Arthritis Relief: ಸಂಧಿವಾತದ ಸಮಸ್ಯೆಯೇ? ಈ ಹಣ್ಣುಗಳನ್ನು ಆಹಾರ ಕ್ರಮದಲ್ಲಿ ಅಳವಡಿಸಿ - Vistara News

ಆರೋಗ್ಯ

Arthritis Relief: ಸಂಧಿವಾತದ ಸಮಸ್ಯೆಯೇ? ಈ ಹಣ್ಣುಗಳನ್ನು ಆಹಾರ ಕ್ರಮದಲ್ಲಿ ಅಳವಡಿಸಿ

ನಮ್ಮ ಆಹಾರಶೈಲಿಯಿಂದ (Arthritis Food Remedies) ಕೆಲ ಹಣ್ಣುಗಳ ಸೇವೆಯಿಂದ ಕೊಂಚ ಮಟ್ಟಿಗೆ ಹತೋಟಿಗೆ ತರಬಹುದು. ತೀವ್ರನೋವಿಗೆ ಕೊಂಚ ಆರಾಮದಾಯಕ ಉತ್ತರವೂ ಸಿಕ್ಕೀತು. ಹಾಗಾಗಿ ಬನ್ನಿ, ಯಾವೆಲ್ಲ ಹಣ್ಣುಗಳು ಸಂಧಿವಾತಕ್ಕೆ ಒಳ್ಳೆಯದು ಎಂಬುದನ್ನು ನೋಡೋಣ.

VISTARANEWS.COM


on

arthritis relief fruits
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಹಳಷ್ಟು ಮಂದಿಗೆ ಇಂದು ಸಂಧಿವಾತ (ಆರ್ಥ್ರೈಟಿಸ್‌) ಸಾಮಾನ್ಯ ತೊಂದರೆ. ವಯಸ್ಸಾಗುತ್ತ ಹೋದಂತೆ ಸಂಧಿವಾತ ಸಾಮಾನ್ಯ. ಕೆಲವರಿಗೆ ಇದು ಅನುವಂಶೀಯವಾದರೆ, ಇನ್ನೂ ಕೆಲವರಿಗೆ ವಯಸ್ಸಾದಂತೆ ಅಂಟಿಕೊಂಡ ಸಮಸ್ಯೆ. ಮೇಲ್ನೋಟಕ್ಕೆ ಇದು ಸಾಮಾನ್ಯ ತೊಂದರೆಯಾದರೂ, ಇದರ ನೋವು ಬಲ್ಲವನೇ ಬಲ್ಲ. ಮೆಟ್ಟಿಲು ಹತ್ತುವುದರಿಂದ ಹಿಡಿದು ಸಣ್ಣ ಸಣ್ಣ ಚಲನೆಯೂ ಅತೀವ ಹಿಂಸೆ ಕೊಡುವ ನೋವಿದು. ಇದಕ್ಕೆ ಸರಿಯಾದ ಗಮನ ಕೊಡದೇ ಹೋದರೆ ದಿನದಿಂದ ದಿನಕ್ಕೆ ನೋವು ಹೆಚ್ಚಾಗುತ್ತಲೇ ಹೋಗುತ್ತದೆ. ಇದನ್ನು ಪೂರ್ತಿಯಾಗಿ ಗುಣಪಡಿಸಲು ಸೂಕ್ತ ಔಷಧಿ ಇಲ್ಲದಿದ್ದರೂ ಇದನ್ನು ನಮ್ಮ ಆಹಾರಶೈಲಿಯಿಂದ (Arthritis Relief) ಕೆಲ ಹಣ್ಣುಗಳ ಸೇವೆಯಿಂದ ಕೊಂಚ ಮಟ್ಟಿಗೆ ಹತೋಟಿಗೆ ತರಬಹುದು. ತೀವ್ರನೋವಿಗೆ ಕೊಂಚ ಆರಾಮದಾಯಕ ಉತ್ತರವೂ ಸಿಕ್ಕೀತು. ಹಾಗಾಗಿ ಬನ್ನಿ, ಯಾವೆಲ್ಲ ಹಣ್ಣುಗಳು ಸಂಧಿವಾತಕ್ಕೆ ಒಳ್ಳೆಯದು ಎಂಬುದನ್ನು ನೋಡೋಣ.

1. ಸೇಬು: ದಿನಕ್ಕೊಂದು ಸೇಬು ತಿನ್ನುವುದರಿಂದ ವೈದ್ಯರಿಂದ ದೂರವಿರಬಹುದು ಎಂಬ ಗಾದೆಯನ್ನು ನೀವು ಕೇಳಿರಬಹುದು. ಈ ಮಾತು ಸಂಧಿವಾತಕ್ಕೂ ಅನ್ವಯಿಸುತ್ತದೆ. ಸೇಬು ಹಣ್ಣು ಸಾಕಷ್ಟು ಒಳ್ಳೆಯ ಗುಣಗಳನ್ನು ತನ್ನಲ್ಲಿ ಹುದುಗಿಸಿಟ್ಟುಕೊಂಡಿದೆ. ಸೇಬು ಹಣ್ಣಿನಲ್ಲಿ ಊತದಂತಹ ಸಮಸ್ಯೆಗಳಿಗೆ ಉತ್ತರ ನೀಡುವ ಕ್ವೆರ್ಸೆಟಿನ್‌ ಎಂಬ ಅಂಶ ಇರುವುದರಿಂದ ಇದು ಸಂಧಿವಾತದಂತಹ ಸಮಸ್ಯೆಗಳು ಬರದಂತೆ ಕಾಯುತ್ತದೆ. ಅಷ್ಟೇ ಅಲ್ಲ, ಸಂಧಿವಾತದ ನೋವನ್ನು ಕೊಂಚ ಮಟ್ಟಿಗೆ ಶಮನಗೊಳಿಸು ಪ್ರಯತ್ನ ಮಾಡುತ್ತದೆ.

Arthritis pain

2. ಚೆರ್ರಿ: ಚೆರ್ರಿ ಹಣ್ಣುಗಳು ಸಂಧಿವಾತಕ್ಕೆ ಹೇಳಿ ಮಾಡಿಸಿದಂತಹ ಹಣ್ಣು. ಚೆರ್ರಿ ಹಣ್ಣಿನಲ್ಲಿ ಆಂಥೋ ಸಯನಿನ್ ಎಂಬ ಅಂಶ ಇದ್ದು, ಇದು ಸಂಧಿವಾತದಂತಹ ನೋವುಗಳಿಗೆ ಉತ್ತಮ ನಿವಾರಕವಾಗಿ ಕೆಲಸ ಮಾಡುತ್ತದೆ. ಚೆರ್ರಿ ಹಣ್ಣು ತಿನ್ನುವುದರಿಂದ ಅಥವಾ ಚೆರ್ರಿ ಜ್ಯೂಸ್‌ ಕುಡಿಯುವುದರಿಂದ ನೋವಿನಿಂದ ಕೊಂಚ ಮಟ್ಟಿಗೆ ಸಮಾಧಾನ ಪಡೆಯಬಹುದು.

3. ಅನನಾಸು: ಅನನಾಸಿನಲ್ಲಿ ಬೊಮೆಲೈನ್‌ ಎಂಬ ಎನ್‌ಝೈಮ್‌ ಇರುವುದರಿಂದ ಇದರಲ್ಲಿರುವ ನೋವುನಾಶಕ ಗುಣ ಸಂಧಿವಾತದಂತಹ ಸಮಸ್ಯೆಗಳಿಗೆ ಉತ್ತಮ ಪರಿಹಾರ ಒದಗಿಸುತ್ತದೆ. ನಿತ್ಯವೂ ಅನನಾಸು ಸೇವನೆಯಿಂದ ಸಂಧಿವಾತದ ನೋವಿನಲ್ಲಿ ಪರಿಣಾಮಕಾರಿ ಬದಲಾವಣೆ ಗಮನಿಸಬಹುದು. ಗಂಟು ನೋವು, ಊತದಂತಹ ಸಮಸ್ಯೆಗಳೂ ಇದರಿಂದ ಕಡಿಮೆಯಾಗಬಹುದು.

pineapple

ಇದನ್ನೂ ಓದಿ: Health Tips: ಬೆಳ್ಳಂಬೆಳಗ್ಗೆ ಶೌಚವೇ ಒಂದು ಸಮಸ್ಯೆ: ಸುಲಭ ಶೌಚಕ್ಕೆ ಪಂಚಸೂತ್ರಗಳು!

