Guava Leaves Benefits: ಕೇವಲ ಸೀಬೆ ಹಣ್ಣಲ್ಲ, ಎಲೆಯಿಂದಲೂ ಎಷ್ಟೊಂದು ಪ್ರಯೋಜನಗಳು! - Vistara News

ಆರೋಗ್ಯ

Guava Leaves Benefits: ಕೇವಲ ಸೀಬೆ ಹಣ್ಣಲ್ಲ, ಎಲೆಯಿಂದಲೂ ಎಷ್ಟೊಂದು ಪ್ರಯೋಜನಗಳು!

ಸೀಬೆಯ ಎಲೆಯಿಂದ (guava leaves benefits) ನಿಮ್ಮ ಕೂದಲೂ ಸೇರಿದಂತೆ ನಿತ್ಯವೂ ಕಾಡುವ ಹಲವಾರು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣದಂತಹ ಉತ್ತರವಿದೆ. ಇದರಿಂದ ಆಗಬಹುದಾದ ಲಾಭಗಳನ್ನು ನೀವು ತಿಳಿದುಕೊಂಡರೆ ಖಂಡಿತಾ ನೀವು ಸೀಬೆ ಮರವನ್ನು ಅರಸಿಕೊಂಡು ಹೋಗುವುದರಲ್ಲಿ ಯಾವ ಸಂಶಯವೂ ಇಲ್ಲ. ಬನ್ನಿ ಸೀಬೆ ಮರದ ಎಲೆಯ ಲಾಭಗಳನ್ನು ತಿಳಿದುಕೊಳ್ಳೋಣ.

VISTARANEWS.COM


on

guava leaves benefits
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪೇರಳೆ ಅಥವಾ ಸೀಬೆ ಹಣ್ಣಿನ (guava leaves benefits) ಮಹತ್ವದ ಬಗ್ಗೆ ನಿಮಗೆ ಕೇಳಿ ಗೊತ್ತಿರಬಹುದು. ಅದರ ಆರೋಗ್ಯದ ಲಾಭಗಳನ್ನು ನೀವು ಕೇಳಿ ತಿಳಿದುಕೊಂಡು ತಿನ್ನುತ್ತಲೂ ಇರಬಹುದು. ಆದರೆ ಸೀಬೆಕಾಯಿಯ ಎಲೆಯ ಲಾಭಗಳ ಬಗ್ಗೆ ನಿಮಗೆ ಗೊತ್ತೇ? ಸೀಬೆಯ ಎಲೆಯಿಂದ ನಿಮ್ಮ ಕೂದಲೂ ಸೇರಿದಂತೆ ನಿತ್ಯವೂ ಕಾಡುವ ಹಲವಾರು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣದಂತಹ ಉತ್ತರವಿದೆ. ಇದರಿಂದ ಆಗಬಹುದಾದ ಲಾಭಗಳನ್ನು ನೀವು ತಿಳಿದುಕೊಂಡರೆ ಖಂಡಿತಾ ನೀವು ಸೀಬೆ ಮರವನ್ನು ಅರಸಿಕೊಂಡು ಹೋಗುವುದರಲ್ಲಿ ಯಾವ ಸಂಶಯವೂ ಇಲ್ಲ. ಬನ್ನಿ ಸೀಬೆ ಮರದ ಎಲೆಯ ಲಾಭಗಳನ್ನು ತಿಳಿದುಕೊಳ್ಳೋಣ.

Guava Leaves

ಪೋಷಕಾಂಶಗಳು

ಸೀಬೆಯ ಎಲೆಯಲ್ಲಿ ಸಾಕಷ್ಟು ವಿಟಮಿನ್‌ಗಳೂ ಪೋಷಕಾಂಶಗಳೂ ಇರುವುದರಿಂದ ಕೂದಲನ್ನು ಶಕ್ತಿಯುತವಾಗಿಸುವಲ್ಲಿ ಇದರ ಪಾತ್ರ ದೊಡ್ಡದು. ಕೂದಲನ್ನು ಬೇರಿನಿಂದಲೇ ಶಕ್ತಿಯುತಗೊಳಿಸಿ ಗಟ್ಟಿಗೊಳಿಸುತ್ತದೆ. ಬುಡದಿಂದಲೇ ಕೂದಲನ್ನು ಆರೋಗ್ಯಯುತವಾಗಿಸಿ ಕೂದಲುದುರುವಿಕೆಯನ್ನು ತಡೆಯುತ್ತದೆ. ಕೂದಲು ಸೊಂಪಾಗಿ ದೃಢವಾಗಿ ಬೆಳೆಯುತ್ತದೆ.

ಕೂದಲು ದೃಢ

ಫ್ರೀ ರ್ಯಾಡಿಕಲ್ಸ್‌ ವಿರುದ್ಧ ಹೋರಾಡುವ ಗುಣವನ್ನು ಇದು ಹೊಂದಿರುವುದರಿಂದ ಕೂದಲಿನ ಬುಡಕ್ಕಾಗುವ ಹಾನಿಯನ್ನು ಇದು ತಪ್ಪಿಸುತ್ತದೆ. ಆ ಮೂಲಕ ಕೂದಲು ದೃಢವಾಗಿ ಬೆಳೆಯುತ್ತದೆ.

Image Of Guava Leaves Benefits

ರಕ್ತ ಸಂಚಾರ ಚುರುಕು

ಸೀಬೆ ಎಲೆಯು ಕೂದಲ ಬುಡದಲ್ಲಿ ರಕ್ತಸಂಚಾರವನ್ನು ಚುರುಕುಗೊಳಿಸುವಲ್ಲಿ ನೆರವಾಗುತ್ತದೆ. ಇದರಿಂದ ಕೂದಲ ಆರೋಗ್ಯ ಹೆಚ್ಚುತ್ತದೆ. ಕೂದಲಿಗೆ ಪೋಷಣೆ ಸರಿಯಾಗಿ ಆಗುವ ಮೂಲಕ ಸಂಪೂರ್ಣವಾಗಿ ಕೂದಲ ಆರೋಗ್ಯ ದ್ವಿಗುಣಗೊಳ್ಳುತ್ತದೆ.

ಕೂದಲ ಹೊಟ್ಟು ನಿವಾರಣೆ

ನಿಮಗೆ ಕೂದಲ ಹೊಟ್ಟಿನ ಸಮಸ್ಯೆ ಇದ್ದರೆ ಸೀಬೆ ಎಲೆ ಅತ್ಯುತ್ತಮ ಮನೆಮದ್ದು. ಸೀಬೆ ಎಲೆಯು ಕೂದಲ ಹೊಟ್ಟನ್ನು ತರುವ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡಿ ಕೂದಲ ಬುಡವನ್ನು ನಯವಾಗಿಸುತ್ತದೆ. ಕೂದಲ ಬುಡದ ಚರ್ಮ ಒಣಗಿ ಏಳುವುದನ್ನು ಇದು ತಡೆಯುತ್ತದೆ. ತುರಿಕೆ ಮತ್ತು ಕಜ್ಜಿಯ ಸಮಸ್ಯೆಗಳಿಗೂ ಇದು ಒಳ್ಳೆಯದು.

Hair Growth Tips

ಕೂದಲ ಬೆಳವಣಿಗೆ

ಸೀಬೆ ಎಲೆಯನ್ನು ಆಗಾಗ ಬಳಸುವ ಮೂಲಕ ಕೂದಲ ತುದಿ ಕವಲೊಡೆಯವ ಸಮಸ್ಯೆಯಿಂದಲೂ ಮುಕ್ತಿ ಪಡೆಯಬಹುದು. ಕೂದಲು ನಯವಾಗಿ ಉದ್ದ ಬೆಳೆಯುತ್ತದೆ.

