Food Tips: ಇಲ್ಲಿವೆ ಬಗೆಬಗೆಯ ಉಪ್ಪು: ಯಾರು ಹಿತವರು ನಿಮಗೆ ಈ ಉಪ್ಪಿನೊಳಗೆ! - Vistara News

ಆರೋಗ್ಯ

Food Tips: ಇಲ್ಲಿವೆ ಬಗೆಬಗೆಯ ಉಪ್ಪು: ಯಾರು ಹಿತವರು ನಿಮಗೆ ಈ ಉಪ್ಪಿನೊಳಗೆ!

ಉಪ್ಪಿನ ಬಗೆಗಳ ಬಗ್ಗೆ ತಿಳಿದುಕೊಳ್ಳುವುದರಿಂದ ಹಾಗೂ ಅವುಗಳನ್ನು ಬಳಸುವುದರಿಂದ ನಿಮ್ಮ ಅಡುಗೆಯಲ್ಲೂ ಸಾಕಷ್ಟು ವ್ಯತ್ಯಾಸ (Food Tips, kitchen tips) ಕಂಡುಕೊಳ್ಳಬಹುದು.  ಬನ್ನಿ, ಹಾಗಾದರೆ ಬಗೆಬಗೆಯ ಉಪ್ಪುಗಳ (Salt variety) ಬಗೆಗೆ ಸ್ವಲ್ಪ ತಿಳಿಯೋಣ.

VISTARANEWS.COM


on

salt vaieties
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಪ್ಪಿಗಿಂತ ರುಚಿಯಿಲ್ಲ ಎಂಬ ಗಾದೆ ಮಾತಿದೆ. ಉಪ್ಪಿಗಿಂತ ಶ್ರೇಷ್ಠವಾದ ರುಚಿ ಬೇರೆ ಇಲ್ಲ. ಯಾಕೆಂದರೆ, ಯಾವ ರುಚಿಯೂ ಇಲ್ಲದೆ ಅಡುಗೆ ಮಾಡಬಹುದೇನೋ, ಆದರೆ, ಉಪ್ಪಿಲ್ಲದ ಊಟ ಕಷ್ಟ. ಉಪ್ಪು ಹಾಕದ ಅಡುಗೆ ಸಪ್ಪೆಯೇ. ಖಾರ, ಹುಳಿ, ಸಿಹಿಯಿಲ್ಲದೆಯೂ ಊಟ ನಡೆದೀತು. ಆದರೆ ಉಪ್ಪಿಲ್ಲದೆ ಬಹಳ ಕಷ್ಟ. ಅದಕ್ಕಾಗಿಯೇ ಉಪ್ಪಿಗೆ ಅಂಥ ಸ್ಥಾನ. ಉಪ್ಪು ಅಂದ ತಕ್ಷಣ ನಾವು ಬೆಳ್ಳನೆಯ ಪುಡಿ ಎಂದೇ ನೆನೆಸಿಕೊಳ್ಳುತ್ತೇವೆ. ಆದರೆ, ಉಪ್ಪಿನಲ್ಲೂ ಸಾಕಷ್ಟು ವಿಧಗಳಿವೆ. ಬಗೆಬಗೆಯ ಖನಿಜಾಂಶಗಳಿಂದ (mineral rich) ಸಮೃದ್ಧವಾಗಿರುವ ಬೇರೆ ಬೇರೆ ಬಗೆಯ ಉಪ್ಪುಗಳು ದೊರೆಯುತ್ತವೆ. ಇವುಗಳ ಆರೋಗ್ಯ ಲಾಭಗಳೂ (health benefits) ವಿಭಿನ್ನ. ಇಂಥ ಉಪ್ಪಿನ ಬಗೆಗಳ ಬಗ್ಗೆ ತಿಳಿದುಕೊಳ್ಳುವುದರಿಂದ ಹಾಗೂ ಅವುಗಳನ್ನು ಬಳಸುವುದರಿಂದ ನಿಮ್ಮ ಅಡುಗೆಯಲ್ಲೂ ಸಾಕಷ್ಟು ವ್ಯತ್ಯಾಸ (Food Tips, kitchen tips) ಕಂಡುಕೊಳ್ಳಬಹುದು.  ಬನ್ನಿ, ಹಾಗಾದರೆ ಬಗೆಬಗೆಯ ಉಪ್ಪುಗಳ (Salt variety) ಬಗೆಗೆ ಸ್ವಲ್ಪ ತಿಳಿಯೋಣ.

1. ಟೇಬಲ್‌ ಸಾಲ್ಟ್‌: ಟೇಬಲ್‌ ಸಾಲ್ಟ್‌ ಎಂಬುದು ಬಹು ಸಾಮಾನ್ಯವಾಗಿ ಎಲ್ಲರೂ ನಿತ್ಯವೂ ಬಳಸುವ ಉಪ್ಪು. ಸಾಮಾನ್ಯ ಉಪ್ಪು ಎಂದೇ ಜನಜನಿತವಾಗೊರುವ ಇದು ಪುಡಿಯಾದ ರೂಪದಲ್ಲಿ ಬೆಳ್ಳಗೆ ಇರುತ್ತದೆ. ನೀರಿನಲ್ಲಿ ಬಹುಬೇಗನೆ ಕರಗುವ ಇದು ಅಡುಗೆಗೆ ಬಹುತೇಕರು ನಿತ್ಯವೂ ಬಳಸುವ ಉಪ್ಪು. ಅತಿಯಾದ ಸಂಸ್ಕರಣಕ್ಕೆ ಒಳಪಟ್ಟು ತಯಾರಾಗಿ ಬಂದಿರುವುದರಿಂದ ಇದರಲ್ಲಿ ಸಾಕಷ್ಟು ಖನಿಜಾಂಶಗಳು ಇರುವುದಿಲ್ಲ. ಬಹುತೇಕವು ಸಂಸ್ಕರಣದ ಸಂದರ್ಭ ನಷ್ಟವಾಗಿರುತ್ತದೆ. ಸಂಸ್ಕರಿಸುವ ಸಂದರ್ಭ ಅಯೋಡಿನ್‌ ಸೇರಿಸಿರುವ ಉಪ್ಪಿದು.