4. ಬ್ಲೂಬೆರ್ರಿ: ಬ್ಲೂಬೆರ್ರಿ ಭಾರತದಲ್ಲಿ ಸುಲಭವಾಗಿ ದೊರೆಯದಿದ್ದರೂ ಇದು ಸಾಕಷ್ಟು ಪೋಷಕಾಂಶಗಳನ್ನು ಹೊತ್ತು ತಂದಿರುವ ಪವರ್‌ಹೌಸ್‌ ಹಣ್ಣು. ಇದರಲ್ಲಿ ಸಾಕಷ್ಟು ಆಂಟಿ ಆಕ್ಸಿಡೆಂಟ್‌ಗಳು ಇರುವುದರಿಂದ ಜೊತೆಗೆ ಆಂಥೋಸಯನಿನ್ಗಳೂ ಇರುವುದರಿಂದ ನೋವಿನ ಶಮನಕಾರಿಯಾಗಿ ಕೆಲಸ ಮಾಡುತ್ತದೆ. ಒತ್ತಡದಂತಹ ಸಮಸ್ಯೆಗೂ ಇದು ಒಳ್ಳೆಯ ಆಹಾರ. ಇದರ ಸೇವನೆಯಿಂದ ದೇಹದ ನೋವುಗಳಲ್ಲಿ ಸಾಕಷ್ಟು ಉತ್ತಮ ಪರಿಣಾಮ ಕಾಣಬಹುದು.

orange fruit benefits

5. ಕಿತ್ತಳೆ: ಕಿತ್ತಳೆ ಹಣ್ಣು ಕೇವಲ ತಾಜಾ ಅನುಭೂತಿ ನೀಡಿ ದಾಹ ಇಂಗಿಸುವುದಷ್ಟೇ ಅಲ್ಲ, ಇದರಲ್ಲಿರುವ ಸಿ ವಿಟಮಿನ್‌ ದೇಹಕ್ಕೆ ಅತ್ಯಂತ ಅಗತ್ಯಾದ ಪೋಷಕಾಂಶ. ವಿಟಮಿನ್‌ ಸಿಗೆ ಸಾಕಷ್ಟು ನೋವುಗಳಿಗೆ, ರೋಗಗಳಿಗೆ ಮದ್ದಾಗುವ ಗುಣವಿದೆ. ಇದು ದೇಹದ ಉರಿಯೂತವನ್ನೂ ಕಡಿಮೆ ಮಾಡುವುದರಿಂದ ಸಂಧಿವಾತದಿಂದ ಉಲ್ಬಣಿಸುವ ಸ್ನಾಯುಸೆಳೆತ, ಗಂಟು ನೋವು, ಬಾವುಗಳನ್ನು ಕಡಿಮೆಗೊಳಿಸುವಲ್ಲಿ ಸಹಾಯ ಮಾಡುತ್ತದೆ.

ಆಹಾರದಲ್ಲಿ ಶಿಸ್ತು, ಸಂಧಿವಾತಕ್ಕೆ ಪೂರಕ ಆಹಾರ ಸೇವನೆ ಇತ್ಯಾದಿಗಳಿಂದ ಸಂಧಿವಾತದಂತಹ ತೊಂದರೆಯನ್ನು ಕೊಂಚ ಹಿಡಿತದಲ್ಲಿ ಇಟ್ಟುಕೊಳ್ಳಬಹುದು.

ಇದನ್ನೂ ಓದಿ: Health Tips: ಬಾರ್ಲಿ ನೀರಿನಲ್ಲಿದೆ ಹಲವು ಹಲವು ಆರೋಗ್ಯ ಪ್ರಯೋಜನ, ಇದು ಬೇಸಿಗೆಯ ಸಂಗಾತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

Heat Wave : ವಿಪರೀತ ತಾಪಮಾನವು ಜನರಿಗೆ ತಲೆ ಬಿಸಿ (highest temperature) ಮಾಡಿದೆ. ಅನಾರೋಗ್ಯ ಸಮಸ್ಯೆ ಹೆಚ್ಚಾಗುತ್ತಿದ್ದು, ಈ ನಡುವೆ ದಾಖಲೆಯಲ್ಲಿ ಉಷ್ಣಾಂಶ ಏರಿಕೆ ಆಗುತ್ತಿದೆ. ಮುಂದಿನ ಐದು ದಿನಗಳಿಗೆ ಹೀಟ್‌ ವೇವ್ಸ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೇಸಿಗೆಯ ಬೇಗೆ ಶುರುವಾಗಿದ್ದು, ಜನರು ಹನಿ ನೀರಿಗೂ (Karnataka Weather Forecast) ಹೆಣಗಾಡುತ್ತಿದ್ದಾರೆ. ಈ ಮಧ್ಯೆ ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಉಷ್ಣಾಂಶ ಏರಿಕೆ ಆಗಿದೆ. ಇದರಿಂದಾಗಿ ಜನರು ಪರಿತಪಿಸುವಂತಾಗಿದೆ (bangalore temperature) ಈ ಬಗ್ಗೆ ಹವಾಮಾನ ಇಲಾಖೆ (bangalore weather) ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನಿನ್ನೆ ಗುರುವಾರ ಒಂದೇ ದಿನ ತಾಪಮಾನ ಏರಿಕೆ ಆಗಿದೆ.

ರಾಜಧಾನಿ ಬೆಂಗಳೂರಲ್ಲಿ ಗರಿಷ್ಠ ತಾಪಮಾನವು 37.8 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಕಳೆದ 28 ವರ್ಷದಲ್ಲೇ ಗರಿಷ್ಠ ತಾಪಮಾನ ಇದಾಗಿದೆ. ಕಳೆದೊಂದು ವಾರದಿಂದ 36 ಡಿಗ್ರಿ ಸೆಲ್ಸಿಯಸ್ ಇದ್ದ ತಾಪಮಾನವು ನಿನ್ನೆ ಗುರುವಾರ 37.8 ಡಿ.ಸೆಗೆ ಏರಿಕೆ ಆಗಿತ್ತು. 1996ರಲ್ಲಿ ಬೆಂಗಳೂರಲ್ಲಿ 37.3 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತು, ಇದೀಗ ಈ ದಾಖಲೆಯು ನಿನ್ನೆ ಉಡೀಸ್‌ ಆಗಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಬೆಂಗಳೂರು ಮಾತ್ರವಲ್ಲ ಕಲಬುರಗಿ, ಬಾಗಲಕೋಟೆ, ರಾಯಚೂರು, ಬಳ್ಳಾರಿ ಹಾಗೂ ವಿಜಯಪುರ, ಕೊಪ್ಪಳದಲ್ಲಿ ಅತ್ಯಾಧಿಕ ತಾಪಮಾನ ದಾಖಲಾಗಿದೆ. ಈ ಬಗ್ಗೆ ಗರಿಷ್ಠ ಉಷ್ಣಾಂಶ ದಾಖಲಾದ ಬಗ್ಗೆ ಹವಾಮಾನ ಇಲಾಖೆ ಪಟ್ಟಿ ಬಿಡುಗಡೆ ಮಾಡಿದೆ.

