Which Type Of Roti Is Best: ಯಾರಿಗೆ ಯಾವ ರೊಟ್ಟಿ ಸೂಕ್ತ? ತಿನ್ನುವ ಮೊದಲು ತಿಳಿದುಕೊಂಡಿರಿ! - Vistara News

ಆಹಾರ/ಅಡುಗೆ

Which Type Of Roti Is Best: ಯಾರಿಗೆ ಯಾವ ರೊಟ್ಟಿ ಸೂಕ್ತ? ತಿನ್ನುವ ಮೊದಲು ತಿಳಿದುಕೊಂಡಿರಿ!

ಹಲವಾರು ರೀತಿಯ ರೊಟ್ಟಿಗಳು ಆಹಾರವಾಗಿ ಜನಪ್ರಿಯತೆ ಗಳಿಸಿವೆ. ಒಂದೊಂದು ಪ್ರಾಂತ್ಯದಲ್ಲಿ ಒಂದೊಂದು ಧಾನ್ಯ ಪರಂಪರಾಗತ ಆಹಾರವಾಗಿಯೂ ಬಳಕೆಯಲ್ಲಿದೆ. ಆದರೆ ಯಾರಿಗೆ ಯಾವ ರೊಟ್ಟಿ ಒಳ್ಳೆಯದು? ಯಾವ ರೊಟ್ಟಿಯಲ್ಲಿ ಏನೇನು ಸತ್ವಗಳು ದೊರೆಯುತ್ತವೆ? ಇಲ್ಲಿವೆ (Which Type Of Roti Is Best) ವಿವರ.

VISTARANEWS.COM


on

Which Type Of Roti Is Best
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದಲ್ಲಿ ಎಲ್ಲವೂ ವೈವಿಧ್ಯಮಯ, ಊಟವೂ ಸೇರಿ. ಅನ್ನ ಎಂದರೆ ಎಲ್ಲವೂ ಒಂದೇ ಅಲ್ಲ. ಬಿಳಿಯಕ್ಕಿ, ಕೆಂಪಕ್ಕಿ, ಕುಚ್ಚಲಕ್ಕಿ ಮುಂತಾದ ಹಲವು ರೀತಿಯ ಅಕ್ಕಿಗಳಲ್ಲಿ ಅನ್ನ ಮಾಡಲಾಗುತ್ತದೆ. ರೊಟ್ಟಿ ಎಂದರೆ ಅದರಲ್ಲೂ ಭಿನ್ನತೆಯಿದೆ. ಅಕ್ಕಿರೊಟ್ಟಿ ದಕ್ಷಿಣ ಭಾರತದಲ್ಲಿ ಹೆಚ್ಚು ಪ್ರಚಲಿತ; ಗೋಧಿ ರೊಟ್ಟಿ ಭಾರತದೆಲ್ಲೆಡೆ ಚಾಲ್ತಿಯಲ್ಲಿದೆ; ಜೋಳದ್ದು ಕರ್ನಾಟಕವೂ ಸೇರಿದಂತೆ ಹಲವೆಡೆ ಬಳಕೆಯಲ್ಲಿದೆ; ರಾಗಿ ರೊಟ್ಟಿ ಕರ್ನಾಟಕದಲ್ಲಿ ಹೆಚ್ಚು ಪ್ರಿಯ; ಸಜ್ಜೆ ರೊಟ್ಟಿ ಗುಜರಾತ್‌, ರಾಜಸ್ಥಾನಗಳಲ್ಲಿ ಮುಖ್ಯ ಆಹಾರ; ಪಂಜಾಬ್‌ ಪ್ರಾಂತ್ಯದಲ್ಲಿ ಮೈದಾ ನಾನ್‌ಗಳು ಜನಪ್ರಿಯ. ಆದರೆ ಈ ಎಲ್ಲಾ ರೊಟ್ಟಿಗಳಲ್ಲಿ ತೂಕ ಇಳಿಸುವವರಿಗೆ ಸೂಕ್ತವಾಗಿದ್ದು (Which Type Of Roti Is Best) ಯಾವುದು? ಇತ್ತೀಚಿನ ವರ್ಷಗಳಲ್ಲಿ ಸಿರಿಧಾನ್ಯದ ಬಳಕೆ ಹೆಚ್ಚಿದೆ. ಆರೋಗ್ಯದ ಬಗ್ಗೆ ಕಾಳಜಿಯೂ ಹೆಚ್ಚಿರುವುದರಿಂದ, ಯಾವುದು ಹೆಚ್ಚು ಆರೋಗ್ಯಕರ ಎಂಬ ಚರ್ಚೆಗೆ ಕಾವೇರಿದೆ. ಆಹಾರ ತಜ್ಞರು ಈ ಬಗ್ಗೆ ನಾನಾ ರೀತಿಯ ವಿವರಣೆಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ರೀತಿಯ ರೊಟ್ಟಿಗಳ ಸತ್ವ ಮತ್ತು ಕ್ಯಾಲೊರಿಗಳ ವಿವರಗಳನ್ನು ಇಲ್ಲಿ ನೀಡಲಾಗಿದೆ. ಇವೆಲ್ಲವೂ ಆರೋಗ್ಯಕ್ಕೆ ಒಳ್ಳೆಯದೇ ಆದರೂ ಒಂದೊಂದು ಧಾನ್ಯಗಳಿಗೂ ಅದರದ್ದೇ ಆದ ಅನನ್ಯತೆಯಿದೆ. ಹಾಗಾಗಿ ಅವುಗಳ ಸತ್ವಗಳು ಭಿನ್ನವಾಗುತ್ತವೆ.

Wheat Roti

ಗೋಧಿ ರೊಟ್ಟಿ

ಒಂದು ಮಧ್ಯಮ ಗಾತ್ರದ ಗೋಧಿ ರೊಟ್ಟಿಯಲ್ಲಿ 70-80 ಕ್ಯಾಲರಿ ಶಕ್ತಿ ದೊರೆಯುತ್ತದೆ. ಇದರಲ್ಲಿ ನಾರು, ಪಿಷ್ಟ, ಅಲ್ಪ ಪ್ರಮಾಣದ ಪ್ರೊಟೀನ್‌ ಮತ್ತು ಕೊಬ್ಬು, ಮ್ಯಾಂಗನೀಸ್‌, ಫಾಸ್ಫರಸ್‌ನಂಥ ಖನಿಜಗಳು, ಹಲವು ರೀತಿಯ ಬಿ ವಿಟಮಿನ್‌ಗಳು ಇದರಲ್ಲಿ ವಿಫುಲವಾಗಿವೆ. ಈ ಧಾನ್ಯ ದೊರೆಯುವುದು, ಇದರಲ್ಲಿ ಆಹಾರ ತಯಾರಿಸುವುದು ಕಷ್ವವಲ್ಲ ಮತ್ತು ಇದರ ರುಚಿಯೂ ಇಷ್ಟವಾಗುವಂಥದ್ದು.

