Dark lips | ಮಾದಕ ಚೆಂದುಟಿ ಕಪ್ಪಗಾಗಲು ಕಾರಣವೇನು? - Vistara News

ಆರೋಗ್ಯ

Dark lips | ಮಾದಕ ಚೆಂದುಟಿ ಕಪ್ಪಗಾಗಲು ಕಾರಣವೇನು?

ಸರಿಯಿದ್ದ ತುಟಿ ಕಪ್ಪಗಾಗಿ ಬದಲಾಗಲು ಕಾರಣವೇನು? ಚೆಂದುಟಿಗಳು ಕಳಾಹೀನವಾಗಿ ಯಾಕೆ ಬದಲಾಗುತ್ತದೆ  ಎಂಬುದು ನಿಮಗೆ ಮಿಲಿಯನ್‌ ಡಾಲರ್‌ ಪ್ರಶ್ನೆಯಾಗಿ ಕಂಡಿದ್ದರೆ ಅದಕ್ಕಿ ಸಿಂಪಲ್‌ ಉತ್ತರ ಇಲ್ಲಿದೆ.

VISTARANEWS.COM


on

dark lips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮನುಷ್ಯನ ಸೌಂದರ್ಯದಲ್ಲಿ ಮುಖ್ಯ ಪಾತ್ರ ತುಟಿಗಳಿಗಿವೆ. ಅದರಲ್ಲೂ ಸುಂದರಿಯರ ತುಟಿಗಳನ್ನು ಕಂಡು ಕವಿಗಳು ಬರೆಯದ ಕವಿತೆಗಳಿಲ್ಲ, ಹಾಡದ ಹಾಡುಗಳಿಲ್ಲ. ಪ್ರತಿಯೊಬ್ಬರಿಗೂ ಚೆಂದುಟಿಯ ಬಗ್ಗೆ ಸದಾ ಚಿಂತೆ. ತುಟಿ ತೊಂಡೆ ಹಣ್ಣಿನಂತೆ, ಕಮಲದ ಎಸಳಿನಂತೆ, ಗುಲಾಬಿಯ ಪಕಳೆಯಂತೆ ಮೃದುವಾಗಿಯೂ, ಗುಲಾಬಿ ಬಣ್ಣದಲ್ಲೂ ಇರಲಿ ಎಂಬ ಬಯಕೆ ಕನಸು ಹೆಚ್ಚು ಕಮ್ಮಿ ಎಲ್ಲರದ್ದೂ. ಅದಕ್ಕೇ, ಮಾರುಕಟ್ಟೆಯಲ್ಲಿ ಸುಂದರಿಯರ ತುಟಿಗಳಿಗೆ ರಂಗುರಂಗಿನ ಬಣ್ಣಗಳು ಸಾಲುಗಟ್ಟಿ ನಿಲ್ಲುತ್ತವೆ. ಎಷ್ಟೇ ಕೃತಕ ಬಣ್ಣಗಳು ತುಟಿಗಳ ಮೇಲೆ ಮೆತ್ತಿಕೊಂಡರೂ, ನೈಸರ್ಗಿಕ ತುಟಿಗಳ ಬಣ್ಣದ ಮಾದಕತೆಯ ಹಿಂದೆ ಬೀಳದವರಿಲ್ಲ.

ಹಾಗೆ ನೋಡಿದರೆ, ತುಟಿಗಳ ಬಣ್ಣ ಇಂಥದ್ದೇ ಎಂದು ಎಲ್ಲರಿಗೂ ಗೊತ್ತಿದ್ದರೂ, ಪ್ರತಿಯೊಬ್ಬರಿಗೂ ಅವರವರದೇ ಆದ ತುಟಿಯ ಬಣ್ಣವಿದೆ. ಮುಖ್ಯವಾಗಿ ಒಂದೇ ಬಣ್ಣವಾದರೂ ಶೇಡ್‌ ಬೇರೆಬೇರೆಯದ್ದೇ ಆಗಿರುತ್ತದೆ. ಚರ್ಮದ ಬಣ್ಣವೂ ಸೇರಿದಂತೆ, ಬಳಸುವ ಬ್ಯೂಟಿ ಪ್ರಾಡಕ್ಟ್‌ಗಳು, ನಿತ್ಯದ ಆರೈಕೆ ಕಾಳಜಿಗಳು, ಲೈಫ್‌ಸ್ಟೈಲ್‌ ಹೀಗೆ ಹಲವು ವಿಷಯಗಳು ಪ್ರತಿಯೊಬ್ಬರ ಈ ತುಟಿಗಳ ಬಣ್ಣವನ್ನು ನಿರ್ಧರಿಸುತ್ತವೆ. ಆದರೂ ಬಹುತೇಕ ಮಂದಿಗೆ ತಮ್ಮ ತುಟಿಗಳ ಮೇಲೆ ಎಲ್ಲಿಲ್ಲದ ಕಾಳಜಿ ಇರುತ್ತದೆ. ತುಟಿ ಕಪ್ಪಗಾದರೆ ಚಿಂತೆಯಾಗಿಬಿಡುತ್ತದೆ. ಮೊದಲು ಭೇಟಿಯಾದಾಗ ಕಾಣುವ ತುಟಿಗಳು ಕೆಟ್ಟದಾಗಿ ಕಂಡು ಬಿಟ್ಟರೆ ಎಂಬ ಅಳುಕು ಬಹುತೇಕ ಎಲ್ಲರದ್ದೂ. ತನಗೆ ಬೀಡಿ ಸಿಗರೇಟಿನ ಚಟ ಇಲ್ಲದಿದ್ದರೂ ತುಟಿಯೇಕೆ ಹೀಗೆ ಕಪ್ಪಗಾಗಿದೆ ಎಂಬ ಅಳಲು ಇನ್ನೂ ಕೆಲವರದ್ದು.