ಜಿಲ್ಲೆಗರಿಷ್ಠ ತಾಪಮಾನದಿನ ಹಾಗೂ ವರ್ಷ
ಬೆಂಗಳೂರು37.3 ಡಿ.ಸೆ29th 1996
ಕಲಬುರಗಿ4331st 1996
ಬಾಗಲಕೋಟೆ41.631st 1996
ರಾಯಚೂರು44.627th 1992
ಬಳ್ಳಾರಿ4330th 1996
ಕೊಪ್ಪಳ40.224th 2019
ವಿಜಯಪುರ41.929, 30th 1996

ಇನ್ನೂ 5 ದಿನಗಳು ಸುಡುವ ಕೆಂಡ

ಬೇಸಿಗೆ ಆರಂಭವಾಗುವ ಮೊದಲೇ ಜನರು ಬೇಸಿಗೆಯ ಅನುಭವಿಸಿದ್ದರು. ಮಾರ್ಚ್‌ ಮುಗಿಯುವ ಮೊದಲೇ ಸೂರ್ಯ ದಿನೇದಿನೆ ಪ್ರಖರವಾಗುತ್ತಿದ್ದಾನೆ. ಎಲ್ಲ ರಾಜ್ಯಗಳಲ್ಲೂ ಬೇಸಿಗೆಯನ್ನು ಎದುರಿಸಲು, ಅಗತ್ಯ ಪರಿಹಾರ ಕ್ರಮ ತೆಗೆದುಕೊಳ್ಳಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ಈ ಬೆನ್ನಲ್ಲೇ ಮುಂದಿನ ಐದು ದಿನಗಳು ಕೆಲವು ಕಡೆ 40 ರಿಂದ 50 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇದು ಖಂಡಿತವಾಗಿಯೂ ಆರೋಗ್ಯಕ್ಕೆ ತುಂಬಾ ಅಪಾಯಕಾರಿಯಾದ ತಾಪಮಾನವಾಗಿದೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿ ಹೀಗಿದೆ..

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆಯು (Health Department) ಕೆಲವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಸಲಹೆಗಳನ್ನೂ ನೀಡಲಾಗಿದೆ. ಜತೆಗೆ ಮಾಲೀಕರು ಹಾಗೂ ಕೆಲಸಗಾರರಿಗೂ ಒಂದಷ್ಟು ಮುಂಜಾಗ್ರತಾ ಕ್ರಮಗಳನ್ನು (Health Tips) ಕೈಗೊಳ್ಳಲಾಗಿದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಇದನ್ನೂ ಓದಿ: Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಅಗ್ನಿ ಅವಘಡದ ಕುರಿತು ಎಚ್ಚರಿಕೆ ವಹಿಸಿ

ಬೇಸಿಗೆ ಸಮಯದಲ್ಲಿ ಅತಿಯಾದ ತಾಪಮಾನದಿಂದ ಆರೋಗ್ಯ ಕೇಂದ್ರಗಳಲ್ಲಿ ಅಗ್ನಿ ಅನಾಹುತಗಳಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತೆಯನ್ನು ವಹಿಸುವಂತೆ ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್‌ ಎಲ್ಲಾ ಆಸ್ಪತ್ರೆಗಳಿಗೂ ಸೂಚನೆ ನೀಡಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳೂ ಸೇರಿದಂತೆ ಎಲ್ಲಾ ಹಂತದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ, ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ, ಬೆಂಕಿ ನಂದಿಸುವ ಉಪಕರಣಗಳ ಲಭ್ಯತೆ ಇರಬೇಕು. ಅಗ್ನಿಶಾಮಕ ದಳದಿಂದ No Objection Certificate ಅನ್ನು ಹೊಂದಿರಬೇಕು. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಂಡು ಆರೋಗ್ಯ ಸಂಸ್ಥೆಗಳಲ್ಲಿ ಅಗ್ನಿ ಅವಘಡಗಳನ್ನು ತಡೆಗಟ್ಟುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Heart Attack : ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

BMTC Bus: ಬಿಎಂಟಿಸಿ ಬಸ್‌ ಏರಿದ ವೃದ್ಧರೊಬ್ಬರು ಟಿಕೆಟ್ ಪಡೆದು ಸೀಟ್‌ನಲ್ಲಿ ಕುಳಿತುಕೊಂಡಾಗ ಹಠಾತ್‌ ಹೃದಯಾಘಾತ (Heart Attack) ಸಂಭವಿಸಿದೆ. ಬಸ್‌ ಹತ್ತಿದ ಹತ್ತೇ ನಿಮಿಷದಲ್ಲಿ ಪ್ರಾಣ ಪಕ್ಷಿ ಹಾರಿ ಹೋಗಿದೆ.

VISTARANEWS.COM


on

By

Heart Attack
Koo

ಬೆಂಗಳೂರು: ಹೃದಯಾಘಾತ (Heart Attack) ವೃದ್ಧರೊಬ್ಬರ ಪ್ರಾಣವನ್ನು ಬಲಿ ಪಡೆದಿದೆ. ಈಗೀಗ ಹೃದಯಾಘಾತ (Heart attack) ಯಾವುದೇ ಕ್ಷಣದಲ್ಲಿ ಆಗಿಬಿಡಬಹುದು ಎನ್ನುವಷ್ಟು ಭಯಾನಕವಾಗಿದೆ. ಕುಳಿತಲ್ಲೇ, ಕುಸಿದುಬಿದ್ದು ಪ್ರಾಣ ಕಳೆದುಕೊಳ್ಳುವ, ನಿಂತಲ್ಲೇ ಉಸಿರು ನಿಲ್ಲುವ, ಮಲಗಿದ್ದಲ್ಲೇ ಉಸಿರು ಚೆಲ್ಲುವ ವಿದ್ಯಮಾನಗಳು ಏಕಾಏಕಿ ಹೆಚ್ಚಾಗಿದೆ.

ಇಂಥಹುದೇ ಒಂದು ಆತಂಕ ಮೂಡಿಸುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೃದ್ಧರೊಬ್ಬರು ಕುಳಿತಲ್ಲೇ ಕುಸಿದಿದ್ದು, ಕ್ಷಣಾರ್ಧದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹಠಾತ್ ಹೃದಯಾಘಾತದಿಂದ ವೃದ್ಧ ಪ್ರಾಣ ಕಳೆದುಕೊಂಡಿದ್ದಾರೆ.

ಕೃಷ್ಣ (60) ಮೃತ ದುರ್ದೈವಿ. 11 ಗಂಟೆ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಿಂದ ಬಸ್ ಹತ್ತಿದ್ದ ಕೃಷ್ಣ ಅವರು ಟಿಕೆಟ್ ಪಡೆದು ಸೀಟ್‌ನಲ್ಲಿ ಕುಳಿತುಕೊಂಡಿದ್ದರು. ನವರಂಗ್ ಬಳಿ ಬರುತ್ತಿದ್ದಂತೆ ಹದಿನೈದು ನಿಮಿಷದಲ್ಲೇ ಹೃದಯಾಘಾತವಾಗಿದೆ. ನೋಡನೋಡುತ್ತಿದ್ದಂತೆ ಬಸ್ಸಿನಲ್ಲೇ ಉಸಿರು ಚೆಲ್ಲಿದ್ದಾರೆ.

ಏಕಾಏಕಿ ವ್ಯಕ್ತಿ ಮೃತಪಟ್ಟಿದ್ದು ಕಂಡ ಸಹಪ್ರಯಾಣಿಕರು ಆತಂಕಗೊಂಡು ಕಿರುಚಾಡಿದ್ದಾರೆ. ಕೂಡಲೇ ಚಾಲಕ ಹಾಗು ನಿರ್ವಾಹಕರು ಬಿಎಂಟಿಸಿ ಬಸ್‌ನಲ್ಲೇ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾಗಿ ಘೋಷಿಸಿದ್ದಾರೆ. ಬಳಿಕ ಮೃತ ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹಾಸನದಲ್ಲಿ ಅಕ್ರಮ ಗೋಮಾಂಸ ಜಾಲ; 60 ಗೋವುಗಳನ್ನು ಕೊಂದ ರಾಕ್ಷಸರು!

