Health Tips: ನಿಂತು ಊಟ ಮಾಡುವುದಕ್ಕಿಂತ ಕೂತು ಊಟ‌ ಮಾಡಿದರೆ ಏನೇನು ಲಾಭಗಳಿವೆ ನೋಡಿ! - Vistara News

ಆರೋಗ್ಯ

Health Tips: ನಿಂತು ಊಟ ಮಾಡುವುದಕ್ಕಿಂತ ಕೂತು ಊಟ‌ ಮಾಡಿದರೆ ಏನೇನು ಲಾಭಗಳಿವೆ ನೋಡಿ!

Health Tips: ಏಷ್ಯಾದ ಬಹುತೇಕ ಸಂಸ್ಕೃತಿಗಳಲ್ಲಿ ʻಊಟʼ ಎಂದರೆ ಕೆಳಗೆ ಕುಳಿತೇ ತಿನ್ನುವ ಕ್ರಮವಿತ್ತು. ಹಳೆಯ ಕಾಲದವರಂತೆ ಪಟ್ಟಾಗಿ ಕೆಳಗೆ ಕೂತು ತಿನ್ನುವ ಕ್ರಮವೀಗ ಅಪರೂಪದಲ್ಲಿ ಅಪರೂಪ. ಹೀಗೆ ಸ್ವಸ್ಥವಾಗಿ ಕೂತು, ನಿರುಮ್ಮಳ ಮನಸ್ಸಿನಿಂದ ಊಟ ಮಾಡುವುದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಲಾಭದಾಯಕ ಎನ್ನುತ್ತವೆ ಕೆಲವು ಅ‍ಧ್ಯಯನಗಳು. ಏನು ಪ್ರಯೋಜನ ಹೀಗೆ ನೆಮ್ಮದಿಯಾಗಿ ಕೂತು ಉಣ್ಣುವುದರಿಂದ? ಈ ಲೇಖನ ಓದಿ

VISTARANEWS.COM


on

Health Tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬದುಕಿನ (Health Tips) ಇನ್ನೊಂದು ಹೆಸರೇ ಧಾವಂತ ಎಂಬುದು. ಗಡಿಬಿಡಿಯ ಹೊರತಾಗಿ ಇನ್ನೇನೂ ಇಲ್ಲ ಅನುಭವಿಸುವುದಕ್ಕೆ ಎನ್ನುವಂತೆ ಬದುಕುತ್ತೇವೆ ನಾವು. ಎಲ್ಲಿಯವರೆಗೆ ಎಂದರೆ ಎಷ್ಟೇ ದುಡಿದರೂ ಕೂತು ತಿನ್ನುವುದಕ್ಕೆ ನಮಗೆ ಸಮಯವಿಲ್ಲ. ಆದರೆ ಕೂತು ತಿನ್ನುವುದಕ್ಕೂ ಅದರದ್ದೇ ಆದ ಪ್ರಯೋಜನಗಳಿವೆ ಎನ್ನುತ್ತವೆ ಅಧ್ಯಯನಗಳು. ಅಂದರೆ ಕೆಲಸ ಮಾಡದೆ ಕೂತು ತಿನ್ನುವ ಬಗ್ಗೆ ಹೇಳುತ್ತಿರುವುದಲ್ಲ, ತಿನ್ನುವಾಗ ಕುಳಿತುಕೊಳ್ಳುವುದರ ಬಗ್ಗೆ ಇಲ್ಲಿ ಮಾತು. ಏಷ್ಯಾದ ಬಹುತೇಕ ಸಂಸ್ಕೃತಿಗಳಲ್ಲಿ ʻಊಟʼ ಎಂದರೆ ಕೆಳಗೆ ಕುಳಿತೇ ತಿನ್ನುವ ಕ್ರಮವಿತ್ತು. ಹಳೆಯ ಕಾಲದವರಂತೆ ಪಟ್ಟಾಗಿ ಕೆಳಗೆ ಕೂತು ತಿನ್ನುವ ಕ್ರಮವೀಗ ಅಪರೂಪದಲ್ಲಿ ಅಪರೂಪ. ಹೀಗೆ ಸ್ವಸ್ಥವಾಗಿ ಕೂತು, ನಿರುಮ್ಮಳ ಮನಸ್ಸಿನಿಂದ ಊಟ ಮಾಡುವುದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಲಾಭದಾಯಕ ಎನ್ನುತ್ತವೆ ಕೆಲವು ಅ‍ಧ್ಯಯನಗಳು. ಏನು ಪ್ರಯೋಜನ ಹೀಗೆ ನೆಮ್ಮದಿಯಾಗಿ ಕೂತುಣ್ಣುವುದರಿಂದ?

Improved Digestion Tea Benefits

ಜೀರ್ಣಾಂಗಗಳು ಚುರುಕು

ನಿಂತು, ಓಡುತ್ತಾ ಅಥವಾ ಇನ್ನಾವುದೇ ಭಂಗಿಯಲ್ಲಿ ತಿನ್ನುವುದಕ್ಕಿಂತ, ಕುಳಿತು ಬೆನ್ನು ನೇರವಾಗಿ ಇರಿಸಿಕೊಂಡು ತಿನ್ನುವುದು ಜೀರ್ಣಾಂಗಗಳ ಮೇಲೆ ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ನೈಸರ್ಗಿಕವಾಗಿ ಜೀರ್ಣಾಂಗಗಳು ರಚನೆಯಾದ ರೀತಿಯಲ್ಲೇ ನೇರವಾಗಿ ಅವುಗಳನ್ನು ಇರಿಸಿಕೊಂಡು ಊಟ ಮಾಡುವುದರಿಂದ, ಆಹಾರ ತಡೆಯಿಲ್ಲದಂತೆ ಪಚನೇಂದ್ರಿಯಗಳಲ್ಲಿ ಸಾಗಬಹುದು. ಇದರಿಂದ ಹೊಟ್ಟೆ ಉಬ್ಬರಿಸುವುದು ಅಥವಾ ಹುಳಿತೇಗಿನಂಥ ತೊಂದರೆಗಳನ್ನು ಕಡಿಮೆ ಮಾಡಲು ಸಾಧ್ಯ ಎನ್ನಲಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿದ್ದು, ಕುಳಿತು ವಿಶ್ರಾಂತಿಯಲ್ಲಿ ಊಟ ಮಾಡುವಾಗ ದೇಹ-ಮನಸ್ಸಿಗೆ ದೊರೆಯುವ ಆರಾಮದ ಭಾವ. ಒತ್ತಡದಲ್ಲಿ ಗಬಗಬ ಮುಕ್ಕಿ ಓಡುವುದಕ್ಕೂ, ನಿರುಮ್ಮಳವಾಗಿ ಕುಳಿತು ತಿನ್ನುವುದಕ್ಕೂ ದೇಹದ ಅಂಗಗಳು ಪ್ರತಿಕ್ರಿಯಿಸುವ ರೀತಿ ತೀರಾ ಭಿನ್ನ. ಏನನ್ನು ಉಣ್ಣುತ್ತಿದ್ದೀರಿ, ಅದರ ರುಚಿ ಹೇಗಿದೆ, ಅದು ನಿಮಗೆಷ್ಟು ಬೇಕು/ ಸಾಕು- ಇಂಥ ಎಲ್ಲ ಭಾವನೆಗಳು ಊಟ ಮಾಡುವಾಗ ಮನದಲ್ಲಿರಬೇಕು. ಏನೋ ತಿಂದೆ, ಎಷ್ಟೋ ತಿಂದೆ ಎನ್ನುವ ಉದಾಸೀನ ಭಾವನೆ ನಮ್ಮ ದೇಹದ ಮೇಲೂ ಅಡ್ಡ ಪರಿಣಾಮ ಬೀರುತ್ತದೆ.

