Internet Addiction: ಈ 10 ಲಕ್ಷಣಗಳು ನಿಮ್ಮಲ್ಲಿದ್ದರೆ, ನೀವೂ ಇಂಟರ್ನೆಟ್‌ ಚಟಕ್ಕೆ ಬಿದ್ದಿದ್ದೀರಿ ಎಂದರ್ಥ! - Vistara News

ಆರೋಗ್ಯ

Internet Addiction: ಈ 10 ಲಕ್ಷಣಗಳು ನಿಮ್ಮಲ್ಲಿದ್ದರೆ, ನೀವೂ ಇಂಟರ್ನೆಟ್‌ ಚಟಕ್ಕೆ ಬಿದ್ದಿದ್ದೀರಿ ಎಂದರ್ಥ!

Internet addiction: ಆನ್‌ಲೈನ್‌ ಗೀಳಿನಿಂದಾಗಿ ಹಲವು ವಿಚಾರಗಳಲ್ಲಿ ನಾವು ಹಿಂದೆ ಬೀಳುತ್ತೇವೆ. ಏಕಾಗ್ರತೆ, ಓದುವ ಅಭ್ಯಾಸ, ದೈಹಿಕ ಚಟುವಟಿಕೆ ಇತ್ಯಾದಿಗಳೂ ಕೂಡಾ ಇದರಿಂದಾಗಿ ಕುಂಠಿತವಾಗುತ್ತಿದೆ. ದೈಹಿಕ ಹಾಗೂ ಮಾನಸಿಕವಾಗಿ ಇದು ಸಾಕಷ್ಟು ಕೆಟ್ಟ ಪರಿಣಾಮ ಬೀರುವುದರಿಂದ ಆದಷ್ಟು ಆರಂಭಿಕ ಹಂತದಲ್ಲಿರುವಾಗಲೇ ಈ ಚಟಕ್ಕೆ ಕಡಿವಾಣ ಹಾಕಬೇಕು.

VISTARANEWS.COM


on

Internet Addiction
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಗು ಲಗಾಮಿಲ್ಲದೆ ಇಂಟರ್ನೆಟ್‌ ಬಳಸುವ ಅಭ್ಯಾಸ ಇಂದು ಮಕ್ಕಳಾದಿಯಾಗಿ ಹಿರಿಯರನ್ನೂ ಕಾಡುತ್ತಿದೆ. ಇದರಿಂದ ದಿನನಿತ್ಯದ ಚಟುವಟಿಕೆಗಳಿಗೂ ಸಾಕಷ್ಟು ಸಮಸ್ಯೆಯೂ ಆಗುತ್ತಿದೆ. ಹಲವು ವಿಚಾರಗಳಲ್ಲಿ ನಾವು ಹಿಂದೆ ಬೀಳುತ್ತೇವೆ. ಏಕಾಗ್ರತೆ, ಓದುವ ಅಭ್ಯಾಸ, ದೈಹಿಕ ಚಟುವಟಿಕೆ ಇತ್ಯಾದಿಗಳೂ ಕೂಡಾ ಇದರಿಂದಾಗಿ ಕುಂಠಿತವಾಗುತ್ತಿದೆ. ದೈಹಿಕ ಹಾಗೂ ಮಾನಸಿಕವಾಗಿ ಇದು ಸಾಕಷ್ಟು ಕೆಟ್ಟ ಪರಿಣಾಮ ಬೀರುವುದರಿಂದ ಆದಷ್ಟು ಆರಂಭಿಕ ಹಂತದಲ್ಲಿರುವಾಗಲೇ ಈ ಚಟಕ್ಕೆ ಕಡಿವಾಣ ಹಾಕಬೇಕು. ಇಂಟರ್ನೆಟ್‌ ಅಡಿಕ್ಷನ್‌ ಅಥವಾ ಅಂತರ್ಜಾಲ ಚಟ (Internet addiction) ಎಂಬುದು ಇತ್ತೀಚಿನ ದಶಕದಲ್ಲಿ ಅತ್ಯಂತ ಹೆಚ್ಚಾಗಿ ಎಲ್ಲರನ್ನೂ ಬಿಡದೆ ಕಾಡುವ ದೌರ್ಬಲ್ಯ. ಅತ್ಯಂತ ಹೆಚ್ಚು, ಲಂಗು ಲಗಾಮಿಲ್ಲದೆ ಇಂಟರ್ನೆಟ್‌ ಬಳಸುವ ಅಭ್ಯಾಸ ಇಂದು ಮಕ್ಕಳಾದಿಯಾಗಿ ಹಿರಿಯರನ್ನೂ ಕಾಡುತ್ತಿದೆ. ಇದರಿಂದ ದಿನನಿತ್ಯದ ಚಟುವಟಿಕೆಗಳಿಗೂ ಸಾಕಷ್ಟು ಸಮಸ್ಯೆಯೂ ಆಗುತ್ತಿದೆ. ಹಲವು ವಿಚಾರಗಳಲ್ಲಿ ನಾವು ಹಿಂದೆ ಬೀಳುತ್ತೇವೆ. ಏಕಾಗ್ರತೆ, ಓದುವ ಅಭ್ಯಾಸ, ದೈಹಿಕ ಚಟುವಟಿಕೆ ಇತ್ಯಾದಿಗಳೂ ಕೂಡಾ ಇದರಿಂದಾಗಿ ಕುಂಠಿತವಾಗುತ್ತಿದೆ. ದೈಹಿಕ ಹಾಗೂ ಮಾನಸಿಕವಾಗಿ ಇದು ಸಾಕಷ್ಟು ಕೆಟ್ಟ ಪರಿಣಾಮ ಬೀರುವುದರಿಂದ ಆದಷ್ಟು ಆರಂಭಿಕ ಹಂತದಲ್ಲಿರುವಾಗಲೇ ಈ ಚಟಕ್ಕೆ ಕಡಿವಾಣ ಹಾಕಬೇಕು. ನಿಮಗೇ ತಿಳಿಯದಾ ಹಾಗೆ ನೀವು ಇಂಟರ್ನೆಟ್‌ ದಾಸರಾಗಿದ್ದೀರಾ? ಇಂಟರ್ನೆಟ್‌ನ ಚಟಕ್ಕೆ ಬಿದ್ದಿದ್ದೀರಾ? ಬನ್ನಿ, ಈ ಕೆಳಗಿನ ಅಭ್ಯಾಸಗಳು ನಿಮ್ಮಲ್ಲಿದ್ದರೆ ನೀವೂ ಇದರ ದಾಸರಾಗಿದ್ದೀರಿ ಎಂಬಲ್ಲಿ ಯಾವ ಸಂಶಯವೂ ಇಲ್ಲ.