ಚಿಕ್ಕಬಳ್ಳಾಪುರದಲ್ಲಿ ಅತ್ತೆಯನ್ನು ಎಳೆದೊಯ್ದು ತಿಪ್ಪೆಗೆ ಎಸೆದ ಕ್ರೂರ ಸೊಸೆ; ವೃದ್ಧೆಯ ತಪ್ಪೇನು?

ಚಿಕ್ಕಬಳ್ಳಾಪುರ‌: ಹೆತ್ತ ತಂದೆ-ತಾಯಿಯನ್ನೇ ವಯಸ್ಸಾಗುತ್ತಲೇ ವೃದ್ಧಾಶ್ರಮಕ್ಕೆ ಸೇರಿಸುವ ಮಕ್ಕಳಿದ್ದಾರೆ. ಇನ್ನು, ತಾಯಿ ಸಮಾನಳಾದ ಅತ್ತೆ ಮೇಲೆ ಸೊಸೆಯಂದಿರುವ ತೋರುವ ದರ್ಪ, ಹಲ್ಲೆಯ ಸುದ್ದಿಗಳಂತೂ ಆಗಾಗ ಕೇಳಿಸುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ (Chikkaballapur District) ಮಹಿಳೆಯೊಬ್ಬರು 80 ವರ್ಷದ ಅತ್ತೆಯನ್ನು (Mother In Law) ಎಳೆದೊಯ್ದು, ತಿಪ್ಪೆಗೆ ಎಸೆಯುವ ಮೂಲಕ ಅಮಾನವೀಯತೆ ತೋರಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪಗಾರಿಪಲ್ಲಿ ಗ್ರಾಮದಲ್ಲಿ ಸೊಸೆಯು ಅತ್ತೆಯ ಮೇಲೆ ಮೃಗೀಯ ವರ್ತನೆ ತೋರಿದ್ದಾಳೆ. 80 ವರ್ಷದ ವೆಂಕಟಲಕ್ಷ್ಮಮ್ಮ ಅವರು ಮನೆಯ ಎದುರು ಮಲಗಿದ್ದಾಗ ಲಕ್ಷ್ಮೀದೇವಮ್ಮ ಎಂಬ ಮಹಿಳೆಯು ಅವರನ್ನು ಎಳೆದಿದ್ದಾರೆ. ವೃದ್ಧೆ ಎಂಬುದನ್ನೂ ಲೆಕ್ಕಿಸದ ಸೊಸೆಯು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಿಸಿಲು ಎಂದು ನೆರಳಿನಲ್ಲಿ ಮಲಗಿದ್ದ ಅತ್ತೆಯ ಮೇಲೆ ಸೊಸೆ ತೋರಿದ ಕ್ರೌರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಳಿಯ ವಯಸ್ಸಿನಲ್ಲಿ ಎರಡು ಹೊತ್ತು ಊಟ ಸಿಕ್ಕರೆ ಸಾಕು ಎಂದು ಬಯಸುವ ಜೀವಕ್ಕೆ ಕಿರುಕುಳ ನೀಡಲು ಅವರು ಮಾಡಿದ ತಪ್ಪೇನು ಎಂಬುದು ತಿಳಿದುಬಂದಿಲ್ಲ. ವೆಂಕಟಲಕ್ಷ್ಮಮ್ಮ ಅವರನ್ನು ಎಳೆದು, ತಿಪ್ಪೆಗೆ ಎಸೆಯುವಾಗ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮರೆಯಾದ ಮಾನವೀಯತೆ: ಮಹಿಳೆ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ ಮೆರವಣಿಗೆ; ನಾಲ್ವರು ಮಹಿಳೆಯರ ಬಂಧನ

ನನಗೇಕೆ ಕುಕ್ಕರ್‌ ನೀಡಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಉಜ್ಜನಿ ಗ್ರಾಮದಲ್ಲಿ ಮತದಾರರಿಗೆ ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಹಂಚಿಕೆ ಆರೋಪ ಕೇಳಿಬಂದಿದೆ. ಇನ್ನು, ಗ್ರಾಮದಲ್ಲಿ ಕುಕ್ಕರ್ ವಿತರಣೆಯಲ್ಲಿ ತಾರತಮ್ಯ ಮಾಡಿದ್ದಾರೆ, ನನಗ್ಯಾಕೆ ಕುಕ್ಕರ್‌ ನೀಡಿಲ್ಲ ಎಂದು ಕೇಳಿದ ವೃದ್ಧೆ ಮೇಲೆ ಹಲ್ಲೆ ಮಾಡಿರುವುದು ಕಂಡುಬಂದಿದೆ.

ಉಜ್ಜನಿ ಗ್ರಾಮದ ಗಂಗಮ್ಮ (75) ಹಲ್ಲೆಗೊಳಗಾದ ವೃದ್ಧೆ. ಕಾಂಗ್ರೆಸ್ ಕಾರ್ಯಕರ್ತ ನಾರಾಯಣ್ ಎಂಬಾತನ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ಗಾಯಗೊಂಡ ವೃದ್ಧೆಗೆ ಹುಲಿಯೂರುದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆರೋಗ್ಯ

Health Tips: ನಮ್ಮ ಅನಾರೋಗ್ಯದಲ್ಲಿ ನಾವು ಬಳಸುವ ಪಾತ್ರೆಗಳ ಪಾತ್ರವೇ ಮುಖ್ಯ!

ನಾವು ಅಡುಗೆ ಮಾಡುವ ಪಾತ್ರೆಗಳು ಸಹ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆಂಬುದು ಗೊತ್ತೇ? ಹಾಗಾಗಿಯೇ ಹಳೆಯ ಕಾಲದ ಹಿತ್ತಾಳೆ, ತಾಮ್ರ, ಮಣ್ಣಿನ ಪಾತ್ರೆಗಳು ಮತ್ತೆ ಜನಪ್ರಿಯಗೊಳ್ಳುತ್ತಿವೆ. ಏನು ಈ ಪಾತ್ರೆಗಳ ಮಹತ್ವ? ಇಲ್ಲಿದೆ ಈ ಕುರಿತ (Health Tips) ಉಪಯುಕ್ತ ಮಾಹಿತಿ.

VISTARANEWS.COM


on

Cooking utensils Health Tips
Koo

ಅಡುಗೆ ಮನೆಯ ಸ್ವರೂಪಗಳು ಹಿಂದಿನ ಕಾಲಕ್ಕಿಂತ ಇಂದಿಗೆ ನೂರಕ್ಕೆ ನೂರರಷ್ಟು ಬದಲಾಗಿವೆ. ಮಾಡುವ ಅಡುಗೆಯ ವಿಷಯದಲ್ಲಿ ಅಲ್ಲ ಇಲ್ಲಿ ಹೇಳುತ್ತಿರುವುದು; ಅಡುಗೆ ಮನೆಯ ಕಾಣುವ-ಮನಗಾಣುವ ವಿಷಯಕ್ಕೆ ಇದು ಅನ್ವಯ. ಉದಾ, ಸ್ಟೀಲ್‌ ಪಾತ್ರೆಗಳು, ಗಾಜಿನ ಅಥವಾ ನಾನ್‌ಸ್ಟಿಕ್‌ ಪಾತ್ರೆಗಳು ಮಾತ್ರವೇ ಈಗಿನ ಅಡುಗೆ ಮನೆಗಳಲ್ಲಿ ಕಾಣಸಿಗುತ್ತವೆ. ಕಾಲಕ್ಕೆ ತಕ್ಕಂತೆ ನಡೆಯುವುದರಲ್ಲಿ ತಪ್ಪೇನಿಲ್ಲ. ಇದರರ್ಥ ಹಳೆಯದನ್ನೆಲ್ಲಾ ಬಿಡಬೇಕೆಂದೂ ಅಲ್ಲ. ಹಳೆಯ ಕಾಲದ ತಾಮ್ರ, ಹಿತ್ತಾಳೆಯ ಪಾತ್ರೆಗಳನ್ನು ನಿಭಾಯಿಸುವುದು ಕಷ್ಟ. ಫಳಫಳ ಎನಿಸುವುದಕ್ಕೆ ಪದೇಪದೆ ಹುಳಿ ಹಾಕಿ ಉಜ್ಜಬೇಕು, ಮೊದಲಿನಂತೆ ಕಲಾಯಿ ಹಾಕುವವರೂ ಇಲ್ಲ ಈಗ- ಇಂಥ ಎಲ್ಲಾ ತಕರಾರುಗಳೂ ಸಮ್ಮತವೇ. ಆದರೆ ಆರೋಗ್ಯಕ್ಕೆ ಆಗುವ ಅನುಕೂಲಗಳ ಬಗ್ಗೆ ನಾವೀಗ ಒಮ್ಮತಕ್ಕೆ ಬರಬಹುದಲ್ಲ. ಅದರಲ್ಲೂ ಇತ್ತೀಚೆಗೆ ದೊರೆಯುವ ತಾಮ್ರ, ಪಿಂಗಾಣಿ ಮತ್ತು ಹಿತ್ತಾಳೆಯ ಪಾತ್ರೆಗಳು ಬಳಕೆಗೆ ಸರಳ ಮತ್ತು ನೋಡುವುದಕ್ಕೆ ಸುಂದರ. ಕೆಲವು ಅಡುಗೆಗಳಿಗೆ ಕಬ್ಬಿಣ ಅಥವಾ ಮಣ್ಣಿನ ಪಾತ್ರೆಗಳು ಸೂಕ್ತ. ಏನು (Health Tips) ಅವುಗಳ ಮಹತ್ವ?

