Health tips for Monsoon : ಮಳೆಗಾಲದ ಖುಷಿ ಅನುಭವಿಸಿ, ಆದರೆ ರೋಗಗಳನ್ನು ದೂರ ಇರಿಸಿ - Vistara News

ಆರೋಗ್ಯ

Health tips for Monsoon : ಮಳೆಗಾಲದ ಖುಷಿ ಅನುಭವಿಸಿ, ಆದರೆ ರೋಗಗಳನ್ನು ದೂರ ಇರಿಸಿ

ಮಳೆಯೊಂದಿಗೆ ಮುತ್ತಿಕೊಳ್ಳುವ ಸೋಂಕು ರೋಗಗಳಿಗೆ (Health tips for Monsoon) ತಡೆಯೊಡ್ಡಲು ತಯಾರಿ ಬೇಕಲ್ಲ. ಮಳೆಗಾಲದಲ್ಲಿ ಸೊಳ್ಳೆ, ನೀರು ಮತ್ತು ಗಾಳಿಯಿಂದ ಹರಡುವ ಕಾಯಿಲೆಗಳ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

monsoon health guide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಳೆಗಾಲವೆಂದರೆ ಜೀವ ಧರಿಸುವ ಕಾಲವೂ ಹೌದು, ರೋಗ ತರಿಸುವ ಕಾಲವೂ ಹೌದು! ಹಾಗಾಗಿ ವರ್ಷ ಋತುವಿನಲ್ಲಿ ಸಾಮಾನ್ಯವಾಗಿ ಕಾಡುವ ಸೋಂಕುಗಳು (Health tips for Monsoon) ಮತ್ತು ಮುನ್ನೆಚ್ಚರಿಕೆಗಳ ಬಗೆಗಿನ ವಿವರಗಳು ಇಲ್ಲಿವೆ.

ಮಳೆಗಾಲದ ಹೊಸಿಲಲ್ಲಿದ್ದೇವೆ. ನೈಋತ್ಯ ಮುಂಗಾರು ಕೇರಳವನ್ನು ಯಾವತ್ತು ಪ್ರವೇಶಿಸುತ್ತದೆ ಎಂಬ ನಿರೀಕ್ಷೆಯಲ್ಲೇ ಇದ್ದೇವೆ. ಈಗ ಹೊಳೆಯುತ್ತಿರುವ ಆಗಸ ಯಾವಾಗ ಮಂಕಾಗುತ್ತದೆ, ಎಂದಿಗೆ ಮೋಡ ಕವಿಯುತ್ತದೆ, ಯಾವತ್ತು ತುಂತುರು ಮಳೆ ಶುರುವಾಗುತ್ತದೆ ಎಂದೆಲ್ಲಾ ಹವಾಮಾನ ವರದಿಯನ್ನು ನೋಡಿಯೇ ನೋಡುತ್ತೇವೆ. ಇಷ್ಟಾದರೆ ಮುಗಿಯಲಿಲ್ಲ, ಮಳೆಗಾಲಕ್ಕೊಂದು ಸರಿಯಾದ ತಯಾರಿ ಬೇಡವೇ? ಹಿಂದಿನ ದಿನಗಳಂತೆ, ಕೊಡೆ, ರೇನ್‌ಕೋಟು, ಗಂಬೂಟು ಎಂದೆಲ್ಲಾ ಸಿದ್ಧತೆ ಬೇಕಿಲ್ಲ. ಆದರೆ ಮಳೆಯೊಂದಿಗೆ ಮುತ್ತಿಕೊಳ್ಳುವ ಸೋಂಕು ರೋಗಗಳಿಗೆ (Health tips for Monsoon) ತಡೆಯೊಡ್ಡಲು ತಯಾರಿ ಬೇಕಲ್ಲ. ಮಳೆಗಾಲದಲ್ಲಿ ಸೊಳ್ಳೆ, ನೀರು ಮತ್ತು ಗಾಳಿಯಿಂದ ಹರಡುವ ಕಾಯಿಲೆಗಳ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಇಲ್ಲಿದೆ ಮಾಹಿತಿ.

ಸೊಳ್ಳೆಯಿಂದ ಹರಡುವ ರೋಗಗಳು

ಮಳೆಗಾಲವೆಂದರೆ ಹುಲ್ಲಿನಿಂದ ಹಿಡಿದು ಮರಗಳವರೆಗೆ, ಹುಳು-ಹುಪ್ಪಡಿಗಳಿಂದ ಹಿಡಿದು ಸೊಳ್ಳೆಗಳವರೆಗೆ ಸರ್ವತ್ರ ಚಿಗುರುವ ಕಾಲ. ಗಟ್ಟಿಯಾಗಿ ಹೆಜ್ಜೆ ಊರಿದಲ್ಲೂ ನೀರು ನಿಲ್ಲುವ ಮಳೆಗಾಲದ ದಿನಗಳೆಂದರೆ ಸೊಳ್ಳೆಗಳಿಗೆ ಸಂತಾನೋತ್ಪತ್ತಿಯ ದಿನಗಳು. ವಿಶ್ವಮಟ್ಟದಲ್ಲಿ ಶೇ. ೩೪ರಷ್ಟು ಡೆಂಗೂ ಪ್ರಕರಣಗಳು ಮತ್ತು ಶೇ. ೩ ಮಲೇರಿಯಾ ಪ್ರಕರಣಗಳಿಗೆ ಭಾರತವೇ ತವರು. ಹಾಗಾಗಿ ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಗಮನಿಸೋಣ (Health tips for Monsoon).

mosquito bite

ಮಲೇರಿಯಾ

ಅನಾಫಿಲಿಸ್‌ ಹೆಣ್ಣು ಸೊಳ್ಳೆಯು ಕಚ್ಚಿದಾಗ ದೇಹ ಸೇರುವ ಪ್ಮಾಸ್ಮೋಡಿಯಂ ಎಂಬ ಏಕಕೋಶ ಜೀವಿಯಿಂದ ಬರುವ ಕಾಯಿಲೆಯಿದು. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ದೊರೆಯದಿದ್ದರೆ ಇದು ಪ್ರಾಣಘಾತುಕವೂ ಆಗಬಲ್ಲದು. ಮುನ್ನೆಚ್ಚರಿಕೆಯಿಂದ ಇದನ್ನು ತಡೆಯುವುದು ಸಾಧ್ಯವಿದ್ದರೂ, ಜಾಗತಿಕ ಮಟ್ಟದಲ್ಲಿ ಪ್ರತಿವರ್ಷ ಲಕ್ಷಗಟ್ಟಲೆ ಜೀವಗಳು ಈ ರೋಗಕ್ಕೆ ಬಲಿಯಾಗುತ್ತಿವೆ.

ಏನಿದರ ಲಕ್ಷಣಗಳು?: ಸೊಳ್ಳೆ ಕಚ್ಚಿದ ೧೦ ದಿನಗಳ ನಂತರ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ವಿಪರೀತ ಜ್ವರ, ಮೈಕೈ ನೋವು, ಚಳಿಯಾಗಿ ನಡುಕ, ಜ್ವರ ಕಡಿಮೆಯಾದರೆ ಸಿಕ್ಕಾಪಟ್ಟೆ ಬೆವರುವುದು, ತಲೆನೋವು, ವಾಂತಿ, ಡಯರಿಯದಂಥ ಚಿಹ್ನೆಗಳು ಕಂಡುಬರುತ್ತವೆ. ಈ ಯಾವುದೇ ಲಕ್ಷಣಗಳು ಕಂಡರೂ ವೈದ್ಯರೊಂದಿಗೆ ಸಮಾಲೋಚನೆ ಅಗತ್ಯ.

ಡೆಂಗೂ

ಏಡಿಸ್‌ ಹೆಣ್ಣು ಸೊಳ್ಳೆಯಿಂದ ಹರಡುವ ವೈರಸ್‌ ಸೋಂಕಿದು. ಸೊಳ್ಳೆ ಕಚ್ಚಿದ ನಾಲ್ಕಾರು ದಿನಗಳ ನಂತರ ರೋಗದ ಚಿಹ್ನೆಗಳು ಕಾಣಿಸಿಕೊಳ್ಳುತ್ತವೆ. ಸಾಮಾನ್ಯವಾಗಿ ಫ್ಲೂ ಮಾದರಿಯಲ್ಲಿ ಇರುವ ಈ ಕಾಯಿಲೆಯಲ್ಲಿ ಕೆಲವೊಮ್ಮೆ ರಕ್ತದಲ್ಲಿ ಪ್ಲೇಟ್‌ಲೆಟ್‌ಗಳು ಕುಸಿದು ಜೀವಕ್ಕೆ ಎರವಾಗುವ ಸಾಧ್ಯತೆಯಿದೆ.

ಲಕ್ಷಣಗಳು: ಜ್ವರ, ತೀವ್ರವಾದ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಕೀಲು ಮತ್ತು ಸ್ನಾಯುಗಳಲ್ಲಿ ನೋವು, ಮೈಮೇಲೆ ದದ್ದುಗಳು, ವಾಂತಿ- ಜ್ವರದೊಂದಿಗೆ ಈ ಪೈಕಿ ಯಾವುದೇ ಎರಡು ಲಕ್ಷಣಗಳನ್ನು ಕಂಡರೂ ವೈದ್ಯರನ್ನು ಸಂಪರ್ಕಿಸಬೇಕು.

