Health Tips: ಬೆಳ್ಳಂಬೆಳಗ್ಗೆ ಶೌಚವೇ ಒಂದು ಸಮಸ್ಯೆ: ಸುಲಭ ಶೌಚಕ್ಕೆ ಪಂಚಸೂತ್ರಗಳು! - Vistara News

ಆರೋಗ್ಯ

Health Tips: ಬೆಳ್ಳಂಬೆಳಗ್ಗೆ ಶೌಚವೇ ಒಂದು ಸಮಸ್ಯೆ: ಸುಲಭ ಶೌಚಕ್ಕೆ ಪಂಚಸೂತ್ರಗಳು!

ಕೆಲವು ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳುತ್ತಾ ಬಂದರೆ ಶೌಚಾದಿ ಕ್ರಿಯೆಗಳು ಸಹಜವಾಗಿ ಬೆಳಗ್ಗೆಯೇ ಆಗಿಬಿಡುತ್ತದೆ. ಅಂತಹ ಸರಳ ವಿಧಾನಗಳು ಯಾವುವು ಎಂಬುದನ್ನು ನೋಡೋಣ.

VISTARANEWS.COM


on

stomach health
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆಯುರ್ವೇದದಲ್ಲಿ ಒಂದು ಮಾತಿದೆ. ಬೆಳಗ್ಗೆ ಎದ್ದ ಕೂಡಲೇ ಶೌಚಾದಿ ಕ್ರಿಯೆಗಳು ಸಹಜವಾಗಿ ಆದರೆ, ಆ ವ್ಯಕ್ತಿಯ ಪಚನಶಕ್ತಿ ಸರಿಯಾಗಿದೆ (stomach health) ಹಾಗೂ ಆತ/ಕೆ ಆರೋಗ್ಯವಾಗಿದ್ದಾರೆ ಎಂದು. ಬೆಳಗಿನ ಶೌಚವೊಂದೇ ನಮ್ಮ ಆರೋಗ್ಯದ ಪರಿಸ್ಥಿತಿಯನ್ನು ವಸ್ತುನಿಷ್ಠವಾಗಿ ಹೇಳಿಬಿಡುತ್ತದೆ. ಬೆಳಗ್ಗೆ ಎದ್ದ ಕೂಡಲೇ ಹಲ್ಲುಜ್ಜಿದಷ್ಟೇ ಸಹಜವಾಗಿ ನಿತ್ಯಕರ್ಮವನ್ನೂ ಮಾಡಿ ಮುಗಿಸಿದರೆ, ದೇಹ ಹಗುರ, ಲವಲವಿಕೆಯಿಂದ ಚುರುಕಾಗಿ ಇಡೀ ದಿನ ಚೈತನ್ಯದಾಯಕವಾಗಿರುತ್ತದೆ. ಇಂಥದ್ದೊಂದು ಸರಳ, ಸಹಜ ಕ್ರಿಯೆ ಬಹಳಷ್ಟು ಮಂದಿಗೆ ಅಷ್ಟು ಸರಳವಲ್ಲ. ಬೆಳಗ್ಗೆ ಎದ್ದ ಕೂಡಲೇ ಮಲವಿಸರ್ಜನೆ ಆದರೂ ಆಗಬಹುದು, ಆಗದೆಯೂ ಇರಬಹುದು. ದಿನದ ಎಷ್ಟೋ ಹೊತ್ತಿಗೆ ಅಥವಾ ಯಾವುದೋ ಒಂದು ಹೊತ್ತಿನಲ್ಲಿ ನಿತ್ಯವೂ ಆಗಬಹುದು, ಅಥವಾ ಇನ್ನೂ ಕೆಲವರಿಗೆ ಎದ್ದು ಸ್ವಲ್ಪ ಹೊತ್ತಿನ ನಂತರ ಬಿಸಿನೀರು ಕುಡಿದರಷ್ಟೇ ವಿಸರ್ಜನೆಯಾಗಬಹುದು. ಇನ್ನೂ ಕೆಲವರಿಗೆ ತಿಂಡಿ ತಿಂದರಷ್ಟೇ ಶೌಚ ರೆಡಿಯಾಗಬಹುದು. ಬಗೆಬಗೆಯ ರೂಢಿಗಳಿಗೆ ದೇಹ ಹೊಂದಿಕೊಂಡಿಬಿಟ್ಟಿರುತ್ತದೆ. ಆದರೂ, ಎದ್ದ ಕೂಡಲೇ ನಿತ್ಯಕರ್ಮಗಳು ಸರಾಗವಾಗಿ ಆಗಿಬಿಡುವುದು ಆರೋಗ್ಯದ ಲಕ್ಷಣ.

ಹಾಗಾದರೆ, ಈ ಅಭ್ಯಾಸವನ್ನು ರೂಢಿಸಿಕೊಳ್ಳುವುದು ಹೇಗೆ ಎಂಬ ಚಿಂತೆಯೇ? ಅಥವಾ, ಇದು ನನ್ನ ದೇಹಕ್ಕೆ ಸರಿ ಹೊಂದುವುದಿಲ್ಲ, ನನ್ನ ಅಭ್ಯಾಸ ಹೀಗೆಯೇ ಎನ್ನುತ್ತೀರಾ? ಆದರೆ ಕೆಲವು ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಳ್ಳುತ್ತಾ ಬಂದರೆ ಶೌಚಾದಿ ಕ್ರಿಯೆಗಳು ಸಹಜವಾಗಿ ಬೆಳಗ್ಗೆಯೇ ಆಗಿಬಿಡುತ್ತದೆ. ಅಂತಹ ಸರಳ ವಿಧಾನಗಳು ಯಾವುವು ಎಂಬುದನ್ನು ನೋಡೋಣ.

1. ಸರಿಯಾಗಿ ನೀರು ಕುಡಿಯಿರಿ: ದೇಹಕ್ಕೆ ನೀರು ಅತ್ಯಂತ ಅಗತ್ಯ. ನೀರು ಸರಿಯಾಗಿ ಕುಡಿಯದಿರುವುದಕ್ಕೂ ನಿಮ್ಮ ಶೌಚಕ್ಕೂ ಸಂಬಂಧವಿದೆ. ದೇಹಕ್ಕೆ ಅಗತ್ಯವಿರುವಷ್ಟು ನೀರು ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಿ. ನೀರು ದೇಹದ ಕಶ್ಮಲಗಳನ್ನು ಸುಲಭವಾಗಿ ಹೊರಕ್ಕೆ ಕಳಿಸಲು ಸಹಾಯ ಮಾಡುತ್ತದೆ. ಪಚನಕ್ರಿಯೆಯನ್ನೂ ಚುರುಕುಗೊಳಿಸುತ್ತದೆ.

2. ನಾರಿನಂಶವನ್ನು ಆಹಾರದಲ್ಲಿ ಸೇರಿಸಿ: ಸರಿಯಾಗಿ ಸಹಜವಾಗಿ ಮಲವಿಸರ್ಜನೆ ಆಗುತ್ತಿಲ್ಲ ಎಂದಾದರೆ ನೀವು ಸರಿಯಾಗಿ ನಾರಿನಂಶವನ್ನು ದೇಹಕ್ಕೆ ಪೂರೈಕೆ ಮಾಡುತ್ತಿಲ್ಲ ಎಂದರ್ಥ. ಹಾಗಾಗಿ ಆಹಾರದಲ್ಲಿ ನಾರಿನಂಶವನ್ನೂ ಸೇರಿಸಿ. ಧಾನ್ಯ, ಬೇಳೆಕಾಳು, ಸಾಕಷ್ಟು ಹಣ್ಣು ತರಕಾರಿಗಳಿರಲಿ.

3. ಸಮಯ ಪಾಲನೆ ಮಾಡಿ: ಆಹಾರ ಸೇವನೆಗೆ ಒಂದು ನಿಗದಿತ ಸಮಯವಿರಲಿ. ಬೆಳಗಿನ ಉಪಹಾರ, ಮಧ್ಯಾಹ್ನದೂಟ, ರಾತ್ರಿಯೂಟ ಎಲ್ಲವನ್ನೂ ಸರಿಯಾದ ಸಮಯಕ್ಕೆ ಶಿಸ್ತಿನಿಂದ ಮಾಡಿ. ದೇಹದ ಜೀರ್ಣಾಂಗ ವ್ಯವಸ್ಥೆ ಆ ಸಮಯಕ್ಕೆ ಹೊಂದಿಕೊಳ್ಳಲಿ. ಆಗ ಮಲವಿಸರ್ಜನೆಯೂ ಸಹಜವಾಗಿ ಆಗುತ್ತದೆ.

ಇದನ್ನೂ ಓದಿ: Health tips: ಮಾನಸಿಕ ಒತ್ತಡ, ಉದ್ವೇಗಕ್ಕೆ ಖಂಡಿತ ಬೇಕು ಈ ಹಣ್ಣುಗಳು!