kitchen utensil

ಪೌಷ್ಟಿಕಾಂಶ ಕಾಪಾಡುತ್ತದೆ

ತಾಮ್ರ, ಹಿತ್ತಾಳೆಯ ಪಾತ್ರೆಗಳು ಒಮ್ಮೆ ಬಿಸಿಯಾದರೆ ದೀರ್ಘಕಾಲದವರೆಗೆ ಬಿಸಿ ಕಾಯ್ದುಕೊಂಡಿರುತ್ತವೆ. ಮಾತ್ರವಲ್ಲ, ಇಡೀ ಪಾತ್ರೆ ಒಂದೇಸಮ ಬಿಸಿಯಾಗುತ್ತದೆ, ಹೆಚ್ಚು-ಕಡಿಮೆ ಇಲ್ಲದಂತೆ. ಇದರಿಂದ ಇಂಥ ಪಾತ್ರೆಗಳಲ್ಲಿ ಮಾಡುವ ಅಡಿಗೆಗಳನ್ನು ದೀರ್ಘಕಾಲ ಬೆಂಕಿಯಲ್ಲಿ ಇಡುವುದು ಬೇಡ. ಸ್ವಲ್ಪ ಕಾಲ ಉರಿಯಲ್ಲಿಟ್ಟರೂ ಸಾಕು, ಉಳಿದಂತೆ ಪಾತ್ರೆಯ ಶಾಖಕ್ಕೇ ಬೇಯುವ ಪ್ರಕ್ರಿಯೆ ಜಾರಿಯಲ್ಲಿರುತ್ತದೆ. ಒಲೆಯ ಕಾವಿನಲ್ಲಿ ಹಾಗೆಯೇ ಬಿಟ್ಟರೆ ದೀರ್ಘಕಾಲದವರೆಗೆ ಬಿಸಿ ಕಾಪಾಡಿಕೊಂಡು, ಮತ್ತೆಮತ್ತೆ ಬಿಸಿ ಮಾಡುವ ಸಮಸ್ಯೆಯನ್ನು ನಿವಾರಿಸುತ್ತದೆ. ಹಾಗಾಗಿ ಪೌಷ್ಟಿಕಾಂಶ ಮತ್ತು ಇಂಧನ- ಎರಡೂ ಉಳಿಯುತ್ತವೆ.

ಸೋಂಕುಗಳಿಗೆ ಕಡಿವಾಣ

ತಾಮ್ರ ಮತ್ತು ಹಿತ್ತಾಳೆಯಲ್ಲಿಟ್ಟ ಆಹಾರದ ಸೇವನೆಯಿಂದ ದೇಹದ ರೋಗನಿರೋಧಕ ಶಕ್ತಿ ವರ್ಧಿಸುತ್ತದೆ. ಅದರಲ್ಲೂ ನೆಗಡಿ-ಕೆಮ್ಮು-ದಮ್ಮಿನಂಥ ಸಮಸ್ಯೆಗಳಿಗೆ ಪದೇಪದೆ ತುತ್ತಾಗುವವರಿಗೆ ಬೆಳ್ಳಿ, ತಾಮ್ರ ಅಥವಾ ಹಿತ್ತಾಳೆ ಪಾತ್ರೆಯಲ್ಲಿಟ್ಟ ನೀರು ಕುಡಿಸುವ ಪದ್ಧತಿ ಹಿಂದಿನಿಂದಲೂ ಜಾರಿಯಲ್ಲಿದೆ. ಹಿತ್ತಾಳೆ ಪಾತ್ರೆಗಳಲ್ಲಿ ಅಡುಗೆ ಮಾಡುವುದರಿಂದ, ರಕ್ತದಲ್ಲಿ ಹಿಮೋಗ್ಲೋಬಿನ್‌ ವೃದ್ಧಿಗೆ ಸಹಾಯಕವಾಗುತ್ತದೆ. ತಾಮ್ರದ ಪಾತ್ರೆಯ ನೀರು ಕುಡಿಯುವುದರಿಂದ ದೇಹದಲ್ಲಿ ಉರಿಯೂತಗಳು ಕಡಿಮೆಯಾಗುತ್ತವೆ. ಕೀಲುನೋವಿನಂಥ ಸಮಸ್ಯೆಗಳಿಗೆ ಇದು ಉಪಯುಕ್ತ.

ಕಬ್ಬಿಣದ ಪಾತ್ರೆಗಳು

ಇಂಥವು ಬಳಕೆಯಲ್ಲಿರುವುದೇ ಬೆರಳೆಣಿಕೆಯಷ್ಟು. ಅದರಲ್ಲೂ ಬಾಣಲೆ ಮತ್ತು ತವಾಗಳು ಕಬ್ಬಿಣದ್ದಾದರೆ ಸೂಕ್ತ. ದೋಸೆ, ರೊಟ್ಟಿ, ಪಡ್ಡು ಇಂಥ ಕಾವಲಿಗಳು ಮೊದಲಿನಿಂದಲೂ ಕಬ್ಬಿಣದ್ದೇ ಇರುತ್ತಿದ್ದವು. ಇವುಗಳನ್ನೆಲ್ಲ ನಾನ್‌ಸ್ಟಿಕ್‌ಗೆ ಬದಲಾಯಿಸಿ ಹಲವು ಕಾಲ ಸಂದಿದೆ. ಆದರೆ ಹುರಿಯುವ, ಕರಿಯುವ, ಬೇಯಿಸುವ ಪಾತ್ರೆ ಕಬ್ಬಿಣದ್ದಾದರೆ ದೇಹದಲ್ಲಿ ಕಬ್ಬಿಣಾಂಶದ ಕೊರತೆಯನ್ನು ನೀಗಿಸಲು ಸಹಾಯವಾಗಬಹುದು. ರಕ್ತಹೀನತೆಯಂಥ ತೊಂದರೆಗಳು ಗಂಟಿಕ್ಕಿಕೊಳ್ಳದಂತೆ ಕಾಪಾಡಿಕೊಳ್ಳಬಹುದು.