ಚಿಕೂನ್‌ಗುನ್ಯಾ

ಸೊಳ್ಳೆ ಕಚ್ಚುವುದರಿಂದ ಹರಡುವ ಚಿಕೂನ್‌ಗುನ್ಯಾ ವೈರಸ್‌ನಿಂದಲೇ ಬರುವ ರೋಗವಿದು. ಜ್ವರದೊಂದಿಗೆ ತೀವ್ರವಾದ ಕೀಲುನೋವು ಇದರ ಪ್ರಮುಖ ಲಕ್ಷಣಗಳು. ಸೋಂಕಿತ ಸೊಳ್ಳೆ ಕಚ್ಚಿದ ೪-೮ ದಿನಗಳ ಅಂತರದಲ್ಲಿ ರೋಗಚಿಹ್ನೆಗಳು ಕಂಡುಬರುತ್ತವೆ. ಈ ಸೊಳ್ಳೆಗಳು ರಾತ್ರಿಯಲ್ಲಿ ಮಾತ್ರವೇ ಅಲ್ಲ, ಹಗಲಿನಲ್ಲೂ ಕಚ್ಚುತ್ತವೆ. ಏಷ್ಯಾ ಮತ್ತು ಭಾರತೀಯ ಉಪಖಂಡದಲ್ಲಿ ಮುಖ್ಯವಾಗಿ ಈ ಕಾಯಿಲೆ ಸದ್ದು ಮಾಡುತ್ತಿದೆ.

ತಡೆ ಹೇಗೆ?: ಸೊಳ್ಳೆಯಿಂದ ಹರಡುವ ಯಾವುದೇ ರೋಗವಾದರೂ, ಅದನ್ನು ತಡೆಯುವ ಕ್ರಮದಲ್ಲಿ ವಿಶೇಷ ವ್ಯತ್ಯಾಸವಿಲ್ಲ. ಮನೆಯ ಸುತ್ತಲೂ ನೀರು ನಿಲ್ಲದಂತೆ ನಿಗಾ ವಹಿಸಿ. ತೆರೆದ ಚರಂಡಿಯೇ ಬೇಕೆಂದಿಲ್ಲ, ಎಳನೀರಿನ ಚಿಪ್ಪುಗಳು, ರಸ್ತೆಗುಂಡಿಗಳಿಂದ ಹಿಡಿದು, ಎಲ್ಲೆಲ್ಲಿ ನೀರಿನ ಪಸೆಯಿದ್ದರೂ ಸೊಳ್ಳೆಗಳು ಸೃಷ್ಟಿ ಕಾರ್ಯ ನಡೆಸುತ್ತವೆ. ಮನೆಯಲ್ಲಿ ನೀರಿರಬಹುದಾದ ಕೂಲರ್‌ಗಳು, ಬಕೆಟ್‌ ಇತ್ಯಾದಿಗಳ ಬಗ್ಗೆ ಗಮನಕೊಡಿ. ನೀರು ತುಂಬಿಸಿಸುವ ಎಲ್ಲವನ್ನೂ ಮುಚ್ಚಿಡಿ. ನೀರು ನಿಲ್ಲುವಂಥ ಜಾಗಗಳಿದ್ದರೆ ಅವುಗಳ ಮೇಲೆ ಕೀಟನಾಶಕ ಸಿಂಪಡಿಸಿ.

ಮೈ ತುಂಬಾ ವಸ್ತ್ರಗಳನ್ನು ಧರಿಸಿದರೆ, ಸೊಳ್ಳೆಗಳು ಕಚ್ಚುವುದರಿಂದ ತಪ್ಪಿಸಿಕೊಳ್ಳಬಹುದು. ಸೊಳ್ಳೆ ನಿರೋಧಕ ಕ್ರೀಮ್‌, ಸ್ಪ್ರೇ ಅಥವಾ ಪ್ಯಾಚ್‌ಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ. ಸೊಳ್ಳೆಗಳ ಉಪಟಳಕ್ಕೆ ಕೆಲವು ನೈಸರ್ಗಿಕ ಉಪಾಯಗಳೂ ಚಾಲ್ತಿಯಲ್ಲಿವೆ. ರಾತ್ರಿ ಮಲಗುವಾಗ ಕಡ್ಡಾಯವಾಗಿ ಸೊಳ್ಳೆ ಪರದೆ ಉಪಯೋಗಿಸಿ. ಚಿಕ್ಕ ಮಕ್ಕಳಿದ್ದರೆ ಎಲ್ಲಕ್ಕಿಂತ ಹೆಚ್ಚು ಅಪಾಯ ಅವರಿಗೇ ಆಗಬಹುದು, ಎಚ್ಚರವಹಿಸಿ.

ನೀರಿನಿಂದ ಹರಡುವ ರೋಗಗಳು: ಹೊಸ ನೀರು ಬಂದು ಹಳೆ ನೀರು ಕೊಚ್ಚಿ ಹೋಗುವ ಈ ಸಮಯವು, ನೀರು ಕಲುಷಿತವಾಗುವ ಪರ್ವಕಾಲ ಎಂದರೆ ತಪ್ಪಾಗುವುದಿಲ್ಲ. ಬಾವಿ, ಕೆರೆ, ಕಾಲುವೆ, ನದಿ- ಹೀಗೆ ಕುಡಿಯುವ ನೀರಿದ ಮೂಲಗಳೆಲ್ಲಿದ್ದಲ್ಲೂ ನೀರಿನ ಪ್ರಮಾಣ ಮತ್ತು ಗುಣಮಟ್ಟ ಬದಲಾಗಿರುತ್ತದೆ. ಕುಡಿಯುವ ನೀರಿಗೆ ಚರಂಡಿ ನೀರು ಸೇರುವ ಅಪಾಯವಿರುವ ಕಾಲವಿದು. ಪ್ರತಿವರ್ಷ ವಿಶ್ವಮಟ್ಟದಲ್ಲಿ ಸುಮಾರು ೫ ಲಕ್ಷ ಮಂದಿ ಶುದ್ಧ ಕುಡಿಯುವ ನೀರಿನ ಅಭಾವದಿಂದ ನಾನಾ ರೋಗಗಳಿಗೆ ತುತ್ತಾಗಿ ಸಾಯುತ್ತಿದ್ದಾರೆ.

Typhoid fever

ಟೈಫಾಯ್ಡ್

ಸಾಲ್ಮೊನೆಲ್ಲಾ ಟೈಫಿ ಎಂಬ ರೋಗಾಣುವಿನಿಂದ ಬರುವ ಇದು ಮಾರಣಾಂತಿಕ ರೋಗ. ಕಲುಷಿತವಾದ ಆಹಾರ ಮತ್ತು ನೀರಿನಿಂದಲೇ ಇದು ದೇಹ ಸೇರುತ್ತದೆ. ಜಾಗತಿಕವಾಗಿ, ಪ್ರತಿವರ್ಷ ಸುಮಾರು ೨ ಕೋಟಿ ಮಂದಿ ಟೈಫಾಯ್ಡ್‌ಗೆ ತುತ್ತಾದರೆ, ಸೂಕ್ತ ಚಿಕಿತ್ಸೆಯಿಲ್ಲದೆ ಸುಮಾರು ಒಂದೂವರೆ ಲಕ್ಷ ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ.

ಲಕ್ಷಣಗಳು: ದೀರ್ಘ ಕಾಲದವರೆಗೆ ಜ್ವರ, ಸುಸ್ತು, ತಲೆನೋವು, ವಾಂತಿ, ಕಿಬ್ಬೊಟ್ಟೆಯಲ್ಲಿ ನೋವು, ಡಯರಿಯಾದಂಥ ಲಕ್ಷಣಗಳು ಕಾಣಿಸಿಕೊಳ್ಳಬಹುದು. ಇದಕ್ಕೆ ವೈದ್ಯರ ಶುಶ್ರೂಷೆಯ ಜೊತೆಗೆ ಸರಿಯಾದ ಆಹಾರವನ್ನೂ ತೆಗೆದುಕೊಳ್ಳಬೇಕು. ಸ್ವಚ್ಛತೆ ಕಡೆಗೆ ಗಮನ ನೀಡಲೇಬೇಕು.

ಕಾಲರಾ

ವಿಬ್ರಿಯೊ ಕಾಲೆರೆ ಎಂಬ ಬ್ಯಾಕ್ಟೀರಿಯಾದಿಂದ ಕಲುಷಿತ ನೀರು ಮತ್ತು ಆಹಾರದ ಮೂಲಕ ಇದು ಮಾನವರಿಗೆ ಹರಡುತ್ತದೆ. ತೀವ್ರವಾದ ಅತಿಸಾರ ಭೇದಿ ಇದರ ಪ್ರಮುಖ ಲಕ್ಷಣ. ಉಳಿದಂತೆ ಹೆಚ್ಚಿನ ಲಕ್ಷಣಗಳು ತೋರಿಸಿಕೊಳ್ಳುವುದಿಲ್ಲ ಈ ರೋಗ. ತ್ವರಿತವಾಗಿ ಚಿಕಿತ್ಸೆ ದೊರೆಯದಿದ್ದರೆ, ತೀವ್ರ ನಿರ್ಜಲೀಕರಣಕ್ಕೆ ಒಳಗಾಗಿ ಜೀವಕ್ಕೆ ಅಪಾಯ ಕಟ್ಟಿಟ್ಟಿದ್ದು.

ಲೆಪ್ಟೊಸ್ಪಿರೋಸಿಸ್

ಲೆಪ್ಟೊಸ್ಪೈರ ಎಂಬ ವೈರಸ್‌ನಿಂದ ಮುಖ್ಯವಾಗಿ ಮಳೆಗಾಲದಲ್ಲಿಯೇ ಬರುವ ರೋಗವಿದು. ಇದು ಮಾನವರಿಗೆ ಮಾತ್ರವಲ್ಲ, ಪ್ರಾಣಿಗಳಿಗೂ ಬರಬಹುದು. ಸೋಂಕಿತ ವ್ಯಕ್ತಿ ಅಥವಾ ಪ್ರಾಣಿಯ ಮೂತ್ರದಿಂದ ನೀರಿನ ಮೂಲವನ್ನು ಈ ರೋಗಾಣು ಸೇರುತ್ತದೆ. ಅಲ್ಲಿ ಹಲವಾರು ವಾರಗಳು ಅಥವಾ ತಿಂಗಳವರೆಗೆ ಅದು ಇರಬಲ್ಲುದು. ಹಾಗಾಗಿ ಕೊಚ್ಚೆ ನೀರಿನ ಸಂಪರ್ಕದಿಂದ ದೂರ ಇರುವುದು ಅಗತ್ಯ. ಜ್ವರ, ನಡುಕ, ಸ್ನಾಯುನೋವು, ತಲೆನೋವು ಮುಂತಾದವು ಇದರ ಲಕ್ಷಣಗಳು.

