International Year of Millets : ಸಿರಿಧಾನ್ಯಗಳ ಬಗ್ಗೆ ಭಾರತಕ್ಕೆ ಏಕೆ ಇಷ್ಟು ಆಸಕ್ತಿ? - Vistara News

ಆರೋಗ್ಯ

International Year of Millets : ಸಿರಿಧಾನ್ಯಗಳ ಬಗ್ಗೆ ಭಾರತಕ್ಕೆ ಏಕೆ ಇಷ್ಟು ಆಸಕ್ತಿ?

ಈ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ (International Year of Millets) ಎಂದು ವಿಶ್ವಸಂಸ್ಥೆ ಘೋಷಿಸಿದೆ. ಭಾರತ ಸಿರಿಧಾನ್ಯಗಳನ್ನು ಉತ್ತೇಜಿಸುತ್ತಿರುವುದಕ್ಕೆ ಕಾರಣವೇನು ಎನ್ನುವುದು ಇಲ್ಲಿದೆ ನೋಡಿ.

VISTARANEWS.COM


on

International Year of Millets
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇದು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ(International Year of Millets) 2023ನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂದು ಗುರುತಿಸಬೇಕು ಎಂದು ಭಾರತವೇ ವಿಶ್ವ ಸಂಸ್ಥೆ ಎದುರು ಪ್ರಸ್ತಾಪ ಇಟ್ಟು ಅದಕ್ಕೆ 70 ರಾಷ್ಟ್ರಗಳಿಗೂ ಅಧಿಕ ರಾಷ್ಟ್ರಗಳಿಂದ ಸಹಮತ ಪಡೆದುಕೊಂಡಿದೆ. ಅಂದ ಹಾಗೆ ಭಾರತದ ಸಿರಿಧಾನ್ಯಗಳ ಬಗ್ಗೆ ಏಕಿಷ್ಟು ಆಲೋಚನೆ ಮಾಡುತ್ತಿದೆ ಎನ್ನುವ ಯೋಚನೆ ಬರುವುದು ಸಹಜ. ಅದಕ್ಕೆ ಉತ್ತರ ಇಲ್ಲಿದೆ ನೋಡಿ.

Poverty and malnutrition are prevalent in many countries of the world

ವಿಶ್ವದ ಹಲವು ರಾಷ್ಟ್ರಗಳಲ್ಲಿ ಬಡತನ ಹಾಗೂ ಅಪೌಷ್ಠಿಕಾಂಶಕತೆ ಕಾಡುತ್ತಿದೆ. ಹಲವಾರು ರಾಷ್ಟ್ರಗಳಲ್ಲಿ ಪೌಷ್ಠಿಕ ಆಹಾರ ಸಿಗದ ಕಾರಣಕ್ಕೇ ಸಾಕಷ್ಟು ಮಂದಿ ಸಾವಿಗೀಡಾಗುತ್ತಿದ್ದಾರೆ. ಈ ರೀತಿಯ ಸ್ಥಿತಿಯಲ್ಲಿರುವ ವಿಶ್ವಕ್ಕೆ ಪೌಷ್ಠಿಕಾಂಶ ತುಂಬಬಲ್ಲದ್ದು ಸಿರಿಧಾನ್ಯ. ಅಧಿಕ ಪೌಷ್ಠಿಕಾಂಶ ಹಾಗೂ ಪ್ರೋಟೀನ್‌ ಹೊಂದಿರುವ ಸಿರಿಧಾನ್ಯಗಳ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕು ಎನ್ನುವುದು ಭಾರತ ಸರ್ಕಾರದ ಚಿಂತನೆಯಾಗಿದೆ.

ಭಾರತವು ವಿಶ್ವದಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಸಿರಿಧಾನ್ಯ ಉತ್ಪಾದನೆ ಮಾಡುವ ದೇಶಗಳ ಪೈಕಿ ಮೊದಲನೇ ಸ್ಥಾನದಲ್ಲಿದೆ. ಹಾಗೆಯೇ ಸಿರಿಧಾನ್ಯಗಳ ರಫ್ತು ಪೈಕಿ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ಪುರಾತನ ಕಾಲದಿಂದಲೂ ಸಿರಿಧಾನ್ಯ ಬಳಕೆ ಹೆಚ್ಚಾಗಿ ಆಗುತ್ತಾ ಬಂದಿದೆ. ಈಗಲೂ ಗ್ರಾಮೀಣ ಭಾಗಗಳಲ್ಲಿ ಜನರು ಸಿರಿಧಾನ್ಯಗಳ ಮೇಲೆ ಹೆಚ್ಚಾಗಿ ಅವಲಂಬಿತರಾಗಿದ್ದಾರೆ.

Importance of Cereals

ಈ ಸಿರಿಧಾನ್ಯಗಳ ಮಹತ್ವವನ್ನು ವಿಶ್ವಕ್ಕೆ ಸಾರುವುದರಿಂದ ವಿಶ್ವದಲ್ಲಿ ಅಪೌಷ್ಠಿಕತೆ ಸಮಸ್ಯೆ ಕಡಿಮೆಯಾಗುತ್ತದೆ. ಅಷ್ಟೇ ಅಲ್ಲದೆ ಭಾರತದಲ್ಲಿ ಬೆಳೆಯಲಾಗುವ ಸಿರಿಧಾನ್ಯಗಳಿಗೆ ಬೇಡಿಕೆಯೂ ಹೆಚ್ಚಾಗಲಿದ್ದು, ಇಲ್ಲಿನ ರೈತರಿಗೆ ಆದಾಯ ಹೆಚ್ಚಲಿದೆ. ಅಷ್ಟೇ ಅಲ್ಲದೆ ಅಕ್ಕಿ, ಗೋಧಿಗಳಂತಹ ಮುಖ್ಯ ಬೆಳೆಗಳಿಗೆ ಹೋಲಿಸಿದರೆ ಸಿರಿಧಾನ್ಯಗಳ ಬೆಳೆ ಸುಲಭವಾಗಿದೆ. ಅದಕ್ಕೆ ಹೆಚ್ಚಿನ ನೀರಿನಾಂಶ ಬೇಕಾಗುವುದಿಲ್ಲ. ರಾಸಾಯನಿಕಗಳೂ ಅಧಿಕವಾಗಿ ಬೇಡದ ಸಿರಿಧಾನ್ಯಗಳು ರೈತ ಸ್ನೇಹಿಯೂ ಹೌದು.

ಭಾರತ ಕಳೆದ ಕೆಲವು ವರ್ಷಗಳಿಂದ ಸಿರಿಧಾನ್ಯಗಳ ಬಳಕೆ ಬಗ್ಗೆ ಉತ್ತೇಜನ ನೀಡುತ್ತಲೇ ಬಂದಿದೆ. 2018 ಅನ್ನು ರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂದು ಘೋಷಿಸಿತು. 2021ರಲ್ಲಿ ಭಾರತ 64 ಮಿಲಿಯನ್‌ ಡಾಲರ್‌ ಮೌಲ್ಯದ ಸಿರಿಧಾನ್ಯವನ್ನು ರಫ್ತು ಮಾಡಿದೆ. 2019 ಮತ್ತು 2020ರಲ್ಲಿ 30 ಮಿಲಿಯನ್‌ ಡಾಲರ್‌ ಮೌಲ್ಯದ ಸಿರಿಧಾನ್ಯ ರಫ್ತು ಮಾಡುವುದು ಕೂಡ ಭಾರತಕ್ಕೆ ಕಷ್ಟವಾಗಿತ್ತು.

