Acid Reflux: ನಿಮಗೆ ಗೊತ್ತಿರಲಿ, ಚಳಿಗಾಲಕ್ಕೂ ಹುಳಿತೇಗಿಗೂ ಇದೆ ಸಂಬಂಧ! - Vistara News

ಆರೋಗ್ಯ

Acid Reflux: ನಿಮಗೆ ಗೊತ್ತಿರಲಿ, ಚಳಿಗಾಲಕ್ಕೂ ಹುಳಿತೇಗಿಗೂ ಇದೆ ಸಂಬಂಧ!

ಚಳಿಯೆಂದು ಹೆಚ್ಚು ಬಿಸಿಯಿರುವ ಆಹಾರ ಸೇವಿಸಿ, ಖಾರದ ಮತ್ತು ಮಸಾಲೆಯುಕ್ತ ತಿನಿಸುಗಳನ್ನು ತಿನ್ನುವುದರಿಂದ ಹೊಟ್ಟೆಯ ತೊಂದರೆ (Acid reflux) ತಾರಕಕ್ಕೇರುತ್ತದೆ. ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವುದರಿಂದ ಹುಳಿತೇಗಿನ ಸಮಸ್ಯೆಯನ್ನು ತಹಬಂದಿಗೆ ತರಬಹುದು.

VISTARANEWS.COM


on

Acid Reflux
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಳಿಗಾಲದಲ್ಲಿ ಕಾಡುವ ಹಲವು ಸಮಸ್ಯೆಗಳಲ್ಲಿ ಹುಳಿತೇಗಿನದ್ದೂ ಒಂದು. ಹೊಟ್ಟೆಯಲ್ಲಿರುವ ಆಮ್ಲದ ಅಂಶ ಅನ್ನನಾಳಕ್ಕೆ ಮೇಲ್ಮುಖವಾಗಿ ಹರಿದಾಗ ಆಗುವಂಥ ತೊಂದರೆಗಳು ಒಂದೆರಡಲ್ಲ. ಹೊಟ್ಟೆಯುರಿ, ಎದೆಯುರಿ, ಎದೆನೋವು, ಹೊಟ್ಟೆನೋವು, ವಾಂತಿ, ಅಜೀರ್ಣ ಮುಂತಾದ ಹತ್ತುಹಲವು ಸಮಸ್ಯೆಗಳನ್ನು ತಂದಿಡುತ್ತದೆ. ಹೊಟ್ಟೆಯ ಅವಸ್ಥೆ ಅತಿಸೂಕ್ಷ್ಮವಾಗಿ, ತಿಂದ ಆಹಾರದಲ್ಲಿ ಕೊಂಚ ಆಚೀಚೆ ಆದರೂ ಆಸಿಡಿಟಿ ಆರಂಭವಾಗಿ ಒದ್ದಾಡುವಂತಾಗುತ್ತದೆ. ಇಂಥ ಸಮಸ್ಯೆ (Gastroesophageal Reflux Disease ಅಥವಾ GERD) ಚಳಿಗಾಲದಲ್ಲಿ ಇನ್ನೂ ಹೆಚ್ಚು. ಚಳಿಯಲ್ಲಿ ಹೆಚ್ಚಾಗುವ ಈ ಸಮಸ್ಯೆಯನ್ನು ಹತೋಟಿಗೆ ತರುವುದು ಹೇಗೆ? ಬಾರದಂತೆ ಏನೂ ಮಾಡಲಾಗದೇ?

ಚಳಿಗಾಲಕ್ಕೂ ಹುಳಿತೇಗಿನ ಸಮಸ್ಯೆಗಳಿಗೂ ನೇರವಾದ ನಂಟಿಲ್ಲದಿರಬಹುದು. ಆದರೆ ಚಳಿಯೆಂದು ಹೆಚ್ಚು ಬಿಸಿಯಿರುವ ಆಹಾರ ಸೇವಿಸುವುದಕ್ಕೂ, ಖಾರದ ಮತ್ತು ಮಸಾಲೆಯುಕ್ತ ತಿನಿಸುಗಳನ್ನು ತಿನ್ನುವುದಕ್ಕೂ ಹೊಂದಿಕೆಯಾಗಿ ಹೊಟ್ಟೆಯ ತೊಂದರೆ ತಾರಕಕ್ಕೇರುತ್ತದೆ. ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವುದರಿಂದ ಇದನ್ನು ತಹಬಂದಿಗೆ ತರಬಹುದು. ಏನೆಲ್ಲಾ ಮಾಡುವುದು ಪ್ರಯೋಜನಕಾರಿ ಎನ್ನುವುದನ್ನು ನೋಡೋಣ.

A change in diet

ಆಹಾರದಲ್ಲಿ ಬದಲಾವಣೆ

ಚಳಿ ಏಳುತ್ತಿದ್ದಂತೆ ಬಿಸಿಬಿಸಿ ಬಜ್ಜಿ, ಬೋಂಡಾಗಳ ನೆನಪಾಗುತ್ತದೆ. ಕ್ರಿಸ್‌ಮಸ್‌ ನೆವದಲ್ಲಿ ಕ್ರೀಮ್‌ಭರಿತ ಪೇಸ್ಟ್ರಿಗಳು ಇಲ್ಲದಿದ್ದರೆ ಹೇಗೆ? ಕೆನೆ ಅಥವಾ ಜಿಡ್ಡಿರುವ ಮಸಾಲೆಯ ಗ್ರೇವಿಗಳು ಹೆಚ್ಚು ಕಾಲ ಬಿಸಿ ಇರಬಲ್ಲವು. ಖಾರದ ಪಲ್ಯ ಹೊಂದಿದ ಉಗಿ ಹಾಯುವ ಮಸಾಲೆ ದೋಸೆಯನ್ನು ಮರೆಯಬಹುದೇ? ಚೀಸ್‌ಭರಿತ ಸುಡುಸುಡು ಪಿಜ್ಜಾ ಮತ್ತೂ ರುಚಿಕರ. ಇವುಗಳ ಬೆನ್ನಿಗೊಂದು ಹಾಟ್‌ ಚಾಕಲೇಟ್‌ ಅಥವಾ ಬಿಸಿ ಕಾಫಿ ಇಲ್ಲವೇ ಖಡಕ್ ಚಹಾ ಇದ್ದರೆ… ಸಾಲದೇ ಸ್ವರ್ಗಕ್ಕೆ ಕಿಚ್ಚು ಹಚ್ಚಲು! ಸ್ವರ್ಗದ ವಿಷಯ ಗೊತ್ತಿಲ್ಲ, ಆದರೆ ಹೊಟ್ಟೆಗೆ ಕಿಚ್ಚು ಹಚ್ಚಲಂತೂ ಸಾಕು.

ಚಳಿಯಲ್ಲಿ ಖಾರದ, ಜಿಡ್ಡಿನ, ಎಣ್ಣೆಯ, ಸುಡು ಬಿಸಿಯ ತಿನಿಸುಗಳ ಆಸೆ ಆದರೂ ಕಡಿವಾಣ ಹಾಕುವುದು ಅಗತ್ಯ. ಇವೆಲ್ಲವೂ ಒಟ್ಟಾಗಿ ಹೊಟ್ಟೆಯ ಅವಸ್ಥೆಯನ್ನು ಹದಗೆಡಿಸುತ್ತವೆ. ಆಹಾರ ಹದವಾದ ಬಿಸಿಯಿದ್ದು ತಾಜಾ ಇರಲಿ. ಖಾರ, ಮೆಣಸು, ಮಸಾಲೆಯ ಅಂಶಗಳಿಗೆ ಮಿತಿ ಇರಲಿ. ಆಹಾರದಲ್ಲಿ ಎಣ್ಣೆ, ಜಿಡ್ಡು ಕಡಿಮೆ ಆದಷ್ಟೂ ಅನುಕೂಲ ಆರೋಗ್ಯಕ್ಕೆ.

Physical activity

ದೈಹಿಕ ಚಟುವಟಿಕೆ

ಚುಮುಚುಮು ಚಳಿಯಲ್ಲಿ ಬೆಳಗ್ಗೆ ಏಳಲಾಗದು. ಎದ್ದರೂ ಕೈಕಾಲು ಸರಿಮಾಡಿಕೊಳ್ಳುವುದಕ್ಕೇ ಅರ್ಧ ಗಂಟೆ ಬೇಕು. ಇನ್ನು ವ್ಯಾಯಾಮ ಮಾಡುವುದೆಲ್ಲಿ. ಬೆಳಗಿನ ಅವಸ್ಥೆ ಹೀಗಾದರೆ, ಸಂಜೆಗೆ ಬೆನ್ನುಬೀಳುವ ಸೋಮಾರಿತನ, ಸುಸ್ತು ಅಥವಾ ಇನ್ನೇನೋ ಕಾರಣಗಳು. ಹಲವು ಪ್ರಾಣಿಗಳಂತೆ ದೇಹದ ಕೊಬ್ಬು ಹೆಚ್ಚಿಸಿಕೊಂಡು ಅಥವಾ ತುಪ್ಪಳ ಬೆಳೆಸಿಕೊಂಡು ಚಳಿಗಾಲ ಕಳೆಯುವ ಪರಿಸ್ಥಿತಿ ನಮಗಿಲ್ಲದಿದ್ದರೂ, ನಾವು ಮಾಡುವುದು ಮಾತ್ರ ಅದನ್ನೇ.

