Indian Cooking: ಈ ಭಾರತೀಯ ಅಡುಗೆಗಳು ವಿದೇಶಗಳಲ್ಲೂ ಜನಪ್ರಿಯ! - Vistara News

ಆಹಾರ/ಅಡುಗೆ

Indian Cooking: ಈ ಭಾರತೀಯ ಅಡುಗೆಗಳು ವಿದೇಶಗಳಲ್ಲೂ ಜನಪ್ರಿಯ!

ವಿದೇಶೀಯರು, ಭಾರತದ ಯಾವ ಅಡುಗೆಗಳನ್ನು (Indian cooking) ಬಹಳ ಇಷ್ಟಪಡುತ್ತಾರೆ ಹಾಗೂ ಯಾವ ಭಾರತೀಯ ತಿನಿಸುಗಳಿಗೆ ವಿಶ್ವದೆಲ್ಲೆಡೆ ಬೇಡಿಕೆ ಹೆಚ್ಚು ಎಂಬುದನ್ನು ತಿಳಿಯೋಣ.

VISTARANEWS.COM


on

Indian Cooking
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತೀಯ ಅಡುಗೆಗೆ (Indian cooking) ವಿಶ್ವಮಟ್ಟದಲ್ಲಿ ತನ್ನದೇ ಆದ ಸ್ಥಾನವಿದೆ. ಭಾರತದ ಅಡುಗೆಯಲ್ಲಿರುವ ಬಗೆ ಬಗೆಯ ಮಸಾಲ ಪದಾರ್ಥಗಳು ನಮ್ಮ ಅಡುಗೆಯನ್ನು ಶ್ರೀಮಂತವಾಗಿಸುವುದಷ್ಟೇ ಅಲ್ಲ, ಅದರ ಘಮ, ರುಚಿ, ಸ್ವಾದ ಹೀಗೆ ಎಲ್ಲದರಲ್ಲೂ ಎತ್ತಿದ ಕೈ. ಅದಕ್ಕಾಗಿಯೇ ಪ್ರಪಂಚದಾದ್ಯಂತ ಭಾರತೀಯ ಅಡುಗೆಗೆ ತನ್ನದೇ ಆದ ಅಭಿಮಾನಿ ಬಳಗವಿದೆ. ಪ್ರಪಂಚದ ಯಾವುದೇ ಮೂಲೆಗೆ ಹೋದರೂ, ಅಲ್ಲೊಂದು ಭಾರತೀಯ ರೆಸ್ಟೋರೆಂಟನ್ನು ಹುಡುಕುವುದು ಈಗ ಸಮಸ್ಯೆಯಲ್ಲ. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣಗಳು ಬಂದ ಮೇಲಂತೂ ವಿದೇಶಿಯರು ಕೂಡ ತಮ್ಮ ಯುಟ್ಯೂಬ್‌ ಚಾನಲ್‌ಗಳಲ್ಲಿ, ಇನ್‌ಸ್ಟಾಗ್ರಾಂನಲ್ಲಿ ಭಾರತೀಯ ಅಡುಗೆಗಳನ್ನು ತಯಾರಿಸುವ ವಿಡಿಯೋಗಳೂ ಕೂಡಾ ವೈರಲ್‌ ಆಗುತ್ತಿವೆ. ಬನ್ನಿ, ವಿದೇಶೀಯರು, ಭಾರತದ ಯಾವ ಅಡುಗೆಗಳನ್ನು ಬಹಳ ಇಷ್ಟಪಡುತ್ತಾರೆ ಹಾಗೂ ಯಾವ ಭಾರತೀಯ ತಿನಿಸುಗಳಿಗೆ ವಿಶ್ವದೆಲ್ಲೆಡೆ ಬೇಡಿಕೆ ಹೆಚ್ಚು ಎಂಬುದನ್ನು ತಿಳಿಯೋಣ.

Samosa

ಸಮೋಸ

ಆಲೂಗಡ್ಡೆಯ ಪಲ್ಯವನ್ನು ಹೂರಣವಾಗಿರಿಸಿಕೊಂಡು ಎಣ್ಣೆಯಲ್ಲಿ ಕರಿದ ಈ ಸಮೋಸ ಎಂಬ ತಿನಿಸು ಭಾರತದುದ್ದಕ್ಕೂ ಬಹುಬೇಡಿಕೆಯ ತಿನಿಸು. ಇದು ಸ್ಟಾರ್ಟರ್‌ ಆಗಿಯೂ, ಪಾರ್ಟಿಗಳಲ್ಲಿ ಲೈಟಾಗಿ ತಿನ್ನಲು, ಸಣ್ಣ ಪುಟ್ಟ ಗೆಟ್‌ ಟುಗೆದರ್‌ಗಳಲ್ಲಿ ಜನರು ತಿನ್ನಲು ಇಷ್ಟಪಡುವ ಟಾಪ್‌ ತಿನಿಸುಗಳಲ್ಲಿ ಸಮೋಸಕ್ಕೆ ಅಗ್ರಸ್ಥಾನ. ಸಿಹಿ ಹಾಗೂ ಖಾರ ಚಟ್ನಿ ಇದ್ದರೆ ಸಮೋಸದ ರುಚಿಯನ್ನು ಬಲ್ಲವನೇ ಬಲ್ಲ. ಹಾಗಾಗಿಯೇ ಇದು ವಿದೇಶಿಯರಿಗೂ ಫೇವರಿಟ್ಟು. ಭಾರತಕ್ಕೆ ಬರುವ ವಿದೇಶಿ ಪ್ರವಾಸಿಗರು ಭಾರತದಲ್ಲಿನ ಬೆಸ್ಟ್‌ ಸಮೋಸಗಳನ್ನು ತಿನ್ನದೇ ಹೋಗುವಿದಿಲ್ಲ!

Biryani

ಬಿರಿಯಾನಿ

ಅನ್ನ, ತರಕಾರಿ ಹಾಗೂ ಮಾಂಸ ಇತ್ಯಾದಿಗಳನ್ನು ಹಾಕಿದ ಬಗೆಬಗೆಯ ಮಸಾಲೆಗಳನ್ನು ಹಾಕಿ ಮಾಡುವ ವಿಶೇಷ ರೈಸ್‌ ಈ ಬಿರಿಯಾನಿ. ಭಾರತದಾದ್ಯಂತ ಹಲವು ನಗರಗಳಲ್ಲಿ ಬೇರೆ ಬೇರೆ ಮಾದರಿಯ ಬಿರಿಯಾನಿಗಳು ಲಭ್ಯವಿವೆ. ವಿದೇಶದಲ್ಲೂ ಭಾರತೀಯ ಶೈಲಿಯ ಬಿರಿಯಾನಿ ಎಂದರೆ ಬಲು ಜನಪ್ರಿಯ.

dosa

ದೋಸೆ

ಅಕ್ಕಿ ಹಾಗೂ ಬೇಳೆಗಳನ್ನು ಹಾಕಿ ಮಾಡಿದ ಹಿಟ್ಟಿನಿಂದ ತವಾದ ಮೇಲೆ ಹುಯ್ಯುವ ದೋಸೆ ಎಂಬ ತಿನಿಸು ದಕ್ಷಿಣ ಭಾರತೀಯರ ಆರಾಧ್ಯ ದೈವ. ದೋಸೆ ಎಂಬ ಆರೋಗ್ಯಕರ ಬೆಳಗಿನ ತಿಂಡಿಯ ಮೇಲೆ ಭಾರತಾದ್ಯಂತ ಜನರಿಗೆ ವಿಶೇಷ ವ್ಯಾಮೋಹ. ಚಟ್ನಿ ಹಾಗೂ ಸಾಂಬಾರಿನ ಜತೆಗೆ ದೋಸೆಯನ್ನು ತಿನ್ನುತ್ತಿದ್ದರೆ, ಸ್ವರ್ಗಕ್ಕೆ ಮೂರೇ ಗೇಣು. ಅದಕ್ಕಾಗಿಯೇ ದೋಸೆ, ಕೇವಲ ಉತ್ತರ ಭಾರತೀಯರಲ್ಲಷ್ಟೇ ಅಲ್ಲ, ವಿದೇಶೀಯರಲ್ಲೂ ಜನಪ್ರಿಯ.

