Chewing Gum : ಚ್ಯೂಯಿಂಗ್‌ ಗಮ್‌ ನುಂಗಿದ್ರಾ? ಹೆದರಬೇಡಿ, ಜೀವ ಹೋಗುವುದಿಲ್ಲ! Vistara News
Connect with us

ಆರೋಗ್ಯ

Chewing Gum : ಚ್ಯೂಯಿಂಗ್‌ ಗಮ್‌ ನುಂಗಿದ್ರಾ? ಹೆದರಬೇಡಿ, ಜೀವ ಹೋಗುವುದಿಲ್ಲ!

ಚ್ಯೂಯಿಂಗ್‌ ಗಮ್‌ (Chewing Gum) ಆಕಸ್ಮಿಕವಾಗಿ ಹೊಟ್ಟೆಗೆ ಹೋದರೆ? ʻಹೊಟ್ಟೆಯಲ್ಲೇ ಅಂಟಿಕೊಂಡರೆ? ಹೊರಗೆ ಬಾರದೇ ಇದ್ದರೇನು ಮಾಡುವುದು?ʼ ಎಂದು ಆತಂಕ ಹಲವರಿಗೆ.

VISTARANEWS.COM


on

Chewing gum Dont worry life wont go away
Koo

ಬಾಯಿಯನ್ನು ಸದಾ ವ್ಯಸ್ತವಾಗಿಡುವ (Chewing Gum) ಚ್ಯೂಯಿಂಗ್‌ ಗಮ್‌ (ಅಥವಾ ಚಿಕ್ಕದಾಗಿ ಗಮ್‌!) ಬಹಳಷ್ಟು ಜನರಿಗಿಷ್ಟ. ಯಾರೊಂದಿಗೂ ಹೆಚ್ಚು ಮಾತಾಡುವ ತ್ರಾಸಿಲ್ಲದೇ, ಬಾಯಿಯ ದುರ್ಗಂಧವನ್ನೂ ತೊಡೆಯುವ, ತಿನ್ನುವ ಚಪಲವನ್ನೂ ಹತ್ತಿಕ್ಕುವ ಗಮ್‌ ಅಗಿಯುತ್ತಿರುವುದು ಕೆಲವರಿಗೆ ಪ್ರಿಯ. ಅದನ್ನು ಜಗಿದಾದ ಮೇಲೆ ಎಲ್ಲೆಂದರಲ್ಲಿ ಅಂಟಿಸುವ (ದುರ್‌)ಉದ್ದೇಶಕ್ಕಾಗಿಯೇ ತಿನ್ನುವವರಿದ್ದಾರೆ. ಹಾಗೆ ನೋಡಿದರೆ ಚ್ಯೂಯಿಂಗ್‌ ಗಮ್‌ ತಿನ್ನುವುದಲ್ಲ, ಅಗಿಯುವುದಷ್ಟೇ. ಅದನ್ನು ನುಂಗುವಂತಿಲ್ಲ, ನುಂಗಬಾರದು. ಆದಾಗ್ಯೂ ಎಂದಾದರೊಮ್ಮೆ ಆಕಸ್ಮಿಕವಾಗಿ ಅದು ಹೊಟ್ಟೆಗೆ ಹೋದರೆ? ʻಹೊಟ್ಟೆಯಲ್ಲೇ ಅಂಟಿಕೊಂಡರೆ? ಹೊರಗೆ ಬಾರದೇ ಇದ್ದರೇನು ಮಾಡುವುದು?ʼ ಎಂದು ಆತಂಕ ಹಲವರಿಗೆ. ಇದಕ್ಕೂ ಮುನ್ನ ಗಮ್‌ ತಿನ್ನುವುದು ಸುರಕ್ಷಿತವೇ? ಏನಿದೆ ಅದರಲ್ಲಿ ಎಂದು ನೋಡೋಣ.

ಏನಿದೆ ಇದರಲ್ಲಿ?: ಇದನ್ನು ರೆಸಿನ್‌, ಪ್ಲಾಸ್ಟಿಸೈಜರ್‌ ಮತ್ತು ಪಾಲಿಮರ್‌ಗಳ ಮಿಶ್ರಣವಾದ ಗಮ್‌ ಬೇಸ್‌ನಿಂದ ಮಾಡಿಸುತ್ತಾರೆ. ಕೆಲವೊಮ್ಮೆ ಇದನ್ನು ಮೃದುವಾಗಿಸಲು ಆಹಾರ ದರ್ಜೆಯ ಸಾಫನರ್‌ಗಳು, ಕೆಡದಂತೆ ಉಳಿಸಲು ಪ್ರಿಸರ್ವೇಟಿವ್‌ಗಳು, ಕೃತಕ ಬಣ್ಣ, ಸಿಹಿ ಮತ್ತು ರುಚಿಗಳನ್ನು ಸೇರಿಸಿರುತ್ತಾರೆ. ಕೆಲವೊಮ್ಮೆ ಪಾಲಿಯಾಲ್‌ ಎನ್ನುವ ರಾಸಾಯನಿಕದ ಹೊದಿಕೆಯೂ ಇದಕ್ಕಿರುತ್ತದೆ. ಮೂಲತಃ ಇದು ಹಲವಾರು ರಾಸಾಯನಿಕಗಳ ಮುದ್ದೆ, ಮತ್ತೇನಲ್ಲ. ಹಾಗಾಗಿ ಗಮ್‌ ಅಗಿಯದಿದ್ದರೆ ಗಂಟು ಹೋಗುವುದೇನಿಲ್ಲ ಎಂದಾದರೆ ʻದೂರವಿಡಿʼ ಎನ್ನುತ್ತವೆ ಹಲವಾರು ಅಧ್ಯಯನಗಳು. ಇದರಲ್ಲಿರುವ ಕೃತಕ ಬಣ್ಣ, ರುಚಿಗಳು ಅಥವಾ ರಾಸಾಯನಿಕಗಳು ಅಲರ್ಜಿ ತರಬಹುದು. ಕೃತಕ ಸಿಹಿಯ ಅಂಶ ಆರೋಗ್ಯಕ್ಕೆ ಮಾರಕ. ಹಾಗಾಗಿ ಬಾಯಿ ಚಪಲಕ್ಕೇ ಜಗಿದರೂ, ಅಪರೂಪಕ್ಕೆ ಸಾಕು ಎಂದು ಪರಿಣತರೂ ಹೇಳುತ್ತಾರೆ.

ನುಂಗಿದರೇನು ಗತಿ?: ಸುಮ್ಮನೆ ಜಗಿದರೇ ಆರೋಗ್ಯಕ್ಕೆ ಹೇಳಿಸಿದ್ದಲ್ಲ ಎನ್ನುವಾಗ ಇದನ್ನು ನುಂಗಿಬಿಟ್ಟರೆ? ಖಂಡಿತಾ ಜೀವಕ್ಕೆ ಅಪಾಯವಿಲ್ಲ ಅಥವಾ ಬೆಂಕಿಗೆ ಬಿದ್ದ ಹಾಗೆ ತುರ್ತುಚಿಕಿತ್ಸೆಗೆ ಓಡಬೇಕೆಂದೇನೂ ಇಲ್ಲ ಎನ್ನುತ್ತಾರೆ ತಜ್ಞರು. ಹೊಟ್ಟೆಯಲ್ಲಿ ಅದು ದೀರ್ಘಕಾಲ ಕುಳಿತಿರುವುದು ಹೌದು. ಕಠಿಣವಾದ ಗಮ್‌ಬೇಸ್‌ ಜಠರದಲ್ಲಿ ಕರಗಿ ಜೀರ್ಣವಾಗುವುದಕ್ಕೆ ಸಮಯ ಬೇಕು. ಅಂದರೆ ವರ್ಷಾನುಗಟ್ಟಲೆ ಅಲ್ಲಿಯೇ ಕುಳಿತಿರುತ್ತದೆ ಎಂದು ಮಕ್ಕಳನ್ನು ಹೆದರಿಸಿದ ಹಾಗೇನೂ ಆಗುವುದಿಲ್ಲ.