4. ವ್ಯಾಯಾಮ ಮಾಡಿ: ದೇಹವನ್ನು ಚುರುಕಾಗಿಟ್ಟಿರಿ. ದಿನದ ಅರ್ಧ ಗಂಟೆಯಾದರೂ ವ್ಯಾಯಾಮಕ್ಕೆ ಮೀಸಲಿಡಿ. ನಡಿಗೆಯಾದರೂ ಸರಿ, ಯೋಗವಾದರೂ ಸರಿ, ಒಟ್ಟಿನಲ್ಲಿ ಕ್ರಿಯಾಶೀಲರಾಗಿರಿ.

walking

5. ನೈಸರ್ಗಿಕ ಪ್ರಚೋದಕಗಳನ್ನು ಬಳಸಿ: ನೈಸರ್ಗಿಕವಾಗಿ ನಮ್ಮ ದೇಹದ ಪಚನವನ್ನು ಪ್ರಚೋದನೆಗೊಳಿಸುವ ಬಿಸಿನೀರು, ಶುಂಠಿ ಚಹಾ ಇತ್ಯಾದಿಗಳ ಸೇವನೆಯನ್ನೂ ಆಹಾರ ಸೇವನೆಯ ಸ್ವಲ್ಪ ಹೊತ್ತಿನ ನಂತರ ಮಾಡಬಹುದು. ಜೀರಿಗೆ ನೀರು ಕುಡಿಯಬಹುದು. ದೇಹದಲ್ಲಿ ಆಹಾರ ಪಚನವಾಗಲು ಸಹಾಯ ಮಾಡುವ ನೈಸರ್ಗಿಕ ವಿಧಾನಗಳ್ನು ಬಳಸಬಹುದು.

ಇವೆಲ್ಲವುಗಳ ಜೊತೆಗೆ ಶಿಸ್ತುಬದ್ಧ ಜೀವನಕ್ರಮ, ಉತ್ತಮ ಆರೋಗ್ಯಕರ ಆಹಾರ, ಮಾನಸಿಕ ಒತ್ತಡಗಳಿಂದ ದೂರವಿರುವುದು ಇತ್ಯಾದಿಗಳ ಮೇಲೆ ಗಮನ ಇಟ್ಟರೆ ಶೌಚ ಕಷ್ಟದ್ದೇನಲ್ಲ. ನೆನಪಿಡಿ, ಸರಿಯಾಗಿ ಶೌಚ ಆದಲ್ಲಿ ಆರೋಗ್ಯವು ಕೈಬಿಡುವುದಿಲ್ಲ.

ಇದನ್ನೂ ಓದಿ: Health Tips: ಬೇಸಿಗೆಯಲ್ಲಿ ಕೋಲ್ಡ್ ವಾಟರ್ ಕುಡಿಯುವುದು ಅಪಾಯಕಾರಿಯೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Benefits of Bamboo Shoots: ಮೂಳೆಗಳ ನೋವು, ಮಲಬದ್ಧತೆ ನಿವಾರಣೆಗೆ ಎಳೆಯ ಬಿದಿರು ಸೇವನೆ ಮದ್ದು

ನೈಸರ್ಗಿಕವಾಗಿ ಮಳೆಗಾಲದ ಆರಂಭದ (Benefits of Bamboo Shoots) ದಿನಗಳಲ್ಲಿ ಬಿದಿರು ಮೆಳೆಗಳ ಬುಡದಲ್ಲಿ ಕಾಣಸಿಗುವಂಥವು ಇದು. ಅವುಗಳನ್ನು ಮುರಿದು ತಂದು, ಶುಚಿ ಮಾಡಿ, ಸಂಸ್ಕರಿಸಿ, ಖಾದ್ಯ ಯೋಗ್ಯವನ್ನಾಗಿ ಮಾಡಲಾಗುತ್ತದೆ. ಪ್ರೊಟೀನ್‌ಗಳು, ಅಮೈನೊ ಆಮ್ಲಗಳು, ಪಿಷ್ಟ, ಜೀವಸತ್ವಗಳು, ಖನಿಜಗಳಿಂದ ಕಳಲೆ ಸಂಪನ್ನವಾಗಿದ್ದು, ಕೊಬ್ಬಿನಂಶ ಬಹಳ ಕಡಿಮೆಯಿದೆ. ಜೀರ್ಣಾಂಗಗಳ ಆರೋಗ್ಯ ವೃದ್ಧಿಸಿ, ಹೃದಯವನ್ನು ಕಾಪಾಡಿ, ಮೂಳೆ ಮತ್ತು ಚರ್ಮದ ಆರೋಗ್ಯವನ್ನು ವೃದ್ಧಿಸುತ್ತದೆ.

VISTARANEWS.COM


on

Benefits of Bamboo Shoots
Koo

ಬಿದಿರು ಎನ್ನುತ್ತಿದ್ದಂತೆ ದೊಡ್ಡ ಮೆಳೆಗಳೇ (Benefits of Bamboo Shoots) ನಮಗೆ ನೆನಪಾಗುವುದು. ಆದರೆ ಈ ಬೃಹತ್‌ ಮೆಳೆಗಳೂ ಹಿಂದೊಮ್ಮೆ ಎಳೆಯವೇ ಆಗಿದ್ದವಲ್ಲ. ಅಂಥ ಎಳೆಯ ಬಿದಿರು ಅಥವಾ ಮೊಳಕೆಗಳನ್ನು ಕಳಲೆ ಎನ್ನಲಾಗುತ್ತದೆ. ನೈಸರ್ಗಿಕವಾಗಿ ಮಳೆಗಾಲದ ಆರಂಭದ ದಿನಗಳಲ್ಲಿ ಬಿದಿರು ಮೆಳೆಗಳ ಬುಡದಲ್ಲಿ ಕಾಣಸಿಗುವಂಥವು ಇದು. ಅವುಗಳನ್ನು ಮುರಿದು ತಂದು, ಶುಚಿ ಮಾಡಿ, ಸಂಸ್ಕರಿಸಿ, ಖಾದ್ಯ ಯೋಗ್ಯವನ್ನಾಗಿ ಮಾಡಲಾಗುತ್ತದೆ. ತಾಜಾ ಕಳಲೆಗಳನ್ನು ಸರಿಯಾಗಿ ಸಂಸ್ಕರಿಸದಿದ್ದರೆ, ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮಗಳು ಉಂಟಾಗುತ್ತವೆ. ಸೇವನೆಗೆ ಯೋಗ್ಯವಾದ ಇಂಥ ರುಚಿಕರ ಕಳಲೆಗಳನ್ನು ಸಾಂಪ್ರದಾಯಿಕವಾದ ಸಾಂಬಾರು, ಪಲ್ಯಗಳಿಂದ ಹಿಡಿದು, ಆಧುನಿಕ ಖಾದ್ಯಗಳವರೆಗೆ ನಾನಾ ರೀತಿಯಲ್ಲಿ ಉಪಯೋಗಿಸಲಾಗುತ್ತದೆ.
ಸಸ್ಯಾದಿಗಳ ಮೊಳಕೆ ಮತ್ತು ಚಿಗುರುಗಳು ಭರಪೂರ ಪೋಷಕಾಂಶಗಳಿಂದ ತುಂಬಿರುತ್ತವೆ. ಬೆಳೆಯುವ ಸಸ್ಯಗಳಿಗೆ ಬೇಕೆಂಬ ಕಾರಣಕ್ಕಾಗಿ ನಿಸರ್ಗವೇ ಸೃಷ್ಟಿಸಿಕೊಂಡಿರುವ ಮಾರ್ಗವಿದು. ಪ್ರಕೃತಿಯ ಈ ಕೃತಿ ಮಾನವರಿಗೂ ಲಾಭದಾಯಕವಾಗುವುದಿದೆ. ಕಾರಣ, ಇವು ಪೌಷ್ಟಿಕತೆಯಲ್ಲಿ ಮಾತ್ರವಲ್ಲಿ ರುಚಿಯಲ್ಲೂ ಒಂದು ಕೈ ಮೇಲೆಯೇ ಇರುತ್ತವೆ. ಎಳೆಯ ಬಿದಿರು ಅಥವಾ ಕಳಲೆಯನ್ನೂ ಇದೇ ಪಟ್ಟಿಗೆ ಸೇರಿಸಿಕೊಳ್ಳಬಹುದು. ಏನಿವೆ ಇದನ್ನು ತಿನ್ನುವುದರ ಲಾಭಗಳು ಎಂಬುದನ್ನು ಅರಿಯೋಣ

 Bamboo Shoots

ಏನಿವೆ ಇದರಲ್ಲಿ?