Butter chicken

ಬಟರ್‌ ಚಿಕನ್

ಪಂಜಾಬಿನ ಅತ್ಯಂತ ಜನಪ್ರಿಯ ಗ್ರೇವಿ ಬಟರ್‌ ಚಿಕನ್‌ ಕೇವಲ ಭಾರತದಲ್ಲಷ್ಟೇ ಅಲ್ಲ, ವಿದೇಶದಲ್ಲೂ ಫೇಮಸ್ಸು. ಸಾಕಷ್ಟು ಬೆಣ್ಣೆ, ಚಿಕನ್‌, ಟೊಮ್ಯಾಟೊ, ಈರುಳ್ಳಿ ಸೇರಿದಂತೆ ಗರಂ ಮಸಾಲೆ ಹಾಕಿ ಮಾಡುವ ಬೆಣ್ಣೆಯಿಂದ ಸಮೃದ್ಧವಾಗಿರುವ ಸೈಡ್‌ ಡಿಶ್‌ ಇದು. ಚಪಾತಿ, ನಾನ್‌, ರೋಟಿ, ಕುಲ್ಚಾ ಇತ್ಯಾದಿಗಳ ಜತೆ ತಿನ್ನಲು ಬಲು ರುಚಿಯಾಗಿರುವ ಇದಕ್ಕೆ ಅದರದ್ದೇ ಆದ ಘಮವಿದೆ. ಅದಕ್ಕೇ ಇದಕ್ಕೆ ಯಾವಾಗಲೂ ಬೇಡಿಕೆ.

Dal Makhani

ದಾಲ್‌ ಮಖನಿ

ಉದ್ದಿನ ಬೇಳೆಯಲ್ಲಿ ಮಾಡುವ ದಾಲ್‌ ಮಖನಿ ಎಂಬ ಪಂಜಾಬಿ ಅಡುಗೆ ಅನ್ನದ ಜೊತೆಗೆ, ಚಪಾತಿ, ರೋಟಿಯ ಜೊತೆಗೆ ತಿನ್ನುವ ಸೈಡ್‌ ಡಿಶ್‌. ಪಂಜಾಬಿಗಳ ಅಡುಗೆಯಾಗಿರುವ ಇದು ಭಾರತದಾದ್ಯಂತ ಮುಖ್ಯವಾಗಿ ಉತ್ತರ ಭಾರತೀಯರಲ್ಲಿ ಜನಪ್ರಿಯ. ಅತ್ಯಂತ ಆರೋಗ್ಯಕರವಾಗಿರುವ ಈ ಸೈಡ್‌ ಡಿಶ್‌ ವಿದೇಶೀಯರಿಗೂ ಬಹಳ ಪ್ರಿಯ. ಸಸ್ಯಾಹಾರಿಗಳ ಊಟದಲ್ಲಿ ಇದು ಆರಾಧ್ಯ ದೈವವಿದ್ದಂತೆ.

ಇದನ್ನೂ ಓದಿ: Foods For Brain Power: ಈ ಆಹಾರಗಳನ್ನು ನಿಮ್ಮ ಮಕ್ಕಳಿಗೆ ತಿನ್ನಿಸಿ, ನೆನಪಿನ ಶಕ್ತಿ ಹೆಚ್ಚಿಸಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Healthy Diet: ಬೆಣ್ಣೆ ಆರೋಗ್ಯಕ್ಕೆ ಒಳ್ಳೆಯದೇ ಕೆಟ್ಟದ್ದೇ? ಈ ಸಂಗತಿ ತಿಳಿದುಕೊಂಡಿರಿ

ಬೆಣ್ಣೆ ಆರೋಗ್ಯಕ್ಕೆ ಕೆಟ್ಟದು ಎಂದು ಕೆಲವರು ಭಾವಿಸುತ್ತಾರೆ. ಆದರೆ ನೀವು ಅದನ್ನು ಮಿತವಾಗಿ ಸೇವಿಸಿದರೆ ಅದು ಕೆಟ್ಟದ್ದಲ್ಲ ಎನ್ನುತ್ತಾರೆ ಇನ್ನು ಕೆಲವರು. ಹೌದು ಬೆಣ್ಣೆಯನ್ನು ಮಿತವಾಗಿ ಸೇವಿಸಿದರೆ ಮಾತ್ರ ಆರೋಗ್ಯಕರ ಆಹಾರದ (Healthy Diet) ಭಾಗವಾಗುವುದು ನಿಜ. ಈ ಕುರಿತು ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

By

Healthy Diet
Koo

ಹಾಲು (milk), ಮೊಸರು (curd), ತುಪ್ಪ (ghee), ಬೆಣ್ಣೆ (butter) ಇಲ್ಲದೇ ಇದ್ದರೆ ಭಾರತೀಯರ ಮನೆಗಳಲ್ಲಿ ಅಡುಗೆ ಕೆಲಸ ಕಾರ್ಯಗಳು ಒಂದೂ ನಡೆಯುವುದಿಲ್ಲ. ಆರೋಗ್ಯದ ವಿಚಾರದಲ್ಲಿ (Healthy Diet) ಹಾಲು, ತುಪ್ಪ, ಮೊಸರಿನ ಬಗ್ಗೆ ಅಷ್ಟೇನು ಸಂದೇಹವಿಲ್ಲ. ಆದರೆ ಬೆಣ್ಣೆಯ ವಿಚಾರ ಬಂದಾಗ ಇದು ಆರೋಗ್ಯಕರ ಹೌದೋ ಅಲ್ಲವೋ ಎನ್ನುವ ಗೊಂದಲ ಕಾಡುತ್ತದೆ.

ಭಾರತೀಯ ಮನೆಗಳ ಪಾಕ ಶಾಲೆಯಲ್ಲಿ ಬಹುವಿಧವಾಗಿ ಬಳಸುವ ಬೆಣ್ಣೆಯು ಅದರ ಪೋಷಕಾಂಶದಿಂದಲೂ ಹೆಚ್ಚು ಮೌಲ್ಯಯುತ ಎಂದೆನಿಸಿದೆ. ಇದು ಹಲವಾರು ಪೋಷಕಾಂಶಗಳ ಕೇಂದ್ರೀಕೃತ ಮೂಲವಾಗಿದೆ. ಇದರಲ್ಲಿ ಕೊಬ್ಬು ಕರಗಬಲ್ಲ ವಿಟಮಿನ್‌ಗಳಾದ ಎ, ಇ ಮತ್ತು ಕೆ2 ವಿವಿಧ ದೈಹಿಕ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆರೋಗ್ಯಕರ ದೃಷ್ಟಿ, ಚರ್ಮವನ್ನು ಕಾಪಾಡಿಕೊಳ್ಳಲು ಮತ್ತು ಒಟ್ಟಾರೆ ದೇಹದ ಪ್ರತಿರಕ್ಷೆಯನ್ನು ಬೆಂಬಲಿಸಲು ಇವುಗಳು ಅತ್ಯಗತ್ಯ.

ಬೆಣ್ಣೆ ಆರೋಗ್ಯಕ್ಕೆ ಕೆಟ್ಟದು ಎಂದು ಕೆಲವರು ಭಾವಿಸುತ್ತಾರೆ. ಆದರೆ ನೀವು ಅದನ್ನು ಮಿತವಾಗಿ ಸೇವಿಸಿದರೆ ಅದು ಕೆಟ್ಟದ್ದಲ್ಲ ಎನ್ನುತ್ತಾರೆ ಇನ್ನು ಕೆಲವರು. ಹೌದು ಬೆಣ್ಣೆಯನ್ನು ಮಿತವಾಗಿ ಸೇವಿಸಿದರೆ ಮಾತ್ರ ಆರೋಗ್ಯಕರ ಆಹಾರದ ಭಾಗವಾಗುವುದು ನಿಜ. ಅಲ್ಲದೇ ಉತ್ತಮ ಗುಣಮಟ್ಟದ ಬೆಣ್ಣೆಯನ್ನು ಆಯ್ಕೆ ಮಾಡಲು ಸೂಚಿಸಲಾಗುತ್ತದೆ. ಏಕೆಂದರೆ ಇದು ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುತ್ತದೆ. ದೇಹಕ್ಕೆ ಅಗತ್ಯವಾದ ಉತ್ತಮ ಕೊಬ್ಬಿನಾಂಶಗಳು ಬೆಣ್ಣೆ, ಆಲಿವ್ ಎಣ್ಣೆ, ಆವಕಾಡೊಗಳಿಂದಲೂ ಸಿಗುತ್ತದೆ.


ಹೆಚ್ಚುವರಿ ಬೆಣ್ಣೆಯನ್ನು ಸೇವಿಸಿದರೆ ಏನಾಗುತ್ತದೆ?

ಬೆಣ್ಣೆಯಲ್ಲಿ ಸ್ಯಾಚುರೇಟೆಡ್ ಕೊಬ್ಬಿನಂಶ ಹೆಚ್ಚಿರುತ್ತದೆ. ಇದನ್ನು ಅಧಿಕವಾಗಿ ಸೇವಿಸಿದಾಗ ಎಲ್‌ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ.