ಪೂರ್ತಿ ಏಷ್ಯಾದಲ್ಲಿ ಉತ್ಪತ್ತಿಯಾಗುತ್ತಿರುವ ಸಿರಿಧಾನ್ಯಗಳ ಪೈಕಿ ಶೇ.80 ಅನ್ನು ಭಾರತದಲ್ಲೇ ಬೆಳೆಯಲಾಗುತ್ತದೆ. ಹಾಗೆಯೇ ಜಾಗತಿಕವಾಗಿ ಶೇ.20 ಸಿರಿಧಾನ್ಯದ ಬೆಳೆ ಭಾರತದಲ್ಲಿ ಆಗುತ್ತಿದೆ.

ಇದನ್ನೂ ಓದಿ: Nutrition Week 2023: ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ! ಪೌಷ್ಟಿಕತೆ ಹೆಚ್ಚಿಸುವ ಉದ್ದೇಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Health Tips Kannada : ಉತ್ತಮ ಆರೋಗ್ಯಕ್ಕಾಗಿ ಎಷ್ಟು ಗಂಟೆ ಕುಳಿತುಕೊಳ್ಳಬೇಕು, ನಿಂತುಕೊಳ್ಳಬೇಕು, ಮಲಗಬೇಕು?

Health Tips Kannada: ಉತ್ತಮ ಆರೋಗ್ಯಕ್ಕಾಗಿ ಎಷ್ಟು ಗಂಟೆ ಕುಳಿತುಕೊಳ್ಳಬೇಕು, ನಿಂತುಕೊಳ್ಳಬೇಕು, ಮಲಗಬೇಕು? ಇವತ್ತು ಎಲ್ಲರೂ ಬಯಸೋದು ಆರೋಗ್ಯ ಚೆನ್ನಾಗಿರಲಿ ಎಂದು. ಆದರೆ ಇದಕ್ಕಾಗಿ ಎಷ್ಟು ಗಂಟೆಗಳ ಕಾಲ ಕುಳಿತುಕೊಳ್ಳಬೇಕು, ನಿಂತುಕೊಳ್ಳಬೇಕು ಮತ್ತು ಮಲಗಬೇಕು ಎನ್ನುವ ಗೊಂದಲ ಇದ್ದೇ ಇರುತ್ತದೆ. ಆದರೆ ಹೊಸ ಅಧ್ಯಯನವೊಂದು ಇದಕ್ಕೆ ಉತ್ತರ ಕಂಡು ಹಿಡಿದಿದೆ.

VISTARANEWS.COM


on

By

Health Tips Kannada
Koo

ಉತ್ತಮ (Health Tips Kannada) ಆರೋಗ್ಯಕ್ಕಾಗಿ (Good Health) ಎಷ್ಟು ಗಂಟೆಗಳ ಕಾಲ ಕುಳಿತುಕೊಳ್ಳಬೇಕು (Sit), ನಿಂತುಕೊಳ್ಳಬೇಕು (Stand) ಮತ್ತು ಮಲಗಬೇಕು (Sleep) ಎನ್ನುವ ಗೊಂದಲ ಎಲ್ಲರಲ್ಲೂ ಇರುತ್ತದೆ. ಇದರಲ್ಲಿ ಎಷ್ಟು ಗಂಟೆ ಮಲಗಬೇಕು ಎನ್ನುವುದಕ್ಕೆ ಬಹುತೇಕ ಮಂದಿಗೆ ಉತ್ತರ ಗೊತ್ತಿರುತ್ತದೆ. ಆದರೆ ಎಷ್ಟು ಗಂಟೆ ನಿಲ್ಲಬೇಕು, ಕುಳಿತುಕೊಳ್ಳಬೇಕು ಎನ್ನುವುದನ್ನು ಹೇಳುವುದು ಕಷ್ಟ.

ಇದೀಗ ಹೊಸ ಅಧ್ಯಯನವೊಂದು ನಾವು ಆರೋಗ್ಯವಾಗಿರಲು ಎಷ್ಟು ಹೊತ್ತು ಸಕ್ರಿಯವಾಗಿರುವುದು ಅತ್ಯಗತ್ಯ ಎಂಬುದನ್ನು ಹೇಳಿದೆ. ಅದರಲ್ಲೂ ನಾವು ಎಷ್ಟು ಗಂಟೆಗಳ ಕಾಲ ಕುಳಿತುಕೊಳ್ಳಬೇಕು ಅಥವಾ ನಿಲ್ಲಬೇಕು ಅಥವಾ ವ್ಯಾಯಾಮ ಮಾಡಬೇಕು ಎಂಬುದಕ್ಕೆ ಈ ಹೊಸ ಅಧ್ಯಯನವು ಉತ್ತರ ನೀಡಿದೆ.

ಜಡ ಜೀವನಶೈಲಿಯನ್ನು ಮುರಿಯುವ ಒಂದು ಸುಲಭ ವಿಧಾನವೆಂದರೆ ಹೆಚ್ಚು ದೈಹಿಕವಾಗಿ ಸಕ್ರಿಯವಾಗಿರುವುದು. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಕಾಳಜಿ ಹೆಚ್ಚಾಗುತ್ತಿದೆ. ಇದಕ್ಕೆ ಮುಖ್ಯಕಾರಣ ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತೊಂದರೆಗಳು. ಹೆಚ್ಚು ಹೊತ್ತು ವ್ಯಾಯಾಮ ಮಾಡುವುದು, ಆರೋಗ್ಯಕರ, ಪೌಷ್ಟಿಕಾಂಶ ಭರಿತ ಆಹಾರವನ್ನು ಸೇವಿಸುವುದು ಅತ್ಯಗತ್ಯ. ಅಲ್ಲದೇ ದೀರ್ಘ ಗಂಟೆಗಳ ಕಾಲ ಕುಳಿತುಕೊಳ್ಳುವ ತೊಂದರೆಗಳನ್ನು ಎದುರಿಸುವುದು ಕೂಡ ಬಹುಮುಖ್ಯ.

ಇದನ್ನೂ ಓದಿ: Health Tips Kannada: ಕೊಲೆಸ್ಟ್ರಾಲ್‌ ತಗ್ಗಿಸಲು ಈ ಬೆಳಗಿನ ಪೇಯಗಳಿಂದ ಸಾಧ್ಯ! ಪ್ರಯತ್ನಿಸಿ

ದೈಹಿಕ ಚಟುವಟಿಕೆಗಾಗಿ ಎಷ್ಟು ಗಂಟೆಗಳನ್ನು ವಿನಿಯೋಗಿಸಬೇಕು, ಎಷ್ಟು ಸಮಯ ನಿಲ್ಲಬೇಕು ಅಥವಾ ಕುಳಿತುಕೊಳ್ಳಬೇಕು ಎಂಬುದರ ಕುರಿತು ಹೊಸ ಆಸ್ಟ್ರೇಲಿಯನ್ ತಂಡವೊಂದು ಅಧ್ಯಯನ ನಡೆಸಿದೆ.

ಎಷ್ಟು ಗಂಟೆಗಳ ದೈಹಿಕ ಚಟುವಟಿಕೆ ಮುಖ್ಯ?

