Top 10 Puddings: ಭಾರತದ ಫಿರ್ನಿ, ಖೀರು, ಸಿಹಿ ಪೊಂಗಲ್‌ಗೆ ವಿಶ್ವದ ಟಾಪ್‌ 10 ತಿಂಡಿ ಪಟ್ಟಿಯಲ್ಲಿ ಸ್ಥಾನ! - Vistara News

ಆಹಾರ/ಅಡುಗೆ

Top 10 Puddings: ಭಾರತದ ಫಿರ್ನಿ, ಖೀರು, ಸಿಹಿ ಪೊಂಗಲ್‌ಗೆ ವಿಶ್ವದ ಟಾಪ್‌ 10 ತಿಂಡಿ ಪಟ್ಟಿಯಲ್ಲಿ ಸ್ಥಾನ!

ಭಾರತ ತನ್ನ ಸಿಹಿತಿಂಡಿಯ (Top 10 Puddings) ವಿಚಾರದಲ್ಲೂ ವಿಶ್ವಮಟ್ಟದಲ್ಲಿ ಹೆಸರು ಮಾಡಿದೆ. ಟೇಸ್ಟ್‌ ಅಟ್ಲಾಸ್‌ ನಡೆಸುವ ಸ್ಪರ್ಧೆಯಲ್ಲಿ ವಿಶ್ವದ ಅತ್ಯಂತ ರುಚಿಕರ ಟಾಪ್‌ 10 ರೈಸ್‌ ಪುಡ್ಡಿಂಗ್‌ಗಳ ಪೈಕಿ ಭಾರತದ ಮೂರು ಬಗೆಯ ಪುಡ್ಡಿಂಗ್‌ ಸ್ಥಾನ ಪಡೆದಿರುವುದು ವಿಶೇಷ. ಆ ಮೂಲಕ ನಮ್ಮ ಸರಳವಾದ ಸಿಹಿತಿನಿಸುಗಳ ಪೈಕಿ ಒಂದಾದ ತಮಿಳುನಾಡಿನ ಸಿಹಿ ಪೊಂಗಲ್‌, ಪಂಜಾಬಿನ ಫಿರ್ನಿ ಹಾಗೂ ಒಡಿಶಾದ ಖೀರ್‌ ವಿಶ್ವಮಟ್ಟದಲ್ಲಿ ಸಿಹಿರುಚಿಯ ಮಾನ್ಯತೆ ಪಡೆದಿವೆ.

VISTARANEWS.COM


on

Top 10 Puddings
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತ ಪಾಕಶಾಸ್ತ್ರದಲ್ಲಿ (Top 10 Puddings) ಹೆಸರು ಮಾಡಿದ ದೇಶ. ಭಾರತದ ಬಗೆಬಗೆಯ ಆಹಾರಗಳು, ತಿನಿಸುಗಳು, ವೈವಿಧ್ಯಮಯ ಸಿಹಿತಿಂಡಿಗಳು ಪ್ರಪಂಚದಾದ್ಯಂತ ಹೆಸರು ಮಾಡಿದೆ. ದೇಶವಿದೇಶಗಳಿಂದ ಇಲ್ಲಿನ ಆಹಾರ ಸವಿಯಲೆಂದೇ ಪ್ರವಾಸಿಗರು ಬರುತ್ತಾರೆ. ಸಿಹಿತಿಂಡಿ ಇಲ್ಲಿನ ಜನರ ನಿತ್ಯದ ಆಹಾರಾಭ್ಯಾಸ. ಹಬ್ಬಗಳು ಬಂದರಂತೂ ಈ ಸಿಹಿ ತಿನಿಸುಗಳ ಸಡಗರ ಇನ್ನೂ ಹೆಚ್ಚುತ್ತದೆ. ಬೇರೆ ಬೇರೆ ರಾಜ್ಯಗಳ, ಬೇರೆ ಬೇರೆ ಧರ್ಮಗಳ, ಬೇಋಎ ಬೇರೆ ಆಚರಣೆಗಳನ್ನು ಹೊಂದಿದ ಜನರ ಬಗೆಬಗೆಯ ಆಹಾರಾಭ್ಯಾಸಗಳು, ತಿನಿಸುಗಳು ಭಾರತದ ವೈವಿಧ್ಯಮಯ ಸಂಸ್ಕೃತಿಗೆ ಸಾಕ್ಷಿ. ಇದೀಗ, ಭಾರತ ತನ್ನ ಸಿಹಿತಿಂಡಿಯ ವಿಚಾರದಲ್ಲೂ ವಿಶ್ವಮಟ್ಟದಲ್ಲಿ ಹೆಸರು ಮಾಡಿದೆ. ಟೇಸ್ಟ್‌ ಅಟ್ಲಾಸ್‌ ನಡೆಸುವ ಸ್ಪರ್ಧೆಯಲ್ಲಿ ವಿಶ್ವದ ಅತ್ಯಂತ ರುಚಿಕರ ಟಾಪ್‌ 10 ರೈಸ್‌ ಪುಡ್ಡಿಂಗ್‌ಗಳ ಪೈಕಿ ಭಾರತದ ಮೂರು ಬಗೆಯ ಪುಡ್ಡಿಂಗ್‌ ಸ್ಥಾನ ಪಡೆದಿರುವುದು ವಿಶೇಷ. ಆ ಮೂಲಕ ನಮ್ಮ ಸರಳವಾದ ಸಿಹಿತಿನಿಸುಗಳ ಪೈಕಿ ಒಂದಾದ ತಮಿಳುನಾಡಿನ ಸಿಹಿ ಪೊಂಗಲ್‌, ಪಂಜಾಬಿನ ಫಿರ್ನಿ ಹಾಗೂ ಒಡಿಶಾದ ಖೀರ್‌ ವಿಶ್ವಮಟ್ಟದಲ್ಲಿ ಸಿಹಿರುಚಿಯ ಮಾನ್ಯತೆ ಪಡೆದಿವೆ. ಹಬ್ಬ ಹರಿದಿನಗಳಲ್ಲಿ ಸಾಮಾನ್ಯವಾಗಿ ಅಕ್ಕಿ ಪಾಯಸ ಅಥವಾ ಖೀರ್‌ ಮಾಡುವುದು ಸಾಮಾನ್ಯ. ಈ ಅಕ್ಕಿ ಪಾಯಸಕ್ಕೆ ಐದನೇ ಸ್ಥಾನ ಸಿಕ್ಕಿದರೆ, ನಾಲ್ಕನೇ ಸ್ಥಾನದಲ್ಲಿ ಫಿರ್ನಿ ಇದೆ. ಒಂಭತ್ತನೇ ಸ್ಥಾನದಲ್ಲಿ ತಮಿಳುನಾಡಿನ ಪ್ರಸಿದ್ಧ ಸಕ್ಕರೆ ಪೊಂಗಲ್‌ ಅಥವಾ ಸಿಹಿ ಪೊಂಗಲ್‌ ಆಯ್ಕೆಯಾಗಿದೆ.
ಸಾಂಪ್ರದಾಯಿಕ ತಿನಿಸು ಫಿರ್ನಿಯನ್ನು ಸಾಮಾನ್ಯವಾಗಿ ಪುಟ್ಟ ಪುಟ್ಟ ಮಣ್ಣಿನ ಮಡಕೆಗಳಲ್ಲಿ ಹಾಕಿ ಫ್ರಿಡ್ಜ್‌ನಲ್ಲಿಟ್ಟು ತಣ್ಣಗೆ ತಿನ್ನುವುದು ರೂಢಿ. ಬೇಸಿಗೆಯಲ್ಲಿ ಐಸ್‌ಕ್ರೀಂನಂತೆ ಹಿತವಾಗಿರುವ ಸಾಂಪ್ರದಾಯಿಕ ಶೈಲಿಯ ಸಿಹಿತಿನಿಸಿದು. ಗುಲಾಬಿ ದಳಗಳು, ಪಿಸ್ತಾ ಬಾದಾಮಿಯ ಚೂರುಗಳಿಂದ ಅಲಂಕರಿಸಿ ಕೊಡಲಾಗುತ್ತದೆ.