2. ಕೋಶರ್‌ ಸಾಲ್ಟ್‌: ಇದು ಟೇಬಲ್‌ ಸಾಲ್ಟ್‌ನಷ್ಟು ಪುಡಿಯಾದ ರೂಪದಲ್ಲಿ ಇರುವುದಿಲ್ಲ. ಕೊಂಚ ಹರಳಿನ ಗಾತ್ರದಲ್ಲಿ ದೊರೆಯುತ್ತದೆ. ಇದೂ ಕೂಡಾ ಅಡುಗೆಗೆ ಸಾಮಾನ್ಯವಾಗಿ ಬಳಸಲ್ಪಡುತ್ತದೆ. ಇದನ್ನು ಸೋಡಿಯಂ ಕ್ಲೋರೈಡ್‌ನಿಂದ ನೇರವಾಗಿ ತಯಾರಿಸಿರುತ್ತಾರೆ. ಜೊತೆಗೆ ಇದು ಟೇಬಲ್‌ ಸಾಲ್ಟ್‌ ಮಾದರಿಯಲ್ಲಿ ಅಯೋಡಿನ್‌ ಹಾಗೂ ಕ್ಯಾಲ್ಶಿಯ ಸಿಲಿಕೇಟ್‌ ಸೇರಿಸಲ್ಪಟ್ಟಿರುವುದಿಲ್ಲ. ಹಾಗಾಗಿ ಟೇಬಲ್‌ ಸಾಲ್ಟ್‌ನಂತೆ ಇದು ಗಾಢತೆ ಪಡೆದಿರುವುದಿಲ್ಲ. ಅದಕ್ಕಾಗಿಯೇ ಟೇಬಲ್‌ ಸಾಲ್ಟ್‌ ಕೋಶರ್‌ ಸಾಲ್ಟ್‌ಗಿಂತ ಹೆಚ್ಚು ಉಪ್ಪಾಗಿರುತ್ತದೆ.

3. ಸೀ ಸಾಲ್ಟ್‌ (ಸಮುದ್ರ ಉಪ್ಪು): ಹೆಸರೇ ಹೇಳುವಂತೆ ಈ ಉಪ್ಪನ್ನು ಸಮುದ್ರದ ನೀರಿನಿಂತ ಮಾಡಲಾಗುತ್ತದೆ. ಸಮುದ್ರದ ನೀರನ್ನು ಗದ್ದೆಗಳಂಥ ರಚನೆಯಲ್ಲಿ ಹಾಯುವಂತೆ ಮಾಡಿ, ಅಲ್ಲಿ ಉಪ್ಪು ತಯಾರಿಸಲಾಗುತ್ತದೆ. ಈ ಉಪ್ಪು ಅತ್ಯಂತ ಕಡಿಮೆ ಸಂಸ್ಕರಣಕ್ಕೆ ಒಳಪಡುವುದರಿಂದ ಇದರಲ್ಲಿ ಖನಿಜಾಂಶಗಳು ನಷ್ಟವಾಗಿರುವುದಿಲ್ಲ. ಇದು ನೈಸರ್ಗಿಕವಾಗಿ ತಯಾರು ಮಾಡುವುದರಿಂದ ಬಹಳ ಹಿಂದಿನಿಂದಲೂ ಮನೆಗಳಲ್ಲಿ ಅಡುಗೆಯಲ್ಲಿ ಬಳಸಲ್ಪಡುತ್ತಿದೆ. ಕಲ್ಲುಪ್ಪು ಹೆಸರಿನಲ್ಲಿ ಬಳಕೆಯಾಗುವ ಇದಕ್ಕೆ ನಿರ್ಧಿಷ್ಟ ಪುಡಿಯ ಆಕಾರವಿರುವುದಿಲ್ಲ.

4. ಬ್ಲ್ಯಾಕ್‌ ಸಾಲ್ಟ್‌: ಕಾಲಾ ನಮಕ್‌ ಎಂಬ ಹೆಸರಿನಲ್ಲಿ ಜನಪ್ರಿಯವಾಗಿರುವ ಈ ಉಪ್ಪು ಇನ್ನೊಂದು ಸಾಮಾನ್ಯ ಬಗೆಯ ಉಪ್ಪು. ಇದನ್ನು ಹಿಮಾಲಯದ ಅಗ್ನಿಪರ್ವತಗಳ ಬಂಡೆಗಳಿಂದ ತಯಾರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಪ್ರಮಾಣದಲ್ಲಿ ಕ್ಯಾಲ್ಶಿಯಂ, ಕಬ್ಬಿಣಾಂಶ, ಮೆಗ್ನೀಶಿಯಂ ಮೊದಲಾದ ಖನಿಜಾಂಶಗಳಿವೆ. ಸ್ವಲ್ಪ ಬೆರೆಯದೇ ಪರಿಮಳವಿರುವ ಈ ಉಪ್ಪನ್ನು ಕಡಿಮೆ ಪ್ರಮಾಣದಲ್ಲಿ ಕೆಲವು ಅಡುಗೆಗೆ ಬಳಸಬಹುದು.

5. ಹಿಮಾಲಯನ್‌ ಪಿಂಕ್‌ ಸಾಲ್ಟ್:‌ ಹಿಮಾಲಯನ್‌ ಸಾಲ್ಟ್‌ ಕೂಡಾ ಹೆಚ್ಚು ಪುಡಿಯಾದ ಆಕಾರದಲ್ಲಿರುವುದಿಲ್ಲ. ಕಲ್ಲುಪ್ಪಿನ ಹಾಗೆ ಹರಳಿನ ರೂಪದಲ್ಲಿರುತ್ತದೆ. ಪಾಕಿಸ್ತಾನ ಹಾಗೂ ಪಂಜಾಬ್‌ ಪ್ರಾಂತ್ಯದಿಂದ ಗಣಿಗಾರಿಕೆ ಮಾಡಿ ಈ ಉಪ್ಪನ್ನು ಸಂಗ್ರಹಿಸಲಾಗುತ್ತದೆ. ಇದು ಪ್ರಕೃತಿ ಸಹಜವಾಗಿಯೇ ಪಿಂಕ್‌ ಬಣ್ಣದಲ್ಲಿದ್ದು, ಇದರಲ್ಲಿ ಸಾಕಷ್ಟು ಖನಿಜ ಲವಣಗಳಿವೆ. ಹಾಗಾಗಿ ಬಹುತೇಕರು ಇತ್ತೀಚೆಗೆ ಟೇಬಲ್‌ ಸಾಲ್ಟ್‌ ಬದಲಾಗಿ ಪಿಂಕ್‌ ಸಾಲ್ಟ್‌ ಬಳಸುತ್ತಿದ್ದಾರೆ. ಇದರ ಬಣ್ಣದಿಂದಾಗಿ ಈ ಉಪ್ಪು ಆಕರ್ಷಕ.