ಕೆಲವೊಮ್ಮೆ ಹೊಟ್ಟೆಯಗುಂಟ ಸಾಗಿ ಮಾರನೇದಿನ ಟಾಯ್ಲೆಟ್‌ನಲ್ಲಿ ಹೊರಗೆ ಬರುವ ಸಾಧ್ಯತೆಯೂ ಇಲ್ಲದಿಲ್ಲ. ಕೆಲವು ಅಪರೂಪದ ಸಂದರ್ಭಗಳಲ್ಲಿ ಜೀರ್ಣಾಂಗದ ಹಾದಿಯಲ್ಲಿ ಕುಳಿತು, ಆಹಾರದ ಪರಿಚಲನೆಗೆ ತೊಂದರೆ ಕೊಡುತ್ತದೆ. ಆಗ ಹೊಟ್ಟೆನೋವು, ವಾಂತಿಯಂಥ ಲಕ್ಷಣಗಳು ಕಾಣುವುದಿದೆ. ಇದಕ್ಕಿಂತ ಹೆಚ್ಚಾಗಿ ಇನ್ಯಾಗ ಅಪಾಯಗಳೂ ವಯಸ್ಕರಲ್ಲಿ ಕಂಡುಬಂದ ಉದಾಹರಣೆಗಳು ವಿರಳ.

ಮಕ್ಕಳಿಗೆ ಅಪಾಯವೇ?: ಗಮ್‌ ಪ್ರೀತಿ, ದೊಡ್ಡವರಿಗಿಂತ ಮಕ್ಕಳಲ್ಲೇ ಹೆಚ್ಚು; ಇದರಿಂದಾಗಿ ಬಹುಶಃ ನುಂಗುವ ಸಾಧ್ಯತೆಯೂ ಹೆಚ್ಚೇ. ಹಾಗೆಂದು ಮಕ್ಕಳಿಗೆ ಗಮ್‌ ನುಂಗಿದಷ್ಟಕ್ಕೆ ಪ್ರಾಣಾಪಾಯವಿಲ್ಲ. ಆದರೆ ನುಂಗುವಾಗ ಗಂಟಲಿಗೆ ಸಿಕ್ಕಿ ಸಮಸ್ಯೆಯಾಗಬಹುದು. ಎಲ್ಲೋ ಒಂದೆರಡು ನುಂಗಿದರೂ ಚಿಂತೆಯಿಲ್ಲ. ಹೆಚ್ಚು ಗಮ್‌ಗಳನ್ನು ನುಂಗಿದರೆ, ಕರುಳಿನ ಹಾದಿಯಲ್ಲಿ ಹೊರಹೋಗುವ ಕಶ್ಮಲಗಳ ದಾರಿ ಬಂದ್‌ ಮಾಡಿದ ಉದಾಹರಣೆಗಳಿವೆ. ಇದರಿಂದ ಮಗುವಿಗೆ ಅತಿಯಾದ ಹೊಟ್ಟೆನೋವು, ಮಲಬದ್ಧತೆ, ವಾಂತಿಯಂಥ ತೊಂದರೆಗಳು ಕಾಣಬಹುದು.

ಇದನ್ನೂ ಓದಿ : H3N2 Virus: ಎಚ್‌3ಎನ್‌2 ವೈರಸ್‌ನ ಮೂಲ ಪತ್ತೆಗಾಗಿ ಕ್ಲಿನಿಕಲ್ ಆಡಿಟ್‌ಗೆ ಮುಂದಾದ ಆರೋಗ್ಯ ಇಲಾಖೆ

ಇನ್ನೂ ಕೆಲವು ಅಪರೂಪದ ಪ್ರಕರಣಗಳಲ್ಲಿ, ನುಂಗಿದ ಗಮ್‌ಗಳ ಶೇಷಗಳು ಹೊಟ್ಟೆಯಲ್ಲೇ ಉಳಿದು, ಇತರ ಕಶ್ಮಲಗಳ ಜೊತೆ ಸೇರಿ, ಸಣ್ಣಸಣ್ಣ ಕಣಗಳೆಲ್ಲಾ ಒಟ್ಟಾಗಿ ದೊಡ್ಡದಾಗಿ ಜೀರ್ಣಾಂಗದ ಕೆಲಸಕ್ಕೆ ತಡೆಯಾದ ಉದಾಹರಣಗಳಿವೆ. ಹಾಗಾಗಿ ಚಿಕ್ಕ ಮಕ್ಕಳಿಗೆ ಗಮ್‌ ಜಗಿಯುವುದಕ್ಕೆ ಕೊಡದಿದ್ದರೇ ಕ್ಷೇಮ. ಹಾಗೂ ಕೊಡಲೇಬೇಕಾದರೆ ಅಪರೂಪಕ್ಕೆ ಕೊಟ್ಟರೆ ಸಾಕು. ಮಾತ್ರವಲ್ಲ, ಗಮ್‌ ಗಳು ಅಗಿಯುವುದಕ್ಕೆ ಮಾತ್ರ ಇರುವುದು, ಅವುಗಳನ್ನು ತಿನ್ನುವ ಅಥವಾ ನುಂಗುವ ಹಾಗಿಲ್ಲ ಎಂಬುದನ್ನು ಚಿಣ್ಣರಿಗೆ ಮನದಟ್ಟು ಮಾಡಿಸುವುದು ಅಗತ್ಯ. ಇಷ್ಟಾಗಿ ಮಕ್ಕಳು ಗಮ್‌ ನುಂಗಿದ ಸಂದರ್ಭದಲ್ಲಿ ವಾಂತಿ, ಉಸಿರಾಟದ ತೊಂದರೆ, ಹೊಟ್ಟೆನೋವು, ಮಲಬದ್ಧತೆ, ಹೊಟ್ಟೆ ಉಬ್ಬರದಂಥ ಲಕ್ಷಣಗಳು ಕಂಡರೆ ವೈದ್ಯರನ್ನು ಕಾಣಬೇಕಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Import duty exemption : ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಎಲ್ಲ ಔಷಧಗಳ ದರ ಇಳಿಕೆ

ಅಪರೂಪದ ಕಾಯಿಲೆಗಳ ಚಿಕಿತ್ಸೆಯಲ್ಲಿ ಬಳಸುವ ಔಷಧ ಹಾಗೂ ಆಹಾರ ವಸ್ತುವಿನ ಮೇಲೆ ಆಮದು ಸುಂಕ ವಿನಾಯಿತಿಯನ್ನು ಕೇಂದ್ರ ಸರ್ಕಾರ ಏಪ್ರಿಲ್‌ 1ರಿಂದ ಅನ್ವಯಿಸುವಂತೆ ನೀಡಿದೆ. (Import duty exemption) ಹೀಗಾಗಿ ಅವುಗಳ ದರ ಇಳಿಕೆಯಾಗಲಿದೆ.

VISTARANEWS.COM


on

Edited by

Medicines
Koo

ನವ ದೆಹಲಿ: ಕೇಂದ್ರ ಸರ್ಕಾರವು ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಎಲ್ಲ ಔಷಧ ಹಾಗೂ ಆಹಾರಗಳ ದರ ಇಳಿಕೆಗೆ ಪೂರಕವಾಗಿ, ಅವುಗಳಿಗೆ ಆಮದು ಸುಂಕದಿಂದ ವಿನಾಯಿತಿ (Import duty exemption) ನೀಡಿದೆ. ಏಪ್ರಿಲ್‌ 1ರಿಂದ ಈ ಆಮದು ಸುಂಕ ವಿನಾಯಿತಿ ಅನ್ವಯವಾಗಲಿದೆ.