Iamge Of Early Dinner Benefits

ಭಂಗಿ ಸುಧಾರಣೆ

ಕುರ್ಚಿ ಮೇಲೆ ಕೂರುವುದು ಅಥವಾ ನಿಂತು ತಿನ್ನುವುದು ಮುಂತಾದ ಇನ್ನಾವುದೇ ರೀತಿಯ ಊಟ/ ತಿಂಡಿಯ ಭಂಗಿಗಿಂತಲೂ ಕೆಳಗೆ ಶಿಸ್ತಾಗಿ ಕುಳಿತು ಉಣ್ಣುವುದು ದೇಹದ ಭಂಗಿಯನ್ನು ಸುಧಾರಿಸುತ್ತದೆ. ಉದಾ, ದಿನವಿಡೀ ಕುರ್ಚಿಯಲ್ಲಿ ಬೆನ್ನಿಗೆ ಆಧಾರ ನೀಡಿಯೇ ಕುಳಿತುಕೊಳ್ಳುತ್ತೇವೆ. ಅದರರ್ಥ, ಬೆನ್ನಿನ ಭಾಗ ಸ್ನಾಯುಗಳನ್ನು ನಾವು ಬಳಸುತ್ತಿಲ್ಲ. ಊಟಕ್ಕೆಂದು ಕೆಳಗೆ ಕೂರುವಾಗ ಬೆನ್ನಿಗೆ ಯಾವುದೇ ಆಧಾರವಿರುವುದಿಲ್ಲ. ಆಗ ಬೆನ್ನಿನ ಸ್ನಾಯುಗಳು ಕೆಲಸ ಮಾಡಲೇಬೇಕು; ಮಾಂಸಪೇಶಿಗಳು ಉದ್ದೀಪನಗೊಳ್ಳಲೇಬೇಕು.
ಈ ಮೂಲಕ ಬೆನ್ನು ಮತ್ತು ಪಕ್ಕೆಯ ಸ್ನಾಯುಗಳನ್ನು ಸಕ್ರಿಯ ಮಾಡಿ, ದೇಹದ ಅಂಗ-ಭಂಗಿಗಳನ್ನು, ಕೀಲು-ಸ್ನಾಯುಗಳ ಆರೋಗ್ಯವನ್ನು ಸುಧಾರಿಸಲು ಸಾಧ್ಯವಾಗುತ್ತದೆ. ನಿಯಮಿತವಾಗಿ ಕಾಲು ಮಡಿಸಿದ ಭಂಗಿಯಲ್ಲಿ ಕೆಳಗೆ ಕೂರುವುದರಿಂದ ಕೆಳಬೆನ್ನು, ಸೊಂಟ, ಪೃಷ್ಠ, ತೊಡೆ ಮತ್ತು ಕಿಬ್ಬೊಟ್ಟೆಯ ಸ್ನಾಯುಗಳು ಬಲವಾಗುತ್ತವೆ. ಬೆನ್ನು ಮೂಳೆಯ ಆರೋಗ್ಯ ಸುಧಾರಿಸುತ್ತದೆ. ರಕ್ತ ಪರಿಚಲನೆ ಉತ್ತಮವಾಗುತ್ತದೆ. ಇದು ಊಟದ ಸಮಯದಲ್ಲಿ ಮಾತ್ರವಲ್ಲ, ದಿನವಿಡೀ ನಮ್ಮೆಲ್ಲ ಚಟುವಟಿಕೆಗಳಿಗೆ ನೆರವಾಗುವ ರೀತಿಯಲ್ಲಿ ಆರೋಗ್ಯ ಸುಧಾರಿಸಿಕೊಳ್ಳಲು ನೆರವಾಗುತ್ತದೆ.

ಇದನ್ನೂ ಓದಿ: Home Remedies: ಮಕ್ಕಳನ್ನು ಕಾಡುವ ಶೀತ-ಕೆಮ್ಮಿಗೆ ಮನೆಯಲ್ಲೇ ಇದೆ ಉಪಶಮನ

ಮಾನಸಿಕ ಆರೋಗ್ಯ

ಊಟ ಮಾಡುವಾಗ ಮಾನಸಿಕ ಸ್ಥಿತಿ ಹೇಗಿರುತ್ತದೆ ಎನ್ನುವುದು ಅತ್ಯಂತ ಗುರುತರವಾದದ್ದು. ಆದರೆ ಅದನ್ನೆಲ್ಲ ಗಾಳಿಗೆ ತೂರಿರುವ ನಾವು, ಟಿವಿ ನೋಡುತ್ತಾ, ಮೊಬೈಲ್‌ ಗೀರುತ್ತಾ ಅಥವಾ ಆ ಹೊತ್ತಿಗೆ ಸಂಬಂಧವಿಲ್ಲ ಇನ್ನೇನೋ ಮಾಡುತ್ತಾ ಉಣ್ಣುತ್ತೇವೆ. ಊಟಕ್ಕೂ ಒಂದು ಶ್ರದ್ಧೆ ಬೇಕು, ಹೊತ್ತಿಗೆ ಸರಿಯಾಗಿ ಹಸಿವು ತಣಿಸಿದ ಅನ್ನದ ಬಗೆಗೆ ಕೃತಜ್ಞತೆ ಬೇಕು. ಇದನ್ನೆಲ್ಲ ಮನದಲ್ಲಿ ಇರಿಸಿಕೊಳ್ಳುವುದಕ್ಕೆ ಊಟಕ್ಕಾಗಿ ಒಂದು ಘಳಿಗೆಯನ್ನು ಮೀಸಲಿಟ್ಟರೆ ಮಾತ್ರವೇ ಸಾಧ್ಯ. ವಿಶ್ರಾಂತಿಯ ಭಾವದೊಂದಿಗೆ ಕೂತು ಊಟ ಮಾಡುವುದು ಇಂಥ ಕಾರಣಗಳಿಗೆ ಮುಖ್ಯವಾಗುತ್ತದೆ.
ಆಹಾರದ ಘಮ, ರುಚಿ, ಬಣ್ಣ ಇತ್ಯಾದಿಗಳೆಲ್ಲ ನಮ್ಮ ಜೀರ್ಣ ರಸದ ಸ್ರವಿಸುವಿಕೆಯನ್ನು ಹೆಚ್ಚಿಸಬಲ್ಲವು. ಅದನ್ನೆಲ್ಲ ಗಮನಿಸುವಷ್ಟು ವ್ಯವಧಾನ ನಮಗಿರಬೇಕು. ಇದು ಊಟದ ಸಂತೃಪ್ತಿಯನ್ನು ಹೆಚ್ಚಿಸಬಲ್ಲದು. ಅಂದರೆ ಪರಾತಗಟ್ಟಲೆ ತಿನ್ನದಿದ್ದರೂ, ಸ್ವಲ್ಪ ತಿಂದಷ್ಟಕ್ಕೇ ತೃಪ್ತಿಯನ್ನು ನೀಡಬಲ್ಲದು. ಇದು ಸತ್ವಗಳನ್ನು ಹೀರಿಕೊಳ್ಳಲು ದೇಹಕ್ಕೆ ನೆರವಾಗುವುದೇ ಅಲ್ಲದೆ, ತೂಕ ಇಳಿಸುವ ಉದ್ದೇಶ ಇದ್ದವರಿಗೆ ವರದಂತೆ ಕೆಲಸ ಮಾಡುತ್ತದೆ. ಹಾಗಾಗಿ ಕೂತು ಊಟ ಮಾಡಿ, ಉಂಡೆದ್ದ ಮೇಲೆ ಅದನ್ನು ಕರಗಿಸಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Fortis Hospital: ಜನನಾಂಗದಿಂದ ಹೊರಗೆ ಚಾಚಿದ್ದ ಗರ್ಭಕೋಶ ರೋಬೋಟಿಕ್‌ ಮೂಲಕ ಮರುಸ್ಥಾಪನೆ!