ಹೊರಗೆ ಹೋಗುವಾಗ ಕಡ್ಡಾಯವಾಗಿ ಪಾದರಕ್ಷೆಗಳನ್ನು ಧರಿಸಿ. ಯಾವುದೇ ತೆರೆದ ಗಾಯಗಳಿದ್ದರೆ ಅದರಕ್ಕೆ ಚಿಕಿತ್ಸೆ ಪಡೆದುಕೊಳ್ಳಿ. ಈ ರೋಗಗಳಲ್ಲದೆ, ಕಾಮಾಲೆ ಅಥವಾ ಜಾಂಡೀಸ್‌, ಹೆಪಟೈಟಿಸ್‌ ಎ, ಗ್ಯಾಸ್ಟ್ರೋಎಂಟರೈಟಿಸ್‌ ಮುಂತಾದ ಹಲವಾರು ರೋಗಗಳು ಮಳೆಗಾಲದಲ್ಲಿ ಕಲುಷಿತ ನೀರು-ಆಹಾರದಿಂದ ಅಮರಿಕೊಳ್ಳುತ್ತವೆ

ತಡೆ ಹೇಗೆ?: ನೀರನ್ನು ಕುದಿಸಿಯೇ ಕುಡಿಯಿರಿ. ಆದಷ್ಟೂ ಹೊರಗಿನ, ಅದರಲ್ಲೂ ದಾರಿಬದಿಯ ಆಹಾರವನ್ನು ಸೇವಿಸಬೇಡಿ. ಮನೆಯಲ್ಲಿ ಆಹಾರ ವಸ್ತುಗಳನ್ನು ಮುಟ್ಟುವಾಗಲೂ ಕೈ ಶುಚಿ ಮಾಡಿಕೊಳ್ಳಿ. ಹಸಿಯಾಗಿ ಸೇವಿಸುವುದನ್ನು ಕಡಿಮೆ ಮಾಡಿ. ಹಣ್ಣುಗಳನ್ನು ತಿನ್ನುವ ಮುನ್ನ ಚೆನ್ನಾಗಿ ತೊಳೆಯಿರಿ. ನೀರಿನಲ್ಲಿ ಈಜುವುದು ಈ ದಿನಗಳಲ್ಲಿ ಸೂಕ್ತವಲ್ಲ. ಕೆಲವು ರೋಗಗಳಿಗೆ ಲಸಿಕೆಗಳು ಲಭ್ಯವಿದ್ದು, ಮುನ್ನೆಚ್ಚರಿಕೆಗೆ ಹಾಕಿಸಿಕೊಳ್ಳಬಹುದು.

ಗಾಳಿಯಲ್ಲಿ ಹರಡುವ ಸೋಂಕುಗಳು: ಶಾಲೆ ಆರಂಭವಾಗುವ ಸುಮೂರ್ತವೇ ಮಳೆಗಾಲದ ಆರಂಭಕ್ಕೂ ಒದಗಿ ಬರುವುದರಿಂದ, ಗಾಳಿಯಲ್ಲಿ ಹರಡುವ ನಾನಾ ರೀತಿಯ ವೈರಸ್‌ ಸೋಂಕುಗಳು ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ನಂತರ, ಮನೆಮಂದಿಗೆಲ್ಲಾ ಹರಡುತ್ತದೆ.

ಇದನ್ನೂ ಓದಿ: Hair care in Monsoon: ಮಳೆಗಾಲದಲ್ಲಿ ತಲೆಕೂದಲು ಕಾಪಾಡಿಕೊಳ್ಳಲು ಇಲ್ಲಿವೆ ಟಿಪ್ಸ್

ನೆಗಡಿ, ಕೆಮ್ಮು: ಮಳೆಗಾಲದ ಆರಂಭಕ್ಕೆ ಮೂಗಿನಲ್ಲೂ ಮಳೆ ಆರಂಭವಾಗುವುದು ಸಾಮಾನ್ಯ. ಅದರಲ್ಲೂ ಮಕ್ಕಳು, ವೃದ್ಧರು ಮತ್ತು ಚೇತರಿಕೆಯಲ್ಲಿರುವ ರೋಗಿಗಳಿಗೆ ಇದರ ಉಪಟಳ ಹೆಚ್ಚು. ಮೊದಲಿಗೆ ನೆಗಡಿ, ನಂತರ ಕೆಮ್ಮು, ಒಮ್ಮೊಮ್ಮೆ ಮುಂದುವರಿದು ಜ್ವರ, ಗಂಟಲು ನೋವು ಎಂದೆಲ್ಲಾ ಸರಣಿ ಬೆಳೆಯುತ್ತಾ ಹೋಗುತ್ತದೆ.

Health Care

ಫ್ಲೂ: ಇನ್‌ಫ್ಲುಯೆನ್ಜಾ ಎನ್ನಲಾಗುವ ಫ್ಲೂ ವೈರಸ್‌ಗಳು ತಂಟೆ ಮಾರಿಗಳು. ಕೆಮ್ಮಿದಾಗ, ಸೀನಿದಾಗ ಇವು ಗಾಳಿಯಲ್ಲಿ ಸೇರುತ್ತವೆ. ಜ್ವರ, ಚಳಿ, ಗಂಟಲು ನೋವು, ನೆಗಡಿ, ಕೆಮ್ಮು, ಸ್ನಾಯುನೋವು, ತಲೆ ನೋವು, ಸುಸ್ತು, ವಾಂತಿ, ಡಯರಿಯಾ- ಇವುಗಳಲ್ಲಿ ಒಂದಿಷ್ಟು ಅಥವಾ ಎಲ್ಲಾ ಲಕ್ಷಣಗಳೂ ಕಾಣಿಸಬಹುದು. ಕೆಲವೊಮ್ಮೆ ಕಫ ಬಿಗಿದು ಉಬ್ಬಸವನ್ನೂ ಎಬ್ಬಿಸಬಹುದು.

ಮುನ್ನೆಚ್ಚರಿಕೆ ಹೇಗೆ?: ಕೆಮ್ಮುವಾಗ, ಸೀನುವಾಗ ಮೂಗು, ಬಾಯಿಗಳನ್ನು ಮುಚ್ಚಿಕೊಳ್ಳಿ. ಸೋಂಕು ಇದ್ದರೆ ಮಾಸ್ಕ್‌ ಧರಿಸಿ, ಇತರರಿಗೆ ಹರಡದಂತೆ ಜಾಗ್ರತೆ ಮಾಡಿ. ಸೋಂಕು ಇರುವವರಿಂದ ಮಕ್ಕಳು, ವೃದ್ಧರನ್ನು ದೂರ ಇಡಿ. ನೈರ್ಮಲ್ಯದ ಅಭ್ಯಾಸವನ್ನು ಮಕ್ಕಳಿಗೆ ಮಾಡಿಸಿ. ಬೆಚ್ಚಗಿನ ನೀರನ್ನು ಸಾಕಷ್ಟು ಕುಡಿಯಿರಿ. ಮನೆಯಲ್ಲಿ ಸಾಕಷ್ಟು ಗಾಳಿ-ಬೆಳಕು ಇರುವಂತೆ ನೋಡಿಕೊಳ್ಳಿ. ಈ ಯಾವುದೇ ಸೋಂಕುಗಳಿಗೆ ಸ್ವಯಂವೈದ್ಯ ಮಾಡಿಕೊಳ್ಳಬೇಡಿ, ಆಸ್ಪತ್ರೆಗೆ ತೆರಳಿ.

ಇದನ್ನೂ ಓದಿ: Monsoon Travel Tips: ʻಮಳೆಗಾಲದಲ್ಲಿ ಪ್ರವಾಸʼ ಎಂಬ ದಿವ್ಯಾನುಭೂತಿ: ಹೊರಡುವಾಗ ಇವಿಷ್ಟು ನೆನಪಿರಲಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಲೈಫ್‌ಸ್ಟೈಲ್

Diabetic Control: ಕಾಡುವ ಮಧುಮೇಹ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ತಂತ್ರ

Diabetic Controle ಯಾವುದೇ ಸಭೆ ಸಮಾರಂಭಗಳಿಗೆ ಹೋದಾಗ ಪಾಯಸ, ಹೋಳಿಗೆ, ಲಾಡು ನೀಡುವಾಗ ಎಲ್ಲರೂ ಬಾಯಿ ಚಪ್ಪರಿಸಿಕೊಂಡು ತಿಂದರೆ ಮಧುಮೇಹಿಗಳು ಮಾತ್ರ ಬಾಯಿ ಬಿಟ್ಟುಕೊಂಡು ನೋಡುತ್ತಾರೆ. ಈ ಸಮಸ್ಯೆಯನ್ನು ನಿವಾರಿಸಿಕೊಳ್ಳಲು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸರಿಯಾದ ವಿಧಾನದಲ್ಲಿ ನಿಯಂತ್ರಿಸಿಕೊಳ್ಳಿ.