ಅಪರೂಪದ ಕಾಯಿಲೆಗಳ ಕುರಿತ ರಾಷ್ಟ್ರೀಯ ನೀತಿಯ (National policy for rare diseases 2021) ಅಡಿಯಲ್ಲಿ ಎಲ್ಲ ಬಗೆಯ ಅಪರೂಪದ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಎಲ್ಲ ಔಷಧ, ಆಹಾರಗಳಿಗೆ ಆಮದು ಸುಂಕದಿಂದ ವಿನಾಯಿತಿ ನೀಡಲಾಗಿದೆ ಎಂದು ಹಣಕಾಸು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಯಾವ ಔಷಧಗಳಿಗೆ ಆಮದು ಸುಂಕ ವಿನಾಯಿತಿ:

ಕೇಂದ್ರ ಸರ್ಕಾರ ಹಲವಾರು ಬಗೆಯ ಕ್ಯಾನ್ಸರ್‌ಗಳ ಚಿಕಿತ್ಸೆಯಲ್ಲಿ ಬಳಸುವ ಔಷಧವಾಗಿರುವ ಕೀಟ್ರುಡಾ (Keytruda) ಮೇಲಿನ ಆಮದು ಸುಂಕವನ್ನು ವಿನಾಯಿತಿಯ ಪಟ್ಟಿಗೆ ಸೇರಿಸಿದೆ. ಬೇಸಿಕ್‌ ಕಸ್ಟಮ್ಸ್‌ ಸುಂಕ ಅಥವಾ ಆಮದು ಸುಂಕವು 10% ಇರುತ್ತದೆ. ಲೈಫ್‌ ಸೇವಿಂಗ್‌ ಔಷಧ, ಲಸಿಕೆಗಳಿಗೆ 5% ಇರುತ್ತದೆ. ಕೆಲ ಔಷಧಗಳಿಗೆ ವಿನಾಯಿತಿ ನೀಡುತ್ತದೆ.

ವಿಶೇಷ ವೈದ್ಯಕೀಯ ಉದ್ದೇಶಕ್ಕಾಗಿ ನೀಡುವ ಆಹಾರಗಳು ಅಪರೂಪದ ಕಾಯಿಲೆಯಿಂದ ಬಳಲುತ್ತಿರುವವರಿಗೆ ನೀಡಬೇಕಾಗುತ್ತದೆ. ಇದು ಅವರ ಆಹಾರ ಪಥ್ಯದ ಭಾಗವಾಗಿರುತ್ತದೆ. ಇಂಥ ಆಹಾರಗಳಿಗೆ ಆಮದು ಸುಂಕ ವಿನಾಯಿತಿ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ಈ ಸುಂಕ ವಿನಾಯಿತಿಯನ್ನು ಪಡೆಯಲು ಆಮದುದಾರರು ಕೇಂದ್ರ ಅಥವಾ ರಾಜ್ಯದ ಆಹಾರ ಇಲಾಖೆಯ ಸರ್ಟಿಫಿಕೇಟ್‌ ಪಡೆಯಬೇಕಾಗುತ್ತದೆ. ಜಿಲ್ಲಾ ವೈದ್ಯಾಧಿಕಾರಿಯ ಸರ್ಟಿಫಿಕೇಟ್‌ ಕೂಡ ಆಗುತ್ತದೆ. ಆರೋಗ್ಯ ಸಚಿವಾಲಯದ ಪ್ರಕಾರ, 10 ಕೆ.ಜಿ ತೂಕವಿರುವ ಮಗುವಿಗೆ ಅಪರೂಪದ ಕಾಯಿಲೆ ಇದ್ದರೆ, ಚಿಕಿತ್ಸೆಗೆ ವಾರ್ಷಿಕ 10 ಲಕ್ಷ ರೂ.ಗಳಿಂದ 1 ಕೋಟಿ ರೂ. ತನಕ ಖರ್ಚಾಗುತ್ತದೆ. ಹೀಗಾಗಿ ಈ ಆಮದು ಸುಂಕ ಇಳಿಕೆಯ ನಿರ್ಧಾರವು ರೋಗಿಗಳಿಗೆ ರಿಲೀಫ್‌ ನೀಡಲಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇತ್ತೀಚೆಗೆ ಕೆಲ ಔಷಧಗಳಿಗೆ ದರ ಮಿತಿಯನ್ನು ವಿಧಿಸಲಾಗಿದೆ. ವಿವರ ಇಲ್ಲಿದೆ. ರಾಷ್ಟ್ರೀಯ ಔಷಧ ದರ ಪ್ರಾಧಿಕಾರ (National pharmaceutical pricing authority-NPPA) ಸೋಮವಾರ 74 ಔಷಧಗಳ ದರಗಳಿಗೆ ಮಿತಿ ವಿಧಿಸಿದೆ. ಇದರಲ್ಲಿ ಡಯಾಬಿಟಿಸ್‌, ರಕ್ತದೊತ್ತಡ (ಬಿಪಿ) ಸೇರಿದಂತೆ ನಾನಾ ಕಾಯಿಲೆಗಳಿಗೆ ಬಳಸುವ ಔಷಧಗಳು ಸೇರಿವೆ. 2023ರ ಫೆಬ್ರವರಿ 21ರಂದು ನಡೆದ ಪ್ರಾಧಿಕಾರದ 109ನೇ ಸಭೆಯ ನಿರ್ಣಯದ ಪ್ರಕಾರ ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಯಾವ ಔಷಧಗಳು ಅಗ್ಗ?

ಡಪಾಗ್ಲಿಪ್ಲೊಜಿನ್‌ ಸಿಟಾಗ್ಲಿಪ್ಟಿನ್‌ (Dapagliflozin Sitagliption) : 27.75 ರೂ.

ಮೆಟ್‌ಫಾರ್ಮಿನ್‌ ಹೈಡ್ರೊಕ್ಲೋರೈಡ್‌ : 27.75 ರೂ.

ಡಪಾಗ್ಲಿಪ್ಲೊಜಿನ್ ಟೆಲ್‌ಮಿಸರ್ಟಾನ್‌ ( Dapagliflozin sitagliptin)‌ : 10.92 ರೂ.

ಬಿಸೊಪ್ರೊಲೋಲ್‌ ಫ್ಯುಮರಾರಾಟ್‌ (Bisoprolol fumarate) 10.92 ರೂ.

ಸೋಡಿಯಂ ವಾಲ್ಪ್ರೊರೇಟ್‌: 3.20 ರೂ.

Continue Reading

ಆರೋಗ್ಯ

Health Tips: ಬಾರ್ಲಿ ನೀರು: ಬೇಸಿಗೆಗೆ ಬೇಕೇ ಬೇಕು ಈ ಪುರಾತನ ಪೇಯ!

ಬಾರ್ಲಿಯ ಮಹತ್ವ ತಿಳಿದರೂ, ಬೇಸಗೆಯಲ್ಲಿ ಬಾರ್ಲಿ ದೇಹಕ್ಕೆ ತಂಪು ಎಂಬುದು ಗೊತ್ತಿದ್ದರೂ ಇದನ್ನು ಬಳಸುವುದು ಹೇಗೆ ಎಂಬ ಸಂಶಯ ಹಲವರದ್ದು. ಇದಕ್ಕೆ ಉತ್ತರ ಬಾರ್ಲಿ ನೀರು. ಬಾರ್ಲಿ ನೀರನ್ನು ಕುಡಿಯುವುದರಿಂದ ದೇಹ ತಂಪಾಗುವುದಲ್ಲದೆ, ಹಲವು ಆರೋಗ್ಯಕರ ಲಾಭಗಳನ್ನೂ ನಾವು ಪಡೆಯಬಹುದು.

