Health Tips For Monsoon: ಮಳೆಗಾಲದ ಸೋಂಕುಗಳನ್ನು ದೂರ ಇರಿಸುವುದು ಹೇಗೆ? - Vistara News

ಆರೋಗ್ಯ

Health Tips For Monsoon: ಮಳೆಗಾಲದ ಸೋಂಕುಗಳನ್ನು ದೂರ ಇರಿಸುವುದು ಹೇಗೆ?

ಮಳೆಗಾಲವೆಂದರೆ ರೋಗಾಣುಗಳ ವೃದ್ಧಿಗೂ ಅನುಕೂಲಕರ ಕಾಲ. ಆದರೆ ಸರಳ ಜೀವನಶೈಲಿಯ ಅನುಸರಣೆಗಳು ಮತ್ತು ಸುಲಭ ಆಹಾರದ ಪಥ್ಯಗಳಿಂದ ಮಳೆಗಾಲದ ಸೋಂಕುಗಳಿಗೆ ಬೆಚ್ಚದೆ ಬೆಚ್ಚಗಿರಬಹುದು. (Health tips for monsoon) ಆರೋಗ್ಯ ಕಾಪಾಡಿಕೊಳ್ಳುವುದಕ್ಕೆ ಮತ್ತು ಸಣ್ಣ-ಪುಟ್ಟ ಸೋಂಕುಗಳಿಗೆ ಅಗತ್ಯವಾದ ಟಿಪ್ಸ್‌ ಇಲ್ಲಿದೆ.

VISTARANEWS.COM


on

Health Tips For Monsoon
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಋತುಮಾನಗಳಿಗೆ ತಕ್ಕಂತೆ ನಮ್ಮ ಆರೋಗ್ಯದ ಸ್ಥಿತಿಗತಿಗಳೂ ಬದಲಾಗುತ್ತವೆ. ಈಗಂತೂ ಮಳೆ ಜಡಿಯುತ್ತಿರುವ ದಿನಗಳು. ಅಂದರೆ ಮಳೆಯಲ್ಲಿ ಒದ್ದೆಯಾಗದೆ ಇರುವುದಕ್ಕೆ ಕಷ್ಟವಾಗುವ ದಿನಗಳು. ಇಂಥ ಸನ್ನಿವೇಶಗಳಲ್ಲೇ ನಾವು ರೋಗಾಣುಗಳಿಗೆ ಇಷ್ಟ ಆಗುವುದು! ಶಾಲೆಗೆ ಹೋಗುವ ಮಕ್ಕಳಿಂದ ಹಿಡಿದು ವಯಸ್ಕರು, ವೃದ್ಧರವರೆಗೆ ಶೀತ-ಜ್ವರದಿಂದ ಹಿಡಿದು ಕಣ್ಣಿನ ಸೋಂಕಿನವರೆಗೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಗಂಟು ಬೀಳುತ್ತವೆ. ಇವುಗಳಿಂದ ತಪ್ಪಿಸಿಕೊಳ್ಳುವುದು ಸುಲಭವಲ್ಲದಿದ್ದರೂ, ಅಸಾಧ್ಯವೇನಲ್ಲ. ಜೀವನಶೈಲಿಯಲ್ಲಿನ ಕೆಲವು ಸರಳ ಬದಲಾವಣೆಗಳು ಮತ್ತು ಆಹಾರದ ಜಾಗ್ರತೆಯಿಂದ ಮಳೆಗಾಲದ ಸೋಂಕುಗಳಿಗೆ ಬೆಚ್ಚದೆ ಬೆಚ್ಚಗಿರಬಹುದು. ಹಾಗಾದರೆ ಮಳೆ-ಗಾಳಿಯ ಈ ದಿನಗಳಲ್ಲಿ ಪದೇಪದೆ ಕಾಡುವ ಸೋಂಕುಗಳ ಬಾಧೆಯಿಂದ (Health tips for monsoon) ತಪ್ಪಿಸಿಕೊಳ್ಳುವುದು ಹೇಗೆ?

Monsoon Health Tips

ಮಲೇರಿಯಾ, ಡೆಂಗು, ಚಿಕುನ್‌ಗುನ್ಯಾ, ಟೈಫಾಯ್ಡ್‌, ಕಾಲರಾ, ಫ್ಲೂ ಮತ್ತಿತರ ವೈರಸ್‌ ಸೋಂಕುಗಳು, ಡಯರಿಯಾ ಮುಂತಾದ ಹಲವು ಸಮಸ್ಯೆಗಳು ಗಾಳಿ ಮತ್ತು ಕಲುಷಿತ ಆಹಾರ-ನೀರಿನಿಂದ ಅಮರಿಕೊಳ್ಳುತ್ತವೆ. ವೈರಸ್‌ ಸೋಂಕುಗಳು ಹೆಚ್ಚಿನ ಸಾರಿ ವೈದ್ಯರ ದರ್ಶನವಿಲ್ಲದೆಯೇ ಗುಣವಾಗುವಂಥವು. ಬ್ಯಾಕ್ಟೀರಿಯಾ ಉಪಟಳವಾದರೆ ಇದಕ್ಕೆ ವೈದ್ಯರ ಭೇಟಿ ಅಗತ್ಯವಾಗುತ್ತದೆ. ಸಾಮಾನ್ಯವಾಗಿ ಕಣ್ಣು ಕೆಂಪಾಗುವುದು, ಗಂಟಲು ಕೆರೆತ ಅಥವಾ ನೋವು, ಮೈಕೈ ನೋವು, ಸ್ನಾಯು ಸೆಳೆತ, ಕೆಮ್ಮು, ಸೀನು, ನೆಗಡಿ, ಜ್ವರದಂಥ ಲಕ್ಷಣಗಳು ವೈರಸ್‌ ಸೋಂಕಿನಿಂದ ಬಂದಿದ್ದಾಗಿರಬಹುದು. ಗಂಟಲು ನೋವು ಅಥವಾ ಕಿವಿ ನೋವಿನಂಥ ಲಕ್ಷಣಗಳಿದ್ದರೆ, ಇತ್ತೀಚೆಗೆ ಹೊಸದಾಗಿ ಹಬ್ಬುತ್ತಿರುವ ಐ-ಫ್ಯೂ ಲಕ್ಷಣಗಳಿದ್ದರೆ (Health tips for monsoon) ವೈದ್ಯರನ್ನು ಕಾಣಬೇಕಾಗುತ್ತದೆ.

Vitamin D foods

ವಿಟಮಿನ್‌ ಡಿ

ಮಳೆಗಾಲದ ಮೋಡ ಮುಸುಕಿದ ವಾತಾವರಣದ ಕಾರಣದಿಂದ ಬಿಸಿಲು ಕಡಿಮೆ. ಆದರೆ ಎಂದಾದರೂ ಬಿಸಿಲಿದ್ದಾಗ ಕೊಂಚ ಮೈಯೊಡ್ಡಿಕೊಳ್ಳಿ. ಇದರಿಂದ ದೇಹಕ್ಕೆ ಅಗತ್ಯವಾದ ವಿಟಮಿನ್‌ ಡಿ ದೊರೆಯುತ್ತದೆ. ಮನಸ್ಸಿನ ಮಬ್ಬು ಕಳೆದು ಚೈತನ್ಯ ಆವರಿಸುತ್ತದೆ. ವಿಟಮಿನ್‌ ಡಿ ಕೊರತೆಯಿಂದಲೂ ದೇಹದ ರೋಗ ನಿರೋಧಕ ಶಕ್ತಿ ಕುಂಠಿತಗೊಳ್ಳಬಹುದು. ಹಾಗಾಗಿ ಮಳೆಗಾಲದ ಅಣಬೆಗಳು, ಚೀಸ್‌, ಕೊಬ್ಬು ಹೆಚ್ಚಿರುವ ಮೀನುಗಳು, ಮೊಟ್ಟೆಯ ಹಳದಿ ಭಾಗಗಳಿಂದಲೂ ದೊರೆಯುವ ಡಿ ಜೀವಸತ್ವವನ್ನು ದೇಹಕ್ಕೆ ಒದಗಿಸಿ.

Vitamin D foods

ಅರಿಶಿನದ ಕಷಾಯ

ಪ್ರಬಲವಾದ ಉತ್ಕರ್ಷಣ ನಿರೋಧಕಗಳಿಂದ ಕೂಡಿದ ಅರಿಶಿನವನ್ನು ಹಾಲಿಗೆ ಹಾಕಿಕೊಂಡು ಅಥವಾ ಕಷಾಯದೊಂದಿಗೆ ಸೇವಿಸುವುದು ಒಳ್ಳೆಯದು. ಕರಿಮೆಣಸಿನ ಪುಡಿಯೂ ಇದರೊಂದಿಗೆ ಹಿತ. ಮಾಮೂಲಿ ಚಹಾದ ಬದಲು ಯಾವುದೇ ರೀತಿಯ ಗ್ರೀನ್‌ ಟೀಯನ್ನೂ ಈ ದಿನಗಳಲ್ಲಿ ಬಳಸುವುದು ಹಿತವಾಗುತ್ತದೆ.

