Health tips for Over 40: ನಿಮಗೆ 40 ದಾಟಿತೇ? ಹಾಗಾದರೆ ಈ ಸಪ್ಲಿಮೆಂಟ್‌ಗಳು ನಿಮಗೆ ಬೇಕಾಗಬಹುದು! - Vistara News

ಆರೋಗ್ಯ

Health tips for Over 40: ನಿಮಗೆ 40 ದಾಟಿತೇ? ಹಾಗಾದರೆ ಈ ಸಪ್ಲಿಮೆಂಟ್‌ಗಳು ನಿಮಗೆ ಬೇಕಾಗಬಹುದು!

Health tips for Over 40: ನಲವತ್ತಕ್ಕೆ ಕಾಲಿಡುತ್ತಿರುವಾಗಲೇ ದೇಹದಲ್ಲಿ ಹಲವಾರು ಬದಲಾವಣೆಗಳು ನಿಧಾನವಾಗಿ ಕಾಣಿಸಿಕೊಳ್ಳಲಾರಂಭಿಸುತ್ತವೆ. ಎಲುಬಿನ ಸಾಂದ್ರತೆ, ಮಾಂಸಖಂಡಗಳು ಇಳಿಮುಖವಾಗುವುದು, ಜೀರ್ಣಕ್ರಿಯೆ ನಿಧಾನವಾಗುವುದು, ಹಾರ್ಮೋನಿನ ಬದಲಾವಣೆಗಳು ಇವೆಲ್ಲವೂ ಬಹಳ ಸಾಮಾನ್ಯ. ಕೆಲವು ಸಪ್ಲಿಮೆಂಟ್‌ಗಳು, ಪೋಷಕಾಂಶಯುಕ್ತ ಆಹಾರ, ವ್ಯಾಯಾಮ, ಚಟುವಟಿಕೆಯಿಂದಿರುವುದು ಇತ್ಯಾದಿಗಳು ಅತ್ಯಂತ ಮುಖ್ಯ. ಈ ಕುರಿತಂತೆ ಉಪಯುಕ್ತ ಸಲಹೆ ಇಲ್ಲಿದೆ.

VISTARANEWS.COM


on

Health tips for Over 40 supplimnt
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಲವತ್ತಕ್ಕೆ ಪದಾರ್ಪಣೆ (Health tips for Over 40) ಮಾಡುವುದು ಎಂದರೆ, ದೇಹ ಹಲವಾರು ಬದಲಾವಣೆಗಳಿಗೆ ಒಳಗೊಳ್ಳುವುದು. ಹೌದು. ನಲವತ್ತಕ್ಕೆ ಕಾಲಿಡುತ್ತಿರುವಾಗಲೇ ದೇಹದಲ್ಲಿ ಹಲವಾರು ಬದಲಾವಣೆಗಳು ನಿಧಾನವಾಗಿ ಕಾಣಿಸಿಕೊಳ್ಳಲಾರಂಭಿಸುತ್ತದೆ. ಎಲುಬಿನ ಸಾಂದ್ರತೆ, ಮಾಂಸಖಂಡಗಳು ಇಳಿಮುಖವಾಗುವುದು, ಜೀರ್ಣಕ್ರಿಯೆ ನಿಧಾನವಾಗುವುದು, ಹಾರ್ಮೋನಿನ ಬದಲಾವಣೆಗಳು ಇವೆಲ್ಲವೂ ಬಹಳ ಸಾಮಾನ್ಯ. ಕೆಲವು ಸಪ್ಲಿಮೆಂಟ್‌ಗಳು, ಪೋಷಕಾಂಶಯುಕ್ತ ಆಹಾರ, ವ್ಯಾಯಾಮ, ಚಟುವಟಿಕೆಯಿಂದಿರುವುದು ಇತ್ಯಾದಿಗಳು ಅತ್ಯಂತ ಮುಖ್ಯ. ಬನ್ನಿ, ನಲವತ್ತು ದಾಟುತ್ತಿದ್ದಂತೆ, ಅಗತ್ಯವಾಗಿ ಬೇಕಾಗುವ ಸಪ್ಲಿಮೆಂಟ್‌ಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

ವಿಟಮಿನ್‌ ಡಿ

ನಮಗೆ ವಯಸ್ಸಾಗುತ್ತಿದ್ದಂತೆಯೇ, ನಮ್ಮ ಚರ್ಮಕ್ಕೆ ಸೂರ್ಯನ ಬೆಳಕಿನಲ್ಲಿರುವ ವಿಟಮಿನ್‌ ಡಿಯನ್ನು ಸಂಸ್ಕರಿಸಿ ಪಡೆಯುವ ಶಕ್ತಿ ಕುಂಠಿತವಾಗುತ್ತದೆ. ವಿಟಮಿನ್‌ ಡಿ ನಮ್ಮ ದೇಹದಲ್ಲಿ ಕ್ಯಾಲ್ಶಿಯಂ ಹೀರಿಕೆಗೆ ಅತ್ಯಂತ ಅಗತ್ಯವಾಗಿ ಬೇಕಾದ ಪೋಷಕಾಂಶವಾದ್ದರಿಂದ ಇದರ ಕೊರತೆ ಕಾಡದಂತೆ ನೋಡಬೇಕು. ಹಾಗಾಗಿ ಆಗಾಗ, ಪರೀಕ್ಷೆಗಳಿಂದ ವಿಟಮಿನ್‌ ಡಿಯ ಕೊರತೆಯಿದ್ದರೆ ಅದನ್ನು ದೃಢಪಡಿಸಿಕೊಂಡು ವೈದ್ಯರ ಸಲಹೆಯಂತೆ ವಿಟಮಿನ್‌ ಡಿ ಸಪ್ಲಿಮೆಂಟ್‌ ಸೇವನೆ ಮಾಡುವುದು ಒಳ್ಳೆಯದು.

ಕ್ಯಾಲ್ಶಿಯಂ

ಎಲುಬಿನ ಸಾಂದ್ರತೆಯನ್ನು ಕಾಯ್ದುಕೊಳ್ಳಲು ಕ್ಯಾಲ್ಶಿಯಂ ಅಗತ್ಯವಾಗಿ ಬೇಕು. ನಲವತ್ತಾಗುತ್ತಿದ್ದಂತೆ ನಿಧಾನವಾಗಿ ಮೂಳೆ ಸವೆತ, ಸಂಧಿನೋವುಗಳು ಇತ್ಯಾದಿಗಳು ಕಾಡಲಾರಂಭಿಸುತ್ತದೆ. ಮುಖ್ಯವಾಗಿ ಮಹಿಳೆಯರಲ್ಲಿ ಈ ಸಮಸ್ಯೆ ಬರುವುದು ಹೆಚ್ಚು. ಕಾರಣ ಆಕೆ ಹೆರಿಗೆ ಇತ್ಯಾದಿಗಳಿಂದಾಗಿ ಸಾಕಷ್ಟು ಬದಲಾವಣೆಗಳನ್ನು ಕಾಣುವುದರಿಂದ ಹಾಗೂ ಮೆನೋಪಾಸ್‌ ಇತ್ಯಾದಿಗಳಿಂದಾಗಿಯೂ ಕ್ಯಾಲ್ಶಿಯಂ ದೇಹಕ್ಕೆ ಕೊರತೆಯಾಗುತ್ತದೆ. ಹೀಗಾಗಿ ಕ್ಯಾಲ್ಶಿಯಂ ಶ್ರೀಮಂತವಾಗಿರುವ ಆಹಾರ ಸೇವನೆ ಹಾಗೂ ಅಗತ್ಯ ಬಿದ್ದರೆ ವೈದ್ಯರ ಸಲಹೆಯಂತೆ, ಸಪ್ಲಿಮೆಂಟ್‌ ಸೇವನೆಯ ಮೊರೆ ಹೋಗಬಹುದು.

ಇದನ್ನೂ ಓದಿ: Actor Kiran Raj: ಕಿರಣ್‌ರಾಜ್‌ `ರಾನಿ’ ಸಿನಿಮಾಗೆ ಯು/ಎ ಸರ್ಟಿಫಿಕೇಟ್; ತೆರೆಗೆ ಯಾವಾಗ?

ಒಮೆಗಾ 3 ಫ್ಯಾಟಿ ಆಸಿಡ್‌

ಒಮೆಗಾ 3 ಫ್ಯಾಟಿ ಆಸಿಡ್‌ಗಳು ಮೀನಿನ ಎಣ್ಣೆ ಸಪ್ಲಿಮೆಂಟ್‌ಗಳ ಮೂಲಕ ಪಡೆಯಬಹುದು. ಇವುಗಳಲ್ಲಿ ಆಂಟಿ ಇನ್‌ಫ್ಲಮೇಟರಿ ಗುಣಗಳಿದ್ದು, ಇವು ಹೃದಯದ ಆರೋಗ್ಯವನ್ನು ವರ್ಧಿಸುತ್ತದೆ. ಇದು ಟ್ರೈಗ್ಲಿಸರಾಯ್ಡ್‌ಗಳನ್ನು ಇಳಿಸಿ, ಹೃದಯಾಘಾತ ಇತ್ಯಾದಿಗಳಿಂದ ರಕ್ಷಣೆ ನೀಡುತ್ತದೆ. ಮಿದುಳಿನ ಕೆಲಸವನ್ನು ಚುರುಕುಗೊಳಿಸುತ್ತದೆ. ಅಷ್ಟೇ ಅಲ್ಲ, ಸಂಧಿನೋವು, ಆರ್ಥೈಟಿಸ್‌ ಇತ್ಯಾದಿಗಳಿಗೂ ಒಳ್ಳೆಯದು.

