Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ - Vistara News

ಆರೋಗ್ಯ

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

ಬಿಸಿಲು ಬ್ರಹ್ಮಾಂಡವನ್ನೇ (Heat stroke) ಸುಡುತ್ತಿದೆ. ಈ ತೀಕ್ಷ್ಣ ಬಿಸಿಲಿಗೆ ದೀರ್ಘಕಾಲ ಒಡ್ಡಿಕೊಳ್ಳುವುದರಿಂದ, ಸಾಕಷ್ಟು ನೀರು ಕುಡಿಯದಿರುವುದರಿಂದ ಮೊದಲಿಗೆ ಸುಸ್ತು, ಆಯಾಸ ಕಾಣಿಸಿಕೊಳ್ಳುತ್ತದೆ. ಇದನ್ನು ಸೂಕ್ತವಾಗಿ ನಿರ್ವಹಿಸದಿದ್ದಲ್ಲಿ ಹೀಟ್‌ಸ್ಟ್ರೋಕ್‌ (heat stroke) ಉಂಟಾಗಬಹುದು. ಈ ಬಿಸಿಲ ಆಘಾತದಿಂದ ಪಾರಾಗುವುದು ಹೇಗೆ? ಈ ಲೇಖನದಲ್ಲಿದೆ ಮಾಹಿತಿ.

VISTARANEWS.COM


on

Heat Stroke
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಿಸಿಲಿನ ತಾಪ (Heat stroke) ಮುಗಿಲು ಮುಟ್ಟುತ್ತಿದೆ. ಮಾರ್ಚ್‌ ತಿಂಗಳಲ್ಲಿ ವಿಪರೀತ ಎನಿಸುವಷ್ಟು ಸೂರ್ಯ ತನ್ನ ಕಿರಣಗಳನ್ನು ಝಳಪಿಸುತ್ತಿದ್ದಾನೆ. ರಾಜ್ಯದ ಹಲವು ಕಡೆಗಳಲ್ಲಿ ತಾಪಮಾನ 40 ಡಿ.ಸೆ. ಈಗಾಗಲೇ ದಾಟಿದ್ದು, ಈ ಬೇಸಿಗೆ ಕಳೆಯುವುದು ಹೇಗಪ್ಪಾ ಎಂಬ ಚಿಂತೆ ಎಲ್ಲರ ಮುಖದಲ್ಲಿ ಕಾಣುತ್ತಿದೆ. ಉಷ್ಣತೆ ಇನ್ನೂ ಹೆಚ್ಚಬಹುದು ಎಂಬ ಎಚ್ಚರಿಕೆ ಸರಕಾರದಿಂದ, ತಜ್ಞರಿಂದ ಬಂದಿದೆ. ಇಂಥ ತೀಕ್ಷ್ಣ ಉರಿ ಸೆಕೆಯಲ್ಲಿ ಬಿಸಿಲಿನ ಆಘಾತದ ಅಪಾಯ ಹೆಚ್ಚುತ್ತದೆ. ಕಾರಣ, ದೇಹದ ತಾಪಮಾನವನ್ನು ಕಾಯ್ದುಕೊಳ್ಳುವ ಸಹಜ ತಂತ್ರಗಳು ಕೆಲವೊಮ್ಮೆ ದೇಹಕ್ಕೇ ಕೈಕೊಟ್ಟಾಗ ಆರೋಗ್ಯ ಏರುಪೇರಾಗುವುದು ನಿಶ್ಚಿತ. ಸುಸ್ತು, ಆಯಾಸ, ಡಯರಿಯಾ, ವಾಂತಿ, ನಿರ್ಜಲೀಕರಣ, ಮಾನಸಿಕ ಗೊಂದಲ, ಹೀಟ್‌ ಸ್ಟ್ರೋಕ್‌ ಮುಂತಾದ ಹಲವು ರೀತಿಯ ಸಮಸ್ಯೆಗಳು ಎರಗಬಹುದು. ಈಗಾಗಲೇ ಇರುವಂಥ ಆರೋಗ್ಯ ಸಮಸ್ಯೆಗಳು ಉಲ್ಭಣಿಸಬಹುದು. ಬಿಸಿಲಿನ ಆಘಾತದಿಂದ ವ್ಯಕ್ತಿಗಳ ವರ್ತನೆಯಲ್ಲೂ ವ್ಯತ್ಯಾಸ ಕಾಣಬಹುದು.

drink water

ನೀರು ಕಡಿಮೆ ಕುಡಿಯಬೇಡಿ

ತೀಕ್ಷ್ಣ ಬಿಸಿಲಿಗೆ ದೀರ್ಘಕಾಲ ಒಡ್ಡಿಕೊಳ್ಳುವುದರಿಂದ, ಚೆನ್ನಾಗಿ ನೀರು ಕುಡಿಯದಿರುವುದರಿಂದ ಮೊದಲಿಗೆ ಸುಸ್ತು, ಆಯಾಸ ಕಾಣಿಸಿಕೊಳ್ಳುತ್ತದೆ. ಇದನ್ನು ಸೂಕ್ತವಾಗಿ ನಿರ್ವಹಿಸದಿದ್ದಲ್ಲಿ ಹೀಟ್‌ಸ್ಟ್ರೋಕ್‌ ಉಂಟಾಗಬಹುದು. ಅಂದರೆ, ಜ್ವರದ ಯಾವುದೇ ಲಕ್ಷಣವಿಲ್ಲದಿದ್ದರೂ, ದೇಹದ ಉಷ್ಣತೆ 104 ಡಿಗ್ರಿ ಫ್ಯಾರನ್‌ಹೀಟ್‌ ಅಥವಾ ಅದಕ್ಕಿಂತಲೂ ಹೆಚ್ಚು ತಲುಪಬಹುದು. ಇದಕ್ಕೆ ತಕ್ಷಣವೇ ವೈದ್ಯಕೀಯ ಚಿಕಿತ್ಸೆ ಬೇಕು. ಸೂಕ್ತ ಚಿಕಿತ್ಸೆ ದೊರೆಯದಿದ್ದಲ್ಲಿ ಜೀವಕ್ಕೆ ಅಪಾಯ ಕಟ್ಟಿಟ್ಟಿದ್ದು. ಏನಿದರ ಲಕ್ಷಣಗಳು?

sun stroke sunny hot day heat migraine pain.

