Happiness Tips: ಸದಾ ಸಂತಸದಿಂದ ಇರಲು ಬೇಕು ಈ 4 ಹಾರ್ಮೋನ್‌, ಹೆಚ್ಚಿಸಿಕೊಳ್ಳೋಕೆ ಇಲ್ಲಿದೆ ಟಿಪ್ಸ್ - Vistara News

ಆರೋಗ್ಯ

Happiness Tips: ಸದಾ ಸಂತಸದಿಂದ ಇರಲು ಬೇಕು ಈ 4 ಹಾರ್ಮೋನ್‌, ಹೆಚ್ಚಿಸಿಕೊಳ್ಳೋಕೆ ಇಲ್ಲಿದೆ ಟಿಪ್ಸ್

ಪ್ರತಿದಿನ ಸಂತೋಷವಾಗಿರೋಕೆ ಒಂದೇ ಸೂತ್ರ, (Happiness Tips) ನಿಮ್ಮ ಹ್ಯಾಪಿನೆಸ್‌ ಹಾರ್ಮೋನ್‌ಗಳ (Happiness hormones) ಲೆವೆಲ್‌ ಹೆಚ್ಚಿಸಿಕೊಳ್ಳೋದು. ಅದು ಹೇಗೆ?

VISTARANEWS.COM


on

happiness hormones
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಹಳಷ್ಟು ಸಾರಿ ನಮಗೆ ಕಾರಣವೇ ಇಲ್ಲದೆ ಬೇಸರ (mood swing) ಬರುತ್ತದೆ. ಸಂತೋಷವಾಗಿಯೇ ಇದ್ದ ನಾವು ಇದ್ದಕ್ಕಿದ್ದಂತೆ ಕೆಟ್ಟ ಮೂಡಿಗೆ ತಿರುಗಿ ಏನೂ ಮಾಡದೆ ಕಳೆಯುತ್ತೇವೆ. ಅಥವಾ ಸುಮ್ಮನೆ ಟಿವಿ ರಿಮೋಟು ಒತ್ತಿ ಅನಗತ್ಯ ಟಿವಿ ನೋಡಿಕೊಂಡೋ, ಸುಮ್ಮನೆ ಸೋಫಾದಲ್ಲಿ ಬಿದ್ದುಕೊಂಡೋ, ಅಥವಾ ಸಿಕ್ಕಿದ್ದನ್ನೆಲ್ಲ ತಿಂದೋ ಕಾಲ ತಳ್ಳಿಬಿಡುತ್ತೇವೆ. ಹಾಗಾದರೆ ಈ ಮೂಡು ನಮ್ಮ ಕೈಯಲ್ಲಿದೆಯೋ? ಅದನ್ನು ನಮಗೆ ಬೇಕಾದ ಹಾಗೆ ಬದಲಾಯಿಸಲು ಸಾಧ್ಯವೋ ಎಂಬ ಪ್ರಶ್ನೆ ಎಲ್ಲರದ್ದೂ. ಹಾಗೆ ನೋಡಿದರೆ ಖುಷಿ (Happiness) ಅನ್ನೋದು ಸೈಕಾಲಜಿ (Psychology) ಅಂದುಕೊಂಡಿದ್ದರೆ ನಮ್ಮ ಊಹೆ ತಪ್ಪು. ಖುಷಿಯ ಮೂಡೂ ಬಯಾಲಜಿಯೇ! ಹೌದು. ನಮ್ಮ ಭಾವನೆಗಳನ್ನು ನಿಂಯಂತ್ರಿಸುವ ನಾಲ್ಕು ಬಗೆಯ (Happy hormones) ಹಾರ್ಮೋನುಗಳಿವೆ. ಡೋಪಮೈನ್‌ (Dopamine), ಎಂಡೋರ್ಫಿನ್‌ (Endorphin), ಆಕ್ಸಿಟೋಸಿನ್‌ (oxytocin) ಹಾಗೂ ಸೆರೆಟೋನಿನ್ (Serotonin) ಎಂಬ ನಾಲ್ಕು ಹಾರ್ಮೋನುಗಳ ಬಿಡುಗಡೆಯೇ ನಮ್ಮ ಮೂಡನ್ನೂ ನಿಯಂತ್ರಿಸುತ್ತದೆ.

ಡೊಪಾಮೈನ್‌ ಹಾರ್ಮೋನು: ನಾವು ಯಾವುದಾದರೊಂದು ಟಾರ್ಗೆಟ್‌ ಪೂರ್ಣಗೊಳಿಸಿದರೆ, ಸಾಧನೆ ಮಾಡಿದರೆ ಡೊಪಾಮೈನ್‌ ಹಾರ್ಮೋನು ಬಿಡುಗಡೆಯಾಗುತ್ತದೆ. ಸಾಧನೆ, ಟಾಸ್ಕ್‌ ದೊಡ್ಡದಿರಬಹುದು ಸಣ್ಣದಿರಬಹುದು. ಡೊಪಮೈನ್‌ ಹಾರ್ಮೋನು ಇಂಥ ಕ್ಷಣದಲ್ಲಿ ಬಿಡುಗಡೆಯಾಗಿ ನಮಗೆ ಸಾಧಿಸಿದ ತೃಪ್ತಿಯ ಅನುಭವವನ್ನು ನೀಡುತ್ತದೆ. ಈ ಹಾರ್ಮೋನು ನಮ್ಮ ನೆನಪಿನ ಶಕ್ತಿಯನ್ನೂ ಹೆಚ್ಚಿಸುತ್ತದೆ. ನಮ್ಮನ್ನು ಖಿನ್ನತೆಯಿಂದ, ಕೆಟ್ಟ ಚಟಗಳಿಂದ ದೂರವಿರಿಸುತ್ತದೆ. ಒಟ್ಟಾರೆ, ನಮ್ಮತನವನ್ನು ಅನುಭವಿಸುವಂತೆ ಮಾಡುವ ಖುಷಿಯ ಹಾರ್ಮೋನು ಇದು. ಅದಕ್ಕಾಗಿಯೇ, ಮನೆಯಲ್ಲೇ ಕೇವಲ ಗೃಹಕೃತ್ಯಗಳಿಗಷ್ಟೇ ಸೀಮಿತವಾಗಿ ಉಳಿದ ಗೃಹಿಣಿಯರು ಯಾವಾಗಲೂ ಬೇಸರದಿಂದಿರುತ್ತಾರೆ. ಅವರ ದಿನನಿತ್ಯದ ಕೆಲಸಗಳಿಗೆ ಅವರನ್ನು ಯಾರೂ ಹೊಗಳುವುದಿಲ್ಲವಾದ್ದರಿಂದ ಮಾಡಿದ ಖುಷಿಯ ಅನುಭವವೂ ಅವರಿಗೆ ದಕ್ಕುವುದಿಲ್ಲ.

ಹಾಗಾದರೆ ಈ ಹಾರ್ಮೋನನ್ನು ಹೆಚ್ಚು ಹೆಚ್ಚು ಉತ್ಪಾದಿಸುವಂತೆ ಮಾಡಲು ಏನು ಮಾಡಬೇಕು ಎಂಬ ಪ್ರಶ್ನೆ ಸಹಜ. ಸಣ್ಣ ಸಣ್ಣ ಟಾರ್ಗೆಟ್‌ಗಳನ್ನಿಟ್ಟು ದಿನವೂ ಕೆಲಸ ಮಾಡಿ. ಅದನ್ನು ಪೂರ್ಣಗೊಳಿಸಿ. ಹಾಗೂ ನಿಮ್ಮ ಪುಟ್ಟ ಪುಟ್ಟ ಸಾಧನೆಗಳನ್ನು ಸಂಭ್ರಮಿಸಿ. ಹೊಸತನ್ನು ಹುಡುಕಿ, ಕಲಿಯಿರಿ.