ಅತ್ಯುತ್ತಮ ಆರೋಗ್ಯಕ್ಕಾಗಿ, ವ್ಯಕ್ತಿಯ ದಿನವು ಬೆಳಗಿನ ವ್ಯಾಯಾಮ ದಿಂದ ಪ್ರಾರಂಭವಾಗಬೇಕು. ಕನಿಷ್ಠ ಎಂಟು ಗಂಟೆಗಳ ನಿದ್ರೆಯನ್ನು ಒಳಗೊಂಡ ನಾಲ್ಕು ಗಂಟೆಗಳ ದೈಹಿಕ ಚಟುವಟಿಕೆಯನ್ನು ಒಳಗೊಂಡಿರಬೇಕು. ಲಘು- ತೀವ್ರತೆಯ ಚಟುವಟಿಕೆಯು ಮನೆಗೆಲಸವನ್ನು ಮಾಡುವುದರಿಂದ ಭೋಜನವನ್ನು ಮಾಡುವವರೆಗೆ ಇರುತ್ತದೆ. ಆದರೆ ಮಧ್ಯಮ ಮತ್ತು ಹುರುಪಿನ ವ್ಯಾಯಾಮವು ಚುರುಕಾದ ನಡಿಗೆ ಅಥವಾ ಜಿಮ್ ವ್ಯಾಯಾಮದಂತಹ ಹೆಚ್ಚು ಉದ್ದೇಶಪೂರ್ವಕ ಚಲನೆಯನ್ನು ಒಳಗೊಂಡಿರುತ್ತದೆ ಎನ್ನುತ್ತಾರೆ ಸಂಶೋಧಕರು.

ದಿನದಲ್ಲಿ 4 ಗಂಟೆಗಳ ದೈಹಿಕ ಚಟುವಟಿಕೆ, 8 ಗಂಟೆಗಳ ನಿದ್ದೆ, 6 ಗಂಟೆ ಕುಳಿತುಕೊಳ್ಳುವುದು, 5 ಗಂಟೆ ನಿಂತಿರುವುದು ಆರೋಗ್ಯವಾಗಿರಲು ವ್ಯಕ್ತಿಗೆ ಅತ್ಯಗತ್ಯವಾಗಿದೆ.


ಅಧ್ಯಯನ ಏನು ಹೇಳುತ್ತದೆ?

ಆಸ್ಟ್ರೇಲಿಯದ ಸ್ವಿನ್‌ಬರ್ನ್ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯ ನೇತೃತ್ವದ ಅಂತಾರಾಷ್ಟ್ರೀಯ ತಂಡವು 24 ಗಂಟೆಗಳ ದಿನದಲ್ಲಿ 2,000ಕ್ಕೂ ಹೆಚ್ಚು ಜನರ ನಡವಳಿಕೆಯನ್ನು ಅಧ್ಯಯನ ನಡೆಸಿದೆ. ಆರೋಗ್ಯವಾಗಿರಲು ಕುಳಿತುಕೊಳ್ಳುವುದು, ಮಲಗುವುದು, ನಿಂತಿರುವುದು ಮತ್ತು ದೈಹಿಕವಾಗಿ ಸಕ್ರಿಯವಾಗಿರುವ ಸಮಯವನ್ನು ಸರಿಯಾಗಿ ನಿರ್ಧರಿಸಿದೆ.

ಅತ್ಯುತ್ತಮ ಆರೋಗ್ಯಕ್ಕೆ ಸಂಬಂಧಿಸಿ 24 ಗಂಟೆಗಳಲ್ಲಿ ದೈಹಿಕ, ಮಾನಸಿಕ ಚಟುವಟಿಕೆಯಲ್ಲಿ ವ್ಯಕ್ತಿಯಿಂದ ವ್ಯಕ್ತಿಗೆ ವ್ಯತ್ಯಾಸಗಳಿರುತ್ತವೆ. ವಿಭಿನ್ನ ಆರೋಗ್ಯ ಗುರುತುಗಳಿಗೆ ಸೊಂಟದ ಸುತ್ತಳತೆಯಿಂದ ಹಿಡಿದು ಉಪವಾಸದ ಗ್ಲೂಕೋಸ್‌ನವರೆಗೆ ಪ್ರತಿ ನಡವಳಿಕೆಗೆ ವಿಭಿನ್ನ ಹಂತಗಳಿವೆ ಎಂದು ಸ್ವಿನ್‌ಬರ್ನ್ ಟೆಕ್ನಾಲಜಿ ವಿಶ್ವವಿದ್ಯಾಲಯದ ನಗರ ಪರಿವರ್ತನೆಗಳ ಕೇಂದ್ರದಿಂದ ಕ್ರಿಶ್ಚಿಯನ್ ಬ್ರೇಕೆನ್‌ರಿಡ್ಜ್ ಹೇಳಿದ್ದಾರೆ.

ಹೆಚ್ಚು ಸಮಯ ದೈಹಿಕವಾಗಿ ಸಕ್ರಿಯವಾಗಿರುವ ಅಥವಾ ಲಘು-ತೀವ್ರತೆಯ ಚಲನೆಗಳೊಂದಿಗೆ ಕುಳಿತುಕೊಳ್ಳುವ ಸಮಯವನ್ನು ಬದಲಾಯಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ, ಇದು ರಕ್ತದ ಗ್ಲೂಕೋಸ್ ಮಟ್ಟಗಳೊಂದಿಗೆ ಸಂಬಂಧಿಸಿದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.

ಹೆಚ್ಚು ಕುಳಿತುಕೊಳ್ಳುವುದು ಅನಾರೋಗ್ಯಕರ

ಒಂದು ನಿರ್ದಿಷ್ಟ ಚಟುವಟಿಕೆಯು ಇನ್ನೊಂದನ್ನು ಬದಲಿಸುವ ವ್ಯಕ್ತಿಯ ಇಡೀ ದಿನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಕೂಡ ಸಂಶೋಧಕರು ಕಂಡು ಹಿಡಿದಿದ್ದಾರೆ. ಒಂದೇ ಕಡೆ ಅತಿ ಹೆಚ್ಚು ಹೊತ್ತು ಕುಳಿತುಕೊಳ್ಳುವುದೂ ಅನಾರೋಗ್ಯಕ್ಕೆ ದಾರಿ ಎಂದು ಅಧ್ಯಯನ ತಿಳಿಸಿದೆ.

ಹೆಚ್ಚು ಚಟುವಟಿಕೆಯೂ ಒಳ್ಳೆಯದಲ್ಲ

ವ್ಯಾಯಾಮವು ಹೆಚ್ಚು ಪ್ರಯೋಜನಕಾರಿಯಾಗಿದ್ದರೂ ಸಮಯದ ಬಳಕೆ ವಾಸ್ತವಿಕ ಮತ್ತು ಸಮತೋಲಿತವಾಗಿರಬೇಕು. ಹೆಚ್ಚು ಸಮಯ ವ್ಯಾಯಾಮ ಮಾಡಲು ಸಲಹೆ ನೀಡಬಹುದು. ಆದರೂ ಅತಿಯಾಗಿ ವ್ಯಾಯಾಮ ಮಾಡುವುದು ಒಳ್ಳೆಯದಲ್ಲ ಎಂದು ಸಂಶೋಧಕರು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

Covishield Vaccine: ಕೋವಿಶೀಲ್ಡ್ ಲಸಿಕೆ ಅಡ್ಡಪಾರಿಣಾಮಗಳ ಸಂಬಂಧ ಸೂಚನಾ ಪತ್ರ ಹೊರಡಿಸಿ ಎಡವಟ್ಟು ಮಾಡಿಕೊಂಡಿದ್ದ ಚಿಕ್ಕಬಳ್ಳಾಪುರದ ಹಲವು ಕಾಲೇಜು ಆಡಳಿತ ಮಂಡಳಿಗಳ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.