VISTARANEWS.COM


on

Edited by

barley water
Koo

ಫ್ಯಾಷನ್‌ ಇರಬಹುದು, ಆಹಾರ ಇರಬಹುದು ಹಳೆಯದೆಲ್ಲ ಮತ್ತೆ ಹೊಸ ಟ್ರೆಂಡ್‌ ಆಗಿ ಮರಳಿ ಬರುವುದುಂಟು. ಹಲೆಯ ಕಾಲದ ಪುರಾತನ ಪದ್ಧತಿಗಳು, ಆಹಾರ ಕ್ರಮ ಮತ್ತೆ ಒಳ್ಳೆಯದು ಎಂಬ ಹೆಸರಿನಲ್ಲಿ ಹೊಸ ರೂಪದಿಂದ ಆವರಿಸಿಕೊಳ್ಳುವುದುಂಟು. ಕೆಲವೊಮ್ಮೆ, ಹಳೆಯ ಆಹಾರ ಪದ್ಧತಿಗಳ ನಿಜವಾದ ಮಹತ್ವ ಈಗ ಅರಿವಾಗಿ ನಾವು ಹಿಂದಿನ ಆಹಾರಕ್ರಮಗಳ, ಆರೋಗ್ಯಕರ ಜೀವನ ಪದ್ಧತಿಗಳತ್ತ ಮತ್ತೆ ನಿಧಾನವಾಗಿ ಆಕರ್ಷಿತರಾಗುತ್ತಿದ್ದೇವೆ. ಇಂತಹುಗಳ ಪೈಕಿ ಬಾರ್ಲಿ ಎಂಬ ಧಾನ್ಯವೂ ಮತ್ತೆ ಪ್ರವರ್ಧಮಾನಕ್ಕೆ ಬರುತ್ತಿದೆ.

ಬಾರ್ಲಿಯ ಮಹತ್ವ ತಿಳಿದರೂ, ಬೇಸಗೆಯಲ್ಲಿ ಬಾರ್ಲಿ ದೇಹಕ್ಕೆ ತಂಪು (Summer drink) ಎಂಬುದು ಗೊತ್ತಿದ್ದರೂ ಇದನ್ನು ಬಳಸುವುದು ಹೇಗೆ ಎಂಬ ಸಂಶಯ ಹಲವರದ್ದು. ಇದಕ್ಕೆ ಉತ್ತರ ಬಾರ್ಲಿ ನೀರು (Barley water benefits). ಬಾರ್ಲಿ ನೀರನ್ನು ಕುಡಿಯುವುದರಿಂದ ದೇಹ ತಂಪಾಗುವುದಲ್ಲದೆ, ಹಲವು ಆರೋಗ್ಯಕರ ಲಾಭಗಳನ್ನೂ ನಾವು ಪಡೆಯಬಹುದು.

ಬಾರ್ಲಿ ನೀರು ಮಾಡುವುದು ಹೇಗೆ?: ಎರಡು ಲೋಟ ನೀರಿಗೆ ಒಂದು ಚಮಚ ಬಾರ್ಲಿಯನ್ನು ಹಾಕಿ ಚೆನ್ನಾಗಿ ಕುದಿಸಿ. ಬಾರ್ಲಿ ಕಾಳುಗಳು ಅನ್ನ ಬೆಂದಾಗ ಉಬ್ಬಿಕೊಳ್ಳುವ ಹಾಗೆ ಚೆನ್ನಾಗಿ ಉಬ್ಬಿಕೊಂಡ ಮೇಲೆ ಅಂದರೆ ಸಣ್ಣ ಉರಿಯಲ್ಲಿ ಸುಮಾರು ಅರ್ಧಗಂಟೆ ಕಾಲ ಕುದಿಸಿ ನಂತರ ಸೋಸಿಕೊಳ್ಳಿ. ಈ ನೀರಿಗೆ ಚಿಟಿಕೆ ಉಪ್ಪು ಸೇರಿಸಿ ಕುಡಿಯಬಹುದು. ಉಪ್ಪು ಬೇಡವಾಗಿದ್ದರೆ, ನಿಂಬೆಹಣ್ಣು, ಜೇನುತುಪ್ಪವನ್ನೂ ಸೇರಿಸಿ ಕುಡಿಯಬಹುದು. ಸೋಂಪು ಹಾಗೂ ಚಿಟಿಕೆ ದಾಲ್ಚಿನಿ ಪುಡಿ ಸೇರಿಸಿಯೂ ಕುಡಿಯಬಹುದು.

ಹಾಗಾದರೆ, ಇನ್ನು ಉದ್ಭವಿಸುವ ಪ್ರಶ್ನೆ ಎಂದರೆ ದಿನವೂ ಬಾರ್ಲಿ ನೀರು ಕುಡಿಯಬಹುದೇ ಎಂಬುದು. ಅತಿಯಾದರೆ ಅಮೃತವೂ ವಿಷ ಎಂಬ ಮಾತಿದೆ. ಬಾರ್ಲಿ ಒಳ್ಳೆಯದು, ತಂಪು ಎಂದುಕೊಂಡು ನಿತ್ಯವೂ ಬಾರ್ಲಿ ನೀರು ಕುಡಿಯುವುದು ಖಂಡಿತವಾಗಿಯೂ ಒಳ್ಳೆಯದಲ್ಲ. ವಾರಕ್ಕೆ ಹೆಚ್ಚೆಂದರೆ ಎರಡು ಬಾರಿ ಬಾರ್ಲಿ ನೀರು ಕುಡಿಯಬಹುದು. ಮೂತ್ರನಾಳದ ಇನ್‌ಫೆಕ್ಷನ್‌ ಸಮಸ್ಯೆ ಆಗಾಗ ಎದುರಿಸುವ ಮಂದಿಗೆ ಬಾರ್ಲಿ ನೀರು ಅತ್ಯುತ್ತಮ. ಹೆಚ್ಚಿನ ಮಾಹಿತಿಗೆ ನಿಮ್ಮ ವೈದ್ಯರನ್ನೊಮ್ಮೆ ಭೇಟಿ ಮಾಡಿ ಅವರ ಸಲಹೆ ಪಡೆಯುವುದು ಒಳ್ಳೆಯದು.

ಬಾರ್ಲಿಯ ಪ್ರಯೋಜನಗಳು:

1. ಬಾರ್ಲಿಯಲ್ಲಿ ನಾರಿನಂಶ ಹೆಚ್ಚಿದೆ. ಹಾಗಾಗಿ ಇದು ಜೀರ್ಣಕ್ರಿಯೆಯ ಸಮಸ್ಯೆ ಇದರುವ ಮಂದಿಗೆ ಜೀರ್ಣವಾಗಲು ಸಹಾಯ ಮಾಡುತ್ತದೆ. ಬಾರ್ಲಿ ನೀರನ್ನು ಕುಡಿಯುವುದರಿಂದ ಈಂಥ ಸಮಸ್ಯೆಗಳನ್ನು ಸರಳವಾಗಿಸಬಹುದು. ತಲೆತಲಾಂತರಗಳಿಂದ ಬಾರ್ಲಿನೀರನ್ನು ಮನೆಗಳಲ್ಲಿ ಹೊಟ್ಟೆ ಸಂಬಂಧೀ ಸಮಸ್ಯೆಗಳ ಪರಿಹಾರಕ್ಕೆ ಮನೆಮದ್ದಾಗಿ ಬಳಸುತ್ತಿದ್ದರು.

ಇದನ್ನೂ ಓದಿ: Health tips: ಋತುಚಕ್ರದ ಹೊಟ್ಟೆಯುಬ್ಬರಕ್ಕೆ ಮಾಡಿ ಕುಡಿಯಿರಿ ಈ ಮ್ಯಾಜಿಕ್‌ ಡ್ರಿಂಕ್‌!

2. ನೀವು ತೂಕ ಇಳಿಸಲು ಸನ್ನದ್ಧರಾಗಿದ್ದರೆ, ಬಾರ್ಲಿ ನೀರು ಆರಾಮವಾಗಿ ಕುಡಿಯಬಹುದು. ಬಾರ್ಲಿ ನೀರು ತೂಕ ಇಳಿಸುವ ಮಂದಿಯ ಆಹಾರಕ್ರಮಕ್ಕೆ ಪೂರಕವಾಗಿ ವರ್ತಿಸುತ್ತದೆ. ಇದರಲ್ಲಿ ಕಡಿಮೆ ಕ್ಯಾಲರಿ ಇರುವುದುರಿಂದ ತೂಕ ಹೆಚ್ಚಾಗದೆ, ಪೋಷಕಾಂಶಗಳನ್ನು ದೇಹಕ್ಕೆ ನೀಡುತ್ತದೆ.