ಹುಳಿತೇಗಿನ ಸಮಸ್ಯೆ ಇರುವವರಿಗೆ ದೇಹದ ತೂಕ ನಿರ್ವಹಿಸುವುದು ಮಹತ್ವದ್ದು. ತೂಕ ಹೆಚ್ಚಿದಂತೆ ಹೊಟ್ಟೆಯ ಸಮಸ್ಯೆಗಳ ಪಟ್ಟಿಯೂ ಹೆಚ್ಚುತ್ತಾ ಹೋಗುತ್ತದೆ. ಹಾಗಾಗಿ ಬೊಜ್ಜು ನಿಯಂತ್ರಣದತ್ತ ಗಮನ ಹರಿಸುವುದು ಮುಖ್ಯ

ಇನ್ನಿತರ ಕಾರಣಗಳು

ಚಳಿಯಲ್ಲಿ ಸ್ವಲ್ಪ ʻಬೆಚ್ಚಗೆʼ ಮಾಡುವ ಪೇಯಗಳು ಬೇರೆಯೇ ಇರುತ್ತವಲ್ಲ. ಅವುಗಳ ಮೇಲೂ ನಿಯಂತ್ರಣ ಬೇಕು. ಮದ್ಯಪಾನ ಹೆಚ್ಚಿದಷ್ಟೂ ಹೊಟ್ಟೆಯ ಅವಸ್ಥೆ ಅಧೋಗತಿ. ಇವುಗಳ ಜೊತೆಗೆ ಹೊಟ್ಟೆಗಿಳಿಯುವ ಕುರುಕಲುಗಳು ಕ್ರೀಮ್‌ ಮೇಲಿನ ಚೆರ್ರಿಯಂತೆ! ಇವೆಲ್ಲವುಗಳ ಜೊತೆಗೆ ಆಲ್ಕೋಹಾಲ್‌ ಸೇವನೆಯಿಂದ ಯಕೃತ್ತಿನ ಮೇಲೂ ಗಂಭೀರ ಪರಿಣಾಮಗಳಾಗುತ್ತವೆ. ಹಾಗಾಗಿ ಇಂಥ ಚಟಗಳ ಮೇಲೆ ನಿಯಂತ್ರಣ ಸಾಧಿಸುವುದು ಅಗತ್ಯ.

Asian Woman with Acid Reflux.

ಏನು ಮಾಡಬಹುದು?

ಸುಲಭವಾಗಿ ಪಚನವಾಗಬಲ್ಲ ಲಘು ಆಹಾರಗಳಿಗೆ ಆದ್ಯತೆ ನೀಡಿ. ಒಮ್ಮೆಲೇ ದೊಡ್ಡ ಊಟ ಜೀರ್ಣವಾಗದಿದ್ದರೆ, ಒಂದು ಊಟವನ್ನು ಮೂರು ಭಾಗಗಳಾಗಿ ವಿಂಗಡಿಸಿ ತಿನ್ನಿ. ಸೋಡಾ, ಕೋಲಾ ಮತ್ತು ಅತಿ ಹುಳಿಯ ಆಹಾರಗಳು ನಿಶ್ಚಿತವಾಗಿ ಹೊಟ್ಟೆಯನ್ನು ಬುಡಮೇಲು ಮಾಡುತ್ತವೆ, ಜಾಗ್ರತೆ. ವ್ಯಾಯಾಮವನ್ನು ಯಾವುದೇ ಕಾರಣಕ್ಕೂ ತಪ್ಪಿಸಬೇಡಿ.

ಚಳಿಯೆನ್ನುವ ಕಾರಣಕ್ಕೆ ನೀರು ಕುಡಿಯುವುದನ್ನು ಕಡಿಮೆ ಮಾಡಬೇಡಿ. ತಣ್ಣೀರು ಕಷ್ಟವಾದರೆ, ಬೆಚ್ಚಗಿನ ನೀರು ಕುಡಿಯಿರಿ. ನಾರು ಭರಿತ ತರಕಾರಿಗಳು, ಋತುಮಾನದ ಹಣ್ಣುಗಳು, ಇಡೀ ಧಾನ್ಯಗಳು, ಕಿರುಧಾನ್ಯಗಳು ಆಹಾರದ ಭಾಗವಾಗಿರಲಿ. ರಾತ್ರಿಯ ಸಮಯ ಹುಳಿತೇಗು ಬಾಧಿಸುತ್ತಿದ್ದರೆ, ದಿಂಬುಗಳನ್ನು ಹಾಕಿ ತಲೆ ಎತ್ತರಿಸಿ ಮಲಗಿ.

ಇದನ್ನೂ ಓದಿ: Health Tips: ತಡರಾತ್ರಿಯವರೆಗಿನ ಅಧ್ಯಯನ ಮಿದುಳಿನ ಆರೋಗ್ಯಕ್ಕೆ ಒಳ್ಳೆಯದೇ ಕೆಟ್ಟದ್ದೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Eye Care Tips: ಕಣ್ಣಿನ ಸುಸ್ತಿಗೆ ನೀವು ಇಷ್ಟಾದರೂ ಮಾಡಿ, ಕಣ್ಣಿಗೆ ಅಗತ್ಯ ವಿಶ್ರಾಂತಿ ನೀಡಿ!

ಕಣ್ಣು ನಮ್ಮ ದೇಹದ ಅತ್ಯಂತ ಮುಖ್ಯವಾದ ಅಂಗಗಳಲ್ಲಿ ಒಂದು. ಕಣ್ಣಿನ ಸೌಂದರ್ಯ ಹಾಗೂ ಆರೋಗ್ಯವೂ ಕೂಡ ನಮ್ಮ ಕೈಯಲ್ಲೇ ಇದೆ. ಕಣ್ಣನ್ನು ಆರೋಗ್ಯವಾಗಿ ಇಟ್ಟುಕೊಳ್ಳುವಲ್ಲಿ, ಕಣ್ಣಿಗೆ ಸೂಕ್ತ ವಿಶ್ರಾಂತಿ ನೀಡುವಲ್ಲಿ ನಾವು ಅತ್ಯಂತ ನಿರ್ಲಕ್ಷ್ಯ ಮಾಡುತ್ತೇವೆ. ಕಣ್ಣಿಗೆ ಬೇಕಾದ ವಿಶ್ರಾಂತಿ ನೀಡದೆ, ಅದಕ್ಕೆ ನಿರಂತರ ಕೆಲಸ ನೀಡುತ್ತೇವೆ. ದುಡಿದು ಸುಸ್ತಾದ ದೇಹಕ್ಕೆ ಕಣ್ಣಿನಿಂದ ಮಾಡಬಹುದಾದ ಕೆಲಸವನ್ನೇ ಮಾಡು ವಿಶ್ರಾಂತಿ ಎನ್ನುತ್ತೇವೆ. ಆದರೆ ಕಣ್ಣಿಗೆ, ಮಿದುಳಿಗೆ ವಿಶ್ರಾಂತಿ ಸಿಕ್ಕಿರುವುದಿಲ್ಲ. ಅದಕ್ಕಾಗಿಯೇ ಕಣ್ಣಿನ ಕಾಳಜಿಯನ್ನು ನಾವು ಆಗಾಗ ಮಾಡಬೇಕು. ಈ ಕುರಿತು ಇಲ್ಲಿದೆ (Eye Care Tips) ಆರೋಗ್ಯ ಮಾಹಿತಿ.

