Lpg Saving Tips: ಈ ಸೂತ್ರ ಪಾಲಿಸಿ, ಅಡುಗೆ ಅನಿಲ ಉಳಿಸಿ! ತಿಂಗಳಿಗೆ ನೂರಾರು ರೂ. ಲಾಭ! - Vistara News

ಆಹಾರ/ಅಡುಗೆ

Lpg Saving Tips: ಈ ಸೂತ್ರ ಪಾಲಿಸಿ, ಅಡುಗೆ ಅನಿಲ ಉಳಿಸಿ! ತಿಂಗಳಿಗೆ ನೂರಾರು ರೂ. ಲಾಭ!

Save LPG: ಅಡುಗೆ ಮಾಡುವಾಗ ಅನಿಲ ಉಳಿಸಬೇಕು ಎನ್ನುವ ಉದ್ದೇಶ ಎಲ್ಲರಿಗೂ ಇರುತ್ತದೆ. ಆದರೆ ಎಷ್ಟೋ ಬಾರಿ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ಅನಿಲ ವ್ಯರ್ಥವಾಗಲು ಕಾರಣವಾಗುತ್ತದೆ. ಅವುಗಳು ಯಾವುದು ಗೊತ್ತೇ ? ಇಲ್ಲಿದೆ ಈ ಬಗ್ಗೆ ಮಾಹಿತಿ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದಿನದಿಂದ ದಿನಕ್ಕೆ ಅಡುಗೆ ಅನಿಲದ (LPG) ಬೆಲೆ ಗಗನಕ್ಕೆ ಏರುತ್ತಿದೆ. ಹೀಗಾಗಿ ಅಡುಗೆ ಅನಿಲ ಉಳಿತಾಯ ಮಾಡುವುದು ಇಂದಿನ ಅನಿವಾರ್ಯವೂ ಹೌದು. ಮಿತವಾಗಿ ಅಡುಗೆ (cooking) ಅನಿಲ ಬಳಸುವುದರಿಂದ ಸಿಲಿಂಡರ್ (gas cylinder) ಹೆಚ್ಚು ಕಾಲ ಬಾಳಿಕೆ ಬರುವುದು ಮಾತ್ರವಲ್ಲ, ಹಣವನ್ನೂ ಉಳಿತಾಯ ಮಾಡಬಹುದು.

ಅಡುಗೆ ಮಾಡುವಾಗ ಅನಿಲ ಉಳಿಸಲು ಹಲವು ದಾರಿಗಳಿವೆ. ಇದಕ್ಕಾಗಿ ಕೆಲವು ಸರಳ ವಿಧಾನಗಳನ್ನು (simple tips) ಅನುಸರಿಸಬೇಕು ಅಷ್ಟೇ.

1. ಪಾತ್ರೆಗಳು ಒಣಗಿರಲಿ

ಕೆಲವೊಮ್ಮೆ ಪಾತ್ರೆಯನ್ನು ತೊಳೆದು ಹಾಗೆ ಗ್ಯಾಸ್ ಸ್ಟವ್ (gas stove) ಮೇಲೆ ಇರಿಸುತ್ತೇವೆ. ಇದರಿಂದ ಪಾತ್ರೆ ಬಿಸಿಯಾಗಲು ಹೆಚ್ಚು ಹೊತ್ತು ಬೇಕಾಗುತ್ತದೆ. ಇದು ಬಹಳಷ್ಟು ಅನಿಲವನ್ನು ವ್ಯರ್ಥ ಮಾಡುತ್ತದೆ. ಹೀಗಾಗಿ ಪಾತ್ರೆ ತೊಳೆದು, ಶುದ್ಧವಾದ ಬಟ್ಟೆಯಿಂದ ಅವನ್ನು ಒರೆಸಿ ಬಳಿಕ ಅಡುಗೆಗಾಗಿ ಬಳಸಿ. ಇದರಿಂದ ಅನಿಲ ಉಳಿತಾಯವಾಗುತ್ತದೆ.

2. ಸೋರಿಕೆ ಪರಿಶೀಲಿಸಿ

ಅಡುಗೆ ಅನಿಲ ಸೋರಿಕೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿ. ಇದಕ್ಕಾಗಿ ಸ್ಟವ್‌ನ ಎಲ್ಲಾ ಬರ್ನರ್‌, ಪೈಪ್‌ ಮತ್ತು ನಿಯಂತ್ರಕಗಳನ್ನು ಸರಿಯಾಗಿ ಸರಿಯಾಗಿ ಪರಿಶೀಲಿಸಿ. ಸಣ್ಣ ಸೋರಿಕೆ ಇದ್ದರೂ ಬಹಳಷ್ಟು ಅನಿಲವನ್ನು ವ್ಯರ್ಥವಾಗುತ್ತದೆ. ಅನಿಲ ಸೋರಿಕೆ ಹೆಚ್ಚು ಅಪಾಯಕಾರಿಯೂ ಆಗಿರುತ್ತದೆ.

ಇದನ್ನು ಓದಿ: Storage Tips Of Butter: ಬೆಣ್ಣೆಯನ್ನು ತಾಜಾ ಉಳಿಸಿಕೊಳ್ಳುವುದು ಹೇಗೆ?

3. ಪ್ಯಾನ್‌ಗಳನ್ನು ಮುಚ್ಚಿ

ಅಡುಗೆ ಮಾಡುವಾಗ ಪ್ಯಾನ್ ಅನ್ನು ಪ್ಲೇಟ್ ನಿಂದ ಮುಚ್ಚಿ. ಇದರಿಂದ ಆಹಾರ ಬೇಗ ಬೇಯುವುದು ಮಾತ್ರವಲ್ಲ ಹೆಚ್ಚು ಇಂಧನವನ್ನೂ ಉಳಿಸಬಹುದು.

