Bad dreams | ಪದೇ ಪದೇ ದುಃಸ್ವಪ್ನ ಬೀಳುತ್ತಿದೆಯೇ? ಇದು ಮರೆವಿನ ಕಾಯಿಲೆಯ ಲಕ್ಷಣ! - Vistara News

ಆರೋಗ್ಯ

Bad dreams | ಪದೇ ಪದೇ ದುಃಸ್ವಪ್ನ ಬೀಳುತ್ತಿದೆಯೇ? ಇದು ಮರೆವಿನ ಕಾಯಿಲೆಯ ಲಕ್ಷಣ!

ವಯಸ್ಸಾದ ಆದರೆ ಕೆಟ್ಟ ಕನಸುಗಳು ಬೀಳದೆ ಇರುವ ಮಂದಿಗಿಂತ ಕೆಟ್ಟ ಕನಸಿನ ಅನುಭವವಾದ ಮಂದಿಗೆ ಡಿಮೆನ್ಶಿಯಾ ಕಾಯಿಲೆ ಬರುವ ಸಂಭವ ಐದು ಪಟ್ಟು ಹೆಚ್ಚಿರುತ್ತದೆ ಎಂಬುದು ಅಧ್ಯಯನದಿಂದ ತಿಳಿದುಬಂದಿದೆ.

VISTARANEWS.COM


on

dementia
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರತಿಯೊಬ್ಬ ಮನುಷ್ಯನೂ ತನ್ನ ಜೀವಿತಾವಧಿಯ ಮೂರನೇ ಒಂದು ಭಾಗ ನಿದ್ದೆಯಲ್ಲಿ ಕಳೆಯುತ್ತಾನೆ. ಈ ನಿದ್ದೆಯ ನಾಲ್ಕನೇ ಒಂದು ಪಾಲಿನಲ್ಲಿ ಸಾಮಾನ್ಯ ಮನುಷ್ಯನಿಗೆ ಕನಸುಗಳೂ ಬೀಳುತ್ತವೆ. ಹಾಗಾಗಿ ಸುಮಾರು ೭೩ರ ಆಸುಪಾಸು ವಯಸ್ಸಿನವರೆಗೆ ಬದುಕುವ ಸಾಮಾಣ್ಯ ಮನುಷ್ಯ ತನ್ನ ಜೀವಿತಾವಧೀಯ ಆರು ವರ್ಷಗಳನ್ನು ಕನಸಿನಲ್ಲಿಯೇ ಕಳೆಯುತ್ತಾನೆ! ಹಾಗಾಗಿ ಕನಸಿಗೂ ನಮ್ಮ ಜೀವನಕ್ಕೂ ಅವಿನಾಭಾವ ಸಂಬಂಧವಿದೆ. ನಾವ್ಯಾಕೆ ಕನಸು ಕಾಣುತ್ತೇವೆ, ನಮಗ್ಯಾಕೆ ಕನಸು ಬೀಳುತ್ತದೆ ಎಂದು ಲೆಕ್ಕಚಾರ ಹಾಕಲು ಶುರು ಮಾಡಿದರೆ, ಕನಸೆಂಬ ದೊಡ್ಡ ಲೋಕವೇ ಬೇರೆ ಇದೆ ಎಂಬ ಸತ್ಯ ಅರಿವಾಗತೊಡಗುತ್ತದೆ!

ಈ ಕನಸಿನ ಲೋಕದ ಒಳ ಹೊಕ್ಕರೆ, ಅನೇಕ ಸತ್ಯಗಳು ಬಿಚ್ಚತೊಡಗುತ್ತದೆ. ಬಹಳಷ್ಟು ಮಂದಿಗೆ ದುಃಸ್ವಪ್ನವೂ ಕಾಡುವುದುಂಟು. ಎಂದಾದರೊಂದು ದಿನ ಕೆಟ್ಟ ಕನಸು ಬಿದ್ದು ರಾತ್ರಿಯಿಡೀ ಆಮೇಲೆ ನಿದ್ದೆ ಮಾಡದೆ ಕಳೆಯುವವರೂ ಇದ್ದಾರೆ. ಇಂಥವರಿಗೆ ಕನಸೆಂದರೆ ಭಯ. ಒಬ್ಬೊಬ್ಬರಿಗೆ ಒಂದೊಂದು ಬಗೆಯ ಕೆಟ್ಟ ಕನಸುಗಳೂ ಬೀಳಬಹುದು. ಆದರೆ ಪದೇ ಪದೇ ಕೆಟ್ಟ ಕನಸುಗಳು ಬೀಳುವುದು ಆರೋಗ್ಯಕರ ಲಕ್ಷಣವಾ? ಕೆಟ್ಟ ಕನಸಿಗೂ ಆರೋಗ್ಯಕ್ಕೂ ಸಂಬಂಧ ಇದೆಯಾ ಎಂತ ನಿಮಗನಿಸಿದರೆ ಇಲ್ಲಿದೆ ಅದಕ್ಕೆ ಉತ್ತರ.

ಹೌದು. ಇತ್ತೀಚೆಗೆ ದಿ ಲ್ಯಾನ್ಸೆಟ್ಸ್‌ ಕ್ಲಿನಿಕಲ್‌ ಮೆಡಿಸಿನ್‌ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನವೊಂದರ ವರದಿಯ ಪ್ರಕಾರ ಕನಸಿಗೂ ನಮ್ಮ ಮಿದುಳಿನ ಆರೋಗ್ಯಕ್ಕೂ ಬಹಳಷ್ಟು ಸಂಬಂಧ ಇದೆ. ಕೆಟ್ಟ ಕನಸುಗಳು ಅತಿಯಾಗಿ ಬೀಳುತ್ತಿದೆ ಅಂದರೆ ಅದು ಮರೆವಿನ ಕಾಯಿಲೆ ಡಿಮೆನ್ಶಿಯಾದ ಲಕ್ಷಣವೂ ಆಗಿರಬಹುದು ಎಂಬ ಸತ್ಯ ಬಹಿರಂಗಪಡಿಸಿದೆ.