ಎಂಡೋರ್ಫಿನ್‌ ಹಾರ್ಮೋನು: ಈ ಹಾರ್ಮೋನು ನಾವು ಗಾಯಗೊಂಡಾಗ, ನೋವಾದಾಗ, ಅತೀವ ಒತ್ತಡದಲ್ಲಿದ್ದಾಗ, ವ್ಯಾಯಾಮ ಮಾಡುವಾಗ, ಸೆಕ್ಸ್‌ ಸಂದರ್ಭಗಳಲ್ಲಿ ಬಿಡುಗಡೆಯಾಗುತ್ತದೆ. ನೋವನ್ನು ಕಡಿಮೆ ಮಾಡುವ, ಕಷ್ಟದ ಕೆಲಸಗಳನ್ನು ಮಾಡುವ ಸಂದರ್ಭವೂ ಅದನ್ನು ಎಂಜಾಯ್‌ ಮಾಡುವಂತೆ ಮಾಡುವುದು ಈ ಹಾರ್ಮೋನಿನ ಹೆಚ್ಚುಗಾರಿಕೆ. ಹಾಗಾದರೆ ಈ ಹಾರ್ಮೋನು ಹೆಚ್ಚು ಬಿಡುಗಡೆಯಾಗಲು ನಾವೇನು ಮಾಡಬಹುದು ಎಂದರೆ, ನಿಯಮಿತವಾಗಿ ಪ್ರತಿದಿನವೂ ವ್ಯಾಯಾಮ ಮಾಡುವುದು, ಗೆಳೆಯರ ಜೊತೆ ಹಾಸ್ಯ ಸಿನೆಮಾಗಳನ್ನು ನೋಡುತ್ತಾ ಬಿದ್ದು ಬಿದ್ದು ನಗುವುದು, ಅಥವಾ ಆಗಾಗ ಚಾಕೋಲೇಟು ತಿನ್ನುವುದು!

ಆಕ್ಸಿಟೋಸಿನ್‌: ಇದಕ್ಕೆ ಲವ್‌ ಹಾರ್ಮೋನು ಎಂಬ ಇನ್ನೊಂದು ಹೆಸರಿದೆ. ಇದು ಪ್ರೀತಿಸುವವರ ಹಾರ್ಮೋನು. ನಂಬಿಕೆ, ಪ್ರೀತಿ, ಆಕರ್ಷಣೆ ಮತ್ತಿತರ ಗುಣಗಳು ಇದರದ್ದು. ಪ್ರೀತಿಸುವವರ ಜೊತೆ ಪ್ರೀತಿಯಿಂದ ಮಾತನಾಡುವುದು, ಕಿಸ್‌, ಹಗ್‌ ಹಾಗೂ ಸೆಕ್ಸ್‌ ಮತ್ತಿತರ ಪ್ರೀತಿಯ ವಿವಿಧ ಮುಖಗಳಲ್ಲೂ ಆಕ್ಸಿಟೋಸಿನ್‌ ಕಾರುಬಾರು ಹೆಚ್ಚಿರುತ್ತದೆ. ಕೇವಲ ಇಷ್ಟೇ ಅಲ್ಲದೆ, ಗೆಳೆಯರು ಕುಟುಂಬಸ್ಥರ ಜೊತೆ ಬೆರೆಯುವುದು, ಹ್ಯಾಂಡ್‌ ಶೇಕ್‌ ಮಾಡುವುದು, ಕಣ್ಣಲ್ಲಿ ಕಣ್ಣಿಟ್ಟು ನೋಡುವುದು, ಅಪ್ಪಿಕೊಳ್ಳುವುದು ಮಾಡುವಾಗಲೂ ಆಕ್ಸಿಟೋಸಿನ್‌ ಬಿಡುಗಡೆಯಾಗುತ್ತದೆ. ಆಗಾಗ ನಿಮಗೆ ಆಕ್ಸಿಟೋಸಿನ್‌ ಹೆಚ್ಚು ಮಾಡಬೇಕಿದ್ದರೆ, ಈ ಎಲ್ಲವನ್ನು ಮಾಡಬಹುದು. ಇವಿಷ್ಟು ಸಾಧ್ಯವಿಲ್ಲವಾದಲ್ಲಿ, ನಾಯಿಯೋ, ಬೆಕ್ಕನ್ನೋ ಸಾಕಿ ಮನಸೋ ಇಚ್ಛೆ ಮುದ್ದು ಮಾಡಿ.

happiness

ಸೆರಟೋನಿನ್‌: ಇದು ಖುಷಿಯ ಹಾರ್ಮೋನು. ಇದರ ಬಿಡುಗಡೆಯಿಂದ ಒಳ್ಳೆಯ ನಿದ್ದೆ, ಹಸಿವು, ನೆನಪಿನ ಶಕ್ತಿ, ಕಲಿಕೆಯ ಗುಣಮಟ್ಟ ಹಾಗೂ ಸಮಾಜದಲ್ಲಿ ವ್ಯವಹರಿಸುವ ಶಕ್ತಿ ಎಲ್ಲವೂ ವೃದ್ಧಿಸುತ್ತದೆ. ಸೆರಟೋನಿನ್‌ ಹಾರ್ಮೋನನ್ನು ಹೆಚ್ಚಿಸಲು ಬೆಳಗಿನ ಹೊತ್ತು ಸೂರ್ಯನ ಬಿಸಿಲಿನಲ್ಲಿ ವಾಕ್‌ ಹೋಗಬಹುದು, ಮಸಾಜ್ ಮಾಡಿಸಿಕೊಳ್ಳಬಹುದು.‌ ಅಥವಾ ದಿನವೂ ನಿಮ್ಮ ಜೀವನದ ಖುಷಿಯ ಗಳಿಗೆಗಳನ್ನು ಆಗಾಗ ಮೆಲುಕು ಹಾಕುತ್ತಾ ಈ ಜೀವನ ಧನ್ಯವೆಂದು ನಿಮಗೆ ನೀವೇ ಖುಷಿಯನ್ನು ಉದ್ದೀಪನಗೊಳ್ಳುವಂತೆ ಮಾಡಬಹುದು.

ಈ ನಾಲ್ಕೂ ಹಾರ್ಮೋನುಗಳ ಬಿಡುಗಡೆಯನ್ನು ಹೆಚ್ಚಿಸಿ, ಖುಷಿಯಾಗಿರಿ!

ಇದನ್ನೂ ಓದಿ: Happiness: ವಯಸ್ಸಾಗ್ತಿದೆ ಎಂಬ ಚಿಂತೆ ಬಿಟ್ಟು ಸಂತೋಷವಾಗಿರಲು ಟ್ವಿಂಕಲ್‌ ಖನ್ನಾ ಸೂತ್ರವಿದು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Health Tips in Kannada: ಬೆಂಡೆಕಾಯಿ ನೀರನ್ನು ಕುಡಿಯೋದರಿಂದ ಏನೆಲ್ಲ ಲಾಭಗಳಿವೆ ತಿಳಿದುಕೊಳ್ಳಿ

Health Tips in Kannada:  ಬೆಂಡೆಕಾಯಿಯನ್ನು ಕತ್ತರಿಸಿ ನೀರಿನಲ್ಲಿ ರಾತ್ರಿ ಹಾಕಿಟ್ಟು ಬೆಳಗ್ಗೆ ಅದ್ದ ಮೇಲೆ ಆ ನೀರನ್ನು ಕುಡಿಯುವುದರಿಂದ ಸಾಕಷ್ಟು ಆರೋಗ್ಯಕರ ಲಾಭಗಳಿವೆ. ಬೆಂಡೆಕಾಯಿಯಲ್ಲಿ ಸಾಕಷ್ಟು ಪೋಷಕಾಂಶಗಳಿರುವುದರಿಂದ ಹೀಗೆ ಮಾಡುವ ಮೂಲಕ ನಿತ್ಯವೂ ಬೆಂಡೆಕಾಯಿಯ ಪೋಷಕಾಂಶಗಳನ್ನು ದೇಹಕ್ಕೆ ಲಭಿಸುವಂತೆ ಮಾಡಬಹುದು. ಬನ್ನಿ, ಇದರಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಯೋಣ.