Sweet kheer

ಸಿಹಿಯಾದ ಖೀರು

ಅಕ್ಕಿಯನ್ನು ಬಳಸಿ ಮಾಡಲಾಗುವ ಸಿಹಿಯಾದ ಖೀರು, ಯಾವುದೇ ಶುಭ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ದೇವರಿಗೆ ನೈವೇದ್ಯ ಇಡಲು ಮಾಡಲಾಗುತ್ತದೆ. ಅಕ್ಕಿಯನ್ನು ಬೇಯಿಸಿ ಹಾಲು ಹಾಕಿ ಕೇಸರಿಯನ್ನು ಉದುರಿಸಿ ಮಾಡುವ ಸರಳವಾದ ಪಾಯಸವಿದು. ಉತ್ತರ ಭಾರತ, ದಕ್ಷಿಣ ಭಾರತವೆಂಬ ಬೇಧವಿಲ್ಲದೆ, ಈ ಸಿಹಿಯನ್ನು ಎಲ್ಲೆಡೆ ಮಾಡುತ್ತಾರೆ.

Sweet Pongal

ಸಿಹಿ ಪೊಂಗಲ್‌

ಸಿಹಿ ಪೊಂಗಲ್‌ ಅಥವಾ ಸಕ್ಕರೆ ಪೊಂಗಲ್‌ ತಮಿಳುನಾಡಿನ ಪ್ರಖ್ಯಾತ ಸಿಹಿತಿನಿಸು. ಹೆಸರು ಬೇಳೆ ಹಾಗೂ ಅಕ್ಕಿಯನ್ನು ಒಟ್ಟಿಗೆ ಬೇಯಿಸಿ ಬೆಲ್ಲ ಹಾಗೂ ತುಪ್ಪ ಹಾಕಿ ಮಾಡುವ ಘಮಘಮಿಸುವ ಸಿಹಿ ಪಾಯಸವಿದು. ಸಾಂಪ್ರದಾಯಿಕ ಹೊಸ ವರ್ಷವಾದ ಪೊಂಗಲ್‌ ಹಬ್ಬದ ಆಚರಣೆಯ ಸಂದರ್ಭ ಸಿಹಿ ಪೊಂಗಲ್‌ ಅನ್ನು ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಮಾಡಿ, ದೇವರಿಗೆ ಇಟ್ಟು ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತಾರೆ. ಬಹಳ ರುಚಿಯಾದ ಸರಳವಾದ ಪಾಯಸವಿದು.

Firin Sutlac

ಟರ್ಕಿಗೆ ಮೊದಲ ಸ್ಥಾನ

ಈ ಸ್ಪರ್ಧೆಯಲ್ಲಿ, ಮೊದಲ ಸ್ಥಾನದಲ್ಲಿ ಟರ್ಕಿಯ ಫಿರಿನ್‌ ಸುಟ್‌ಲ್ಯಾಕ್‌, ಎರಡನೇ ಸ್ಥಾನದಲ್ಲಿ ಥಾಯ್ಲೆಂಡಿನ ಖಾವೋ ನಿಯಾವೋ ಮಾಮುಅಂಗ್‌, ಮೂರನೇ ಸ್ಥಾನದಲ್ಲಿ ಶೋಲೆಹ್‌ ಝರ್ದ್‌ ಇವೆ. ನಾಲ್ಕನೇ ಸ್ಥಾನದಲ್ಲಿ ಭಾರತದ ಫಿರ್ನಿ, ಐದನೇ ಸ್ಥಾನದಲ್ಲಿ ನಮ್ಮ ಖೀರ್‌ ಇವೆ. ಇವಲ್ಲದೆ, ಡೆನ್ಮಾರ್ಕ್‌, ಟರ್ಕಿ, ಪೋರ್ಚುಗಲ್‌ನ ಸಿಹಿ ತಿನಿಸುಗಳೂ ಸ್ಥಾನ ಪಡೆದುಕೊಂಡಿವೆ.

ಇದನ್ನೂ ಓದಿ: Special Food In Kashi: ನೀವು ಕಾಶಿಗೆ ಹೋದರೆ ಈ ತಿಂಡಿಗಳ ರುಚಿ ನೋಡಲು ಮರೆಯದಿರಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

Bood Pressure: ಅತ್ಯಂತ ಅಪಾಯಕಾರಿ ಕಾಯಿಲೆಯಾಗಿ ಪ್ರಸ್ತುತ ರಕ್ತದೊತ್ತಡ ಕಾಣಿಸುತ್ತಿದೆ. ಇದನ್ನು ನಿಯಂತ್ರಿಸಲು ಆಹಾರ ಕ್ರಮದೊಂದಿಗೆ ಜೀವನ ಶೈಲಿಯನ್ನೂ ಬದಲಾಯಿಸಬೇಕಿದೆ. ಯಾವ ಆಹಾರಗಳನ್ನು, ತರಕಾರಿಗಳನ್ನು ಸೇವಿಸಿದರೆ ರಕ್ತದೊತ್ತಡ ಕಡಿಮೆ ಮಾಡಬಹುದು? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Blood Pressure
Koo

ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಎಲ್ಲರಲ್ಲೂ ಕಂಡು ಬರುತ್ತಿರುವ ಕಾಯಿಲೆ (Illness) ಮಧುಮೇಹ (diabetes) ಮತ್ತು ಅಧಿಕ ರಕ್ತದೊತ್ತಡ (Blood Pressure). ಇವೆರಡನ್ನೂ ನಿರ್ಲಕ್ಷಿಸಿದರೆ ಅಪಾಯ ಹೆಚ್ಚು. ಅದರಲ್ಲೂ ಅಧಿಕ ರಕ್ತದೊತ್ತಡವು (HIGH bp) ಸಾಮಾನ್ಯವಾಗಿ ನಾವು ಯೋಚಿಸುವುದಕ್ಕಿಂತ ಹೆಚ್ಚು ಅಪಾಯಕಾರಿಯಾಗಿರುತ್ತದೆ. ಅನಿಯಂತ್ರಿತ ರಕ್ತದೊತ್ತಡವು ಅಪಧಮನಿಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ.


ಇಂದಿನ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿ, ಅತಿಯಾದ ಒತ್ತಡ ಮತ್ತು ದೈಹಿಕ ನಿಷ್ಕ್ರಿಯತೆಯು ಅಧಿಕ ರಕ್ತದೊತ್ತಡಕ್ಕೆ ಮುಖ್ಯ ಕಾರಣವಾಗುತ್ತದೆ. ಆರೋಗ್ಯಕರ ರಕ್ತದೊತ್ತಡದ ಸಂಖ್ಯೆಯನ್ನು ಕಾಪಾಡಿಕೊಳ್ಳಲು ಸಮತೋಲಿತ ಆಹಾರದಿಂದ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಬಹುಮುಖ್ಯ. ಹಲವಾರು ಸರಳ ಬದಲಾವಣೆಗಳು ರಕ್ತದೊತ್ತಡವನ್ನು ನೈಸರ್ಗಿಕವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೂ ನೈಸರ್ಗಿಕವಾಗಿ ರಕ್ತದೊತ್ತಡವನ್ನು ಕಡಿಮೆ ಮಾಡಲು ಏನು ತಿನ್ನಬೇಕು ಎನ್ನುವುದು ಹೆಚ್ಚಿನವರಿಗೆ ತಿಳಿದಿಲ್ಲ.

ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿರುವ ತರಕಾರಿಗಳನ್ನು ನಮ್ಮ ದೈನಂದಿನ ಆಹಾರಕ್ರಮದಲ್ಲಿ ಸೇರಿಸಿಕೊಳ್ಳುವುದರಿಂದ ರಕ್ತದೊತ್ತಡದ ನಿಯಂತ್ರಿಸಿಕೊಳ್ಳಬಹುದು. ಅವುಗಳು ಯಾವುದು ಗೊತ್ತೇ?


ಬೀಟ್ರೂಟ್

ಅಧ್ಯಯನಗಳ ಪ್ರಕಾರ ಬೀಟ್ರೂಟ್ ನಲ್ಲಿರುವ ನೈಟ್ರೇಟ್ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್ ರಸವನ್ನು ಕುಡಿಯುವುದು ಅಥವಾ ಸಲಾಡ್, ಸೂಪ್ ಅಥವಾ ಮೇಲೋಗರಗಳಿಗೆ ಸೇರಿಸುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಪ್ರಯೋಜನಕಾರಿಯಾಗಿದೆ.


ಹಸಿರು ಸೊಪ್ಪು ತರಕಾರಿಗಳು

ಹಸಿರು ಸೊಪ್ಪು ತರಕಾರಿಗಳು ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿವೆ. ಸೊಪ್ಪು ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಒಟ್ಟಾರೆ ಹೃದಯರಕ್ತನಾಳದ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆ ತೋರಿಸಿದೆ. ಪಾಲಕ್, ಹಸಿರು ಬಾಳೆ ಮತ್ತು ಸಾಸಿವೆ ಗ್ರೀನ್ಸ್ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.


ಬೆಳ್ಳುಳ್ಳಿ

ಆಂಟಿಫಂಗಲ್ ಮತ್ತು ಆ್ಯಂಟಿಬಯೋಟಿಕ್ ಗುಣಗಳಿರುವ ಬೆಳ್ಳುಳ್ಳಿ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬೆಳ್ಳುಳ್ಳಿ ಕೂಡ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.


ಸಿಹಿ ಆಲೂಗಡ್ಡೆ

ಫೈಬರ್, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಹೇರಳವಾಗಿರುವ ಸಿಹಿ ಆಲೂಗಡ್ಡೆ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


ಬ್ರೊಕೊಲಿ

ಬ್ರೊಕೊಲಿಯನ್ನು ಆಹಾರದಲ್ಲಿ ಸೇರಿಸುವುದು ಅಧಿಕ ಬಿಪಿಯನ್ನು ನಿಯಂತ್ರಿಸಲು ಪರಿಣಾಮಕಾರಿ ಮಾರ್ಗವಾಗಿದೆ. ಕೋಸುಗಡ್ಡೆಯು ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ, ಪೊಟ್ಯಾಸಿಯಮ್, ವಿಟಮಿನ್ ಕೆ, ಪ್ರೋಟೀನ್ ಮತ್ತು ಫೈಬರ್‌ನಿಂದ ಕೂಡಿದೆ.


ಆಲೂಗಡ್ಡೆ

ಆಲೂಗಡ್ಡೆ ಪೊಟ್ಯಾಸಿಯಮ್‌ನ ರಕ್ತದೊತ್ತಡ ನಿಯಂತ್ರಿಸಲು ಉತ್ತಮ ಮಾರ್ಗವಾಗಿದೆ. ಆಲೂಗಡ್ಡೆಯನ್ನು ಆಹಾರದಲ್ಲಿ ಹಲವಾರು ವಿಧದಲ್ಲಿ ಸೇರಿಸಿ ರಕ್ತದೊತ್ತಡವನ್ನು ದೂರವಿಡಬಹುದು.