Home Remedies for Cold and Cough

ನೆಗಡಿ-ಕೆಮ್ಮಿನ ಮನೆಮದ್ದುಗಳು

ಮೊದಲನೇ ಕ್ರಮವೆಂದರೆ ಬೆಚ್ಚಗಿನ ಉಪ್ಪುನೀರಿನ ಗಾರ್ಗಲ್‌. ನೆಗಡಿ-ಕೆಮ್ಮು-ಗಂಟಲ ಕೆರೆತದಂಥ ಸಮಸ್ಯೆಗಳನ್ನು ಬಹುಮಟ್ಟಿಗೆ ತಹಬಂದಿಗೆ ತರುತ್ತದೆ. ದಿನಕ್ಕೆ ಮೂರ್ನಾಲ್ಕು ಬಾರಿ ಮಾಡುವುದರಿಂದ ಈ ಸಮಸ್ಯೆ ಆಳಕ್ಕಿಳಿದಂತೆ ತಡೆಯಬಹುದು.

ದೊಡ್ಡಪತ್ರೆಯನ್ನು ಬಿಸಿ ಮಾಡಿ ಎರಡು ಚಮಚದಷ್ಟು ರಸ ತೆಗೆದು ಜೊತೆಗೆ ಒಂದು ಚಮಚದಷ್ಟು ತುಳಸಿ ರಸವನ್ನು ಮತ್ತು ಜೇನುತುಪ್ಪವನ್ನು ಮಿಶ್ರ ಮಾಡಿ ಸೇವಿಸುವುದರಿಂದ ಥಂಡಿ-ಕೆಮ್ಮು ನಿಯಂತ್ರಣಕ್ಕೆ ಬರುತ್ತದೆ

ಕೆಮ್ಮು, ಗಂಟಲು ಕೆರೆತಕ್ಕೆ ಮತ್ತೊಂದು ಜನಪ್ರಿಯ ಮನೆ ಮದ್ದೆಂದರ ಶುಂಠಿ-ಕೊತ್ತಂಬರಿ ಕಾಫಿ ಅಥವಾ ಕಷಾಯ. ನಾಲು ಚಮಚ ಕೊತ್ತಂಬರಿ ಬೀಜ ಮತ್ತು ಒಂದಿಂಚುದ್ದದ ಶುಂಠಿಯನ್ನು ಅರ್ಧ ಲೀ. ನೀರಿಗೆ ಹಾಕಿ ಹತ್ತಾರು ನಿಮಿಷಗಳ ಕಾಲ ಕುದಿಸಿ. ಅದನ್ನು ಆಗಾಗ ಬೆಚ್ಚಗೆ ಮಾಡಿ ಕುಡಿಯುತ್ತಿರಿ.

ಒಂದು ಮಧ್ಯಮ ಗಾತ್ರದ ಈರುಳ್ಳಿಯನ್ನು ಹೆಚ್ಚಿ ಒಂದು ಲೋಟ ನೀರಿನೊಂದಿಗೆ ಕುದಿಸಿ ಕಷಾಯ ಮಾಡಿ. ಇದಕ್ಕೆ ಒಂದು ಸಣ್ಣ ತುಂಡು ಕಲ್ಲುಸಕ್ಕರೆ ಮತ್ತು ಆರೆಂಟು ಹನಿ ನಿಂಬೆರಸ ಸೇರಿಸಿ, ಬಿಸಿ ಇರುವಾಗಲೇ ಸೇವಿಸಿದರೆ ನೆಗಡಿ, ಕೆಮ್ಮು, ಕಫದ ಸಮಸ್ಯೆಗೆ ಉಪಶಮನ ದೊರೆಯುತ್ತದೆ.

ಸ್ವಲ್ಪ ಹಸಿಶುಂಠಿ, 1 ಲವಂಗ, ಕೊಂಚ ಹಿಪ್ಪಲಿ, ನಾಲ್ಕಾರು ಕಾಳು ಮೆಣಸು, ಸ್ವಲ್ಪ ಬೆಲ್ಲ, 2 ಸಣ್ಣ ಹರಳು ಉಪ್ಪನ್ನು ಸೇರಿಸಿ ಚೆನ್ನಾಗಿ ಕುದಿಸಿ, ಶೋಧಿಸಿಕೊಂಡು ಕುಡಿಯುವುದರಿಂದ ನೆಗಡಿ, ಕೆಮ್ಮು ಹತೋಟಿಗೆ ಬರುತ್ತದೆ

ಬಿಸಿಯಾದ ಹಾಲಿಗೆ ಚಿಟಿಕೆ ಅರಿಶಿನ, ಚಿಟಿಕೆ ಕಾಳು ಮೆಣಸಿನ ಪುಡಿ, ಚಿಟಿಕೆ ಜ್ಯೇಷ್ಠಮಧುವಿನ ಪುಡಿ ಅಥವಾ ಕೊಂಚ ಕಲ್ಲುಸಕ್ಕರೆಯನ್ನು ಸೇರಿಸಿ ಕುಡಿಯುವುದು ಶೀತ-ಕೆಮ್ಮಿಗೆ ಸೂಕ್ತ ಮದ್ದಾಗಬಲ್ಲುದು. ಕಫದ ಲಕ್ಷಣಗಳಿದ್ದರೆ ಜ್ಯೇಷ್ಠಮಧುವಿಗೆ ಒಂದೆರಡು ಹನಿ ಕರಗಿದ ತುಪ್ಪ ಸೇರಿಸಿ ಜೇನುತುಪ್ಪದ ಜೊತೆಗೆ ಸೇವಿಸಬಹುದು. ಎಲ್ಲಕ್ಕಿಂತ ಮುಖ್ಯವಾಗಿ ಬಿಸಿನೀರಿನಲ್ಲಿ ದಿನಕ್ಕೆ ನಾಲ್ಕಾರು ಬಾರಿ ಚೆನ್ನಾಗಿ ಆವಿ ತೆಗೆದುಕೊಳ್ಳುವುದು ಕಫ, ಕೆಮ್ಮಿಗೆ ಉತ್ತಮ ಉಪಶಮನ ನೀಡುತ್ತದೆ.

ಹತ್ತನ್ನೆರಡು ದೊಡ್ಡ ತುಳಸಿ ದಳಗಳು ಮತ್ತು ನಾಲ್ಕು ಏಲಕ್ಕಿ ಮತ್ತು ಒಂದೆರಡು ಲವಂಗ ಸೇರಿಸಿ ಚೆನ್ನಾಗಿ ಕುದಿಸಿ ಕಷಾಯ ಮಾಡಿ ಕುಡಿಯುವುದರಿಂದ ನೆಗಡಿಯೊಂದಿಗೆ ಬರುವ ಸಣ್ಣ ಜ್ವರಕ್ಕೂ ಮದ್ದಾಗುತ್ತದೆ. ಗಂಟಲು ನೋವಿದ್ದರೆ ತುಳಸಿಯ ಕಷಾಯಕ್ಕೆ ಚಿಟಿಕೆ ಅರಿಶಿನ ಹಾಕಿ ಗಾರ್ಗಲ್‌ ಮಾಡಬಹುದು

ಇಷ್ಟಾಗಿಯೂ ನೆಗಡಿ, ಗಂಟಲುರಿ, ತಲೆಭಾರ ಮುಂತಾದ ಫ್ಲೂ ಲಕ್ಷಣಗಳು ಕಾಣಿಸಿಕೊಂಡರೆ- ನಿಮ್ಮನ್ನು ಉಳಿದವರಿಂದ ಬೇರ್ಪಡಿಸಿಕೊಳ್ಳಿ. ಕೆಮ್ಮುವಾಗ, ಸೀನುವಾಗ ಮೂಗು-ಬಾಯಿ ಮುಚ್ಚಿಕೊಳ್ಳುವುದು ಅಗತ್ಯ. ಅರಿಶಿನದ ಕಷಾಯ ಅಥವಾ ಶುಂಠಿ ಕಷಾಯಗಳು ನೆರವಾಗಬಹುದು. ಬಿಸಿ ಆವಿ ತೆಗೆದುಕೊಳ್ಳುವುದು ಗಂಟಲುರಿ ಮತ್ತು ಕಟ್ಟಿದ ಮೂಗಿನ ಪರಿಣಾಮಕಾರಿಯಾಗ ಉಪಶಮನ ನೀಡುತ್ತದೆ. ಕೆಮ್ಮು ಹೆಚ್ಚಾದರೆ ಜೇನುತುಪ್ಪದಲ್ಲಿ ಅತಿಮಧುರ ಅಥವಾ ಜೇಷ್ಠಮಧುವಿನ ಪುಡಿಯನ್ನು ತೆಗೆದುಕೊಳ್ಳುವುದು ಅನುಕೂಲ ಎನಿಸಬಹುದು. ಅಡುಗೆಯಲ್ಲಿ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ-ಬೆಳ್ಳಿಳ್ಳಿ ಬಳಸುವುದೂ ಲಾಭದಾಯಕ. ಆಹಾರವನ್ನು ಬಿಸಿಯಿರುವಾಗಲೇ ಸೇವಿಸಿ. ಸಾಕಷ್ಟು ದ್ರಾವಾಹಾರವನ್ನು ಸೇವಿಸಿ, ವಿಶ್ರಾಂತಿ ಪಡೆಯಿರಿ. ಒಂದೆರಡು ದಿನಗಳಲ್ಲಿ ಜ್ವರ ಮತ್ತಿತರ ಲಕ್ಷಣಗಳು ನಿಯಂತ್ರಣಕ್ಕೆ ಬಾರದಿದ್ದರೆ ವೈದ್ಯರ ಸಲಹೆ ಪಡೆಯಿರಿ.

