Digestion Tips: ಜೀರ್ಣಾಂಗಗಳ ಕ್ಷಮತೆ ಹೆಚ್ಚಿಸುವುದು ಹೇಗೆ? - Vistara News

ಆರೋಗ್ಯ

Digestion Tips: ಜೀರ್ಣಾಂಗಗಳ ಕ್ಷಮತೆ ಹೆಚ್ಚಿಸುವುದು ಹೇಗೆ?

ಹಳೆಯ ತಲೆಮಾರಿನವರು ಕಲ್ಲನ್ನಾದರೂ ತಿಂದು ಅರಗಿಸುತ್ತಿದ್ದರು. ನಮಗೆ ಅನ್ನವೇ ಅರಗುವುದಿಲ್ಲ ಎಂದು ಹಳಹಳಿಸುವವರ ಸಂಖ್ಯೆ ಹೆಚ್ಚುತ್ತಿದೆ. ಹೌದು, ನಮ್ಮ ಊಟದ ಅಭ್ಯಾಸಗಳೇ ಕೆಲವೊಮ್ಮೆ ನಮಗೆ ಶತ್ರುವಾಗುವುದಿದೆ. ಹಾಗಾದರೆ ಜೀರ್ಣಾಂಗಗಳ ಸಾಮರ್ಥ್ಯವನ್ನು ಹೆಚ್ಚಿಸಲು ಏನು ಮಾಡಬಹುದು? ಇಲ್ಲಿದೆ (Digestion Tips) ಉಪಯುಕ್ತ ಮಾಹಿತಿ.

VISTARANEWS.COM


on

Digestion Tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಮ್ಮ ಜೀರ್ಣಾಂಗಗಳ ಕ್ಷಮತೆಯನ್ನು ಹೆಚ್ಚಿಸುವುದಕ್ಕೆ ಸಾಧ್ಯವೇ? ತಿಂದಿದ್ದು ಅರಗುವುದೇ ಇಲ್ಲ ಎನ್ನುವ ದೂರು ಹೇಳುವವರು ಬಹಳ ಮಂದಿ ಇದ್ದಾರು ಲೋಕದಲ್ಲಿ. ಇದರಿಂದ ಅಜೀರ್ಣದ ಸಮಸ್ಯೆ ಮಾತ್ರವಲ್ಲ, ಸರಣಿ ಸಮಸ್ಯೆಗಳು ಬೆನ್ನು ಹತ್ತುತ್ತವೆ. ಹಸಿವಿಲ್ಲದಿರುವುದು, ವಾಯು ಪ್ರಕೋಪ, ಆಸಿಡಿಟಿ, ಮಲಬದ್ಧತೆ… ಇವೆಲ್ಲ ಸೇರಿ ಜೀವವನ್ನು ಹೈರಾಣಾಗಿಸುತ್ತವೆ. ಮಾತ್ರವಲ್ಲ, ಟಾಕ್ಸಿನ್‌ಗಳ ಗುಡಾಣವಾಗುತ್ತದೆ ದೇಹ. ಹಾಗಾದರೆ ಇವುಗಳನ್ನು ದೂರ ಮಾಡಲು ಇರುವ ದಾರಿ ಯಾವುದು? ಜೀರ್ಣಾಂಗಗಳ ದಕ್ಷತೆಯನ್ನು ಹೆಚ್ಚಿಸುವುದರಿಂದ ಇಂಥ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದೇ? ಹೌದಾದರೆ (Digestion Tips) ಏನು ಮಾಡಬೇಕು?

Detox

ಡಿಟಾಕ್ಸ್‌ ಮಾಡಿ

ದೇಹವನ್ನು ಕಾಲಕಾಲಕ್ಕೆ ವಿಷಮುಕ್ತ ಮಾಡುವುದು ಅಗತ್ಯ. ಬೇಡದ್ದನ್ನೇ ದೇಹದಲ್ಲಿ ತುಂಬಿಕೊಂಡಿದ್ದರೆ, ಲಿವರ್‌ ಅತಿಯಾಗಿ ಕೆಲಸ ಮಾಡುವುದು ಹೌದು. ಆದರೆ ಪ್ರಯೋಜನ ದೊರೆಯುವುದಿಲ್ಲ. ಇಂಥ ಸಂದರ್ಭದಲ್ಲಿ ಏಕಾದಶಿ ಅಥವಾ ಸಂಕಷ್ಟಿಯ ನೆವದಲ್ಲಿ ಉಪವಾಸ, ಇನ್ಯಾವುದೋ ವ್ರತದ ಹೆಸರಿನಲ್ಲಿ ದ್ರವಾಹಾರ ಮುಂತಾದ ಕ್ರಮಗಳು ಜೀರ್ಣಾಂಗಗಳಿಗೆ ಬೇಕಾದ ವಿಶ್ರಾಂತಿಯನ್ನು ನೀಡುತ್ತವೆ. ಒಂದೊಮ್ಮೆ ಉಪವಾಸ ಕಷ್ಟ ಎಂದೆನಿಸಿದರೆ ಜ್ಯೂಸ್‌ಫಾಸ್ಟ್‌ ನಿಯಮಗಳನ್ನೂ ಅನುಸರಿಸಬಹುದು. ಇದರಿಂದ ಶರೀರವನ್ನು ಡಿಟಾಕ್ಸ್‌ ಮಾಡಲ್ ಸಾಧ್ಯವಾಗುತ್ತದೆ.

Young Woman in the Lotus Position While Meditating Mindfulness Practice Well-Being and Self-Concept Brain Exercises To Improve Memory

ಧ್ಯಾನ

ಎತ್ತಣ ಮಾಮರ ಎತ್ತಣ ಕೋಗಿಲೆ ಎಂದು ಯೋಚಿಸಬೇಡಿ. ಮಾನಸಿಕ ಒತ್ತಡವು ದೇಹದ ಜೀರ್ಣಾಂಗಗಳ ಆರೋಗ್ಯವನ್ನು ಸಂಪೂರ್ಣ ಹಾಳು ಮಾಡುತ್ತದೆ ಎಂಬುದನ್ನು ಬಹಳಷ್ಟ್ ಅ‍ಧ್ಯಯನಗಳು ದೃಢಪಡಿಸಿವೆ. ಮನಸ್ಸನ್ನು ಒತ್ತಡ ಮುಕ್ತ ಮಾಡುವುದರಿಂದ, ಇಡೀ ಶರೀರದ ಮೇಲೆ ಧನಾತ್ಮಕ ಪರಿಣಾಮ ಬೀರುವುದನ್ನು ಕಾಣಬಹುದು ನಾವು. ಹಾಗಾಗಿ ಪ್ರತಿದಿನ 30 ನಿಮಿಷಗಳ ಧ್ಯಾನ ಮಾಡುವುದರಿಂದ ಜೀರ್ಣಾಂಗಗಳ ಆರೋಗ್ಯವನ್ನೂ ಸುಧಾರಿಸಬಹುದು.

Female runner doing stretching exercise, preparing for morni

ವ್ಯಾಯಾಮ

ಶಾರೀರಿಕ ಚಟುವಟಿಕೆಯು ಜೀರ್ಣಾಂಗಗಳನ್ನೂ ಚುರುಕಾಗಿಸುತ್ತದೆ. ಯಾವುದೇ ರೀತಿಯ ಏರೋಬಿಕ್‌ ಮಾದರಿಯ ವ್ಯಾಯಾಮಗಳು ದೇಹಕ್ಕೆ ಒಳ್ಳೆಯದು. ಚುರುಕು ನಡಿಗೆ, ಈಜು, ಸೈಕಲ್‌ ಹೊಡೆಯುವುದು, ನೃತ್ಯ, ಪಿಲಾಟೆ, ಯೋಗ ಮುಂತಾದ ಯಾವುದನ್ನಾದರೂ ಅಭ್ಯಾಸ ಮಾಡಬಹುದು. ಊಟದ ನಂತರ ಹತ್ತು ನಿಮಿಷಗಳ ನಡಿಗೆಯೂ ಆಹಾರವನ್ನು ಚೆನ್ನಾಗಿ ಪಚನ ಮಾಡುತ್ತದೆ. ಅದರಲ್ಲೂ ಮಧುಮೇಹ ಇರುವವರಲ್ಲಿ ಇಂಥ ಚಟುವಟಿಕೆಗಳು ಸಕ್ಕರೆಯಂಶದ ನಿಯಂತ್ರಣಕ್ಕೆ ಬಹಳಷ್ಟು ನೆರವು ನೀಡುತ್ತದೆ.

ಇದನ್ನೂ ಓದಿ: Olive Oil Benefits: ಆಲಿವ್‌ ಎಣ್ಣೆ ಕೇವಲ ಅಡುಗೆಗಲ್ಲ, ಮುಖದ ಚರ್ಮ ಹಾಗೂ ಕೂದಲ ಸೌಂದರ್ಯಕ್ಕೂ ಬೇಕು!