Millet Roti

ರಾಗಿ ರೊಟ್ಟಿ

ಒಂದು ರಾಗಿ ರೊಟ್ಟಿಯಲ್ಲಿ 80-90 ಕ್ಯಾಲರಿ ಶಕ್ತಿ ದೊರೆಯುತ್ತದೆ. ಜೊತೆಗೆ, ಕ್ಯಾಲ್ಶಿಯಂ, ಕಬ್ಬಿಣ, ನಾರು, ಪ್ರೊಟೀನ್‌, ಪಿಷ್ಟ, ಉತ್ಕರ್ಷಣ ನಿರೋಧಕಗಳಿಂದ ಭರಿತವಾಗಿದೆ. ಹಲವು ರೀತಿಯ ಖನಿಜಾಂಶಗಳು ಇದರಲ್ಲಿವೆ. ಮೂಳೆಗಳ ಆರೋಗ್ಯಕ್ಕೆ ಇದು ಸೂಕ್ತವಾದದ್ದು ಮಾತ್ರವಲ್ಲ, ಮಧುಮೇಹಿಗಳಿಗೆ ಇದು ಒಳ್ಳೆಯ ಆಹಾರವಾಗಿದ್ದು, ರಕ್ತದಲ್ಲಿ ಸಕ್ಕರೆಯಂಶ ಏರದಂತೆ ಕಾಪಾಡಲು ನೆರವಾಗುತ್ತದೆ. ರಾಗಿ ತಿಂದವ ನಿರೋಗಿ ಎಂಬ ಮಾತು ವ್ಯಾಪಕ ಮನ್ನಣೆ ಪಡೆದಿದೆ.

jolada Roti

ಜೋಳದ ರೊಟ್ಟಿ

ಒಂದು ದೊಡ್ಡ ಜೋಳದ ರೊಟ್ಟಿಯಲ್ಲಿ 50-60 ಕ್ಯಾಲರಿ ಶಕ್ತಿ ದೊರೆಯುತ್ತದೆ. ಜೋಳ ತಿಂದವ ತೋಳದಂತಿರಬಹುದು ಎಂಬುದು ಜನಪ್ರಿಯ ಗಾದೆ. ಗ್ಲೂಟೆನ್‌ ರಹಿತವಾದ ಆಹಾರ ಇದಾಗಿದ್ದು, ಮಧುಮೇಹಿಗಳಿಗೆ ಸೂಕ್ತವಾದ ಆಹಾರವಿದು. ಇದರಲ್ಲಿ ಪ್ರೊಟೀನ್‌, ಕೊಬ್ಬು, ನಾರು, ಪಿಷ್ಟ, ಕ್ಯಾಲ್ಶಿಯಂ, ರಂಜಕ, ಕಬ್ಬಿಣ ಮುಂತಾದ ಸೂಕ್ಷ್ಮ ಪೋಷಕಾಂಶಗಳು ಬಹಳಷ್ಟಿವೆ.

Multigrain Roti

ಬಹುಧಾನ್ಯಗಳ ರೊಟ್ಟಿ

ಇದರಲ್ಲಿ ಹಲವಾರು ರೀತಿಯ ಧಾನ್ಯಗಳನ್ನು ಮಿಶ್ರ ಮಾಡಲಾಗುತ್ತದೆ. ಅಂದಾಜಿಗೆ ಹೇಳುವುದಾದರೆ, ಒಂದು ರೊಟ್ಟಿಯಲ್ಲಿ 80-100 ಕ್ಯಾಲರಿ ಶಕ್ತಿ ದೊರೆಯಬಹುದು. ಆದರೆ ಯಾವ್ಯಾವ ಧಾನ್ಯಗಳನ್ನು ಎಷ್ಟು ಪ್ರಮಾಣದಲ್ಲಿ ಮಿಶ್ರ ಮಾಡಲಾಗುತ್ತದೆ ಎನ್ನುವುದರ ಮೇಲೆ, ಇದರ ಕ್ಯಾಲರಿಗಳು ನಿರ್ಧಾರವಾಗುತ್ತದೆ. ಇದರಿಂದ ಹಲವು ರೀತಿಯ ಧಾನ್ಯಗಳು ಮತ್ತು ಸಿರಿಧಾನ್ಯಗಳು ಒಟ್ಟಿಗೇ ದೇಹಕ್ಕೆ ದೊರೆಯುವುದಕ್ಕೆ ಸಾಧ್ಯ. ಇದರಲ್ಲಿ ಹಲವು ರೀತಿಯ ವಿಟಮಿನ್‌ ಮತ್ತು ಖನಿಜಗಳು, ನಾರು ಹೇರಳವಾಗಿ ದೊರೆಯುತ್ತದೆ.

ಇದನ್ನೂ ಓದಿ: Health Benefits Of Tofu: ಪನೀರ್‌ನಂತೆ ಕಾಣುವ ಈ ಆಹಾರದ ಬಗ್ಗೆ ನಿಮಗೆ ಗೊತ್ತೆ?

ಯಾವುದು ಸೂಕ್ತ?

ಗ್ಲೂಟೆನ್‌ ಮುಕ್ತ ಆಹಾರ ಬೇಕೆಂದರೆ ರಾಗಿ ಮತ್ತು ಜೋಳದ ರೊಟ್ಟಿಗಳು ಸೂಕ್ತ. ಬಹುಧಾನ್ಯಗಳಲ್ಲಿ ಗೋಧಿ ಮಿಶ್ರವಾಗಿರುವ ಸಾಧ್ಯತೆ ಹೆಚ್ಚಾಗಿರುವುದರಿಂದ ಇದನ್ನು ಬಿಡುವುದು ಒಳಿತು. ಮಧುಮೇಹ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದ್ದರೆ ರಾಗಿ ಮತ್ತು ಜೋಳದ ರೊಟ್ಟಿಗಳು ಒಳ್ಳೆಯದು. ಹೆಚ್ಚು ಸಮತೋಲಿತ ಆಹಾರದ ಬಗ್ಗೆ ಗಮನ ಹೊಂದಿದ್ದರೆ ಬಹುಧಾನ್ಯಗಳ ರೊಟ್ಟಿ ಒಳ್ಳೆಯ ಆಯ್ಕೆ. ತೂಕ ಇಳಿಸುವುದು ಮುಖ್ಯ ಉದ್ದೇಶವಾಗಿದ್ದರೆ ಜೋಳದ ರೊಟ್ಟಿ ಸೂಕ್ತವಾದದ್ದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಆಹಾರ/ಅಡುಗೆ

Empty Stomach Foods: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ಸೇವಿಸಿದರೆ ಆರೋಗ್ಯಕ್ಕೆ ಉತ್ತಮ!