ಹಲವಾರು ರೀತಿಯ ಪ್ರೊಟೀನ್‌ಗಳು, ಅಮೈನೊ ಆಮ್ಲಗಳು, ಪಿಷ್ಟ, ಜೀವಸತ್ವಗಳು, ಖನಿಜಗಳಿಂದ ಇದು ಸಂಪನ್ನವಾಗಿದ್ದು, ಕೊಬ್ಬಿನಂಶ ಬಹಳ ಕಡಿಮೆಯಿದೆ. ಸ್ಥೂಲವಾಗಿ ಹೇಳುವುದಾದರೆ, ಜೀರ್ಣಾಂಗಗಳ ಆರೋಗ್ಯ ವೃದ್ಧಿಸಿ, ಹೃದಯವನ್ನು ಕಾಪಾಡಿ, ಮೂಳೆ ಮತ್ತು ಚರ್ಮದ ಆರೋಗ್ಯವನ್ನು ವೃದ್ಧಿಸುತ್ತದೆ. ಮಾತ್ರವಲ್ಲ, ದೇಹದಲ್ಲಿ ಕೊಬ್ಬು ಕಡಿಮೆ ಮಾಡಲೂ ನೆರವಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ, ಪಿಟ್ಯುಟರಿ ಮತ್ತು ಥೈರಾಯ್ಡ್‌ ಗ್ರಂಥಿಗಳು ಸಮರ್ಪಕವಾಗಿ ಕೆಲಸ ಮಾಡುವಲ್ಲಿ ಇವುಗಳ ಮಾತ್ರ ಹಿರಿದಾದದ್ದು. ಇದರ ಸಾಮರ್ಥ್ಯವನ್ನು ಸೂಕ್ಷ್ಮವಾಗಿ ನೋಡುವುದಾದರೆ-

Constipation

ಮಲಬದ್ಧತೆ ನಿವಾರಣೆ

ಇದರಲ್ಲಿ ಹೆಚ್ಚಿನ ಪ್ರಮಾಣದ ಸೆಲ್ಯುಲೋಸ್‌ ಅಂಶದಿಂದಾಗಿ, ಜಠರ ಮತ್ತು ಕರುಳಿನ ಕಾರ್ಯಕ್ಷಮತೆ ಹೆಚ್ಚುತ್ತದೆ. ಇದರಿಂದ ಆಹಾರ ಸುಲಭವಾಗಿ ಪಚನವಾಗುತ್ತದೆ ಮತ್ತು ಮಲಬದ್ಧತೆ ನಿವಾರಣೆಯಾಗಿ, ದೇಹದಲ್ಲಿ ಶೇಖರವಾದ ಕೊಬ್ಬೂ ಇಳಿಯುತ್ತದೆ. ಕಳಲೆಗೆ ಪ್ರೊಬಯಾಟಿಕ್‌ ಗುಣವೂ ಇರುವುದರಿಂದ, ಹೊಟ್ಟೆಯಲ್ಲಿರುವ ಉತ್ತಮ ಬ್ಯಾಕ್ಟೀರಿಯಾಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ.

Overweight man suffering from chest pain, high blood pressure, cholesterol level

ಕೊಲೆಸ್ಟ್ರಾಲ್‌ ಕಡಿತ

ದೇಹಕ್ಕೆ ಮಾರಕವಾದ ಎಲ್‌ಡಿಎಲ್‌ ಅಥವಾ ಕೆಟ್ಟ ಕೊಲೆಸ್ಟ್ರಾಲ್‌ ಕಡಿತ ಮಾಡುವಂಥ ಫೈಟೋಸ್ಟೆರೋಲ್‌ಗಳು ಕಳಲೆಯಲ್ಲಿವೆ. ಹಾಗಾಗಿ ಇದು ಬೇಡದ ಕೊಲೆಸ್ಟ್ರಾಲ್‌ ನಿವಾರಿಸುವುದು ಮಾತ್ರವಲ್ಲದೆ, ಒಟ್ಟಾರೆ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಇದರಿಂದ ಹೃದಯದ ಸಾಮರ್ಥ್ಯ ಹೆಚ್ಚುತ್ತದೆ. ಇದರಲ್ಲಿರುವ ವಿಟಮಿನ್‌ ಕೆ ಅಂಶದಿಂದಾಗಿ ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇಡುವುದಕ್ಕೆ ಈ ತರಕಾರಿ ಸಹಾಯಕ.

ಕೊಲಾಜಿನ್‌ ವೃದ್ಧಿ

ಮಾನವ ಶರೀರದಲ್ಲಿ ಹೇರಳವಾಗಿರುವ ಖನಿಜಗಳ ಪೈಕಿ ಸತು ಮತ್ತು ಕಬ್ಬಿಣದ ನಂತರದ ಸ್ಥಾನ ಸಿಲಿಕಾಗೆ. ಎಳೆ ಬಿದಿರಿನಲ್ಲೂ ಈ ಅಂಶ ಧಾರಾಳವಾಗಿದೆ. ಸಿಲಿಕಾ ಅಂಶವು ಹೈಡ್ರಾಕ್ಸಿಪ್ರೊಲಿನ್‌ ಎಂಬ ಅಮೈನೊ ಆಮ್ಲದ ಉತ್ಪತ್ತಿಗೆ ಅಗತ್ಯವಾದದ್ದು. ಎಲಾಸ್ಟಿನ್‌ ಮತ್ತು ಕೊಲಾಜಿನ್‌ ಅಂಶಗಳನ್ನು ದೇಹದಲ್ಲಿ ಸಿದ್ಧಪಡಿಸಿಕೊಳ್ಳುವುದಕ್ಕೆ ಈ ಅಮೈನೊ ಆಮ್ಲವು ಅತ್ಯಗತ್ಯ.

Bone Health In Winter

ಮೂಳೆಗಳ ಬಲವೃದ್ಧಿ

ಕ್ಯಾಲ್ಶಿಯಂ ಮತ್ತು ಮೆಗ್ನೀಶಿಯಂ ಅಂಶವು ಹೇರಳವಾಗಿರುವ ಕಳಲೆಯಿಂದ ಮೂಳೆಗಳು ಟೊಳ್ಳಾಗದೆ ಬಲಗೊಳ್ಳುತ್ತವೆ. ಇದರಲ್ಲಿರುವ ವಿಟಮಿನ್‌ ಸಿ ಅಂಶದಿಂದಾಗಿ ಇತರ ಖನಿಜಗಳನ್ನು ಹೀರಿಕೊಳ್ಳಲು ಮೂಳೆಗಳಿಗೆ ನೆರವು ದೊರೆಯುತ್ತದೆ.

weight loss

ತೂಕ ಇಳಿಕೆ

ಈ ತರಕಾರಿ ಕ್ಯಾಲರಿ ಲೆಕ್ಕದಲ್ಲಿ ಕಡಿಮೆ ಇದ್ದು, ನಾರಿನಂಶ ಬೇಕಾದಷ್ಟಿದೆ. ಹಾಗಾಗಿ ಆರೋಗ್ಯಕರ ಮಾರ್ಗದಲ್ಲಿ ತೂಕ ಇಳಿಸುವ ಉದ್ದೇಶ ಇರುವವರಿಗೆ ಇದೊಂದು ಉತ್ತಮ ಆಯ್ಕೆ. ನಾರಿನಿಂದ ಕೂಡಿದ ಆಹಾರಗಳು ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಂಡು, ದೀರ್ಘ ಕಾಲದವರೆಗೆ ಹಸಿವಾಗದಂತೆ ದೇಹವನ್ನು ಕಾಪಾಡುತ್ತವೆ.

ಇದನ್ನೂ ಓದಿ: Coriander Benefits: ಚರ್ಮದ ಯಾವುದೇ ಸಮಸ್ಯೆಗಳಿಗೂ ಕೊತ್ತಂಬರಿ ಸೊಪ್ಪು ಮದ್ದು

Continue Reading

ಆರೋಗ್ಯ

Tongue Reveals Health: ನಮ್ಮ ಆರೋಗ್ಯದ ಚರಿತ್ರೆಯನ್ನು ನಮ್ಮ ನಾಲಿಗೆಯೇ ಹೇಳುತ್ತದೆ!

ದೇಹದೊಳಗೆ ಏನಾಗುತ್ತಿದೆ ಎಂಬುದನ್ನು ತಿಳಿಯಬೇಕಾದರೆ ನಮ್ಮ ನಾಲಿಗೆಯನ್ನೂ ತಿಳಿಯಬೇಕು ನಾವು. ಅದರ ಬಣ್ಣ ಮತ್ತು ಮೇಲ್ಮೈ ಹೇಗಿದೆ ಎನ್ನುವುದರ ಮೇಲೆ ಬಹಳಷ್ಟು ವಿಷಯಗಳನ್ನು ತಿಳಿಯಬಹುದು. ಏನು ಮಾಹಿತಿಯನ್ನು ನೀಡುತ್ತದೆ (Tongue Reveals Health) ನಾಲಿಗೆ? ಈ ಲೇಖನ ಓದಿ.

VISTARANEWS.COM


on

Tongue Reveals Health
Koo

ನಾಲಿಗೆಯು (Tongue Reveals Health) ಆರೋಗ್ಯದ ಕನ್ನಡಿ ಎನ್ನುವ ಮಾತಿದೆ. ನಮ್ಮ ದೇಹದ ಸ್ಥಿತಿ-ಗತಿಗಳ ಬಗ್ಗೆ ಅರಿಯುವುದಕ್ಕೆ ನಾಲಿಗೆ ಸಹಾಯಕ. ಅದರ ಬಣ್ಣ, ಮೇಲ್ನೋಟಗಳಿಂದ ದೇಹದೊಳಗೆ ಹೇಗಿದೆ, ಏನಾಗುತ್ತಿದೆ ಎಂಬುದನ್ನು ಅರಿಯಬಹುದು. ದೇಹಾರೋಗ್ಯದ ದಿಕ್ಸೂಚಿಯಂತೆ ಜಿಹ್ವೆ ಕೆಲಸ ಮಾಡುತ್ತದೆ. ಇದನ್ನು ಸರಿಯಾಗಿ ಅವಲೋಕಿಸಿದರೆ, ನಮಗೆ ತಿಳಿಯುವ ಮಾಹಿತಿಗಳು ಹಲವಾರು. ನಾಲಿಗೆ ತಿಳಿಸುವುದೇನು ಎಂಬ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ.