VISTARANEWS.COM


on

Eye Care Tips
Koo

ಸೌಂದರ್ಯವು ನೋಡುಗರ ಕಣ್ಣಿನಲ್ಲಿದೆ ನಿಜ. ಆದರೆ ಕಣ್ಣುಗಳಿಗೇ ಬಹಳ ಸುಸ್ತಾದರೆ ಯಾವ ಸೌಂದರ್ಯವೂ ಕಣ್ಣಿಗೆ ಕಾಣದು. ಯಾಕೆಂದರೆ ಕಣ್ಣು ನಮ್ಮ ದೇಹದ ಅತ್ಯಂತ ಮುಖ್ಯವಾದ ಅಂಗಗಳಲ್ಲಿ ಒಂದು. ಕಣ್ಣಿನ ಸೌಂದರ್ಯ ಹಾಗೂ ಆರೋಗ್ಯವೂ ಕೂಡಾ ನಮ್ಮ ಕೈಯಲ್ಲೇ ಇದೆ. ಕಣ್ಣನ್ನು ಆರೋಗ್ಯವಾಗಿ ಇಟ್ಟುಕೊಳ್ಳುವಲ್ಲಿ, ಕಣ್ಣಿಗೆ ಸೂಕ್ತ ವಿಶ್ರಾಂತಿ ನೀಡುವಲ್ಲಿ ನಾವು ಅತ್ಯಂತ ನಿರ್ಲಕ್ಷ್ಯ ಮಾಡುತ್ತೇವೆ. ಕಣ್ಣಿಗೆ ಬೇಕಾದ ವಿಶ್ರಾಂತಿ ನೀಡದೆ, ಅದಕ್ಕೆ ನಿರಂತರ ಕೆಲಸ ನೀಡುತ್ತೇವೆ. ದುಡಿದು ಸುಸ್ತಾದ ದೇಹಕ್ಕೆ ಕಣ್ಣಿನಿಂದ ಮಾಡಬಹುದಾದ ಕೆಲಸವನ್ನೇ ಮಾಡು ವಿಶ್ರಾಂತಿ ಎನ್ನುತ್ತೇವೆ. ಆದರೆ, ಕಣ್ಣಿಗೆ, ಮಿದುಳಿಗೆ ವಿಶ್ರಾಂತಿ ಸಿಕ್ಕಿರುವುದಿಲ್ಲ. ಅದಕ್ಕಾಗಿಯೇ ಕಣ್ಣಿನ ಕಾಳಜಿಯನ್ನು ನಾವು ಆಗಾಗ ಮಾಡಬೇಕು. ಅದರಲ್ಲೂ ಬೇಸಿಗೆಯಲ್ಲಿ ಈ ಬಗ್ಗೆ ತುಸು ಹೆಚ್ಚೇ ಗಮನ ನೀಡಬೇಕು. ಬನ್ನಿ, ಕಣ್ಣಿನ ಆರೈಕೆಯನ್ನು ನೀವು ಹೇಗೆಲ್ಲ ಮಾಡಬಹುದು (Eye Care Tips) ಎಂಬ ಸಲಹೆಗಳು ಇಲ್ಲಿವೆ.

Eyes Treatment with Cloth Mask

ತಣ್ಣೀರ ಸಿಂಚನ

ದುಡಿದು ಸುಸ್ತಾಗಿ ಬಂದಾಗ, ಬೆಳಗ್ಗೆ ಎದ್ದ ಕೂಡಲೇ ಅಥವಾ ಕೆಲಸದ ನಡುವೆ ಕಣ್ಣಿಗೆ ಸುಸ್ತೆನಿಸಿದಾಗ ಆಗಾಗ ಕಣ್ಣಿಗೆ ತಣ್ಣೀರ ಸಿಂಚನ ಮಾಡಿ. ನಳ್ಳಿಯ ನೀರು ತಿರುಗಿಸಿ ಕಣ್ಣಿಗೆ ಚಿಮುಕಿಸಿ. ಹಾಯೆನಿಸುತ್ತದೆ. ಅಥವಾ, ಒಂದು ಕೋಲ್ಡ್‌ ಪ್ಯಾಡನ್ನು ಫ್ರಿಜ್‌ನಲ್ಲಿಟ್ಟುಕೊಂಡಿರಿ. ಅದನ್ನು ತೆಗೆದು ಕಣ್ಣಿನ ಮೇಲೆ ಇಟ್ಟುಕೊಳ್ಳಬಹುದು. ಕೊಂಚ ಕ್ಷಣಗಳ ಈ ನಡೆ ಕೂಡಾ ಕಣ್ಣಿಗೆ ಅಗಾಧ ಚೈತನ್ಯ ತಂದುಕೊಡುತ್ತದೆ.

Aloe vera leaf and aloevera gel on wood table

ಆಲೊವೆರಾ ಜೆಲ್

ಇನ್ನೊಂದು ಬಹಳ ಅದ್ಭುತ ಟಿಪ್ಸ್‌ ಎಂದರೆ, ಕಣ್ಣಿಗೆ ಅಲೊವೆರಾ ಜೆಲ್‌ ಹಚ್ಚುವುದು. ಅಂದರೆ ಕಣ್ಣಿನ ಸುತ್ತಮುತ್ತ ಅಲೊವೆರಾ ಜೆಲ್‌ ಅನ್ನು ನಿತ್ಯವೂ ಹಚ್ಚಿಕೊಳ್ಳುವುದು ಅಭ್ಯಾಸ ಮಾಡಿಕೊಳ್ಳಿ. ಆಲೊವೆರಾದಲ್ಲಿ ತಂಪುಕಾರಕ ಗುಣಗಳಿದ್ದು ಇದು ಕಣ್ಣಿನ ಸುತ್ತಲ ಚರ್ಮದ ಮೇಲೆ ಪದರದಂತೆ ಕಾಯ್ದುಕೊಂಡು ಕಣ್ಣಿನ ಮೇಲೆ ಬೀಳುವ ಸೂರ್ಯನ ಹಾನಿಕಾರಕ ಕಿರಣಗಳಿಂದ ರಕ್ಷಿಸುತ್ತದೆ. ಇದರ ಜೊತೆಗೆ ಆಲೊವೆರಾ ರಸವನ್ನು ಫ್ರೀಜರ್‌ನಲ್ಲಿಟ್ಟು ಅದನ್ನು ಕ್ಯೂಬ್‌ನಂತೆ ಮಾಡಿ ಅದನ್ನು ಸುಸ್ತಾದ ಕಣ್ಣಿನ ಮೇಲೆ ಇಟ್ಟುಕೊಂಡು ಕೊಂಚ ಕಾಲ ಇಟ್ಟುಕೊಂಡು ವಿಶ್ರಾಂತಿ ತೆಗೆದುಕೊಳ್ಳುವುದರಿಂದ ಕಣ್ಣಿಗೆ ಹಾಯೆನಿಸುತ್ತದೆ. ಬಹಳ ಪ್ರಯೋಜನ ಸಿಗುತ್ತದೆ.

Cucumber

ಸೌತೆಕಾಯಿ

ಎಲ್ಲರಿಗೂ ತಿಳಿದಿರುವ ಅತ್ಯಂತ ಫಲಪ್ರದ ಉಪಾಯವೆಂದರೆ ಸೌತೆಕಾಯಿ. ಸೌತೆಕಾಯಿಯಲ್ಲಿರುವ ತಂಫೂಖಾರಕ ಗುಣಗಳು ಕಣ್ಣಿಗೆ ಬಹಳ ಒಳ್ಳೆಯದು. ಇದರಲ್ಲಿ ಹೆಚ್ಚು ನೀರಿನಂಶವೂ ಇರುವುದರಿಂದ ಕಣ್ಣ ಮೇಲೆ ಇಟ್ಟುಕೊಂಡರೆ ತಂಪೆನಿಸುತ್ತದೆ. ಫ್ರಿಡ್ಜ್‌ನಲ್ಲಿಟ್ಟು ತೆಗದೂ ಇದನ್ನು ಸಣ್ಣ ತುಂಡುಗಳನ್ನಾಗಿ ಕತ್ತರಿಸಿ ಕಣ್ಣುಗಳ ಮೇಲಿಡಬಹುದು. ಕಣ್ಣಿನ ಮೇಲಿಟ್ಟು ೧೦ರಿಂದ ೧೫ ನಿಮಿಷ ವಿಶ್ರಾಂತಿ ಪಡೆದು ಎದ್ದರೆ, ರಿಲ್ಯಾಕ್ಸ್‌ ಆಗುತ್ತದೆ. ಕಣ್ಣಿನಲ್ಲಿ ಹೊಸ ಚೈತನ್ಯ ಮೂಡುತ್ತದೆ. ದಣಿದ ಕಣ್ಣುಗಳಿಗೆ ಇದು ದಿವ್ಯೌಷಧ.