ಮೆಗ್ನೀಶಿಯಂ

ದೇಹದ ಶಕ್ತಿವರ್ಧನೆಗೆ, ಮಾಂಸಖಂಡಗಳು ಕೆಲಸ ಮಾಡಲು, ನರಮಂಡಲದ ಚುರುಕಿಗೆ ಮೆಗ್ನೀಶಿಯಂ ಬೇಕು. ಹೃದಯದ ಆರೋಗ್ಯಕ್ಕೂ ಮೆಗ್ನೀಶಿಯಂ ಒಳ್ಳೆಯದು. ನಿದ್ದೆಯ ಗುಣಮಟ್ಟ ವೃದ್ಧಿಸಲು, ಮೂಳೆ ಗಟ್ಟಿಗೊಳ್ಳಲೂ ಮೆಗ್ನೀಶಿಯಂ ಸಹಾಯ ಮಾಡುತ್ತದೆ.

ಪ್ರೊಬಯಾಟಿಕ್‌ಗಳು

ಇಡಿಯ ಜೀರ್ಣಾಂಗ ವ್ಯೂಹ ಸಮರ್ಪಕವಾಗಿ ಕೆಲಸ ಮಾಡಲು ಸಹಾಯ ಮಾಡುವ ಬ್ಯಾಕ್ಟೀರಿಯಾ, ಪ್ರೊಬಯಾಟಿಕ್‌ನಲ್ಲಿದೆ. ನಲುವತ್ತು ದಾಟುತ್ತಿದ್ದಂತೆ, ಜೀರ್ಣಕ್ರಿಯೆ ಕುಂಠಿತವಾಗುತ್ತಿರುವಾಗ ಪ್ರೊಬಯಾಟಿಕ್‌ನ ಸಹಾಯವಿದ್ದರೆ ಒಳ್ಳೆಯದು. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಮಾನಸಿಕವಾಗಿ ಸದೃಢವಾಗಿರಲೂ ಕೂಡಾ ಇದು ಒಳ್ಳೆಯದು.

ವಿಟಮಿನ್‌ ಬಿ

ವಿಟಮಿನ್ ಬಿ6, ಬಿ12, ಫೋಲೇಟ್‌ ಸೇರಿದಂತೆ ವಿಟಮಿನ್‌ ಬಿ ದೇಹದ ಶಕ್ತಿವರ್ಧನೆಗೆ ನಲುವತ್ತರ ನಂತರ ಅತೀ ಅಗತ್ಯ. ಕೆಂಪು ರಕ್ತಕಣಗಳು ವೃದ್ಧಿಯಾಗಲು ಕೂಡಾ ಇದರಿಂದ ಸಹಾಯವಾಗುತ್ತದೆ. ವಯಸ್ಸಾಗುತ್ತಾ ಆಗುತ್ತಾ, ವಿಟಮಿನ್‌ ಬಿಯ (ಮುಖ್ಯವಾಗಿ ಬಿ12) ಹೀರಿಕೆಯ ಸಾಮರ್ಥ್ಯ ದೇಹಕ್ಕೆ ಕಡಿಮೆಯಾಗುತ್ತಾ ಬಂದಂತೆ ದೇಹದ ಶಕ್ತಿ ಕುಂದದಂತೆ, ಅನೀಮಿಯಾದಂತಹ ಕಾಯಿಲೆ ಬರದಂತೆ ತಡೆಯಲು ಸಪ್ಲಿಮೆಂಟ್‌ಗಳನ್ನು ನೀಡಬೇಕಾಗುತ್ತದೆ.

ಕೊಲಾಜೆನ್‌

ಕೊಲಾಜೆನ್‌ ಇಂದು ಕೇಳಿಬರುತ್ತಿರುವ ದೊಡ್ಡ ಹೆಸರು. ವಯಸ್ಸಾಗುತ್ತಾ ಸೌಂದರ್ಯ ಕಳೆದು ಹೋಗದಂತೆ ಇಂದು ಸಾಕಷ್ಟು ಮಂದಿ ಕೊಲಾಜೆನ್‌ ಸಪ್ಲಿಮೆಂಟ್‌ ಸೇವಿಸುತ್ತಿರುವುದು ಸಾಮಾನ್ಯವಾಗಿದೆ. ಚರ್ಮದಲ್ಲಿ ನೆರಿಗೆಗಳು, ವಯಸ್ಸಾದ ಲಕ್ಷಣಗಳನ್ನು ಕಡಿಮೆಗೊಳಿಸಲು ಇದು ನೆರವಾಗುತ್ತದೆ. ಅಷ್ಟೇ ಅಲ್ಲ, ಚರ್ಮಕ್ಕೆ ಮೃದುತ್ವವನ್ನು ನೀಡಿ, ಚರ್ಮದಲ್ಲಿ ನೀರಿನಂಶವನ್ನು ಉಳಿಸುವಂತೆ ಮಾಡಿ, ನಯವೂ ಹೊಳಪೂ ಆಗಿಸುತ್ತದೆ.

ವಿಟಮಿನ್‌ ಸಿ

ವಿಟಮಿನ್‌ ಸಿ ಅತ್ಯಂತ ಶಕ್ತಿಯುತವಾದ ಆಂಟಿ ಆಕ್ಸಿಡೆಂಟ್‌. ಇದು ದೇಹಕ್ಕೆ ಸರಿಯಾದ ಪ್ರಮಾಣದಲ್ಲಿ ಸಿಗಲೇಬೇಕು. ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ಚರ್ಮದ ಆರೋಗ್ಯವೂ ಹೆಚ್ಚುತ್ತದೆ. ಅಗತ್ಯವಿದ್ದರೆ ಮಾತ್ರ ಇವುಗಳ ಸಪ್ಲಿಮೆಂಟ್‌ ಸೇವಿಸಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Health Tips: ಏನ್ ನಿಂಗೆ ಕೊಬ್ಬಾ ಅನ್ನಬೇಡಿ ಕೊಬ್ಬೂ ಇರಬೇಕು!

Health Tips: ದೇಹದ ಒಟ್ಟಾರೆ ಸ್ವಾಸ್ಥ್ಯಕ್ಕೆ, ಕೋಶಗಳ ಬೆಳವಣಿಗೆಗೆ, ಶಕ್ತಿ ಸಂಚಯನಕ್ಕೆ, ಸತ್ವಗಳನ್ನು ಹೀರಿಕೊಳ್ಳುವುದಕ್ಕೆ- ಇಂಥ ಹಲವು ಕೆಲಸಗಳಿಗೆ ಕೊಬ್ಬಿನಂಶ ನಮಗೆ ಬೇಕಾಗುತ್ತದೆ. ಅಂದಮಾತ್ರಕ್ಕೆ ಕರಿದ ಆಹಾರಗಳನ್ನು ಮನಸೋಇಚ್ಛೆ ತಿನ್ನಬಹುದು ಎಂದರ್ಥವಲ್ಲ. ಮತ್ತೆ ಹೇಗೆ? ಇಲ್ಲಿದೆ ವಿವರ.