39 ವರ್ಷದ ಅನಿವಾಸಿ ಭಾರತೀಯ ಮಹಿಳೆಯ ಜನನಾಂಗದ ಮೂಲಕ ಹೊರಗೆ ಹಿಗ್ಗಿಕೊಂಡಿದ್ದ ಗರ್ಭಕೋಶವನ್ನು ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯರ ತಂಡ ಯಶಸ್ವಿಯಾಗಿ ರೋಬೋಟಿಕ್‌ ಶಸ್ತ್ರಚಿಕಿತ್ಸೆಯಿಂದ ಯಥಾಸ್ಥಿತಿಯಲ್ಲಿ ಇರಿಸಲು ಯಶಸ್ವಿಯಾಗಿದೆ. ಇದು ಅಪರೂಪದ ಶಸ್ತ್ರ ಚಿಕಿತ್ಸೆಯಾಗಿದೆ. ಫೋರ್ಟಿಸ್ ಆಸ್ಪತ್ರೆಯ ಮೂತ್ರಶಾಸ್ತ್ರ, ಸ್ತ್ರೀರೋಗ-ಆಂಕೊಲಾಜಿ ಮತ್ತು ರೋಬೋಟಿಕ್ ಶಸ್ತ್ರಚಿಕಿತ್ಸೆಯ ಹಿರಿಯ ಸಲಹೆಗಾರರಾದ ಡಾ. ರುಬಿನಾ ಶಾನವಾಜ್ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Fortis Hospital
Koo

ಬೆಂಗಳೂರು: 39 ವರ್ಷದ ಅನಿವಾಸಿ ಭಾರತೀಯ ಮಹಿಳೆಗೆ ತನ್ನ ಜನನಾಂಗದ ಮೂಲಕ ಹೊರಗೆ ಹಿಗ್ಗಿಕೊಂಡಿದ್ದ ಗರ್ಭಕೋಶವನ್ನು ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯರ ತಂಡ ಯಶಸ್ವಿಯಾಗಿ ರೋಬೋಟಿಕ್‌ ಮೂಲಕ ಶಸ್ತ್ರಚಿಕಿತ್ಸೆಯ ನಡೆಸಿ ಯಥಾಸ್ಥಿತಿಗೆ ಪುನಃಸ್ಥಾಪಿಸಿದೆ.

ಫೋರ್ಟಿಸ್ ಆಸ್ಪತ್ರೆಯ ಮೂತ್ರಶಾಸ್ತ್ರ, ಸ್ತ್ರೀರೋಗ-ಆಂಕೊಲಾಜಿ ಮತ್ತು ರೋಬೋಟಿಕ್ ಶಸ್ತ್ರಚಿಕಿತ್ಸೆಯ ಹಿರಿಯ ಸಲಹೆಗಾರರಾದ ಡಾ. ರುಬಿನಾ ಶಾನವಾಜ್ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದೆ.

ಇದನ್ನೂ ಓದಿ: Pralhad Joshi: ಮುಂಬೈ, ಕೋಲ್ಕತಾದಲ್ಲಿ ಇವಿ ಬ್ಯಾಟರಿ ಚಾರ್ಜರ್ ಘಟಕಕ್ಕೆ ಬೆಂಗಳೂರು ಮಾದರಿ

ಈ ಕುರಿತು ಮಾತನಾಡಿದ ಡಾ. ರುಬಿನಾ, ಎರಡು ಮಕ್ಕಳನ್ನು ಹೊಂದಿರುವ 39 ವರ್ಷದ ಎನ್‌ಆರ್‌ಐ ಮಹಿಳೆಗೆ ನಾಲ್ಕು ವರ್ಷಗಳ ಹಿಂದೆಯೇ ಗರ್ಭಕೋಶವು ಜನನಾಂಗದ ಮೂಲಕ ಹೊರಗೆ ಚಾಚಿಕೊಂಡಿತ್ತು. ಸಾಮಾನ್ಯವಾಗಿ ಋತುಬಂಧ ನಿಂತ ಬಳಿಕ ಈ ಸಮಸ್ಯೆ ಕೆಲವರಲ್ಲಿ ಕಾಣಿಸುತ್ತದೆ. ಆದರೆ ಇವರಿಗೆ ಋತುಬಂಧ ನಿಲ್ಲುವ ಮೊದಲೇ ಗರ್ಭಕೋಶ ಜನನಾಂಗದ ಮೂಲಕ ಚಾಚಿಕೊಂಡಿತ್ತು. ಈ ಸಮಸ್ಯೆಯಿಂದ ಇವರು ದಿನನಿತ್ಯದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅಷ್ಟೇ ಅಲ್ಲ, ಕಿಬ್ಬೊಟ್ಟೆ ನೋವು, ಹೊಟ್ಟೆ ಉಬ್ಬುವಿಕೆಯಿಂದ ತೊಡೆಗಳ ಅಸ್ವಸ್ಥತೆ, ಮೂತ್ರ ವಿಸರ್ಜನೆ ಮಾಡುವುದು ಸಹ ಕಷ್ಟಕರವಾಗಿತ್ತು. ಕೆಲವರು ಇದಕ್ಕೆ ಗರ್ಭಕೋಶವನ್ನೇ ತೆಗೆದುಹಾಕುವ ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಳ್ಳುತ್ತಾರೆ. ಆದರೆ, ಫೋರ್ಟಿಸ್‌ ಆಸ್ಪತ್ರೆಯಲ್ಲಿ ಕೆಳಗೆ ಜಾರಿದ ಗರ್ಭಕೋಶವನ್ನು ರೋಬೋಟಿಕ್‌ ಸಹಾಯದ ಮೂಲಕ ಮೇಲೆತ್ತುವ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುತ್ತದೆ. ಅಂತೆಯೇ ಇವರಿಗೂ ಸಹ ಹಲವು ಆಸ್ಪತ್ರೆಗಳಲ್ಲಿ ಗರ್ಭಕೋಶವನ್ನು ತೆಗೆಸುವಂತೆಯೇ ಸಲಹೆ ನೀಡಲಾಗಿತ್ತು.

ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗೋಲ್ಡನ್‌ ಟೈಮ್‌; ಚಿನ್ನದ ದರ ಇಂದು ಕೂಡ ಇಳಿಮುಖ

ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದ ಇವರಿಗೆ “ರೋಬೋಟ್-ಅಸಿಸ್ಟೆಡ್ ಸ್ಯಾಕ್ರೋ-ಹಿಸ್ಟರೊಪೆಕ್ಸಿ ಶಸ್ತ್ರಚಿಕಿತ್ಸೆಯ ಸಲಹೆ ನೀಡಲಾಯಿತು. ಈ ಶಸ್ತ್ರಚಿಕಿತ್ಸೆಯ ಮೂಲಕ ಕೆಳಗೆ ಜಾರಲಾದ ಗರ್ಭಕೋಶವನ್ನು ಅದೇ ಸ್ಥಳದಲ್ಲಿ ಕೂರಿಸಲಾಯಿತು. ಇದೀಗ ಅವರು ಚೇತರಿಸಿಕೊಂಡಿದ್ದಾರೆ ಎಂದು ವಿವರಿಸಿದರು.

Continue Reading

ವಿದೇಶ

Monkey Pox: ಏನಿದು ಡೇಂಜರಸ್ ಮಂಕಿ ಪಾಕ್ಸ್? ಇದು ಹೇಗೆ ಹರಡುತ್ತದೆ? ಪಾರಾಗೋದು ಹೇಗೆ?

ಮಂಕಿ ಪಾಕ್ಸ್ (Monkey Pox) ವೈರಸ್ ಸೋಂಕಿತರಲ್ಲಿ ಸುಮಾರು ನಾಲ್ಕು ವಾರಗಳವರೆಗೆ ವಿವಿಧ ರೀತಿಯ ರೋಗ ಲಕ್ಷಣಗಳನ್ನು ಉಂಟು ಮಾಡುತ್ತದೆ. ಸೋಂಕಿತರ ಮಧ್ಯೆಯೇ ಇದ್ದರೂ ಸೋಂಕಿನ ಅಪಾಯವನ್ನು ಕಡಿಮೆ ಮಾಡಲು ಹಲವು ದಾರಿಗಳಿವೆ. ಇದಕ್ಕಾಗಿ ಮಂಕಿ ಪಾಕ್ಸ್ ಎಂದರೇನು, ಇದು ಹೇಗೆ ಬರುತ್ತದೆ, ಇದರ ಲಕ್ಷಣಗಳು ಏನು ಎನ್ನುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Monkey Pox
Koo

ಮಧ್ಯ ಆಫ್ರಿಕಾದ (Central Africa) ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ( Democratic Republic of the Congo) ಮತ್ತು ನೆರೆಹೊರೆಯ ದೇಶಗಳಲ್ಲಿ ಮಂಕಿ ಪಾಕ್ಸ್ (Monkey Pox) ವೈರಸ್‌ನ ಹೊಸ ರೂಪಾಂತರ ಆತಂಕ ಮೂಡಿಸಿದೆ. ಸುಮಾರು ನಾಲ್ಕು ವಾರಗಳವರೆಗೆ ಕಾಡುವ ಈ ಸೋಂಕು ಕೀವು ತುಂಬಿದ ಚರ್ಮದ ದದ್ದುಗಳಿಗೆ ಕಾರಣವಾಗುತ್ತದೆ, ಇದು ತುಂಬಾ ನೋವಿನಿಂದ ಕೂಡಿರುತ್ತದೆ. ಸೋಂಕಿತರ ಮಧ್ಯೆಯೇ ಇದ್ದರೂ ಸೋಂಕಿನ ಅಪಾಯವನ್ನು ಕಡಿಮೆ ಮಾಡಲು ಹಲವು ದಾರಿಗಳಿವೆ. ಇದಕ್ಕಾಗಿ ಮಂಕಿ ಪಾಕ್ಸ್ ಎಂದರೇನು, ಇದು ಹೇಗೆ ಬರುತ್ತದೆ, ಇದರ ಲಕ್ಷಣಗಳು ಏನು ಎನ್ನುವ ಕುರಿತು ತಿಳಿದುಕೊಳ್ಳಬೇಕು.

ಮಂಕಿ ಪಾಕ್ಸ್ ಎಂದರೇನು?

ಮಂಕಿ ಪಾಕ್ಸ್ ಎಂಬುದು ವೈರಸ್‌ನಿಂದ ಹರಡುವ ಸಾಂಕ್ರಾಮಿಕ ಕಾಯಿಲೆಯಾಗಿದೆ. ಇದು ಮೊದಲ ಬಾರಿಗೆ 1958ರಲ್ಲಿ ಡೆನ್ಮಾರ್ಕ್‌ನಲ್ಲಿ ಪತ್ತೆಯಾಯಿತು. ಇದು ಸಿಡುಬು ರೋಗವನ್ನು ಹೋಲುತ್ತದೆ.

“ಮಂಕಿಪಾಕ್ಸ್ ವೈರಸ್” ಎಂದು ಕರೆಯಲಾಗಿದ್ದರೂ ಈ ವೈರಸ್‌ನ ಮೂಲವು ಇನ್ನೂ ತಿಳಿದಿಲ್ಲ. ಅಳಿಲು, ಸಸ್ತನಿಗಳಲ್ಲಿ ಈ ವೈರಸ್ ಕಂಡು ಬರುತ್ತದೆ ಎನ್ನುತ್ತಾರೆ ಸಂಶೋಧಕರು.

ಈ ವೈರಸ್ ಮಧ್ಯ ಮತ್ತು ಪಶ್ಚಿಮ ಆಫ್ರಿಕಾದಲ್ಲಿ ಹೆಚ್ಚಾಗಿ ಕಂಡು ಬಂದಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ (WHO) ಎರಡು ಬಾರಿ ಮಂಕಿ ಪಾಕ್ಸ್ ಹರಡುವಿಕೆಯ ಬಗ್ಗೆ ಎಚ್ಚರಿಕೆಯನ್ನು ನೀಡಿತ್ತು. 2022ರಲ್ಲಿ 70 ಕ್ಕೂ ಹೆಚ್ಚು ದೇಶಗಳಿಗೆ ಮಂಕಿ ಪಾಕ್ಸ್ ಹರಡಿತ್ತು. ಈ ವರ್ಷದ ಮಂಕಿ ಪಾಕ್ಸ್ ನ ಹೊಸ ರೂಪಾಂತರವು ಕಾಂಗೋ ಮತ್ತು ನೆರೆಯ ದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಸಾವಿನ ಉಲ್ಬಣಕ್ಕೆ ಕಾರಣವಾಗಿದೆ.

Monkey Pox
Monkey Pox


ಎಂಪಾಕ್ಸ್‌‌ಗೆ ಚಿಕಿತ್ಸೆ

ಇದಕ್ಕೆ ನಿರ್ದಿಷ್ಟವಾಗಿ ಯಾವುದೇ ಚಿಕಿತ್ಸೆಗಳಿಲ್ಲ. ಬಲವಾದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೊಂದಿದ್ದರೆ ಮತ್ತು ಚರ್ಮ ರೋಗವನ್ನು ಹೊಂದಿಲ್ಲದಿದ್ದರೆ ನೋವು ನಿವಾರಣೆ ಸೇರಿದಂತೆ ಸೂಕ್ತವಾದ ವೃತ್ತಿಪರ ಆರೈಕೆಯಿಂದ ಚೇತರಿಸಿಕೊಳ್ಳಬಹುದು. 2022ರಲ್ಲಿ ಎಂಪಾಕ್ಸ್ ಚಿಕಿತ್ಸೆಗಾಗಿ tecovirimat ಎಂದು ಕರೆಯಲ್ಪಡುವ ಒಂದು ಆಂಟಿವೈರಲ್ ಔಷಧವನ್ನು ಅನುಮತಿಸಲಾಗಿದೆ.