ಸಾಮಾನ್ಯವಾಗಿ, ಒಂದಿಲ್ಲೊಂದು ಕನಸುಗಳು ಬಹುತೇಕ ಎಲ್ಲರಿಗೂ ಬೀಳುತ್ತದೆ. ಕನಸು ಕಾಣದ ಮಂದಿಯೇ ಇರಲಾರರು. ಕೆಲವೊಮ್ಮೆ ಚೆಂದನೆಯ ಕನಸುಗಳು ಹಿತವಾದ ಅನುಭವ ನೀಡಿದರೆ, ಇನೂ ಕೆಲವೊಮ್ಮೆ ಕೆಟ್ಟ ಕನಸುಗಳು ನಮಗೆ ಭಯ ತರಿಸುತ್ತವೆ. ಆದರೆ ಕೆಲ ಸಮಯದ ನಂತರ ಎಲ್ಲ ಮರೆತು ಸಹಜ ಸ್ಥಿತಿಗೆ ಬಂದಿರುತ್ತೇವೆ. ಇವೆಲ್ಲ ಅತ್ಯಂತ ಸಹಜ ಸಾಮಾನ್ಯ ಕೂಡಾ. ಕೆಲವು ಕನಸುಗಳು ಅತ್ಯಂತ ಕೆಟ್ಟ ಅನುಭವ ನೀಡುವುದಲ್ಲದೆ, ಕನಸಿನ ನಂತರ ಎಚ್ಚರವಾಗಿ ಆಮೇಲೆ ನಿದ್ದೆ ಮಾಡಲಾರದಂತಹ ಸ್ಥಿತಿ ಪದೇ ಪದೇ ಆಗುತ್ತಿದ್ದರೆ ಆಗ ನಿರ್ಲಕ್ಷ್ಯ ಮಾಡುವುದು ಸಲ್ಲದು. ಇದು ಮಿದುಳು ಸಹಜ ಸ್ಥಿತಿಯಲ್ಲಿಲ್ಲ ಎಂಬುದನ್ನು ಸೂಚಿಸುತ್ತದೆ ಎನ್ನುತ್ತದೆ ಈ ವರದಿ.

sleep

ಇದನ್ನೂ ಓದಿ | Back Pain | ವರ್ಕ್‌ ಫ್ರಂ ಹೋಂ ತಂದಿಟ್ಟ ಬೆನ್ನುನೋವಿಗೆ ಪರಿಹಾರಗಳೇನು?

ಯುಎಸ್‌ನಲ್ಲಿ ೩೫ರಿಂದ ೬೪ರೊಳಗಿನ ವಯಸ್ಸಿನ ಸುಮಾರು ೬೦೦ ಮಂದಿ ಹಾಗೂ ೭೯ ವಯಸ್ಸಿಗೆ ಮೇಲ್ಪಟ್ಟ ಸುಮಾರು ೨,೬೦೦ ಮಂದಿಯ ಮೇಲೆ ಈ ಅಧ್ಯಯನ ನಡೆದಿದ್ದು, ಈ ವರದಿ ಅವರ ಅನುಭವಗಳನ್ನು ಆಧರಿಸಿದ್ದಾಗಿದೆ. ಪ್ರತಿಯೊಬ್ಬರೂ ತಮ್ಮ ಅನುಭವಗಳನ್ನು ಇಲ್ಲಿ ದಾಖಲಿಸಿದ್ದು ಇದು ಈ ವರದಿಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ.

ಈ ವರದಿಯ ಪ್ರಕಾರ ವಯಸ್ಸಾದ ಮಂದಿಗೆ ಪ್ರತಿ ವಾರದಲ್ಲೊಮ್ಮೆ ದುಃಸ್ವಪ್ನಗಳು ಬಿದ್ದಿವೆ. ವಯಸ್ಸಾದ ಆದರೆ ಕೆಟ್ಟ ಕನಸುಗಳು ಬೀಳದೆ ಇರುವ ಮಂದಿಗಿಂತ ಕೆಟ್ಟ ಕನಸಿನ ಅನುಭವವಾದ ಮಂದಿಗೆ ಡಿಮೆನ್ಶಿಯಾ ಕಾಯಿಲೆ ಬರುವ ಸಂಭವ ಐದು ಪಟ್ಟು ಹೆಚ್ಚಿರುತ್ತದೆ ಎನ್ನಲಾಗಿದೆ. ಆದರೆ ಮಹಿಳೆಯರಲ್ಲಿ ಹಾಗೂ ಸಣ್ಣ ವಯಸ್ಸಿನ ಮಂದಿಯಲ್ಲಿ ಈ ಸಮಸ್ಯೆ ಅಷ್ಟಾಗಿ ಕಂಡು ಬಂದಿಲ್ಲ. ಹಾಗಾಗಿ, ಮಹಿಳೆಯರಿಗಿಂತಲೂ ಕೆಟ್ಟ ಕನಸು ಹಾಗೂ ಡಿಮೆನ್ಶಿಯಾ ಸಮಸ್ಯೆಯ ಒಂದಕ್ಕೊಂದು ಸಂಬಂಧ ಹೆಚ್ಚು ಗೋಚರಿಸಿದ್ದು ಪುರುಷರಲ್ಲಿಯೇ ಎಂದೂ ಈ ವರದಿ ಹೇಳಿದೆ.

ಪ್ರಮುಖವಾಗಿ ಪುರುಷರಲ್ಲಿ, ಕೆಟ್ಟ ಕನಸುಗಳು ಪದೇ ಪದೇ ಬೀಳುತ್ತಿದ್ದರೆ ಅದು ಡಿಮೆನ್ಶಿಯಾ ಕಾಯಿಲೆಯ ಆರಂಭದ ಲಕ್ಷಣಗಳು ಎಂಬುದನ್ನು ಎಚ್ಚರಿಕೆಯ ಗಂಟೆಯಾಗಿ ತೆಗೆದುಕೊಳ್ಳಬೇಕು ಎಂದೂ ಅದು ಹೇಳಿದೆ. ಆದರೆ, ಮಧ್ಯ ವಯಸ್ಕರಲ್ಲಿ ಪದೇ ಪದೇ ಕೆಟ್ಟ ಕನಸುಗಳ ಸಮಸ್ಯೆ ಕಂಡು ಬಂದಿದ್ದರೆ, ಅದನ್ನು ಭವಿಷ್ಯದ ಮರೆವಿನ ಕಾಯಿಲೆಯ ಸೂಚಕವಾಗಿಯೂ ಪರಿಗಣಿಸಬೇಕಾಗುತ್ತದೆ ಎಂದೂ ಅದು ವಿವರಿಸಿದೆ.