VISTARANEWS.COM


on

Covishield Vaccine
Koo

ಚಿಕ್ಕಬಳ್ಳಾಪುರ: ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ದಿಢೀರ್‌ ಹೃದಯಾಘಾತ, ರಕ್ತ ಹೆಪ್ಪುಗಟ್ಟುವುದು ಸೇರಿ ಹಲವು ರೀತಿಯ ಅಡ್ಡಪರಿಣಾಮಗಳು ಉಂಟಾಗಲಿವೆ ಎಂಬ ಸುದ್ದಿಗಳು ವರದಿಯಾದ ಹಿನ್ನೆಲೆಯಲ್ಲಿ ಲಸಿಕೆ ಪಡೆದವರಲ್ಲಿ ಆತಂಕ ಮೂಡಿದೆ. ಈ ನಡುವೆ ಕೋವಿಶೀಲ್ಡ್ ಲಸಿಕೆ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ ಹಾಗೂ ತಂಪು ಪಾನೀಯ ಸೇವನೆ ಮಾಡದಂತೆ ಹಲವು ಕಾಲೇಜು ಆಡಳಿತ ಮಂಡಳಿಗಳು ಸೂಚನಾ ಪತ್ರದ ಮೂಲಕ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದವು. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ, ತಪ್ಪು ಮಾಹಿತಿ ನೀಡಿದ ನಗರದ ವಿವಿಧ ಕಾಲೇಜುಗಳ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.

ನಗರದ ಸಿದ್ದರಾಮಯ್ಯ ಲಾ ಕಾಲೇಜು ಹಾಗೂ ಜಚನಿ ಪ್ರಥಮ ದರ್ಜೆ ಕಾಲೇಜುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳಿಂದ ನೋಟಿಸ್ ನೀಡಲಾಗಿದೆ. ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ದಿಢೀರ್ ಹೃದಯಾಘಾತ, ರಕ್ತ ಹೆಪ್ಪುಗಟ್ಟುವ ಸಾಧ್ಯತೆ ಇದೆ. ಹೀಗಾಗಿ ಆರೋಗ್ಯ ಇಲಾಖೆ ಸೂಚನೆ ಪ್ರಕಾರ ಈ ಲಸಿಕೆ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ ಹಾಗೂ ತಂಪು ಪಾನೀಯಗಳು ಸೇವನೆ ಮಾಡಬಾರದು ಎಂದು ಕಾಲೇಜು ಆಡಳಿತ ಮಂಡಳಿಗಳು ಸೂಚನಾ ಪತ್ರ ಹೊರಡಿಸಿದ್ದವು.

ವಾಟ್ಸ್‌ಆ್ಯಪ್‌ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಕಾಲೇಜುಗಳ ಸೂಚನಾ ಪತ್ರಗಳು ವೈರಲ್‌ ಆಗಿದ್ದರಿಂದ ತಕ್ಷಣ ಎಚ್ಚೆತ್ತ ಜಿಲ್ಲಾಡಳಿತ, ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿದ ಹಿನ್ನೆಲೆ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಸೂಚನಾ ಪತ್ರಗಳ ಬಗ್ಗೆ ಸೂಕ್ತ ಸ್ಪಷ್ಟನೆ ನೀಡುವಂತೆ ಜಿಲ್ಲಾಧಿಕಾರಿ ನೇತೃತ್ವದ ಡಿಜಾಸ್ಟರ್ ಮ್ಯಾನೇಜ್ಮೆಂಟ್ ಕಮಿಟಿಯಿಂದ ಕಾಲೇಜುಗಳಿಗೆ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿ | Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

ಆರೋಗ್ಯ ಇಲಾಖೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ

ಕೋವಿಶೀಲ್ಡ್‌ ಲಸಿಕೆ ಪಡೆದವರು ಫ್ರಿಡ್ಜ್‌ನಲ್ಲಿಟ್ಟ ನೀರು, ತಂಪು ಪಾನೀಯಗಳು ಹಾಗೂ ಐಸ್‌ಕ್ರೀಂ ಸೇವಿಸಬಾರದು ಎಂಬ ಕಾಲೇಜು ಆಡಳಿತ ಮಂಡಳಿಗಳ ಸೂಚನಾ ಪತ್ರ ವೈರಲ್‌ ಆಗಿದ್ದರಿಂದ ಸಾರ್ವಜನಿಕರಲ್ಲಿ ಗೊಂದಲ ಮೂಡಿತ್ತು. ಹೀಗಾಗಿ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮಗಳ ಬಗ್ಗೆ ಇಲಾಖೆಯಿಂದ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ತಿಳಿಸಿದೆ.

ರಕ್ಷಿತ್‌ ಗಣಪತಿ ಎಂಬುವವರು, ಎಕ್ಸ್‌ ಖಾತೆಯಲ್ಲಿ ಚಿಕ್ಕಬಳ್ಳಾಪುರದ ಸಿದ್ದರಾಮಯ್ಯ ಲಾ ಕಾಲೇಜಿನ ಸೂಚನಾ ಪತ್ರ ಹಾಕಿ, “ಇದು ನಿಜವೇ? ಈ ಪತ್ರ ನೆನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ, ದಯವಿಟ್ಟು ಸ್ಪಷ್ಟನೆ ನೀಡಿ ಎಂದು ಕೋರಿ, ಸಿಎಂ ಸಿದ್ದರಾಮಯ್ಯ, ಆರೋಗ್ಯ ಇಲಾಖೆಗೆ ಟ್ಯಾಗ್‌ ಮಾಡಿದ್ದರು. ಇದಕ್ಕೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

Continue Reading

ಆರೋಗ್ಯ

Health Tips Kannada: ಕೊಲೆಸ್ಟ್ರಾಲ್‌ ತಗ್ಗಿಸಲು ಈ ಬೆಳಗಿನ ಪೇಯಗಳಿಂದ ಸಾಧ್ಯ! ಪ್ರಯತ್ನಿಸಿ

ಆಹಾರದ ಬದಲಾವಣೆಗಳಿಂದ ಕೊಲೆಸ್ಟ್ರಾಲ್‌ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ ದೋಷವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ ಎನ್ನುತ್ತಾರೆ ಸ್ವಾಸ್ಥ್ಯ ಪರಿಣಿತರು. ಎಂಥಾ ಆಹಾರಗಳವು? ಈ (Health Tips Kannada) ಲೇಖನ ಓದಿ.