ಇದನ್ನೂ ಓದಿ: Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

ಕ್ಯಾರೆಟ್

ದೃಷ್ಟಿಯ ಸಮಸ್ಯೆಯನ್ನು ನಿವಾರಿಸುವ ಕ್ಯಾರೆಟ್ ಹಲವಾರು ಪ್ರಯೋಜನಕಾರಿ ಸಸ್ಯ-ಆಧಾರಿತ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ನಿಯಂತ್ರಿತ ರಕ್ತದೊತ್ತಡ ಸೇರಿದಂತೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
ಅಧಿಕ ರಕ್ತದೊತ್ತಡ ಹೊಂದಿದ್ದರೆ ಇದಕ್ಕೆ ಕೇವಲ ಆಹಾರ ಮಾತ್ರ ಸಹಾಯ ಮಾಡುವುದಿಲ್ಲ. ದೈಹಿಕವಾಗಿ ಸಕ್ರಿಯವಾಗಿರುವುದು ಕೂಡ ಅಷ್ಟೇ ಅಗತ್ಯವಾಗಿದೆ. ಉಪ್ಪು ಸೇವನೆ, ಕೆಫೀನ್ ಅನ್ನು ಕಡಿಮೆ ಮಾಡುವುದು ಮತ್ತು ಒತ್ತಡದ ಮಟ್ಟವನ್ನು ನಿರ್ವಹಿಸುವುದು ಕೂಡ ಅತ್ಯಗತ್ಯ. ದೀರ್ಘಕಾಲದ ಅಧಿಕ ರಕ್ತದೊತ್ತಡ ಹೊಂದಿದ್ದರೆ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯುವುದು ಮುಖ್ಯ.

Continue Reading

ಆಹಾರ/ಅಡುಗೆ

Tips To Prevent Curd: ಮೊಸರು ಹುಳಿಯಾಗದೇ ಇರಲು ಈ ಟಿಪ್ಸ್ ಪಾಲಿಸಿ

Tips To Prevent Curd: ಮೊಸರು ಬೇಗನೆ ಹುಳಿಯಾಗುತ್ತದೆ. ಆದರೆ ಸರಿಯಾಗಿ ಸಂಗ್ರಹಿಸಿದರೆ ಅನೇಕ ದಿನಗಳವರೆಗೆ ಮೊಸರು ಹುಳಿಯಾಗುವುದನ್ನು ತಪ್ಪಿಸಬಹುದು. ಅದಕ್ಕಾಗಿ ಕೆಲವು ಸಲಹೆಗಳು ಇಲ್ಲಿವೆ.

VISTARANEWS.COM


on

By

Tips To Prevent Curd
Koo

ಬೇಸಿಗೆಯ (summer) ಬಿಸಿಲಿನಿಂದ ಪಾರಾಗಲು ದೇಹವನ್ನು ತಂಪು ಮಾಡುವ ಯಾವುದಾದರೂ ಪಾನೀಯ ಸಿಕ್ಕರೆ ಸಾಕು ಎಂದು ಬಯಸುತ್ತೇವೆ. ಆದರೆ ಏನೇನೋ ಕುಡಿದು ಆರೋಗ್ಯ ಹಾಳು ಮಾಡಿಕೊಳ್ಳುವುದಕ್ಕಿಂತ ಮನೆಯಲ್ಲಿ ಸುಲಭವಾಗಿ ಮೊಸರು (curd) ಬೆರೆಸಿ ಮಜ್ಜಿಗೆ (buttermilk) ಮಾಡಿದರೆ ದೇಹಕ್ಕೂ ತಂಪು ಮತ್ತು ಆರೋಗ್ಯಕರವೂ ಆಗಿರುತ್ತದೆ. ಆದರೆ ಬೇಸಗೆಯಲ್ಲಿ ಒಂದೇ ಚಿಂತೆ ಆಹಾರ ಪದಾರ್ಥಗಳು ಬೇಗ ಕೆಡುತ್ತವೆ ಎಂಬುದು. ಅದರಲ್ಲೂ ಮೊಸರು ಬಹುಬೇಗನೆ ಹುಳಿಯಾಗುತ್ತದೆ. ಇದನ್ನು ತಡೆಯಲು ಕೆಲವು ಟಿಪ್ಸ್ ಗಳನ್ನು (Tips To Prevent Curd) ಪಾಲಿಸಿದರೆ ಸಾಕು.


ಬೇಸಿಗೆಯಲ್ಲಿ ವಾತಾವರಣದ ಉಷ್ಣತೆಯ ಹೆಚ್ಚಳದಿಂದಾಗಿ ತೇವಾಂಶವುಳ್ಳ ಸ್ಥಳಗಳಲ್ಲಿ ಬ್ಯಾಕ್ಟೀರಿಯಾಗಳು ವೇಗವಾಗಿ ಬೆಳೆಯುತ್ತದೆ. ಇದರಿಂದ ಆಹಾರ ಪದಾರ್ಥಗಳ ಶೇಖರಣೆಯಲ್ಲಿ ಸ್ವಲ್ಪ ಅಜಾಗರೂಕತೆ ಉಂಟಾದರೂ ಆಹಾರವು ಬಹು ಬೇಗನೆ ಹಾಳಾಗುತ್ತದೆ. ಇದರಲ್ಲಿ ವಿಶೇಷವಾಗಿ ಡೈರಿ ಉತ್ಪನ್ನಗಳು.

ಮೊಸರು ಬೇಗನೆ ಹುಳಿಯಾಗುತ್ತದೆ. ಆದರೆ ಅದನ್ನು ಸರಿಯಾಗಿ ಸಂಗ್ರಹಿಸಿದರೆ ಅನೇಕ ದಿನಗಳವರೆಗೆ ಮೊಸರು ಹುಳಿಯಾಗುವುದನ್ನು ತಪ್ಪಿಸಬಹುದು. ಮಾರುಕಟ್ಟೆಯಲ್ಲಿ ಮೊಸರು ಸುಲಭವಾಗಿ ಸಿಗುತ್ತದೆಯಾದರೂ ಮನೆಯಲ್ಲಿ ತಯಾರಿಸಿದ ಮೊಸರಿಗೆ ಹೆಚ್ಚಿನವರು ಆದ್ಯತೆ ನೀಡುತ್ತಾರೆ. ಹೀಗಾಗಿ ಮನೆಯಲ್ಲಿ ತಯಾರಿಸಿದ ಮೊಸರನ್ನು ಹುಳಿಯಾಗದಂತೆ ರಕ್ಷಿಸಲು ಮತ್ತು ಸುದೀರ್ಘ ಕಾಲ ಅದು ಬಾಳಿಕೆ ಬರಲು ಅನುಸರಿಸಬಹುದಾದ ಕೆಲವು ಸಲಹೆಗಳು ಇಲ್ಲಿವೆ.