Green tea

ಚಹಾ

ಮನೆಯಲ್ಲಿ ಗ್ರೀನ್‌ ಟೀ ಕುಡಿಯುವ ಅಭ್ಯಾಸವಿದ್ದರೆ, ಟೀ ಬ್ಯಾಗ್‌ಗಳನ್ನು ಬಳಸುವ ಅಭ್ಯಾಸವಿದ್ದರೆ ಬ್ಯಾಗುಗಳನ್ನು ಎಸೆಯಬೇಡಿ. ಅದನ್ನು ಬಳಸಿದ ಮೇಲೆ ಅದನ್ನು ಫ್ರಿಡ್ಜ್‌ನಲ್ಲಿಟ್ಟಿರಿ. ಸ್ವಲ್ಪ ನೀರಿನಲ್ಲಿ ಅದ್ದಿ ನಂತರ ಅದನ್ನು ಕಣ್ಣ ಮೇಲೆ ಇಟ್ಟುಕೊಂಡು ಹತ್ತು ನಿಮಿಷ ವಿಶ್ರಾಂತಿ ಪಡೆದರೆ ಕಣ್ಣಿನ ಸುಸ್ತೆಲ್ಲ ಮಾಯ.

rose water

ರೋಸ್‌ ವಾಟರ್

ಏನು ಮಾಡಲು ಸಮಯ ಸಿಗದಿದ್ದರೂ ಇದನ್ನು ಮಾಡಲು ಹೆಚ್ಚು ಸಮಯದ ಅವಶ್ಯಕತೆ ಇಲ್ಲ. ರೋಸ್‌ ವಾಟರ್‌ ಅಥವಾ ಗುಲಾಬಿ ಜಲದ ನಾಲ್ಕೈದು ಬಿಂದುಗಳನ್ನು ಹತ್ತಿಯಲ್ಲಿ ಹಾಕಿ ಅದರಿಂದ ಕಣ್ಣ ಸುತ್ತ ಹಚ್ಚಿಕೊಳ್ಳಿ. ಕೆಲಸದ ನಡುವೆ ಬ್ಯಾಗ್‌ನಲ್ಲೊಂದು ರೋಸ್‌ ವಾಟರ್‌ ಬಾಟಲ್‌ ಇಟ್ಟುಕೊಂಡಿದ್ದರೆ ಅಗತ್ಯ ಬಿದ್ದಾಗ ಕಚೇರಿಯಲ್ಲೂ ಲ್ಯಾಪ್‌ಟಾಪ್‌ ಪರದೆಯನ್ನೇ ನೋಡಿ ಸುಸ್ತಾದಾಗ ಹೀಗೆ ಮಾಡಿಕೊಳ್ಳಬಹುದು.

Continue Reading

ಪ್ರಮುಖ ಸುದ್ದಿ

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

Corona Virus: ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್‌ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್‌ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.

VISTARANEWS.COM


on

corona virus wave in singapore
Koo

ಬೆಂಗಳೂರು: ಸಿಂಗಾಪುರದಲ್ಲಿ (Singapore) ಹೊಸ ಕೋವಿಡ್‌- 19 (Covid 19 wave) ಅಲೆ ಪತ್ತೆಯಾಗಿದೆ. ಒಂದೇ ವಾರದಲ್ಲಿ ಕೊರೊನಾ ವೈರಸ್‌ (Corona Virus) ಕೇಸುಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಮತ್ತೆ ಮಾಸ್ಕ್‌ (Mask) ಧರಿಸಲು ಸಲಹೆ ನೀಡಲಾಗಿದೆ. ರಾಜ್ಯದಲ್ಲೂ ಆರೋಗ್ಯ ಇಲಾಖೆ (Health department) ಅಲರ್ಟ್‌ ಆಗಿದ್ದು, ಪರಿಸ್ಥಿತಿಯನ್ನು ಗಮನಿಸುತ್ತಿದೆ.

ಸಿಂಗಾಪುರದಲ್ಲಿ ಒಂದೇ ವಾರದಲ್ಲಿ 25 ಸಾವಿರ ಕೋವಿಡ್ ಕೇಸ್ ಖಚಿತವಾಗಿದ್ದು, ಇದರಿಂದ ಸಿಲಿಕಾನ್ ಸಿಟಿ ಬೆಂಗಳೂರು ಅಲರ್ಟ್‌ ಆಗಿದೆ. ಇದರ ಜೊತೆಗೆ ಮಹಾರಾಷ್ಟ್ರದಲ್ಲಿಯೂ ಕೋವಿಡ್ ಒಮಿಕ್ರಾನ್ ರೂಪಾಂತರಿ ವೈರಸ್‌ನ 91 ಕೇಸ್‌ ಪತ್ತೆಯಾಗಿವೆ. ಹೀಗಾಗಿ, ಮುನ್ನೆಚ್ಚರಿಕೆ ವಹಿಸಲು ಇಂದು ಕೇಂದ್ರ ಆರೋಗ್ಯ ಇಲಾಖೆಯ ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಸಭೆ ನಡೆಯುತ್ತಿದೆ.

ಸಿಂಗಾಪುರದಿಂದ ಬೆಂಗಳೂರು ಹಾಗೂ ಮುಂಬಯಿಗೆ ಆಗಮಿಸುವ ವಿಮಾನಯಾನಿಗಳ ಸಂಖ್ಯೆ ಹೆಚ್ಚು ಇದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಆಯ್ದ ಯಾನಿಗಳ ಆರೋಗ್ಯ ತಪಾಸಣೆ, ಮಾಸ್ಕ್‌ ಧಾರಣೆ ಸೇರಿದಂತೆ ಹಲವು ಕ್ರಮಗಳ ಬಗೆಗೆ ಚರ್ಚಿಸಲಾಗುತ್ತಿದೆ.

ಸಿಂಗಾಪುರದಲ್ಲಿ ಏನಾಗಿದೆ?

ಸಿಂಗಾಪುರದ ಆರೋಗ್ಯ ಸಚಿವ ಓಂಗ್ ಯೆ ಕುಂಗ್, ಸಾರ್ವಜನಿಕ ತಾಣಗಳಲ್ಲಿ ಮುಖವಾಡಗಳನ್ನು ಧರಿಸುವಂತೆ ಸಲಹೆ ನೀಡಿದ್ದಾರೆ. ಸಾಮಾಜಿಕ ನಿರ್ಬಂಧಗಳ ಕುರಿತು ಮಾತನಾಡಿದ ಸಚಿವ ಓಂಗ್, ಸದ್ಯಕ್ಕೆ ಯಾವುದೇ ರೀತಿಯ ಸಾಮಾಜಿಕ ನಿರ್ಬಂಧಗಳ ಯೋಚನೆಯಿಲ್ಲ ಎಂದಿದ್ದಾರೆ. ಏಕೆಂದರೆ ಸಿಂಗಾಪುರದಲ್ಲಿ ಕೋವಿಡ್ -19 ಅನ್ನು ಸ್ಥಳೀಯ ಕಾಯಿಲೆ ಎಂದು ಪರಿಗಣಿಸಲಾಗುತ್ತದೆ.

ಕೋವಿಡ್‌ನ ಹೊಸ ಅಲೆಯ ಪಥವನ್ನು ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ ಎಂದು ಸಿಂಗಾಪುರದ ಆರೋಗ್ಯ ಸಚಿವಾಲಯ ಹೇಳಿದೆ. ಸಚಿವಾಲಯದ ಪ್ರಕಾರ, ಕೋವಿಡ್ -19 ಪ್ರಕರಣಗಳ ಅಂದಾಜು ಸಂಖ್ಯೆಯು ಹಿಂದಿನ ವಾರದಲ್ಲಿದ್ದ 13,700ರಿಂದ 25,900ಕ್ಕೆ ದ್ವಿಗುಣಗೊಂಡಿದೆ. ಅದೇ ಅವಧಿಯಲ್ಲಿ ಸರಾಸರಿ ದೈನಂದಿನ ಕೋವಿಡ್ -19 ಆಸ್ಪತ್ರೆಗೆ ದಾಖಲು ಕೇಸ್‌ಗಳು 181ರಿಂದ ಸರಿಸುಮಾರು 250ಕ್ಕೆ ಏರಿದೆ ಎಂದು ಸಚಿವಾಲಯ ವರದಿ ಮಾಡಿದೆ.

ಆಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು ಸಂರಕ್ಷಿಸಲು, ಸಾರ್ವಜನಿಕ ಆಸ್ಪತ್ರೆಗಳಿಗೆ ತುರ್ತು-ಅಲ್ಲದ ಶಸ್ತ್ರಚಿಕಿತ್ಸೆಗಳನ್ನು ಕಡಿಮೆ ಮಾಡಲು ಮತ್ತು ಸೂಕ್ತವಾದ ರೋಗಿಗಳನ್ನು ಆರೈಕೆ ಸೌಲಭ್ಯಗಳಿಗೆ ವರ್ಗಾಯಿಸಲು ಸೂಚನೆ ನೀಡಲಾಗಿದೆ. “ನಾವು ಅಲೆಯ ಆರಂಭಿಕ ಭಾಗದಲ್ಲಿದ್ದೇವೆ. ಪ್ರಮಾಣ ಸ್ಥಿರವಾಗಿ ಏರುತ್ತಿದೆ” ಎಂದು ಆರೋಗ್ಯ ಸಚಿವ ಓಂಗ್ ಯೆ ಕುಂಗ್ ಹೇಳಿದ್ದಾರೆ.

ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

ನವದೆಹಲಿ: ಕೊರೋನಾ ವೈರಸ್‌(Corona Virus) ಎದುರಿಸಲು ತೆಗೆದುಕೊಂಡಿರುವ ಕೋವಿಶೀಲ್ಡ್‌(Covishield Vaccine) ಲಸಿಕೆ ಅಡ್ಡಪರಿಣಾಮ(Side Effects) ಹೊಂದಿದೆ ಎಂಬುದು ಬಯಲಾದ ಬೆನ್ನಲ್ಲಿ ಕೋವಾಕ್ಸಿನ್‌ (Covaxin) ತೆಗೆದುಕೊಂಡಿರುವ ಜನ ತಮಗೇನು ಅಪಾಯವಿಲ್ಲ ಎಂದು ನಿರಾಳವಾಗಿದ್ದರು. ಆದರೆ ಇದೀಗ ವರದಿಯೊಂದು ಹೊರಬಿದ್ದಿದ್ದು, ಕೋವಾಕ್ಸಿನ್‌ ಪಡೆದಿರುವ ಜನರಿಗೆ ಬಿಗ್‌ ಶಾಕ್‌ ಕೊಟ್ಟಿದೆ. ಕೋವಾಕ್ಸಿನ್‌ ಲಸಿಕೆಯೂ ಅಡ್ಡಪರಿಣಾಮ ಹೊಂದಿದೆ ಎಂಬುದು ಅಧ್ಯಯನದಲ್ಲಿ ಬಯಲಾಗಿದೆ.

ಇತ್ತೀಚೆಗೆ ಕೋವಿಶೀಲ್ಡ್ ಅನ್ನು ಅಭಿವೃದ್ಧಿಪಡಿಸಿದ ಬ್ರಿಟಿಷ್ ಕಂಪನಿಯಾದ ಅಸ್ಟ್ರಾಜೆನೆಕಾ ಇತ್ತೀಚೆಗೆ ಅಲ್ಲಿನ ನ್ಯಾಯಾಲಯದಲ್ಲಿ ಅದರ ಲಸಿಕೆ ಕೆಲವು ಜನರಲ್ಲಿ ಗಂಭೀರ ಕಾಯಿಲೆಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು. ಇದೀಗ ಅದೇ ರೀತಿ ನಮ್ಮ ದೇಶದಲ್ಲಿ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ‘ಕೋವಾಕ್ಸಿನ್’ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ವರದಿ ಬಂದಿದೆ. ಈ ಲಸಿಕೆಯನ್ನು ಪಡೆದ ಸುಮಾರು ಒಂದು ವರ್ಷದ ನಂತರ, ಅದರ ಅಡ್ಡಪರಿಣಾಮಗಳು ಸಾಕಷ್ಟು ಜನರಲ್ಲಿ ಕಂಡುಬಂದಿದೆ ಎಂದು ಹೇಳಲಾಗಿದೆ.

BHU ಅಧ್ಯಯನ ವರದಿಯಲ್ಲಿ ಬಹಿರಂಗ

ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಈ ವರದಿಯ ಪ್ರಕಾರ, ಕೊವಾಕ್ಸಿನ್‌ ತೆಗೆದುಕೊಂಡಿರುವ ಹದಿ ಹರೆಯದವರು ಮತು ಯುವಕರಲ್ಲಿ ಈ ಅಡ್ಡ ಪರಿಣಾಮ ಹೆಚ್ಚಾಗಿ ಕಂಡು ಬಂದಿದೆ. ಈ ಸಂಶೋಧನೆಗಾಗಿ ಒಟ್ಟು 1024 ಜನರನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಅವರಲ್ಲಿ 635 ಹದಿಹರೆಯದವರು ಮತ್ತು 391 ಯುವಕರು ಇದ್ದರು. 304 ಹದಿಹರೆಯದವರು ಅಥವಾ ಸುಮಾರು 48 ಪ್ರತಿಶತದಷ್ಟು ಜನರು ಶ್ವಾಸನಾಳದ ಸೋಂಕುಗೆ ತುತ್ತಾಗಿರುವುದು ಅಧ್ಯಯನದಲ್ಲಿ ಬಯಲಾಗಿದೆ.

ಇದನ್ನೂ ಓದಿ: CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

Continue Reading

ಆರೋಗ್ಯ

Health Benefits Of Tofu: ಪನೀರ್‌ನಂತೆ ಕಾಣುವ ಈ ಆಹಾರದ ಬಗ್ಗೆ ನಿಮಗೆ ಗೊತ್ತೆ?

ʻಬೀನ್‌ ಕರ್ಡ್‌ʼ ಎಂಬ ಹೆಸರಿನಿಂದಲೂ ಕರೆಸಿಕೊಳ್ಳುವ ಈ ತೋಫು ಸೋಯಾ ಉತ್ಪನ್ನ. ಸಸ್ಯದಿಂದಲೇ ಸಿದ್ಧಗೊಂಡ ಈ ತೋಫು ಅತಿ ಹೆಚ್ಚಿನ ಪ್ರೊಟೀನ್‌ ಹೊಂದಿರುವ ತಿನಿಸು. ಜೊತೆಗೆ ಹಲವು ರೀತಿಯ ಪೋಷಕಸತ್ವಗಳು ಇದರಲ್ಲಿದ್ದು, ಅತ್ಯಂತ ಆರೋಗ್ಯಕರ (Health benefits Of Tofu) ತಿನಿಸು ಎಂಬ ಖ್ಯಾತಿಗೂ ಪಾತ್ರವಾಗಿದೆ.

VISTARANEWS.COM


on

Health Benefits Of Tofu
Koo

ನೋಡುವುದಕ್ಕೆ ಪನೀರ್‌ನಂತೆಯೇ ಕಾಣುವ ಈ ವಸ್ತುವಿನ ಬಗ್ಗೆ ಬಹಳಷ್ಟು ಜನರಿಗೆ ಕುತೂಹಲವಿದೆ. ಅದೂ ಪನೀರ್‌ನ ಒಂದು ಬಗೆ ಎಂದು ಭಾವಿಸಿದವರಿದ್ದಾರೆ. ಹಾಲಿನಿಂದಲೇ ಮಾಡಿದ್ದು ಎಂದು ತಿಳಿದವರಿದ್ದಾರೆ. ಆದರೆ ʻತೋಫುʼ ಎಂಬ ಹೆಸರು ಕೇಳಿ ಇದೇನು ಸಸ್ಯಜನ್ಯವೋ, ಪ್ರಾಣಿಜನ್ಯವೋ ಎಂಬ ಗೊಂದಲಕ್ಕೆ ಬಿದ್ದವರೂ ಇದ್ದಾರೆ. ʻಬೀನ್‌ ಕರ್ಡ್‌ʼ ಎಂಬ ಹೆಸರಿನಿಂದಲೂ ಕರೆಸಿಕೊಳ್ಳುವ ಇದು ಸೋಯಾ ಉತ್ಪನ್ನ. ಸಸ್ಯದಿಂದಲೇ ಸಿದ್ಧಗೊಂಡ ಈ ತೋಫು ಅತಿ ಹೆಚ್ಚಿನ ಪ್ರೊಟೀನ್‌ ಹೊಂದಿರುವ ತಿನಿಸು. ಜೊತೆಗೆ ಹಲವು ರೀತಿಯ ಪೋಷಕಸತ್ವಗಳು ಇದರಲ್ಲಿದ್ದು, ಅತ್ಯಂತ ಆರೋಗ್ಯಕರ (Health benefits Of Tofu) ತಿನಿಸು ಎಂಬ ಖ್ಯಾತಿಗೂ ಪಾತ್ರವಾಗಿದೆ.

Tofu

ಏನಿದು ತೋಫು?

ಸರಳವಾಗಿ ಹೇಳುವುದಾದರೆ ಸೋಯಾ ಹಾಲಿನ ಪನೀರ್‌ ಎಂದು ತಿಳಿಯಬಹುದು. ನೋಡುವುದಕ್ಕೆ ಪನೀರ್‌ನಂತೆಯೇ ಇದ್ದರೂ, ಇವೆರಡರಲ್ಲಿ ಬಹಳಷ್ಟು ವ್ಯತ್ಯಾಸಗಳಿವೆ. ಸೋಯಾ ಹಾಲಿಗೆ ಕ್ಯಾಲ್ಸಿಯಂ ಮತ್ತು ಮೆಗ್ನೀಶಿಯಂ ಉಪ್ಪನ್ನು ಸೇರಿಸಿ, ಹಸುವಿನ ಹಾಲಿನಂತೆಯೇ ಒಡೆಸಿ ಪನೀರ್‌ ರೀತಿಯಲ್ಲಿ ಕಾಣುವಂತೆಯೇ ತೋಫುವನ್ನು ಸಿದ್ಧಪಡಿಸಲಾಗುತ್ತದೆ. ನಂತರ ಇದನ್ನು ಚಚ್ಚೌಕವಾಗಿ ಕತ್ತರಿಸಲಾಗುತ್ತದೆ. ಇದು ಸಂಪೂರ್ಣ ಸಸ್ಯಜನ್ಯ ಉತ್ಪನ್ನ. ವೇಗನ್‌ಗಳಿಗೆ ಹೇಳಿ ಮಾಡಿಸಿದ ಆಹಾರ. ಇದನ್ನು ಎಲ್ಲರೂ ಸೇವಿಸಬಹುದು. ಇದನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಬಹಳಷ್ಟು ರೀತಿಯಲ್ಲಿ ಲಾಭಗಳಿವೆ. ಏನು ಪ್ರಯೋಜನಗಳಿವೆ ಸೋಯಾ ಹಾಲಿನ ಪನೀರ್‌ ಅಥವಾ ತೋಫು ಸೇವನೆಯಿಂದ?