Empty Stomach Foods: ಬೆಳಗ್ಗೆ ಒಳ್ಳೆಯ ಆಹಾರ ತಿಂದರೆ, ಸಹಜವಾಗಿಯೇ ಇಡೀ ದಿನ ನಿಮ್ಮ ದೇಹ ಉಲ್ಲಸಿತವಾಗಿರುತ್ತದೆ. ಇಲ್ಲವಾದರೆ, ಉತ್ಸಾಹ ಕಡಿಮೆಯಾಗುತ್ತದೆ. ದೇಹ ಬಳಸುತ್ತದೆ. ಉದಾಸೀನತೆ, ಮೈಗಳ್ಳತನ ಕಾಡುತ್ತದೆ. ನಿದ್ದೆ, ಸೋಮಾರಿತನ ಎಳೆಯುತ್ತದೆ. ದೇಹ ಚುರುಕಾಗಿರಬೇಕಾದರೆ, ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಏನು ತಿನ್ನಬೇಕು ಎಂಬುದು ನಮಗೆ ಗೊತ್ತಿರಬೇಕು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Empty Stomach Foods
Koo

ಬೆಳಗ್ಗೆ ಎದ್ದ ಕೂಡಲೇ ಏನು ತಿನ್ನುತ್ತೇವೆ (Empty Stomach Foods) ಎಂಬುದರ ಮೇಲೆ ಇಡೀ ದಿನ ನಮ್ಮ ದೇಹ ಹೇಗಿರುತ್ತದೆ ಎಂಬುದು ಅವಲಂಬಿತವಾಗುತ್ತದೆ ಎಂಬುದು ತಿಳಿದವರ ಮಾತು. ಆರೋಗ್ಯದ ವಿಚಾರಕ್ಕೆ ಬಂದರೆ ಈ ಮಾತು ನೂರಕ್ಕೆ ನೂರರಷ್ಟು ಸತ್ಯ. ಯಾಕೆಂದರೆ, ಬೆಳಗ್ಗೆ ಒಳ್ಳೆಯ ಆಹಾರ ತಿಂದರೆ, ಸಹಜವಾಗಿಯೇ ಇಡೀ ದಿನ ನಿಮ್ಮ ದೇಹ ಉಲ್ಲಸಿತವಾಗಿರುತ್ತದೆ. ಇಲ್ಲವಾದರೆ, ಉತ್ಸಾಹ ಕಡಿಮೆಯಾಗುತ್ತದೆ. ದೇಹ ಬಳಸುತ್ತದೆ. ಉದಾಸೀನತೆ, ಮೈಗಳ್ಳತನ ಕಾಡುತ್ತದೆ. ನಿದ್ದೆ, ಸೋಮಾರಿತನ ಎಳೆಯುತ್ತದೆ. ದೇಹ ಚುರುಕಾಗಿರಬೇಕಾದರೆ, ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಏನು ತಿನ್ನಬೇಕು ಎಂಬುದು ನಮಗೆ ಗೊತ್ತಿರಬೇಕು. ಬಹಳಷ್ಟು ಮಂದಿ ಬೆಳಗ್ಗೆದ್ದ ಕೂಡಲೇ ಚಹಾದ ಮೊರೆ ಹೋಗುವುದು ಸಾಮಾನ್ಯವೇ ಆದರೂ, ಅದನ್ನು ಬಿಟ್ಟು ಒಳ್ಳೆಯ ಆಹಾರದತ್ತ ಗಮನ ಹರಿಸುವುದಿದ್ದರೆ, ನೀವು ಖಾಲಿ ಹೊಟ್ಟೆಯಲ್ಲಿ ಏನೇನೆಲ್ಲ ತಿಂದರೆ ನಿಮ್ಮ ಆರೋಗ್ಯ ವೃದ್ಧಿಯಾಗುತ್ತದೆ ಎಂದು ನೋಡೋಣ ಬನ್ನಿ.

Egg Protein Foods

ಮೊಟ್ಟೆ

ದಿನದ ಆರಂಭವನ್ನು ಮಾಡುವುದಿದ್ದಲ್ಲಿ ಮೊಟ್ಟೆ ಅತ್ಯುತ್ತಮ ಆಹಾರ. ಮೊಟ್ಟೆಯಲ್ಲಿ ಪ್ರೊಟೀನ್‌ ಸೇರಿದಂತೆ ದೇಹಕ್ಕೆ ಬೇಕಾದ ಬಹಳಷ್ಟು ಪೋಷಕಾಂಶಗಳು ಇವೆ. ದೇಹ ಜಡವಾಗಿದ್ದಾಗ, ಮಲಗಿ ಎದ್ದ ಕೂಡಲೇ ಚುರುಕುಗೊಳಿಸಲು, ಉಲ್ಲಾಸ ನೀಡಿ ತಕ್ಷಣ ಚಿಗಿತುಕೊಳ್ಳಲು ಮೊಟ್ಟೆ ಬಹಳ ಒಳ್ಳೆಯದು. ಬೇಯಿಸಿ, ಆಮ್ಲೆಟ್‌ ಮಾಡಿ, ಅಥವಾ ಇನ್ನಾವುದೇ ತಿನಿಸಿನ ರೂಪದಲ್ಲಿ ಅದನ್ನು ನೀವು ತಿನ್ನಬಹುದು. ಹಾಗಾಗಿ ಇದು ಒಂದು ಅತ್ಯುತ್ತಮವಾದ ಬ್ರೇಕ್‌ಫಾಸ್ಟ್‌ ಆಯ್ಕೆ.

Mixed Nuts and Seeds Weight Loss Snacks

ಬೀಜಗಳು

ಒಂದು ಮುಷ್ಟಿ ಒಂದು ಬೀಜಗಳನ್ನು ಬೆಳಗ್ಗೆ ಎದ್ದ ಕೂಡಲೇ ಬಾಯಿಗೆ ಹಾಕಿಕೊಳ್ಳುವುದು ಒಳ್ಳೆಯ ಅಭ್ಯಾಸ. ಇದು ನಿಮ್ಮ ಶಕ್ತಿಯನ್ನು ಹೆಚ್ಚಿಸುತ್ತದೆ. ಬೆಳಗ್ಗೆ ಬೇಕಾದ ಶಕ್ತಿಯನ್ನು ಇದು ಒಡನೆಯೇ ನೀಡುತ್ತದೆ. ರಾತ್ರಿ ಬೀಜಗಳನ್ನು ನೆನೆ ಹಾಕಿ ಬೆಳಗ್ಗೆ ಎದ್ದ ಕೂಡಲೇ ತಿನ್ನುವುದರಿಂದ ಬೀಜಗಳ ಎಲ್ಲ ಬಗೆಯ ಪೋಷಕಾಂಶಗಳ ಲಾಭವನ್ನೂ ದೇಹ ಪಡೆದುಕೊಳ್ಳುತ್ತದೆ.

Papaya Digestive Boosting Foods

ಪಪ್ಪಾಯಿ

ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದು ಕೂಡಾ ಒಳ್ಳೆಯದು. ಪಪ್ಪಾಯಿಯಲ್ಲಿ ಕಡಿಮೆ ಕ್ಯಾಲರಿಯಿದ್ದು, ಅತ್ಯಂತ ಹೆಚ್ಚು ಪೋಷಕಾಂಶಗಳನ್ನು ಹೊಂದಿದೆ. ಇದು ಹೊಟ್ಟೆ ಹಾಗೂ ಜೀರ್ಣಾಂಗವ್ಹೂಹಕ್ಕೆ ಒಳ್ಳೆಯದು. ತೂಕ ಇಳಿಸುವ ಮಂದಿಗೂ ಅತ್ಯಂತ ಒಳ್ಳೆಯದು.