VISTARANEWS.COM


on

Health Tips in Kannada lady finger okra benefits
Koo

ನಿಮಗೆ ಬೆಂಡೆಕಾಯಿ ನೀರು ಕುಡಿದು ಗೊತ್ತೇ? ಅರೆ, ಇದೇನಿದು (Health Tips in Kannada) ಬೆಂಡೆಕಾಯಿ ನೀರು ಎಂದು ಆಶ್ಚರ್ಯಪಡಬೇಡಿ. ಬೆಂಡೆಕಾಯಿಯನ್ನು (Lady finger okra) ಕತ್ತರಿಸಿ ನೀರಿನಲ್ಲಿ ರಾತ್ರಿ ಹಾಕಿಟ್ಟು ಬೆಳಗ್ಗೆ ಅದ್ದ ಮೇಲೆ ಆ ನೀರನ್ನು ಕುಡಿಯುವುದರಿಂದ ಸಾಕಷ್ಟು ಆರೋಗ್ಯಕರ ಲಾಭಗಳಿವೆ. ಬೆಂಡೆಕಾಯಿಯಲ್ಲಿ ಸಾಕಷ್ಟು ಪೋಷಕಾಂಶಗಳಿರುವುದರಿಂದ ಹೀಗೆ ಮಾಡುವ ಮೂಲಕ ನಿತ್ಯವೂ ಬೆಂಡೆಕಾಯಿಯ ಪೋಷಕಾಂಶಗಳನ್ನು ದೇಹಕ್ಕೆ ಲಭಿಸುವಂತೆ ಮಾಡಬಹುದು. ಬನ್ನಿ, ಇದರಿಂದ ಆಗುವ ಪ್ರಯೋಜನಗಳೇನು ಎಂಬುದನ್ನು ನೋಡೋಣ ಬನ್ನಿ.

ಆ್ಯಂಟಿ ಆಕ್ಸಿಡೆಂಟ್‌ಗಳು ಹೇರಳ

ಬೆಂಡೆಕಾಯಿಯಲ್ಲಿ ಆ್ಯಂಟಿ ಆಕ್ಸಿಡೆಂಟ್‌ಗಳು ಹೇರಳವಾಗಿವೆ. ಇವು ಫ್ರೀ ರ್ಯಾಡಿಕಲ್ಸ್‌ಗಳನ್ನು ಕಡಿಮೆ ಮಾಡಿ, ಆಕ್ಸಿಡೇಟಿವ್‌ ಒತ್ತಡವನ್ನೂ ಇಳಿಸುವ ಜೊತೆಗೆ ಅಂಗಾಂಶ ಮಟ್ಟದಲ್ಲಿ ಹಾನಿಯಾಗುವುದನ್ನು ತಪ್ಪಿಸುತ್ತದೆ. ಇದರಿಂದ ಕ್ಯಾನ್ಸರ್‌, ಹೃದಯದ ಕಾಯಿಲೆ ಸೇರಿದಂತೆ ಮಾರಣಾಂತಿಕ ಕಾಯಿಲೆಗಳ ರಿಸ್ಕ್‌ ಕಡಿಮೆಯಾಗುತ್ತದೆ.

ಮಧುಮೇಹ ಕಾಯಿಲೆ ಹತೋಟಿ

ಬೆಂಡೆಕಾಯಿಯಲ್ಲಿ ನಾರಿನಂಶ ಹೇರಳವಾಗಿ ಇರುವುದರಿಂದ ಸಕ್ಕರೆಯ ಹೀರಿಕೆಯನ್ನು ಇದು ತಡೆಯುತ್ತದೆ. ಪರಿಣಾಮವಾಗಿ ಮಧುಮೇಹದಂತಹ ಕಾಯಿಲೆ ಹತೋಟಿಗೆ ಬರುತ್ತದೆ.

ಇದನ್ನೂ ಓದಿ: Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

ಜೀರ್ಣಕ್ರಿಯೆ ಆಗುವಲ್ಲಿ ಸಹಾಯ

ಜೀರ್ಣಾಂಗವ್ಯೂಹ ವ್ಯವಸ್ಥೆಗೆ ಬೆಂಡೆಕಾಯಿ ಒಳ್ಳೆಯದು. ಜೀರ್ಣಾಂಗನಾಳಗಳನ್ನು ಇದು ಸರಿಯಾಗಿಡುವ ಜೊತೆಗೆ, ಸಹಜವಾಗಿ ಜೀರ್ಣಕ್ರಿಯೆ ಆಗುವಲ್ಲಿ ಸಹಾಯ ಮಾಡುತ್ತದೆ.

ಕೊಲೆಸ್ಟೆರಾಲ್‌ ಕಡಿಮೆ ಮಾಡುತ್ತದೆ

ಬೆಂಡೆಕಾಯಿಯಲ್ಲಿರುವ ನಾರಿನಂಶ ಕೊಲೆಸ್ಟೆರಾಲ್‌ ಅನ್ನು ಕಡಿಮೆಗೊಳಿಸುವಲ್ಲಿ ಸಹಾಯ ಮಾಡುತ್ತದೆ. ಕೊಲೆಸ್ಟೆರಾಲ್‌ ಕಡಿಮೆಯಾಗುವ ಮೂಲಕ ಸಹಜವಾಗಿಯೇ ಹೃದಯಕ್ಕೆ ಬೆಂಡೆಕಾಯಿ ಒಳ್ಳೆಯದನ್ನೇ ಮಾಡುತ್ತದೆ.

ಚರ್ಮದ ಆರೋಗ್ಯಕ್ಕೆ ಒಳ್ಳೆಯದು

ಚರ್ಮದ ಆರೋಗ್ಯಕ್ಕೆ ಬೆಂಡೆಕಾಯಿ ಬಹಳ ಒಳ್ಳೆಯದು. ಚರ್ಮಕ್ಕೆ ಬೇಕಾದ ನೀರಿನಂಶವನ್ನು ಇದು ನೀಡುವ ಮೂಲಕ ಸದಾ ಚರ್ಮವನ್ನು ನಯವಾಗಿ ಆರೋಗ್ಯವಾಗಿ ಇರಿಸುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ

ಬೆಂಡೆಕಾಯಿಯಲ್ಲಿ ವಿಟಮಿನ್‌ ಸಿ ಹಾಗೂ ಎ ಧಾರಾಳವಾಗಿ ಇರುವುದರಿಂದ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹೊರಗಿನಿಂದ ದಾಳಿ ಮಾಡುವುದರ ವಿರುದ್ಧ ಪ್ರತಿದಾಳಿ ನಡೆಸಿ ದೇಹವನ್ನು ರೋಗ ಬರದಂತೆ ಕಾಪಾಡುತ್ತದೆ.

ಎಲುಬಿನ ಆರೋಗ್ಯಕ್ಕೆ ಒಳ್ಳೆಯದು

ಬೆಂಡೆಕಾಯಿಯಲ್ಲಿ ವಿಟಮಿನ್‌ ಕೆ ಹಾಗೂ ಕ್ಯಾಲ್ಸಿಯಂ ಇರುವುದರಿಂದ ಎಲುಬಿನ ಆರೋಗ್ಯಕ್ಕೆ ಇದು ಒಳ್ಳೆಯದನ್ನೇ ಮಾಡುತ್ತದೆ. ಎಲುಬಿನ ಸವೆತವಾಗದಂತೆ ತಡೆಯುತ್ತದೆ. ಹಾಗೂ ಎಲುಬಿನ ಸಾಂದ್ರತೆ ಕಡಿಮೆಯಾಗದಂತೆ ನೋಡಿಕೊಳ್ಳುತ್ತದೆ.