ಮಿದುಳಿನ ಆರೋಗ್ಯಕ್ಕೆ ಸಹಕಾರಿ

ಸೀಬೆ ಎಲೆಯಲ್ಲಿ ವಿಟಮಿನ್‌ ಬಿ3 ಹಾಗೂ ಬಿ6 ಇರುವುದರಿಂದ ಮಿದುಳಿನ ಆರೋಗ್ಯಕ್ಕೂ ಇದು ಒಳ್ಳೆಯದು.

ಹೊಟ್ಟೆ ನೋವಿಗೆ ಪರಿಹಾರ

ಕೇವಲ ಇವಷ್ಟೇ ಅಲ್ಲ, ಸೀಬೆಯ ಎಲೆಗಳಿಂದ ಹೊಟ್ಟೆಯ ಸಮಸ್ಯೆಗಳಿಗೆ ಪರಿಹಾರ ಕಾಣಬಹುದು. ಹೊಟ್ಟೆಯಲ್ಲಿ ಹುಣ್ಣು, ಅಲ್ಸರ್‌, ಹೊಟ್ಟೆ ನೋವು ಮತ್ತಿತರ ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಸೀಬೆ ಎಲೆಗಿದೆ.

heart attack and Diabetes control

ಮಧುಮೇಹಕ್ಕೂ ಮದ್ದು

ಸೀಬೆ ಎಲೆ ಮಧುಮೇಹಕ್ಕೆ ಒಳ್ಳೆಯ ಮನೆಮದ್ದು. ಸೀಬೆ ಎಲೆಯ ಚಹಾ ಮಾಡಿ ಕುಡಿಯುವುದರಿಂದ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣವನ್ನು ಸಮತೋಲನಕ್ಕೆ ತರಬಹುದು.

ಗಾಯಕ್ಕೆ ಔಷಧ

ಗಾಯ ಮಾಗಲು, ಗುಣವಾಗಲು, ನೋವು ನಿವಾರಕವಾಗಿ, ರೋಗ ನಿರೋಧಕವಾಗಿಯೂ ಸೀಬೆ ಎಲೆಯು ಸಹಾಯ ಮಾಡುತ್ತದೆ.

Anti-inflammatory properties Guava Leaves Benefits

ಬಾಯಿ ಹುಣ್ಣು ನಿವಾರಣೆ

ಬಾಯಿಯ ಆರೋಗ್ಯಕ್ಕೂ ಸೀಬೆ ಎಲೆ ಒಳ್ಳೆಯದು. ಬಾಯಿಹುಣ್ಣು, ಹಲ್ಲು ನೋವು, ವಸಡಿನ ಸಮಸ್ಯೆ ಮತ್ತಿತರ ಸಮಸ್ಯೆಗಳಿಗೆ ಸೀಬೆ ಎಲೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಒಂದೆಡರಡು ಸೀಬೆ ಎಲೆಯನ್ನು ಅಥವಾ ಸೀಬೆಯ ಎಳೆ ಎಲೆಯನ್ನು ಬಾಯಲ್ಲಿಟ್ಟು ಜಗಿಯುವ ಮೂಲಕ ಇದರ ಪ್ರಯೋಜನ ಪಡೆಯಬಹುದು.

ಭೇದಿಗೆ ತಡೆ

ಭೇದಿಯ ಸಮಸ್ಯೆಗೆ ಸೀಬೆ ಎಲೆ ಒಳ್ಳೆಯ ಮನೆಮದ್ದು. ಇದು ಬೇದಿಯನ್ನು ತರುವ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ತಡೆಯುವ ಮೂಲಕ ಭೇದಿಯನ್ನು ತಡೆಯುತ್ತದೆ. ಖಾಲಿ ಹೊಟ್ಟೆಯಲ್ಲಿ ಸೀಬೆ ಎಲೆಯ ಟೀ ಮಾಡಿ ಕುಡಿಯುವ ಮೂಲಕ ಪರಿಹಾರ ಕಾಣಬಹುದು.

happy woman hand in heart

ಹೃದಯ ಆರೋಗ್ಯಕ್ಕೆ ಪೂರಕ

ಹೃದಯದ ಆರೋಗ್ಯಕ್ಕೂ ಸೀಬೆ ಎಲೆಯ ಉಪಯೋಗದಿಂದ ಫಲ ಕಾಣಬಹುದು. ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸುವುದಲ್ಲದೆ, ಕೊಲೆಸ್ಟೆರಾಲ್‌ ಅನ್ನೂ ಕಡಿಮೆಗೊಳಿಸುವ ತಾಕತ್ತನ್ನು ಹೊಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Hyperpigmentation: ಕಾಡುವ ಈ ‘ಕಪ್ಪುಕಲೆ’ ಸಮಸ್ಯೆಗೆ ಇಲ್ಲಿದೆ ಪರಿಹಾರ

Hyperpigmentation: ಹೆಣ್ಣು ಗಂಡೆನ್ನದೆ ಕಾಡುವ ಇದು ಬಹುತೇಕರ ಸಾಮಾನ್ಯ ಸಮಸ್ಯೆ ಎಂದರೆ ಚರ್ಮದ ಮೇಲೆ ಅಲ್ಲಲ್ಲಿ ಗಾಢವಾದ ಪ್ಯಾಚ್. ಸೌಂದರ್ಯ ಸಮಸ್ಯೆಯಾಗಿರುವುದರಿಂದ ಹಲವರನ್ನು ಮಾನಸಿಕವಾಗಿಯೂ ಬಾಧಿಸುತ್ತದೆ. ಮುಖ್ಯವಾಗಿ ಹೆಣ್ಣುಮಕ್ಕಳು ತಮ್ಮ ಚರ್ಮದ ಕಾಂತಿ ಮಾಯವಾಗಿ ಮುಖದ ಮೇಲೆ ಹೀಗೆ ಕಪ್ಪನೆಯ ಪ್ಯಾಚ್‌ಗಳು ಮೂಡಿದ್ದನ್ನು ಮತ್ತೆ ಇಲ್ಲವಾಗಿಸುವುದು ಹೇಗೆ ಎಂಬ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಾರೆ. ಇದಕ್ಕೆ ಪರಿಹಾರ ಏನು? ಇಲ್ಲಿದೆ ಉತ್ತರ.