VISTARANEWS.COM


on

Health Tips
Koo

ಕೊಬ್ಬಿನ ಆಹಾರಗಳು ಎನ್ನುತ್ತಿದ್ದಂತೆ ಬೆಚ್ಚಿ ಬೀಳುತ್ತೇವೆ. ಮೈ-ಕೈಯೆಲ್ಲ ಕೊಬ್ಬು ತುಂಬಿ ಬಲೂನಿನಂತೆ ಊದಿಕೊಂಡು, ಒಂದು ದಿನ ಫಟ್ಟೆಂದು ಒಡೆದು ಹೋದೀತೆನ್ನುವ ಹಾಗೆ ಹೆದರಿ ನಡುಗುತ್ತೇವೆ. ನಮ್ಮ ಎಲ್ಲಾ ರಕ್ತನಾಳಗಳೂ ಕೊಲೆಸ್ಟ್ರಾಲ್‌ ತುಂಬಿಕೊಂಡು ಬಿರಿದು ಹೋಗುತ್ತವೆ ಎಂದು ಮಾಧ್ಯಮಗಳಲ್ಲೆಲ್ಲಾ ಭೀತಿ ಹುಟ್ಟಿಸಲಾಗುತ್ತದೆ. ಇದಕ್ಕೆ ಪೂರಕವಾಗಿ ಲೋ-ಫ್ಯಾಟು, ಲೋ-ಕಾರ್ಬು ಎನ್ನುತ್ತಾ ತುದಿಬುಡವಿಲ್ಲದ ಏನೇನೋ ಡಯೆಟ್‌ಗಳನ್ನು ಮಾಡಿಕೊಂಡು ದೇಹವನ್ನು ಸೊರಗಿಸುತ್ತೇವೆ. ಅಷ್ಟಾದರೂ ನಮ್ಮ ಫಿಟ್‌ನೆಸ್‌ ಗುರಿಯನ್ನು ತಲುಪುವುದಕ್ಕೆ ನಮಗೆ ಸಾಧ್ಯವಾಗುವುದಿಲ್ಲ. ಬದಲಿಗೆ ಮೈ-ಕೈಯೆಲ್ಲ ನೋವಾಗಿ ಕೀಲುಗಳು ʻಕಿರ್‌…ʼಗುಡಲು ಪ್ರಾರಂಭಿಸುತ್ತವೆ. ಏನಿದರರ್ಥ? ಕೊಬ್ಬಿನ ಆಹಾರಗಳು ನಮಗೆ ಅಗತ್ಯವೆಂದೇ? ಹೌದಾದರೆ, ಎಂಥ ಕೊಬ್ಬು (Health Tips) ನಮಗೆ ಬೇಕು? ಆಹಾರದಲ್ಲಿ ಸಮತೋಲನ ಸಾಧಿಸುವುದೆಂದರೆ ದೇಹಕ್ಕೆ ಬೇಕಾದಷ್ಟು ಒಳ್ಳೆಯ ಕೊಬ್ಬಿನ ಆಹಾರಗಳನ್ನೂ ನೀಡುವುದು ಎಂದೇ ಅರ್ಥ. ದೇಹದ ಒಟ್ಟಾರೆ ಸ್ವಾಸ್ಥ್ಯಕ್ಕೆ, ಕೋಶಗಳ ಬೆಳವಣಿಗೆಗೆ, ಶಕ್ತಿ ಸಂಚಯನಕ್ಕೆ, ಸತ್ವಗಳನ್ನು ಹೀರಿಕೊಳ್ಳುವುದಕ್ಕೆ- ಇಂಥ ಹಲವು ಕೆಲಸಗಳಿಗೆ ಕೊಬ್ಬಿನಂಶ ನಮಗೆ ಬೇಕಾಗುತ್ತದೆ. ಅಂದಮಾತ್ರಕ್ಕೆ ಕರಿದ ಆಹಾರಗಳನ್ನು ಮನಸೋಇಚ್ಛೆ ತಿನ್ನಬಹುದು ಎಂದರ್ಥವಲ್ಲ. ಮತ್ಸಾಹಾರಗಳು, ಡೇರಿ ಮತ್ತು ಸಸ್ಯಜನ್ಯ ಆಹಾರಗಳು ನಮ್ಮ ದೇಹಕ್ಕೆ ಅಗತ್ಯವಾದ ಒಳ್ಳೆಯ ಕೊಬ್ಬನ್ನು ಯಥೇಚ್ಛವಾಗಿ ಒದಗಿಸಬಲ್ಲವು. ಸಸ್ಯಾಹಾರಿಗಳಿಗೆ ಸೂಕ್ತವಾದಂಥ ಕೊಬ್ಬಿನ ಮೂಲಗಳನ್ನು ಇಲ್ಲಿ ವಿವರಿಸಲಾಗಿದೆ.

Avocado slices

ಅವಕಾಡೊ

ಬೆಣ್ಣೆ ಹಣ್ಣು ಎಂದೂ ಕರೆಯಲಾಗುವ ಈ ಹಣ್ಣಿನ ಋತುವೇ ಮಳೆಗಾಲದ ಹೊತ್ತು. ಇದೀಗ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿರುವ ಬೆಣ್ಣೆ ಹಣ್ಣನ್ನು ತೃಪ್ತಿಯಾಗುವಷ್ಟು ಸವಿಯಿರಿ. ಮಾನೊಅನ್‌ಸ್ಯಾಚುರೇಟೆಡ್‌ ಎಂದು ಇದರಲ್ಲಿರುವ ಕೊಬ್ಬನ್ನು ಕರೆಯಲಾಗುತ್ತದೆ. ಹೃಯದ ಆರೋಗ್ಯಕ್ಕೆ ಹೇಳಿ ಮಾಡಿಸಿದಂಥ ಹಣ್ಣಿದು. ಇದನ್ನು ಸ್ಯಾಂಡ್‌ವಿಚ್‌, ಸ್ಮೂದಿ, ಸಲಾಡ್‌ಗಳ ಜೊತೆಗೆ ಸೇರಿಸಿಕೊಂಡು ತಿನ್ನಬಹುದು ಅಥವಾ ಹಾಗೆಯೇ ಸವಿಯಲೂಬಹುದು.

ಚೀಸ್‌

ಇದರಲ್ಲಿ ಹಲವು ರೀತಿಯ ರುಚಿಕರ ಆಯ್ಕೆಗಳು ಲಭ್ಯವಿವೆ. ಅದರಲ್ಲೂ ಕಡಿಮೆ ಕೊಬ್ಬಿನ ಫೆಟಾ ಅಥವಾ ಕಾಟೇಜ್‌ ಚೀಸ್‌ಗಳು, ಪನೀರ್‌ನಂಥವು ಸಿಕ್ಕಾಪಟ್ಟೆ ಒಳ್ಳೆಯ ಸತ್ವಗಳನ್ನು ಒದಗಿಸುತ್ತವೆ. ಪ್ರೊಟೀನ್‌ ಸಹ ಇವುಗಳಲ್ಲಿ ಸಾಂದ್ರವಾಗಿದ್ದು, ಉತ್ತಮ ಕೊಬ್ಬಿನಂಶವನ್ನು ದೇಹಕ್ಕೆ ನೀಡುತ್ತವೆ. ಆಹಾರಗಳ ರುಚಿಯನ್ನೂ ವೃದ್ಧಿಸುತ್ತವೆ.

ಕಾಯಿ-ಬೀಜಗಳು

ಬಾದಾಮಿ, ವಾಲ್‌ನಟ್‌, ಗೋಡಂಬಿ, ಪಿಸ್ತಾ ಮುಂತಾದ ಕಾಯಿಗಳಂಥವು, ಅಗಸೆ, ಚಿಯಾ, ಸೂರ್ಯಕಾಂತಿ ಬೀಜ, ಕುಂಬಳ ಬೀಜದಂಥ ಸಣ್ಣ ಬೀಜಗಳು ಅತ್ಯಂತ ಆರೋಗ್ಯಕರ ಕೊಬ್ಬನ್ನು ನೀಡುವುದರ ಜೊತೆಗೆ, ನಾರು ಮತ್ತು ಪ್ರೊಟೀನ್‌ಗಳನ್ನೂ ದೇಹಕ್ಕೆ ಒದಗಿಸುತ್ತವೆ. ಇವುಗಳಲ್ಲಿರುವ ಒಮೇಗಾ ೩ ಕೊಬ್ಬಿನಾಮ್ಲವು ಆರೋಗ್ಯಕ್ಕೆ ಬಹಳಷ್ಟು ಲಾಭಗಳನ್ನು ತಂದು ಕೊಡಬಲ್ಲದು. ಹೃದಯ, ಮೆದುಳುಗಳನ್ನು ಸ್ವಸ್ಥವಾಗಿಡುವುದಕ್ಕೆ ಇಂಥ ಒಳ್ಳೆಯ ಕೊಬ್ಬುಗಳು ಬೇಕು.

Olive oil Foods You Should Never Refrigerate

ಆಲಿವ್‌ ಎಣ್ಣೆ

ಇದು ಮೆಡಿಟರೇನಿಯನ್‌ ಆಹಾರಪದ್ಧತಿಯಲ್ಲಿ ಹೇರಳವಾಗಿ ಬಳಕೆಯಲ್ಲಿದೆ. ಇದರಲ್ಲಿಯೂ ಮಾನೊಅನ್‌ಸ್ಯಾಚುರೇಟೆಡ್‌ ಕೊಬ್ಬಿನಂಶ ವಿಫುಲವಾಗಿದೆ. ಈ ಕೊಬ್ಬು ಹೃದಯದ ಆರೋಗ್ಯ ರಕ್ಷಣೆಗೆ ಪೂರಕವಾದದ್ದು. ಆದರೆ ಇದನ್ನು ಹೆಚ್ಚಿನ ಉಷ್ಣತೆಯಲ್ಲಿ ಬಿಸಿ ಮಾಡಲು ಸಾಧ್ಯವಿಲ್ಲ. ಕಡಿಮೆ ಉಷ್ಣತೆಯ ಆಹಾರಗಳ ತಯಾರಿಕೆಗೆ, ಸಲಾಡ್‌ಗಳಿಗೆ ಇದನ್ನು ಹೇರಳವಾಗಿ ಬಳಸಬಹುದು.

ಕೊಬ್ಬರಿ ಎಣ್ಣೆ

ತೆಂಗಿನ ಕಾಯಿ ಮತ್ತು ತೆಂಗಿನ ಎಣ್ಣೆಯಲ್ಲೂ ಒಳ್ಳೆಯ ಕೊಬ್ಬಿನಂಶವಿದೆ. ಇದರಲ್ಲಿರುವ ಮಧ್ಯಮ ಕೊಂಡಿಯ ಟ್ರೈಗ್ಲಿಸರೈಡ್‌ಗಳು (ಎಂಸಿಟಿ) ಆರೋಗ್ಯಕ್ಕೆ ಪೂರಕ ಎನ್ನುತ್ತವೆ ಅ‍್ಯಯನಗಳು. ಅಡುಗೆಯಲ್ಲಿ ತೆಂಗಿನ ಕಾಯಿಯನ್ನು ಬಳಸುವುದರ ಜೊತೆಗೆ, ತೆಂಗಿನ ಹಾಲು ಮತ್ತು ತೆಂಗಿನ ಎಣ್ಣೆಯನ್ನೂ ಹಿತ-ಮಿತವಾಗಿ ಬಳಸುವುದು ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮಗಳನ್ನು ಉಂಟು ಮಾಡುತ್ತದೆ.