woman holding mobile phone in social network and internet addiction

ಸದಾ ಇಂಟರ್ನೆಟ್‌ನದ್ದೇ ಧ್ಯಾನ

ಆಗಾಗ ನಿಮಗೆ ಆನ್‌ಲೈನ್‌ನ ಕೆಲಸಗಳೇ ಮನಸ್ಸಿನಲ್ಲಿ ಜ್ಞಾಪಕಕ್ಕೆ ಬರುತ್ತಿದೆಯಾ? ನೀವು ಯಾವುದಾದರೂ ಬೇರೆ ಕೆಲಸಕ್ಕೆ ಗಮನ ಕೊಡುವಾಗಲೂ ನೀವು ಕೆಲ ಹೊತ್ತಿನ ನಂತರ ಇಂಟರ್ನೆಟ್‌ನ ಬಳಕೆಯ ಬಗ್ಗೆ ಯೋಚನೆ ಮಾಡುತ್ತೀರುತ್ತೀರಿ ಎಂದಾದಲ್ಲಿ ನೀವು ಚಟಕ್ಕೆ ಬಿದ್ದಿದ್ದೀರಿ ಎಂದರ್ಥ.

ಕಡಿಮೆ ಬಳಸಲು ಸಾಧ್ಯವಾಗುತ್ತಿಲ್ಲ

ಇಂಟರ್ನೆಟ್‌ ಬಳಕೆಯನ್ನು ಕಡಿಮೆ ಮಾಡಲು ನಿಮ್ಮ ಕೈಯಲ್ಲಿ ಸಾಧ್ಯವಾಗುತ್ತಿಲ್ಲವೇ? ಹೆಚ್ಚು ಸಮಯವನ್ನು ಆನ್‌ಲೈನ್‌ನಲ್ಲಿ, ಅಥವಾ ಇಂಟರ್ನೆಟ್‌ ಆಧರಿಸಿದ ಕೆಲಸದಲ್ಲಿ ಕಳೆಯಲು ಇಷ್ಟಪಡುತ್ತೀರಿ ಅಥವಾ ಅದರಿಂದ ಹೊರಗೆ ಬರಲು ನೀವು ಯೋಚಿಸಿದರೂ ಸಾಧ್ಯವಾಗುತ್ತಿಲ್ಲ ಎಂದಾದಲ್ಲಿ ಅದು ಚಟವೇ.

ನಿತ್ಯ ಕೆಲಸಗಳನ್ನು ಬಿಟ್ಟು…

ನಿಮ್ಮ ಖಾಸಗಿ ಕೆಲಸಗಳನ್ನು ನಿರ್ಲಕ್ಷ್ಯ ಮಾಡಿ ನೀವು ಆನ್‌ಲೈನ್‌, ಅಥವಾ ಇಂಟರ್ನೆಟ್‌ನಲ್ಲಿರಲು ಬಯಸುತ್ತೀರಿ ಎಂದಾದಲ್ಲಿ ನೀವು ಚಟಕ್ಕೆ ಬಿದ್ದಿದ್ದೀರಿ ಎಂದರ್ಥ. ಮನೆಕೆಲಸಗಳು, ನಿಮ್ಮ ನಿತ್ಯಕೆಲಸಗಳು, ಡೆಡ್‌ಲೈನ್‌ಗಳು ಮರೆತು ನೀವು ಇದಕ್ಕೆ ದಾಸರಾಗಿದ್ದೀರಿ ಎಂದರೆ ಅದು ನಿಮಗೆ ಒಳ್ಳೆಯದಲ್ಲ.