VISTARANEWS.COM


on

Hyperpigmentation
Koo

ತಾನು ಸುಂದರವಾಗಿ ಕಾಣಬೇಕು (Hyperpigmentation) ಎಂಬ ಇಚ್ಛೆ ಯಾರಿಗಿಲ್ಲ ಹೇಳಿ? ಆದರೆ, ಈ ಆಸೆಗೆ ತಣ್ಣೀರೆರಚುವಂತೆ ಕಾಡುವ ಚರ್ಮದ ಸಮಸ್ಯೆ ಎಂದರೆ ಅದು ಹೈಪರ್‌ ಪಿಗ್ನೆಂಟೇಶನ್‌ ಅಥವಾ ಮೆಲಾಸ್ಮಾ. ಹೆಣ್ಣು ಗಂಡೆನ್ನದೆ ಕಾಡುವ ಇದು ಬಹುತೇಕರ ಸಾಮಾನ್ಯ ಸಮಸ್ಯೆ. ಚರ್ಮದ ಮೇಲೆ ಅಲ್ಲಲ್ಲಿ ಗಾಢವಾದ ಪ್ಯಾಚ್, ಕಪ್ಪು ಕಲೆಗಳು ಮೂಡುವುದೇ ಈ ಸಮಸ್ಯೆ. ಇದು ಹೇಳಿಕೊಳ್ಳುವಂಥ ಸಮಸ್ಯೆ ಅಲ್ಲವಾದರೂ, ಚರ್ಮದ ಸೌಂದರ್ಯ ಸಮಸ್ಯೆಯಾಗಿರುವುದರಿಂದ ಹಲವರನ್ನು ಮಾನಸಿಕವಾಗಿಯೂ ಬಾಧಿಸುತ್ತದೆ. ಮುಖ್ಯವಾಗಿ ಹೆಣ್ಣುಮಕ್ಕಳು ತಮ್ಮ ಚರ್ಮದ ಕಾಂತಿ ಮಾಯವಾಗಿ ಮುಖದ ಮೇಲೆ ಹೀಗೆ ಕಪ್ಪನೆಯ ಪ್ಯಾಚ್‌ಗಳು ಮೂಡಿದ್ದನ್ನು ಮತ್ತೆ ಇಲ್ಲವಾಗಿಸುವುದು ಹೇಗೆ ಎಂಬ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಾರೆ. ಚರ್ಮದಲ್ಲಿ ಮೆಲನಿನ್‌ ಉತ್ಪಾದನೆ ಹೆಚ್ಚಾಗುವುದರಿಂದ ಹೀಗಾಗುತ್ತದೆ. ಸಾಮಾನ್ಯವಾಗಿ ಎಲ್ಲ ಬಗೆಯ ಚರ್ಮದ ಮಂದಿಗೂ ಈ ಸಮಸ್ಯೆ ಬರಬಹುದಾಗಿದ್ದು, ಚರ್ಮವನ್ನು ಹೆಚ್ಚು ಹೊತ್ತು ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಹಾಗೂ ಹಾಗೂ ಕೆಲವು ಹಾರ್ಮೋನಿನ ಸಮಸ್ಯೆಗಳಿಂದ ೩೫- ೪೦ ವಯಸ್ಸು ದಾಟುವ ಸಂದರ್ಭ ಹಲವರಲ್ಲಿ ಕಾಣಿಸಿಕೊಳ್ಳಬಹುದು. ಇನ್ನೂ ಕೆಲವರಿಗೆ ಗರ್ಭಿಣಿಯರಾಗಿದ್ದಾಗಲೂ ಹಾರ್ಮೋನಿನ ಏರುಪೇರಿನಿಂದ ಕಾಣಿಸಬಹುದು. ಬನ್ನಿ, ಹೈಪರ್‌ಪಿಗ್ಮೆಂಟೇಶನ್‌ ಸಮಸ್ಯೆ ಕಾಣಿಸಿಕೊಂಡಾಗ ನೀವು ನಿಮ್ಮ ಚರ್ಮಕ್ಕೆ ಏನು ಮಾಡಬೇಕು ಹಾಗೂ ಏನು ಮಾಡಬಾರದು ಎಂಬುದನ್ನು ತಿಳಿದುಕೊಳ್ಳೋಣ.

Dark spots, freckles,hyperpigmentation

ಏನು ಮಾಡಬೇಕು?

ನಿತ್ಯವೂ ಸನ್‌ಸ್ಕ್ರೀನ್‌ ಧರಿಸಿ

ಸೂರ್ಯನ ಹಾನಿಕಾರಕ ಯುವಿ ಕಿರಣಗಳಿಂದ ನಮ್ಮ ಚರ್ಮವನ್ನು ರಕ್ಷಿಸಿಕೊಳ್ಳಲು ದಿನವೂ ಸನ್‌ಸ್ಕ್ರೀನ್‌ ಹಚ್ಚಿ. ಇದು ಮೆಲನಿನ್‌ ಉತ್ಪಾದನೆಯನ್ನು ಹೆಚ್ಚದಂತೆ ನೋಡಿಕೊಳ್ಳುತ್ತದೆ. ಪರಿಣಾಮವಾಗಿ ಹೈಪರ್‌ಪಿಗ್ಮೆಂಟೇಶನ್‌ ಹೆಚ್ಚಾಗುವುದಿಲ್ಲ.

ಮೆದುವಾದ ಸ್ಕಿನ್‌ಕೇರ್‌ ವಸ್ತುಗಳನ್ನು ಬಳಸಿ. ನಿಮ್ಮ ಚರ್ಮದ ಮೇಲೆ ಗಾಢವಾದ, ರಾಸಾಯನಿಕಯುಕ್ತ ತೀಕ್ಷ್ಣ ಕ್ರೀಮ್‌ಗಳನ್ನು ಬಳಸಬೇಡಿ. ಹಗುರವಾದ, ಮೆದುವಾದ, ನೈಸರ್ಗಿಕ ಗುಣಗಳುಳ್ಳ ವಸ್ತುಗಳ್ನೇ ಬಳಸಿ.

ಆಂಟಿಆಕ್ಸಿಡೆಂಟ್‌ ಸೇವಿಸಿ: ನೀವು ಸೇವಿಸುವ ಆಹಾರದಲ್ಲಿ ಹೇರಳವಾಗಿ ಆಂಟಿ ಆಕ್ಸಿಡೆಂಟ್‌ಗಳಿರಲಿ. ಮುಖ್ಯವಾಗಿ ವಿಟಮಿನ್‌ ಸಿ ಆಕ್ಸಿಡೇಟಿವ್‌ ಒತ್ತಡದಿಂದ ಪಾರು ಮಾಡುತ್ತದೆ. ವಿಟಮಿನ್‌ ಸಿ ಯುಕ್ತ ಆಹಾರ ಸೇವಿಸಿ. ಹಾಗೂ ವಿಟಮಿನ್‌ ಸಿ ಇರುವ ಸೌಂದರ್ಯವರ್ಧಕಗಳನ್ನು ನೀವು ಬಳಸಬಹುದು.

drink water

ಹೆಚ್ಚು ನೀರು ಕುಡಿಯಿರಿ

ಹೆಚ್ಚು ನೀರು ಕುಡಿಯುವುದು, ಚರ್ಮಕ್ಕೆ ಸರಿಯಾದ ನೀರು ಪೂರೈಕೆ ಮಾಡುವುದು ಒಳ್ಳೆಯದು. ಇದು ನೈಸರ್ಗಿಕವಾಗಿ ಒಳಗಿನಿಂದಲೇ ಚರ್ಮವನ್ನು ರಿಪೇರಿ ಮಾಡುತ್ತದೆ.

ಚರ್ಮಕ್ಕೆ ಹೊಳಪನ್ನು ನೀಡುವ ನಿಯಾಸಿನಮೈಡ್‌, ಕೋಜಿಕ್‌ ಆಸಿಡ್‌, ಲೈಕೋರೈಸ್‌ ಇತ್ಯಾದಿಗಳಿರುವ ಸೌಂದರ್ಯವರ್ಧಕಗಳನ್ನು ಬಳಸಬಹುದು. ಇದು ಹೈಪರ್‌ಪಿಗ್ಮೆಂಟೇಶನ್‌ ಅನ್ನು ಕಡಿಮೆ ಮಾಡಿ ಚರ್ಮವನ್ನು ನಿಮ್ಮ ಹಳೆಯ ಬಣ್ಣಕ್ಕೆ ತರಲು ಸಹಾಯ ಮಾಡುತ್ತದೆ. ಕಲೆಗಳನ್ನು ಹೋಗಲಾಡಿಸುತ್ತವೆ.

ಆಗಾಗ ಎಕ್ಸ್‌ಫಾಲಿಯೇಟ್‌ ಮಾಡಿ. ಅರ್ಥಾತ್‌, ಒಳ್ಳೆಯ ನೈಸರ್ಗಿಕ ಗುಣಗಳುಳ್ಳ ಸ್ಕ್ರಬಿಂಗ್‌ ಲೋಷನ್‌ ಬಳಸಿ ವಾರಕ್ಕೆರಡು ಬಾರಿ ಸ್ಕ್ರಬ್‌ ಮಾಡಿ.

ಹೈಪರ್‌ ಪಿಗ್ಮೆಂಟೇಶನ್‌ಗೆ ಈಗ ಸಾಕಷ್ಟು ಸೌಂದರ್ಯ ಚಿಕಿತ್ಸೆಗಳೂ ಲಭ್ಯವಿವೆ. ಕೆಮಿಕಲ್‌ ಪೀಲ್‌, ಲೇಸರ್‌ ಥೆರಪಿ, ಮೈಕ್ರೋಡರ್ಮಾಬ್ರೇಶನ್‌ ಇತ್ಯಾದಿಗಳು ಈ ಸಮಸ್ಯೆಯನ್ನು ಸಾಕಷ್ಟು ಕಡಿಮೆ ಮಾಡುತ್ತವೆ. ಒಳ್ಳೆಯ ನುರಿತ ವೈದ್ಯರನ್ನು ಸಂಪರ್ಕಿಸಿ ಇವನ್ನು ಮಾಡಿಸಿಕೊಳ್ಳಬಹುದು.