ತೀವ್ರವಾಗಿ ಹೆಚ್ಚುವ ದೇಹದ ಉಷ್ಣತೆ

ತೀವ್ರವಾದ ಜ್ವರದಲ್ಲಿ ಏರುವ ದೇಹದ ಉಷ್ಣತೆಯಂತೆಯೇ 40 ಡಿ. ಸೆ. ಅಥವಾ 104 ಡಿ. ಫ್ಯಾರನ್‌ಹೀಟ್‌ ತಲುಪುತ್ತದೆ. ಕೆಲವೊಮ್ಮೆ ಅದಕ್ಕಿಂತ ಹೆಚ್ಚೂ ಇರಬಹುದು. ಹೃದಯದ ಬಡಿತ ತೀವ್ರಗತಿಯಲ್ಲಿರುತ್ತದೆ. ಈ ಹಂತದಲ್ಲಿ ತಕ್ಷಣ ಎಚ್ಚೆತ್ತುಕೊಂಡು ಆಸ್ಪತ್ರೆಗೆ ಧಾವಿಸುವುದು ಕ್ಷೇಮ. ಚರ್ಮ ಒಣಗುವುದು, ಕೆಂಪಾಗುವುದು ಇಂಥವೆಲ್ಲಾ ಈ ಲಕ್ಷಣಗಳ ಜೊತೆಜೊತೆಗೇ ಕಾಣಬಹುದು.

Relaxed woman at home breathing fresh air Horse Gram Benefits

ಉಸಿರಾಟ

ಹೃದಯದ ಬಡಿತಕ್ಕೆ ಪೂರಕವಾಗಿ ಉಸಿರಾಟವೂ ತೀವ್ರವಾಗಿರುತ್ತದೆ. ಬಡಿತ ಮತ್ತು ಉಸಿರಾಟದ ಮೂಲಕ ಹೆಚ್ಚಿನ ಆಮ್ಲಜನಕ ಒದಗಿಸಿ, ಶರೀರವನ್ನು ತಂಪಾಗಿಸುವ ಯತ್ನವನ್ನು ದೇಹ ತಂತಾನೇ ಮಾಡುತ್ತಿರುತ್ತದೆ. ಈ ಹಂತದಲ್ಲಿ ಉಸಿರಾಟದ ತೊಂದರೆ ಮತ್ತು ಅತೀವ ಬೆವರು ಸಹ ಗೋಚರಿಸಬಹುದು ಅಥವಾ ಬೆವರೇ ಬಾರದೆಯೂ ಇರಬಹುದು.

ಗೊಂದಲ

ದೇಹದಲ್ಲಿನ ಈ ಬದಲಾವಣೆಯಿಂದ ಮೆದುಳಿನಲ್ಲೂ ಸಮಸ್ಯೆಗಳು ಕಂಡು ಬರುತ್ತವೆ. ಬಿಸಿಲಿನ ಆಘಾತಕ್ಕೆ ಒಳಗಾದ ವ್ಯಕ್ತಿಗಳಲ್ಲಿ ಗೊಂದಲ, ಕೋಪ, ದೇಹದ ಅಸಮತೋಲನ, ಕೆಲವೊಮ್ಮೆ ಅಪಸ್ಮಾರವೂ ಕಂಡುಬಂದೀತು. ಇಂಥವರಿಗೆ ವೈದ್ಯಕೀಯ ಚಿಕಿತ್ಸೆ ಅಗತ್ಯವಾಗಿ ಬೇಕು.

Unexplained frequent headaches Excessive Use Of Electronic Gadgets

ತಲೆನೋವು

ತೀವ್ರವಾದ ತಲೆನೋವು, ತಲೆಸುತ್ತುವುದು, ಹೊಟ್ಟೆ ತೊಳೆಸುವುದು, ವಾಂತಿ- ಇವೆಲ್ಲವೂ ನಿರ್ಜಲೀಕರಣದ ಲಕ್ಷಣಗಳಾಗಿರಬಹುದು. ಮೈ ಮುಟ್ಟಿದರೆ ಬಿಸಿಯ ಅನುಭವ ಮತ್ತು ಚರ್ಮ ಒಣಗಿದಂಥ ಲಕ್ಷಣಗಳು ಕಾಣಬಹುದು. ಮೊದಲಿಗೆ ಸಿಕ್ಕಾಪಟ್ಟೆ ಬೆವರುವ ದೇಹದಿಂದ ಕ್ರಮೇಣ ಒಂದು ಹನಿ ಬೆವರೂ ಬಾರದಿರಬಹುದು. ಇಂಥ ಸಂದರ್ಭಗಳಲ್ಲೂ ಚಿಕಿತ್ಸೆ ಬೇಕಾಗುತ್ತದೆ.

ಮಾಂಸಖಂಡಗಳಲ್ಲಿ ನೋವು

ಬಿಸಿಲಿನ ಆಘಾತದಿಂದ ಮಾಂಸಖಂಡಗಳಲ್ಲಿ ನೋವು, ಏಳಲಾರದಂಥ ಸುಸ್ತು ಆರಂಭವಾಗಿ ನಂತರ ಎಚ್ಚರ ತಪ್ಪಬಹುದು. ತೀವ್ರವಾದ ಸೆಖೆಯ ದಿನಗಳಲ್ಲಿ ಸಿಕ್ಕಾಪಟ್ಟೆ ವ್ಯಾಯಾಮ ಮಾಡಿದಾಗ ಮೊದಲಿಗೆ ಕಾಣುವ ಲಕ್ಷಣಗಳೆಂದರೆ ಕಾಲು, ತೋಳು ಅಥವಾ ಕಿಬ್ಬೊಟ್ಟೆಯಲ್ಲಿ ನೋವು. ಚೆನ್ನಾಗಿ ನೀರು, ಒಆರೆಸ್‌ನಂಥ ಎಲೆಕ್ಟ್ರೋಲೈಟಿಕ್‌ ಪೇಯಗಳು ದೇಹಕ್ಕೆ ತುರ್ತಾಗಿ ಬೇಕಾಗುತ್ತದೆ.