ಇದನ್ನೂ ಓದಿ | World heart day | ಕಾಪಾಡಿಕೊಳ್ಳಲು ಹೃದಯವನ್ನು, ಸೇವಿಸಿ ಪ್ರತಿದಿನ ಇವನ್ನು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Dengue Fever: ಡೆಂಗ್ಯುಗೆ ಕೋವಿಡ್‌ ಮಾದರಿ ಉಚಿತ ಚಿಕಿತ್ಸೆ ಕೊಡಿ, ಮೆಡಿಕಲ್‌ ಎಮರ್ಜೆನ್ಸಿ ಘೋಷಿಸಿ: ಡಾ. ಮಂಜುನಾಥ್

Dengue Fever: ಡೆಂಗ್ಯು ತಡೆಗಟ್ಟದಿದ್ರೆ ಚಿಕನ್ ಗುನ್ಯ, ಜೀಕಾ ವೈರಸ್ ಬರಬಹುದು. ಕೋವಿಡ್ ಪ್ಯಾಂಡಮಿಕ್ ಅಂದೆವು. ಡೆಂಗ್ಯು ಎಂಡಮಿಕ್ ಆಗಿದೆ. ಎಂಡೆಮಿಕ್ ಅಂದರೆ ರಾಜ್ಯಾದ್ಯಂತ ಹರಡಿರೋದು. ಇದಕ್ಕೆ ತುರ್ತು ಚಿಕಿತ್ಸೆ ಅಗತ್ಯವಿದೆ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು ಎಂದು ಮಂಜುನಾಥ್‌ ಹೇಳಿದ್ದಾರೆ.

VISTARANEWS.COM


on

DR CN Manjunath dengue fever
Koo

ಬೆಂಗಳೂರು: ಡೆಂಗ್ಯು ಜ್ವರಕ್ಕೆ (Dengue Fever) ಅಡ್ಮಿಟ್ ಆದವರಿಗೆ, ಕೋವಿಡ್ (Covid 19) ಸಂದರ್ಭದಲ್ಲಿ ಯಾವ ರೀತಿ ಉಚಿತ ಚಿಕಿತ್ಸೆ ನೀಡಲಾಯಿತೋ ಅದೇ ರೀತಿ ಕನಿಷ್ಠ ಮಾನದಂಡದಲ್ಲಿ ಉಚಿತ ಚಿಕಿತ್ಸೆ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ (Bangalore Rural) ಸಂಸದ ಡಾ. ಸಿಎನ್‌ ಮಂಜುನಾಥ್‌ (Dr CN Manjunath) ಹೇಳಿದ್ದಾರೆ.

ಇದು ಸರ್ಕಾರಕ್ಕೆ ನನ್ನ ಸಲಹೆ. ಡೆಂಗ್ಯೂ ಫಿವರ್‌ ನಿಯಂತ್ರಣ ಅಂದರೆ ಸೊಳ್ಳೆ ನಿಯಂತ್ರಣ. ಸೊಳ್ಳೆ ನಿಯಂತ್ರಣ ಆದರೆ ಮಾತ್ರ ಡೆಂಗ್ಯು ನಿಯಂತ್ರಣ ಆಗಲಿದೆ. ಮಳೆಗಾಲ ಪ್ರಾರಂಭದಲ್ಲಿ ಸೊಳ್ಳೆಯಿಂದ ಹರಡುವ ಕಾಯಿಲೆ ಬರುತ್ತದೆ. ಡೆಂಗ್ಯು ತಡೆಗಟ್ಟದಿದ್ರೆ ಚಿಕನ್ ಗುನ್ಯ, ಜೀಕಾ ವೈರಸ್ ಬರಬಹುದು. ಕೋವಿಡ್ ಪ್ಯಾಂಡಮಿಕ್ ಅಂದೆವು. ಡೆಂಗ್ಯು ಎಂಡಮಿಕ್ ಆಗಿದೆ. ಎಂಡೆಮಿಕ್ ಅಂದರೆ ರಾಜ್ಯಾದ್ಯಂತ ಹರಡಿರೋದು. ಇದಕ್ಕೆ ತುರ್ತು ಚಿಕಿತ್ಸೆ ಅಗತ್ಯವಿದೆ. ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು ಎಂದು ಮಂಜುನಾಥ್‌ ಹೇಳಿದ್ದಾರೆ.

ಸರಕಾರ ಡೆಂಗ್ಯುಗೆ ದರ ನಿಗದಿ ಮಾಡಿದೆ. ಡಯೋಗ್ನಾಸಿಸ್‌ಗಳು ಹೆಚ್ಚು ವಸೂಲಿ ಮಾಡಿದರೆ,‌ ಅವುಗಳ ಬಾಗಿಲು ಮುಚ್ಚಿಸಬೇಕು. ಡೆಂಗ್ಯು ಹರಡಲು ಕಾರಣ ಮಳೆಗಾಲದಲ್ಲಿ ನೀರು ನಿಲ್ಲೋದರಿಂದ. ಹಲವೆಡೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಅಲ್ಲಿ ಸೊಳ್ಳೆಗಳು ಉತ್ಪತ್ತಿ ಆಗುತ್ತಿವೆ. ಈಡಿಸ್ ಈಜಿಪ್ಟೈ ಸೊಳ್ಳೆಯಿಂದ ಕಾಯಿಲೆ‌ ಹರಡುತ್ತಿದೆ. ರಾಜ್ಯದಲ್ಲಿ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಆಗಬೇಕು. ಪ್ರತ್ಯೇಕ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಮಳೆಗಾಲ ಆರಂಭವಾದ ಮೇಲೆ ಎಚ್ಚೆತ್ತುಕೊಂಡಿದ್ದಾರೆ. ಈಗ ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕಿದೆ. ಸರ್ಕಾರ ಮತ್ತು ಸಾರ್ವಜನಿಕರು ಇಬ್ಬರದ್ದೂ ಜವಾಬ್ದಾರಿ ಇದೆ ಎಂದು ಡಾ. ಮಂಜುನಾಥ್‌ ಎಚ್ಚರಿಸಿದ್ದಾರೆ.