ಇದನ್ನೂ ಓದಿ: Mushroom Benefits: ಅಣಬೆ ಎಂಬ ವಿಟಮಿನ್‌ ಡಿ! ಇದರ ಆರೋಗ್ಯ ಲಾಭ ತಿಳಿದರೆ ನೀವು ತಿನ್ನದೆ ಇರಲಾರಿರಿ!

ಮೊಸರು, ತುಪ್ಪ

ಸಾಮಾನ್ಯವಾಗಿ ತುಪ್ಪದಿಂದ ದೊರೆಯುವ ಕೊಬ್ಬಿನ ಮೂಲವನ್ನು ಎಲ್ಲರೂ ಶಿಫಾರಸು ಮಾಡುವುದಿಲ್ಲ. ಆದರೆ ಇದು ಸಹ ಮೀಡಿಯಂ ಚೈನ್‌ ಟ್ರೈಗ್ಲಿಸರೈಡ್‌ಗಳ ಸಾಲಿಗೇ ಬರುತ್ತದೆ. ಮಿತವಾಗಿ ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಮೊಸರು ಒಳ್ಳೆಯ ಕೊಬ್ಬಿನೊಂದಿಗೆ ಸಾಕಷ್ಟು ಪ್ರಮಾಣದ ಪ್ರೊಬಯಾಟಿಕ್‌ ಅಂಶಗಳನ್ನೂ ನೀಡುತ್ತದೆ.

Continue Reading

ಕರ್ನಾಟಕ

Belagavi News: ಸ್ವಾತಂತ್ರ್ಯ ದಿ‌ನಾಚರಣೆಯಂದು ಅಂಗಾಂಗ ದಾನಿಗಳ ಕುಟುಂಬಗಳಿಗೆ ಗೌರವ; ದಿ‌ನೇಶ್ ಗುಂಡೂರಾವ್

Belagavi News: ಸಾವಿನ ಅಂಚಿನಲ್ಲಿರುವಾಗ ಇನ್ನೊಬ್ಬರ ಜೀವ ಉಳಿಸಲು ಅಂಗಾಂಗ ದಾನ ಮಾಡುವ ನಿರ್ಣಯ ಕೈಗೊಳ್ಳುವುದು ನಿಜಕ್ಕೂ ಪುಣ್ಯದ ಕೆಲಸ. ಅಂಗಾಂಗಗಳಿಗೆ ಇಂದು ಹೆಚ್ಚು ಬೇಡಿಕೆಯಿದೆ.‌ ಆದರೆ ಬೇಡಿಕೆಗೆ ತಕ್ಕಂತೆ ಅಂಗಾಂಗಗಳ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಸುಮಾರು 8500 ರೋಗಿಗಳು ಇಂದು ಅಂಗಾಂಗಗಳಿಗೆ ಕಾಯುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ನಾವೆಲ್ಲರು ಇಂದು ಪ್ರತಿಜ್ಞೆ ಮಾಡಬೇಕಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

VISTARANEWS.COM


on

Indian Organ Donation Day program inauguration by Minister Dinesh Gundurao at Belagavi
Koo

ಬೆಳಗಾವಿ: ದೇಶದಲ್ಲಿಯೇ ಅಂಗಾಂಗ ದಾನದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದರೂ, ದಾನಿಗಳ ಸಂಖ್ಯೆ ನಿರೀಕ್ಷೆಗೆ ತಕ್ಕಂತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Belagavi News) ತಿಳಿಸಿದರು.

ಆರೋಗ್ಯ ಇಲಾಖೆಯ ವತಿಯಿಂದ ಬೆಳಗಾವಿಯಲ್ಲಿ ಇಂದು ಹಮ್ಮಿಕೊಂಡಿದ್ದ ಭಾರತೀಯ ಅಂಗಾಂಗ ದಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಂಗಾಂಗ ದಾನಿಗಳ ಕುಟುಂಬಗಳನ್ನು ಸನ್ಮಾನಿಸಿ, ಗೌರವಿಸುವುದರ ಜತೆಗೆ ರಾಜ್ಯ ಸರ್ಕಾರದ ಪ್ರಶಂಸಾ ಪತ್ರ ವಿತರಿಸಿ ಅವರು ಮಾತನಾಡಿದರು.

ಸಾವಿನ ಅಂಚಿನಲ್ಲಿರುವಾಗ ಇನ್ನೊಬ್ಬರ ಜೀವ ಉಳಿಸಲು ಅಂಗಾಂಗ ದಾನ ಮಾಡುವ ನಿರ್ಣಯ ಕೈಗೊಳ್ಳುವುದು ನಿಜಕ್ಕೂ ಪುಣ್ಯದ ಕೆಲಸ. ಅಂಗಾಂಗಗಳಿಗೆ ಇಂದು ಹೆಚ್ಚು ಬೇಡಿಕೆಯಿದೆ.‌ ಆದರೆ ಬೇಡಿಕೆಗೆ ತಕ್ಕಂತೆ ಅಂಗಾಂಗಗಳ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಸುಮಾರು 8500 ರೋಗಿಗಳು ಇಂದು ಅಂಗಾಂಗಗಳಿಗೆ ಕಾಯುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ನಾವೆಲ್ಲರು ಇಂದು ಪ್ರತಿಜ್ಞೆ ಮಾಡಬೇಕಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಇದನ್ನೂ ಓದಿ: 2nd PUC Exam Result 2024: ದ್ವಿತೀಯ ಪಿಯುಸಿ ಪರೀಕ್ಷೆ-1, 2, 3ರಲ್ಲಿ ಒಟ್ಟಾರೆ ಶೇ. 84.87 ವಿದ್ಯಾರ್ಥಿಗಳು ಪಾಸ್; ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

ಅಂಗಾಂಗ ದಾನವನ್ನು ಪ್ರೇರಿಪಸಲು ಆರೋಗ್ಯ ಇಲಾಖೆ ವಿಭಿನ್ನ ಪ್ರಯತ್ನಗಳನ್ನು ಮಾಡುತ್ತಿದೆ.‌ ಅಂಗಾಂಗ ದಾನಿಗಳ ಕುಟುಂಬಗಳನ್ನು ಸನ್ಮಾನಿಸುವ ಕಾರ್ಯಕ್ರಮ ಹಾಕಿಕೊಂಡಿದ್ದು, ಇನ್ನು ಮುಂದೆ ದಾನಿಗಳ ಮನೆಗಳಿಗೇ ಆರೋಗ್ಯ ಇಲಾಖೆ ಅಧಿಕಾರಿಗಳು ತೆರಳಿ ಸನ್ಮಾನಿಸಲಿದ್ದಾರೆ. ಅಲ್ಲದೇ ವಿಶೇಷವಾಗಿ ಸ್ವಾತಂತ್ರ್ಯ ದಿನಾಚಾರಣೆಯ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಅಂಗಾಂಗ ದಾನಿಗಳನ್ನು ಸನ್ಮಾನಿಸಿ, ಗೌರವಿಸುವಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಸಚಿವರು ತಿಳಿಸಿದರು.

ಅಂಗಾಂಗ ದಾನಕ್ಕೆ ಯಾವುದೇ ಧರ್ಮದಲ್ಲಿ ಅಡ್ಡಿ ಇಲ್ಲ. ಅಂಗಾಂಗ ದಾನ ಮಾಡಿದರೆ ಪುನರ್ಜನ್ಮಕ್ಕೆ ತೊಂದರೆಯಾಗುತ್ತೆ ಎಂಬ ಕೆಲ ಮೂಢನಂಬಿಕೆಗಳು ಜನರಲ್ಲಿವೆ. ಪುನರ್ಜನ್ಮ ಗ್ಯಾರಂಟಿ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಆದರೆ ನೀವು ಮಾಡುವ ಅಂಗಾಂಗ ದಾನದಿಂದ ಇನ್ನೊಬ್ಬರ ಜೀವ ಉಳಿಯುವುದು ಗ್ಯಾರಂಟಿ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಇದನ್ನೂ ಓದಿ: Moon: ಭೂಮಿಯಿಂದ ದೂರ ಹೊರಟ ಚಂದ್ರ, ಶೀಘ್ರದಲ್ಲೇ ದಿನಕ್ಕೆ 24 ಅಲ್ಲ 25 ಗಂಟೆಗಳು ಇರಲಿವೆ!