summer clothes

ತಂಪಾಗಿಸಿ

ದೇಹದ ಬಿಸಿ ಹೆಚ್ಚುತ್ತ ಹೋದಂತೆ ಜೀವಾಪಾಯವೂ ಹೆಚ್ಚುತ್ತಲೇ ಹೋಗುತ್ತದೆ. ಇಂಥ ಸಂದರ್ಭಗಳಲ್ಲಿ ಚಿಕಿತ್ಸೆಗಾಗಿ ಧಾವಿಸುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಆ ವ್ಯಕ್ತಿಯ ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು. ವ್ಯಕ್ತಿಯನ್ನು ನೆರಳಿರುವ, ತಂಪಾದ, ತಾಜಾ ಗಾಳಿ ಬರುವ ಜಾಗಕ್ಕೆ ಸ್ಥಳಾಂತರಿಸಿ. ಒಆರೆಸ್‌ನಂಥ ಎಲೆಕ್ಟ್ರೋಲೈಟಿಕ್‌ ಪೇಯಗಳನ್ನು ಸ್ವಲ್ಪ ಸ್ವಲ್ಪವಾಗಿ ಕುಡಿಸುತ್ತಿರಿ. ಸಾಧ್ಯವಾದರೆ ಮೈಯನ್ನೆಲ್ಲಾ ತಂಪಾದ ಒದ್ದೆ ಬಟ್ಟೆಯಲ್ಲಿ ಒರೆಸಿ, ಚೆನ್ನಾಗಿ ಗಾಳಿ ಹಾಕಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

ಒಡೆದ ಹಿಮ್ಮಡಿಗಳಿಗೆ (Home Remedy For Cracked Heels) ಮದ್ದರೆಯುವುದಕ್ಕೆ ಪರಂಪರಾಗತ ಔಷಧಿಯಾಗಿ ಬಳಕೆಯಲ್ಲಿರುವ ವಸ್ತುಗಳ ಪೈಕಿ ಕರ್ಪೂರ ಸಹ ಒಂದು. ಒಣಗಿ ಪುಡಿಯಾಗುವ ಚರ್ಮಕ್ಕೆ ಅಗತ್ಯವಾದ ತೇವವನ್ನು ಒದಗಿಸುವುದರ ಜೊತೆಗೆ, ಇದರ ಬ್ಯಾಕ್ಟೀರಿಯ ಮತ್ತು ಶಿಲೀಂಧ್ರ ನಿರೋಧಕ ಗುಣಗಳು ಹಿಮ್ಮಡಿಯ ಆರೈಕೆಗೆ ಪೂರಕವಾಗುತ್ತವೆ. ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

Home Remedy For Cracked Heels
Koo

ಒಡೆದ ಹಿಮ್ಮಡಿಗಳಿಗೆ (Home Remedy For Cracked Heels) ಕಾಡುವುದಕ್ಕೆ ಚಳಿಗಾಲದವೇ ಆಗಬೇಕೆಂದಿಲ್ಲ. ಶುಷ್ಕವಾದ ಬಿರುಬೇಸಿಗೆಯಲ್ಲೂ ಹಿಮ್ಮಡಿಗಳು ಬಿರಿದು, ಅತೀವ ನೋವು ಕೊಡಬಹುದು. ಕೆಲವೊಮ್ಮೆ ಎಷ್ಟೇ ಕ್ರೀಮುಗಳನ್ನು ಹಚ್ಚಿದರೂ ಸಮಸ್ಯೆ ಪರಿಹಾರವಾಗುವುದಿಲ್ಲ. ಜೊತೆಗೆ, ಬೇಸಿಗೆಯ ದಿನಗಳಲ್ಲಿ ತ್ವಚೆ ಅಂಟಾದಂತಾಗಿ ಅತಿಯಾಗಿ ಕ್ರೀಮುಗಳನ್ನು ಲೇಪಿಸುವುದಕ್ಕೂ ಕಷ್ಟವಾಗುತ್ತದೆ. ಅದನ್ನು ಹಾಗೆಯೇ ಬಿಟ್ಟರೆ ನೋವು ಹೆಚ್ಚಾಗಿ, ಬಿರುಕು ಅತಿಯಾಗಿ ರಕ್ತ ಸೋರಲೂ ಬಹುದು. ಒಡೆದ ಹಿಮ್ಮಡಿಗಳಿಗೆ ಮದ್ದರೆಯುವುದಕ್ಕೆ ಪರಂಪರಾಗತ ಔಷಧಿಯಾಗಿ ಬಳಕೆಯಲ್ಲಿರುವ ವಸ್ತುಗಳ ಪೈಕಿ ಕರ್ಪೂರ ಸಹ ಒಂದು. ಒಣಗಿ ಪುಡಿಯಾಗುವ ಚರ್ಮಕ್ಕೆ ಅಗತ್ಯವಾದ ತೇವವನ್ನು ಒದಗಿಸುವುದರ ಜೊತೆಗೆ, ಇದರ ಬ್ಯಾಕ್ಟೀರಿಯ ಮತ್ತು ಶಿಲೀಂಧ್ರ ನಿರೋಧಕ ಗುಣಗಳು ಹಿಮ್ಮಡಿಯ ಆರೈಕೆಗೆ ಪೂರಕವಾಗುತ್ತವೆ. ಮಾತ್ರವಲ್ಲ, ಕರ್ಪೂರದಲ್ಲಿ ಉರಿಯೂತ ಶಾಮಕ ಗುಣಗಳೂ ಇದ್ದು, ಹಿಮ್ಮಡಿಯ ನೋವು, ಊತ ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಒಡೆದ ಹಿಮ್ಮಡಿಗಳು (Home Remedy For Cracked Heels) ಯಾವುದೇ ಪಾದಗಳನ್ನೂ ಕಾಡಬಹುದು. ಆ ಭಾಗದ ಚರ್ಮ ದಪ್ಪವಾಗಿ, ಒಣಗಿ, ಒರಟಾಗಿ ಬಿರಿಯಲು, ಪುಡಿಯಾಗಲು ಪ್ರಾರಂಭವಾಗುತ್ತದೆ. ಇದಕ್ಕೆ ಆರಂಭದಲ್ಲೇ ಮದ್ದರೆದರೆ ತಹಬಂದಿಗೆ ಬಂದೀತು. ಸ್ವಲ್ಪ ಅಜಾಗ್ರತೆ ತೋರಿದರೂ, ಹೆಜ್ಜೆ ಇಡಲಾಗದಂತೆ ನೋವು ಕಾಡುತ್ತದೆ. ಎಳೆಯರಿಂದ ಹಿಡಿದು ವಯಸ್ಸಾದವರವರೆಗೆ, ಸ್ತ್ರೀ-ಪುರುಷರೆನ್ನದೆ ಯಾರೂ ಈ ತೊಂದರೆಗೆ ತುತ್ತಾಗಬಹುದು. ಒಂದು ಸಮೀಕ್ಷೆಯ ಪ್ರಕಾರ, ಶೇ. ೨೦ರಷ್ಟು ವಯಸ್ಕರಲ್ಲಿ ಈ ಸಮಸ್ಯೆ ಒಂದಿಲ್ಲೊಂದು ಕಾಲದಲ್ಲಿ ಬಾಧಿಸುತ್ತದೆ.