weight loss

ತೂಕ ಇಳಿಕೆ

ನಮ್ಮ ದೇಹದ ಜೀರ್ಣಾಂಗವನ್ನು ಚುರುಕುಗೊಳಿಸುವಂಥ ಅಂಶಗಳು ಈ ಲೋಹಗಳಿಗಿವೆ. ಹಾಗಾಗಿ ಆಸಿಡಿಟಿ, ಅಜೀರ್ಣ, ವಾಯುಪ್ರಕೋಪ, ಮಲಬದ್ಧತೆಯಂಥ ಸಮಸ್ಯೆಗಳನ್ನು ದೂರಮಾಡಲು ನೆರವಾಗುತ್ತದೆ. ಹೊಟ್ಟೆಯನ್ನು ಸ್ವಚ್ಛವಾಗಿಟ್ಟು, ಪೌಷ್ಟಿಕಾಂಶಗಳನ್ನು ಹೀರಿಕೊಳ್ಳಲು ದೇಹಕ್ಕೆ ನೆರವಾಗುತ್ತದೆ. ಜೀರ್ಣಾಂಗದ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮೂಲಕ, ದೇಹದಲ್ಲಿ ಕೊಬ್ಬು ಶೇಖರವಾಗುವುದನ್ನು ತಡೆದು, ತೂಕ ಇಳಿಸುವುದಕ್ಕೂ ಸಹಕಾರಿಯಾಗುತ್ತದೆ. ಮಾತ್ರವಲ್ಲ, ನಮ್ಮ ಕಣ್ಣು ಮತ್ತು ಚರ್ಮದ ಆರೋಗ್ಯವನ್ನೂ ಉತ್ತಮಪಡಿಸುತ್ತದೆ.

Heart Health In Winter

ಹೃದಯಾರೋಗ್ಯ

ರಕ್ತದೊತ್ತಡವನ್ನು ಕಡಿಮೆ ಮಾಡುವ ಗುಣ ತಾಮ್ರಕ್ಕಿದೆ. ಈ ಲೋಹಗಳನ್ನು ನಿಯಮಿತವಾಗಿ ಬಳಸಿದಲ್ಲಿ ಕೊಲೆಸ್ಟ್ರಾಲ್‌ ಮತ್ತು ರಕ್ತದೊತ್ತಡ ನಿಯಂತ್ರಣಕ್ಕೆ ನೆರವು ದೊರೆತು ಹೃದಯಾರೋಗ್ಯ ಉತ್ತಮಪಡಿಸಲು ಅನುಕೂಲವಾಗಲಿದೆ. ದೇಹಕ್ಕೆ ಅಗತ್ಯವಿರುವ ಸೂಕ್ಷ್ಮ ಪೋಷಕಾಂಶಗಳನ್ನು ಒದಗಿಸಿ, ಆಹಾರದ ಗುಣಮಟ್ಟ ಮತ್ತು ರುಚಿಯನ್ನು ಹೆಚ್ಚಿಸುವಲ್ಲಿ ತಾಮ್ರ ಮತ್ತು ಹಿತ್ತಾಳೆಯ ಪಾತ್ರೆಗಳು ಉತ್ತಮ ಆಯ್ಕೆ.

ಗಾಜು, ಪಿಂಗಾಣಿ

ಕೆಲವು ಆಹಾರಗಳ ತಯಾರಿಕೆ ಮತ್ತು ಶೇಖರಣೆಗೆ ಈ ಪಾತ್ರೆಗಳು ಸೂಕ್ತ. ಉದಾ, ತುಪ್ಪವನ್ನು ಗಾಜು ಅಥವಾ ಪಿಂಗಾಣಿಯ ಪಾತ್ರೆಗಳಲ್ಲಿ ಇಡಬಹುದು. ಇದೇ ರೀತಿಯಲ್ಲಿ ಉಪ್ಪು, ಖಾರ ಮುಂದಿರುವಂಥ ಉಪ್ಪಿನ ಕಾಯಿ, ತೊಕ್ಕುಗಳಿಗೂ ಈ ಪಾತ್ರೆಗಳೇ ಯೋಗ್ಯ. ಆದರೆ ಇವುಗಳು ಕೈತಪ್ಪಿ ಬೀಳದಂತೆ ಜಾಗ್ರತೆ ಮಾಡುವುದು ಸವಾಲಿನದ್ದು. ಮಣ್ಣಿನ ಪಾತೆರಗಳು ಸಹ ಇತ್ತೀಚೆಗೆ ಜನಪ್ರಿಯವಾಗಿವೆ. ಮೆಗ್ನೀಶಿಯಂ, ಫಾಸ್ಫರಸ್‌, ಕ್ಯಾಲ್ಶಿಯಂನಂಥ ಖನಿಜಗಳು ನಮಗೆ ದಕ್ಕಬೇಕೆಂದರೆ ಮಣ್ಣಿನ ಗಡಿಗೆಗಳಲ್ಲಿ ಅಡುಗೆ ಮಾಡುವುದು ಒಳ್ಳೆಯದು. ಇವುಗಳನ್ನು ಸುಟ್ಟು ಒಮ್ಮೆ ಹದಗೊಳಿಸಿಕೊಂಡರೆ (ಅಂಥದ್ದೇ ದೊರೆಯುತ್ತದೆ) ಮತ್ತೆ ವರ್ಷಾನುವರ್ಷಗಳ ಕಾಲ ಬಳಸಬಹುದು.

ಇದನ್ನೂ ಓದಿ: Weight Loss Tips: ದಾಲ್ಚಿನ್ನಿ ಚಕ್ಕೆಯ ನೀರು ಸೇವಿಸಿ, ನಿರಾಯಾಸವಾಗಿ ತೂಕ ಇಳಿಸಿ!

Continue Reading

ಆರೋಗ್ಯ

Tea or Juice: ಬೆಳಗ್ಗೆ ಟೀ ಕುಡಿದರೆ ಒಳ್ಳೆಯದೇ ಅಥವಾ ಹಣ್ಣಿನ ರಸ ಉತ್ತಮವೇ?

ಬೆಳಗಿನ ಹೊತ್ತು ಚಹಾ ಕುಡಿಯಬೇಕೆ ಅಥವಾ ತಾಜಾ ಹಣ್ಣಿನ ರಸ (Tea or Juice?) ಸೇವಿಸಬೇಕೆ? ಈ ಎರಡೂ ಪೇಯಗಳಿಗೆ ಅದರದ್ದೇ ಆದ ಇತಿ-ಮಿತಿಗಳಿವೆ. ರುಚಿ ಮತ್ತು ಆಯ್ಕೆ ಅವರವರಿಗೆ ಬಿಟ್ಟಿದ್ದು ಎನ್ನುವುದು ಹೌದಾದರೂ, ಈ ಎರಡೂ ಆಯ್ಕೆಗಳಿಗೆ ಅದರದ್ದೇ ಆದ ಗುಣಾವಗುಣಗಳಿವೆ. ಏನವು? ಇಲ್ಲಿದೆ ಈ ಕುರಿತ ವಿಶೇಷ ಲೇಖನ.

VISTARANEWS.COM


on

Tea or Juice
Koo

ಬೆಳಗ್ಗೆ ಏಳುತ್ತಿದ್ದಂತೆ ನಮ್ಮ ದಿನ (Tea or Juice?) ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಬೇಕು. ನಿಧಾನಕ್ಕೆ ಕಣ್ಣುಜ್ಜುತ್ತಾ ಮೈಮುರಿಯುತ್ತಾ ಆಕಳಿಸುತ್ತಾ ಈ ಲೋಕಕ್ಕೆ ಬರುತ್ತೇವೆ. ಕೆಲವರಿಗೆ ಬೆಳಗ್ಗೆ ಎಚ್ಚರವಾದರೂ ದಿನ ಶುರುವಾಗುವುದಕ್ಕೆ ಸ್ವಲ್ಪ ಹೆಚ್ಚೇ ಹೊತ್ತು ಬೇಕಾಗಬಹುದು. ಅಂಥವರಿಗೊಂದು ಕಪ್‌ ಖಡಕ್‌ ಚಹಾ ಸಿಕ್ಕಿದರೆ ಎಲ್ಲವೂ ಸುಸೂತ್ರ. ಕೆಲವರಿಗೆ ಕಾಫಿಯಾದರೆ ಒಳ್ಳೆಯದು. ಅಂತೂ ಬೆಳಗಿನ ಡೋಸ್‌ ಕೆಫೇನ್‌ ಹೊಟ್ಟೆ ಸೇರಿದರೆ ಅಂಗಾಂಗಗಳೆಲ್ಲ ಚುರುಕಾಗುತ್ತವೆ. ದಿನದ ಶ್ರೀಕಾರ ಸರಿಯಾಗಿ ಆದಂತೆ. ಆದರೆ ಬೆಳಗಿನ ಹೊತ್ತು ಚಹಾ ಬದಲು ಹಣ್ಣಿನ ರಸ ಕುಡಿಯುವುದು ಒಳ್ಳೆಯದು ಎನ್ನುತ್ತಾರಲ್ಲ… ಯಾವುದು ಸರಿ? ಯಾವುದು ಸರಿಯಲ್ಲ?