VISTARANEWS.COM


on

Diabetic Controle
Koo

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಧುಮೇಹ ಎಂದರೆ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದು. ಹಾಗಾಗಿ ಮಧುಮೇಹ ಸಮಸ್ಯೆ ಇದೆ ಎಂದಾಗ ಹಲವರಿಗೆ ಬೇಸರವಾಗುತ್ತದೆ. ಯಾಕೆಂದರೆ ಇದರಿಂದ ಸಿಹಿ ಪದಾರ್ಥಗಳನ್ನು ತಿನ್ನಲು ಆಗುವುದಿಲ್ಲ. ಯಾವುದೇ ಸಭೆ ಸಮಾರಂಭಗಳಿಗೆ ಹೋದಾಗ ಬಡಿಸುವ ಪಾಯಸ, ಹೋಳಿಗೆ ತಿಂದು ಎಲ್ಲರೂ ಬಾಯಿ ಚಪ್ಪರಿಸಿಕೊಂಡರೆ ಮಧುಮೇಹಿಗಳು ಮಾತ್ರ ಬಾಯಿ ಬಿಟ್ಟುಕೊಂಡು ನೋಡುತ್ತಾರೆ. ಈ ಸಮಸ್ಯೆಗಳಿಂದ ಪಾರಾಗಲು ಸುಲಭ ತಂತ್ರವಿದೆ. ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Diabetic Controle) ನಿಯಂತ್ರಿಸಿಕೊಳ್ಳಬೇಕು. ಅದಕ್ಕಾಗಿ ಈ ಸಲಹೆಗಳನ್ನು ಪಾಲಿಸಿ.

  • ಆರೋಗ್ಯಕರ ಕೊಬ್ಬಿನ ಆಹಾರ ಸೇವನೆ: ನೀವು ಬೆಳಗ್ಗಿನ ಉಪಹಾರದಲ್ಲಿ ಬಾದಾಮಿ ಮತ್ತು ವಾಲ್ ನಟ್ಸ್ ನಂತಹ ನೆನೆಸಿದ ಬೀಜಗಳನ್ನು ಸೇವಿಸಿ. ಇವುಗಳಲ್ಲಿ ಕೊಬ್ಬಿನ ಪ್ರಮಾಣ ಹೆಚ್ಚಾಗಿದೆ. ಇದರಿಂದ ಇನ್ಸುಲಿನ್ ಮಟ್ಟ ಸುಧಾರಿಸುತ್ತದೆ.
  1. ಬೆಳಗಿನ ಉಪಹಾರದಲ್ಲಿ ಪ್ರೋಟೀನ್ ಸೇವನೆ: ನಿಮ್ಮ ಬೆಳಗಿನ ಉಪಹಾರದಲ್ಲಿ ಪ್ರೋಟೀನ್ ಸಮೃದ್ಧವಾಗಿರುವ ಆಹಾರ ಸೇವಿಸಿ. ಪ್ರೋಟೀನ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಮತ್ತು ನೀವು ದಿನವಿಡೀ ಉತ್ಸಾಹದಿಂದ ಇರಬಹುದು.
  2. ಆ್ಯಪಲ್ ಸೈಡರ್ ವಿನೆಗರ್ ಸೇವನೆ : ಇದರಲ್ಲಿ ಅಸಿಟಿನ್ ಆಮ್ಲವಿದ್ದು, ಇದು ಇನ್ಸುಲಿನ್ ಸೂಕ್ಷ್ಮತೆ ಹೆಚ್ಚಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಹಾಗಾಗಿ ಊಟಕ್ಕೆ ಅರ್ಧ ಗಂಟೆಯ ಮೊದಲು ಆ್ಯಪಲ್ ಸೈಡರ್ ವಿನೆಗರ್ ಅನ್ನು ನೀರಿನಲ್ಲಿ ಬೆರೆಸಿ ಕುಡಿಯಿರಿ.
  3. ಮೆಗ್ನೀಸಿಯಂ ಭರಿತ ಆಹಾರ ಸೇವನೆ: ಆಹಾರದಲ್ಲಿ ಬಾಳೆಹಣ್ಣು, ಬಾದಾಮಿ, ಕೋಕೋ ಮತ್ತು ಹಸಿರು ಸೊಪ್ಪುಗಳನ್ನು ಸೇರಿಸಬೇಕು. ಇವುಗಳಲ್ಲಿ ಮೆಗ್ನೀಸಿಯಂ ಸಮೃದ್ಧವಾಗಿರುತ್ತದೆ. ಇದು ಜೀವಕೋಶಗಳಿಗೆ ಗ್ಲೂಕೋಸ್ ಅನ್ನು ಹೀರಿಕೊಳ್ಳುವಂತೆ ಉತ್ತೇಜಿಸುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ.
  4. ಊಟದ ಬಳಿಕ ವಾಕಿಂಗ್ : ಊಟವಾದ ತಕ್ಷಣ ನಿದ್ರೆ ಮಾಡಬಾರು. ಬದಲಾಗಿ ಊಟವಾದ ನಂತರ 10-15 ನಿಮಿಷ ಕಾಲ ಲಘು ವಾಕಿಂಗ್ ಮಾಡಬೇಕು. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುತ್ತದೆ.
  5. ಸರಿಯಾದ ಪ್ರಮಾಣದಲ್ಲಿ ಊಟದ ಸೇವನೆ : ನೀವು ಮಧ್ಯಾಹ್ನದ ವೇಳೆ 12ರಿಂದ 2 ಗಂಟೆಯೊಳಗೆ ನಿಮ್ಮ ಹೊಟ್ಟೆ ತುಂಬುವಷ್ಟು ಊಟ ಮಾಡಿ. ಯಾಕೆಂದರೆ ಈ ಸಮಯದಲ್ಲಿ ಜೀರ್ಣಕ್ರಿಯೆ ವೇಗವಾಗಿರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಉತ್ತೇಜಿಸುತ್ತದೆ.
  6. ದಾಲ್ಚಿನ್ನಿ- ಗ್ರೀನ್ ಟೀ ಸೇವನೆ : ಸಂಜೆಯ ವೇಳೆ ಗ್ರೀನ್ ಟೀಗೆ ದಾಲ್ಚಿನ್ನಿಯನ್ನು ಬೆರೆಸಿ ಕುದಿಸಿ ಕುಡಿಯಿರಿ. ಈ ಮಿಶ್ರಣವು ಜೀರ್ಣಕ್ರೀಯೆ ಮತ್ತು ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ.
  7. ರಾಗಿ ಸೇವನೆ : ನಿಮ್ಮ ಆಹಾರದಲ್ಲಿ ರಾಗಿ ಸೇರಿಸಿ. ಇದರಲ್ಲಿ ಫೈಬರ್ ಸಮೃದ್ಧವಾಗಿದೆ. ಇದು ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ.
  8. ಸರಿಯಾಗಿ ತಿನ್ನುವ ಅಭ್ಯಾಸ ಮಾಡಿಕೊಳ್ಳಿ : ನೀವು ಅತಿಯಾಗಿ ಆಹಾರ ಸೇವಿಸುವುದನ್ನು ತಪ್ಪಿಸಿ. ಅದಕ್ಕಾಗಿ ನೀವು ಹೊಟ್ಟೆ 80% ತುಂಬುವವರೆಗೆ ತಿನ್ನಿ. ಇದು ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ. ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಬೆಂಬಲಿಸುತ್ತದೆ.

ಇದನ್ನೂ ಓದಿ:Nestle Company: ಮಕ್ಕಳ ಜೀವದ ಜತೆ ನೆಸ್ಲೆ ಕಂಪನಿ ಚೆಲ್ಲಾಟ? ಸೆರೆಲಾಕ್‌ ಕುಡಿಸೋ ಮುನ್ನ ಎಚ್ಚರ!

Continue Reading

ಲೈಫ್‌ಸ್ಟೈಲ್

Cardiac Arrest: ಮಹಿಳೆಯರೇ ಹುಷಾರು; ನೀವು ಮಾಡುವ ಈ ತಪ್ಪುಗಳೇ ಹೃದಯಾಘಾತಕ್ಕೆಕಾರಣ!

Cardiac Arrest ಹೃದಯದ ಸಮಸ್ಯೆ ಇಂದು ಸಾಕಷ್ಟು ಮಹಿಳೆಯರನ್ನು ಕಾಡುತ್ತಿದೆ. ಮಹಿಳೆಯರು ಗಂಡ, ಮಕ್ಕಳು, ಕೆಲಸ ಎಂದುಕೊಂಡು ತಮ್ಮ ಆರೋಗ್ಯದ ಬಗ್ಗೆ ಸರಿಯಾಗಿ ಕಾಳಜಿ ವಹಿಸುವುದಿಲ್ಲ. ಮಹಿಳೆಯರನ್ನು ಕಾಡುವ ಈ ಹೃದಯದ ಕಾಯಿಲೆಗೆ ಮುಖ್ಯ ಕಾರಣಗಳು ಇಲ್ಲಿವೆ.

VISTARANEWS.COM


on

Cardiac Arrest
Koo

ಬೆಂಗಳೂರು: ಹೃದಯ ಸ್ತಂಭನ (Cardiac Arrest) ಈ ಹೆಸರು ಕೇಳುತ್ತಲೇ ಹೃದಯವೇ ಬಾಯಿಗೆ ಬಂದ ಹಾಗೇ ಆಗುತ್ತದೆ. ಅಷ್ಟೊಂದು ನಡುಕ ಹುಟ್ಟಿಸುತ್ತದೆ. ಕುಳಿತಲ್ಲಿಯೇ ಹೃದಯ ಸ್ತಂಭನದಿಂದ ಕುಸಿದು ಬಿದ್ದರು, ರಾತ್ರಿ ಮಲಗಿದವರು ಏಳಲೇ ಇಲ್ಲ ಇಂತಹ ಸುದ್ದಿಗಳನ್ನು ದಿನಂಪ್ರತಿ ಕೇಳುತ್ತೇವೆ. ಸಣ್ಣಮಕ್ಕಳು ಕೂಡ ಈಗ ಈ ಕಾಯಿಲೆಗೆ ತುತ್ತಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಸಾಕಷ್ಟು  ಮಹಿಳೆಯರು ಈ ಕಾಯಿಲೆಯಿಂದ ಬಳಲುತ್ತಿದ್ದಾರಂತೆ. ಇನ್ನು ಒತ್ತಡದ ಜೀವನ ಶೈಲಿ ಹಾಗೂ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ ಇರುವುದು ಈ ಹೃದಯಾಸ್ತಂಭನಕ್ಕೆ ಕಾರಣ ಎನ್ನುತ್ತದೆ ಹೊಸ ಸಂಶೋಧನೆ. ಪ್ರಮುಖವಾಗಿ ಮಹಿಳೆಯರ ಜೀವಕ್ಕೆ ಕುತ್ತನ್ನುಂಟು ಮಾಡುವ ಈ ಹೃದಯದ ಕಾಯಿಲೆಗೇ ಮುಖ್ಯ ಕಾರಣಗಳೇನು ಹಾಗೂ ಅದನ್ನು ಹೇಗೆ ತಡೆಗಟ್ಟಬಹುದು ಎಂಬ ವಿವರ ಇಲ್ಲಿದೆ.