ಡೆಂಗ್ಯು ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರ್ತಿದೆ. ಶಾಲೆಗಳಿಗೆ ಸರ್ಕ್ಯೂಲರ್ ಹೊರಡಿಸಬೇಕು. ಮಕ್ಕಳಲ್ಲಿ ಆರೋಗ್ಯ ಹದಗೆಟ್ಟಿದ್ದರೆ ಕ್ರಮ ತೆಗೆದುಕೊಳ್ಳಬೇಕು. ಈಗಾಗಲೇ ಏಳೆಂಟು ಜನ ಸಾವನ್ನಪ್ಪಿದ್ದಾರೆ. ಸೊಳ್ಳೆ ನಿಯಂತ್ರಣ ಮಾಡೋದ್ರಲ್ಲಿ ಸರ್ಕಾರ ಎಡವಿದೆ. ಏನೇನೋ ಫ್ರೀ ಕೊಡ್ತೀವಿ, ಯಾವುದನ್ನೋ ಉಚಿತ ಕೊಡ್ತಿದ್ದಾರೆ. ಅದರ ಜೊತೆಗೆ ಸ್ಲಂಗಳಲ್ಲಿ, ವಠಾರದಲ್ಲಿ ವಾಸವಾಗಿದ್ದವರ ಮನೆಗೆ ಸೊಳ್ಳೆಪರದೆಯನ್ನು ಉಚಿತವಾಗಿ ನೀಡಬೇಕು. ಇದರಿಂದ ಬಹಳಷ್ಟು ರೋಗ ನಿಯಂತ್ರಣ ಆಗಲಿದೆ ಎಂದು ಮಂಜುನಾಥ್ ಸೂಚಿಸಿದ್ದಾರೆ. ‌

ಡೆಂಗ್ಯು ಬಂದು ಮತ್ತೆ ಹುಷಾರಾಗುವಾಗ ಪ್ಲೇಟ್ ಲೆಟ್ಸ್ ಕಡಿಮೆ ಆಗುತ್ತೆ. ಜೊತೆಗೆ ದೇಹದಲ್ಲಿ ನೀರು ತುಂಬಿಕೊಳ್ಳುತ್ತದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರ‌ ಗಮನಕ್ಕೂ ನಾನು ತರಲಿದ್ದೇನೆ. ಅವಶ್ಯಕತೆ ಇರುವವರಿಗೆ ಮೊದಲೇ ಚಿಕಿತ್ಸೆ ನೀಡಬೇಕು. ಡೆಂಗ್ಯೂ ಕಾಯಿಲೆಗೆ ಬೇಕಾದ ಮಾತ್ರೆಗಳ ಕೊರತೆ ಕೂಡ ಎದುರಾಗಿದೆ. ವಾರ್ ರೂಮ್ ಮೂಲಕ ಮಾನಿಟರ್ ಮಾಡಬೇಕು. ಮುಂದುವರೆದ ದೇಶಗಳಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಕಾಯಿಲೆ ತಡೆದಿದ್ದಾರೆ. ಮಸ್ಕ್ಯೂಟೋ ರೆಪೆಲೆಂಟ್ಸ್ ಅಂತ ಸ್ಟಿಕರ್ ಬರುತ್ತಿದ್ದು. ಅದನ್ನ ಇಲ್ಲೂ ಹಾಕಬೇಕು. ಇದರಿಂದ ಮಕ್ಕಳಿಗೆ ಸೊಳ್ಳೆ ಕಡಿತ ತಪ್ಪಿಸಬಹುದು ಎಂದು ಅವರು ಹೇಳಿದರು.

ಜಪಾನ್, ಸಿಂಗಾಪುರ್, ಅಮೇರಿಕಾದಲ್ಲಿ ಡೆಂಗ್ಯೂ ಕಾಯಿಲೆಗೆ ಬೇಕಾದ ಮೆಡಿಸಿನ್ ಇದೆ. ಅವುಗಳನ್ನು ರಾಜ್ಯ ಸರ್ಕಾರ ತರಿಸಿಕೊಳ್ಳಬೇಕು. ಇಲ್ಲ ಅಲ್ಲಿ ನೀರು ನಿಲ್ಲೋದನ್ನ ತಡೆಗಟ್ಟಬೇಕು. ಸೊಳ್ಳೆ ನಿಯಂತ್ರಣ ಮಾಡಲು ಸ್ಪ್ರೇ ಮಾಡುವವರು ಕಾಣುತ್ತಿಲ್ಲ. ಬಿಬಿಎಂಪಿ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Dengue Fever: ಸಿಲಿಕಾನ್‌ ಸಿಟಿಯಲ್ಲಿ ಡೆಂಗ್ಯು ಜ್ವರಕ್ಕೆ ಬಾಲಕ ಬಲಿ, ರಾಜಧಾನಿಯಲ್ಲಿ 2ನೇ ಸಾವು

Continue Reading

ಶಿವಮೊಗ್ಗ

Zika Virus : ಡೆಂಗ್ಯೂ ಬೆನ್ನಲ್ಲೇ ಶಿವಮೊಗ್ಗದಲ್ಲಿ ಝಿಕಾ ವೈರಸ್‌ಗೆ ವೃದ್ಧ ಬಲಿ

Dengue Fever : ಡೆಂಗ್ಯೂ ಜ್ವರ ಎಲ್ಲೆಡೆ ಹೆಚ್ಚಾಗುತ್ತಿರುವ ಈ ಹೊತ್ತಿನಲ್ಲಿ ಜತೆಗೆ ಝಿಕಾ ವೈರಸ್‌ ಭೀತಿಯು (Zika Virus ) ಹೆಚ್ಚಾಗಿದೆ. ಶಿವಮೊಗ್ಗದಲ್ಲಿ ಝಿಕಾ ವೈರಸ್‌ಗೆ ವೃದ್ಧರೊಬ್ಬರು ಬಲಿಯಾಗಿದ್ದಾರೆ.

VISTARANEWS.COM


on

By

Zika Virus
ಸಾಂದರ್ಭಿಕ ಚಿತ್ರ
Koo

ಶಿವಮೊಗ್ಗ: ರಾಜ್ಯದಲ್ಲಿ ಝಿಕಾ ವೈರಸ್ (Zika Virus) ಆತಂಕ ಹೆಚ್ಚಾಗಿದ್ದು, ಶಿವಮೊಗ್ಗದಲ್ಲಿ ಝಿಕಾ ವೈರಸ್‌ಗೆ 74 ವರ್ಷದ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಝಿಕಾ ವೈರಸ್ ಜತೆಗೆ ಬಹು ಅಂಗಾಂಗ ವೈಫಲ್ಯಗಳಿಂದ ವೃದ್ಧ ಬಳಲುತ್ತಿದ್ದರು ಎನ್ನಲಾಗಿದೆ.