VISTARANEWS.COM


on

Health Tips Kannada
Koo

ಜೀವನಶೈಲಿಯ ದೋಷಗಳಿಂದಾಗಿ ಹಲವಾರು ರೋಗಗಳು ನಮಗೆ ಗಂಟಿಕ್ಕಿಕೊಳ್ಳುತ್ತಿವೆ. ಆಹಾರ ಕ್ರಮದಲ್ಲಿನ ದೋಷ ಮತ್ತು ವ್ಯಾಯಾಮ ಇಲ್ಲದಿರುವಂಥ ಕಾರಣದಿಂದ ದೇಹದಲ್ಲಿ ಜಮೆಯಾಗುವ ಕೊಬ್ಬು ಹೆಚ್ಚುತ್ತಿದೆ. ನಮ್ಮ ಶರೀರ ಚೆನ್ನಾಗಿ ಕೆಲಸ ಮಾಡಲು ಸಣ್ಣ ಪ್ರಮಾಣದಲ್ಲಿ ಕೊಲೆಸ್ಟ್ರಾಲ್‌ ಅಗತ್ಯವಿದೆ. ಅದು ನಮಗೆ ನಿತ್ಯದ ಆಹಾರದಿಂದಲೇ ದೊರೆಯುತ್ತದೆ. ಆದರೆ ಅತಿಯಾದ ಕೊಬ್ಬಿನ ಆಹಾರದ ಸೇವನೆ, ಸಂಸ್ಕರಿತ ಸಕ್ಕರೆಯ ಮೇಲಿನ ನಮ್ಮ ಪ್ರೀತಿಯಿಂದಾಗಿ ಶರೀರದಲ್ಲಿ ಕೊಲೆಸ್ಟ್ರಾಲ್‌ ಪ್ರಮಾಣ ಹೆಚ್ಚುತ್ತಿದೆ. ಇದರಿಂದ ಹೃದಯದ ತೊಂದರೆ ಮತ್ತು ಪಾರ್ಶ್ವವಾಯುವಿನಂಥ ಮಾರಣಾಂತಿಕ ಸಮಸ್ಯೆಗಳು ಗಂಟಿಕ್ಕಿಕೊಳ್ಳಬಹುದು. ಇದಕ್ಕಾಗಿ ವೈದ್ಯರು ಸೂಚಿಸುವ ಔಷಧಿ ಮತ್ತು ವ್ಯಾಯಾಮ ಕಡ್ಡಾಯವಾಗಿ ಬೇಕಾಗುತ್ತದೆ. ಇದಲ್ಲದೆ, ಇನ್ನೂ ಕೆಲವು ಆಹಾರದ ಬದಲಾವಣೆಗಳಿಂದ ಈ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ ದೋಷವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ ಎನ್ನುತ್ತಾರೆ ಸ್ವಾಸ್ಥ್ಯ ಪರಿಣಿತರು. ಬೆಳಗಿನ ಖಾಲಿ ಹೊಟ್ಟೆಯಲ್ಲಿ ನಾವು ದೇಹಕ್ಕೆ ನೀಡುವಂಥ ಆಹಾರಗಳು ಹಲವು ರೀತಿಯಲ್ಲಿ ಮಹತ್ವವನ್ನು ಪಡೆದಿವೆ. ಅದರಲ್ಲೂ ಬೆಳಗಿನ ಪೇಯಗಳು ಕೊಲೆಸ್ಟ್ರಾಲ್‌ ಕಡಿತ ಮಾಡುವುದಕ್ಕೆ ಸೂಕ್ತವಾದಂಥವು. ಎಂಥ ಪೇಯಗಳನ್ನು ಬೆಳಗಿನ ಹೊತ್ತು ದೇಹಕ್ಕೆ ನೀಡಿದರೆ (Health Tips Kannada) ಸೂಕ್ತ?

Green tea

ಗ್ರೀನ್‌ ಟೀ

ಹಲವು ರೀತಿಯ ಉತ್ತಮ ಪಾಲಿಫೆನಾಲ್‌ಗಳನ್ನು ಹೊಂದಿರುವ ಗ್ರೀನ್‌ ಟೀ, ಉತ್ಕರ್ಷಣ ನಿರೋಧಕಗಳ ಖಜಾನೆಯಂತಿದೆ. ಅದರಲ್ಲೂ ಗ್ರೀನ್‌ ಟೀದಲ್ಲಿರುವ ಕೆಟಿಚಿನ್‌ ಅಂಶಗಳು ಕೊಲೆಸ್ಟ್ರಾಲ್‌ಗಳ ಜೊತೆ ಕೆಲಸ ಮಾಡುತ್ತವೆ. ಇದರಿಂದ ಆಹಾರದಲ್ಲಿನ ಕೊಲೆಸ್ಟ್ರಾಲ್‌ ಅಂಶವನ್ನು ದೇಹ ಹೀರಿಕೊಳ್ಳುವುದನ್ನು ಕಡಿಮೆ ಮಾಡಲು ಸಾಧ್ಯವಿದೆ. ಹಾಗಾಗಿ ನಿಯಮಿತವಾಗಿ ಗ್ರೀನ್‌ ಟೀ ಕುಡಿಯುವುದರಿಂದ ದೇಹದಲ್ಲಿ ಎಲ್‌ಡಿಎಲ್‌ ಮತ್ತು ಒಟ್ಟಾರೆ ಕೊಲೆಸ್ಟ್ರಾಲ್‌ಗಳನ್ನು ಕಡಿಮೆ ಮಾಡಲು ಸಾಧ್ಯವಿದೆ.

Chia seeds and soy milk

ಚಿಯಾ ಬೀಜ ಮತ್ತು ಸೋಯ್‌ ಹಾಲು

ಈ ಮಿಶ್ರಣ ಕೊಲೆಸ್ಟ್ರಾಲ್‌ ನಿರ್ವಹಣೆಯಲ್ಲಿ ಸಾಕಷ್ಟು ದಕ್ಷತೆಯನ್ನು ಪ್ರದರ್ಶಿಸಿದೆ. ನಾರು, ಪ್ರೊಟೀನ್‌ ಮತ್ತು ಒಮೇಗಾ ೩ ಕೊಬ್ಬಿನಾಮ್ಲಗಳ ಜೊತೆಗೆ ಹಲವು ಸೂಕ್ಷ್ಮ ಸತ್ವಗಳು ಇದರಿಂದ ದೇಹ ಸೇರುತ್ತವೆ. ದೇಹದಲ್ಲಿ ಎಚ್‌ಡಿಎಲ್‌ ಅಥವಾ ಉತ್ತಮ ಕೊಬ್ಬನ್ನು ಹೆಚ್ಚಿಸುವ ಸಾಧ್ಯತೆ ಚಿಯಾ ಬೀಜಗಳಿಗಿದೆ. ಎಲ್‌ಡಿಎಲ್‌ ಅಥವಾ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವ ಕ್ಷಮತೆ ಸೋಯಾ ಹಾಲಿಗಿದೆ. ಹಾಗಾಗಿ ಈ ಮಿಶ್ರಣವನ್ನೂ ಬೆಳಗಿನ ಪೇಯವಾಗಿ ಉಪಯೋಗಿಸಬಹುದು.

Beetroot and carrot juice

ಬೀಟ್‌ರೂಟ್‌ ಮತ್ತು ಕ್ಯಾರೆಟ್‌ ರಸ

ಹೆಚ್ಚಿನ ನೈಟ್ರೇಟ್‌ ಅಂಶವಿರುವ ಬೀಟ್‌ರೂಟ್‌ ರಸ ಕೊಲೆಸ್ಟ್ರಾಲ್‌ ತಗ್ಗಿಸುವ ಸಾಧ್ಯತೆಯನ್ನು ಹೊಂದಿದೆ. ಇನ್ನು, ಬೀಟಾ ಕ್ಯಾರೋಟಿನ್‌ನಂಥ ಕೆರೋಟಿನಾಯ್ಡ್‌ಗಳನ್ನು ಹೊಂದಿರುವ ಕ್ಯಾರೆಟ್‌ ಸಹ ಕೊಲೆಸ್ಟ್ರಾಲ್‌ ಹೀರಿಕೊಳ್ಳುವುದನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಈ ಬಗ್ಗೆ ಹಲವು ಅಧ್ಯಯನಗಳು ನಡೆಯುತ್ತಿದ್ದು, ಪೂರಕ ಪರಿಣಾಮವನ್ನು ದಾಖಲಿಸಿವೆ.