ಇದನ್ನೂ ಓದಿ: Weight Loss Tips: ಕಪ್ಪು ಬಣ್ಣದ ಆಹಾರಗಳಿಂದ ತೂಕ ಇಳಿಸಿ!

ಇವನ್ನು ಮಾಡಬೇಡಿ

  • ಯಾವತ್ತೂ ಸನ್‌ಸ್ಕ್ರೀನ್‌ ಹಚ್ಚದೆ ಇರಬೇಡಿ. ಸನ್‌ಸ್ಕ್ರೀನ್‌ ಬಹಳ ಮುಖ್ಯ.
  • ಚರ್ಮವನ್ನು ಚಿವುಟಬೇಡಿ. ಮೊಡವೆ, ಕಜ್ಜಿಗಳಿದ್ದರೆ, ಅವುಗಳನ್ನು ಉಗುರಿನಿಂದ ಕೆರೆಯಬೇಡಿ. ಇವು ಕಲೆಯನ್ನು ಉಳಿಸಿಬಿಡುತ್ತವೆ.
  • ಆಲ್ಕೋಹಾಲ್‌, ಸಲ್ಫೇಟ್‌, ಹಾಗೂ ಗಾಢ ಪರಿಮಳಗಳುಳ್ಳ ಸೌಂದರ್ಯವರ್ಧಕ, ಕ್ರೀಂಗಳನ್ನು ಬಳಸಬೇಡಿ.
  • ನಿತ್ಯವೂ ಮಾಯ್‌ಶ್ಚರೈಸ್‌ ಮಾಡಿಕೊಳ್ಳುವುದನ್ನು ಮರೆಯಬೇಡಿ.
  • ಅತಿಯಾಗಿ ಎಕ್ಸ್‌ಫಾಲಿಯೇಟ್‌ ಮಾಡಬೇಡಿ.
  • ನಿಮ್ಮ ಚರ್ಮ ತೋರುವ ಪ್ರತಿಕ್ರಿಯೆಯನ್ನು ನಿರ್ಲಕ್ಷಿಸಬೇಡಿ. ಏನೇ ಅಲರ್ಜಿಯಿದ್ದರೂ ಕೂಡಲೇ ಸೂಕ್ತ ವೈದ್ಯರನ್ನು ಕಾಣಿ.
  • ಯಾವತ್ತಿಗೂ ದಿನಾಂಕ ಮುಗಿದುಹೋದ ಸೌಂದರ್ಯವರ್ಧಕಗಳನ್ನು ಬಳಸಬೇಡಿ.
Continue Reading

ಆರೋಗ್ಯ

National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

National Doctor’s Day: ಆರೋಗ್ಯವೆಂಬ ಭಾಗ್ಯ ಕೈಕೊಟ್ಟಾಗಲೇ ನಮಗೆ ವೈದ್ಯರ ನೆನಪಾಗುವುದು. ವ್ಯಕ್ತಿಗತವಾಗಿ ಮತ್ತು ಸಮುದಾಯಗಳ ಕುರಿತಾಗಿ ವೈದ್ಯರು ತೋರಿಸುವ ಕಾಳಜಿ, ಕರ್ತವ್ಯಪರತೆಯನ್ನು ಸ್ಮರಿಸಿಕೊಂಡು, ಅವರಿಗೆ ಆಭಾರಿಗಳಾಗಿರುವುದಕ್ಕೆ ಜುಲೈ ತಿಂಗಳ ಈ ಮೊದಲ ದಿನವನ್ನು ಮೀಸಲಿಡಲಾಗಿದೆ. ಈ ಕುರಿತ ವಿಶೇಷ ಲೇಖನ ಇಲ್ಲಿದೆ.

VISTARANEWS.COM


on

National Doctor’s Day
Koo

ವೈದ್ಯರನ್ನು ನಾರಾಯಣನೆಂದು ಕರೆಯುವ ವಾಡಿಕೆಯಿದೆ ಭಾರತದಲ್ಲಿ. ಹಾಗೆಲ್ಲ ದೇವರೆಂದು ಪೂಜಿಸುವ ವೃತ್ತಿಯಲ್ಲಿರುವವರಿಗೂ ʻಸಾಕಪ್ಪಾʼ ಎನಿಸುವಂತೆ ವೈದ್ಯರ ಮೇಲಿನ ದಾಳಿಗಳು, ನೀಟ್‌ ಪರೀಕ್ಷೆಗಳ ಅವಾಂತರ ಮುಂತಾದವು ಇತ್ತೀಚಿನ ದಿನಗಳಲ್ಲಿ ಸುದ್ದಿ ಮಾಡುತ್ತಿವೆ. ಅವುಗಳ ನಡುವೆಯೇ, ಈ ಗುಣ ಪಡಿಸುವ ಕೈಗಳಿಗೆ ಕೃತಜ್ಞತೆ ಸಲ್ಲಿಸುವ ದಿನವೂ ಬಂದಿದೆ. ಇಂದು ರಾಷ್ಟ್ರೀಯ ವೈದ್ಯರ ದಿನ (National Doctor’s Day).
ಆರೋಗ್ಯವೆಂಬ ಭಾಗ್ಯ ಕೈಕೊಟ್ಟಾಗಲೇ ನಮಗೆ ವೈದ್ಯರ ನೆನಪಾಗುವುದು. ವ್ಯಕ್ತಿಗತವಾಗಿ ಮತ್ತು ಸಮುದಾಯಗಳ ಕುರಿತಾಗಿ ವೈದ್ಯರು ತೋರಿಸುವ ಕಾಳಜಿ, ಕರ್ತವ್ಯಪರತೆಯನ್ನು ಸ್ಮರಿಸಿಕೊಂಡು, ಅವರಿಗೆ ಆಭಾರಿಗಳಾಗಿರುವುದಕ್ಕೆ ಈ ದಿನವನ್ನು ಮೀಸಲಿಡಲಾಗಿದೆ. ಇದೊಂದೇ ದಿನ ಸಾಕು ಎನ್ನುವ ಅರ್ಥದಲ್ಲಿ ಅಲ್ಲ, ಆದರೆ ಇಂದಾದರೂ ನೆನಪಿನಿಂದ ನಿಂನಿಮ್ಮ ವೈದ್ಯರಿಗೆ ಸಣ್ಣದೊಂದು ʻಥ್ಯಾಂಕ್ಸ್‌ʼ ಹೇಳಲು, ಅವರ ಕಾಳಜಿಯ ಕುರಿತಾಗಿ ಕೃತಜ್ಞತೆ ಸಲ್ಲಿಸಲು ಮರೆಯದಿರಿ ಎನ್ನುವ ಉದ್ದೇಶ ಇದರ ಹಿಂದಿದೆ.

Doctor’s Day

ಇಂದೇ ಏಕೆ?