ಕರ್ನಾಟಕ ರಾಜ್ಯ 2ನೇ ಸ್ಥಾನದಲ್ಲಿ

2023 ನೇ ಸಾಲಿನಲ್ಲಿ 178 ಅಂಗಾಂಗ ದಾನ ನಡೆದಿದ್ದು, ಕರ್ನಾಟಕ ರಾಜ್ಯವು ದೇಶದಲ್ಲಿ 2ನೇ ಸ್ಥಾನದಲ್ಲಿದೆ.‌ ಆದರೆ ಅಂಗಾಂಗ ಕಸಿಗಾಗಿ ಕಾಯುತ್ತಿರುವವರ ಸಂಖ್ಯೆಗೂ ಅಂಗಾಂಗಗಳ ಪೂರೈಕೆಗೂ ಅಜಗಜಾಂತರ ಅಂತರವಿದೆ. ಅತ್ಯಂತ ಬೇಡಿಕೆಯುಳ್ಳ, ಅಂಗ ಎಂದರೆ ಮೂತ್ರಪಿಂಡ, ಒಟ್ಟಾರೆಯಾಗಿ 8,500 ಕ್ಕೂ ಹೆಚ್ಚು ಜನರು ಅಂಗಾಂಗಳಿಗಾಗಿ ಜೀವಸಾರ್ಥಕತೆಯಲ್ಲಿ ನೋಂದಾಯಿಸಿಕೊಂಡಿರುತ್ತಾರೆ.

ಮೆದುಳು ನಿಷ್ಕ್ರಿಯವಾದ ಒಬ್ಬ ಮಾನವನ ಅಂಗಾಂಗ ದಾನ ಮಾಡುವುದರ ಮೂಲಕ 8 ಜನರ ಜೀವ ಉಳಿಸಬಹುದಾಗಿದೆ. ಚರ್ಮ, ಮೂಳೆ, ಅಸ್ಥಿಮಜ್ಜೆ, ಹೃದಯದ ಕವಾಟಗಳು ಇತ್ಯಾದಿ ಅಂಗಾಂಶಗಳನ್ನು ದಾನ ಮಾಡುವುದರ ಮೂಲಕ 50ಕ್ಕೂ ಹೆಚ್ಚು ರೋಗಿಗಳಿಗೆ ಗುಣಮಟ್ಟದ ಜೀವನ ನೀಡಬಹುದು.

ಅಂಗಾಂಗ ದಾನ ಪ್ರತಿಜ್ಞೆಯಲ್ಲಿ ದೇಶದಲ್ಲಿ ಕರ್ನಾಟಕ ರಾಜ್ಯವು ಮೂರನೇ ಸ್ಥಾನದಲ್ಲಿದೆ. ಒಟ್ಟಾರೆಯಾಗಿ 63 ಸಾವಿರಕ್ಕೂ ಹೆಚ್ಚು ಜನರು ಸ್ವಯಂ ಪ್ರೇರಿತರಾಗಿ ಅಂಗಾಂಗ ದಾನಕ್ಕೆ ಪ್ರತಿಜ್ಞೆ ಮಾಡಿರುತ್ತಾರೆ. ಪ್ರತಿಜ್ಞೆ ಮಾಡುವುದರಲ್ಲಿ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ. QR code scan ಮಾಡುವ ಮೂಲಕ ಎಲ್ಲಿಂದಲಾದರೂ ನೀವು ಬಯಸಿದ ಅಂಗಾಂಗಗಳು ಮತ್ತು ಅಂಗಾಂಶಗಳ ದಾನಕ್ಕೆ ಪ್ರತಿಜ್ಞೆ ಮಾಡಬಹುದಾಗಿದೆ.

ರಾಜ್ಯದಲ್ಲಿ ಸುಮಾರು 78ಕ್ಕೂ ಹೆಚ್ಚು ಅಂಗಾಂಗ ಕಸಿ ಕೇಂದ್ರ ಜೀವಸಾರ್ಥಕತೆ ಅಡಿಯಲ್ಲಿ ನೋಂದಾಯಿಸಿಕೊಂಡಿರುತ್ತವೆ. ಇದರಲ್ಲಿ ಬೆಳಗಾವಿ ವಿಭಾಗದಲ್ಲಿ ಏಳು ಆಸತ್ರೆಗಳಲ್ಲಿ ಅಂಗಾಂಗ ಕಸಿ ಮಾಡಲಾಗುತ್ತದೆ. ಬೆಳಗಾವಿಯಲ್ಲಿನ ಕೆ.ಎಲ್.ಇ ಆಸತ್ರೆ, ಕಿಡ್ನಿ, ಲಿವರ್, ಹೃದಯ ಅಂಗಾಂಗ ಕಸಿ ಸೌಲಭ್ಯ ಲಭ್ಯವಿದೆ.

ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಇದುವರೆಗೂ 27 ಕಿಡ್ನಿ (Kidney) ಅಂಗಾಂಗ ಕಸಿ ಮಾಡಲಾಗಿದೆ.. ಎಲ್ಲಾ ವೈದ್ಯಕೀಯ ಕಾಲೇಜಿನ ಆಸತ್ರೆಗಳನ್ನು ಜಿಲ್ಲಾ ಆಸತ್ರೆಗಳನ್ನು NTHORC-Non Transplant Human Organ Retrieval Centers ಆಗಿ ಸ್ಥಾಪಿಸಲು ಸರ್ಕಾರವು ಕ್ರಮ ಕೈಗೊಳ್ಳುತ್ತಿದೆ.

ಈಗಾಗಲೇ 26 NTHORC ಗಳನ್ನು ನೋಂದಾಯಿಸಲಾಗಿದೆ. ಅವುಗಳಲ್ಲಿ ನಿಮಾನ್ಸ್, ಬೆಂಗಳೂರು ವೈದ್ಯಕೀಯ ಕಾಲೇಜಿನ ಟ್ರಾಮಾ ಕೇರ್ ಕೂಡ ಸೇರಿದೆ. Institute Of Nephro Urology (NU) ಮತ್ತು Institute of Gastroenterology Sciences & Organ Transplant (IGOT) ನಡೆಯುತ್ತಿವೆ. ಇಲ್ಲಿಯವರೆಗೆ 281 ಬಿಪಿಎಲ್ ರೋಗಿಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿಂದ ಅಂಗಾಂಗ ಕಸಿ ವೆಚ್ಚ ಭರಿಸಲಾಗಿದೆ.

ಇದನ್ನೂ ಓದಿ: KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

ಯಾವ ಧರ್ಮದಲ್ಲೂ ಅಂಗಾಂಗ ದಾನ ನಿಷಿದ್ಧವಿಲ್ಲ, ಕರ್ನಾಟಕ ರಾಜ್ಯದಲ್ಲೇ ಎಲ್ಲಾ ಧರ್ಮದವರು ಅಂಗಾಂಗ ದಾನ ಮಾಡಿರುವ ನಿದರ್ಶನಗಳಿವೆ. ಕೆ.ಎಲ್.ಇ ಆಸ್ಪತ್ರೆಯ ವೈದ್ಯರುಗಳು ನಡೆಸಿರುವ ವಿಶೇಷ ಅಂಗಾಂಗ ಕಸಿಯಲ್ಲಿ ಯಾವುದೇ ಧರ್ಮದ ತಾರತಮ್ಯವಿಲ್ಲದೆ ಹಿಂದೂ ಹೃದಯ ದಾನಿಯಿಂದ ಪಡೆದ ಅಂಗವನ್ನು ಕ್ರಿಶ್ಚಿಯನ್ ವೈದ್ಯರು ಮುಸ್ಲಿಂ ರೋಗಿಯ ದೇಹಕ್ಕೆ ಕಸಿ ಮಾಡಿ ಭಾವೈಕತೆ ಸಾರಿದ್ದಾರೆ.

Continue Reading

ಆರೋಗ್ಯ

Ginger Benefits: ಮಳೆಗಾಲದ ಸೋಂಕುಗಳಿಗೆ ಬೇಕು ಶುಂಠಿಯೆಂಬ ಮದ್ದು!

Ginger Benefits: ಅಡುಗೆಯನ್ನು ರುಚಿಗಟ್ಟಿಸುವ ಕೆಲಸದ ಜೊತೆಗೆ ಇನ್ನೂ ಎಷ್ಟೋ ರೀತಿಯಲ್ಲಿ ನಮ್ಮ ಸ್ವಾಸ್ಥ್ಯ ರಕ್ಷಣೆಯಲ್ಲಿ ಶುಂಠಿ ಸಹಾಯ ಮಾಡಬಲ್ಲದು. ಮಳೆಗಾಲದಲ್ಲಿ ಆಗಾಗ ಕಾಡುವ ಜ್ವರ-ಶೀತ-ಕೆಮ್ಮಿನಂಥ ಸೋಂಕುಗಳ ಜೊತೆ ಹೋರಾಡುವುದಕ್ಕೆ, ಆಗೀಗ ವಕ್ಕರಿಸಿಕೊಳ್ಳುವ ಅಜೀರ್ಣವನ್ನು ಸರಿಪಡಿಸುವುದಕ್ಕೆ, ಜೀರ್ಣಾಂಗಗಳ ಆರೋಗ್ಯವನ್ನು ಚೆನ್ನಾಗಿರಿಸುವುದಕ್ಕೆ… ನೋಡೋಣ ಇನ್ನೂ ಏನೆಲ್ಲ ಉಪಯೋಗಿ ಗುಣಗಳಿವೆ ಶುಂಠಿಗೆ!