ಹಾಗಾದರೆ, ಸರಿಯಿದ್ದ ತುಟಿ ಕಪ್ಪಗಾಗಿ ಬದಲಾಗಲು ಕಾರಣವೇನು? ಚೆಂದುಟಿಗಳು ಕಳಾಹೀನವಾಗಿ ಯಾಕೆ ಬದಲಾಗುತ್ತದೆ  ಎಂಬುದು ನಿಮಗೆ ಮಿಲಿಯನ್‌ ಡಾಲರ್‌ ಪ್ರಶ್ನೆಯಾಗಿ ಕಂಡಿದ್ದರೆ ಅದಕ್ಕಿ ಸಿಂಪಲ್‌ ಉತ್ತರ ಇಲ್ಲಿದೆ.

dark lips

೧. ತುಟಿ ನೆಕ್ಕುವುದು: ನಿಮಗೆ ನಿಮ್ಮ ತುಟಿಗಳನ್ನು ಆಗಾಗ ನೆಕ್ಕುವ ಅಭ್ಯಾಸವಿದೆಯೇ? ಹಾಗಾದರೆ ಇಲ್ಲಿ ಕೇಳಿ. ಇದರಷ್ಟು ಕೆಟ್ಟ ಅಭ್ಯಾಸ ಇನ್ನೊಂದಿಲ್ಲ. ಉಗುರು ಕಚ್ಚುವುದನ್ನು, ಮೂಗಿನ ಹೊಳ್ಳೆಯಲ್ಲಿ ಬೆರಳಾಡಿಸುವುದನ್ನು ಕೆಟ್ಟ ಅಭ್ಯಾಸವೆಂದು ಹೇಳಿದ ಹಾಗೆಯೇ ತುಟಿ ನೆಕ್ಕಿಕೊಳ್ಳುವುದೂ ಕೆಟ್ಟ ಅಭ್ಯಾಸವೇ. ಇದರಿಂದ ನಿಮ್ಮ ತುಟಿಗಳು ಬಣ್ಣ ಕಳೆದುಕೊಂಡು ಕಪ್ಪಾಗಬಹುದು ಎಂದರೆ ನಂಬುತ್ತೀರಾ? ನಂಬಲೇಬೇಕು.

೨. ಧೂಮಪಾನ: ಇದು ಎಲ್ಲರಿಗೂ ಗೊತ್ತಿರುವ ಹಾಗೆ ತುಟಿ ಕಪ್ಪಾಗಲು ಇರುವ ಪ್ರಮುಖ ಕಾರಣ. ಧೂಮಪಾನದಿಂದ ತುಟಿಯ ಚರ್ಮದ ವಯಸ್ಸಾಗುವಿಕೆ ಪ್ರಕ್ರಿಯೆ ಹೆಚ್ಚಾಗಿ ಬಹುಬೇಗನೆ ತುಟಿಯ ಚರ್ಮ ಸುಕ್ಕುಸುಕ್ಕಾಗಿ, ಕಪ್ಪಾಗಿ ಕಳಾಹೀನವಾಗುತ್ತದೆ.

೩. ಲಿಪ್‌ಸ್ಟಿಕ್‌ಗಳ ಜೊತೆ ಇರುವ ಅಲರ್ಜಿ: ನೀವು ಬಳಸುವ ಕಾಸ್ಮೆಟಿಕ್‌ಗಳು ನಿಮಗೆ ಹೊಂದುತ್ತವೆಯೋ ಎಂಬುದನ್ನು ಪರೀಕ್ಷಿಸಿ. ಯಾಕೆಂದರೆ, ಬಹಳ ಸಾರಿ ನೀವು ಬಳಸುವ ಲಿಪ್‌ಸ್ಟಿಕ್‌, ಲಿಪ್‌ ಗ್ಲಾಸ್‌, ಲಿಪ್‌ ಪ್ಲಮ್ಮರ್‌ಗಳು ನಿಮಗೆ ಹೊಂದುವುದಿಲ್ಲ. ಇದರಿಂದ ತುಟಿ ನಿಧಾನವಾಗಿ ಕಪ್ಪಾಗಬಹುದು.

೪. ಬಿಸಿಲು: ನಿಮ್ಮ ಉದ್ಯೋಗ ಸೂರ್ಯನ ಬಿಸಿಲಿನಲ್ಲಿ ನಿಲ್ಲುವಂಥದ್ದಿದ್ದರೆ ಖಂಡಿತವಾಗಿಯೂ ತುಟಿಯೂ ಚರ್ಮದಂತೆ ಕಪ್ಪಾಗುವ ಸಂಭವವಿದೆ. ದಿನವೂ ಹೆಚ್ಚು ಹೊತ್ತು ಬಿಸಿಲಿಗೆ ತುಟಿಯ ಚರ್ಮ ಒಡ್ಡಿಕೊಳ್ಳುವುದರಿಂದ ತುಟಿಗಳೂ ಸನ್‌ಬರ್ನ್‌ಗೆ ಒಳಗಾಗಬಹುದು.

ಇದನ್ನೂ ಓದಿ | Ear buzzing | ಕಿವಿಯಲ್ಲಿ ಏನೇನೊ ಶಬ್ದ ಕೇಳಿಸುತ್ತಿದೆಯಾ? ಇಲ್ಲಿದೆ ಕಾರಣ

೫. ಸಿಲ್ವರ್‌ ಕೋಟೆಡ್‌ ಮೌತ್‌ ಫ್ರೆಶ್‌ನರ್‌: ಸಿಲ್ವರ್‌ ಕೋಟೆಡ್‌ ಮೌತ್‌ ಫ್ರೆಶ್‌ನರ್‌ಗಳನ್ನು ಬಳಸುತ್ತಿದ್ದರೆ ಅದರಿಂದಲೂ ಅಲರ್ಜಿಯಾಗಬಹುದು. ಇದರಿಂದ ತುಟಿಗಳು ಸಹಜ ಬಣ್ಣ ಕಳೆದುಕೊಳ್ಳಬಹುದು.

೬. ಹಲ್ಲು ಬಿಳಿಯಾಗಿಸುವ ಟೂತ್‌ಪೇಸ್ಟ್‌ಗಳು: ಹಲ್ಲು ಬಿಳಿಯಾಗಿಸುವ, ಥಳಥಳಿಸುವ ಟೂತ್‌ಪೇಸ್ಟ್‌ಗಳನ್ನು ಬಳಸುತ್ತಿದೀರಾ? ಇದರಿಂದಲೂ ನಿಮ್ಮ ತುಟಿ ಬಣ್ಣ ಕಳೆದುಕೊಳ್ಳಬಹುದು.

೭. ವಂಶವಾಹಿನಿ: ಕೆಲವರಿಗೆ ಜನ್ಮತಃ ತುಟಿಗಳು ಕಪ್ಪಾಗಿಯೇ ಇರುತ್ತವೆ. ಇದು ವಂಶವಾಹಿನಿಗಳ ಪ್ರಭಾವ. ಅಂಥವರು ಹೆಚ್ಚು ತಲೆಕೆಡಿಸಬೇಕಾಗಿಲ್ಲ.