ಜುಲೈ ಮೊದಲ ದಿನವೇ ವೈದ್ಯರ ದಿನವನ್ನಾಗಿ ಏಕೆ ಆಚರಿಸಲಾಗುತ್ತದೆ? ರೋಗಿಗಳ ನೋವನ್ನು ಶಮನ ಮಾಡುವ, ಗುಣಪಡಿಸುವ ಮತ್ತು ಬದುಕನ್ನು ಸಹನೀಯಗೊಳಿಸುವ ವೈದ್ಯರಿಗೆ ಇಂದೇ ಕೃತಜ್ಞತೆ ಸಲ್ಲಿಸುವುದಕ್ಕೆ ಕಾರಣಗಳಿವೆ. ಡಾ. ಬಿಪಿನ್‌ ಚಂದ್ರ ರಾಯ್‌ ಅವರ ಸಂಸ್ಮರಣಾರ್ಥವಾಗಿ ಭಾರತ ಸರಕಾರ ಈ ದಿನವನ್ನು ವೈದ್ಯರ ದಿನವೆಂದು 1991ರಲ್ಲಿ ಘೋಷಿಸಿದೆ. ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿಯಾಗಿದ್ದ ಡಾ. ಬಿಪಿನ್‌ ಚಂದ್ರ ರಾಯ್‌, ಖ್ಯಾತ ವೈದ್ಯರು ಮತ್ತು ಸ್ವಾತಂತ್ರ ಹೋರಾಟಗಾರರೂ ಆಗಿದ್ದರು.

ಇದನ್ನೂ ಓದಿ: Swim Benefits: ನಿತ್ಯವೂ ಈಜಿದರೆ ಸಾಕು; ಇದಕ್ಕಿಂತ ದೊಡ್ಡ ಬೇರೆ ವ್ಯಾಯಾಮ ಇನ್ನೊಂದು ಬೇಡ!

ಭಾರತೀಯ ವೈದ್ಯಕೀಯ ಸಂಘ, ಭಾರತೀಯ ವೈದ್ಯಕೀಯ ಮಂಡಳಿ ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳನ್ನು ಹುಟ್ಟುಹಾಕಿ, ವೈದ್ಯಕೀಯ ಕ್ಷೇತ್ರಕ್ಕೆ ಸಾಂಸ್ಥಿಕ ಬಲವನ್ನು ನೀಡುವಲ್ಲಿ ಡಾ. ರಾಯ್‌ ಪ್ರಮುಖರಾಗಿದ್ದರು. ತಾವೇ ಸ್ವತಃ ಒಳ್ಳೆಯ ವೈದ್ಯರಾಗಿ, ಬಹಳಷ್ಟು ಜೀವಗಳನ್ನು ಉಳಿಸಿದ್ದರು. ಸ್ವಾತಂತ್ರ ಹೋರಾಟದಲ್ಲೂ ಅವರು ಪಾಲ್ಗೊಂಡಿದ್ದರು. ದೇಶಕ್ಕೆ ಅವರು ನೀಡಿದ ಕೊಡುಗೆಗಾಗಿ, ಭಾರತದ ಅತ್ತ್ಯುನ್ನತ ನಾಗರಿಕ ಪ್ರಶಸ್ತಿ ʻಭಾರತ ರತ್ನʼ ಪುರಸ್ಕಾರವನ್ನು ನೀಡಿ ಗೌರವಿಸಲಾಗಿದೆ. ಆರೋಗ್ಯಕ್ಷೇತ್ರ ಮತ್ತು ನಾಗರಿಕ ಆರೋಗ್ಯ ವಲಯದಲ್ಲಿ ವೃತ್ತಿಪರತೆ ಮತ್ತು ಮಾನವೀಯತೆಯ ಉನ್ನತ ಆದರ್ಶಗಳನ್ನು ಸೃಷ್ಟಿಸಿರುವ ಸಾವಿರಾರು ವೈದ್ಯರು ನಮ್ಮ ಕಣ್ಣೆದುರಿಗಿದ್ದಾರೆ. ನೂರೆಂಟು ಸವಾಲುಗಳ ನಡುವೆ, ಜೀವ ಉಳಿಸುವ ಕೈಂಕರ್ಯದಲ್ಲಿ ನಿಸ್ವಾರ್ಥವಾಗಿ ತೊಡಗಿಸಿಕೊಂಡು, ಅದರಲ್ಲೇ ತೃಪ್ತಿಯನ್ನು ಕಂಡವರ ಕತೆಗಳನ್ನು, ದೃಷ್ಟಾಂತಗಳನ್ನು ನಾವೆಲ್ಲರೂ ಕೇಳಿರುತ್ತೇವೆ. ಕೋವಿಡ್‌ ಮಹಾಮಾರಿಯ ಸಂದರ್ಭದಲ್ಲೇ ಜೀವ ಒತ್ತಡ ಇಟ್ಟು ಹಗಲಿರುಳು ದುಡಿದ ವೈದ್ಯರು ಜಗತ್ತಿನ ಉದ್ದಗಲಕ್ಕೆ ಕಾಣಸಿಗುತ್ತಾರೆ. ಸಮಾಜಕ್ಕೆ ಈ ವೃತ್ತಿ ನೀಡುತ್ತಿರುವ ಕೊಡುಗೆಗೆ ಧನ್ಯವಾದ ಹೇಳುವುದೂ ಅಗತ್ಯವಲ್ಲವೇ? ಈ ವರ್ಷದ ಘೋಷವಾಕ್ಯ: ಗುಣಪಡಿಸುವ ಕೈಗಳು, ಕಾಳಜಿಯ ಹೃದಯಗಳು.

Continue Reading

ಪ್ರಮುಖ ಸುದ್ದಿ

Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

Dengue Fever: ಹೊಸದಾಗಿ 213 ಡೆಂಗ್ಯು ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1742 ಜನರಿಗೆ ಡೆಂಗ್ಯು ಸೋಂಕು ತಗುಲಿದೆ. ಮಹಿಳೆಯರು ಮತ್ತು ಮಕ್ಕಳು ಡೆಂಗ್ಯು ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ ಎನ್ನಲಾಗಿದ್ದು, ಗರ್ಭಿಣಿಯರಲ್ಲಿ ಡೆಂಗ್ಯು ಹೆಚ್ಚಿನ ಹಾನಿ ಎಸಗುತ್ತಿರುವುದರಿಂದಾಗಿ ಹೆಚ್ಚಿನ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.

VISTARANEWS.COM


on

Dengue fever rises across the state including Bengaluru BBMP Commissioner also get fever
Koo

ಬೆಂಗಳೂರು: ಕಗ್ಗದಾಸಪುರದ 27 ವರ್ಷದ ಯುವಕ ಡೆಂಗ್ಯು ಸೋಂಕಿನಿಂದಲೇ (Dengue Fever) ಸಾವಿಗೀಡಾಗಿದ್ದಾರೆ ಎಂದು ಬಿಬಿಎಂಪಿ (BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಎರಡು ಡೆಂಗ್ಯು ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು ಡೆಂಗ್ಯುವಿನಿಂದಾಗಿದೆ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ (BBMP Health Audit) ಖಚಿತಪಡಿಸಿದೆ.

ಕಗ್ಗದಾಸಪುರದ ಯುವಕನ ಸಾವಿಗೆ ಡೆಂಗ್ಯು ಕಾರಣವವಾಗಿದೆ. ಆದರೆ 80ರ ವೃದ್ಧೆಯ ಸಾವಿಗೆ ಕ್ಯಾನ್ಸರ್ ಕಾರಣ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ನಗರದಲ್ಲಿ ಸದ್ಯ 1743 ಆಕ್ಟಿವ್ ಡೆಂಗ್ಯು ಕೇಸ್‌ಗಳು ಇವೆ.

ಹೊಸದಾಗಿ 213 ಡೆಂಗ್ಯು ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1742 ಜನರಿಗೆ ಡೆಂಗ್ಯು ಸೋಂಕು ತಗುಲಿದೆ. ಮಹಿಳೆಯರು ಮತ್ತು ಮಕ್ಕಳು ಡೆಂಗ್ಯು ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ ಎನ್ನಲಾಗಿದ್ದು, ಗರ್ಭಿಣಿಯರಲ್ಲಿ ಡೆಂಗ್ಯು ಹೆಚ್ಚಿನ ಹಾನಿ ಎಸಗುತ್ತಿರುವುದರಿಂದಾಗಿ ಹೆಚ್ಚಿನ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.

