Health tips: ತಡರಾತ್ರಿ ತಿನ್ನುವುದು ಯಾಕೆ ಒಳ್ಳೆಯದಲ್ಲ ಗೊತ್ತೇ? - Vistara News

ಆರೋಗ್ಯ

Health tips: ತಡರಾತ್ರಿ ತಿನ್ನುವುದು ಯಾಕೆ ಒಳ್ಳೆಯದಲ್ಲ ಗೊತ್ತೇ?

ಸಂಶೋಧನೆಗಳ ಪ್ರಕಾರ, ತಡರಾತ್ರಿ ತಿನ್ನುವ ಮಂದಿಗೂ ಬೊಜ್ಜಿಗೂ ಹಾಗೂ ಜೀರ್ಣಕ್ರಿಯೆ ಸಿಂಡ್ರೋಮ್‌ಗೂ ಸಂಬಂಧವಿದೆಯಂತೆ. ಲೇಟಾಗಿ ತಿನ್ನುವುದರಿಂದ ಹೃದಯದ ಸಮಸ್ಯೆ, ಮಧುಮೇಹ, ಪಾರ್ಶ್ವವಾಯು ಇತ್ಯಾದಿಗಳ ಸಮಸ್ಯೆಗಳೂ ಒಂದೊಂದಾಗಿ ಉದ್ಭವಿಸುವ ಸಾಧ್ಯತೆ ಇದೆ.

VISTARANEWS.COM


on

health tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾತ್ರಿ ಕೂತು ಕೆಲಸ ಮಾಡುವ ಬಹಳಷ್ಟು ಮಂದಿಯನ್ನು ಕಾಡುವ ಸಮಸ್ಯೆ ಎಂದರೆ ಏನಾದರೂ ತಿನ್ನಬೇಕೆಂಬ ಬಯಕೆ! ಊಟ ಮುಗಿದಿರುತ್ತದೆ. ಜಾಸ್ತಿ ಊಟ ಮಾಡಬಾರದೆಂಬ ಯೋಚನೆಯಲ್ಲಿ ಹೊಟ್ಟೆ ಹಗುರವಾಗಿ ತುಂಬಿರುತ್ತದೆ. ಮನೆಯ ಎಲ್ಲ ಕೆಲಸಗಳ್ನೂ ಒಂದೊಂದಾಗಿ ಮುಗಿಸಿ, ಅಡುಗೆ ಕೋಣೆಯನ್ನು ಓರಣವಾಗಿಟ್ಟು ಗ್ಯಾಸ್‌ ಆಫ್‌ ಮಾಡಿ ಬೆಡ್‌ ರೂಂನತ್ತ ಮುಖ ಮಾಡುವ ಮೊದಲು ಒಂದಿಷ್ಟು ಹೊತ್ತು ಕಚೇರಿಗೆ ಸಂಬಂಧಿಸಿ ಕೆಲಸವೋ ಅಥವಾ ಯಾವುದಾದರೊಂದು ಸಿನೆಮಾ, ಸೀರೀಸ್‌ ನೋಡುವ ಅಂತಲೋ ಟಿವಿಯೋ, ಮೊಬೈಲೋ ಆನ್‌ ಮಾಡಿದರೆ ಮುಗೀತು, ಕೆಲ ಹೊತ್ತಿನಲ್ಲಿ ಹೊಟ್ಟೆಗೇನಾದರೂ ಹಾಕೋಣ ಎಂದು ಮತ್ತೆ ಕಿಚನ್‌ ಹತ್ತಿರ ಬಂದು ಫ್ರಿಡ್ಜ್‌ ಬಾಗಿಲು ತೆರೆದಿರುತ್ತೀರಿ, ಅಥವಾ ಡಬ್ಬದಲ್ಲಿ ಕೈಹಾಕಿ ಏನೋ ಹುಡುಕಾಡುತ್ತಿರುತ್ತೀರಿ. ಛೇ, ನಾನ್ಯಾಕೆ ಹೀಗೆ ತಿನ್ನುತ್ತೇನೆ, ಬೇಡ ಅಂದರೂ ಏನಾದರೂ ಬಾಯಿಗೆ ಹಾಕೋಣ ಎನಿಸುವುದ್ಯಾಕೆ ಅಂತ ಗೊತ್ತಿದ್ದರೂ, ಬಾಯಾಡಿಸಿಯೇ ತೀರುತ್ತೀರಿ. ಈ ಸಮಸ್ಯೆಗೆ ಪರಿಹಾರವೇನು? ಹೀಗೆ ತಿನ್ನುವುದರಿಂದ ಆಗುವ ಸಮಸ್ಯೆಗಳೇನು ಎಂಬುದನ್ನು ಇಲ್ಲಿ ನೋಡೋಣ.

sleep

೧. ರಾತ್ರಿ ಹೊತ್ತು ತಿನ್ನುವುದರಿಂದ ಆಗಬಹುದಾದ ಸಮಸ್ಯೆ ಎಂದರೆ ಹಾರ್ಮೋನ್‌ ವೈಪರೀತ್ಯ. ರಾತ್ರಿ ತಡವಾಗಿ ತಿನ್ನುವುದರಿಂದ ಹಂಗರ್‌ ಹಾರ್ಮೋನಿನ ಮಟ್ಟ್‌ ಏರುವುದಷ್ಟೇ ಅಲ್ಲ, ಲೆಪ್ಟಿನ್‌ನ ಮಟ್ಟ ಇಳಿಯುತ್ತದೆ. ಇದರಿಂದ ಮರುದಿನವೂ ತಡರಾತ್ರಿ ಹಸಿವಾದಂತೆ ಅನಿಸತೊಡಗುತ್ತದೆ. ಹೆಚ್ಚು ಹೆಚ್ಚು ತಿನ್ನುವುದನ್ನು ಇದು ಪ್ರೇರೇಪಿಸುತ್ತದೆ.

೨. ಸಂಶೋಧನೆಗಳ ಪ್ರಕಾರ, ತಡರಾತ್ರಿ ತಿನ್ನುವ ಮಂದಿಗೂ ಬೊಜ್ಜಿಗೂ ಹಾಗೂ ಜೀರ್ಣಕ್ರಿಯೆ ಸಿಂಡ್ರೋಮ್‌ಗೂ ಸಂಬಂಧವಿದೆಯಂತೆ. ಲೇಟಾಗಿ ತಿನ್ನುವುದರಿಂದ ಹೃದಯದ ಸಮಸ್ಯೆ, ಮಧುಮೇಹ, ಪಾರ್ಶ್ವವಾಯು ಇತ್ಯಾದಿಗಳ ಸಮಸ್ಯೆಗಳೂ ಒಂದೊಂದಾಗಿ ಉದ್ಭವಿಸುವ ಸಾಧ್ಯತೆ ಇದೆ. ಜೊತೆಗೆ ತಡರಾತ್ರಿ ಹೆಚ್ಚು ಕೊಬ್ಬಿನ ಹಾಗೂ ಕಡಿಮೆ ಪೋಷಕಾಂಶಯುಕ್ತ ಆಹಾರ ತಿನ್ನುವ ಸಾಧ್ಯತೆಯೇ ಹೆಚ್ಚಿರುವುದರಿಂದ ಜೀರ್ಣಕ್ರಿಯೆ ಸಿಂಡ್ರೋಮ್‌ ಕೂಡಾ ಉಂಟಾಗಬಹುದು.

೩. ರಾತ್ರಿ ತಡವಾಗಿ ತಿನ್ನುವ ಅಭ್ಯಾಸ ಉಳ್ಳವರನ್ನು ಕಾಡಬಹುದಾದ ಇನ್ನೊಂದು ಸಮಸ್ಯೆ ಎಂದರೆ ಮಧುಮೇಹ. ರಕ್ತದಲ್ಲಿ ಸಕ್ಕರೆಯ ಅಂಶ ಏರುಪೇರಾಗುವ ಸಂಭವ ಇವರಲ್ಲಿ ಹೆಚ್ಚು.