ಇದನ್ನೂ ಓದಿ: Food Tips: ಈ ಆಹಾರಗಳನ್ನು ಬೇಯಿಸಿದರೇ ಪೋಷಕಾಂಶಗಳಿಂದ ಸಮೃದ್ಧ, ಮರೆಯಬೇಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಆರೋಗ್ಯ

Pain Relievers: ಸೈಡ್‌ ಎಫೆಕ್ಟ್‌ ಇಲ್ಲದ ಪ್ರಕೃತಿದತ್ತ ನೋವು ನಿವಾರಕಗಳಿವು

ಸಣ್ಣ ಪುಟ್ಟ ಸಮಸ್ಯೆಗಳಿಗೆ ಪ್ರಕೃತಿ ಆಸರೆಯಾಗುವ ಪರಿಯೇ ಅದ್ಭುತ. ನೋವು, ಊದಿಕೊಂಡ ಗಾಯಗಳಿಂದಾದ ನೋವು ಇತ್ಯಾದಿ ಸಮಸ್ಯೆಗಳಿಗೆ ಕೆಲವು ಸರಳ ಮನೆಮದ್ದುಗಳ ಸಹಾಯವೂ ಕೂಡ ನಮ್ಮ ದೇಹದ ನೋವುಗಳನ್ನು ಸಾಕಷ್ಟು ಶಮನಗೊಳಿಸುವ ತಾಕತ್ತನ್ನು ಹೊಂದಿವೆ. ಮಾನವನು ಕಂಡು ಹಿಡಿದ ನೋವು ನಿವಾರಕ ಮಾತ್ರೆಗಳಿಂದ ತಕ್ಷಣದ ಪರಿಹಾರ ದಕ್ಕಿದರೂ, ಅದರಿಂದ ಸಾಕಷ್ಟು ಅಡ್ಡಪರಿಣಾಮಗಳೂ ಇವೆ. ಈ ಕುರಿತ (Pain relievers) ಮಾಹಿತಿ ಇಲ್ಲಿದೆ.

VISTARANEWS.COM


on

Pain relievers
Koo

ಪ್ರಕೃತಿಯಲ್ಲಿ ನಮ್ಮ ನೋವುಗಳಿಗೆಲ್ಲವೂ ಮದ್ದಿವೆ. ಪ್ರಕೃತಿಯ ಸಾನಿಧ್ಯ ನಮಗೆ ಮಾನಸಿಕ ನೆಮ್ಮದಿಯನ್ನು ನೀಡುವ ಜೊತೆಗೆ ದೇಹಕ್ಕೆ ಆದ ನೋವನ್ನೂ ಕಡಿಮೆ ಮಾಡಲು ಮೂಲಿಕೆಗಳನ್ನು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ. ಮನುಷ್ಯ ತನ್ನ ಆರೋಗ್ಯದ ಸಮಸ್ಯೆಗಳಿಗೆ ವೈದ್ಯ ಜಗತ್ತಿನಲ್ಲಿ ಸಾಕಷ್ಟು ಮುಂದುವರಿದಿದ್ದರೂ, ಕೆಲವು ಸರಳವಾದ ಪ್ರಾಕೃತಿಕ ಆಹಾರಗಳು ಅವನ ಕೈಯನ್ನು ಬಿಡುವುದಿಲ್ಲ. ಸಣ್ಣ ಪುಟ್ಟ ಸಮಸ್ಯೆಗಳಿಗೆ ಪ್ರಕೃತಿ ಆಸರೆಯಾಗುವ ಪರಿಯೇ ಅದ್ಭುತ. ನೋವು, ಊದಿಕೊಂಡ ಗಾಯಗಳಿಂದಾದ ನೋವು ಇತ್ಯಾದಿ ಸಮಸ್ಯೆಗಳಿಗೆ ಕೆಲವು ಸರಳ ಮನೆಮದ್ದುಗಳ ಸಹಾಯವೂ ಕೂಡ ನಮ್ಮ ದೇಹದ ನೋವುಗಳನ್ನು ಸಾಕಷ್ಟು ಶಮನಗೊಳಿಸುವ ತಾಕತ್ತನ್ನು ಹೊಂದಿವೆ. ಮಾನವನು ಕಂಡು ಹಿಡಿದ ನೋವು ನಿವಾರಕ ಮಾತ್ರೆಗಳಿಂದ ತಕ್ಷಣದ ಪರಿಹಾರ ದಕ್ಕಿದರೂ, ಅದರಿಂದ ಸಾಕಷ್ಟು ಅಡ್ಡಪರಿಣಾಮಗಳೂ ಇವೆ. ಹಾಗಾಗಿ, ಪ್ರಕೃತಿಯೇ ನಮಗೆ ನೀಡಿದ ಕೆಲವು ನೋವು ನಿವಾರಕಗಳೂ ಕೂಡ ಸಾಕಷ್ಟು ನೋವುಗಳನ್ನು ಕಡಿಮೆ ಮಾಡುವಲ್ಲಿ ಸಫಲವಾಗುತ್ತದೆ. ಬನ್ನಿ, ಪ್ರಕೃತಿದತ್ತ ನೋವು ನಿವಾರಕವಾಗಿ ಯಾವೆಲ್ಲ ಆಹಾರಗಳು ಕೆಲಸ ಮಾಡುತ್ತವೆ (Pain relievers) ಎಂಬುದನ್ನು ನೋಡೋಣ.