Boy Plays Computer Game at Home, Gaming Addiction

ಇಂಟರ್‌ನೆಟ್‌ ಸಿಗದಿದ್ದಾಗ ಚಡಪಡಿಕೆ

ಇಂಟರ್‌ನೆಟ್‌ ಸಿಗದಿದ್ದಾಗ, ಇಂಟರ್ನೆಟ್‌ ಬಳಸಲು ಸಾಧ್ಯವಾಗುತ್ತಿಲ್ಲ ಎಂದಾದಾಗ ಕಿರಿಕಿರಿಯಾಗುತ್ತಿದೆಯೋ, ಬೇರೆ ಕೆಲಸಕ್ಕೆ ಗಮನ ಕೊಡಲು ಸಾಧ್ಯವಾಗುತ್ತಿಲ್ಲವೋ ಹಾಗಾದರೆ ಅದು ಇಂಟರ್ನೆಟ್‌ ಚಟದ ಕಾರಣದಿಂದಾಗಿಯೇ.

ಇಂಟರ್ನೆಟ್‌ ಅವಲಂಬನೆ

ನಿಮ್ಮ ತೊಂದರೆಗಳನ್ನು, ಬೇಸರಗಳನ್ನು ಮರೆಯಲು, ಒತ್ತಡವನ್ನು, ಋಣಾತ್ಮಕ ಚಿಂತನೆಗಳನ್ನು ಕಡಿಮೆ ಮಾಡಲು ಇಂಟರ್ನೆಟ್‌ನಲ್ಲಿರುವುದರ ಮೂಲಕ ಪಾರಾಗಲು ಪ್ರಯತ್ನಿಸುತ್ತೀರಿ ಎಂದರೆ ಅದು ಖಂಡಿತ ಚಟವೇ. ನಿಮ್ಮ ಈ ಭಾವನೆಗಳಿಗೆ ಬೇರೆ ಕಾರಣ ಹುಡುಕಿ ಅದನ್ನು ಸರಿ ಮಾಡಬೇಕೇ ಹೊರತು, ಇಂಟರ್ನೆಟ್‌ ನಿಮ್ಮ ಪಲಾಯನದ ಹಾದಿ ಆಗಬಾರದು.

ಕುಟುಂಬದವರ ಜೊತೆ ಮುಚ್ಚಿಡುತ್ತೀರಿ

ಆನ್‌ಲೈನ್‌/ ಇಂಟರ್ನೆಟ್‌ನಲ್ಲಿ ನೀವು ಕಳೆದ ಸಮಯವನ್ನು ನಿಮ್ಮ ಕುಟುಂಬದವರ ಜೊತೆ ಮುಚ್ಚಿಡುತ್ತೀರಿ ಎಂದಾದಲ್ಲಿ ಖಂಡಿತವಾಗಿಯೂ ನೀವು ಅದರ ದಾಸರಾಗಿದ್ದೀರಿ ಎಂದರ್ಥ.

Addicted to internet

ವಾಗ್ವಾದಗಳನ್ನು ಸೃಷ್ಟಿಸುತ್ತಿದೆಯೆ?

ಇಂಟರ್ನೆಟ್‌ ಬಳಕೆಯೇ ನಿಮ್ಮ ಹಾಗೂ ನಿಮ್ಮ ಸಂಗಾತಿಯ/ಪ್ರೀತಿಪಾತ್ರರ/ಹೆತ್ತವರ ಜೊತೆಗೆ ವಾಗ್ವಾದಗಳನ್ನು ಸೃಷ್ಟಿಸುತ್ತಿದೆ ಎಂದಾದಲ್ಲಿ ನೀವು ಇಂಟರ್ನೆಟ್‌ ಚಟಕ್ಕೆ ಬಿದ್ದಿದ್ದೀರಿ ಎಂದರ್ಥ. ಸಂಬಂಧಗಳ ಮಹತ್ವವನ್ನು ಅರಿಯದೆ, ಅದಕ್ಕೆ ಸರಿಯಾದ ಸಮಯವನ್ನು ನೀಡದೆ, ನೀವು ಇಂಟರ್ನೆಟ್‌ ಮೂಲಕ ನಿಮ್ಮ ಶಾಂತಿ ಕಂಡುಕೊಳ್ಳುತ್ತೀರಿ ಎಂದರೆ ಅದು ಒಳ್ಳೆಯ ಬೆಳವಣಿಗೆಯಲ್ಲ.