೪. ನಿದ್ರಾಹೀನತೆ: ತಡವಾಗಿ ತಿಂದು ತಡವಾಗಿ ನಿದ್ರೆಗೆ ಜಾರುವುದರಿಂದ ಕಾಲಕ್ರಮೇಣ ಇದೇ ಸಮಸ್ಯೆಯಾಗಿ ತಲೆದೋರಬಹುದು. ಎಷ್ಟು ಹೊತ್ತಾದರೂ ನಿದ್ರೆ ಬರದಿರುವುದು,, ಪದೇ ಪದೇ ಎಚ್ಚರವಾಗುವುದು ಇಂಥವರನ್ನು ಕಾಡಬಹುದಾದ ಸಮಸ್ಯೆ.

eating chips

ರಾತ್ರಿ ಮಲಗುವುದಕ್ಕಿಂತ ಬಹಳ ಮೊದಲೇ ಅಂದರೆ ಕನಿಷ್ಟ ಎರಡು ಗಂಟೆಗಳಾದರೂ ಮೊದಲು ಉಣ್ಣುವುದು ಒಳ್ಳೆಯದು ಎಂಬ ಸತ್ಯ ಗೊತ್ತಿದೆ ನಿಜ. ಆದರೆ, ಹಲವರಿಗೆ ಇಲ್ಲಿ ಸಮಸ್ಯೆಯಾಗುವುದು ರಾತ್ರಿ ಬೇಗ ಊಟ ಮಾಡಿದರೆ, ಹಸಿವೆಯಾಗಿ ನಿದ್ರೆ ಬರದಂತಾಗುತ್ತದೆ, ಇದಕ್ಕೇನು ಮಾಡುವುದು ಎಂಬುದು. ಇದಕ್ಕೂ ಇಲ್ಲಿ ಉಪಾಯವಿದೆ. ಯಾವುದನ್ನು ತಿನ್ನಬೇಕು, ಯಾವುದನ್ನು ತಿನ್ನಬಾರದು ಎಂಬುದನ್ನು ಅರಿತುಕೊಂಡು ಆ ಬಗ್ಗೆ ಶಿಸ್ತನ್ನು ರೂಢಿಸಿಕೊಂಡರೆ ಆರೋಗ್ಯ ನಮ್ಮ ಕೈಯಲ್ಲೇ ಇದೆ.

ಇದನ್ನೂ ಓದಿ: Health tips: ನಮ್ಮ ಭಾವನೆಗಳಿಗೂ ದೇಹದ ಅಂಗಗಳಿಗೂ ನೇರಾನೇರ ಸಂಬಂಧ!

೧. ರಾತ್ರಿ ಮಲಗುವ ಮುನ್ನ ಕಾಫಿ, ಚಹಾ, ಚಾಕೋಲೇಟು ಮತ್ತಿತರ ಕೆಫೀನ್‌ ಇರುವ ಪೇಯಗಳನ್ನು ಕುಡಿಯಬೇಡಿ. ಇದು ರಾತ್ರಿ ಬೇಗ ನಿದ್ದೆ ಮಾಡಲು ಬಿಡುವುದಿಲ್ಲ.

೨. ಮಸಾಲೆಯುಕ್ತ ತಿನಿಸುಗಳನ್ನು ರಾತ್ರಿ ತಿನ್ನಬೇಡಿ. ಇದು ಎದೆಯುರಿಯನ್ನು ಹೆಚ್ಚು ಮಾಡುತ್ತದೆ. ಇದು ನಿಮ್ಮ ನಿದ್ರೆಯನ್ನು ಕಸಿಯುವುದರಲ್ಲಿ ಯಾವ ಸಂದೇಹವೂ ಇಲ್ಲ.

೩. ಅತ್ಯಂತ ಹೆಚ್ಚು ಕಾರ್ಬೋಹೈಡ್ರೇಟ್‌ ಇರುವ ಹಾಗೂ ಸಕ್ಕರೆ ಹೆಚ್ಚಿರುವ ತಿನಿಸನ್ನು ರಾತ್ರಿಯ ಊಟದ ಜೊತೆ ತಿನ್ನಬೇಡಿ. ಬ್ರೆಡ್‌, ಪಾಸ್ತಾ, ಸಂಸ್ಕರಿಸಿದ ಆಹಾರ ಇತ್ಯಾದಿಗಳನ್ನು ರಾತ್ರಿ ತಿನ್ನಬೇಡಿ.

೪. ರಾತ್ರಿ ಮಲಗುವ ಮುನ್ನ ಮದ್ಯಪಾನ ಮಾಡುವ ಅಭ್ಯಾಸವಿದ್ದರೆ ಅದು ಖಂಡಿತಾ ಒಳ್ಳೆಯದಲ್ಲ. ಇದೂ ಕೂಡಾ ನಿದ್ದೆಯನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Health Tips: ನಮ್ಮ ಶಕ್ತಿಗುಂದಿಸುವ ಈ ವಿಷಯಗಳ ಬಗ್ಗೆ ಎಚ್ಚರ ವಹಿಸಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

International Yoga Day 2024: ಗರ್ಭಿಣಿಯರೂ ಯೋಗ ಮಾಡಬಹುದೇ? ಯಾವ ಆಸನಗಳು ಸೂಕ್ತ?

ಗರ್ಭಿಣಿಯರು ಕೆಲಸ ಮಾಡುತ್ತಿದ್ದರೆ ಮೈ ಹಗುರ ಇರುತ್ತದೆಂಬುದು ಪರಂಪರಾಗತ ತಿಳಿವಳಿಕೆ. ಇದಕ್ಕೆ ಅನುಗುಣವಾಗಿ, ಗರ್ಭಾವಸ್ಥೆಯಲ್ಲಿ ಕೆಲವು ಯೋಗಾಸನ ಮತ್ತು ಉಸಿರಾಟದ ತಂತ್ರಗಳನ್ನು (International Yoga Day 2024) ಮಾಡಬಹುದು. ಪ್ರಿನೇಟಲ್‌ ಯೋಗದ ಬಗ್ಗೆ ಕುತೂಹಲವಿದ್ದರೆ, ಇಲ್ಲಿದೆ ಮಾಹಿತಿ.

VISTARANEWS.COM


on

International Yoga Day 2024
Koo

ಮಗುವಿನ ನಿರೀಕ್ಷೆಯಲ್ಲಿದ್ದೀರೇ? ಅಭಿನಂದನೆಗಳು! ಕೌತುಕ, ತಳಮಳ, ಹೆದರಿಕೆ, ನಿರೀಕ್ಷೆ, ಆಯಾಸ- ಏನೇನೆಲ್ಲ ಆಗುತ್ತಿರಬೇಕಲ್ಲವೇ ಈಗ. ಜೀವದೊಳಗೆ ಜೀವವಿರುವ ಅನುಭವವೇ ವರ್ಣನೆಗೆ ನಿಲುಕದ್ದು. ಈ ನವಮಾಸಗಳು ಮಹಿಳೆಯರ ಬದುಕಿನ ಮಹತ್ವದ ಹಂತಗಳು. ಇವು ಆಯಾ ಮಹಿಳೆಯ ಬದುಕಿಗಷ್ಟೇ ಅಲ್ಲ, ಇಡೀ ಕುಟುಂಬಕ್ಕೇ ನಿರೀಕ್ಷೆಯ ಮಾಸಗಳು. ಈ ದಿನಗಳಲ್ಲಿ ಆಕೆಯ ಆರೋಗ್ಯ ಸ್ಥಿರವಾಗಿ ಇರಬೇಡವೇ? ಆರೋಗ್ಯವೆಂದರೆ ದೇಹಾರೋಗ್ಯ ಮಾತ್ರವೇ ಅಲ್ಲ, ಮಾನಸಿಕ, ಭಾವನಾತ್ಮಕ ಸ್ಥಿತಿಗಳೂ ಸುದೃಢವಾಗಿ ಇರಬೇಕು. ಈ ಹಂತದಲ್ಲಿ ನೆರವಾಗುವುದು ಗರ್ಭಿಣಿಯರಿಗಾಗಿಯೇ ಇರುವ ಪ್ರೀನೇಟಲ್‌ ಯೋಗ. ಮೊದಲಿಗೆ ಯೋಗ ಮಾಡುವುದು ಆಯಾ ಗರ್ಭಿಣಿಯ ಆರೋಗ್ಯಕ್ಕೆ ಸೂಕ್ತವೇ ಎಂಬುದನ್ನು ವೈದ್ಯರಲ್ಲಿ ದೃಢಪಡಿಸಿಕೊಳ್ಳಬೇಕು. ಆನಂತರ ಅನುಭವಿ ಯೋಗ (International Yoga Day 2024) ಶಿಕ್ಷಕರ ಮಾರ್ಗದರ್ಶನ ಪಡೆಯುವುದು ಸರಿಯಾದ ಮಾರ್ಗ.

International Yoga Day 2024

ಏನು ಪ್ರಯೋಜನ?

