿಹಿಯನ್ನು ಎಲ್ಲೆಡೆ ಮಾಡುತ್ತಾರೆ.

Sweet Pongal

ಸಿಹಿ ಪೊಂಗಲ್‌

ಸಿಹಿ ಪೊಂಗಲ್‌ ಅಥವಾ ಸಕ್ಕರೆ ಪೊಂಗಲ್‌ ತಮಿಳುನಾಡಿನ ಪ್ರಖ್ಯಾತ ಸಿಹಿತಿನಿಸು. ಹೆಸರು ಬೇಳೆ ಹಾಗೂ ಅಕ್ಕಿಯನ್ನು ಒಟ್ಟಿಗೆ ಬೇಯಿಸಿ ಬೆಲ್ಲ ಹಾಗೂ ತುಪ್ಪ ಹಾಕಿ ಮಾಡುವ ಘಮಘಮಿಸುವ ಸಿಹಿ ಪಾಯಸವಿದು. ಸಾಂಪ್ರದಾಯಿಕ ಹೊಸ ವರ್ಷವಾದ ಪೊಂಗಲ್‌ ಹಬ್ಬದ ಆಚರಣೆಯ ಸಂದರ್ಭ ಸಿಹಿ ಪೊಂಗಲ್‌ ಅನ್ನು ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಮಾಡಿ, ದೇವರಿಗೆ ಇಟ್ಟು ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತಾರೆ. ಬಹಳ ರುಚಿಯಾದ ಸರಳವಾದ ಪಾಯಸವಿದು.

Firin Sutlac

ಟರ್ಕಿಗೆ ಮೊದಲ ಸ್ಥಾನ

ಈ ಸ್ಪರ್ಧೆಯಲ್ಲಿ, ಮೊದಲ ಸ್ಥಾನದಲ್ಲಿ ಟರ್ಕಿಯ ಫಿರಿನ್‌ ಸುಟ್‌ಲ್ಯಾಕ್‌, ಎರಡನೇ ಸ್ಥಾನದಲ್ಲಿ ಥಾಯ್ಲೆಂಡಿನ ಖಾವೋ ನಿಯಾವೋ ಮಾಮುಅಂಗ್‌, ಮೂರನೇ ಸ್ಥಾನದಲ್ಲಿ ಶೋಲೆಹ್‌ ಝರ್ದ್‌ ಇವೆ. ನಾಲ್ಕನೇ ಸ್ಥಾನದಲ್ಲಿ ಭಾರತದ ಫಿರ್ನಿ, ಐದನೇ ಸ್ಥಾನದಲ್ಲಿ ನಮ್ಮ ಖೀರ್‌ ಇವೆ. ಇವಲ್ಲದೆ, ಡೆನ್ಮಾರ್ಕ್‌, ಟರ್ಕಿ, ಪೋರ್ಚುಗಲ್‌ನ ಸಿಹಿ ತಿನಿಸುಗಳೂ ಸ್ಥಾನ ಪಡೆದುಕೊಂಡಿವೆ.

ಇದನ್ನೂ ಓದಿ: Special Food In Kashi: ನೀವು ಕಾಶಿಗೆ ಹೋದರೆ ಈ ತಿಂಡಿಗಳ ರುಚಿ ನೋಡಲು ಮರೆಯದಿರಿ!

Continue Reading

Latest

Cake Tragedy: ಕೇಕ್‌ ತಿಂದು ಬಾಲಕಿ ಸಾವಿನ ಪ್ರಕರಣ; ಸಾವಿಗೆ ನಿಖರ ಕಾರಣ ಬಯಲು

Cake Tragedy: ಹುಟ್ಟು ಹಬ್ಬದಂದು ಕೇಕ್ ತಿಂದು ಬಾಲಕಿ ಮೃತಪಟ್ಟ ಪ್ರಕರಣದಲ್ಲಿ ಬಾಲಕಿ ತಿಂದ ಕೇಕ್ ನಲ್ಲಿ ಹೆಚ್ಚಿನ ಪ್ರಮಾಣದ ಕೃತಕ ಸಿಹಿಕಾರಕ ಬೆರೆಸಲಾಗಿದೆ ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಈ ಘಟನೆ ದೇಶಾದ್ಯಂತ ಆತಂಕ ಮೂಡಿಸಿತ್ತು.

