Curd Rice Benefits: ನೀವು ಸದಾ ಸಂತೋಷವಾಗಿರಬೇಕೇ? ಹಾಗಿದ್ದರೆ ಮೊಸರನ್ನ ತಿನ್ನಿ! - Vistara News

ಆರೋಗ್ಯ

Curd Rice Benefits: ನೀವು ಸದಾ ಸಂತೋಷವಾಗಿರಬೇಕೇ? ಹಾಗಿದ್ದರೆ ಮೊಸರನ್ನ ತಿನ್ನಿ!

ಮೊಸರಿಗೆ ಒಂದು ನೆಮ್ಮದಿ ನೀಡುವ ಶಕ್ತಿ (Curd Rice Benefits) ಇದೆ. ಅದು ಸಂತೃಪ್ತ ಭಾವ. ಉಂಡ ಮೇಲೆ ಉಂಡದ್ದು ತೃಪ್ತಿಯಾಗುವ ಭಾವವದು. ಇದು ಚಂದದ ಊಟದ ನಂತರ ಸುಖ ನಿದ್ದೆಯನ್ನೂ ನೀಡಬಲ್ಲುದು. ಹೆಚ್ಚು ಉಂಡರೆ ಖಂಡಿತ ಮಲಗಬೇಕಾಗುವ ಪರಿಸ್ಥಿತಿ ಬಂದರೂ, ಹೊಟ್ಟೆಯಲ್ಲೇನೋ ಹಿತವಾದ ಅನುಭವ!

VISTARANEWS.COM


on

Curd Rice Benefits
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಹಳಷ್ಟು ಮಂದಿಗೆ ಊಟ ಉಂಡಿದ್ದು ಪೂರ್ತಿಯಾಗಬೇಕು ಎಂದಾದಲ್ಲಿ ಊಟದ ಕೊನೆಗೊಂದು ಮೊಸರೋ ಮಜ್ಜಿಗೆಯೋ ಇರಬೇಕು. ಮೊಸರನ್ನ ಸಿಕ್ಕಿದರೂ (Curd Rice Benefits) ಆದೀತು. ಅದೂ ಇಲ್ಲದಿದ್ದರೆ, ಮಜ್ಜಿಗೆ ನೀರು ಕುಡಿಯಲು ಸಿಕ್ಕರೆ, ಅಥವಾ ಲಸ್ಸಿಯೊಂದಾದರೂ ಆದೀತು. ಒಟ್ಟಾರೆ ಮೊಸರು, ಮಜ್ಜಿಗೆಯಲ್ಲಿಯೇ ಊಟ ಕೊನೆಗೊಳ್ಳಬೇಕು. ಇಲ್ಲದಿದ್ದರೆ ಹೊಟ್ಟೆಯಲ್ಲಿ ಯಾಕೋ ತಳಮಳ, ಹೊಟ್ಟೆ ತಂಪಾದ ಅನುಭವ ಸಿಗದೇ ಇರುವುದು, ಊಟ ಮಾಡಿದಂತ ಖುಷಿ ಸಿಗದೇ ಇರುವುದು ಹೀಗೆ ಹಲವರಿಗೆ ಹಲವು ಬಗೆಯ ಭಾವ, ಅನುಭವ. ಒಟ್ಟಾರೆ ದಕ್ಷಿಣ ಭಾರತೀಯರಾದವರಿಗೆ ಊಟದ ನಂತರ ಮಜ್ಜಿಗೆ ಮೊಸರು ಬೇಕೇ ಬೇಕು.

Health Benefits Of Curd Rice

ಮೊಸರಿಗೆ ಒಂದು ನೆಮ್ಮದಿ ನೀಡುವ ಶಕ್ತಿ ಇದೆ. ಅದು ಸಂತೃಪ್ತ ಭಾವ. ಉಂಡ ಮೇಲೆ ಉಂಡದ್ದು ತೃಪ್ತಿಯಾಗುವ ಭಾವವದು. ಇದು ಚಂದದ ಊಟದ ನಂತರ ಸುಖ ನಿದ್ದೆಯನ್ನೂ ನೀಡಬಲ್ಲುದು. ಹೆಚ್ಚು ಉಂಡರೆ ಖಂಡಿತ ಮಲಗಬೇಕಾಗುವ ಪರಿಸ್ಥಿತಿ ಬಂದರೂ, ಹೊಟ್ಟೆಯಲ್ಲೇನೋ ಹಿತವಾದ ಅನುಭವ. ಈ ಹಿತವಾದ ಅನುಭವವೇ ಊಟ ಮಾಡಿದ್ದರ ಖುಷಿ, ಸಂತೋಷದ ಅನುಭವ. ಎಷ್ಟೋ ಬಾರಿ ಏನೇ ತಿಂದುಂಡರೂ ಕೊನೆಗೊಂದು ಮೊಸರನ್ನವೇ ಸಾಕಿತ್ತು, ಬೇರೇನೂ ಬೇಡ ಅನಿಸುವುದುಂಟು. ಅದ್ಯಾಕೆ ಎಂದರೆ ಇದಕ್ಕೇ. ಈ ಖುಷಿ, ನೆಮ್ಮದಿ, ಊಟ ಮಾಡಿದ್ದರ ಹಿತವಾದ ಅನುಭವ ಇದು ಕಟ್ಟಿಕೊಡಬಲ್ಲ ಕಾರಣಕ್ಕೇ. ಹಾಗಾದರೆ, ಮೊಸರಿನಲ್ಲಿ ಅಂಥದ್ದೇನಿದೆ ಎಂದು ನಿಮಗೆ ಅನಿಸಬಹುದು, ಕೇವಲ ಅಭ್ಯಾಸ ಬಲದಿಂದ ಹಾಗನಿಸುತ್ತಿದೆ ಅನಿಸಲೂಬಹುದು. ಆದರೆ, ನಿಜವಾಗಿಯೂ ಮೊಸರಿಗೆ ಸಂತೋಷ ನೀಡುವ ಗುಣವಿದೆ. ಆ ಗುಣ ಬಂದಿದ್ದು ಮೊಸರಿನಲ್ಲಿರುವ ಟ್ರಿಪ್ಟೋಫನ್‌ ಎಂಬ ರಾಸಾಯನಿಕದಿಂದ!

ಮೊಸರಿನಲ್ಲಿ ಟ್ರಿಪ್ಟೋಫನ್‌ ಎಂಬ ಬಗೆಯ ಅಪರೂಪದ ಅಮೈನೋ ಆಸಿಡ್‌ ಇರುವುದರಿಂದ ಈ ಬಗೆಯ ಸಂತೋಷ ನಮಗೆ ಸಿಗುತ್ತದೆ. ಈ ಬಗೆಯ ಅಮೈನೋ ಆಸಿಡ್‌ ದೇಹದಲ್ಲಿ ಉತ್ಪತ್ತಿ ಮಾಡುವ ಶಕ್ತಿ ಇರುವುದಿಲ್ಲ. ಇದನ್ನು ಆಹಾರದ ಮೂಲಕ ಪಡೆಯಬೇಕು. ಈ ಟ್ರಿಪ್ಟೋಫನ್‌ ದೇಹದಲ್ಲಿ ಸೆರೊಟೋನಿನ್‌ ಎಂಬ ಹಾರ್ಮೋನನ್ನು ಕಟ್ಟುವ ಪ್ರಮುಖ ಮೂಲ. ಈ ಸೆರೆಟೋನಿನ್‌ ಹಾರ್ಮೋನಿಗೆ ದೇಹದಲ್ಲಿ ಸಾಕಷ್ಟು ಕೆಲಸಗಳಿವೆ. ಕಲಿಕೆ, ಸ್ಮರಣಶಕ್ತಿಯಿಂದ ಜೀರ್ಣಕ್ರಿಯೆಯವರೆಗೆ ಸೆರೆಟೋನಿನ್‌ ಹಾರ್ಮೋನಿನ ಪಾತ್ರ ಬಹುಮುಖ್ಯವಾದದ್ದು. ಇದು ನಮ್ಮ ಭಾವನೆ, ಸಂತೋಷದ ಮೇಲೂ ಪ್ರಮುಖ ಪರಿಣಾಮ ಬೀರುತ್ತದೆ. ನಮ್ಮನ್ನು ಸಂತೋಷವಾಗಿ, ಖುಷಿಯಾಗಿ, ಸದಾ ಕ್ರಿಯಾಶೀಲರಾಗಿ, ಮಾನಸಿಕವಾಗಿ ಉಲ್ಲಾಸದಾಯಕವಾಗಿ, ಏಕಾಗ್ರಚಿತ್ತವಾಗಿ ಕೆಲಸ ಮಾಡುವಂತೆ ಮಾಡುವ ಶಕ್ತಿಯೂ ಇದರಲ್ಲಿದೆ. ಹೀಗಾಗಿ ಸೆರೆಟೋನಿನ್‌ ಹಾರ್ಮೋನಿನ ಏರುಪೇರು ಮಾನಸಿಕ ಪ್ರಕ್ಷುಬ್ದತೆಯನ್ನೂ ತಂದೊಡ್ಡಬಹುದು.