ಕಣ್ಣು ಸುಸ್ತಾದಂತೆ ಅನಿಸುವುದು

ಕಣ್ಣು ಸುಸ್ತಾದಂತೆ ಅನಿಸುವುದು, ಬೆನ್ನು ನೋವು, ಸೊಂಟ ನೋವು, ನಿದ್ದೆಯಲ್ಲಿ ಸಮಸ್ಯೆ ಇತ್ಯಾದಿಗಳು ನಿಮ್ಮನ್ನು ಕಾಡುತ್ತಿದೆ ಎಂದರೆ ನೀವು ಅತಿಯಾಗಿ ಇಂಟರ್ನೆಟ್‌ ಬಳಸುತ್ತಿದ್ದೀರಿ ಎಂದರ್ಥ,

Addicted From Social Media Woman

ಹೊರಗಿನ ಆಸಕ್ತಿ ಕಡಿಮೆ

ಹೊರಗಿನ ಕೆಲಸ, ವ್ಯಾಯಾಮ, ಇತರ ಚಟುವಟಿಕೆಗಳಲ್ಲಿ ಆಸಕ್ತಿ ಕಡಿಮೆಯಾಗಿದೆ ಎಂದಾದಲ್ಲಿ ಹಾಗೂ ನೀವು ಆನ್‌ಲೈನ್‌ ಇರುವುದನ್ನೇ ಇಷ್ಟಪಡುತ್ತೀರಿ, ಅದಕ್ಕಾಗಿ ಕಾರಣ ಹುಡುಕುತ್ತೀರಿ ಎಂದಾದಲ್ಲಿ ನಿಮಗೆ ಇಂಟರ್ನೆಟ್‌ ಚಟವೇ.

ಇದನ್ನೂ ಓದಿ: Back Acne Problem: ಬೆನ್ನಿನ ಮೇಲಿನ ಮೊಡವೆಗಳ ಸಮಸ್ಯೆಯೇ? ಇಲ್ಲಿವೆ ಸರಳ ಪರಿಹಾರಕ್ಕೆ ಅಷ್ಟಸೂತ್ರಗಳು!

ಆನ್‌ಲೈನ್‌ನಲ್ಲೇ ಹೆಚ್ಚು ಸಮಯ

ದಿನಗಳೆದಂತೆ ಹೆಚ್ಚು ಹೆಚ್ಚು ಸಮಯ ಆನ್‌ಲೈನ್‌ಗಾಗಿ ಮೀಸಲಿಡುತ್ತಿದ್ದೀರಿ ಹಾಗೂ ಅದರಿಂದ ಸಂತೋಷ ಪಡೆಯುತ್ತಿದ್ದೀರಿ ಎಂದರೂ ಕೂಡಾ ನೀವು ಇಂಟರ್ನೆಟ್‌ ದಾಸರಾಗಿದ್ದೀರಿ ಎಂದರ್ಥ. ಇಂತಹ ಲಕ್ಷಣಗಳು ಕಂಡು ಬಂದಲ್ಲಿ ಅದನ್ನು ಮೊದಲೇ ಅರಿತುಕೊಂಡು ಈ ಅಭ್ಯಾಸವನ್ನು ಕಡಿಮೆ ಮಾಡಲು ಪ್ರಾಮಾಣಿಕ ಪ್ರಯತ್ನ, ಆಪ್ತ ಸಮಾಲೋಚನೆ ಹಾಗೂ ತಜ್ಞರ ನೆರವು ಪಡೆಯುವುದು ಅತ್ಯಂತ ಅಗತ್ಯ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Swim Benefits: ನಿತ್ಯವೂ ಈಜಿದರೆ ಸಾಕು; ಇದಕ್ಕಿಂತ ದೊಡ್ಡ ಬೇರೆ ವ್ಯಾಯಾಮ ಇನ್ನೊಂದು ಬೇಡ!

swim benefits: ಫಿಟ್‌ನೆಸ್‌ನ ಭಾಗವಾಗಿ ಈಜುತ್ತಿದ್ದರೆ ಅದೂ ಕೂಡಾ ಒಳ್ಳೆಯದೇ. ಇತ್ತೀಚೆಗಿನ ದಿನಗಳಲ್ಲಿ ಈಜು ಮಕ್ಕಳಾದಿಯಾಗಿ ಹಿರಿಯರೂ ಕೂಡಾ ಕಲಿತು ತಮ್ಮ ಫಿಟ್‌ನೆಸ್‌ನ ಭಾಗವಾಗಿ ರೂಪಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಹಾಗೆ ನೋಡಿದರೆ, ಈಜುವುದು ಎಲ್ಲದಕ್ಕಿಂತ ಅತ್ಯುತ್ತಮವಾದ ಕಾರ್ಡಿಯೋ ವ್ಯಾಯಾಮ. ಬನ್ನಿ, ಈಜುವುದರಿಂದ ನಮ್ಮ ಆರೋಗ್ಯಕ್ಕೆ, ಫಿಟ್‌ನೆಸ್‌ಗೆ ಯಾವೆಲ್ಲ ಉಪಯೋಗಗಳಿವೆ ಎಂಬುದನ್ನು ನೋಡೋಣ.