  • ಗರ್ಭಿಣಿಯ ಆರೋಗ್ಯ ಸ್ಥಿರವಾಗಿದೆ ಎಂದಾದರೆ, ಒಂದಿಲ್ಲೊಂದು ವ್ಯಾಯಾಮ ಈ ದಿನಗಳಲ್ಲಿ ಬೇಕು. ಅದರಲ್ಲೂ ಯೋಗವನ್ನೇ ಅಭ್ಯಾಸ ಮಾಡುವುದರಿಂದ ಹಲವು ರೀತಿಯ ಲಾಭಗಳಿವೆ.
  • ಮೊದಲಿಗೆ, ಶರೀರ ಬಿಗಿಯದಂತೆ ಹಗುರವಾಗಿ ಇರಿಸಿಕೊಳ್ಳಬಹುದು. ಹೆರಿಗೆಯ ಸಂದರ್ಭದಲ್ಲಿ ಇದು ಅತಿ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ.
  • ಪ್ರಾಣಾಯಾಮ, ಧ್ಯಾನದ ಜೊತೆಗೆ ಯೋಗವನ್ನು ಅಭ್ಯಾಸ ಮಾಡಿದಾಗ ಮನಸ್ಸನ್ನು ಶಾಂತವಾಗಿ ಇರಿಸಿಕೊಳ್ಳಲು, ಉದ್ವೇಗವನ್ನು ದೂರ ಮಾಡಲು ಸಾಧ್ಯ. ಅದರಲ್ಲೂ ದೀರ್ಘ ಉಸಿರಾಟದ ತಂತ್ರಗಳನ್ನು ಅಭ್ಯಾಸ ಮಾಡಿದರೆ, ಹೆರಿಗೆಯ ಸಮಯದಲ್ಲಿ ಅನುಕೂಲ ಹೆಚ್ಚು.
  • ಯೋಗಾಭ್ಯಾಸದಿಂದ ಬೆಳಗಿನ ತಳಮಳಗಳು, ಕಾಲಿನ ಸೆಳೆತ, ಪಾದಗಳು ಊದಿಕೊಳ್ಳುವುದು, ಕೀಲಿನಲ್ಲಿ ನೋವು, ಮಲಬದ್ಧತೆ ಮುಂತಾದ ಆರೋಗ್ಯದ ಕಿರಿಕಿರಗಳನ್ನು ನಿಭಾಯಿಸುವುದು ಕಷ್ಟವಾಗುವುದಿಲ್ಲ
  • ಗರ್ಭಾವಸ್ಥೆಯಲ್ಲಿ ಯೋಗಾಭ್ಯಾಸ ಮಾಡುವುದರಿಂದ ಹೆರಿಗೆಯ ನಂತರ ಶರೀರ ಬೇಗ ಮೊದಲಿನ ಸ್ಥಿತಿಗೆ ಬರುತ್ತದೆ.

ಯಾವ ಆಸನಗಳನ್ನು ಮಾಡಬಹುದು?

ಮೊದಲಿನ ಮೂರು ತಿಂಗಳು ನಿಂತು ಮಾಡುವ ಆಸನಗಳು ಬೇಕಾಗುತ್ತವೆ. ಇದರಿಂದ ಕಾಲುಗಳ ಶಕ್ತಿಯನ್ನು ಹೆಚ್ಚಿಸಬಹುದು. ಆದರೆ ಯಾವುದೇ ಸಂದರ್ಭದಲ್ಲಿ ಕಿಬ್ಬೊಟ್ಟೆಯ ಮೇಲೆ ಒತ್ತಡ ಬೀಳುವಂಥ ಭಂಗಿಗಳು ಗರ್ಭಿಣಿಯರಿಗೆ ಸೂಕ್ತವಲ್ಲ. ತಿರುಗುವ ಆಸನಗಳು ಶರೀರದ ಮೇಲಿನ ಭಾಗಗಳಿಗೇ ಹೊರತು ಕಿಬ್ಬೊಟ್ಟೆ ಮತ್ತು ಕಟಿಯ ಭಾಗಕ್ಕಲ್ಲ. ತಲೆಕೆಳಗು ಮಾಡುವ ಆಸನಗಳು ಸಹ ಗರ್ಭಿಣಿಯರಿಗೆ ಸಲ್ಲದು.

Beautiful pregnant woman doing prenatal yoga on nature outdoors.

ಯಾವುದು ಸೂಕ್ತ?

ವಜ್ರಾಸನ, ತಾಡಾಸನ, ಕೋನಾಸನ, ಬದ್ಧಕೋನಾಸನ, ವೀರಭದ್ರಾಸನ, ಮಾರ್ಜರಿಯಾಸನ, ಶವಾಸನ, ಯೋಗನಿದ್ರೆ ಮುಂತಾದವು ಗರ್ಭಿಣಿಯರಿಗೆ ಹಿತವಾದ ಭಂಗಿಗಳು.

ಯಾವುದು ಬೇಡ?

ನೌಕಾಸನ, ಚಕ್ರಾಸನ, ಅರ್ಧಮತ್ಸೇಂದ್ರಾನಸ, ಭುಜಂಗಾಸನ, ವಿಪರೀತ ಶಲಭಾಸನ, ಹಲಾಸನ, ಧನುರಾಸನ ಮುಂತಾದ ಕಟಿ, ಹೊಟ್ಟೆ, ಕಿಬ್ಬೊಟ್ಟೆಯ ಮೇಲೆ ಒತ್ತಡ ಬೀಳುವಂಥ ಯಾವ ಆಸನಗಳೂ ಸೂಕ್ತವಲ್ಲ.

Pranayama Yoga Poses For Bright And Glowing Skin

ಪ್ರಾಣಾಯಾಮ

ದೀರ್ಘ ಉಸಿರಾಟದಿಂದಲೂ ಬಹಳಷ್ಟು ಪ್ರಯೋಜನವಿದೆ ಭಾವೀ ತಾಯಂದಿರಿಗೆ. ಕಡೆಯ ಮೂರು ತಿಂಗಳುಗಳಲ್ಲಿ ದೀರ್ಘ ಉಸಿರಾಟದಿಂದ ಹೆಚ್ಚಿನ ಪ್ರಯೋಜನ ಕಾಣಬಹುದು. ಆದರೆ ಭಸ್ತ್ರಿಕಾ, ಕಪಾಲಭಾತಿಯಂಥ ಉಸಿರಾಟದ ಕ್ರಮಗಳನ್ನು ಈ ದಿನಗಳಲ್ಲಿ ಮಾಡದಿದ್ದರೆ ಒಳಿತು. ಬದಲಿಗೆ, ನಾಡಿಶೋಧನ ಮತ್ತು ಭ್ರಾಮರಿಯಂಥ ಪ್ರಾಣಾಯಾಮ, ಧ್ಯಾನ ಮುಂತಾದವು ಗರ್ಭಿಣಿಯರಿಗೆ ಸೂಕ್ತವಾದದ್ದು.

Pregnant young women doing prenatal yoga

ಎಚ್ಚರಿಕೆ ಬೇಕು

  • ಪ್ರೀನೇಟಲ್‌ ಯೋಗವನ್ನು ಅನುಭವಿಯಾದ ಮಾರ್ಗದರ್ಶಕರ ನೆರವಿನಿಂದಲೇ ಮಾಡುವುದು ಸರಿಯಾದ ಕ್ರಮ. ಜೊತೆಗೆ ಕೆಲವು ಎಚ್ಚರಿಕೆಗಳೂ ಬೇಕಾಗುತ್ತವೆ.
  • ಮೊದಲ ಮೂರು ತಿಂಗಳು ನಿಂತು ಮಾಡುವ ಆಸನಗಳು ಸೂಕ್ತ. ಇದರಿಂದ ಕಾಲುಗಳನ್ನು ಬಲಪಡಿಸಬಹುದು, ರಕ್ತ ಪರಿಚಲನೆ ಹೆಚ್ಚಿಸಬಹುದು ಮತ್ತು ಕಾಲು ಸೆಳೆತ ಕಡಿಮೆಯಾಗಬಹುದು
  • ಗರ್ಭಾವಸ್ಥೆಯ ನಡುವಿನ ಮೂರು ತಿಂಗಳಲ್ಲಿ ಆಯಾಸವಾಗದೆ ಎಷ್ಟು ಆಸನಗಳು ಸಾಧ್ಯವೋ ಅಷ್ಟೇ ಮಾಡಿ. ಆಸನಗಳಲ್ಲಿ ಹೆಚ್ಚು ಕಾಲ ತೊಡಗಿಸಿಕೊಳ್ಳಬೇಡಿ, ಬೇಗ ಮುಗಿಸಿ.
  • ಕಡೆಯ ಮೂರು ತಿಂಗಳಲ್ಲಿ ಆಸನಗಳಿಗಿಂತ ಧ್ಯಾನ ಮತ್ತು ಪ್ರಾಣಾಯಾಮದತ್ತ ಗಮನ ನೀಡಿ. ಉಸಿರಾಟವನ್ನು ಬಲಪಡಿಸಿಕೊಂಡು, ದೇಹಕ್ಕೆ ಹೆಚ್ಚಿನ ಆಮ್ಲಜನಕ ಒದಗಿಸುವುದು ಕಡೆಯ ದಿನಗಳಲ್ಲಿ ಅಗತ್ಯವಾಗುತ್ತದೆ.

ಇದನ್ನೂ ಓದಿ: International Yoga Day 2024: ಧ್ಯಾನ ಎಂದರೇನು? ಇದರಿಂದ ಏನೇನು ಪ್ರಯೋಜನ?