VISTARANEWS.COM


on

By

Cake Tragedy
Koo

ಪಟಿಯಾಲಾ: ಹುಟ್ಟು ಹಬ್ಬದಂದು (birthday) ಬೇಕರಿಯೊಂದರಿಂದ ಆನ್‌ಲೈನ್ (online) ಮೂಲಕ ತರಿಸಲಾಗಿದ್ದ ಕೇಕ್ (Cake Tragedy) ತಿಂದು ಹತ್ತು ವರ್ಷದ ಬಾಲಕಿ ಸಾವನ್ನಪ್ಪಿದ (death) ಪ್ರಕರಣಕ್ಕೆ ಸಂಬಂಧಿಸಿ ನಡೆದ ತನಿಖೆಯಲ್ಲಿ ಕೇಕ್ ನಲ್ಲಿ ಹೆಚ್ಚಿನ ಸಾಂದ್ರತೆಯ ಕೃತಕ ಸಿಹಿಕಾರಕ ಬೆರೆಸಲಾಗಿತ್ತು; ಸಾವಿಗೆ ಇದೇ ಕಾರಣ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಪಂಜಾಬ್‌ನ (punjab) ಪಟಿಯಾಲಾದಲ್ಲಿ (patiyala) ಮಾರ್ಚ್ 24ರಂದು ಈ ಘಟನೆ ನಡೆದಿತ್ತು. ಆರೋಗ್ಯ ಸಚಿವ ಬಲ್ಬೀರ್ ಸಿಂಗ್ ಬಾಲಕಿ ಮಾನ್ವಿಯ ಸಾವಿನ ತನಿಖೆಗೆ ಆದೇಶಿಸಿದ್ದರು.

ಮಾನ್ವಿಯ ಹುಟ್ಟುಹಬ್ಬದಂದು ಪಟಿಯಾಲಾದ ಬೇಕರಿಯಿಂದ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿ ಚಾಕೊಲೇಟ್ ಕೇಕ್ ಅನ್ನು ತರಿಸಲಾಗಿತ್ತು. ಇದನ್ನು ತಿಂದು ಇಡೀ ಕುಟುಂಬ ಅಸ್ವಸ್ಥಗೊಂಡಿತ್ತು.

ಇದನ್ನೂ ಓದಿ: Belagavi News: ಬಿಲ್ ಮಂಜೂರಾತಿ ವಿಚಾರ ಗ್ರಾಪಂ ಅಧ್ಯಕ್ಷ-ಸದಸ್ಯರ ಮಧ್ಯೆ ಮಾರಾಮಾರಿ; ಸಿಸಿ ಕ್ಯಾಮೆರಾದಲ್ಲಿ ಸೆರೆ

ಕೃತಕ ಸಿಹಿ

ಕೇಕ್‌ನ ಮಾದರಿಯನ್ನು ಪರೀಕ್ಷೆಗಾಗಿ ಸಂಗ್ರಹಿಸಿದ್ದು, ವರದಿಯಲ್ಲಿ ಹೆಚ್ಚಿನ ಪ್ರಮಾಣದ ಸ್ಯಾಕ್ರರಿನ್, ಸಿಹಿ ರುಚಿಯ ಸಿಂಥೆಟಿಕ್ ಸಂಯುಕ್ತವನ್ನು ಬಳಸಲಾಗಿದೆ ಎಂದು ಕಂಡು ಹಿಡಿಯಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ, ಡಿಎಚ್‌ಒ ಡಾ. ವಿಜಯ್ ಜಿಂದಾಲ್ ತಿಳಿಸಿದ್ದಾರೆ.

ಸಣ್ಣ ಪ್ರಮಾಣದ ಸ್ಯಾಕ್ರರಿನ್ ಅನ್ನು ಆಹಾರ ಮತ್ತು ಪಾನೀಯಗಳಲ್ಲಿ ಬಳಸಲಾಗಿದ್ದರೂ ಹೆಚ್ಚಿನ ಮಟ್ಟಗಳು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸುತ್ತದೆ.

ಬೇಕರಿ ವಿರುದ್ಧ ಕ್ರಮ

ಶೀಘ್ರದಲ್ಲೇ ಬೇಕರಿ ವಿರುದ್ಧ ಕ್ರಮ ಜರುಗಿಸಿ ದಂಡ ವಿಧಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಬೇಕರಿ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


ಏನಾಗಿತ್ತು?

10 ವರ್ಷದ ಬಾಲಕಿ ಮಾನ್ವಿಯ ಹುಟ್ಟುಹಬ್ಬಕ್ಕೆ ಪೋಷಕರು ಆನ್‌ಲೈನ್‌ ಮೂಲಕ ಕೇಕ್ ಆರ್ಡರ್ ಮಾಡಿದ್ದರು. ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹಂಚಲಾಗಿತ್ತು. ಕೆಲವೇ ಹೊತ್ತಲ್ಲಿ ಕೇಕ್ ತಿಂದವರು ಅಸ್ವಸ್ಥಗೊಂಡಿದ್ದರು. ತನ್ನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಬಾಲಕಿ ಮಾನ್ವಿ ಸ್ವಲ್ಪ ಹೆಚ್ಚಾಗಿಯೇ ಕೇಕ್ ತಿಂದಿದ್ದಳು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಬಾಲಕಿ ಮೃತಪಟ್ಟಿದ್ದಳು.

ಬಾಲಕಿಯ ಸಾವಿನ ಕುರಿತು ತನಿಖೆಗೆ ಮುಂದಾದ ರಾಜ್ಯದ ಆಹಾರ ಸುರಕ್ಷತಾ ಪ್ರಯೋಗಾಲಯದಿಂದ ಕೇಕ್ ಅನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

ಮಾನ್ವಿ ಸಾವಿಗೆ ಕೆಲವೇ ಗಂಟೆಗಳ ಮೊದಲು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಂಡ ವೀಡಿಯೊದಲ್ಲಿ ಮಾನ್ವಿ ತನ್ನ ಕುಟುಂಬದೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಳು.