cracked heels

ಕಾರಣಗಳೇನು?

ಎಲ್ಲಕ್ಕಿಂತ ಮುಖ್ಯವಾದ ಕಾರಣವೆಂದರೆ ಹವಾಮಾನ. ಬೇಸಿಗೆಯಲ್ಲಿ ಅತಿಯಾದ ಶುಷ್ಕತೆಗೆ ಈ ತೊಂದರೆ ಎದುರಾದರೆ, ಚಳಿಗಾಲದಲ್ಲಿ ಒಣಹವೆಗೆ ಈ ಅವಸ್ಥೆ ಉಂಟಾಗಬಹುದು. ಮಳೆಗಾಲದಲ್ಲಿ ಮಣ್ಣು ನೀರು ಸೋಕುವುದು ಸಹ ಇರುವ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಅದಲ್ಲದೆ, ದೀರ್ಘ ಕಾಲದವರೆಗೆ ನಿಂತು ಕೆಲಸ ಮಾಡುವುದು, ಧೂಳಿಗೆ ತೆರೆದುಕೊಳ್ಳುವುದು, ಸದಾಕಾಲ ಪಾದ ಮುಚ್ಚದಂಥ ಪಾದರಕ್ಷೆಗಳ ಬಳಕೆ, ಬೊಜ್ಜು, ಮಧುಮೇಹ, ಥೈರಾಯ್ಡ್‌ ಸಮಸ್ಯೆ ಮತ್ತಿತರ ಆರೋಗ್ಯ ಸಮಸ್ಯೆಗಳು ಹಿಮ್ಮಡಿಯ ಒಡಕಿಗೆ ಕಾರಣವಾಗುತ್ತವೆ.

Camphor

ಕರ್ಪೂರ ಹೇಗೆ ಸಹಕಾರಿ?

ಹಿಂದಿನ ಕಾಲದಿಂದಲೂ ಒಡೆದ ಹಿಮ್ಮಡಿಗಳನ್ನು ಗುಣ ಪಡಿಸುವುದಕ್ಕೆ ಕರ್ಪೂರ ಬಳಕೆಯಲ್ಲಿದೆ. ಮೇಲ್ಮೈಗೆ ಇದನ್ನು ಲೇಪಿಸುವುದರಿಂದ ಚರ್ಮ ಮೃದುವಾಗಿ, ತೇವಭರಿತವಾಗಿ, ಒಡೆದು ಬಿರಿದ ಹಿಮ್ಮಡಿ ಕೂಡಿಕೊಳ್ಳುತ್ತದೆ. ಜೊತೆಗೆ, ಬಿರಿದ ಹಿಮ್ಮಡಿಗಳಲ್ಲಿ ಕೆಲವೊಮ್ಮೆ ಸೂಕ್ಷ್ಮ ಗಾಯಗಳಾಗಬಹುದು. ನೆಲದ ಧೂಳು, ಸೂಕ್ಷ್ಮಾಣುಗಳು ಈ ಗಾಯಗಳಲ್ಲಿ ಸೇರಿ, ಯಾವ ಕ್ರೀಮುಗಳನ್ನು ಹಚ್ಚಿದರೂ ಸಮಸ್ಯೆ ಪರಿಹಾರವಾಗದೆ ಉಳಿಯುವ ಸಂದರ್ಭವೇ ಹೆಚ್ಚಾಗುತ್ತದೆ. ಇಂಧ ಸಂದರ್ಭದಲ್ಲಿ ಕರ್ಪೂರದ ಚಿಕಿತ್ಸೆ ಪರಿಣಾಮಕಾರಿ. ಇದರಲ್ಲಿರುವ ಬ್ಯಾಕ್ಟೀರಿಯ ಮತ್ತು ಫಂಗಸ್‌ ವಿರೋಧಿ ಗುಣಗಳು, ಗಾಯದಲ್ಲಿರುವ ಸೋಂಕನ್ನು ಕಡಿಮೆ ಮಾಡುತ್ತವೆ. ಕರ್ಪೂರ ಪ್ರಬಲವಾದ ಉತ್ಕರ್ಷಣ ನಿರೋಧಕ. ಹಾಗಾಗಿಯೇ ಹಲವಾರು ವೇಪರ್‌ ರಬ್‌ಗಳು, ನೋವಿನ ಮುಲಾಮುಗಳಲ್ಲಿ ಕರ್ಪೂರವನ್ನು ಬಳಸಲಾಗುತ್ತದೆ. ಇದು ಊತವನ್ನು ಕಡಿಮೆ ಮಾಡಿ, ನೋವನ್ನೂ ಶಮನ ಮಾಡುತ್ತದೆ. ಇದನ್ನು ಒಡೆದ ಹಿಮ್ಮಡಿಗಳಿಗೆ ಹಚ್ಚುವುದರಿಂದ ಅಲ್ಲಿನ ಊತ ಮತ್ತು ನೋವು ಶಮನವಾಗುತ್ತದೆ. ಜೊತೆಗೆ ಹೊಸ ಕೋಶಗಳ ಉತ್ಪತ್ತಿಯನ್ನು ಇದು ಪ್ರೋತ್ಸಾಹಿಸುತ್ತದೆ. ಹಾಗಾಗಿ ತುಂಡಾದ ಚರ್ಮದಲ್ಲಿನ ಕೋಶಗಳು ನಾಶವಾಗಿ, ಹೊಸ ಚರ್ಮ ಮೂಡಿ, ಪಾದ ನಯವಾಗುತ್ತದೆ.