ಇದನ್ನೂ ಓದಿ: Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

ತಿನ್ನುವ ಚಟ ಕಡಿಮೆ

ಬೆಂಡೆಕಾಯಿ ನೀರು ಕುಡಿಯುವುದರಿಂದ ಹೊಟ್ಟೆ ತುಂಬಿರುವ ಅನುಭವವಾಗಿ, ಅನಗತ್ಯ ತಿನ್ನುವ ಚಟ ಕಡಿಮೆಯಾಗುತ್ತದೆ. ಆ ಮೂಲಕ ತೂಕ ಇಳಿಯುತ್ತದೆ.

ಬೆಂಡೆಕಾಯಿಯಲ್ಲಿ ವಿಟಮಿನ್‌ ಎ ಗೂ ಬೀಟಾ ಕೆರಟಿನ್‌ ಇರುವುದರಿಂದ ಇದು ಕಣ್ಣಿನ ಆರೋಗ್ಯವನ್ನು ಚೆನ್ನಾಗಿಡುವಲ್ಲಿ ಸಹಾಯ ಮಾಡುತ್ತದೆ. ಕಣ್ಣಿನ ಸಮಸ್ಯೆಗಳು ಬರದಂತೆ ತಡೆಯುತ್ತದೆ.

ಹಾಗಾದರೆ, ಈ ಬೆಂಡೆಕಾಯಿ ನೀರನ್ನು ಮಾಡುವುದು ಹೇಗೆ ಎಂಬ ಪ್ರಶ್ನೆ ನಿಮ್ಮಲ್ಲಿದ್ದರೆ, ಇಲ್ಲಿ ಉತ್ತರವಿದೆ:
ಬೆಂಡೆಕಾಯಿಯನ್ನು ಅದರ ಮೈಮೇಲಿರುವ ಕೊಳೆ ಹಾಗೂ ರಾಸಾಯನಿಕಗಳು ಹೋಗುವಂತೆ ಚೆನ್ನಾಗಿ ತೊಳೆಯಿರಿ. ನಂತರ ಅದರ ತುದಿಗಳನ್ನು ಕತ್ತರಿಸಿ ತೆಗೆದು ಸಣ್ಣ ಸಣ್ಣ ತುಂಡುಗಳನ್ನಾಗಿ ಮಾಡಿ. ಕತ್ತರಿಸಿದ ಬೆಂಡೆಕಾಯಿಯನ್ನು ಒಂದು ಬಾಟಲಿಯಲ್ಲಿ ಅಥವಾ ಲೋಟದಲ್ಲಿ ಹಾಕಿಟ್ಟು ನೀರು ಹಾಕಿ ಮುಚ್ಚಿಡಿ. ರಾತ್ರಿ ಹೀಗೆ ಮಾಡಿಟ್ಟು ಮಲಗಿದರೆ, ಬೆಳಗ್ಗೆ ಎದ್ದ ಮೇಲೆ ಬೆಂಡೆಕಾಯಿಗಳನ್ನು ಅದರಿಂದ ತೆಗೆದು ಅದರ ನೀರನ್ನು ಕುಡಿಯಿರಿ. ಬೆಳಗ್ಗೆ ಸಾಧ್ಯವಾಗದಿದ್ದರೆ ದಿನದ ಬೇರೆ ಹೊತ್ತಿನಲ್ಲೂ ಇದನ್ನು ನೀರಿಗೆ ಬದಲಾಗಿ ಕುಡಿಯಬಹುದು. ಇದರ ಮೂಲಕ ಸಾಕಷ್ಟು ಆರೋಗ್ಯ ಲಾಭಗಳನ್ನು ನೀವು ಪಡೆಯಬಹುದು.

Continue Reading

ಆರೋಗ್ಯ

Health Tips in Kannada: ತಡರಾತ್ರಿಯವರೆಗೆ ಎಚ್ಚರದಿಂದ ಇದ್ದರೆ ಆಗುವ ಸಮಸ್ಯೆಗಳೇನು ಗೊತ್ತೇ?

Health Tips in Kannada: ತಡವಾಗಿ ಮಲಗುವ ಅಭ್ಯಾಸ ಮಾಡಿಕೊಂಡ ಅನೇಕರಿಗೆ, ಇದು ಆರೋಗ್ಯದ ಮೇಲೆ ಎಂಥಾ ಪರಿಣಾಮ ಬೀರೀತು ಎಂಬ ಬಗ್ಗೆ ಸಣ್ಣ ವಯಸ್ಸಿನಲ್ಲಿ ತಿಳಿದೇ ಇರುವುದಿಲ್ಲ. ಆದರೆ, ಈ ಕೆಟ್ಟ ಅಭ್ಯಾಸವು ದಿನ ಕಳೆದ ಹಾಗೆ ನಿಧಾನವಾಗಿ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ಅರ್ಥವಾಗುವಾಗ ಬಹಳ ತಡವಾಗಿರುತ್ತದೆ. ಬನ್ನಿ, ರಾತ್ರಿ ತಡವಾಗಿ ಮಲಗುವ ಅಭ್ಯಾಸವಿದ್ದರೆ ಏನೆಲ್ಲ ಆರೋಗ್ಯದ ರಿಸ್ಕ್‌ಗಳಿವೆ ಎಂಬುದನ್ನು ನೋಡೋಣ.

VISTARANEWS.COM


on

stay awake till late night what is the problem For health
Koo

ಬೆಂಗಳೂರು: ತಡರಾತ್ರಿಯವರೆಗೆ ಎದ್ದಿರುವುದು ಈಗಿನ (Health Tips in Kannada) ಮಂದಿಗೆ ಬಹಳ ಸಾಮಾನ್ಯವಾದ ಅಭ್ಯಾಸ. ಕೆಲಸದ ಒತ್ತಡ, ಕಚೇರಿಯ ಕೆಲಸಗಳು, ಸಾಮಾಜಿಕ ಜಾಲತಾಣಗಳ ವೀಕ್ಷಣೆ, ಸಿನಿಮಾ ನೋಡುವುದು, ಪಾರ್ಟಿ ಮಾಡುವುದು ಇತ್ಯಾದಿ ಇತ್ಯಾದಿ ಜೀವನಕ್ರಮ ಬದಲಾವಣೆಗಳಿಂದ ತಡರಾತ್ರಿ ಹನ್ನೆರಡು ಕಳೆದರೂ ಅನೇಕರಿಗೆ ನಿದ್ದೆ ಹತ್ತಿರ ಸುಳಿಯುವುದಿಲ್ಲ. ಹೀಗೆ ತಡವಾಗಿ ಮಲಗುವ ಅಭ್ಯಾಸ ಮಾಡಿಕೊಂಡ ಅನೇಕರಿಗೆ, ಇದು ಆರೋಗ್ಯದ ಮೇಲೆ ಎಂಥಾ ಪರಿಣಾಮ ಬೀರೀತು ಎಂಬ ಬಗ್ಗೆ ಸಣ್ಣ ವಯಸ್ಸಿನಲ್ಲಿ ತಿಳಿದೇ ಇರುವುದಿಲ್ಲ. ಆದರೆ, ಈ ಕೆಟ್ಟ ಅಭ್ಯಾಸವು ದಿನ ಕಳೆದ ಹಾಗೆ ನಿಧಾನವಾಗಿ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ಅರ್ಥವಾಗುವಾಗ ಬಹಳ ತಡವಾಗಿರುತ್ತದೆ. ಬನ್ನಿ, ರಾತ್ರಿ ತಡವಾಗಿ ಮಲಗುವ ಅಭ್ಯಾಸವಿದ್ದರೆ ಏನೆಲ್ಲ ಆರೋಗ್ಯದ ರಿಸ್ಕ್‌ಗಳಿವೆ ಎಂಬುದನ್ನು ನೋಡೋಣ