Curd Rice

ಇಂಥ ಸೆರೆಟೋನಿನ್‌ಗೆ ಮೂಲ ಪ್ರೇರಣೆಯಾಗಿ ನಿಮ್ಮಬಲ್ಲ ಅಮೈನೋ ಆಸಿಡ್‌ ಆಗಿರುವ ಟ್ರಿಪ್ಟೋಫನ್‌ ಕಾರ್ಬೋಹೈಡ್ರೇಟ್‌ ಜೊತೆಗೆ ಸೇರಿದಾಗ ಇನ್ನೂ ಅತ್ಯುತ್ತಮವಾಗಿ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತದೆಯಂತೆ. ಹಾಗಾಗಿ, ಮೊಸರಿನಲ್ಲಿರುವ ಟ್ರಿಪ್ಟೋಫನ್‌ ಹಾಗೂ ಅನ್ನದಲ್ಲಿರುವ ಕಾರ್ಬೋಹೈಡ್ರೇಟ್‌ ಎಷ್ಟೊಳ್ಳೆ ಕಾಂಬಿನೇಶನ್‌ ಆಗುತ್ತದೆ ಎಂದರೆ, ಇವೆರಡರ ಸುಯೋಗದಿಂದ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾಗುವ ಸೆರೆಟೋನಿನ್‌ ಹಾರ್ಮೋನಿನ ಉತ್ಪಾದನೆಗೆ ಪ್ರಚೋದನೆ ನೀಡುತ್ತದೆ. ಫಲವಾಗಿ ಮೊಸರನ್ನ ತಿನ್ನುವ ಮೂಲಕ ಸಂತೋಷವಾಗಿ, ಉಲ್ಲಸಿತರಾಗಿ, ಸಂತೃಪ್ತಿಯ ಅನುಭವವೂ ನಮಗಾಗುತ್ತದೆ!

ಇದನ್ನೂ ಓದಿ: Nails Health Tips: ಆರೋಗ್ಯದ ಗುಟ್ಟು ರಟ್ಟಾಗಬೇಕಿದ್ದರೆ ಉಗುರುಗಳನ್ನು ನೋಡಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Breast cancer : ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡಲೇಬೇಡಿ!

ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಪಿಂಕ್‌ ಸ್ಟ್ರಾಂಗ್‌ ವಾಕಥಾನ್‌ ನಡೆಸಲಾಯಿತು. ಮಹಿಳೆಯರು ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಹೊಂದುವುದು ಅವಶ್ಯಕ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

By

Pink Strong walkathon to raise awareness among people about breast cancer
Koo

ಬೆಂಗಳೂರು: ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಸ್ತನ ಕ್ಯಾನ್ಸರ್‌ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು “ಪಿಂಕ್‌ ಸ್ಟ್ರಾಂಗ್‌” ವಾಕಥಾನ್‌ನನ್ನು ಆಯೋಜಿಸಿತ್ತು. ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯಿಂದ ಪ್ರಾರಂಭಗೊಂಡ ವಾಕಥಾನ್‌ ಗೋಪಾಲನ್‌ ಮಾಲ್‌ವರೆಗೆ ಮುಕ್ತಾಯಗೊಂಡಿತು. ಸುಮಾರು 5 ಕಿ.ಮೀ ದೂರದ ಈ ವಾಕಥಾನ್‌ನಲ್ಲಿ ಸ್ತನಕ್ಯಾನ್ಸರ್‌ನಿಂದ ಗುಣಮುಖರಾದ ರೋಗಿಗಳು ಹಾಗೂ ಅವರ ಕುಟುಂಬಸ್ಥರು, ಸಾರ್ವಜನರಿಕರು ಫೋರ್ಟಿಸ್‌ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಸೇರಿದಂತೆ ಒಟ್ಟು 450 ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.

Pink Strong walkathon to raise awareness among people about breast cancer
Pink Strong walkathon to raise awareness among people about breast cancer

ವಾಕಥಾನ್‌ನಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಇತ್ತೀಚೆಗೆ ಸಾಕಷ್ಟು ಮಹಿಳೆಯರನ್ನು ಬಾಧಿಸುತ್ತಿರುವ ಕಾಯಿಲೆಗಳ ಪೈಕಿ ಸ್ತನಕ್ಯಾನ್ಸರ್‌ ಕೂಡ ಒಂದು. ಹೆಣ್ಣು ಮಕ್ಕಳು, ಮಹಿಳೆಯರು ಸ್ತನಕ್ಯಾನ್ಸರ್‌ ರೋಗ ಲಕ್ಷಣದ ಬಗ್ಗೆ ಮೊದಲೇ ತಿಳಿದಿದ್ದಾಗ ಮಾತ್ರ ಇದರ ನಿರ್ಮೂಲನೆ ಸಾಧ್ಯ. ಆದರೆ ಸಾಕಷ್ಟು ಮಹಿಳೆಯರಿಗೆ ಇದರ ಬಗ್ಗೆ ಜಾಗೃತಿಯ ಕೊರತೆ ಇದೆ. ಮೊದಲು ಸ್ತನ ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಹೊಂದಿರಬೇಕು, ಫೋರ್ಟಿಸ್‌ ಆಸ್ಪತ್ರೆಯು ಸ್ತನ ಕ್ಯಾನ್ಸರ್‌ ಮಾಸದ ಭಾಗವಾಗಿ ಈ ವಾಕಥಾನ್‌ ನಡೆಸುವ ಮೂಲಕ ಮಹಿಳೆಯರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

Pink Strong walkathon to raise awareness among people about breast cancer
Pink Strong walkathon to raise awareness among people about breast cancer

ಫೋರ್ಟಿಸ್ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿಯ ಹಿರಿಯ ಸಲಹೆಗಾರರಾದ ಡಾ, ಮೋನಿಕಾ ಪನ್ಸಾರಿ ಮಾತನಾಡಿ, ಸ್ತನಕ್ಯಾನ್ಸರ್‌ ಹೆಚ್ಚಾಗಿ ಕಡಿಮೆ ವಯಸ್ಸಿನ ಮಹಿಳೆಯರಲ್ಲೇ ಕಾಣಿಸುತ್ತಿದೆ, ಅಧ್ಯಯನಗಳ ಪ್ರಕಾರ ಸುಮಾರು ಶೇ.48 ರಷ್ಟು ರೋಗಿಗಳಲ್ಲಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರೇ ಇರುವುದು ಆಘಾತಕಾರಿ. ಹೀಗಾಗಿ ಹೆಣ್ಣುಮಕ್ಕಳಿಂದಲೇ ಸ್ತನ ಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಿಸುತ್ತಾ ಹೋದರೆ, ಭವಿಷ್ಯದಲ್ಲಿ ಆಗುವ ಅಪಾಯವನ್ನು ತಡೆಗಟ್ಟಬಹುದು. ಸ್ತನ ಕ್ಯಾನ್ಸರ್‌ ಇರುವ ಬಗ್ಗೆ ಮಹಿಳೆಯರೇ ಸ್ವಯಂ ಪರೀಕ್ಷೆ ಮಾಡಿಕೊಳ್ಳಬಹುದು. ಒಂದು ವೇಳೆ ತಮ್ಮ ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ತಪಾಸಣೆಗೆ ಒಳಗಾಗುವುದು ಒಳ್ಳೆಯದು. ಇನ್ನು, ಮಹಿಳೆಯರು ಆರೋಗ್ಯಕರ ಜೀವನ ಶೈಲಿ ರೂಡಿಸಿಕೊಳ್ಳುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.