ಮೇಲೆ ಹೇಳಿದ ತೊಂದರೆಗಳನ್ನು ನೀವು ಅನುಭವಿಸುತ್ತಿದ್ದರೆ, ನಿಮ್ಮ ತುಟಿ ಕಳಾಹೀನವಾಗಲು ಅವು ಕಾರಣವಿದೆಯೋ ಎಂಬುದನ್ನು ಖಚಿತಪಡಿಸಿಕೊಂಡು, ಇದರಿಂದ ಪರಿಹಾರ ಹೇಗೆ ಪಡೆಯಬಹುದು ಎಂಬುದರ ಮೇಲೆ ಗಮನ ಹರಿಸಬಹುದು. ಮುಖ್ಯವಾಗಿ ತುಟಿಗಳು ಆರೋಗ್ಯವಾಗಿರಲು ದೇಹಕ್ಕೆ ಸರಿಯಾದ ನೀರು ಪೂರೈಕೆಯಾಗಬೇಕು. ಹಾಗಾಗಿ ಹೆಚ್ಚು ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದು ಚರ್ಮಕ್ಕೂ ತುಟಿಗೂ, ಒಟ್ಟಾರೆ ಆರೋಗ್ಯಕ್ಕೂ ಒಳ್ಳೆಯದೇ. ತುಟಿಗಳಿಗೆ ಆಗಾಗ ಬಾದಾಮಿ ಎಣ್ಣೆ, ಬೆಣ್ಣೆ, ತುಪ್ಪವನ್ನು ಹಚ್ಚಿಕೊಳ್ಳಬಹುದು. ಆದಷ್ಟು ಪರಿಮಳ ರಹಿತ ಲಿಪ್‌ಸ್ಟಿಕ್‌, ಲಿಪ್‌ಬಾಮ್‌ಗಳನ್ನು ಬಳಸಿ. ಯಾಕೆಂದರೆ, ಪರಿಮಳ ಹೊಂದಿದ ಲಿಪ್‌ಸ್ಟಿಕ್‌ಗಳಲ್ಲಿ, ಸುವಾಸನೆಯ ಹೆಚ್ಚುವರಿ ರಾಸಾಯನಿಕವೂ ಇರುವುದರಿಂದ ಇದು ಅಲರ್ಜಿಗೆ ಕಾರಣವೂ ಆಗಬಹುದು. ಇವೆಲ್ಲ ಸಾಮಾನ್ಯ ಪ್ರಯತ್ನಗಳ ನಂತರವೂ ತುಟಿಗಳಿಗೆ ಸಂಬಂಧಿಸಿ, ಗಂಭೀರ ಸಮಸ್ಯೆಗಳಿದ್ದರೆ, ಚರ್ಮದ ತಜ್ಞರನ್ನು ಭೇಟಿಯಾಗಿ ಸಲಹೆ ಪಡೆಯುವುದು ಒಳ್ಳೆಯದು.

ಇದನ್ನೂ ಓದಿ | Health tips | ದಿನವಿಡೀ ಕಂಪ್ಯೂಟರ್‌ ಸ್ಕ್ರೀನ್‌ ನೋಡಿ ಕಣ್-ಕೆಟ್ಟಂತಾಗಿದ್ದೀರೇ? ಆಗಾಗ ಈ ಕಣ್ಣಿನ ವ್ಯಾಯಾಮ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

Vampire Facial: ವಯಸ್ಸಾದ ಮಹಿಳೆಯರು, ಸುಕ್ಕು ಗಟ್ಟಿದ ಚರ್ಮದ ಕಾಂತೀಯತೆಯನ್ನು ಸೂಜಿಯ ಮೂಲಕವೇ ಹೆಚ್ಚಿಸುವುದು ಇದರ ಪ್ರಮುಖ ವಿಧಾನವಾಗಿದೆ. ಚರ್ಮದಲ್ಲಿ ಕಾಲಜಿನ್‌ ಉತ್ಪಾದನೆ ಹೆಚ್ಚಿಸಿ, ಚರ್ಮವು ಹೊಳೆಯುವಂತೆ ಮಾಡುವುದೇ ರಕ್ತಪಿಶಾಚಿ ಫೇಶಿಯಲ್‌ ಆಗಿದೆ. ಆದರೆ, ಇದು ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತಿರುವುದು ಆತಂಕ ಹೆಚ್ಚಿಸಿದೆ.

VISTARANEWS.COM


on

Vampire Facial
Koo

ನವದೆಹಲಿ: ಹೆಣ್ಣುಮಕ್ಕಳಿಗೆ ಸೌಂದರ್ಯದ (Beauty) ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಹೆಚ್ಚು ವಯಸ್ಸಾದರೂ 18ರ ಯುವತಿಯಂತೆ ಕಾಣಲು ಹಲವು ಕಸರತ್ತು ಮಾಡುತ್ತಾರೆ. ಇನ್ನು ನಗರ ಹಾಗೂ ಮಹಾನಗರಗಳಲ್ಲಂತೂ ಬ್ಯೂಟಿ ಪಾರ್ಲರ್‌ಗಳಿಗೆ ನಿಯಮಿತವಾಗಿ ತೆರಳಿ ಮೇಕಪ್‌, ಫೇಶಿಯಲ್‌ (Facial) ಮಾಡಿಸಿಕೊಳ್ಳುತ್ತಾರೆ. ಆದರೆ, ಅಮೆರಿಕದಲ್ಲಿ ಸ್ಪಾಗಳಲ್ಲಿ ಫೇಶಿಯಲ್‌ ಮಾಡಿಸಿಕೊಂಡ ಮೂವರು ಮಹಿಳೆಯರಿಗೆ ಎಚ್‌ಐವಿ ಸೋಂಕು (HIV) ತಗುಲಿದೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ವ್ಯಾಂಪೈರ್‌ ಫೇಶಿಯಲ್‌ (Vampire Facial) ಮಾಡಿಸಿಕೊಂಡ ಕಾರಣ ಇವರಿಗೆ ಎಚ್‌ಐವಿ ತಗುಲಿದೆ ಎಂಬ ಮಾಹಿತಿಯು ಅಧ್ಯಯನ ವರದಿಯಿಂದ ಲಭ್ಯವಾಗಿದೆ.

ಅಮೆರಿಕದ ನ್ಯೂ ಮೆಕ್ಸಿಕೋ ಸ್ಪಾದಲ್ಲಿ ಕಾಸ್ಮೆಟಿಕ್‌ ಇಂಜೆಕ್ಷನ್‌ ಪ್ರೊಸೀಜರ್‌ ಮೂಲಕ ನಡೆಸುವ ವ್ಯಾಂಪೈರ್‌ ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ ತಗುಲಿದೆ ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರವು ಮಾಹಿತಿ ನೀಡಿದೆ. ವ್ಯಾಂಪೈರ್‌ ಫೇಶಿಯಲ್‌ಅನ್ನು ಕಡಿಮೆ ಬೆಲೆಗೆ ಮಾಡುವುದರಿಂದ ಹೆಚ್ಚಿನ ಮಹಿಳೆಯರು, ಅದರಲ್ಲೂ 40 ವರ್ಷ ದಾಟಿದವರು ಹೆಚ್ಚು ಮಾಡಿಸಿಕೊಳ್ಳುತ್ತಾರೆ. ಆದರೆ, ಇದು ಈಗ ಮಾರಣಾಂತಿಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ.