ಬೆಣ್ಣೆಯು ಕ್ಯಾಲೋರಿ ದಟ್ಟವಾಗಿರುತ್ತದೆ. ಆದ್ದರಿಂದ ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ತೂಕ ಹೆಚ್ಚಾಗಬಹುದು. ಬೆಣ್ಣೆಯನ್ನು ಮಿತವಾಗಿ ಸೇವಿಸಲು ಯಾವಾಗಲೂ ಸಲಹೆ ನೀಡಲಾಗುತ್ತದೆ.

ಹಲವಾರು ಅಧ್ಯಯನಗಳ ಪ್ರಕಾರ ಬೆಣ್ಣೆಯು ರಕ್ತದ ಲಿಪಿಡ್ ಮಟ್ಟವನ್ನು ಹಾನಿಗೊಳಿಸುತ್ತದೆ. ಹೃದಯದ ಪರಿಸ್ಥಿತಿಗಳು ಅಥವಾ ಕೊಲೆಸ್ಟ್ರಾಲ್ ನಿಂದ ಬಳಲುತ್ತಿರುವವರಿಗೆ, ಮಿತವಾಗಿರುವುದು ಮುಖ್ಯವಾಗಿದೆ.

ಇದನ್ನೂ ಓದಿ: Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

ಬೆಣ್ಣೆಯು ಲ್ಯಾಕ್ಟೋಸ್ ಮತ್ತು ಡೇರಿ ಪ್ರೋಟೀನ್‌ಗಳನ್ನು ಹೊಂದಿರುತ್ತದೆ. ಇದು ಡೇರಿ ಅಲರ್ಜಿಯಿಂದ ಬಳಲುತ್ತಿರುವವರಿಗೆ ಸಮಸ್ಯೆಯಾಗಬಹುದು. ಬೆಣ್ಣೆಯನ್ನು ಸೇವಿಸಿದ ಅನಂತರ ಉಬ್ಬುವುದು, ಗ್ಯಾಸ್ ಅಥವಾ ಅತಿಸಾರದಂತಹ ಜೀರ್ಣಕಾರಿ ತೊಂದರೆಗಳನ್ನು ಅವರು ಅನುಭವಿಸಬಹುದು.

ಬೆಣ್ಣೆಯನ್ನು ಮಿತವಾಗಿ ಸೇವಿಸಿದಾಗ ಆರೋಗ್ಯಕರ ಆಹಾರದ ಭಾಗವಾಗಬಹುದು. ಅದರ ಸ್ಯಾಚುರೇಟೆಡ್ ಕೊಬ್ಬಿನಂಶವನ್ನು ಗಮನದಲ್ಲಿಟ್ಟುಕೊಳ್ಳುವುದು ಮತ್ತು ಸಾಧ್ಯವಾದಾಗ ಉತ್ತಮ ಗುಣಮಟ್ಟದ ಆಯ್ಕೆಗಳನ್ನು ಆರಿಸುವುದು ಅತ್ಯಗತ್ಯ. ವೈವಿಧ್ಯಮಯ ಮತ್ತು ಸಮತೋಲಿತ ಆಹಾರದ ಭಾಗವಾಗಿ ಬೆಣ್ಣೆಯನ್ನು ಆನಂದಿಸುವುದು ಉತ್ತಮ.

Continue Reading

ಆರೋಗ್ಯ

FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

ಮಾವಿನ ಹಣ್ಣನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸಲಾಗುತ್ತದೆ. ಇದರ ವಿರುದ್ಧ ವರ್ತಕರಿಗೆ ಗಂಭೀರ ಆರೋಗ್ಯ ಅಪಾಯಗಳನ್ನು ಉಲ್ಲೇಖಿಸಿ ಎಚ್ಚರಿಕೆಯನ್ನು ( FSSAI Warning) ನೀಡಲಾಗಿದೆ.

VISTARANEWS.COM


on

By

FSSAI alert
Koo

ಮಾರುಕಟ್ಟೆಯಲ್ಲಿ (market) ಮಾವಿನ (mango) ಹಣ್ಣುಗಳ ರಾಶಿ ಕಂಡಾಗ ಎಂಥವರ ಬಾಯಲ್ಲೂ ನೀರೂರುವಂತೆ ಮಾಡುತ್ತದೆ. ಆದರೆ ನಾವು ಹಣ ಕೊಟ್ಟು ಖರೀದಿ ಮಾಡಿ ತಂದ ಮಾವಿನ ಹಣ್ಣುಗಳು ಸುರಕ್ಷಿತವಾಗಿ ಇದೆಯೇ? ಯಾಕೆಂದರೆ ಮಾವಿನ ಹಣ್ಣುಗಳಲ್ಲಿರುವ ಕ್ಯಾಲ್ಸಿಯಂ ಕಾರ್ಬೈಡ್ (calcium carbide) ಅಪಾಯಗಳ ವಿರುದ್ಧ ಕೇಂದ್ರ ಆಹಾರ ನಿಯಂತ್ರಣ ಸಂಸ್ಥೆಯಾದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI Warning) ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದೆ.

ಮಾವಿನ ಹಣ್ಣಿನ ಋತುವಿನಲ್ಲಿ ಕ್ಯಾಲ್ಸಿಯಂ ಕಾರ್ಬೈಡ್ ಬಳಸುವುದರ ಬಗ್ಗೆ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರೈಪನಿಂಗ್ ಚೇಂಬರ್‌ಗಳನ್ನು ನಿರ್ವಹಿಸುವ ವ್ಯಾಪಾರಿಗಳಿಗೆ ಎಫ್‌ಎಸ್‌ಎಸ್‌ಎಐ ಎಚ್ಚರಿಕೆ ನೀಡಿದೆ.
ಮಾವಿನ ಹಣ್ಣನ್ನು ಕೃತಕವಾಗಿ ಮಾಗಿಸಲು ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸಲಾಗುತ್ತದೆ. ಇದರ ವಿರುದ್ಧ ವರ್ತಕರಿಗೆ ಗಂಭೀರ ಆರೋಗ್ಯ ಅಪಾಯಗಳನ್ನು ಉಲ್ಲೇಖಿಸಿ ಎಚ್ಚರಿಕೆಯನ್ನು ನೀಡಲಾಗಿದೆ.

ಮಾವಿನ ಹಣ್ಣಿನ ಋತುವಿನಲ್ಲಿ ಕ್ಯಾಲ್ಸಿಯಂ ಕಾರ್ಬೈಡ್ ಅನ್ನು ಬಳಸುವುದರ ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಫ್‌ಎಸ್‌ಎಸ್‌ಎಐ ಹಣ್ಣಿನ ವ್ಯಾಪಾರಿಗಳು, ಹ್ಯಾಂಡ್ಲರ್‌ಗಳು ಮತ್ತು ಫುಡ್ ಬ್ಯುಸಿನೆಸ್ ಆಪರೇಟರ್‌ಗಳು (ಎಫ್‌ಬಿಒಗಳು) ಪಕ್ವಗೊಳಿಸುವ ಕೋಣೆಗಳನ್ನು ನಿರ್ವಹಿಸುವ ಎಚ್ಚರಿಕೆ ನೀಡಿದೆ.

ಕ್ಯಾಲ್ಸಿಯಂ ಕಾರ್ಬೈಡ್‌ನ ಪರಿಣಾಮ?

ಮಾವಿನಹಣ್ಣಿನಂತಹ ಹಣ್ಣುಗಳನ್ನು ಹಣ್ಣಾಗಲು ಬಳಸುವ ಕ್ಯಾಲ್ಸಿಯಂ ಕಾರ್ಬೈಡ್, ಆರ್ಸೆನಿಕ್ ಮತ್ತು ಫಾಸ್ಪರಸ್‌ನ ಹಾನಿಕಾರಕ ಕುರುಹುಗಳನ್ನು ಹೊಂದಿರುವ ಅಸಿಟಿಲೀನ್ ಅನಿಲವನ್ನು ಬಿಡುಗಡೆ ಮಾಡುತ್ತದೆ. ‘ಮಸಾಲಾ’ ಎಂದು ಕರೆಯಲ್ಪಡುವ ಈ ಪದಾರ್ಥಗಳು ತಲೆತಿರುಗುವಿಕೆ, ಆಗಾಗ್ಗೆ ಬಾಯಾರಿಕೆ, ಕಿರಿಕಿರಿ, ದೌರ್ಬಲ್ಯ, ನುಂಗಲು ತೊಂದರೆ, ವಾಂತಿ ಮತ್ತು ಚರ್ಮದ ಹುಣ್ಣುಗಳನ್ನು ಉಂಟುಮಾಡಬಹುದು. ಅಸಿಟಿಲೀನ್ ಅನಿಲವು ಹ್ಯಾಂಡ್ಲರ್‌ಗಳಿಗೆ ಅಪಾಯಕಾರಿಯಾಗಿದೆ ಮತ್ತು ಆರ್ಸೆನಿಕ್ ಮತ್ತು ರಂಜಕದ ಅವಶೇಷಗಳು ಹಣ್ಣುಗಳ ಮೇಲೆ ಉಳಿಯಬಹುದು.