4. ಕಡಿಮೆ ಶಾಖವನ್ನು ಬಳಸಿ

ಕಡಿಮೆ ಉರಿಯಲ್ಲಿ ಆಹಾರ ಬೇಯಿಸುವುದರಿಂದ ಅನಿಲವನ್ನು ಉಳಿತಾಯವಾಗುವುದು ಮಾತ್ರವಲ್ಲ ಆಹಾರದಲ್ಲಿ ಪೋಷಕಾಂಶವು ಉಳಿಯುತ್ತದೆ. ಹೆಚ್ಚಿನ ಉರಿಯಲ್ಲಿ ಆಹಾರ ಬೇಯಿಸುವುದು ಆಹಾರದಲ್ಲಿನ ಪೋಷಕಾಂಶಗಳು ಹೆಚ್ಚು ನಷ್ಟವಾಗುತ್ತದೆ.

5. ಥರ್ಮೋಸ್ ಫ್ಲಾಸ್ಕ್

ನೀರನ್ನು ಕುದಿಸಿ ಫ್ಲಾಸ್ಕ್‌ನಲ್ಲಿ ಶೇಖರಿಸಿಡಿ. ಇದರಿಂದ ಹೆಚ್ಚು ಹೊತ್ತು ನೀರು ಬಿಸಿಯಾಗಿರುತ್ತದೆ. ಹೀಗಾಗಿ ಪದೇಪದೇ ನೀರನ್ನು ಬಿಸಿ ಮಾಡಿ ಅನಿಲವನ್ನು ವ್ಯರ್ಥ ಮಾಡಬೇಕಾಗಿಲ್ಲ.

6. ಪ್ರೆಶರ್ ಕುಕ್ಕರ್ ಬಳಸಿ

ಕುಕ್ಕರ್‌ಗಳು ಆಹಾರ ವೇಗವಾಗಿ ಬೇಯಲು ಸಹಾಯ ಮಾಡುತ್ತದೆ. ಇದರಿಂದ ಇಂಧನವನ್ನು ಉಳಿಸಬಹುದು. ಹಾಗಾಗಿ ಅಡುಗೆ ಬೇಯಿಸಲು ಸಾಮಾನ್ಯ ಪಾತ್ರೆಗಳ ಬದಲಾಗಿ ಉತ್ತಮ ಗುಣಮಟ್ಟದ ಕುಕ್ಕರ್‌ಗಳನ್ನೇ ಬಳಸಿ.

7. ಬರ್ನರ್‌ಗಳು ಸ್ವಚ್ಛವಾಗಿರಲಿ

Gas Burner

ಬರ್ನರ್‌ನಿಂದ ಕಿತ್ತಳೆ ಬಣ್ಣದಲ್ಲಿ ಜ್ವಾಲೆ ಬರುತ್ತಿದ್ದರೆ ಅದರಲ್ಲಿ ಇಂಗಾಲದ ನಿಕ್ಷೇಪವಿದೆ ಎಂದು ಅರ್ಥ. ಇದರಿಂದ ಅನಿಲ ಹೆಚ್ಚು ವ್ಯರ್ಥವಾಗುತ್ತದೆ. ಹೀಗಾಗಿ ಬರ್ನರ್ ಅನ್ನು ಆಗಾಗ ಸ್ವಚ್ಛಗೊಳಿಸಬೇಕು.

8. ಮೊದಲು ಸಿದ್ಧತೆ ಮಾಡಿಕೊಳ್ಳಿ

ಗ್ಯಾಸ್ ಉರಿಸಿ ಅಡುಗೆಗೆ ಸಿದ್ಧ ಮಾಡುವುದಲ್ಲ. ಮೊದಲು ಸಿದ್ಧತೆ ಮಾಡಿಕೊಂಡು ಬಳಿಕ ಗ್ಯಾಸ್ ಆನ್ ಮಾಡಿ. ಅಡುಗೆಗೆ ಬೇಕಾದ ಪದಾರ್ಥಗಳನ್ನು ಹುಡುಕಲು ಸಾಕಷ್ಟು ಸಮಯ ವ್ಯರ್ಥವಾಗುತ್ತದೆ. ಇದರಿಂದ ಇಂಧನವೂ ವ್ಯರ್ಥವಾಗುವುದು.

9. ಕೆಲವೊಂದು ಸಾಮಗ್ರಿಗಳನ್ನು ನೆನೆಸಿಡಿ

Sprout

ಅಕ್ಕಿ, ಧಾನ್ಯ, ಬೇಳೆಕಾಳನ್ನು ಬೇಯಿಸುವ ಮೊದಲು ನೆನೆಸಿಟ್ಟರೆ ಅಡುಗೆ ಮಾಡುವಾಗ ಸಮಯದೊಂದಿಗೆ ಇಂಧನವನ್ನೂ ಉಳಿಸಬಹುದು.

10. ಜ್ವಾಲೆಯನ್ನು ಆಫ್ ಮಾಡಿ

ಆಹಾರ ಸಂಪೂರ್ಣ ಬೇಯುವವರೆಗೂ ಗ್ಯಾಸ್ ಉರಿಯಮೇಲೆ ಇರಿಸಬೇಕಿಲ್ಲ. ಆಹಾರ ಸಿದ್ಧವಾಗುವ ಕೆಲವು ನಿಮಿಷಗಳ ಮೊದಲು ಬೆಂಕಿ ಉರಿಯನ್ನು ಆಫ್ ಮಾಡಿ. ಪಾತ್ರೆಯನ್ನು ಮುಚ್ಚಿಟ್ಟರೆ ಒಳಗೆ ಇರುವ ಬಿಸಿಯಿಂದ ಕೆಲವೇ ನಿಮಿಷದಲ್ಲಿ ಆಹಾರ ಸಂಪೂರ್ಣ ಬೆಂದಿರುತ್ತದೆ.