ginger

ಶುಂಠಿ

ಪ್ರಕೃತಿದತ್ತ ಆಂಟಿ ಇನ್‌ಫ್ಲಮೇಟರಿ ಗುಣಗಳುಳ್ಳ ಆಹಾರಗಳ ಪೈಕಿ ಶುಂಠಿ ಪ್ರಮುಖವಾದದ್ದು. ಇದರಲ್ಲಿ ಅತ್ಯಂತ ಶಕ್ತಿಯುತವಾದ ನೋವು ನಿವಾರಕ ಗುಣಗಳಿದ್ದು ಮಾಂಸಖಂಡಗಳ ಸೆಳೆತ, ಉರಿಯೂತ, ನೋವುಗಳನ್ನು ಇದು ಶಮನಗೊಳಿಸುವಲ್ಲಿ ನೆರವಾಗುತ್ತದೆ. ನೋವುಗಳಿದ್ದಾಗ ರಾತ್ರಿ ಮಲಗುವ ಮೊದಲು ಶುಂಠಿಯ ಚಹಾ ಕುಡಿಯುವ ಮೂಲಕ ಒಳ್ಲೆಯ ನಿದ್ರೆ ಹಾಗೂ ನೋವಿನಿಂದ ಕೊಂಚ ಆರಾಮ ಪಡೆಯಬಹುದು.

Anti-Inflammatory Properties Health Benefits Of Raw Turmeric

ಹಸಿ ಅರಿಶಿನ

ಮಸಾಲೆಯಾಗಿ ನಾವು ನಿತ್ಯ ಅರಿಶಿನವನ್ನು ಉಪಯೋಗಿಸಿದರೂ ಇದರಲ್ಲಿರುವ ಆಂಟಿ ಇನ್‌ಫ್ಲಮೇಟರಿ ಗುಣಗಳು ನೋವುಗಳಿಗೆ ಒಳ್ಳೆಯ ಔಷಧಿ. ಇದರಲ್ಲಿ ಆಂಟಿಬಯಾಟಿಕ್‌ ಹಾಗೂ ಆಂಟಿಸೆಪ್ಟಿಕ್‌ ಗುಣಗಳು ಹೇರಳವಾಗಿವೆ. ಈ ಗುಣಗಳು ನೋವುನಿವಾರಕಗಳಂತೆ ಕೆಲಸ ಮಾಡುವ ಮೂಲಕ ನೋವನ್ನು ಕಡಿಮೆ ಮಾಡುವಲ್ಲಿ ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯ ಮಾಡುತ್ತವೆ. ಅರಿಶಿನ ಹಾಕಿದ ಹಾಲನ್ನು ಕುಡಿಯುವ ಮೂಲಕ ಅರಿಶಿನದ ಲಾಭವನ್ನು ಪಡೆಯಬಹುದು.

Anise

ಸೋಂಪು

ಹೊಟ್ಟೆಯುಬ್ಬರಕ್ಕೆ ಹೇಳಿ ಮಾಡಿಸಿದಂಥ ಸೋಂಪು ಅಸಿಡಿಟಿ ಹಾಗೂ ಗ್ಯಾಸ್‌ನ ಸಮಸ್ಯೆಗಳಿಗೆ ಅತ್ಯುತ್ತಮ ಮನೆಮದ್ದು. ಹೊಟ್ಟೆಯ ಸಮಸ್ಯೆಗಳು, ಗ್ಯಾಸ್‌ನಿಂದಾಗುವ ನೋವು, ಮಾಂಸಖಂಡಗಳ ಸೆಳೆತ ಇತ್ಯಾದಿ ನೋವುಗಳಿಗೆ ಸೋಂಪು ಅತ್ಯುತ್ತಮ ನೋವು ನಿವಾರಕವಾಗಿ, ಗ್ಯಾಸ್‌ನಿಂದ ಮುಕ್ತಿ ನೀಡುವ ಮನೆಮದ್ದಾಗಿ ಕೆಲಸ ಮಾಡುತ್ತದೆ. ಸೋಂಪನ್ನು ನೀರಿನಲ್ಲಿ ಕುದಿಸಿ ಸೋಸಿ ಕುಡಿಯುವ ಮೂಲಕ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಅತಿಯಾಗಿ ಊಟ ಮಾಡಿದಾಗ, ಹೊರಗೆ ತಿಂದು ಬಂದಾಗ, ಸಮಾರಂಭಗಳಲ್ಲಿ ಊಟ ಮಾಡಿದಾಗ ಆಗುವ ಹೊಟ್ಟೆಯುಬ್ಬರಕ್ಕೆ ತಕ್ಷಣವೇ ಹೀಗೆ ಮಾಡುವ ಮೂಲಕ ಸಮಾಧಾನ ಸಿಗಬಹುದು.

ಇದನ್ನೂ ಓದಿ: Weight Loss Tips: ಸುಸ್ಥಿರವಾಗಿ ತೂಕ ಇಳಿಸಬೇಕೆ?; ಇಲ್ಲಿದೆ ದಾರಿ!