Woman's tongue

ಗುಲಾಬಿ ಬಣ್ಣ

ಸುಂದರ ಗುಲಾಬಿ ಬಣ್ಣದ ನಾಲಿಗೆಯಿದ್ದರೆ, ಅದು ಸ್ವಸ್ಥ ಆರೋಗ್ಯದ ಸಂಕೇತ. ಇಷ್ಟೇ ಅಲ್ಲ, ರಸ ಒಸರುವ, ಮೃದುವಾದ ಮೇಲ್ಮೈ ಹೊಂದಿರುವ ನಾಲಿಗೆಯು ದೇಹಕ್ಕೆ ಅಗತ್ಯವಾದ ನೀರಿನಂಶ ಒದಗುತ್ತಿದೆ ಎಂಬುದನ್ನು ಸೂಚಿಸುತ್ತದೆ. ಜೊತೆಗೆ, ಜೀರ್ಣಾಂಗಗಳು ಚೆನ್ನಾಗಿ ಕೆಲಸ ಮಾಡುತ್ತಿವೆ ಎಂಬ ಸಂದೇಶವನ್ನೂ ನೀಡುತ್ತದೆ.

ಬಿಳಿ ನಾಲಿಗೆ

ನಾಲಿಗೆಯ ಮೇಲೆ ಬಿಳಿ ಬಣ್ಣದ ಹೊದಿಕೆಯಿದ್ದರೆ ಇದು ಬಹಳಷ್ಟನ್ನು ಸೂಚಿಸುತ್ತದೆ. ಈ ಬಿಳಿಯ ಬಣ್ಣವು ಬಾಯಿಯ ಭಾಗಕ್ಕೆ ಅಂಟಿಕೊಂಡ ಫಂಗಸ್‌ ಸೋಂಕಿನ ಲಕ್ಷಣವಿರಬಹುದು; ಬಾಯಿಯ ಸ್ವಚ್ಛತೆಯ ಕೊರತೆಯನ್ನು ಸೂಚಿಸಬಹುದು; ಬ್ಯಾಕ್ಟೀರಿಯ ದಾಳಿ ಮಾಡಿದ್ದರಿಂದಲೂ ಇರಬಹುದು. ಇದಲ್ಲದೆ, ದೇಹಕ್ಕೆ ಅಗತ್ಯವಾದಷ್ಟು ನೀರು ದೊರೆಯದಿದ್ದರೆ ಹೀಗಾಗುತ್ತದೆ. ಜೊತೆಗೆ, ಜೀರ್ಣಾಂಗಗಳ ಕೆಲಸದಲ್ಲಿ ಏರುಪೇರಾದರೆ, ಅಜೀರ್ಣ ಅಥವಾ ಮಲಬದ್ಧತೆಯಿದ್ದರೂ ನಾಲಿಗೆಯ ಮೇಲೆ ಬಿಳಿಯ ಹೊದಿಕೆಯನ್ನು ಕಾಣಬಹುದು.

Little kid sticking out his tongue

ಕೆಂಪು ನಾಲಿಗೆ

ಸ್ಟ್ರಾಬೆರಿಯಂಥ ಕೆಂಪು ನಾಲಿಗೆಯು ದೇಹದಲ್ಲಿ ಅಗತ್ಯ ಸತ್ವಗಳ ಕೊರತೆಯನ್ನು ಸೂಚಿಸುತ್ತದೆ. ವಿಟಮಿನ್‌ಗಳ ಕೊರತೆಯಿದ್ದರೆ, ಅದರಲ್ಲೂ ಮುಖ್ಯವಾಗಿ ವಿಟಮಿನ್‌ ಬಿ೧೨ ಕಡಿಮೆಯಿದ್ದರೆ ನಾಲಿಗೆಯು ಹೀಗೆ ಸ್ಟ್ರಾಬೆರಿ ಕೆಂಪಿನ ಬಣ್ಣದಲ್ಲಿ ಗೋಚರಿಸುತ್ತದೆ. ಕಬ್ಬಿಣದಂಶ ಕಡಿಮೆಯಿದ್ದರೂ ನಾಲಿಗೆ ಕೆಂಪಾಗುತ್ತದೆ. ರಕ್ತನಾಳಗಳಲ್ಲಿ ಉರಿಯೂತ ತರುವ ಕವಾಸಾಕಿ ಎನ್ನುವ ರೋಗವೂ ಅಪರೂಪಕ್ಕೆ ಈ ಕೆನ್ನಾಲಗೆಗೆ ಕಾರಣವಾಗಬಹುದು.

ಕಪ್ಪು ನಾಲಿಗೆ

ಕೆಲವೊಮ್ಮೆ ಕಪ್ಪಾದ ರೋಮಭರಿತ ಲಕ್ಷಣಗಳನ್ನು ನಾಲಿಗೆ ತೋರಿಸಬಹುದು. ಇದು ಸಹ ಬ್ಯಾಕ್ಟೀರಿಯ ಸೋಂಕಿನಿಂದ ಆಗುವಂಥದ್ದು. ಕೆಲವು ಔಷಧಿಗಳಿಂದ ನಾಲಿಗೆ ಕಪ್ಪಾಗಬಹುದು. ಧೂಮಪಾನ ಅತಿಯಾದರೂ ನಾಲಿಗೆ ಹೀಗೆ ಬಣ್ಣಗೆಡಬಹುದು. ಆದರೆ ನಾಲಿಗೆಯಲ್ಲಿ ನೋವು, ಊತ ಇದ್ದು, ಬಾಯಿಯ ರುಚಿ ವಾಸನೆಗಳು ಬದಲಾಗಿದ್ದರೆ ವೈದ್ಯರನ್ನು ಕಾಣಬೇಕಾಗುತ್ತದೆ.

ನಕಾಶೆ ನಾಲಿಗೆ

ಅಂದರೆ ನಾಲಿಗೆ ಮೇಲೆ ಕೆಂಪು ಬಣ್ಣದ ಮಚ್ಚೆಯಂಥ ಆಕೃತಿಗಳು ಕಾಣಬಹುದು. ನೋಡುವುದಕ್ಕೆ ಯಾವುದೇ ಭೂಪಟ ಅಥವಾ ನಕಾಶೆಯಂತೆ ಕಾಣುವ ಈ ಕೆಂಪು ಆಕೃತಿಗಳು ಸಾಮಾನ್ಯವಾಗಿ ಅಪಾಯ ಮಾಡುವುದಿಲ್ಲ. ಆದರೆ ಕೆಲವು ಆಹಾರಗಳಿಗೆ ಅಥವಾ ತೀಕ್ಷ್ಣ ರುಚಿಗಳಿಗೆ ಇವು ಪ್ರತಿಕ್ರಿಯಿಸಿ, ನೋವು ನೀಡುತ್ತವೆ. ಇದಕ್ಕೆ ನಿರ್ದಿಷ್ಟವಾದ ಕಾರಣಗಳು ತಿಳಿದಿಲ್ಲ.

Woman with halitosis for candida albicans pointing her tongue

ಸೀಳು ನಾಲಿಗೆ

ನಾಲಿಗೆಯ ಮೇಲ್ಮೈಯಲ್ಲಿ ಸೀಳಿನಂಥ ಆಳವಾದ ಗೆರೆಗಳು ಕಾಣಬಹುದು. ಕೆಲವೊಮ್ಮೆ ಇವು ಆನುವಂಶಿಕವಾಗಿ ಬರಬಹುದು. ಅದಿಲ್ಲದಿದ್ದರೆ, ಸೋರಿಯಾಸಿಸ್‌ ಅಥವಾ ಡೌನ್ಸ್‌ ಸಿಂಡ್ರೋಮ್‌ ಸಹ ಕಾರಣವಾಗಿರಬಹುದು. ಹೆಚ್ಚಿನ ಸಾರಿ ಈ ಗೆರೆಗಳು ಯಾವುದೇ ತೊಂದರೆ ನೀಡುವುದಿಲ್ಲ.

ಹುಣ್ಣುಗಳು

ಬಾಯಲ್ಲಿ ಹುಣ್ಣಾದಂತೆಯೇ ನಾಲಿಗೆ ಮೇಲೂ ಹುಣ್ಣುಗಳಾಗುತ್ತವೆ. ಇದಕ್ಕೆ ಹಲವು ಕಾರಣಗಳಿರಬಹುದು. ಕೆಲವೊಮ್ಮೆ ಸತ್ವಗಳ ಕೊರತೆ, ಸೋಂಕು ಅಥವಾ ಬ್ರೇಸಸ್‌ ಹಾಕಿದ ಕಾರಣಕ್ಕೂ ಆಗಿರಬಹುದು. ಹಲವು ವಾರಗಳಿಂದ ಈ ಹುಣ್ಣುಗಳು ಕಡಿಮೆಯಾಗದೆ ಮುಂದುವರಿಯುತ್ತಿದ್ದರೆ ಬಾಯಿ ಕ್ಯಾನ್ಸರ್‌ ಸೂಚನೆಯೂ ಇರಬಹುದು. ಗುಣವಾಗದ ಹುಣ್ಣುಗಳಿದ್ದರೆ ವೈದ್ಯರಲ್ಲಿ ತೋರಿಸುವುದು ಅಗತ್ಯ.