Continue Reading

ಆರೋಗ್ಯ

Period Pain Relief Food: ಪೀರಿಯಡ್‌ನ ನೋವು ನಿವಾರಣೆಗೆ ಈ ಆಹಾರಗಳು ಸೂಕ್ತ

ಋತುಚಕ್ರದ ಸಂದರ್ಭದಲ್ಲಿ ಕೈಕಾಲುಗಳಲ್ಲಿ ಸೆಳೆತ, ನೋವು, ಮೈಗ್ರೇನ್‌, ತಲೆಸುತ್ತು, ವಾಂತಿ, ಹೊಟ್ಟೆನೋವು ಇತ್ಯಾದಿಗಳು ಸಾಮಾನ್ಯ. ಕೆಲವು ನಿತ್ಯಜೀವನದ ಹಾಗೂ ಆಹಾರದ ಬದಲಾವಣೆಗಳು ಇಂಥ ಸಮಸ್ಯೆಯನ್ನು ಹತೋಟಿಗೆ ತರುತ್ತವೆ. ನೀವು ಕೆಲಸ ಮಾಡುವ ಮಹಿಳೆಯರಾದರೆ, ಈ ಸಂದರ್ಭ ನಿಮ್ಮಲ್ಲಿ ಹಲವರು ಹೇಳಿಕೊಳ್ಳಲಾಗದ ಸಮಸ್ಯೆಯಿಂದ ಒದ್ದಾಡುತ್ತಾರೆ. ಈ ಸಂದರ್ಭ ನಮ್ಮ ಅರೋಗ್ಯವನ್ನು ಕಾಪಾಡುವ ಇಂತಹ ನೋವಿನಿಂದ ಆರಾಮ ನೀಡುವ ಕೆಲವು ಆಹಾರಗಳನ್ನು (Period Pain Relief Food) ಸೇವಿಸುವ ಮೂಲಕ ಸಮಸ್ಯೆಯನ್ನು ಕೊಂಚ ಹತೋಟಿಯಲ್ಲಿಡಬಹುದು.

VISTARANEWS.COM


on

Period Pain Relief Food
Koo

ಹಲವು ಮಂದಿಗೆ ಪೀರಿಯಡ್‌ ಅಥವಾ ಋತುಚಕ್ರದ ಸಂದರ್ಭ ಕೈಕಾಲುಗಳಲ್ಲಿ ಸೆಳೆತ, ನೋವು, ಮೈಗ್ರೇನ್‌, ತಲೆಸುತ್ತು, ವಾಂತಿ, ಹೊಟ್ಟೆನೋವು ಇತ್ಯಾದಿಗಳು ಸಾಮಾನ್ಯ. ಕೆಲವು ನಿತ್ಯಜೀವನದ ಹಾಗೂ ಆಹಾರದ ಬದಲಾವಣೆಗಳು ಇಂಥ ಸಮಸ್ಯೆಯನ್ನು ಹತೋಟಿಗೆ ತರುತ್ತವೆ. ನೀವು ಕೆಲಸ ಮಾಡುವ ಮಹಿಳೆಯರಾದರೆ, ಈ ಸಂದರ್ಭ ನಿಮ್ಮಲ್ಲಿ ಹಲವರು ಹೇಳಿಕೊಳ್ಳಲಾಗದ ಸಮಸ್ಯೆಯಿಂದ ಒದ್ದಾಡುತ್ತಾರೆ. ಈ ಸಂದರ್ಭ ನಮ್ಮ ಅರೋಗ್ಯವನ್ನು ಕಾಪಾಡುವ ಇಂತಹ ನೋವಿನಿಂದ ಆರಾಮ ನೀಡುವ ಕೆಲವು ಆಹಾರಗಳನ್ನು ಸೇವಿಸುವ ಮೂಲಕ ಸಮಸ್ಯೆಯನ್ನು ಕೊಂಚ ಹತೋಟಿಯಲ್ಲಿಡಬಹುದು ಎಂಬುದನ್ನು ನೆನಪಿಡಿ. ನೈಸರ್ಗಿಕವಾದ ಉಪಾಯಗಳು ಎಂದಿಗೂ ವ್ಯತಿರಿಕ್ತ ಸಮಸ್ಯೆಗಳನ್ನು ಆಹ್ವಾನಿಸದು. ಬನ್ನಿ, ಯಾವೆಲ್ಲ ಆಹಾರಗಳು (Period Pain Relief Food) ಪೀರಿಯಡ್‌ ನೋವಿನಿಂದ, ಕೆಟ್ಟ ಮೂಡ್‌ನಿಂದ ನಿಮ್ಮನ್ನು ಬಚಾವು ಮಾಡುತ್ತವೆ ಎಂಬುದನ್ನು ನೋಡೋಣ.

raisins

ಒಣದ್ರಾಕ್ಷಿ ಸೇವಿಸಿ

ನಿಮ್ಮ ಋತುಚಕ್ರಕ್ಕೆ ಇನ್ನೊಂದು ವಾರವಿದೆ ಎನ್ನುವಾಗಲೇ, ಪ್ರತಿದಿನ ಬೆಳಗ್ಗೆ ನೆನೆಸಿದ ಒಣದ್ರಾಕ್ಷಿಯೊಂದಿಗೆ ಕೇಸರಿಯನ್ನು ಸೇವಿಸಲು ಆರಂಭಿಸಿ. ನಿಮ್ಮ ಪೀರಿಯಡ್‌ ಮುಗಿಯುವವರೆಗೂ ಇದನ್ನು ತಿನ್ನಿ.

fresh Sprouted matki in bowl , Sprouted moth

ಮೊಳಕೆ ಕಾಳು ಸೇವಿಸಿ

ನಿತ್ಯವೂ ಮೊಳಕೆ ಕಾಳುಗಳನ್ನು ಒಂದು ಹೊತ್ತು ತಿನ್ನಲು ಅಭ್ಯಾಸ ಮಾಡಿ. ನಿಮ್ಮ ಜೀರ್ಣಕ್ರಿಯೆ ಚೆನ್ನಾಗಿದ್ದರೆ ಹಸಿಯಾಗಿ ತಿನ್ನಬಹುದು. ಇಲ್ಲವಾದರೆ, ಕೊಂಚ ಬೇಯಿಸಿ ಮೊಳಕೆ ಕಾಳುಗಳನ್ನು ತಿನ್ನಿ. ಊಟದ ಜೊತೆಗೆ ಒಂದು ಭಾಗ ಮೊಳಕೆ ಕಾಳು ಇರಲಿ.

Tuber yam

ಗಡ್ಡೆಗೆಣಸುಗಳು ಸೂಕ್ತ

ಗಡ್ಡೆಗೆಣಸುಗಳನ್ನು ನಿತ್ಯಾಹಾರದಲ್ಲಿ ಸೇರಿಸಿ. ಒಂದೇ ಬಗೆಯ ತರಕಾರಿಗಳನ್ನು ತಿನ್ನುವುದರ ಬದಲಾಗಿ ಬಗೆಬಗೆಯ ತರಕಾರಿಗಳನ್ನು ನಿತ್ಯವೂ ತಿನ್ನಿ. ಸಿಹಿಗೆಣಸು, ಸುವರ್ಣಗೆಡ್ಡೆ, ಕೆಸುವಿನ ಗೆಡ್ಡೆ ಇತ್ಯಾದಿಗಳು ಅತ್ಯಂತ ಒಳ್ಳೆಯದು. ಆಗಾಗ ಇವು ನಿಮ್ಮ ಹೊಟ್ಟೆಗೆ ಸೇರುವಂತೆ ನೋಡಿಕೊಳ್ಳಿ.

ಕ್ಯಾಲ್ಶಿಯಂ ಮಾತ್ರೆ

ರಾತ್ರಿ ಮಲಗುವ ಮುನ್ನ ಕ್ಯಾಲ್ಶಿಯಂ ಮಾತ್ರೆಯನ್ನು ಸೇವಿಸಿ. ಪೀರಿಯಡ್‌ ಸಮಸ್ಯೆಯಿರುವ ಮಂದಿಗೆ ಕ್ಯಾಲ್ಶಿಯಂ ಬೇಕು. ಇದರ ಸಂಬಂಧವಾಘಿ ನಿಮ್ಮ ವೈದ್ಯರಲ್ಲೊಮ್ಮೆ ಸಲಹೆ ಪಡೆದುಕೊಂಡು ಮುಂದುವರಿಯಿರಿ. ಕ್ಯಾಲ್ಶಿಯಂ ಅಧಿಕವಾಗಿರುವ ಆಹಾರವನ್ನು ಸೇವಿಸುವುದನ್ನು ಅಭ್ಯಾಸ ಮಾಡಿಕೊಳ್ಳಿ.

