Newborn Care: ಬೇಸಿಗೆಯಲ್ಲಿ ಹಸುಗೂಸುಗಳ ಆರೈಕೆ ಹೇಗೆ? ಕಾಡಿಗೆ, ಪೌಡರ್‌ ಹಾಕಬಹುದೇ? - Vistara News

ಆರೋಗ್ಯ

Newborn Care: ಬೇಸಿಗೆಯಲ್ಲಿ ಹಸುಗೂಸುಗಳ ಆರೈಕೆ ಹೇಗೆ? ಕಾಡಿಗೆ, ಪೌಡರ್‌ ಹಾಕಬಹುದೇ?

ಬೇಸಿಗೆಯಲ್ಲಿ ನವಜಾತ ಶಿಶುಗಳ (Newborn Care ) ಆರೈಕೆ ಹೇಗಿರಬೇಕು? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

new born baby
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮನೆಯಲ್ಲೊಂದು ಮಗು (Newborn Care) ಬರುವುದಿದೆ ಎಂದಾಕ್ಷಣ, ಮನೆ ಮಂದಿಯ ಸಂಭ್ರಮಗಳ ಜತೆಗೆ ಸಿದ್ಧತೆಗಳೂ ಮುಗಿಲು ಮುಟ್ಟುತ್ತವೆ. ಗರ್ಭಿಣಿಯರಿಗೆ ಯಾವುದು ಒಳ್ಳೆಯದು- ಕೆಟ್ಟದ್ದು, ಯಾವುದು ಬೇಕು- ಸಾಕು ಇತ್ಯಾದಿಗಳ ಚರ್ಚೆಯೂ ಜೋರಾಗಿರುತ್ತದೆ. ಒಬ್ಬೊಬ್ಬರು ಒಂದೊಂದು ಹೇಳುವಾಗ ಯಾವುದನ್ನು ನಂಬಬೇಕು ಯಾವುದನ್ನು ಬಿಡಬೇಕು ಎಂಬುದೇ ಬಗೆಹರಿಯುವುದಿಲ್ಲ. ಮಗು ಬಂದ ಮೇಲಂತೂ ಸಲಹೆಗಳ ಪ್ರವಾಹವೇ ಹರಿದು ಬರುತ್ತದೆ. ಬೇಸಿಗೆಯಲ್ಲಿ ನವಜಾತ ಶಿಶುಗಳ ಆರೈಕೆ ಹೇಗಿರಬೇಕು ಎಂಬ ಬಗ್ಗೆ ಕೆಲವು ಮಾಹಿತಿಗಳಿವು.

ಎಳೆಗೂಸಿಗೆ ಸ್ನಾನ

ಹುಟ್ಟಿದಾಕ್ಷಣ ಶಿಶುವನ್ನು ತೊಳೆದು ಸ್ವಚ್ಛ ಮಾಡಲಾಗುತ್ತದೆ. ಹಾಗಾಗಿ ಮೊದಲ ದಿನದಿಂದಲೇ ಅದಕ್ಕೆ ಸ್ನಾನ ಮಾಡಿಸಬೇಕೆಂದಿಲ್ಲ. ಕತ್ತರಿಸಿದ ಹೊಕ್ಕುಳ ಬಳ್ಳಿ ಒಣಗುವವರೆಗೆ ಸ್ನಾನ ಮಾಡಿಸದೇ ಇರುವುದು ಕ್ಷೇಮ. ಹಾಗೂ ಮಾಡಿಸಲೇಬೇಕೆಂದಿದ್ದರೆ ಈ ಬೇಸಿಗೆಯ ಕಾಲದಲ್ಲಿ ಹಿತವಾದ ಉಗುರು ಬಿಸಿ ನೀರಿನಲ್ಲಿ, ಸ್ನಾನ ಮಾಡಿಸಿದರೆ ಸಾಕು.

ತಾಯಿಗೆ ನೆಗಡಿಯಿದ್ದರೆ ಶಿಶುವಿಗೆ ಹಾಲೂಡಿಸಬೇಕೆ?

ಹೌದು. ತಾಯಿ ತನ್ನ ಕೈಗಳನ್ನು ಸ್ವಚ್ಛ ಇರಿಸಿಕೊಂಡು ಕೂಸನ್ನು ಮುಟ್ಟಬೇಕಾಗುತ್ತದೆ. ತಾಯಿಯ ದೇಹದಲ್ಲಿ ಉತ್ಪತ್ತಿಯಾಗುವ ಪ್ರತಿರೋಧಕ ಕಣಗಳು ಶಿಶುವಿಗೆ ದೊರೆಯುವುದು ಹಾಲಿನ ಮೂಲಕವೇ ಆದ್ದರಿಂದ, ಕಡ್ಡಾಯವಾಗಿ ಹಾಲುಣಿಸಬೇಕು. ಇದರಿಂದ ರೋಗನಿರೋಧಕತೆ ಶಿಶುವಿಗೂ ದೊರೆಯುತ್ತದೆ.

ಇದನ್ನೂ ಓದಿ: Baby found in Mandya: ಎರಡು ದಿನಗಳ ಹಿಂದಷ್ಟೇ ಹುಟ್ಟಿದ ಹೆಣ್ಣು ಮಗುವನ್ನು ತಿಪ್ಪೆಗೆ ಎಸೆದ ಮಹಾತಾಯಿ

How to take care of Newborn in summer

ಮಗುವಿನ ಕೋಣೆ ಹೇಗಿರಬೇಕು?

ಗಾಳಿ-ಬೆಳಕು ಸಾಕಷ್ಟಿದ್ದು, ತಾಯಿ-ಶಿಶುವಿಗೆ ಪ್ರಶಸ್ತವಾಗಿರಲಿ. ಕೋಣೆಗೆ ನೇರವಾಗಿ ಬಿಸಿಲು ಹೊಡೆಯುವಂತಿದ್ದರೆ, ಪರದೆಗಳನ್ನು ಹಾಕಿ ಕೋಣೆಯನ್ನು ತಂಪಾಗಿಡಿ. ಸಾಧಾರಣವಾಗಿ 25 ಡಿಗ್ರಿ ಸೆ.ನಷ್ಟು ಉಷ್ಣತೆ ಹಿತಕರವಾಗಿರುತ್ತದೆ. ಏರ್‌ ಕೂಲರ್‌ ಅಥವಾ ಕಂಡೀಶನರ್‌ ಬಳಸುತ್ತಿದ್ದರೆ, ಅವುಗಳನ್ನು ಕಾಲಕಾಲಕ್ಕೆ ಸ್ವಚ್ಛ ಮಾಡುವುದು ಅಗತ್ಯ. ಮಗುವನ್ನು ಹೊರಗೆ ಕರೆದೊಯ್ಯುವಾಗ ಆದಷ್ಟು ಮಧ್ಯಾಹ್ನ 12ರಿಂದ 4 ಗಂಟೆಯ ಹೊತ್ತನ್ನು ತಪ್ಪಿಸಿ. ತೀಕ್ಷ್ಣ ಬಿಸಿಲಿಗೆ ಎಳೆ ಚರ್ಮ ಬೇಗನೆ ಸುಡುತ್ತದೆ.

ಬಟ್ಟೆಗಳು

ಸಡಿಲವಾಗ ಹತ್ತಿಯ ಬಟ್ಟೆಗಳನ್ನೇ ಬಳಸಿ. ದಿನವಿಡೀ ಡೈಪರ್‌ ಹಾಕುವವರು ನೀವಾದರೆ, ಅದನ್ನು ಕಾಲಕಾಲಕ್ಕೆ ಬದಲಿಸಿ, ಗುಳ್ಳೆಗಳಾಗದಂತೆ ಎಚ್ಚರ ವಹಿಸಿ. ಇಷ್ಟಾಗಿಯೂ ಶಿಶುಗಳಿಗೆ ಬೇಸಿಗೆಯಲ್ಲಿ ಬೆವರುಸಾಲೆಯಂಥ ಚರ್ಮದ ಕಿರಿಕಿರಿ ಬರಬಹುದು. ತಂಪಾಗಿ ಮೈ ಒರೆಸಿ, ಬೆವರು ಕಡಿಮೆಯಾಗುವಂತೆ ನೋಡಿಕೊಳ್ಳಿ.