ಅತಿಯಾಗಿ ತಿನ್ನುವುದಲ್ಲ

ಊಟ ಎಷ್ಟೇ ರುಚಿಯಾಗಿದ್ದರೂ, ಅದೇನು ಬದುಕಿನ ಕಡೆಯ ಊಟ ಎಂಬಂತೆ ಉಣ್ಣಬೇಕಿಲ್ಲ. ಅಲ್ಪತೃಪ್ತನಿಗೆ ರುಚಿ ಹೆಚ್ಚು ಎನ್ನುವ ಮಾತಿನಂತೆ, ಸ್ವಲ್ಪ ತಿಂದಿದ್ದನ್ನೂ ಪ್ರೀತಿಯಿಂದ ಹೊಟ್ಟೆ ಸೇರಿಸಿದರೆ, ಅದೇ ಪ್ರಿಯವಾಗುತ್ತದೆ. ಊಟಕ್ಕೆ ಕೂತಾಗ ಸಿಕ್ಕಾಪಟ್ಟೆ ತಿನ್ನುವುದು ಮಾತ್ರವಲ್ಲ, ಆಗಾಗ ತಿನ್ನುತ್ತಿರುವುದು, ಅನಾರೋಗ್ಯಕರ ತಿಂಡಿಗಳನ್ನೇ ತಿನ್ನುವುದು- ಇಂಥ ಆಹಾರಭ್ಯಾಸಗಳು ಜೀರ್ಣಾಂಗಗಳನ್ನು ಹಿಂಡಿ ಹಿಪ್ಪೆ ಮಾಡುತ್ತವೆ. ಬದಲಿಗೆ, ಸತ್ವಯುತವಾದ ಮಧ್ಯಮ ಗಾತ್ರದ ಊಟವನ್ನು ಅಳವಡಿಸಿಕೊಂಡರೆ ಒಳ್ಳೆಯದು

Herbal Tea with Honey Late Night Snacks

ಹರ್ಬಲ್‌ ಚಹಾಗಳು

ನೈಸರ್ಗಿಕ ಹರ್ಬಲ್‌ ಚಹಾಗಳು ಹೊಟ್ಟೆಯ ಆರೋಗ್ಯವನ್ನು ವೃದ್ಧಿಸುತ್ತವೆ. ಶುಂಠಿ ಚಹಾ, ಚಕ್ಕೆಯ (ಸಿನ್ನಮನ್) ಚಹಾ, ಕ್ಯಾಮೊಮೈಲ್‌ ಚಹಾ ಮುಂತಾದವು ಆಹಾರ ಪಚನವಾಗಲು ನೆರವು ನೀಡುತ್ತವೆ. ಜೊತೆಗೆ ಇವುಗಳಲ್ಲಿರುವ ಉತ್ಕರ್ಷಣ ನಿರೋಧಕಗಳು ಜೀರ್ಣಾಂಗಗಳಲ್ಲಿನ ಉರಿಯೂತ ಕಡಿಮೆ ಮಾಡಲೂ ಸಹಾಯ ಮಾಡುತ್ತವೆ. ಕೊತ್ತಂಬರಿ ನೀರು, ಜೀರಿಗೆ ನೀರು ಇತ್ಯಾದಿಗಳು ಗ್ಯಾಸ್‌, ಆಸಿಡಿಟಿಗಳ ನಿಯಂತ್ರಣಕ್ಕೂ ನೆರವಾಗುತ್ತವೆ. ಇಂಥ ಯಾವುದೇ ಚಹಾಗಳ ಡಿಪ್‌ ಟೀ ಬ್ಯಾಗ್ ಬಳಸಿದರೆ‌ ತಯಾರಿಕೆ ಸುಲಭ. ಹಾಗಲ್ಲದೆ, ನೀವೆ ಮಾಡಿಕೊಳ್ಳುವ ಉದ್ದೇಶವಿದ್ದರೆ ತಯಾರಿಸುವ ಕ್ರಮ ಹೀಗಿದೆ- ಶುಂಠಿ ಅಥವಾ ಚಕ್ಕೆಯ ಚಹಾ ಮಾಡುವುದಿದ್ದರೆ, ಒಂದು ಕಪ್‌ ನೀರಿಗೆ ಒಂದಿಂಚು ಚಕ್ಕೆ ಅಥವಾ ಅರ್ಧ ಇಂಚು ಶುಂಠಿಯನ್ನು ಹಾಕಿ. ೫ ನಿಮಿಷಗಳ ಕಾಲ ಈ ನೀರು ಚೆನ್ನಾಗಿ ಕುದಿಯಲಿ. ನಂತರ ಇದನ್ನು ಬೇಕಾದ ಉಷ್ಣತೆಯಲ್ಲಿ ಸೇವಿಸಬಹುದು. ಊಟದ ಒಂದು ತಾಸಿನ ನಂತರ ಹರ್ಬಲ್‌ ಟೀ ಅಥವಾ ಗ್ರೀನ್‌ ಟೀಗಳ ಸೇವನೆ ಹೆಚ್ಚಿನ ಪರಿಣಾಮಗಳನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಹಾಗೆಂದು ದಿನದ ಉಳಿದ ಸಮಯದಲ್ಲಿ ಇದನ್ನು ಸೇವಿಸಬಾರದೆಂದಲ್ಲ. ಆದರೆ ಹಸಿದ ಹೊಟ್ಟೆಯಲ್ಲಿ ಶುಂಠಿ ಚಹಾ ಸೇವಿಸುವುದು ಸಮಸ್ಯೆಗಳನ್ನು ತರಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Healthy Sandwich Spread: ಮನೆಯಲ್ಲೇ ಮಾಡಿ ಕಡಿಮೆ ಕ್ಯಾಲರಿಯ ಆರೋಗ್ಯಕರ ಸ್ಯಾಂಡ್‌ವಿಚ್‌ ಸ್ಪ್ರೆಡ್‌!

ಮಕ್ಕಳಿರುವ ಹೆತ್ತವರಿಗಂತೂ, ವಾರದಲ್ಲಿ ಎರಡು ಸಲವಾದರೂ ಮನೆಯಲ್ಲಿ ಸ್ಯಾಂಡ್‌ವಿಚ್‌ ಮಾಡಬೇಕಾದ ಪ್ರಸಂಗಗಳು ಇದ್ದೇ ಇರುತ್ತವೆ. ಕಚೇರಿ ಕೆಲಸಕ್ಕೆ ಬೇಗ ಹೋಗಬೇಕಾದಾಗ, ಅತೀವ ಕೆಲಸದ ಒತ್ತಡದಲ್ಲಿರುವಾಗ, ಅಡುಗೆ ಮಾಡಲು ಪುರುಸೊತ್ತು, ವ್ಯವಧಾನ ಇರದಿದ್ದಾಗ, ಬೇರೆ ಅಡುಗೆ ಮಾಡಲು ಗೊತ್ತಿಲ್ಲದೇ ಇದ್ದಾಗ, ಏನಾದರೂ ರುಚಿಯಾಗಿ ತಿನ್ನಬೇಕೆಂದು ಬಯಕೆಯಾದಾಗ, ಹೀಗೆ ನಾನಾ ಕಾರಣಗಳಲ್ಲಿ ಸ್ಯಾಂಡ್‌ವಿಚ್‌ ಎಂಬ ತಿನಿಸು ಅಡುಗೆಮನೆಯಲ್ಲಿ ಹೊತ್ತಲ್ಲದ ಹೊತ್ತಿನಲ್ಲೆಲ್ಲ ಪ್ರತ್ಯಕ್ಷವಾಗುತ್ತದೆ. ಮನೆಯಲ್ಲೇ ಮಾಡಬಹುದಾದ ಸ್ಯಾಂಡ್‌ವಿಚ್‌ ಸ್ಪ್ರೆಡ್‌ಗಳ (healthy sandwich spread) ವಿವರ ಇಲ್ಲಿದೆ.