ಪಾಕ್ಸ್ ಹೇಗೆ ಹರಡುತ್ತದೆ?

ಕಣ್ಣು, ಬಾಯಿ, ಚರ್ಮ, ಮೂಗಿನಿಂದ ಸ್ರವಿಸುವ ದ್ರವ ಮತ್ತು ಉಸಿರಾಟದ ಮೂಲಕ ಈ ವೈರಸ್ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಎಂಪಾಕ್ಸ್ ಇರುವ ಜನರ ನಿಕಟ ಸಂಪರ್ಕಕ್ಕೆ ಬಂದಾಗ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ರೋಗಲಕ್ಷಣಗಳನ್ನು ತೋರಿಸುವ ಮೊದಲೇ ಇದು ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ.

ಎಂಪಾಕ್ಸ್ ನ ಲಕ್ಷಣಗಳು ಯಾವುವು?

ಸಾಮಾನ್ಯವಾಗಿ ಈ ವೈರಲ್ ಸೋಂಕು ಗುದದ್ವಾರ, ಜನನಾಂಗ, ಎದೆ, ಮುಖ ಅಥವಾ ಬಾಯಿಯ ಮೇಲೆ ದದ್ದುಗಳಿಂದ ಪ್ರಾರಂಭವಾಗುತ್ತದೆ. ಅನಂತರ ದೇಹದ ಇತರ ಭಾಗಗಳಿಗೆ ವಿಸ್ತರಿಸಬಹುದು. ದದ್ದುಗಳು ನೋವಿನಿಂದ ಕೂಡಿರುತ್ತವೆ. ತುರಿಕೆಯು ಹೆಚ್ಚಾಗಿರುತ್ತದೆ. ಈ ದದ್ದುಗಳು ಮೊಡವೆ ಅಥವಾ ಗುಳ್ಳೆಗಳನ್ನು ಹೋಲುತ್ತವೆ. ಜ್ವರ, ತಲೆನೋವು, ಊದಿಕೊಂಡ ದುಗ್ಧರಸ ಗ್ರಂಥಿಗಳು, ಸ್ನಾಯು ನೋವು ಅಥವಾ ಶೀತ ಇತರ ರೋಗಲಕ್ಷಣಗಳಾಗಿವೆ.

ವೈರಸ್‌ಗೆ ಒಡ್ಡಿಕೊಂಡ 21 ದಿನಗಳಲ್ಲಿ ರೋಗಲಕ್ಷಣಗಳು ಸಾಮಾನ್ಯವಾಗಿ ಪ್ರಾರಂಭವಾಗುತ್ತವೆ. ಗಾಯಗಳು ಸೋಂಕಿಗೆ ಒಳಗಾದಾಗ ಅಪಾಯಕಾರಿಯಾಗಬಹುದು. ಅತಿಸಾರ, ವಾಂತಿ, ನ್ಯುಮೋನಿಯಾ, ಮೆದುಳಿನ ಉರಿಯೂತ, ನಿರ್ಜಲೀಕರಣ, ಉಸಿರಾಟದ ತೊಂದರೆಗಳೂ ಕೆಲವರಲ್ಲಿ ಕಾಣಿಸಿಕೊಳ್ಳಬಹುದು.


ಯಾರಿಗೆ ಹೆಚ್ಚು ಅಪಾಯ?

ರೋಗನಿರೋಧಕ ಶಕ್ತಿ ಹೊಂದಿಲ್ಲದವರು ಈ ಸೋಂಕಿನಿಂದ ಹೆಚ್ಚು ಅಪಾಯವನ್ನು ಎದುರಿಸಬೇಕಾಗುತ್ತದೆ. ಲೈಂಗಿಕ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರಿಗೆ ಸೋಂಕಿನ ಅಪಾಯ ಹೆಚ್ಚಾಗಿರುತ್ತದೆ. ಗರ್ಭಿಣಿಯರು, ವರ್ಷದೊಳಗಿನ ಮಕ್ಕಳು, ಎಸ್ಜಿಮಾದಂತಹ ಕಾಯಿಲೆ ಹೊಂದಿರುವವರಿಗೆ ಇದರ ಅಪಾಯ ಅಧಿಕವಾಗಿರುತ್ತದೆ.

ಇದನ್ನೂ ಓದಿ: MonkeyPox: ತೀವ್ರಗೊಳ್ಳುತ್ತಿದೆ ಮಂಕಿ ಪಾಕ್ಸ್; ಮತ್ತೊಮ್ಮೆ ಲಾಕ್‌ಡೌನ್ ಘೋಷಣೆ?

ಮಂಕಿ ಪಾಕ್ಸ್ ಬರುವುದನ್ನು ತಡೆಯುವುದು ಹೇಗೆ?

ಸೋಂಕಿತರು ಎರಡರಿಂದ ನಾಲ್ಕು ವಾರಗಳಲ್ಲಿ ಚೇತರಿಸಿಕೊಳ್ಳುತ್ತಾರೆ. ಸೋಂಕಿತರಿಂದ ದೂರವಿರುವುದು, ಹೆಚ್ಚಿನ ಮುನ್ನೆಚ್ಚರಿಕೆ ವಹಿಸಿ ಅವರ ಕಾಳಜಿ ಮಾಡುವುದರಿಂದ ಸೋಂಕು ಹರಡುವ ಅಪಾಯವನ್ನು ಕಡಿಮೆ ಮಾಡಬಹುದು. ಸೋಂಕಿತರು ಮನೆಯಲ್ಲಿ ಇದ್ದರೆ ಆದಷ್ಟು ಸ್ವಚ್ಛತೆ ಪಾಲಿಸಿ.

ಸೋಂಕು ಹರಡುವುದನ್ನು ತಡೆಯಲು ಲಸಿಕೆಯನ್ನು ಸಹ ಪಡೆಯಬಹುದು. ಅಮೆರಿಕದಲ್ಲಿ ಸೋಂಕು ಅಥವಾ ತೊಡಕುಗಳ ಹೆಚ್ಚಿನ ಅಪಾಯವನ್ನು ತಡೆಗಟ್ಟಲು ಸಿಡುಬಿನ ಲಸಿಕೆಯನ್ನು ನೀಡಲಾಗಿತ್ತು.

Continue Reading

Latest

Eye Care Food: ನೀವು ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಈ ಆಹಾರಗಳನ್ನು ಸೇವಿಸಿ

ಕೆಲವರು ಇಡೀ ದಿನ (Eye Care Food) ಕಂಪ್ಯೂಟರ್, ಲ್ಯಾಪ್ಟಾಪ್ ಮುಂದೆ ಕುಳಿತು ಕೆಲಸ ಮಾಡುತ್ತಾರೆ. ಅಂತವರು ತಮ್ಮ ಕಣ್ಣುಗಳ ಆರೋಗ್ಯದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ ಇದರಿಂದ ಮುಂದೆ ಅನೇಕ ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು. ಅಲ್ಲದೇ ಕಣ್ಣುಗಳ ಮೇಲೆ ಒತ್ತಡ ಹೆಚ್ಚಾಗಿ ಜನರು ಕನ್ನಡಕವನ್ನು ಧರಿಸಬೇಕಾಗುತ್ತದೆ. ಹಾಗಾಗಿ ಕಣ್ಣಿನ ದೃಷ್ಟಿ ಸಮಸ್ಯೆಗಳನ್ನು ನಿವಾರಿಸಲು ಈ ಆಹಾರವನ್ನು ತಪ್ಪದೇ ಸೇವಿಸಿ.