It is rich in good fats Ghee Benefits

ತುಪ್ಪ ಸೇವಿಸಿ

ಪ್ರತಿ ದಿನ ಮಧ್ಯಾಹ್ನದೂಟದ ಸಂದರ್ಭ ಒಂದು ಚಮಚ ತುಪ್ಪವನ್ನು ಹಾಕಿ ಕಲಸಿಕೊಂಡು ಉಣ್ಣುವ ಅಭ್ಯಾಸ ಮಾಡಿಕೊಳ್ಳಿ. ಮಧ್ಯಾಹ್ನದೂಟ ಸಾಧ್ಯವಾಗದಿದ್ದರೆ, ಯಾವುದಾದರೊಂದು ಹೊತ್ತಿನಲ್ಲಿ ನಿತ್ಯವೂ ಒಂದು ಚಮಚ ತುಪ್ಪ ತಿನ್ನಿ. ತೂಕ ಹೆಚ್ಚಾಗುವ ಭಯ ಬೇಡ. ಒಂದು ಚಮಚ ತುಪ್ಪದಿಂದ ನಿಮ್ಮ ತೂಕ ಹೆಚ್ಚಾಗದು. ಬದಲಾಗಿ ಆರೋಗ್ಯ ವೃದ್ಧಿಸುತ್ತದೆ. ಪೀರಿಯಡ್‌ನ ಸಂದರ್ಭ ಆಗುವ ನೋವಿನಿಂದ ಆರಾಮವೂ ಸಿಗುತ್ತದೆ. ದೇಹಕ್ಕೆ ಬೇಕಾದ ಹಲವು ಪೋಷಕಾಂಶಗಳೂ, ಒಳ್ಳೆಯ ಕೊಬ್ಬೂ ಇದರಲ್ಲಿರುವುದರಿಂದ ತುಪ್ಪವನ್ನು ನಿಮ್ಮ ನಿತ್ಯಾಹಾರದಿಂದ ಯಾವತ್ತೂ ದೂರವಿರಿಸಬೇಡಿ. ಆದರೆ, ಅತಿಯಾಗದಿರಲಿ.

Spicy foods Foods To Avoid Eating With Tea

ಮಸಾಲೆಯುಕ್ತ ಆಹಾರ ಬೇಡ

ಪೀರಿಯಡ್‌ ಸಂದರ್ಭ ಹೆಚ್ಚು ಮಸಾಲೆಯುಕ್ತ ಆಹಾರಗಳ ಮೊರೆ ಹೋಗಬೇಡಿ. ದೇಹಕ್ಕೆ ಆದಷ್ಟೂ ಸರಳವಾದ ಪೋಷಕಾಂಶಯುಕ್ತ ಆಹಾರ ದೊರಕಲಿ. ಮೊಸರನ್ನದಂತಹ ಆಹಾರವಾದರೆ ಉತ್ತಮ. ಮೊಸರನ್ನು ಮಾಡುವಾಗ ಒಂದಿಷ್ಟು ಮೊಳಕೆ ಕಾಳುಗಳು, ಸೌತೆಕಾಯಿ, ಈರುಳ್ಳಿ, ಶುಂಠಿ, ದಾಳಿಂಬೆ ಇತ್ಯಾದಿಗಳನ್ನು ಸೇರಿಸಿ. ಒಗ್ಗರಣೆ ಹಾಕಿ. ರುಚಿಯಷ್ಟೇ ಅಲ್ಲ, ದೇಹ ತಂಪಾಗಿಯೂ ಇರುತ್ತದೆ. ಪೀರಿಯಡ್‌ ನೋವು ಹೆಚ್ಚಾಗಿ ಬಾಧಿಸುವುದಿಲ್ಲ. ಜೊತೆಗೆ ಯಾವ ಬಗೆಯ ಕೆಟ್ಟ ಪರಿಣಾಮವನ್ನೂ ಇದು ಉಂಟುಮಾಡದು.

ಇದನ್ನೂ ಓದಿ: Allergic Asthma: ಅಸ್ತಮಾ ಹೊಂದಿರುವ ವ್ಯಕ್ತಿಗಳು ಈ ಅಲರ್ಜಿಗಳಿಂದ ದೂರವಿರಬೇಕು

ಬೀಜಗಳು ಸೂಕ್ತ

ಪೀರಿಯಡ್‌ ಸಮಯದಲ್ಲಿ ನೋವು ಆರಂಭವಾದರೆ, ನೀವು ಒಂದಿಷ್ಟು ಬೀಜಗಳನ್ನು ಟ್ರೈ ಮಾಡಬಹುದು. ಆಫೀಸಿಗೆ ಹಗುವಾಗ ಅಥವಾ ಕೆಲಸ ಮಾಡುವ ಜಾಗದಲ್ಲಿ ನಿಮ್ಮ ಜೊತೆ ಒಂದು ಡಬ್ಬದಲ್ಲಿ ಒಂದಿಷ್ಟು ನೆಲಗಡಲೆ ಅಥವಾ ಗೋಡಂಬಿ ಇಟ್ಟುಕೊಳ್ಳಿ, ಸ್ನ್ಯಾಕ್‌ ಟೈಮ್‌ ಅಥವಾ ಊಟದ ಮಧ್ಯದ ಬ್ರೇಕ್‌ನಲ್ಲಿ, ಹಸಿವಾದಾಗ ಇವನ್ನು ತಿನ್ನಿ. ಇದರ ಜೊತೆಗೆ ಒಂದು ತುಂಡು ಬೆಲ್ಲವನ್ನೂ ತಿನ್ನಿ. ಇದು ನಿಮ್ಮ ಕೆಟ್ಟ ಮೂಡನ್ನೂ ಸರಿ ಮಾಡುತ್ತವೆ. ಸಿಹಿ ತಿನ್ನಬೇಕೆಂಬ ಆಸೆಯನ್ನೂ ಹತ್ತಿಕ್ಕುತ್ತದೆ.

ಖಿಚಡಿ ಅಥವಾ ರಾಗಿ

ಮೊಸರನ್ನ ಬಿಟ್ಟರೆ ಖಿಚಡಿ ಅಥವಾ ರಾಗಿಯೂ ಒಳ್ಳೆಯೂ ಒಳ್ಳೆಯದು. ರಾಗಿ ದೋಸೆ, ರಾಗಿ ರೊಟ್ಟಿ, ಹೆಸರು ಬೇಳೆ ದೋಸೆ ಇತ್ಯಾದಿಗಳನ್ನು ಮಾಡಬಹುದು. ಖಿಚಡಿಯನ್ನೂ ಮಾಡಿಕೊಂಡು ತಿನ್ನಬಹುದು.

Continue Reading

ಆರೋಗ್ಯ

Betel Leaves Health Benefits: ರಾತ್ರಿ ಊಟದ ಬಳಿಕ ವೀಳ್ಯದೆಲೆ ಸೇವನೆ ಆರೋಗ್ಯಕ್ಕೆ ಉತ್ತಮ

ನಮ್ಮ ಹಿರಿಯರು ಊಟದ ಬಳಿಕ ವೀಳ್ಯದೆಲೆ, ಅಡಿಕೆ ಸೇವಿಸುವ ಅಭ್ಯಾಸ ಮಾಡಿಕೊಂಡಿದ್ದರು. ಆದರೆ ಇದು ಅನೇಕ ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ ಎನ್ನುವುದನ್ನು ಆಯುರ್ವೇದ ಹೇಳುತ್ತದೆ. ಭಾರತೀಯ ಸಂಸ್ಕೃತಿಯಲ್ಲಿ ಬಹುಮಾನ್ಯತೆ ಪಡೆದಿರುವ ವೀಳ್ಯದೆಯನ್ನು (Betel Leaves Health Benefits) ರಾತ್ರಿ ಊಟದ ಬಳಿಕ ಸೇವಿಸುವುದು ದೇಹಕ್ಕೆ ಅನೇಕ ಪ್ರಯೋಜನಗಳನ್ನು ಹೊಂದಿದೆ.

VISTARANEWS.COM


on

By

Betel leaves health benefits
Koo

ಭಾರತೀಯ ಸಂಸ್ಕೃತಿಯಲ್ಲಿ (Indian culture) ವೀಳ್ಯದೆಲೆಗೆ (betel leaves) ಬಹುಮಾನ್ಯತೆ ನೀಡಲಾಗುತ್ತದೆ. ಪ್ರತಿಯೊಂದು ಶಾಸ್ತ್ರ, ಸಂಪ್ರದಾಯಗಳಲ್ಲಿ ವೀಳ್ಯದೆಲೆ ಅಡಿಕೆಯನ್ನು ನೀಡಿ ಗೌರವಿಸುವ ಸಂಸ್ಕೃತಿ ನಮ್ಮದಾಗಿದೆ. ಆಯುರ್ವೇದದಲ್ಲೂ ವೀಳ್ಯದೆಲೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ರಾತ್ರಿ ಭೋಜನದ (dinner) ಬಳಿಕ ವೀಳ್ಯದೆಲೆ (Betel Leaves Health Benefits) ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ.