ಏನಿದು ವ್ಯಾಂಪೈರ್‌ ಫೇಶಿಯಲ್?‌

ವ್ಯಾಂಪೈರ್‌ ಫೇಶಿಯಲ್‌ಅನ್ನು ರಕ್ತಪಿಶಾಚಿ ಫೇಶಿಯಲ್‌ ಎಂದೂ ಕರೆಯಲಾಗುತ್ತದೆ. ಸ್ಪಾಗಳಲ್ಲಿ ಸೂಜಿ ಅಥವಾ ಇಂಜೆಕ್ಷನ್‌ ಮೂಲಕ ಮಹಿಳೆಯರ ಮುಖದ ಮೇಲಿನ ಸುಕ್ಕು ಮಾಯಮಾಡುವುದು, ಅವರು ಯುವತಿಯರಂತೆ ಮಾಡುವ ಸೌಂದರ್ಯ ವರ್ಧಕ ವಿಧಾನ ಇದಾಗಿದೆ. ಇದನ್ನು ಪ್ಲೇಟ್‌ಲೆಟ್‌ ರಿಚ್‌ ಪ್ಲಾಸ್ಮಾ (PRP) ಅಥವಾ ಪ್ಲೇಟ್‌ಲೆಟ್‌ ರಿಚ್‌ ಫೈಬ್ರಿನ್‌ (PRF) ಎಂದು ಕೂಡ ಕರೆಯಲಾಗುತ್ತದೆ.

ವಯಸ್ಸಾದ ಮಹಿಳೆಯರು, ಸುಕ್ಕು ಗಟ್ಟಿದ ಚರ್ಮದ ಕಾಂತೀಯತೆಯನ್ನು ಸೂಜಿಯ ಮೂಲಕವೇ ಹೆಚ್ಚಿಸುವುದು ಇದರ ಪ್ರಮುಖ ವಿಧಾನವಾಗಿದೆ. ಚರ್ಮದಲ್ಲಿ ಕಾಲಜಿನ್‌ ಉತ್ಪಾದನೆ ಹೆಚ್ಚಿಸಿ, ಚರ್ಮವು ಹೊಳೆಯುವಂತೆ ಮಾಡುವುದೇ ರಕ್ತಪಿಶಾಚಿ ಫೇಶಿಯಲ್‌ ಆಗಿದೆ. ಇದನ್ನು ಭಾರತದ ಪ್ರಮುಖ ನಗರಗಳು ಸೇರಿ ಜಗತ್ತಿನಾದ್ಯಂತ ಸ್ಪಾಗಳಲ್ಲಿ ಮಾಡುತ್ತಾರೆ. ಆದರೆ, ಈ ಫೇಶಿಯಲ್‌ ಈಗ ಮಹಿಳೆಯರ ಪ್ರಾಣಕ್ಕೇ ಕುತ್ತು ತರುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಹೆಣ್ಣುಮಕ್ಕಳ ಕೈಗಳಿಂದ ರಕ್ತವನ್ನು ತೆಗೆದು, ಅದರಿಂದ ಪ್ಲೇಟ್‌ಲೆಟ್‌ಗಳನ್ನು ವಿಗಂಡಣೆ ಮಾಡಿ, ಆ ರಕ್ತವನ್ನು ಸಣ್ಣ ಸೂಜಿಯ ಮೂಲಕ ಮುಖಕ್ಕೆ ಅಳವಡಿಸುತ್ತಾರೆ. ಇದರಿಂದ ಚರ್ಮವು ಹೊಳೆಯುತ್ತದೆ. ಸುಕ್ಕುಗಳು ಮಾಯವಾಗುತ್ತಿವೆ. ಇದು ಸುಲಭ ಹಾಗೂ ಅಷ್ಟೇನೂ ಹೆಚ್ಚಿನ ಹಣ ಖರ್ಚಾಗದ ಕಾರಣ ಜಾಸ್ತಿ ಮಹಿಳೆಯರು ಈ ಫೇಶಿಯಲ್‌ ಮೊರೆಹೋಗುತ್ತಿದ್ದಾರೆ ಎನ್ನಲಾಗಿದೆ. ಇಂತಹ ಫೇಶಿಯಲ್‌ ಮಾಡಿಸಿಕೊಳ್ಳುವ ಮೊದಲು ಹೆಣ್ಣುಮಕ್ಕಳು ಎಚ್ಚರಿಕೆಯಿಂದ ಇರಬೇಕು ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Sweet Potatoes: ಗೆಣಸಿಗೆ ಮಧುಮೇಹ ನಿಯಂತ್ರಿಸುವ, ಕ್ಯಾನ್ಸರ್ ತಡೆಯುವ ಸಾಮರ್ಥ್ಯವಿದೆ!

Continue Reading

ಆರೋಗ್ಯ

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯು ಭಾರತದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯತ್ತ ಮಹತ್ವದ ಹೆಜ್ಜೆ. ದುರ್ಬಲ ಕುಟುಂಬಗಳಿಗೆ ಹೆಚ್ಚು ಅಗತ್ಯವಿರುವ ಆರ್ಥಿಕ ರಕ್ಷಣೆಯನ್ನು ನೀಡುತ್ತದೆ. ಇದರ ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ, ಇದರಿಂದ ಸಿಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Bharat Yojana
Koo

ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ ಜಾರಿಯಾಗಿರುವ ಆಯುಷ್ಮಾನ್ ಯೋಜನೆ ಇನ್ನೂ ಹಲವು ಮಂದಿಗೆ ಸರಿಯಾಗಿ ಅರ್ಥವೇ ಆಗಿಲ್ಲ. ಇದರಿಂದ ಸಾಕಷ್ಟು ಪರಿಣಾಮಕಾರಿಯಾಗಿ ಎಲ್ಲರನ್ನು ತಲುಪುವುದು ಸಾಧ್ಯವಾಗಿಲ್ಲ. ಭಾರತದಂತಹ ವಿಶಾಲ ಮತ್ತು ವೈವಿಧ್ಯಮಯವಾದ ದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವುದು ಸವಾಲಾಗಿದೆ. ಇದನ್ನು ಗುರುತಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಆಯುಷ್ಮಾನ್ ಭಾರತ್ ಯೋಜನೆಯು ಏನನ್ನು ಒಳಗೊಳ್ಳುತ್ತದೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಅದರ ಪ್ರಯೋಜನಗಳಿಗಾಗಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದರ ಮಾಹಿತಿ ಇಲ್ಲಿದೆ.


ಏನಿದು ಆಯುಷ್ಮಾನ್ ಭಾರತ್ ಯೋಜನೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪರಿಚಯಿಸಿದ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿಗಳು ನಿಗದಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಮೊತ್ತದವರೆಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಪಡೆಯಬಹುದು.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ನೋಂದಣಿ ಹೇಗೆ?