ಇದೂವರೆಗೂ ನಗರದಲ್ಲಿ ಇಬ್ಬರು ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದಾರೆ. ಸಿವಿ ರಾಮನ್ ನಗರದ 27 ವರ್ಷದ ಯುವಕ ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದು, ಈತ ತೀವ್ರ ಜ್ವರದಿಂದ ಬಳಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ ಎಂದು ಬಿಬಿಎಂಪಿ ಮೂಲಗಳು ಮಾಹಿತಿ ನೀಡಿವೆ.

4 ಸಾವಿರ ಗಡಿ ದಾಟಿದ ಡೆಂಗ್ಯೂ; ಐವರು ಸಾವು

ಹವಾಮಾನ ವೈಪರೀತ್ಯ ಮತ್ತು ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. 2024ರಲ್ಲಿ ಈ ವರೆಗೆ (ಜೂನ್‌) 93,012 ಶಂಕಿತವಾಗಿದ್ದು, ಇದರಲ್ಲಿ 40,918 ಮಂದಿಯ ರಕ್ತ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಆ ಪ್ರಕಾರ 4364 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಫಲಿಸದೇ ಐವರು ಮೃತಪಟ್ಟಿದ್ದಾರೆ. ಶಿವಮೊಗ್ಗ, ಬಾಗಲಕೋಟೆ, ಗದಗದಲ್ಲಿ ತಲಾ ಒಬ್ಬರು ಹಾಗೂ ಹಾಸನದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಡೆತ್‌ ಆಡಿಟಿಂಗ್‌ಗೆ ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ವಿಪರೀತ ಏರಿಕೆ ಆಗಿವೆ. ಬೆಂಗಳೂರಲ್ಲಿ ಜನವರಿಯಿಂದ ಈವರೆಗೆ 1,385 ಮಂದಿಗೆ ಡೆಂಗ್ಯೂ ಜ್ವರ ಕಂಡು ಬಂದಿದೆ. ಈವರೆಗೆ ಡೆಂಗ್ಯೂನಿಂದ ಮೃತಪಟ್ಟ ವರದಿ ಆಗಿಲ್ಲ. ಆದರೆ ಇಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಶಂಕೆ ಇದ್ದು, ಸಾವಿಗೆ ಕಾರಣ ತಿಳಿಯುವ ಸಲುವಾಗಿ ಡೆತ್ ಆಡಿಟ್‌ಗೆ ಬಿಬಿಎಂಪಿ ಮುಂದಾಗಿದೆ.

ಇನ್ನೂ 3,470 ಲಾರ್ವಾ ಉತ್ಪತ್ತಿ ತಾಣ ಪತ್ತೆಯಾಗಿದ್ದು, ಇದರಲ್ಲಿ 2,004 ತಾಣಗಳ ನಾಶ ಮಾಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗ ಮಾಹಿತಿ ನೀಡಿದೆ. ಪಾಲಿಕೆಯ ಆರೋಗ್ಯ ಸಿಬ್ಬಂದಿ ನಿನ್ನೆವರೆಗೂ 17,877 ಮನೆಗಳ ಸಮೀಕ್ಷೆ ನಡೆಸಿದ್ದಾರೆ. ಆಡಿಟ್ ಬಳಿಕ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರವಾನೆ ಮಾಡಲಾಗುತ್ತದೆ.

ಡೆಂಗ್ಯೂ ಹೇಗೆ ಹರಡುತ್ತದೆ?

ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು ಆಗಿದೆ. ಇದು ಈಡಿಪಸ್‌ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಸೊಳ್ಳೆ ಕಚ್ಚಿದ 4-7 ದಿನಗಳ ನಂತರ ರೋಗ ಲಕ್ಷಣಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಇದರ ಪ್ರಭಾವ 10 ದಿನಗಳವರೆಗೆ ಇರುತ್ತದೆ. ಹೀಗಾಗಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಉತ್ತಮವಾಗಿದೆ.

ಡೆಂಗ್ಯೂ ಜ್ವರ ತಲೆನೋವಿನಂತಹ ರೋಗಲಕ್ಷಣಗಳನ್ನು ಉಂಟು ಮಾಡಬಹುದು. ಡೆಂಗ್ಯೂವನ್ನು ಹೆಮರಾಜಿಕ್ ಜ್ವರ ಎಂದೂ ಕರೆಯಲಾಗುತ್ತದೆ. ಡೆಂಗ್ಯೂ ಜ್ವರದ ತೀವ್ರ ಸ್ವರೂಪವು ತೀವ್ರ ರಕ್ತಸ್ರಾವ, ರಕ್ತದೊತ್ತಡ ಹಾಗೂ ರಕ್ತಕಣಗಳ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿ ವ್ಯಕ್ತಿಯ ಸಾವಿಗೂ ಕಾರಣವಾಗಬಹುದು. ಅಧಿಕ ಜ್ವರ, ತೀವ್ರ ತಲೆನೋವು, ವಾಂತಿ, ದೇಹದ ವಿವಿಧ ಭಾಗಗಳಲ್ಲಿ ದದ್ದುಗಳು, ಗ್ರಂಥಿಗಳಲ್ಲಿ ಊತ, ಮೂಳೆ ಮತ್ತು ಕೀಲು ನೋವು, ರಕ್ತಸ್ರಾವವಾಗವುದು ರೋಗ ಲಕ್ಷಣಗಳಾಗಿವೆ.

ಇದನ್ನೂ ಓದಿ: World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

Continue Reading

ಆರೋಗ್ಯ

Watermelon At Night: ಸಂಜೆ 7 ಗಂಟೆಯ ನಂತರ ಕಲ್ಲಂಗಡಿ ಹಣ್ಣನ್ನು ತಿನ್ನಲು ಹೋಗಬೇಡಿ!

watermelon at night: ಭರಪೂರ ಪೋಷಕಾಂಶಗಳಿರುವ ಹೃದಯ ಸ್ನೇಹಿಯಾಗಿರುವ, ಕಿಡ್ನಿಯ ಆರೋಗ್ಯಕ್ಕೂ ಸಹಾಯ ಮಾಡುವ, ರಕ್ತದೊತ್ತಡವನ್ನೂ ಸಮತೋಲನಗೊಳಿಸುವ ಕಲ್ಲಂಗಡಿ ಹಣ್ಣು ಸೇವನೆಗೆ ಸೂಕ್ತ. ಆದರೆ ಕಲ್ಲಂಗಡಿ ಕಡಿಮೆ ಕ್ಯಾಲರಿಯೆಂದು ಸಂಜೆಯ ಮೇಲೆ, ರಾತ್ರಿಯ ಊಟಕ್ಕೆ ತಿನ್ನುತ್ತೀರಾದರೆ ಕೊಂಚ ಎಚ್ಚರವಿರಲಿ. ಇದು ಖಂಡಿತಾ ರಾತ್ರಿಯೂಟದ ಸಮಯಕ್ಕೆ ಹೇಳಿ ಮಾಡಿಸಿದ ಹಣ್ಣಲ್ಲ. ಕಡಿಮೆ ಕ್ಯಾಲರಿಯಾದ್ದರಿಂದ ಇದು ಬೇಗ ಕರಗೀತು ಎಂದು ನೀವು ಲೆಕ್ಕಾಚಾರ ಹಾಕಿದರೆ ನಿಮ್ಮ ಲೆಕ್ಕಾಚಾರ ಖಂಡಿತ ತಪ್ಪು. ಈ ಬಗ್ಗೆ ಮತ್ತಷ್ಟು ಮಾಹಿತಿಗೆ ಈ ಲೇಖನ ಓದಿ.