FAQ

ನೆಗಡಿ ಇನ್ನೂ ಪ್ರಾರಂಭವಾಗಿಲ್ಲ, ಆದರೆ ಆಗುವಂತಿದೆ. ಇದನ್ನು ತಡೆಯಲಾಗದೇ?

ಆಹಾರದಲ್ಲಿ ವಿಟಮಿನ್‌ ಸಿ ಪ್ರಮಾಣವನ್ನು ಹೆಚ್ಚಿಸಿ. ಬೆಚ್ಚನೆಯ ನೀರಿಗೆ ನಿಂಬೆ ರಸ ಮತ್ತು ಜೇನುತುಪ್ಪ ಹಾಕಿ ದಿನಕ್ಕೆ ಒಂದೆರಡು ಬಾರಿ ಸೇವಿಸಿ. ಚೆನ್ನಾಗಿ ನೀರು ಕುಡಿಯಿರಿ ಮತ್ತು ದಿನಕ್ಕೆಂಟು ತಾಸು ನಿದ್ದೆ ಮಾಡಿ. ಇವೆಲ್ಲವುಗಳಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ

ನನಗೆ ನೆಗಡಿಯಿದೆ. ಉಳಿದವರಿಗೆ ಹಬ್ಬದಂತೆ ತಡೆಯುವುದು ಹೇಗೆ?

ಎಲ್ಲರಿಂದ ದೂರ ಇರಿ. ಕೈಗಳನ್ನು ಆಗಾಗ ತೊಳೆದು ಶುಚಿಯಾಗಿರಿಸಿಕೊಳ್ಳಿ. ಮಕ್ಕಳು, ವೃದ್ಧರನ್ನು ಹತ್ತಿರ ಸೇರಿಸಬೇಡಿ. ಕೆಮ್ಮುವಾಗ, ಸೀನುವಾಗ ಕಡ್ಡಾಯವಾಗಿ ಬಾಯಿ-ಮೂಗು ಮುಚ್ಚಿಕೊಳ್ಳಿ.

ಇದನ್ನೂ ಓದಿ: Late Night Snacks: 10 Healthy Late Night Snacks

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Moringa Leaves Health Benefits: ನುಗ್ಗೆ ಸೊಪ್ಪು ಏಕೆ ತಿನ್ನಬೇಕು? ಏನಿದೆ ಇದರಲ್ಲಿ ವಿಶೇಷ ಗುಣ?

ನುಗ್ಗೆ ಸೊಪ್ಪನ್ನು (Moringa Leaves Health Benefits) ಬೇಸಿಗೆಯಲ್ಲೂ ತಿನ್ನುವುದಕ್ಕೆ ಯೋಗ್ಯ. ಆದರೆ ಎಷ್ಟು ತಿನ್ನಬಹುದು? ಇದರಲ್ಲಿ ಏನಿವೆ ಅಂಥ ತಿನ್ನಲೇಬೇಕಾದ ಸತ್ವಗಳು? ಉಳಿದೆಲ್ಲ ಸೊಪ್ಪುಗಳಂತೆ ಅಲ್ಲವೇ ಇದು ಸಹ? ಅಂಥ ಗುಣಗಳು ಏನಿವೆ ಇದರಲ್ಲಿ? ಇದನ್ನೇಕೆ ಸೂಪರ್‌ಫುಡ್‌ ಎಂದು ಕರೆಯಬೇಕು? ಇದನ್ನು ಎಷ್ಟು ತಿಂದರೆ ಒಳ್ಳೆಯದು? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

Moringa Leaves Health Benefits
Koo

ನುಗ್ಗೆ ಸೊಪ್ಪು (Moringa Leaves Health Benefits) ಎನ್ನುತ್ತಿದ್ದಂತೆ ಅದರ ಪಾಕದ ಘಮಕ್ಕೆ ಮೂಗರಳಿಸುವವರು ಹಲವರಿದ್ದಾರು. ಭಾರತದ ಉದ್ದಗಲಕ್ಕೆ ನುಗ್ಗೆ ಜನಪ್ರಿಯ. ಆದರೆ ಬೇಸಿಗೆಯಲ್ಲಿ ಇದು ದೇಹದ ಉಷ್ಣತೆ ಹೆಚ್ಚಿಸುತ್ತದೆ ಎಂದು ಇದನ್ನು ದೂರ ಮಾಡಿ, ಮಳೆಗಾಲ-ಚಳಿಗಾಲದಲ್ಲಿ ಮಾತ್ರವೇ ಬಳಸುವ ಕ್ರಮ ಹಲವೆಡೆಗಳಲ್ಲಿದೆ. ಆದರೆ ಈ ಎಲೆಗಳಲ್ಲಿ ಸಾಕಷ್ಟು ನೀರಿನಂಶವೂ ಇರುವುದರಿಂದ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸುವಂಥ ಸೂಪರ್‌ ಫುಡ್‌ ಇದು ಎಂಬುದು ಗೊತ್ತೇ? ಉಳಿದೆಲ್ಲ ಸೊಪ್ಪುಗಳಂತೆ ಅಲ್ಲವೇ ಇದು ಸಹ? ಅಂಥ ಗುಣಗಳು ಏನಿವೆ ಇದರಲ್ಲಿ? ಇದನ್ನೇಕೆ ಸೂಪರ್‌ಫುಡ್‌ ಎಂದು ಕರೆಯಬೇಕು? ಇದನ್ನು ಎಷ್ಟು ತಿಂದರೆ ಒಳ್ಳೆಯದು?

Moringa Leaves Medicinal Leaves

ಸತ್ವಗಳೇನಿವೆ?

ಇದರಲ್ಲಿ ಉಳಿದೆಲ್ಲ ಸೊಪ್ಪುಗಳಿಗಿಂತ ಪ್ರೊಟೀನ್‌ ಸಾಂದ್ರವಾಗಿದೆ. 18 ಬಗೆಯ ಅಮೈನೊ ಆಮ್ಲಗಳು ಇದರಲ್ಲಿವೆ. ಇದರಲ್ಲದೆ, ವಿಟಮಿನ್‌ ಎ, ವಿಟಮಿನ್‌ ಸಿ, ಕ್ಯಾಲ್ಸಿಯಂ, ಪೊಟಾಶಿಯಂ ಮತ್ತು ಕಬ್ಬಿಣದ ಅಂಶಗಳು ಇದರಲ್ಲಿ ಹೇರಳವಾಗಿದೆ. ಇವೆಲ್ಲವುಗಳಿಂದ ಸ್ನಾಯುಗಳು ದೃಢಗೊಂಡು, ದೃಷ್ಟಿ ಕ್ಷೇಮವಾಗಿದ್ದು, ಪ್ರತಿರೋಧಕ ಶಕ್ತಿ ಸುಧಾರಿಸಿ, ಮೂಳೆಗಳು ಬಲಗೊಂಡು, ರಕ್ತದಲ್ಲಿನ ಆಮ್ಲಜನಕದ ಮಟ್ಟವೂ ಸುಧಾರಿಸುತ್ತದೆ.