Woman With Wide Open Mouth and Tongue Out

ಗಮನ ಕೊಡಿ

ಕೆಂಪು, ಬಿಳಿಯ ಮಚ್ಚೆಯಂಥವು ನಾಲಿಗೆಯ ಮೇಲೆ ಕಾಣಿಸಿಕೊಂಡು ನೋವು ಕೊಡುತಿದ್ದರೆ, ಬಾಯಿ ವಾಸನೆ ಬರುತ್ತಿದ್ದರೆ, ಹುಣ್ಣುಗಳು ಗುಣವಾಗದೆ ಉಳಿದಿದ್ದರೆ, ಬಾಯಿ ಅಥವಾ ನಾಲಿಗೆಯಲ್ಲಿ ಕಾಣಿಸಿಕೊಂಡ ಯಾವುದೇ ಹುಣ್ಣು, ವ್ರಣ, ಮಚ್ಚೆಗಳು ಸಾಮಾನ್ಯಕ್ಕಿಂತ ಭಿನ್ನ ಲಕ್ಷಣಗಳನ್ನು ಹೊಂದಿದ್ದರೆ, ವೈದ್ಯರನ್ನು ಕಾಣುವುದು ಸೂಕ್ತ. ಇಂಥ ಯಾವುದೇ ಲಕ್ಷಣಗಳು ಕ್ಯಾನ್ಸರ್‌ನ ಸೂಚಕಗಳಾಗಿರಬಹುದು.

ಇದನ್ನೂ ಓದಿ:Health Tips: ಒಂದೇ ಕಡೆ ಕೂತಿರುತ್ತೀರಾ? ಸಮಸ್ಯೆಗಳು ಒಂದೆರಡಲ್ಲ!

Continue Reading

ಆರೋಗ್ಯ

Benefits Of Black Raisins: ರಕ್ತದೊತ್ತಡ, ಕೊಲೆಸ್ಟ್ರಾಲ್‌ ನಿಯಂತ್ರಿಸಬೇಕೆ? ಕಪ್ಪು ಒಣದ್ರಾಕ್ಷಿ ನೆನೆಸಿ ತಿನ್ನಿ

ಕಪ್ಪು ಒಣದ್ರಾಕ್ಷಿಗಳನ್ನು ಯಾರಾದರೂ ಕೈಗಿತ್ತರೆ, ನೇರ ಬಾಯಿಯ ದಾರಿಯನ್ನೇ ಕಾಣಿಸುತ್ತೇವೆ ನಾವು. ಎಲ್ಲರಿಗೂ ಇಷ್ಟವಾಗುವ ಈ ಪುಟ್ಟ ತಿನಿಸಿನಲ್ಲಿ ಆರೋಗ್ಯಕ್ಕೆ ಲಾಭವಾಗುವ ಅಂಶಗಳು ಭರಪೂರ ಇವೆ. ಅವುಗಳನ್ನು ನೆನೆಸಿ ತಿಂದರೆ (benefits of black raisins) ಇನ್ನೂ ಒಳ್ಳೆಯದು.

VISTARANEWS.COM


on

Benefits Of Black Raisins
Koo

ಒಣ ಹಣ್ಣುಗಳನ್ನು ಮೆಲ್ಲುವುದನ್ನು ಇಷ್ಟಪಡದವರು ವಿರಳ. ಸುಮ್ಮನೆ ಕೂತಿದ್ದಾಗಲೂ ನಾಲ್ಕು ಒಣ ದ್ರಾಕ್ಷಿ ಕೈಗಿತ್ತರೆ ಬಾಯಿಗೆ ಒಗೆದುಕೊಳ್ಳಲು ಯಾರಿಗೂ ಬೇಸರವಿರುವುದಿಲ್ಲ. ಹಲ್ಲಿಲ್ಲದ ಬಾಯಲ್ಲಿ ಒತ್ತರಿಸಿಟ್ಟುಕೊಳ್ಳುವ ವೃದ್ಧರಿಂದ ಹಿಡಿದು, ಹಲ್ವಾ, ಪಾಯಸದಲ್ಲಿ ಹೆಕ್ಕಿ ತಿನ್ನುವ ಮಕ್ಕಳವರೆಗೆ ಒಣ ದ್ರಾಕ್ಷಿ ಎಲ್ಲರಿಗೂ ಮೆಚ್ಚು. ಸಾಮಾನ್ಯವಾಗಿ ಬಳಸುವ ಹೊಂಬಣ್ಣದ ದ್ರಾಕ್ಷಿಗಳ ಬದಲಿಗೆ ಕಪ್ಪು ದ್ರಾಕ್ಷಿಗಳ ಬಗ್ಗೆ ಇವತ್ತಿನ ನಮ್ಮ ಗಮನ. ಏನಿವುಗಳ ವಿಶೇಷತೆ?
ಒಣ ದ್ರಾಕ್ಷಿಯನ್ನು ನೆನೆಸಿ ತಿನ್ನಬೇಕೆನ್ನುತ್ತದೆ ಪರಂಪರಾಗತ ವೈದ್ಯ ಶಾಸ್ತ್ರ. ಯಾವುದೇ ಒಣ ಹಣ್ಣು, ಬೀಜಗಳನ್ನು ನೆನೆಸಿ ತಿನ್ನುವುದೇ ಶ್ರೇಷ್ಠ ಎಂಬುದನ್ನು ಆಹಾರ ತಜ್ಞರೂ ಅನುಮೋದಿಸುತ್ತಾರೆ. ಇದು ಒಣ ದ್ರಾಕ್ಷಿಯ ಮಟ್ಟಿಗೂ ನಿಜ. ಹಸಿರು, ಹೊಂಬಣ್ಣದ್ದು, ಕಪ್ಪು- ಹೀಗೆ ದ್ರಾಕ್ಷಿಯ ಬಣ್ಣ ಯಾವುದೇ ಇದ್ದರೂ, ಅವುಗಳ ಲಾಭಗಳು ಹೆಚ್ಚಿನ ಪ್ರಮಾಣದಲ್ಲಿ ದೊರೆಯಬೇಕೆಂದರೆ ನೆನೆಸಿ ತಿನ್ನುವುದು, ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಮೆಲ್ಲುವುದು ಇನ್ನೂ ಉತ್ತಮ. ಏನಿದೆ ಇದನ್ನು ತಿನ್ನುವುದರ (benefits of black raisins) ಪ್ರಯೋಜನಗಳು?

ealthy internal organs of human digestive system / highlighted blue organs

ಜೀರ್ಣಾಂಗಗಳು ಸುಸೂತ್ರ

ನಾರಿನಂಶ ಹೆಚ್ಚಿರುವ ಈ ಹಣ್ಣುಗಳನ್ನು ತಿನ್ನುವುದರಿಂದ ಪಚನಾಂಗಗಳ ಮೇಲೆ ಪೂರಕ ಪರಿಣಾಮ ಉಂಟಾಗುತ್ತದೆ. ನೆನೆಸಿದ ಕಪ್ಪುದ್ರಾಕ್ಷಿಯು ಮಲಬದ್ಧತೆಯನ್ನು ನಿವಾರಿಸಿ, ಹೊಟ್ಟೆಯನ್ನು ಶುದ್ಧವಾಗಿಡುತ್ತದೆ. ಆಸಿಡಿಟಿಯನ್ನು ದೂರ ಮಾಡಿ, ಹೊಟ್ಟೆಯ ತೊಂದರೆಯನ್ನು ತಹಬಂದಿಗೆ ತರುತ್ತದೆ.

ಮೂಳೆಗಳು ಸದೃಢ

ಕಪ್ಪು ದ್ರಾಕ್ಷಿಯಲ್ಲಿ ಕ್ಯಾಲ್ಶಿಯಂ ಮತ್ತು ಪೊಟಾಶಿಯಂ ಅಂಶಗಳು ವಿಫುಲವಾಗಿವೆ. ಇದರಿಂದ ಸಣ್ಣ ಪ್ರಮಾಣದಲ್ಲೇ ಆದರೂ, ನಿಯಮಿತ ಸೇವನೆಯಿಂದ ಈ ಖನಿಜಗಳು ದೇಹಕ್ಕೆ ಸದಾ ದೊರೆಯುವಂತೆ ನೋಡಿಕೊಳ್ಳಬಹುದು. ಹೀಗೆ ನಿರಂತರವಾಗಿ ಈ ಪೋಷಕಗಳು ದೊರೆತರೆ, ಕ್ರಮೇಣ ಮೂಳೆಗಳು ಗಟ್ಟಿಯಾಗುತ್ತವೆ. ಅದರಲ್ಲೂ ಬೆಳೆಯುವ ಮಕ್ಕಳಿಗೆ ಮತ್ತು ವೃದ್ಧರಿಗೆ ಮೂಳೆ ಸಬಲವಾಗಿರಬೇಕಾದರೆ ಇಂಥ ಆಹಾರಗಳು ಅಗತ್ಯವಾಗುತ್ತವೆ.