Continue Reading

ರಾಜಕೀಯ

Mallikarjun Kharge: ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಅಸ್ವಸ್ಥಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ

Mallikarjun Kharge: ಚುನಾವಣಾ ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅಸ್ವಸ್ಥಗೊಂಡಿದ್ದಾರೆ.

VISTARANEWS.COM


on

By

Mallikarjun Kharge falls ill on stage while delivering his speech
Koo

ಎಐಸಿಸಿ ಅಧ್ಯಕ್ಷ‌ ಮಲ್ಲಿಕಾರ್ಜುನ್‌ ಖರ್ಗೆ (Mallikarjun Kharge) ವೇದಿಕೆ ಮೇಲೆಯೇ ತೀವ್ರ ಅಸ್ವಸ್ಥಗೊಂಡಿದ್ದಾರೆ. ಜಮ್ಮು ಕಾಶ್ಮೀರದ ಕಥುವಾನಲ್ಲಿ ಚುನಾವಣೆ ಪ್ರಚಾರದ ಭಾಗವಾಗಿ ಭಾಷಣ ಮಾಡುತ್ತಿದ್ದ ವೇಳೆ 83 ವರ್ಷದ ಮಲ್ಲಿಕಾರ್ಜುನ್‌ ಖರ್ಗೆ ಅಸ್ವಸ್ಥಗೊಂಡಿದ್ದರು. ಭಾಷಣ ಮಾಡಲಾಗದೆ ಕುಸಿಯುತ್ತಿರುವುದನ್ನು ಗಮನಿಸಿದ ಕಾಂಗ್ರೆಸ್‌ ನಾಯಕರು ಖರ್ಗೆ ನೆರವಿಗೆ ಧಾವಿಸಿದ್ರು. ನೀರು ಕುಡಿದು ಸುಧಾರಿಸಿಕೊಂಡ ಮಲ್ಲಿಕಾರ್ಜುನ್‌ ಖರ್ಗೆ ತಮ್ಮ ಭಾಷಣವನ್ನು ಮುಂದುವರಿಸಿದರು. ವಿಶ್ರಾಂತಿ ಇಲ್ಲದೇ ನಿರಂತರವಾಗಿ ಪಕ್ಷದ ಕೆಲಸದಲ್ಲಿ ತೊಡಗಿಕೊಂಡಿದ್ದರಿಂದ ಆಯಾಸಗೊಂಡಿದ್ದರು ಎನ್ನಲಾಗಿದೆ. ಚುನಾವಣೆ ನಿಮಿತ್ತ ರ‍್ಯಾಲಿಗಳಲ್ಲಿ ಭಾಗವಹಿಸಿದ್ದರು. ಹೀಗಾಗಿ ಅಸ್ವಸ್ಥಗೊಂಡಿದ್ದರು.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಿಂದ ಕೊನೆಯ ಹಂತದ ಚುನಾವಣೆಯ ಕಸರತ್ತು ನಡೆದಿದೆ. ಅಕ್ಟೋಬರ್‌ 1ರಂದು ಮೂರನೇ ಹಂತದ ಮತದಾನವು ನಡೆಯಲಿದೆ. ಈ ಕೊನೆ ಹಂತದ ಚುನಾವಣೆಯಲ್ಲಿ 40 ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಭಾರಿ ಪೈಪೋಟಿ ಇದ್ದು, ಮೂರನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಭಾನುವಾರ ತೆರೆಬಿದ್ದಿದೆ. ನಾಳೆಯಿಂದ ಪಕ್ಷಗಳು ಮನೆ ಮನೆ ಪ್ರಚಾರ ನಡೆಸಲಿವೆ. ಮೊದಲೆರಡು ಹಂತದ ಚುನವಾಣೆಗಳು ಶಾಂತಿಯುತವಾಗಿ ನಡೆದಿದೆ. ಹೀಗಾಗಿ ಕೊನೆಯ ಹಂತದ ಚುನಾವಣೆ ಕೂಡ ಶಾಂತಿಯುತವಾಗಿ ನಡೆಸಲು ಪೊಲೀಸರು, ಚುನಾವಣಾ ಆಯೋಗದಿಂದ ಬಿಗಿ ಬಂದೋಬಸ್ತ್‌ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Continue Reading

ಪ್ರಮುಖ ಸುದ್ದಿ

World Retinal Day 2024 : ಶಾಕಿಂಗ್‌ ನ್ಯೂಸ್‌; ಜಾಗತಿಕವಾಗಿ 1 ಬಿಲಿಯನ್ ಜನರು ತಮ್ಮ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದರಂತೆ!

World Retinal Day 2024: ಕುರುಡುತನವನ್ನು ಶೇ. 90% ತಡೆಗಟ್ಟಬಹುದು ಅಥವಾ ಅದಕ್ಕೆ ಚಿಕಿತ್ಸೆಯನ್ನು ನೀಡಬಹುದು. ಆದರೂ ಜಾಗತಿಕವಾಗಿ 1 ಬಿಲಿಯನ್ ಜನರು ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದಾರೆ.

VISTARANEWS.COM


on

By

World Retinal Day 2024
Koo

ಬೆಂಗಳೂರು: ಪ್ರಪಂಚವು ತಾನು ಬೆಳೆಯುತ್ತಿರುವ ವೇಗದಲ್ಲಿ ತನ್ನ ದೃಷ್ಟಿಯನ್ನು ಕಳೆದುಕೊಳ್ಳುತ್ತಿದೆ. ಅದಕ್ಕಾಗಿ ತುರ್ತು ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ವಿಶ್ವ ರೆಟಿನಾ ದಿನವನ್ನಾಗಿ (World Retinal Day 2024) ಆಚರಿಸಲಾಗುತ್ತಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಕುರುಡುತನವನ್ನು ಶೇ. 90% ತಡೆಗಟ್ಟಬಹುದು ಅಥವಾ ಅದಕ್ಕೆ ಚಿಕಿತ್ಸೆಯನ್ನು ನೀಡಬಹುದು. ಆದರೂ ಜಾಗತಿಕವಾಗಿ 1 ಬಿಲಿಯನ್ ಜನರು ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದಾರೆ. 2020ರಲ್ಲಿ ಮಾತ್ರವೇ ದೃಷ್ಟಿ ದೋಷವು ಜಾಗತಿಕವಾಗಿ 410.9 ಬಿಲಿಯನ್ ಅಷ್ಟು ಆರ್ಥಿಕ ಉತ್ಪಾದಕತೆಯನ್ನು ಕಡಿಮೆಗೊಳಿಸಿತು. DR, DME ಮತ್ತು NAMD ನಂತಹ ರೆಟಿನಾದ ಸಮಸ್ಯೆಗಳು ಶಾಶ್ವತ ಮತ್ತು ಬದಲಾಯಿಸಲಾಗದ ದೃಷ್ಟಿ ನಷ್ಟಕ್ಕೆ ಕಾರಣವಾಗಬಹುದು.