VISTARANEWS.COM


on

ginger
Koo

ಕೆಲವು ಸರಳವಾದ ಅಡುಗೆಮನೆಯ ವಸ್ತುಗಳು ಸೋಂಕು ನಿವಾರಣೆಗೆ, ಆರೋಗ್ಯ ರಕ್ಷಣೆಗೆ ಮತ್ತು ಉರಿಯೂತ ಶಮನದಂಥ ಮಹತ್ವದ ಕೆಲಸಗಳಲ್ಲಿ ನೆರವಾಗಬಲ್ಲವು. ಉದಾ, ಶುಂಠಿಯ ಬೇರನ್ನೇ ತೆಗೆದುಕೊಂಡರೆ, ಅಡುಗೆಯನ್ನು ರುಚಿಗಟ್ಟಿಸುವ ಕೆಲಸದ ಜೊತೆಗೆ ಇನ್ನೂ ಎಷ್ಟೋ ರೀತಿಯಲ್ಲಿ ನಮ್ಮ ಸ್ವಾಸ್ಥ್ಯ ರಕ್ಷಣೆಯಲ್ಲಿ ಇದು ಸಹಾಯ ಮಾಡಬಲ್ಲದು. ಮಳೆಗಾಲದಲ್ಲಿ ಆಗಾಗ ಕಾಡುವ ಜ್ವರ-ಶೀತ-ಕೆಮ್ಮಿನಂಥ ಸೋಂಕುಗಳ ಜೊತೆ ಹೋರಾಡುವುದಕ್ಕೆ, ಆಗೀಗ ವಕ್ಕರಿಸಿಕೊಳ್ಳುವ ಅಜೀರ್ಣವನ್ನು ಸರಿಪಡಿಸುವುದಕ್ಕೆ, ಜೀರ್ಣಾಂಗಗಳ ಆರೋಗ್ಯವನ್ನು ಚೆನ್ನಾಗಿರಿಸುವುದಕ್ಕೆ- ನೋಡಿ, ಎಷ್ಟೊಂದು ಕೆಲಸಗಳಲ್ಲಿ ಶುಂಠಿಯ ಪರಿಚಾರಿಕೆ ನಮ್ಮ ಗಮನಕ್ಕೇ ಬರುವುದಿಲ್ಲ. ಇನ್ನೂ ಏನೆಲ್ಲ ಲಾಭಗಳಿವೆ ಇದನ್ನು ಸೇವಿಸುವಲ್ಲಿ ಮತ್ತು ಹೇಗೆಲ್ಲ ಶುಂಠಿಯನ್ನು ನಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು (Ginger Benefits) ಎಂಬುದನ್ನು ನೋಡೋಣ.

Antioxidants in it keep immunity strong Benefits Of Mandakki

ಪ್ರತಿರೋಧಕ ಶಕ್ತಿ

ಶುಂಠಿಯಲ್ಲಿರುವ ಜಿಂಜರಾಲ್‌ ಮತ್ತು ಶೋಗಾಲ್‌ನಂಥ ಅಂಶಗಳ ಬಗ್ಗೆ ವಿಸ್ತೃತವಾಗಿ ಅಧ್ಯಯನಗಳು ನಡೆದಿವೆ. ದೇಹದ ರಕ್ಷಣಾ ಕಾಯಗಳನ್ನು ಪ್ರಚೋದಿಸುವ ಇದರ ಶಕ್ತಿಯೇ ಈ ಎಲ್ಲ ಕುತೂಹಲಗಳಿಗೆ ಕಾರಣ. ಸೋಂಕುಗಳಿದ್ದಾಗ ನೆಗಡಿ, ಕೆಮ್ಮು, ಕಫ, ಮೈ-ಕೈ ನೋವು ಮುಂತಾದ ಲಕ್ಷಣಗಳಿರುವಾಗ, ಶುಂಠಿಯ ಚಹ, ಕಷಾಯಗಳ ಸೇವನೆಯಿಂದ ಅನಾರೋಗ್ಯದ ಅವಧಿಯನ್ನು ಮೊಟಕುಗೊಳಿಸಬಹುದು ಎಂಬುದು ಮಹತ್ವದ್ದು. ಹಾಗಾಗಿ ಮಳೆಗಾಲದ ದಿನಗಳಲ್ಲಿ ಒಂದು ಖಡಕ್‌ ಶುಂಠಿ ಕಷಾಯ ದೇಹಕ್ಕೆ ಬಹಳಷ್ಟು ಆರಾಮ ನೀಡಬಲ್ಲದು

Improved Digestion Tea Benefits

ಪಚನಕಾರಿ

ಇದರ ಜಿಂಜರಾಲ್‌ ಅಂಶವು ಜೀರ್ಣಾಂಗಗಳನ್ನು ಚುರುಕು ಮಾಡುತ್ತದೆ. ಜಠರದಲ್ಲಿ ಅಗತ್ಯಕ್ಕಿಂತ ಹೆಚ್ಚು ಸಮಯ ಉಳಿಯಲು ಬಿಡದಂತೆ ಆಹಾರವನ್ನು ಮುಂದೂಡುತ್ತದೆ. ಇದರಿಂದ ಅಜೀರ್ಣ, ಹೊಟ್ಟೆಯುಬ್ಬರ, ಮಲಬದ್ಧತೆಯಂಥ ಸಮಸ್ಯೆಗಳನ್ನು ದೂರ ಮಾಡಲು ಸಾಧ್ಯ. ಕೆಲವು ಸಂದರ್ಭಗಳಲ್ಲಿ ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಹೆಚ್ಚಿನ ಪರಿಣಾಮ ಕಾಣಬಹುದು. ಆದರೆ ಖಾಲಿ ಹೊಟ್ಟೆಯಲ್ಲಿ ಶುಂಠಿ ಸೇವಿಸುವುದು ಕೆಲವರಿಗೆ ಹೊಂದಿಕೆಯಾಗದಿರುವ ಸಾಧ್ಯತೆಯಿದೆ.

ಉತ್ಕರ್ಷಣ ವಿರೋಧಿ

ಶುಂಠಿಯಲ್ಲಿ ಹಲವು ರೀತಿಯ ಪ್ರಬಲ ಉತ್ಕರ್ಷಣ ನಿರೋಧಕಗಳಿವೆ. ದೇಹದಲ್ಲಿ ಉರಿಯೂತ ನಿವಾರಣೆಗೆ ಉತ್ತಮ ಮದ್ದು ಇದು ಎಂಬುದು ಈಗಾಗಲೇ ತಿಳಿದಿರುವ ವಿಷಯ. ಯಾವುದೇ ಸೋಂಕುಗಳ ಬೆನ್ನಿಗೆ ಉರಿಯೂತ ಭುಗಿಲೇಳುವುದು ಸಾಮಾನ್ಯ. ಇದರಿಂದ ಗಂಟುಗಳಲ್ಲಿ ನೋವು, ಶ್ವಾಸನಾಳದಲ್ಲಿ ಕಫ ಬಿಗಿಯುವುದು ಮುಂತಾದ ಹಲವು ತೊಂದರೆಗಳು ಕಾಣುತ್ತವೆ. ಇಂಥ ದಿನಗಳಲ್ಲಿ ಶುಂಠಿಯ ಬಳಕೆಯನ್ನು ಹೆಚ್ಚಿಸಿದರೆ ಬೇಗನೇ ಆರಾಮ ದೊರೆಯುತ್ತದೆ.

Let go of superstitions about food first eat what the doctor says Losing Weight While Pregnant

ಗರ್ಭಿಣಿಯರಿಗೆ

ಬೆಳಗಿನ ಹೊತ್ತು ವಾಂತಿ, ಓಕರಿಕೆಯಂಥ ಮಾರ್ನಿಂಗ್‌ ಸಿಕ್‌ನೆಸ್‌ನಿಂದ ಒದ್ದಾಡುತ್ತಿರುವ ಗರ್ಭಿಣಿಯರಿಗೆ ಶುಂಠಿ ನೆರವಾಗಬಲ್ಲದು. ಹಸಿ ಶುಂಠಿಯ ರಸ, ಕಷಾಯ ಅಥವಾ ಶುಂಠಿಯನ್ನೇ ಬಾಯಲ್ಲಿರಿಸಿಕೊಂಡರೂ, ಹೊಟ್ಟೆ ತೊಳೆಸುವುದನ್ನು ಕಡೆಯಬಹುದು. ಪರಂಪರಾಗತ ಔಷಧಿಯಲ್ಲಿ ಈ ಸಮಸ್ಯೆಗೆ ಶುಂಠಿಯೇ ಮದ್ದು.

ಮಧುಮೇಹಿಗಳಿಗೆ

ದೇಹದ ಚಯಾಪಚಯ ಹೆಚ್ಚಿಸುವ ಇದರ ಸಾಮರ್ಥ್ಯದಿಂದಾಗಿ ಮಧುಮೇಹಿಗಳು ಇದನ್ನು ತಮ್ಮ ಆಹಾರದ ಭಾಗವಾಗಿಸಿಕೊಳ್ಳಬಹುದು. ಜೀರ್ಣಕ್ರಿಯೆಯನ್ನು ಸರಾಗ ಮಾಡಿ, ರಕ್ತದಲ್ಲಿ ಸಕ್ಕರೆಯಂಶ ಧಿಡೀರ್‌ ಏರದಂತೆ ಇದು ತಡೆಯಬಲ್ಲದು. ಜೊತೆಗೆ ರಕ್ತ ಪರಿಚಲನೆಯನ್ನೂ ಇದು ಉತ್ತೇಜಿಸುವುದರಿಂದ, ಅಂಗಾಂಗಗಳ ಯೋಗಕ್ಷೇಮ ಕಾಪಾಡುವಲ್ಲೂ ಶುಂಠಿ ಸಹಕಾರಿ.