ಸಣ್ಣ ಭಾಗ ಮೊಸರು ಸೇರಿಸಿ

ಮೊಸರು ಹುಳಿಯಾಗದಂತೆ ತಡೆಯಲು ಒಂದು ಸುಲಭ ಮತ್ತು ಸರಳವಾದ ಉಪಾಯವೆಂದರೆ ಹಾಲಿಗೆ ಸೇರಿಸುವ ಮೊದಲು ಅದರ ಸ್ವಲ್ಪ ಭಾಗವನ್ನು ತೆಗೆದುಕೊಂಡು ಚೆನ್ನಾಗಿ ಮಿಕ್ಸ್ ಮಾಡಿ. ಬಿಸಿ ಹಾಲಿಗೆ ಮೊಸರು ಹಾಕಬಾರದು. ಹಾಲಿಗೆ ಮೊಸರು ಹಾಕಿದ ಬಳಿಕ ಚೆನ್ನಾಗಿ ಅದನ್ನು ಮಿಕ್ಸ್ ಮಾಡಿ. ಇದರಿಂದ ಹಾಲು ಶೀಘ್ರದಲ್ಲಿ ಮೊಸರಾಗುತ್ತದೆ ಮತ್ತು ಸುದೀರ್ಘ ಅವಧಿಯವರೆಗೆ ಬಾಳಿಕೆ ಬರುತ್ತದೆ.


ಮೊಸರು ಹುಳಿ ಕಡಿಮೆ ಮಾಡಿ

ಮನೆಯಲ್ಲಿ ತಯಾರಿಸಿದ ಮೊಸರಿನ ಹುಳಿಯನ್ನು ಕಡಿಮೆ ಮಾಡಲು ಇನ್ನೊಂದು ವಿಧಾನವೆಂದರೆ ಅದನ್ನು ಸರಿಯಾದ ವಿಧಾನದಲ್ಲಿ ಮಾಡುವುದು. ಮೊಸರಿನ ಮೇಲ್ಭಾಗ ಮತ್ತು ಅಂಚುಗಳಲ್ಲಿ ರೂಪುಗೊಳ್ಳುವ ದ್ರವವನ್ನು ತೆಗೆದುಹಾಕುವುದರಿಂದ ಹುಳಿ ಕಡಿಮೆಯಾಗುತ್ತದೆ. ಮೊಸರನ್ನು ರಾತ್ರಿಯಿಡೀ ಮಸ್ಲಿನ್ ಬಟ್ಟೆಯಲ್ಲಿ ಇಟ್ಟು ಜರಡಿಯಲ್ಲಿ ಸೋಸಿದರೆ ಆಮ್ಲೀಯತೆಯನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ಹೀಗೆ ಮಾಡುವುದರಿಂದ ಮೊಸರಿನಲ್ಲಿ ಹಾಲಿನ ಘನಾಂಶಗಳು ಹೆಚ್ಚುತ್ತವೆ ಮತ್ತು ದಪ್ಪವಾಗುತ್ತವೆ. ಈ ಪ್ರಕ್ರಿಯೆಯನ್ನು ಲ್ಯಾಬ್ನೆ, ಗ್ರೀಕ್ ಮೊಸರು ಅದ್ದು ಮಾಡಲು ಬಳಸಲಾಗುತ್ತದೆ. ಇದನ್ನು ಬ್ರೆಡ್ನೊಂದಿಗೆ ತಿನ್ನಲು ರುಚಿಯಾಗಿರುತ್ತದೆ.


ಸರಿಯಾದ ಸಮಯ

ಮೊಸರನ್ನು ಬೆಳಗ್ಗೆ ಫ್ರೀಜ್ ಮಾಡುವುದು ಸರಿಯಲ್ಲ. ಇದರಿಂದ ಅದು ಹೆಚ್ಚು ದಪ್ಪವಾಗುವುದಿಲ್ಲ ಮತ್ತು ನೀರು ಬಿಡುವುದಿಲ್ಲ. ರಾತ್ರಿಯಲ್ಲೇ ಮೊಸರನ್ನು ಫ್ರೀಜ್ ಮಾಡಿದರೆ ಉತ್ತಮ. ಬೆಳಗ್ಗೆ ಅದು ಹೆಪ್ಪುಗಟ್ಟಿದಾಗ ಅದನ್ನು ಕೆಲವು ಗಂಟೆಗಳ ಕಾಲ ರೆಫ್ರಿಜರೇಟರ್ ನಲ್ಲಿ ಇರಿಸಿ. ಇದರಿಂದ ಮೊಸರು ಹೆಚ್ಚು ಹುಳಿಯಾಗುವುದಿಲ್ಲ. ಮತ್ತು ತಿನ್ನಲು ರುಚಿಯಾಗಿರುತ್ತದೆ.

ಇದನ್ನೂ ಓದಿ: Top 10 Puddings: ಭಾರತದ ಫಿರ್ನಿ, ಖೀರು, ಸಿಹಿ ಪೊಂಗಲ್‌ಗೆ ವಿಶ್ವದ ಟಾಪ್‌ 10 ತಿಂಡಿ ಪಟ್ಟಿಯಲ್ಲಿ ಸ್ಥಾನ!

ತಂಪಾದ ಸ್ಥಳದಲ್ಲಿ ಸಂಗ್ರಹಿಸಿ

ಮೊಸರನ್ನು ಬಿಸಿ ಸ್ಥಳದಲ್ಲಿಟ್ಟರೆ ಅದು ಬೇಗನೆ ಹುಳಿಯಾಗಲು ಪ್ರಾರಂಭಿಸುತ್ತದೆ. ಮೊಸರನ್ನು ಯಾವಾಗಲೂ ಕೋಣೆಯ ಉಷ್ಣಾಂಶಕ್ಕಿಂತ ಸ್ವಲ್ಪ ತಂಪಾಗಿರುವ ಸ್ಥಳದಲ್ಲಿ ಅಥವಾ ರೆಫ್ರಿಜರೇಟರ್‌ನಲ್ಲಿ ಇರಿಸಿ. ಅದರಲ್ಲೂ ಮೊಸರಿನ ಪಾತ್ರೆಯನ್ನು ಮಣ್ಣಿನ ಮಡಕೆಯಲ್ಲಿ ಇರಿಸಿ ಅಥವಾ ಎಸಿ ಅಥವಾ ಕೂಲರ್ ಹೊಂದಿರುವ ಕೋಣೆಯಲ್ಲಿ ಇಟ್ಟರೆ ಅದು ಬಹುಬೇಗನೆ ಹಾಳಾಗುವುದಿಲ್ಲ.

Continue Reading

ಕರ್ನಾಟಕ

MTR: ಬೆಂಗಳೂರಿನಲ್ಲಿ ಎಂಟಿಆರ್ ಕರುನಾಡು ಸ್ವಾದ; 2 ದಿನಗಳ ಆಹಾರ ಉತ್ಸವದಲ್ಲಿ ಏನೇನಿವೆ?