ಉತ್ಕರ್ಷಣ ನಿರೋಧಕಗಳು

ಇದರಲ್ಲಿ ಕ್ವೆರ್ಸೆಟಿನ್‌, ಕ್ಲೊರೊಜೆನಿಕ್‌ ಆಮ್ಲ ಮತ್ತು ಬೀಟಾ ಕ್ಯಾರೊಟಿನ್‌ಗಳು ವಿಫುಲವಾಗಿವೆ. ಈ ಅಂಶಗಳು ದೇಹದಲ್ಲಿ ಅಂಡಲೆಯುವ ಮುಕ್ತಕಣಗಳನ್ನು ಪ್ರತಿಬಂಧಿಸುತ್ತವೆ. ಇದರಿಂದ ಮಾರಕ ರೋಗಗಳು ಬಾರದಂತೆ ತಡೆಯಬಹುದು. ಜೊತೆಗೆ ದೇಹದೆಲ್ಲೆಡೆ ಹೆಚ್ಚುವ ಉರಿಯೂತದ ಕಾಟದಿಂದ ಮುಕ್ತರಾದರೆ ಆರ್ಥರೈಟಿಸ್‌ನಿಂದ ಹಿಡಿದು ಹೃದಯ ರೋಗಗಳವರೆಗೆ ಬಹಳಷ್ಟು ತೊಂದರೆಗಳನ್ನು ದೂರ ಇರಿಸಲು ಸಾಧ್ಯವಿದೆ.

Antioxidants in it keep immunity strong Benefits Of Mandakki

ರೋಗನಿರೋಧಕ ಶಕ್ತಿ ಹೆಚ್ಚಳ

ಇದರಲ್ಲಿ ವಿಟಮಿನ್‌ ಸಿ ಪ್ರಮಾಣ ಹೆಚ್ಚಿದೆ. ಅಂದಾಜಿಗೆ ಹೇಳುವುದಾದರೆ, ಕಿತ್ತಳೆ ಹಣ್ಣುಗಳಲ್ಲಿ ಇರುವ ಪ್ರಮಾಣಕ್ಕಿಂತಲೂ ನುಗ್ಗೆ ಸೊಪ್ಪಿನಲ್ಲಿ ಹೆಚ್ಚು ಸಿ ಜೀವಸತ್ವವಿದೆ. ಹಾಗಾಗಿ ಸೋಂಕುಗಳನ್ನು ದೂರ ಮಾಡಲು, ಒಂದೊಮ್ಮೆ ಋತುಮಾನದ ವೈರಸ್‌ಗಳು ಕಾಡಿದರೂ ಬೇಗ ಚೇತರಿಸಿಕೊಳ್ಳಲು ಇದರ ನಿಯಮಿತ ಸೇವನೆಯಿಂದ ಸಾಧ್ಯವಾಗುತ್ತದೆ.

Weight Loss tension

ತೂಕ ಇಳಿಸಲು ನೆರವು

ಕಡಿಮೆ ಕ್ಯಾಲರಿಯಲ್ಲಿ ಹೆಚ್ಚಿನ ಪೋಷಕಾಂಶಗಳನ್ನು ನೀಡುವಂಥ ಆಹಾರಗಳು ತೂಕ ಇಳಿಸಿಕೊಳ್ಳಲು ಸೂಕ್ತವಾದಂಥವು. ಜೊತೆಗೆ ಹೇರಳವಾದಂಥ ನಾರು ಮತ್ತು ಪ್ರೊಟೀನ್‌ ಅಂಶಗಳಿದ್ದ ಆಹಾರದಿಂದ ಹೊಟ್ಟೆ ತುಂಬುವುದು ಬೇಗ, ಕಳ್ಳ ಹಸಿವಿನ ಕಾಟವೂ ಇಲ್ಲ. ಈ ಎಲ್ಲ ಗುಣಗಳನ್ನು ಹೊಂದಿರುವ ನುಗ್ಗೆ ಸೊಪ್ಪು ತೂಕ ಇಳಿಸಿಕೊಳ್ಳುವವರಿಗೆ ಪ್ರಯೋಜನಕಾರಿ.

Diabetes Diabetes concept Tired of diabetes high sugar disea Spinach Benefits

ಮಧುಮೇಹಿಗಳಿಗೆ ಒಳ್ಳೆಯದು

ನಾರು ಮತ್ತು ಪ್ರೊಟೀನ್‌ ಹೆಚ್ಚಿರುವ ಆಹಾರಗಳು ಮಧುಮೇಹಿಗಳಿಗೆ ಪೂರಕ, ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಸ್ಥಿರವಾಗಿರುತ್ತದೆ ಎನ್ನುವುದನ್ನು ಅಧ‍್ಯಯನಗಳು ತಿಳಿಸುತ್ತವೆ. ಇದರ ಜೊತೆಗೆ, ನುಗ್ಗೆಯಲ್ಲಿರುವ ಐಸೊಥಿಯೊಸಯನೇಟ್‌ ಎಂಬ ನೈಸರ್ಗಿಕ ಉತ್ಕರ್ಷಣ ನಿರೋಧಕಗಳು ರಕ್ತದಲ್ಲಿ ಸಕ್ಕರೆಯಂಶ ಏರಿಳಿತ ಆಗದಂತೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಪಾಲಿಫೆನಾಲ್‌ ಅಂಶಗಳೂ ಇದರಲ್ಲಿ ಇರುವುದರಿಂದ ಯಕೃತ್ತಿನ ಆರೋಗ್ಯ ರಕ್ಷಣೆ ಮಾಡುವುದು ಕಷ್ಟವಲ್ಲ.

ಎಷ್ಟು ಸೇವಿಸಬೇಕು?

ಶರೀರಕ್ಕೆ ಯಾವುದಾದರೂ ಸತ್ವ ಅತಿಯಾದರೂ ಜೀರ್ಣಿಸಿಕೊಳ್ಳುವುದು ಕೆಲವೊಮ್ಮೆ ಕಷ್ಟವಾಗಬಹುದು. ಹಾಗಾಗಿ ನುಗ್ಗೆ ಸೊಪ್ಪು ಒಳ್ಳೆಯದು ಎನ್ನುವುದು ನಿಜ. ಆದರೆ ಅದನ್ನು ಎಷ್ಟು ಸೇವಿಸಬೇಕು? ಎಷ್ಟು ತಿಂದರೆ ದೇಹ ತೆಗೆದುಕೊಳ್ಳಬಲ್ಲದು? ನುಗ್ಗೆ ಸೊಪ್ಪಿನ ಪುಡಿಯನ್ನು (ಮೊರಿಂಗ ಪೌಡರ್‌) ಸೇವಿಸುವ ಅ‍ಭ್ಯಾಸವಿದ್ದರೆ ದಿನಕ್ಕೆ ಒಂದು ದೊಡ್ಡ ಚಮಚ ಸಾಕಾಗುತ್ತದೆ. ಇದರಿಂದ, ಅಂದಾಜಿಗೆ ಹೇಳುವುದಾದರೆ, 35 ಕ್ಯಾಲರಿ ಶಕ್ತಿ ದೊರೆಯುತ್ತದೆ. ಅದಿಲ್ಲದಿದ್ದರೆ, ಒಂದು ದೊಡ್ಡ ಮುಷ್ಟಿಯಷ್ಟು ಹಸಿ ಸೊಪ್ಪು ಸೇವನೆಯಿಂದ ಈ ಅಭ್ಯಾಸವನ್ನು ಪ್ರಾರಂಭಿಸಬಹುದು. ಗರ್ಭಿಣಿಯರು ಸ್ವಲ್ಪ ತಿಂದರೆ ತೊಂದರೆಯಿಲ್ಲ, ಆದರೆ ಅತಿಯಾಗಿ ತಿನ್ನುವುದು ಸಮಸ್ಯೆಗಳನ್ನು ತರಬಹುದು.

ಇದನ್ನೂ ಓದಿ: Dates Benefits: ಲೈಂಗಿಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ದಿನಕ್ಕೊಂದು ಖರ್ಜೂರ ತಿಂದರೆ ಸಾಕು!

ಹೇಗೆಲ್ಲ ತಿನ್ನಬಹುದು?

ಬೆಳಗ್ಗೆ ನುಗ್ಗೆ ಸೊಪ್ಪಿನ ಪುಡಿಯ ಕಷಾಯ ಅಥವಾ ಚಹಾ ಮಾಡಿ ಸೇವಿಸುವವರಿದ್ದಾರೆ. ಈ ಪುಡಿಯನ್ನು ಸ್ಮೂದಿಗಳಿಗೆ ಬಳಸಬಹುದು. ಸ್ಯಾಂಡ್‌ವಿಚ್‌ಗಳಿಗೆ ಇದರ ಪೇಸ್ಟ್‌ ಬಳಸಬಹುದು; ಡಿಪ್‌ ಆಗಿಯೂ ರುಚಿ ಹೆಚ್ಚಿಸುತ್ತದೆ. ಸೂಪ್‌ಗಳಿಗೆ ಬಲು ರುಚಿ. ಪೆಸ್ಟೊ ಪಾಸ್ತ ಮಾಡುವಾಗ ಬೆಸಿಲ್‌ ಬದಲಿಗೆ ನುಗ್ಗೆ ಎಲೆಗಳನ್ನು ಬಳಸಿಕೊಳ್ಳಬಹುದು. ಉಳಿದಂತೆ ಅಪ್ಪಟ ದಕ್ಷಿಣ ಭಾರತೀಯ ಶೈಲಿಯ ಸಾಂಬಾರ್‌, ಪಲ್ಯ, ರೊಟ್ಟಿ, ಗೊಜ್ಜುಗಳಿಗೆ ಇದನ್ನು ಖಂಡಿತವಾಗಿ ಬಳಸಬಹುದು.