VISTARANEWS.COM


on

swim benefits
Koo

ಹಳ್ಳಿಗಳಲ್ಲಿ ಬೆಳೆದ ನಮ್ಮ ಬಾಲ್ಯಗಳನ್ನು ನೆನೆಪಿಸಿಕೊಂಡರೆ ಅನೇಕರಿಗೆ ಬೇಸಿಗೆ ಬಂದೊಡನೆ ಅಜ್ಜಿಮನೆಯ ಕೆರೆ ಕೊಳ್ಳ, ಹೊಳೆಗಳಲ್ಲೆಲ್ಲ ಈಜಾಡಿಕೊಂಡು ಮಜವಾಗಿ ಕಾಲ ಕಳೆದದ್ದು ನೆನಪಿಗೆ ಬರಬಹುದು. ಆಗೆಲ್ಲ, ಈಜುವ ತರಗತಿ ಹೋಗದೆ, ಹಳ್ಳಿಗಳಲ್ಲೇ ಬಹುತೇಕರು ಬಾಲ್ಯದ ಭಾಗವಾಗಿ ಈಜು ಕಲಿತುಕೊಳ್ಳುತ್ತಿದ್ದರು. ಈಗ ನಗರಗಳಲ್ಲಿ ಎಲ್ಲರಿಗೂ ಈಜು ಬೇಕಾದ ಸಮಯಕ್ಕೆ ಕಲಿತುಕೊಳ್ಳಬಹುದು. ಈಜು ಗೊತ್ತಿದ್ದವರು ಈಜುಕೊಳಗಳಲ್ಲಿ ದುಡ್ಡುಕೊಟ್ಟು ನಿತ್ಯವೂ ಈಜಿ ಬರಬಹುದು. ಈಜಲು ತಿಳಿದಿದ್ದರೆ ಅದು ಒಳಳೆಯದು. ಫಿಟ್‌ನೆಸ್‌ನ ಭಾಗವಾಗಿ ಈಜುತ್ತಿದ್ದರೆ ಅದೂ ಕೂಡಾ ಒಳ್ಳೆಯದೇ. ಇತ್ತೀಚೆಗಿನ ದಿನಗಳಲ್ಲಿ ಈಜು ಮಕ್ಕಳಾದಿಯಾಗಿ ಹಿರಿಯರೂ ಕೂಡಾ ಕಲಿತು ತಮ್ಮ ಫಿಟ್‌ನೆಸ್‌ನ ಭಾಗವಾಗಿ ರೂಪಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಹಾಗೆ ನೋಡಿದರೆ, ಈಜುವುದು ಎಲ್ಲದಕ್ಕಿಂತ ಅತ್ಯುತ್ತಮವಾದ ಕಾರ್ಡಿಯೋ ವ್ಯಾಯಾಮ. ಬನ್ನಿ, ಈಜುವುದರಿಂದ ನಮ್ಮ ಆರೋಗ್ಯಕ್ಕೆ, ಫಿಟ್‌ನೆಸ್‌ಗೆ ಯಾವೆಲ್ಲ ಉಪಯೋಗಗಳಿವೆ ಎಂಬುದನ್ನು (swim benefits) ನೋಡೋಣ.