ಸಣ್ಣ ಪುಟ್ಟ ನೋವುಗಳಿಗೆ, ಯಾವಾಗಲೂ ಪ್ರಕೃತಿದತ್ತ ಇಂತಹ ನೋವು ನಿವಾರಕಗಳು, ಆಂಟಿಸೆಪ್ಟಿಕ್‌ ಗುಣಗಳ ಆಹಾರಗಳನ್ನು ನಮ್ಮ ನಿತ್ಯಾಹಾರದಲ್ಲಿ ಅಳವಡಿಸುವ ಮೂಲಕ ಪರಿಹಾರ ಕಂಡುಕೊಳ್ಳುವುದು ಯಾವಾಗಲೂ ಒಳ್ಳೆಯದು. ಅತಿಯಾದ ಮಾತ್ರೆಗಳ ದಾಸರಾಗುವುದು, ಅಥವಾ ಸಣ್ಣ ಪುಟ್ಟ ನೋವುಗಳಿಗೂ ಮಾತ್ರೆಗಳ ಸಹಾಯ ಪಡೆಯುವುದರಿಂದ ಅಡ್ಡ ಪರಿಣಾಮಗಳನ್ನು ನಾವು ಅನುಭವಿಸಲೇ ಬೇಕಾಗುತ್ತದೆ. ಆದಷ್ಟೂ ಪ್ರಕೃತಿಯ ಕೊಡುಗೆಗಳನ್ನು ಸಮರ್ಪಕವಾಗಿ ನಮ್ಮ ನಿತ್ಯ ಜೀವನದಲ್ಲಿ ಅಳವಡಿಸುವುದನ್ನು ನಾವು ಅಭ್ಯಾಸ ಮಾಡಿಕೊಳ್ಳುವುದು ಒಳ್ಳೆಯದು ಎಂಬುದನ್ನು ಹಿರಿಯರಾದಿಯಾಗಿ ವೈದ್ಯಜಗತ್ತೂ ಕೂಡ ಒಪ್ಪಿಕೊಂಡ ಸತ್ಯ.

Continue Reading

ದೇಶ

Covishield Vaccine: ಮಗಳ ಸಾವಿಗೆ ಕೋವಿಶೀಲ್ಡ್ ಲಸಿಕೆ ಕಾರಣ: ಆಸ್ಟ್ರಾಜೆನಿಕಾ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ತಂದೆ

Covishield Vaccine: ಕೊರೊನಾ ಎದುರಿಸಲು ನೀಡಲಾದ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮವನ್ನು ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿ ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ. ವೇಣುಗೋಪಾಲನ್‌ ಗೋವಿಂದನ್‌ ಅವರಿಗೆ ತಮ್ಮ ಮಗಳ ಹಠಾತ್‌ ಸಾವಿಗೆ ಲಸಿಕೆಯೇ ಕಾರಣ ಎಂದು ಹೇಳಿ ನ್ಯಾಯಾಲಯದ ಮೊರೆ ಹೋಗಲು ನಿರ್ಧಿಸಿದ್ದಾರೆ.

VISTARANEWS.COM


on

Covishield Vaccine
Koo

ನವದೆಹಲಿ: ಕೊರೊನಾ (Covid 19) ಎದುರಿಸಲು ನೀಡಲಾದ ಕೋವಿಶೀಲ್ಡ್‌ ಲಸಿಕೆ (Covishield Vaccine) ಅಡ್ಡ ಪರಿಣಾಮವನ್ನು (Side effects) ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿ ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ.

ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್ ಎಣಿಕೆಗೆ ಕಾರಣವಾಗುವ ಸ್ಥಿತಿಯನ್ನು ಉಂಟು ಮಾಡಬಹುದು ಎಂದು ಲಸಿಕೆ ತಯಾರಕರು ಇಂಗ್ಲೆಂಡ್‌ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ ನಂತರ ವೇಣುಗೋಪಾಲನ್‌ ಗೋವಿಂದನ್‌ ಅವರಿಗೆ ತಮ್ಮ ಮಗಳ ಹಠಾತ್‌ ಸಾವಿಗೆ ಲಸಿಕೆಯೇ ಕಾರಣ ಇರಬಹುದು ಎಂಬ ಅನುಮಾನ ಕಾಡಿದ್ದು, ಅದಕ್ಕಾಗಿ ನ್ಯಾಯಾಲಯದ ಮೊರೆ ಹೋಗಲು ನಿರ್ಧಿಸಿದ್ದಾರೆ.

ವೇಣುಗೋಪಾಲನ್ ಅವರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 2021ರಲ್ಲಿ ಇವರ ಪುತ್ರಿ 20 ವರ್ಷದ ಕಾರುಣ್ಯ ಕೋವಿಶೀಲ್ಡ್ ಪಡೆದ ಬಳಿಕ ಸಾವನ್ನಪ್ಪಿದ್ದರು. ಆಸ್ಟ್ರಾಜೆನಿಕಾ ಸಂಸ್ಥೆ ಬಹಳ ತಡವಾಗಿ ಅಂದರೆ ಹಲವರು ಜೀವ ಕಳೆದುಕೊಂಡ ನಂತರ ತನ್ನ ಲಸಿಕೆಯ ಲೋಪದೋಷಗಳನ್ನು ಒಪ್ಪಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿ ದೇಶದಲ್ಲಿ ವ್ಯಾಪಕವಾಗಿ ಹಂಚಿತ್ತು.

ರಕ್ತ ಹೆಪ್ಪುಗಟ್ಟುವಿಕೆಯ ಕಾರಣ ನೀಡಿ 15 ಯುರೋಪಿಯನ್ ದೇಶಗಳು ಕೋವಿಶೀಲ್ಡ್‌ ಬಳಕೆಗೆ ನಿಷೇಧ ಹೇರಿದ ಬಳಿಕವಾದರೂ ಸೆರಂ ಇನ್‌ಸ್ಟಿಟ್ಯೂಟ್‌ ಈ ಲಸಿಕೆಯ ಪೂರೈಕೆಯನ್ನು ಸ್ಥಗಿತಗೊಳಿಸಬೇಕಿತ್ತು. ಆದರೆ ಇದರಿಂದ ತೊಂದರೆಗೊಳಗಾಗಿ ತಮ್ಮವರನ್ನು ಕಳೆದುಕೊಂಡ ಅನೇಕ ಪೋಷಕರು ನ್ಯಾಯಾಲಯಗಳಲ್ಲಿ ಹೋರಾಟ ಮಾಡಿದ್ದರೂ ನ್ಯಾಯ ಸಿಕ್ಕಿಲ್ಲ ಎಂದು ವೇಣುಗೋಪಾಲನ್ ಹೇಳಿದ್ದಾರೆ. ಈಗಾಗಲೇ ಈ ಲಸಿಕೆಯಿಂದ ಜೀವ ಕಳೆದುಕೊಂಡ ಸಂತ್ರಸ್ತರ 8 ಕುಟುಂಬಗಳು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಅವರು ಬರೆದುಕೊಂಡಿದ್ದಾರೆ.