VISTARANEWS.COM


on

Healthy Sandwich Spread
Koo

ಸ್ಯಾಂಡ್‌ವಿಚ್‌ ಎಂಬ ತಿನಿಸು, ಬೆಳಗ್ಗೆ, ಮಧ್ಯಾಹ್ನ ಸಂಜೆ ರಾತ್ರಿಯೆನ್ನದೆ, ಯಾವುದೇ ಹೊತ್ತಿಗೂ ಹೊಟ್ಟೆ ತುಂಬಿಸಬಲ್ಲ ಒಂದು ಸುಲಭವಾದ ತಿನಿಸು. ಅಷ್ಟೇ ರುಚಿಯಾದ ತಿನಸು ಎಂಬುದರಲ್ಲೂ ಎರಡು ಮಾತಿಲ್ಲ. ಮಕ್ಕಳಿರುವ ಹೆತ್ತವರಿಗಂತೂ, ವಾರದಲ್ಲಿ ಎರಡು ಸಲವಾದರೂ ಮನೆಯಲ್ಲಿ ಸ್ಯಾಂಡ್‌ವಿಚ್‌ ಮಾಡಬೇಕಾದ ಪ್ರಸಂಗಗಳು ಇದ್ದೇ ಇರುತ್ತವೆ. ಕಚೇರಿ ಕೆಲಸಕ್ಕೆ ಬೇಗ ಹೋಗಬೇಕಾದಾಗ, ಅತೀವ ಕೆಲಸದ ಒತ್ತಡದಲ್ಲಿರುವಾಗ, ಅಡುಗೆ ಮಾಡಲು ಪುರುಸೊತ್ತು, ವ್ಯವಧಾನ ಇರದಿದ್ದಾಗ, ಬೇರೆ ಅಡುಗೆ ಮಾಡಲು ಗೊತ್ತಿಲ್ಲದೇ ಇದ್ದಾಗ, ಏನಾದರೂ ರುಚಿಯಾಗಿ ತಿನ್ನಬೇಕೆಂದು ಬಯಕೆಯಾದಾಗ, ಹೀಗೆ ನಾನಾ ಕಾರಣಗಳಲ್ಲಿ ಸ್ಯಾಂಡ್‌ವಿಚ್‌ ಎಂಬ ತಿನಿಸು ಅಡುಗೆಮನೆಯಲ್ಲಿ ಹೊತ್ತಲ್ಲದ ಹೊತ್ತಿನಲ್ಲೆಲ್ಲ ಪ್ರತ್ಯಕ್ಷವಾಗುತ್ತದೆ. ಬ್ರೆಡ್‌ ಆರೋಗ್ಯಕ್ಕೆ ಅಷ್ಟೇನೂ ಒಳ್ಳೆಯದಲ್ಲ ಎಂದು ತಿಳಿದಿದ್ದರೂ, ಬಹುತೇಕರ ಮನೆಗಳಲ್ಲಿ ಬ್ರೆಡ್‌ ಬಳಕೆ ಸಾಮಾನ್ಯ. ಈ ಬ್ರೆಡ್‌ ಒಳಗೆ ಮೆಯೋನೀಸ್‌ ಅಥವಾ ಇನ್ನೇನೋ ಅದರೊಳಗೆ ಸುರಿದು ಇನ್ನಷ್ಟು ಅನಾರೋಗ್ಯಕರ ವಾತಾವರಣವನ್ನು ಅಲ್ಲಿ ಸೃಷ್ಟಿಸುವುದು ಬೇಡವೆನಿಸಿದವರೆಲ್ರೂ, ಸ್ಯಾಂಡ್‌ವಿಚ್‌ನಲ್ಲೂ ಆರೋಗ್ಯಕರ ವಿಧಾನಗಳನ್ನು ಹುಡುಕುತ್ತಾರೆ. ಆದರಷ್ಟೂ ಬ್ರೆಡ್‌ ಜೊತೆಗೆ ಒಂದಷ್ಟು ತರಕಾರಿ, ಪ್ರೊಟೀನ್‌, ನೈಸರ್ಗಿಕ ಆಹಾರಗಳು ಹೊಟ್ಟೆ ಸೇರಲಿ ಎಂದು ಬಯಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಬಗೆಬಗೆಯ ಸ್ಪ್ರೆಡ್‌ಗಳು ರುಚಿಕರವಾಗಿ ಕಂಡರೂ, ಅದರಲ್ಲಿರುವ ಆರೋಗ್ಯಕರ ಅಂಶಗಳು ಅಷ್ಟಕ್ಕಷ್ಟೇ ಎಂಬ ಸತ್ಯವೂ ತಿಳಿದಿರುವುದರಿಂದ ಒಂದಿಷ್ಟಿ ಒಳ್ಳೆಯ ಆರೋಗ್ಯಕರ, ಹಾಗೂ ಕಡಿಮೆ ಕ್ಯಾಲರಿಯ ಮನೆಯಲ್ಲೇ ಮಾಡಬಹುದಾದ ಸ್ಯಾಂಡ್‌ವಿಚ್‌ ಸ್ಪ್ರೆಡ್‌ಗಳ ವಿವರ ಇಲ್ಲಿದೆ. ಸಾಕಷ್ಟು ಪೋಷಕಾಂಶವನ್ನು ನೀಡುವ ಈ ಆರೋಗ್ಯಕರ ಸ್ಪ್ರೆಡ್‌ಗಳು (healthy sandwich spread) ಇವು.

Hummus Sandwich Spread

ಹುಮಸ್‌

ಚೆನ್ನಾ, ಎಳ್ಳು ಹಾಗೂ ಆಲಿವ್‌ ಎಣ್ಣೆಯಿಂದ ಮಾಡಬಹುದಾದ ಹುಮಸ್‌, ಪ್ರೊಟೀನ್‌ನಿಂದ ಸಮೃದ್ಧವಾಗಿರುವ ಸ್ಪ್ರೆಡ್‌. ಇದರಲ್ಲಿ ದೇಹಕ್ಕೆ ಅಗತ್ಯವಾದ ಒಳ್ಳೆಯ ಕೊಬ್ಬಿದೆ. ಇದನ್ನು ತಯಾರಿಸಿ, ಸ್ಯಾಂಡ್‌ವಿಚ್‌ ಮಾಡುವಾಗ ಒಳಗೆ ಲೇಪಿಸಿ ಟೊಮೇಟೋ, ಸೌತೆಕಾಯಿ ಇತ್ಯಾದಿಗಳನ್ನೂ ಇಟ್ಟು ಸ್ಯಾಂಡ್‌ವಿಚ್‌ ಮಾಡಬಹುದು.

Avocado Sandwich Spread

ಬೆಣ್ಣೆಹಣ್ಣು

ಅವಕಾಡೋ ಅಥವಾ ಬೆಣ್ಣೆಹಣ್ಣನ್ನು ಸ್ಯಾಂಡ್‌ವಿಚ್‌ ಒಳಗೆ ಸ್ಪ್ರೆಡ್‌ನಂತೆ ಬಳಸಬಹುದು. ರುಚಿಯಾದ ಹಾಗೂ ಅಷ್ಟೇ ಪೋಷಕಾಂಶಯುಕ್ತವೂ ಆಗಿರುವ ಈ ಸ್ಪ್ರೆಡ್‌ ಮಾಡಲು ಬೆಣ್ಣೆಹಣ್ಣಿಗೆ ವಿವಿಧ ಮಿಕ್ಸ್‌ಡ್‌ ಹರ್ಬ್ಸ್‌ ಹಾಗೂ ಮಸಾಲೆಗಳನ್ನು ಬಳಸಬಹುದು. ಸಿಹಿಯಾದ ಹಾಗೂ ಸ್ಪೈಸೀಯಾದ ಸ್ಯಾಂಡ್‌ವಿಚ್‌ಗಳೆರಡಕ್ಕೂ ಇದು ಸೂಕ್ತವಾದ ಆಯ್ಕೆ.

Berries Sandwich Spread

ಬೆರ್ರಿಗಳು

ನಿಮಗೆ ಅಥವಾ ನಿಮ್ಮ ಮಕ್ಕಳಿಗೆ ಸಿಹಿಯಾದ ಸ್ಯಾಂಡ್‌ವಿಚ್‌ ಇಷ್ಟವಾಗುತ್ತಿದ್ದರೆ, ಮಾರುಕಟ್ಟೆಯಿಂದ ಜ್ಯಾಮ್‌ ತಂದು ಸುರಿಯುವ ಬದಲು ಬೆರ್ರಿ ಹಣ್ಣುಗಳನ್ನು ಮ್ಯಾಶ್‌ ಮಾಡಿ ಬಳಸಬಹುದು. ನಿಮಗಿಷ್ಟವಾದ ಬೆರ್ರಿ ಹಣ್ಣುಗಳನ್ನು ಕೊಂಡು ತಂದು ಅವನ್ನೆಲ್ಲ ಮ್ಯಾಶ್‌ ಮಾಡಿ, ಸ್ವಲ್ಪ ಜೇನುತುಪ್ಪ ಸೇರಿಸಿ ಪೇಸ್ಟ್‌ ತರಹ ಮಾಡಿ, ನೈಸರ್ಗಿಕವಾದ ಸಿಹಿಯಾದ ಸ್ಯಾಂಡ್‌ವಿಚ್‌ಗಳನ್ನು ಮಾಡಬಹುದು. ಬೆಳಗಿನ ಹಗುರವಾದ ಉಪಹಾರಕ್ಕೆ ಇದನ್ನು ಮಾಡಬಹುದು.

Peanut Butter Sandwich Spread

ಪೀನಟ್‌ ಬಟರ್‌

ಮಾರುಕಟ್ಟೆಯಿಂದ ದೊಡ್ಡ ಜಾರ್‌ನಲ್ಲಿ ಪೀನಟ್‌ ಬಟರ್‌ ತಂದು ಸ್ಯಾಂಡ್‌ವಿಚ್‌ಗೆ ಸ್ಪ್ರೆಡ್‌ ಮಾಡಿ ಕೊಡುವ ಬದಲು ನೀವೇ ಏಕೆ ಪೀನಟ್‌ ಬಟರನ್ನು ಮನೆಯಲ್ಲಿಯೇ ಮಾಡಬಾರದು? ನೆಲಗಡಲೆಯಿಂದ ಪೀನಟ್‌ ಬಟರ್‌ ಮಾಡಿ ಅದರ ಜೊತೆಗೆ ಬಾಳೆಹಣ್ಣಿನ ತುಣುಕುಗಳನ್ನೂ ಸೇರಿಸಿ ಅದನ್ನು ಸ್ಯಾಂಡ್‌ವಿಚ್‌ ಸ್ಪ್ರೆಡ್‌ ಆಗಿ ಬಳಸಬಹುದು. ಬೇಕಾದರೆ ಜೇನುತುಪ್ಪವನ್ನೂ ಸೇರಿಸಬಹುದು.