Indian Male Doctor Check BP or Blood Pressure of a Patient L

ರಕ್ತದೊತ್ತಡ ನಿಯಂತ್ರಣ

ಕಪ್ಪು ದ್ರಾಕ್ಷಿಯಲ್ಲಿರುವ ಪೊಟಾಶಿಯಂ ಅಂಶವು ರಕ್ತದಲ್ಲಿರುವ ಸೋಡಿಯಂ ಅಂಶವನ್ನು ತಗ್ಗಿಸುವ ಕೆಲಸವನ್ನು ಮಾಡುತ್ತದೆ. ಇದರಿಂದ ರಕ್ತದ ಒತ್ತಡ ಏರಿಳಿತವಾಗದಂತೆ ನಿರ್ವಹಿಸುವುದು ಸುಲಭವಾಗುತ್ತದೆ. ಇದರಲ್ಲಿರುವ ಕರಗದಿರುವ ನಾರಿನಂಶವು ದೇಹದಲ್ಲಿ ಜಮೆಯಾಗಿರುವ ಕೊಬ್ಬು ಕರಗಿಸುವುದಕ್ಕೂ ಅಳಿಲುಸೇವೆ ಮಾಡುತ್ತದೆ.

ಕೊಲೆಸ್ಟ್ರಾಲ್‌ ನಿಯಂತ್ರಣ

ಶರೀರದಲ್ಲಿ ಕೊಲೆಸ್ಟ್ರಾಲ್‌ ಜಮೆಯಾದರೆ ಆಗುವಂಥ ಸಮಸ್ಯೆಗಳು ಒಂದೆರಡೇ ಅಲ್ಲ. ರಕ್ತನಾಳಗಳಲ್ಲಿ ಜಮೆಯಾಗುವ ಕೊಬ್ಬು ಕ್ರಮೇಣ ಹೃದಯಕ್ಕೆ ಅಳಿಸಲಾಗದ ಬರೆಯನ್ನೇ ಹಾಕಿಬಿಡುತ್ತದೆ. ಹಾಗಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವಂಥ ಆಹಾರಗಳಿಗೆ ಆದ್ಯತೆ ನೀಡುವುದು ಜಾಣತನ. ಕಪ್ಪು ಒಣದ್ರಾಕ್ಷಿಯಲ್ಲಿರುವ ಪಾಲಿಫೆನಾಲ್‌ಗಳಲ್ಲಿ ದೇಹದಲ್ಲಿನ ಕೆಟ್ಟ ಕೊಬ್ಬು ಕಡಿಮೆ ಮಾಡುವ ಗುಣವಿದೆ. ಜೊತೆಗೆ ರಕ್ತದೊತ್ತಡವನ್ನೂ ಇದು ಕಡಿಮೆ ಮಾಡುವುದರಿಂದ, ಹೃದಯದ ಸ್ನೇಹಿತ ಎನಿಸುತ್ತದೆ ಕಪ್ಪು ದ್ರಾಕ್ಷಿ.

ಹಲ್ಲುಗಳ ಆರೋಗ್ಯ ಸುಧಾರಣೆ

ಕಪ್ಪುದ್ರಾಕ್ಷಿಯಲ್ಲಿರುವ ಫೈಟೊ ಕೆಮಿಕಲ್‌ಗಳು ಹಲ್ಲುಗಳಲ್ಲಿ ಹುಳುಕಾಗುವುದನ್ನು ತಪ್ಪಿಸುತ್ತವೆ. ಒಸಡಿನ ಆರೋಗ್ಯವನ್ನೂ ಕಾಪಾಡಿ, ಬಾಯಿಯ ದುರ್ಗಂಧವನ್ನು ನಿವಾರಣೆ ಮಾಡುತ್ತವೆ. ನೆನೆಸಿದ ಕಪ್ಪು ದ್ರಾಕ್ಷಿಗಳನ್ನು ಜಗಿದು ತಿನ್ನುವುದರಿಂದ, ಹಲ್ಲುಗಳ ಎನಾಮಲ್‌ ಹೊದಿಕೆಯನ್ನು ಕ್ಷೇಮವಾಗಿ ಇರಿಸಬಹುದು.

Woman anemia image Coriander Benefits

ರಕ್ತಹೀನತೆ ದೂರ

ದ್ರಾಕ್ಷಿಯಲ್ಲಿ ಕಬ್ಬಿಣದಂಶ ಅಧಿಕವಾಗಿದೆ. ದೇಹದಲ್ಲಿ ಅಗತ್ಯ ಹಿಮೋಗ್ಲೋಬಿನ್‌ ಮಟ್ಟವನ್ನು ಕಾಯ್ದುಕೊಂಡು, ಆಮ್ಲಜನಕದ ಪ್ರಮಾಣದ ಕಡಿಮೆಯಾಗದಂತೆ ನಿರ್ವಹಿಸಲು ಕಬ್ಬಿಣದಂಶ ಅಗತ್ಯ. ಒಂದೊಮ್ಮೆ ಇದು ಕೊರತೆಯಾದರೆ ರಕ್ತಹೀನತೆ ಕಾಡುತ್ತದೆ. ಹಾಗಾಗಿ ನಿಯಮಿತವಾಗಿ ಕಪ್ಪು ದ್ರಾಕ್ಷಿಗಳನ್ನು ಸೇವಿಸುವುದರಿಂದ ಅಗತ್ಯ ಕಬ್ಬಿಣದಂಶವನ್ನು ಪೂರೈಸಿ, ರಕ್ತಹೀನತೆಯನ್ನು ದೂರ ಮಾಡಬಹುದು.

ಕೂದಲು, ಕಣ್ಣುಗಳಿಗೆ ಒಳ್ಳೆಯದು

ಇದರಲ್ಲಿರುವ ವಿಟಮಿನ್‌ ಸಿ ಮತ್ತು ಪಾಲಿಫೆನಾಲ್‌ ಅಂಶಗಳು ದೃಷ್ಟಿಯನ್ನು ಚುರುಕಾಗಿಸುತ್ತವೆ. ಇವುಗಳ ಜೊತೆಗೆ, ಉಳಿದ ಉತ್ಕರ್ಷಣ ನಿರೋಧಕಗಳೂ ಸೇರಿ, ತಲೆಯ ಚರ್ಮದ ಆರೋಗ್ಯವನ್ನು ಸುಧಾರಿಸುತ್ತವೆ. ಇದರಿಂದ ಕೂದಲಿನ ಆರೋಗ್ಯವನ್ನೂ ಸುಧಾರಿಸಲು ಸಾಧ್ಯವಿದೆ. ಕೂದಲು ಉದುರುವುದು, ಬೆಳ್ಳಗಾಗುವುದು, ಸೀಳುಗೂದಲು ಮುಂತಾದವನ್ನು ಕಡಿಮೆ ಮಾಡಲು ಅನುಕೂಲ.

ಇದನ್ನೂ ಓದಿ: Eye Protection: ಡಿಜಿಟಲ್ ಪರದೆಗಳಿಂದ ಕಣ್ಣುಗಳನ್ನು ಕಾಪಾಡಿಕೊಳ್ಳುವುದು ಹೇಗೆ?

Continue Reading

ಆರೋಗ್ಯ

Baby’s Food: ಶಿಶು ಆಹಾರಗಳಲ್ಲಿ ಸಕ್ಕರೆ ಅಂಶ ಇರಬೇಕೆ?

ಆಹಾರದಲ್ಲಿ ನೈಸರ್ಗಿಕವಾಗಿ ಇರುವಂಥ ಸಕ್ಕರೆಯ ಹೊರತಾಗಿ ಹೆಚ್ಚುವರಿಯಾಗಿ ಸಕ್ಕರೆಯನ್ನು ಸೇರಿಸುವುದರ ಹಿಂದೆ ಹಲವು ಕಾರಣಗಳಿಗೆ. ಆದರೆ ಸಂಸ್ಕರಿಸಿದ ಸಿಹಿ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ಸಾಬೀತಾಗಿದ್ದರೂ, ಎಳೆಯ ಮಕ್ಕಳ (Baby’s Food) ಆಹಾರಕ್ಕೂ ಇದನ್ನು ಸೇರಿಸುವುದೇಕೆ? ಇಲ್ಲಿದೆ ಮಾಹಿತಿ.