ನೀರು ಕುಡಿಸಬೇಕೆ?

ಬೇಸಿಗೆಯ ದಿನಗಳಾದ್ದರಿಂದ ಕೂಸಿಗೆ ಕಾಯಿಸಿದ ನೀರು ಕುಡಿಸುವಂತೆ ಯಾರಾದರೂ ಸಲಹೆ ನೀಡುವುದು ಸಾಮಾನ್ಯ. ಇದು ಸಲ್ಲದು. ಆರು ತಿಂಗಳವರೆಗೆ ಮಗುವಿಗೆ ತಾಯಿಯ ಹಾಲಿನ ಹೊರತಾಗಿ ಏನನ್ನೂ ಕುಡಿಸುವ ಅಗತ್ಯವಿಲ್ಲ. ತಾಪಮಾನ ತೀವ್ರವಾಗಿದ್ದರೆ, ಪದೇಪದೆ ಹಾಲೂಡಿಸಿ. ಆದರೆ ತಾಯಿಯನ್ನು ನಿರ್ಜಲೀಕರಣಕ್ಕೆ ಒಡ್ಡದಂತೆ ಎಚ್ಚರಿಕೆ ವಹಿಸಿ. ಮಗುವಿಗೆ ಘನ ಆಹಾರ ಪ್ರಾರಂಭಿಸಿದ ನಂತರವೇ ನೀರು ಕುಡಿಸುವ ಅಗತ್ಯ ಇರುತ್ತದೆ.

Newborn Care

ಕಾಡಿಗೆ- ಪೌಡರು- ಎಣ್ಣೆ

ಕಣ್ಣಿಗೆ ಕಾಡಿಗೆ ಹಚ್ಚುವುದರಿಂದ ಸೋಂಕು ಉಂಟಾಗಿ, ಶಿಶುವಿಗೆ ಹಾನಿ ಹೆಚ್ಚುತ್ತದೆ. ಪೌಡರು ಹಚ್ಚುವುದರಿಂದ ಅಲರ್ಜಿ ಅಥವಾ ಒಣಚರ್ಮದ ಸಮಸ್ಯೆ ಕಾಡಬಹುದು. ಮಗುವಿಗೆ ನವಿರಾಗಿ ಎಣ್ಣೆ ಮಸಾಜ್‌ ಮಾಡಬಹುದು. ಆದರೆ ಕೊಬ್ಬರಿ ಎಣ್ಣೆ, ಬಾದಾಮಿ ಎಣ್ಣೆಯಂಥ ತೈಲಗಳಿಂದ ನವಿರಾಗಿ ಮಸಾಜ್‌ ಸಾಕಾಗುತ್ತದೆ. ಸಿಕ್ಕಾಪಟ್ಟೆ ಎಣ್ಣೆ ಹಚ್ಚಿ, ಆ ಎಣ್ಣೆ ತೊಳೆಯುವುದಕ್ಕೆ ಕಠೋರ ಸೋಪು- ಬಿಸಿ ನೀರುಗಳನ್ನು ಹಾಕುವುದರಿಂದ ಎಳೆಯ ಚರ್ಮಕ್ಕೆ ಹಾನಿಯಾಗುತ್ತದೆ. ಕಿವಿಗೆ, ಮೂಗಿಗೆಲ್ಲಾ ಎಣ್ಣೆ ಹಾಕುವುದು ಬೇಡ. ಇದರಿಂದ ಸೋಂಕಿನ ಸಮಸ್ಯೆ ಉಂಟಾಗಬಹುದು.

ಮಗುವಿನ ತಲೆ ತಟ್ಟಿ ಉರುಟಾಗಿಸಬಹುದೇ?

ಕೆಲವೊಮ್ಮೆ ಹುಟ್ಟುವಾಗ ಮಗುವಿನ ತಲೆ ಆಕಾರಗೆಡುವುದು ನಿಜ. ಅದು ಸಾಮಾನ್ಯವಾಗಿ ತಾನಾಗೇ ಒಂದು ಆಕೃತಿಗೆ ಬರುತ್ತದೆ. ಅದಕ್ಕಾಗಿ ಮಗುವಿನ ತಲೆ ತಟ್ಟಬೇಕೆಂದಿಲ್ಲ. ನವಜಾತ ಮಕ್ಕಳ ತಲೆಯ ಮೂಳೆಯ ನಡುವೆ ಸೂಕ್ಷ್ಮ ಅಂತರವಿರುತ್ತದೆ. ಕ್ರಮೇಣ ಅದು ತಾನಾಗಿಯೇ ತುಂಬಿಕೊಳ್ಳುತ್ತದೆ. ಹಾಗಾಗಿ ಉರುಟಾಗಿಸುವ ಸಾಹಸಕ್ಕೆ ಶಿಶುಗಳ ತಲೆ ತಟ್ಟುವುದು ಬೇಕಿಲ್ಲ. ಇದಕ್ಕಾಗಿ ರಾಗಿಯ ಸಣ್ಣ ದಿಂಬುಗಳನ್ನು ಕೂಸುಗಳಿಗೆ ಬಳಸಬಹುದು.

Newborn Care

ಮಕ್ಕಳು ರಾತ್ರಿಯಿಡೀ ನಿದ್ರಿಸಬೇಕೆ?

ಹಾಗೇನಿಲ್ಲ. ಹಸುಗೂಸುಗಳ ಹೊಟ್ಟೆ ಸಣ್ಣದಾದ್ದರಿಂದ ಅವುಗಳಿಗೆ ಆಗಾಗ ಹೊಟ್ಟೆಗೆ ಹಾಕುವುದು ಅಗತ್ಯ. ಹಾಗಾಗಿ ರಾತ್ರಿಡೀ ನಿದ್ರಿಸಲಾಗದೆ ಪದೇಪದೆ ಎದ್ದು ಹೊಟ್ಟೆಗೆ ಹಾಕಿಕೊಳ್ಳುತ್ತವೆ. ಮೂರ್ನಾಲ್ಕು ತಿಂಗಳ ನಂತರ, ಅವುಗಳು ಹಾಲು ಕುಡಿಯುವ ಅಂತರ ಹೆಚ್ಚಿದ ಮೇಲೆ, ನಿದ್ದೆಯ ಸಮಯವೂ ದೀರ್ಘವಾಗುತ್ತಾ ಹೋಗುತ್ತದೆ. ಪುಟ್ಟ ಮಕ್ಕಳು ದಿನಕ್ಕೆ 16-17 ತಾಸು ನಿದ್ರಿಸುವುದು ಹೌದಾದರೂ, ಒಮ್ಮೆಲೆ ಇಷ್ಟು ದೀರ್ಘ ಸಮಯ ನಿದ್ದೆ ಮಾಡುವುದಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಲೈಫ್‌ಸ್ಟೈಲ್

Diabetic Controle: ಕಾಡುವ ಮಧುಮೇಹ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ತಂತ್ರ

Diabetic Controle ಯಾವುದೇ ಸಭೆ ಸಮಾರಂಭಗಳಿಗೆ ಹೋದಾಗ ಪಾಯಸ, ಹೋಳಿಗೆ, ಲಾಡು ನೀಡುವಾಗ ಎಲ್ಲರೂ ಬಾಯಿ ಚಪ್ಪರಿಸಿಕೊಂಡು ತಿಂದರೆ ಮಧುಮೇಹಿಗಳು ಮಾತ್ರ ಬಾಯಿ ಬಿಟ್ಟುಕೊಂಡು ನೋಡುತ್ತಾರೆ. ಈ ಸಮಸ್ಯೆಯನ್ನು ನಿವಾರಿಸಿಕೊಳ್ಳಲು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸರಿಯಾದ ವಿಧಾನದಲ್ಲಿ ನಿಯಂತ್ರಿಸಿಕೊಳ್ಳಿ.