11. ಹೆಪ್ಪುಗಟ್ಟಿದ ವಸ್ತುಗಳನ್ನು ಕರಗಿಸಿ

ಹಾಲು, ಬೆಣ್ಣೆಯಂತಹ ಫ್ರಿಜರ್‌ನಲ್ಲಿ ಇಟ್ಟ ವಸ್ತುಗಳು ಹೆಪ್ಪುಗಟ್ಟಿರುತ್ತದೆ. ಮೊದಲು ಅವುಗಳನ್ನು ಕೆಲಹೊತ್ತು ಹೊರಗಿಟ್ಟು ಅದು ಸಂಪೂರ್ಣ ಕರಗಿದ ಮೇಲೆ ಒಲೆ ಮೇಲೆ ಇಟ್ಟು ಕಾಯಿಸಿ. ಇದರಿಂದಲೂ ಇಂಧನವನ್ನು ಗಣನೀಯ ಪ್ರಮಾಣದಲ್ಲಿ ಉಳಿಸಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

MTR: ಬೆಂಗಳೂರಿನಲ್ಲಿ ಎಂಟಿಆರ್ ಕರುನಾಡು ಸ್ವಾದ; 2 ದಿನಗಳ ಆಹಾರ ಉತ್ಸವದಲ್ಲಿ ಏನೇನಿವೆ?

MTR: ಎಂಟಿಆರ್ ಕರುನಾಡು ಸ್ವಾದ ಕರ್ನಾಟಕ ವಿಶಿಷ್ಟ ಆಹಾರ ಉತ್ಸವಕ್ಕೆ ಬೆಂಗಳೂರಿನ ಜಯಮಹಲ್ ಪ್ಯಾಲೇಸ್‌ನ ಕನ್ವೆನ್ಷನ್ ಸೆಂಟರ್‌ನಲ್ಲಿ ಶನಿವಾರ ಚಾಲನೆ ದೊರೆಯಿತು. 100 ವರ್ಷಗಳ ಸಂಭ್ರಮಾಚರಣೆಯೊಂದಿಗೆ ಎಂಟಿಆರ್ ತನ್ನ ‌ಜನಪ್ರಿಯ ಆಹಾರ ಉತ್ಸವದ 3ನೇ ಆವೃತ್ತಿಯಾದ ಎಂಟಿಆರ್‌ ಕರುನಾಡು ಸ್ವಾದ ಎರಡು ದಿನಗಳ ಕರ್ನಾಟಕ ವಿಶಿಷ್ಟ ಆಹಾರ ಉತ್ಸವವನ್ನು ಭಾರತದ ಮಾಜಿ ಸಾಲಿಸಿಟರ್ ಜನರಲ್, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಉದ್ಘಾಟಿಸಿದರು.

VISTARANEWS.COM


on

MTR Karunadu Svada food festival inauguration in Bengaluru
Koo

ಬೆಂಗಳೂರು: ಎಂಟಿಆರ್ ಕರುನಾಡು ಸ್ವಾದ ಕರ್ನಾಟಕ ವಿಶಿಷ್ಟ ಆಹಾರ ಉತ್ಸವಕ್ಕೆ ಬೆಂಗಳೂರಿನ ಜಯಮಹಲ್ ಪ್ಯಾಲೇಸ್‌ನ ಕನ್ವೆನ್ಷನ್ ಸೆಂಟರ್‌ನಲ್ಲಿ ಶನಿವಾರ ಚಾಲನೆ ದೊರೆಯಿತು. 100 ವರ್ಷಗಳ ಸಂಭ್ರಮಾಚರಣೆಯೊಂದಿಗೆ ಎಂಟಿಆರ್ (MTR) ತನ್ನ ‌ಜನಪ್ರಿಯ ಆಹಾರ ಉತ್ಸವದ 3ನೇ ಆವೃತ್ತಿಯಾದ ಎಂಟಿಆರ್‌ ಕರುನಾಡು ಸ್ವಾದ ಎರಡು ದಿನಗಳ ಕರ್ನಾಟಕ ವಿಶಿಷ್ಟ ಆಹಾರ ಉತ್ಸವವನ್ನು ಭಾರತದ ಮಾಜಿ ಸಾಲಿಸಿಟರ್ ಜನರಲ್, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಉದ್ಘಾಟಿಸಿದರು.

ಆಹಾರ ಉತ್ಸವದ ವಿಶೇಷತೆ

ಎಂಟಿಆರ್‌ನ ಪಾಕಶಾಲೆಯ ಸೆಂಟರ್‌ ಆಫ್‌ ಎಕ್ಸಿಲೆನ್ಸ್‌ (Centre of Excellence) ನೇತೃತ್ವದಲ್ಲಿ, 50 ಕ್ಕೂ ಹೆಚ್ಚು ಗೃಹ ಬಾಣಸಿಗರು ಉತ್ತರ ಕರ್ನಾಟಕ, ಕೊಡಗು, ದಕ್ಷಿಣ ಕನ್ನಡ, ಕಲ್ಯಾಣ ಕರ್ನಾಟಕ, ಉಡುಪಿ ಮತ್ತು ಹಳೇ ಮೈಸೂರು ಸೇರಿದಂತೆ ಕರ್ನಾಟಕದ ಆರು ಪ್ರದೇಶಗಳ 100ಕ್ಕೂ ಹೆಚ್ಚು ಖಾದ್ಯಗಳನ್ನು ಪ್ರದರ್ಶಿಸುತ್ತಿದ್ದಾರೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಇಂದು ಖರೀದಿಗೆ ಮುನ್ನ ದರದ ಜೊತೆಗೆ ಇದು ತಿಳಿದಿರಲಿ

ಉತ್ಸವದಲ್ಲಿ ವಿಶೇಷ ಪಾಕವಿಧಾನ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಈ ಪುಸ್ತಕವು 100 ಕ್ಕೂ ಹೆಚ್ಚು ಪಾಕವಿಧಾನಗಳ ಸಂಗ್ರಹಣೆಯನ್ನು ಹೊಂದಿದೆ. ಇದರಿಂದ ವಿಶೇಷ ಭಕ್ಷ್ಯಗಳನ್ನು ಮನೆಯಲ್ಲಿಯೇ ತಯಾರಿಸಬಹುದಾಗಿದೆ.