ಇದನ್ನೂ ಓದಿ: Summer Nail Art : ಸಮ್ಮರ್ ಸೀಸನ್​ನಲ್ಲಿ ಟ್ರೆಂಡಿಯಾದ ಕಲ್ಲಂಗಡಿ ಹಣ್ಣಿನ ನೇಲ್ಆರ್ಟ್

ಉಪಯೋಗಿಸುವುದು ಹೇಗೆ?

ಸಾಮಾನ್ಯವಾಗಿ ಕರ್ಪೂರದ ಎಣ್ಣೆ ಇಂಥ ಸಂದರ್ಭಗಳಲ್ಲಿ ಬಳಕೆಯಾಗುತ್ತದೆ. ಆದರೆ ಶುದ್ಧ ಎಣ್ಣೆಯನ್ನು ನೇರವಾಗಿ ಲೇಪಿಸಿದರೆ, ಅದರ ತೀವ್ರತೆಯಿಂದ ಚರ್ಮಕ್ಕೆ ಕಿರಿಕಿರಿ ಆಗಬಹುದು. ಹಾಗಾಗಿ ನಾಲ್ಕಾರು ಹನಿ ಕರ್ಪೂರದ ತೈಲವನ್ನು ಕೊಬ್ಬರಿ ಎಣ್ಣೆ, ಆಲಿವ್‌ ಎಣ್ಣೆ ಅಥವಾ ಬಾದಾಮಿ ಎಣ್ಣೆಯೊಂದಿಗೆ ಮಿಶ್ರ ಮಾಡಿ, ಬೇಕಾದ ಭಾಗಕ್ಕೆ ಲೇಪಿಸುವುದು ಒಂದು ಕ್ರಮ. ಇದಲ್ಲದೆ, ಉಗುರು ಬಿಸಿಯಾದ ನೀರಿಗೆ ನಾಲ್ಕೆಂಟು ಹನಿ ಕರ್ಪೂರದ ತೈಲವನ್ನು ಬೆರೆಸಿ. ಆ ನೀರಿನಲ್ಲಿ 20 ನಿಮಿಷಗಳ ಕಾಲ ಪಾದವನ್ನು ನೆನೆಸುವುದು ಇನ್ನೊಂದು ಕ್ರಮ. ಇದನ್ನು ವಿವರವಾಗಿ ಹೇಳಬೇಕೆಂದರೆ, ಹಿಮ್ಮಡಿಗಳಿಗೆ ಕರ್ಪೂರದ ತೈಲವನ್ನು ಲೇಪಿಸಿದ 30 ನಿಮಿಷಗಳ ನಂತರ, ಉಗುರು ಬಿಸಿಯಾದ ಸೋಪಿನ ನೀರಿನಲ್ಲಿ 10 ನಿಮಿಷಗಳವರೆಗೆ ಪಾದಗಳನ್ನು ನೆನೆಸಿಡಿ. ನಂತರ ಆ ಬಿರುಕುಗಳನ್ನು ನಯವಾಗಿ ಉಜ್ಜಿ ಸ್ವಚ್ಛಗೊಳಿಸಿ. ಇದರಿಂದ ಬಿರುಕುಗಳು ಶುಚಿಯಾಗಿ, ಕರ್ಪೂರದೆಣ್ಣೆ ಆ ಬಿರುಕುಗಳ ಒಳಗೆ ಪ್ರವೇಶಿಸಲು ಸಾಧ್ಯವಾಗುತ್ತದೆ. ಇದರ ನಂತರ, ಪಾದಗಳನ್ನು ತೊಳೆದು ಶುಚಿ ಮಾಡಿ. ಸ್ವಚ್ಛವಾದ ಬಟ್ಟೆಯಿಂದ ಒರೆಸಿ, ಒಣಗಿಸಿ. ಈಗ ಕೊಬ್ಬರಿ ಎಣ್ಣೆಯ ಜೊತೆಗೆ ಸ್ವಲ್ಪವೇ ಕರ್ಪೂರದೆಣ್ಣೆ ಬೆರೆಸಿ ಪಾದಗಳಿಗೆ ನಯವಾಗಿ ಉಜ್ಜಿ. ಇದನ್ನು ರಾತ್ರಿ ಮಲಗುವ ಮುನ್ನ ಮಾಡುವುದು ಒಳ್ಳೆಯದು. ನಿಯಮಿತವಾಗಿ ಈ ಚಿಕಿತ್ಸೆಯನ್ನು ಮಾಡಿದಲ್ಲಿ, ಒಡೆದ ಹಿಮ್ಮಡಿಗಳಿಂದ ಮುಕ್ತರಾಗಬಹುದು.

Continue Reading

ಆರೋಗ್ಯ

Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

Vampire Facial: ವಯಸ್ಸಾದ ಮಹಿಳೆಯರು, ಸುಕ್ಕು ಗಟ್ಟಿದ ಚರ್ಮದ ಕಾಂತೀಯತೆಯನ್ನು ಸೂಜಿಯ ಮೂಲಕವೇ ಹೆಚ್ಚಿಸುವುದು ಇದರ ಪ್ರಮುಖ ವಿಧಾನವಾಗಿದೆ. ಚರ್ಮದಲ್ಲಿ ಕಾಲಜಿನ್‌ ಉತ್ಪಾದನೆ ಹೆಚ್ಚಿಸಿ, ಚರ್ಮವು ಹೊಳೆಯುವಂತೆ ಮಾಡುವುದೇ ರಕ್ತಪಿಶಾಚಿ ಫೇಶಿಯಲ್‌ ಆಗಿದೆ. ಆದರೆ, ಇದು ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತಿರುವುದು ಆತಂಕ ಹೆಚ್ಚಿಸಿದೆ.