ನೈಸರ್ಗಿಕ ನಿದ್ದೆಯ ಅಭ್ಯಾಸಕ್ಕೆ ಪೆಟ್ಟು

ತಡರಾತ್ರಿಯವರೆಗೆ ಎದ್ದಿರುವುದರಿಂದ ನಮ್ಮ ದೇಹದ ನೈಸರ್ಗಿಕ ನಿದ್ದೆಯ ಅಭ್ಯಾಸಕ್ಕೆ ಪೆಟ್ಟು ಬೀಳುತ್ತದೆ. ಮಾನವನ ದೇಹ ರಾತ್ರಿಯ ನಿದ್ದೆಗೆ ಸೂಕ್ತವಾದುದು. ರಾತ್ರಿಯ ವೇಳೆ ಸೊಂಪಾದ ನಿದ್ದೆ ಸಿಕ್ಕರಷ್ಟೇ ಆತ ಮರುದಿನ ಸೂರ್ಯ ಏಳುವ ಹೊತ್ತಿನಲ್ಲಿ ಮತ್ತೆ ಎಡೆಬಿಡದೆ ಕೆಲಸ ಮಾಡುವಷ್ಟು ಶಕ್ತಿ, ಚೈತನ್ಯ ಪಡೆಯುತ್ತಾನೆ. ನಿದ್ದೆ ಸಿಗದೇ ಇದ್ದರೆ, ಈ ನೈಸರ್ಗಿಕ ವ್ಯವಸ್ಥೆಯ ಮೇಲೆ ಪೆಟ್ಟು ಬೀಳುತ್ತದೆ.

ನಿದ್ದೆಯ ನಷ್ಟ

ತಡರಾತ್ರಿಯವರೆಗೆ ಎದ್ದಿರುವುದರಿಂದ ನಮಗೆ ದಕ್ಕಬೇಕಾದಷ್ಟು ಪ್ರಮಾಣದ ನಿದ್ದೆ ದಕ್ಕುವುದಿಲ್ಲ. ನಮ್ಮ ದೇಹಕ್ಕೆ ಅಗತ್ಯವಿರುವ ನಿದ್ದೆಯನ್ನು ನಾವು ನೀಡದೆ ಇದ್ದರೆ ಅದು ಖಂಡಿತವಾಗಿಯೂ ಅರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಬೊಜ್ಜು, ಮಧುಮೇಹ ಇತ್ಯಾದಿ ಸಮಸ್ಯೆಗಳು ಬರುವ ಸಂಭವ ಹೆಚ್ಚು. ದೇಹದ ರೋಗನಿರೋಧಕ ವ್ಯವಸ್ಥೇಯೇ ಹದಗೆಡುತ್ತದೆ.

ಇದನ್ನೂ ಓದಿ: Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

ಹಾರ್ಮೋನಿನಲ್ಲಿ ವ್ಯತ್ಯಾಸ

ತಡವಾಗಿ ನಿದ್ದೆ ಮಾಡುವುದರಿಂದ ಹಾರ್ಮೋನು ಸಮಸ್ಯೆಗಳೂ ಹೆಚ್ಚಾಗುತ್ತವೆ. ಹಾರ್ಮೋನಿನ ಅಸಮತೋಲನದಿಂದ ಅನೇಕ ಆರೋಗ್ಯ ಸಮಸ್ಯೆಗಳು ಬರಲಾರಂಭಿಸುತ್ತವೆ. ಹೆಚ್ಚು ಕ್ಯಾಲರಿ ಆಹಾರ ತಿನ್ನಬೇಕೆನ್ನುವ ಚಪಲ ಹೆಚ್ಚುತ್ತದೆ. ಇದರಿಂದ ಅತಿಯಾಗಿ ತಿನ್ನುವುದು ಹಾಗೂ ತೂಕ ಹೆಚ್ಚಾಗುವ ಸಂಭವ ಹೆಚ್ಚಾಗುತ್ತದೆ.

ಏಕಾಗ್ರತೆ ಕಡಿಮೆ

ನಿದ್ದೆ ಕಡಿಮೆಯಾದ ತಕ್ಷಣ ಬೆಳಗಿನ ಹೊತ್ತು ಮಾಡಬೇಕಾದ ಕೆಲಸಗಳಲ್ಲಿ ಏಕಾಗ್ರತೆ ಕಡಿಮೆಯಾಗುತ್ತದೆ. ಸ್ಮರಣಶಕ್ತಿ ಕುಗ್ಗುತ್ತದೆ.

ಮಾನಸಿಕವಾಗಿ ಕಿರಿಕಿರಿ

ನಿದ್ದೆ ತಡವಾಗಿ ಮಾಡಿದರೆ ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ದೇಹಕ್ಕೆ ಒತ್ತಡದ ಹಾರ್ಮೋನನ್ನು ಸಮತೋಲನಕ್ಕೆ ತರಲು ಸಾಧ್ಯವಾಗುವುದಿಲ್ಲ. ಇದರಿಂದ ಉದ್ವೇಗ, ಮಾನಸಿಕವಾಗಿ ಕಿರಿಕಿರಿಯ ಅನುಭವವಾಗುತ್ತದೆ. ದೀರ್ಘವಾಗಿ ಉಸಿರಾಡುವುದು, ಧ್ಯಾನ, ವ್ಯಾಯಾಮದಂತಹ ಚಟುವಟಿಕೆಗಳಿಂದ ಇದನ್ನು ಹಿಡಿತಕ್ಕೆ ತರಬಹುದು.

ರೋಗ ನಿರೋಧಕ ಶಕ್ತಿ ಕ್ಷೀಣ

ರೋಗ ನಿರೋಧಕ ಶಕ್ತಿ ಕುಗ್ಗುತ್ತದೆ. ಅಷ್ಟೇ ಅಲ್ಲ, ಇದರಿಂದಾಗಿ ಬಹುಬೇಗನೆ ಆರೋಗ್ಯ ಹದಗೆಡುವುದು, ರೋಗ ವಾಸಿಯಾಗದಿರುವುದು, ರೋಗದ ವಿರುದ್ಧ ಹೋರಾಡುವ ಶಕ್ತಿ ಕುಗ್ಗುವುದು ಇತ್ಯಾದಿ ಸಮಸ್ಯೆಗಳು ಎದುರಾಗುತ್ತವೆ.

ಮುಂದೆ ನಿದ್ರಾಹೀನತೆ ಸಮಸ್ಯೆ

ತಡರಾತ್ರಿಯವರೆಗೆ ಎದ್ದಿರುವುದರಿಂದ ಮುಂದೆ ನಿಧಾನವಾಗಿ ನಿದ್ರಾಹೀನತೆಯಂತಹ ಸಮಸ್ಯೆಯು ಎದುರಾಗುತ್ತದೆ. ಇದರಿಂದಾಗಿ ಮಾನಸಿಕವಾಗಿ ಏರುಪೇರು, ಖಿನ್ನತೆ, ಉದ್ವೇಗವೂ ಸೇರಿದಂತೆ ಹಲವು ಮಾನಸಿಕ ಸಮಸ್ಯೆಗಳೂ ಕಾಣಿಸಿಕೊಳ್ಳಬಹುದು.