ಇದನ್ನೂ ಓದಿ: Nita Ambani Beauty Secrets: ನೀತಾ ಅಂಬಾನಿ ನಿತ್ಯವೂ ಕುಡಿಯುವ ಆರೋಗ್ಯಕರ ಮ್ಯಾಜಿಕ್‌ ಡ್ರಿಂಕ್‌ ಯಾವುದು ಗೊತ್ತೇ? ನಾವೂ ಕುಡಿಯಬಹುದು!

ತೂಕ ನಿರ್ವಹಣೆ

ದೇಹದ ಚಯಾಪಚಯ ಹೆಚ್ಚಿಸಿ, ಕೊಬ್ಬು ಕಡಿತ ಮಾಡುವಲ್ಲಿ ಶುಂಠಿ ಅತ್ಯಂತ ಪ್ರಯೋಜನಕಾರಿ. ಅನಗತ್ಯ ಹಸಿವೆಯನ್ನು ನಿರ್ಬಂಧಿಸಿ, ತಿಂದಿದ್ದೆಲ್ಲ ಸೂಕ್ತ ರೀತಿಯಲ್ಲಿ ರಕ್ತ ಸೇರುವಂತೆ ಮಾಡುವುದರಿಂದ, ಆಹಾರ ಸೇವನೆಯ ಸಂತೃಪ್ತಿ ಹೆಚ್ಚುತ್ತದೆ. ಈ ಎಲ್ಲ ಕಾರಣಗಳಿಂದಾಗಿ ತೂಕ ನಿರ್ವಹಣೆಯಲ್ಲಿ ಸವಾಲುಗಳಿದ್ದರೆ, ಶುಂಠಿಯನ್ನು ಆಹಾರದಲ್ಲಿ ಸೇರಿಸಿಕೊಂಡು ಪ್ರಯತ್ನಿಸಬಹುದು. ಆದರೊಂದು, ಬೆಳಗಿನ ಖಾಲಿ ಹೊಟ್ಟೆಯಲ್ಲಿ ಜಿಂಜರ್‌ ಶಾಟ್‌ಗಳನ್ನು ಸೇವಿಸುವ ಮುನ್ನ ಅಥವಾ ಅತಿಯಾಗಿ ಶುಂಠಿಯನ್ನು ಬಳಸುವ ಮುನ್ನ, ಅವರವರ ಆರೋಗ್ಯಕ್ಕೆ ಇದು ಎಷ್ಟು ಒಗ್ಗುತ್ತದೆ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಸೂಕ್ತ.

Continue Reading

ಆರೋಗ್ಯ

Red Spinach Benefits: ಕೆಂಪು ಹರಿವೆ; ಇದು ಕೇವಲ ಸೊಪ್ಪಲ್ಲ, ಪೋಷಕಾಂಶಗಳ ಪವರ್‌ಹೌಸ್‌!

Red Spinach Benefits: ಚಳಿಗಾಲ ಬಂದರೆ, ಸೊಪ್ಪಿನದೇ ಸಾಮ್ರಾಜ್ಯ. ಚಳಿಗಾಲವನ್ನು ಹೊರತಾಗಿಯೂ ಎಲ್ಲ ಕಾಲಗಳಲ್ಲೂ ದೊರೆಯುವ ಕೆಲವು ಸೊಪ್ಪುಗಳಿಗೆ ನಿರಂತರವಾಗಿ ಸ್ಥಾನ ಇದ್ದೇ ಇರುತ್ತದೆ. ಅಂತಹ ಸೊಪ್ಪುಗಳ ಪೈಕಿ ಹರಿವೆ ಸೊಪ್ಪೂ ಒಂದು. ಹರಿವೆ ಸೊಪ್ಪಿನಲ್ಲಿ ಹಲವು ಬಗೆಗಳಿದ್ದರೂ ಕೆಂಪು ಹರಿವೆಗೆ ವಿಶೇಷ ಸ್ಥಾನ. ಪೋಷಕಾಂಶದ ವಿಷಯದಲ್ಲೂ ಇದೇ ನಂಬರ್‌ ವನ್‌.

VISTARANEWS.COM


on

Red Spinach Benefits
Koo

ಭಾರತೀಯರ ಮನೆಗಳಲ್ಲಿ ಸೊಪ್ಪಿನಡುಗೆಗೆ ವಿಶೇಷವಾದ ಸ್ಥಾನವಿದೆ. ಚಳಿಗಾಲ ಬಂದರೆ, ಸೊಪ್ಪಿನದೇ ಸಾಮ್ರಾಜ್ಯ. ಚಳಿಗಾಲವನ್ನು ಹೊರತಾಗಿಯೂ ಎಲ್ಲ ಕಾಲಗಳಲ್ಲೂ ದೊರೆಯುವ ಕೆಲವು ಸೊಪ್ಪುಗಳಿಗೆ ನಿರಂತರವಾಗಿ ಸ್ಥಾನ ಇದ್ದೇ ಇರುತ್ತದೆ. ಅಂತಹ ಸೊಪ್ಪುಗಳ ಪೈಕಿ ಹರಿವೆ ಸೊಪ್ಪೂ ಒಂದು. ಹರಿವೆ ಸೊಪ್ಪಿನಲ್ಲಿ ಹಲವು ಬಗೆಗಳಿದ್ದರೂ ಕೆಂಪು ಹರಿವೆಗೆ ವಿಶೇಷ ಸ್ಥಾನ. ಪೋಷಕಾಂಶದ ವಿಷಯದಲ್ಲೂ ಇದೇ ನಂಬರ್‌ ವನ್‌. ಕೆಂಪು ಹರಿವೆ (Red Spinach Benefits) ಕೇವಲ ಬಣ್ಣದಿಂದ ಮಾತ್ರ ಕೆಂಪಲ್ಲ. ಬಣ್ಣದಿಂದ ಯಾವ ಬದಲಾವಣೆಯೂ ಇಲ್ಲ ಎಂದುಕೊಳ್ಳಬೇಡಿ. ಕೆಂಬಣ್ಣದ ಹರಿವೆಯಲ್ಲಿ ಸಾಮಾನ್ಯ ಹರಿವೆಗಿಂತ ಹೆಚ್ಚು ಪೋಷಕಾಂಶಗಳಿವೆ. ಇದು ಆರೋಗ್ಯದ ವಿಚಾರದಲ್ಲಿ ಅಪ್ಪಟ ಚಿನ್ನ. ಇದರಲ್ಲಿ ವಿಟಮಿನ್‌ ಇ, ಸಿ ಮತ್ತು ಕೆ ಹೇರಳವಾಗಿದ್ದು, ಕಬ್ಬಿಣಾಂಶ ಹಾಗೂ ಕ್ಯಾಲ್ಶಿಯಂನಂತಹ ಅತ್ಯಗತ್ಯ ಖನಿಜಾಂಶಗಳೂ ಹೇರಳವಾಗಿವೆ. ಆಂಟಿ ಆಕ್ಸಿಡೆಂಟ್‌ಗಳಿಂದ ಶ್ರೀಮಂತವಾಗಿದ್ದು, ಇದು ಒಟ್ಟು ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ.

Weight Loss Slim Body Healthy Lifestyle Concept Benefits Of Saffron

ತೂಕ ಇಳಿಕೆಗೆ

ಯಾರಾದರೂ, ತೂಕ ಇಳಿಸಬೇಕೆಂಬ ಯೋಚನೆಯಲ್ಲಿದ್ದರೆ ಅಂಥವರಿಗೆ ಇದು ಅತ್ಯಂತ ಉತ್ತಮವಾದ ಆಹಾರ. ಯಾಕೆಂದರೆ, ಇದರಲ್ಲಿ ಕಡಿಮೆ ಕ್ಯಾಲರಿಯಿದ್ದು, ನಾರಿನಂಶವೂ ಹೇರಳವಾಗಿದೆ. ಜೊತೆಗೆ ಬೇಕಾದ ಎಲ್ಲ ಪೋಷಕಾಂಶಗಳೂ ಭರಪೂರ ಇವೆ. ಫಿಟ್‌ನೆಸ್‌ ಕಾಪಾಡಿಕೊಳ್ಳಲು ಬೇಕಾದ ಎಲ್ಲವೂ ಇದರಲ್ಲಿದೆ. ಹೆಚ್ಚು ಹೊತ್ತು ಹೊಟ್ಟೆ ಫುಲ್‌ ಆದ ಅನುಭವ ನೀಡುವ ಕಾರಣ ಬೇರೆ ಆಗಾಗ ಏನಾದರೂ ತಿನ್ನಲು ಅನವಶ್ಯಕ ಪ್ರಚೋದನೆಯಾಗದು.