ಈ ವೇಳೆ ಎಂಟಿಆರ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸುನಯ್ ಭಾಸಿನ್ ಮಾತನಾಡಿ, “ಎಂಟಿಆರ್ ಕರುನಾಡು ಸ್ವಾದವು” ಕರ್ನಾಟಕದ ಆಹಾರ ಮತ್ತು ಸಂಸ್ಕೃತಿಯ ಮೇಲಿರುವ ಪ್ರೀತಿಯಿಂದ ಸೃಷ್ಟಿಯಾಗಿದೆ. ಇದು ಕರ್ನಾಟಕದ ವೈವಿಧ್ಯಮಯ ರುಚಿಗಳ ಆಚರಣೆಯಾಗಿದೆ ಮತ್ತು ರಾಜ್ಯದ ಪಾಕಶಾಲೆಯ ಪರಂಪರೆಯನ್ನು ಎತ್ತಿಹಿಡಿಯುವ ಬದ್ಧತೆಯಾಗಿದೆ. ಈ ಅಮೂಲ್ಯವಾದ ಭಕ್ಷ್ಯಗಳ ಮೂಲಕ ಕರುನಾಡು ಪರಂಪರೆಯನ್ನು ಸಂರಕ್ಷಿಸುವ ಪ್ರಯತ್ನ ಇದಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

ಆಹಾರ ಉತ್ಸವ ಕಾರ್ಯಕ್ರಮದಲ್ಲಿ ಯಕ್ಷಗಾನ ಮತ್ತು ಡೊಳ್ಳು ಕುಣಿತದಂತಹ ಕರ್ನಾಟಕದ ನೃತ್ಯ ಪ್ರಕಾರಗಳನ್ನು ಆಯೋಜಿಸಿರುವುದು ವಿಶೇಷವಾಗಿದೆ.

Continue Reading

ಲೈಫ್‌ಸ್ಟೈಲ್

Food Cleaning Tips Kannada: ಹಣ್ಣು, ತರಕಾರಿಗಳಿಂದ ರಾಸಾಯನಿಕ ಅಂಶ ಸ್ವಚ್ಛಗೊಳಿಸುವ 5 ವಿಧಾನಗಳಿವು

ಮಾರುಕಟ್ಟೆಯಿಂದ ತರುವ ಹಣ್ಣು, ತರಕಾರಿಗಳು ಕೀಟನಾಶಕ ಮುಕ್ತವಾಗಿದೆಯೇ ಎಂಬುದನ್ನು ಪರಿಶೀಲಿಸಲು ಸಾಧ್ಯವಿಲ್ಲ. ಆದರೆ ಮನೆಗೆ ತಂದು ಅವುಗಳನ್ನು ಸ್ವಚ್ಛಗೊಳಿಸುವ ಮೂಲಕ (Food Cleaning Tips Kannada) ಅವುಗಳಿಂದ ಕೀಟನಾಶಕಗಳನ್ನು ಸಂಪೂರ್ಣವಾಗಿ ತೆಗೆದುಹಾಕಿ ತಿನ್ನಲು ಯೋಗ್ಯವನ್ನಾಗಿ ಮಾಡಬಹುದು. ಈ ಕುರಿತ (Food Cleaning Tips) ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Food Cleaning Tips Kannada
Koo

ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಿಂದ ತರುವ ಪ್ರತಿಯೊಂದು ಸಾಮಗ್ರಿಯೂ ಆತಂಕ ಹುಟ್ಟಿಸುತ್ತದೆ. ಅದು ತರಕಾರಿ (vegetables) ಆಗಿರಬಹುದು, ಹಣ್ಣು ಹಂಪಲು (fruits), ಧಾನ್ಯಗಳಾಗಿರಬಹುದು (grain). ಕೃಷಿಯಲ್ಲಿ ಕೀಟನಾಶಕಗಳ ಬಳಕೆಯು ವ್ಯಾಪಕವಾಗಿರುವುದರಿಂದ ನಾವು ಸೇವಿಸುವ ಆಹಾರದ ಸುರಕ್ಷತೆಯನ್ನು (Food Cleaning Tips Kannada) ಖಚಿತಪಡಿಸಿಕೊಳ್ಳುವುದು ಹೆಚ್ಚು ಅಗತ್ಯವಾಗಿದೆ. ಕೀಟಗಳು ಮತ್ತು ರೋಗಗಳಿಂದ ಬೆಳೆಗಳನ್ನು ರಕ್ಷಿಸಲು ಕೀಟನಾಶಕಗಳು ಅಗತ್ಯವಾದಾಗ, ಹಣ್ಣು ಮತ್ತು ತರಕಾರಿಗಳ ಮೇಲೆ ಅದರ ಅವಶೇಷಗಳನ್ನು ಬೀಳುತ್ತವೆ. ಇದನ್ನು ಕಾಲಾನಂತರದಲ್ಲಿ ನಾವು ಸೇವಿಸಿದರೆ ಆರೋಗ್ಯದ ಅಪಾಯವನ್ನು ಉಂಟು ಮಾಡುತ್ತದೆ. ಆದರೆ ಈ ಕೀಟನಾಶಕಗಳ ತೆಗೆದು ಹಾಕಲು ಮನೆಯಲ್ಲೇ ಇರುವ ಕೆಲವು ಸಾಮಗ್ರಿಗಳು ನಮಗೆ ಸಹಾಯ ಮಾಡುತ್ತದೆ. ತರಕಾರಿ, ಹಣ್ಣುಗಳಿಂದ ಕೀಟನಾಶಕಗಳನ್ನು ತೆಗೆದುಹಾಕಲು ಮನೆಯಲ್ಲಿ ಬಳಸಬಹುದಾದ (Food Cleaning Tips) ಐದು ಪ್ರಮುಖ ವಿಧಾನಗಳಿವೆ.