ಅವಘಡಕ್ಕೆ ಕಾರಣ

ತಡವಾಗಿ ನಿದ್ದೆ ಮಾಡುವುದರಿಂದ ದೇಹಕ್ಕೆ ಬೇಕಾದಷ್ಟು ನಿದ್ದೆ ಸರಿಯಾಗಿ ಸಿಗದೇ ಹೋಗುವ ಸಂಭವವೇ ಹೆಚ್ಚು. ತಡವಾಗಿ ಎದ್ದರೆ ನೈಸರ್ಗಿಕವಾಗಿ ದೇಹಕ್ಕೆ ಸಿಗಬೇಕಾದ ನಿದ್ದೆ ಪರಿಪೂರ್ಣವಾಗಿ ಸಿಗದೇ ಹೋಗುವುದರಿಂದ, ನಿದ್ದೆಗೆಟ್ಟಂತಾಗಿ, ಇದು ಅಫಘಾತ, ಅವಘಡಗಳಿಗೂ ಕೆಲವೊಮ್ಮೆ ಕಾರಣವಾಗುತ್ತದೆ. ವಾಹನ ಚಾಲನೆಯೂ ಸೇರಿದಂತೆ ನಮ್ಮ ಚಲನಾ ಕೌಶಲ್ಯಗಳಿಗೆ ಸಂಬಂಧಿಸಿದ ಶಕ್ತಿಯು ನಿದ್ದೆಯಿಲ್ಲದ ಕಾರಣ ಕುಗ್ಗುವುದರಿಂದ ಅವಘಡ, ಅಫಘಾತಗಳಂತಹ ಅಪಾಯ ಹೆಚ್ಚು.

ಇದನ್ನೂ ಓದಿ: Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

ಹಾಗಾಗಿ ಒಟ್ಟಾರೆಯಾಗಿ ಮಾನಸಿಕ, ದೈಹಿಕ ಆರೋಗ್ಯಕ್ಕೆ ನೈಸರ್ಗಿಕವಾಗಿ ಅಗತ್ಯವಿರುವಷ್ಟು ನಿದ್ದೆಯ ಅಗತ್ಯವಿದ್ದೇ ಇದೆ. ಅಷ್ಟೇ ಅಲ್ಲ, ಅದಕ್ಕೆ ಶಿಸ್ತಿನಿಂದ ಸಮಯಪಾಲನೆಯೂ ಅಗತ್ಯ. ನಿದ್ದೆಯ ವಿಚಾರದಲ್ಲಿ ನಿರ್ಲಕ್ಷ್ಯ ಸಲ್ಲ. ದೇಹದ ಆರೋಗ್ಯ ನಿದ್ದೆಯ ಮೇಲೆಯೂ ಅವಲಂಬಿಸಿರುವುದರಿಂದ ನಿದ್ದೆಗೆ ಪ್ರಾಮುಖ್ಯ ಕೊಡುವುದು ಬಹಳ ಮುಖ್ಯ.

Continue Reading

ಆರೋಗ್ಯ

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

ಉಸಿರಾಟದ ವ್ಯಾಯಾಮ (breathing exercises), ಕೂಲಿಂಗ್ ತಂತ್ರಗಳ (cooling techniques) ಜೊತೆಗೆ ಮುಖದ ಯೋಗವನ್ನು (Tips For Healthy Skin) ಸರಿಯಾಗಿ ಮಾಡುವುದರಿಂದ ಮುಖದಲ್ಲಿ ರಕ್ತದ ಹರಿವನ್ನು ಹೆಚ್ಚಿಸುತ್ತದೆ. ಇದು ಚರ್ಮದ ತೈಲಗಳನ್ನು ಸಮತೋಲನಗೊಳಿಸುತ್ತದೆ. ಇದು ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೊಡವೆಗಳನ್ನು ಕಡಿಮೆ ಮಾಡಲು ಎಲ್ಲರೂ ನೆನಪಿಟ್ಟುಕೊಳ್ಳಬಹುದಾದ ಫೇಸ್ ಯೋಗದ 5 ವಿಷಯಗಳ ಕುರಿತು ಮಾಹಿತಿ (Tips For Healthy Skin) ಇಲ್ಲಿದೆ.

VISTARANEWS.COM


on

By

Tips For Healthy Skin
Koo

ಪಿಸಿಓಎಸ್ (PCOS) ಅಥವಾ ಪಿಸಿಓಡಿ (PCOD), ದೇಹದ ಶಾಖ, ಚರ್ಮದ ರಂಧ್ರಗಳನ್ನು ಮುಚ್ಚಿಹಾಕುವ ಉತ್ಪನ್ನಗಳ ತಪ್ಪು ಬಳಕೆ, ಹಾರ್ಮೋನ್ ಗಳ ಅಸಮತೋಲನ (hormonal imbalances), ನಾವು ಸೇವಿಸುವ ಅಸುರಕ್ಷಿತ ಆಹಾರ.. ಹೀಗೆ ಅನೇಕ ಕಾರಣಗಳಿಂದ ಮುಖದಲ್ಲಿ ಮೊಡವೆ (acne) ಉಂಟಾಗುತ್ತದೆ. ಇದು ಬ್ಯಾಕ್ಟೀರಿಯಾದ ಸೋಂಕಿನಿಂದ (bacterial infection ) ಹೆಚ್ಚಾಗುತ್ತದೆ.

ಉಸಿರಾಟದ ವ್ಯಾಯಾಮ (breathing exercises), ಕೂಲಿಂಗ್ ತಂತ್ರಗಳ (cooling techniques) ಜೊತೆಗೆ ಮುಖದ ಯೋಗವನ್ನು (Tips For Healthy Skin) ಸರಿಯಾಗಿ ಮಾಡುವುದರಿಂದ ಮುಖದಲ್ಲಿ ರಕ್ತದ ಹರಿವನ್ನು ಹೆಚ್ಚಿಸುತ್ತದೆ. ಇದು ಚರ್ಮದ ತೈಲಗಳನ್ನು ಸಮತೋಲನಗೊಳಿಸುತ್ತದೆ. ಇದು ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೊಡವೆಗಳನ್ನು ಕಡಿಮೆ ಮಾಡಲು ನೆನಪಿಟ್ಟುಕೊಳ್ಳಬಹುದಾದ ಫೇಸ್ ಯೋಗದ 5 ವಿಷಯಗಳ ಕುರಿತ ಮಾಹಿತಿ ಇಲ್ಲಿದೆ.


1. ಬಹಳಷ್ಟು ನೀರು ಕುಡಿಯಿರಿ

ಫೇಸ್ ಯೋಗವು ಮುಖದಲ್ಲಿನ ಹೆಚ್ಚುವರಿ ತೈಲವನ್ನು ತೊಡೆದು ಹಾಕಲು ಸಹಾಯ ಮಾಡುತ್ತದೆ. ನೀರಿನಿಂದ ನಿರ್ಗಮಿಸುವ ದೇಹದ ವಿಷಕಾರಿ ದ್ರವವನ್ನು ತೆಗೆದುಹಾಕಿ ಚರ್ಮವನ್ನು ಸ್ವಚ್ಛಗೊಳಿಸುತ್ತದೆ. ನೀರು ಚರ್ಮದ ರಂಧ್ರಗಳನ್ನು ತೆರೆಯಲು ಸಹಾಯ ಮಾಡುತ್ತದೆ ಮತ್ತು ದೇಹದ ತೇವಾಂಶದ ಮಟ್ಟವನ್ನು ಕಾಪಾಡಲು ಸಹಾಯ ಮಾಡುತ್ತದೆ.

2. ಪ್ರಾಣಾಯಾಮ

ಮೊಡವೆ ಪೀಡಿತ ಚರ್ಮಕ್ಕಾಗಿ ಕೂಲಿಂಗ್ ಡೌನ್ ತಂತ್ರಗಳು ಅಥವಾ ಪ್ರಾಣಾಯಾಮವನ್ನು ದಿನಚರಿಯಲ್ಲಿ ಸೇರಿಸಿಕೊಳ್ಳಬೇಕು. ಇದು ಮುಖಕ್ಕೆ ರಕ್ತದ ಹರಿವಿನ ಪ್ರಮಾಣವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

3. ಸರಿಯಾದ ತೈಲವನ್ನು ಬಳಸಿ

ತೆಂಗಿನ ಎಣ್ಣೆಯಂತಹ ಹೆಚ್ಚು ಗಾಢವಾದ ಎಣ್ಣೆಯನ್ನು ಮುಖಕ್ಕೆ ಬಳಸಬೇಡಿ. ಮೊಡವೆಗಳನ್ನು ತೊಡೆದು ಹಾಕಲು ಮತ್ತು ಸುಲಭವಾಗಿ ಚರ್ಮಕ್ಕೆ ಹೀರಿಕೊಳ್ಳಲು ಸಹಾಯವಾಗುವ ಚಹಾ ಮರ ಅಥವಾ ಬೇವಿನ ಎಣ್ಣೆಯಂತಹ ಹಗುರವಾದ ತೈಲಗಳನ್ನು ಬಳಸಿ.