ಸಾಮಾನ್ಯವಾಗಿ ಕಾರ್ಬೈಡ್ ಗ್ಯಾಸ್ ಎಂದು ಕರೆಯಲ್ಪಡುವ ಅಸಿಟಿಲೀನ್ ಅನಿಲದ ಬಳಕೆಯಿಂದ ಕೃತಕವಾಗಿ ಮಾಗಿದ ಹಣ್ಣುಗಳನ್ನು ಯಾವುದೇ ವ್ಯಕ್ತಿಯು ಮಾರಾಟ ಮಾಡಬಾರದು ಎಂದು ಆಹಾರ ಸುರಕ್ಷತೆ ಮತ್ತು ಮಾನದಂಡಗಳು ನಿಷೇಧ ಮತ್ತು ಮಾರಾಟದ ಮೇಲಿನ ನಿರ್ಬಂಧಗಳ ನಿಯಮಗಳು-2011 ಹೇಳುತ್ತವೆ.


ಯಾವುದಕ್ಕೆ ಅನುಮತಿ ಇದೆ?

ಎಫ್‌ಎಸ್‌ಎಸ್‌ಎಐ ಪ್ರಕಾರ ಹಣ್ಣು ಹಣ್ಣಾಗಿಸಲು ಸುರಕ್ಷಿತ ಪರ್ಯಾಯವಾಗಿ ಎಥಿಲೀನ್ ಅನಿಲವನ್ನು ಬಳಸಲು ಅನುಮತಿ ನೀಡುತ್ತದೆ. ಎಥಿಲೀನ್ ಅನಿಲ, 100ಪಿಪಿಎಂವರೆಗಿನ ಸಾಂದ್ರತೆಗಳಲ್ಲಿ ಹಣ್ಣಾಗುವುದನ್ನು ನಿಯಂತ್ರಿಸುವ ನೈಸರ್ಗಿಕ ಹಾರ್ಮೋನ್ ಆಗಿದೆ. ಹಣ್ಣು ಎಥಿಲೀನ್ ಅನ್ನು ಗಣನೀಯ ಪ್ರಮಾಣದಲ್ಲಿ ಉತ್ಪಾದಿಸುವವರೆಗೆ ಇದು ನೈಸರ್ಗಿಕ ಮಾಗಿದ ಪ್ರಕ್ರಿಯೆಯನ್ನು ಪ್ರಚೋದಿಸುತ್ತದೆ. ಹೆಚ್ಚುವರಿಯಾಗಿ ಕೇಂದ್ರೀಯ ಕೀಟನಾಶಕ ಮಂಡಳಿ ಮತ್ತು ನೋಂದಣಿ ಸಮಿತಿ (CIB & RC) ಮಾವು ಮತ್ತು ಇತರ ಹಣ್ಣುಗಳ ಏಕರೂಪದ ಪಕ್ವತೆಗಾಗಿ ಎಥೆಫೋನ್ 39 ಪ್ರತಿಶತ ಎಸ್ ಎಲ್ ಅನ್ನು ಅನುಮೋದಿಸಿದೆ.

ಗುರುತಿಸುವುದು ಹೇಗೆ?

ಕ್ಯಾಲ್ಸಿಯಂ ಕಾರ್ಬೈಡ್‌ನಿಂದ ಹಣ್ಣಾದ ಮಾವಿನ ಹಣ್ಣನ್ನು ಗುರುತಿಸುವುದು ಸುಲಭ.

ವಿಶ್ವಾಸಾರ್ಹ ಮೂಲಗಳಿಂದ ಖರೀದಿಸಿ

ಹಣ್ಣುಗಳು ಮತ್ತು ತರಕಾರಿಗಳನ್ನು ತಿಳಿದಿರುವ ಮಾರಾಟಗಾರರು, ಪ್ರತಿಷ್ಠಿತ ಅಂಗಡಿಗಳು ಅಥವಾ ವಿತರಕರು ತಮ್ಮ ಉತ್ಪನ್ನಗಳನ್ನು ಹಾನಿಕಾರಕ ಅಥವಾ ನಿಷೇಧಿತ ರಾಸಾಯನಿಕಗಳಿಂದ ಹಣ್ಣಾಗಿಲ್ಲ ಎಂದು ಹೇಳಿಕೊಳ್ಳುತ್ತಾರೆ.

ಸಂಪೂರ್ಣವಾಗಿ ತೊಳೆಯುವುದು

ಯಾವುದೇ ಸಂಭಾವ್ಯ ಮೇಲ್ಮೈ ಮಾಲಿನ್ಯಕಾರಕಗಳನ್ನು ತೆಗೆದುಹಾಕಲು ತಿನ್ನುವ ಮೊದಲು ಕುಡಿಯುವ ನೀರಿನಲ್ಲಿ ಹಣ್ಣುಗಳನ್ನು ಚೆನ್ನಾಗಿ ತೊಳೆಯಿರಿ.

ಕಪ್ಪು ಕಲೆಗಳನ್ನು ತಪ್ಪಿಸಿ

ಮಾವಿನ ಹಣ್ಣುಗಳ ಚರ್ಮದ ಮೇಲೆ ಕಪ್ಪು ಮಚ್ಚೆಗಳಿರುವ ಹಣ್ಣುಗಳಿಂದ ದೂರವಿರಿ. ಏಕೆಂದರೆ ಇವುಗಳು ಕ್ಯಾಲ್ಸಿಯಂ ಕಾರ್ಬೈಡ್‌ನಿಂದ ಅಸಿಟಿಲೀನ್ ಅನಿಲದಿಂದ ಹಣ್ಣಾಗುತ್ತವೆ.

ಇದನ್ನೂ ಓದಿ: Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

ವಿನ್ಯಾಸವನ್ನು ಪರಿಶೀಲಿಸಿ

ಏಕರೂಪದ ಬಣ್ಣದ ವಿನ್ಯಾಸದೊಂದಿಗೆ ಮಾವಿನಹಣ್ಣು ಮತ್ತು ಇತರ ಹಣ್ಣುಗಳ ಬಗ್ಗೆ ಜಾಗರೂಕರಾಗಿರಿ. ಏಕೆಂದರೆ ಇದು ಸಂಭವನೀಯ ರಾಸಾಯನಿಕ ಪಕ್ವತೆಯ ಸಂಕೇತವಾಗಿದೆ.

ವಾಸನೆ ಮತ್ತು ಶೆಲ್ಫ್ ಲೈಫ್

ಕಲಬೆರಕೆ ಹಣ್ಣುಗಳು ಸ್ವಲ್ಪ ಕಟುವಾದ ವಾಸನೆ ಮತ್ತು ಕಡಿಮೆ ಶೆಲ್ಫ್ ಜೀವಿತಾವಧಿಯನ್ನು ಹೊಂದಿರುತ್ತದೆ ಎಂಬುದು ತಿಳಿದಿರಲಿ. ಸಾಮಾನ್ಯವಾಗಿ ಮಾಗಿದ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆಯನ್ನು ಸೂಚಿಸುತ್ತದೆ.

Continue Reading

ಆಹಾರ/ಅಡುಗೆ

Famous Food of Bangalore: ಬೆಂಗಳೂರಿಗೆ ಬಂದಾಗ ಈ ಖಾದ್ಯಗಳ ರುಚಿ ನೋಡಲು ಮರೆಯಬೇಡಿ!