image of Benefits Of Swimming For Women
  • ಈಜು ಸುಲಭ ಖಂಡಿತ ಅಲ್ಲ ನಿಜ. ಆದರೆ, ಈಜಲು ಗೊತ್ತಿದ್ದರೆ, ಈಜುತ್ತಿದ್ದರೆ, ನೀವು ಬೇರೆ ವ್ಯಾಯಾಮಕ್ಕೆ ಹಾಕಿದ ಶ್ರಮವನ್ನು ಈಜಲು ಹಾಕಬೇಕಿಲ್ಲ. ಆದರೂ, ಇಡೀ ದೇಹಕ್ಕೆ ಅತ್ಯುತ್ತಮ ವ್ಯಾಯಾಮ ಇದರಿಂದ ದೊರೆಯುತ್ತದೆ. ಮಂಡಿ ನೋವು, ಸಂಧಿವಾತ, ಬೊಜ್ಜು ಇತ್ಯಾದಿ ಸಮಸ್ಯೆಗಳಿರುವ ಮಂದಿಯೂ ನಿರಾಯಾಸವಾಗಿ ಈಜಿ ಇದರಿಂದ ಲಾಭ ಪಡೆಯಬಹುದು.
  • ಈಜುವುದರಿಂದ ಹೃದಯ ಗಟ್ಟಿಯಾಗಿರುತ್ತದೆ. ಇದು ಕೊಲೆಸ್ಟೆರಾಲ್‌ ಮಟ್ಟವನ್ನು ಸರಿಯಾಗಿಟ್ಟು, ಅಧಿಕ ರಕ್ತದೊತ್ತಡವನ್ನೂ ಸಮತೋಲನಕ್ಕೆ ತಂದು, ಹೃದಯ ಅಚ್ಚುಕಟ್ಟಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತದೆ.
  • ಶ್ವಾಸಕೋಶಕ್ಕೆ ಈಜು ಅತ್ಯಂತ ಒಳ್ಳೆಯದು. ಈಜಿನ ಜೊತೆ ಉಸಿರಾಟದ ಗಮನವೂ ಇರಬೇಕಾದ್ದರಿಂದ ಇಲ್ಲಿ ಶ್ವಾಸಕೋಶಕ್ಕೆ ಅತ್ಯಂತ ಹೆಚ್ಚು ವ್ಯಾಯಾಮ ದೊರೆಯುತ್ತದೆ. ಅಸ್ತಮಾ, ಅಥವಾ ಶ್ವಾಸಕೋಶದ ಸಮಸ್ಯೆ ಇರುವ ಮಂದಿ ತಮ್ಮ ಶ್ವಾಸಕೋಶಕ್ಕೆ ನೀಡಬಹುದಾದ ಉತ್ತಮ ವ್ಯಾಯಾಮ ಇದು.
  • ಈಜುವುದರಿಂದ ಹೆಚ್ಚು ಕ್ಯಾಲರಿ ಕರಗಿಸಬಹುದು. ಅರ್ಧ ಗಂಟೆ ಈಜುವುದರಿಂದ ೨೫೦ ಕ್ಯಾಲರಿಯಷ್ಟನ್ನು ಕರಗಿಸಬಹುದು. ಬೇರೆ ಯಾವ ವ್ಯಾಯಾಮದಲ್ಲಿಯೂ ಇಷ್ಟು ಕಡಿಮೆ ಸಮಯದಲ್ಲಿ ಇಷ್ಟು ಕ್ಯಾಲರಿ ಕರಗದು.
  • ಮಾಂಸಖಂಡಗಳ ಬಲವರ್ಧನೆಗೆ, ನಿಮ್ಮ ದೇಹದ ತೂಕ ಇಳಿಸಿ ಟೋನ್‌ ಮಾಡಲು ಈಜುವುದು ಒಳ್ಳೆಯ ವ್ಯಾಯಾಮ. ಇದರಿಂದ ಮಾಂಸಖಂಡಗಳು ದೃಢವಾಗುತ್ತದೆ.
  • ಈಜುವುದರಿಂದ ಮಿದುಳು ಚುರುಕಾಗುತ್ತದೆ. ವಯಸ್ಸಾದಂತೆ ಮಿದುಳಿಗೂ ವ್ಯಾಯಾಮ ನೀಡಲು ಈಜಬಹುದು.
  • ಆರೋಗ್ಯಕರವಾಗಿ ವಯಸ್ಸಾಗಬೇಕೆಂಬ ಆಸೆ ನಿಮಗಿದ್ದರೆ ನಿತ್ಯವೂ ಈಜಲು ಸಮಯ ಮೀಸಲಿಡಿ. ದೇಹದ ಎಲ್ಲ ಕೆಲಸವೂ ಸಮತೋಲನದಲ್ಲಿ ಇರಲು ಈಜುವುದರಿಂದ ಸಹಾಯವಾಗುತ್ತದೆ.
  • ಮೆನೋಪಾಸ್‌ ಹತ್ತಿರ ಬರುತ್ತಿದ್ದಂತೆ ಮಹಿಳೆಯರ ಎಲುಬಿನ ಸಾಂದ್ರತೆ ಕಡಿಮೆಯಾಗತೊಡಗುತ್ತದೆ. ಇಂಥ ಸಮಯದಲ್ಲಿ ಈಜುವುದರಿಂದ ಎಲುಬಿನ ಮೇಲೆ ಸಕಾರಾತ್ಮಕ ಪ್ರಭಾವ ಬೀಳುವುದರಿಂದ ಎಲುಬು ಸವೆತದಂಥ ಸಮಸ್ಯೆ ಬಹುಬೇಗನೆ ಬಾರದು.
  • ನೀವು ಈಗಷ್ಟೇ ವ್ಯಾಯಾಮದ ಬಗ್ಗೆ ಆಸಕ್ತಿ ತೋರಿಸುತ್ತಿದ್ದೀರಿ ಎಂದಾದಲ್ಲಿ, ಈಜು ನಿಮಗೆ ಅತ್ಯುತ್ತಮ ವ್ಯಾಯಾಮ. ಇಡೀ ದೇಹಕ್ಕೆ ಏಕಕಾಲದಲ್ಲಿ ವ್ಯಾಯಾಮ ದೊರೆಯುವುದು ಈಜಿನಿಂದ ಮಾತ್ರ.
  • ಕೇವಲ ಈಜಷ್ಟೇ ಅಲ್ಲ, ಈಜುಕೊಳದೊಳಗೆ ನಡೆಯುವುದರಿಂದ, ಕೈಬೀಸುವುದರಿಂದ ಹೊರಗೆ ನಡಿಗೆ ಮಾಡಿದ್ದರಿಂದ ಹೆಚ್ಚು ಫಲ ದೊರೆತುತ್ತದೆ. ಅದಕ್ಕಾಗಿಯೇ ವಾಟರ್‌ ಏರೋಬಿಕ್ಸ್‌ ಇತ್ಯಾದಿಗಳೂ ಕೂಡಾ ಈಗ ಹೆಚ್ಚು ಹೆಚ್ಚು ಜನಪ್ರಿಯವಾಗುತ್ತಿವೆ.