ಇದನ್ನೂ ಓದಿ: Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

4. ಕನಿಷ್ಠ ಸ್ಪರ್ಶ

ಮುಖದ ಮೇಲೆ ಕನಿಷ್ಠ ಸ್ಪರ್ಶವನ್ನು ಬಳಸುವ ಮೇಕಪ್ ಸಾಮಗ್ರಿಗಳನ್ನು ಬಳಸಿ. ಇದರಿಂದ ಯಾವುದೇ ಮೊಡವೆಗಳು ಉಂಟಾಗುವುದಿಲ್ಲ ಅಥವಾ ಯಾವುದೇ ಬ್ಯಾಕ್ಟೀರಿಯಾ ಸೋಂಕು ಆಗುವುದಿಲ್ಲ. ಒಂದು ಸ್ಥಳದಿಂದ ಇನ್ನೊಂದಕ್ಕೆ ವರ್ಗಾಯಿಸುವುದಿಲ್ಲ.

5. ಮುಖವನ್ನು ತೊಳೆಯುತ್ತಿರಿ

ಸೌಂದರ್ಯ ವರ್ಧಕಗಳು ಚರ್ಮದ ಮೇಲೆ ಬಿಡಬಹುದಾದ ಎಣ್ಣೆಗಳಿಂದ ಮಾಡಲಾಗುತ್ತದೆ. ದೀರ್ಘಕಾಲದವರೆಗೆ ಇರಿಸಲಗುವ ಉತ್ಪನ್ನಗಳು ಹೆಚ್ಚು ಮೊಡವೆಗಳಿಗೆ ಕಾರಣವಾಗಬಹುದು. ಮೇಕಪ್ ನ ಅಗತ್ಯವಿಲ್ಲದೆ ಇದ್ದಾಗ ಚೆನ್ನಾಗಿ ಮುಖವನ್ನು ತೊಳೆಯುವುದರಿಂದ ಚರ್ಮದ ರಂಧ್ರಗಳು ಮುಚ್ಚಿಹೋಗುವುದಿಲ್ಲ ಅಥವಾ ತೈಲಗಳನ್ನು ಬಳಸಿದ ನಂತರ ಮೊಡವೆಗಳನ್ನು ಹುಟ್ಟುಹಾಕುವುದಿಲ್ಲ.

Continue Reading

ಕರ್ನಾಟಕ

Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

Fortis Hospital: ಕೊನೆಯ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಯೆಮನ್‌ ದೇಶದ 11 ವರ್ಷದ ಬಾಲಕ ಮತ್ತು ಬೆಂಗಳೂರಿನ 34 ವರ್ಷದ ವ್ಯಕ್ತಿಗೆ ರೋಬೋಟಿಕ್‌ ಸಹಾಯದಿಂದ ಅಪರೂಪದ “ಸಂಕೀರ್ಣ ಕಿಡ್ನಿ ಕಸಿ” ಶಸ್ತ್ರಚಿಕಿತ್ಸೆಯನ್ನು ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ ಎಂದು ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ತಿಳಿಸಿದ್ದಾರೆ.ಆಸ್ಪತ್ರೆಯ ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ಹಾಗೂ ನೆಫ್ರಾಲಜಿಸ್ಟ್‌ ಡಾ. ಎಸ್‌. ಮಂಜುನಾಥ್ ಅವರ ತಂಡವು ಈ ಶಸ್ತ್ರಚಿಕಿತ್ಸೆ ನಡೆಸಿದೆ.

VISTARANEWS.COM


on

Fortis Hospital doctors team performed a successful complex kidney transplant surgery for two patients with robotic assistance
Koo

ಬೆಂಗಳೂರು: ಕೊನೆಯ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಯೆಮನ್‌ ದೇಶದ 11 ವರ್ಷದ ಬಾಲಕ ಮತ್ತು ಬೆಂಗಳೂರಿನ 34 ವರ್ಷದ ವ್ಯಕ್ತಿಗೆ ರೋಬೋಟಿಕ್‌ ಸಹಾಯದಿಂದ ಅಪರೂಪದ “ಸಂಕೀರ್ಣ ಕಿಡ್ನಿ ಕಸಿ” ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ ಎಂದು ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೆಮೆನ್‌ ದೇಶದ 11 ವರ್ಷದ ಬಾಲಕ ಮತ್ತು ಬೆಂಗಳೂರಿನ 34 ವರ್ಷದ ವ್ಯಕ್ತಿ ಈ ಇಬ್ಬರಿಗೂ ರೋಬೋಟ್‌ ತಂತ್ರಜ್ಞಾನ ಬಳಸಿ ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ಹಾಗೂ ನೆಫ್ರಾಲಜಿಸ್ಟ್‌ ಡಾ. ಎಸ್‌. ಮಂಜುನಾಥ್ ಅವರ ತಂಡ ಶಸ್ತ್ರಚಿಕಿತ್ಸೆ ನಡೆಸಿದೆ ಎಂದರು.

ಇದನ್ನೂ ಓದಿ: ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

ಯೆಮನ್‌ ದೇಶದ 11 ವರ್ಷದ ಅಹ್ಮದ್ ಎಂಬ ಬಾಲಕನು ನಾಲ್ಕನೇ ವಯಸ್ಸಿನಿಂದಲೇ ಮೂತ್ರಪಿಂಡಕ್ಕೆ ಸಂಬಂಧಿಸಿದ ಸ್ಟೆರಾಯ್ಡ್ ರೆಸಿಸ್ಟೆಂಟ್ ನೆಫ್ರೋಟಿಕ್ ಸಿಂಡ್ರೋಮ್ (ಎಸ್‌ಆರ್‌ಎನ್‌ಎಸ್) ನಿಂದ ಬಳಲುತ್ತಿದ್ದರು. ನೆಫ್ರೋಟಿಕ್ ಸಿಂಡ್ರೋಮ್ ಒಂದು ಮೂತ್ರಪಿಂಡದ ಕಾಯಿಲೆಯಾಗಿದ್ದು, ಮೂತ್ರದಲ್ಲಿ ಪ್ರೋಟೀನ್ ಇರುವಿಕೆ, ರಕ್ತದಲ್ಲಿನ ಕಡಿಮೆ ಮಟ್ಟದ ಪ್ರೋಟೀನ್, ಅಧಿಕ ಕೊಲೆಸ್ಟ್ರಾಲ್ ಮತ್ತು ಊತದಿಂದ ಕೂಡಿತ್ತು. ಎಸ್‌ಆರ್‌ಎನ್‌ಎಸ್‌ನಲ್ಲಿ, ಸ್ಟಿರಾಯ್ಡ್‌ಗಳ ಚಿಕಿತ್ಸೆಯ ಹೊರತಾಗಿಯೂ ಮೂತ್ರಪಿಂಡಗಳು ಹೆಚ್ಚಿನ ಪ್ರಮಾಣದ ಪ್ರೋಟೀನ್‌ಗಳನ್ನು ಮೂತ್ರಕ್ಕೆ ಸೋರಿಕೆ ಮಾಡುವುದನ್ನು ಮುಂದುವರಿಸುತ್ತವೆ ಎಂದು ವಿವರಿಸಿದರು.