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಮೊದಲು ಅದರ ಬಗ್ಗೆ ತಿಳಿದುಕೊಳ್ಳಿ.

ಅರ್ಹತೆಯನ್ನು ಪರಿಶೀಲಿಸಿ

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಣಿ ನಡೆಸುವ ಮೊದಲು ಆಯುಷ್ಮಾನ್ ಭಾರತ್ ಯೋಜನೆ ಪಡೆಯುವ ಅರ್ಹತೆ ನಿಮಗಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಇದು ಪ್ರಾಥಮಿಕವಾಗಿ ಸಾಮಾಜಿಕ ಆರ್ಥಿಕ ಅಂಶಗಳು ಮತ್ತು ಮನೆಯ ಆದಾಯವನ್ನು ಆಧರಿಸಿರುತ್ತದೆ.


ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ

ಆಯುಷ್ಮಾನ್ ಭಾರತ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಾಮಾನ್ಯ ಸೇವಾ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿಮ್ಮ ಪ್ರದೇಶದಲ್ಲಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರಗಳನ್ನು ಪತ್ತೆ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಲ್ಲಿಗೆ ಭೇಟಿ ಮಾಡಿ.

ಅಗತ್ಯ ದಾಖಲೆಗಳನ್ನು ಒದಗಿಸಿ

ನೋಂದಣಿ ಪ್ರಕ್ರಿಯೆಯಲ್ಲಿ ನಿಮ್ಮ ಅರ್ಹತೆಯನ್ನು ಸ್ಥಾಪಿಸಲು ನೀವು ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವುಗಳು ಗುರುತಿನ ಪುರಾವೆ, ವಿಳಾಸ ಪುರಾವೆ ಮತ್ತು ಆದಾಯ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

ಸಂಪೂರ್ಣ ನೋಂದಣಿ ಅರ್ಜಿ

ಒದಗಿಸಿದ ಮಾಹಿತಿಯ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಸೇವಾ ಕೇಂದ್ರದಲ್ಲಿ ಒದಗಿಸಲಾದ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ಕುಟುಂಬದ ಸದಸ್ಯರು, ಆದಾಯ ಮತ್ತು ಇತರ ಸಂಬಂಧಿತ ಮಾಹಿತಿಯ ಕುರಿತು ವಿವರಗಳನ್ನು ಒದಗಿಸಿ.

ಪರಿಶೀಲನೆ ಪ್ರಕ್ರಿಯೆ

ನೋಂದಣಿ ಫಾರ್ಮ್ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ ಅಧಿಕಾರಿಗಳು ಆಯುಷ್ಮಾನ್ ಭಾರತ್ ಯೋಜನೆಗೆ ನಿಮ್ಮ ಅರ್ಹತೆಯನ್ನು ಪರಿಶೀಲಿಸುತ್ತಾರೆ. ಈ ಪರಿಶೀಲನಾ ಪ್ರಕ್ರಿಯೆಯು ಸರ್ಕಾರಿ ಡೇಟಾಬೇಸ್‌ಗಳೊಂದಿಗೆ ಒದಗಿಸಲಾದ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡುವುದನ್ನು ಒಳಗೊಂಡಿರುತ್ತದೆ.

ಆಯುಷ್ಮಾನ್ ಕಾರ್ಡ್ ಸ್ವೀಕರಿಸಿ

ಅರ್ಹತೆಯ ಯಶಸ್ವಿ ಪರಿಶೀಲನೆಯ ಅನಂತರ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಿರುವ ಆಯುಷ್ಮಾನ್ ಕಾರ್ಡ್ ಅನ್ನು ನಿಮಗೆ ನೀಡಲಾಗುತ್ತದೆ. ಈ ಕಾರ್ಡ್ ಯೋಜನೆಯಲ್ಲಿ ನಿಮ್ಮ ದಾಖಲಾತಿಗೆ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆಗಳನ್ನು ಪ್ರವೇಶಿಸಲು ಅನುಮತಿ ನೀಡುತ್ತದೆ.

doctor

ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಿ

ಆಯುಷ್ಮಾನ್ ಕಾರ್ಡ್‌ನೊಂದಿಗೆ ನೀವು ಇದೀಗ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಯಾವುದೇ ಎಂಪನೆಲ್ ಮಾಡಲಾದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯಬಹುದು. ನಗದು ರಹಿತ ಚಿಕಿತ್ಸಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿಮ್ಮ ಕಾರ್ಡ್ ಅನ್ನು ಆಸ್ಪತ್ರೆಯ ಸ್ವಾಗತ ವಿಭಾಗದಲ್ಲಿ ನೀಡಿ.

ಪ್ರಯೋಜನಗಳು ಏನೇನು?

ಆಯುಷ್ಮಾನ್ ಕಾರ್ಡ್‌ ಹೊಂದಿರುವುದರಿಂದ ಪ್ರಮುಖ ಪ್ರಯೋಜನಗಳು ಇಂತಿವೆ.

ದುರ್ಬಲ ಕುಟುಂಬಗಳಿಗೆ ರಕ್ಷಣೆ

ಆಯುಷ್ಮಾನ್ ಭಾರತ್ ಯೋಜನೆಯು ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಚ್ಚಿನ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕ ರಕ್ಷಣೆ ನೀಡುತ್ತದೆ.

ನಗದು ರಹಿತ ಚಿಕಿತ್ಸೆ

ಯೋಜನೆಯ ಫಲಾನುಭವಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ ನಿಗದಿತ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು.

ವ್ಯಾಪಕ ಆಸ್ಪತ್ರೆ ನೆಟ್‌ವರ್ಕ್

ಅಯುಷ್ಮಾನ್ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳನ್ನು ಒಳಗೊಂಡಂತೆ ನಿಗದಿತ ಆಸ್ಪತ್ರೆಗಳ ವ್ಯಾಪಕ ಜಾಲವನ್ನು ಹೊಂದಿದೆ. ಇದು ದೇಶದಾದ್ಯಂತ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸಹಕರಿಸುತ್ತದೆ.

Ayushman Card

ಆಯುಷ್ಮಾನ್ ಕಾರ್ಡಗೆ ಅಗತ್ಯವಿರುವ ದಾಖಲೆಗಳು

1. ನಿವಾಸದ ಗುರುತು ಪತ್ರ
2. ವಯಸ್ಸು ಮತ್ತು ಗುರುತಿನ ಪುರಾವೆ- ಉದಾಹರಣೆಗೆ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್
3. ಜಾತಿ ಪ್ರಮಾಣಪತ್ರ
4. ಸಂಪರ್ಕ ಮಾಹಿತಿ- ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ
5. ಆದಾಯ ಪ್ರಮಾಣ ಪತ್ರ
6. ಪ್ರಸ್ತುತ ಕುಟುಂಬದ ಸ್ಥಿತಿಯನ್ನು ಸೂಚಿಸುವ ದಾಖಲೆಗಳು

Continue Reading

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading

ಆರೋಗ್ಯ

Baking Soda Benefits: ಅಡುಗೆ ಸೋಡಾದಿಂದ ಎಷ್ಟೊಂದು ಪ್ರಯೋಜನಗಳಿವೆ ನೋಡಿ!