VISTARANEWS.COM


on

Diabetic Controle
Koo

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಧುಮೇಹ ಎಂದರೆ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದು. ಹಾಗಾಗಿ ಮಧುಮೇಹ ಸಮಸ್ಯೆ ಇದೆ ಎಂದಾಗ ಹಲವರಿಗೆ ಬೇಸರವಾಗುತ್ತದೆ. ಯಾಕೆಂದರೆ ಇದರಿಂದ ಸಿಹಿ ಪದಾರ್ಥಗಳನ್ನು ತಿನ್ನಲು ಆಗುವುದಿಲ್ಲ. ಯಾವುದೇ ಸಭೆ ಸಮಾರಂಭಗಳಿಗೆ ಹೋದಾಗ ಬಡಿಸುವ ಪಾಯಸ, ಹೋಳಿಗೆ ತಿಂದು ಎಲ್ಲರೂ ಬಾಯಿ ಚಪ್ಪರಿಸಿಕೊಂಡರೆ ಮಧುಮೇಹಿಗಳು ಮಾತ್ರ ಬಾಯಿ ಬಿಟ್ಟುಕೊಂಡು ನೋಡುತ್ತಾರೆ. ಈ ಸಮಸ್ಯೆಗಳಿಂದ ಪಾರಾಗಲು ಸುಲಭ ತಂತ್ರವಿದೆ. ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Diabetic Controle) ನಿಯಂತ್ರಿಸಿಕೊಳ್ಳಬೇಕು. ಅದಕ್ಕಾಗಿ ಈ ಸಲಹೆಗಳನ್ನು ಪಾಲಿಸಿ.

  • ಆರೋಗ್ಯಕರ ಕೊಬ್ಬಿನ ಆಹಾರ ಸೇವನೆ: ನೀವು ಬೆಳಗ್ಗಿನ ಉಪಹಾರದಲ್ಲಿ ಬಾದಾಮಿ ಮತ್ತು ವಾಲ್ ನಟ್ಸ್ ನಂತಹ ನೆನೆಸಿದ ಬೀಜಗಳನ್ನು ಸೇವಿಸಿ. ಇವುಗಳಲ್ಲಿ ಕೊಬ್ಬಿನ ಪ್ರಮಾಣ ಹೆಚ್ಚಾಗಿದೆ. ಇದರಿಂದ ಇನ್ಸುಲಿನ್ ಮಟ್ಟ ಸುಧಾರಿಸುತ್ತದೆ.
  1. ಬೆಳಗಿನ ಉಪಹಾರದಲ್ಲಿ ಪ್ರೋಟೀನ್ ಸೇವನೆ: ನಿಮ್ಮ ಬೆಳಗಿನ ಉಪಹಾರದಲ್ಲಿ ಪ್ರೋಟೀನ್ ಸಮೃದ್ಧವಾಗಿರುವ ಆಹಾರ ಸೇವಿಸಿ. ಪ್ರೋಟೀನ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಮತ್ತು ನೀವು ದಿನವಿಡೀ ಉತ್ಸಾಹದಿಂದ ಇರಬಹುದು.
  2. ಆ್ಯಪಲ್ ಸೈಡರ್ ವಿನೆಗರ್ ಸೇವನೆ : ಇದರಲ್ಲಿ ಅಸಿಟಿನ್ ಆಮ್ಲವಿದ್ದು, ಇದು ಇನ್ಸುಲಿನ್ ಸೂಕ್ಷ್ಮತೆ ಹೆಚ್ಚಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಹಾಗಾಗಿ ಊಟಕ್ಕೆ ಅರ್ಧ ಗಂಟೆಯ ಮೊದಲು ಆ್ಯಪಲ್ ಸೈಡರ್ ವಿನೆಗರ್ ಅನ್ನು ನೀರಿನಲ್ಲಿ ಬೆರೆಸಿ ಕುಡಿಯಿರಿ.
  3. ಮೆಗ್ನೀಸಿಯಂ ಭರಿತ ಆಹಾರ ಸೇವನೆ: ಆಹಾರದಲ್ಲಿ ಬಾಳೆಹಣ್ಣು, ಬಾದಾಮಿ, ಕೋಕೋ ಮತ್ತು ಹಸಿರು ಸೊಪ್ಪುಗಳನ್ನು ಸೇರಿಸಬೇಕು. ಇವುಗಳಲ್ಲಿ ಮೆಗ್ನೀಸಿಯಂ ಸಮೃದ್ಧವಾಗಿರುತ್ತದೆ. ಇದು ಜೀವಕೋಶಗಳಿಗೆ ಗ್ಲೂಕೋಸ್ ಅನ್ನು ಹೀರಿಕೊಳ್ಳುವಂತೆ ಉತ್ತೇಜಿಸುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ.
  4. ಊಟದ ಬಳಿಕ ವಾಕಿಂಗ್ : ಊಟವಾದ ತಕ್ಷಣ ನಿದ್ರೆ ಮಾಡಬಾರು. ಬದಲಾಗಿ ಊಟವಾದ ನಂತರ 10-15 ನಿಮಿಷ ಕಾಲ ಲಘು ವಾಕಿಂಗ್ ಮಾಡಬೇಕು. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುತ್ತದೆ.
  5. ಸರಿಯಾದ ಪ್ರಮಾಣದಲ್ಲಿ ಊಟದ ಸೇವನೆ : ನೀವು ಮಧ್ಯಾಹ್ನದ ವೇಳೆ 12ರಿಂದ 2 ಗಂಟೆಯೊಳಗೆ ನಿಮ್ಮ ಹೊಟ್ಟೆ ತುಂಬುವಷ್ಟು ಊಟ ಮಾಡಿ. ಯಾಕೆಂದರೆ ಈ ಸಮಯದಲ್ಲಿ ಜೀರ್ಣಕ್ರಿಯೆ ವೇಗವಾಗಿರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಉತ್ತೇಜಿಸುತ್ತದೆ.
  6. ದಾಲ್ಚಿನ್ನಿ- ಗ್ರೀನ್ ಟೀ ಸೇವನೆ : ಸಂಜೆಯ ವೇಳೆ ಗ್ರೀನ್ ಟೀಗೆ ದಾಲ್ಚಿನ್ನಿಯನ್ನು ಬೆರೆಸಿ ಕುದಿಸಿ ಕುಡಿಯಿರಿ. ಈ ಮಿಶ್ರಣವು ಜೀರ್ಣಕ್ರೀಯೆ ಮತ್ತು ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ.
  7. ರಾಗಿ ಸೇವನೆ : ನಿಮ್ಮ ಆಹಾರದಲ್ಲಿ ರಾಗಿ ಸೇರಿಸಿ. ಇದರಲ್ಲಿ ಫೈಬರ್ ಸಮೃದ್ಧವಾಗಿದೆ. ಇದು ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ.
  8. ಸರಿಯಾಗಿ ತಿನ್ನುವ ಅಭ್ಯಾಸ ಮಾಡಿಕೊಳ್ಳಿ : ನೀವು ಅತಿಯಾಗಿ ಆಹಾರ ಸೇವಿಸುವುದನ್ನು ತಪ್ಪಿಸಿ. ಅದಕ್ಕಾಗಿ ನೀವು ಹೊಟ್ಟೆ 80% ತುಂಬುವವರೆಗೆ ತಿನ್ನಿ. ಇದು ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ. ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಬೆಂಬಲಿಸುತ್ತದೆ.

ಇದನ್ನೂ ಓದಿ:Nestle Company: ಮಕ್ಕಳ ಜೀವದ ಜತೆ ನೆಸ್ಲೆ ಕಂಪನಿ ಚೆಲ್ಲಾಟ? ಸೆರೆಲಾಕ್‌ ಕುಡಿಸೋ ಮುನ್ನ ಎಚ್ಚರ!

Continue Reading

ಲೈಫ್‌ಸ್ಟೈಲ್

Cardiac Arrest: ಮಹಿಳೆಯರೇ ಹುಷಾರು; ನೀವು ಮಾಡುವ ಈ ತಪ್ಪುಗಳೇ ಹೃದಯಾಘಾತಕ್ಕೆಕಾರಣ!

Cardiac Arrest ಹೃದಯದ ಸಮಸ್ಯೆ ಇಂದು ಸಾಕಷ್ಟು ಮಹಿಳೆಯರನ್ನು ಕಾಡುತ್ತಿದೆ. ಮಹಿಳೆಯರು ಗಂಡ, ಮಕ್ಕಳು, ಕೆಲಸ ಎಂದುಕೊಂಡು ತಮ್ಮ ಆರೋಗ್ಯದ ಬಗ್ಗೆ ಸರಿಯಾಗಿ ಕಾಳಜಿ ವಹಿಸುವುದಿಲ್ಲ. ಮಹಿಳೆಯರನ್ನು ಕಾಡುವ ಈ ಹೃದಯದ ಕಾಯಿಲೆಗೆ ಮುಖ್ಯ ಕಾರಣಗಳು ಇಲ್ಲಿವೆ.