Paneer Mayonnaise Sandwich Spread

ಪನೀರ್‌ನ ಮೆಯೋನೀಸ್‌

ನಿಮಗೆ ಮೆಯೋನೀಸ್‌ ಅತ್ಯಂತ ಪ್ರಿಯವಾದ ಸ್ಯಾಂಡ್‌ವಿಚ್‌ ಸ್ಪ್ರೆಡ್‌ ಆಗಿದ್ದರೆ, ನೀವು ಪನೀರ್‌ ಅಥವಾ ಮೊಸರಿನಿಂದ ಇಂತಹ ಸ್ಯಾಂಡ್‌ವಿಚ್‌ ಸ್ಪ್ರೆಡ್‌ ಮಾಡಬಹುದು. ಯಾವುದೇ ಕಷ್ಟವಿಲ್ಲದ, ರುಚಿಯಲ್ಲೂ ರಾಜಿ ಮಾಡಿಕೊಳ್ಳದ ಈ ಸ್ಪ್ರೆಡ್‌ ಮಕ್ಕಳಿಗೂ ಬಹಳ ಪ್ರಿಯವಾಗುತ್ತದೆ. ಮೊಸರಿನ ನೀರನ್ನು ಸಂಪೂರ್ಣವಾಗಿ ಒಂದು ಬಟ್ಟೆಯಲ್ಲಿ ಹಿಂಡಿ ತೆಗೆದು ಅಥವಾ ಪನೀರ್‌ರನ್ನು ಚೆನ್ನಾಗಿ ಮ್ಯಾಶ್‌ ಮಾಡಿ ಅದಕ್ಕೆ ಒಂದಿಷ್ಟು ನೆನೆಸಿದ ಗೋಡಂಬಿ ಹಾಗೂ ಒಂದು ಹಸಿ ಬೆಳ್ಳುಳ್ಳಿಯನ್ನು ಹಾಕಿ ಮಿಕ್ಸಿಯಲ್ಲಿ ರುಬ್ಬಿಕೊಂಡು ಪೇಸ್ಟ್‌ ತಯಾರಿಸಿ. ರುಚಿಗೆ ತಕ್ಕಷ್ಟು ಉಪ್ಪು, ಮಿಕ್ಸ್ಡ್‌ ಹರ್ಬ್ಸ್‌ ಸೇರಿಸಿದರೆ, ಮಾರುಕಟ್ಟೆಯ ಮೆಯೋನೀಸ್‌ಗಳೆಲ್ಲ ಮಕಾಡೆ ಮಲಗಬೇಕು!

ಇದನ್ನೂ ಓದಿ: Heatwave Effect: ಬೇಸಿಗೆಗೂ ಕಣ್ಣಿನ ಸಮಸ್ಯೆಗೂ ಇದೆ ನಂಟು!

Continue Reading

ಆರೋಗ್ಯ

Health Tips For Rainy Season: ಮಳೆಗಾಲ ಶುರುವಾಗಿದೆ, ಅನಾರೋಗ್ಯಕ್ಕೆ ತುತ್ತಾಗದಿರಲು ಈ ಸಲಹೆ ಪಾಲಿಸಿ

ಮಳೆಗಾಲದಲ್ಲಿ ಆರೋಗ್ಯವನ್ನು (Health Tips For Rainy Season) ಕಾಪಾಡಿಕೊಳ್ಳುವುದು ಬಹುಮುಖ್ಯ,. ಇದಕ್ಕಾಗಿ ಕೆಲವೊಂದು ಸಲಹೆಗಳನ್ನು ಪಾಲಿಸುವುದು ಒಳ್ಳೆಯದು. ಆಹಾರ ಮತ್ತು ಆರೋಗ್ಯದ ಕಾಳಜಿ ಹೆಚ್ಚಾಗಿದ್ದರೆ ಈ ಬಾರಿ ಮಳೆಗಾಲವನ್ನು ಸಂತೋಷದಿಂದ ಕಳೆಯಬಹುದು. ಮಳೆಗಾಲದಲ್ಲಿ ಆರೋಗ್ಯವಾಗಿರಲು ಏನು ಮಾಡಬೇಕು? ಇಲ್ಲಿದೆ ಉಪಯುಕ್ತ ಸಲಹೆ.

VISTARANEWS.COM


on

By

Man
Koo

ಮಳೆ ಆರಂಭವಾದಾಗ ಬಿಸಿಬಿಸಿ ಪಕೋಡ, ಚಹಾ, ಕಾಫಿ ಎಲ್ಲವೂ ನೆನಪಾಗುತ್ತದೆ. ಆದರೆ ಮಳೆಗಾಲ (Health Tips For Rainy Season) ಎಂದರೆ ನಾವು ಆರೋಗ್ಯದ (health) ಜೊತೆಜೊತೆಗೆ ಆಹಾರದ (food) ಬಗ್ಗೆಯೂ ಎಚ್ಚರವಹಿಸಬೇಕು. ಮಳೆಗಾಲ (Rainy Season) ಪ್ರಕೃತಿಯಲ್ಲಿ ಉಲ್ಲಾಸಕರ ಅನುಭವವನ್ನು ತುಂಬುವ ಸಮಯ. ಈ ಋತು ಎಲ್ಲರಿಗೂ ಅಚ್ಚುಮೆಚ್ಚಿನದ್ದಾಗಿದೆ.

ಮಳೆಗಾಲದ ಸಮಯದಲ್ಲಿ ಆರೋಗ್ಯದ ಬಗ್ಗೆ ಜಾಗೃತರಾಗಿದ್ದರೆ ರೋಗ ಮತ್ತು ಸೋಂಕುಗಳಿಂದ ದೂರವಿರಬಹುದು. ಇದಕ್ಕೆ ಸಹಾಯ ಮಾಡಲು ಟಾಪ್ 10 ಸಲಹೆಗಳು ಇಲ್ಲಿವೆ.

ಆರೋಗ್ಯದ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆರೋಗ್ಯ ಸೇವೆಗಳ ತಜ್ಞರು ಹೇಳುವ ಮಳೆಗಾಲದಲ್ಲಿ ಪಾಲಿಸಬೇಕಾದ ಕೆಲವು ವಿಚಾರಗಳ ಬಗ್ಗೆ ತಿಳಿದುಕೊಳ್ಳೋಣ.


ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ

ಇದು ಮಳೆಗಾಲದಲ್ಲಿ ನಾವು ತೆಗೆದುಕೊಳ್ಳಬೇಕಾದ ಮೊದಲ ಹೆಜ್ಜೆ. ರೋಗನಿರೋಧಕ ಶಕ್ತಿಯ ಕೊರತೆಯಿಂದಾಗಿ ಮಳೆಗಾಲದಲ್ಲಿ ಹೆಚ್ಚಿನ ರೋಗ ಮತ್ತು ಸೋಂಕುಗಳು ಹರಡುತ್ತವೆ. ಅಲ್ಲದೇ ವಾತಾವರಣದಲ್ಲಿ ಅತಿಯಾದ ತೇವಾಂಶದ ಪರಿಣಾಮವಾಗಿ ಕೆಮ್ಮು, ಶೀತ ಮತ್ತು ಜ್ವರ ಕಾಣಿಸಿಕೊಳ್ಳುತ್ತದೆ. ಮಳೆಗಾಲದಲ್ಲಿ ಸಂರಕ್ಷಿತವಾಗಿರಲು ಸೂಪ್‌ಗೆ ಬೆಳ್ಳುಳ್ಳಿಯನ್ನು ಸೇರಿಸುವುದು ಮತ್ತು ಚಹಾಕ್ಕೆ ಶುಂಠಿಯನ್ನು ಸೇರಿಸುವುದು ಮೊದಲಾದವುಗಳನ್ನು ಪ್ರಯತ್ನಿಸಬಹುದು.

ಕಹಿ ತರಕಾರಿಗಳನ್ನು ಸೇವಿಸಿ

ತಜ್ಞರು ಸೂಚಿಸುವಂತೆ ಇದು ಅತ್ಯಗತ್ಯ ಸಲಹೆಯಾಗಿದೆ. ಕೆಲವು ಸಂಸ್ಕೃತಿಯಲ್ಲಿ ಹಾಗಲಕಾಯಿಯಂತಹ ತರಕಾರಿಗಳನ್ನು ತಿನ್ನುವುದು ವಿಶೇಷವಾಗಿ ಮಳೆಗಾಲದಲ್ಲಿ ಸಂಪ್ರದಾಯದ ಒಂದು ಭಾಗವಾಗಿದೆ. ಅಂತಹ ತರಕಾರಿಗಳಿಂದ ನೀವು ಪಡೆಯುವ ಹಲವಾರು ಪ್ರಯೋಜನಗಳಿವೆ ಮತ್ತು ಆದ್ದರಿಂದ ನಿಮ್ಮ ದೈನಂದಿನ ಊಟದಲ್ಲಿ ಅದನ್ನು ಸೇರಿಸಿಕೊಳ್ಳಬೇಕು.