Apple cider vinegar for Fungal Infection Home Remedies

ವಿನೆಗರ್ ದ್ರಾವಣ

ಹಣ್ಣುಗಳು ಮತ್ತು ತರಕಾರಿಗಳಿಂದ ಕೀಟನಾಶಕಗಳನ್ನು ತೆಗೆದುಹಾಕಲು ಸರಳ ಮತ್ತು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಅವುಗಳನ್ನು ವಿನೆಗರ್ ದ್ರಾವಣದಿಂದ ತೊಳೆಯುವುದು. ಒಂದು ಬೌಲ್ ಅಥವಾ ಸಿಂಕ್‌ನಲ್ಲಿ ಮೂರು ಭಾಗಗಳ ನೀರಿನೊಂದಿಗೆ ಒಂದು ಭಾಗ ಬಿಳಿ ವಿನೆಗರ್ ಮಿಶ್ರಣ ಮಾಡಿ. ಉತ್ಪನ್ನವನ್ನು ಈ ದ್ರಾವಣದಲ್ಲಿ 5- 10 ನಿಮಿಷಗಳ ಕಾಲ ನೆನೆಸಿ, ಅನಂತರ ಶುದ್ಧ ನೀರಿನಿಂದ ಚೆನ್ನಾಗಿ ತೊಳೆಯಿರಿ. ವಿನೆಗರ್ ಕೀಟನಾಶಕಗಳ ಅವಶೇಷಗಳನ್ನು ಸಂಪೂರ್ಣವಾಗಿ ತೆಗೆದು ಹಾಕುತ್ತದೆ. ಹಣ್ಣುಗಳು ಮತ್ತು ತರಕಾರಿಗಳನ್ನು ಸ್ವಚ್ಛಗೊಳಿಸಲು ಮತ್ತು ತಿನ್ನಲು ಹೆಚ್ಚು ಸುರಕ್ಷಿತ ಮಾಡುತ್ತದೆ.

peeling

ಸಿಪ್ಪೆ ಸುಲಿಯುವುದು

ಹಣ್ಣು ಮತ್ತು ತರಕಾರಿಗಳ ಸಿಪ್ಪೆ ಸುಲಿದು ಸೇವಿಸುವುದು ಕೀಟನಾಶಕಗಳನ್ನು ತೆಗೆದು ಹಾಕುತ್ತದೆ. ಅನೇಕ ಕೀಟನಾಶಕಗಳು ಉತ್ಪನ್ನದ ಮೇಲ್ಮೈಯಲ್ಲಿ ಕೇಂದ್ರೀಕೃತವಾಗಿರುತ್ತವೆ. ಆದ್ದರಿಂದ ಹೊರ ಪದರವನ್ನು ತೆಗೆದುಹಾಕುವುದರಿಂದ ಈ ಅವಶೇಷಗಳ ಹೆಚ್ಚಿನ ಭಾಗವನ್ನು ತೆಗೆದುಹಾಕಬಹುದು. ಆದಾಗ್ಯೂ ಸಿಪ್ಪೆಸುಲಿಯುವಿಕೆಯು ಹಣ್ಣು, ತರಕಾರಿಯಲ್ಲಿರುವ ಕೆಲವು ಪೋಷಕಾಂಶಗಳು ಮತ್ತು ಫೈಬರ್ ಅನ್ನು ತೆಗೆದುಹಾಕುತ್ತದೆ ಎಂಬುದನ್ನು ನೆನಪಿನಲ್ಲಿಡಿ, ಆದ್ದರಿಂದ ಪೋಷಕಾಂಶಗಳ ನಷ್ಟದೊಂದಿಗೆ ಪ್ರಯೋಜನಗಳನ್ನು ಸಮತೋಲನಗೊಳಿಸುವುದು ಅತ್ಯಗತ್ಯ.

Baking soda for Fungal Infection Home Remedies

ಅಡುಗೆ ಸೋಡಾ

ಸೋಡಿಯಂ ಬೈಕಾರ್ಬನೇಟ್ ಎಂದೂ ಕರೆಯಲ್ಪಡುವ ಅಡುಗೆ ಸೋಡಾ, ಕೀಟನಾಶಕಗಳ ಅವಶೇಷಗಳನ್ನು ತೆಗೆದುಹಾಕಲು ಮತ್ತೊಂದು ಪರಿಣಾಮಕಾರಿ ವಸ್ತು. ಒಂದು ಚಮಚ ಅಡುಗೆ ಸೋಡಾವನ್ನು ಒಂದು ಕಪ್ ನೀರಿನಲ್ಲಿ ಬೆರೆಸಿ, ಹಣ್ಣು ಮತ್ತು ತರಕಾರಿಗಳನ್ನು 15-20 ನಿಮಿಷಗಳ ಕಾಲ ನೆನೆಸಿಡಿ. ಅನಂತರ ಅವುಗಳನ್ನು ಹರಿಯುವ ನೀರಿನ ಅಡಿಯಲ್ಲಿ ಚೆನ್ನಾಗಿ ತೊಳೆಯಿರಿ. ಬೇಕಿಂಗ್ ಸೋಡಾ ಕೀಟನಾಶಕ ಅಣುಗಳನ್ನು ಇದು ತೆಗೆದು ಹಾಕುತ್ತದೆ.