Ginger, lemon juice

ಶುಂಠಿ, ನಿಂಬೆ ರಸ

ಬೆಳಗಿನ ಹೊತ್ತು ಬೆಚ್ಚಗಿನ ನೀರಿಗೆ ಕೆಲವು ಹನಿ ನಿಂಬೆ ರಸ ಮತ್ತು ಅರ್ಧ ಚಮಚ ಶುಂಠಿ ರಸ ಸೇರಿಸಿ ಕುಡಿಯುವುದು ಸಹ ಉತ್ತಮ ಪರಿಣಾಮಗಳನ್ನ ತೋರಿಸಬಲ್ಲದು. ಉತ್ಕರ್ಷಣ ನಿರೋಧಕಗಳನ್ನು ನಿಂಬೆ ರಸ ದೇಹಕ್ಕೆ ನೀಡಿದರೆ, ಟ್ರೈಗ್ಲಸರೈಡ್‌ ಮತ್ತು ಎಲ್‌ಡಿಎಲ್‌ ತಗ್ಗಿಸುವ ಗುಣವನ್ನು ಶುಂಠಿ ಹೊಂದಿದೆ. ಜೊತೆಗೆ, ಬೆಳಗಿನ ಹೊತ್ತು ಚೈತನ್ಯವನ್ನು ನೀಡಿ, ವ್ಯಾಯಾಮ ಮಾಡುವ ಉತ್ಸಾಹವನ್ನೂ ಹೆಚ್ಚಿಸುತ್ತದೆ ಈ ಪೇಯ.

Tomato juice

ಟೊಮೇಟೊ ರಸ

ಟೊಮೆಟೊದ ಕೆಂಪು ಬಣ್ಣಕ್ಕೆ ಕಾರಣವಾಗುವುದು ಅದರಲ್ಲಿರುವ ಲೈಕೊಪೇನ್‌ ಅಂಶ. ಇದು ಎಲ್‌ಡಿಎಲ್‌ ಕಡಿಮೆ ಮಾಡುವ ಗುಣವನ್ನು ಢಾಳಾಗಿ ತೋರಿಸಿದೆ. ಅಧ್ಯಯನಗಳ ಪ್ರಕಾರ, ಅತಿ ಹೆಚ್ಚು ಪ್ರಮಾಣದ ಲೈಕೊಪೇನ್‌ ಅಂಶವು (ದಿನಕ್ಕೆ 25 ಎಂಜಿಗಿಂತ ಹೆಚ್ಚು), ಕಡಿಮೆ ತೀವ್ರತೆಯ ಸ್ಟ್ಯಾಟಿನ್‌ಗಳು (ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಔಷಧಿಗಳು) ಬೀರುವ ಪರಿಣಾಮವನ್ನೇ ತೋರುತ್ತವೆ.

Turmeric and soy milk

ಅರಿಶಿನ ಮತ್ತು ಸೋಯ್‌ ಹಾಲು

ಸೋಯ್‌ ಹಾಲಿನಲ್ಲಿ ಎಲ್‌ಡಿಎಲ್‌ ಅಥವಾ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. ಇನ್ನು ಅರಿಶಿನದಲ್ಲಿರುವ ಕರ್ಕುಮಿನ್‌ ಎಂಬ ಪ್ರಬಲ ಉತ್ಕರ್ಷಣ ನಿರೋಧಕವು ಎಲ್‌ಡಿಎಲ್‌ ಮತ್ತು ಟ್ರೈಗ್ಲಿಸರೈಡ್‌ಗಳನ್ನು ತಗ್ಗಿಸುವ ಗುಣವನ್ನು ತೋರಿಸಿದೆ. ಹಾಗಾಗಿ ಪ್ರಾಣಿಜನ್ಯ ಹಾಲಿಗೆ ಅರಿಶಿನ ಸೇರಿಸುವ ಬದಲು, ಸೋಯಾ ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು ಕೊಲೆಸ್ಟ್ರಾಲ್‌ ತಗ್ಗಿಸುವುದಕ್ಕೆ ಒಳ್ಳೆಯ ಉಪಾಯ.

ಇದನ್ನೂ ಓದಿ: Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

Continue Reading

ಆರೋಗ್ಯ

Health Tips Kannada: ಕಣ್ಣಿನ ಕೆಳಗೆ ಕಪ್ಪಾಗಿದೆಯೇ? ಇಲ್ಲಿದೆ ಸರಳ ಮನೆಮದ್ದು

ಕಣ್ಣಿನ ಕೆಳಭಾಗದಲ್ಲಿ ಕಾಣುವ ಗಾಢಬಣ್ಣದ ವರ್ತುಲಗಳು ಇಡೀ ಮುಖಕ್ಕೆ ವಯಸ್ಸಾದ, ಸುಸ್ತಾದ ಮತ್ತು ನಿದ್ದೆಗೆಟ್ಟ ಕಳೆಯನ್ನು ನೀಡುವುದಂತೂ ಹೌದು. ಅದೇನು ಗಂಭೀರವಾದ ಆರೋಗ್ಯ ಸಮಸ್ಯೆಯ ಲಕ್ಷಣ ಅಲ್ಲದಿದ್ದರೂ, ಇದನ್ನು ಸರಿ ಮಾಡುವುದು ಹೇಗೆಂಬ ಪ್ರಶ್ನೆ ಮೂಡುವುದಂತೂ ಹೌದು. ಈ ಕುರಿತು (Health Tips Kannada) ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

Health Tips Kannada
Koo

ಅಂದದ ಮೊಗಕ್ಕೆ ಕಣ್ಣೇ ಭೂಷಣ ಎಂದು ಹಾಡಿದವರಿದ್ದಾರೆ. ಅಂಥ ಸುಂದರ ಕಣ್ಣಿನ ಕೆಳಗೆ ಕಪ್ಪು ವರ್ತುಲಗಳು ಕಾಣಿಸಿಕೊಂಡರೆ… ಅದೇ ದೋಷ ಎನಿಸಿಬಿಡುತ್ತದೆ. ಜೊತೆಗೆ, ಆರೋಗ್ಯದ ಬಗ್ಗೆಯೂ ಪ್ರಶ್ನೆಗಳು ಏಳುತ್ತವೇ? ಸಾಕಷ್ಟು ನಿದ್ದೆ ಮಾಡಿ, ಚೆನ್ನಾಗಿ ನೀರು ಕುಡೀರಿ, ಸೊಪ್ಪು ತಿನ್ನಿ ಎಂದೆಲ್ಲಾ ಆರೋಗ್ಯ ಸಲಹೆಗಳು ಕೇಳಿ ಬಂದರೆ ಸಹಜವೇ. ಕಣ್ಣಿನ ಕೆಳಭಾಗದಲ್ಲಿ ಕಾಣುವ ಗಾಢಬಣ್ಣದ ವರ್ತುಲಗಳು ಇಡೀ ಮುಖಕ್ಕೆ ವಯಸ್ಸಾದ, ಸುಸ್ತಾದ ಮತ್ತು ನಿದ್ದೆಗೆಟ್ಟ ಕಳೆಯನ್ನು ನೀಡುವುದಂತೂ ಹೌದು. ಅದೇನು ಗಂಭೀರವಾದ ಆರೋಗ್ಯ ಸಮಸ್ಯೆಯ ಲಕ್ಷಣ ಅಲ್ಲದಿದ್ದರೂ, ಇದನ್ನು ಸರಿ ಮಾಡುವುದು ಹೇಗೆಂಬ (Health Tips Kannada) ಪ್ರಶ್ನೆ ಮೂಡುವುದಂತೂ ಹೌದು.

dark circles

ಇದು ಬರುವುದೇಕೆ?