ಕುದಿಸಿದ ನೀರು ಕುಡಿಯಿರಿ

ಮಳೆಗಾಲದಲ್ಲಿ ಕಲುಷಿತ ನೀರಿನಿಂದ ಹಲವಾರು ರೋಗಗಳು ಬರಬಹುದು. ಆದ್ದರಿಂದ ಶುದ್ಧ ಮತ್ತು ಸುರಕ್ಷಿತ ನೀರನ್ನು ಮಾತ್ರ ಕುಡಿಯುತ್ತೀರಿ ಎಂಬುದನ್ನು ಖಚಿತಪಡಿಸಿಕೊಳ್ಳಿ. ಕೆಲವೊಂದು ಕಾಯಿಲೆಗಳನ್ನು ತೊಡೆದುಹಾಕಲು ಮನೆಯಲ್ಲಿ ಕುದಿಸಿ ಆರಿಸಿದ ನೀರು ಬಳಸುವುದು ಉತ್ತಮ ಮಾರ್ಗವಾಗಿದೆ.


ಹಾಲಿನ ಉತ್ಪನ್ನಗಳನ್ನು ಸೇವಿಸಿ

ಮಳೆಗಾಲದಲ್ಲಿ ಹಾಲು ಅಜೀರ್ಣವನ್ನು ಉಂಟುಮಾಡಬಹುದು. ಇದಕ್ಕೆ ಪರ್ಯಾಯವಾಗಿ ಕಾಟೇಜ್ ಚೀಸ್, ತಾಜಾ ಮೊಸರು ಮತ್ತು ಮಜ್ಜಿಗೆಯಂತಹ ಇತರ ಡೈರಿ ಉತ್ಪನ್ನಗಳನ್ನು ಆಯ್ಕೆ ಮಾಡಬಹುದು. ಈ ಉತ್ಪನ್ನಗಳು ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಗಿಡಮೂಲಿಕೆ ಚಹಾಗಳನ್ನು ಸೇರಿಸಿ

ಗಿಡಮೂಲಿಕೆಯ ಚಹಾ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಉತ್ತಮ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಚಹಾಕ್ಕೆ ಬದಲಾಗಿ ಗಿಡಮೂಲಿಕೆ ಚಹಾಗಳಿಗೆ ಬದಲಾಯಿಸುವ ಸಮಯ. ಇದು ರೋಗನಿರೋಧಕ ಶಕ್ತಿ ಮತ್ತು ಹಸಿವನ್ನು ಹೆಚ್ಚಿಸುವುದು. ಒಂದೆರಡು ದಿನಗಳಲ್ಲೇ ಇದರ ಪರಿಣಾಮ ಗಮನಿಸಬಹುದು.

ಹಣ್ಣುಗಳ ಆಯ್ಕೆ ಮಾಡುವಾಗ ಜಾಗರೂಕರಾಗಿರಿ

ಎಲ್ಲಾ ಹಣ್ಣುಗಳನ್ನು ತಿನ್ನುವುದು ಉತ್ತಮ ಅಭ್ಯಾಸವಾಗಿದೆ. ಯಾಕೆಂದರೆ ಪ್ರತಿಯೊಂದರಿಂದಲೂ ಬಹು ಪೋಷಕಾಂಶಗಳೊಂದಿಗೆ ಪೂರ್ಣ ಪೋಷಣೆಯನ್ನು ಪಡೆಯುತ್ತೀರಿ. ಆದರೂ ಮಳೆಗಾಲದಲ್ಲಿ ಕಲ್ಲಂಗಡಿ ಸೇರಿದಂತೆ ಕೆಲವು ನಿರ್ದಿಷ್ಟ ಹಣ್ಣುಗಳನ್ನು ತ್ಯಜಿಸುವುದು ಒಳ್ಳೆಯದು. ಪೇರಳೆ, ಮಾವಿನ ಹಣ್ಣು, ಸೇಬು, ದಾಳಿಂಬೆ ಮೊದಲಾದ ಹಣ್ಣುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು.

ಮಸಾಲೆಯುಕ್ತ ಆಹಾರದಿಂದ ದೂರವಿರಿ

ಮಸಾಲೆಯುಕ್ತ ಆಹಾರಕ್ಕಾಗಿ ಹಂಬಲಿಸುತ್ತಿದ್ದರೆ ಮಳೆಗಾಲದಲ್ಲಿ ಅದನ್ನು ಸೇವಿಸುವುದನ್ನು ನಿರ್ಬಂಧಿಸಬೇಕಾದ ಸಮಯವಾಗಿದೆ. ಇಂತಹ ಆಹಾರಗಳು ಚರ್ಮದ ಅಲರ್ಜಿ ಮತ್ತು ಕಿರಿಕಿರಿಯನ್ನು ಉಂಟು ಮಾಡುತ್ತದೆ. ಬದಲಾಗಿ ಆರೋಗ್ಯಕರ ಸೂಪ್‌ ಮತ್ತು ಕಡಿಮೆ ಅಥವಾ ಮಧ್ಯಮ ಮಸಾಲೆಯುಕ್ತ ಬೆಚ್ಚಗಿನ ಆಹಾರವನ್ನು ಸೇವಿಸಿ.

ನೀರು ನಿಲ್ಲದಂತೆ ಮಾಡಿ

ಮನೆಯ ಸುತ್ತಮುತ್ತ ಮಳೆಯಿಂದ ನಿಂತ ನೀರು ತೀವ್ರ ರೋಗಗಳಿಗೆ ಕಾರಣವಾಗಬಹುದು. ಆದ್ದರಿಂದ ಬಳಕೆಯಾಗದ ಟ್ಯಾಂಕ್, ವಾಟರ್ ಕೂಲರ್ ಮತ್ತು ಹೂವಿನ ಕುಂಡಗಳೊಳಗೆ ನೀರು ನಿಲ್ಲದಂತೆ ಮಾಡಿ. ನೀರಿನ ಮೇಲ್ಮೈಗಳನ್ನು ಸ್ವಚ್ಛವಾಗಿ ಮತ್ತು ಶುಷ್ಕವಾಗಿ ಇಟ್ಟುಕೊಳ್ಳುವುದು ಅಪಾರ ಪ್ರಯೋಜನವನ್ನು ನೀಡುತ್ತದೆ.

ಇದನ್ನೂ ಓದಿ: Hair Growth Tips: ಕೂದಲು ಉದುರುವುದಕ್ಕೆ ಬೀಟಾ ಕ್ಯಾರೊಟಿನ್‌ ಮದ್ದು!


ಸೊಳ್ಳೆ ನಿವಾರಕವನ್ನು ಬಳಸಿ

ಮಳೆಗಾಲದಲ್ಲಿ ಸೊಳ್ಳೆಗಳು ವೇಗವಾಗಿ ಬೆಳೆಯುತ್ತವೆ ಮತ್ತು ಇವು ದೊಡ್ಡ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡಬಹುದು. ಈ ಸಮಯದಲ್ಲಿ ರೂಮ್ ಫ್ರೆಶ್ನರ್, ಸೌಮ್ಯವಾದ ಮಾರ್ಜಕ ಮತ್ತು ಸುಗಂಧ ದ್ರವ್ಯಗಳಂತಹ ಸೊಳ್ಳೆ ನಿವಾರಕಗಳು ಅತ್ಯಗತ್ಯವಾಗಿರುತ್ತದೆ.

ಛತ್ರಿ ಮತ್ತು ರೈನ್‌ಕೋಟ್‌ಗಳನ್ನು ಒಯ್ಯಿರಿ

ಮನೆಯಿಂದ ಹೊರಗೆ ಹೋಗುವಾಗ ಮಳೆಗಾಲದಲ್ಲಿ ಅಗತ್ಯವಿರುವ ಛತ್ರಿ ಅಥವಾ ರೈನ್ ಕೋಟ್ ಅಥವಾ ಎರಡನ್ನೂ ಒಯ್ಯಲು ಪ್ರಯತ್ನಿಸಿ. ಶೀತ, ಕೆಮ್ಮು, ಜ್ವರ ಮತ್ತು ಜ್ವರದಂತಹ ಕಾಯಿಲೆಗಳನ್ನು ತಪ್ಪಿಸಲು ನಿಮ್ಮನ್ನು ಶುಷ್ಕ, ತಾಜಾ ಮತ್ತು ಸ್ವಚ್ಛವಾಗಿರಿಸಿಕೊಳ್ಳುವುದು ಉತ್ತಮ ಮಾರ್ಗವಾಗಿದೆ.

Continue Reading

ಆರೋಗ್ಯ

Heatwave Effect: ಬೇಸಿಗೆಗೂ ಕಣ್ಣಿನ ಸಮಸ್ಯೆಗೂ ಇದೆ ನಂಟು!

ಬೇಸಿಗೆಯಿನ್ನೂ ಮುಗಿದಿಲ್ಲ. ದೆಹೆಲಿಯಲ್ಲಿ ತಾಪಮಾನ 50 ಡಿ.ಸೆ. ದಾಟಿದೆ. ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವಂತೆ ಆರೋಗ್ಯ ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಉಷ್ಣತೆಗೂ ಕಣ್ಣಿಗೂ ಏನು ಸಂಬಂಧ? ಇದರಿಂದ ಕಣ್ಣುಗಳಿಗೆ ಆಗುವ ಹಾನಿಯೇನು? ಹಾಗಾಗದಂತೆ ಕಾಪಾಡಿಕೊಳ್ಳುವುದು ಹೇಗೆ- ಇತ್ಯಾದಿ ವಿವರಗಳು (Heatwave Effect) ಇಲ್ಲಿವೆ.