3. ಮಧುಮೇಹಿಗಳಿಗೂ ಬಾರ್ಲಿ ನೀರು ಅತ್ಯುತ್ತಮ. ಬಾರ್ಲಿ ನೀರಿನಲ್ಲಿ ದೇಹದಲ್ಲಿರುವ ಸಕ್ಕರೆಯ ಪ್ರಮಾಣವನ್ನು ಸಮತೋಲನಗೊಳಿಸುವ ಶಕ್ತಿ ಇರುವುದರಿಂದ ಹಾಗೂ ಕಡಿಮೆ ಗ್ಲಿಸೆಮಿಕ್‌ ಇಂಡೆಕ್ಸ್‌ ಇರುವುದರಿಂದ ಮಧುಮೇಹಿಗಳು ಚಿಂತೆಯಿಲ್ಲದೆ ಇದನ್ನು ಸೇವಿಸಿ ಪ್ರಯೋಜನ ಪಡೆಯಬಹುದು.

4. ಬಾರ್ಲಿ ನೀರು ಅತ್ಯುತ್ತಮ ಡಿಟಾಕ್ಸ್‌ ಡ್ರಿಂಕ್‌ ಕೂಡಾ. ಇದು ದೇಹದಿಂದ ಕಶ್ಮಲಗಳನ್ನು ಹೊರಕ್ಕೆ ಕಳಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ.

5. ಬಾರ್ಲಿ ನೀರು ಕುಡಿಯುವುದರಿಂದ ಚರ್ಮ ಹಾಗೂ ಕೂದಲಿನ ಆರೋಗ್ಯವೂ ಚೆನ್ನಾಗಿರುತ್ತದೆ.

6. ಬಾರ್ಲಿ ನೀರು ಡೈ ಯುರೇಟಿಕ್‌ ಆಗಿರುವುದರಿಂದ ಇದು ಮೂತ್ರ ಸಂಬಂಧೀ ಸಮಸ್ಯೆಗಳಿಗೆ ಅತ್ಯುತ್ತಮ ಮನೆಮದ್ದು. ಮೂತ್ರನಾಳದ ಇನ್ಫೆಕ್ಷನ್‌ ಇರುವ ಮಂದಿ, ಉರಿಮೂತ್ರದ ಸಮಸ್ಯೆ ಇದ್ದವರು ಬಾರ್ಲಿ ನೀರನ್ನು ಕುಡಿಯುವ ಮೂಲಕ ಸಮಸ್ಯೆಯಿಂದ ಮುಕ್ತರಾಗಬಹುದು.

ಇದನ್ನೂ ಓದಿ: Health Tips: ನಿಮಗೆ ಈ ಸಮಸ್ಯೆಗಳಿದ್ದರೆ ಕ್ಯಾಲ್ಶಿಯಂ ಕೊರತೆಯಿದೆ ಎಂದರ್ಥ!

Continue Reading

ಆರೋಗ್ಯ

Health Tips: ನಿಮಗೆ ಈ ಸಮಸ್ಯೆಗಳಿದ್ದರೆ ಕ್ಯಾಲ್ಶಿಯಂ ಕೊರತೆಯಿದೆ ಎಂದರ್ಥ!

ಕ್ಯಾಲ್ಶಿಯಂನ ಮಟ್ಟದಲ್ಲಿ ಕೊಂಚ ಏರುಪೇರಾದರೂ ದೇಹದ ಆರೋಗ್ಯದಲ್ಲಿ ನಮಗೆ ಏರಿಳಿತ ಕಾಣುತ್ತವೆ. ಹಾಗಾಗಿ, ದೇಹದಲ್ಲಿ ಸಣ್ಣಪುಟ್ಟ ಬದಲಾವಣೆಯಾದರೂ ನಮ್ಮ ಗಮನ ಅತ್ಯಂತ ಅಗತ್ಯ. ನಮ್ಮ ದೇಹಕ್ಕೆ ಕ್ಯಾಲ್ಶಿಯಂನ ಕೊರತೆಯಿದೆ ಎಂದು ನಾವು ಹೇಗೆ ಕಂಡುಕೊಳ್ಳಬಹುದು ಎಂಬುದನ್ನು ಇಲ್ಲಿ ನೋಡೋಣ.

VISTARANEWS.COM


on

Edited by

calcium problem
Koo

ದೇಹದಲ್ಲಿ ಮೂಳೆ ಗಟ್ಟಿಯಾಗಿರಲು ಕ್ಯಾಲ್ಶಿಯಂ ಬೇಕೇ ಬೇಕು ಎಂಬುದು ಎಲ್ಲರಿಗೂ ಗೊತ್ತಿದೆ. ಅದಕ್ಕಾಗಿಯೇ ನಾವು ಕ್ಯಾಲ್ಶಿಯಂನಿಂದ ಶ್ರೀಮಂತವಾಗಿರುವ ಆಹಾರವನ್ನು ತಿನ್ನುವ ಬಗೆಗೆ ಗಮನ ಹರಿಸುತ್ತೇವೆ. ನಮ್ಮ ಮಕ್ಕಳಿಗೆ ಹಾಲು ಕುಡಿಸುತ್ತೇವೆ. ಕ್ಯಾಲ್ಶಿಯಂ ಕೊರತೆ ಅವರಿಗೆ ಬಾರದಿರಲಿ ಎಂಬುದನ್ನು ನೋಡಿಕೊಳ್ಳುತ್ತೇವೆ. ಆದರೂ, ಬಹಳ ಸಾರಿ ನಮಗೇ ಅರಿವಿಲ್ಲದೆ, ನಮ್ಮ ದೇಹಕ್ಕೆ ಸರಿಯಾದ ಪ್ರಮಾಣದಲ್ಲಿ ಕ್ಯಾಲ್ಶಿಯಂ ಪೂರೈಕೆ ಆಗಿರುವುದಿಲ್ಲ. ಇದರಿಂದಾಗಿ ಕೇವಲ ಮೂಳೆಗೆ ಸಂಬಂಧಿಸಿದ್ದಷ್ಟೇ ಅಲ್ಲ, ಬೇರೆ ಸಮಸ್ಯೆಗಳೂ ಬರಬಹುದು. ರಕ್ತದ ಒತ್ತಡ, ಹೃದಯದ ಆರೋಗ್ಯ, ಮಿದುಳಿನ ಆರೋಗ್ಯ, ದೇಹದ ತೂಕ ಇವೆಲ್ಲವಕ್ಕೂ ಕ್ಯಾಲ್ಶಿಯಂನ ಸಮತೋಲನಕ್ಕೂ ಸಂಬಂಧವಿದೆ. ಹಾಗಾಗಿ, ಕ್ಯಾಲ್ಶಿಯಂನ ಮಟ್ಟದಲ್ಲಿ ಕೊಂಚ ಏರುಪೇರಾದರೂ ದೇಹದ ಆರೋಗ್ಯದಲ್ಲಿ ನಮಗೆ ಏರಿಳಿತ ಕಾಣುತ್ತವೆ. ಹಾಗಾಗಿ, ದೇಹದಲ್ಲಿ ಸಣ್ಣಪುಟ್ಟ ಬದಲಾವಣೆಯಾದರೂ ನಮ್ಮ ಗಮನ ಅತ್ಯಂತ ಅಗತ್ಯ. ನಮ್ಮ ದೇಹಕ್ಕೆ ಕ್ಯಾಲ್ಶಿಯಂನ ಕೊರತೆಯಿದೆ ಎಂದು ನಾವು ಹೇಗೆ ಕಂಡುಕೊಳ್ಳಬಹುದು ಎಂಬುದನ್ನು ಇಲ್ಲಿ ನೋಡೋಣ.