ಊಟದ ಬಳಿಕ ವೀಳ್ಯದೆಲೆ, ಅಡಿಕೆ ಜಗಿಯುವ ನಮ್ಮ ಹಿರಿಯರ ಅಭ್ಯಾಸವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿರುವುದಾಗಿ ಆಯುರ್ವೇದದಲ್ಲಿ ಹೇಳಲಾಗಿದೆ. ಆದರೆ ಈಗ ಇದು ಕಡಿಮೆಯಾಗಿ ವಿವಿಧ ಮಸಾಲೆಗಳನ್ನು ಸೇರಿಸಿ ತಯಾರಿಸುವ ಪಾನ್ ಹೆಚ್ಚು ಜನಪ್ರಿಯತೆ ಪಡೆದಿದೆ.

ವೀಳ್ಯದೆಲೆಗಳು ಆರೋಗ್ಯಕರ ಜೀರ್ಣಕಾರಿ ವ್ಯವಸ್ಥೆಯನ್ನು ಉತ್ತೇಜಿಸುವುದು, ಬಾಯಿಯ ನೈರ್ಮಲ್ಯ, ಕರುಳಿನ ಆರೋಗ್ಯವನ್ನೂ ಕಾಪಾಡುತ್ತದೆ. ರಾತ್ರಿ ಊಟದ ಬಳಿಕ ವೀಳ್ಯದೆಲೆಗಳನ್ನು ಸೇವಿಸುವುದು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.


ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ

ಜೀರ್ಣಕಾರಿ ಸಮಸ್ಯೆಗಳಿಂದ ಬಳಲುವವರು ಉತ್ತಮ ಜೀರ್ಣಕ್ರಿಯೆಗಾಗಿ ರಾತ್ರಿಯ ಆಹಾರದ ಬಳಿಕ ಒಂದು ವೀಳ್ಯದೆಲೆಯನ್ನು ಜಗಿಯುವ ಅಭ್ಯಾಸ ಒಳ್ಳೆಯದು. ಇದರಲ್ಲಿರುವ ರಸ ಜೀರ್ಣಕಾರಿ ಕಿಣ್ವಗಳ ಬಿಡುಗಡೆಯನ್ನು ಉತ್ತೇಜಿಸುತ್ತದೆ. ಇದರಿಂದ ಜೀರ್ಣಕ್ರಿಯೆಗೆ ಉತ್ತೇಜನ ಸಿಗುತ್ತದೆ. ಹೊಟ್ಟೆ ಉಬ್ಬರ, ಅಸಿಡಿಟಿ ತೊಂದರೆಯಂತಹ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ.

ಬಾಯಿಯ ಅರೋಗ್ಯ ಕಾಪಾಡುತ್ತದೆ

ವೀಳ್ಯದೆಲೆಗಳು ಆಂಟಿಬ್ಯಾಕ್ಟೀರಿಯಲ್ ಗುಣಲಕ್ಷಣವನ್ನು ಹೊಂದಿದೆ. ಇದು ಬಾಯಿಯ ಸೋಂಕುಗಳನ್ನು ಎದುರಿಸಲು ಮತ್ತು ನಿರ್ವಹಿಸಲು ಸಹಾಯ ಮಾಡುತ್ತದೆ.

ಬಾಯಿ ಸ್ವಚ್ಛತೆ

ಆಯುರ್ವೇದದ ಪ್ರಕಾರ ಭೋಜನದ ಬಳಿಕ ವೀಳ್ಯದೆಲೆ ಜಗಿಯುವುದು ಬಾಯಿಯ ದುರ್ಗಂಧವನ್ನು ಹೋಗಲಾಡಿಸುತ್ತದೆ. ಹಲ್ಲಿನಲ್ಲಿ ಕುಳಿಗಳಾಗುವುದು, ಒಸಡು ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.

ಒತ್ತಡ, ಆತಂಕ ನಿವಾರಣೆ

ಒತ್ತಡ, ಆತಂಕದ ಸಮಸ್ಯೆ ಇದ್ದಾರೆ ರಾತ್ರಿ ಊಟದ ಬಳಿಕ ವೀಳ್ಯದೆಲೆ ಸೇವನೆ ಒಳ್ಳೆಯದು. ಆಯುರ್ವೇದದ ಪ್ರಕಾರ ವೀಳ್ಯದೆಲೆಗಳು ಮನಸ್ಸು ಮತ್ತು ದೇಹವನ್ನು ಶಾಂತಗೊಳಿಸುವ ಪರಿಣಾಮಗಳನ್ನು ಬೀರುವ ಕೆಲವು ಸಂಯುಕ್ತಗಳನ್ನು ಹೊಂದಿದೆ. ಇದು ನರಮಂಡಲಕ್ಕೆ ವಿಶ್ರಾಂತಿಯನ್ನು ನೀಡಿ ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಮತ್ತು ಉತ್ತಮ ನಿದ್ರೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.


ದೇಹದಿಂದ ವಿಷವನ್ನು ಹೊರಹಾಕುತ್ತದೆ

ಆಯುರ್ವೇದದಲ್ಲಿ ವೀಳ್ಯದೆಲೆಗಳು ವಿಷ ಹೊರತೆಗೆಯುವ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ರಾತ್ರಿಯಲ್ಲಿ ವೀಳ್ಯದೆಲೆ ಸೇವನೆ ನೈಸರ್ಗಿಕವಾಗಿ ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ.

ಉಸಿರಾಟ ಸಮಸ್ಯೆ ನಿವಾರಿಸುತ್ತದೆ

ವೀಳ್ಯದೆಲೆಗಳು ಉಸಿರಾಟ ತೊಂದರೆಯನ್ನು ನಿವಾರಿಸುತ್ತದೆ. ಉಸಿರಾಟದ ತೊಂದರೆ ಉಂಟು ಮಾಡುವ ಗುಣಲಕ್ಷಣಗಳನ್ನು ಸಂಪೂರ್ಣವಾಗಿ ತೊಡೆದು ಹಾಕುತ್ತದೆ.

ಕೆಮ್ಮು ನಿವಾರಣೆ

ಕೆಮ್ಮಿಗೆ ವೀಳ್ಯದೆಲೆ ಅತ್ಯತ್ತಮ ಔಷಧ. ವೀಳ್ಯದೆಲೆಗಳು ಗಂಟಲು ಮತ್ತು ಉಸಿರಾಟದ ಹಾದಿಯಲ್ಲಿರುವ ತೊಂದರೆಗಳನ್ನು ನಿವಾರಿಸುತ್ತದೆ.

ಇದನ್ನೂ ಓದಿ: Junk Food Side Effects: ಗೇಮಿಂಗ್‌ ದಾಸರಾದ ಮಕ್ಕಳು ಜಂಕ್‌ ಫುಡ್‌ ವ್ಯಸನಿಗಳಾಗುವ ಸಂಭವ ಹೆಚ್ಚು!

ಆರೋಗ್ಯಕರ ಚಯಾಪಚಯಕ್ಕೆ ಉತ್ತೇಜನ

ದೇಹದ ತೂಕ ಮತ್ತು ಶಕ್ತಿಯ ಮಟ್ಟವನ್ನು ಕಾಪಾಡಿಕೊಳ್ಳಲು ಆರೋಗ್ಯಕರ ಚಯಾಪಚಯವು ನಿರ್ಣಾಯಕವಾಗಿದೆ. ವೀಳ್ಯದೆಲೆಯೂ ಈ ನಿಟ್ಟಿನಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ರಾತ್ರಿ ಊಟದ ಬಳಿಕ ವೀಳ್ಯದೆಲೆಗಳನ್ನು ಸೇವಿಸುವುದು ಚಯಾಪಚಯವನ್ನು ಹೆಚ್ಚಿಸುತ್ತದೆ. ಆಯುರ್ವೇದದ ಪ್ರಕಾರ ಉತ್ತಮ ಪೋಷಕಾಂಶಗಳ ಹೀರಿಕೊಳ್ಳುವಿಕೆ ಮತ್ತು ಶಕ್ತಿಯ ಉತ್ಪಾದನೆಗೆ ಇದು ಸಹಾಯ ಮಾಡುತ್ತದೆ.