ಕಳೆದ ಹತ್ತು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೇವಲ ಝಿಕಾ ವೈರಸ್‌ಗೆ ವ್ಯಕ್ತಿ ಸಾಯಲು ಸಾಧ್ಯವಿಲ್ಲ. ಅವರು ಬಹು ಅಂಗಾಂಗ ವೈಫಲ್ಯಗಳಿಂದ ಬಳಲುತ್ತಿದ್ದರು ಎಂದು ಸಾವಿನ ಬಗ್ಗೆ ಶಿವಮೊಗ್ಗ ಡಿಎಚ್‌ಒ ಡಾ.ನಟರಾಜ್ ಸ್ಪಷ್ಟನೆ ಪಡಿಸಿದ್ದಾರೆ.

ಯುವಕನಲ್ಲೂ ಝಿಕಾ ವೈರಸ್‌ ಪತ್ತೆ

ಶಿವಮೊಗ್ಗದ ಸಾಗರ ಮೂಲದ 24 ವರ್ಷದ ಯುವಕನಲ್ಲೂ ಝಿಕಾ ವೈರಸ್ ಪತ್ತೆಯಾಗಿದೆ ಎನ್ನಲಾಗಿದೆ. ಯುವಕನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಝಿಕಾ ರೋಗದ ಲಕ್ಷಣಗಳೇನು?

  • ಕಣ್ಣು ಕೆಂಪಾಗುವಿಕೆ, ತಲೆ ನೋವು, ಜ್ವರ, ಕೀಲುಗಳಲ್ಲಿ ನೋವು, ಗಂಧೆಗಳು, ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

ಜನರು ಯಾವ ನಿಯಮ ಪಾಲಿಸಬೇಕು?

ರೋಗದ ಲಕ್ಷಣ ಕಂಡು ಬಂದರೆ ಕೂಡಲೇ ಜನರು ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಈ ಮೂಲಕ ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳಬಾರದು ಎಂಬ ಸಲಹೆಯನ್ನು ಆರೋಗ್ಯ ಇಲಾಖೆ ನೀಡಿದೆ.

ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ. ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ/ವೈದ್ಯರನ್ನು ಸಂಪರ್ಕ ಮಾಡಬೇಕು ಎಂದು ಆರೋಗ್ಯ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: Death by Shock: ಮೊಬೈಲ್‌ ಚಾರ್ಜರ್‌ನಿಂದ ಶಾಕ್‌ ಹೊಡೆದು ವಿದ್ಯಾರ್ಥಿ ಸಾವು

ಝಿಕಾ ವೈರಸ್ ತಡೆಗಟ್ಟಲು ಜನಸಾಮಾನ್ಯರ ಜವಾಬ್ದಾರಿ ಏನು?

  • -ನೀರು ಶೇಖರಣಾ ಪರಿಕರಗಳನ್ನು (ಟ್ಯಾಂಕ್‌, ಟಬ್‌ ಇತ್ಯಾದಿ) ಮುಚ್ಚಿಡಬೇಕು. ಅಲ್ಲದೆ, ವಾರಕ್ಕೊಮ್ಮೆ ಅವುಗಳನ್ನು ಸ್ವಚ್ಛಗೊಳಿಸಬೇಕು.
  • -ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಜತೆಗೆ ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು.
  • -ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ, ಮಕ್ಕಳು, ವಯೋವೃದ್ಧರು ವಿಶ್ರಾಂತಿ ಪಡೆಯುವಾಗ ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸಬೇಕು.
  • -ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು ನಿಂತ ನೀರಲ್ಲಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಮನೆಯ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು.
  • -ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ವೈರಸ್ ಹರಡುವ ಸಾಧ್ಯತೆ ಕಡಿಮೆಯಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Dengue Fever: ಸಿಲಿಕಾನ್‌ ಸಿಟಿಯಲ್ಲಿ ಡೆಂಗ್ಯು ಜ್ವರಕ್ಕೆ ಬಾಲಕ ಬಲಿ, ರಾಜಧಾನಿಯಲ್ಲಿ 2ನೇ ಸಾವು

Dengue Fever: ಅಂಜನಾಪುರದ 11 ವರ್ಷದ ಬಾಲಕ ಗಗನ್ ಜ್ವರದಿಂದ ಸಾವಿಗೀಡಾಗಿದ್ದು, ಇದು ಬೆಂಗಳೂರಿನಲ್ಲಿ ಡೆಂಗ್ಯುವಿಗೆ ಪುಟ್ಟ ಮಗುವಿನ ಮೊದಲ ಸಾವು ಆಗಿದೆ. ನಿನ್ನೆ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಬಾಲಕ ಅಸುನೀಗಿದ್ದಾನೆ.

VISTARANEWS.COM


on

dengue fever death bangalore
Koo

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಡೆಂಗ್ಯು ಜ್ವರ (Dengue Fever) ಕರಾಳ ಸ್ವರೂಪವನ್ನು ಪ್ರದರ್ಶಿಸಲಾರಂಭಿಸಿದ್ದು, ಎರಡನೇ ಬಲಿ (dengue death) ತೆಗೆದುಕೊಂಡಿದೆ. ಬಾಲಕನೊಬ್ಬ ಬಲಿಯಾಗಿದ್ದಾನೆ. ಹಾಸನದಲ್ಲಿ ಶಂಕಿತ ಡೆಂಗ್ಯು ಜ್ವರಕ್ಕೆ ಮೂವರು ಹೆಣ್ಣು ಮಕ್ಕಳು ಬಲಿಯಾದ ಬೆನ್ನಲ್ಲೇ ಈ ಸುದ್ದಿ ಬಂದಿದೆ.

ಅಂಜನಾಪುರದ 11 ವರ್ಷದ ಬಾಲಕ ಗಗನ್ ಜ್ವರದಿಂದ ಸಾವಿಗೀಡಾಗಿದ್ದು, ಇದು ಬೆಂಗಳೂರಿನಲ್ಲಿ ಡೆಂಗ್ಯುವಿಗೆ ಪುಟ್ಟ ಮಗುವಿನ ಮೊದಲ ಸಾವು ಆಗಿದೆ. ನಿನ್ನೆ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಬಾಲಕ ಅಸುನೀಗಿದ್ದಾನೆ. ಈತ ಜಂಬೂಸವಾರಿ ದಿಣ್ಣೆಯ ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ. ಕಳೆದ ಮೂರು ದಿನಗಳಿಂದ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾನೆ.