VISTARANEWS.COM


on

Heatwave Effect
Koo

ದೆಹೆಲಿಯಲ್ಲಿ ತಾಪಮಾನ (Heatwave Effect) 50 ಡಿಗ್ರಿ ಸೆಲ್ಶಿಯಸ್‌ ದಾಟಿಯಾಗಿದೆ. ದೇಶದ ಇನ್ನೂ ಕೆಲವೆಡೆಗಳಲ್ಲಿ ತಾಪಮಾನ ಗಗನಕ್ಕೇರಿದೆ. ದಕ್ಷಿಣದ ರಾಜ್ಯಗಳು ಮುಂಗಾರಿನ ಪ್ರವೇಶಕ್ಕೆ ಅಣಿಯಾಗುತ್ತಿದ್ದರೆ, ಉತ್ತರ ಭಾರತದಲ್ಲಿನ್ನೂ ಉಷ್ಣತೆಯ ಹೊಡೆತ ನಿಂತಿಲ್ಲ. ಬಿಸಿಲಿಗೆ ಎಚ್ಚರ ತಪ್ಪುವುದು, ನಿರ್ಜಲೀಕರಣದಿಂದ ಪ್ರಾಣಾಪಾಯಕ್ಕೆ ಒಳಗಾಗುವುದು ನಿಂತಿಲ್ಲ. ಮಾತ್ರವಲ್ಲ, ಕಣ್ಣಿನ ಪಾರ್ಶ್ವವಾಯುವಿಗೆ ತುತ್ತಾಗುವ ಪ್ರಕರಣಗಳೂ ವರದಿಯಾಗುತ್ತಿವೆ. ಏನು ಹಾಗೆಂದರೆ? ಬಿಸಿಲಿ ಹೆಚ್ಚಾದರೆ ಕಣ್ಣಿಗೆ ಏನಾಗುತ್ತದೆ?

Protection From Heatwave

ಏನು ನಂಟು?

ಅತಿಯಾದ ಬಿಸಿಲಿನ ಅಥವಾ ಉಷ್ಣತೆಯ ಹೊಡೆತವೇ ಈ ಸಮಸ್ಯೆಗೆ ನೇರವಾದ ಕಾರಣವಲ್ಲ. ಇದರಿಂದಾಗಿ ಉಂಟಾಗುವ ನಿರ್ಜಲೀಕರಣದಿಂದ ರಕ್ತ ಮಂದವಾಗುವುದು ಅಥವಾ ಹೆಪ್ಪುಗಟ್ಟುವಂತಾಗಬಹುದು. ಹೀಗೆ ಹೆಪ್ಪುಗಟ್ಟಿದ ರಕ್ತವು ಕಣ್ಣಿನ ಸಣ್ಣ ರಕ್ತನಾಳಗಳಲ್ಲಿ ಜಮೆಯಾಗಿ, ಕಣ್ಣಿಗೆ ಅಗತ್ಯವಾಗಿ ಬೇಕಾದ ರಕ್ತಸಂಚಾರವನ್ನು ತಡೆಯುತ್ತದೆ. ಇದರಿಂದ ಪಾರ್ಶ್ವವಾಯುವಿಗೆ ಕಾರಣವಾಗಿ, ಅಕ್ಯುಲರ್‌ ಸ್ಟ್ರೋಕ್‌ ಎಂದು ಕರೆಯಲಾಗುವ ಈ ಸಮಸ್ಯೆಯಿಂದ ದೃಷ್ಟಿಹೀನತೆಯೂ ಉಂಟಾಗಬಹುದು. ರಕ್ತ ಹೆಪ್ಪುಗಟ್ಟುವುದರಿಂದ ನಾಳಗಳು ಮುಚ್ಚಿಹೋಗಿ ಅಥವಾ ರಕ್ತಸಂಚಾರ ಸರಾಗ ಆಗದಿರುವಾಗ, ಮೆದುಳಿನಲ್ಲಿ ಸಂಭವಿಸುವ ಪಾರ್ಶ್ವವಾಯುವಿನ ಮಾದರಿಯಲ್ಲಿಯೇ ಇದು ಕಣ್ಣಿನಲ್ಲಿ ಸಂಭವಿಸುವಂಥದ್ದು. ಆಪ್ಟಿಕ್‌ ನರಗಳ ಮುಂಭಾಗಕ್ಕೆ ರಕ್ತಸಂಚಾರ ಇಲ್ಲದಿರುವಾಗ ಈ ತೊಂದರೆ ತಲೆದೋರುತ್ತದೆ. ಅಂದರೆ ಆಪ್ಟಿಕ್‌ ನರಗಳಿಗೆ ರಕ್ತ ಸಂಚಾರ ನಿಂತಾಗ ಹೀಗಾಗುತ್ತದೆ.

ಲಕ್ಷಣಗಳೇನು?

ಮೊದಲಿಗೆ ನಿರ್ಜಲೀಕರಣದ ಲಕ್ಷಣಗಳು ಕಂಡುಬರಬಹುದು. ಕೆಲವೊಮ್ಮೆ ಅದೂ ಕಾಣುವುದಿಲ್ಲ. ಬದಲಿಗೆ, ಯಾವುದೇ ನೋವಿಲ್ಲದೆ ಕಣ್ಣಿನ ಬೆಳಕು ಇದ್ದಕ್ಕಿದ್ದಂತೆ ಆರಬಹುದು. ಕಣ್ಣು ಪೂರ್ಣವಾಗಿ ಕಾಣದೆ ಹೋಗಬಹುದು ಅಥವಾ ಅರ್ಧ ಮಾತ್ರವೇ ಕಾಣಿಸಬಹುದು. ದೃಷ್ಟಿ ಮಸುಕಾಗಬಹುದು, ನೆರಳು ಬಿದ್ದಂತೆ ಕಾಣಬಹುದು, ಎದುರಿಗಿನ ವಸ್ತುವಿನ ನಡುವಿನ ಭಾಗ ಕಾಣದೆ ಕೇವಲ ಹೊರಗಿನ ಆವರಣವಷ್ಟೇ ಕಾಣಬಹುದು. ಕಪ್ಪಾಗಿ ಅಥವಾ ಅಸ್ಪಷ್ಟವಾಗಿ ಕಾಣಬಹುದು.

What is a heatwave?

ಏನು ಮಾಡಬೇಕು?

ಇಂಥ ಸಂದರ್ಭದಲ್ಲಿ ತ್ವರಿತವಾಗಿ ವೈದ್ಯರನ್ನು ಕಾಣಬೇಕು. ತಡಮಾಡಿದರೆ ದೃಷ್ಟಿಯನ್ನು ಶಾಶ್ವತವಾಗಿ ಕಳೆದುಕೊಳ್ಳುವ ಸಾಧ್ಯತೆಯಿದೆ. ಹೆಪ್ಪುಗಟ್ಟಿರುವ ರಕ್ತಕಣಗಳನ್ನು ಕರಗಿಸಲು ವೈದ್ಯರು ತುರ್ತಾಗಿ ಔಷಧಿ ನೀಡುತ್ತಾರೆ. ರೆಟಿನಾಗೆ ಶಾಶ್ವತ ಹಾನಿ ಆಗದಂತೆ, ದೇಹಕ್ಕೆ ಹೆಚ್ಚಿನ ಪ್ರಮಾಣದ ಆಮ್ಲಜನಕವನ್ನು ಪೂರೈಕೆ ಮಾಡುವ ಅಗತ್ಯ ಬರಬಹುದು. ಹೃದಯ ಸಮಸ್ಯೆಗಳಿದ್ದರೆ, ರಕ್ತ ನೀರಾಗಿಸುವ ಬಗ್ಗೆ ಮತ್ತು ರಕ್ತದೊತ್ತಡವನ್ನು ನಿರ್ವಹಿಸುವ ಬಗ್ಗೆ ಇನ್ನಷ್ಟು ಎಚ್ಚರಿಕೆಯನ್ನು ವೈದ್ಯರು ತೆಗೆದುಕೊಳ್ಳಬೇಕಾಗಬಹುದು.

ಇದನ್ನೂ ಓದಿ: Nosebleeds In Summer: ಬೇಸಿಗೆಯ ತಾಪಕ್ಕೆ ಮೂಗಿನಲ್ಲಿ ರಕ್ತಸ್ರಾವವೇ? ತಡೆಯಲು ಇಲ್ಲಿವೆ ಸರಳ ಉಪಾಯ

ತಡೆಯುವುದು ಹೇಗೆ?