VISTARANEWS.COM


on

Vampire Facial
Koo

ನವದೆಹಲಿ: ಹೆಣ್ಣುಮಕ್ಕಳಿಗೆ ಸೌಂದರ್ಯದ (Beauty) ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಹೆಚ್ಚು ವಯಸ್ಸಾದರೂ 18ರ ಯುವತಿಯಂತೆ ಕಾಣಲು ಹಲವು ಕಸರತ್ತು ಮಾಡುತ್ತಾರೆ. ಇನ್ನು ನಗರ ಹಾಗೂ ಮಹಾನಗರಗಳಲ್ಲಂತೂ ಬ್ಯೂಟಿ ಪಾರ್ಲರ್‌ಗಳಿಗೆ ನಿಯಮಿತವಾಗಿ ತೆರಳಿ ಮೇಕಪ್‌, ಫೇಶಿಯಲ್‌ (Facial) ಮಾಡಿಸಿಕೊಳ್ಳುತ್ತಾರೆ. ಆದರೆ, ಅಮೆರಿಕದಲ್ಲಿ ಸ್ಪಾಗಳಲ್ಲಿ ಫೇಶಿಯಲ್‌ ಮಾಡಿಸಿಕೊಂಡ ಮೂವರು ಮಹಿಳೆಯರಿಗೆ ಎಚ್‌ಐವಿ ಸೋಂಕು (HIV) ತಗುಲಿದೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ವ್ಯಾಂಪೈರ್‌ ಫೇಶಿಯಲ್‌ (Vampire Facial) ಮಾಡಿಸಿಕೊಂಡ ಕಾರಣ ಇವರಿಗೆ ಎಚ್‌ಐವಿ ತಗುಲಿದೆ ಎಂಬ ಮಾಹಿತಿಯು ಅಧ್ಯಯನ ವರದಿಯಿಂದ ಲಭ್ಯವಾಗಿದೆ.

ಅಮೆರಿಕದ ನ್ಯೂ ಮೆಕ್ಸಿಕೋ ಸ್ಪಾದಲ್ಲಿ ಕಾಸ್ಮೆಟಿಕ್‌ ಇಂಜೆಕ್ಷನ್‌ ಪ್ರೊಸೀಜರ್‌ ಮೂಲಕ ನಡೆಸುವ ವ್ಯಾಂಪೈರ್‌ ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ ತಗುಲಿದೆ ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರವು ಮಾಹಿತಿ ನೀಡಿದೆ. ವ್ಯಾಂಪೈರ್‌ ಫೇಶಿಯಲ್‌ಅನ್ನು ಕಡಿಮೆ ಬೆಲೆಗೆ ಮಾಡುವುದರಿಂದ ಹೆಚ್ಚಿನ ಮಹಿಳೆಯರು, ಅದರಲ್ಲೂ 40 ವರ್ಷ ದಾಟಿದವರು ಹೆಚ್ಚು ಮಾಡಿಸಿಕೊಳ್ಳುತ್ತಾರೆ. ಆದರೆ, ಇದು ಈಗ ಮಾರಣಾಂತಿಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ.

ಏನಿದು ವ್ಯಾಂಪೈರ್‌ ಫೇಶಿಯಲ್?‌

ವ್ಯಾಂಪೈರ್‌ ಫೇಶಿಯಲ್‌ಅನ್ನು ರಕ್ತಪಿಶಾಚಿ ಫೇಶಿಯಲ್‌ ಎಂದೂ ಕರೆಯಲಾಗುತ್ತದೆ. ಸ್ಪಾಗಳಲ್ಲಿ ಸೂಜಿ ಅಥವಾ ಇಂಜೆಕ್ಷನ್‌ ಮೂಲಕ ಮಹಿಳೆಯರ ಮುಖದ ಮೇಲಿನ ಸುಕ್ಕು ಮಾಯಮಾಡುವುದು, ಅವರು ಯುವತಿಯರಂತೆ ಮಾಡುವ ಸೌಂದರ್ಯ ವರ್ಧಕ ವಿಧಾನ ಇದಾಗಿದೆ. ಇದನ್ನು ಪ್ಲೇಟ್‌ಲೆಟ್‌ ರಿಚ್‌ ಪ್ಲಾಸ್ಮಾ (PRP) ಅಥವಾ ಪ್ಲೇಟ್‌ಲೆಟ್‌ ರಿಚ್‌ ಫೈಬ್ರಿನ್‌ (PRF) ಎಂದು ಕೂಡ ಕರೆಯಲಾಗುತ್ತದೆ.

ವಯಸ್ಸಾದ ಮಹಿಳೆಯರು, ಸುಕ್ಕು ಗಟ್ಟಿದ ಚರ್ಮದ ಕಾಂತೀಯತೆಯನ್ನು ಸೂಜಿಯ ಮೂಲಕವೇ ಹೆಚ್ಚಿಸುವುದು ಇದರ ಪ್ರಮುಖ ವಿಧಾನವಾಗಿದೆ. ಚರ್ಮದಲ್ಲಿ ಕಾಲಜಿನ್‌ ಉತ್ಪಾದನೆ ಹೆಚ್ಚಿಸಿ, ಚರ್ಮವು ಹೊಳೆಯುವಂತೆ ಮಾಡುವುದೇ ರಕ್ತಪಿಶಾಚಿ ಫೇಶಿಯಲ್‌ ಆಗಿದೆ. ಇದನ್ನು ಭಾರತದ ಪ್ರಮುಖ ನಗರಗಳು ಸೇರಿ ಜಗತ್ತಿನಾದ್ಯಂತ ಸ್ಪಾಗಳಲ್ಲಿ ಮಾಡುತ್ತಾರೆ. ಆದರೆ, ಈ ಫೇಶಿಯಲ್‌ ಈಗ ಮಹಿಳೆಯರ ಪ್ರಾಣಕ್ಕೇ ಕುತ್ತು ತರುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಹೆಣ್ಣುಮಕ್ಕಳ ಕೈಗಳಿಂದ ರಕ್ತವನ್ನು ತೆಗೆದು, ಅದರಿಂದ ಪ್ಲೇಟ್‌ಲೆಟ್‌ಗಳನ್ನು ವಿಗಂಡಣೆ ಮಾಡಿ, ಆ ರಕ್ತವನ್ನು ಸಣ್ಣ ಸೂಜಿಯ ಮೂಲಕ ಮುಖಕ್ಕೆ ಅಳವಡಿಸುತ್ತಾರೆ. ಇದರಿಂದ ಚರ್ಮವು ಹೊಳೆಯುತ್ತದೆ. ಸುಕ್ಕುಗಳು ಮಾಯವಾಗುತ್ತಿವೆ. ಇದು ಸುಲಭ ಹಾಗೂ ಅಷ್ಟೇನೂ ಹೆಚ್ಚಿನ ಹಣ ಖರ್ಚಾಗದ ಕಾರಣ ಜಾಸ್ತಿ ಮಹಿಳೆಯರು ಈ ಫೇಶಿಯಲ್‌ ಮೊರೆಹೋಗುತ್ತಿದ್ದಾರೆ ಎನ್ನಲಾಗಿದೆ. ಇಂತಹ ಫೇಶಿಯಲ್‌ ಮಾಡಿಸಿಕೊಳ್ಳುವ ಮೊದಲು ಹೆಣ್ಣುಮಕ್ಕಳು ಎಚ್ಚರಿಕೆಯಿಂದ ಇರಬೇಕು ಎಂದು ಅಮೆರಿಕದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Sweet Potatoes: ಗೆಣಸಿಗೆ ಮಧುಮೇಹ ನಿಯಂತ್ರಿಸುವ, ಕ್ಯಾನ್ಸರ್ ತಡೆಯುವ ಸಾಮರ್ಥ್ಯವಿದೆ!