Famous Food of bangalore: ಬೆಂಗಳೂರಿಗೆ ಹೋಗುವ ಪ್ಲ್ಯಾನ್ ಇದ್ದರೆ ಇಲ್ಲಿನ ಕೆಲವು ರುಚಿಕರವಾದ ಖಾದ್ಯವನ್ನು ಸವಿಯಲು ಮರೆಯದಿರಿ. ಹಾಗೆಯೇ ಈ ಖಾದ್ಯಗಳನ್ನು ಮನೆಯಲ್ಲೂ ತಯಾರಿಸಬಹುದು. ಆಹಾರ ಪ್ರಿಯರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

By

Famous Food of bangalore
Koo

ಇಡ್ಲಿ (Idli), ದೋಸೆ (dose), ವಿವಿಧ ಬಗೆಯ (Famous Food of Bangalore) ರೈಸ್, ಮೈಸೂರು ಪಾಕ್ (mysore pak) ಸೇರಿದಂತೆ ವಿವಿಧ ಸಿಹಿ ತಿನಿಸುಗಳು ಎಂಥವರ ಬಾಯಲ್ಲೂ ನೀರೂರುವಂತೆ ಮಾಡುತ್ತದೆ. ದಕ್ಷಿಣ ಭಾರತೀಯ (south india) ಪಾಕಪದ್ಧತಿಯು ಸುವಾಸನೆ ಮತ್ತು ವಿವಿಧ ರೆಸಿಪಿಗಳ ರುಚಿಕರ ಸವಿಯಿಂದ ತುಂಬಿರುತ್ತದೆ. ಕರಿಬೇವಿನ ಎಲೆಗಳು, ಹುಣಸೆಹಣ್ಣು, ಹಸಿರು ಮತ್ತು ಕೆಂಪು ಮೆಣಸಿನಕಾಯಿ, ತೆಂಗಿನ ಹಾಲು, ಕರಿಮೆಣಸು ಹೀಗೆ ಬಗೆಬಗೆಯ ಮಸಾಲೆಗಳು ಮತ್ತು ಗಿಡಮೂಲಿಕೆಗಳೊಂದಿಗೆ ಭಕ್ಷ್ಯಗಳನ್ನು ಸಿದ್ಧಪಡಿಸಲಾಗುತ್ತದೆ.

ಬೆಂಗಳೂರಿಗೆ (bengaluru) ಪ್ರಯಾಣ ಮಾಡುವ ಯೋಜನೆ ಇದ್ದರೆ ಇಲ್ಲಿನ ಕೆಲವೊಂದು ಖಾದ್ಯಗಳ (Best dish) ಸವಿಯನ್ನು ನೀವು ಪಡೆಯದೇ ಇದ್ದರೆ ಖಂಡಿತ ನಿಮ್ಮ ಪ್ರಯಾಣ ಪೂರ್ತಿ ಅಲ್ಲ. ಅಂತಹ ಖಾದ್ಯಗಳು ಯಾವುದು ಗೊತ್ತೇ? ಇಲ್ಲಿದೆ ಮಾಹಿತಿ.


ಮಂಗಳೂರು ಬಜ್ಜಿ

ಕರ್ನಾಟಕದ ಪ್ರಸಿದ್ಧ ಖಾದ್ಯಗಳು ಬೀದಿಯ ಮೂಲೆ ಮೂಲೆಯಲ್ಲಿ ಕಂಡುಬರುತ್ತದೆ. ಮಂಗಳೂರು ಬಜ್ಜಿಯನ್ನು ಅಧಿಕೃತ ಮಸಾಲೆಗಳು ಮತ್ತು ಗಿಡಮೂಲಿಕೆಗಳಿಂದ ತಯಾರಿಸಲಾಗುತ್ತದೆ. ಈ ಜನಪ್ರಿಯ ಆಹಾರವನ್ನು ನೀವು ಮನೆಯಲ್ಲಿ ಸುಲಭವಾಗಿ ತಯಾರಿಸಬಹುದು. ಬೆಂಗಳೂರಿನ ಮಂಗಳೂರು ಮೂಲದ ಹೋಟೆಲ್‌ಗಳಲ್ಲಿ ಈ ಬಜ್ಜಿ ಚೆನ್ನಾಗಿರುತ್ತದೆ.

ಹುಳಿ ಮೊಸರಿಗೆ ಅಕ್ಕಿ ಹಿಟ್ಟು ಮತ್ತು ಮೈದಾವನ್ನು ಬೆರೆಸುವ ಮೂಲಕ ಕರಿಬೇವು, ತೆಂಗಿನಕಾಯಿ, ಕೊತ್ತಂಬರಿ ಸೊಪ್ಪು ಮತ್ತು ಹಸಿರು ಮೆಣಸಿನಕಾಯಿಯನ್ನು ಸೇರಿಸಿ. ಹಿಟ್ಟನ್ನು ಚೆನ್ನಾಗಿ ಮಿಶ್ರಣ ಮಾಡಿ, ಸಕ್ಕರೆ, ನೀರು ಮತ್ತು ಬೇಕಿಂಗ್ ಪೌಡರ್ ಹಾಕಿ. 2 ಗಂಟೆಗಳ ಕಾಲ ಹಿಟ್ಟನ್ನು ಸಿದ್ಧಪಡಿಸಿ ಇಟ್ಟು ಬಳಿಕ ಗೋಲಿ ಬಜೆಯನ್ನು ಎಣ್ಣೆಯಲ್ಲಿ ಗರಿಗರಿಯಾಗಿ ಕೆಂಪು ಬಣ್ಣ ಬರುವವರೆಗೆ ಕರಿಯಿರಿ. ಸುವಾಸನೆಯ ರುಚಿಗಾಗಿ ತೆಂಗಿನಕಾಯಿ ಚಟ್ನಿಯೊಂದಿಗೆ ಬಡಿಸಿ.


ಬಿಸಿ ಬೇಳೆ ಬಾತ್

ಈ ಜನಪ್ರಿಯ ದಕ್ಷಿಣ-ಭಾರತೀಯ ಖಾದ್ಯವು ಇತರ ಭಕ್ಷ್ಯಗಳಂತೆ ಅಲ್ಲ. ಹಲವಾರು ದಕ್ಷಿಣ-ಭಾರತೀಯ ರೆಸ್ಟೋರೆಂಟ್ ಗಳಲ್ಲಿ ಮತ್ತು ರಾಜ್ಯದ ಹೊರಗೂ ಲಭ್ಯವಿದೆ. ಈ ಅಧಿಕೃತ ರೆಸಿಪಿ ನಿಜವಾಗಿಯೂ ಕರ್ನಾಟಕದ ವಿಶೇಷತೆಯಾಗಿದೆ. ಕರ್ನಾಟಕ ಶೈಲಿಯ ಬಿಸಿ ಬೇಳೆ ಬಾತ್ ಅನ್ನು ನೀವು ಮನೆಯಲ್ಲಿಯೂ ಪ್ರಯತ್ನಿಸಬಹುದು. ಬೆಂಗಳೂರಿನ ಬಹುತೇಕ ಹೋಟೆಲ್‌ಗಳಲ್ಲಿ ಇದು ಮುಖ್ಯ ಆಹಾರ.

ಅಕ್ಕಿ ಮತ್ತು ಕಡಲೆಕಾಯಿಯನ್ನು 25 ನಿಮಿಷಗಳ ಕಾಲ ನೆನೆಸಿ ಅನಂತರ ಉಪ್ಪು ಸೇರಿಸಿ. ಅಕ್ಕಿ ಮತ್ತು ಕಡಲೆಕಾಯಿಯನ್ನು ಬೇಯಿಸಿ ಮತ್ತು ಅವುಗಳನ್ನು ಪಕ್ಕಕ್ಕೆ ಇರಿಸಿ. ಮುಂದೆ, ಹುಣಸೆಹಣ್ಣನ್ನು ನೆನೆಸಿ ಮತ್ತು ಅದರ ತಿರುಳನ್ನು ಹೊರತೆಗೆಯಿರಿ. ಪ್ರೆಶರ್ ಕುಕ್ ನಲ್ಲಿ ತೊಗರಿ ಬೆಳೆ, ಅರಿಶಿನ ಪುಡಿ ಮತ್ತು ನೀರು, ಎಲ್ಲಾ ಕತ್ತರಿಸಿದ ತರಕಾರಿಗಳು ಮತ್ತು ಉಪ್ಪನ್ನು ಬೆರೆಸಿ. ಈಗ, ಕುಕ್ಕರ್‌ನಲ್ಲಿ ನೆನೆಸಿದ ಅಕ್ಕಿ, ಕಡಲೆಕಾಳು, ಹಿಸುಕಿದ ದಾಲ್ ಮತ್ತು ಹುಣಸೆ ತಿರುಳನ್ನು ಸೇರಿಸಿ ಮತ್ತು ಮಸಾಲೆಯನ್ನು ತಯಾರಿಸಿ. ಬಿಸಿಬೇಳೆ ಬಾತ್ ಮಸಾಲ ಮತ್ತು ನೀರನ್ನು ಬಾಣಲೆಯಲ್ಲಿ ಹಾಕಿ ಬೇಯಿಸಿ ಕುಕ್ಕರ್‌ಗೆ ಸೇರಿಸಿ. ಅದಕ್ಕೆ ತಕ್ಕಂತೆ ಒಣಗಿದ ತೆಂಗಿನಕಾಯಿ ಮತ್ತು ಉಪ್ಪನ್ನು ಸೇರಿಸಿ ಮತ್ತು ಎಲ್ಲವನ್ನೂ ಮಿಶ್ರಣ ಮಾಡಲು ಮರೆಯಬೇಡಿ. ರುಚಿಕರವಾದ ತಡ್ಕಾಕ್ಕೆ ಕರಿಬೇವು, ಮರಾಠಿ ಮೊಗ್ಗು, ಇಂಗು, ಒಣಗಿದ ಕೆಂಪು ಮೆಣಸಿನಕಾಯಿ ಮತ್ತು ಗೋಡಂಬಿ ಸೇರಿಸಿ. ಬಿಸಿಯಾಗಿ ಬಡಿಸಿ ಮತ್ತು ಹುರಿದ ಪಾಪಡ್‌ನೊಂದಿಗೆ ಸವಿಯಿರಿ.