Tea or Juice

ಯಾವುದು ಒಳ್ಳೆಯದು?

ಬೆಳಗಿನ ಹೊತ್ತು ಚಹಾ ಕುಡಿಯಬೇಕೊ ಅಥವಾ ತಾಜಾ ಹಣ್ಣಿನ ರಸವನ್ನೋ ಎಂಬುದೀಗ ಪ್ರಶ್ನೆ. ಈ ಎರಡೂ ಪೇಯಗಳಿಗೆ ಅದರದ್ದೇ ಆದ ಇತಿ-ಮಿತಿಗಳಿವೆ. ಬೆಳಗಿನ ಹೊತ್ತು ಗ್ರೀನ್‌ ಟೀ ಅಥವಾ ಬ್ಲಾಕ್‌ ಟೀ ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ಉತ್ಕರ್ಷಣ ನಿರೋಧಕಗಳು ವಿಫಲವಾಗಿ ದೊರೆಯುತ್ತವೆ. ಇದರಿಂದ ದೇಹದಲ್ಲಿರುವ ಉರಿಯೂತಗಳನ್ನು ಕಡಿಮೆ ಮಾಡಲು ನೆರವು ದೊರೆಯುತ್ತದೆ. ಜೊತೆಗೆ ಇದರಲ್ಲಿರುವ ಅಲ್ಪ ಪ್ರಮಾಣದ ಕೆಫೇನ್‌ ಅಂಶವು, ಸೋಮಾರಿ ದೇಹವನ್ನು ಸ್ವಲ್ಪ ಚುರುಕಾಗಿಸುತ್ತದೆ; ಚಯಾಪಚಯವನ್ನು ಹೆಚ್ಚಿಸುತ್ತದೆ; ಮೆದುಳಿಗೆ ಚೈತನ್ಯ ನೀಡಿ ದೇಹ ಸ್ವಾಸ್ಥ್ಯವನ್ನು ವೃದ್ಧಿಸುತ್ತದೆ.
ತಾಜಾ ಹಣ್ಣಿನ ರಸದ ಬಗ್ಗೆ ಹೇಳುವುದಾದರೆ, ಯಾವುದೇ ಬೆಲ್ಲ-ಸಕ್ಕರೆಗಳನ್ನು ಸೇರಿಸದೆ, ಅಂಗಡಿಯಿಂದ ತಂದಿದ್ದದೆ ಶುದ್ಧ ಹಣ್ಣಿನ ರಸವನ್ನೇ ಕುಡಿದರೆ ಲಾಭಗಳು ಸಾಕಷ್ಟಿವೆ. ಜೀವಸತ್ವಗಳು ಮತ್ತು ಖನಿಜಗಳು ಹೇರಳವಾಗಿ ದೊರೆಯುತ್ತದೆ. ಜೊತೆಗೆ ಬೆಳಗಿನ ಹೊತ್ತು ದೇಹಕ್ಕೆ ಅಗತ್ಯವಾದ ನೀರಿನಂಶವನ್ನು ಸುಲಭವಾಗಿ ಮತ್ತು ಯಥೇಚ್ಛವಾಗಿ ಮರುಪೂರಣ ಮಾಡಬಹುದು. ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಶರೀರದ ಆರೋಗ್ಯವನ್ನು ಹೆಚ್ಚಿಸುತ್ತದೆ.

ಮಿತಿಗಳೇನು?

ಚಹಾ ಅಂದಾಕ್ಷಣ ಗ್ರೀನ್‌ ಟೀ, ಬ್ಲಾಕ್‌ ಟೀ ಕುಡಿಯುವವರು ಕಡಿಮೆ. ಸರಿಯಾಗಿ ಹಾಲು, ಸಕ್ಕರೆ ಸುರಿದೇ ಚಹಾ ಸಿದ್ಧಗೊಳ್ಳುತ್ತದೆ. ಗ್ರೀನ್‌ ಟೀನಲ್ಲಿರುವ ಲಾಭಗಳು ಈ ಇಂಗ್ಲಿಷ್‌ ಚಹಾದಲ್ಲಿ ದೊರೆಯುವುದು ಕಡಿಮೆ. ಅದರಲ್ಲೂ ಬೆಳಗಿನ ಖಾಲಿ ಹೊಟ್ಟೆಯಲ್ಲಿ ಈ ಚಹಾ ಕುಡಿದರೆ ಬಹಳಷ್ಟು ಮಂದಿ ಆಸಿಡಿಟಿ, ಹೊಟ್ಟೆಯುಬ್ಬರ, ಎದೆಯುರಿ ಮತ್ತು ಇತರ ಜೀರ್ಣಾಂಗಗಳ ಸಮಸ್ಯೆಯನ್ನು ಎದುರಿಸಬಹುದು. ಅದೂ ಅಲ್ಲದೆ, ಈ ರೀತಿಯ ಚಹಾ ಸೇವನೆಯಿಂದ ದೇಹಕ್ಕೆ ಕೆಫೇನ್‌ ಅಂಶ ಅಧಿಕವಾಗುತ್ತದೆ. ಇದು ಎಲ್ಲರಿಗೂ ಹೊಂದದೇ ಇರಬಹುದು.
ಹಣ್ಣಿನ ರಸ ಎನ್ನುತ್ತಿದ್ದಂತೆ ಅಂಗಡಿಯಿಂದ ಖರೀದಿಸಿದ ಪ್ಯಾಕ್‌ ಉಪಯೋಗಿಸುವವರೇ ಹೆಚ್ಚು. ಇದರಲ್ಲಿ ಕೃತಕ ಬಣ್ಣ, ಸಕ್ಕರೆಯಂಶಗಳಿರಬಹುದು. ಇದರಿಂದ ಸಮಸ್ಯೆಯಾದೀತು. ತಾಜಾ ಮತ್ತು ಶುದ್ಧ ಹಣ್ಣಿನ ರಸವಾದರೂ ಮಧುಮೇಹಿಗಳಿಗೆ ತೊಂದರೆ ಆಗಬಹುದು. ಮಧುಮೇಹ ಇಲ್ಲದಿದ್ದರೂ, ಬೆಳಗಿನ ಖಾಲಿ ಹೊಟ್ಟೆಯಲ್ಲಿ ಹಣ್ಣಿನ ರಸ ಕುಡಿಯುವುದರಿಂದ ಬಹಳಷ್ಟು ಜನರಿಗೆ ಸಕ್ಕರೆಯಂಶ ದಿಢೀರ್‌ ಏರಿಕೆ ಆಗಬಹುದು. ಹಾಗಾಗಿ ಇದರೊಂದಿಗೆ ಪ್ರೊಟೀನ್‌ ಮತ್ತು ನಾರಿಯುಕ್ತ ಉಪಾಹಾರ ಸೇವನೆ ಅಗತ್ಯ.

Masala Tea

ಎಷ್ಟು ಬಗೆಗಳಿವೆ?