ಮೂರು ದೋಷ ನಿವಾರಣೆ

ಆಯುರ್ವೇದದ ಪ್ರಕಾರ ಮೂರು ದೋಷಗಳಾದ ವಾತಾ, ಪಿತ್ತ ಮತ್ತು ಕಫದಲ್ಲಿನ ಅಸಮತೋಲನವು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಮುಖ್ಯ ಕಾರಣವಾಗಿರುತ್ತದೆ. ರಾತ್ರಿಯಲ್ಲಿ ವೀಳ್ಯದೆಲೆ ಸೇವಿಸುವುದು ಈ ಮೂರು ಪ್ರಮುಖ ದೋಷಗಳನ್ನು ಸಮತೋಲನಗೊಳಿಸಲು ಮತ್ತು ದೇಹದೊಳಗೆ ಸಾಮರಸ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

Continue Reading

ಆರೋಗ್ಯ

International Yoga Day 2024: ಧ್ಯಾನ ಎಂದರೇನು? ಇದರಿಂದ ಏನೇನು ಪ್ರಯೋಜನ?

ಬದುಕಿನ ಸ್ವಾಸ್ಥ್ಯ ವೃದ್ಧಿಗೆ ಹಾಗೂ 2024 ಒತ್ತಡ ನಿವಾರಣೆಗೆ ವ್ಯಾಪಕವಾಗಿ ವಿಶ್ವದೆಲ್ಲೆಡೆ ಚಿಕಿತ್ಸೆಯ ರೂಪದಲ್ಲಿ ಬಳಕೆಯಾಗುತ್ತಿರುವ ಕ್ರಮವೆಂದರೆ ಧ್ಯಾನ. ಕಣ್ಣು ಮುಚ್ಚಿ ಒಳ ಹೋಗುವ ಈ ಕ್ರಿಯೆಗೆ ಹೊರಗಿನಿಂದ ವಿಮುಖರಾಗುವುದು ಅಗತ್ಯವೇ? ಇಂದಿನ ದಿನಗಳಲ್ಲಿ ಇದಕ್ಕೆ ಏಕಿಷ್ಟು ಮಹತ್ವ ದೊರೆತಿದೆ- ಇತ್ಯಾದಿ ಪ್ರಶ್ನೆಗಳಿಗೆ ಸಮಾಧಾನವನ್ನು ಶೋಧಿಸುವ ಪ್ರಯತ್ನವಿದು. ಧ್ಯಾನವೆಂದರೆ ಆಳವಾದ ವಿಶ್ರಾಂತಿ ಮತ್ತು ಜಾಗೃತ ಸ್ಥಿತಿ- ಈ ಎರಡನ್ನೂ ಒಂದೇ ಸಮಯಕ್ಕೆ ಏಕತ್ರಗೊಳಿಸಿದ ಸ್ಥಿತಿ! ಈ ಕುರಿತ (International Yoga Day) ವಿವರ ಇಲ್ಲಿದೆ.

VISTARANEWS.COM


on

International Yoga Day 2024
Koo

ಧ್ಯಾನ ಎನ್ನುತ್ತಿದ್ದಂತೆ ನಾನಾ (International Yoga Day) ಬಗೆಯ ಚಿತ್ರಗಳು ಮನಸ್ಸಿಗೆ ಬರುತ್ತವೆ. ಯಾರೋ ತಪಸ್ಸು ಮಾಡುವುದು, ಗಡ್ಡ ಬಿಟ್ಟುಕೊಂಡು ವೃಕ್ಷಾಸನದಲ್ಲಿ ನಿಂತಿರುವುದು, ಚಿನ್ಮುದ್ರೆ ಹಿಡಿದು ಕಣ್ಣು ಮುಚ್ಚಿ ಕೂತವರು… ಅವರವರ ಭಾವಕ್ಕೆ ತಕ್ಕಂತೆ ಭಿತ್ತಿಗಳು ಮೂಡುತ್ತವೆ. ಧ್ಯಾನ ಅಥವಾ ಮೆಡಿಟೇಶನ್‌ ಮಾಡುವುದೆಂದರೆ ಕಣ್ಣು ಮುಚ್ಚಿಕೊಂಡು, ಒಳ ಮನದಲ್ಲಿ ಲೋಕದ ವ್ಯವಹಾರವನ್ನೆಲ್ಲ ಚಿಂತಿಸುವುದು ಹೆಚ್ಚಿನವರ ಕ್ರಮ! ಬದುಕಿನ ಸ್ವಾಸ್ಥ್ಯ ವೃದ್ಧಿಗೆ ಹಾಗೂ ಒತ್ತಡ ನಿವಾರಣೆಗೆ ವ್ಯಾಪಕವಾಗಿ ವಿಶ್ವದೆಲ್ಲೆಡೆ ಚಿಕಿತ್ಸೆಯ ರೂಪದಲ್ಲಿ ಬಳಕೆಯಾಗುತ್ತಿರುವ ಕ್ರಮವಿದು. ಕಣ್ಣು ಮುಚ್ಚಿ ಒಳ ಹೋಗುವ ಈ ಕ್ರಿಯೆಗೆ ಹೊರಗಿನಿಂದ ವಿಮುಖರಾಗುವುದು ಅಗತ್ಯವೇ? ಇಂದಿನ ದಿನಗಳಲ್ಲಿ ಇದಕ್ಕೆ ಏಕಿಷ್ಟು ಮಹತ್ವ ದೊರೆತಿದೆ- ಇತ್ಯಾದಿ ಪ್ರಶ್ನೆಗಳಿಗೆ ಸಮಾಧಾನವನ್ನು ಶೋಧಿಸುವ ಪ್ರಯತ್ನವಿದು.

Why Yoga Day is celebrated internationally,
International Yoga Day

ಧ್ಯಾನವೆಂದರೆ ಏನು?

ಹಾಗೆಂದರೆ ಆಳವಾದ ವಿಶ್ರಾಂತಿ ಮತ್ತು ಜಾಗೃತ ಸ್ಥಿತಿ- ಈ ಎರಡನ್ನೂ ಒಂದೇ ಸಮಯಕ್ಕೆ ಏಕತ್ರಗೊಳಿಸಿದ ಸ್ಥಿತಿ! ಇದು ಋಷಿ-ಮುನಿಗಳಿಗೆ ಮಾತ್ರವೇ ಹೊಂದುವಂಥದ್ದು ಎಂಬ ತೀರ್ಮಾನಕ್ಕೆ ಈಗಲೇ ಬರಬೇಡಿ. ಸರಳವಾಗಿ ಹೇಳುವುದಾದರೆ, ಕುದಿಯುತ್ತಿರುವ ಮೈ-ಮನಗಳನ್ನು ಶಾಂತಗೊಳಿಸಿ, ನಮ್ಮೊಳಗಿನ ಉಲ್ಲಾಸವನ್ನು ಎಚ್ಚರಿಸುವ ಕ್ರಿಯೆಯಿದು. ಏನನ್ನೂ ಮಾಡದೆ, ಅಂದರೆ ಮೆದುಳಿಗೂ ಕೆಲಸ ನೀಡದೆ, ಎಲ್ಲವನ್ನೂ ಬಿಟ್ಟು ಆಳವಾದ ವಿಶ್ರಾಂತಿಗೆ ಜಾರುವುದು, ಆದರೆ ನಿದ್ದೆ ಮಾಡದೆ ಜಾಗೃತ ಅವಸ್ಥೆಯಲ್ಲೇ ಇರುವುದು ಈ ಕ್ರಮದ ಮುಖ್ಯವಾದ ಅಂಗ. ದೇಹಕ್ಕೆ ಆಹಾರ ನೀಡಿದಂತೆ ಮನಸ್ಸಿಗೂ ಗ್ರಾಸ ಬೇಡವೇ?

ಏಕೆ ಮಾಡಬೇಕು?

ಬದುಕಿನ ಇನ್ನೊಂದು ಹೆಸರೇ ಒತ್ತಡ ಎನ್ನುವಂತಿರುವಾಗ, ಈ ಚಕ್ರವ್ಯೂಹದಿಂದ ಹೊರಬರುವುದು ಹೇಗೆ? ಹೊರಗಿನ ಗದ್ದಲದಲ್ಲಿ ಆಂತರ್ಯದ ದನಿಯನ್ನು ಕೇಳುವುದು ಹೇಗೆ? ನೂರೆಂಟು ಗೋಜಲುಗಳ ನಡುವೆ ನಮಗೆ ಬೇಕಾದ್ದಕ್ಕೆ ಗಮನ ಕೊಡುವುದು ಸಾಧ್ಯವೇ? ಯಶಸ್ಸಿನ ಹಿಂದೆ ಓಡುವಾಗ ನಮ್ಮ ಕೈಗೆ ದೊರೆಯುತ್ತಿರುವುದೇನು ಎಂಬ ಗಮನವಾದರೂ ಇದೆಯೇ ನಮಗೆ? ಹಾಳಾಗುತ್ತಿರುವ ಆರೋಗ್ಯವನ್ನು ಮಾತ್ರೆಗಳು ಮಾತ್ರವೇ ಸರಿ ಮಾಡಿಯಾವೇ? ಇವಕ್ಕೆಲ್ಲ ಉತ್ತರ ಹುಡುಕಬೇಕೆಂದರೆ ಮೊದಲು ಮನಸ್ಸು ಶಾಂತವಾಗಬೇಕು. ಉದ್ರಿಕ್ತ ಮನದಿಂದ ಉತ್ತರ ಹುಡುಕಲು ಸಾಧ್ಯವಿಲ್ಲ. ಮೊದಲು ಮನಸ್ಸಿಗೆ ಸಮಾಧಾನ ದೊರೆತ ಮೇಲಷ್ಟೇ ಪ್ರಶ್ನೆಗಳಿಗೆ ಸಮಾಧಾನ ದೊರೆಯುವುದಕ್ಕೆ ಸಾಧ್ಯ. ಈಗ ನೀವೆ ಹೇಳಿ, ಧ್ಯಾನವನ್ನು ಏಕೆ ಮಾಡಬೇಕು?