ಕಳೆದ ವಾರ ಕಗ್ಗದಾಸಪುರದಲ್ಲಿ 27 ವರ್ಷ ಯುವಕ ಡೆಂಗ್ಯುವಿನಿಂದ ಸಾವನ್ನಪ್ಪಿದ್ದ. ಹಾಸನದಲ್ಲಿ ಮೂವರು ಬಾಲಕಿಯರು ಡೆಂಗ್ಯುವಿನಿಂದ ಮೃತಪಟ್ಟಿದ್ದಾರೆ. ಒಟ್ಟು ಏಳು ಮಂದಿ ರಾಜ್ಯದಲ್ಲಿ ಇದುವರೆಗೆ ಡೆಂಗ್ಯುವಿನಿಂದ ಸಾವಿಗೀಡಾಗಿದ್ದಾರೆ ಎಂದು ಲೆಕ್ಕ ಹಾಕಲಾಗಿದೆ. ಕೆಲವು ಶಂಕಿತ ಡೆಂಗ್ಯು ಸಾವಿನ ಪ್ರಕರಣಗಳಿದ್ದು , ಅವು ಖಚಿತಗೊಳ್ಳಬೇಕಿವೆ.

ಡೆಂಗ್ಯು ಪರೀಕ್ಷೆಗೆ ದರ ನಿಗದಿ

ಬೆಂಗಳೂರು: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಡೆಂಗ್ಯೂ ಜ್ವರ ಪತ್ತೆಗೆ ಎರಡು ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಈ ಪರೀಕ್ಷೆಗಳಿಗೆ ಒಟ್ಟು 600 ರೂ. ನಿಗದಿಪಡಿಸಲು ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ.

ಡೆಂಗ್ಯೂ ಜ್ವರ ಪತ್ತೆಗೆ ಎರಡು ಮಾದರಿಯ ಪರೀಕ್ಷೆ ನಡೆಸಲಾಗುತ್ತದೆ. ತಲಾ 300 ರೂ.ನಂತೆ ಒಟ್ಟು 600 ರೂ. ದರವನ್ನು ನಿಗದಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಈ ಸಂದರ್ಭವನ್ನು ಬಳಸಿಕೊಂಡು ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ದುಪ್ಪಟ್ಟು ಹಣ ವಸೂಲಿಯಾಗುತ್ತಿದೆ ಎಂಬ ಬಗ್ಗೆ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ರಾಜ್ಯ ಸರ್ಕಾರ ದರ ನಿಗದಿ ಮಾಡಲು ಮುಂದಾಗಿದೆ.

ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ

ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುತ್ತಿಲ್ಲ. ಕೆಪಿಎಂ ಆಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯ. IHIPಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಅಪ್ಲೋಡ್ ಮಾಡುತ್ತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯು ತಪಾಸಣೆಗೆ ದರ ನಿಗದಿ ಮಾಡುವ ಬಗ್ಗೆ ಚರ್ಚೆ ಮಾಡಿಲ್ಲ. ಆ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮಂಗಳವಾರ ತಿಳಿಸಿದ್ದರು.

ಇದನ್ನೂ ಓದಿ | Dengue Fever: ಡೆಂಗ್ಯೂ ಬಗ್ಗೆ ಇರಲಿ ಎಚ್ಚರಿಕೆ!

Continue Reading

ಆರೋಗ್ಯ

Saffron For Baby: ಗರ್ಭಿಣಿ ಕೇಸರಿ ಹಾಲು ಕುಡಿಯುವುದರಿಂದ ಮಗು ಬೆಳ್ಳಗಾಗುತ್ತದೆಯೇ?

Saffron for baby: ಗರ್ಭಿಣಿಯು ಕೇಸರಿ ಹಾಲು ಕುಡಿಯುವುದರಿಂದ ಹುಟ್ಟುವ ಮಗು ಬೆಳ್ಳಗಿರುತ್ತದೆ ಎಂಬ ನಂಬಿಕೆ ವ್ಯಾಪಕವಾಗಿ ಚಾಲ್ತಿಯಲ್ಲಿದೆ. ತಾಯಿ ತಿನ್ನುವ-ಕುಡಿಯುವ ವಸ್ತುಗಳಿಂದ ಮಗುವಿನ ಜನ್ಮಜಾತ ಗುಣಗಳು ಬದಲಾಗುವುದಕ್ಕೆ ಸಾಧ್ಯವೇ? ಯಾವುದು ನಿಜ? ಇಲ್ಲಿದೆ ಮಾಹಿತಿ.

VISTARANEWS.COM


on

Saffron For Baby
Koo

ಮನೆಯಲ್ಲಿ ಮಗುವೊಂದು (Saffron for baby) ಬರುವುದಿದೆ ಎಂದಾದರೆ ಸಂಭ್ರಮ ಮುಗಿಲು ಮುಟ್ಟುತ್ತದೆ. ಮನೆಯನ್ನು ಮಗುವಿಗಾಗಿ ಸಿದ್ಧ ಮಾಡುವುದರಿಂದ ಹಿಡಿದು, ಗರ್ಭಿಣಿಗೆ ಅಡಿಯಿಂದ ಮುಡಿಯವರೆಗೆ ಸಲಹೆ ಕೊಡುವವರೆಗೆ ಯಾವುದಕ್ಕೂ ಕೊರತೆಯಾಗುವುದಿಲ್ಲ. ಇದನ್ನು ತಿನ್ನು, ಅದನ್ನು ಕೇಳು, ಮತ್ತೊಂದನ್ನು ನೋಡು, ಇನ್ಯಾವುದನ್ನೋ ಕುಡಿ ಎನ್ನುತ್ತಾ, ಯಾವುದು ಬೇಕು-ಯಾಕೆ ಬೇಕು ಎನ್ನುವುದೇ ತಿಳಿಯದಂತೆ ಗೊಂದಲ ಹುಟ್ಟಿಸಿಬಿಡುತ್ತಾರೆ ಸುತ್ತಲಿನವರು. ಅಂಥದ್ದೇ ಸಲಹೆಗಳಲ್ಲಿ ಒಂದು ಕೇಸರಿಯ ಸೇವನೆ. ಗರ್ಭಿಣಿಯು ಕೇಸರಿ ಹಾಲು ಕುಡಿಯುವುದರಿಂದ ಹುಟ್ಟುವ ಮಗು ಬೆಳ್ಳಗಿರುತ್ತದೆ ಎಂಬ ನಂಬಿಕೆ ವ್ಯಾಪಕವಾಗಿ ಚಾಲ್ತಿಯಲ್ಲಿದೆ. ಇದು ನಿಜವೇ? ಒಂದೊಮ್ಮೆ ನಿಜವಲ್ಲದಿದ್ದರೆ, ಕೇಸರಿ ಹಾಲು ಕುಡಿಯಬೇಕೆ? ಇಲ್ಲಿದೆ ಉತ್ತರ.