ಸೋಡಿಯಂ ಬೈಕಾರ್ಬೋನೇಟ್‌ ಎಂಬ ರಾಸಾಯನಿಕ ನಾಮಧೇಯವನ್ನು ಹೊಂದಿರುವ ಈ ಬೇಕಿಂಗ್‌ ಸೋಡಾ ಕೇವಲ ಬೇಕಿಂಗ್‌ಗೆ ಮಾತ್ರವಲ್ಲದೆ, ಸಾಕಷ್ಟು ಅಡುಗೆಗಳಲ್ಲೂ, ಅವಸರದ ತಿಂಡಿಗಳಲ್ಲೂ ಬಳಕೆಯಾಗುತ್ತದೆ. ಆದರೆ ಇವಿಷ್ಟೇ ಅಲ್ಲದೆ, ಕೀಟದ ಕಡಿತದಿಂದ ಹಿಡಿತು ಮನೆಯ ಮೂಲೆಗಳ ಕ್ಲೀನಿಂಗ್‌ವರೆಗೆ ಬೇಕಿಂಗ್‌ ಸೋಡಾ ಹಲವು ಉಪಯೋಗಗಳನ್ನೂ (Baking Soda Benefits) ಹೊಂದಿದೆ.

VISTARANEWS.COM


on

Baking Soda Benefits
Koo

ಬೇಕಿಂಗ್‌ನಲ್ಲಿ ಆಸಕ್ತಿ ಇರುವ ಎಲ್ಲರ ಮನೆಗಳಲ್ಲೂ ಖಂಡಿತವಾಗಿಯೂ ಅಡುಗೆ ಕೋಣೆಯಲ್ಲಿರುವ ಸಾಮಾನ್ಯ ವಸ್ತು ಎಂದರೆ ಅದರು ಬೇಕಿಂಗ್‌ ಸೋಡಾ. ಸೋಡಿಯಂ ಬೈಕಾರ್ಬೋನೇಟ್‌ ಎಂಬ ರಾಸಾಯನಿಕ ನಾಮಧೇಯವನ್ನು ಹೊಂದಿರುವ ಈ ಬೇಕಿಂಗ್‌ ಸೋಡಾ ಕೇವಲ ಬೇಕಿಂಗ್‌ಗೆ ಮಾತ್ರವಲ್ಲದೆ, ಸಾಕಷ್ಟು ಅಡುಗೆಗಳಲ್ಲೂ, ಅವಸರದ ತಿಂಡಿಗಳಲ್ಲೂ ಬಳಕೆಯಾಗುತ್ತದೆ. ಆದರೆ ಇವಿಷ್ಟೇ ಅಲ್ಲದೆ, ಕೀಟದ ಕಡಿತದಿಂದ ಹಿಡಿತು ಮನೆಯ ಮೂಲೆಗಳ ಕ್ಲೀನಿಂಗ್‌ವರೆಗೆ ಬೇಕಿಂಗ್‌ ಸೋಡಾ ಹಲವು ಉಪಯೋಗಗಳನ್ನೂ ಹೊಂದಿದೆ. ಹಾಗೆ ನೋಡಿದರೆ, ಮನೆಯ ಹಲವು ವಿಷಯಗಳಿಗೆ ಬೇಕಿಂಗ್‌ ಸೋಡಾ ತುರ್ತಾಗಿ ಉಪಯೋಗವಾಗಬಲ್ಲ ಒಂದು ಆಪದ್ಭಾಂಧವ. ಬನ್ನಿ, ಅಡುಗೆಯಲ್ಲದೆ, ಬೇಕಿಂಗ್‌ ಸೋಡಾದ ಕೆಲವು ಅದ್ಭುತ ಉಪಯೋಗಗಳನ್ನು (Baking Soda Benefits) ತಿಳಿಯೋಣ ಬನ್ನಿ.

toothpaste

ಟೂತ್‌ಪೇಸ್ಟ್‌ಗೆ ಪರ್ಯಾಯ!

ಮನೆಯಲ್ಲಿ ಟೂತ್‌ಪೇಸ್ಟ್‌ ಖಾಲಿಯಾಗಿದೆಯಾ? ತಂದಿಡಲು ಮರೆತೇಬಿಟ್ಟಿರೋ? ಹಾಗಿದ್ದರೆ ಇಲ್ಲಿ ನಿಮ್ಮ ಆಪದ್ಭಾಂಧವ ಇದೇ ಬೇಕಿಂಗ್‌ ಸೋಡಾ. ಹೌದು. ಸ್ವಲ್ಪ ಬೇಕಿಂಗ್‌ ಸೋಡಾವನ್ನು ಅರ್ಧ ಚಮಚ ತೆಂಗಿನೆಣ್ಣೆಯೊಂದಿಗೆ ಕಲಸಿಕೊಂಡು ಪೇಸ್ಟ್‌ನ ಹಾಗೆ ಮಾಡಿ ಹಲ್ಲುಜ್ಜಿ. ಹಲ್ಲು ಪಳಪಳನೆ ಹೊಳೆಯುವುದಷ್ಟೇ ಅಲ್ಲ, ಅಲ್ಲ ಕೊಳೆಯೂ ಹಲ್ಲಿನಿಂದ ಹೊರಟುಹೋಗಿ ಹಲ್ಲು ಸ್ವಚ್ಛವಾಗುತ್ತದೆ. ಬಾಯಿಯೂ ಸ್ವಚ್ಛವಾಗುತ್ತದೆ. ಆದರೆ, ಇದನ್ನೇ ನಿತ್ಯವೂ ಮಾಡಬೇಡಿ. ಇದು ವಸಡನ್ನು ಹಾಳು ಮಾಡಬಹುದು. ಅಪರೂಪಕ್ಕೊಮ್ಮೆ ಹಲ್ಲನ್ನು ಫಳಫಳಿಸಲು ಬಳಸಬಹುದು.