ಸೆರಮ್ ಇಸ್ಟಿಟ್ಯೂಟ್‌ನ ಪೂನಾವಾಲಾ ಅವರು ತಾವು ಮಾಡಿದ ಪಾಪಗಳಿಗೆ ಉತ್ತರ ನೀಡಬೇಕು. ಅವರ ತಪ್ಪಿನಿಂದ ಬಲಿಯಾದ ಜೀವಗಳಿಗೆ ಉತ್ತರ ನೀಡಬೇಕು ಎಂದು ಗೋವಿಂದನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಜತೆಗೆ ಈ ಲಸಿಕೆಗೆ ಅನುಮೋದನೆ ನೀಡಿದ ಸರ್ಕಾರಿ ಅಧಿಕಾರಿಗಳ ಬಗ್ಗೆಯೂ ಅವರು ಕಿಡಿ ಕಾರಿದ್ದಾರೆ. ಹಾಗೆಯೇ 2021ರಲ್ಲಿ ರಚನಾ ಗಂಗು ಎಂಬವರು ಕೂಡ ತಮ್ಮ 18 ವರ್ಷದ ಮಗಳು ರಿತೈಕಾಳನ್ನು ಕಳೆದು ಕೊಂಡಿದ್ದು, ಇದಕ್ಕೂ ಕೋವಿಶೀಲ್ಡ್‌ ಕಾರಣ ಎಂದು ಹೇಳಿದ್ದಾರೆ.

ಇದನ್ನೂ ಓದಿ: Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

ಕೋವಿಡ್‌ ನಂತರದ ದಿನಗಳಲ್ಲಿ ಯುವಜನರಲ್ಲಿಯೂ ವಿವರಿಸಲಾಗದ ತೀವ್ರ ಅಸ್ವಸ್ಥತೆ, ಹೃದಯಸ್ತಂಭನ ಮುಂತಾದವುಗಳು ಕಂಡುಬಂದಿವೆ. ಕೋವಿಡ್‌ ಹಾಗೂ ಅದರ ಲಸಿಕೆಯ ಬಗ್ಗೆ ಈ ಹಿಂದೆಯೂ ಅನುಮಾನ ಮೂಡಿಸಿದ್ದವು. ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸಂಸ್ಥೆಯು ಈ ವಿವಾದದ ಕುರಿತು ಇನ್ನೂ ಹೇಳಿಕೆ ನೀಡಿಲ್ಲ.

Continue Reading

ಬೆಂಗಳೂರು

108 Ambulance : 3 ತಿಂಗಳ ವೇತನ ಬಾಕಿ; ನಾಳೆ ರಾತ್ರಿಯಿಂದಲೇ 108 ಆಂಬ್ಯುಲೆನ್ಸ್‌ ಸೇವೆ ಬಂದ್‌!

Ambulance Service: ಜನರಿಗೆ ತುರ್ತು ಚಿಕಿತ್ಸೆ ಸಿಗಲೆಂದು ಆರಂಭವಾದ 108 ಆ್ಯಂಬುಲೆನ್ಸ್ (108 ambulance) ಸೇವೆಗೆ ಮಂಕು ಕವಿದಿದೆ. ಪದೇಪದೆ ಆಂಬ್ಯುಲೆನ್ಸ್‌ ಸಿಬ್ಬಂದಿಗೆ ವೇತನ ಸಮಸ್ಯೆಯು ಉದ್ಭವಿಸುತ್ತಿದೆ. ಇದೀಗ 3 ತಿಂಗಳ ಬಾಕಿ ಸಂಬಳ ನೀಡಲು ವಿಳಂಬ ಮಾಡುತ್ತಿರುವುದಕ್ಕೆ ಸಿಟ್ಟಾಗಿರುವ 108 ಆಂಬ್ಯುಲೆನ್ಸ್‌ ಸಿಬ್ಬಂದಿ ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ.

VISTARANEWS.COM


on

By

108 ambulance
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರೋಗ್ಯ ಕವಚ 108 ಆಂಬ್ಯುಲೆನ್ಸ್‌ (108 Ambulance) ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ (Salary Problem) ಕಾರಣಕ್ಕೆ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ನಾಳೆ ಅಂದರೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಆಂಬ್ಯುಲೆನ್ಸ್ ಸೇವೆ ಬಂದ್ (Ambulance Service) ಆಗಲಿದೆ.

ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಬ್ಬಂದಿ ತಿರುಗಿ ಬಿದ್ದಿದ್ದಾರೆ. ಮೂರು ತಿಂಗಳಿಂದ ವೇತನ ಸಿಗದೆ 108 ಸಿಬ್ಬಂದಿ ಜೀವನ ಹೈರಾಣಾಗಿದೆ. ಒಂದು ಕಡೆ ಮೂರು ತಿಂಗಳಿಂದ ಸಂಬಳವಿಲ್ಲ. ಮತ್ತೊಂದು ಕಡೆ ಜಿವಿಕೆ ಸಂಸ್ಥೆ ವೇತನ ಕಡಿತಗೊಳಿಸಿದೆ ಎಂದು ಕಿಡಿಕಾರಿದ್ದಾರೆ.

ಈ ಎಲ್ಲ ಕಾರಣಗಳಿಗೆ ಸೋಮವಾರ ರಾತ್ರಿಯಿಂದ ಆಂಬ್ಯುಲೆನ್ಸ್‌ ಓಡಾಟವನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಕಳೆದ ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ಬಾಕಿ ಇದೆ. ಜಿವಿಕೆ ಸಂಸ್ಥೆ ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರ ರೂ. ಕಡಿತ ಮಾಡಿ, ಕೇವಲ 13 ಸಾವಿರ ರೂ. ವೇತನ ನೀಡುತ್ತಿದೆ.