Image Of Benefits Of Saffron

ಕೇಸರಿ ವರ್ಣವರ್ಧಕವೇ?

ಮಗುವಿನ ಬಣ್ಣ ನಿರ್ಧಾರವಾಗುವುದು ತಂದೆ-ತಾಯಿಗಳಿಂದ ಬಂದ ವಂಶವಾಹಿಗಳ ಮೇಲೆ; ತಿನ್ನುವ-ಕುಡಿಯುವ ಆಹಾರದ ಮೇಲಲ್ಲ. ಹಾಗಾಗಿ ತಾಯಿ ಕೇಸರಿ ಹಾಲು ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಮಗು ಆ ಹಾಲಿನಲ್ಲಿ ಮಿಂದು ಬರುತ್ತದೆ ಎಂದು ಭಾವಿಸುವುದು ತಪ್ಪು. ಮಗುವಿನ ಬಣ್ಣ, ಕಣ್ಣು, ಮೂಗು, ಕೂದಲು, ಉಗುರು ಮುಂತಾದ ದೈಹಿಕ ಲಕ್ಷಣಗಳೆಲ್ಲ ನಿರ್ಧಾರವಾಗುವುದು ವಂಶವಾಹಿಗಳ ಮೇಲೆ.
ಹಾಗಾದರೆ ಒಂಬತ್ತು ತಿಂಗಳು ಲೀಟರುಗಟ್ಟಲೆ ಕೇಸರಿ ಹಾಲು ಕುಡಿಯುವುದು ಸುಮ್ಮನೆ ದಂಡ! ಅಲ್ಲವೇಅಲ್ಲ. ಕೇಸರಿ ಸೇವನೆಯ ಜಾದೂದಿಂದ ಮಗು ಬೆಳ್ಳಗಾಗುವುದಿಲ್ಲ ಎಂಬುದನ್ನು ಬಿಟ್ಟರೆ, ಸೇವಿಸಿದ್ದು ವ್ಯರ್ಥವಾಗುವುದಿಲ್ಲ. ಗರ್ಭಾವಸ್ಥೆಯಲ್ಲಿ ಕೇಸರಿಯನ್ನು ಮಿತವಾಗಿ ಸೇವಿಸುವುದು ತಾಯಿ-ಶಿಶು ಇಬ್ಬರಿಗೂ ಒಳ್ಳೆಯದು. ಇದರಿಂದ ಇಬ್ಬರ ಸ್ವಾಸ್ಥ್ಯಕ್ಕೆ ಹಲವು ಬಗೆಯಲ್ಲಿ ಪ್ರಯೋಜನಗಳಿವೆ.

ಉತ್ಕರ್ಷಣ ನಿರೋಧಕಗಳು

ಕೇಸರಿಯಲ್ಲಿ ಸ್ಯಾಫ್ರನಾಲ್‌, ಪೈಕ್ರೋಕ್ರೋಸಿನ್‌ ಮುಂತಾದ ಉತ್ಕರ್ಷಣ ನಿರೋಧಕಗಳಿವೆ. ಇವು ದೇಹದಲ್ಲಿನ ಉರಿಯೂತ ಶಮನ ಮಾಡಲು ನೆರವಾಗುತ್ತವೆ. ಗರ್ಭಾವಸ್ಥೆಯನ್ನು ಸಂತಸದಿಂದ ದಾಟುವುದಕ್ಕೆ ಬೇಕಾದ ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ಇರಿಸಿಕೊಳ್ಳುವುದಕ್ಕೆ ಇಂಥ ಉರಿಯೂತ ಶಾಮಕಗಳು ಅಗತ್ಯ.

ealthy internal organs of human digestive system / highlighted blue organs

ಪಚನಕಾರಿ

ಗರ್ಭಾವಸ್ಥೆಯಲ್ಲಿ ಜೀರ್ಣಾಂಗಗಳು ಕೆಲವೊಮ್ಮೆ ಕಷ್ಟ ಕೊಡುತ್ತವೆ. ಹುಳಿತೇಗು, ಎದೆಯುರಿ, ಮಲಬದ್ಧತೆ ಮುಂತಾದ ತೊಂದರೆಗಳು ಬಹಳಷ್ಟು ಮಹಿಳೆಯರಲ್ಲಿ ಕಾಣುತ್ತದೆ. ಕೇಸರಿ ಜೀರ್ಣಾಂಗಗಳನ್ನು ಉದ್ದೀಪಿಸುತ್ತದೆ. ಇದರಿಂದ ಕೇಸರಿ ಹಾಲಿನ ಸೇವನೆಯು ಗರ್ಭಿಣಿಯರಿಗೆ ಲಾಭದಾಯಕ. ಇದನ್ನು ಮಿತ ಪ್ರಮಾಣದಲ್ಲಿ ಸೇವಿಸುವುದರಿಂದ ಬೆಳಗಿನ ಹೊತ್ತು ಕಾಡುವ ವಾಂತಿಯನ್ನೂ ನಿಯಂತ್ರಿಸಬಹುದು.

ಮೂಡ್‌ ಸುಧಾರಣೆ

ತಾಯಿ ಖುಷಿಯಲ್ಲಿದ್ದರೆ, ಒಳಗಿರುವ ಮಗುವೂ ಖುಷಿಯಲ್ಲಿರುತ್ತದೆ. ಹೌದು, ತಾಯಿಯ ಮಾನಸಿಕ ಸ್ಥಿತಿ-ಗತಿಗಳು ಮಗುವಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುವುದು ನಿಜ. ಕೇಸರಿಯಲ್ಲಿ ಒತ್ತಡ ಶಾಮಕ ಗುಣಗಳಿವೆ. ಇದರಿಂದ ಮನಸ್ಸನ್ನು ಸಂತೋಷವಾಗಿರಿಸಿ, ಶಿಶುವಿನ ಮೇಲೆ ಧನಾತ್ಮಕ ಪರಿಣಾಮವನ್ನು ಉಂಟು ಮಾಡುತ್ತದೆ.