VISTARANEWS.COM


on

Watermelon At Nigh
Koo

ಪ್ರಕೃತಿದತ್ತವಾಗಿ ಸಿಗುವ ಹಣ್ಣು ಹಂಪಲುಗಳಿಂದ ದೇಹ ತಂಪು ಮಾಡಿಕೊಂಡು ಆರೋಗ್ಯವಾಗಿರಲು ಪ್ರಯತ್ನಿಸುತ್ತೇವೆ. ಸಾಕಷ್ಟು ಹಣ್ಣುಗಳು ತೂಕ ಇಳಿಕೆಗೆ ಪೂರಕವಾಗಿಯೂ ಇವೆ. ಹೆಚ್ಚು ಲೈಕೋಪೀನ್‌ ಇರುವ ಕಲ್ಲಂಗಡಿ ಹಣ್ಣೂ ಕೂಡಾ, ತೂಕ ಇಳಿಕೆಗೆ ಸಹಾಯ ಮಾಡುವ ಹಣ್ಣೇ ಆಗಿದೆ. ಆದರೆ, ಹಾಗಂತ, ಈ ಕಲ್ಲಂಗಡಿಯನ್ನೇ ತಿಂದು ತೂಕ ಇಳಿಸಲು ಪ್ರಯತ್ನಿಸುವ ಮಂದಿಯೂ ಇಲ್ಲದಿಲ್ಲ. ಕಡಿಮೆ ಕ್ಯಾಲರಿಯ, ಹೆಚ್ಚು ನೀರಿನಂಶ ಇರುವ ತಂಪಾದ ಹಣ್ಣು ಕಲ್ಲಂಗಡಿಯನ್ನು ತಿಂದು ತೂಕ ಇಳಿಸಿಕೊಂಡವರೂ ಇದ್ದಾರೆ ನಿಜ. ಭರಪೂರ ಪೋಷಕಾಂಶಗಳಿರುವ ಹೃದಯ ಸ್ನೇಹಿಯಾಗಿರುವ, ಕಿಡ್ನಿಯ ಆರೋಗ್ಯಕ್ಕೂ ಸಹಾಯ ಮಾಡುವ, ರಕ್ತದೊತ್ತಡವನ್ನೂ ಸಮತೋಲನಗೊಳಿಸುವ ಈ ಹಣ್ಣು ಸೇವನೆಗೆ ಸೂಕ್ತ. ಆದರೆ, ಕಲ್ಲಂಗಡಿ ಕಡಿಮೆ ಕ್ಯಾಲರಿಯೆಂದು ಸಂಜೆಯ ಮೇಲೆ, ರಾತ್ರಿಯ ಊಟಕ್ಕೆ ತಿನ್ನುತ್ತೀರಾದರೆ ಕೊಂಚ ಎಚ್ಚರವಿರಲಿ. ಇದು ಖಂಡಿತಾ ರಾತ್ರಿಯೂಟದ ಸಮಯಕ್ಕೆ ಹೇಳಿ ಮಾಡಿಸಿದ ಹಣ್ಣಲ್ಲ. ಕಡಿಮೆ ಕ್ಯಾಲರಿಯಾದ್ದರಿಂದ ಇದು ಬೇಗ ಕರಗೀತು ಎಂದು ನೀವು ಲೆಕ್ಕಾಚಾರ ಹಾಕಿದರೆ ನಿಮ್ಮ ಲೆಕ್ಕಾಚಾರ ಖಂಡಿತ ತಪ್ಪು. ಬನ್ನಿ, ಕಲ್ಲಂಗಡಿಯನ್ನು (watermelon at night) ಯಾಕೆ ರಾತ್ರಿ ತಿನ್ನಬಾರದು ಎಂಬುದನ್ನು ತಿಳಿಯೋಣ.

Watermelon

ಇದು ಆಮ್ಲೀಯ ಗುಣ ಹೊಂದಿದೆ

ವಾಟರ್‌ ಮೆಲನ್‌ ಎಂಬ ತನ್ನ ಹೆಸರೇ ಹೇಳುವಂತೆ, ಕಲ್ಲಂಗಡಿ ಹಣ್ಣಿನಲ್ಲಿ 90ಕ್ಕೂ ಹೆಚ್ಚು ಪ್ರತಿಶತ ನೀರಿದೆ. ಲೈಕೋಪೀನ್, ಪೊಟಾಶಿಯಂ, ಹಾಗೂ ಸಾಕಷ್ಟು ಪ್ರಮಾಣದಲ್ಲಿ ಇತರ ಪೋಷಕಾಂಶಗಳೂ ಇವೆ. ನಾರಿನಂಶವೂ ಹೆಚ್ಚಿದೆ. ಹಾಗಾಗಿ ಜೀರ್ಣಕ್ರಿಯೆಗೆ ಸಹಾಯವನ್ನೂ ಮಾಡುತ್ತದೆ ನಿಜ. ಆದರೆ, ಇವೆಲ್ಲ ಇದ್ದೂ, ಕಲ್ಲಂಗಡಿ ಹಣ್ಣನ್ನು ಯಾವಾಗ ಎಷ್ಟು ತಿನ್ನಬೇಕು ಎಂಬ ಅರಿವು ಇರಬೇಕು. ಮುಖ್ಯವಾಗಿ ರಾತ್ರಿ ಮಲಗಲು ಹೋಗುವ ಮುನ್ನ ತಿನ್ನಬಾರದು. ಅಂದರೆ, ರಾತ್ರಿಯೂಟ ಎಂದು ಕಲ್ಲಂಗಡಿ ಹಣ್ಣನ್ನು ತಿನ್ನಬಾರದು. ಸಂಜೆ ಏಳರ ನಂತರ ಕಲ್ಲಂಗಡಿ ಹಣ್ಣನ್ನು ತಿನ್ನುವುದು ಖಂಡಿತವಾಗಿಯೂ ಒಳ್ಳೆಯದಲ್ಲ. ಯಾಕೆಂದರೆ, ಕಲ್ಲಂಗಡಿ ಹಣ್ಣು ಸ್ವಲ್ಪ ಅಸಿಡಿಕ್‌ ಅಂದರೆ ಆಮ್ಲೀಯ ಗುಣವನ್ನೂ ಹೊಂದಿರುವುದರಿಂದ ದೇಹ ವಿಶ್ರಾಂತಿಗೆ ಹೊರಡುವ ಸಂದರ್ಭ ಇದರ ಸೇವನೆ ಒಳ್ಳೆಯದಲ್ಲ. ಅಷ್ಟೇ ಅಲ್ಲ, ಇದು ಜೀರ್ಣಕ್ರಿಯೆಯನ್ನೂ ನಿಧಾನಗೊಳಿಸುವ ಅಪಾಯವಿರುತ್ತದೆ.

Woman Eating Watermelon

ಮಧ್ಯಾಹ್ನ ಸೇವನೆ ಸೂಕ್ತ

ಕಲ್ಲಂಗಡಿ ಹಣ್ಣಿನ ಸೇವನೆಗೆ ಅತ್ಯಂತ ಒಳ್ಳೆಯ ಸಮಯ ಎಂದರೆ ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಒಂದು ಗಂಟೆ. ಈ ಸಂದರ್ಭ ದೇಹದ ಜೀರ್ಣಕ್ರಿಯೆಯ ಶಕ್ತಿ ಅತ್ಯಂತ ಹೆಚ್ಚಿರುತ್ತದೆ. ಆಗ, ಕಲ್ಲಂಗಡಿ ಹಣ್ಣಿನ ಪೋಷಕಾಂಶಗಳೂ ಸಹ ದೇಹಕ್ಕೆ ಸಮರ್ಪಕವಾಗಿ ಸಿಗುತ್ತದೆ.