ಇದನ್ನೂ ಓದಿ: Accident News: ಸೆಕೆ ಎಂದು ಕೆರೆಗೆ ಜಿಗಿದ ವ್ಯಕ್ತಿ ಸಾವು; ವಿದ್ಯುತ್‌ ತಂತಿ ತುಳಿದು ಪ್ರಾಣಬಿಟ್ಟ ರೈತ

ಹೀಗಾಗಿ ನಾಳೆ ಸಂಜೆಯೊಳಗೆ ವೇತನ ಪಾವತಿ ಮಾಡುವಂತೆ ಆರೋಗ್ಯ ಇಲಾಖೆಗೆ ಮನವಿ ಮಾಡಲಾಗಿದೆ. ಕಡಿತ ಮಾಡಿದ ವೇತನವನ್ನು ಬಿಡುಗಡೆ ಮಾಡಬೇಕು. ಒಂದು ವೇಳೆ ವೇತನ ಪಾವತಿ ಮಾಡದಿದ್ದರೆ ಮುಷ್ಕರದ ಎಚ್ಚರಿಕೆಯನ್ನು ಕರ್ನಾಟಕ ರಾಜ್ಯ ಆರೋಗ್ಯ ಕವಚ 108 ನೌಕರರ ಸಂಘ ನೀಡಿದೆ.

ರಸ್ತೆಗಿಳಿಯಲ್ಲ ಆಂಬ್ಯುಲೆನ್ಸ್‌

ಸೋಮವಾರ ರಾತ್ರಿ (ಮೇ 6) 8 ಗಂಟೆಯಿಂದ ರಾಜ್ಯದ 3,500 ಆರೋಗ್ಯ ಕವಚ ಸಿಬ್ಬಂದಿ ಮುಷ್ಕರ ನಡೆಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 711 ಆಂಬ್ಯುಲೆನ್ಸ್‌ಗಳು ಕಾರ್ಯ ನಿರ್ವಹಿಸುತ್ತಿದೆ. ರಾತ್ರಿಯಿಂದ ಸಂಪೂರ್ಣ ಬಂದ್‌ ಆಗಲಿದ್ದು, ರೋಗಿಗಳಿಗೆ ತೊಂದರೆ ಆದರೆ ಸರ್ಕಾರವೇ ನೇರ ಹೊಣೆ ಎಂದು ಆಂಬ್ಯುಲೆನ್ಸ್‌ ನೌಕರರ ಸಂಘದ ಉಪಾಧ್ಯಕ್ಷ ದಯಾನಂದ ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆರೋಗ್ಯ

Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

Bood Pressure: ಅತ್ಯಂತ ಅಪಾಯಕಾರಿ ಕಾಯಿಲೆಯಾಗಿ ಪ್ರಸ್ತುತ ರಕ್ತದೊತ್ತಡ ಕಾಣಿಸುತ್ತಿದೆ. ಇದನ್ನು ನಿಯಂತ್ರಿಸಲು ಆಹಾರ ಕ್ರಮದೊಂದಿಗೆ ಜೀವನ ಶೈಲಿಯನ್ನೂ ಬದಲಾಯಿಸಬೇಕಿದೆ. ಯಾವ ಆಹಾರಗಳನ್ನು, ತರಕಾರಿಗಳನ್ನು ಸೇವಿಸಿದರೆ ರಕ್ತದೊತ್ತಡ ಕಡಿಮೆ ಮಾಡಬಹುದು? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Blood Pressure
Koo

ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಎಲ್ಲರಲ್ಲೂ ಕಂಡು ಬರುತ್ತಿರುವ ಕಾಯಿಲೆ (Illness) ಮಧುಮೇಹ (diabetes) ಮತ್ತು ಅಧಿಕ ರಕ್ತದೊತ್ತಡ (Blood Pressure). ಇವೆರಡನ್ನೂ ನಿರ್ಲಕ್ಷಿಸಿದರೆ ಅಪಾಯ ಹೆಚ್ಚು. ಅದರಲ್ಲೂ ಅಧಿಕ ರಕ್ತದೊತ್ತಡವು (HIGH bp) ಸಾಮಾನ್ಯವಾಗಿ ನಾವು ಯೋಚಿಸುವುದಕ್ಕಿಂತ ಹೆಚ್ಚು ಅಪಾಯಕಾರಿಯಾಗಿರುತ್ತದೆ. ಅನಿಯಂತ್ರಿತ ರಕ್ತದೊತ್ತಡವು ಅಪಧಮನಿಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ.


ಇಂದಿನ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿ, ಅತಿಯಾದ ಒತ್ತಡ ಮತ್ತು ದೈಹಿಕ ನಿಷ್ಕ್ರಿಯತೆಯು ಅಧಿಕ ರಕ್ತದೊತ್ತಡಕ್ಕೆ ಮುಖ್ಯ ಕಾರಣವಾಗುತ್ತದೆ. ಆರೋಗ್ಯಕರ ರಕ್ತದೊತ್ತಡದ ಸಂಖ್ಯೆಯನ್ನು ಕಾಪಾಡಿಕೊಳ್ಳಲು ಸಮತೋಲಿತ ಆಹಾರದಿಂದ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಬಹುಮುಖ್ಯ. ಹಲವಾರು ಸರಳ ಬದಲಾವಣೆಗಳು ರಕ್ತದೊತ್ತಡವನ್ನು ನೈಸರ್ಗಿಕವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೂ ನೈಸರ್ಗಿಕವಾಗಿ ರಕ್ತದೊತ್ತಡವನ್ನು ಕಡಿಮೆ ಮಾಡಲು ಏನು ತಿನ್ನಬೇಕು ಎನ್ನುವುದು ಹೆಚ್ಚಿನವರಿಗೆ ತಿಳಿದಿಲ್ಲ.

ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿರುವ ತರಕಾರಿಗಳನ್ನು ನಮ್ಮ ದೈನಂದಿನ ಆಹಾರಕ್ರಮದಲ್ಲಿ ಸೇರಿಸಿಕೊಳ್ಳುವುದರಿಂದ ರಕ್ತದೊತ್ತಡದ ನಿಯಂತ್ರಿಸಿಕೊಳ್ಳಬಹುದು. ಅವುಗಳು ಯಾವುದು ಗೊತ್ತೇ?