paneer tofu

ಅತ್ತ್ಯುತ್ತಮ ಪ್ರಾಣಿಜನ್ಯ ಪ್ರೊಟೀನ್

ಸಸ್ಯಾಹಾರಿಗಳಿಗೆ ಪ್ರೊಟೀನ್‌ ಸಾಲುವುದಿಲ್ಲ ಎಂಬ ದೂರು ಸಾಮಾನ್ಯ. ಆದರೆ ನಿಯಮಿತವಾಗಿ ಪನೀರ್‌, ತೋಫು ಸೇವನೆಯನ್ನು ರೂಢಿಸಿಕೊಂಡರೆ ಸಸ್ಯಾಹಾರಿಗಳೂ ಪ್ರೊಟೀನ್‌ ಕೊರತೆಯನ್ನು ನೀಗಿಸಿಕೊಳ್ಳಬಹುದು. ಅರ್ಧ ಕಪ್‌ ತೋಫುವಿನಲ್ಲಿ 181 ಕ್ಯಾಲೊರಿಗಳು, 21.8 ಗ್ರಾಂನಷ್ಟು ಪ್ರೊಟೀನ್‌, 11 ಗ್ರಾಂ ಕೊಬ್ಬು ಪ್ರಮುಖವಾಗಿ ದೊರೆಯುತ್ತದೆ. ಇದರಲ್ಲಿ ಅಗತ್ಯವಾದ ಎಲ್ಲ 9 ಅಮೈನೊ ಆಮ್ಲಗಳು ಸಮೃದ್ಧವಾಗಿ ದೊರೆಯುತ್ತವೆ. ಸ್ನಾಯುಗಳ ದುರಸ್ತಿ ಮಾಡಿ, ಬೆಳವಣಿಗೆಗೆ ಅಗತ್ಯವಾದಂಥ ಸಂಪೂರ್ಣ ಪ್ರೊಟೀನ್‌ ತೋಫುವಿನಲ್ಲಿ ದೊರೆಯುತ್ತದೆ.

weight loss

ತೂಕ ಇಳಿಕೆಗೆ ಸೂಕ್ತ

ಕಡಿಮೆ ಕ್ಯಾಲರಿ ಮತ್ತು ಹೆಚ್ಚು ಪ್ರೊಟೀನ್‌ ಹೊಂದಿರುವ ಕಾರಣದಿಂದ, ತೂಕ ಇಳಿಸುವವರಿಗೆ ಹೇಳಿ ಮಾಡಿಸಿದ ಆಹಾರವಿದು. ದೀರ್ಘ ಕಾಲದವರೆಗೆ ಹೊಟ್ಟೆ ತುಂಬಿದ ಅನುಭವ ನೀಡುವ ಇದು ದೇಹದ ಚಯಾಪಚಯವನ್ನು ಹೆಚ್ಚಿಸುತ್ತದೆ. ಇದರಿಂದ ಆಗಾಗ ಕಾಡುವ ಕಳ್ಳ ಹಸಿವನ್ನು ದೂರ ಮಾಡಿ, ದೇಹದಲ್ಲಿ ಅನಗತ್ಯ ಕೊಬ್ಬು ಜಮಾಯಿಸುವುದನ್ನು ಸಹ ತಡೆಯಬಹುದು. ಹೀಗಾಗಿ ತೂಕ ಇಳಿಸುವವರಿಗೆ ಇದು ಸೂಕ್ತವಾದ ಆಹಾರವಿದು.

Heart Health In Winter

ಹೃದಯದ ಮಿತ್ರ

ತೋಫುವಿನಲ್ಲಿ ಸ್ಯಾಚುರೇಟೆಡ್‌ ಕೊಬ್ಬಿನ ಪ್ರಮಾಣ ಅತಿ ಕಡಿಮೆ. ಇದರಲ್ಲಿ ಇರುವ ಐಸೊಫ್ಲೇವನ್‌ಗಳು ಎಲ್‌ಡಿಎಲ್‌ ಕೊಲೆಸ್ಟ್ರಾಲ್‌ಗಳ ಜಮಾವಣೆಯನ್ನು ತಗ್ಗಿಸಲು ಸಹಾಯ ಮಾಡುತ್ತವೆ. ಹೀಗೆ ಕೆಟ್ಟ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯ ಕಾಪಾಡಲು ಸೋಯಾ ಪನೀರ್‌ ನೆರವಾಗುತ್ತದೆ.

heart attack and Diabetes control

ಮಧುಮೇಹ ನಿಯಂತ್ರಣ

ತೋಫುವಿನ ಗ್ಲೈಸೆಮಿಕ್‌ ಸೂಚಿ ಕಡಿಮೆಯಿದೆ. ಅಂದರೆ ರಕ್ತದಲ್ಲಿರುವ ಸಕ್ಕರೆಯಂಶ ದಿಢೀರ್‌ ಏರಿಕೆಯಾಗಲು ಇದು ಅವಕಾಶ ನೀಡುವುದಿಲ್ಲ. ದೇಹದ ಚಯಾಪಚಯವನ್ನು ಹೆಚ್ಚಿಸುವ ಇದು, ನಾರು ಮತ್ತು ಪ್ರೊಟೀನನ್ನು ಸಾಂದ್ರವಾಗಿ ಹೊಂದಿದೆ. ಇಂಥ ಆಹಾರಗಳು ಮಧುಮೇಹಿಗಳಿಗೆ ಹೆಚ್ಚಿನ ಪ್ರಯೋಜನವನ್ನು ಒದಗಿಸುತ್ತವೆ. ಗರ್ಭಾವಸ್ಥೆಯ ಮಧುಮೇಹ ಹೊಂದಿದವರ ಮೇಲೆ ನಡೆಸಿದ ಪ್ರಯೋಗದಲ್ಲಿ, ಆರು ವಾರಗಳವರೆಗೆ ಹೆಚ್ಚಿನ ಪ್ರಮಾಣದ ಸೋಯ್‌ ಪ್ರೊಟೀನ್‌ ಸೇವಿಸಿದ ಮಹಿಳೆಯರಲ್ಲಿ ಸಕ್ಕರೆ ಕಾಯಿಲೆ ಗಣನೀಯವಾಗಿ ನಿಯಂತ್ರಣಕ್ಕೆ ಬಂದಿದ್ದು ದಾಖಲಾಗಿದೆ.

ealthy internal organs of human digestive system / highlighted blue organs

ಜೀರ್ಣಾಂಗಗಳು ಕ್ಷೇಮ

ತೋಫುವಿನಲ್ಲಿ ಸಾಕಷ್ಟು ನಾರಿನಂಶವಿದೆ. ಇದು ಮಲಬದ್ಧತೆಯ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ, ನಾರು ಹೆಚ್ಚಿರುವ ಆಹಾರಗಳಿಂದ ಜೀರ್ಣಾಂಗಗಳಲ್ಲಿರುವ ಉತ್ತಮ ಬ್ಯಾಕ್ಟೀರಿಯಗಳ ಸಂಖ್ಯೆಯನ್ನು ವೃದ್ಧಿಸಬಹುದು. ಇದಲ್ಲದೆ, ಕೆಲವು ಬಗೆಯ ತೋಫುಗಳ ತಯಾರಿಕೆಯ ಪ್ರಕ್ರಿಯೆಯಲ್ಲಿ ಒಂದಿಷ್ಟು ಪ್ರೊಬಯಾಟಿಕ್‌ ಬ್ಯಾಕ್ಟೀರಿಯಗಳು ಸೇರಿಕೊಳ್ಳುತ್ತವೆ. ಈ ಎಲ್ಲದರಿಂದ ಜೀರ್ಣಾಂಗಗಳ ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಸಾಧ್ಯವಿದೆ.