21 ಮಿಲಿಯನ್ ಜನರು DME (Durable medical equipment) ಬಳಸುತ್ತಿದ್ದು, ಇದು ಕೆಲಸ ಮಾಡುವ ವಯಸ್ಸಿನ ವಯಸ್ಕರಲ್ಲಿ ದೃಷ್ಟಿ ನಷ್ಟಕ್ಕೆ ಪ್ರಮುಖ ಕಾರಣವಾಗಿದೆ. 20 ಮಿಲಿಯನ್ ಜನರು NAMD (Nanoscale Molecular Dynamics) ಇದು 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರಲ್ಲಿ ದೃಷ್ಟಿ ನಷ್ಟಕ್ಕೆ ಪ್ರಮುಖ ಕಾರಣವಾಗಿದೆ.
ವಿಶ್ವದ ಅಂಧ ಜನಸಂಖ್ಯೆಯ 1/3 ನೇ ಭಾಗವು ಭಾರತದಲ್ಲಿ ಕಂಡು ಬರುತ್ತಿದೆ. 11 + ಮಿಲಿಯನ್ ಜನರು ರೆಟಿನಾದ ಸಮಸ್ಯೆಗಳಿಂದ ಪ್ರಭಾವಿತರಾಗಿದ್ದಾರೆ ಹಾಗೂ 3.88 ಮಿಲಿಯನ್ ಜನರು DME ಮತ್ತು nAMD ಯಿಂದ ಬಳಲುತ್ತಿದ್ದಾರೆ. ಭಾರತದಲ್ಲಿ ಕುರುಡುತನಕ್ಕೆ ರೆಟಿನಾದ ಅಸ್ವಸ್ಥತೆಗಳ ಕೊಡುಗೆಯು 4.7% (2010) ರಿಂದ 8% (2019) ಕ್ಕೆ ಹೆಚ್ಚಾಗಿದೆ. 100 ಮಿಲಿಯನ್ ಮಧುಮೇಹಿಗಳು ಮತ್ತು ವಯಸ್ಸಾದ ಜನಸಂಖ್ಯೆಯನ್ನು ಹೊಂದಿರುವ ಭಾರತದಲ್ಲಿ ರೆಟಿನಾದ ಆರೋಗ್ಯಕ್ಕೆ ಆದ್ಯತೆಯನ್ನು ನೀಡಬೇಕಾಗುತ್ತದೆ.

ದೃಷ್ಟಿ ನಷ್ಟದಿಂದಾಗಿ ನಿರಂತರವಾಗಿ ಹೆಚ್ಚುತ್ತಿರುವ ಸಾಮಾಜಿಕ-ಆರ್ಥಿಕ ಹೊರೆಯು ಜಾಗತಿಕವಾಗಿ ಹಾಗೂ ಭಾರತದಲ್ಲಿ ಬೆಳೆಯುತ್ತಿರುವ ಸಾರ್ವಜನಿಕ ಆರೋಗ್ಯ ಕಾಳಜಿಯಾಗಿದೆ. ಜಾಗತಿಕವಾಗಿ ರಕ್ತಹೀನತೆ ಮತ್ತು ಶ್ರವಣ ನಷ್ಟದ ನಂತರ ದೃಷ್ಟಿ ನಷ್ಟವು ಮೂರನೇ ಅತಿದೊಡ್ಡ ದುರ್ಬಲತೆಯಾಗಿದೆ. ಕಣ್ಣಿನ ಪೊರೆ, ಗ್ಲುಕೋಮಾ ಮತ್ತು ವಕ್ರೀಕಾರಕ ದೋಷಗಳಂತಹ ಕೆಲವು ರೀತಿಯ ದೃಷ್ಟಿಹೀನತೆಗಳ ಬಗ್ಗೆ ಸಾಮಾನ್ಯವಾಗಿ ಸಾರ್ವಜನಿಕರಿಗೆ ಅರಿವು ಇದ್ದರೂ ಸಹ, ರೆಟಿನಾದ ಅಸ್ವಸ್ಥತೆಗಳಿಂದ ಉಂಟಾಗುವ ದೃಷ್ಟಿ ಅಸಾಮರ್ಥ್ಯಗಳು ನಿರಂತರವಾಗಿ ಹೆಚ್ಚಾಗುತ್ತಿವೆ.

ಜಾಗತಿಕವಾಗಿ, ರೆಟಿನಾದ ಕಾಯಿಲೆಗಳು ಸುಮಾರು 6% ಕುರುಡುತನಕ್ಕೆ ಕಾರಣವಾಗಿವೆ. ರಕ್ತದಲ್ಲಿ ಇರುವ ಅನಿಯಂತ್ರಿತ ಸಕ್ಕರೆ ಮಟ್ಟಗಳು (DR ಮತ್ತು DME) ಹಾಗೂ ವಯಸ್ಸಿನ (nAMD) ಪರಿಣಾಮವಾಗಿ ಉಂಟಾಗಬಹುದಾದ ಕೆಲವು ರೆಟಿನಾದ ಅಸ್ವಸ್ಥತೆಗಳು ದೃಷ್ಟಿಯ ವಿಷಯದಲ್ಲಿ ಬೆದರಿಕೆಯನ್ನು ಉಂಟುಮಾಡುತ್ತವೆ, ಇದು ಸಕಾಲಿಕ ವಿಧಾನದಲ್ಲಿ ರೋಗನಿರ್ಣಯ ಮಾಡಿ ಹಾಗೂ ಚಿಕಿತ್ಸೆಯನ್ನು ನೀಡದಿದ್ದಲ್ಲಿ ಶಾಶ್ವತ ಮತ್ತು ಬದಲಾಯಿಸಲಾಗದ ದೃಷ್ಟಿ ನಷ್ಟಕ್ಕೆ ಕಾರಣವಾಗುತ್ತದೆ.

ಭಾರತದಲ್ಲಿ ಅಂಧತ್ವ ಮತ್ತು ದೃಷ್ಟಿಹೀನತೆಯ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಕಾರ್ಯಕ್ರಮ (NPCBVI) ದಂತಹ ಉಪಕ್ರಮಗಳು ಕಣ್ಣಿನ ಪೊರೆ ಹಾಗೂ ಗ್ಲುಕೋಮಾ ಸಂಬಂಧಿತ ಕುರುಡುತನವನ್ನು (ಕಣ್ಣಿನ ಮುಂಭಾಗದ ಅಥವಾ ಮುಂಭಾಗ) ಕಡಿಮೆ ಮಾಡುವಲ್ಲಿ ಶ್ಲಾಘನೀಯ ಪ್ರಗತಿಯನ್ನು ಸಾಧಿಸಿವೆ. ಪ್ರಸ್ತುತ, ಅಕ್ಷಿಪಟಲದ ಆರೋಗ್ಯದ (ಕಣ್ಣಿನ ಹಿಂಭಾಗ ಅಥವಾ ಹಿಂದೆ) ಮೇಲೆ ಕೇಂದ್ರೀಕರಿಸುವ ತುರ್ತು ಅವಶ್ಯಕತೆಯಿದೆ. ರೆಟಿನಾದ ನರ ಕೋಶಗಳಿಗೆ ಉಂಟಾಗುವ ಹಾನಿಯನ್ನು ಬದಲಾಯಿಸಲು ಬರುವುದಿಲ್ಲ ಹಾಗೂ ಕೇಂದ್ರೀಕೃತ ನಷ್ಟವನ್ನು ಉಂಟು ಮಾಡಬಹುದು. ಇದು ದೃಷ್ಟಿಯನ್ನು ಹೆಚ್ಚು ದುರ್ಬಲಗೊಳಿಸುವ, ಗಾಯದ ಅಪಾಯ ಮತ್ತು ಜೀವನದಲ್ಲಿ ಕಳಪೆ ಗುಣಮಟ್ಟವನ್ನು ಉಂಟುಮಾಡುವ ಸಾಧ್ಯತೆ ಇದೆ.