Berries Abdominal Obesity

ಬೆರ್ರಿ

ಬೆಳಗಿನ ಖಾಲಿ ಹೊಟ್ಟೆಗೆ ಬೆರ್ರಿ ಹಣ್ಣುಗಳು ಉತ್ತಮ. ಬೆರ್ರಿ ಹಣ್ಣುಗಳಲ್ಲಿ ಹೆಚ್ಚು ನಾರಿನಂಶ ಇರುವುದರಿಂದ ಇದು ನಿಮ್ಮನ್ನು ಹೆಚ್ಚು ಹೊತ್ತು ಹೊಟ್ಟೆ ತುಂಬಿರುವಂತೆ ನೋಡಿಕೊಳ್ಳುತ್ತದೆ. ಕಡಿಮೆ ಕ್ಯಾಲರಿಯ ಆಹಾರ ಇದಾಗಿದ್ದು, ಸ್ವಲ್ಪ ಹೆಚ್ಚು ತಿಂದರೂ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಸ್ಟ್ರಾಬೆರ್ರಿ, ಬ್ಲೂಬೆರ್ರಿ ಮತ್ತಿರರ ಯಾವುದೇ ಬೆರ್ರಿ ವಿಧಗಳನ್ನು ಬೆಳಗ್ಗೆ ಸೇವಿಸುವುದು ಉತ್ತಮ.

Oats Vegetarian foods for stamina

ಓಟ್ಸ್‌

ಓಟ್ಸ್‌ ಅಥವಾ ಓಟ್‌ಮೀಲ್‌ ಬೆಳಗ್ಗೆ ತಿನ್ನುವುದು ಒಳ್ಳೆಯದು. ಇದರಲ್ಲೂ ನಾರಿನಂಶ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿದ್ದು, ಹೊಟ್ಟೆ ತುಂಬಿಸಲು ಸರಿಯಾದ ಆಹಾರ. ಇದರ ಜೊತೆಗೆ ಒಣ ಬೀಜಗಳು ಹಾಗೂ ನಿಮ್ಮ ಇಷ್ಟ ಹಣ್ಣುಗಳನ್ನೂ ಸೇರಿಸಬಹುದು. ಸಕ್ಕರೆ ಸೇರಿಸದೆ, ಹಾಗೆಯೇ ಹಾಲಿನ ಜೊತೆಗೆ ಮಾಡಿ ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಗ್ಯಾಸ್‌, ಹೊಟ್ಟೆಯುಬ್ಬರ ಇತ್ಯಾದಿ ಸಮಸ್ಯೆಯಿರುವ ಮಂದಿಗೂ ಇದು ಒಳ್ಳೆಯದು.

ಇದನ್ನೂ ಓದಿ: Menopausal Weight Gain: ಋತುಚಕ್ರ ನಿಂತ ಬಳಿಕ ತೂಕ ಹೆಚ್ಚುವುದನ್ನು ತಡೆಯಬಹುದೇ?

Continue Reading

ಆರೋಗ್ಯ

Nandini Milk: ನಂದಿನಿ ಹಾಲಿನ ಯಾವ ಬಣ್ಣದ ಪ್ಯಾಕೆಟ್ ಯಾವುದಕ್ಕೆ ಸೂಕ್ತ? ಖರೀದಿಸುವಾಗ ಈ ಸಂಗತಿ ನೆನಪಿನಲ್ಲಿರಲಿ

ವಿವಿಧ ಬಣ್ಣದ ಪ್ಯಾಕೆಟ್ ನಲ್ಲಿ ಲಭ್ಯವಿರುವ ನಂದಿನಿ ಹಾಲು (Nandini Milk) ಬೇರೆಬೇರೆಯಾಗಿರುತ್ತದೆ. ವಿವಿಧ ರೀತಿಯ ಬಳಕೆಗೆ ಬೇರೆಬೇರೆ ಬಣ್ಣದ ಪ್ಯಾಕೆಟ್ ನಲ್ಲಿ ಲಭ್ಯವಿರುವ ಹಾಲನ್ನು ಬಳಸಿದರೆ ರುಚಿ, ಸುವಾಸನೆಯಲ್ಲಿ ವ್ಯತ್ಯಾಸ ಕಾಣಬಹುದು. ಎಲ್ಲ ಹಾಲು ಎಲ್ಲರಿಗೂ ಸೂಕ್ತವಲ್ಲ. ಯಾವ ಹಾಲು ಯಾರಿಗೆ ಹೆಚ್ಚು ಸೂಕ್ತ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Nandini Milk
Koo

ನಾವು ದಿನ ನಿತ್ಯ ಬಳಸುವ ನಂದಿನಿ ಹಾಲಿನ (Nandini Milk) ಬಗ್ಗೆ ನಮಗೆಷ್ಟು ಗೊತ್ತಿದೆ ಎನ್ನುವುದನ್ನು ಪರೀಕ್ಷಿಸಬೇಕು. ಯಾಕೆಂದರೆ ಮನೆ (Home) ಬಳಕೆಗೆ ನಾವು ಇಷ್ಟವಾಗುವ ಹಾಲನ್ನು (milk) ಹೊತ್ತುಕೊಂಡು ಬರುತ್ತೇವೆ. ಆದರೆ ಅದರ ಪ್ರಯೋಜನಗಳ ಬಗ್ಗೆ ಹೆಚ್ಚಿನವರಿಗೆ ಗೊತ್ತಿಲ್ಲ. ವಿವಿಧ ಬಣ್ಣದ (different colour) ಪ್ಯಾಕೆಟ್ ನಲ್ಲಿರುವ ನಂದಿನಿ ಹಾಲು ಯಾರಿಗೆ, ಯಾವುದು ಸೂಕ್ತ ಎಂದು ತಿಳಿದುಕೊಂಡು ಬಳಸಿದರೆ ಅದರ ಸಂಪೂರ್ಣ ಪ್ರಯೋಜನ ಪಡೆಯಲು ಸಾಧ್ಯ. ಹಲವಾರು ಕಂಪನಿಗಳ ಹಾಲು ಪ್ಯಾಕೆಟ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದರೂ ಕರ್ನಾಟಕದ ಜನರು ಇಷ್ಟಪಡುವ ಹೆಮ್ಮೆಯ ಬ್ರಾಂಡ್ ನಂದಿನಿ. ಲಕ್ಷಾಂತರ ಮನೆಗಳನ್ನು ತಲುಪುವ ಇದರೊಂದಿಗೆ ನಮ್ಮ ನಂಟು ಕೂಡ ಬಿಡಿಸಲಾಗದ್ದು ಎಂದರೆ ತಪ್ಪಾಗಲಾರದು. ನೀಲಿ, ಹಸಿರು, ಕೇಸರಿ.. ಸೇರಿ ವಿವಿಧ ಬಣ್ಣದ ಪ್ಯಾಕೆಟ್ ನಲ್ಲಿ ಇದು ಲಭ್ಯವಿದ್ದು, ಇದರ ಪ್ರಯೋಜನ ಏನು ಎಂಬುದನ್ನು ತಿಳಿದುಕೊಳ್ಳೋಣ.