ಇದನ್ನೂ ಓದಿ: Eating Bread: ನಿತ್ಯವೂ ಬ್ರೆಡ್‌ ತಿನ್ನುತ್ತೀರಾ? ಹಾಗಿದ್ದರೆ ಖರೀದಿಸುವ ಮುನ್ನ ಇವಿಷ್ಟು ತಿಳಿದಿರಲಿ

ಬ್ರಷ್‌ನಿಂದ ಸ್ಕ್ರಬ್ಬಿಂಗ್

ಆಲೂಗಡ್ಡೆ, ಕ್ಯಾರೆಟ್ ಅಥವಾ ಸೌತೆಕಾಯಿಗಳಂತಹ ದಪ್ಪವಾದ ಚರ್ಮ ಅಥವಾ ಮೇಲ್ಮೈ ಹೊಂದಿರುವ ಹಣ್ಣು ಮತ್ತು ತರಕಾರಿಗಳಿಗೆ ಹರಿಯುವ ನೀರಿನ ಅಡಿಯಲ್ಲಿ ಅವುಗಳನ್ನು ಸ್ಕ್ರಬ್ ಮಾಡಲು ಬ್ರಷ್ ಅನ್ನು ಬಳಸುವುದು ಹೆಚ್ಚು ಪರಿಣಾಮಕಾರಿ. ಮೃದುವಾದ ಸ್ಕ್ರಬ್ಬಿಂಗ್ ಕ್ರಿಯೆಯು ಮೇಲ್ಮೈಗೆ ಅಂಟಿಕೊಂಡಿರುವ ಕೀಟನಾಶಕಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದಕ್ಕಾಗಿ ಕ್ಲೀನ್ ಬ್ರಷ್ ಅನ್ನು ಬಳಸಲು ಮರೆಯದಿರಿ.

Vegetables and Fruits

ಉಪ್ಪು ನೀರಿನಲ್ಲಿ ನೆನೆಸುವುದು

ಹಣ್ಣು, ತರಕಾರಿಗಳನ್ನು ಸಂಪೂರ್ಣವಾಗಿ ತೆಗೆದುಹಾಕಲು ಉಪ್ಪುನೀರನ್ನು ಸಹ ಬಳಸಬಹುದು. ಎರಡು ಚಮಚ ಉಪ್ಪನ್ನು ನಾಲ್ಕು ಕಪ್ ನೀರಿನಲ್ಲಿ ಕರಗಿಸಿ ಹಣ್ಣು ಮತ್ತು ತರಕಾರಿಗಳನ್ನು 10- 15 ನಿಮಿಷಗಳ ಕಾಲ ಅದರಲ್ಲಿ ನೆನೆಸಿಡಿ. ಅನಂತರ ಅವುಗಳನ್ನು ಶುದ್ಧ ನೀರಿನಿಂದ ಚೆನ್ನಾಗಿ ತೊಳೆಯಿರಿ.

Continue Reading

ಆರೋಗ್ಯ

Health Tips: ಕಿಡ್ನಿಕಲ್ಲಿನ ಸಮಸ್ಯೆ ನಿವಾರಣೆಗೆ ಬಾಳೆ ದಿಂಡನ್ನು ಹೀಗೆ ಬಳಸಿ…

Health Tips: ತೆಂಗಿನಂತೆ ಬಾಳೆಯೂ ಕಲ್ಪವೃಕ್ಷ ಎನಿಸಿಕೊಂಡಿದೆ. ಇದರ ಪ್ರತಿಯೊಂದು ಭಾಗವೂ ಉಪಯೋಗಕ್ಕೆ ಬರುತ್ತದೆ. ಅದರಲ್ಲಿಯೂ ಬಾಳೆದಿಂಡಿನಲ್ಲಿ ಅಪೂರ್ವ ಔಷಧೀಯ ಗುಣಗಳಿವೆ. ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸುವ ಅದ್ಭುತ ಶಕ್ತಿ ಬಾಳೆ ದಿಂಡಿಗಿದೆ. ಜತೆಗೆ ಗ್ಯಾಸ್ಟ್ರಿಕ್ ಸಮಸ್ಯೆ, ಮೂತ್ರಪಿಂಡದ ಸಮಸ್ಯೆಗೆ ಇದು ರಾಮಬಾಣ. ಖಾಲಿ ಹೊಟ್ಟೆಯಲ್ಲಿ ಬಾಳೆದಿಂಡಿರ ರಸವನ್ನು ಸೇವಿಸುವುದರಿಂದ ಎಸಿಡಿಟಿ ಸಮಸ್ಯೆ ದೂರವಾಗುತ್ತದೆ.