ವಾಸನೆ ಹೀರಿಕೊಳ್ಳುವ ಗುಣ

ಬೇಕಿಂಗ್‌ ಸೋಡಾ ಕೆಟ್ಟ ವಾಸನೆಯನ್ನು ಹೀರಿಕೊಳ್ಳುವ ಗುಣವನ್ನು ಹೊಂದಿದೆ. ನಿಮ್ಮ ಬಳಿ ಡಿಯೋಡೆರೆಂಟ್‌ ಖಾಲಿಯಾಗಿದೆ ಎಂದರೆ, ನಿಮ್ಮ ಕಂಕುಳದ ದುರ್ಗಂಧವನ್ನು ಹೋಗಲಾಡಿಸಲು ಈ ಬೇಕಿಂಗ್‌ ಸೋಡಾ ಸಹಾಯ ಮಾಡುತ್ತದೆ. ತುರ್ತು ಸಂದರ್ಭಗಳಲ್ಲಿ ಬೇಕಿಂಗ್‌ ಸೋಡಾವನ್ನು ನಿಮ್ಮ ಕಂಕುಳಕ್ಕೆ ಹಚ್ಚಿಕೊಂಡರೆ, ಕೆಟ್ಟ ದುರ್ಗಂಧವನ್ನು ಅದು ಹೀರಿಕೊಂಡು ನೀವು ಮುಜುಗರಕ್ಕೊಳಗಾಗುವುದನ್ನು ತಪ್ಪಿಸುತ್ತದೆ. ಕೇವಲ ಕಂಕುಳದ ದುರ್ಗಂಧ ಮಾತ್ರವಲ್ಲ, ಶೂ, ಚಪ್ಪಲಿ, ಸಾಕ್ಸ್‌ ಫ್ರಿಡ್ಜ್‌, ಮೈಕ್ರೋವೇವ್‌, ಡ್ರಾವರ್‌ಗಳು ಹೀಗೆ ನಿಮ್ಮ ಬಳಕೆಯ ಯಾವುದೇ ವಸ್ತು ದುರ್ಗಂಧ ಬೀರುತ್ತಿದ್ದರೆ ಸ್ವಚ್ಛಗೊಳಿಸಲು, ದಿಢೀರ್‌ ಮುಕ್ತಿ ಹೊಂದಲು ಈ ಬೇಕಿಂಗ್‌ ಸೋಡಾ ನಿಮ್ಮ ನೆರವಿಗೆ ಬರುತ್ತದೆ. ಒಂದು ನಿಂಬೆಹಣ್ಣಿನ ರಸವನ್ನು ಹಿಂಡಿಕೊಂಡು ಅದಕ್ಕೆ ಬೇಕಿಂಗ್‌ ಸೋಡಾ ಬೆರೆಸಿ ನೀವು ಈ ಸ್ವಚ್ಛಗೊಳಿಸುವ ಕಾರ್ಯವನ್ನು ಮಾಡಬಹುದು.

Acidity Problem

ಅಸಿಡಿಟಿಗೆ ಮದ್ದು

ಅಸಿಡಿಟಿ ಅಥವಾ ಗ್ಯಾಸ್‌ನಿಂದಾಗಿ ಎದೆಯುರಿ, ಹೊಟ್ಟೆಯುಬ್ಬರದಂತಹ ಸಮಸ್ಯೆಯೇ? ಹಾಗಾದರೆ, ತಕ್ಷಣಕ್ಕೆ ನಿಮಗೆ ಸಹಾಯ ಬರುವ ವಸ್ತುಗಳ ಪೈಕಿ ಬೇಕಿಂಗ್‌ ಸೋಡಾವೂ ಒಂದು. ಹೊಟ್ಟೆಯಲ್ಲಿರುವ ಹೆಚ್ಚುವರಿ ಗ್ಯಾಸ್‌ ಅನ್ನು ಸಮತೋಲನಗೊಳಿಸುವಲ್ಲಿ ಈ ಬೇಕಿಂಗ್‌ ಸೋಡಾ ಅಥವಾ ಸೋಡಿಯಂ ಬೈಕಾರ್ಬೋನೇಟ್‌ ನೆರವಾಗುತ್ತದೆ.

ಅಂಟು ನಿವಾರಣೆಗೆ ಸೂಕ್ತ

ಎಣ್ಣೆಯುಕ್ತ ಅಂಟಾದ ಪಾತ್ರೆಗಳನ್ನು ಸ್ವಚ್ಛಗೊಳಿಸಲು ಕಷ್ಟಪಡುತ್ತಿದ್ದೀರಾ? ಹಾಗಿದ್ದರೆ, ಬೇಕಿಂಗ್‌ ಸೋಡಾ ನಿಮ್ಮ ಸಹಾಯಕ್ಕಿದೆ. ಎಣ್ಣೆ ನಿಮ್ಮ ಕಾರ್ಪೆಟ್‌/ಸೋಫಾ ಮೇಲೆ ಚೆಲ್ಲಿದರೆ, ಅಥವಾ ಬಟ್ಟೆ ಮೇಲೆ ಚೆಲ್ಲಿಕೊಂಡರೆ, ಅಥವಾ ಯಾವುದೇ ಎಣ್ಣೆ ಕಲೆಯಾದರೂ ಅದನ್ನು ಬೇಕಿಂಗ್‌ ಸೋಡಾ ಆ ಜಾಗಕ್ಕೆ ಹಾಕುವ ಮೂಲಕ ಸ್ವಚ್ಛಗೊಳಿಸಬಹುದು. ಬೇಕಿಂಗ್‌ ಸೋಡಾಕ್ಕೆ ಎಣ್ಣೆಯನ್ನು ಹೀರಿಕೊಳ್ಳುವ ಗುಣವಿದೆ.

ನೆಲ ಸ್ವಚ್ಛಗೊಳಿಸಲು

ನೆಲವನ್ನು ಸ್ವಚ್ಛಗೊಳಿಸಲು ಬೇಕಿಂಗ್‌ ಸೋಡಾ ಅತ್ಯಂತ ಒಳ್ಳೆಯ ಕ್ಲೀನರ್‌ನಂತೆ ವರ್ತಿಸುತ್ತದೆ. ಸ್ವಲ್ಪವೇ ಸ್ವಲ್ಪ ಬೇಕಿಂಗ್‌ ಸೋಡಾವನ್ನು ಬಿಸಿನೀರಿನೊಂದಿಗೆ ಸೇರಿಸಿ ಒರೆಸಿದರೆ ನೆಲ ಸ್ವಚ್ಛವಾಗುತ್ತದೆ.

Dish washing

ತಳ ಹಿಡಿದ ಪಾತ್ರೆ ಸ್ವಚ್ಛತೆಗೆ

ತಳಹಿಡಿದ ಪಾತ್ರೆಗಳನ್ನು ತೊಳೆಯುವುದು ತಲೆನೋವಿನ ಕೆಲಸವೇ? ಹಾಗಿದ್ದರೆ ಅಲ್ಲಿಯೂ ಈ ಬೇಕಿಂಗ್‌ ಸೋಡಾ ನೆರವಿಗೆ ಬರುತ್ತದೆ. ಸ್ವಲ್ಪ ಬೇಕಿಂಗ್‌ ಸೋಡಾವನ್ನು ಪಾತ್ರೆಗೆ ಹಾಕಿ ಬಿಸಿ ನೀರನ್ನು ಹಾಕಿಟ್ಟು ಅದಕ್ಕೆ ಸ್ವಲ್ಪ ಡಿಶ್‌ವಾಶರ್‌ ಲಿಕ್ವಿಡ್‌ ಹಾಕಿಟ್ಟು ಸ್ವಲ್ಪ ಹೊತ್ತು ನೆನೆಯಲು ಬಿಟ್ಟು ನಂತರ ತೊಳೆದರೆ ಕಪ್ಪಗಾದ ಪಾತ್ರೆಗಳು ಲಕಲಕನೆ ಹೊಳೆಯುತ್ತವೆ.