ಕಳೆದ ದಶಕ ಒಂದರಲ್ಲಿಯೇ ಭಾರತದಲ್ಲಿ, ಕುರುಡುತನಕ್ಕೆ ಕಾರಣವಾಗುವ ರೆಟಿನಾದ ಅಸ್ವಸ್ಥತೆಗಳ ಪಾಲಿನಲ್ಲಿ ಆತಂಕಕಾರಿ ಹೆಚ್ಚಳವು ಕಂಡುಬಂದಿದೆ. ನಮ್ಮ ಜನಸಂಖ್ಯೆಯು ಬೆಳೆದಂತೆ ಹಾಗೂ ಅವರಿಗೆ ವಯಸ್ಸಾದಂತೆ ಈ ಸಂಖ್ಯೆಗಳು ಹೆಚ್ಚಾಗುತ್ತಲೇ ಇರುತ್ತವೆ ಮತ್ತು ಮಧುಮೇಹ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಜನರ ಸಂಖ್ಯೆಯು ಹೆಚ್ಚಾಗುತ್ತಲೇ ಇರುತ್ತದೆ. ರೋಗನಿರ್ಣಯದಲ್ಲಿ ಪರಿಸರ ವ್ಯವಸ್ಥೆ ಒಡ್ಡುವ ಸವಾಲುಗಳು ಮತ್ತು ಅಡೆತಡೆಗಳು ಭಾರತದಲ್ಲಿ ಅಕ್ಷಿಪಟಲದ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿಯ ಹೊರತಾಗಿಯೂ, ಪರಿಸರ ವ್ಯವಸ್ಥೆಯು ಒಡ್ಡುವ ಅಡೆತಡೆಗಳು, ನೀತಿ ಅಂತರಗಳು, ಜಾಗೃತಿ ಸವಾಲುಗಳು ಮತ್ತು ಚಿಕಿತ್ಸೆಯ ಅನುಸರಣೆಯ ಕೊರತೆಗಳು ಅಸ್ತಿತ್ವದಲ್ಲಿವೆ:
● ಸಾಮರ್ಥ್ಯದ ಬಗೆಗಿನ ನಿರ್ಬಂಧಗಳು ಮತ್ತು ತರಬೇತಿ ಪಡೆದ ರೆಟಿನಾ ತಜ್ಞರ ತೀವ್ರ ಕೊರತೆ: ಭಾರತದಲ್ಲಿ, ನೇತ್ರಶಾಸ್ತ್ರಜ್ಞರ ಪೂಲ್ ಕಣ್ಣಿನ ಮುಂಭಾಗದ ಭಾಗಕ್ಕೆ ಹೆಚ್ಚು ವಾಲುತ್ತಿದ್ದು ಸುಮಾರು 80% ರಷ್ಟು ಇದೆ, ಆದರಲ್ಲಿ ಕೇವಲ 5% ರಿಂದ 8% ರಷ್ಟು ಮಾತ್ರವೇ ರೆಟಿನಾದಲ್ಲಿ ಪರಿಣತಿಯನ್ನು ಹೊಂದಿರುವವರಿದ್ದು, ಅದೂ ಸಹ ಶ್ರೇಣಿ 1 ನಗರಗಳಲ್ಲಿ ಮಾತ್ರವೇ ಕೇಂದ್ರೀಕೃತವಾಗಿದೆ.
● ಪ್ರಮಾಣೀಕೃತ ಚಿಕಿತ್ಸಾ ಮಾರ್ಗಸೂಚಿಗಳ ಕೊರತೆ: ಭಾರತದಲ್ಲಿ, ರೋಗಿಗಳ ಫಲಿತಾಂಶಗಳ ಮೇಲೆ ತೀವ್ರ ಪರಿಣಾಮ ಬೀರುವ ಚಿಕಿತ್ಸಾ ಪ್ರೋಟೋಕಾಲ್‌ಗಳಲ್ಲಿ ಪ್ರಾದೇಶಿಕ ವ್ಯತ್ಯಾಸದ ಅಭ್ಯಾಸವಿದೆ. ಸ್ಟ್ಯಾಂಡರ್ಡ್ ಅಭ್ಯಾಸವೆಂದರೆ ‘ಸ್ಟೆಪ್ ಥೆರಪಿ’ ಇದರಲ್ಲಿ ಹೊಸ ಚಿಕಿತ್ಸಾ ಆಯ್ಕೆಗಳನ್ನು ಮರುಕಳಿಸುವ ರೋಗಿಗಳಿಗೆ ಕಾಯ್ದಿರಿಸಲಾಗಿದೆ, ಇದರಲ್ಲಿ ದೃಷ್ಟಿ ಎನ್ನುವುದು ಈಗಾಗಲೇ ಹದಗೆಟ್ಟಿದೆ, ಈ ನವೀನ ಚಿಕಿತ್ಸೆಗಳು ದೃಷ್ಟಿಯನ್ನು ಪುನಃಸ್ಥಾಪಿಸುವಲ್ಲಿ ಕಡಿಮೆ ಅಥವಾ ಯಾವುದೇ ಫಲಿತಾಂಶವನ್ನು ಪ್ರದರ್ಶಿಸುವುದಿಲ್ಲ.
● ರೋಗನಿರ್ಣಯ ಮತ್ತು ರೋಗಿಗಳ ಉಲ್ಲೇಖಗಳಿಗಾಗಿ ಕಳಪೆ ಸಮಗ್ರ ಆರೋಗ್ಯ ವ್ಯವಸ್ಥೆಗಳು: ವಿಶೇಷವಾಗಿ ಮಧುಮೇಹ ರೋಗಿಗಳಿಗೆ, ಉಲ್ಲೇಖಿತ ಮಾರ್ಗಗಳು ಮುಗಿದುಹೋಗಿವೆ. ಈ ಅಸ್ವಸ್ಥತೆಗಳು ಮುಂದುವರಿದ ಹಂತಗಳನ್ನು ತಲುಪಿದಾಗ ಮಾತ್ರವೇ ರೋಗಿಗಳು ತಮ್ಮನ್ನು ರೆಟಿನಾ ತಜ್ಞರಿಗೆ ತೋರಿಸುತ್ತಾರೆ.
● ಲಭ್ಯವಿರುವ ಚಿಕಿತ್ಸೆಗಳ ಮೇಲಿನ ಚಿಕಿತ್ಸಾ ಹೊರೆ: ಪ್ರಸ್ತುತ ಅಸ್ತಿತ್ವದಲ್ಲಿರುವ ಚಿಕಿತ್ಸೆಗಳು ಸಾಕಷ್ಟು ಹೊರೆಯನ್ನು ಉಂಟುಮಾಡುತ್ತವೆ, ಇದರಿಂದಾಗಿ ಆಗಾಗ್ಗೆ ಕಣ್ಣಿಗೆ ಚುಚ್ಚುಮದ್ದಿನ ಅಗತ್ಯವಿರುತ್ತದೆ. ಅಂಟಿಕೊಳ್ಳುವಿಕೆಯ ಅಂತರದಿಂದ ಉಂಟಾಗುವ ಇದು ಅಂಡರ್-ಟ್ರೀಟ್ಮೆಂಟ್ಗೆ ಕಾರಣವಾಗಬಹುದು, ಇದು ಮತ್ತಷ್ಟು ರೆಟಿನಾದ ಹಾನಿಗೆ ಕಾರಣವಾಗುತ್ತದೆ.
● ಸಾರ್ವಜನಿಕ ಅರಿವಿನ ಕೊರತೆ: ನಮ್ಮ ದೇಶದಲ್ಲಿ ಚಾಲ್ತಿಯಲ್ಲಿರುವ ಅಭ್ಯಾಸದ ಒಂದು ಭಾಗವಾಗಿ, ಕಣ್ಣಿನ ಆರೋಗ್ಯವನ್ನು ನಿರ್ಲಕ್ಷಿಸಲಾಗುತ್ತದೆ. ಕುಟುಂಬಗಳು, ಕಾರ್ಪೊರೇಟ್‌ಗಳು ಮತ್ತು ಸಂಸ್ಥೆಗಳು ವಾರ್ಷಿಕ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳಲ್ಲಿ ರೆಟಿನಾವನ್ನು ಸೇರಿಸುವುದಿಲ್ಲ. ಮಧುಮೇಹದಂತಹ ಸಮಸ್ಯೆಗಳು ದೃಷ್ಟಿಯ ಮೇಲೆ ಪರಿಣಾಮ ಬೀರಬಹುದು ಎನ್ನುವುದು ಸಾಮಾನ್ಯ ಜನರಿಗೆ ಸಂಪೂರ್ಣವಾಗಿ ತಿಳುವಳಿಕೆ ಇಲ್ಲ.