ಅವಳು ಕೇಕ್ ಕತ್ತರಿಸಿ ಎಲ್ಲರೂ ತಿಂದ ಕೆಲವೇ ಗಂಟೆಗಳ ಅನಂತರ ಅವಳ ಕಿರಿಯ ಸಹೋದರಿ ಸೇರಿದಂತೆ ಇಡೀ ಕುಟುಂಬವು ಅನಾರೋಗ್ಯಕ್ಕೆ ಒಳಗಾಯಿತು. ಹುಡುಗಿಯರು ವಾಂತಿ ಮಾಡಲು ಪ್ರಾರಂಭಿಸಿದರು ಮತ್ತು ಮಾನ್ವಿ ಅವರ ಬಾಯಿಯಲ್ಲಿ ಶುಷ್ಕತೆ ಉಂಟಾಗಿತ್ತು ಎಂದು ಆಕೆಯ ಅಜ್ಜ ಹೇಳಿದರು.

ಆಕೆ ನಿತ್ರಾಣಗೊಂಡಾಗ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರು. ಆಕೆಗೆ ಆಮ್ಲಜನಕವನ್ನು ಹಾಕಲಾಯಿತು ಆದರೆ ಯಾವುದಕ್ಕೂ ಸ್ಪಂದಿಸದೆ ಅವಳು ಮೃತಪಟ್ಟಿದ್ದಳು. ‘ಕೇಕ್ ಕನ್ಹಾ’ನಿಂದ ಆರ್ಡರ್ ಮಾಡಿದ್ದ ಚಾಕೊಲೇಟ್ ಕೇಕ್ ನಲ್ಲಿ ವಿಷಕಾರಿ ಅಂಶವಿತ್ತು ಎಂದು ಮಾನ್ವಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

Continue Reading
Advertisement
IPL 2024
ಕ್ರೀಡೆ16 mins ago

IPL 2024 : ದೊಡ್ಡ ಮೊತ್ತದ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿಗೆ 10 ರನ್ ಜಯ

Viral News
ವೈರಲ್ ನ್ಯೂಸ್26 mins ago

Viral News: ಅಪ್ರಾಪ್ತ ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದ ಮುಸ್ಲಿಂ ಯುವಕನಿಗೆ ಬಿತ್ತು ಗೂಸಾ

Assault Case
ಕರ್ನಾಟಕ28 mins ago

Assault Case: ಬೆಂಗಳೂರಲ್ಲಿ ಟೀ ಶಾಪ್ ಯುವಕನ ಮೇಲೆ ಹಲ್ಲೆ ಮಾಡಿದ ಮುಸ್ಲಿಂ ಯುವಕರು

Srinivasa Prasad
ಕರ್ನಾಟಕ33 mins ago

Srinivasa Prasad: ಸಂಸದ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ತೆರಳಿದ ಸಿಎಂ

Gold Seized
ಕ್ರೈಂ42 mins ago

Gold Seized: ದುಬೈನಿಂದ ಬಂದ ಪ್ರಯಾಣಿಕನ ಗುದದ್ವಾರದಲ್ಲಿತ್ತು 70 ಲಕ್ಷ ಮೌಲ್ಯದ ಚಿನ್ನ!

Virat Kohli
ಪ್ರಮುಖ ಸುದ್ದಿ54 mins ago

IPL 2024 : ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ; ವಿಡಿಯೊ ಇದೆ

Illegal Cattle Trafficking 9 Accused Arrested in gangavathi
ಕರ್ನಾಟಕ55 mins ago

Koppala News: ಅಕ್ರಮ ಜಾನುವಾರು ಸಾಗಾಟ: 9 ಜನ ಆರೋಪಿಗಳ ಬಂಧನ

Congress leader B K Hariprasad latest statement In Gangavathi
ಕೊಪ್ಪಳ56 mins ago

Lok Sabha Election 2024: ಬಿಜೆಪಿಯವರು 10 ವರ್ಷದಲ್ಲಿ ಏನು ಮಾಡಿದ್ದೀರಿ ಹೇಳಿ ಎಂದ ಬಿ.ಕೆ. ಹರಿಪ್ರಸಾದ್

Kalaburagi Lok Sabha Constituency Congress candidate Radhakrishna Doddamani election campaign
ಯಾದಗಿರಿ60 mins ago

Lok Sabha Election 2024: ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಗೆಲ್ಲಿಸಿ, ನಿಮ್ಮೆಲ್ಲರ ಧ್ವನಿಯಾಗಿ ಕೆಲಸ ಮಾಡುವೆ: ರಾಧಾಕೃಷ್ಣ ದೊಡ್ಡಮನಿ

Narendra Modi
ಕರ್ನಾಟಕ1 hour ago

Narendra Modi: ಇಂದು ರಾತ್ರಿಯೇ ರಾಜ್ಯಕ್ಕೆ ಮೋದಿ ಆಗಮನ; ನಾಳೆಯಿಂದ ಅಬ್ಬರದ ಪ್ರಚಾರ, ವಿವರ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20244 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ8 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ15 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