VISTARANEWS.COM


on

Eye Care Food
Koo


ಹೆಚ್ಚಿನ ಜನರು ಕೆಲಸದ ಒತ್ತಡದಲ್ಲಿ ಆರೋಗ್ಯದ ಬಗ್ಗೆ ಗಮನಹರಿಸುವುದಿಲ್ಲ. ಕೆಲವರು ಇಡೀ ದಿನ ಕಂಪ್ಯೂಟರ್, ಲ್ಯಾಪ್‍ಟಾಪ್ ಮುಂದೆ ಕುಳಿತು ಕೆಲಸ ಮಾಡುತ್ತಾರೆ. ಅಂತವರು ತಮ್ಮ ಕಣ್ಣುಗಳ ಆರೋಗ್ಯದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ ಇದರಿಂದ ಮುಂದೆ ಅನೇಕ ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು. ಅಲ್ಲದೇ ಕಣ್ಣುಗಳ ಮೇಲೆ ಒತ್ತಡ ಹೆಚ್ಚಾಗಿ ಜನರು ಕನ್ನಡಕವನ್ನು ಧರಿಸಬೇಕಾಗುತ್ತದೆ. ಹಾಗಾಗಿ ಕಣ್ಣಿನ ದೃಷ್ಟಿ ಸಮಸ್ಯೆಗಳನ್ನು ನಿವಾರಿಸಲು ಪ್ರತಿದಿನ ಈ ಆಹಾರ(Eye Care Food)ಗಳನ್ನು ಸೇವಿಸಿ.

ಟೊಮೆಟೊ

ಇದರಲ್ಲಿ ಲೈಕೋಪೀನ್ ಸಮೃದ್ಧವಾಗಿದೆ, ಇದು ಪ್ರಬಲ ಉತ್ಕರ್ಷಣ ನಿರೋಧಕವಾಗಿದೆ. ಲೈಕೋಪೀನ್ ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ಕಣ್ಣಿನ ಪೊರೆ ಮತ್ತು ವಯಸ್ಸಿಗೆ ಸಂಬಂಧಿಸಿದ ಮ್ಯಾಕ್ಯುಲರ್ ಡಿಜೆನರೇಶನ್ (ಎಎಂಡಿ) ಅಪಾಯವನ್ನು ಕಡಿಮೆ ಮಾಡುತ್ತದೆ. ಇದಲ್ಲದೆ, ಟೊಮೆಟೊದಲ್ಲಿ ವಿಟಮಿನ್ ಸಿ ಸಹ ಇದೆ, ಇದು ಕಣ್ಣಿನ ಉರಿಯೂತವನ್ನು ಕಡಿಮೆ ಮಾಡಲು ಮತ್ತು ದೃಷ್ಟಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಕೆಂಪು ಬಣ್ಣದ ಕ್ಯಾಪ್ಸಿಕಂ

ಇದರಲ್ಲಿ ವಿಟಮಿನ್ ಸಿ ಮತ್ತು ಲ್ಯೂಟಿನ್ ಮತ್ತು ಜಿಯಾಕ್ಸಾಂಥಿನ್‍ನಂತಹ ಕ್ಯಾರೊಟಿನಾಯ್ಡ್ ಗಳನ್ನು ಹೊಂದಿರುತ್ತದೆ. ವಿಟಮಿನ್ ಸಿ ಕಣ್ಣುಗಳ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ಲ್ಯೂಟಿನ್ ಮತ್ತು ಜಿಯಾಕ್ಸಾಂಥಿನ್ ಕಣ್ಣಿನ ಕೋಶಗಳನ್ನು ಹಾನಿಕಾರಕ ಯುವಿ ಕಿರಣಗಳಿಂದ ರಕ್ಷಿಸುತ್ತದೆ. ಈ ಅಂಶಗಳು ದೃಷ್ಟಿಯನ್ನು ಸುಧಾರಿಸಲು ಮತ್ತು ವಯಸ್ಸಿಗೆ ಸಂಬಂಧಿಸಿದ ಕಣ್ಣಿನ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಸ್ಟ್ರಾಬೆರಿ

ಸ್ಟ್ರಾಬೆರಿ ವಿಟಮಿನ್ ಸಿಯ ಅತ್ಯುತ್ತಮ ಮೂಲವಾಗಿದೆ. ಇದು ಕಣ್ಣಿನ ಆರೋಗ್ಯಕ್ಕೆ ಉತ್ತಮವಾಗಿದೆ. ವಿಟಮಿನ್ ಸಿ ಕಣ್ಣಿನ ಕೋಶಗಳನ್ನು ಹಾನಿಯಿಂದ ರಕ್ಷಿಸುತ್ತದೆ ಮತ್ತು ದೃಷ್ಟಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಸ್ಟ್ರಾಬೆರಿಯಲ್ಲಿ ಆಂಟಿಆಕ್ಸಿಡೆಂಟ್‍ಗಳಿದ್ದು, ಇದು ಕಣ್ಣಿನ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ದೃಷ್ಟಿಯನ್ನು ಆರೋಗ್ಯಕರವಾಗಿರಿಸುತ್ತದೆ.

ಕೆಂಪು ದ್ರಾಕ್ಷಿ

ಕೆಂಪು ದ್ರಾಕ್ಷಿಯಲ್ಲಿ ರೆಸ್ವೆರಾಟ್ರಾಲ್ ಮತ್ತು ಉತ್ಕರ್ಷಣ ನಿರೋಧಕಗಳಿವೆ, ಇದು ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ರೆಸ್ವೆರಾಟ್ರಾಲ್ ಕಣ್ಣಿನ ಕೋಶಗಳನ್ನು ಫ್ರೀ ರಾಡಿಕಲ್‌ಗಳಿಂದ ರಕ್ಷಿಸುತ್ತದೆ ಮತ್ತು ದೃಷ್ಟಿಯನ್ನು ಸುಧಾರಿಸುತ್ತದೆ. ದ್ರಾಕ್ಷಿಯ ನಿಯಮಿತ ಸೇವನೆಯು ಕಣ್ಣಿನ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಕೆಂಪು ಸೇಬು

ಕೆಂಪು ಸೇಬುಗಳು ವಿಟಮಿನ್ ಎ, ಸಿ ಮತ್ತು ವಿವಿಧ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ, ಇದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ರೆಟಿನಾದ ಆರೋಗ್ಯಕರ ಸ್ಥಿತಿಯನ್ನು ಕಾಪಾಡಿಕೊಳ್ಳಲು ವಿಟಮಿನ್ ಎ ಮುಖ್ಯವಾಗಿದೆ, ಹಾಗೇ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಕಣ್ಣಿನ ಉರಿಯೂತವನ್ನು ಕಡಿಮೆ ಮಾಡಲು ಮತ್ತು ದೃಷ್ಟಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಹಾಗಾಗಿ ದಿನವಿಡೀ ಕಂಪ್ಯೂಟರ್, ಲ್ಯಾಪ್‍ಟಾಪ್ ಮುಂದೆ ಕೆಲಸ ಮಾಡುವವರು ತಮ್ಮ ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಈ ಆಹಾರಗಳನ್ನು ಪ್ರತಿದಿನ ಸೇವಿಸಿ ನಿಮ್ಮ ಕಣ್ಣಿನ ದೃಷ್ಟಿಯನ್ನು ಕಾಪಾಡಿಕೊಂಡು ಜಗತ್ತಿನ ಸೌಂದರ್ಯವನ್ನು ಕಣ್ತುಂಬಿಕೊಳ್ಳಿ.