MTR: ಎಂಟಿಆರ್ ಕರುನಾಡು ಸ್ವಾದ ಕರ್ನಾಟಕ ವಿಶಿಷ್ಟ ಆಹಾರ ಉತ್ಸವಕ್ಕೆ ಬೆಂಗಳೂರಿನ ಜಯಮಹಲ್ ಪ್ಯಾಲೇಸ್‌ನ ಕನ್ವೆನ್ಷನ್ ಸೆಂಟರ್‌ನಲ್ಲಿ ಶನಿವಾರ ಚಾಲನೆ ದೊರೆಯಿತು. 100 ವರ್ಷಗಳ ಸಂಭ್ರಮಾಚರಣೆಯೊಂದಿಗೆ ಎಂಟಿಆರ್ ತನ್ನ ‌ಜನಪ್ರಿಯ ಆಹಾರ ಉತ್ಸವದ 3ನೇ ಆವೃತ್ತಿಯಾದ ಎಂಟಿಆರ್‌ ಕರುನಾಡು ಸ್ವಾದ ಎರಡು ದಿನಗಳ ಕರ್ನಾಟಕ ವಿಶಿಷ್ಟ ಆಹಾರ ಉತ್ಸವವನ್ನು ಭಾರತದ ಮಾಜಿ ಸಾಲಿಸಿಟರ್ ಜನರಲ್, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಉದ್ಘಾಟಿಸಿದರು.

VISTARANEWS.COM


on

MTR Karunadu Svada food festival inauguration in Bengaluru
Koo

ಬೆಂಗಳೂರು: ಎಂಟಿಆರ್ ಕರುನಾಡು ಸ್ವಾದ ಕರ್ನಾಟಕ ವಿಶಿಷ್ಟ ಆಹಾರ ಉತ್ಸವಕ್ಕೆ ಬೆಂಗಳೂರಿನ ಜಯಮಹಲ್ ಪ್ಯಾಲೇಸ್‌ನ ಕನ್ವೆನ್ಷನ್ ಸೆಂಟರ್‌ನಲ್ಲಿ ಶನಿವಾರ ಚಾಲನೆ ದೊರೆಯಿತು. 100 ವರ್ಷಗಳ ಸಂಭ್ರಮಾಚರಣೆಯೊಂದಿಗೆ ಎಂಟಿಆರ್ (MTR) ತನ್ನ ‌ಜನಪ್ರಿಯ ಆಹಾರ ಉತ್ಸವದ 3ನೇ ಆವೃತ್ತಿಯಾದ ಎಂಟಿಆರ್‌ ಕರುನಾಡು ಸ್ವಾದ ಎರಡು ದಿನಗಳ ಕರ್ನಾಟಕ ವಿಶಿಷ್ಟ ಆಹಾರ ಉತ್ಸವವನ್ನು ಭಾರತದ ಮಾಜಿ ಸಾಲಿಸಿಟರ್ ಜನರಲ್, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಉದ್ಘಾಟಿಸಿದರು.

ಆಹಾರ ಉತ್ಸವದ ವಿಶೇಷತೆ

ಎಂಟಿಆರ್‌ನ ಪಾಕಶಾಲೆಯ ಸೆಂಟರ್‌ ಆಫ್‌ ಎಕ್ಸಿಲೆನ್ಸ್‌ (Centre of Excellence) ನೇತೃತ್ವದಲ್ಲಿ, 50 ಕ್ಕೂ ಹೆಚ್ಚು ಗೃಹ ಬಾಣಸಿಗರು ಉತ್ತರ ಕರ್ನಾಟಕ, ಕೊಡಗು, ದಕ್ಷಿಣ ಕನ್ನಡ, ಕಲ್ಯಾಣ ಕರ್ನಾಟಕ, ಉಡುಪಿ ಮತ್ತು ಹಳೇ ಮೈಸೂರು ಸೇರಿದಂತೆ ಕರ್ನಾಟಕದ ಆರು ಪ್ರದೇಶಗಳ 100ಕ್ಕೂ ಹೆಚ್ಚು ಖಾದ್ಯಗಳನ್ನು ಪ್ರದರ್ಶಿಸುತ್ತಿದ್ದಾರೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಇಂದು ಖರೀದಿಗೆ ಮುನ್ನ ದರದ ಜೊತೆಗೆ ಇದು ತಿಳಿದಿರಲಿ

ಉತ್ಸವದಲ್ಲಿ ವಿಶೇಷ ಪಾಕವಿಧಾನ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಈ ಪುಸ್ತಕವು 100 ಕ್ಕೂ ಹೆಚ್ಚು ಪಾಕವಿಧಾನಗಳ ಸಂಗ್ರಹಣೆಯನ್ನು ಹೊಂದಿದೆ. ಇದರಿಂದ ವಿಶೇಷ ಭಕ್ಷ್ಯಗಳನ್ನು ಮನೆಯಲ್ಲಿಯೇ ತಯಾರಿಸಬಹುದಾಗಿದೆ.

ಈ ವೇಳೆ ಎಂಟಿಆರ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸುನಯ್ ಭಾಸಿನ್ ಮಾತನಾಡಿ, “ಎಂಟಿಆರ್ ಕರುನಾಡು ಸ್ವಾದವು” ಕರ್ನಾಟಕದ ಆಹಾರ ಮತ್ತು ಸಂಸ್ಕೃತಿಯ ಮೇಲಿರುವ ಪ್ರೀತಿಯಿಂದ ಸೃಷ್ಟಿಯಾಗಿದೆ. ಇದು ಕರ್ನಾಟಕದ ವೈವಿಧ್ಯಮಯ ರುಚಿಗಳ ಆಚರಣೆಯಾಗಿದೆ ಮತ್ತು ರಾಜ್ಯದ ಪಾಕಶಾಲೆಯ ಪರಂಪರೆಯನ್ನು ಎತ್ತಿಹಿಡಿಯುವ ಬದ್ಧತೆಯಾಗಿದೆ. ಈ ಅಮೂಲ್ಯವಾದ ಭಕ್ಷ್ಯಗಳ ಮೂಲಕ ಕರುನಾಡು ಪರಂಪರೆಯನ್ನು ಸಂರಕ್ಷಿಸುವ ಪ್ರಯತ್ನ ಇದಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

ಆಹಾರ ಉತ್ಸವ ಕಾರ್ಯಕ್ರಮದಲ್ಲಿ ಯಕ್ಷಗಾನ ಮತ್ತು ಡೊಳ್ಳು ಕುಣಿತದಂತಹ ಕರ್ನಾಟಕದ ನೃತ್ಯ ಪ್ರಕಾರಗಳನ್ನು ಆಯೋಜಿಸಿರುವುದು ವಿಶೇಷವಾಗಿದೆ.