VISTARANEWS.COM


on

Cardiac Arrest
Koo

ಬೆಂಗಳೂರು: ಹೃದಯ ಸ್ತಂಭನ (Cardiac Arrest) ಈ ಹೆಸರು ಕೇಳುತ್ತಲೇ ಹೃದಯವೇ ಬಾಯಿಗೆ ಬಂದ ಹಾಗೇ ಆಗುತ್ತದೆ. ಅಷ್ಟೊಂದು ನಡುಕ ಹುಟ್ಟಿಸುತ್ತದೆ. ಕುಳಿತಲ್ಲಿಯೇ ಹೃದಯ ಸ್ತಂಭನದಿಂದ ಕುಸಿದು ಬಿದ್ದರು, ರಾತ್ರಿ ಮಲಗಿದವರು ಏಳಲೇ ಇಲ್ಲ ಇಂತಹ ಸುದ್ದಿಗಳನ್ನು ದಿನಂಪ್ರತಿ ಕೇಳುತ್ತೇವೆ. ಸಣ್ಣಮಕ್ಕಳು ಕೂಡ ಈಗ ಈ ಕಾಯಿಲೆಗೆ ತುತ್ತಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಸಾಕಷ್ಟು  ಮಹಿಳೆಯರು ಈ ಕಾಯಿಲೆಯಿಂದ ಬಳಲುತ್ತಿದ್ದಾರಂತೆ. ಇನ್ನು ಒತ್ತಡದ ಜೀವನ ಶೈಲಿ ಹಾಗೂ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ ಇರುವುದು ಈ ಹೃದಯಾಸ್ತಂಭನಕ್ಕೆ ಕಾರಣ ಎನ್ನುತ್ತದೆ ಹೊಸ ಸಂಶೋಧನೆ. ಪ್ರಮುಖವಾಗಿ ಮಹಿಳೆಯರ ಜೀವಕ್ಕೆ ಕುತ್ತನ್ನುಂಟು ಮಾಡುವ ಈ ಹೃದಯದ ಕಾಯಿಲೆಗೇ ಮುಖ್ಯ ಕಾರಣಗಳೇನು ಹಾಗೂ ಅದನ್ನು ಹೇಗೆ ತಡೆಗಟ್ಟಬಹುದು ಎಂಬ ವಿವರ ಇಲ್ಲಿದೆ.

  • ಹೃದಯದ ರಕ್ತವನ್ನು ಪೂರೈಸುವ ರಕ್ತನಾಳಗಳಲ್ಲಿ ಪ್ಲೇಕ್ ರಚನೆಯಾದಾಗ ರಕ್ತನಾಳಗಳಲ್ಲಿ ತಡೆ ಉಂಟಾಗುತ್ತದೆ. ಇದರಿಂದ ಹೃದಯದ ಸ್ನಾಯುಗಳಿಗೆ ರಕ್ತದ ಹರಿಯುವಿಕೆ ಕಡಿಮೆಯಾಗುತ್ತದೆ. ಇದರಿಂದ ಹೃದಯ ಸ್ತಂಭನ ಸಂಭವಿಸುತ್ತದೆ.
  • ಅಧಿಕ ರಕ್ತದೊತ್ತಡದಿಂದ ಈ ಸಮಸ್ಯೆ ಕಾಡುತ್ತದೆ. ಅಧಿಕ ರಕ್ತದೊತ್ತಡವು ಹೃದಯ ಮತ್ತು ರಕ್ತನಾಳಗಳ ಮೇಲೆ ಹೆಚ್ಚುವರಿ ಒತ್ತಡವನ್ನು ಉಂಟುಮಾಡುತ್ತದೆ. ಇದರಿಂದ ಹೃದ್ರೋಗ, ಪಾರ್ಶ್ವವಾಯು ಮತ್ತು ಹೃದಯ ಸ್ತಂಭನ ಸಮಸ್ಯೆ ಕಾಡುತ್ತದೆ.
  • ಮಧುಮೇಹದಿಂದ ಹೃದಯದ ರಕ್ತನಾಳಗಳು ಹಾನಿಗೊಳಗಾಗುತ್ತದೆ. ಇದರಿಂದ ಹೃದಯ ಸ್ತಂಭನದ ಅಪಾಯ ಹೆಚ್ಚಾಗುತ್ತದೆ. ಹಾಗಾಗಿ ಮಧುಮೇಹವನ್ನು ನಿಯಂತ್ರಿಬೇಕು
  • ಬೊಜ್ಜು, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಹೃದಯ ಸ್ತಂಭನಕ್ಕೆ ಕಾರಣವಾಗುತ್ತದೆ. ಹಾಗಾಗಿ ತರಕಾರಿ, ಹಣ್ಣುಗಳು, ತರಕಾರಿ ಮತ್ತು ಧಾನ್ಯಗಳನ್ನು ಹಾಗೂ ಪ್ರೋಟೀನ್ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಮತ್ತು ಆರೋಗ್ಯಕರವಾದ ತೂಕವನ್ನು ಹೊಂದಿರಬೇಕು.
  • ಧೂಮಪಾನವು ರಕ್ತನಾಳಗಳನ್ನು ಹಾನಿಗೊಳಿಸುತ್ತದೆ. ಇದು ರಕ್ತದಲ್ಲಿನ ಆಮ್ಲಜನಕದ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಿಂದ ಹೃದಯ ಸ್ತಂಭನ ಉಂಟಾಗುತ್ತದೆ. ಹಾಗಾಗಿ ಧೂಮಪಾನವನ್ನು ತ್ಯಜಿಸಿದಷ್ಟು ಒಳ್ಳೆಯದು.
  • ದೇಹದಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಹೃದಯ ಅಪಧಮನಿಗಳಲ್ಲಿ ಫ್ಲೇಕ್​ ಸಂಗ್ರಹವಾಗಲು ಕಾರಣವಾಗುತ್ತದೆ. ಇದು ಹೃದಯ ಸ್ತಂಭನದ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಆಗಾಗ ಕೊಲೆಸ್ಟ್ರಾಲ್ ಮಟ್ಟವನ್ನು ಕಾಲಕಾಲಕ್ಕೆ ಪರೀಕ್ಷಿಸಬೇಕು.
  • ದೈಹಿಕ ಚಟುವಟಿಕೆಯ ಕೊರತೆಯು ಹೃದಯ ಸ್ನಾಯುವನ್ನು ದುರ್ಬಲಗೊಳಿಸುತ್ತದೆ. ನೀವು ನಿಯಮಿತವಾಗಿ ದೈಹಿಕ ಚಟುವಟಿಕೆಯಲ್ಲಿ ತೊಡಗದಿದ್ದರೆ ಬೊಜ್ಜು, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಅಪಾಯ ಹೆಚ್ಚಾಗುತ್ತದೆ. ಹಾಗಾಗಿ ಪ್ರತಿದಿನ ವ್ಯಾಯಾಮಗಳನ್ನು ಅಭ್ಯಾಸ ಮಾಡಬೇಕು. ಏರೋಬಿಕ್ ವ್ಯಾಯಾಮ ಅತ್ಯುತ್ತಮ.
  • ದೀರ್ಘಕಾಲದವರೆಗೆ ಒತ್ತಡ, ಖಿನ್ನತೆ ಮತ್ತು ಆತಂಕವನ್ನು ಎದುರಿಸುತ್ತಿದ್ದರೆ ರಕ್ತದೊತ್ತಡ ಹೆಚ್ಚಾಗುತ್ತದೆ. ಇದರಿಂದ ಹೃದಯ ಸ್ತಂಭನ ಸಂಭವಿಸುತ್ತದೆ. ಆಗಾಗಿ ಒತ್ತಡವನ್ನು ನಿವಾರಿಸುವಂತಹ ತಂತ್ರಗಳನ್ನು ಅಳವಡಿಸಿಕೊಳ್ಳಿ. ಅಗತ್ಯವಿದ್ದರೆ ಮಾನೋವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಿರಿ.