Continue Reading

ಆರೋಗ್ಯ

MonkeyPox: ತೀವ್ರಗೊಳ್ಳುತ್ತಿದೆ ಮಂಕಿ ಪಾಕ್ಸ್; ಮತ್ತೊಮ್ಮೆ ಲಾಕ್‌ಡೌನ್ ಘೋಷಣೆ?

ಆಫ್ರಿಕನ್ ರಾಷ್ಟ್ರಗಳ ಮೂಲಕ ಮಂಕಿ ಪಾಕ್ಸ್ (MonkeyPox) ವೈರಸ್ ಸೋಂಕು ವೇಗವಾಗಿ ಹರಡುತ್ತಿದ್ದು, ಇತಿಹಾಸವು ಪುನರಾವರ್ತನೆಯಾಗಬಹುದೇ ಎನ್ನುವ ಆತಂಕ ಎದುರಾಗಿದೆ. ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ವಿಧಿಸಲಾದ ಜಾಗತಿಕ ಲಾಕ್‌ಡೌನ್‌ಗಳು ಮತ್ತೆ ಉಂಟಾಗಬಹುದೇ ಎನ್ನುವ ಭಯ ಈಗ ವಿಶ್ವವನ್ನೇ ಕಾಡುತ್ತಿದೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಏನು ಹೇಳಿದೆ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

MonkeyPox
Koo

ಕೋವಿಡ್ ಸಾಂಕ್ರಾಮಿಕದ (covid pandemic) ಬಳಿಕ ಕಾಣಿಸಿಕೊಳ್ಳುತ್ತಿರುವ ಕೆಲವೊಂದು ವೈರಸ್ ಸೋಂಕುಗಳು (Virus infection) ಎಷ್ಟು ಅಪಾಯಕಾರಿ ಎನ್ನುವ ಬಗ್ಗೆ ಗೊಂದಲವಿದ್ದರೂ ಎಲ್ಲರಲ್ಲೂ ಆತಂಕ ಹೆಚ್ಚಾಗಿಯೇ ಇದೆ. ಇದೀಗ ವಿಶ್ವಕ್ಕೆ ಮಂಕಿ ಪಾಕ್ಸ್ (MonkeyPox) ಭಯ ಕಾಡಲಾರಂಭಿಸಿದ್ದು, ಮತ್ತೊಂದು ಲಾಕ್ ಡೌನ್ ಸಾಧ್ಯತೆಯ ಆತಂಕ ಎದುರಾಗಿದೆ.

ಆಫ್ರಿಕನ್ ರಾಷ್ಟ್ರಗಳ ಮೂಲಕ ಈ ರೋಗವು ವೇಗವಾಗಿ ಹರಡುತ್ತಿದ್ದು, ಕರಾಳ ಇತಿಹಾಸವು ಪುನರಾವರ್ತನೆಯಾಗಬಹುದೇ ಎನ್ನುವ ಆತಂಕ ಎದುರಾಗಿದೆ. ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ವಿಧಿಸಲಾದ ಜಾಗತಿಕ ಲಾಕ್‌ಡೌನ್‌ಗಳು ಮತ್ತೆ ಉಂಟಾಗಬಹುದೇ ಎನ್ನುವ ಭಯವೂ ಕಾಡುತ್ತಿದೆ. ಈ ಮಧ್ಯೆ ಎಲ್ಲರೂ ಕೊಂಚ ನೆಮ್ಮದಿಯ ವಿಚಾರವೇನೆಂದರೆ ವಿಶ್ವಸಂಸ್ಥೆಯ ತಜ್ಞ ಡಾ. ಹ್ಯಾನ್ಸ್ ಕ್ಲೂ ಅವರು ಎಂ ಪಾಕ್ಸ್ ಗಂಭೀರವಾಗಿದ್ದರೂ ಕೋವಿಡ್ -19 ನಂತಹ ಕಠಿಣ ಕ್ರಮ ಬೇಕಾಗಿಲ್ಲ ಎಂದು ಹೇಳಿದ್ದಾರೆ.

ಎಂಪಾಕ್ಸ್ ನ ಹೊಸ ರೂಪಾಂತರವಾದ ಕ್ಲೇಡ್ ಐಬಿ ಬಗ್ಗೆ ಹೆಚ್ಚುತ್ತಿರುವ ಆತಂಕಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಶೇ. 10-11ರಷ್ಟು ಹೆಚ್ಚಿನ ಮರಣ ಪ್ರಮಾಣದಿಂದಾಗಿ ಈ ತಳಿಯು ಆತಂಕವನ್ನು ಹೆಚ್ಚಿಸಿದೆ. ಆದರೆ ರೂಪಾಂತರದ ತೀವ್ರತೆಯ ಹೊರತಾಗಿಯೂ ಜಾಗತಿಕ ಸಮುದಾಯವು ಅದರ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯಲು ಉಪಕರಣಗಳು ಮತ್ತು ಜ್ಞಾನವನ್ನು ಹೊಂದಿದೆ ಎಂದು ಡಾ. ಕ್ಲೂ ಅಭಯ ನೀಡಿದರು.

ಎಂಪಾಕ್ಸ್‌ಗೆ ಸಂಬಂಧಿಸಿ ಲಾಕ್‌ಡೌನ್‌ ಬಗ್ಗೆ ಪ್ರಸ್ತುತ ಯಾವುದೇ ಯೋಜನೆಗಳಿಲ್ಲ. ಯಾಕೆಂದರೆ ಅಸ್ತಿತ್ವದಲ್ಲಿರುವ ಸಾರ್ವಜನಿಕ ಆರೋಗ್ಯ ತಂತ್ರಗಳೊಂದಿಗೆ ಪರಿಸ್ಥಿತಿಯನ್ನು ನಿಯಂತ್ರಿಸಬಹುದಾಗಿದೆ ಎಂದು ತಿಳಿಸಿದರು. 2022ರಲ್ಲಿ ಮಂಕಿ ಪಾಕ್ಸ್ ಮೊದಲ ಬಾರಿಗೆ ಲಂಡನ್‌ನಲ್ಲಿ ಕಾಣಿಸಿಕೊಂಡಿತು. ಈ ಕಾಯಿಲೆಯಿಂದ ಸುಮಾರು 450 ಮಂದಿ ಸಾವನ್ನಪ್ಪಿದ್ದರು. ಹೀಗಾಗಿ ಇದರ ಸಂಭಾವ್ಯ ಅಪಾಯದ ಆತಂಕ ಹೆಚ್ಚಾಗಿದೆ.