  • ಹೃದಯದ ರಕ್ತವನ್ನು ಪೂರೈಸುವ ರಕ್ತನಾಳಗಳಲ್ಲಿ ಪ್ಲೇಕ್ ರಚನೆಯಾದಾಗ ರಕ್ತನಾಳಗಳಲ್ಲಿ ತಡೆ ಉಂಟಾಗುತ್ತದೆ. ಇದರಿಂದ ಹೃದಯದ ಸ್ನಾಯುಗಳಿಗೆ ರಕ್ತದ ಹರಿಯುವಿಕೆ ಕಡಿಮೆಯಾಗುತ್ತದೆ. ಇದರಿಂದ ಹೃದಯ ಸ್ತಂಭನ ಸಂಭವಿಸುತ್ತದೆ.
  • ಅಧಿಕ ರಕ್ತದೊತ್ತಡದಿಂದ ಈ ಸಮಸ್ಯೆ ಕಾಡುತ್ತದೆ. ಅಧಿಕ ರಕ್ತದೊತ್ತಡವು ಹೃದಯ ಮತ್ತು ರಕ್ತನಾಳಗಳ ಮೇಲೆ ಹೆಚ್ಚುವರಿ ಒತ್ತಡವನ್ನು ಉಂಟುಮಾಡುತ್ತದೆ. ಇದರಿಂದ ಹೃದ್ರೋಗ, ಪಾರ್ಶ್ವವಾಯು ಮತ್ತು ಹೃದಯ ಸ್ತಂಭನ ಸಮಸ್ಯೆ ಕಾಡುತ್ತದೆ.
  • ಮಧುಮೇಹದಿಂದ ಹೃದಯದ ರಕ್ತನಾಳಗಳು ಹಾನಿಗೊಳಗಾಗುತ್ತದೆ. ಇದರಿಂದ ಹೃದಯ ಸ್ತಂಭನದ ಅಪಾಯ ಹೆಚ್ಚಾಗುತ್ತದೆ. ಹಾಗಾಗಿ ಮಧುಮೇಹವನ್ನು ನಿಯಂತ್ರಿಬೇಕು
  • ಬೊಜ್ಜು, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಹೃದಯ ಸ್ತಂಭನಕ್ಕೆ ಕಾರಣವಾಗುತ್ತದೆ. ಹಾಗಾಗಿ ತರಕಾರಿ, ಹಣ್ಣುಗಳು, ತರಕಾರಿ ಮತ್ತು ಧಾನ್ಯಗಳನ್ನು ಹಾಗೂ ಪ್ರೋಟೀನ್ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಮತ್ತು ಆರೋಗ್ಯಕರವಾದ ತೂಕವನ್ನು ಹೊಂದಿರಬೇಕು.
  • ಧೂಮಪಾನವು ರಕ್ತನಾಳಗಳನ್ನು ಹಾನಿಗೊಳಿಸುತ್ತದೆ. ಇದು ರಕ್ತದಲ್ಲಿನ ಆಮ್ಲಜನಕದ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಿಂದ ಹೃದಯ ಸ್ತಂಭನ ಉಂಟಾಗುತ್ತದೆ. ಹಾಗಾಗಿ ಧೂಮಪಾನವನ್ನು ತ್ಯಜಿಸಿದಷ್ಟು ಒಳ್ಳೆಯದು.
  • ದೇಹದಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಹೃದಯ ಅಪಧಮನಿಗಳಲ್ಲಿ ಫ್ಲೇಕ್​ ಸಂಗ್ರಹವಾಗಲು ಕಾರಣವಾಗುತ್ತದೆ. ಇದು ಹೃದಯ ಸ್ತಂಭನದ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಆಗಾಗ ಕೊಲೆಸ್ಟ್ರಾಲ್ ಮಟ್ಟವನ್ನು ಕಾಲಕಾಲಕ್ಕೆ ಪರೀಕ್ಷಿಸಬೇಕು.
  • ದೈಹಿಕ ಚಟುವಟಿಕೆಯ ಕೊರತೆಯು ಹೃದಯ ಸ್ನಾಯುವನ್ನು ದುರ್ಬಲಗೊಳಿಸುತ್ತದೆ. ನೀವು ನಿಯಮಿತವಾಗಿ ದೈಹಿಕ ಚಟುವಟಿಕೆಯಲ್ಲಿ ತೊಡಗದಿದ್ದರೆ ಬೊಜ್ಜು, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಅಪಾಯ ಹೆಚ್ಚಾಗುತ್ತದೆ. ಹಾಗಾಗಿ ಪ್ರತಿದಿನ ವ್ಯಾಯಾಮಗಳನ್ನು ಅಭ್ಯಾಸ ಮಾಡಬೇಕು. ಏರೋಬಿಕ್ ವ್ಯಾಯಾಮ ಅತ್ಯುತ್ತಮ.
  • ದೀರ್ಘಕಾಲದವರೆಗೆ ಒತ್ತಡ, ಖಿನ್ನತೆ ಮತ್ತು ಆತಂಕವನ್ನು ಎದುರಿಸುತ್ತಿದ್ದರೆ ರಕ್ತದೊತ್ತಡ ಹೆಚ್ಚಾಗುತ್ತದೆ. ಇದರಿಂದ ಹೃದಯ ಸ್ತಂಭನ ಸಂಭವಿಸುತ್ತದೆ. ಆಗಾಗಿ ಒತ್ತಡವನ್ನು ನಿವಾರಿಸುವಂತಹ ತಂತ್ರಗಳನ್ನು ಅಳವಡಿಸಿಕೊಳ್ಳಿ. ಅಗತ್ಯವಿದ್ದರೆ ಮಾನೋವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಿರಿ.

ಇದನ್ನೂ ಓದಿ: Pesticide: ಎವರೆಸ್ಟ್‌ ಫಿಶ್‌ ಕರಿ ಮಸಾಲೆಯಲ್ಲಿ ಕೀಟನಾಶಕ; ಬ್ಯಾನ್‌ ಮಾಡಿದ ಸಿಂಗಾಪುರ

  • ಋತುಬಂಧ, ಗರ್ಭಾಧಾರಣೆ, ಮತ್ತು ಹಾರ್ಮೋನ್ ಚಿಕಿತ್ಸೆಗಳಿಗೆ ಸಂಬಂಧಿಸಿದ ಹಾರ್ಮೋನ್ ಬದಲಾವಣೆಗಳು ರಕ್ತನಾಳದ ಕಾರ್ಯ ಮತ್ತು ಕೊಲೆಸ್ಟ್ರಾಲ್ ಮಟ್ಟಗಳ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಹೃದಯ ಸ್ತಂಭನ ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಹಾರ್ಮೋನ್ ಚಿಕಿತ್ಸೆ ನೀಡುವ ಮುನ್ನ ಆರೋಗ್ಯ ತಜ್ಞರ ಸಲಹೆ ಪಡೆಯಿರಿ.
Continue Reading

ಆರೋಗ್ಯ

Jackfruit Benefits: ಈ ಬೇಸಿಗೆಯಲ್ಲಿ ಹಲಸಿನಹಣ್ಣನ್ನು ಯಾಕೆ ತಿನ್ನಲೇಬೇಕು ಗೊತ್ತೆ? ಇಲ್ಲಿವೆ 10 ಕಾರಣಗಳು!

ಬೇರೆ ಹಣ್ಣುಗಳಿಗೆ ಹೋಲಿಸಿದರೆ, ಹಲಸಿನ ಹಣ್ಣಿನ ಬಗ್ಗೆ ಕೊಂಚ ತಾತ್ಸಾರ ಇದ್ದರೂ, ಬೇಕಾಬಿಟ್ಟಿ ಇದು ದೊರೆಯುವುದರಿಂದಲೋ ಏನೋ, ಇದು ಮೂಲೆಗುಂಪಾಗುವುದು ಹೆಚ್ಚು. ಆದರೆ, ಹಲಸಿನ ಹಣ್ಣಿನಲ್ಲಿರುವ ಪೋಷಕಾಂಶಗಳ ಪಟ್ಟಿ ನೋಡಿದರೆ ನೀವು ಹಲಸನ್ನು ಕಡೆಗಣಿಸಲಾರಿರಿ. ಈ ಕುರಿತ (Jackfruit Benefits) ಉಪಯುಕ್ತ ಮಾಹಿತಿ ಇಲ್ಲಿದೆ. ಈ ಬೇಸಿಗೆಯಲ್ಲಿ ಹಲಸಿನ ಹಣ್ಣನ್ನು ಮಿಸ್ ಮಾಡಿಕೊಳ್ಳಬೇಡಿ.