ಇದನ್ನೂ ಓದಿ: Allergic Asthma: ಅಸ್ತಮಾ ಹೊಂದಿರುವ ವ್ಯಕ್ತಿಗಳು ಈ ಅಲರ್ಜಿಗಳಿಂದ ದೂರವಿರಬೇಕು

ಲಾಭಗಳೇನು?

  • ಎಲ್ಲಕ್ಕಿಂತ ಮೊದಲು ನಮಗೆ ಅರಿವಿಗೆ ಬರುವ ಪ್ರಯೋಜನವೆಂದರೆ ಶರೀರದ ಚೈತನ್ಯ ಹೆಚ್ಚುವುದು. ನಮ್ಮ ಆಲೋಚನೆ, ಕ್ರಿಯೆ ಮತ್ತು ಉಸಿರಾಟಕ್ಕೂ ನಮ್ಮಲ್ಲಿ ಪ್ರವಹಿಸುವ ಚೈತನ್ಯಕ್ಕೂ ಗಾಢವಾದ ನಂಟಿದೆ. ಈ ಚೈತನ್ಯವೇ ನಮ್ಮಲ್ಲಿ ಧನಾತ್ಮಕ ಆಲೋಚನೆಗಳನ್ನು ಉಂಟು ಮಾಡುವುದು.
  • ಎರಡನೆಯ ಪ್ರಯೋಜನವೆಂದರೆ ನಮ್ಮ ಆರೋಗ್ಯದಲ್ಲಿನ ಸುಧಾರಣೆ. ಅಂದರೆ ರಕ್ತದೊತ್ತಡ, ಮಧುಮೇಹ, ಹೃದಯದ ತೊಂದರೆಗಳು, ಜೀರ್ಣಾಂಗದ ಸಮಸ್ಯೆಗಳು, ಚರ್ಮದ ತೊಂದರೆಗಳು ಮುಂತಾದ ಹಲವಾರು ಸಮಸ್ಯೆಗಳಿಗೆ ಮನಸ್ಸನ್ನು ಶಾಂತವಾಗಿ ಇರಿಸಿಕೊಳ್ಳುವುದು ಪ್ರಬಲ ಔಷಧಿಯಾಗಿ ಕೆಲಸ ಮಾಡುತ್ತದೆ.
  • ಮೂರನೆಯದಾಗಿ, ದೇಹ ಮತ್ತು ಮನಸ್ಸುಗಳ ವಿಕಾರಗಳನ್ನು ಮಟ್ಟ ಹಾಕಲು ಇದು ಅಗತ್ಯ. ಬೇಡದ ಆಲೋಚನೆಗಳನ್ನು ತಡೆಯುತ್ತಿದ್ದಂತೆ ನಿದ್ದೆ ಸುಲಲಿತವಾಗಿ ಬರುತ್ತದೆ. ನಿದ್ರಾಹೀನತೆಯಿಂದ ದಾಂಗುಡಿ ಇಡುವ ಲೆಕ್ಕವಿಲ್ಲದಷ್ಟು ಸಮಸ್ಯೆಗಳನ್ನು ದೂರ ಇರಿಸಬಹುದು.
  • ಇವೆಲ್ಲ ಕಣ್ಣಮುಂದೆ ಕಾಣುವಂಥ ಪ್ರಯೋಜನಗಳು. ಅದಲ್ಲದೆ, ಮಾನಸಿಕ ಏಕಾಗ್ರತೆ, ನೆನಪಿನ ಶಕ್ತಿ ಹೆಚ್ಚಳ, ವಿವೇಕ ಜಾಗ್ರತೆಯಾಗುವುದು, ಯೋಚನೆಯಲ್ಲಿ ಸ್ಪಷ್ಟತೆ, ಗೊಂದಲ ದೂರವಾಗುವುದು, ಒತ್ತಡ ನಿವಾರಣೆ, ಸಂವಹನದಲ್ಲಿ ಸ್ಪಷ್ಟತೆ, ಹೊಸ ಆಲೋಚನೆಗಳು ಹುಟ್ಟುವುದು, ಕಲಿಯುವಲ್ಲಿನ ಚುರುಕುತನ, ಆತ್ಮವಿಶ್ವಾಸ ವೃದ್ಧಿ, ನಿರುಮ್ಮಳತೆ- ಇವೆಲ್ಲ ನಮ್ಮ ಮಾನಸಿಕ ಸ್ಥಿತಿ ಸುಧಾರಿಸಿದ್ದರಿಂದ ಆಗುವ ನೇರ ಪ್ರಯೋಜನಗಳು. ಧ್ಯಾನಸ್ಥರಾಗಿ ಕೂರುವುದಕ್ಕೆ ಇದಕ್ಕಿಂತ ಹೆಚ್ಚಿನ ಕಾರಣಗಳು ಬೇಕೆ?
Continue Reading
Advertisement
Siddaramaiah
ಸಂಪಾದಕೀಯ16 mins ago

ವಿಸ್ತಾರ ಸಂಪಾದಕೀಯ: ಬೆಲೆ ಏರಿಕೆ ಮಾಡುವುದೇ ರಾಜ್ಯ ಸರ್ಕಾರದ 6ನೇ ‘ಗ್ಯಾರಂಟಿ’ ಆಗದಿರಲಿ!

International Yoga Day 2024
ಆರೋಗ್ಯ17 mins ago

International Yoga Day 2024: ಗರ್ಭಿಣಿಯರೂ ಯೋಗ ಮಾಡಬಹುದೇ? ಯಾವ ಆಸನಗಳು ಸೂಕ್ತ?

Dina Bhavishya
ಭವಿಷ್ಯ1 hour ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಕುಟುಂಬ ಸದಸ್ಯರಿಂದ ಸಿಗಲಿದೆ ಬೆಂಬಲ

Teachers Transfer
ಪ್ರಮುಖ ಸುದ್ದಿ7 hours ago

Teachers Transfer: ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ; ಕಡ್ಡಾಯ, ಹೆಚ್ಚುವರಿ‌ ಟ್ರಾನ್ಸ್‌ಫರ್ ಇಲ್ಲ, ಕೋರಿಕೆ ವರ್ಗ ಮಾತ್ರ

T20 World Cup 2024
T20 ವಿಶ್ವಕಪ್8 hours ago

T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

Hiriya vidwamsa Sagri Raghavendra Upadhyaya passed away
ಶ್ರದ್ಧಾಂಜಲಿ9 hours ago

Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

Government has no money to clean tankers no ability to provide clean drinking water says R Ashok
ಪ್ರಮುಖ ಸುದ್ದಿ9 hours ago

R Ashok: ಟ್ಯಾಂಕರ್ ಸ್ವಚ್ಛಗೊಳಿಸಲೂ ಸಿದ್ದು ಸರ್ಕಾರದ ಬಳಿ ಹಣವಿಲ್ಲ; ಆರ್. ಅಶೋಕ್‌ ಆಕ್ರೋಶ

Union Minister Pralhad Joshi statement about increase in petrol and diesel prices in the state
ಕರ್ನಾಟಕ9 hours ago

Pralhad Joshi: ತೈಲ ಬೆಲೆ ಏರಿಸಿ ಕರ್ನಾಟಕದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ

Bribe Case
ಕ್ರೈಂ9 hours ago

Bribe Case: ಕಸ ಗುಡಿಸುತ್ತಲೇ ಉನ್ನತ ಹುದ್ದೆಗೇರಿದ್ದ ಮಹಿಳೆ ಕಸ ಗುಡಿಸುವವರಿಂದಲೇ ಲಂಚ ಸ್ವೀಕರಿಸುವಾಗ ಬಂಧನ!

Minister dr G Parameshwar inaugurated the hasiru grama programme in Koratagere
ತುಮಕೂರು10 hours ago

Koratagere News: ಹಸಿರೇ ಉಸಿರು, ಹಸಿರಿದ್ದೆಡೆ ಮಾನವನ ಸರ್ವಾಂಗಿಣ ಪ್ರಗತಿ: ಸಚಿವ ಜಿ. ಪರಮೇಶ್ವರ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ16 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