ಸ್ಟೀರಾಯ್ಡ್‌ಗಳಿಗೆ ಈ ಪ್ರತಿರೋಧವು ನಿರಂತರ ಅಥವಾ ಮರುಕಳಿಸುವ ನೆಫ್ರೋಟಿಕ್ ಸಿಂಡ್ರೋಮ್‌ಗೆ ಕಾರಣವಾಗಬಹುದು, ಇದರಿಂದ ಭವಿಷ್ಯದಲ್ಲಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗೆ ಕಾರಣವಾಗಬಹುದು. ಇದೇ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕನಿಗೆ ಸಾಕಷ್ಟು ಕಡೆ ಚಿಕಿತ್ಸೆ ಕೊಡಿಸಿದ್ದರೂ ಸಹ ಫಲಕಾರಿಯಾಗದೆ ಕಾಯಿಲೆ ಕೊನೆಯ ಹಂತಕ್ಕೆ ಬಂದು ತಲುಪಿತ್ತು. ಬಳಿಕ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಬಾಲಕನ ವಯಸ್ಸು ಕಡಿಮೆ ಇರುವ ಕಾರಣ, ಸಾಕಷ್ಟು ಮುತುವರ್ಜಿ ವಹಿಸಿ ರೋಬೋಟ್‌ ಸಹಾಯದ ಮೂಲಕ ಬಾಲಕನಿಗೆ ಕಿಡ್ನಿ ಕಸಿ ಮಾಡಲು ನಿರ್ಣಯಿಸಿದೆವು. ರೋಬೋಟ್‌ ಸಹಾಯದಿಂದ ಮಾತ್ರವೇ ನಿಖರವಾಗಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಬಾಲಕನ ಚಿಕ್ಕಮ್ಮನ ಒಂದು ಕಿಡ್ನಿಯನ್ನು ಹುಡುಗನಿಗೆ ಶಸ್ತ್ರಚಿಕಿತ್ಸೆಯ ಮೂಲಕ ಅಳವಡಿಸಲಾಯಿತು. ಇದೀಗ ಬಾಲಕ ಆರೋಗ್ಯವಾಗಿದ್ದು, ಶಸ್ತ್ರಚಿಕಿತ್ಸೆಯ ಐದು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಯಿತು ಎಂದು ತಿಳಿಸಿದರು.

ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದ 34 ವರ್ಷದ ಚೇತನ್, ಮೊದಲಿನಿಂದಲೂ ಕೇವಲ ಒಂದು ಕಿಡ್ನಿಯನ್ನು ಮಾತ್ರ ಹೊಂದಿದ್ದರು, ಜತೆಗೆ ಅಧಿಕ ರಕ್ತದೊತ್ತಡ ಇದ್ದ ಕಾರಣ ಅವರ ಒಂದು ಕಿಡ್ನಿಯೂ ಸಹ ಕಾಯಿಲೆಗೆ ತುತ್ತಾಗಿತ್ತು, ಕೊನೆಯ ಹಂತಕ್ಕೆ ತಲುಪಿದ್ದರಿಂದ ಇವರ ಜೀವಕ್ಕೂ ಆಪತ್ತು ಕಾದಿತ್ತು. ಹೀಗಾಗಿ ಇವರಿಗೆ 74 ವರ್ಷದ ಸ್ವಂತ ತಂದೆಯೇ ತಮ್ಮ ಕಿಡ್ನಿಯನ್ನು ದಾನ ಮಾಡಿದ್ದಾರೆ. ಇವರಿಗೂ ಸಹ ರೋಬೋಟ್‌ ಸಹಾಯದ ಮೂಲಕವೇ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಯಶಸ್ವಿಯಾಗಿದೆ ಎಂದು ಅವರು ವಿವರಿಸಿದರು.

ಇದನ್ನೂ ಒದಿ: Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

ರೋಬೋಟ್‌ ಶಸ್ತ್ರಚಿಕಿತ್ಸೆಯು ಹೆಚ್ಚು ನಿಖರವಾದ ಛೇದನವನ್ನು ಅನುಸರಿಸಲಿದ್ದು, ಇತರೆ ಯಾವುದೇ ಅಂಗಾಂಗಳಿಗೆ ಘಾಸಿ ಮಾಡುವುದಿಲ್ಲ, ರೋಬೋಟಿಕ್‌ ಶಸ್ತ್ರಚಿಕಿತ್ಸೆಯಿಂದ ವೇಗವಾಗಿಯೂ ಚೇತರಿಸಿಕೊಳ್ಳಲು ನೆರವಾಗಲಿದೆ ಎಂದು ಹೇಳಿದರು.

Continue Reading
Advertisement
Indian Railway
ಮಹಿಳೆ16 seconds ago

Indian Railway: ಮಹಿಳಾ ಪ್ರಯಾಣಿಕರಿಗೆ ರೈಲಿನಲ್ಲಿ ಎಷ್ಟೊಂದು ಸುರಕ್ಷತಾ ಕ್ರಮಗಳಿವೆ ನೋಡಿ!

pes students self harming
ಕ್ರೈಂ7 mins ago

Student Self harming: ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ, ಪೋಷಕರ ಪ್ರತಿಭಟನೆ; ಟಾಪರ್‌ಗಳೇ ಸಾಯ್ತಿರೋದ್ಯಾಕೆ?

Sachin Tendulkar
ದೇಶ13 mins ago

Sachin Tendulkar: ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗಾರ್ಡ್‌ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

777 Charlie Dog Gives Birth To 6 Puppies Rakshit Shetty on live
ಸಿನಿಮಾ14 mins ago

777 Charlie: 6 ಮುದ್ದಾದ ಮರಿಗಳಿಗೆ ಜನ್ಮ ನೀಡಿದ ಚಾರ್ಲಿ: ರಕ್ಷಿತ್‌ ಶೆಟ್ಟಿ ಸರ್‌ಪ್ರೈಸ್‌ ಲೈವ್‌ !

Kangana Ranaut
Lok Sabha Election 202449 mins ago

Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

anjali murder case hubli
ಕ್ರೈಂ56 mins ago

Anjali Murder Case: ಅಂಜಲಿ ಹಂತಕನಿಗೆ ಸ್ನೇಹಿತನೇ ಪ್ರೇರಣೆ? ಅವನೂ ಕೊಲೆ ಆರೋಪಿ!

Viral Video
ವೈರಲ್ ನ್ಯೂಸ್1 hour ago

Viral Video: 160 ಕಿ.ಮೀ. ವೇಗದಲ್ಲಿ ಡ್ರೈವಿಂಗ್‌..ಇನ್‌ಸ್ಟಾಗ್ರಾಂನಲ್ಲಿ ಲೈವ್‌..ಡೆಡ್ಲಿ ಆಕ್ಸಿಡೆಂಟ್‌! ವೈರಲಾಯ್ತು ಶಾಕಿಂಗ್‌ ವಿಡಿಯೋ

Slovakian PM Robert Fico critical after assassination attempt
ಪ್ರಮುಖ ಸುದ್ದಿ1 hour ago

Robert Fico: ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು, ಅಮೆರಿಕ ವಿರೋಧಿ ನಾಯಕ ಗಂಭೀರ

Health Tips in Kannada lady finger okra benefits
ಆರೋಗ್ಯ2 hours ago

Health Tips in Kannada: ಬೆಂಡೆಕಾಯಿ ನೀರನ್ನು ಕುಡಿಯೋದರಿಂದ ಏನೆಲ್ಲ ಲಾಭಗಳಿವೆ ತಿಳಿದುಕೊಳ್ಳಿ

ಕರ್ನಾಟಕ2 hours ago

Karnataka Weather: ಇಂದು ಕಲಬುರಗಿ, ವಿಜಯಪುರ ಸೇರಿ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