ಉಷ್ಣತೆ ತೀವ್ರವಾಗಿರುವಾಗ, ತಾಪಮಾನ 42 ಡಿಗ್ರಿ ಸೆಲ್ಶಿಯಸ್‌ ದಾಟಿದರೆ, ಮನೆಯಿಂದ ಹೊರಗೆ ಹೋಗುವುದು ಅಪಾಯ ತರಬಹುದು. ಮನೆಯೊಳಗೇ ಇದ್ದರೂ ಚೆನ್ನಾಗಿ ನೀರು ಕುಡಿಯುವುದು ಕಡ್ಡಾಯ. ಬಿಸಿಲಿನಲ್ಲಿದ್ದರಂತೂ ನಿರ್ಜಲೀಕರಣದ ಅಪಾಯದಿಂದ ಪಾರಾಗಲು ಆ ಕುರಿತ ಮಾರ್ಗಸೂಚಿಯನ್ನು ಪಾಲಿಸದಿದ್ದರೆ ಪ್ರಾಣಾಪಾಯವೇ ಉಂಟಾಗಬಹುದು. ಜೀವನಶೈಲಿಯನ್ನು ಆರೋಗ್ಯವಾಗಿ ಇರಿಸಿಕೊಳ್ಳಿ. ಬೇಸಿಗೆಗೆ ಸೂಕ್ತವಾದ ಆಹಾರವನ್ನೇ ಸೇವಿಸಿ. ಎಣ್ಣೆ-ಜಿಡ್ಡಿನ ಆಹಾರಗಳು, ಕರಿದ ಪದಾರ್ಥಗಳು ಬೇಡ. ಋತುಮಾನದ ಹಣ್ಣು-ತರಕಾರಿ ಮತ್ತು ಡೇರಿ ಉತ್ಪನ್ನಗಳು ಆಹಾರದಲ್ಲಿ ಸೇರಿರಲಿ. ನೀರು ಕುಡಿಯುವುದಕ್ಕೆ ಬೋರು ಎನ್ನುವಂಥ ನೆವಗಳನ್ನು ಹೇಳಿ ಯದ್ವಾತದ್ವಾ ಫ್ರೂಟ್‌ಜ್ಯೂಸ್‌ ಗಳನ್ನು ಕುಡಿಯಬೇಡಿ. ಇದರಿಂದ ರಕ್ತದಲ್ಲಿನ ಸಕ್ಕರೆಯಂಶ ಹೆಚ್ಚಾಗಿ, ಮಧುಮೇಹವಿದ್ದರೆ ಕಣ್ಣಿನ ಸಮಸ್ಯೆ ಬರಬಹುದು. ಮಧುಮೇಹ, ಹೃದ್ರೋಗಗಳಿದ್ದರೆ ಕಾಲಕಾಲಕ್ಕೆ ಕಣ್ಣಿನ ತಪಾಸಣೆಯನ್ನೂ ಮಾಡಿಸಿಕೊಳ್ಳಿ. ಧೂಮಪಾನ ಬೇಡ, ಆಲ್ಕೋಹಾಲ್‌ ನಿರ್ಜಲೀಕರಣವನ್ನು ಹೆಚ್ಚಿಸುತ್ತದೆ ಎನ್ನುವುದನ್ನು ನೆನಪಿಡಿ.

Continue Reading

ಆರೋಗ್ಯ

World Milk Day: ಹಾಲಿಗೊಂದು ದಿನವೇ ಬೇಕೆಂದಿಲ್ಲ, ವರ್ಷವಿಡೀ ಆಚರಿಸಬಹುದು!

ಹಾಲು ಸರ್ವರಿಗೂ ಸಲ್ಲುವಂಥ ಆಹಾರ. ವಿಶ್ವದ ಎಲ್ಲ ದೇಶಗಳಲ್ಲಿ ಇದನ್ನು ಒಂದಿಲ್ಲೊಂದು ರೀತಿಯಲ್ಲಿ ನಿಶ್ಚಿತವಾಗಿ ಬಳಸುತ್ತಾರೆ. ಹಾಗಾಗಿಯೇ ಜೂನ್‌ ತಿಂಗಳ ಮೊದಲ ದಿನವನ್ನು ವಿಶ್ವ ಕ್ಷೀರ ದಿನವೆಂದು ಗುರುತಿಸಿದ್ದಾರೆ. ಆದರೆ ಅದೇ ದಿನಕ್ಕೆ ಕಾಯಬೇಕಿಲ್ಲ, ವರ್ಷವಿಡೀ ಕ್ಷೀರ ದಿನವನ್ನು (World Milk Day) ಆಚರಿಸಬಹುದು.

VISTARANEWS.COM


on

World Milk Day
Koo

ಹಾಲನ್ನೇಕೆ ಕುಡಿಯಬೇಕು ಎಂದು ಕೇಳಿದರೆ ಯಾರಾದರೂ ನಕ್ಕಾರು. ಹಾಗಂತ ನಗುವವರಿಗೆಲ್ಲ ಹಾಲಿನ ಸದ್ಗುಣಗಳು ಗೊತ್ತಿರುತ್ತವೆ ಎಂದಲ್ಲ. ಆದರೆ ಹಾಲು ಪೌಷ್ಟಿಕವಾದ ಆಹಾರ ಎಂಬುದನ್ನಂತೂ ಎಲ್ಲರೂ ಕೇಳಿ ತಿಳಿದಿರುತ್ತಾರೆ. ಏನಿವೆ ಅಂಥ ಪೌಷ್ಟಿಕಾಂಶಗಳು ಹಾಲಿನಲ್ಲಿ? ಎಲ್ಲರೂ ಹಾಲನ್ನು ಕುಡಿಯುವುದಕ್ಕೆ ಮಾತ್ರ ಬಳಸುತ್ತಾರೆಂದಿಲ್ಲ. ಮೊಸರು, ಬೆಣ್ಣೆ, ತುಪ್ಪ, ಚೀಸ್‌, ಪನೀರ್‌ಗಳನ್ನು ಮಾಡಬಹುದು. ಹಾಲಿನಲ್ಲಿ ಸಿಹಿಗಳನ್ನು ತಯಾರಿಸಬಹುದು, ಶೇಖ್‌ ಮತ್ತು ಸ್ಮೂದಿಗಳಿಗೆ ಬಳಸಬಹುದು, ಸೀರಿಯಲ್‌ಗಳಿಗೆ ಹಾಕಿ ತಿನ್ನಬಹುದು. ಅಂತೂ ಹಾಲು ಎಲ್ಲರಿಗೂ ಎಲ್ಲ ಹೊತ್ತಿಗೂ ಸಲ್ಲುವಂಥದ್ದು. ಹಾಗಾಗಿ ಜೂನ್‌ ತಿಂಗಳ ಮೊದಲ ದಿನವನ್ನು ವಿಶ್ವ ಕ್ಷೀರ ದಿನವೆಂದು ಗುರುತಿಸಿದ್ದರೂ, ನಾವು ವರ್ಷವಿಡೀ ಕ್ಷೀರ ದಿನವನ್ನು (World Milk Day) ಆಚರಿಸಬಹುದು.

glass of milk

ಕ್ಯಾಲ್ಶಿಯಂ ಹೇರಳ

ನಮ್ಮ ಮೂಳೆಗಳು, ಹಲ್ಲುಗಳೆಲ್ಲ ಬಲಯುತವಾಗಿ ಇರಬೇಕೆಂದರೆ ಕ್ಯಾಲ್ಶಿಯಂ ಬೇಕು. ಕೇವಲ ಅದಕ್ಕಷ್ಟೇ ಅಲ್ಲ, ನಾವು ಮಾಡುವ ಪ್ರತಿಯೊಂದು ದೈಹಿಕ ಚಟುವಟಿಕೆಗೂ ಕ್ಯಾಲ್ಶಿಯಂ ಬಲದ ಅಗತ್ಯವಿದೆ. ಮೂಳೆಗಳು ಟೊಳ್ಳಾಗದಂತೆ, ಅವುಗಳ ಸಾಂದ್ರತೆ ಕಾಪಾಡಿಕೊಳ್ಳುವುದಕ್ಕೂ ಇದು ಬೇಕು. ಹಾಗಾಗಿ ದಿನಕ್ಕೆ 150 ಎಂ.ಎಲ್‌. ಗ್ಲಾಸ್‌ನಲ್ಲಿ ಮೂರು ಗ್ಲಾಸ್‌ ಹಾಲು ನಮ್ಮ ನಿತ್ಯದ ಕ್ಯಾಲ್ಶಿಯಂ ಅಗತ್ಯವನ್ನು ಪೂರೈಸುತ್ತದೆ.

ಉತ್ಕೃಷ್ಟ ಪ್ರೊಟೀನ್‌

ಹಾಲಿನಲ್ಲಿ ಉತ್ಕೃಷ್ಟ ಗುಣಮಟ್ಟದ ಪ್ರೊಟೀನ್‌ ದೊರೆಯುತ್ತದೆ. ಸ್ನಾಯುಗಳ ಬೆಳವಣಿಗೆ ಮತ್ತು ದುರಸ್ತಿಗೆ ಇಂಥ ಪರಿಪೂರ್ಣ ಪ್ರೊಟೀನ್‌ ಅಗತ್ಯ. ಅದರಲ್ಲೂ ಬೆಳೆಯುವ ಮಕ್ಕಳ ದೇಹಕ್ಕೆ ಆವಶ್ಯಕವಾದ ಪ್ರೊಟೀನ್‌ಗಳು ಹಾಲಿನಲ್ಲಿವೆ. ಗರ್ಭಿಣಿಯರಿಗೆ, ಬಾಣಂತಿಯರಿಗೆ, ಋತುಬಂಧದ ಆಚೀಚೆ ಇರುವ ಮಹಿಳೆಯರಿಗೆ, ವೃದ್ಧರಿಗೆ- ಹೀಗೆ ಎಲ್ಲ ವಯಸ್ಸಿನವರಿಗೂ ಅವರವರ ಅಗತ್ಯಗಳನ್ನು ಪೂರೈಸುವಂಥ ಪೋಷಕಾಂಶಗಳು ಹಾಲಿನಲ್ಲಿವೆ.