VISTARANEWS.COM


on

Health Tips
Koo

ಕುಮಾರ ಪೆರ್ನಾಜೆ, ಪುತ್ತೂರು
ಬೆಂಗಳೂರು: ಕಲ್ಪವೃಕ್ಷ ಎಂದಾಕ್ಷಣ ತೆಂಗಿನ ಚಿತ್ರ ನಮ್ಮ ಕಣ್ಣ ಮುಂದೆ ಬರುತ್ತದೆ. ಅದರ ಜತೆಗೆ ಬಾಳೆಯೂ ಕಲ್ಪವೃಕ್ಷವೇ. ತೆಂಗಿನಂತೆ ಇದರ ಎಲ್ಲ ಭಾಗಗಳು ಉಪಯುಕ್ತ. ಬಾಳೆ ದಿಂಡು ಉತ್ತಮ ಔಷಧಿಯ ಗುಣಗಳನ್ನು ಹೊಂದಿದ್ದು, ಇತ್ತೀಚೆಗೆ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕಿಡ್ನಿಯ ಕಲ್ಲಿನ ಸಮಸ್ಯೆಯನ್ನು ಗುಣಪಡಿಸುವ ಶಕ್ತಿ ಇದಕ್ಕಿದೆ. ಈ ಬಗೆಗಿನ ವಿವರ ಇಲ್ಲಿದೆ (Health Tips).

ಬಾಳೆ ದಿಂಡಿನ ಪ್ರಾಮುಖ್ಯತೆ ಇದೀಗ ಪ್ರತಿಯೊಬ್ಬರ ಅರಿವಿಗೂ ಬಂದಿದೆ. ಪರಿಣಾಮವಾಗಿ ಮಾರುಕಟ್ಟೆಯಲ್ಲಿ ಒಂದು ಅಡಿ ಉದ್ದದ ದಿಂಡಿಗೂ ಬಹಳ ಬೇಡಿಕೆ ಸೃಷ್ಟಿಯಾಗಿದೆ. ಇದರಲ್ಲಿ ಚಟ್ನಿ, ಸಾಸಿವೆ, ಸಾಂಬಾರ್, ಪಲ್ಯ, ಪಕೋಡ, ದೋಸೆ, ಇಡ್ಲಿ, ಸಲಾಡ್, ಮೊಸರು ಗೊಜ್ಜು ಹೀಗೆ ನಾನಾ ಭಕ್ಷ್ಯ ತಯಾರಿಸಬಹುದು. ಮಾತ್ರವಲ್ಲ ಬಾಳೆ ನಾರಿನಿಂದ ವಿವಿಧ ಪರಿಸರಸ್ನೇಹಿ ಉತ್ಪನ್ನಗಳನ್ನು ತಯಾರಿಸಬಹುದು. ಚೀಲಗಳು, ಬುಟ್ಟಿಗಳು, ಸಸಿ ಕುಂಡಗಳು, ಯೋಗಾಸನ ಚಾಪೆಗಳು, ಹಗ್ಗ, ಬಟ್ಟೆ ತಯಾರಿ ಹೀಗೆ…ಏನೆಲ್ಲ ಮಾಡಬಹುದು ಎಂಬ ಸಂಶೋಧನೆ ಮಾಡುವ ತನಕ ಬಾಳೆ ಇಷ್ಟೊಂದು ರೀತಿಯಲ್ಲಿ ಉಪಯೋಗಕ್ಕೆ ಬರುತ್ತದೆ ಎನ್ನುವುದು ಯಾರಿಗೂ ತಿಳಿದಿರಲಿಲ್ಲ.

ಕಿಡ್ನಿ ಕಲ್ಲು ಕರಗಿಸುವ ಬಾಳೆ ದಿಂಡು

ಮೊದಲೇ ಹೇಳಿದಂತೆ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸುವ ಅದ್ಭುತ ಶಕ್ತಿ ಬಾಳೆ ದಿಂಡಿಗಿದೆ. ಜತೆಗೆ ಗ್ಯಾಸ್ಟ್ರಿಕ್ ಸಮಸ್ಯೆ, ಮೂತ್ರಪಿಂಡದ ಸಮಸ್ಯೆಗೆ ಇದು ರಾಮಬಾಣ. ಖಾಲಿ ಹೊಟ್ಟೆಯಲ್ಲಿ ಬಾಳೆದಿಂಡಿರ ರಸವನ್ನು ಸೇವಿಸುವುದರಿಂದ ಎಸಿಡಿಟಿ ಸಮಸ್ಯೆ ದೂರವಾಗುತ್ತದೆ. ಕಿಡ್ನಿ ಕಲ್ಲಿನ ಸಮಸ್ಯೆ ನಿವಾರಣೆಗೆ ಬಾಳೆ ದಿಂಡಿನ ನೀರನ್ನು ಕುಡಿಯುವುದು ಅತ್ಯುತ್ತಮ ಮಾರ್ಗ ಎನಿಸಿಕೊಂಡಿದೆ. ಈ ನೀರನ್ನು ಹೇಗೆ ಸಂಗ್ರಹಿಸಬಹುದು ಎನ್ನುವುದರ ವಿವರ ಇಲ್ಲಿದೆ. ಬಾಳೆಗಿಡ ಕಡಿದು ಮಧ್ಯದ ದಿಂಡನ್ನು ತೆಗೆದು ಕಾಂಡದಲ್ಲಿ ಗುಳಿಯ ಆಕಾರವನ್ನು ತೋಡಿ. ಬಳಿಕ ಕಸ, ಧೂಳು ಹಾರದಂತೆ ಅದಕ್ಕೆ ಪ್ಲಾಸ್ಟಿಕ್ ಅಥವಾ ಬಾಳೆ ಎಲೆ ಮುಚ್ಚಿ. ಮರುದಿನ ನೋಡಿದಾಗ ಗುಳಿಯಲ್ಲಿ ನೀರು ತುಂಬಿರುತ್ತದೆ.