ಪ್ರಸ್ತುತ ಚಿಕಿತ್ಸಾ ಭೂದೃಶ್ಯದಲ್ಲಿ ಎದುರಿಸುತ್ತಿರುವ ಸವಾಲುಗಳು ಹಾಗೂ ನವೀನ ಚಿಕಿತ್ಸೆಗಳ ಅವಶ್ಯಕತೆ.
ರೋಗಿಯ ದೃಷ್ಟಿಕೋನದಿಂದ ನೋಡಿದಲ್ಲಿ, ಅವರು ತಮ್ಮ ಚಿಕಿತ್ಸೆಯ ಭಾಗವಾಗಿ ಕಣ್ಣಿನಲ್ಲಿ ಚುಚ್ಚುಮದ್ದು ಹಾಕಿಸಿಕೊಳ್ಳಲು ಭಯಪಡುತ್ತಾರೆ. ಕಳಪೆ ದೃಷ್ಟಿಯೊಂದಿಗೆ ವ್ಯವಹರಿಸುವಾಗ ಆಗಾಗ್ಗೆ ಚುಚ್ಚುಮದ್ದುಗಳನ್ನು ಪಡೆಯುವ ಸವಾಲು ಮತ್ತು ಕಣ್ಣಿನ ಆರೈಕೆ ಸೌಲಭ್ಯಗಳನ್ನು ಪಡೆಯಲು ಅನೇಕ ಭೇಟಿಗಳ ಕಷ್ಟವು ಕೂಡ ಅದರಲ್ಲಿ ಸೇರಿರುತ್ತದೆ. ಆಂಟಿ-VEGFಗಳಂತಹ ಹಳೆಯ ಚಿಕಿತ್ಸಾ ಆಯ್ಕೆಗಳನ್ನು ಸಾಮಾನ್ಯವಾಗಿ ಬಳಸಲಾಗಿದ್ದರೂ ಸಹ ಅನೇಕರು ಈ ಸಮಸ್ಯೆಯನ್ನು ಎದುರಿಸುತ್ತಾರೆ.

ಹಿಂದೆ ಅನುಮೋದಿಸಲಾದ ಚಿಕಿತ್ಸೆಗಳು nAMD ಮತ್ತು DME ಗಳ ಅಭಿವೃದ್ಧಿ ಹಾಗೂ ಪ್ರಗತಿಯನ್ನು ಹೆಚ್ಚಿಸುವ ಪ್ರಕ್ರಿಯೆಗಳನ್ನು – ಅಥವಾ ‘ಪಾತ್‌ವೇಸ್’ ಅನ್ನು ಮಾತ್ರವೇ ಭಾಗಶಃ ತಿಳಿಸಿವೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಸ್ಟ್ಯಾಂಡರ್ಡ್ IVT ಚಿಕಿತ್ಸೆಯನ್ನು ಕೂಡ ಮೀರಿ ನಾವೀನ್ಯತೆಯ ಅವಶ್ಯಕತೆಯಿದೆ. IVT ಚುಚ್ಚುಮದ್ದುಗಳು (ಕಣ್ಣಿನ ಚುಚ್ಚುಮದ್ದು) ರೋಗಿಗಳಿಗೆ ಭರವಸೆಯ ಹೊಸ ಆಯ್ಕೆಗಳನ್ನು ತಂದಿದ್ದರೂ ಸಹ, DME ಮತ್ತು nAMD ಚಿಕಿತ್ಸೆಯಲ್ಲಿ ಇನ್ನೂ ಪೂರೈಸದ ಅಗತ್ಯತೆಗಳು ಸಾಕಷ್ಟಿವೆ. ಪ್ರಸ್ತುತ ಚಿಕಿತ್ಸೆಗೆ ಪುನರಾವರ್ತಿತ ವೆಚ್ಚ, ಪ್ರಯಾಣದ ಅನಾನುಕೂಲತೆ ಮತ್ತು ಆರೈಕೆದಾರರ ಮೇಲೆ ಅವಲಂಬಿತರಾಗುವ ಅಗತ್ಯವನ್ನು ಹೊಂದಿರುವ ರೋಗಿಗೆ ಆಗಾಗ್ಗೆ ಚುಚ್ಚುಮದ್ದು ಅಗತ್ಯವಿರುತ್ತದೆ. ಹೊಸ ಉದಯೋನ್ಮುಖ ಚಿಕಿತ್ಸೆಗಳು ಚುಚ್ಚುಮದ್ದಿನ ಸಂಖ್ಯೆ ಮತ್ತು ಆವರ್ತನದ ವಿಷಯದಲ್ಲಿ ರೋಗಿಗಳ ಮೇಲೆ ಕಡಿಮೆ ಹೊರೆಯೊಂದಿಗೆ ಉತ್ತಮ ಫಲಿತಾಂಶಗಳನ್ನು ಒದಗಿಸುವುದರ ಮೇಲೆ ಕೇಂದ್ರೀಕರಿಸುತ್ತವೆ.

ಸುಧಾರಿತ ಚಿಕಿತ್ಸಾ ಆಯ್ಕೆಗಳನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯತೆ: ಪರಿಪೂರ್ಣ ದೃಷ್ಟಿಯನ್ನು ಹೊಂದಲು, ನಮ್ಮ ರೆಟಿನಾದಲ್ಲಿನ ನಾಳಗಳು ಸ್ಥಿರವಾಗಿರಬೇಕು ಹಾಗೂ ಬಲವಾಗಿರಬೇಕು. ಆದಾಗ್ಯೂ, ರೆಟಿನಾದ ಸಮಸ್ಯೆಗಳೊಂದಿಗೆ ವಾಸಿಸುವ ಜನರ ನಾಳಗಳು ಅಸ್ಥಿರವಾಗಿರುತ್ತವೆ, ಸೋರಿಕೆಯಾಗುತ್ತವೆ, ಉರಿಯುತ್ತವೆ ಮತ್ತು ಅಸಹಜವಾಗಿ ಬೆಳೆಯುತ್ತವೆ. VEGFಎನ್ನುವುದು ರೆಟಿನಾದ ಸಮಸ್ಯೆಗಳ ಅಭಿವೃದ್ಧಿ ಮತ್ತು ಪ್ರಗತಿಯನ್ನು ಒಳಗೊಂಡಿರುವ ಒಂದು ಪ್ರಮುಖ ಮಾರ್ಗವಾಗಿದೆ. VEGF ಮಾರ್ಗವನ್ನು ನಿರ್ಬಂಧಿಸುವುದರಿಂದ ರೆಟಿನಾದಲ್ಲಿನ ನಾಳಗಳು ರಕ್ತ ಮತ್ತು ದ್ರವ ಸೋರಿಕೆಯನ್ನು ಯಶಸ್ವಿಯಾಗಿ ನಿಲ್ಲಿಸುತ್ತದೆ ಹಾಗೂ ಹೊಸ ಅನಾರೋಗ್ಯಕರ ನಾಳಗಳು ಬೆಳೆಯುವುದನ್ನು ತಡೆಯುತ್ತದೆ. ಆದಾಗ್ಯೂ, VEGF ಮಾತ್ರವೇ ಏಕೈಕ ಮಾರ್ಗವಲ್ಲ. Ang-2 ಎನ್ನುವುದು ನಾಳೀಯ ಅಸ್ಥಿರತೆಗೆ ಕೊಡುಗೆ ನೀಡುತ್ತದೆ, ಉರಿಯೂತವನ್ನು ಉಂಟುಮಾಡುತ್ತದೆ ಹಾಗೂ ನಾಳಗಳ ಮೇಲೆ VEGF ನ ಕ್ರಿಯೆಗಳನ್ನು ಸುಗಮಗೊಳಿಸುತ್ತದೆ ಮತ್ತು ವರ್ಧಿಸುತ್ತದೆ, ಇದು ದೀರ್ಘಾವಧಿಯಲ್ಲಿ ಹೆಚ್ಚು ತೀವ್ರ ಸ್ಥಿತಿಗೆ ಕಾರಣವಾಗುತ್ತದೆ. VEGF ಅನ್ನು ಮಾತ್ರವೇ ಗುರಿಯಾಗಿಟ್ಟುಕೊಂಡು ನೀಡುವ ಚಿಕಿತ್ಸಾ ಆಯ್ಕೆಗಳು ರೋಗದ ಜೀವಶಾಸ್ತ್ರವನ್ನು ಭಾಗಶಃ ಮಾತ್ರವೇ ಪರಿಹರಿಸುತ್ತವೆ.