VISTARANEWS.COM


on

Baby's Food
Koo

ಜನಪ್ರಿಯ ಬ್ರಾಂಡ್‌ಗಳ ಶಿಶು ಆಹಾರಗಳಲ್ಲಿ (Baby’s Food) ಅತಿ ಹೆಚ್ಚಿನ ಪ್ರಮಾಣದ ಸಕ್ಕರೆ ಸೇರಿರುವ ಬಗ್ಗೆ ಇತ್ತೀಚೆಗಷ್ಟೇ ವಿಸ್ತೃತವಾಗಿ ಚರ್ಚೆಯಾಗಿತ್ತು. ಶಿಶು ಆಹಾರಗಳಲ್ಲಿ ಸಕ್ಕರೆ ಅಥವಾ ಸಿಹಿ ಸೇರಿಸುವ ಪರಿಪಾಠ ಸುಮಾರು 50 ವರ್ಷಗಳಷ್ಟು ಹಿಂದಿನದ್ದು. ಅದು ಕೇವಲ ಶಿಶು ಅಹಾರಗಳಲ್ಲಿ ಮಾತ್ರವಲ್ಲ, ಸೀರಿಯಲ್‌ಗಳು, ಫ್ಲೇವರ್‌ ಇರುವ ಪೇಯಗಳು, ಬೇಕ್‌ ಮಾಡಿದ ತಿನಿಸುಗಳಿಂದ ಹಿಡಿದು ಲೆಕ್ಕವಿಲ್ಲದಷ್ಟು ಆಹಾರಗಳಲ್ಲಿ ನಮಗರಿವಿಲ್ಲದಂತೆಯೇ ಸಕ್ಕರೆ ವಕ್ಕರಿಸಿದೆ. ಸಂಸ್ಕರಿಸಿದ ಸಿಹಿ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ಸಾಬೀತಾಗಿದ್ದರೂ, ಎಳೆಯ ಮಕ್ಕಳ ಆಹಾರದಿಂದ ಹಿಡಿದು ದೊಡ್ಡವರ ತಿನಿಸುಗಳವರೆಗೆ ಇದನ್ನು ಸೇರಿಸುವುದೇಕೆ? ಮಕ್ಕಳಿಗೂ ಹೀಗೆ ಬಾಯಿ ಸಿಹಿ ಮಾಡುವ ಉದ್ದೇಶವೇನು?
ಆಹಾರದಲ್ಲಿ ನೈಸರ್ಗಿಕವಾಗಿ ಇರುವಂಥ ಸಕ್ಕರೆಯ ಹೊರತಾಗಿ ಹೆಚ್ಚುವರಿಯಾಗಿ ಸಕ್ಕರೆಯನ್ನು ಸೇರಿಸುವುದರ ಹಿಂದೆ ಹಲವು ಕಾರಣಗಳಿಗೆ. ಆ ತಿನಿಸು ಅಥವಾ ಪೇಯದ ರುಚಿ, ಬಣ್ಣ ಮತ್ತು ಮೇಲ್ಮೈಯನ್ನು ಆಕರ್ಷಕವಾಗಿ ಮಾಡುವುದು ಎಲ್ಲಕ್ಕಿಂತ ಮೊದಲ ಕಾರಣ. ಎರಡನೆಯದು, ಸಕ್ಕರೆ ಎಂಬ ಗ್ಲೂಕೋಸ್‌ ಮತ್ತು ಫ್ರಕ್ಟೋಸ್‌ಗಳ ಮಿಶ್ರಣವು ವ್ಯಸನವನ್ನು ಉಂಟುಮಾಡುವಂಥದ್ದು. ಒಮ್ಮೆ ಸಕ್ಕರೆಯ ರುಚಿ ಕಂಡುಕೊಳ್ಳುವ ಪುಟ್ಟ ಮಕ್ಕಳನ್ನು ಅದರಿಂದ ಹೊರತಾಗಿಸುವುದು ಕಷ್ಟದ ಕೆಲಸ. ಅದು ಮಕ್ಕಳಿಗೆ ಮಾತ್ರ ಸೀಮಿತವಲ್ಲ, ಸಿಹಿ ಇಷ್ಟ ಎನ್ನುವ ಎಲ್ಲರ ವಿಷಯದಲ್ಲೂ ಇದು ಸತ್ಯ. ಇದಲ್ಲದೆಯೇ ಬೇರೆ ಕಾರಣಗಳೂ ಸಕ್ಕರೆ ಸೇರಿಸುವುದಕ್ಕಿರಬಹುದು. ಉಪ್ಪಿನಂತೆಯೇ ಸಕ್ಕರೆಯನ್ನೂ ಸಂರಕ್ಷಕವಾಗಿ ಕೆಲವೊಮ್ಮೆ ಬಳಸುವುದಿದೆ.

Colorful Baby Food Purees in Glass Jars

ಮಿತಿ ಇದೆ

ಆಹಾರ ತಜ್ಞರ ಪ್ರಕಾರ, ನೈಸರ್ಗಿಕವಾಗಿ ಹಣ್ಣು, ತರಕಾರಿ, ಅಂಜೂರ, ಖರ್ಜೂರದಂಥ ಆಹಾರಗಳಲ್ಲಿ ದೊರೆಯುವ ಸಕ್ಕರೆಯ ಬಗ್ಗೆ ತೀರಾ ಗಾಬರಿ ಬೀಳಬೇಕಿಲ್ಲ. ಸ್ವಲ್ಪ ಆಚೀಚೆ ಆದರೂ ದೇಹ ಸುಧಾರಿಸಿಕೊಳ್ಳುತ್ತದೆ. ಆದರೆ ಹೆಚ್ಚುವರಿ ಸಕ್ಕರೆಯನ್ನು ಸೇವಿಸುವುದಕ್ಕೆ ಮಿತಿಯಿದೆ. 2 ವರ್ಷದ ನಂತರದ ಮಕ್ಕಳಿಗೆ, ದಿನಕ್ಕೆ ಹೆಚ್ಚೆಂದರೆ ನಾಲ್ಕು ಟೀ ಚಮಚ ಹೆಚ್ಚುವರಿಯಾಗಿ ಸಕ್ಕರೆ ನೀಡಬಹುದು. ಅದರಲ್ಲಿ ಮಕ್ಕಳು ತಿನ್ನುವ ನಿತ್ಯದ ಆಹಾರ, ಸಿಹಿ ತಿನಿಸುಗಳು, ಬಿಸ್ಕೆಟ್‌ನಂಥವು, ಹಾಲಿಗೆ ಬೆರೆಸುವ ಪುಡಿಗಳು ಎಲ್ಲವೂ ಸೇರಿವೆ. ಅದಕ್ಕಿಂತ ಪುಟ್ಟ ಮಕ್ಕಳಿಗೆ ಹೆಚ್ಚುವರಿ ಸಕ್ಕರೆಯನ್ನು ನೀಡುವುದೇ ಬೇಡ ಎನ್ನುತ್ತಾರೆ ಆಹಾರ ತಜ್ಞರು. ಹಾಗಿರುವಾಗ ಶಿಶುಪೋಷಣೆಯ ಆಹಾರಗಳಲ್ಲೇ ಸಕ್ಕರೆ ಸೇರಿಸಬಹುದೇ?

ವ್ಯತ್ಯಾಸವಿದೆ

ಮಾರುಕಟ್ಟೆಯಲ್ಲಿ ದೊರೆಯುವ ಬೇಬಿ ಸೀರಿಯಲ್‌ಗಳಲ್ಲಿನ ಸಕ್ಕರೆಯ ಅಂಶದಲ್ಲಿ ವ್ಯತ್ಯಾಸವಿದೆ. ಒಂದೇ ಬ್ರಾಂಡ್‌ನ ಭಿನ್ನ ವೇರಿಯೆಂಟ್‌ಗಳಲ್ಲಿ ಮಾತ್ರವಲ್ಲ, ಅದೇ ಹೆಸರಿನ ಸೀರಿಯಲ್‌ಗಳು ಬೇರೆ ಬೇರೆ ದೇಶಗಳಲ್ಲಿ ಮಾರಾಟ ಆಗುವಾಗಲೂ ಸಿಹಿ ಪ್ರಮಾಣ ವ್ಯತ್ಯಾಸವಾಗುತ್ತದೆ. ಅಂದರೆ ಬಡ ಮತ್ತು ಅಭಿವೃದ್ಧಶೀಲ ದೇಶಗಳ ಮಾರುಕಟ್ಟೆಯಲ್ಲಿ ಮಾರಾಟವಾಗುವ ಸೀರಿಯಲ್‌ಗಳಲ್ಲಿ ಸಾಮಾನ್ಯವಾಗಿ ಸಿಹಿ ಹೆಚ್ಚಿರುತ್ತದೆ. ಇದರಿಂದ ಮಕ್ಕಳು ಅವುಗಳನ್ನೇ ಹೆಚ್ಚು ಬಯಸಿ, ಕಂಪೆನಿಗಳ ಮಾರಾಟವೂ ಹೆಚ್ಚಲೆಂಬ ಸರಳ ಹುನ್ನಾರವಷ್ಟೇ ಇವುಗಳ ಹಿಂದಿದೆ. ಹಾಗಾಗಿಯೇ ಇಂಥ ಸಕ್ಕರೆಭರಿತ ಪೇಯಗಳನ್ನು ʻಹೆಲ್ತ್‌ ಡ್ರಿಂಕ್‌ʼಗಳ ಪಟ್ಟಿಯಿಂದ ತೆಗೆಯುವಂತೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಇತ್ತೀಚೆಗೆ ಆದೇಶಿಸಿದ್ದು.