VISTARANEWS.COM


on

Jackfruit benefits
Koo

ಬೇಸಿಗೆ ಬಂತೆಂದರೆ ಮಾವು ಹಲಸುಗಳ ಸಂಭ್ರಮ. ಸೆಖೆಯಲ್ಲಿ ಮೈ ಬೇಯುತ್ತಿದ್ದರೂ, ಹಲಸಿನ ಹಣ್ಣಿನ (Jackfruit) ಬಗೆಬಗೆಯ ಖಾದ್ಯಗಳನ್ನು ಮಾಡಿ ಬಾಯಿ ಚಪ್ಪರಿಸುವ ಸುಖ ಬಹುತೇಕ ಎಲ್ಲರದ್ದು. ಬೇರೆ ಹಣ್ಣುಗಳಿಗೆ ಹೋಲಿಸಿದರೆ, ಹಲಸಿನ ಹಣ್ಣಿನ ಬಗ್ಗೆ ಕೊಂಚ ತಾತ್ಸಾರ ಇದ್ದರೂ, ಬೇಕಾಬಿಟ್ಟಿ ಇದು ದೊರೆಯುವುದರಿಂದಲೋ ಏನೋ, ಇದು ಮೂಲೆಗುಂಪಾಗುವುದು ಹೆಚ್ಚು. ಆದರೆ, ಹಲಸಿನ ಹಣ್ಣಿನಲ್ಲಿರುವ ಪೋಷಕಾಂಶಗಳ ಪಟ್ಟಿ ನೋಡಿದರೆ ನೀವು ಹಲಸನ್ನು ಕಡೆಗಣಿಸಲಾರಿರಿ. ಈ ರುಚಿಯಾದ ಹಣ್ಣನ್ನು ಈ ಬೇಸಿಗೆಯಲ್ಲಿ ನೀವು ಯಾಕೆ ತಿನ್ನಬೇಕು (Jackfruit Benefits) ಎಂಬುದಕ್ಕೆ 10 ಕಾರಣಗಳು ಇಲ್ಲಿವೆ.

Immunity Against Diseases Lemon Water Benefits

ರೋಗನಿರೋಧಕತೆಯನ್ನು ಹೆಚ್ಚಿಸುತ್ತದೆ

ಕಡಿಮೆ ಕ್ಯಾಲರಿಯ ಈ ಹಣ್ಣು (Jackfruit) ಪೋಷಕಾಂಶಗಳ ವಿಚಾರದಲ್ಲಿಯೂ ಶ್ರೀಮಂತಿಕೆಯನ್ನು ಹೊಂದಿದೆ. ಮಾರುಕಟ್ಟೆಯಲ್ಲಿ ಸದಾ ಮುಂದಿರುವ ಸೇಬು, ಆಪ್ರಿಕಾಟ್‌, ಅವಕಾಡೋ, ಬಾಳೆಹಣ್ಣು ಮತ್ತಿತರ ಹಣ್ಣುಗಳಿಗೆ ಹೋಲಿಸಿದರೆ ಹಲಸಿನ ಹಣ್ಣಿನಲ್ಲಿ ಹೆಚ್ಚು ಪೋಷಕಾಂಶಗಳಿವೆ. ಹಲಸಿನಹಣ್ಣಿನಲ್ಲಿ ವಿಟಮಿನ್‌ ಸಿ ಹಾಗೂ ಆಂಟಿ ಆಕ್ಸಿಡೆಂಟ್‌ಗಳೂ ಇರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಇದು ನೆರವಾಗುತ್ತದೆ. ದೇಹಕ್ಕೆ ಯಾವುದೇ ಇನ್‌ಫೆಕ್ಷನ್‌ ಅಥವಾ ವೈರಸ್‌ನ ಪ್ರವೇಶವಾದಾಗ ಅವುಗಳ ವಿರುದ್ಧ ಹೋರಾಡುವಲ್ಲಿ ಇದು ಮುಖ್ಯ ಪಾತ್ರ ವಹಿಸುತ್ತದೆ. ಹಲಸಿನ ಹಣ್ಣಿನ ಬೀಜ ಹಾಗೂ ತೊಳೆಯಲ್ಲಿ ಉತ್ತಮ ಮಟ್ಟದಲ್ಲಿ ಕ್ಯಾಲ್ಶಿಯಂ ಹಾಗೂ ಕಬ್ಬಿಣಾಂಶವಿದ್ದು, ವಿಟಮಿನ್‌ ಬಿ1 ಬಿ3, ಬಿ6 ಹಾಘೂ ಫೋಲೇಟ್‌ ಅನ್ನೂ ಹೊಂದಿದೆ.

images of Jackfruit Benefits

ಉತ್ತಮ ಶಕ್ತಿವರ್ಧಕ

100 ಗ್ರಾಂಗಳಷ್ಟು ಹಲಸಿನ ಹಣ್ಣಿನಲ್ಲಿ 94 ಕ್ಯಾಲರಿಗಳಿದ್ದು ಇದು ಸಾಕಷ್ಟು ಕಾರ್ಬೋಹೈಡ್ರೇಟನ್ನು ಹೊಂದಿದೆ. ಹಾಗಾಗಿ, ಹೆಚ್ಚು ಹಸಿವಾದಾಗ, ಬಹುಬೇಗನೆ ಹಸಿವನ್ನು ತಣಿಸಿ ಶಕ್ತಿಯನ್ನು ನೀಡುತ್ತದೆ.ಹಲಸಿನ ಹಣ್ಣಿನಲ್ಲಿರುವ ಸಕ್ಕರೆಯು ದೇಹದಲ್ಲಿ ಸುಲಭವಾಗಿ ಕರಗಬಲ್ಲದ್ದಾಗಿದೆ. ಹಾಗೂ, ಇದು ಆರೋಗ್ಯಕರವೂ ಕೂಡಾ.

Blood Sugar Control Guava Benefits

ಸಕ್ಕರೆಯ ಮಟ್ಟವನ್ನು ಸಮತೋಲನದಲ್ಲಿರಿಸುತ್ತದೆ

ಹಲಸಿನ ಹಣ್ಣಿನಲ್ಲಿ ಕಡಿಮೆ ಮಟ್ಟದ ಗ್ಲಿಸೆಮಿಕ್ಸ್‌ ಇಂಡೆಕ್ಸ್‌ ಇರುವುದರಿಂದ ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ಬಹುಬೇಗನೆ ಉದ್ದೀಪನೆ ಮಾಡುವುದಿಲ್ಲ. ಹೀಗಾಗಿ.ಸಕ್ಕರೆಯ ಮಟ್ಟ ದಿಢೀರ್‌ ಏರಿಕೆಯಾಗದು. ಬಹಳ ಹೊತ್ತಿನವರೆಗೆ ಹೊಟ್ಟೆ ತುಂಬಿದ ಅನುಭವ ಇದು ನೀಡುವುದರಿಂದ ಸಕ್ಕರೆಯ ಮಟ್ಟವನ್ನು ಸಮತೋಲನಗೊಳಿಸುತ್ತದೆ.

ರಕ್ತದೊತ್ತಡ ಸಮತೋಲನಗೊಳಿಸುತ್ತದೆ

ಹಲಸಿನಹಣ್ಣಿನಲ್ಲಿ ಪೊಟಾಶಿಯಂ ಸರಿಯಾದ ಪ್ರಮಾಣದಲ್ಲಿ ಇರುವುದರಿಂದ ಇದು ಹೃದಯದ ಆರೋಗ್ಯವನ್ನು ಜತನದಿಂದ ಕಾಪಾಡುತ್ತದೆ.

Close-up human eye, lens, cornea and brown iris.

ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು

ವಿಟಮಿನ್‌ ಎ ಯಿಂದ ಹಲಸಿನ ಹಣ್ಣು ಸಮೃದ್ಧವಾಗಿರುವುದರಿಂದ ಕಣ್ಣಿನ ಆರೋಗ್ಯಕ್ಕೆ ಇದು ಬಹಳ ಒಳ್ಳೆಯದು. ಇದು ಕಣ್ಣನ್ನು ಬ್ಯಾಕ್ಟೀರಿಯಾ ಹಾಗೂ ವೈರಲ್‌ ಇನ್‌ಫೆಕ್ಷನ್‌ನಿಂದ ರಕ್ಷಿಸುತ್ತದೆ. ದೃಷ್ಟಿದೋಷವಿರುವ ಮಂದಿಗೆ ಇದು ಒಳ್ಳೆಯದು. ಕಣ್ಣನ್ನು ಸೂರ್ಯನ ತೀಕ್ಷ್ಣ ಕಿರಣಗಳಿಂದ ರಕ್ಷಿಸಲೂ ಇವು ಸಹಾಯ ಮಾಡುತ್ತವೆ.

ಮುಪ್ಪನ್ನು ತಡೆಯುತ್ತದೆ

ನೀವು ಯೌವನದಿಂದ ಕಂಗೊಳಿಸಬೇಕಿದ್ದರೆ ನಿಮ್ಮ ಚರ್ಮ ಲಕಲಕ ಹೊಳೆಯಬೇಕಿದ್ದರೆ ನೀವು ಖುಷಿಯಿಂದ ಹಲಸಿನಹಣ್ಣು ತಿನ್ನಬಹುದು. ಹಲಸಿನ ಹಣ್ಣು ಚರ್ಮ ಮುಪ್ಪಾಗುವ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ.

Promotes Bone Health Fish Benefits

ಎಲುಬನ್ನು ಗಟ್ಟಿಯಾಗಿಸುತ್ತದೆ

ಹಲಸಿನಹಣ್ಣಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕ್ಯಾಲ್ಶೀಯಂ ಇರುವುದರಿಂದ ಇದು ಮೂಳೆಗಳನ್ನು ಹಾಗೂ ಹಲ್ಲುಗಳನ್ನು ಗಟ್ಟಿಗೊಳಿಸುವಲ್ಲಿ ನೆರವಾಗುತ್ತದೆ.