Good life

ಗುಡ್ ಲೈಫ್ ಪ್ಯಾಕೆಟ್

ಬೆಳಗ್ಗೆ ಎದ್ದು ಹಾಲು ಕಾಯಿಸಲು ಪುರುಸೊತ್ತು ಇಲ್ಲ ಎನ್ನುವವರು ಈ ಹಾಲನ್ನು ಮನೆಗೆ ತರಬಹುದು. ಟೆಟ್ರಾ ಪ್ಯಾಕೆಟ್ ನಲ್ಲಿ ಲಭ್ಯವಿರುವ ಈ ಹಾಲನ್ನು ಕಾಯಿಸದೇ ಕುಡಿಯಬಹುದು. ಯಾಕೆಂದರೆ ಈ ಹಾಲು ಪ್ಯಾಕ್ ಮೊದಲು 137 ಡಿಗ್ರಿ ಸೆಲ್ಶಿಯಸ್ ತಾಪಮಾನದಲ್ಲಿ ನಾಲ್ಕು ನಿಮಿಷಗಳವರೆಗೆ ಕಾಯಿಸಲಾಗುತ್ತದೆ. ಬಳಿಕ ತಕ್ಷಣವೇ ತಣ್ಣಗೆ ಮಾಡಿ ಪ್ಯಾಕ್ ಮಾಡಲಾಗುತ್ತದೆ. ಹೀಗಾಗಿ ಇದರಲ್ಲೂ ಬ್ಯಾಕ್ಟೀರಿಯಾ ಬೆಳೆಯುವುದಿಲ್ಲ. ಟೆಟ್ರಾ ಪ್ಯಾಕ್ ನಲ್ಲಿ ಇರುವುದರಿಂದ ಹಾಲು ಹಾಳಾಗುವುದಿಲ್ಲ. ಪ್ರವಾಸಕ್ಕೆ ಹೋಗ್ಬೇಕು, ಮಕ್ಕಳಿಗೆ ಹಾಲು ಸಿಗೋದಿಲ್ಲ ಎಂಬ ಚಿಂತೆ ಇರುವವರು ಗುಡ್ ಲೈಫ್ ಟೆಟ್ರಾ ಪ್ಯಾಕ್ ಖರೀದಿ ಮಾಡಿ ಹತ್ತು ದಿನದವರೆಗೆ ಇಟ್ಟುಕೊಳ್ಳಬಹುದು. ಕಾಯಿಸದೇ ಹಾಗೇ ಕುಡಿಯಬಹುದು.

Nandini Milk green color

ಹಸಿರು ಬಣ್ಣದ ಪ್ಯಾಕೆಟ್

ಕಾಫಿ, ಟೀ ಮಾಡಿ ಕುಡಿಯುವವರು ಹಸಿರು ಬಣ್ಣದ ಪ್ಯಾಕೆಟ್ ಅನ್ನು ಬಳಸಬಹುದು. ಇದು ಹೊಮೊಜಿನೈಸೆಡ್ ಪಾಸ್ಚರೀಕರಿಸಿದ ಹಸುವಿನ ಹಾಲು ಕೊಂಚ ಗಾಢವಾಗಿರುತ್ತದೆ. ಕಾಫಿ, ಟೀ ರುಚಿಯನ್ನು ಹೆಚ್ಚಿಸುತ್ತದೆ. ಈ ಹಾಲನ್ನು ಮನೆಯಲ್ಲಿರುವ ಪುಟ್ಟ ಮಕ್ಕಳಿಗೂ ಕೊಡಬಹುದು. ಯಾಕೆಂದರೆ ಬೇರೆ ಪ್ಯಾಕೆಟ್ ಹಾಲಿನಲ್ಲಿ ಹಸುಗಳ ಹಾಲಿನ ಜೊತೆಗೆ ಎಮ್ಮೆ ಹಾಲು ಸೇರಿಕೊಂಡಿರುತ್ತದೆ. ಕೇವಲ ಹಾಲು ಕುಡಿಯುವವರಿಗೂ ಇದು ಒಳ್ಳೆಯದು. ಗಟ್ಟಿ ಮೊಸರು ಮಾಡಬೇಕಿದ್ದರೆ ಹಸಿರು ಬಣ್ಣದ ಪ್ಯಾಕೆಟ್ ನಲ್ಲಿ ಲಭ್ಯವಿರುವ ಸ್ಪೆಷಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ಖರೀದಿ ಮಾಡುವುದು ಒಳ್ಳೆಯದು.

purpel colour

ನೇರಳೆ ಬಣ್ಣದ ಪ್ಯಾಕೆಟ್

ಕಾಫಿಯಲ್ಲಿ ಕೆನೆ ಸಮೃದ್ದವಾಗಿರಬೇಕು ಎಂದು ಬಯಸುವವರು ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ಖರೀದಿ ಮಾಡಬಹುದು. ಇದರಲ್ಲಿ ಪೂರ್ತಿ ಕೆನೆಯ ಅಂಶ ಇರುತ್ತದೆ. ಆದರೂ ಇದು ಕೆನೆ ಕಟ್ಟಿಕೊಳ್ಳುವುದಿಲ್ಲ. ಯಾಕೆಂದರೆ ಇದನ್ನು ಹೊಮೊಜಿನೈಸ್ಡ್ ಹದಕ್ಕೆ ತಂದು ಪ್ಯಾಕ್ ಮಾಡಲಾಗುತ್ತದೆ. ಇದನ್ನು ಸಿಹಿ ಪದಾರ್ಥ, ಪಾಯಸ ಮಾಡಲು ಬಳಸಬಹುದು. ಯಾಕೆಂದರೆ ಇದು ಖಾದ್ಯದ ಸುವಾಸನೆ ಮತ್ತು ರುಚಿಯನ್ನು ಹೆಚ್ಚಿಸುತ್ತದೆ.

Nandini Milk Orange color

ಕಿತ್ತಳೆ ಬಣ್ಣದ ಪ್ಯಾಕೆಟ್

ಕಿತ್ತಳೆ ಬಣ್ಣದ ಶುಭಂ ಪ್ಯಾಕೆಟ್ ಅಥವಾ ಸಂಪೂರ್ಣ ಸ್ಟ್ಯಾಂಡರ್ಡೈಸ್ಡ್ ಮಿಲ್ಕ್ ಪ್ಯಾಕೆಟ್ ಹಾಲು ಬೆಳೆಯುವ ಮಕ್ಕಳಿಗೆ ಒಳ್ಳೆಯದು. ಇದರಲ್ಲಿ ಮಕ್ಕಳಿಗೆ ಬೇಕಾಗುವ ಕೊಬ್ಬಿನಾಂಶ ಇರತ್ತದೆ. ಮಕ್ಕಳ ನಿತ್ಯದ ಚಟುವಟುಕೆಗಳಿಗೆ ಸಾಕಷ್ಟು ಶಕ್ತಿ ತುಂಬುತ್ತದೆ.