ಕೆಲವರಿಗೆ ಆನುವಂಶಿಕವಾಗಿ ಈ ಲಕ್ಷಣಗಳು ಬರಬಹುದು. ಕುಟುಂಬದ ಹತ್ತಿರದ ರಕ್ತ ಸಂಬಂಧಿಗಳಲ್ಲಿ ಈ ತೊಂದರೆಯಿದ್ದರೆ, ಅದು ವರ್ಗಾವಣೆಗೊಂಡಿರಬಹುದು. ನಿದ್ದೆ ಸಾಕಾಗದಿದ್ದರೆ, ನಿದ್ರಿಸುವ ಸಮಯ ಅನಿಯಮಿತವಾಗಿದ್ದರೆ, ಕಪ್ಪು ವರ್ತುಲಗಳು ಬರುತ್ತವೆ. ಕಣ್ಣಿನ ಕೆಳಗಿನ ಭಾಗದ ಚರ್ಮ ಅತಿ ಸೂಕ್ಷ್ಮವಾದ್ದರಿಂದ ಈ ಭಾಗದಲ್ಲಿನ ರಕ್ತನಾಳಗಳ ಚಟುವಟಿಕೆ ಢಾಳಾಗಿ ಕಾಣುತ್ತದೆ. ಪಿಗ್ಮೆಂಟೇಶನ್‌ ಸಹ ಎದ್ದು ಕಾಣುವಂತಾಗುತ್ತದೆ. ವಯಸ್ಸು ಹೆಚ್ಚಿದಂತೆ. ಕೊಲಾಜಿನ್‌ ಕಡಿಮೆಯಾಗಿ ಚರ್ಮದ ಬಿಗಿ ನೈಸರ್ಗಿಜವಾಗಿಯೇ ಕಡಿಮೆಯಾಗುತ್ತದೆ. ಇದರಿಂದ ಕಣ್ಣಿನ ಕೆಳಗೆ ಚರ್ಮ ಜೋತಾಡಬಹುದು; ಮತ್ತೂ ಕಪ್ಪಾಗಿ ಕಾಣಬಹುದು. ಇದನ್ನು ಕಡಿಮೆ ಮಾಡಲು ಕೆಲವು ಮನೆಮದ್ದುಗಳು ನೆರವಾಗುತ್ತವೆ.

Cold compress

ತಣ್ಣನೆಯ ಕಂಪ್ರೆಸ್‌

ತಂಪಾದ ನೀರಲ್ಲಿ ಅದ್ದಿದ ಬಟ್ಟೆ, ಫ್ರಿಜ್‌ನಲ್ಲಿ ಕೆಲಕಾಲ ಇರಿಸಿದ ತೇವದ ಟೀ ಬ್ಯಾಗ್‌ ಮುಂತಾದವುಗಳನ್ನು ಕಣ್ಣಿನ ಮೇಲೆ 10-15 ನಿಮಿಷ ಇರಿಸಿಕೊಳ್ಳಿ. ಅದರಲ್ಲೂ ಗ್ರೀ ಟೀ ಅಥವಾ ಕ್ಯಾಮೊಮೈಲ್‌ ಟೀ ಹೆಚ್ಚು ಉಪಯುಕ್ತ. ಇದರಿಂದ ಈ ಭಾಗದಲ್ಲಿ ಉಬ್ಬಿದಂತೆ ಕಾಣುವ ರಕ್ತನಾಳಗಳು ಸಂಕೋಚಗೊಳ್ಳುತ್ತವೆ. ಇದರಿಂದ ಕಣ್ಣಿನ ಕೆಳಗಿನ ಭಾಗ ಉಬ್ಬಿದಂತಾಗಿ ಕಪ್ಪಾಗಿದ್ದರೆ ಕಡಿಮೆಯಾಗುತ್ತದೆ.

Nutrient Rich Cucumber Benefits

ಸೌತೇಕಾಯಿ

ತಂಪಾದ ಸೌತೇಕಾಯಿಯ ಗಾಲಿಯಂಥ ತುಂಡನ್ನು ಕಣ್ಣುಗಳ ಮೇಲಿರಿಸಿ 20 ನಿಮಿಷ ಬಿಡಿ. ಇದನ್ನು ದಿನವೂ ಮಾಡಬಹುದು. ಇದರಿಂದ ಕಣ್ಣಿನ ಕೆಳಗೆ ಉಬ್ಬಿದ್ದರೆ ಕಡಿಮೆಯಾಗಿ, ಗಾಢಬಣ್ಣವೂ ತಿಳಿಯಾಗುತ್ತದೆ. ಜೊತೆಗೆ ಕಣ್ಣನ್ನು ತಂಪಾಗಿಸಿ, ದೃಷ್ಟಿಗೂ ಅನುಕೂಲ ಒದಗಿಸುತ್ತದೆ.

Nutrient-Rich Potato Benefits

ಆಲೂಗಡ್ಡೆ

ಸೌತೇಕಾಯಿಯಂತೆ, ಆಲೂಗಡ್ಡೆಗೂ ನೈಸರ್ಗಿಕವಾದ ಬ್ಲೀಚಿಂಗ್‌ ಗುಣವಿದೆ. ಹಾಗಾಗಿ ಕಪ್ಪಾದ ಚರ್ಮವನ್ನು ನಿಧಾನಕ್ಕೆ ತಿಳಿಯಾಗಿಸುತ್ತದೆ. ಫ್ರಿಜ್‌ನಲ್ಲಿಟ್ಟ ಆಲೂಗಡ್ಡೆಯನ್ನು ತುರಿದು ರಸ ತೆಗೆಯಿರಿ, ಈ ತಂಪಾದ ರಸದಲ್ಲಿ ಸ್ವಚ್ಛ ಹತ್ತಿಯ ಬಟ್ಟೆಯನ್ನು ಅದ್ದಿ ಕಣ್ಣುಗಳ ಕೆಳಗಿರಿಸಿಕೊಳ್ಳಿ. 15 ನಿಮಿಷಗಳ ನಂತರ ತಂಪಾದ ನೀರಲ್ಲಿ ತೊಳೆಯಿರಿ.