ಏನು ಸಮಸ್ಯೆ?

ಮಕ್ಕಳಿಗೆ ಆಹಾರ ತಿನ್ನಿಸುವುದಕ್ಕೆ ಬಹಳಷ್ಟು ಹೆತ್ತವರು ಸರ್ಕಸ್‌ ಮಾಡಬೇಕು. ಹಾಗಿರುವಾಗ ಸಿಹಿಭರಿತ ಸೀರಿಯಲ್‌ಗಳನ್ನು ಅವು ರಗಳೆಯಿಲ್ಲದೆ ತಿನ್ನುತ್ತವೆ ಎಂದಾದರೆ, ಯಾಕೆ ಬೇಡ? ಆಹಾರ ಮತ್ತು ಆರೋಗ್ಯ ತಜ್ಞರ ಪ್ರಕಾರ, ಎಳೆಯ ವಯಸ್ಸಿನಲ್ಲಿ ಸಿಹಿ ತಿನ್ನಿಸುವುದರಿಂದ ಆಗುವ ತೊಂದರೆಗಳು ಬಹಳಷ್ಟು. ಮೊದಲಿಗೆ, ಹಾಲು ಹಲ್ಲುಗಳು ಮೊಳೆಯುತ್ತಲೇ ಹುಳುಕಾಗುತ್ತವೆ. ಪುಟಾಣಿಗಳು ಹಲ್ಲುನೋವಿನ ಪ್ರಕೋಪವನ್ನು ಮೂರ್ನಾಲ್ಕು ವರ್ಷಗಳ ಪ್ರಾಯದಲ್ಲೇ ಎದುರಿಸಬೇಕಾಗುತ್ತದೆ. ಇದಕ್ಕಿಂತ ಚಿಂತೆಯ ವಿಷಯವೆಂದರೆ ಮಕ್ಕಳಲ್ಲಿ ಪೇರಿಸಿಕೊಳ್ಳುವ ಬೊಜ್ಜು.

ರುಚಿಯೆಂದರೆ…!

ಇಷ್ಟಕ್ಕೇ ಮುಗಿಯುವುದಿಲ್ಲ. ಷಡ್ರಸೋಪೇತ ಆಹಾರ ಎನ್ನುವ ಕಲ್ಪನೆ ಈಗಲೇ ಮಕ್ಕಳ ಮನಕ್ಕೆ ನಿಲುಕುತ್ತಿಲ್ಲ. ಕಹಿ, ಒಗರು ಮುಂತಾದ ರುಚಿಗಳನ್ನೆಲ್ಲ ಬದಿಗೊತ್ತಿದ್ದಾಗಿದೆ. ಇದನ್ನೂ ಮೀರಿ, ರುಚಿಯೆಂದರೆ ಸಿಹಿ ಮಾತ್ರ ಎನ್ನುವಂತಾಗುತ್ತದೆ. ಜೀವನದುದ್ದಕ್ಕೂ ಇದನ್ನೇ ರೂಢಿಸಿಕೊಂಡರೆ ಮಧುಮೇಹ, ಹೃದ್ರೋಗಗಳೆಲ್ಲ ಮುತ್ತಿಕೊಳ್ಳುವುದಕ್ಕೆ ದೀರ್ಘ ಸಮಯ ಬೇಡ. ಇದೇ ಪರಿಪಾಠ ಉಪ್ಪಿಗೂ ಅನ್ವಯಿಸುತ್ತದೆ. ಹೆಚ್ಚು ಸೋಡಿಯಂ ಇರುವಂಥ ಪ್ಯಾಕೆಟ್‌ ತಿನಿಸುಗಳು ಮತ್ತು ಸಂಸ್ಕರಿತ ಆಹಾರಗಳು ಆರೋಗ್ಯವನ್ನು ಬುಡಮೇಲು ಮಾಡುತ್ತವೆ.

baby boy eating food by himself

ಪರ್ಯಾಯ ಉಂಟೇ?

ಯಾಕಿಲ್ಲ! ಮಾರುಕಟ್ಟೆಯಲ್ಲಿ ದೊರೆಯುವ ಸೀರಿಯಲ್‌ಗಳನ್ನೇ ತಿಂದು ಮಕ್ಕಳು ಬದುಕಬೇಕಿಲ್ಲ, ಬೆಳೆಯಬೇಕಿಲ್ಲ. ಮನೆಯಲ್ಲೇ ಮಾಡುವ ಆರೋಗ್ಯಕರ ಗಂಜಿಗಳು, ಅಂಬಲಿಗಳು ಯಾವತ್ತಿಗೂ ಶ್ರೇಷ್ಠ. ಇದಕ್ಕೆಲ್ಲ ಸಮಯವಿಲ್ಲ ಎಂದಿದ್ದರೆ, ಹಲವು ರೀತಿಯ ಮೊಳಕೆ ಕಟ್ಟಿದ ಪುಡಿಗಳನ್ನು ಮಾಡಿರಿಸಿಕೊಳ್ಳುವುದು ಲಾಗಾಯ್ತಿನಿಂದಲೂ ಬಂದ ಕ್ರಮ. ಇದಕ್ಕೆ ಹೆಚ್ಚುವರಿ ಸಿಹಿಯ ಬದಲಿಗೆ ಹಣ್ಣಿನ ರಸಗಳು, ಋತುವಿನ ತರಕಾರಿಗಳು, ಖರ್ಜೂರ ಅಥವಾ ಅಂಜೂರದ ಪೇಸ್ಟ್‌ ಇತ್ಯಾದಿಗಳನ್ನು ಸೇರಿಸಿ ರುಚಿ ಹೆಚ್ಚಿಸಬಹುದು.

ಇದನ್ನೂ ಓದಿ: Dental Braces: ಹಲ್ಲುಗಳ ಸೌಂದರ್ಯ ವೃದ್ಧಿಗೆ ಬ್ರೇಸಸ್‌ ಹಾಕುವ ಯೋಚನೆ ಇದೆಯೇ? ಈ ಮಾಹಿತಿ ತಿಳಿದಿರಲಿ

Continue Reading
Advertisement
Viral News
ವೈರಲ್ ನ್ಯೂಸ್10 mins ago

Viral News: ತಂಗಿಗೆ ಟಿವಿ ಗಿಫ್ಟ್‌ ಕೊಡಲು ಮುಂದಾದ ಪತಿಯನ್ನು ಕೊಲ್ಲಿಸಿದ ಪತ್ನಿ!

Rajkumar Birth Anniversary ​​Jaggesh said that Rajkumar blessed him when he was admitted due to suicide attempt
ಸ್ಯಾಂಡಲ್ ವುಡ್13 mins ago

Rajkumar Birth Anniversary: ಆತ್ಮಹತ್ಯೆಗೆ ಯತ್ನಿಸಿ ಅಡ್ಮಿಟ್‌ ಆದಾಗ ಅಣ್ಣಾವ್ರು ಆಶೀರ್ವಾದ ಮಾಡಿದ್ದರೆಂದ ಜಗ್ಗೇಶ್‌!

World Chess Championship
ಕ್ರೀಡೆ16 mins ago

World Chess Championship: ಡಿ.ಗುಕೇಶ್‌-ಲಿರೆನ್‌ ನಡುವಣ ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌ ಪಂದ್ಯಕ್ಕೆ ಮುಹೂರ್ತ ಫಿಕ್ಸ್​

VVPAT Verification
ದೇಶ32 mins ago

VVPAT Verification: ವಿವಿಪ್ಯಾಟ್‌ ಕೇಸ್; ಚುನಾವಣೆಯನ್ನು ನಾವು ನಿಯಂತ್ರಿಸಲಾಗದು ಎಂದ ಸುಪ್ರೀಂಕೋರ್ಟ್; ಮತಯಂತ್ರ ವಿರೋಧಿಗಳಿಗೆ ಹಿನ್ನಡೆ

Sunita Williams
ದೇಶ33 mins ago

Sunita Williams: ಸುನೀತಾ ವಿಲಿಯಮ್ಸ್‌ 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸಜ್ಜು

Marcus Stoinis
ಕ್ರಿಕೆಟ್43 mins ago

IPL 2024: 13 ವರ್ಷದ ಐಪಿಎಲ್​ ದಾಖಲೆ ಮುರಿದ ಮಾರ್ಕಸ್​ ಸ್ಟೋಯಿನಿಸ್

Areca Price
ಪರಿಸರ45 mins ago

Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

Veteran journalist Arjun Deva passes away
ಶ್ರದ್ಧಾಂಜಲಿ47 mins ago

Arjun Deva: ಹಿರಿಯ ಪತ್ರಕರ್ತ ಅರ್ಜುನ್ ದೇವ ನಿಧನ; ಗಣ್ಯರ ಕಂಬನಿ

pm narendra modi jp morgan jamie dimon
ಪ್ರಮುಖ ಸುದ್ದಿ1 hour ago

PM Narendra Modi: “ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು” ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ

IPL 2024 Points Table
ಕ್ರೀಡೆ1 hour ago

IPL 2024 Points Table: ಚೆನ್ನೈಗೆ ಹೀನಾಯವಾಗಿ ಸೋಲುಣಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಲಕ್ನೋ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