Continue Reading

ಆರೋಗ್ಯ

Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

ಆಹಾರದ ಬದಲಾವಣೆಗಳಿಂದ ಕೊಲೆಸ್ಟ್ರಾಲ್‌ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ ದೋಷವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ ಎನ್ನುತ್ತಾರೆ ಸ್ವಾಸ್ಥ್ಯ ಪರಿಣಿತರು. ಎಂಥಾ ಆಹಾರಗಳವು? ಈ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

Overweight man suffering from chest pain, high blood pressure, cholesterol level
Koo
Obese male suffering from chest pain high blood pressure cholesterol level Sesame Benefits
ಕೊಲೆಸ್ಟ್ರಾಲ್‌ ಅಪಾಯಕಾರಿ
ಆಹಾರ ಕ್ರಮದಲ್ಲಿನ ದೋಷ ಮತ್ತು ವ್ಯಾಯಾಮ ಇಲ್ಲದಿರುವಂಥ ಕಾರಣದಿಂದ ದೇಹದಲ್ಲಿ ಜಮೆಯಾಗುವ ಕೊಬ್ಬು ಹೆಚ್ಚುತ್ತಿದೆ. ಅತಿಯಾದ ಕೊಬ್ಬಿನ ಆಹಾರ ಸೇವನೆ, ಸಂಸ್ಕರಿತ ಸಕ್ಕರೆ ಸೇವನೆಯಿಂದಾಗಿ ಶರೀರದಲ್ಲಿ ಕೊಲೆಸ್ಟ್ರಾಲ್‌ ಪ್ರಮಾಣ ಹೆಚ್ಚುತ್ತಿದೆ. ಇದರಿಂದ ಹೃದಯದ ತೊಂದರೆ ಮತ್ತು ಪಾರ್ಶ್ವವಾಯುವಿನಂಥ ಮಾರಣಾಂತಿಕ ಸಮಸ್ಯೆಗಳು ಎದುರಾಗುತ್ತವೆ.
Skin Care Foods
ಆಹಾರದ ಪಾತ್ರ ಮುಖ್ಯ
ಕೆಲವು ಆಹಾರದ ಬದಲಾವಣೆಗಳಿಂದ ಈ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ ದೋಷವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ. ಬೆಳಗಿನ ಖಾಲಿ ಹೊಟ್ಟೆಯಲ್ಲಿ ನಾವು ದೇಹಕ್ಕೆ ನೀಡುವಂಥ ಆಹಾರಗಳು ಹಲವು ರೀತಿಯಲ್ಲಿ ಮಹತ್ವವನ್ನು ಪಡೆದಿವೆ.
reen Tea Benefits Of Drinking Green Tea
ಗ್ರೀನ್‌ ಟೀ
ಹಲವು ರೀತಿಯ ಉತ್ತಮ ಪಾಲಿಫೆನಾಲ್‌ಗಳನ್ನು ಹೊಂದಿರುವ ಗ್ರೀನ್‌ ಟೀ, ಉತ್ಕರ್ಷಣ ನಿರೋಧಕಗಳ ಖಜಾನೆಯಂತಿದೆ. ಅದರಲ್ಲೂ ಗ್ರೀನ್‌ ಟೀದಲ್ಲಿರುವ ಕೆಟಿಚಿನ್‌ ಅಂಶಗಳು ಕೊಲೆಸ್ಟ್ರಾಲ್‌ಗಳ ಜೊತೆ ಕೆಲಸ ಮಾಡುತ್ತವೆ. ಇದರಿಂದ ಆಹಾರದಲ್ಲಿನ ಕೊಲೆಸ್ಟ್ರಾಲ್‌ ಅಂಶವನ್ನು ದೇಹ ಹೀರಿಕೊಳ್ಳುವುದನ್ನು ಕಡಿಮೆ ಮಾಡಲು ಸಾಧ್ಯವಿದೆ. ಹಾಗಾಗಿ ನಿಯಮಿತವಾಗಿ ಗ್ರೀನ್‌ ಟೀ ಕುಡಿಯುವುದರಿಂದ ದೇಹದಲ್ಲಿ ಎಲ್‌ಡಿಎಲ್‌ ಮತ್ತು ಒಟ್ಟಾರೆ ಕೊಲೆಸ್ಟ್ರಾಲ್‌ಗಳನ್ನು ಕಡಿಮೆ ಮಾಡಲು ಸಾಧ್ಯವಿದೆ.
Chia seeds and soy milk
ಚಿಯಾ ಬೀಜ ಮತ್ತು ಸೋಯ್‌ ಹಾಲು
ಈ ಮಿಶ್ರಣ ಕೊಲೆಸ್ಟ್ರಾಲ್‌ ನಿರ್ವಹಣೆಯಲ್ಲಿ ದಕ್ಷತೆಯನ್ನು ಪ್ರದರ್ಶಿಸಿದೆ. ನಾರು, ಪ್ರೊಟೀನ್‌ ಮತ್ತು ಒಮೇಗಾ ೩ ಕೊಬ್ಬಿನಾಮ್ಲಗಳ ಜೊತೆಗೆ ಹಲವು ಸೂಕ್ಷ್ಮ ಸತ್ವಗಳು ಇದರಿಂದ ದೇಹ ಸೇರುತ್ತವೆ. ದೇಹದಲ್ಲಿ ಎಚ್‌ಡಿಎಲ್‌ ಅಥವಾ ಉತ್ತಮ ಕೊಬ್ಬನ್ನು ಹೆಚ್ಚಿಸುವ ಸಾಧ್ಯತೆ ಚಿಯಾ ಬೀಜಗಳಿಗಿದೆ. ಎಲ್‌ಡಿಎಲ್‌ ಅಥವಾ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವ ಕ್ಷಮತೆ ಸೋಯಾ ಹಾಲಿಗಿದೆ. ಹಾಗಾಗಿ ಈ ಮಿಶ್ರಣವನ್ನೂ ಬೆಳಗಿನ ಪೇಯವಾಗಿ ಉಪಯೋಗಿಸಬಹುದು.
Beetroot and carrot juice
ಬೀಟ್‌ರೂಟ್‌ ಮತ್ತು ಕ್ಯಾರೆಟ್‌ ರಸ
ಹೆಚ್ಚಿನ ನೈಟ್ರೇಟ್‌ ಅಂಶವಿರುವ ಬೀಟ್‌ರೂಟ್‌ ರಸ ಕೊಲೆಸ್ಟ್ರಾಲ್‌ ತಗ್ಗಿಸುವ ಸಾಧ್ಯತೆಯನ್ನು ಹೊಂದಿದೆ. ಇನ್ನು, ಬೀಟಾ ಕ್ಯಾರೋಟಿನ್‌ನಂಥ ಕೆರೋಟಿನಾಯ್ಡ್‌ಗಳನ್ನು ಹೊಂದಿರುವ ಕ್ಯಾರೆಟ್‌ ಸಹ ಕೊಲೆಸ್ಟ್ರಾಲ್‌ ಹೀರಿಕೊಳ್ಳುವುದನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಈ ಬಗ್ಗೆ ಹಲವು ಅಧ್ಯಯನಗಳು ನಡೆಯುತ್ತಿದ್ದು, ಪೂರಕ ಪರಿಣಾಮವನ್ನು ದಾಖಲಿಸಿವೆ.
Ginger, lemon juice
ಶುಂಠಿ, ನಿಂಬೆ ರಸ
ಬೆಳಗಿನ ಹೊತ್ತು ಬೆಚ್ಚಗಿನ ನೀರಿಗೆ ಕೆಲವು ಹನಿ ನಿಂಬೆ ರಸ ಮತ್ತು ಅರ್ಧ ಚಮಚ ಶುಂಠಿ ರಸ ಸೇರಿಸಿ ಕುಡಿಯುವುದು ಸಹ ಉತ್ತಮ ಪರಿಣಾಮಗಳನ್ನ ತೋರಿಸಬಲ್ಲದು. ಉತ್ಕರ್ಷಣ ನಿರೋಧಕಗಳನ್ನು ನಿಂಬೆ ರಸ ದೇಹಕ್ಕೆ ನೀಡಿದರೆ, ಟ್ರೈಗ್ಲಸರೈಡ್‌ ಮತ್ತು ಎಲ್‌ಡಿಎಲ್‌ ತಗ್ಗಿಸುವ ಗುಣವನ್ನು ಶುಂಠಿ ಹೊಂದಿದೆ. ಜೊತೆಗೆ, ಬೆಳಗಿನ ಹೊತ್ತು ಚೈತನ್ಯವನ್ನು ನೀಡಿ, ವ್ಯಾಯಾಮ ಮಾಡುವ ಉತ್ಸಾಹವನ್ನೂ ಹೆಚ್ಚಿಸುತ್ತದೆ ಈ ಪೇಯ.
Tomato juice
ಟೊಮೇಟೊ ರಸ
ಟೊಮೆಟೊದ ಕೆಂಪು ಬಣ್ಣಕ್ಕೆ ಕಾರಣವಾಗುವುದು ಅದರಲ್ಲಿರುವ ಲೈಕೊಪೇನ್‌ ಅಂಶ. ಇದು ಎಲ್‌ಡಿಎಲ್‌ ಕಡಿಮೆ ಮಾಡುವ ಗುಣವನ್ನು ಢಾಳಾಗಿ ತೋರಿಸಿದೆ. ಅಧ್ಯಯನಗಳ ಪ್ರಕಾರ, ಅತಿ ಹೆಚ್ಚು ಪ್ರಮಾಣದ ಲೈಕೊಪೇನ್‌ ಅಂಶವು (ದಿನಕ್ಕೆ 25 ಎಂಜಿಗಿಂತ ಹೆಚ್ಚು), ಕಡಿಮೆ ತೀವ್ರತೆಯ ಸ್ಟ್ಯಾಟಿನ್‌ಗಳು (ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಔಷಧಿಗಳು) ಬೀರುವ ಪರಿಣಾಮವನ್ನೇ ತೋರುತ್ತವೆ.
Turmeric and soy milk
ಅರಿಶಿನ ಮತ್ತು ಸೋಯ್‌ ಹಾಲು
ಸೋಯ್‌ ಹಾಲಿನಲ್ಲಿ ಎಲ್‌ಡಿಎಲ್‌ ಅಥವಾ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. ಇನ್ನು ಅರಿಶಿನದಲ್ಲಿರುವ ಕರ್ಕುಮಿನ್‌ ಎಂಬ ಪ್ರಬಲ ಉತ್ಕರ್ಷಣ ನಿರೋಧಕವು ಎಲ್‌ಡಿಎಲ್‌ ಮತ್ತು ಟ್ರೈಗ್ಲಿಸರೈಡ್‌ಗಳನ್ನು ತಗ್ಗಿಸುವ ಗುಣವನ್ನು ತೋರಿಸಿದೆ. ಹಾಗಾಗಿ ಪ್ರಾಣಿಜನ್ಯ ಹಾಲಿಗೆ ಅರಿಶಿನ ಸೇರಿಸುವ ಬದಲು, ಸೋಯಾ ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು ಕೊಲೆಸ್ಟ್ರಾಲ್‌ ತಗ್ಗಿಸುವುದಕ್ಕೆ ಒಳ್ಳೆಯ ಉಪಾಯ.
Continue Reading