ಬೆಳಗ್ಗೆ ಕುಡಿಯುವುದಕ್ಕೆ ಚಹಾ ಮಾತ್ರ ಸರಿ ಎನ್ನುವವರು ಹಾಲು ಬೆರೆಸಿದ ಚಹಾವನ್ನೇ ಕುಡಿಯಬೇಕೆಂದಿಲ್ಲ. ಬ್ಲಾಕ್‌ ಟೀ, ಗ್ರೀನ್‌ ಟೀ ಇದಕ್ಕೆ ಒಳ್ಳೆಯ ಪರ್ಯಾಯಗಳು. ಅದಿಲ್ಲದಿದ್ದರೆ, ನಿಂಬೆ ಚಹಾ, ಪುದೀನಾ ಚಹಾ, ಶುಂಠಿ ಚಹಾ, ಏಲಕ್ಕಿ-ಚಕ್ಕೆ ಹಾಕಿದ (ಹಾಲಿಲ್ಲದ) ಮಸಾಲೆ ಚಹಾ, ನಿಂಬೆಹುಲ್ಲು, ತುಳಸಿ ಮುಂತಾದವುಗಳನ್ನು ಹಾಕಿದ ಹರ್ಬಲ್‌ ಚಹಾ- ಹೀಗೆ ಚಹಾ ಸವಿಯುವವರಿಗೆ ತರಹೇವಾರಿ ಆಯ್ಕೆಗಳಿವೆ. ಇವೆಲ್ಲವೂ ಒಂದಿಲ್ಲೊಂದು ರೀತಿಯಲ್ಲಿ ಆರೋಗ್ಯಕ್ಕೆ ಉಪಯುಕ್ತವಾದವು.

Image Of Fruit Juices Role in Managing Blood Sugar Levels

ಯಾವೆಲ್ಲ ಜ್ಯೂಸ್‌ ಸೇವಿಸಬಹುದು?

ಕಿತ್ತಳೆ ರಸ ಹೆಚ್ಚಿನ ಜನರಿಗೆ ಇಷ್ಟವಾಗುವಂಥದ್ದು. ವಿಟಮಿನ್‌ ಸಿ ಹೇರಳವಾಗಿರುವ ಇದನ್ನು ಕುಡಿಯುವುದರಿಂದ ಪ್ರತಿರೋಧಕ ಶಕ್ತಿಯನ್ನು ಬಲಗೊಳಿಸಬಹುದು. ಕೊಲೆಸ್ಟ್ರಾಲ್‌ ಕಡಿಮೆ ಮಾಡಿ, ಹೃದಯವನ್ನು ಸಹ ಭದ್ರವಾಗಿ ಇರಿಸಿಕೊಳ್ಳಬಹುದು. ಸೇಬು ರಸವೂ ರುಚಿಕಟ್ಟಾಗಿರುತ್ತದೆ. ವಿಟಮಿನ್‌ ಸಿ ಮತ್ತು ಪೊಟಾಶಿಯಂ ಹೆಚ್ಚಿರುವ ಇದರಿಂದ ಹೃದಯದ ಆರೋಗ್ಯ ಚೆನ್ನಾಗಿರುವುದಲ್ಲದೆ ಜೀರ್ಣಾಂಗಗಳ ಕ್ಷಮತೆಯೂ ಹೆಚ್ಚುತ್ತದೆ. ಹುಳಿ ಮತ್ತು ಸಿಹಿಗಳನ್ನು ಸಮಾನವಾಗಿ ಹೊಂದಿರುವ ಅನಾನಸ್‌ ರಸ ಸೇವನೆಯಿಂದ ಉರಿಯೂತವನ್ನು ಕಡಿಮೆ ಮಾಡಬಹುದು. ಬ್ರೊಮೆಲಿನ್‌ ಎಂಬ ಉತ್ಕರ್ಷಣ ನಿರೋಧಕ ಹೆಚ್ಚಿರುವ ಈ ರಸದಿಂದ ಜೀರ್ಣಾಂಗಗಳೂ ಚುರುಕಾಗುತ್ತವೆ. ಇದಲ್ಲದೆ, ಕ್ಯಾರೆಟ್‌, ಬೀಟ್‌ರೂಟ್‌, ಸೌತೆಕಾಯಿ ರಸಗಳನ್ನು ಸೇವಿಸುವವರೂ ಇದ್ದಾರೆ. ಈ ಯಾವುದೇ ರಸಗಳ ಜೊತೆಗೆ ನಾಲ್ಕಾರು ಹನಿ ನಿಂಬೆ ರಸ ಸೇರಿಸಿದರೆ ಅಥವಾ ಯಾವುದಾದರೂ ಬೆರ್ರಿಗಳನ್ನು ಸೇರಿಸಿದರೆ ರುಚಿ ಇಷ್ಟವಾಗಬಹುದು. ಇದಕ್ಕೆ ಶುಂಠಿ, ಪುದೀನಾದಂಥ ಘಮಗಳನ್ನೂ ಸೇರಿಸಿಕೊಳ್ಳುವವರಿದ್ದಾರೆ.

ಇದನ್ನೂ ಓದಿ: Dry Fruits: ಡ್ರೈಫ್ರುಟ್ಸ್‌ಗಳನ್ನು ಯಾವಾಗ, ಎಷ್ಟು ತಿನ್ನಬೇಕು? ಈ ಮಾಹಿತಿ ತಿಳಿದಿರಲಿ

Continue Reading
Advertisement
LIC
ದೇಶ19 mins ago

LIC Offices: ವೀಕೆಂಡ್‌ನಲ್ಲೂ ಕಾರ್ಯನಿರ್ವಹಿಸಲಿವೆ ಎಲ್‌ಐಸಿ ಕಚೇರಿಗಳು; ಕಾರಣ ಇಲ್ಲಿದೆ

Dead Body Found in water tank
ಬೀದರ್‌19 mins ago

Dead Body Found : ವಾಟರ್‌ ಟ್ಯಾಂಕರ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

Varthur Santhosh tears
ಬಿಗ್ ಬಾಸ್26 mins ago

Varthur Santhosh: ಟೀಕೆಗಳಿಗೆ ಮನನೊಂದು ಕಣ್ಣೀರಿಟ್ಟ ವರ್ತೂರ್‌ ಸಂತೋಷ್‌!

Lok Sabha Election 2024 Brijesh Chowta declares assets
Lok Sabha Election 202437 mins ago

Lok Sabha Election 2024: ಅವಿವಾಹಿತ ಬ್ರಿಜೇಶ್ ಚೌಟ ಬಳಿ ಇಲ್ಲ ಕೋಟಿ ಕೋಟಿ ಆಸ್ತಿ! ಸಾಲ ಮಾಡಿ ಕಾರು ಖರೀದಿ

Drowned in canal
ದಾವಣಗೆರೆ49 mins ago

Bhadra canal : ಭದ್ರಾ ನಾಲೆಗೆ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

Unmukt Chand
ಕ್ರೀಡೆ1 hour ago

Unmukt Chand: ಭಾರತ ತಂಡ ತೊರೆದು ಯುಎಸ್​ಎ ಸೇರಿದ ಉನ್ಮುಕ್ತ್‌ಗೆ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಅನುಮಾನ

Bullet Train
ದೇಶ2 hours ago

Bullet Train: ಬುಲೆಟ್‌ ರೈಲು ಓಡೋದು ಯಾವಾಗ? ರೈಲ್ವೆ ಸಚಿವ ಹೇಳೋದಿಷ್ಟು

Lok Sabha Election 2024 BJP JDS coordination committee meeting successful Fight to win with the workers
Lok Sabha Election 20242 hours ago

Lok Sabha Election 2024: ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ; ಎಲೆಕ್ಷನ್‌ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್!

tcs jobs IT hiring
ಉದ್ಯೋಗ2 hours ago

IT Hiring: ಟಿಸಿಎಸ್‌ನಲ್ಲಿ ಫ್ರೆಶರ್‌ಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ? ಯಾವಾಗ ಕೊನೆಯ ದಿನ?

Road Accident
ಬೆಂಗಳೂರು ಗ್ರಾಮಾಂತರ2 hours ago

Road Accident : ತಲೆ ಮೇಲೆ ಹರಿದ ಲಾರಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು, ಮತ್ತೊಬ್ಬ ಗಂಭೀರ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