Continue Reading

ಆರೋಗ್ಯ

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯು ಭಾರತದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯತ್ತ ಮಹತ್ವದ ಹೆಜ್ಜೆ. ದುರ್ಬಲ ಕುಟುಂಬಗಳಿಗೆ ಹೆಚ್ಚು ಅಗತ್ಯವಿರುವ ಆರ್ಥಿಕ ರಕ್ಷಣೆಯನ್ನು ನೀಡುತ್ತದೆ. ಇದರ ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ, ಇದರಿಂದ ಸಿಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Bharat Yojana
Koo

ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ ಜಾರಿಯಾಗಿರುವ ಆಯುಷ್ಮಾನ್ ಯೋಜನೆ ಇನ್ನೂ ಹಲವು ಮಂದಿಗೆ ಸರಿಯಾಗಿ ಅರ್ಥವೇ ಆಗಿಲ್ಲ. ಇದರಿಂದ ಸಾಕಷ್ಟು ಪರಿಣಾಮಕಾರಿಯಾಗಿ ಎಲ್ಲರನ್ನು ತಲುಪುವುದು ಸಾಧ್ಯವಾಗಿಲ್ಲ. ಭಾರತದಂತಹ ವಿಶಾಲ ಮತ್ತು ವೈವಿಧ್ಯಮಯವಾದ ದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವುದು ಸವಾಲಾಗಿದೆ. ಇದನ್ನು ಗುರುತಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಆಯುಷ್ಮಾನ್ ಭಾರತ್ ಯೋಜನೆಯು ಏನನ್ನು ಒಳಗೊಳ್ಳುತ್ತದೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಅದರ ಪ್ರಯೋಜನಗಳಿಗಾಗಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದರ ಮಾಹಿತಿ ಇಲ್ಲಿದೆ.


ಏನಿದು ಆಯುಷ್ಮಾನ್ ಭಾರತ್ ಯೋಜನೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪರಿಚಯಿಸಿದ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿಗಳು ನಿಗದಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಮೊತ್ತದವರೆಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಪಡೆಯಬಹುದು.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ನೋಂದಣಿ ಹೇಗೆ?

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಮೊದಲು ಅದರ ಬಗ್ಗೆ ತಿಳಿದುಕೊಳ್ಳಿ.

ಅರ್ಹತೆಯನ್ನು ಪರಿಶೀಲಿಸಿ

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಣಿ ನಡೆಸುವ ಮೊದಲು ಆಯುಷ್ಮಾನ್ ಭಾರತ್ ಯೋಜನೆ ಪಡೆಯುವ ಅರ್ಹತೆ ನಿಮಗಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಇದು ಪ್ರಾಥಮಿಕವಾಗಿ ಸಾಮಾಜಿಕ ಆರ್ಥಿಕ ಅಂಶಗಳು ಮತ್ತು ಮನೆಯ ಆದಾಯವನ್ನು ಆಧರಿಸಿರುತ್ತದೆ.


ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ

ಆಯುಷ್ಮಾನ್ ಭಾರತ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಾಮಾನ್ಯ ಸೇವಾ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿಮ್ಮ ಪ್ರದೇಶದಲ್ಲಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರಗಳನ್ನು ಪತ್ತೆ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಲ್ಲಿಗೆ ಭೇಟಿ ಮಾಡಿ.

ಅಗತ್ಯ ದಾಖಲೆಗಳನ್ನು ಒದಗಿಸಿ

ನೋಂದಣಿ ಪ್ರಕ್ರಿಯೆಯಲ್ಲಿ ನಿಮ್ಮ ಅರ್ಹತೆಯನ್ನು ಸ್ಥಾಪಿಸಲು ನೀವು ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವುಗಳು ಗುರುತಿನ ಪುರಾವೆ, ವಿಳಾಸ ಪುರಾವೆ ಮತ್ತು ಆದಾಯ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

ಸಂಪೂರ್ಣ ನೋಂದಣಿ ಅರ್ಜಿ

ಒದಗಿಸಿದ ಮಾಹಿತಿಯ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಸೇವಾ ಕೇಂದ್ರದಲ್ಲಿ ಒದಗಿಸಲಾದ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ಕುಟುಂಬದ ಸದಸ್ಯರು, ಆದಾಯ ಮತ್ತು ಇತರ ಸಂಬಂಧಿತ ಮಾಹಿತಿಯ ಕುರಿತು ವಿವರಗಳನ್ನು ಒದಗಿಸಿ.

ಪರಿಶೀಲನೆ ಪ್ರಕ್ರಿಯೆ

ನೋಂದಣಿ ಫಾರ್ಮ್ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ ಅಧಿಕಾರಿಗಳು ಆಯುಷ್ಮಾನ್ ಭಾರತ್ ಯೋಜನೆಗೆ ನಿಮ್ಮ ಅರ್ಹತೆಯನ್ನು ಪರಿಶೀಲಿಸುತ್ತಾರೆ. ಈ ಪರಿಶೀಲನಾ ಪ್ರಕ್ರಿಯೆಯು ಸರ್ಕಾರಿ ಡೇಟಾಬೇಸ್‌ಗಳೊಂದಿಗೆ ಒದಗಿಸಲಾದ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡುವುದನ್ನು ಒಳಗೊಂಡಿರುತ್ತದೆ.