Continue Reading

ಲೈಫ್‌ಸ್ಟೈಲ್

Food Cleaning Tips Kannada: ಹಣ್ಣು, ತರಕಾರಿಗಳಿಂದ ರಾಸಾಯನಿಕ ಅಂಶ ಸ್ವಚ್ಛಗೊಳಿಸುವ 5 ವಿಧಾನಗಳಿವು

ಮಾರುಕಟ್ಟೆಯಿಂದ ತರುವ ಹಣ್ಣು, ತರಕಾರಿಗಳು ಕೀಟನಾಶಕ ಮುಕ್ತವಾಗಿದೆಯೇ ಎಂಬುದನ್ನು ಪರಿಶೀಲಿಸಲು ಸಾಧ್ಯವಿಲ್ಲ. ಆದರೆ ಮನೆಗೆ ತಂದು ಅವುಗಳನ್ನು ಸ್ವಚ್ಛಗೊಳಿಸುವ ಮೂಲಕ (Food Cleaning Tips Kannada) ಅವುಗಳಿಂದ ಕೀಟನಾಶಕಗಳನ್ನು ಸಂಪೂರ್ಣವಾಗಿ ತೆಗೆದುಹಾಕಿ ತಿನ್ನಲು ಯೋಗ್ಯವನ್ನಾಗಿ ಮಾಡಬಹುದು. ಈ ಕುರಿತ (Food Cleaning Tips) ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Food Cleaning Tips Kannada
Koo

ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಿಂದ ತರುವ ಪ್ರತಿಯೊಂದು ಸಾಮಗ್ರಿಯೂ ಆತಂಕ ಹುಟ್ಟಿಸುತ್ತದೆ. ಅದು ತರಕಾರಿ (vegetables) ಆಗಿರಬಹುದು, ಹಣ್ಣು ಹಂಪಲು (fruits), ಧಾನ್ಯಗಳಾಗಿರಬಹುದು (grain). ಕೃಷಿಯಲ್ಲಿ ಕೀಟನಾಶಕಗಳ ಬಳಕೆಯು ವ್ಯಾಪಕವಾಗಿರುವುದರಿಂದ ನಾವು ಸೇವಿಸುವ ಆಹಾರದ ಸುರಕ್ಷತೆಯನ್ನು (Food Cleaning Tips Kannada) ಖಚಿತಪಡಿಸಿಕೊಳ್ಳುವುದು ಹೆಚ್ಚು ಅಗತ್ಯವಾಗಿದೆ. ಕೀಟಗಳು ಮತ್ತು ರೋಗಗಳಿಂದ ಬೆಳೆಗಳನ್ನು ರಕ್ಷಿಸಲು ಕೀಟನಾಶಕಗಳು ಅಗತ್ಯವಾದಾಗ, ಹಣ್ಣು ಮತ್ತು ತರಕಾರಿಗಳ ಮೇಲೆ ಅದರ ಅವಶೇಷಗಳನ್ನು ಬೀಳುತ್ತವೆ. ಇದನ್ನು ಕಾಲಾನಂತರದಲ್ಲಿ ನಾವು ಸೇವಿಸಿದರೆ ಆರೋಗ್ಯದ ಅಪಾಯವನ್ನು ಉಂಟು ಮಾಡುತ್ತದೆ. ಆದರೆ ಈ ಕೀಟನಾಶಕಗಳ ತೆಗೆದು ಹಾಕಲು ಮನೆಯಲ್ಲೇ ಇರುವ ಕೆಲವು ಸಾಮಗ್ರಿಗಳು ನಮಗೆ ಸಹಾಯ ಮಾಡುತ್ತದೆ. ತರಕಾರಿ, ಹಣ್ಣುಗಳಿಂದ ಕೀಟನಾಶಕಗಳನ್ನು ತೆಗೆದುಹಾಕಲು ಮನೆಯಲ್ಲಿ ಬಳಸಬಹುದಾದ (Food Cleaning Tips) ಐದು ಪ್ರಮುಖ ವಿಧಾನಗಳಿವೆ.

Apple cider vinegar for Fungal Infection Home Remedies

ವಿನೆಗರ್ ದ್ರಾವಣ

ಹಣ್ಣುಗಳು ಮತ್ತು ತರಕಾರಿಗಳಿಂದ ಕೀಟನಾಶಕಗಳನ್ನು ತೆಗೆದುಹಾಕಲು ಸರಳ ಮತ್ತು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಅವುಗಳನ್ನು ವಿನೆಗರ್ ದ್ರಾವಣದಿಂದ ತೊಳೆಯುವುದು. ಒಂದು ಬೌಲ್ ಅಥವಾ ಸಿಂಕ್‌ನಲ್ಲಿ ಮೂರು ಭಾಗಗಳ ನೀರಿನೊಂದಿಗೆ ಒಂದು ಭಾಗ ಬಿಳಿ ವಿನೆಗರ್ ಮಿಶ್ರಣ ಮಾಡಿ. ಉತ್ಪನ್ನವನ್ನು ಈ ದ್ರಾವಣದಲ್ಲಿ 5- 10 ನಿಮಿಷಗಳ ಕಾಲ ನೆನೆಸಿ, ಅನಂತರ ಶುದ್ಧ ನೀರಿನಿಂದ ಚೆನ್ನಾಗಿ ತೊಳೆಯಿರಿ. ವಿನೆಗರ್ ಕೀಟನಾಶಕಗಳ ಅವಶೇಷಗಳನ್ನು ಸಂಪೂರ್ಣವಾಗಿ ತೆಗೆದು ಹಾಕುತ್ತದೆ. ಹಣ್ಣುಗಳು ಮತ್ತು ತರಕಾರಿಗಳನ್ನು ಸ್ವಚ್ಛಗೊಳಿಸಲು ಮತ್ತು ತಿನ್ನಲು ಹೆಚ್ಚು ಸುರಕ್ಷಿತ ಮಾಡುತ್ತದೆ.