೧. ಹಲ್ಲಿನಲ್ಲಿ ಹುಳುಕು: ಕೆಲವು ಖನಿಜಾಂಶಗಳು ದೇಹದ ಕೆಲವು ಭಾಗಗಳು ಸರಿಯಾಗಿ ಕೆಲಸ ಮಾಡಲು ಬೇಕೇ ಬೇಕು. ಕ್ಯಾಲ್ಶಿಯಂ ಹಾಗೂ ಹಲ್ಲಿನ ಸಂಬಂಧ ಅಂಥದ್ದು. ಈ ಕ್ಯಾಲ್ಶಿಯಂ ಎಂಬ ಖನಿಜಾಂಶ ಕೇವಲ ಹಲ್ಲಿನ ಆರೋಗ್ಯ ಕಾಪಾಡುವುದಷ್ಟೇ ಅಲ್ಲ, ಹಲ್ಲಿನ ಗಟ್ಟಿಯಾದ ತಳಪಾಯವನ್ನೇ ಹಾಕುತ್ತದೆ. ಹಾಗಾಗಿ ಹಲ್ಲಿನಲ್ಲಿ ಯಾವುದೇ ಹುಳುಕು, ಕ್ಯಾವಿಟಿಯಂತಹ ತೊಂದರೆಗಳು ಆಗಾಗ ಆಗುತ್ತಲೇ ಇರುತ್ತವೆ ಎಂದಾದಲ್ಲಿ ಅಲ್ಲಿ ನಿಮಗೆ ಕ್ಯಾಲ್ಶಿಯಂ ಕೊರತೆಯಿದೆ ಎಂದೇ ಅರ್ಥ. ನಾವು ಸುಲಭವಾಗಿ ಸಿಹಿತಿಂಡಿಯ ಮೇಲೆ ದೂರಿ, ಅದರಿಂದಾಗಿಯೇ ಹುಳುಕಾಗಿದೆ ಎನ್ನಬಹುದು. ಆದರೆ, ಕ್ಯಾಲ್ಶಿಯಂ ಕೊರತೆಯೂ ಅದಕ್ಕೆ ಕಾರಣವಾಗಿರಬಹುದು ಎಂಬುದನ್ನು ನೆನಪಿನಲ್ಲಿಡಬೇಕು.

೨.ಮಾಂಸಖಂಡಗಳ ಸೆಳೆತ: ಬಹಳ ಸಾರಿ, ಮೂಳೆ ಅಥವಾ ಎಲುಬಿನ ಸಂಬಂಧೀ ಸಮಸ್ಯೆ ಬಂದಾಕ್ಷಣ ಮಾತ್ರ ಅದಕ್ಕೆ ಕ್ಯಾಲ್ಶಿಯಂನ ಸಂಬಂಧ ಹುಡುಕುತ್ತೇವೆ. ಆದರೆ, ಮಾಂಸಖಂಡಗಳಿಗೂ ಕ್ಯಾಲ್ಶಿಯಂಗೂ ಸಂಬಂಧವಿದೆ. ಆಗಾಗ ನಿಮಗೆ ಮಾಂಸಖಂಡಗಳ ಸೆಳೆತ, ಉಳುಕಿನಂತಹ ತೊಂದರೆಗಳು ಕಾಣಿಸಿಕೊಳ್ಳುತ್ತಿದ್ದರೆ, ನಿಮಗೆ ಕ್ಯಾಲ್ಶಿಯಂ ಕೊರತೆಯಿದೆ ಎಂದೇ ಅರ್ಥ.

೩. ಉಗುರು ಮುರಿಯುವುದು: ನಿಮ್ಮ ಉಗುರು ದುರ್ಬಲವಾಗಿದೆಯೇ? ಆಗಾಗ ಮುರಿಯುತ್ತದೆಯೋ? ಅಥವಾ ಉಗುರಿನ ಸಿಪ್ಪೆ ಏಳುತ್ತಿದೆಯೋ? ಹಾಗಿದ್ದರೆ ನಿಮ್ಮ ಕ್ಯಾಲ್ಶಿಯಂ ಮಟ್ಟ್ವನ್ನು ಪರೀಕ್ಷಿಸಿಕೊಳ್ಳಿ. ಉಗುರಿನ ಆರೋಗ್ಯಕ್ಕೆ ಕ್ಯಾಲ್ಶಿಯಂ ಅತ್ಯಂತ ಅಗತ್ಯ. ಕ್ಯಾಲ್ಶಿಯಂನ ಕೊರತೆಯಿಂದಷ್ಟೇ ಉಗುರು ಮುರಿಯುವಂತಹ, ದುರ್ಬಲತೆಯಂತಹ ಸಮಸ್ಯೆ ಬರಬಹುದು.

Symptoms Of Calcium Deficiency

೪. ಮೂಳೆ ದುರ್ಬಲತೆ: ಮೂಳೆ ಅಥವಾ ಎಲುಬಿನ ಆರೋಗ್ಯಕ್ಕೆ ಕ್ಯಾಲ್ಶಿಯಂ ಅತ್ಯಂತ ಅಗತ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಶೇ ೯೯ರಷ್ಟು ಕ್ಯಾಲ್ಶಿಯಂ ದೇಹದ ಮೂಳೆಗಳಲ್ಲೇ ಸಂಗ್ರಹವಾಗುತ್ತದೆ. ಹಾಗಾಗಿ, ಸರಿಯಾದ ಮಟ್ಟದಲ್ಲಿ ಕ್ಯಾಲ್ಶಿಯಂ ನಮ್ಮ ದೇಹಕ್ಕೆ ಸೇರದಿದ್ದರೆ, ಖಂಡಿತವಾಗಿಯೂ ಅದರ ಪರಿಣಾಮ ಮೂಳೆಗಳ ಮೇಲೆ ಕಾಣುತ್ತದೆ. ಆಗಾಗ ಮೂಳೆ ಮುರಿತದಂತಹ ಸಮಸ್ಯೆ ಕಂಡರೂ ಇದೂ ಕಾರಣವಿರಬಹುದು. ಕ್ಯಾಲ್ಶಿಯಂ ಕಡಿಮೆಯಾಗಿದ್ದಾಗ ಮೂಳೆ ಸವೆತ, ರಿಕೆಟ್ಸ್‌ನಂತಹ ಕಾಯಿಲೆಗಳ ಸಂಭವ ಹೆಚ್ಚು.

೫. ನಿದ್ರಾಹೀನತೆ: ನಿದ್ದೆಯ ಸಮಸ್ಯೆ ನಿಮಗಿದೆಯೇ? ಇದಕ್ಕೆ ಬೇರೆ ಕಾರಣಗಳಿರಬಹುದು ಎಂದು ನಿಮಗೆ ಅನಿಸಿರಬಹುದು. ಆದರೆ, ಕ್ಯಾಲ್ಶಿಯಂ ಕೂಡಾ ನಿದ್ದೆಯ ಜೊತೆ ಸಂಬಂಧ ಹೊಂದಿದೆ ಎಂಬ ತಿಳುವಳಿಕೆ ನಿಮಗಿದೆಯೇ? ಹೌದು. ಕ್ಯಾಲ್ಶಿಯಂನ ಕೊರತೆಯೂ ಕೂಡಾ ನಿದ್ರಾಹೀನತೆಗೆ ಕಾರಣವಾಗಬಹುದು. ಇದರರ್ಥ, ಮಲಗುವ ಮೊದಲು ಕ್ಯಾಲ್ಶಿಯಂನಿಂದ ಸಮೃದ್ಧವಾಗಿರುವ ಆಹಾರ ಸೇವಿಸಬೇಕು ಎಂದಲ್ಲ. ಆದರೆ, ನಮ್ಮ ಆಹಾರದಲ್ಲಿ ಸಾಕಷ್ಟು ಪ್ರಮಾಣದ ಕ್ಯಾಲ್ಶಿಯಂ ಕೂಡಾ ಇರಬೇಕು. ಕ್ಯಾಲ್ಶಿಯಂ ಮಟ್ಟ ದೇಹದಲ್ಲಿ ಸಮತೋಲನ ಕಾಯ್ದುಕೊಂಡಿದ್ದರೆ ಸರಿಯಾದ ಸಮಯಕ್ಕೆ ದೇಹಕ್ಕೆ ಸರಿಯಾದ ನಿದ್ದೆ ಬರಲು ಸಹಾಯವಾಗುತ್ತದೆ.