ರಾಗಿ ಮುದ್ದೆ

ಇದು ಕರ್ನಾಟಕದ ‘ಪ್ರೋಟೀನ್ ಬೈಟ್ಸ್’ . ಇದು ಪ್ರಮುಖ ಆಹಾರವಾಗಿದೆ. ತಮಿಳುನಾಡಿನಲ್ಲಿಯೂ ಹೆಚ್ಚಾಗಿ ಕಂಡುಬರುತ್ತದೆ. ಈ ʼಪೌಷ್ಟಿಕ ಚೆಂಡುʼಗಳು ರೈತರನ್ನು ಹಗಲಿನಲ್ಲಿ ಚುರುಕಾಗಿ ಇರಿಸಲು ಸಹಾಯ ಮಾಡುತ್ತದೆ. ನೀವು ಈ ಗರಿಗರಿಯಾದ ಮುದ್ದೆಗಳನ್ನು ನಿಮ್ಮ ಊಟದಲ್ಲಿ ಸೇರಿಸಿಕೊಳ್ಳಬಹುದು. ಒಟ್ಟು 20 ನಿಮಿಷಗಳಲ್ಲಿ ತಯಾರಿಸಬಹುದು. ಬೆಂಗಳೂರಿನ ಮಿಲಿಟರಿ ಹೋಟೆಲ್‌ಗಳಲ್ಲಿ ರಾಗಿ ಮುದ್ದೆ ರುಚಿಕರವಾಗಿ ತಯಾರಿಸುತ್ತಾರೆ.

ಒಂದು ಬಟ್ಟಲಿನಲ್ಲಿ ರಾಗಿ ಹಿಟ್ಟು ಮತ್ತು ನೀರನ್ನು ಬೆರೆಸುವ ಮೂಲಕ ಪ್ರಾರಂಭಿಸಿ. ಮಿಶ್ರಣದಲ್ಲಿ ಯಾವುದೇ ಉಂಡೆಗಳಿಲ್ಲ ಎಂದು ಖಚಿತಪಡಿಸಿಕೊಳ್ಳಿ. ಬಾಣಲೆಯಲ್ಲಿ ನೀರು, ತುಪ್ಪ ಮತ್ತು ಉಪ್ಪು ಸೇರಿಸಿ, ನೀರನ್ನು ಕುದಿಸಿ ಮತ್ತು ರಾಗಿ ಹಿಟ್ಟಿನ ಮಿಶ್ರಣವನ್ನು ಕುದಿಯುವ ನೀರಿಗೆ ಸುರಿಯಿರಿ. ದಪ್ಪವಾಗುವವರೆಗೆ ಬೇಯಿಸಿ. ಹಿಟ್ಟು ಸೇರಿಸಿ. ಅದರಲ್ಲಿ ಯಾವುದೇ ಹಿಟ್ಟಿನ ಉಂಡೆಗಳಿಲ್ಲ ಎಂದು ಖಚಿತಪಡಿಸಿಕೊಳ್ಳಿ. ಇನ್ನೊಂದು 5 ನಿಮಿಷ ಬೇಯಿಸಿ. ಮಿಶ್ರಣವನ್ನು ಪ್ಲೇಟ್ ಗೆ ವರ್ಗಾಯಿಸಿ, ಬೆರಳುಗಳಲ್ಲಿ ರಾಗಿ ಹಿಟ್ಟಿನ ಚೆಂಡುಗಳನ್ನು ಮಾಡಿ. ಯಾವುದಾದರೂ ಸಾಂಬಾರಿನೊಂದಿಗೆ ಬಡಿಸಿ.


ನೀರ್ ದೋಸೆ

ಕರ್ನಾಟದ ಪ್ರಸಿದ್ಧ ನೀರ್ ದೋಸೆ ದೋಸೆಗಳಲ್ಲೇ ವಿಶಿಷ್ಟವಾಗಿದೆ. ತೆಳುವಾದ ಈ ದೋಸೆ ಕರ್ನಾಟಕದಾದ್ಯಂತ ಜನಪ್ರಿಯ ಉಪಾಹಾರವಾಗಿದೆ. ಮುಖ್ಯವಾಗಿ ಬೆಂಗಳೂರಿನ ಕರಾವಳಿ ರೆಸ್ಟೋರೆಂಟ್‌ಗಳಲ್ಲಿ ನೀರ್‌ ದೋಸೆ ಪ್ರಮುಖ ಆಕರ್ಷಣೆಯಾಗಿದೆ. ಹಿಟ್ಟಿಗೆ ಹುದುಗುವಿಕೆಯ ಅಗತ್ಯವಿಲ್ಲ. ಮನೆಯಲ್ಲೆ ಇದನ್ನು ಸುಲಭವಾಗಿ ಮಾಡಬಹುದು.

ಅಕ್ಕಿಯನ್ನು ರಾತ್ರಿಯಿಡೀ ನೆನೆಸಿ ಅನಂತರ ನಯವಾದ ಪೇಸ್ಟ್ ಆಗಿ ರುಬ್ಬಿ. ಹಿಟ್ಟಿಗೆ ನೀರಿನ ಉಪ್ಪು ಸೇರಿಸಿ ಮತ್ತು ಬಾಣಲೆಯಲ್ಲಿ ಕೆಲವು ಹನಿ ಎಣ್ಣೆಯನ್ನು ಹಾಕಿ,. ತೆಳುವಾಗಿ ಸುರಿಯಿರಿ. ಅದನ್ನು 2 ನಿಮಿಷಗಳ ಕಾಲ ಮುಚ್ಚಳದಿಂದ ಮುಚ್ಚಿ ಮತ್ತು ದೋಸೆಯ ಬದಿಗಳು ಸುಲಭವಾಗಿ ಹೊರಬರುವವರೆಗೆ ಕಾಯಿಸಿ. ತ್ರಿಕೋನದಲ್ಲಿ ಮಡಚಿ, ಚಟ್ನಿ ಅಥವಾ ಸಾಂಬಾರಿನೊಂದಿಗೆ ಸವಿಯಲು ರುಚಿಯಾಗಿರುತ್ತದೆ.


ತಟ್ಟೆ ಇಡ್ಲಿ

ಈ ಪ್ರಸಿದ್ಧ ಖಾದ್ಯವು ಸಾಮಾನ್ಯ ಇಡ್ಲಿಗಳಿಗಿಂತ ದೊಡ್ಡದಾಗಿದೆ ಮತ್ತು ದಪ್ಪವಾಗಿರುತ್ತದೆ. ಬೆಂಗಳೂರು ಮತ್ತು ಮೈಸೂರು ರಾಜ್ಯ ಹೆದ್ದಾರಿಗಳ ಬಳಿ ಜನಪ್ರಿಯವಾಗಿ ಕಂಡುಬರುವ ಈ ಖಾದ್ಯವನ್ನು ನೀವು ತಟ್ಟೆ ಇಡ್ಲಿ ರೆಸ್ಟೋರೆಂಟ್‌ಗಳಲ್ಲಿ ಸವಿಯಬಹುದು. ದಕ್ಷಿಣ ಕರ್ನಾಟಕದ ಪ್ರಮುಖ ತಿಂಡಿ ಇದು.