peeling

ಸಿಪ್ಪೆ ಸುಲಿಯುವುದು

ಹಣ್ಣು ಮತ್ತು ತರಕಾರಿಗಳ ಸಿಪ್ಪೆ ಸುಲಿದು ಸೇವಿಸುವುದು ಕೀಟನಾಶಕಗಳನ್ನು ತೆಗೆದು ಹಾಕುತ್ತದೆ. ಅನೇಕ ಕೀಟನಾಶಕಗಳು ಉತ್ಪನ್ನದ ಮೇಲ್ಮೈಯಲ್ಲಿ ಕೇಂದ್ರೀಕೃತವಾಗಿರುತ್ತವೆ. ಆದ್ದರಿಂದ ಹೊರ ಪದರವನ್ನು ತೆಗೆದುಹಾಕುವುದರಿಂದ ಈ ಅವಶೇಷಗಳ ಹೆಚ್ಚಿನ ಭಾಗವನ್ನು ತೆಗೆದುಹಾಕಬಹುದು. ಆದಾಗ್ಯೂ ಸಿಪ್ಪೆಸುಲಿಯುವಿಕೆಯು ಹಣ್ಣು, ತರಕಾರಿಯಲ್ಲಿರುವ ಕೆಲವು ಪೋಷಕಾಂಶಗಳು ಮತ್ತು ಫೈಬರ್ ಅನ್ನು ತೆಗೆದುಹಾಕುತ್ತದೆ ಎಂಬುದನ್ನು ನೆನಪಿನಲ್ಲಿಡಿ, ಆದ್ದರಿಂದ ಪೋಷಕಾಂಶಗಳ ನಷ್ಟದೊಂದಿಗೆ ಪ್ರಯೋಜನಗಳನ್ನು ಸಮತೋಲನಗೊಳಿಸುವುದು ಅತ್ಯಗತ್ಯ.

Baking soda for Fungal Infection Home Remedies

ಅಡುಗೆ ಸೋಡಾ

ಸೋಡಿಯಂ ಬೈಕಾರ್ಬನೇಟ್ ಎಂದೂ ಕರೆಯಲ್ಪಡುವ ಅಡುಗೆ ಸೋಡಾ, ಕೀಟನಾಶಕಗಳ ಅವಶೇಷಗಳನ್ನು ತೆಗೆದುಹಾಕಲು ಮತ್ತೊಂದು ಪರಿಣಾಮಕಾರಿ ವಸ್ತು. ಒಂದು ಚಮಚ ಅಡುಗೆ ಸೋಡಾವನ್ನು ಒಂದು ಕಪ್ ನೀರಿನಲ್ಲಿ ಬೆರೆಸಿ, ಹಣ್ಣು ಮತ್ತು ತರಕಾರಿಗಳನ್ನು 15-20 ನಿಮಿಷಗಳ ಕಾಲ ನೆನೆಸಿಡಿ. ಅನಂತರ ಅವುಗಳನ್ನು ಹರಿಯುವ ನೀರಿನ ಅಡಿಯಲ್ಲಿ ಚೆನ್ನಾಗಿ ತೊಳೆಯಿರಿ. ಬೇಕಿಂಗ್ ಸೋಡಾ ಕೀಟನಾಶಕ ಅಣುಗಳನ್ನು ಇದು ತೆಗೆದು ಹಾಕುತ್ತದೆ.

ಇದನ್ನೂ ಓದಿ: Eating Bread: ನಿತ್ಯವೂ ಬ್ರೆಡ್‌ ತಿನ್ನುತ್ತೀರಾ? ಹಾಗಿದ್ದರೆ ಖರೀದಿಸುವ ಮುನ್ನ ಇವಿಷ್ಟು ತಿಳಿದಿರಲಿ

ಬ್ರಷ್‌ನಿಂದ ಸ್ಕ್ರಬ್ಬಿಂಗ್

ಆಲೂಗಡ್ಡೆ, ಕ್ಯಾರೆಟ್ ಅಥವಾ ಸೌತೆಕಾಯಿಗಳಂತಹ ದಪ್ಪವಾದ ಚರ್ಮ ಅಥವಾ ಮೇಲ್ಮೈ ಹೊಂದಿರುವ ಹಣ್ಣು ಮತ್ತು ತರಕಾರಿಗಳಿಗೆ ಹರಿಯುವ ನೀರಿನ ಅಡಿಯಲ್ಲಿ ಅವುಗಳನ್ನು ಸ್ಕ್ರಬ್ ಮಾಡಲು ಬ್ರಷ್ ಅನ್ನು ಬಳಸುವುದು ಹೆಚ್ಚು ಪರಿಣಾಮಕಾರಿ. ಮೃದುವಾದ ಸ್ಕ್ರಬ್ಬಿಂಗ್ ಕ್ರಿಯೆಯು ಮೇಲ್ಮೈಗೆ ಅಂಟಿಕೊಂಡಿರುವ ಕೀಟನಾಶಕಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದಕ್ಕಾಗಿ ಕ್ಲೀನ್ ಬ್ರಷ್ ಅನ್ನು ಬಳಸಲು ಮರೆಯದಿರಿ.

Vegetables and Fruits

ಉಪ್ಪು ನೀರಿನಲ್ಲಿ ನೆನೆಸುವುದು

ಹಣ್ಣು, ತರಕಾರಿಗಳನ್ನು ಸಂಪೂರ್ಣವಾಗಿ ತೆಗೆದುಹಾಕಲು ಉಪ್ಪುನೀರನ್ನು ಸಹ ಬಳಸಬಹುದು. ಎರಡು ಚಮಚ ಉಪ್ಪನ್ನು ನಾಲ್ಕು ಕಪ್ ನೀರಿನಲ್ಲಿ ಕರಗಿಸಿ ಹಣ್ಣು ಮತ್ತು ತರಕಾರಿಗಳನ್ನು 10- 15 ನಿಮಿಷಗಳ ಕಾಲ ಅದರಲ್ಲಿ ನೆನೆಸಿಡಿ. ಅನಂತರ ಅವುಗಳನ್ನು ಶುದ್ಧ ನೀರಿನಿಂದ ಚೆನ್ನಾಗಿ ತೊಳೆಯಿರಿ.

Continue Reading
Advertisement
Ramanagara News
ಕರ್ನಾಟಕ3 hours ago

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Narendra Modi
ದೇಶ3 hours ago

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

IPL 2024
ಪ್ರಮುಖ ಸುದ್ದಿ3 hours ago

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

Prajwal Revanna Case
ಪ್ರಮುಖ ಸುದ್ದಿ3 hours ago

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

IPL 2024
ಕ್ರೀಡೆ3 hours ago

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

Narendra Modi
ದೇಶ3 hours ago

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Prajwal Revanna Case
ಕರ್ನಾಟಕ4 hours ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

IPL 2024
ಪ್ರಮುಖ ಸುದ್ದಿ4 hours ago

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

Farooq Abdullah
ದೇಶ4 hours ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Champions Trophy
Latest4 hours ago

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ7 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ9 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ9 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ22 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