Tomato juice

ಟೊಮಾಟೊ ರಸ

ಇದೂ ಸಹ ಗಾಢ ಬಣ್ಣವನ್ನು ತಿಳಿಯಾಗಿಸಬಲ್ಲ ಗುಣವನ್ನು ಹೊಂದಿದೆ. ಟೊಮಾಟೊ ರಸ ತೆಗೆದು, ಕೆಲವು ಹನಿ ನಿಂಬೆರಸ ಸೇರಿಸಿ. ಇದರಲ್ಲಿ ಸ್ವಚ್ಛ ವಸ್ತ್ರವನ್ನು ಅದ್ದಿ, ಕಣ್ಣುಗಳ ಕೆಳಗಿರಿಸಿಕೊಳ್ಳಿ. ೧೦ ನಿಮಿಷಗಳ ನಂತರ ಬೆಚ್ಚಗಿನ ನೀರಲ್ಲಿ ತೊಳೆಯಿರಿ.

Almond Oil

ಬಾದಾಮಿ ಎಣ್ಣೆ

ವಿಟಮಿನ್‌ ಇ ಹೇರಳವಾಗಿದೆ ಬಾದಾಮಿ ತೈಲದಲ್ಲಿ. ರಾತ್ರಿ ಮಲಗುವ ಮುನ್ನ, ಇದರ ಕೆಲವು ಹನಿಗಳನ್ನು ಕಣ್ಣ ಕೆಳಭಾಗದಲ್ಲಿ ಲಘುವಾಗಿ ಹಚ್ಚಿ ಮಸಾಜ್‌ ಮಾಡಿ. ರಾತ್ರಿಡೀ ಇದನ್ನು ಹಾಗೆಯೇ ಬಿಡಿ. ಹಚ್ಚಿದ ಎಣ್ಣೆ ಅತಿಯಾದರೆ ಕಣ್ಣುರಿ ಬಂದೀತು. ಹಾಗಾಗಿ ಸ್ವಲ್ಪವೇ ಹಚ್ಚಿ.

ರೋಸ್‌ ವಾಟರ್‌

ಗುಲಾಬಿ ಜಲ

ಹತ್ತಿಯ ಪ್ಯಾಡ್‌ಗಳಲ್ಲಿ ತಂಪಾದ ಗುಲಾಬಿ ಜಲದಲ್ಲಿ ಅದ್ದಿ, ಮುಚ್ಚಿದ ಕಣ್ಣುಗಳ ಮೇಲೆ ಇರಿಸಿಕೊಳ್ಳಿ. ಸೌತೇಕಾಯಿಯಂಥದ್ದೇ ಪರಿಣಾಮಗಳನ್ನು ಗುಲಾಬಿ ಜಲವೂ ನೀಡಬಲ್ಲದು. ೧೫ ನಿಮಿಷಗಳ ನಂತರ ತಂಪಾದ ನೀರಲ್ಲಿ ತೊಳೆಯಿರಿ.

Aloe Vera Home Remedies For Stretch Marks

ಲೋಳೆಸರ

ಇದರ ತಂಪಾದ ತಾಜಾ ಜೆಲ್‌ ತೆಗೆಯಿರಿ. ಅದನ್ನು ಕಣ್ಣಿನ ಕೆಳಭಾಗದಲ್ಲಿ ಇರಿಸಿಕೊಂಡು 20 ನಿಮಿಷ ಬಿಡಿ. ನಂತರ ತಂಪಾದ ನೀರಿನಿಂದ ತೊಳೆಯಿರಿ. ಇದು ಚರ್ಮವನ್ನು ಬಿಗಿಯಾಗಿಸಿ, ತೇವವನ್ನು ಹಿಡಿದಿಡುತ್ತದೆ. ಜೊತೆಗೆ ಕಣ್ಣಿನ ಕೆಳಭಾಗದ ಕಪ್ಪು ಚರ್ಮವನ್ನು ತಿಳಿಯಾಗಿಸುತ್ತದೆ. ಇವೆಲ್ಲವುಗಳ ಜೊತೆಗೆ, ದೇಹಕ್ಕೆ ಚೆನ್ನಾಗಿ ನೀರು ಬೇಕು. ಋತುಮಾನದ ಸೊಪ್ಪು-ತರಕಾರಿ-ಹಣ್ಣುಗಳು ಬೇಕು. ಕಣ್ತುಂಬಾ ನಿದ್ದೆಯಂತೂ ಕಡ್ಡಾಯ.

ಇದನ್ನೂ ಓದಿ: Aloe Vera Benefits: ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಲೋಳೆಸರದ ಮಾಸ್ಕ್‌ ಬಳಸಿ

Continue Reading
Advertisement
Rain News
ಕರ್ನಾಟಕ3 hours ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ನವ ವಿವಾಹಿತ ಸಾವು, ಕಾರ್ಮಿಕನ ಸ್ಥಿತಿ ಗಂಭೀರ

ಪ್ರಮುಖ ಸುದ್ದಿ3 hours ago

IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

Nijjar Killing
ವಿದೇಶ3 hours ago

Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

Rohith Vemula
ದೇಶ3 hours ago

Rohith Vemula: ರೋಹಿತ್‌ ವೇಮುಲ ದಲಿತನಲ್ಲ ಎಂದ ಪೊಲೀಸರು; ಮರು ತನಿಖೆಗೆ ‘ಕೈ’ ಸರ್ಕಾರ ಆದೇಶ!

Rinku Singh
ಪ್ರಮುಖ ಸುದ್ದಿ4 hours ago

Rinku Singh : ಕೊಹ್ಲಿಯ ಬ್ಯಾಟ್​ನಲ್ಲಿ ರಿಂಕು ಚೆನ್ನಾಗಿ ಆಡುತ್ತಿಲ್ಲ; ನೆಟ್ಟಿಗರಿಂದ ಟ್ರೋಲ್​!

honour killing
ವಿಜಯಪುರ4 hours ago

Honor Killing: ಮರ್ಯಾದೆಗಾಗಿ ಗರ್ಭಿಣಿಯನ್ನು ಸುಟ್ಟು ಕೊಂದ ಇಬ್ಬರಿಗೆ ಗಲ್ಲು ಶಿಕ್ಷೆ, 6 ಮಂದಿಗೆ ಜೀವಾವಧಿ‌ ಶಿಕ್ಷೆ

Pakistan
ವಿದೇಶ4 hours ago

ಚೀನಾ ದಯೆಯಿಂದ ಮೊದಲ ಚಂದ್ರಯಾನ ಕೈಗೊಂಡ ಪಾಕಿಸ್ತಾನ; ಆದರೂ ಭಾರತಕ್ಕಿಂತ 16 ವರ್ಷ ಹಿಂದೆ!

T20 World Cup
ಪ್ರಮುಖ ಸುದ್ದಿ4 hours ago

T20 World Cup : ಉನ್ಮುಕ್ತ್​ ಚಾಂದ್​ಗೆ ತೆರೆಯದ ಭಾಗ್ಯದ ಬಾಗಿಲು; ಯುಎಸ್​ ತಂಡದಲ್ಲಿ ಇಲ್ಲ ಚಾನ್ಸ್​!

Health Tips Kannada
ಆರೋಗ್ಯ5 hours ago

Health Tips Kannada : ಉತ್ತಮ ಆರೋಗ್ಯಕ್ಕಾಗಿ ಎಷ್ಟು ಗಂಟೆ ಕುಳಿತುಕೊಳ್ಳಬೇಕು, ನಿಂತುಕೊಳ್ಳಬೇಕು, ಮಲಗಬೇಕು?

Meeting with representatives of various political parties about MLC election in Hosapete
ವಿಜಯನಗರ5 hours ago

Vijayanagara News: ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ; ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ11 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ22 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20246 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