ಮಲಬದ್ಧತೆ ನಿವಾರಣೆಗೆ

ತೂಕದ ವಿಚಾರವನ್ನು ಹೊರತುಪಡಿಸಿದರೆ, ಮಲಬದ್ಧತೆಯ ಸಮಸ್ಯೆಯಿರುವ ಮಂದಿಗೂ ಇದು ಒಳ್ಳೆಯದು. ಜೀರ್ಣಕ್ರಿಯೆಗೆ ಇದು ಅತ್ಯಂತ ಒಳ್ಳೆಯದು. ಇದರಲ್ಲಿರುವ ನಾರಿನಂಶ, ಮಲಬದ್ಧತೆಯ ಸಮಸ್ಯೆಯನ್ನು ದೂರ ಓಡಿಸುತ್ತದೆ. ಇದನ್ನು ಸೇವಿಸಿದರೆ, ಬೆಳಗ್ಗೆ ಎದ್ದ ಕೂಡಲೇ ಖಂಡುತವಾಗಿಯೂ ಆರಾಮವಾಗಿ ಸುಖವಾಗಿ ಶೌಚ ಮುಗಿಸಿಕೊಳ್ಳುವಿರಿ. ಹೊಟ್ಟೆ ಹಗುರವಾಗಿ, ದೇಹ ಚುರುಕಾಗಿ ಇರಲು ಇದು ಅತ್ಯಂತ ಸೂಕ್ತವಾದ ಆಹಾರ. ಯಾವ ಔಷಧಿಗಳ ಸಹಾಯವೂ ಇಲ್ಲದೆ ಮಲಬದ್ಧತೆಯ ವಿರುದ್ಧ ಜಯ ಸಾಧಿಸಬಹುದು. ಈ ಕೆಂಪು ಹರಿವೆ ಸೊಪ್ಪಿನ ಇನ್ನೊಂದು ಪ್ರಮುಖ ಲಾಭವೆಂದರೆ ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿ ಪ್ರೊಟೀನ್‌ ಹಾಗೂ ವಿಟಮಿನ್‌ ಕೆ ಇರುವುದರಿಂದ, ಋತುಮಾನಕ್ಕೆ ಅನುಸಾರವಾಗಿ ಬರುವ ಆರೋಗ್ಯ ಸಮಸ್ಯೆಗಳನ್ನು ದೂರ ಓಡಿಸುತ್ತದೆ. ಅವುಗಳು ಬರದಂತೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯ ಭದ್ರ ಕೋಟೆಯನ್ನು ಬೆಳೆಸುತ್ತದೆ.

ಇದನ್ನೂ ಓದಿ: Nutrients For The Human Body: ನಮ್ಮ ದೇಹವೆಂಬ ಕಾರ್ಯಾಲಯದಲ್ಲಿ ಕೆಲಸ ಮಾಡುವ 22 ಪೋಷಕಾಂಶಗಳ ಬಗ್ಗೆ ನಿಮಗೆ ಗೊತ್ತೇ?

ಎಲುಬಿನ ಸದೃಢತೆಗೆ

ಎಲುಬು ಗಟ್ಟಿಯಾಗಬೇಕು ಎಂದರೆ ನೀವು ಖಂಡಿತವಾಗಿಯೂ ಈ ಕೆಂಪು ಹರಿವೆ ಸೊಪ್ಪನ್ನು ಕಂಡಾಗಲೆಲ್ಲ ಖರೀದಿಸಿ ತಂದೇ ತರುವಿರಿ. ಸೊಪ್ಪನ್ನು ಶುಚಿಗೊಳಿಸಿ ಅಡುಗೆ ಮಾಡುವ ಕೆಲಸ ಸ್ವಲ್ಪ ತ್ರಾಸದಾಯಕವಾದರೂ, ಇದರ ಲಾಭ ಕೇಳಿದರೆ, ಅಂತಹ ತೊಂದರೆ ತೆಗೆದುಕೊಳ್ಳುವುದರಲ್ಲಿ ತಪ್ಪಿಲ್ಲ ಎಂದು ನಿಮೇ ಅನಿಸುತ್ತದೆ. ಕೆಂಪು ಹರಿವೆಯಲ್ಲಿ ಹೇರಳವಾಗಿ ಕ್ಯಾಲ್ಶಿಯಂ, ಕಬ್ಬಿಣಾಂಶ ಹಾಗೂ ಪ್ರೊಟೀನ್‌ ಇರುವುದರಿಂದ ಮೂಳೆ ಗಟ್ಟಿಯಾಗಲು, ರಕ್ತ ದೇಹದಲ್ಲಿ ತುಂಬಿಕೊಳ್ಳಲು ಬಹಳಷ್ಟು ಸಹಾಯ ಮಾಡುತ್ತದೆ. ಕೆಂಪು ಹರಿವೆ ಸೊಪ್ಪನ್ನು ಅಡುಗೆ ಮಾಡಲು ಕಷ್ಟವೇನಿಲ್ಲ. ನೀವು ಮಾಡುವ ದಾಲ್‌ನಲ್ಲಿ ಇದರ ಸೊಪ್ಪನ್ನು ಕತ್ತರಿಸಿ ಹಾಕಬಹುದು. ಅಥವಾ ಸೊಪ್ಪಿನ ಸಾರು ಮಾಡಬಹುದು. ಸೊಪ್ಪು ತುಂಬ ಇದ್ದರೆ ಅದನ್ನು ಪಲ್ಯ ಮಾಡಬಹುದು. ಚಪಾತಿ ಹಿಟ್ಟಿನ ಜೊತೆಗೆ ಕಲಸಿಕೊಂಡು ಸೊಪ್ಪಿನ ಪರಾಠಾ ಮಾಡಬಹುದು. ಅಥವಾ ಇನ್ನೂ ಹಲವಾರು ಆಯ್ಕೆಗಳಿವೆ. ಯಾವುದಾದರೊಂದು ಬಗೆಯ ಅಡುಗೆ ಮೂಲಕ ಆಗಾಗ ಇದನ್ನು ನಮ್ಮ ದೇಹ ಸೇರುವಂತೆ ನೋಡಿಕೊಳ್ಳಬಹುದು. ಹಾಗಾಗಿ, ಮಾರುಕಟ್ಟೆಯಲ್ಲಿ ಹರಿವೆ ಸೊಪ್ಪು ಕಂಡಾಗ ಬಿಟ್ಟು ಬರಬೇಡಿ.

Continue Reading
Advertisement
Jaskaran Singh
ಸ್ಯಾಂಡಲ್ ವುಡ್8 mins ago

Jaskaran Singh: ಕನ್ನಡತಿಯ್ನನೇ ಮದುವೆ ಆಗುವೆ ಎಂದ ‘ದ್ವಾಪರ’ ಹಾಡಿನ ಗಾಯಕ ಜಸ್‌ಕರಣ್‌ ಸಿಂಗ್!

Viral Video
ವೈರಲ್ ನ್ಯೂಸ್13 mins ago

Viral Video: ಸೆಲ್ಫಿ ತೆಗೆಯಲು ಹೋಗಿ 100 ಅಡಿ ಆಳದ ಕಮರಿಗೆ ಬಿದ್ದ ಮಹಿಳೆ!

Western Ghats
ಕರ್ನಾಟಕ20 mins ago

Western Ghats: ನಾಳೆಯಿಂದ ಪಶ್ಚಿಮ ಘಟ್ಟದಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ

Viral Video
ವೈರಲ್ ನ್ಯೂಸ್28 mins ago

Viral Video: ವಧುವಿಗೆ ಮಾಲೆ ಹಾಕಬೇಕು ಎನ್ನುವಷ್ಟರಲ್ಲಿ ಮೂರ್ಛೆ ಹೋದ ವರ! ವಿಡಿಯೊ ನೋಡಿ

Chennai Super Kings
ಕ್ರಿಕೆಟ್44 mins ago

Chennai Super Kings : ಮಹಿಳೆಯರ ಪ್ರೀಮಿಯರ್ ಲೀಗ್​ಗೆ ಎಂಟ್ರಿ ಪಡೆಯಲಿದೆ ಚೆನ್ನೈ ಸೂಪರ್ ಕಿಂಗ್ಸ್​

BSF DG Row
ದೇಶ48 mins ago

BSF DG Row: ಬಿಎಸ್‌ಎಫ್‌ ಮುಖ್ಯಸ್ಥ ನಿತಿನ್‌ ಅಗರ್ವಾಲ್‌ ತಲೆದಂಡಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ

Lovlina Borgohain
ಕ್ರೀಡೆ59 mins ago

Lovlina Borgohain : ಲವ್ಲಿನಾ ಬೊರ್ಗೊಹೈನ್​​ಗೆ ಸೋಲು; ಒಲಿಂಪಿಕ್ಸ್​​ನಲ್ಲಿ ಭಾರತದ ಬಾಕ್ಸಿಂಗ್ ಅಭಿಯಾನ ಅಂತ್ಯ

ಕರ್ನಾಟಕ1 hour ago

‌MB Patil: ಕುಮಾರಸ್ವಾಮಿಯದು ಅವಕಾಶವಾದಿ ಮೈತ್ರಿ ಎಂದ ಎಂ.ಬಿ. ಪಾಟೀಲ್

Bangladesh
ವಿದೇಶ2 hours ago

Bangladesh: ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಹಿಂಸಾಚಾರ; 32 ಜನ ಸಾವು

Road Accident
ವಿಜಯಪುರ2 hours ago

Road Accident : ಅಮಾವಾಸ್ಯೆಗೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಬೈಕ್‌ ಸವಾರ ಅಪಘಾತಕ್ಕೆ ಬಲಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ6 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