ಆರೋಗ್ಯ

Health Tips Kannada: ಕಣ್ಣಿನ ಕೆಳಗಿನ ಕಪ್ಪು ಕಲೆ ನಿವಾರಿಸುವುದು ಹೇಗೆ?

ಕಣ್ಣಿನ ಕೆಳಗಿನ ಭಾಗದಲ್ಲಿ ಕಾಣುವ ಗಾಢಬಣ್ಣದ ವರ್ತುಲಗಳು ಮುಖಕ್ಕೆ ವಯಸ್ಸಾದ, ಸುಸ್ತಾದ ಮತ್ತು ನಿದ್ದೆಗೆಟ್ಟ ಕಳೆಯನ್ನು ನೀಡುತ್ತದೆ. ಇದು ಗಂಭೀರವಾದ ಆರೋಗ್ಯ ಸಮಸ್ಯೆಯ ಲಕ್ಷಣ ಅಲ್ಲದಿದ್ದರೂ, ಇದನ್ನು ಸರಿ ಮಾಡುವುದು ಹೇಗೆಂಬ ಪ್ರಶ್ನೆ ಮೂಡುವುದಂತೂ ಹೌದು. ಇದನ್ನು ನಿವಾರಿಸುವುದು ಹೇಗೆ? ಈ ಕುರಿತು ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

Health Tips Kannada
Koo
Cold compress
ತಣ್ಣನೆಯ ಕಂಪ್ರೆಸ್‌
ತಂಪಾದ ನೀರಲ್ಲಿ ಅದ್ದಿದ ಬಟ್ಟೆ, ಫ್ರಿಜ್‌ನಲ್ಲಿ ಕೆಲಕಾಲ ಇರಿಸಿದ ತೇವದ ಟೀ ಬ್ಯಾಗ್‌ ಮುಂತಾದವುಗಳನ್ನು ಕಣ್ಣಿನ ಮೇಲೆ 10-15 ನಿಮಿಷ ಇರಿಸಿಕೊಳ್ಳಿ. ಅದರಲ್ಲೂ ಗ್ರೀ ಟೀ ಅಥವಾ ಕ್ಯಾಮೊಮೈಲ್‌ ಟೀ ಹೆಚ್ಚು ಉಪಯುಕ್ತ. ಇದರಿಂದ ಈ ಭಾಗದಲ್ಲಿ ಉಬ್ಬಿದಂತೆ ಕಾಣುವ ರಕ್ತನಾಳಗಳು ಸಂಕೋಚಗೊಳ್ಳುತ್ತವೆ. ಇದರಿಂದ ಕಣ್ಣಿನ ಕೆಳಗಿನ ಭಾಗ ಉಬ್ಬಿದಂತಾಗಿ ಕಪ್ಪಾಗಿದ್ದರೆ ಕಡಿಮೆಯಾಗುತ್ತದೆ.
Cucumber
ಸೌತೇಕಾಯಿ
ತಂಪಾದ ಸೌತೇಕಾಯಿಯ ಗಾಲಿಯಂಥ ತುಂಡನ್ನು ಕಣ್ಣುಗಳ ಮೇಲಿರಿಸಿ 20 ನಿಮಿಷ ಬಿಡಿ. ಇದನ್ನು ದಿನವೂ ಮಾಡಬಹುದು. ಇದರಿಂದ ಕಣ್ಣಿನ ಕೆಳಗೆ ಉಬ್ಬಿದ್ದರೆ ಕಡಿಮೆಯಾಗಿ, ಗಾಢಬಣ್ಣವೂ ತಿಳಿಯಾಗುತ್ತದೆ. ಜೊತೆಗೆ ಕಣ್ಣನ್ನು ತಂಪಾಗಿಸಿ, ದೃಷ್ಟಿಗೂ ಅನುಕೂಲ ಒದಗಿಸುತ್ತದೆ.
potato
ಆಲೂಗಡ್ಡೆ
ಸೌತೇಕಾಯಿಯಂತೆ, ಆಲೂಗಡ್ಡೆಗೂ ನೈಸರ್ಗಿಕವಾದ ಬ್ಲೀಚಿಂಗ್‌ ಗುಣವಿದೆ. ಹಾಗಾಗಿ ಕಪ್ಪಾದ ಚರ್ಮವನ್ನು ನಿಧಾನಕ್ಕೆ ತಿಳಿಯಾಗಿಸುತ್ತದೆ. ಫ್ರಿಜ್‌ನಲ್ಲಿಟ್ಟ ಆಲೂಗಡ್ಡೆಯನ್ನು ತುರಿದು ರಸ ತೆಗೆಯಿರಿ, ಈ ತಂಪಾದ ರಸದಲ್ಲಿ ಸ್ವಚ್ಛ ಹತ್ತಿಯ ಬಟ್ಟೆಯನ್ನು ಅದ್ದಿ ಕಣ್ಣುಗಳ ಕೆಳಗಿರಿಸಿಕೊಳ್ಳಿ. ೧೫ ನಿಮಿಷಗಳ ನಂತರ ತಂಪಾದ ನೀರಲ್ಲಿ ತೊಳೆಯಿರಿ.
Tomato juice
ಟೊಮಾಟೊ ರಸ
ಇದೂ ಸಹ ಗಾಢ ಬಣ್ಣವನ್ನು ತಿಳಿಯಾಗಿಸಬಲ್ಲ ಗುಣವನ್ನು ಹೊಂದಿದೆ. ಟೊಮಾಟೊ ರಸ ತೆಗೆದು, ಕೆಲವು ಹನಿ ನಿಂಬೆರಸ ಸೇರಿಸಿ. ಇದರಲ್ಲಿ ಸ್ವಚ್ಛ ವಸ್ತ್ರವನ್ನು ಅದ್ದಿ, ಕಣ್ಣುಗಳ ಕೆಳಗಿರಿಸಿಕೊಳ್ಳಿ. 10 ನಿಮಿಷಗಳ ನಂತರ ಬೆಚ್ಚಗಿನ ನೀರಲ್ಲಿ ತೊಳೆಯಿರಿ.
Almond oil
ಬಾದಾಮಿ ಎಣ್ಣೆ
ವಿಟಮಿನ್‌ ಇ ಹೇರಳವಾಗಿದೆ ಬಾದಾಮಿ ತೈಲದಲ್ಲಿ. ರಾತ್ರಿ ಮಲಗುವ ಮುನ್ನ, ಇದರ ಕೆಲವು ಹನಿಗಳನ್ನು ಕಣ್ಣ ಕೆಳಭಾಗದಲ್ಲಿ ಲಘುವಾಗಿ ಹಚ್ಚಿ ಮಸಾಜ್‌ ಮಾಡಿ. ರಾತ್ರಿಡೀ ಇದನ್ನು ಹಾಗೆಯೇ ಬಿಡಿ. ಹಚ್ಚಿದ ಎಣ್ಣೆ ಅತಿಯಾದರೆ ಕಣ್ಣುರಿ ಬಂದೀತು. ಹಾಗಾಗಿ ಸ್ವಲ್ಪವೇ ಹಚ್ಚಿ.
rose water
ಗುಲಾಬಿ ಜಲ
ಹತ್ತಿಯ ಪ್ಯಾಡ್‌ಗಳಲ್ಲಿ ತಂಪಾದ ಗುಲಾಬಿ ಜಲದಲ್ಲಿ ಅದ್ದಿ, ಮುಚ್ಚಿದ ಕಣ್ಣುಗಳ ಮೇಲೆ ಇರಿಸಿಕೊಳ್ಳಿ. ಸೌತೇಕಾಯಿಯಂಥದ್ದೇ ಪರಿಣಾಮಗಳನ್ನು ಗುಲಾಬಿ ಜಲವೂ ನೀಡಬಲ್ಲದು. 15 ನಿಮಿಷಗಳ ನಂತರ ತಂಪಾದ ನೀರಲ್ಲಿ ತೊಳೆಯಿರಿ.
aloe vera
ಲೋಳೆಸರ
ಇದರ ತಂಪಾದ ತಾಜಾ ಜೆಲ್‌ ತೆಗೆಯಿರಿ. ಅದನ್ನು ಕಣ್ಣಿನ ಕೆಳಭಾಗದಲ್ಲಿ ಇರಿಸಿಕೊಂಡು 20 ನಿಮಿಷ ಬಿಡಿ. ನಂತರ ತಂಪಾದ ನೀರಿನಿಂದ ತೊಳೆಯಿರಿ. ಇದು ಚರ್ಮವನ್ನು ಬಿಗಿಯಾಗಿಸಿ, ತೇವವನ್ನು ಹಿಡಿದಿಡುತ್ತದೆ. ಜೊತೆಗೆ ಕಣ್ಣಿನ ಕೆಳಭಾಗದ ಕಪ್ಪು ಚರ್ಮವನ್ನು ತಿಳಿಯಾಗಿಸುತ್ತದೆ. ಇವೆಲ್ಲವುಗಳ ಜೊತೆಗೆ, ದೇಹಕ್ಕೆ ಚೆನ್ನಾಗಿ ನೀರು ಬೇಕು. ಋತುಮಾನದ ಸೊಪ್ಪು-ತರಕಾರಿ-ಹಣ್ಣುಗಳು ಬೇಕು. ಕಣ್ತುಂಬಾ ನಿದ್ದೆಯಂತೂ ಕಡ್ಡಾಯ.
Continue Reading