ಬೀಟ್ರೂಟ್

ಅಧ್ಯಯನಗಳ ಪ್ರಕಾರ ಬೀಟ್ರೂಟ್ ನಲ್ಲಿರುವ ನೈಟ್ರೇಟ್ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್ ರಸವನ್ನು ಕುಡಿಯುವುದು ಅಥವಾ ಸಲಾಡ್, ಸೂಪ್ ಅಥವಾ ಮೇಲೋಗರಗಳಿಗೆ ಸೇರಿಸುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಪ್ರಯೋಜನಕಾರಿಯಾಗಿದೆ.


ಹಸಿರು ಸೊಪ್ಪು ತರಕಾರಿಗಳು

ಹಸಿರು ಸೊಪ್ಪು ತರಕಾರಿಗಳು ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿವೆ. ಸೊಪ್ಪು ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಒಟ್ಟಾರೆ ಹೃದಯರಕ್ತನಾಳದ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆ ತೋರಿಸಿದೆ. ಪಾಲಕ್, ಹಸಿರು ಬಾಳೆ ಮತ್ತು ಸಾಸಿವೆ ಗ್ರೀನ್ಸ್ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.


ಬೆಳ್ಳುಳ್ಳಿ

ಆಂಟಿಫಂಗಲ್ ಮತ್ತು ಆ್ಯಂಟಿಬಯೋಟಿಕ್ ಗುಣಗಳಿರುವ ಬೆಳ್ಳುಳ್ಳಿ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬೆಳ್ಳುಳ್ಳಿ ಕೂಡ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.


ಸಿಹಿ ಆಲೂಗಡ್ಡೆ

ಫೈಬರ್, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಹೇರಳವಾಗಿರುವ ಸಿಹಿ ಆಲೂಗಡ್ಡೆ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


ಬ್ರೊಕೊಲಿ

ಬ್ರೊಕೊಲಿಯನ್ನು ಆಹಾರದಲ್ಲಿ ಸೇರಿಸುವುದು ಅಧಿಕ ಬಿಪಿಯನ್ನು ನಿಯಂತ್ರಿಸಲು ಪರಿಣಾಮಕಾರಿ ಮಾರ್ಗವಾಗಿದೆ. ಕೋಸುಗಡ್ಡೆಯು ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ, ಪೊಟ್ಯಾಸಿಯಮ್, ವಿಟಮಿನ್ ಕೆ, ಪ್ರೋಟೀನ್ ಮತ್ತು ಫೈಬರ್‌ನಿಂದ ಕೂಡಿದೆ.


ಆಲೂಗಡ್ಡೆ

ಆಲೂಗಡ್ಡೆ ಪೊಟ್ಯಾಸಿಯಮ್‌ನ ರಕ್ತದೊತ್ತಡ ನಿಯಂತ್ರಿಸಲು ಉತ್ತಮ ಮಾರ್ಗವಾಗಿದೆ. ಆಲೂಗಡ್ಡೆಯನ್ನು ಆಹಾರದಲ್ಲಿ ಹಲವಾರು ವಿಧದಲ್ಲಿ ಸೇರಿಸಿ ರಕ್ತದೊತ್ತಡವನ್ನು ದೂರವಿಡಬಹುದು.


ಇದನ್ನೂ ಓದಿ: Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

ಕ್ಯಾರೆಟ್

ದೃಷ್ಟಿಯ ಸಮಸ್ಯೆಯನ್ನು ನಿವಾರಿಸುವ ಕ್ಯಾರೆಟ್ ಹಲವಾರು ಪ್ರಯೋಜನಕಾರಿ ಸಸ್ಯ-ಆಧಾರಿತ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ನಿಯಂತ್ರಿತ ರಕ್ತದೊತ್ತಡ ಸೇರಿದಂತೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
ಅಧಿಕ ರಕ್ತದೊತ್ತಡ ಹೊಂದಿದ್ದರೆ ಇದಕ್ಕೆ ಕೇವಲ ಆಹಾರ ಮಾತ್ರ ಸಹಾಯ ಮಾಡುವುದಿಲ್ಲ. ದೈಹಿಕವಾಗಿ ಸಕ್ರಿಯವಾಗಿರುವುದು ಕೂಡ ಅಷ್ಟೇ ಅಗತ್ಯವಾಗಿದೆ. ಉಪ್ಪು ಸೇವನೆ, ಕೆಫೀನ್ ಅನ್ನು ಕಡಿಮೆ ಮಾಡುವುದು ಮತ್ತು ಒತ್ತಡದ ಮಟ್ಟವನ್ನು ನಿರ್ವಹಿಸುವುದು ಕೂಡ ಅತ್ಯಗತ್ಯ. ದೀರ್ಘಕಾಲದ ಅಧಿಕ ರಕ್ತದೊತ್ತಡ ಹೊಂದಿದ್ದರೆ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯುವುದು ಮುಖ್ಯ.

Continue Reading
Advertisement
karnataka Weather Forecast
ಮಳೆ20 mins ago

Karnataka Weather : ಇಂದು ಮಳೆ ಬರುತ್ತಾ? ಯಾವ ಜಿಲ್ಲೆಗಳಲ್ಲಿದೆ ಹೀಟ್‌ ವೇವ್‌?

Pain relievers
ಆರೋಗ್ಯ50 mins ago

Pain Relievers: ಸೈಡ್‌ ಎಫೆಕ್ಟ್‌ ಇಲ್ಲದ ಪ್ರಕೃತಿದತ್ತ ನೋವು ನಿವಾರಕಗಳಿವು

Dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Ramanagara News
ಕರ್ನಾಟಕ7 hours ago

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Narendra Modi
ದೇಶ7 hours ago

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

IPL 2024
ಪ್ರಮುಖ ಸುದ್ದಿ7 hours ago

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

Prajwal Revanna Case
ಪ್ರಮುಖ ಸುದ್ದಿ7 hours ago

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

IPL 2024
ಕ್ರೀಡೆ7 hours ago

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

Narendra Modi
ದೇಶ7 hours ago

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Prajwal Revanna Case
ಕರ್ನಾಟಕ8 hours ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ11 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ13 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ13 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