ಇಡ್ಲಿ ಅಕ್ಕಿ ಮತ್ತು ಉದ್ದಿನ ಬೇಳೆಯನ್ನು ನೆನೆಸಿಟ್ಟು ಖಾದ್ಯವನ್ನು ತಯಾರಿಸಿ. ನಯವಾದ ಹಿಟ್ಟನ್ನು ಪಡೆಯುವವರೆಗೆ ರಾತ್ರಿ ರುಬ್ಬಿಕೊಂಡು ಇಡಿ. ಬ್ಯಾಟರ್ ಅನ್ನು ಸ್ಟೀಮರ್ ನಲ್ಲಿ ಸುರಿಯಿರಿ ಮತ್ತು 15-20 ನಿಮಿಷಗಳ ಕಾಲ ಉಗಿ ಮಾಡಿ. ನಿಮ್ಮ ಇಡ್ಲಿಯನ್ನು ಸಾಂಬಾರ್, ತೆಂಗಿನಕಾಯಿ ಚಟ್ನಿ ಅಥವಾ ಒಂದು ಕಪ್ ಕಾಫಿಯೊಂದಿಗೆ ಸವಿಯಲು ರುಚಿಯಾಗಿರುತ್ತದೆ.


ದೊನ್ನೆ ಬಿರಿಯಾನಿ

ಈ ಜನಪ್ರಿಯ ಖಾದ್ಯವನ್ನು ಬೆಂಗಳೂರು ನಗರದಲ್ಲಿ ವ್ಯಾಪಕವಾಗಿ ಸವಿಯಲಾಗುತ್ತದೆ. ಚಿಕನ್ ತುಂಡುಗಳನ್ನು ಸ್ವಚ್ಛಗೊಳಿಸಿ ದೊಡ್ಡ ಬಟ್ಟಲಿನಲ್ಲಿ ಅರಿಶಿನ, ಉಪ್ಪು, ನಿಂಬೆ ರಸ ಮತ್ತು ಮೊಸರು ಸೇರಿಸಿ 30 ನಿಮಿಷಗಳ ಕಾಲ ಮುಚ್ಚಿಡಿ. ಮಿಕ್ಸಿಂಗ್ ಜಾರ್‌ನಲ್ಲಿ ಕೊತ್ತಂಬರಿ ಸೊಪ್ಪು, ಹಸಿಮೆಣಸಿನಕಾಯಿ ಮತ್ತು ಪುದೀನಾ ಸೊಪ್ಪು ಹಾಕಿ ಚೆನ್ನಾಗಿ ಪೇಸ್ಟ್ ಮಾಡಿಕೊಳ್ಳಿ. ಬಾಣಲೆಯಲ್ಲಿ, ಎಣ್ಣೆಯನ್ನು ಬಿಸಿ ಮಾಡಿ, ಸಂಪೂರ್ಣ ಮಸಾಲೆಗಳು, ದಾಲ್ಚಿನ್ನಿ ಕಡ್ಡಿ, ಏಲಕ್ಕಿ ಹಾಕಿ ಕುದಿಯಲು ಬಿಡಿ. ಅನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಸೇರಿಸಿ ರೈಸ್ ಎಲ್ಲವನ್ನೂ ಚೆನ್ನಾಗಿ ಮಿಶ್ರಣ ಮಾಡಿ ಮತ್ತು ಮುಚ್ಚಳದಿಂದ ಮುಚ್ಚಿ. ಬಾಣಲೆಯಲ್ಲಿ ನೀರನ್ನು ಕುದಿಸಿ ಮತ್ತು ಕಡಾಯಿಯ ಮುಚ್ಚಳದ ಮೇಲೆ ಇರಿಸಿ, ಮೇಲಿನಿಂದ ಶಾಖವನ್ನು ಒದಗಿಸಲು ಪ್ರಕ್ರಿಯೆಯನ್ನು ಮಾಡಲಾಗುತ್ತದೆ. ನಿಮ್ಮ ದೊನ್ನೆ ಬಿರಿಯಾನಿ ಸಿದ್ಧವಾಗಿದೆ. ಹುರಿದ ಪಾಪಡ್ ಅಥವಾ ಧನಿಯಾ ರೈತಾದೊಂದಿಗೆ ಬಡಿಸಿ ಮತ್ತು ಆನಂದಿಸಿ.


ಮೈಸೂರು ಪಾಕ್

ದಕ್ಷಿಣ ಭಾರತೀಯ ಈ ಸಿಹಿತಿಂಡಿಯು ಅತ್ಯಂತ ಜನಪ್ರಿಯವಾಗಿದೆ. ಇದು ರುಚಿಕರವಾಗಿರುತ್ತದೆ. ಬೆಂಗಳೂರಿನ ಪ್ರಮುಖ ಬೇಕರಿಗಳಲ್ಲಿ ಉತ್ತಮ ದರ್ಜೆಯ ಮೈಸೂರ್‌ ಪಾಕ್‌ ಸಿಗುತ್ತದೆ. ನೀವು ಇದನ್ನು ಒಟ್ಟು 40 ನಿಮಿಷಗಳಲ್ಲಿ ಮಾಡಬಹುದು.

ಇದನ್ನೂ ಓದಿ: Dietary Guidelines: ಕಡಿಮೆ ದೈಹಿಕ ಚಟುವಟಿಕೆ ಇರುವವರಿಗೆ ಯಾವ ರೀತಿಯ ಆಹಾರ ಸೂಕ್ತ?

ದೊಡ್ಡ ಬಟ್ಟಲಿಗೆ ಬೆಸನ್ ಸೇರಿಸುವ ಮೂಲಕ ಪ್ರಾರಂಭಿಸಿ. ಕಡಾಯಿಯಲ್ಲಿ ಎಣ್ಣೆ ಮತ್ತು ತುಪ್ಪವನ್ನು ಸುರಿಯಿರಿ, ಹಿಟ್ಟನ್ನು 3 ಭಾಗಗಳಾಗಿ ವಿಂಗಡಿಸಲು ಮರೆಯಬೇಡಿ. ನೀರಿಗೆ ಸಕ್ಕರೆಯನ್ನು ಸೇರಿಸುವ ಮೂಲಕ ಸಕ್ಕರೆ ಪಾಕವನ್ನು ತಯಾರಿಸಿ. ಸಕ್ಕರೆ ಪಾಕಕ್ಕೆ ಹಿಟ್ಟಿನ ಸ್ವಲ್ಪ ಭಾಗವನ್ನು ಸೇರಿಸಿ ಮತ್ತು ಚೆನ್ನಾಗಿ ಬೆರೆಸಿ. ಹಿಟ್ಟಿನ ಇನ್ನೊಂದು ಭಾಗವನ್ನು ಸೇರಿಸಿ ಮತ್ತು ಪ್ರಕ್ರಿಯೆಯನ್ನು ಪುನರಾವರ್ತಿಸಿ. ಯಾವುದೇ ಉಂಡೆಗಳಿಲ್ಲ ಎಂದು ಖಚಿತಪಡಿಸಿಕೊಳ್ಳಿ ಮತ್ತು ಬಿಸಿ ಮಾಡಿದ ಎಣ್ಣೆ ಮತ್ತು ತುಪ್ಪವನ್ನು ಬಾಣಲೆಗೆ ಸೇರಿಸಿ. ಮಿಶ್ರಣವು ತುಪ್ಪವನ್ನು ಹೀರಿಕೊಂಡ ಬಳಿಕ ಮಿಶ್ರಣವು ದಪ್ಪವಾಗಲು ಪ್ರಾರಂಭಿಸುತ್ತದೆ. ಈ ಮೈಸೂರು ಪಾಕ್ ನ ಮಿಶ್ರಣವನ್ನು ತುಪ್ಪ ಸವರಿದ ಬಾಣಲೆಗೆ ವರ್ಗಾಯಿಸಿ ಐದು ನಿಮಿಷಗಳ ಬಳಿಕ ತುಂಡುಗಳಾಗಿ ಕತ್ತರಿಸಿ ಸವಿಯಿರಿ.