ಆಯುಷ್ಮಾನ್ ಕಾರ್ಡ್ ಸ್ವೀಕರಿಸಿ

ಅರ್ಹತೆಯ ಯಶಸ್ವಿ ಪರಿಶೀಲನೆಯ ಅನಂತರ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಿರುವ ಆಯುಷ್ಮಾನ್ ಕಾರ್ಡ್ ಅನ್ನು ನಿಮಗೆ ನೀಡಲಾಗುತ್ತದೆ. ಈ ಕಾರ್ಡ್ ಯೋಜನೆಯಲ್ಲಿ ನಿಮ್ಮ ದಾಖಲಾತಿಗೆ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆಗಳನ್ನು ಪ್ರವೇಶಿಸಲು ಅನುಮತಿ ನೀಡುತ್ತದೆ.

doctor

ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಿ

ಆಯುಷ್ಮಾನ್ ಕಾರ್ಡ್‌ನೊಂದಿಗೆ ನೀವು ಇದೀಗ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಯಾವುದೇ ಎಂಪನೆಲ್ ಮಾಡಲಾದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯಬಹುದು. ನಗದು ರಹಿತ ಚಿಕಿತ್ಸಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿಮ್ಮ ಕಾರ್ಡ್ ಅನ್ನು ಆಸ್ಪತ್ರೆಯ ಸ್ವಾಗತ ವಿಭಾಗದಲ್ಲಿ ನೀಡಿ.

ಪ್ರಯೋಜನಗಳು ಏನೇನು?

ಆಯುಷ್ಮಾನ್ ಕಾರ್ಡ್‌ ಹೊಂದಿರುವುದರಿಂದ ಪ್ರಮುಖ ಪ್ರಯೋಜನಗಳು ಇಂತಿವೆ.

ದುರ್ಬಲ ಕುಟುಂಬಗಳಿಗೆ ರಕ್ಷಣೆ

ಆಯುಷ್ಮಾನ್ ಭಾರತ್ ಯೋಜನೆಯು ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಚ್ಚಿನ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕ ರಕ್ಷಣೆ ನೀಡುತ್ತದೆ.

ನಗದು ರಹಿತ ಚಿಕಿತ್ಸೆ

ಯೋಜನೆಯ ಫಲಾನುಭವಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ ನಿಗದಿತ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು.

ವ್ಯಾಪಕ ಆಸ್ಪತ್ರೆ ನೆಟ್‌ವರ್ಕ್

ಅಯುಷ್ಮಾನ್ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳನ್ನು ಒಳಗೊಂಡಂತೆ ನಿಗದಿತ ಆಸ್ಪತ್ರೆಗಳ ವ್ಯಾಪಕ ಜಾಲವನ್ನು ಹೊಂದಿದೆ. ಇದು ದೇಶದಾದ್ಯಂತ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸಹಕರಿಸುತ್ತದೆ.

Ayushman Card

ಆಯುಷ್ಮಾನ್ ಕಾರ್ಡಗೆ ಅಗತ್ಯವಿರುವ ದಾಖಲೆಗಳು

1. ನಿವಾಸದ ಗುರುತು ಪತ್ರ
2. ವಯಸ್ಸು ಮತ್ತು ಗುರುತಿನ ಪುರಾವೆ- ಉದಾಹರಣೆಗೆ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್
3. ಜಾತಿ ಪ್ರಮಾಣಪತ್ರ
4. ಸಂಪರ್ಕ ಮಾಹಿತಿ- ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ
5. ಆದಾಯ ಪ್ರಮಾಣ ಪತ್ರ
6. ಪ್ರಸ್ತುತ ಕುಟುಂಬದ ಸ್ಥಿತಿಯನ್ನು ಸೂಚಿಸುವ ದಾಖಲೆಗಳು

Continue Reading

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading
Advertisement
karnataka weather Forecast
ಮಳೆ6 mins ago

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Home Remedy For Cracked Heels
ಆರೋಗ್ಯ19 mins ago

Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

IPL 2024
ಕ್ರೀಡೆ26 mins ago

IPL 2024 : ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವುದೇ ಸಿಎಸ್​ಕೆ?

Ujjwal Nikam
ದೇಶ28 mins ago

Ujjwal Nikam: ಪ್ರಮೋದ್‌ ಮಹಾಜನ್‌ ಪುತ್ರಿಗೆ ಕೊಕ್‌, ಮುಂಬೈ ದಾಳಿ ವಕೀಲನಿಗೆ ಬಿಜೆಪಿ ಟಿಕೆಟ್!

Money Guide
ಮನಿ-ಗೈಡ್34 mins ago

Money Guide: ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಜಮೆ ಯಾವಾಗ?

Murder case in Belgavi
ಬೆಳಗಾವಿ42 mins ago

Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

IPL 2024
ಪ್ರಮುಖ ಸುದ್ದಿ1 hour ago

IPL 2024 : ಅಭಿಮಾನಿಗಳಿಗೆ ಮತ್ತೊಂದು ಖುಷಿಯ ಸುದ್ದಿ ಕೊಡುವುದೇ ಆರ್​ಸಿಬಿ?

Chamarajanagar
ಪ್ರಮುಖ ಸುದ್ದಿ1 hour ago

ಇವಿಎಂ ಧ್ವಂಸ; ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಏಪ್ರಿಲ್‌ 29ರಂದು ಮರು ಮತದಾನ!

Film Festival
ಬೆಂಗಳೂರು1 hour ago

Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

Parineeti Chopra talks about initial struggles in the Industry
ಬಾಲಿವುಡ್1 hour ago

Parineeti Chopra: ವೃತ್ತಿ ಜೀವನದ ಆರಂಭಿಕ ದಿನಗಳನ್ನು ನೆನೆದು ಭಾವುಕರಾದ ಪರಿಣಿತಿ ಚೋಪ್ರಾ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20242 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ6 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ13 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