ಇದನ್ನೂ ಓದಿ: Pesticide: ಎವರೆಸ್ಟ್‌ ಫಿಶ್‌ ಕರಿ ಮಸಾಲೆಯಲ್ಲಿ ಕೀಟನಾಶಕ; ಬ್ಯಾನ್‌ ಮಾಡಿದ ಸಿಂಗಾಪುರ

  • ಋತುಬಂಧ, ಗರ್ಭಾಧಾರಣೆ, ಮತ್ತು ಹಾರ್ಮೋನ್ ಚಿಕಿತ್ಸೆಗಳಿಗೆ ಸಂಬಂಧಿಸಿದ ಹಾರ್ಮೋನ್ ಬದಲಾವಣೆಗಳು ರಕ್ತನಾಳದ ಕಾರ್ಯ ಮತ್ತು ಕೊಲೆಸ್ಟ್ರಾಲ್ ಮಟ್ಟಗಳ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಹೃದಯ ಸ್ತಂಭನ ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಹಾರ್ಮೋನ್ ಚಿಕಿತ್ಸೆ ನೀಡುವ ಮುನ್ನ ಆರೋಗ್ಯ ತಜ್ಞರ ಸಲಹೆ ಪಡೆಯಿರಿ.
Continue Reading

ಆರೋಗ್ಯ

Jackfruit Benefits: ಈ ಬೇಸಿಗೆಯಲ್ಲಿ ಹಲಸಿನಹಣ್ಣನ್ನು ಯಾಕೆ ತಿನ್ನಲೇಬೇಕು ಗೊತ್ತೆ? ಇಲ್ಲಿವೆ 10 ಕಾರಣಗಳು!

ಬೇರೆ ಹಣ್ಣುಗಳಿಗೆ ಹೋಲಿಸಿದರೆ, ಹಲಸಿನ ಹಣ್ಣಿನ ಬಗ್ಗೆ ಕೊಂಚ ತಾತ್ಸಾರ ಇದ್ದರೂ, ಬೇಕಾಬಿಟ್ಟಿ ಇದು ದೊರೆಯುವುದರಿಂದಲೋ ಏನೋ, ಇದು ಮೂಲೆಗುಂಪಾಗುವುದು ಹೆಚ್ಚು. ಆದರೆ, ಹಲಸಿನ ಹಣ್ಣಿನಲ್ಲಿರುವ ಪೋಷಕಾಂಶಗಳ ಪಟ್ಟಿ ನೋಡಿದರೆ ನೀವು ಹಲಸನ್ನು ಕಡೆಗಣಿಸಲಾರಿರಿ. ಈ ಕುರಿತ (Jackfruit Benefits) ಉಪಯುಕ್ತ ಮಾಹಿತಿ ಇಲ್ಲಿದೆ. ಈ ಬೇಸಿಗೆಯಲ್ಲಿ ಹಲಸಿನ ಹಣ್ಣನ್ನು ಮಿಸ್ ಮಾಡಿಕೊಳ್ಳಬೇಡಿ.

VISTARANEWS.COM


on

Jackfruit benefits
Koo

ಬೇಸಿಗೆ ಬಂತೆಂದರೆ ಮಾವು ಹಲಸುಗಳ ಸಂಭ್ರಮ. ಸೆಖೆಯಲ್ಲಿ ಮೈ ಬೇಯುತ್ತಿದ್ದರೂ, ಹಲಸಿನ ಹಣ್ಣಿನ (Jackfruit) ಬಗೆಬಗೆಯ ಖಾದ್ಯಗಳನ್ನು ಮಾಡಿ ಬಾಯಿ ಚಪ್ಪರಿಸುವ ಸುಖ ಬಹುತೇಕ ಎಲ್ಲರದ್ದು. ಬೇರೆ ಹಣ್ಣುಗಳಿಗೆ ಹೋಲಿಸಿದರೆ, ಹಲಸಿನ ಹಣ್ಣಿನ ಬಗ್ಗೆ ಕೊಂಚ ತಾತ್ಸಾರ ಇದ್ದರೂ, ಬೇಕಾಬಿಟ್ಟಿ ಇದು ದೊರೆಯುವುದರಿಂದಲೋ ಏನೋ, ಇದು ಮೂಲೆಗುಂಪಾಗುವುದು ಹೆಚ್ಚು. ಆದರೆ, ಹಲಸಿನ ಹಣ್ಣಿನಲ್ಲಿರುವ ಪೋಷಕಾಂಶಗಳ ಪಟ್ಟಿ ನೋಡಿದರೆ ನೀವು ಹಲಸನ್ನು ಕಡೆಗಣಿಸಲಾರಿರಿ. ಈ ರುಚಿಯಾದ ಹಣ್ಣನ್ನು ಈ ಬೇಸಿಗೆಯಲ್ಲಿ ನೀವು ಯಾಕೆ ತಿನ್ನಬೇಕು (Jackfruit Benefits) ಎಂಬುದಕ್ಕೆ 10 ಕಾರಣಗಳು ಇಲ್ಲಿವೆ.

Immunity Against Diseases Lemon Water Benefits

ರೋಗನಿರೋಧಕತೆಯನ್ನು ಹೆಚ್ಚಿಸುತ್ತದೆ

ಕಡಿಮೆ ಕ್ಯಾಲರಿಯ ಈ ಹಣ್ಣು (Jackfruit) ಪೋಷಕಾಂಶಗಳ ವಿಚಾರದಲ್ಲಿಯೂ ಶ್ರೀಮಂತಿಕೆಯನ್ನು ಹೊಂದಿದೆ. ಮಾರುಕಟ್ಟೆಯಲ್ಲಿ ಸದಾ ಮುಂದಿರುವ ಸೇಬು, ಆಪ್ರಿಕಾಟ್‌, ಅವಕಾಡೋ, ಬಾಳೆಹಣ್ಣು ಮತ್ತಿತರ ಹಣ್ಣುಗಳಿಗೆ ಹೋಲಿಸಿದರೆ ಹಲಸಿನ ಹಣ್ಣಿನಲ್ಲಿ ಹೆಚ್ಚು ಪೋಷಕಾಂಶಗಳಿವೆ. ಹಲಸಿನಹಣ್ಣಿನಲ್ಲಿ ವಿಟಮಿನ್‌ ಸಿ ಹಾಗೂ ಆಂಟಿ ಆಕ್ಸಿಡೆಂಟ್‌ಗಳೂ ಇರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಇದು ನೆರವಾಗುತ್ತದೆ. ದೇಹಕ್ಕೆ ಯಾವುದೇ ಇನ್‌ಫೆಕ್ಷನ್‌ ಅಥವಾ ವೈರಸ್‌ನ ಪ್ರವೇಶವಾದಾಗ ಅವುಗಳ ವಿರುದ್ಧ ಹೋರಾಡುವಲ್ಲಿ ಇದು ಮುಖ್ಯ ಪಾತ್ರ ವಹಿಸುತ್ತದೆ. ಹಲಸಿನ ಹಣ್ಣಿನ ಬೀಜ ಹಾಗೂ ತೊಳೆಯಲ್ಲಿ ಉತ್ತಮ ಮಟ್ಟದಲ್ಲಿ ಕ್ಯಾಲ್ಶಿಯಂ ಹಾಗೂ ಕಬ್ಬಿಣಾಂಶವಿದ್ದು, ವಿಟಮಿನ್‌ ಬಿ1 ಬಿ3, ಬಿ6 ಹಾಘೂ ಫೋಲೇಟ್‌ ಅನ್ನೂ ಹೊಂದಿದೆ.

images of Jackfruit Benefits

ಉತ್ತಮ ಶಕ್ತಿವರ್ಧಕ

100 ಗ್ರಾಂಗಳಷ್ಟು ಹಲಸಿನ ಹಣ್ಣಿನಲ್ಲಿ 94 ಕ್ಯಾಲರಿಗಳಿದ್ದು ಇದು ಸಾಕಷ್ಟು ಕಾರ್ಬೋಹೈಡ್ರೇಟನ್ನು ಹೊಂದಿದೆ. ಹಾಗಾಗಿ, ಹೆಚ್ಚು ಹಸಿವಾದಾಗ, ಬಹುಬೇಗನೆ ಹಸಿವನ್ನು ತಣಿಸಿ ಶಕ್ತಿಯನ್ನು ನೀಡುತ್ತದೆ.ಹಲಸಿನ ಹಣ್ಣಿನಲ್ಲಿರುವ ಸಕ್ಕರೆಯು ದೇಹದಲ್ಲಿ ಸುಲಭವಾಗಿ ಕರಗಬಲ್ಲದ್ದಾಗಿದೆ. ಹಾಗೂ, ಇದು ಆರೋಗ್ಯಕರವೂ ಕೂಡಾ.