Bone Health In Winter

ಮೂಳೆಗಳ ಸಾಂದ್ರತೆ ರಕ್ಷಣೆ

ತೋಫು ತಯಾರಿಸುವ ಪ್ರಕ್ರಿಯೆಯಲ್ಲಿಯೇ ಕ್ಯಾಲ್ಶಿಯಂ ಮತ್ತು ಮೆಗ್ನೀಶಿಯಂ ಇದರಲ್ಲಿ ಸೇರಿಕೊಳ್ಳುತ್ತವೆ. ಮೂಳೆಗಳ ಸಾಂದ್ರತೆಯ ರಕ್ಷಣೆಗೆ ಈ ಖನಿಜಗಳು ಅಗತ್ಯವಾಗಿ ಬೇಕು. ಹಾಗಾಗಿ ಆಸ್ಟಿಯೊಪೊರೊಸಿಸ್‌ ಇರುವಂಥವರಿಗೆ ಇದು ಒಳ್ಳೆಯ ಆಹಾರ. ಜೊತೆಗೆ, ಋತುಬಂಧದ ಸಮಪದಲ್ಲಿರುವವರು, ಯಾವುದೇ ರೀತಿಯ ಕ್ಯಾಲ್ಶಿಯಂ ಕೊರತೆ ಇರುವವರಿಗೂ ಇದು ಸೂಕ್ತ. ಮಿತ ಪ್ರಮಾಣದಲ್ಲಿ ಎಲ್ಲರೂ ಇದನ್ನು ಸೇವಿಸುವುದು ಒಳ್ಳೆಯದೆ.

ಇದನ್ನೂ ಓದಿ: Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

ಜಾಗ್ರತೆ ಮಾಡಿ

ಹಾಗೆಂದು ಇದನ್ನು ಮಿತಿಮೀರಿಯೂ ತಿನ್ನುವಂತಿಲ್ಲ. ಸೋಯ್‌ ಅಲರ್ಜಿ ಇರುವವರು, ಥೈರಾಯ್ಡ್‌ ತೊಂದರೆಗಳು ಇರುವವರು, ಅದರಲ್ಲೂ ಮುಖ್ಯವಾಗಿ ಹೈಪೊ ಥೈರಾಯ್ಡ್‌ ಇರುವವರು, ಕಿಡ್ನಿ ಕಲ್ಲು ಇರುವವರು ಇದನ್ನು ಮಿತವಾಗಿ ಬಳಸುವುದು ಸೂಕ್ತ. ಹೆಚ್ಚಿನ ಪ್ರೊಟೀನ್‌ ಮತ್ತು ನಾರು ಸೇವನೆಯಿಂದ ಕೆಲವರಿಗೆ ಹೊಟ್ಟೆ ಉಬ್ಬರ, ಅಜೀರ್ಣ, ಡಯರಿಯಾ ಕಾಡಬಹುದು. ಹಾಗಾಗಿ ತೋಫು ಒಳ್ಳೆಯದೇ ಆದರೂ ಇದನ್ನು ಮಿತವಾಗಿ ಸೇವಿಸುವುದು ಉತ್ತಮ.

Continue Reading

ಆರೋಗ್ಯ

Tea Tips: ಹಾಲಿನ ಚಹಾ ಬದಲು ಬ್ಲ್ಯಾಕ್‌ ಟೀ ಕುಡಿಯಿರಿ!

ಕಾಫಿ ಮತ್ತು ಚಹಾ ಸೇವನೆ (Tea Tips) ಭಾರತ ಉಪಖಂಡದ ಸಂಸ್ಕೃತಿ ಎನಿಸಿದೆ. ಆದರೆ ಅದನ್ನು ಅತಿಯಾಗಿ ಸೇವಿಸುವುದರಿಂದ ಆಗುವ ಅಡ್ಡ ಪರಿಣಾಮಗಳ ಬಗ್ಗೆ ಐಸಿಎಂಆರ್‌ ಗಮನ ಸೆಳೆದಿದೆ. ಚಾ-ಕಾಪಿ ಕುಡಿಯುವುದಕ್ಕೆ ಮಿತಿ ಎಷ್ಟು, ಯಾವಾಗ ಕುಡಿಯಬಹುದು ಎಂಬಿತ್ಯಾದಿ ಮಾಹಿತಿಗಳನ್ನೂ ನೀಡಿದೆ. ಈ ಲೇಖನ ಓದಿ, ಟೀ ಬಗ್ಗೆ ಒಂದಿಷ್ಟು ಮಾಹಿತಿ ತಿಳಿದುಕೊಳ್ಳಿ.

VISTARANEWS.COM


on

Tea Tips
Koo

ಭಾರತೀಯರಿಗೆ ಕಾಫಿ-ಚಹಾ ಇಲ್ಲದೆ (Tea Tips) ಬೆಳಗಾಗುವುದೇ ಇಲ್ಲ. ಆದರೆ ಅತಿಯಾಗಿ ಕೆಫೇನ್‌ ಸೇವಿಸುವುದರಿಂದ ಆರೋಗ್ಯಕ್ಕೆ ಹಾನಿ ಎಂಬುದು ಎಲ್ಲರಿಗೂ ತಿಳಿದೇ ಇದೆ. ಇದೀಗ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಈ ಬಗ್ಗೆ ವಿಸ್ತೃತವಾದ ನಿರ್ದೇಶನಗಳನ್ನು ನೀಡಿದ್ದು, ಕೆಫೇನ್‌ ಎಷ್ಟು ಸೇವಿಸಬಹುದು ಮತ್ತು ಯಾವಾಗ ಸೇವಿಸಬಹುದು ಎಂಬ ಬಗ್ಗೆ ಉಪಯುಕ್ತ ಮಾಹಿತಿಗಳನ್ನು ನೀಡಿದೆ. ಮಾತ್ರವಲ್ಲ, ಅತಿಯಾದ ಕೆಫೇನ್‌ ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆಯೂ ಎಚ್ಚರಿಕೆ ನೀಡಿದೆ.
ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆ (ಎನ್‌ಐಎನ್‌) ಜೊತೆಗೂಡಿ, 17 ಹೊಸ ಆಹಾರಕ್ರಮದ ನಿರ್ದೇಶನಗಳನ್ನು ಐಸಿಎಂಆರ್‌ ಬಿಡುಗಡೆ ಮಾಡಿದೆ. ಭಾರತೀಯರಿಗಾಗಿಯೇ ಬಿಡುಗಡೆ ಮಾಡಲಾಗಿರುವ ಈ ಮಾರ್ಗದರ್ಶಿ ಸೂತ್ರಗಳು ಆರೋಗ್ಯಕರ ಆಹಾರ ಕ್ರಮವನ್ನು ದೇಶದೆಲ್ಲೆಡೆ ಪ್ರಚುರಪಡಿಸುವ ಉದ್ದೇಶವನ್ನು ಹೊಂದಿವೆ. ಈ ನಿರ್ದೇಶನಗಳಲ್ಲಿ ಅತಿಯಾಗಿ ಕಾಫಿ-ಚಹಾ ಸೇವನೆಯ ಅಡ್ಡ ಪರಿಣಾಮಗಳನ್ನೂ ತಿಳಿಸಲಾಗಿದೆ.

Cup of Tea

ಹೆಚ್ಚಾದರೆ ಏನಾಗುತ್ತದೆ?

ಕಾಫಿ-ಚಹಾ ಹೆಚ್ಚು ಕುಡಿದರೆ ಏನಾಗುತ್ತದೆ ಎನ್ನುವುದಕ್ಕೆ ಸಂಸ್ಥೆ ಸ್ಪಷ್ಟ ಉತ್ತರ ನೀಡಿದೆ. ಚಹಾ, ಕಾಫಿ ಹೆಚ್ಚು ಕುಡಿಯುವುದರಿಂದ ಆಹಾರದಲ್ಲಿನ ಕಬ್ಬಿಣದ ಅಂಶವನ್ನು ಹೀರಿಕೊಳ್ಳಲು ದೇಹಕ್ಕೆ ತೊಡಕಾಗುತ್ತದೆ. ಕೆಫೇನ್‌ ಪೇಯಗಳಲ್ಲಿರುವ ಟ್ಯಾನಿನ್‌ಗಳು ಕಬ್ಬಿಣದಂಶ ಹೀರಿಕೊಳ್ಳಲು ಅಡ್ಡಿಪಡಿಸುತ್ತವೆ. ಇದರಿಂದ ಕಬ್ಬಿಣದಂಶದ ಕೊರತೆಯಾಗಿ ಅನೀಮಿಯ ಉಂಟಾಗಬಹುದು. ಜೊತೆಗೆ, ಕಾಫಿ-ಟೀ ಸೇವನೆ ಹೆಚ್ಚಾದರೆ ರಕ್ತದೊತ್ತಡ ಸ್ಥಿರವಾಗಿರದೆ, ಏರಿಳಿತ ಕಾಣಬಹುದು. ಹೃದಯದ ತೊಂದರೆಗಳು ಅಂಟಿಕೊಳ್ಳಬಹುದು.

ಯಾವಾಗ ಸೇವಿಸಬಹುದು?