DME ಮತ್ತು nAMD ನಂತಹ ರೆಟಿನಾದ ಸಮಸ್ಯೆಗಳು ಶಾಶ್ವತ ಮತ್ತು ಬದಲಾಯಿಸಲಾಗದ ದೃಷ್ಟಿ ಹಾನಿಗೆ ಕಾರಣವಾಗಬಹುದು ಎಂದು ನಮಗೆ ತಿಳಿದಿದೆ; ಹಾಗೂ ಚಿಕಿತ್ಸೆಗಾಗಿ ಸಿಗುವ ಮೊದಲ ಅವಕಾಶವು ಚಿಕಿತ್ಸೆಯ ಅತ್ಯುತ್ತಮ ಅವಕಾಶವಾಗಿರುತ್ತದೆ. ಆದ್ದರಿಂದ ದೃಷ್ಟಿಯ ಸ್ಥಿತಿಯು ಕಾಲಾನಂತರದಲ್ಲಿ ಹದಗೆಟ್ಟ ರೋಗಿಗಳಿಗೆ ಅಂತಹ ಚಿಕಿತ್ಸೆಗಳನ್ನು ಕಾಯ್ದಿರಿಸುವ ಬದಲು ಮೊದಲ ಸಾಲಿನ ಸೆಟ್ಟಿಂಗ್‌ಗಳಲ್ಲಿ ಹೊಸ ನವೀನ ಚಿಕಿತ್ಸೆಗಳೊಂದಿಗೆ ರೋಗಿಗಳಿಗೆ ಚಿಕಿತ್ಸೆ ನೀಡುವ ಗುರಿಯನ್ನು ಹೊಂದಿರುತ್ತದೆ.

Ang-2 ಮತ್ತು VEGF-A ಒಳಗೊಂಡಿರುವ ಎರಡೂ ಮಾರ್ಗಗಳನ್ನು ನಿರ್ಬಂಧಿಸುವ ಸುಧಾರಿತ ಚಿಕಿತ್ಸಾ ಆಯ್ಕೆಗಳು, ರಕ್ತನಾಳಗಳನ್ನು ಸ್ಥಿರಗೊಳಿಸುವಂತೆ ವಿನ್ಯಾಸಗೊಳಿಸಲಾಗಿದೆ, ಇದರಿಂದಾಗಿ ಉರಿಯೂತ, ಸೋರಿಕೆ ಮತ್ತು ಅಸಹಜ ನಾಳಗಳ ಬೆಳವಣಿಗೆಯನ್ನು ಕಡಿಮೆ ಮಾಡಬಹುದು, ಇದು ನಿರಂತರ ರೋಗ ನಿಯಂತ್ರಣವನ್ನು ಒದಗಿಸಲು ಹಾಗೂ ದೃಷ್ಟಿ ಫಲಿತಾಂಶಗಳನ್ನು ಕಾಪಾಡಿಕೊಳ್ಳಲು ಬಹಳ ಸಹಾಯವನ್ನು ಮಾಡುತ್ತದೆ.

HCP ಯಿಂದ ಉಲ್ಲೇಖ – ದೃಷ್ಟಿ ನಷ್ಟವನ್ನು ಹೊಂದಿರುವ ರೋಗಿಗಳು ಸಾಮಾಜಿಕ ಬಹಿಷ್ಕಾರ, ಆತಂಕ, ಖಿನ್ನತೆಯ ಲಕ್ಷಣಗಳು ಮತ್ತು ಅವರ ದೈನಂದಿನ ಜೀವನದಲ್ಲಿ ಅನೇಕ ಕಷ್ಟಗಳನ್ನು ಎದುರಿಸುತ್ತಾರೆ. ಸರಳವಾದ ಕಾರ್ಯಗಳನ್ನು ನಿರ್ವಹಿಸುವ ಸಾಮರ್ಥ್ಯವು ಸೀಮಿತಗೊಳ್ಳುತ್ತದೆ. ಬಹು ಕ್ಲಿನಿಕ್ ಭೇಟಿಗಳು ಮತ್ತು ಆಗಾಗ್ಗೆ ಕಣ್ಣಿನ ಚುಚ್ಚುಮದ್ದಿನ ಹೊರೆಯ ಚಿಕಿತ್ಸೆಯ ವೇಳಾಪಟ್ಟಿಯನ್ನು ಕೂಡ ಇದಕ್ಕೆ ಸೇರಿಸಿದಂತೆ. ವಿಸ್ತೃತ ಚಿಕಿತ್ಸೆಯ ಬಾಳಿಕೆಯೊಂದಿಗೆ ಬರುವ ಪರಿಣಾಮಕಾರಿ ವೈದ್ಯಕೀಯ ಪ್ರಯೋಜನಗಳನ್ನು ನೀಡುವ ಹೊಸ, ನವೀನ ಚಿಕಿತ್ಸಾ ಆಯ್ಕೆಗಳ ಅವಶ್ಯಕತೆಯಿದೆ. ಇಂತಹ ಚಿಕಿತ್ಸಾ ಆಯ್ಕೆಗಳು ರೋಗಿಗಳಿಗೆ ಅನುಕೂಲವನ್ನು ಒದಗಿಸುವುದಲ್ಲದೆ, ಉತ್ತಮ ಫಲಿತಾಂಶಗಳಿಗಾಗಿ ಚಿಕಿತ್ಸೆಯ ಅನುಸರಣೆಯನ್ನು ಖಾತ್ರಿಪಡಿಸುತ್ತದೆ, ಹಾಗೂ ನಮ್ಮ ಆರೋಗ್ಯ ವ್ಯವಸ್ಥೆಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. – ಡಾ. ವಿವೇಕ್ ಎಂ ಭಾಸ್ಕರ್ – ಹಿರಿಯ ಸಲಹೆಗಾರ (ವಿಟ್ರಿಯೋ ರೆಟಿನಾಲ್) – ಶೇಖರ್ ಕಣ್ಣಿನ ಆಸ್ಪತ್ರೆ, ಬೆಂಗಳೂರು.

HCP ಯಿಂದ ಉಲ್ಲೇಖ – ಕಣ್ಣಿನ ಪೊರೆ ಮತ್ತು ಗ್ಲುಕೋಮಾ ಸಂಬಂಧಿತ ಕುರುಡುತನವನ್ನು ಕಡಿಮೆ ಮಾಡುವಲ್ಲಿ ಭಾರತವು ಮಹತ್ತರವಾದ ಪ್ರಗತಿಯನ್ನು ಸಾಧಿಸಿದೆ. ಆದರೆ ದುರದೃಷ್ಟವಶಾತ್, ನಮ್ಮ ದೇಶದಲ್ಲಿ ರೆಟಿನಾ ಸಂಬಂಧಿತ ದೃಷ್ಟಿ ನಷ್ಟದ ಪಾಲು ಹೆಚ್ಚಾಗುತ್ತಲಿದೆ. ಹಲವಾರು ಅಂಶಗಳು ಇದಕ್ಕೆ ಕಾರಣವಾಗಿವೆ… ಅರಿವಿನ ಕೊರತೆ, ರೋಗನಿರ್ಣಯದಲ್ಲಿ ತಡ ಮಾಡುವಿಕೆ, ಕಳಪೆ ಜೀವನಶೈಲಿ, ಮಧುಮೇಹ ಜನಸಂಖ್ಯೆಯ ಹೆಚ್ಚಳ, ನಮ್ಮ ದೇಶದ ವಯಸ್ಸಾದ ಜನಸಂಖ್ಯೆ, ನಮ್ಮ ಆರೋಗ್ಯ ವ್ಯವಸ್ಥೆಗಳಲ್ಲಿನ ಸಾಮರ್ಥ್ಯದ ನಿರ್ಬಂಧಗಳು ಮತ್ತು ರೆಟಿನಾದ ಪರಿಸ್ಥಿತಿಗಳಿಗೆ ಆದ್ಯತೆ ನೀಡುವಲ್ಲಿ ದುರ್ಬಲವಾದ ನೀತಿ ಗಮನ ಮುಂತಾದವುಗಳು.