Blood Sugar Control Guava Benefits

ಸಕ್ಕರೆಯ ಮಟ್ಟವನ್ನು ಸಮತೋಲನದಲ್ಲಿರಿಸುತ್ತದೆ

ಹಲಸಿನ ಹಣ್ಣಿನಲ್ಲಿ ಕಡಿಮೆ ಮಟ್ಟದ ಗ್ಲಿಸೆಮಿಕ್ಸ್‌ ಇಂಡೆಕ್ಸ್‌ ಇರುವುದರಿಂದ ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ಬಹುಬೇಗನೆ ಉದ್ದೀಪನೆ ಮಾಡುವುದಿಲ್ಲ. ಹೀಗಾಗಿ.ಸಕ್ಕರೆಯ ಮಟ್ಟ ದಿಢೀರ್‌ ಏರಿಕೆಯಾಗದು. ಬಹಳ ಹೊತ್ತಿನವರೆಗೆ ಹೊಟ್ಟೆ ತುಂಬಿದ ಅನುಭವ ಇದು ನೀಡುವುದರಿಂದ ಸಕ್ಕರೆಯ ಮಟ್ಟವನ್ನು ಸಮತೋಲನಗೊಳಿಸುತ್ತದೆ.

ರಕ್ತದೊತ್ತಡ ಸಮತೋಲನಗೊಳಿಸುತ್ತದೆ

ಹಲಸಿನಹಣ್ಣಿನಲ್ಲಿ ಪೊಟಾಶಿಯಂ ಸರಿಯಾದ ಪ್ರಮಾಣದಲ್ಲಿ ಇರುವುದರಿಂದ ಇದು ಹೃದಯದ ಆರೋಗ್ಯವನ್ನು ಜತನದಿಂದ ಕಾಪಾಡುತ್ತದೆ.

Close-up human eye, lens, cornea and brown iris.

ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು

ವಿಟಮಿನ್‌ ಎ ಯಿಂದ ಹಲಸಿನ ಹಣ್ಣು ಸಮೃದ್ಧವಾಗಿರುವುದರಿಂದ ಕಣ್ಣಿನ ಆರೋಗ್ಯಕ್ಕೆ ಇದು ಬಹಳ ಒಳ್ಳೆಯದು. ಇದು ಕಣ್ಣನ್ನು ಬ್ಯಾಕ್ಟೀರಿಯಾ ಹಾಗೂ ವೈರಲ್‌ ಇನ್‌ಫೆಕ್ಷನ್‌ನಿಂದ ರಕ್ಷಿಸುತ್ತದೆ. ದೃಷ್ಟಿದೋಷವಿರುವ ಮಂದಿಗೆ ಇದು ಒಳ್ಳೆಯದು. ಕಣ್ಣನ್ನು ಸೂರ್ಯನ ತೀಕ್ಷ್ಣ ಕಿರಣಗಳಿಂದ ರಕ್ಷಿಸಲೂ ಇವು ಸಹಾಯ ಮಾಡುತ್ತವೆ.

ಮುಪ್ಪನ್ನು ತಡೆಯುತ್ತದೆ

ನೀವು ಯೌವನದಿಂದ ಕಂಗೊಳಿಸಬೇಕಿದ್ದರೆ ನಿಮ್ಮ ಚರ್ಮ ಲಕಲಕ ಹೊಳೆಯಬೇಕಿದ್ದರೆ ನೀವು ಖುಷಿಯಿಂದ ಹಲಸಿನಹಣ್ಣು ತಿನ್ನಬಹುದು. ಹಲಸಿನ ಹಣ್ಣು ಚರ್ಮ ಮುಪ್ಪಾಗುವ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ.

Promotes Bone Health Fish Benefits

ಎಲುಬನ್ನು ಗಟ್ಟಿಯಾಗಿಸುತ್ತದೆ

ಹಲಸಿನಹಣ್ಣಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕ್ಯಾಲ್ಶೀಯಂ ಇರುವುದರಿಂದ ಇದು ಮೂಳೆಗಳನ್ನು ಹಾಗೂ ಹಲ್ಲುಗಳನ್ನು ಗಟ್ಟಿಗೊಳಿಸುವಲ್ಲಿ ನೆರವಾಗುತ್ತದೆ.

ಥೈರಾಯ್ಡ್‌ ಸಮಸ್ಯೆಗೆ ಒಳ್ಳೆಯದು

ಹಲಸಿನ ಹಣ್ಣಿನಲ್ಲಿ ತಾಮ್ರವೂ ಇರುವುದರಿಂದ ಇದು ಥೈರಾಯ್ಡ್‌ನಲ್ಲಿ ಹಾರ್ಮೋನಿನ ಉತ್ಪಾದನೆ ಹಾಗೂ ಹೀರುವಿಕೆಗೆ ನೆರವಾಗುತ್ತದೆ. ಆ ಮೂಲಕ ಥೈರಾಯ್ಡ್‌ನ ಆರೋಗ್ಯವನ್ನು ಕಾಪಾಡುತ್ತದೆ.

Reduces Risk of Asthma in Children Fish Benefits

ಅಸ್ತಮಾಕ್ಕೆ ಒಳ್ಳೆಯದು

ಮಾಲಿನ್ಯದಿಂದ ಉಂಟಾಗುವ ಅಸ್ತಮಾದಂತಹ ತೊಂದರೆಗಳಿಗೆ ಹಲಸಿನಹಣ್ಣು ಬಹಳ ಒಳ್ಳೆಯದು. ಹಾಗಾಗಿ ಅಸ್ತಮಾ ಇರುವ ಮಂದಿ ಹಲಸಿನ ಹಣ್ಣು ತಿನ್ನಲು ಭಯಪಡಬೇಕಾಗಿಲ್ಲ.

Viral news

ಕ್ಯಾನ್ಸರ್‌ನಿಂದ ರಕ್ಷಿಸುತ್ತದೆ

ಹಲಸಿನಹಣ್ಣಿನಲ್ಲಿ ಆಂಟಿ ಆಕ್ಸಿಡೆಂಟ್‌ಗಳೂ, ಫೈಟೋನ್ಯೂಟ್ರಿಯೆಂಟ್‌ಗಳೂ, ಫ್ಲೇವನಾಯ್ಡ್‌ಗಳೂ ಇರುವುದರಿಂದ ದೇಹದಲ್ಲಿರುವ ವಿಷಕಾರಕ, ಕಲ್ಮಶ, ಹಾಗೂ ಫ್ರೀರ್ಯಾಡಿಕಲ್‌ಗಳನ್ನು ಹೊರಕ್ಕೆ ಕಳಿಸುವಲ್ಲಿ ಇದು ನೆರವಾಗುತ್ತದೆ. ಕಲ್ಮಶಗಳೂ, ಫ್ರೀ ರ್ಯಾಡಿಕಲ್ಸ್‌ಗಳೂ ಕೂಡಾ ಕ್ಯಾನ್ಸರ್‌ ಕಾರಕಗಳಾಗಿರುವುದರಿಂದ ಹಲಸಿನ ಹಣ್ಣು ನಮಗೆ ಕ್ಯಾನ್ಸರ್‌ನಿಂದ ರಕ್ಷಣೆ ನೀಡುತ್ತದೆ.

ಇದನ್ನೂ ಓದಿ: Dental Braces: ಹಲ್ಲುಗಳ ಸೌಂದರ್ಯ ವೃದ್ಧಿಗೆ ಬ್ರೇಸಸ್‌ ಹಾಕುವ ಯೋಚನೆ ಇದೆಯೇ? ಈ ಮಾಹಿತಿ ತಿಳಿದಿರಲಿ

Continue Reading

ಆರೋಗ್ಯ

Solution For Pimples: ಈ ಆಹಾರಗಳ ಸಹವಾಸ ಬಿಡಿ; ಮೊಡವೆಯನ್ನು ದೂರವಿಡಿ!