ಥೈರಾಯ್ಡ್‌ ಸಮಸ್ಯೆಗೆ ಒಳ್ಳೆಯದು

ಹಲಸಿನ ಹಣ್ಣಿನಲ್ಲಿ ತಾಮ್ರವೂ ಇರುವುದರಿಂದ ಇದು ಥೈರಾಯ್ಡ್‌ನಲ್ಲಿ ಹಾರ್ಮೋನಿನ ಉತ್ಪಾದನೆ ಹಾಗೂ ಹೀರುವಿಕೆಗೆ ನೆರವಾಗುತ್ತದೆ. ಆ ಮೂಲಕ ಥೈರಾಯ್ಡ್‌ನ ಆರೋಗ್ಯವನ್ನು ಕಾಪಾಡುತ್ತದೆ.

Reduces Risk of Asthma in Children Fish Benefits

ಅಸ್ತಮಾಕ್ಕೆ ಒಳ್ಳೆಯದು

ಮಾಲಿನ್ಯದಿಂದ ಉಂಟಾಗುವ ಅಸ್ತಮಾದಂತಹ ತೊಂದರೆಗಳಿಗೆ ಹಲಸಿನಹಣ್ಣು ಬಹಳ ಒಳ್ಳೆಯದು. ಹಾಗಾಗಿ ಅಸ್ತಮಾ ಇರುವ ಮಂದಿ ಹಲಸಿನ ಹಣ್ಣು ತಿನ್ನಲು ಭಯಪಡಬೇಕಾಗಿಲ್ಲ.

Viral news

ಕ್ಯಾನ್ಸರ್‌ನಿಂದ ರಕ್ಷಿಸುತ್ತದೆ

ಹಲಸಿನಹಣ್ಣಿನಲ್ಲಿ ಆಂಟಿ ಆಕ್ಸಿಡೆಂಟ್‌ಗಳೂ, ಫೈಟೋನ್ಯೂಟ್ರಿಯೆಂಟ್‌ಗಳೂ, ಫ್ಲೇವನಾಯ್ಡ್‌ಗಳೂ ಇರುವುದರಿಂದ ದೇಹದಲ್ಲಿರುವ ವಿಷಕಾರಕ, ಕಲ್ಮಶ, ಹಾಗೂ ಫ್ರೀರ್ಯಾಡಿಕಲ್‌ಗಳನ್ನು ಹೊರಕ್ಕೆ ಕಳಿಸುವಲ್ಲಿ ಇದು ನೆರವಾಗುತ್ತದೆ. ಕಲ್ಮಶಗಳೂ, ಫ್ರೀ ರ್ಯಾಡಿಕಲ್ಸ್‌ಗಳೂ ಕೂಡಾ ಕ್ಯಾನ್ಸರ್‌ ಕಾರಕಗಳಾಗಿರುವುದರಿಂದ ಹಲಸಿನ ಹಣ್ಣು ನಮಗೆ ಕ್ಯಾನ್ಸರ್‌ನಿಂದ ರಕ್ಷಣೆ ನೀಡುತ್ತದೆ.

ಇದನ್ನೂ ಓದಿ: Dental Braces: ಹಲ್ಲುಗಳ ಸೌಂದರ್ಯ ವೃದ್ಧಿಗೆ ಬ್ರೇಸಸ್‌ ಹಾಕುವ ಯೋಚನೆ ಇದೆಯೇ? ಈ ಮಾಹಿತಿ ತಿಳಿದಿರಲಿ

Continue Reading

ಆರೋಗ್ಯ

Solution For Pimples: ಈ ಆಹಾರಗಳ ಸಹವಾಸ ಬಿಡಿ; ಮೊಡವೆಯನ್ನು ದೂರವಿಡಿ!

ಮೊಡವೆಗಳಿಗೆ ಪರಿಹಾರವೇ ಇಲ್ಲವೇ (Solution For Pimples) ಎಂದು ನೀವು ಕೇಳಬಹುದು. ಖಂಡಿತ ಇದ್ದೇ ಇದೆ. ಮುಖ್ಯವಾಗಿ, ಚರ್ಮದ ಹೊರಗಿನ ಆರೈಕೆಗಿಂತ ಒಳಗಿನ ಆರೈಕೆ ಮುಖ್ಯ. ಒಳಗೆ ತೆಗೆದುಕೊಳ್ಳುವ ಆಹಾರದ ಬಗ್ಗೆಯೂ ಕಾಳಜಿ ಮಾಡಬೇಕು. ಬನ್ನಿ, ಯಾವೆಲ್ಲ ಆಹಾರಗಳ ಬಗ್ಗೆ ಎಚ್ಚರ ಅಗತ್ಯ ಎಂಬುದನ್ನು ನೋಡೋಣ.

VISTARANEWS.COM


on

Solution For Pimple
Koo

ಮೊಡವೆ ಮತ್ತು ಮೊಡವೆಗಳ ಕಲೆಗಳಿಂದ ಬೇಸತ್ತ ಮಂದಿ ಏನೆಲ್ಲ ಸರ್ಕಸ್‌ ಮಾಡಿದರೂ ಮೊಡವೆಯಿಂದ ಮುಕ್ತಿ ಸಿಗುವುದಿಲ್ಲ ಎಂದು ಬೇಸರ ಪಡಬಹುದು. ನೂರೆಂಟು ಮಂದಿ ನೂರಾರು ಸಲಹೆ ಕೊಡಬಹುದಾದರೂ, ಎಲ್ಲರಿಗೂ ಎಲ್ಲ ಸಲಹೆಗಳೂ ಹೊಂದಲಾರದು. ಕಾರಣ, ಒಬ್ಬೊಬ್ಬರ ದೇಹ ಪ್ರಕೃತಿ ಒಂದೊಂದು ಬಗೆ. ಮೊಡವೆಗಳ ಸಮಸ್ಯೆಗೆ (Solution For Pimples) ಎಲ್ಲರ ಕಾರಣಗಳೂ ಒಂದೇ ಆಗಿರಬೇಕಾಗಿಲ್ಲ. ಆದರೆ, ಬಹುತೇಕರ ಸಮಸ್ಯೆ ಎಂದರೆ ಎಣ್ಣೆ ಚರ್ಮ. ಚರ್ಮದಲ್ಲಿ ಅತಿಯಾದ ಎಣ್ಣೆ ಸ್ರವಿಸಲ್ಪಡುವುದು ಹಾಗೂ ಇದರಿಂದ ಉಂಟಾಗುವ ಮೊಡವೆಗಳು. ಇದಕ್ಕಾಗಿ ಅನೇಕರು ಬಳಸದ ಕ್ರೀಮ್‌ಗಳಿಲ್ಲ, ಮಾಡದ ಮನೆಮದ್ದುಗಳಿಲ್ಲ, ಹೋಗದ ಪಾರ್ಲರ್‌ಗಳಿಲ್ಲ. ಆದರೆ ಸಮಸ್ಯೆ ಮಾತ್ರ ಎಂದಿನದ್ದೇ. ಹಾಗಾದರೆ ಮೊಡವೆಗಳಿಗೆ ಪರಿಹಾರವೇ ಇಲ್ಲವೇ ಎಂದು ನೀವು ಕೇಳಬಹುದು. ಖಂಡಿತ ಇದ್ದೇ ಇದೆ. ಮುಖ್ಯವಾಗಿ, ಚರ್ಮದ ಹೊರಗಿನ ಆರೈಕೆಗಿಂತ ಒಳಗಿನ ಆರೈಕೆ ಮುಖ್ಯ. ಒಳಗೆ ತೆಗೆದುಕೊಳ್ಳುವ ಆಹಾರದ ಬಗ್ಗೆಯೂ ಕಾಳಜಿ ಮಾಡಬೇಕು. ಬನ್ನಿ, ಯಾವೆಲ್ಲ ಆಹಾರಗಳ ಬಗ್ಗೆ ಎಚ್ಚರ ಅಗತ್ಯ ಎಂಬುದನ್ನು ನೋಡೋಣ.

Warm milk

ಹಾಲು

ಹಾಲಿನಿಂದ ಮೊಡವೆಗಳುಂಟಾಗಬಹುದು. ಆಶ್ಚರ್ಯವಾದರೂ ಸತ್ಯವೇ. ಹಸುವಿನ ಹಾಲಿನಲ್ಲಿ ಬೆಳವಣಿಗೆಯ ಹಾರ್ಮೋನ್‌ ಐಜಿಎಫ್‌-1 ಹಾಗೂ ಬೊವಿನ್‌ ಇರುವುದರಿಂದ ಇವು ನಮ್ಮ ದೇಹಕ್ಕೆ ಸೇರುವುದರಿಂದ ಇವು ಚರ್ಮದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಇದರಿಂದ ಮುಖದಲ್ಲಿ ಕೂದಲ ಬೆಳವಣಿಗೆ ಹಾಗೂ ಮೊಡವೆಗಳೂ ಉಂಟಾಗುತ್ತದೆ.

ಅಯೋಡಿನ್

ಮೊಡವೆಗಳಿಗೂ ಅಯೋಡಿನ್‌ಗೂ ಅವಿನಾಭಾವ ಸಂಬಂಧವಿದೆ. ಅಂದರೆ, ಉಪ್ಪು ಹೆಚ್ಚಿರುವ ತಿನಿಸುಗಳನ್ನು, ಆಗಾಗ ತಿನ್ನುವ ಆಹಾರಗಳಲ್ಲಿರುವ ಉಪ್ಪಿನ ಪ್ರಮಾಣ ಎಲ್ಲವೂ ನಮ್ಮ ಚರ್ಮದ ಮೇಲೆ ಪ್ರಭಾವ ಬೀರುತ್ತದೆ. ಆದರೆ, ಪೂರ್ತಿಯಾಗಿ ಉಪ್ಪನ್ನು ಬಿಡಬೇಡಿ. ಅಯೋಡಿನ್‌ ಕೊರತೆ ದೇಹಕ್ಕೆ ಆಗಬಾರದು ಎಂಬುದನ್ನೂ ನೆನಪಿನಲ್ಲಿಟ್ಟುಕೊಂಡು ಕೊಂಚ ಕಡಿಮೆ ಪ್ರಮಾಣದಲ್ಲಿ ಉಪ್ಪನ್ನು ತಿನ್ನುವ ಅಭ್ಯಾಸ ರೂಢಿಸಿಕೊಳ್ಳಿ. ಇದು ನಿಮ್ಮ ಚರ್ಮದ ಮೇಲೆ ಮ್ಯಾಜಿಕ್‌ ಮಾಡಬಹುದು.