ವೇಗವಾಗಿ ಹರಡುವಿಕೆ ಮತ್ತು ಸೋಂಕಿತರ ಮೇಲೆ ತೀವ್ರ ಪರಿಣಾಮದಿಂದಾಗಿ ವಿಶ್ವ ಅರೋಗ್ಯ ಸಂಸ್ಥೆಯು ಮಂಕಿ ಪಾಕ್ಸ್ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದೆ. ಮಂಕಿ ಪಾಕ್ಸ್ ವೈರಸ್‌ನ ಲಕ್ಷಣಗಳು ಸಾಮಾನ್ಯವಾಗಿ 3ರಿಂದ 17 ದಿನಗಳ ಅನಂತರ ಕಾಣಿಸಿಕೊಳ್ಳುತ್ತವೆ. ಜ್ವರ, ಚರ್ಮದ ದದ್ದುಗಳು, ಊದಿಕೊಂಡ ದುಗ್ಧರಸ ಗ್ರಂಥಿಗಳು ಮತ್ತು ಆಯಾಸ ಸಾಮಾನ್ಯವಾಗಿ ರೋಗ ಲಕ್ಷಣಗಳಾಗಿರುತ್ತವೆ. ಸೋಂಕಿತ ವ್ಯಕ್ತಿಗಳೊಂದಿಗೆ ನಿಕಟ ಸಂಪರ್ಕದಲ್ಲಿರುವವರಿಗೆ ಈ ರೋಗವು ವೇಗವಾಗಿ ಹರಡುವ ಅಪಾಯವಿದೆ.

ಸಲಿಂಗಕಾಮಿ ಪುರುಷರು ಮತ್ತು ಲೈಂಗಿಕ ಕಾರ್ಯಕರ್ತರ ಮೇಲೆ ಮಂಕಿ ಪಾಕ್ಸ್ ಹೆಚ್ಚಾಗಿ ಪರಿಣಾಮ ಬೀರುತ್ತದೆ ಎಂದು ವೈಜ್ಞಾನಿಕ ಪುರಾವೆಗಳು ಸೂಚಿಸುತ್ತವೆ.

ಇದನ್ನೂ ಓದಿ: Painkillers Side Effects: ನೋವು ನಿವಾರಕಗಳನ್ನು ನುಂಗುತ್ತೀರಾ? ಹಾಗಾದರೆ ಈ ಮಾಹಿತಿ ತಿಳಿದಿರಲಿ!

ಪ್ರಕರಣಗಳು ಉಲ್ಬಣಗೊಳ್ಳುತ್ತಿದ್ದರೂ ಡಾ. ಕ್ಲೂ ಅವರ ಹೇಳಿಕೆಗಳು ಕೊಂಚ ಆತಂಕವನ್ನು ಕಡಿಮೆ ಮಾಡಿ ಆಶಾವಾದವನ್ನು ಮೂಡಿಸುತ್ತದೆ. ಎಚ್ಚರಿಕೆಯಿಂದ ಇರುವುದು, ಪರಿಣಾಮಕಾರಿ ಕ್ರಮಗಳನ್ನು ಪಾಲಿಸುವುದರಿಂದ ಜಗತ್ತು ಮತ್ತೊಂದು ಲಾಕ್‌ಡೌನ್ ಸನ್ನಿವೇಶವನ್ನು ಎದುರಿಸುವ ತೊಂದರೆಯಿಂದ ಪಾರಾಗಬಹುದು.

ತೀವ್ರತರವಾದ ಕ್ರಮಗಳನ್ನು ಆಶ್ರಯಿಸುವುದಕ್ಕಿಂತ ಹೆಚ್ಚಾಗಿ ತಡೆಗಟ್ಟುವ ಕ್ರಮಗಳು ಮತ್ತು ತಿಳುವಳಿಕೆಯುಳ್ಳ ಸಾರ್ವಜನಿಕ ಆರೋಗ್ಯ ತಂತ್ರಗಳ ಮೂಲಕ ರೋಗವನ್ನು ನಿಯಂತ್ರಿಸುವುದು ಹೇಗೆ ಎಂಬುದನ್ನು ಕೋವಿಡ್ ಸಾಂಕ್ರಾಮಿಕವು ಈಗಾಗಲೇ ನಮಗೆ ಕಲಿಸಿ ಕೊಟ್ಟಿದೆ.

Continue Reading
Advertisement
Shreyas Patel
ಕರ್ನಾಟಕ10 mins ago

Shreyas Patel: ಸಂಸದ ಶ್ರೇಯಸ್‌ ಪಟೇಲ್‌ ಆಯ್ಕೆ ಅಸಿಂಧು ಕೋರಿ ಅರ್ಜಿ; ವಿಚಾರಣೆ ಮುಂದೂಡಿದ ಹೈಕೋರ್ಟ್‌

karnataka weather forecast
ಮಳೆ16 mins ago

Karnataka Weather : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು; ಹಳ್ಳ ದಾಟಲು ಗ್ರಾಮಸ್ಥರ ಪರದಾಟ

Fortis Hospital
ಬೆಂಗಳೂರು31 mins ago

Fortis Hospital: ಜನನಾಂಗದಿಂದ ಹೊರಗೆ ಚಾಚಿದ್ದ ಗರ್ಭಕೋಶ ರೋಬೋಟಿಕ್‌ ಮೂಲಕ ಮರುಸ್ಥಾಪನೆ!

Self Harming
ಕರ್ನಾಟಕ41 mins ago

Self Harming: ಪ್ರಿನ್ಸಿಪಾಲ್ ಬೈದರೆಂದು 3ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

Village Administrative Officer
ಉದ್ಯೋಗ51 mins ago

Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ

Bomb threat to Wonderla Amusement Park in Urdu
ರಾಮನಗರ60 mins ago

Bomb Threat : ಉರ್ದು ಭಾಷೆಯಲ್ಲಿ ವಂಡರ್‌ ಲಾ ಅಮ್ಯುಸ್ಮೆಂಟ್ ಪಾರ್ಕ್‌ಗೆ ಬಾಂಬ್‌ ಬೆದರಿಕೆ

Railway Line
ವಾಣಿಜ್ಯ1 hour ago

Railway Line: ಸ್ವಾತಂತ್ರ್ಯ ಬಂದು 77 ವರ್ಷಗಳಾದರೂ ಇನ್ನೂ ಬ್ರಿಟಿಷರ ಅಧೀನದಲ್ಲಿದೆ ಈ ರೈಲು ಮಾರ್ಗ!

Kannada New Movie
ಬೆಂಗಳೂರು1 hour ago

Kannada New Movie: ಪ್ರಜ್ವಲ್ ದೇವರಾಜ್-ಅದಿತಿ‌ ಪ್ರಭುದೇವ ಅಭಿನಯದ ʼಮಾಫಿಯಾʼ ಚಿತ್ರ ಸದ್ಯದಲ್ಲೇ ತೆರೆಗೆ

Viral Video
Latest1 hour ago

Viral Video: ಬಾಲ್ಕನಿಯಿಂದ ಬಿದ್ದು 3 ವರ್ಷದ ಬಾಲಕಿ ದಾರುಣ ಸಾವು; ಆಘಾತಕಾರಿ ವಿಡಿಯೊ

Viral News
ವೈರಲ್ ನ್ಯೂಸ್1 hour ago

Viral News: ಹೆಂಡ್ತಿ ತವರಿಗೆ ಹೋಗ್ತಿದ್ದಂತೆ ಪ್ರೇಯಸಿ ಜೊತೆ ಲವ್ವಿಡವ್ವಿ- ಸ್ಕೂಲ್‌ ಮೇಸ್ಟ್ರನ್ನು ರೆಡ್‌ಹ್ಯಾಂಡಾಗಿ ಹಿಡಿದು ಅಲ್ಲೇ ಮದ್ವೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