Continue Reading

ಆರೋಗ್ಯ

Sugar Cane Juice Benefits: ರಸಭರಿತ ಕಬ್ಬಿನ ಹಾಲು, ಏನೇನಿವೆ ಇದರ ಲಾಭಗಳು?

ಶುದ್ಧ ಕಬ್ಬಿನ ಹಾಲು (sugar cane juice benefits) ಕೆಲವು ಸಮಸ್ಯೆಗಳಿಗೆ ನೈಸರ್ಗಿಕ ಪರಿಹಾರ ಆಗಬಲ್ಲದು. ದೇಹದ ರೋಗ ನಿರೋಧಕ ಶಕ್ತಿಯನ್ನು ಚುರುಕು ಮಾಡಿ, ಸೋಂಕುಗಳಿಂದ ಕಾಪಾಡಬಲ್ಲದು. ಇದರಿಂದ ಇನ್ನೂ ಏನೇನು ಲಾಭಗಳಿವೆ?

VISTARANEWS.COM


on

Edited by

Sugar Cane Juice
Koo

ಬೇಸಿಗೆಯಲ್ಲಿ ಬಾಯಾರಿಕೆ ತಣಿಸಿಕೊಳ್ಳುವುದಕ್ಕೆ ಒಳ್ಳೆಯ ಪೇಯಗಳ ಬಗ್ಗೆ ಹೇಳಿದರೂ ಬಾಯಾರಿಕೆ ಹೆಚ್ಚುತ್ತದೆ, ಅಂಥ ಬಿಸಿಲು ಹೊರಗೆ! ಅದರಲ್ಲೂ ಮನೆಯಿಂದ ಹೊರಗೆ ತಿರುಗಾಟದಲ್ಲಿದ್ದಾಗ, ಕೈಯಲ್ಲಿರುವ ನೀರೂ ಖಾಲಿಯಾದರೆ, ಬೇಸಿಗೆಯಲ್ಲಿ ಬೇರೆ ಶಾಪವೇ ಬೇಕಿಲ್ಲ. ದೇಹದ ನವರಂಧ್ರಗಳಿಂದ ಬೆವರಿಳಿಯುತ್ತಿರುವಾಗ ಯಾರಾದರೂ ಪುಣ್ಯಾತ್ಮರು ದೊಡ್ಡದೊಂದು ಗ್ಲಾಸ್‌ ತಂಪಾದ, ಸಿಹಿಯಾದ ಕಬ್ಬಿನ ಹಾಲು ತಂದುಕೊಟ್ಟರೆ…? ಅವರ ಜನ್ಮ ಸವೆದರೂ ಮುಗಿಯದಷ್ಟು ಹರಸುತ್ತೇವೆ ಅವರನ್ನು. ಆ ಹೊತ್ತಿನ ದಾಹ ತಣಿಸುವುದಂತೂ ಸರಿ, ಅದಲ್ಲದೆ ಇನ್ನೇನೇನು ಲಾಭಗಳಿವೆ ಕಬ್ಬಿನ ಹಾಲು (sugar cane juice benefits) ಕುಡಿಯುವುದರಿಂದ ಎಂಬುದನ್ನು ತಿಳಿಯಬಹುದಲ್ಲ.

ಪ್ರತಿರೋಧ ಶಕ್ತಿ ಹೆಚ್ಚಳ

ಹೆಚ್ಚೇನು ಫ್ಯಾನ್ಸಿ ಮಾಡದ ಶುದ್ಧ ಕಬ್ಬಿನ ಹಾಲು ಕೆಲವು ಸಮಸ್ಯೆಗಳಿಗೆ ನೈಸರ್ಗಿಕ ಪರಿಹಾರ ಆಗಬಲ್ಲದು. ದೇಹದ ರೋಗ ನಿರೋಧಕ ಶಕ್ತಿಯನ್ನು ಚುರುಕು ಮಾಡಿ, ಸೋಂಕುಗಳಿಂದ ಕಾಪಾಡಬಲ್ಲದು. ಅದರಲ್ಲೂ ಈ ರಸದಲ್ಲಿರುವ ಎಲೆಕ್ಟ್ರೋಲೈಟ್‌ಗಳಿಂದಾಗಿ ದಣಿದ, ಆಯಾಸಗೊಂಡ ದೇಹಕ್ಕೆ ಸಂಜೀವಿನಿ ಎನಿಸಬಲ್ಲದು. ಕಬ್ಬಿನ ರಸದಲ್ಲಿರುವ ಕಬ್ಬಿಣ, ಮೆಗ್ನೀಶಿಯಂ, ಕ್ಯಾಲ್ಶಿಯಂ ಮತ್ತು ಇತೆ ಸೂಕ್ಷ್ಮ ಪೋಷಕಾಂಶಗಳಿಂದಾಗಿ, ದೇಹದ ಪ್ರೊಟೀನ್‌ ಹೀರಿಕೊಳ್ಳುವ ಸಾಮರ್ಥ್ಯವೂ ಹೆಚ್ಚಿ, ಸಾಮಾನ್ಯ ಶೀತ-ಜ್ವರಗಳ ಬಾಧೆ ಕಡಿಮೆಯಾಗುತ್ತದೆ.

Jal Jeera Benefits

ಪಚನಕಾರಿ

ನಮ್ಮ ಜೀರ್ಣಾಂಗಗಳ ಹಿತ ಕಾಪಾಡುವಲ್ಲೂ ಕಬ್ಬಿನ ರಸದ್ದು ಶ್ಲಾಘನೀಯ ಕೆಲಸ. ಹೊಟ್ಟೆಯ ಪಿಎಚ್‌ ಮಟ್ಟವನ್ನು ಕಾಪಾಡಿಕೊಂಡು, ಆಹಾರ ಪಚನವಾಗುವುದಕ್ಕೆ ಬೇಕಾದ ಜೀರ್ಣ ರಸಗಳ ಬಿಡುಗಡೆಗೆ ನೆರವಾಗುತ್ತದೆ. ಇದರಿಂದಾಗಿ ಹೊಟ್ಟೆಯನ್ನು ಆಗಾಗ ಕಾಡುವ ಅಸಿಡಿಟಿ, ಹುಳಿತೇಗು ಮುಂತಾದ ಸಮಸ್ಯೆಗಳು ದೂರ ಉಳಿಯುತ್ತವೆ.

Sugar Cane Juice

ಮಧುಮೇಹ ನಿಯಂತ್ರಣ

ಹೌದೇಹೌದು! ಇಷ್ಟೊಂದು ಸಿಹಿಯಾದ ಪೇಯವನ್ನು ಮಧುಮೇಹಿಗಳು ಕುಡಿಯಬಹುದೇ, ಕುಡಿದರೆ ಆರೋಗ್ಯ ಏನಾದೀತು ಎಂಬ ಅನುಮಾನ ಬರುವುದು ಸಹಜವೇ. ಆದರೆ ಇದರ ಗ್ಲೈಸೆಮಿಕ್‌ ಇಂಡೆಕ್ಸ್‌ ಕಡಿಮೆಯೇ ಇದ್ದು, ರಕ್ತದಲ್ಲಿ ಸಕ್ಕರೆ ಅಂಶ ಏರುವಂತೆ ಮಾಡುವುದಿಲ್ಲ. ಹಾಗಾಗಿ ಮಧುಮೇಹಿಗಳೂ ಇದನ್ನು ಮಿತ ಪ್ರಮಾಣದಲ್ಲಿ ಕುಡಿಯಬಹುದು.