Yellow color

ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್

ಗುಡ್ ಲೈಫ್ ಸ್ಲಿಮ್ಡ್ ಸ್ಕಿಮ್ ಮಿಲ್ಕ್ ಪ್ಯಾಕೆಟ್ ಹಿರಿಯರಿಗೆ ಒಳ್ಳೆಯದು. ಇದರಲ್ಲಿ ಕೊಬ್ಬಿನಾಂಶ ಕಡಿಮೆ ಇರುವುದರಿಂದ ವಯಸ್ಸಾದವರಿಗೆ ಜೀರ್ಣಿಸಿಕೊಳ್ಳಲು ಸುಲಭವಾಗುತ್ತದೆ. ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ ನಲ್ಲಿರುವ ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ನಲ್ಲೂ ಕೊಬ್ಬಿನಾಂಶ ಕಡಿಮೆ ಇರುತ್ತದೆ. ದೇಹದ ಕೊಬ್ಬು ಕರಗಬೇಕು ಎನ್ನುವವರೂ ಈ ಹಾಲನ್ನು ಬಳಸಬಹುದು. ಹಳದಿ ಬಣ್ಣದ ಪ್ಯಾಕೆಟ್ ನಲ್ಲಿ ಲಭ್ಯವಿರುವ ನಂದಿನಿ ಸ್ಮಾರ್ಟ್ ಡಬಲ್ ಟೋನ್ಡ್ ಹೊಮೊಜಿನೈಸೆಡ್ ಮಿಲ್ಕ್ ಪ್ಯಾಕೆಟ್ ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ಇರುವವರಿಗೆ ಸೂಕ್ತವಾಗಿದೆ. ಹಾಲನ್ನು ಚೆನ್ನಾಗಿ ಕುದಿಸಿ ಕುಡಿಯುವವರು ನಂದಿನಿಯ ಯಾವ ಬಣ್ಣದ ಪ್ಯಾಕೆಟ್ ಹಾಲನ್ನು ಬೇಕಾದರೂ ಬಳಸಬಹುದು.

ಇದನ್ನೂ ಓದಿ: Health Tips: ನೀವು ಕುಡಿಯುವ ಹಾಲಿನಲ್ಲಿ ಕಲಬೆರಕೆಯೇ? ಹೀಗೆ ಸುಲಭವಾಗಿ ಪತ್ತೆ ಹಚ್ಚಿ!

Continue Reading

ಕರ್ನಾಟಕ

Pralhad Joshi: ಗೋಧಿ ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರದ ಕ್ರಮ; ಪ್ರಲ್ಹಾದ್‌ ಜೋಶಿ

Pralhad Joshi: ಗೋಧಿ ದಾಸ್ತಾನು ಮತ್ತು ಬೆಲೆಗಳ ಬಗ್ಗೆ ಸಮಗ್ರ ಚರ್ಚೆ ನಡೆದಿದ್ದು, 2023ಕ್ಕೆ ಹೋಲಿಸಿದರೆ ಈ ಬಾರಿ 4 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಗೋಧಿ ದಾಸ್ತಾನಿದೆ. PDS ಮತ್ತು ಇತರ ಕಲ್ಯಾಣ ಯೋಜನೆಗಳ ಅಗತ್ಯವನ್ನು ಪೂರೈಸಿದ ನಂತರ ಸುಮಾರು 184 LMT ನಷ್ಟು ಗೋಧಿ ದಾಸ್ತಾನು ಲಭ್ಯವಿರಲಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೂತನ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

VISTARANEWS.COM


on

Central Government monitoring wheat price stability: Union Minister Pralhad Joshi
Koo

ನವದೆಹಲಿ: ದೇಶದಲ್ಲಿ ಗೋಧಿ ಬೆಲೆ ಸ್ಥಿರತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಿಗಾ ವಹಿಸಲು ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೂತನ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಮಿತಿ ಸಭೆಯಲ್ಲಿ ಈ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಆಹಾರೋತ್ಪನ್ನಗಳ ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಇರುವ ಮಾರ್ಗಗಳ ಕುರಿತು ಮಾಹಿತಿ ಕಲೆ ಹಾಕಲಾಯಿತು ಎಂದು ಹೇಳಿದ್ದಾರೆ.

ಅಗತ್ಯ ವಸ್ತುಗಳ ಬೆಲೆಗಳನ್ನು ಪರಿಶೀಲಿಸಲೆಂದೇ ನಡೆದ ಈ ಸಭೆಯಲ್ಲಿ ವಿಶೇಷವಾಗಿ ಗೋಧಿ ದಾಸ್ತಾನು ಮತ್ತು ಬೆಲೆ ಬಗ್ಗೆ ಪ್ರಸ್ತಾಪಿಸಿ, ಚರ್ಚಿಸಲಾಯಿತು.

ಇದನ್ನೂ ಓದಿ: Rishabh Pant : ವಿಶ್ವ ಕಪ್​ನಲ್ಲಿ ವಿನೂತನ ವಿಕೆಟ್​ಕೀಪಿಂಗ್​​ ದಾಖಲೆ ಬರೆದ ರಿಷಭ್​ ಪಂತ್​

2024ರ ಜೂನ್ 18ರವರೆಗೆ 266 ಲಕ್ಷ ಮೆಟ್ರಿಕ್ ಟನ್ ಗೋಧಿ ಸಂಗ್ರಹಿಸಲಾಗಿದೆ. 2023ರಲ್ಲಿ ಇದೇ ವೇಳೆಗೆ 262 LMT ಗೋಧಿ ಸಂಗ್ರಹ ಇತ್ತು ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ಗೋಧಿ ದಾಸ್ತಾನು ಮತ್ತು ಬೆಲೆಗಳ ಬಗ್ಗೆ ಸಮಗ್ರ ಚರ್ಚೆ ನಡೆದಿದ್ದು, 2023ಕ್ಕೆ ಹೋಲಿಸಿದರೆ ಈ ಬಾರಿ 4 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಗೋಧಿ ದಾಸ್ತಾನಿದೆ. PDS ಮತ್ತು ಇತರ ಕಲ್ಯಾಣ ಯೋಜನೆಗಳ ಅಗತ್ಯವನ್ನು ಪೂರೈಸಿದ ನಂತರ ಸುಮಾರು 184 LMTನಷ್ಟು ಗೋಧಿ ದಾಸ್ತಾನು ಲಭ್ಯವಿರಲಿದೆ ಎಂದು ಹೇಳಿದ್ದಾರೆ.

ಗೋಧಿ ಬೆಲೆಗಳ ಮೇಲೆ ನಿಕಟವಾಗಿ ನಿಗಾ ಇಡಲು ಮತ್ತು ದೇಶದ ಗ್ರಾಹಕರಿಗೆ ಬೆಲೆ ಸ್ಥಿರತೆಗಾಗಿ ಸೂಕ್ತ ನೀತಿ ರೂಪಿಸಿ ಕ್ರಮ ಕೈಗೊಳ್ಳಬಹುದು ಎಂದು ಸಭೆಯಲ್ಲಿ ಸಚಿವ ಪ್ರಲ್ಹಾದ್‌ ಜೋಶಿ ಸಲಹೆ ನೀಡಿದ್ದಾರೆ.