ಈ ನೀರನ್ನು ಶುಭ್ರ ಪಾತ್ರೆಯಲ್ಲಿ ತೆಗೆದುಕೊಂಡು ನಿಯಮಿತವಾಗಿ ಸೇವಿಸಿ. ಇದರಿಂದ ಕಿಡ್ನಿ ಕಲ್ಲಿ ಕರಗುತ್ತದೆ ಎನ್ನುತ್ತಾರೆ ತಜ್ಞರು. ಅಲ್ಲದೆ ಬಾಳೆ ದಿಂಡನ್ನು ಅರೆದು ಅದನ್ನು ಸೋಸಿಯೂ ಕುಡಿಯಬಹುದು. ಹೀಗೆ ಬಾಳೆದಿಂಡಿನ ರಸವನ್ನು ವರ್ಷಕ್ಕೆ ಎರಡು ಬಾರಿಯಾದರೂ ಸೇವಿಸುವುದರಿಂದ ಹೊಟ್ಟೆಯಲ್ಲಿರುವ ಕಲ್ಮಶಗಳನ್ನು ಹೊರ ಹಾಕಬಹುದು.

ಇದನ್ನೂ ಓದಿ: Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

ಜ್ಯೂಸ್‌ ತಯಾರಿಸಿ

ಬಾಳೆ ದಿಂಡಿನ ರಸವನ್ನು ನೇರವಾಗಿ ಸೇವಿಸಲು ಸಾಧ್ಯವಾಗದಿದ್ದರೆ ಜ್ಯೂಸ್‌ ತಯಾರಿಸಿಯೂ ಕುಡಿಯಬಹುದು. ಬಾಳೆದಿಂಡಿನ ನೀರಿಗೆ ಜೀರಿಗೆ, ಶುಂಠಿ, ನಿಂಬೆರಸ, ಗಾಂಧಾರಿ ಮೆಣಸು, ಚಿಟಿಕೆ ಉಪ್ಪು, ಬೇಕಿದ್ದರೆ ಕಲ್ಲು ಸಕ್ಕರೆ ಸೇರಿಸಿ ಕುಡಿಯಬಹುದು. ಇದನ್ನು ಸಮಸ್ಯೆ ಇದ್ದವರೇ ಕುಡಿಯಬೇಕೆಂದಿಲ್ಲ. ಯಾರೂ ಬೇಕಾದರೂ ಸೇವಿಸಬಹುದು. ಇತ್ತೀಚೆಗಂತೂ ಬಿಸಿಲಿನ ತಾಪ ವಿಪರೀತವಾಗಿ ಏರಿಕೆಯಾಗುತ್ತಿದೆ. ಹೀಗಾಗಿ ಸಾಧ್ಯವಾದಷ್ಟು ಮನೆಯಲ್ಲಿಯೇ ತಯಾರಿಸಿದ ಆಹಾರದ ಜತೆಗೆ ಇಂತಹ ಪ್ರಾಕೃತಿಕ ಔಷಧಗಳ ಪ್ರಯೋಜನ ಪಡೆಯಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

Continue Reading

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading
Advertisement
Jai Shri Ram Slogan
ಕರ್ನಾಟಕ23 mins ago

Jai Shri Ram Slogan: ಜೈ ಶ್ರೀರಾಮ್ ಘೋಷಣೆ ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದಿದ್ದ ಕೈ ಮುಖಂಡ ಅಮಾನತು

Paytm
ಪ್ರಮುಖ ಸುದ್ದಿ31 mins ago

Paytm : ಪೇಟಿಎಂ ಸಿಒಒ ಭವೇಶ್ ಗುಪ್ತಾ ಏಕಾಏಕಿ ರಾಜೀನಾಮೆ

Ballari DC Prashanth kumar Mishra pressmeet about MLC election
ಬಳ್ಳಾರಿ38 mins ago

MLC Election: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ; ಮೇ 9ಕ್ಕೆ ಅಧಿಸೂಚನೆ ಪ್ರಕಟ

HD Revanna
ಕರ್ನಾಟಕ49 mins ago

HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

IPL 2024
Latest1 hour ago

IPL 2024 : ಭಾರೀ ಭದ್ರತಾ ಲೋಪ; ಎಸ್​ಆರ್​​ಎಚ್​ ವಿದೇಶಿ ಆಟಗಾರನ ಮೇಲೆ ಮುಗಿಬಿದ್ದ ಸಾರ್ವಜನಿಕರು!

Ballari DC Prashanth kumar Mishra pressmeet about lok sabha election
ಬಳ್ಳಾರಿ1 hour ago

Lok Sabha Election 2024: ಪಾರದರ್ಶಕ ಚುನಾವಣೆಗೆ ಬಳ್ಳಾರಿ ಜಿಲ್ಲಾಡಳಿತ ಸಜ್ಜು

Shivamogga BJP
ಶಿವಮೊಗ್ಗ1 hour ago

Lok Sabha Election 2024: ಶಿವಮೊಗ್ಗದಲ್ಲಿ ಪ್ರಚಾರದ ವೇಳೆ ಕಿರಿಕ್; ಬಿಜೆಪಿ ವಾಹನ ಹಿಮ್ಮೆಟ್ಟಿಸಿದ ಈಶ್ವರಪ್ಪ ಅಭಿಮಾನಿಗಳು

HD Revanna
ಕರ್ನಾಟಕ2 hours ago

HD Revanna: ರೇವಣ್ಣ ಬಂಧನ ಬೆನ್ನಲ್ಲೇ ಕುಮಾರಸ್ವಾಮಿ ಮೀಟಿಂಗ್;‌ ಮಗನ ಬಳಿಕ ತಂದೆಯೂ ಅಮಾನತು?

Terrorist Attack
ಪ್ರಮುಖ ಸುದ್ದಿ2 hours ago

Terrorist Attack : ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ: ನಾಲ್ವರು ವಾಯುಪಡೆ ಸಿಬ್ಬಂದಿಗೆ ಗಾಯ

HD Revanna
ಕರ್ನಾಟಕ2 hours ago

HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ17 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