ಇದನ್ನೂ ಓದಿ: Weight Loss Tips: ಕಪ್ಪು ಬಣ್ಣದ ಆಹಾರಗಳಿಂದ ತೂಕ ಇಳಿಸಿ!

Continue Reading

ಚಿಕ್ಕಮಗಳೂರು

Dengue Fever : ಡೆಂಗ್ಯೂ ಮಹಾಮಾರಿಗೆ ಚಿಕ್ಕಮಗಳೂರಿನಲ್ಲಿ ಬಾಲಕಿ ಬಲಿ; ಈವರೆಗೆ ಐವರು ಸಾವು

Dengue Fever : ಪ್ರಸಕ್ತ ವರ್ಷ ರಾಜ್ಯದಲ್ಲಿ ಡೆಂಗ್ಯೂ ಜ್ವರಕ್ಕೆ ಐವರು ಬಲಿಯಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಬಾಲಕಿಯೊಬ್ಬಳು ಮಹಾಮಾರಿಗೆ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

VISTARANEWS.COM


on

By

Dengue Fever
Koo

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಮಹಾಮಾರಿಗೆ (Dengue Fever) ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಸಾನಿಯಾ (6) ಮೃತ ದುರ್ದೈವಿ. ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದೆ.

ಡೆಂಗ್ಯೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾನಿಯಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾಳೆ. ರಾಜ್ಯ ಸರ್ಕಾರದ ವಿರುದ್ಧ ಮೃತ ಬಾಲಕಿ ತಂದೆ ಆಸಿಫ್‌ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಯಾವುದೇ ಸಹಾಯ ಬೇಡ, ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಡೆಂಗ್ಯೂ ಕಾಯಿಲೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸ ಸಿಗುತ್ತಿಲ್ಲ. ಸರಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು. ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗುವುದು ಬೇಡ ಎಂದು ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷಕ್ಕೆ ಹಾಗೂ ಸರ್ಕಾರಕ್ಕೆ ಛೀಮಾರಿ ಹಾಕಿದರು.

4 ಸಾವಿರ ಗಡಿ ದಾಟಿದ ಡೆಂಗ್ಯೂ; ಐವರು ಸಾವು

ಹವಾಮಾನ ವೈಪರೀತ್ಯ ಮತ್ತು ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. 2024ರಲ್ಲಿ ಈ ವರೆಗೆ (ಜೂನ್‌) 93,012 ಶಂಕಿತವಾಗಿದ್ದು, ಇದರಲ್ಲಿ 40,918 ಮಂದಿಯ ರಕ್ತ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಆ ಪ್ರಕಾರ 4364 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಫಲಿಸದೇ ಐವರು ಮೃತಪಟ್ಟಿದ್ದಾರೆ. ಶಿವಮೊಗ್ಗ, ಬಾಗಲಕೋಟೆ, ಗದಗದಲ್ಲಿ ತಲಾ ಒಬ್ಬರು ಹಾಗೂ ಹಾಸನದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Dengue Prevention: ರಾಜ್ಯದಲ್ಲಿ 6000ಕ್ಕೂ ಡೆಂಗ್ಯೂ ಪ್ರಕರಣ; ಇದರಿಂದ ಪಾರಾಗಲು ಹೀಗೆ ಮಾಡಿ

ಡೆತ್‌ ಆಡಿಟಿಂಗ್‌ಗೆ ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ವಿಪರೀತ ಏರಿಕೆ ಆಗಿವೆ. ಬೆಂಗಳೂರಲ್ಲಿ ಜನವರಿಯಿಂದ ಈವರೆಗೆ 1,385 ಮಂದಿಗೆ ಡೆಂಗ್ಯೂ ಜ್ವರ ಕಂಡು ಬಂದಿದೆ. ಈವರೆಗೆ ಡೆಂಗ್ಯೂನಿಂದ ಮೃತಪಟ್ಟ ವರದಿ ಆಗಿಲ್ಲ. ಆದರೆ ಇಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಶಂಕೆ ಇದ್ದು, ಸಾವಿಗೆ ಕಾರಣ ತಿಳಿಯುವ ಸಲುವಾಗಿ ಡೆತ್ ಆಡಿಟ್‌ಗೆ ಬಿಬಿಎಂಪಿ ಮುಂದಾಗಿದೆ.