ಮೊಡವೆಗಳಿಗೆ ಪರಿಹಾರವೇ ಇಲ್ಲವೇ (Solution For Pimples) ಎಂದು ನೀವು ಕೇಳಬಹುದು. ಖಂಡಿತ ಇದ್ದೇ ಇದೆ. ಮುಖ್ಯವಾಗಿ, ಚರ್ಮದ ಹೊರಗಿನ ಆರೈಕೆಗಿಂತ ಒಳಗಿನ ಆರೈಕೆ ಮುಖ್ಯ. ಒಳಗೆ ತೆಗೆದುಕೊಳ್ಳುವ ಆಹಾರದ ಬಗ್ಗೆಯೂ ಕಾಳಜಿ ಮಾಡಬೇಕು. ಬನ್ನಿ, ಯಾವೆಲ್ಲ ಆಹಾರಗಳ ಬಗ್ಗೆ ಎಚ್ಚರ ಅಗತ್ಯ ಎಂಬುದನ್ನು ನೋಡೋಣ.

VISTARANEWS.COM


on

Solution For Pimple
Koo

ಮೊಡವೆ ಮತ್ತು ಮೊಡವೆಗಳ ಕಲೆಗಳಿಂದ ಬೇಸತ್ತ ಮಂದಿ ಏನೆಲ್ಲ ಸರ್ಕಸ್‌ ಮಾಡಿದರೂ ಮೊಡವೆಯಿಂದ ಮುಕ್ತಿ ಸಿಗುವುದಿಲ್ಲ ಎಂದು ಬೇಸರ ಪಡಬಹುದು. ನೂರೆಂಟು ಮಂದಿ ನೂರಾರು ಸಲಹೆ ಕೊಡಬಹುದಾದರೂ, ಎಲ್ಲರಿಗೂ ಎಲ್ಲ ಸಲಹೆಗಳೂ ಹೊಂದಲಾರದು. ಕಾರಣ, ಒಬ್ಬೊಬ್ಬರ ದೇಹ ಪ್ರಕೃತಿ ಒಂದೊಂದು ಬಗೆ. ಮೊಡವೆಗಳ ಸಮಸ್ಯೆಗೆ (Solution For Pimples) ಎಲ್ಲರ ಕಾರಣಗಳೂ ಒಂದೇ ಆಗಿರಬೇಕಾಗಿಲ್ಲ. ಆದರೆ, ಬಹುತೇಕರ ಸಮಸ್ಯೆ ಎಂದರೆ ಎಣ್ಣೆ ಚರ್ಮ. ಚರ್ಮದಲ್ಲಿ ಅತಿಯಾದ ಎಣ್ಣೆ ಸ್ರವಿಸಲ್ಪಡುವುದು ಹಾಗೂ ಇದರಿಂದ ಉಂಟಾಗುವ ಮೊಡವೆಗಳು. ಇದಕ್ಕಾಗಿ ಅನೇಕರು ಬಳಸದ ಕ್ರೀಮ್‌ಗಳಿಲ್ಲ, ಮಾಡದ ಮನೆಮದ್ದುಗಳಿಲ್ಲ, ಹೋಗದ ಪಾರ್ಲರ್‌ಗಳಿಲ್ಲ. ಆದರೆ ಸಮಸ್ಯೆ ಮಾತ್ರ ಎಂದಿನದ್ದೇ. ಹಾಗಾದರೆ ಮೊಡವೆಗಳಿಗೆ ಪರಿಹಾರವೇ ಇಲ್ಲವೇ ಎಂದು ನೀವು ಕೇಳಬಹುದು. ಖಂಡಿತ ಇದ್ದೇ ಇದೆ. ಮುಖ್ಯವಾಗಿ, ಚರ್ಮದ ಹೊರಗಿನ ಆರೈಕೆಗಿಂತ ಒಳಗಿನ ಆರೈಕೆ ಮುಖ್ಯ. ಒಳಗೆ ತೆಗೆದುಕೊಳ್ಳುವ ಆಹಾರದ ಬಗ್ಗೆಯೂ ಕಾಳಜಿ ಮಾಡಬೇಕು. ಬನ್ನಿ, ಯಾವೆಲ್ಲ ಆಹಾರಗಳ ಬಗ್ಗೆ ಎಚ್ಚರ ಅಗತ್ಯ ಎಂಬುದನ್ನು ನೋಡೋಣ.

Warm milk

ಹಾಲು

ಹಾಲಿನಿಂದ ಮೊಡವೆಗಳುಂಟಾಗಬಹುದು. ಆಶ್ಚರ್ಯವಾದರೂ ಸತ್ಯವೇ. ಹಸುವಿನ ಹಾಲಿನಲ್ಲಿ ಬೆಳವಣಿಗೆಯ ಹಾರ್ಮೋನ್‌ ಐಜಿಎಫ್‌-1 ಹಾಗೂ ಬೊವಿನ್‌ ಇರುವುದರಿಂದ ಇವು ನಮ್ಮ ದೇಹಕ್ಕೆ ಸೇರುವುದರಿಂದ ಇವು ಚರ್ಮದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ. ಇದರಿಂದ ಮುಖದಲ್ಲಿ ಕೂದಲ ಬೆಳವಣಿಗೆ ಹಾಗೂ ಮೊಡವೆಗಳೂ ಉಂಟಾಗುತ್ತದೆ.

ಅಯೋಡಿನ್

ಮೊಡವೆಗಳಿಗೂ ಅಯೋಡಿನ್‌ಗೂ ಅವಿನಾಭಾವ ಸಂಬಂಧವಿದೆ. ಅಂದರೆ, ಉಪ್ಪು ಹೆಚ್ಚಿರುವ ತಿನಿಸುಗಳನ್ನು, ಆಗಾಗ ತಿನ್ನುವ ಆಹಾರಗಳಲ್ಲಿರುವ ಉಪ್ಪಿನ ಪ್ರಮಾಣ ಎಲ್ಲವೂ ನಮ್ಮ ಚರ್ಮದ ಮೇಲೆ ಪ್ರಭಾವ ಬೀರುತ್ತದೆ. ಆದರೆ, ಪೂರ್ತಿಯಾಗಿ ಉಪ್ಪನ್ನು ಬಿಡಬೇಡಿ. ಅಯೋಡಿನ್‌ ಕೊರತೆ ದೇಹಕ್ಕೆ ಆಗಬಾರದು ಎಂಬುದನ್ನೂ ನೆನಪಿನಲ್ಲಿಟ್ಟುಕೊಂಡು ಕೊಂಚ ಕಡಿಮೆ ಪ್ರಮಾಣದಲ್ಲಿ ಉಪ್ಪನ್ನು ತಿನ್ನುವ ಅಭ್ಯಾಸ ರೂಢಿಸಿಕೊಳ್ಳಿ. ಇದು ನಿಮ್ಮ ಚರ್ಮದ ಮೇಲೆ ಮ್ಯಾಜಿಕ್‌ ಮಾಡಬಹುದು.