ರಾಜ್ಯ ಸಚಿವರು ಮತ್ತು ಉನ್ನತ ಅಧಿಕಾರಿಗಳ ಸಭೆ: ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ರಾಜ್ಯ ಸಚಿವರು ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಪ್ರಲ್ಹಾದ್‌ ಜೋಶಿ ಅವರು ಪ್ರತ್ಯೇಕ ಸಭೆ ನಡೆಸಿದರು.‌

ಇದನ್ನೂ ಓದಿ: Shivamogga News: ಕಾರ ಹುಣ್ಣಿಮೆ; ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

ಅಧ್ಯಕ್ಷತೆ ವಹಿಸಿದ್ದ ಸಚಿವರು, ಸಚಿವಾಲಯದ ವಿವಿಧ ಕಾರ್ಯಗಳ ಬಗ್ಗೆ ಕುರಿತು ಚರ್ಚೆ ನಡೆಸಿದರು. ಸಚಿವಾಲಯ ಮತ್ತು ಅದರ ಕಚೇರಿಗಳ ಕಾರ್ಯನಿರ್ವಹಣೆ ಪರಿಶೀಲಿಸಿ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವಂತೆ ನಿರ್ದೇಶನ ನೀಡಿದರು.

Continue Reading

ಆರೋಗ್ಯ

Health Tips Kannada: ಊಟದ ನಂತರ ಮೊಸರು ಸೇವಿಸಿದರೆ ಎಷ್ಟೊಂದು ಪ್ರಯೋಜನ ಗೊತ್ತೆ?

Health Tips Kannada: ಮೊಸರನ್ನುಸೇವಿಸಿದರೆ ಅದು ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೇ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದರಿಂದ ಹಿಡಿದು ಹೃದಯದ ಆರೋಗ್ಯವನ್ನು ಉತ್ತೇಜಿಸುವ ಮೊಸರನ್ನು ಊಟದ ಬಳಿಕ ಸೇವಿಸುವುದರಿಂದ (Health Benefits) ಐದು ಪ್ರಮುಖ ಪ್ರಯೋಜನಗಳಿವೆ.

VISTARANEWS.COM


on

By

Health Tips Kannada
Koo

ಕ್ಯಾಲ್ಸಿಯಂ, ಪ್ರೊಟೀನ್, ವಿಟಮಿನ್ ಬಿ2, (Health Tips Kannada) ವಿಟಮಿನ್ ಬಿ12, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್‌ಗಳು ಹೇರಳವಾಗಿರುವ ಮೊಸರನ್ನು (curd) ಊಟದ ಅನಂತರ (After Meal ) ಸೇವಿಸುವುದರಿಂದ ಸಾಕಷ್ಟು (Health Benefits) ಪ್ರಯೋಜನಗಳಿವೆ. ಮೊಸರು ಸೇವನೆಯು ಜೀರ್ಣಕ್ರಿಯೆಗೆ (digestion) ಸಹಾಯ ಮಾಡುತ್ತದೆ, ಕರುಳಿನ ಆರೋಗ್ಯವನ್ನು (gut health) ಹೆಚ್ಚಿಸುತ್ತದೆ, ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಅನೇಕ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಮೊಸರು ದೇಹವನ್ನು ತಂಪಾಗಿಸುವ ಪರಿಣಾಮವನ್ನು ಹೊಂದಿದೆ. ದೇಹದ ಪೋಷಣೆ ಮಾಡುವುದರ ಜೊತೆಗೆ ಮನಸ್ಸನ್ನು ಶಾಂತಗೊಳಿಸುತ್ತದೆ. ಲ್ಯಾಕ್ಟಿಕ್ ಆಸಿಡ್ ಬ್ಯಾಕ್ಟೀರಿಯಾವನ್ನು ಸೇರಿಸುವ ಮೂಲಕ ಹುದುಗಿಸಿದ ಹಾಲಿನಲ್ಲಿ ಮೊಸರನ್ನು ತಯಾರಿಸಲಾಗುತ್ತದೆ. ಇದು ಮೂಳೆಯ ಆರೋಗ್ಯ ಮತ್ತು ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಆರೋಗ್ಯ ಪ್ರಯೋಜನಗಳನ್ನು ಉತ್ತೇಜಿಸಲು ದಿನಕ್ಕೆ 100- 200 ಗ್ರಾಂ ಮೊಸರನ್ನು ಮಾತ್ರ ಸೇವಿಸಬೇಕು. ಆದರೂ ಅತಿಯಾಗಿ ಮೊಸರು ತಿನ್ನುವುದು ಜೀರ್ಣಕ್ರಿಯೆಯಲ್ಲಿ ಅಸ್ವಸ್ಥತೆ, ತೂಕ ಹೆಚ್ಚಳ ಮತ್ತು ಲ್ಯಾಕ್ಟೋಸ್ ವೈಪರೀತ್ಯಕ್ಕೆ ಕಾರಣವಾಗುತ್ತದೆ.

ಮೊಸರು ಸೇವಿಸುವುದರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭವಿದೆ. ಯಾಕೆಂದರೆ ಇದು ಪ್ರೋಬಯಾಟಿಕ್‌ಗಳ ಪೂರೈಕೆಗೆ ಸಹಾಯ ಮಾಡುತ್ತದೆ. ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ. ಅದರಲ್ಲಿರುವ ಪೌಷ್ಟಿಕಾಂಶದ ಅಂಶ ಮತ್ತು ಪ್ರೋಬಯಾಟಿಕ್ ಗುಣಲಕ್ಷಣಗಳಿಂದಾಗಿ ಒಟ್ಟಾರೆ ಆರೋಗ್ಯಕ್ಕೆ ಇದು ತುಂಬಾ ಪ್ರಯೋಜನಕಾರಿಯಾಗಿದೆ.

ಮೊಸರನ್ನು ಊಟದ ನಂತರ ಸೇವಿಸಿದರೆ ಅದು ಶಕ್ತಿಯನ್ನು ಹೆಚ್ಚಿಸುವುದು. ಊಟದ ಅನಂತರ ಸೇವಿಸಿದರೆ ಜೀರ್ಣಕ್ರಿಯೆಯನ್ನು ವರ್ಧಿಸಲು ಸಹಾಯ ಮಾಡುತ್ತದೆ. ಆದರೆ ರಾತ್ರಿಯ ಅನಂತರ ಮೊಸರು ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಯಾಕೆಂದರೆ ಅದು ನಿದ್ರೆಗೆ ಸಮಸ್ಯೆಯಾಗಬಹುದು ಮತ್ತು ಅಜೀರ್ಣಕ್ಕೆ ಕಾರಣವಾಗಬಹುದು.
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದರಿಂದ ಹಿಡಿದು ಹೃದಯದ ಆರೋಗ್ಯವನ್ನು ಉತ್ತೇಜಿಸುವ ಮೊಸರನ್ನು ಊಟದ ಬಳಿಕ ಸೇವಿಸುವುದರಿಂದ ಐದು ಪ್ರಮುಖ ಪ್ರಯೋಜನಗಳಿವೆ.


ಆರೋಗ್ಯಕರ ಜೀರ್ಣಕ್ರಿಯೆ

ಮೊಸರು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಯಾಕೆಂದರೆ ಇದರಲ್ಲಿರುವ ವಿಟಮಿನ್, ಪ್ರೋಟೀನ್ ಮತ್ತು ಲ್ಯಾಕ್ಟೋಬಾಸಿಲಸ್ ಬ್ಯಾಕ್ಟೀರಿಯಾಗಳು ಸಮೃದ್ಧವಾಗಿವೆ.