Index foods

ಹೆಚ್ಚು ಗ್ಲಿಸೆಮಿಕ್‌ ಇಂಡೆಕ್ಸ್‌ ಇರುವ ಆಹಾರಗಳು

ಕಡಿಮೆ ಗ್ಲಿಸೆಮಿಕ್‌ ಇಂಡೆಕ್ಸ್‌ ಇರುವ ಆಹಾರಗಳ ಸೇವನೆ ನಿಮ್ಮ ಮೊಡವೆಗಳ ಸಮಸ್ಯೆಯನ್ನೇ ಸಂಪೂರ್ಣವಾಗಿ ಇಲ್ಲವಾಗಿಸುತ್ತದೆ ಎನ್ನಲಾಗುತ್ತದೆ. ಕಾರ್ನ್‌ ಸಿರಪ್‌, ಮೈದಾ, ಸಕ್ಕರೆ, ರಿಫೈನ್ಡ್‌ ಧಾನ್ಯಗಳು, ಸಾಸ್‌ ಹಾಗೂ ಕೆಚಪ್‌ಗಳು, ಸ್ಪೋರ್ಟ್ಸ್‌ ಡ್ರಿಂಕ್‌ಗಳು ಸಂಸ್ಕರಿಸಿದ ಮಾಂಸ ಹಾಗೂ ಇತರ ಆಹಾರಗಳು, ಇತರ ಆಹಾರಗಳ ಮೂಲಕ ಗೊತ್ತೇ ಆಗದಂತೆ ದೇಹದೊಳಕ್ಕೆ ಸೇರುವ ಸಕ್ಕರೆ ಎಲ್ಲವೂ ಹೆಚ್ಚು ಗ್ಲಿಸೆಮಿಕ್‌ ಇಂಡೆಕ್ಸ್‌ ಹೊಂದಿವೆ. ಆದಷ್ಟೂ ನೈಸರ್ಗಿಕ ಆಹಾರಗಳು, ಒಣಬೀಜಗಳು, ಹಣ್ಣುಗಳು ಇತ್ಯಾದಿಗಳನ್ನೇ ತಿನ್ನಿ.
ಹಾಗಾದರೆ ಏನು ತಿಂದರೆ ಮೊಡವೆಗಳು ಬರದಂತೆ ತಡೆಯಬಹುದು, ಚರ್ಮವನ್ನು ನುಣುಪಾಗಿ ಇರಿಸಬಹುದು ಎನ್ನುತ್ತೀರಾ? ಝಿಂಕ್‌ ಹೆಚ್ಚಿರುವ ಆಹಾರಗಳು ಮೊಡವೆ ಸಮಸ್ಯೆಗೆ ಬಹಳ ಒಳ್ಳೆಯದು. ಇದರಲ್ಲಿರುವ ಆಂಟಿ ಇನ್‌ಫ್ಲಮೇಟರಿ ಗುಣಗಳು ಮೊಡವೆ ಉಂಟು ಮಾಡುವ ಬ್ಯಾಕ್ಟೀರಿಯಾಗಳನ್ನು ಓಡಿಸುತ್ತವೆ. ಕಿಡ್ನಿ ಬೀನ್ಸ್‌, ಓಯ್ಸ್ಟರ್‌, ಕೆಂಪು ಮಾಂಸ ಹಾಗೂ ಸಿಹಿಕುಂಬಳದ ಬೀಜ ಇವುಗಳಲ್ಲಿ ಹೆಚ್ಚು ಝಿಂಕ್‌ ಇವೆ.
ಅಷ್ಟೇ ಅಲ್ಲ, ಒಮೆಗಾ 3 ಇರುವ ಆಹಾರಗಳನ್ನು ಹೆಚ್ಚಿಸಿ ಒಮೆಗಾ ಇರುವ ಆಹಾರಗಳಾದ ಸಂಸ್ಕರಿಸಿದ ಎಣ್ಣೆಗಳು, ಬೇಕ್ಡ್‌ ಆಹಾರಗಳು ಇತ್ಯಾದಿಗಳನ್ನು ಕಡಿಮೆ ಮಾಡಿ. ನದಿಯ ಮೀನನ್ನು ವಾರಕ್ಕೆರಡು ಬಾರಿ ತಿನ್ನಿ. ಚಿಯಾ ಬೀಜಗಳು, ಅಗಸೆ ಬೀಜಗಳನ್ನು ನಿತ್ಯವೂ ಸೇವಿಸಿ. ಆಹಾರ ಸೇವನೆಯ ಪ್ರಮಾಣದ ಮೇಲೆ ಹಿಡಿತವಿರಲಿ. ನೈಸರ್ಗಿಕ ಆಹಾರಗಳನ್ನೇ ಹೆಚ್ಚು ಸೇವಿಸಿ. ಎಲ್ಲ ಪೋಷಕಾಂಶಗಳನ್ನೊಳಗೊಂಡ ಸಂಪೂರ್ಣ ಆಹಾರದೆಡೆಗೆ ಗಮನ ಇರಲಿ. ಇಷ್ಟು ಮಾಡಿದರೆ ಖಂಡಿತವಾಗಿಯೂ ನಿಮ್ಮ ಚರ್ಮವೂ ಆರೋಗ್ಯಕರವಾಗಿ ಫಲಫಳಿಸುತ್ತದೆ ಎನ್ನುತ್ತಾರೆ ವೈದ್ಯರು.

ಇದನ್ನೂ ಓದಿ: Balancing Hormones Naturally: ಹಾರ್ಮೋನು ಸಮತೋಲನಕ್ಕೆ ಬೇಕು ಇಂಥ ಆಹಾರಗಳು

Continue Reading
Advertisement
Chikkaballapur Lok Sabha Constituency Congress candidate Raksha Ramaiah election campaign in Yalahanka
ಬೆಂಗಳೂರು1 min ago

Lok Sabha Election 2024: ಬಿಜೆಪಿ ಆಡಳಿತದಲ್ಲಿ ಶೇ. 5ರಷ್ಟೂ ಉದ್ಯೋಗ ಸೃಷ್ಟಿಯಾಗಿಲ್ಲ: ರಕ್ಷಾ ರಾಮಯ್ಯ

kaalnadige Jatha programme in Uttara kannada
ಉತ್ತರ ಕನ್ನಡ25 mins ago

Lok Sabha Election 2024: ಉ.ಕ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮತದಾನದ ಗುರಿ; ಡಿಸಿ

Bangalore Rural Lok Sabha Constituency Congress candidate D K Suresh Election campaign
ಬೆಂಗಳೂರು ಗ್ರಾಮಾಂತರ27 mins ago

Lok Sabha Election 2024: ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ: ಡಿ.ಕೆ. ಸುರೇಶ್

Neha Murder Case
ಕರ್ನಾಟಕ28 mins ago

Neha Murder Case: ನನ್ನ ಮಗನಿಗೆ ಶಿಕ್ಷೆ ಆಗಬೇಕು; ಯಾರೂ ಇಂಥ ಕೃತ್ಯ ಎಸಗಬೇಡಿ ಎಂದು ಫಯಾಜ್‌ ತಂದೆ ಕಣ್ಣೀರು

IPL 2024
ಪ್ರಮುಖ ಸುದ್ದಿ31 mins ago

IPL 2024 : ಇಂಪ್ಯಾಕ್ಟ್​ ಪ್ಲೇಯರ್ ನಿಯಮಕ್ಕೆ ಆಕ್ಷೇಪ ಎತ್ತಿದ ರಿಕಿ ಪಾಂಟಿಂಗ್​

Lok Sabha Election 2024
Lok Sabha Election 202434 mins ago

Lok Sabha Election 2024: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ; ಕಾರಣ ಇದು

Day 2 of CET 2024 Exam 26 out of syllabus question KEA asks to raise objections by April 27
ಶಿಕ್ಷಣ1 hour ago

CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

Maldives Tourism
ವಿದೇಶ1 hour ago

Maldives Tourism: ಪರಿಣಾಮ ಬೀರಿದ ಮಾಲ್ಡೀವ್ಸ್ ಬಹಿಷ್ಕಾರದ ಕೂಗು; ಭೇಟಿ ನೀಡುವ ಭಾರತೀಯರ ಸಂಖ್ಯೆಯಲ್ಲಿ ಭಾರೀ ಕುಸಿತ

IPL 2024
ಕ್ರೀಡೆ1 hour ago

IPL 2024 : ಪಾಂಡ್ಯ ಅಂದ್ರೆ ಡೋಂಟ್​ ಕೇರ್​, ರೋಹಿತ್​ಗೆ ಫುಲ್​ ರೆಸ್ಪೆಕ್ಟ್​; ಯುವ ಬೌಲರ್​ನ ನಡೆ ಫುಲ್ ವೈರಲ್​

Party symbols
ರಾಜಕೀಯ1 hour ago

Party Symbols: ವಿವಿಧ ಪಕ್ಷಗಳ ಚುನಾವಣಾ ಚಿಹ್ನೆ ಹಿಂದೆ ಹೇಗಿತ್ತು, ಈಗ ಏನಾಗಿದೆ? ಸಂಗ್ರಹಯೋಗ್ಯ ಮಾಹಿತಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ6 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ17 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