ಹಲ್ಲು ಮತ್ತು ಮೂಳೆಗಳ ಬಲವರ್ಧನೆ

ತನ್ನಲ್ಲಿ ವಿಫುಲವಾಗಿರುವ ಪ್ರೊಟೀನ್‌ ಸತ್ವದಿಂದಾಗಿ ಮೂಳೆಗಳನ್ನು ಸದೃಢ ಮಾಡುವ ಸಾಧ್ಯತೆ ಕಬ್ಬಿನ ಹಾಲಿಗಿದೆ. ಜೊತೆಗೆ, ಹಲ್ಲುಗಳು ಹುಳುಕಾಗದಂತೆ ಕಾಪಾಡುವುದರೊಂದಿಗೆ, ದಂತಗಳ ಬೇರನ್ನೂ ಬಲಗೊಳಿಸು ಸಾಮರ್ಥ್ಯ ಇದರಲ್ಲಿರುವ ಫಾಸ್ಫರಸ್‌ ಅಂಶಕ್ಕಿದೆ. ದೇಹಕ್ಕೆ ಅಗತ್ಯ ಪೋಷಕಾಂಶಗಳು ದೊರೆಯದೆ ಇದ್ದಾಗ ಉಂಟಾಗುವ ಬಾಯಿಯ ದುರ್ಗಂಧ ತಡೆಯಲೂ ಇದು ಸಹಕಾರಿ.

ನೋವು ಉಪಶಮನಕ್ಕೆ

ಕಬ್ಬಿನ ರಸವನ್ನು ಎಳನೀರು ಮತ್ತು ನಿಂಬೆ ರಸದೊಂದಿಗೆ ಬೆರೆಸಿ ಕುಡಿದಾಗ ಇನ್ನಷ್ಟು ಲಾಭಗಳು ದೇಹಕ್ಕೆ ದೊರೆಯುತ್ತವೆ. ಮೂತ್ರನಾಳದ ಸೋಂಕು, ಮೂತ್ರಪಿಂಡದಲ್ಲಿ ಕಲ್ಲು ಮುಂತಾದ ಹಲವಾರು ಸಮಸ್ಯೆಗಳಿಂದ ಕಾಡುವ ನೋವುಗಳ ನಿವಾರಣೆಗೆ ಈ ಮಿಶ್ರಣ ಉಪಯೋಗಿ ಎನಿಸಿದೆ. ದೇಹದಲ್ಲಿ ಉರಿಯೂತವನ್ನು ನಿವಾರಿಸುವ ಇದರ ಗುಣವೇ ಈ ನೋವು ಉಪಶಮನಕ್ಕೂ ಕಾರಣವಾಗಿದೆ.

Sugar Cane Juice

ಸೌಂದರ್ಯವರ್ಧಕ

ತ್ವಚೆಯ ಮೇಲೆ ಕಾಣಿಸಿಕೊಳ್ಳುವ ಮೊಡವೆಯಂಥ ಸಮಸ್ಯೆಗಳಿಗೂ ಕಬ್ಬಿನ ರಸ ಮದ್ದಾಗಬಲ್ಲದು. ಇದರಲ್ಲಿರುವ ಗ್ಲೈಕೋಲಿಲಕ್‌ ಆಮ್ಲವು ತ್ವಚೆಯ ಮೇಲಿನ ನಿರ್ಜೀವ ಕೋಶಗಳನ್ನು ತೆಗೆದು, ಹೊಳಪು ಮೂಡಿಸಲು ಉಪಯುಕ್ತ. ಮುಲ್ತಾನಿ ಮಿಟ್ಟಿಯ ಜೊತೆಗೆ ಕಬ್ಬಿನ ರಸವನ್ನು ಮಿಶ್ರ ಮಾಡಿ, ಫೇಸ್‌ಪ್ಯಾಕ್‌ ಮಾಡುವುದರಿಂದ ಚರ್ಮದ ಹೊಳಪು, ನುಣುಪು ವೃದ್ಧಿಸುತ್ತದೆ.

ಇದನ್ನೂ ಓದಿ: Healthy Drink: ಹೋಳಿಯ ನಂತರ ಚರ್ಮ ಸರಿಯಾಗಬೇಕಾದರೆ ಕುಡಿಯಲೇ ಬೇಕಾದ ಪೇಯಗಳಿವು!

Continue Reading
Advertisement
Man commits suicide after wife commits suicide in Srirangapatna
ಕರ್ನಾಟಕ2 hours ago

Suicide Case: ಕೌಟುಂಬಿಕ ಕಲಹ; ಪತ್ನಿ ಆತ್ಮಹತ್ಯೆ ಕಂಡು ಪತಿಯೂ ನೇಣಿಗೆ ಶರಣು

Amid wedding rumours, AAP MP Raghav Chadha picks up Parineeti Chopra from Delhi airport
ದೇಶ2 hours ago

Raghav-Parineeti: ಮತ್ತೆ ಒಟ್ಟಿಗೆ ಕಾಣಿಸಿದ ರಾಘವ್‌, ಪರಿಣೀತಿ; ವಾರದಲ್ಲಿ 3ನೇ ಭೇಟಿ, ಸ್ನೇಹಾನಾ? ಪ್ರೀತಿನಾ?

Do you know how much marks Virat Kohli got in iron pea maths?
ಕ್ರಿಕೆಟ್3 hours ago

Virat Kohli : ಕಬ್ಬಿಣದ ಕಡಲೆ ಗಣಿತದಲ್ಲಿ ವಿರಾಟ್​ ಕೊಹ್ಲಿ ಪಡೆದ ಮಾರ್ಕ್​ ಎಷ್ಟು ಗೊತ್ತಾ?

Manmohan Lalwani says Solar powered system best tool to cross digital gap
ಕರ್ನಾಟಕ3 hours ago

SELCO India: ಡಿಜಿಟಲ್ ಕಂದಕ ದಾಟಲು ಸೌರಚಾಲಿತ ವ್ಯವಸ್ಥೆ ಅತ್ಯುತ್ತಮ ಸಾಧನ: ಮನಮೋಹನ್ ಲಾಲ್ವಾನಿ

Four farmers seriously injured in lathi charge by forest department personnel
ಕರ್ನಾಟಕ3 hours ago

Tumkur News: ಒತ್ತುವರಿ ತೆರವಿಗೆ ಆಕ್ಷೇಪಿಸಿದ್ದಕ್ಕೆ ಲಾಠಿ ಚಾರ್ಜ್ ಮಾಡಿದ ಅರಣ್ಯ ಸಿಬ್ಬಂದಿ; 4 ರೈತರಿಗೆ ಗಂಭೀರ ಗಾಯ

Bengaluru company to gift ChatGPT Plus subscription to employees after seeing rise in productivity
ಕರ್ನಾಟಕ3 hours ago

ChatGPT Subscription: ದಕ್ಷತೆ ಹೆಚ್ಚಳ; ನೌಕರರಿಗೆ ಚಾಟ್‌ಜಿಪಿಟಿ ಉಚಿತ ಸಬ್‌ಸ್ಕ್ರಿಪ್ಶನ್‌ ನೀಡಿದ ಬೆಂಗಳೂರು ಕಂಪನಿ

No prejudice about Hindi, such imposition is not worth it
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು

Google Layoffs: Some employees may get up to Rs 2.60 crore in severance pay
ದೇಶ3 hours ago

Google Layoffs: ಗೂಗಲ್‌ನಿಂದ ವಜಾಗೊಂಡ ನೌಕರರಿಗೆ ಸಿಗಲಿದೆ 2.6 ಕೋಟಿ ರೂ., ಇವರಿಗೆ ಬೇರೆ ನೌಕರಿಯೇ ಬೇಕಿಲ್ಲ

Former bowler of Rajasthan Royals who joined Chennai Super Kings
ಕ್ರಿಕೆಟ್4 hours ago

IPL 2023 : ಚೆನ್ನೈ ಸೂಪರ್​ ಕಿಂಗ್ಸ್​ ಬಳಗ ಸೇರಿದ ರಾಜಸ್ಥಾನ್​ ರಾಯಲ್ಸ್​ನ ಮಾಜಿ ಬೌಲರ್​

ಕರ್ನಾಟಕ5 hours ago

Prof. Madhav Kulkarni: ಖ್ಯಾತ ಲೇಖಕ, ವಿಮರ್ಶಕ ಪ್ರೊ. ಮಾಧವ ಕುಲಕರ್ಣಿ ಇನ್ನಿಲ್ಲ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

ಕರ್ನಾಟಕ8 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ14 hours ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ4 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 weeks ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

ಟ್ರೆಂಡಿಂಗ್‌

error: Content is protected !!