Continue Reading

ಆರೋಗ್ಯ

Cancer Treatment : ವೈದ್ಯಕೀಯ ಲೋಕದಲ್ಲಿ ಎಐ; ಕ್ಯಾನ್ಸರ್‌ಕಾರಕ ಗಡ್ಡೆ ಪತ್ತೆಗೂ ಬಂದಿದೆ ಎಐ ಚಾಲಿತ ಸೈಬರ್‌ನೈಫ್‌-ಎಸ್7 ಸಿಸ್ಟಮ್‌!

Cancer Treatment: ವೈದ್ಯಕೀಯ ಲೋಕದಲ್ಲಿ ಎಐ ಕಾಲಿಟ್ಟಿದ್ದು, ಇದೀಗ ಕ್ಯಾನ್ಸರ್‌ಕಾರಕ ಗಡ್ಡೆ ಪತ್ತೆಗೂ ಎಐ ಚಾಲಿತ ಸೈಬರ್‌ನೈಫ್‌-ಎಸ್7 ಸಿಸ್ಟಮ್‌ ಬಂದಿದೆ. ಇಷ್ಟಕ್ಕೂ ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Cancer Treatment AI
Koo

ಬೆಂಗಳೂರು: ವೈದ್ಯಕೀಯ ಲೋಕದಲ್ಲೂ ಎಐ ಪಾದಾರ್ಪಣೆ (Cancer Treatment) ಮಾಡಿದ್ದು, ಅದರ ಭಾಗವಾಗಿ ಇದೀಗ ಕ್ಯಾನ್ಸರ್‌ಕಾರ ಗಡ್ಡೆಯನ್ನು ನಿಖರವಾಗಿ ಪತ್ತೆ ಹಚ್ಚಲು ಸೈಬರ್‌ನೈಫ್‌-ಎಸ್7 ಎಂಬ ಎಐ ಚಾಲಿತ ಸಿಸ್ಟಮ್‌ನನ್ನು ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ದೇಶದಲ್ಲೇ ಮೊದಲ ಬಾರಿಗೆ ಅನಾವರಣಗೊಳಿಸಿದೆ.

ಈ ಕುರಿತು ಮಾತನಾಡಿದ ಹೆಲ್ತ್‌ಕೇರ್ ಗ್ಲೋಬಲ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ಅಧ್ಯಕ್ಷ ಡಾ. ಬಿ.ಎಸ್‌. ಅಜಯ್‌ ಕುಮಾರ್, ವೈದ್ಯಕೀಯ ಲೋಕದಲ್ಲಿ ಎಐನ ಅವಶ್ಯಕತೆ ಇದೆ. ಹೀಗಾಗಿ ನಮ್ಮ ಸಂಸ್ಥೆ ಕ್ಯಾನ್ಸರ್‌ ಗಡ್ಡೆಯನ್ನು ಯಾವುದೇ ಅಂಗದಲ್ಲಿದ್ದರೂ ಅದನ್ನು ನಿಖರವಾಗಿ ಕಂಡು ಹಿಡಿಯಲು ಎಐನನ್ನು ಅಳವಡಿಸಿಕೊಂಡಿದೆ. ಕ್ಯಾನ್ಸರ್‌ ಗಡ್ಡೆಯನ್ನು ಪತ್ತೆಹಚ್ಚಲು ಸೈಬರ್‌ನೈಫ್‌ ಎಂಬ ತಂತ್ರಜ್ಞಾನ ಪ್ರಸ್ತುತ ಚಾಲ್ತಿಯಲ್ಲಿದೆ, ಇದರ ನವೀಕೃತ ಆವೃತ್ತಿಯನ್ನು ಇದೀಗ ಬಿಡುಗಡೆ ಮಾಡಲಾಗಿದೆ.

ಈ ನೂತನ ಎಐ ಚಾಲಿನ ಸೈಬರ್‌ನೈಫ್‌ -ಎಸ್ 7 ಕ್ಯಾನ್ಸರ್‌ಕಾರ ಗಡ್ಡೆ ಹಾಗೂ ಕ್ಯಾನ್ಸರ್‌ ಅಲ್ಲದ ಗಡ್ಡೆಗಳನ್ನು ಸಹ ನಿಖರವಾಗಿ ಗುರುತಿಸಿ ಅದನ್ನು ತೆಗೆದುಹಾಕುವಲ್ಲಿ ಹೆಚ್ಚು ಅತ್ಯಾಧುನಿಕವಾಗಿ ಸಹಕರಿಸಲಿದೆ. ಪ್ರಮುಖವಾಗಿ ಮೆದುಳು, ಶ್ವಾಸಕೋಶ, ಬೆನ್ನುಮೂಳೆ, ಪ್ರಾಸ್ಟೇಟ್ ಮತ್ತು ಹೊಟ್ಟೆ ಸೇರಿದಂತೆ ದೇಹದ ಯಾವುದೇ ಅಂಗದಲ್ಲಿ ಗೆಡ್ಡೆ ಬೆಳೆದಿದ್ದರೂ ಸುಲಭವಾಗಿ ಪತ್ತೆಹಚ್ಚಿ, ಅದನ್ನು ಶಸ್ತ್ರಚಿಕಿತ್ಸೆಯ ಮೂಲಕ ಗುಣಪಡಿಸಬಹುದು. ಅಷ್ಟೇಅಲ್ಲದೆ, ಇದು ಮೊದಲ ಪ್ರಯತ್ನದಲ್ಲಿಯೇ ಫಲಿತಾಂಶ ಸಿಗಲಿದ್ದು, ಹೆಚ್ಚು ಸಮಯ ತೆಗೆದುಕೊಳ್ಳದೇ ಶಸ್ತ್ರಚಿಕಿತ್ಸೆ ನಡೆಸಬಹುದು. ಈ ಹಿಂದೆ ಚಾಲ್ತಿಯಲ್ಲಿದ್ದ ಸೈಬರ್‌ ನೈಫ್‌ನ ಮೂಲಕ 7,500ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Dina bhavishya
ಭವಿಷ್ಯ5 ಗಂಟೆಗಳು ago

Dina Bhavishya : ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಪಿತೂರಿ ಮಾಡುವ ಜನರ ಬಗ್ಗೆ ಇರಲಿ ಎಚ್ಚರ

Gosavi samaj lathicharged Sri Ram Sene calls for bandh in Lakshmeshwara town on October 19
ಗದಗ20 ಗಂಟೆಗಳು ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು22 ಗಂಟೆಗಳು ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ23 ಗಂಟೆಗಳು ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

ಬೆಂಗಳೂರು1 ದಿನ ago

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Jio Cloud PC to turn home TV into computer
ಹೊಸ ಸುದ್ದಿ1 ದಿನ ago

Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

Dina Bhavishya
ಭವಿಷ್ಯ1 ದಿನ ago

Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

dina bhavishya
ಭವಿಷ್ಯ2 ದಿನಗಳು ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

karnataka Rain
ಮಳೆ3 ದಿನಗಳು ago

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Actor Darshan
ಬೆಂಗಳೂರು3 ದಿನಗಳು ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