ಆರೋಗ್ಯ

ICMR Good Health Guidelines: ಆರೋಗ್ಯವಾಗಿರಲು ಎಷ್ಟು ಗಂಟೆ ನಿದ್ದೆ ಮಾಡಬೇಕು, ಎಷ್ಟು ಗಂಟೆ ಕೆಲಸ ಮಾಡಬೇಕು? ಆಹಾರ ಏನಿರಬೇಕು?

ಆರೋಗ್ಯಕರ ಜೀವನಕ್ಕೆ ದೈಹಿಕ ಚಟುವಟಿಕೆ ಬಹುಮುಖ್ಯ. ಜೊತೆಗೆ ವಿಶ್ರಾಂತಿಯು ಬೇಕು. ಇದಕ್ಕಾಗಿ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ತನ್ನ ಮಾರ್ಗಸೂಚಿಯಲ್ಲಿ (ICMR  Good Health Guidelines) ಏನು ಹೇಳಿದೆ ಗೊತ್ತೇ? ನಿತ್ಯ ಜೀವನದಲ್ಲಿ ಪಾಲಿಸಲೇಬೇಕಾದ ಉಪಯುಕ್ತ ಸಲಹೆಗಳ ಪಟ್ಟಿ ಇಲ್ಲಿದೆ.

VISTARANEWS.COM


on

By

ICMR  Good Health Guidelines
Koo

ಆರೋಗ್ಯವಾಗಿರಲು (healthy) ದೈಹಿಕ ಚಟುವಟಿಕೆಯೊಂದಿಗೆ (activity) ಸರಿಯಾಗಿ ವಿಶ್ರಾಂತಿ (rest) ಪಡೆಯುವುದು ಬಹುಮುಖ್ಯ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR  Good Health Guidelines) ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ. ದಿನಕ್ಕೆ ಎಂಟು ಗಂಟೆಗಳ ನಿದ್ರೆ ಮತ್ತು ಎಂಟು ಗಂಟೆಗಳ ಕೆಲಸವನ್ನು ಅದು ಶಿಫಾರಸು ಮಾಡಿದೆ.

ಮಕ್ಕಳು ಮತ್ತು ಹದಿಹರೆಯದವರು (children and youth) ದಿನಕ್ಕೆ ಕನಿಷ್ಠ 60 ನಿಮಿಷಗಳ ವರೆಗೆ ಮಧ್ಯಮದಿಂದ ಹುರುಪಿನ ವ್ಯಾಯಾಮ ನಡೆಸಬೇಕು. ಅದೇ ರೀತಿ ವಯಸ್ಕರು (aged) ವಾರದಲ್ಲಿ ಕನಿಷ್ಠ ಐದು ದಿನಗಳವರೆಗೆ ದಿನಕ್ಕೆ 30- 60 ನಿಮಿಷಗಳ ಮಧ್ಯಮ-ತೀವ್ರತೆಯ ಏರೋಬಿಕ್ ವ್ಯಾಯಾಮ ಅಥವಾ 15 ನಿಮಿಷಗಳ ತೀವ್ರವಾದ- ತೀವ್ರತೆಯ ಏರೋಬಿಕ್ ವ್ಯಾಯಾಮವನ್ನು ನಡೆಸಲು ಐಸಿಎಂಆರ್ ಶಿಫಾರಸು ಮಾಡಿದೆ.

ಯಾಕೆ?

ಪ್ರತಿ ನಿತ್ಯ ಯೋಗ, ದೈಹಿಕ ವ್ಯಾಯಾಮ ಮಾಡುವುದರಿಂದ ಒಳ್ಳೆಯ ಆರೋಗ್ಯ ಮತ್ತು ಆರೋಗ್ಯಕರ ಜೀವನವನ್ನು ನಡೆಸಬಹುದು. ಇದು ದೇಹದ ತೂಕ ಕಾಪಾಡಲು, ಮಾಂಸಖಂಡಗಳ ಶಕ್ತಿ ವೃದ್ಧಿಸಲು, ಎಲುಬಿನ ಆರೋಗ್ಯ, ಕೀಲುಗಳ ಜೋಡಣೆಯನ್ನು ಆರೋಗ್ಯವಾಗಿ ಇರಿಸುತ್ತದೆ. ನಿತ್ಯವೂ ಯೋಗ, ದೈಹಿಕ ಚಟುವಟಿಕೆ ನಡೆಸುವುದರಿಂದ ದೀರ್ಘಕಾಲದ ಕೆಲವು ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಬಹುದು.

ಯಾವ ರೀತಿ?

ನಡಿಗೆ, ಜಿಮ್, ಸ್ವಿಮ್ಮಿಂಗ್, ಜಾಗಿಂಗ್, ಸ್ಕಿಪ್ಪಿಂಗ್, ಸೈಕ್ಲಿಂಗ್ ಮೊದಲಾದವುಗಳಲ್ಲಿ ಯಾವುದಾದರೂ ಒಂದೆರಡನ್ನು ನಮ್ಮ ನಿತ್ಯದ ಚಟುವಟಿಕೆಯಲ್ಲಿ ಅಳವಡಿಸಿಕೊಳ್ಳಬೇಕು. ಇದರೊಂದಿಗೆ ಪ್ರಾಣಾಯಾಮ, ಧ್ಯಾನವನ್ನು ಅಳವಡಿಸಿಕೊಳ್ಳಲು ಐಸಿಎಂಆರ್ ಸೂಚಿಸಿದೆ.