ರೋಗನಿರೋಧಕ ಶಕ್ತಿ ಹೆಚ್ಚಳ

ಮೊಸರಿನಲ್ಲಿರುವ ಪ್ರೋಬಯಾಟಿಕ್ ಕರುಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ ಮತ್ತು ಅದರ ಸಕ್ರಿಯ ಬ್ಯಾಕ್ಟೀರಿಯಾ ಗುಣಲಕ್ಷಣಗಳು ಸೂಕ್ಷ್ಮಜೀವಿಗಳಿಂದ ಉಂಟಾಗುವ ಕಾಯಿಲೆಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಮಧುಮೇಹ ನಿಯಂತ್ರಣ

ಮೊಸರಿನಲ್ಲಿರುವ ಜೀರ್ಣವಾಗುವ ಪ್ರೋಟೀನ್‌ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಗ್ರೀಕ್ ಮೊಸರು ಹೃದ್ರೋಗದ ಅಪಾಯವನ್ನು ಕಾಪಾಡಿಕೊಳ್ಳಲು ಬಹಳ ಸಹಾಯಕವಾಗಿದೆ.

ತೂಕ ನಷ್ಟ

ಮೊಸರಿನಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದೆ. ಅದು ಕಾರ್ಟಿಸೋಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೊಸರಿನ ಸೇವನೆಯು ಕಾರ್ಟಿಸೋಲ್ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ. ಯಾಕೆಂದರೆ ಇದು ಅಸಮತೋಲಿತ ಜೀವನಶೈಲಿಯಿಂದ ಉತ್ತುಂಗಕ್ಕೇರುವ ಹಾರ್ಮೋನ್ ಆಗಿದ್ದು, ಸೊಂಟದ ರೇಖೆಯಲ್ಲಿ ಕೊಬ್ಬನ್ನು ಸಂಗ್ರಹಿಸಲು ಸಹಾಯ ಮಾಡುತ್ತದೆ.

ಹೃದಯದ ಆರೋಗ್ಯ

ದೈನಂದಿನ ದಿನಚರಿಯಲ್ಲಿ ಮೊಸರು ಸೇರಿಸುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು.

ರಕ್ತದೊತ್ತಡ ನಿಯಂತ್ರಣ

ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಿ ಹೃದಯವನ್ನು ಆರೋಗ್ಯಕರವಾಗಿಡಬಹುದು.

ಹಲ್ಲಿನ ಆರೋಗ್ಯ

ಮೊಸರು ಕ್ಯಾಲ್ಸಿಯಂ ಮತ್ತು ರಂಜಕದ ಮೂಲವಾಗಿದೆ. ಇದು ಹಲ್ಲುಗಳ ಎನಾಮೆಲ್‌ಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ ಮತ್ತು ಹಲ್ಲಿನ ಕೊಳೆತವನ್ನು ತಡೆಯುತ್ತದೆ. ದೈನಂದಿನ ಆಹಾರದಲ್ಲಿ ಮೊಸರನ್ನು ಸೇರಿಸುವುದರಿಂದ ಬಾಯಿಯ ನೈರ್ಮಲ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ಹಲ್ಲಿನ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Mobile Addiction: ನಿಮ್ಮ ಮಗುವನ್ನು ಮೊಬೈಲ್ ಚಟದಿಂದ ತಪ್ಪಿಸಬೇಕೆ? ಈ 5 ಸಲಹೆ ಅನುಸರಿಸಿ

ಊಟದ ಅನಂತರ ಮೊಸರು ಯಾಕೆ ಸೇವಿಸಬೇಕು?

ಮೊಸರನ್ನು ಯಾವಾಗಲೂ ಊಟದ ಅನಂತರ ಸೇವಿಸಿದರೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಯಾಕೆಂದರೆ ಇದು ಕರುಳಿನ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುವುದು. ಅದರಲ್ಲಿ ಪ್ರೋಬಯಾಟಿಕ್ ಅಂಶ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಮೊಸರು ಶೀತವನ್ನು ಉಂಟು ಮಾಡುತ್ತದೆ. ಹೀಗಾಗಿ ಇದನ್ನು ಬೆಚ್ಚಗಿನ ವಾತಾವರಣದಲ್ಲಿ ದೇಹವನ್ನು ತಂಪಾಗಿರಿಸಲು ಸೇವಿಸುವುದು ಉತ್ತಮ. ಯಾವುದೇ ರೀತಿಯ ಡೈರಿ ಉತ್ಪನ್ನದ ಅಲರ್ಜಿ ಇದ್ದರೆ ಮೊಸರು ತಿನ್ನಬಾರದು ಅಥವಾ ತಿನ್ನುವ ಮೊದಲು ವೈದ್ಯರನ್ನು ಸಂಪರ್ಕಿಸಿ.

Continue Reading
Advertisement
Weight Loss Tips
ಆರೋಗ್ಯ4 mins ago

Weight Loss Tips: ನಲವತ್ತರ ನಂತರ ತೂಕ ಇಳಿಸುವುದು ಹೇಗೆ?

Nadaprabhu Kempegowda
ಬೆಂಗಳೂರು10 mins ago

Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

Nitin Gadkari
ದೇಶ44 mins ago

Nitin Gadkari: ಜಿಪಿಎಸ್‌ ತಂತ್ರಜ್ಞಾನದಿಂದ ಹೆದ್ದಾರಿ ಪ್ರಾಧಿಕಾರಕ್ಕೆ ಬಂಪರ್;‌ 10 ಸಾವಿರ ಕೋಟಿ ರೂ. ಆದಾಯ!

Paris Fashion Week
ಫ್ಯಾಷನ್56 mins ago

Paris Fashion Week: ಪ್ಯಾರಿಸ್‌ ಹಾಟ್‌ ಕೌಚರ್‌ ಫ್ಯಾಷನ್‌ ವೀಕ್ 2024ರ ಹೈಲೈಟ್ಸ್

Anant Ambani
ದೇಶ1 hour ago

Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Viral Video
Latest1 hour ago

Viral Video: ಜಿಮ್‌ಗೆ ಹೋಗುವವರೇ ಹುಷಾರ್‌! ಈ ವಿಡಿಯೊ ನೋಡಿ!

Acharya Pramod Krishnam
ದೇಶ2 hours ago

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

Viral Video
Latest2 hours ago

Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Rohit Sharma
ಕ್ರೀಡೆ2 hours ago

Rohit Sharma: ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​; ಲಂಕಾ ಆಟಗಾರನಿಗೆ ನಡುಕ

Viral Video
Latest2 hours ago

Viral Video: ಪ್ರೇಯಸಿ ಹೆಜ್ಜೆ ಇರಿಸಲು ಕಂತೆಕಂತೆ ನೋಟಿನ ಮೆಟ್ಟಿಲು! ಪ್ರಿಯತಮನ ಹುಚ್ಚು ಪ್ರೀತಿ ನೋಡಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