ಸೌಂದರ್ಯ ಸಾಧನ

ಬೇಕಿಂಗ್‌ ಸೋಡಾವನ್ನು ಸೌಂದರ್ಯ ಸಾಧನವಾಗಿಯೂ ಬಳಸಬಹುದು. ಬೇಕಿಂಗ್‌ ಸೋಡಾ ಅತ್ಯುತ್ತಮ ಎಕ್ಸ್‌ಫಾಲಿಯೇಟರ್‌ ಆಗಿಯೂ ವರ್ತಿಸುತ್ತದೆ. ಮುಖದ ಚರ್ಮದ ಡೆಡ್‌ ಸ್ಕಿನ್‌ ತೆಗೆದು ಹಾಕಲು ಸ್ಕ್ರಬ್‌ ಮಾಡಲು ಬೇಕಿಂಗ್‌ ಸೋಡಾ ಬಳಸಿ ತಾಜಾ ಹೊಳಪಾದ ಚರ್ಮ ಪಡೆಯಬಹುದು.

ಹಿಮ್ಮಡಿಯ ಸಮಸ್ಯೆಗೆ ಪರಿಹಾರ

ಕಾಲಿನ ಚರ್ಮವನ್ನು ನಾವು ಅತ್ಯಂತ ಕಡೆಗಣಿಸುತ್ತೇವೆ. ಬಿರುಸಾದ, ಒಡೆಯುವ ಹಿಮ್ಮಡಿಯ ಸಮಸ್ಯೆಗಳೂ ಸೇರಿದಂತೆ ಕಾಲಿನ ಚರ್ಮ ಕೊಳೆಯುಕ್ತವಾಗಿರುತ್ತದೆ. ಬೇಕಿಂಗ್‌ ಸೋಡಾವನ್ನು ಕಾಲಿಗೂ ಎಕ್ಸ್‌ಫಾಲಿಯೇಟರ್‌ ಆಗಿ ಬಳಸುವ ಮೂಲಕ ಕಾಲಿನ ಚರ್ಮವನ್ನು ಹೊಳೆಯುವಂತೆ ಮಾಡಬಹುದು. ಕೊಳೆ ತೊಲಗಿಸಿ, ನುಣುಪಾದ ಬಿರುಕುಗಳಿಂದ ಮುಕ್ತವಾಗಿರುವಂತೆ ಕಾಪಾಡಿಕೊಳ್ಳಬಹುದು.

ಇದನ್ನೂ ಓದಿ: Tongue Reveals Health: ನಮ್ಮ ಆರೋಗ್ಯದ ಚರಿತ್ರೆಯನ್ನು ನಮ್ಮ ನಾಲಿಗೆಯೇ ಹೇಳುತ್ತದೆ!

Continue Reading
Advertisement
IPL 2024
ಪ್ರಮುಖ ಸುದ್ದಿ18 mins ago

IPL 2024 : ಅಭಿಮಾನಿಗಳಿಗೆ ಮತ್ತೊಂದು ಖುಷಿಯ ಸುದ್ದಿ ಕೊಡುವುದೇ ಆರ್​ಸಿಬಿ?

Chamarajanagar
ಪ್ರಮುಖ ಸುದ್ದಿ21 mins ago

ಇವಿಎಂ ಧ್ವಂಸ; ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಏಪ್ರಿಲ್‌ 29ರಂದು ಮರು ಮತದಾನ!

Film Festival
ಬೆಂಗಳೂರು24 mins ago

Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

Parineeti Chopra talks about initial struggles in the Industry
ಬಾಲಿವುಡ್25 mins ago

Parineeti Chopra: ವೃತ್ತಿ ಜೀವನದ ಆರಂಭಿಕ ದಿನಗಳನ್ನು ನೆನೆದು ಭಾವುಕರಾದ ಪರಿಣಿತಿ ಚೋಪ್ರಾ!

Cotton Saree Fashion Roopa Malali, Chandrayaan - 3 ISRO Deputy Project Director
ಫ್ಯಾಷನ್36 mins ago

Cotton Saree Fashion: ಕಾಟನ್ ಸೀರೆ ಫ್ಯಾಷನ್ ಕುರಿತು ಚಂದ್ರಯಾನ 3 ಖ್ಯಾತಿಯ ಇಸ್ರೋ ರೂಪಾ ವ್ಯಾಖ್ಯಾನ ಹೀಗಿದೆ!

Job Alert
ಉದ್ಯೋಗ42 mins ago

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

English Speaking Practice
ತಂತ್ರಜ್ಞಾನ49 mins ago

English Speaking Practice: ಸರಳ, ಸುಲಭವಾಗಿ ಇಂಗ್ಲಿಷ್ ಮಾತನಾಡಬೇಕೇ?; ಗೂಗಲ್​​ನಲ್ಲಿದೆ ‘ಸ್ಪೀಕಿಂಗ್ ಪ್ರಾಕ್ಟೀಸ್’

Vijayapur MLA Basanagowda Patil Yatnal latest statement in Dharwad
ಹುಬ್ಬಳ್ಳಿ50 mins ago

Lok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿಯಾಗಿ ನಿಂತ ನಾಯಕ ಪ್ರಲ್ಹಾದ್ ಜೋಶಿ ಎಂದ ಯತ್ನಾಳ್

Congress government notice to The Rulers: Power of Constitution hero
ಸಿನಿಮಾ53 mins ago

The Rulers: ಅಂಬೇಡ್ಕರ್ ಹೆಸರಲ್ಲಿ ಸಿನಿಮಾ ಮಾಡಿದ್ದಕ್ಕೆ` ರೌಡಿ ಶೀಟರ್ʼ ಪಟ್ಟ ಕೊಡ್ತಾ ಕಾಂಗ್ರೆಸ್ ಸರ್ಕಾರ? ನಟ ಹೇಳಿದ್ದೇನು?

IPL 2024
ಪ್ರಮುಖ ಸುದ್ದಿ54 mins ago

IPL 2024 : ಕೆಕೆಆರ್​ ತಂಡವನ್ನು ಸೋಲಿಸಿ ವಿಶೇಷ ಭಕ್ಷ್ಯ ಸವಿದ ಪಂಜಾಬ್ ಆಟಗಾರರು, ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20241 hour ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ6 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ13 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