Digestive Issues Coffee Side Effects

ಜೀರ್ಣಕ್ರಿಯೆ ಸ್ನೇಹಿಯಲ್ಲ

ನಾವಂದುಕೊಂಡಂತೆ, ರಾತ್ರಿಯ ಹೊತ್ತು ಕಲ್ಲಂಗಡಿ ಹಣ್ಣು ಜೀರ್ಣಕ್ರಿಯೆಯ ಸ್ನೇಹಿಯಲ್ಲ. ಹಗಲಿನಲ್ಲಿ, ಇದು ಜೀರ್ಣಕ್ರಿಯೆಗೆ ಸಹಾಯ ಮಾಡಿದರೂ ರಾತ್ರಿಯಾದ ಮೇಲೆ, ದೇಹ ವಿಶ್ರಾಂತಿಯಲ್ಲಿರುವಾಗ ಇದರ ವರಸೆ ಬದಲಾಗುತ್ತದೆ. ಹಾಗಾಗಿ, ರಾತ್ರಿ ಇದನ್ನು ಸೇವಿಸಿದರೆ, ಮಾರನೇ ದಿನ ಹೊಟ್ಟೆ ಕೆಡುವುದು, ಚೆನ್ನಾಗಿ ಕರಗಿದ ಅನುಭವ ಆಗದೆ ಇರುವುದು, ಹೊಟ್ಟೆ ಸಂಬಂಧೀ ಕಿರಿಕಿರಿಗಳು ಉಂಟಾಗುವ ಸಂಭವ ಇವೆ.

Belly Fat Reduction

ತೂಕ ಏರುವ ಆತಂಕ

ಕಲ್ಲಂಗಡಿ ಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆಯ ಪ್ರಮಾಣ ಹೆಚ್ಚಿರುವುದರಿಂದ ರಾತ್ರಿ ಸೇವಿಸಿದರೆ, ತೂಕ ಹೆಚ್ಚಾಗುವ ಸಂಭವವೂ ಇದೆ.

Sleeping tips

ರಾತ್ರಿ ನಿದ್ರೆಗೆ ಭಂಗ

ಕೇವಲ ಇವಿಷ್ಟೇ ಅಲ್ಲ, ಕಲ್ಲಂಗಡಿ ಹಣ್ಣಿನಲ್ಲಿ ಹೆಚ್ಚು ನೀರಿರುವುದರಿಂದ ಆಗಾಗ ಮೂತ್ರ ಬರುವ ಸಂಭವ ಹೆಚ್ಚು. ಹೀಗಾಗಿ, ರಾತ್ರಿಯ ನಿದ್ದೆಗೆ ಭಂಗ ಉಂಟಾಗಲೂಬಹುದು.

Home Remedies For Cough And Cold

ನೆಗಡಿಯ ಆತಂಕ

ಶೀತ ಪ್ರಕೃತಿಯ ದೇಹ ಇರುವ ಮಂದಿಗೆ ರಾತ್ರಿ ಕಲ್ಲಂಗಡಿ ಸೇವನೆಯಿಂದ ತಲೆನೋವು, ನೆಗಡಿ ಬರುವ ಸಂಭವವೂ ಇದೆ. ಮಾರನೇ ದಿನ ತಲೆ ಭಾರವಾದ ಸ್ಥಿತಿ, ತಲೆನೋವಿನ ಸಮಸ್ಯೆಯೂ ಕೆಲವರಿಗೆ ಬರಬಹುದು. ಹಾಗಾಗಿ ಈ ಬಗ್ಗೆ ಜಾಗರೂಕರಾಗಿರಿ.

ಇದನ್ನೂ ಓದಿ: Seeds For Weight Loss: ತೂಕ ಇಳಿಸಿಕೊಳ್ಳಬೇಕೆ? ಈ 7 ಬೀಜಗಳನ್ನು ನಿಯಮಿತವಾಗಿ ಸೇವಿಸಿ

ಫ್ರಿಡ್ಜ್‌ನಲ್ಲಿಟ್ಟು ತಿನ್ನುವುದು ಒಳ್ಳೆಯದಲ್ಲ

ಕಲ್ಲಂಗಡಿ ಹಣ್ಣನ್ನು ಅಂಗಡಿಯಿಂದ ತಂದ ತಕ್ಷಣ ತಾಜಾ ಆಗಿರುವಾಗಲೇ ಕತ್ತರಿಸಿ ತಿನ್ನುವುದು ಒಳ್ಳೆಯದು. ಅದನ್ನು ಫ್ರಿಡ್ಜ್‌ನಲ್ಲಿಟ್ಟು ತಿನ್ನುವುದು ಒಳ್ಳೆಯದಲ್ಲ. ತಾಜಾ ತಿನ್ನುವುದರಿಂದ ಆರೋಗ್ಯದ ಲಾಭಗಳು ಹೆಚ್ಚು.

Continue Reading
Advertisement
Mangalore Jail
ಅವಿಭಾಗೀಕೃತ45 seconds ago

Mangalore Jail: ಮಂಗಳೂರು ಜೈಲಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ; ಇಬ್ಬರಿಗೆ ಗಾಯ

Virat Kohli
ಕ್ರಿಕೆಟ್14 mins ago

Virat Kohli : ಶುಭಾಶಯ ಕೋರಿದ ನರೇಂದ್ರ ಮೋದಿಗೆ ಪ್ರತಿಕ್ರಿಯೆ ಕೊಟ್ಟ ಕೊಹ್ಲಿ; ಇಲ್ಲಿದೆ ಅದರ ವಿವರ

Challa Sreenivasulu Setty
ವಾಣಿಜ್ಯ14 mins ago

Challa Sreenivasulu Setty: ಚಲ್ಲಾ ಶ್ರೀನಿವಾಸುಲು ಸೆಟ್ಟಿ; ಅಂದು ಪ್ರೊಬೆಷನರಿ ಅಧಿಕಾರಿ, ಈಗ ಎಸ್‌ಬಿಐ ಅಧ್ಯಕ್ಷ!

CM Siddaramaiah
ವೈರಲ್ ನ್ಯೂಸ್30 mins ago

CM Siddaramaiah: ಏರ್‌ಪೋರ್ಟ್‌ನಲ್ಲೇ ಟಿ20 ವಿಶ್ವಕಪ್‌ ಫೈನಲ್‌ ವೀಕ್ಷಿಸಿದ್ದ ಸಿಎಂ ಸಿದ್ದರಾಮಯ್ಯ; 70 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡ ವಿಡಿಯೊ!

Sha Rukh Khan
Latest49 mins ago

Sha Rukh Khan: ಸಾಲದ ಇಎಂಐ ಕಟ್ಟಲಾಗದೆ ಕಾರನ್ನು ಕಳೆದುಕೊಂಡಿದ್ದ ಶಾರುಖ್ ಖಾನ್!

ZIM v IND 2024
ಪ್ರಮುಖ ಸುದ್ದಿ50 mins ago

ZIM v IND 2024: ಭಾರತ ವಿರುದ್ಧ ಟಿ20 ಸರಣಿಗೆ ಜಿಂಬ್ವಾಬ್ವೆ ತಂಡ ಪ್ರಕಟ, ಸಿಕಂದರ್​ ನಾಯಕ

A total of Rs 13.93 crore livelihood relief for the farmer families of the district says DC Gangubai Manakar
ಉತ್ತರ ಕನ್ನಡ51 mins ago

Uttara Kannada News: ಜಿಲ್ಲೆಯ ರೈತ ಕುಟುಂಬಗಳಿಗೆ 13.93 ಕೋಟಿ ರೂ. ಜೀವನೋಪಾಯ ಪರಿಹಾರ: ಡಿಸಿ

IND vs SA:
ಪ್ರಮುಖ ಸುದ್ದಿ1 hour ago

IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್​​ನಲ್ಲಿ ಮಹಿಳೆಯರ ತಂಡಕ್ಕೆ10 ವಿಕೆಟ್​ ಭರ್ಜರಿ ಭರ್ಜರಿ ಜಯ

Viral News
Latest1 hour ago

Viral News: ಮಹಿಳೆಯ ಬೆತ್ತಲೆ ದೇಹದ ಮೇಲೆ ಮೃಷ್ಟಾನ್ನ ಬಡಿಸುವ ರೆಸ್ಟೋರೆಂಟ್‌!

Viral Video
Latest1 hour ago

Viral Video: 1 ನಿಮಿಷದಲ್ಲಿ 35 ಪುಲ್-ಅಪ್! ಮೇಜರ್ ಜನರಲ್ ವಿಡಿಯೊ ಫುಲ್ ವೈರಲ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ4 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ1 day ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