Index foods

ಹೆಚ್ಚು ಗ್ಲಿಸೆಮಿಕ್‌ ಇಂಡೆಕ್ಸ್‌ ಇರುವ ಆಹಾರಗಳು

ಕಡಿಮೆ ಗ್ಲಿಸೆಮಿಕ್‌ ಇಂಡೆಕ್ಸ್‌ ಇರುವ ಆಹಾರಗಳ ಸೇವನೆ ನಿಮ್ಮ ಮೊಡವೆಗಳ ಸಮಸ್ಯೆಯನ್ನೇ ಸಂಪೂರ್ಣವಾಗಿ ಇಲ್ಲವಾಗಿಸುತ್ತದೆ ಎನ್ನಲಾಗುತ್ತದೆ. ಕಾರ್ನ್‌ ಸಿರಪ್‌, ಮೈದಾ, ಸಕ್ಕರೆ, ರಿಫೈನ್ಡ್‌ ಧಾನ್ಯಗಳು, ಸಾಸ್‌ ಹಾಗೂ ಕೆಚಪ್‌ಗಳು, ಸ್ಪೋರ್ಟ್ಸ್‌ ಡ್ರಿಂಕ್‌ಗಳು ಸಂಸ್ಕರಿಸಿದ ಮಾಂಸ ಹಾಗೂ ಇತರ ಆಹಾರಗಳು, ಇತರ ಆಹಾರಗಳ ಮೂಲಕ ಗೊತ್ತೇ ಆಗದಂತೆ ದೇಹದೊಳಕ್ಕೆ ಸೇರುವ ಸಕ್ಕರೆ ಎಲ್ಲವೂ ಹೆಚ್ಚು ಗ್ಲಿಸೆಮಿಕ್‌ ಇಂಡೆಕ್ಸ್‌ ಹೊಂದಿವೆ. ಆದಷ್ಟೂ ನೈಸರ್ಗಿಕ ಆಹಾರಗಳು, ಒಣಬೀಜಗಳು, ಹಣ್ಣುಗಳು ಇತ್ಯಾದಿಗಳನ್ನೇ ತಿನ್ನಿ.
ಹಾಗಾದರೆ ಏನು ತಿಂದರೆ ಮೊಡವೆಗಳು ಬರದಂತೆ ತಡೆಯಬಹುದು, ಚರ್ಮವನ್ನು ನುಣುಪಾಗಿ ಇರಿಸಬಹುದು ಎನ್ನುತ್ತೀರಾ? ಝಿಂಕ್‌ ಹೆಚ್ಚಿರುವ ಆಹಾರಗಳು ಮೊಡವೆ ಸಮಸ್ಯೆಗೆ ಬಹಳ ಒಳ್ಳೆಯದು. ಇದರಲ್ಲಿರುವ ಆಂಟಿ ಇನ್‌ಫ್ಲಮೇಟರಿ ಗುಣಗಳು ಮೊಡವೆ ಉಂಟು ಮಾಡುವ ಬ್ಯಾಕ್ಟೀರಿಯಾಗಳನ್ನು ಓಡಿಸುತ್ತವೆ. ಕಿಡ್ನಿ ಬೀನ್ಸ್‌, ಓಯ್ಸ್ಟರ್‌, ಕೆಂಪು ಮಾಂಸ ಹಾಗೂ ಸಿಹಿಕುಂಬಳದ ಬೀಜ ಇವುಗಳಲ್ಲಿ ಹೆಚ್ಚು ಝಿಂಕ್‌ ಇವೆ.
ಅಷ್ಟೇ ಅಲ್ಲ, ಒಮೆಗಾ 3 ಇರುವ ಆಹಾರಗಳನ್ನು ಹೆಚ್ಚಿಸಿ ಒಮೆಗಾ ಇರುವ ಆಹಾರಗಳಾದ ಸಂಸ್ಕರಿಸಿದ ಎಣ್ಣೆಗಳು, ಬೇಕ್ಡ್‌ ಆಹಾರಗಳು ಇತ್ಯಾದಿಗಳನ್ನು ಕಡಿಮೆ ಮಾಡಿ. ನದಿಯ ಮೀನನ್ನು ವಾರಕ್ಕೆರಡು ಬಾರಿ ತಿನ್ನಿ. ಚಿಯಾ ಬೀಜಗಳು, ಅಗಸೆ ಬೀಜಗಳನ್ನು ನಿತ್ಯವೂ ಸೇವಿಸಿ. ಆಹಾರ ಸೇವನೆಯ ಪ್ರಮಾಣದ ಮೇಲೆ ಹಿಡಿತವಿರಲಿ. ನೈಸರ್ಗಿಕ ಆಹಾರಗಳನ್ನೇ ಹೆಚ್ಚು ಸೇವಿಸಿ. ಎಲ್ಲ ಪೋಷಕಾಂಶಗಳನ್ನೊಳಗೊಂಡ ಸಂಪೂರ್ಣ ಆಹಾರದೆಡೆಗೆ ಗಮನ ಇರಲಿ. ಇಷ್ಟು ಮಾಡಿದರೆ ಖಂಡಿತವಾಗಿಯೂ ನಿಮ್ಮ ಚರ್ಮವೂ ಆರೋಗ್ಯಕರವಾಗಿ ಫಲಫಳಿಸುತ್ತದೆ ಎನ್ನುತ್ತಾರೆ ವೈದ್ಯರು.

ಇದನ್ನೂ ಓದಿ: Balancing Hormones Naturally: ಹಾರ್ಮೋನು ಸಮತೋಲನಕ್ಕೆ ಬೇಕು ಇಂಥ ಆಹಾರಗಳು

Continue Reading
Advertisement
letter to President
ಕರ್ನಾಟಕ1 min ago

letter to President: ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ: ನ್ಯಾಯ ಕೊಡಿಸಲು ರಾಷ್ಟ್ರಪತಿಗಳಿಗೆ ಕರವೇ ನಾರಾಯಣಗೌಡ ಮನವಿ

Surapura assembly constituency by election Congress candidate Rajavenugopal Nayaka filed nomination
ಯಾದಗಿರಿ19 mins ago

Yadgiri News: ರಾಜಾವೇಣುಗೋಪಾಲ ನಾಯಕಗೆ ಬೆಂಬಲಿಸಿ, ಗೆಲ್ಲಿಸಿ: ಸಚಿವ ದರ್ಶನಾಪುರ

Royal Challengers Banaglore
ಕ್ರೀಡೆ22 mins ago

Royal Challenges Bangalore : ಬೆಂಗಳೂರಿನ ಮೂರು ಕೆರೆಗಳನ್ನೂ ಅಭಿವೃದ್ಧಿ ಮಾಡಿದ ಆರ್​ಸಿಬಿ

Video Viral Parameshwara statement on ballot paper bogus voting
ವೈರಲ್ ನ್ಯೂಸ್24 mins ago

Video Viral: ಬ್ಯಾಲೆಟ್‌ ಪೇಪರ್‌ ಕಳ್ಳ ಮತದಾನದ ರಹಸ್ಯ ಬಿಚ್ಚಿಟ್ಟ ಪರಮೇಶ್ವರ್;‌ ಕಾಂಗ್ರೆಸ್‌ EVM ಬೇಡ ಎನ್ನಲು ಇದೇ ಕಾರಣವೆಂದ ಜೆಡಿಎಸ್!

Money Guide
ಮನಿ-ಗೈಡ್48 mins ago

Money Guide: ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಇದರಲ್ಲಿನ ವಿಧಗಳ ಬಗ್ಗೆ ಇಲ್ಲಿದೆ ಮಾಹಿತಿ

‌Assault Case
ಕರ್ನಾಟಕ49 mins ago

‌Assault Case: ಮೋದಿ ಹಾಡು ಬರೆದ ಯುವಕನ ಮೇಲೆ ಹಲ್ಲೆ; ಐವರ ವಿರುದ್ಧ ಎಫ್ಐಆರ್

Char Dham Yatra 2024
Latest1 hour ago

Char Dham Yatra 2024: ಈ ಬೇಸಿಗೆಯಲ್ಲಿ ಚಾರ್ ಧಾಮ್ ಯಾತ್ರೆಗೆ ಸಿದ್ಧರಾಗಿ! ನೋಂದಣಿ ಮಾಹಿತಿ ಇಲ್ಲಿದೆ

Diabetic Controle
ಲೈಫ್‌ಸ್ಟೈಲ್1 hour ago

Diabetic Controle: ಕಾಡುವ ಮಧುಮೇಹ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ತಂತ್ರ

Banned Films
ಸಿನಿಮಾ1 hour ago

Banned Film: ಈ 9 ಹಾಲಿವುಡ್ ಚಿತ್ರಗಳು ಭಾರತದಲ್ಲಿ ಬ್ಯಾನ್!

Workers protest
ವಿದೇಶ1 hour ago

Workers protest: ಇಸ್ರೇಲ್​ ಜತೆಗಿನ ಒಪ್ಪಂದ ವಿರೋಧಿಸಿ ಪ್ರತಿಭಟಿಸಿದ್ದ ಗೂಗಲ್​​ನ 28​ ಉದ್ಯೋಗಿಗಳ ವಜಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ5 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ15 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