It is also suitable for pregnant women to consume due to its vitamin K and folate Benefits Of Cluster Beans

ನೋವು ಶಮನ

ಹೊಟ್ಟೆಯಲ್ಲಿರುವ ಕೂಸು ಬೆಳೆಯುತ್ತಿದ್ದಂತೆ, ಅದಕ್ಕೆ ಬೇಕಾದ ಜಾಗವನ್ನು ಒದಗಿಸುವುದಕ್ಕೆ ದೇಹದ ಬಹಳಷ್ಟು ಅಂಗಗಳು ಒಂದಕ್ಕೊಂದು ಒತ್ತರಿಸಿಕೊಂಡು ಸ್ಥಳ ಬಿಟ್ಟುಕೊಡುವುದು ಸ್ವಾಭಾವಿಕ. ಈ ದಿನಗಳಲ್ಲಿ ಬೆನ್ನು, ಹೊಟ್ಟೆ ಮತ್ತು ಕಾಲುಗಳಲ್ಲಿ ನೋವು ಕಾಡುವುದು ಸಾಮಾನ್ಯ. ಕೇಸರಿಗೆ ಲಘುವಾದ ನೋವು ನಿವಾರಕ ಗುಣವಿದ್ದು, ಇಂಥ ನೋವುಗಳನ್ನು ಕ್ರಮೇಣ ಕಡಿಮೆ ಮಾಡಬಲ್ಲದು.

ಇದನ್ನೂ ಓದಿ: Dengue Fever In Children: ಮಗುವಿನ ಮೈ ಬಿಸಿ ಆಗಿದೆಯೇ? ಡೆಂಗ್ಯು ಜ್ವರದ ಲಕ್ಷಣಗಳನ್ನು ತಿಳಿದುಕೊಳ್ಳಿ

ಕಬ್ಬಿಣದಂಶ

ಗರ್ಭಾವಸ್ಥೆಯಲ್ಲಿ ಕಬ್ಬಿಣದ ಮಾತ್ರೆಗಳನ್ನು ಸೇವಿಸಲು ವೈದ್ಯರು ಸೂಚಿಸುವುದಿದೆ. ರಕ್ತಹೀನತೆ ಕಾಡದಂತೆ ಮಾಡುವ ಕ್ರಮವಿದು. ಇಂಥ ಪೂರಕಗಳ ಜೊತೆಗೆ ಕೇಸರಿಯನ್ನೂ ಮಿತವಾಗಿ ಸೇವಿಸಬಹುದೇ ಎಂಬುದನ್ನು ವೈದ್ಯರನ್ನೇ ಕೇಳಬೇಕಾಗುತ್ತದೆ. ಕೇಸರಿಯಲ್ಲಿ ಕಬ್ಬಿಣದಂಶವೂ ಇದ್ದು, ಹಿಮೋಗ್ಲೋಬಿನ್‌ ಮಟ್ಟ ಕುಸಿಯದಂತೆ ಮಾಡಲು ಇದು ಸಹಕಾರಿ.

pregnancy sleep

ಕಣ್ತುಂಬಾ ನಿದ್ದೆ

ಹಾರ್ಮೋನಿನ ವ್ಯತ್ಯಾಸಗಳು, ಹಿಗ್ಗುತ್ತಿರುವ ಹೊಟ್ಟೆ, ಹೇಳಲಾರದ ತೊಂದರೆಗಳೆಲ್ಲ ಸೇರಿ ಗರ್ಭಿಣಿಯರಿಗೆ ರಾತ್ರಿಯ ನಿದ್ದೆ ಬಾರದಿರಬಹುದು. ಇದರಿಂದಾಗಿ ಬೆಳಗ್ಗೆ ಏಳುತ್ತಿದ್ದಂತೆ ಚೇತೋಹಾರಿ ಎನಿಸದೆ, ಸುಸ್ತು, ಸಂಕಟ ಮುಂದುವರಿಯುತ್ತದೆ. ಇದಕ್ಕೆ ಬದಲು, ರಾತ್ರಿ ಮಲಗುವ ಮುನ್ನ ಬೆಚ್ಚಗಿನ ಕೇಸರಿ ಹಾಲು ಕುಡಿದರೆ ರಾತ್ರಿಯ ನಿದ್ದೆ ಸುಧಾರಿಸುತ್ತದೆ. ಮಾನಸಿಕ ಒತ್ತಡವನ್ನು ಶಮನ ಮಾಡಿ, ನಿದ್ದೆ ಬರಿಸುವ ಸಾಮರ್ಥ್ಯ ಕೇಸರಿಗಿದೆ.
ಇದಲ್ಲದೆ, ಪ್ರತಿರೋಧಕ ಶಕ್ತಿಯನ್ನು ಪ್ರಚೋದಿಸುವುದಕ್ಕೂ ಕೇಸರಿ ಸಹಕಾರಿ. ಮಗುವಿನ ಚರ್ಮದ ಮೇಲೆ ಹೆಚ್ಚಿನ ಪರಿಣಾಮ ಬೀರದಿದ್ದರೂ, ತಾಯಿಯ ತ್ವಚೆ ಸುಧಾರಿಸಬಹುದು. ಆದರೆ ಇದನ್ನು ಅತಿಯಾಗಿ ಸೇವಿಸುವಂತಿಲ್ಲ. ಏನು, ಎಷ್ಟು ಎಂಬುದನ್ನೆಲ್ಲ ತಜ್ಞರಲ್ಲಿ ಸಲಹೆ ಕೇಳುವುದು ಸೂಕ್ತ.

Continue Reading
Advertisement
KAS
ಕರ್ನಾಟಕ9 mins ago

KAS: ಕೆಎಎಸ್‌ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್;‌ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ, ಇಲ್ಲಿದೆ ಮಾಹಿತಿ

Mid Day Meal
ದೇಶ60 mins ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ1 hour ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ1 hour ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ2 hours ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Viral Video
Latest2 hours ago

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Kashmir Encounter
ದೇಶ2 hours ago

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Viral Video
Latest2 hours ago

Viral Video : ಹೀಗೆಲ್ಲಾ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾರಾ…? ವಿಡಿಯೊ ನೋಡಿ

Viral News
Latest2 hours ago

Viral News: ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವೇಳೆ ಅಚಾತುರ್ಯ; ದೃಷ್ಟಿ ಕಳೆದುಕೊಂಡ 16 ರೋಗಿಗಳು

Dengue cases in Karnataka
ಪ್ರಮುಖ ಸುದ್ದಿ2 hours ago

Dengue cases in Karnataka: ರಾಜ್ಯದಲ್ಲಿಂದು 175 ಡೆಂಗ್ಯೂ ಕೇಸ್‌ಗಳು ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 352ಕ್ಕೆ ಏರಿಕೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ5 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ8 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ8 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು11 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ12 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ17 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ1 day ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ1 day ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ1 day ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