ಹೊಟ್ಟೆ ತೀವ್ರವಾಗಿ ಹಸಿದಿದ್ದಾಗ, ಆಹಾರದ ಜೊತೆಗೆ ಅಥವಾ ಆಹಾರ ಸೇವಿಸಿದ ತಕ್ಷಣ ಕೆಫೇನ್‌ ಸೇವನೆ ಸರಿಯಲ್ಲ. ಬದಲಿಗೆ, ಆಹಾರ ಸೇವಿಸಿದ ಒಂದು ತಾಸಿನ ನಂತರ ಕಾಫಿ, ಚಹಾ ಕುಡಿಯಬಹುದು. ಇವುಗಳನ್ನು ಅತಿಯಾಗಿ ಕುಡಿಯುವುದು ಕೇಂದ್ರ ನರಮಂಡಲವನ್ನು ಪ್ರಚೋದಿಸುತ್ತದೆ. ಈ ಮೂಲಕ ವ್ಯಸನವನ್ನೂ ಉಂಟು ಮಾಡುತ್ತದೆ. ಹಾಗಾಗಿ ಇದನ್ನು ಮಿತಿಯಲ್ಲಿ ಇರಿಸಿಕೊಳ್ಳುವುದು ಸೂಕ್ತ.

Black and green tea

ದಿನಕ್ಕೆ ಎಷ್ಟು?

ಇದರರ್ಥ ಕಾಫಿ-ಚಹಾ ಕುಡಿಯುವುದೇ ಬೇಡ ಎಂಬುದಲ್ಲ. ಬದಲಿಗೆ ಮಿತಿ ನಿಗದಿ ಮಾಡಿಕೊಳ್ಳಿ ಎನ್ನುತ್ತದೆ ಈ ನಿರ್ದೇಶನ. ದಿನಕ್ಕೆ 300 ಎಂ.ಜಿ.ಗಿಂತ ಹೆಚ್ಚು ಕೆಫೇನ್‌ ಸೇವನೆ ಸೂಕ್ತವಲ್ಲ. ಆದರೆ ಅದನ್ನು ಲೆಕ್ಕ ಹಾಕುವುದು ಹೇಗೆ? ತಾಜಾ ಡಿಕಾಕ್ಷನ್‌ ತೆಗೆದ 150 ಎಂ.ಎಲ್‌. ಕಾಫಿಯಲ್ಲಿ 80ರಿಂದ 120 ಎಂ.ಜಿ. ಕೆಫೇನ್‌ ಇರುತ್ತದೆ. ಅಷ್ಟೇ ಪ್ರಮಾಣದ ಇನ್‌ಸ್ಟಂಟ್‌ ಕಾಫಿಯಲ್ಲಿ 50ರಿಂದ 65 ಎಂ.ಜಿ. ಕೆಫೇನ್‌ ಇರುತ್ತದೆ. ಒಂದು ಸರ್ವಿಂಗ್‌ ಚಹಾದಲ್ಲಿ 30ರಿಂದ 65 ಎಂ.ಜಿ.ವರೆಗೂ ಕೆಫೇನ್‌ ದೇಹಕ್ಕೆ ದೊರೆಯುತ್ತದೆ. ಈ ಪ್ರಮಾಣಗಳನ್ನು ತಿಳಿದುಕೊಂಡರೆ, ಕೆಫೇನ್‌ ಎಷ್ಟು ಸೇವಿಸುತ್ತಿದ್ದೇವೆ ಎಂಬುದನ್ನು ಲೆಕ್ಕ ಹಾಕುವುದಕ್ಕೆ ಕಷ್ಟವಾಗುವುದಿಲ್ಲ.

ಇದನ್ನೂ ಓದಿ: Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

ಹಾಲಿನ ಚಹಾ ಬೇಡ

ಭಾರತದಲ್ಲಿ ಚಹಾ ಎಂಬುದು ಪ್ರಾರಂಭವಾಗಿದ್ದು ಬ್ರಿಟೀಷರಿಂದ. ಇಂಗ್ಲಿಷ್‌ ಚಹಾ ಎಂದರೆ ಹಾಲು ಸೇರಿಸಿದ ಚಹಾ. ಬ್ಲ್ಯಾಕ್‌ ಟೀ, ಗ್ರೀನ್‌ ಟೀ, ಲೆಮೆನ್‌ ಟೀ ಇತ್ಯಾದಿಗಳೆಲ್ಲ ನಂತರದಲ್ಲಿ ಬಂದಿದ್ದು. ಆದರೆ ಹಾಲು ಬೆರೆಸಿದ ಚಹಾಗಿಂತ ಬ್ಲ್ಯಾಕ್‌ ಟೀ ಸೇವಿಸುವುದು ಒಳ್ಳೆಯದು ಎಂಬುದು ಐಸಿಎಂಆರ್‌ ಅಭಿಮತ. ಇದಕ್ಕೆ ಕಾರಣಗಳೂ ಇಲ್ಲದಿಲ್ಲ. ಬ್ಲ್ಯಾಕ್‌ ಟೀ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಇದರಿಂದ ಹೃದಯದ ಆರೋಗ್ಯ ಸುಧಾರಿಸುವ ಸಂಭವವಿದೆ. ಜೊತೆಗೆ, ಹೊಟ್ಟೆಯ ಕ್ಯಾನ್ಸರ್‌ ಭೀತಿಯನ್ನೂ ಕಡಿಮೆ ಮಾಡುತ್ತದೆ. ಹಾಗಾಗಿ ಹಾಲು ಬೆರೆಸಿದ ಚಹಾ ಸೇವನೆಯನ್ನು ಕಡಿಮೆ ಮಾಡಿ ಎಂಬುದು ಸಂಸ್ಥೆಯ ಕಿವಿಮಾತು.

Continue Reading
Advertisement
IPL 2024
ಪ್ರಮುಖ ಸುದ್ದಿ6 mins ago

IPL 2024 : ಮುಂಬೈ ಕಳಪೆ ಪ್ರದರ್ಶನಕ್ಕೆ ಪಾಂಡ್ಯ ಅಲ್ಲ ರೋಹಿತ್​ ಕಾರಣ ಎಂದ ಹರ್ಭಜನ್ ಸಿಂಗ್​

Narendra Modi
ದೇಶ14 mins ago

Narendra Modi: ಡ್ರಮ್‌, ಜಾಗಟೆ ಬಾರಿಸಿ, ಹಾಡು ಹಾಡಿ; ಮತದಾನ ಹೆಚ್ಚಿಸಲು ಸ್ತ್ರೀಯರಿಗೆ ಕರೆ ಕೊಟ್ಟ ಮೋದಿ

Janardhan Reddy
ರಾಜಕೀಯ17 mins ago

Janardhan Reddy: ಮಡದಿಗಾಗಿ ಮರವೇರಿ ಮಾವು ಕಿತ್ತುಕೊಟ್ಟ ರೆಡ್ಡಿ: ವಿಡಿಯೊ ವೈರಲ್

Harbhajan Singh
ಕ್ರೀಡೆ40 mins ago

Harbhajan Singh : ಭಾರತ ತಂಡದ ಕೋಚ್ ಆಗಲು ಉತ್ಸಾಹ ತೋರಿದ ಹರ್ಭಜನ್​ ಸಿಂಗ್​

Tamil Nadu Officers
ದೇಶ55 mins ago

ಐಎಎಸ್‌ ಆಫೀಸರ್‌ ಆಗಿರುವ ಮಾಜಿ ಪತ್ನಿಯಿಂದ ನನ್ನ ಮನೆಗೆ ವಿದ್ಯುತ್‌ ಕಟ್; ಇದು ಐಪಿಎಸ್‌ ಆಫೀಸರ್‌ ಅಳಲು!

Rameshwaram Cafe Blast
ಕರ್ನಾಟಕ1 hour ago

Rameshwaram Cafe Blast: ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ; 11 ಶಂಕಿತ ಉಗ್ರರು ವಶಕ್ಕೆ

Virat kohli
ಪ್ರಮುಖ ಸುದ್ದಿ1 hour ago

IPL 2024 : ಕೊಹ್ಲಿಯನ್ನು ಗಂಭೀರ್ ಅಪ್ಪಿಕೊಂಡಿದ್ದು ಫೇರ್​ಪ್ಲೇ ಅವಾರ್ಡ್​ಗಾಗಿಯಾ? ಅವರ ಮಾತಲ್ಲೇ ಕೇಳಿ

Phone tapping case and R Ashok demands for CBI investigation
ರಾಜಕೀಯ2 hours ago

Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

Porsche Crash
ದೇಶ2 hours ago

Porsche Crash: 2 ಕಾರು, 4 ನಗರ, 1 ಸಿಮ್‌ ಕಾರ್ಡ್;‌ ಮಗ ಕಾರು ಗುದ್ದಿದ ಬಳಿಕ ಅಪ್ಪನ ಪ್ಲಾನ್‌ ಏನು? ಇಲ್ಲಿದೆ ಭೀಕರ ಮಾಹಿತಿ

IPL 2024
ಕ್ರೀಡೆ2 hours ago

IPL 2024 : ಕೊಹ್ಲಿಯನ್ನೂ ಟೀಕಿಸುವುದರ ನಡುವೆಯೂ ಆರ್​​ಸಿಬಿ ಕಪ್​ ಗೆಲ್ಲುತ್ತದೆ ಎಂದ ಗವಾಸ್ಕರ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು9 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು10 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