Fresh Milk

ವಿಟಮಿನ್‌, ಖನಿಜಗಳು

ಬಹಳಷ್ಟು ರೀತಿಯ ಜೀವಸತ್ವಗಳು ಮತ್ತು ಖನಿಜಗಳು ಹಾಲಿನಲ್ಲಿವೆ. ವಿಟಮಿನ್‌ ಡಿ, ವಿಟಮಿನ್‌ ಬಿ12, ರೈಬೊಪ್ಲೇವಿನ್‌, ಫಾಸ್ಫರಸ್‌, ಪೊಟಾಶಿಯಂ, ಸೆಲೆನಿಯಂ, ಮೆಗ್ನೀಶಿಯಂ ಮುಂತಾದ ಸತ್ವಗಳು ಇದರಲ್ಲಿವೆ. ಇವೆಲ್ಲವೂ ನಮ್ಮ ಶರೀರದ ಶಕ್ತಿಯನ್ನು ಸುಸ್ಥಿರವಾಗಿ ಕಾಯ್ದುಕೊಳ್ಳುವುದಕ್ಕೆ ಬೇಕಾದಂಥವು. ಅದಲ್ಲದೆ, ನರಗಳ ಕ್ಷಮತೆ ಕಾಯ್ದುಕೊಳ್ಳುವುದಕ್ಕೆ ಮತ್ತು ಶರೀರದ ಚಯಾಪಚಯ ನಿರ್ವಹಣೆಯಲ್ಲೂ ಇವು ಪ್ರಮುಖವಾಗಿವೆ.

ಸತ್ವಗಳು ಇಷ್ಟೇ ಅಲ್ಲ

ಒಂದು ಲೋಟ ಹಸುವಿನ ಹಾಲಿನಿಂದ 145 ಕ್ಯಾಲರಿ ಶಕ್ತಿ ದೊರೆಯುತ್ತದೆ. ಅದರಲ್ಲಿ ಸುಮಾರು 8 ಗ್ರಾಂ ಪ್ರೊಟೀನ್‌, ಅಷ್ಟೇ ಪ್ರಮಾಣದ ಕೊಬ್ಬು, ಶೇ. 28ರಷ್ಟು ಕ್ಯಾಲ್ಶಿಯಂ, 24% ವಿಟಮಿನ್‌ ಡಿ, 26% ವಿಟಮಿನ್‌ ಬಿ2, 18% ವಿಟಮಿನ್‌ ಬಿ12, 22% ಫಾಸ್ಫರಸ್‌, 13% ಸೆಲೆನಿಯಂ ಇದರಲ್ಲಿ ಪ್ರಮುಖವಾಗಿ ದೊರೆಯುತ್ತದೆ. ಇದಲ್ಲದೆ, ವಿಟಮಿನ್‌ ಎ, ಸತು ಮತ್ತು ಥಿಯಮಿನ್‌ ಸಹ ಇವೆ.

Food Tips Kannada adulterated food effect health

ಎಲ್ಲದಕ್ಕೂ ಸಲ್ಲುತ್ತದೆ

ಕಾಫಿ, ಚಹಾ, ಮಿಲ್ಕ್‌ಶೇಖ್‌, ಸ್ಮೂದಿ, ಸೀರಿಯಲ್‌ಗಳು, ಪಾಯಸ, ಖೀರು, ಹಲ್ವಾಗಳು, ಕೇಕ್‌ಗಳು, ಗ್ರೇವಿಗಳು ಮುಂತಾದ ಬಹಳಷ್ಟು ರೀತಿಯ ಅಡುಗೆಗಳಿಗೆ ಹಾಲು ನೇರವಾಗಿ ಸಲ್ಲುತ್ತದೆ. ಅದಲ್ಲದೆ, ಮೊಸರು, ಚೀಸ್‌, ಪನೀರ್‌, ಬೆಣ್ಣೆ-ತುಪ್ಪಗಳನ್ನು ಇನ್ನೂ ಹೆಚ್ಚಿನ ಆಹಾರಗಳಿಗೆ ಪೂರಕವಾಗಿ ಬಳಸಬಹುದು. ಹಾಗೆಂದು ಹಾಲಿನ ಕೊಬ್ಬಿನಿಂದ ಮಾಡಿದ ಪದಾರ್ಥಗಳನ್ನು ಅತಿಯಾಗಿ ಸೇವಿಸಿದರೆ ತೂಕ ಹೆಚ್ಚಬಹುದು.

ಇದನ್ನೂ ಓದಿ: Cardamom Benefits: ಏಲಕ್ಕಿ ಕೇವಲ ಘಮದಲ್ಲಷ್ಟೇ ಅಲ್ಲ, ಇದರ ಪ್ರಯೋಜನಗಳು ಎಷ್ಟೊಂದು!

ಜಾಗ್ರತೆ ಮಾಡಿ

ಹಾಲು ಸರ್ವರಿಗೂ ಸಲ್ಲುವಂಥ ಆಹಾರ. ಅನಾರೋಗ್ಯದ ಸಂದರ್ಭಗಳಲ್ಲೂ ಕೆಲವೊಮ್ಮೆ ಹಾಲಿನ ಸೇವನೆ ಪ್ರಯೊಜನ ನೀಡಬಹುದು. ಆದರೆ ಅತಿ ಸ್ಥೂಲ ದೇಹಿಗಳು ಮತ್ತು ಕೆಲವು ಆರೋಗ್ಯ ಸಮಸ್ಯೆ ಇರುವವರು ಎಚ್ಚರ ವಹಿಸುವುದು ಅಗತ್ಯ. ಈಗಾಗಲೇ ಬೊಜ್ಜಿನ ಸಮಸ್ಯೆ ಇದ್ದವರು ಕಡಿಮೆ ಕೊಬ್ಬಿನ ಹಾಲನ್ನು ಸೇವಿಸುವುದು ಉತ್ತಮ. ಏರಿದ ಕೊಲೆಸ್ಟ್ರಾಲ್‌, ಹೃದಯ ರೋಗಗಳನ್ನು ಹೊಂದಿದವರು ಸಹ ಕೊಬ್ಬು ರಹಿತ ಹಾಲು ಕುಡಿಯುವುದು ಒಳ್ಳೆಯ ಆಯ್ಕೆ. ಲ್ಯಾಕ್ಟೋಸ್‌ ಅಲರ್ಜಿ ಇರುವವರಿಗೆ ಹಾಲು ಆಗಿ ಬರುವುದಿಲ್ಲ. ಒಂದೊಮ್ಮೆ ಹಾಲು ಸೇವಿಸಿದರೂ ಹೊಟ್ಟೆ ನೋವು, ಹೊಟ್ಟೆಯುಬ್ಬರ, ಡಯರಿಯಾದಂಥ ತೊಂದರೆಗಳು ಬಾಧಿಸಬಹುದು.

Continue Reading
Advertisement
Odisha Assembly Election
ಅವಿಭಾಗೀಕೃತ33 mins ago

Odisha Assembly Election: ಒಡಿಶಾ ವಿಧಾನಸಭಾ ಚುನಾವಣೆ; ಬಿಜೆಡಿ-ಬಿಜೆಪಿ ನಡುವೆ ತೀವ್ರ ಹಣಾಹಣಿ

Mysore lok sabha constituency
ಪ್ರಮುಖ ಸುದ್ದಿ1 hour ago

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Haveri Lok Sabha Constituency
ಹಾವೇರಿ2 hours ago

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Hyderabad City : Hyderabad no longer joint capital of Andhra Pradesh, Telangana from today
ಪ್ರಮುಖ ಸುದ್ದಿ2 hours ago

Hyderabad City : ಹೈದರಾಬಾದ್​ ಇನ್ನು ತೆಲಂಗಾಣಕ್ಕಷ್ಟೇ ರಾಜಧಾನಿ; ಏನಿದು ವಿಂಗಡಣೆ?

Loksabha Election 2024
Lok Sabha Election 20242 hours ago

Lok Sabha Election 2024: ಮತ ಎಣಿಕೆಗೆ 1 ದಿನವಷ್ಟೇ ಬಾಕಿ; ಚುನಾವಣಾ ಆಯೋಗದ ಕದ ತಟ್ಟಿದ ಎನ್‌ಡಿಎ, ʼಇಂಡಿಯಾʼ ಮೈತ್ರಿಕೂಟ

Chikballapur lok sabha constituency
ಪ್ರಮುಖ ಸುದ್ದಿ2 hours ago

Chikballapur lok sabha constituency : ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಇನ್ನಷ್ಟು ಬಲ ತರುವರೇ ಸುಧಾಕರ್​?

Bangalore Rain
ಕರ್ನಾಟಕ3 hours ago

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Kannada New Movie
ಸಿನಿಮಾ3 hours ago

Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Koppal Lok Sabha Constituency
ಕೊಪ್ಪಳ3 hours ago

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

kolar lok sabha constituency
ಪ್ರಮುಖ ಸುದ್ದಿ3 hours ago

Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ13 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