ಅಲ್ಲದೇ ಮನೆ ಕೆಲಸ, ಮನೆ ಸುತ್ತಮುತ್ತ ಸುತ್ತಾಡೋದು, ಮೆಟ್ಟಿಲುಗಳನ್ನು ಹತ್ತಿ ಇಳಿಯೋದು, ಉದ್ಯಾನ ಕೆಲಸಗಳು, ಹೊರಾಂಗಣ, ಒಳಾಂಗಣ ಕ್ರೀಡೆಗಳನ್ನು ಸೇರಿಸಿಕೊಳ್ಳಬೇಕು. ಕಾರ್ಡಿಯೋ ಚಟುವಟಿಕೆಗಳನ್ನು ನಡೆಸಲು ಮರೆಯದಿರಿ.

ವೈದ್ಯರನ್ನು ನೋಡಿ

ದೈಹಿಕ ಚಟುವಟಿಕೆ ಎಷ್ಟೇ ಮಾಡಿದರೂ ಅನಾರೋಗ್ಯ ಕಾಡಿದಾಗ ವೈದ್ಯರನ್ನು ಕಾಣಲೇಬೇಕು. ಅದರಲ್ಲೂ ಮುಖ್ಯವಾಗಿ ಉಸಿರಾಟದ ತೊಂದರೆ, ದೇಹದ ಭಾಗದಲ್ಲಿ ನೋವು, ವಾಕರಿಕೆ, ಸುಸ್ತು, ತಲೆನೋವು ಕಡಿದಾಗ ದೇಹಕ್ಕೆ ವಿಶ್ರಾಂತಿಯನ್ನು ಬಯಸುತ್ತದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು.

ಇದನ್ನೂ ಓದಿ: ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ


ಯಾವುದು ಎಷ್ಟು ಚಟುವಟಿಕೆ ಬೇಕು?

ನಿದ್ದೆ 8 ಗಂಟೆ, ಕಚೇರಿ ಕೆಲಸ – 8 ಗಂಟೆ, ಮನೆ ಕೆಲಸ- 3.30 ಗಂಟೆ, ತಿನ್ನುವುದು, ಟಿವಿ ನೋಡುವುದು, ತಮ್ಮನ್ನು ತಾವು ತಯಾರಿ ಮಾಡುವುದಕ್ಕೆ- 3 ಗಂಟೆ, ವ್ಯಾಯಾಮ- 60 ನಿಮಿಷ, ಏರೋಬಿಕ್ ವ್ಯಾಯಾಮ- 20 ನಿಮಿಷವನ್ನು ಮೀಸಲಿಡುವಂತೆ ಐಸಿಎಂಆರ್ ಸೂಚಿಸಿದೆ.

ಊಟ, ಉಪಾಹಾರದಲ್ಲಿ ಏನಿರಬೇಕು?

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಕಡಿಮೆ ಚಟುವಟಿಕೆ ಹೊಂದಿರುವ ಪುರುಷರು ಮತ್ತು ಮಹಿಳೆಯರು ಆಹಾರದಲ್ಲಿ (food) ಪೌಷ್ಟಿಕಾಂಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದ್ದು, ಇದಕ್ಕಾಗಿ ಇಂಥವರು ಯಾವ ರೀತಿಯ ಆಹಾರ ಸೇವಿಸಬೇಕು ಎಂಬುದರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಐಸಿಎಂಆರ್ ಪ್ರಕಾರ ಕಡಿಮೆ ಚಟುವಟಿಕೆ ಹೊಂದಿರುವ ಪುರುಷರ ಉಪಾಹಾರದಲ್ಲಿ ನೆನೆಸಿದ ಮತ್ತು ಬೇಯಿಸಿದ ಬಜ್ರಾ 90 ಗ್ರಾಂ ಮತ್ತು ತರಕಾರಿಗಳು 50 ಗ್ರಾಂ ಒಳಗೊಂಡಿರಬೇಕು. ಅದೇ ರೀತಿ ಮಹಿಳೆಯರಿಗೆ ನೆನೆಸಿದ ಮತ್ತು ಬೇಯಿಸಿದ ಬಜ್ರಾವನ್ನು ಉಪಾಹಾರದಲ್ಲಿ 60 ಗ್ರಾಂ ಮತ್ತು ತರಕಾರಿಗಳು 100 ಗ್ರಾಂ ಸೇರಿಸಿಕೊಳ್ಳಬೇಕು.

ಮಧ್ಯಾಹ್ನದ ಊಟದಲ್ಲಿ ಪುರುಷರು ಧಾನ್ಯಗಳನ್ನು 100 ಗ್ರಾಂ ಮತ್ತು ಬೇಳೆಕಾಳುಗಳು 30 ಗ್ರಾಂ, ಮಹಿಳೆಯರು ಮಧ್ಯಾಹ್ನದ ಊಟದಲ್ಲಿ ಧಾನ್ಯಗಳು 80 ಗ್ರಾಂ ಮತ್ತು ದ್ವಿದಳ ಧಾನ್ಯಗಳನ್ನು 20 ಗ್ರಾಂ ತೆಗೆದುಕೊಳ್ಳಬಹುದು. ಸಂಜೆ ಇಬ್ಬರಿಗೂ 50 ಮಿಲಿ ಲೀಟರ್ ಹಾಲು ಕುಡಿಯಲು ಸೂಚಿಸಲಾಗುತ್ತದೆ.

Continue Reading
Advertisement
Prajwal Revanna Case Revanna bail plea SPP wants a copy of the court verdict Nagesh said you have to read it yourself
ಕ್ರೈಂ2 mins ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಕೋರ್ಟ್‌ ತೀರ್ಪಿನ ಪ್ರತಿ ಬೇಕೆಂದ SPP; ನೀವೇ ಓದ್ಕೋಬೇಕು ಅಂದ್ರು ನಾಗೇಶ್‌!

Moringa Leaves Health Benefits
ಆರೋಗ್ಯ8 mins ago

Moringa Leaves Health Benefits: ನುಗ್ಗೆ ಸೊಪ್ಪು ಏಕೆ ತಿನ್ನಬೇಕು? ಏನಿದೆ ಇದರಲ್ಲಿ ವಿಶೇಷ ಗುಣ?

Prajwal Revanna Case
ರಾಜಕೀಯ9 mins ago

Prajwal Revanna Case: ದೇವರಾಜೇಗೌಡ 3 ದಿನ ಪೊಲೀಸ್ ಕಸ್ಟಡಿಗೆ; ಸಂತ್ರಸ್ತೆ ಕಿಡ್ನ್ಯಾಪ್ ಕೇಸ್‌ನ 3 ಆರೋಪಿಗಳಿಗೆ ನ್ಯಾಯಾಂಗ ಬಂಧನ

Karnataka Weather Forecast
ಮಳೆ18 mins ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Overweight man suffering from chest pain, high blood pressure, cholesterol level
ಆರೋಗ್ಯ21 mins ago

Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

Prajwal Revanna Case HD Revanna bail plea arguments and counter arguments
ಕ್ರೈಂ29 mins ago

Prajwal Revanna Case: ಎಚ್‌.ಡಿ. ರೇವಣ್ಣ ಜಾಮೀನು ಅರ್ಜಿಯ ರೋಚಕ ವಾದ – ಪ್ರತಿವಾದ; ಇಲ್ಲಿದೆ ಇಂಚಿಂಚು ಡಿಟೇಲ್ಸ್‌

IPL 2024
ಪ್ರಮುಖ ಸುದ್ದಿ32 mins ago

IPL 2024 : ಡೆಲ್ಲಿ ವಿರುದ್ದ ಗೆದ್ದ ಆರ್​ಸಿಬಿ ತಂಡದ ಸಂಭ್ರಮ ಹೀಗಿತ್ತು, ಇಲ್ಲಿದೆ ವಿಡಿಯೊ

Modi Roadshow Live
ದೇಶ37 mins ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Viral Video
ದೇಶ41 mins ago

Viral Video: ಜೊತೆಗಿದ್ದ ಬೆಂಬಲಿಗನನ್ನೇ ವೇದಿಕೆಯಿಂದ ತಳ್ಳಿದ ಲಾಲೂ ಪುತ್ರ; ಎಲ್ಲೆಡೆ ಭಾರೀ ಖಂಡನೆ

Naxals
ದೇಶ59 mins ago

Naxals: ಮತ್ತೆ ಮೂವರು ನಕ್ಸಲರ ಹತ್ಯೆ, ಎನ್‌ಕೌಂಟರ್‌ನಲ್ಲಿ ಈ ವರ್ಷ ಶತಕ ಬಾರಿಸಿದ ಭದ್ರತಾ ಸಿಬ್ಬಂದಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ18 mins ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ37 mins ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ12 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ13 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ24 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ1 day ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

ಟ್ರೆಂಡಿಂಗ್‌