Continue Reading

ಪ್ರಮುಖ ಸುದ್ದಿ

Hyderabadi Biryani : ಎಸ್​ಆರ್​ಎಚ್​ ಅಭಿಮಾನಿಗಳೊಂದಿಗೆ ಹೈದ್ರಾಬಾದಿ ಬಿರಿಯಾನಿ ಸವಿದ ಹೇಡನ್ ಪುತ್ರಿ ಗ್ರೇಸ್​, ಇಲ್ಲಿದೆ ವಿಡಿಯೊ

Hyderabadi Biryani :: ಸ್ಟಾರ್ ಸ್ಪೋರ್ಟ್ಸ್​​ನ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದಾರೆ. 21 ವರ್ಷದ ಅವರು ಪ್ರಸಿದ್ಧ ‘ಪ್ಯಾರಡೈಸ್ ಬಿರಿಯಾನಿ’ ಜಾಯಿಂಟ್​ಗೆ ಭೇಟಿ ನೀಡಿ ಮತ್ತು ಬಿರಿಯಾನಿ ಮತ್ತು ಖುಬಾನಿ-ಕಾ-ಮೀಠಾ (ಒಣಗಿದ ಏಪ್ರಿಕಾಟ್​​ಳನ್ನು ಬಳಸಿ ಮಾಡಿರುವ ಸಿಹಿತಿಂಡಿ) ತಿಂದರು. ಅವರು ಕೆಲವು ಎಸ್​ಆರ್​ಎಚ್ ತಂಡದ ​​ ಅಭಿಮಾನಿಗಳ ಜತೆಗೆ ಬಿರಿಯಾನಿ ಸವಿದರು. ಅವರೆಲ್ಲರೂ ವಹೈದರಾಬಾದ್​ನಲ್ಲಿ ತಿನ್ನಲೇಬೇಕಾದ ಭಕ್ಷ್ಯಗಳನ್ನು ಗ್ರೇಸ್​​ಗೆ ಪರಿಚಯಿಸಿದರು.

VISTARANEWS.COM


on

Hyderabadi Biryani
Koo

ಹೈದರಾಬಾದ್​​: ಆಸ್ಟ್ರೇಲಿಯಾ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಮ್ಯಾಥ್ಯೂ ಹೇಡನ್ ಅವರ ಮಗಳು ಗ್ರೇಸ್ ಹೈದರಾಬಾದ್​ನಲ್ಲಿ ಸ್ಥಳೀಯ ಭಕ್ಷ್ಯಗಳನ್ನು ಸವಿಯುತ್ತಾ ಮೋಜಿನ ದಿನವನ್ನು ಕಳೆಯುತ್ತಿದ್ದಾರೆ. ವೃತ್ತಿಯಲ್ಲಿ ಕಂಟೆಂಟ್ ಕ್ರಿಯೇಟರ್ ಆಗಿರುವ ಗ್ರೇಸ್ ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಅಧಿಕೃತ ಪ್ರಸಾರಕರಾದ ಸ್ಟಾರ್ ಸ್ಪೋರ್ಟ್ಸ್​​ನ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದಾರೆ. 21 ವರ್ಷದ ಅವರು ಪ್ರಸಿದ್ಧ ‘ಪ್ಯಾರಡೈಸ್ ಬಿರಿಯಾನಿ’ ಜಾಯಿಂಟ್​ಗೆ ಭೇಟಿ ನೀಡಿ ಮತ್ತು ಬಿರಿಯಾನಿ (Hyderabadi Biryani) ಮತ್ತು ಖುಬಾನಿ-ಕಾ-ಮೀಠಾ (ಒಣಗಿದ ಏಪ್ರಿಕಾಟ್​​ಳನ್ನು ಬಳಸಿ ಮಾಡಿರುವ ಸಿಹಿತಿಂಡಿ) ತಿಂದರು. ಅವರು ಕೆಲವು ಎಸ್​ಆರ್​ಎಚ್ ತಂಡದ ​​ ಅಭಿಮಾನಿಗಳ ಜತೆಗೆ ಬಿರಿಯಾನಿ ಸವಿದರು. ಅವರೆಲ್ಲರೂ ವಹೈದರಾಬಾದ್​ನಲ್ಲಿ ತಿನ್ನಲೇಬೇಕಾದ ಭಕ್ಷ್ಯಗಳನ್ನು ಗ್ರೇಸ್​​ಗೆ ಪರಿಚಯಿಸಿದರು.

“ಹೈದರಾಬಾದ್ನಲ್ಲಿ ಬಿರಿಯಾನಿ ಒಂದು ಭಾವನೆ! @SunRisers ಅಭಿಮಾನಿಗಳೊಂದಿಗೆ ಅಪ್ರತಿಮ ಹೈದರಾಬಾದಿ ಬಿರಿಯಾನಿ ತಿನ್ನುವಾಗ ಐತಿಹಾಸಿಕ ಹೈದರಾಬಾದ್​ ನಗರದ ಸಾರವನ್ನು #GraceHayden ಅನುಭವಿಸಿದ್ದಾರೆ” ಎಂದು ಸ್ಟಾರ್ ಸ್ಪೋರ್ಟ್ಸ್ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್​ಗಳಲ್ಲಿ ವೈರಲ್ ಆಗಿರುವ ವೀಡಿಯೊಗೆ ಶೀರ್ಷಿಕೆ ನೀಡಿದೆ.

ಕೆಲವು ವಾರಗಳ ಹಿಂದೆ, ಎಸ್ಆರ್​ಎಚ್​ ತಂಡದ ನಾಯಕ ಪ್ಯಾಟ್ ಕಮಿನ್ಸ್ ತಮ್ಮ ಕುಟುಂಬದೊಂದಿಗೆ ಹೈದರಾಬಾದ್ ಬಿರಿಯಾನಿ ಸವಿದಿದ್ದರು. ಕಮಿನ್ಸ್ ಮತ್ತು ಅವರ ಕುಟುಂಬ ಹೈದರಾಬಾದ್​​ನ ಬಂಜಾರಾ ಹಿಲ್ಸ್​ನಲ್ಲಿರುವ ಸದರ್ನ್ ಮಿರ್ಚಿ ರೆಸ್ಟೋರೆಂಟ್​ಗೆ ಭೇಟಿ ನೀಡಿದ್ದರು.

ಗುರುವಾರ, ಕಮಿನ್ಸ್ ನೇತೃತ್ವದ ಎಸ್ಆರ್​ಎಚ್ಗು ಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯವು ರದ್ದಾದ ನಂತರ ಐಪಿಎಲ್ 2024ರ ಪ್ಲೇಆಫ್​ನಲ್ಲಿ ಸ್ಥಾನ ಪಡೆದ ಮೂರನೇ ತಂಡ ಎನಿಸಿಕೊಂಡಿತು.

ಇದನ್ನೂ ಓದಿ: Virat kohli : ತಮ್ಮ ಜೀವನದ ಎರಡು ಆಘಾತಕಾರಿ ಸಂದರ್ಭಗಳನ್ನು ವಿವರಿಸಿದ ವಿರಾಟ್ ಕೊಹ್ಲಿ

ಎಸ್ಆರ್​ಎಚ್​​ ಈಗಾಗಲೇ ಅರ್ಹತೆ ಪಡೆದ ಕೋಲ್ಕತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡದ ಜತೆ ಪ್ಲೇಆಫ್​ ಪಟ್ಟಿಯಲ್ಲಿ ಸೇರಿಕೊಂಡಿದೆ. ನಾಲ್ಕನೇ ಮತ್ತು ಅಂತಿಮ ಪ್ಲೇಆಫ್ ಸ್ಥಾನ ಶನಿವಾರ ಸಂಜೆ ನಿರ್ಧಾರಗೊಳ್ಳಲಿದೆ. ಸಿಎಸ್ಕೆ, ಆರ್​ಸಿಬಿ ತಂಡಗಳು ಪ್ರಸ್ತುತ ಸ್ಪರ್ಧೆಯಲ್ಲಿವೆ.

Continue Reading
Advertisement
actor Chetan Kumar Ahimsa
ಸಿನಿಮಾ31 mins ago

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Ebrahim Raisi
ವಿದೇಶ49 mins ago

Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

Viral News
ವೈರಲ್ ನ್ಯೂಸ್53 mins ago

Viral News: ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

Actor Rajinikanth attends grandson Ved cricket themed birthday party
ಕಾಲಿವುಡ್54 mins ago

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Kamal Haasan Indian 2 to release on July 12
ಕಾಲಿವುಡ್1 hour ago

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

rain news charamadi ghat traffic jam
ಮಳೆ1 hour ago

Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

CET Result
ಶಿಕ್ಷಣ2 hours ago

CET Result: ಅಧಿಕಾರಿಗಳ ಎಡವಟ್ಟಿನಿಂದ ವಿಳಂಬ; ಸಿಇಟಿ ಫಲಿತಾಂಶ ಯಾವಾಗ ಪ್ರಕಟವಾಗಬಹುದು?

Lok Sabha Election 2024 Akshay Kumar casts vote for the first time
ಬಾಲಿವುಡ್2 hours ago

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Ebrahim Raisi
ವಿದೇಶ2 hours ago

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Hair Conditioner
ಆರೋಗ್ಯ2 hours ago

Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ20 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ21 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