ಇನ್ನೂ 3,470 ಲಾರ್ವಾ ಉತ್ಪತ್ತಿ ತಾಣ ಪತ್ತೆಯಾಗಿದ್ದು, ಇದರಲ್ಲಿ 2,004 ತಾಣಗಳ ನಾಶ ಮಾಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗ ಮಾಹಿತಿ ನೀಡಿದೆ. ಪಾಲಿಕೆಯ ಆರೋಗ್ಯ ಸಿಬ್ಬಂದಿ ನಿನ್ನೆವರೆಗೂ 17,877 ಮನೆಗಳ ಸಮೀಕ್ಷೆ ನಡೆಸಿದ್ದಾರೆ. ಆಡಿಟ್ ಬಳಿಕ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರವಾನೆ ಮಾಡಲಾಗುತ್ತದೆ.

ಡೆಂಗ್ಯೂ ಹೇಗೆ ಹರಡುತ್ತದೆ?

ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು ಆಗಿದೆ. ಇದು ಈಡಿಪಸ್‌ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಸೊಳ್ಳೆ ಕಚ್ಚಿದ 4-7 ದಿನಗಳ ನಂತರ ರೋಗ ಲಕ್ಷಣಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಇದರ ಪ್ರಭಾವ 10 ದಿನಗಳವರೆಗೆ ಇರುತ್ತದೆ. ಹೀಗಾಗಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಉತ್ತಮವಾಗಿದೆ.

ಡೆಂಗ್ಯೂ ಜ್ವರ ತಲೆನೋವಿನಂತಹ ರೋಗಲಕ್ಷಣಗಳನ್ನು ಉಂಟು ಮಾಡಬಹುದು. ಡೆಂಗ್ಯೂವನ್ನು ಹೆಮರಾಜಿಕ್ ಜ್ವರ ಎಂದೂ ಕರೆಯಲಾಗುತ್ತದೆ. ಡೆಂಗ್ಯೂ ಜ್ವರದ ತೀವ್ರ ಸ್ವರೂಪವು ತೀವ್ರ ರಕ್ತಸ್ರಾವ, ರಕ್ತದೊತ್ತಡ ಹಾಗೂ ರಕ್ತಕಣಗಳ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿ ವ್ಯಕ್ತಿಯ ಸಾವಿಗೂ ಕಾರಣವಾಗಬಹುದು. ಅಧಿಕ ಜ್ವರ, ತೀವ್ರ ತಲೆನೋವು, ವಾಂತಿ, ದೇಹದ ವಿವಿಧ ಭಾಗಗಳಲ್ಲಿ ದದ್ದುಗಳು, ಗ್ರಂಥಿಗಳಲ್ಲಿ ಊತ, ಮೂಳೆ ಮತ್ತು ಕೀಲು ನೋವು, ರಕ್ತಸ್ರಾವವಾಗವುದು ರೋಗ ಲಕ್ಷಣಗಳಾಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆರೋಗ್ಯ

Orange Peel Benefits: ಕಿತ್ತಳೆ ಸಿಪ್ಪೆ ಎಸೆಯಬೇಡಿ; ಹೃದಯದ ಆರೋಗ್ಯಕ್ಕೆ ಇದು ಒಳ್ಳೆಯದು!

Orange Peel Benefits: ಸಿಪ್ಪೆ ಸುಲಿದು ರಸಭರಿತ ಕಿತ್ತಳೆಯನ್ನು ಬಾಯಿಗಿಟ್ಟರೆ, ಅಥವಾ ಜ್ಯೂಸ್‌ ಕುಡಿದರೆ, ಎಂಥಾ ಸೆಖೆಯಲ್ಲೂ ತಂಪಿನ, ಎಂಥಾ ಬಾಯಾರಿಕೆಯ ಸುಸ್ತಿನಲ್ಲೂ ಉಲ್ಲಾಸವನ್ನೂ ಶಕ್ತಿಯನ್ನೂ ಮತ್ತೆ ಜಿನುಗಿಸುವ ಶಕ್ತಿ ಇದೆ. ಆದರೆ, ಘಮಘಮಿಸುವ ಕಿತ್ತಳೆಯ ಸಿಪ್ಪೆಯನ್ನು ಮಾತ್ರ ನಾವು ಯಾವುದೇ ಯೋಚನೆ ಮಾಡದೆ ಎಸೆದು ಬಿಡುತ್ತೇವೆ. ನೀವು ವೇಸ್ಟ್‌ ಎಂದುಕೊಳ್ಳುವ ಈ ಸಿಪ್ಪೆಯಲ್ಲೂ ಬೇಕಾದಷ್ಟು ವಿಟಮಿನ್‌ ಸಿ, ನಾರಿನಂಶ ಹಾಗೂ ಪಾಲಿ ಫಿನಾಳ್‌ಗಳು ಇವೆ ಎಂದರೆ ನಂಬುತ್ತೀರಾ?

VISTARANEWS.COM


on

Orange Peel Benefits
Koo

ಕಿತ್ತಳೆ ಹಣ್ಣು ಹುಳಿಯನ್ನೂ ಸಿಹಿಯನ್ನೂ ಸಮಪ್ರಮಾಣದಲ್ಲಿ ಹೊಂದಿರುವ ದೇಹಕ್ಕೆ ಒಳ್ಳೆಯದನ್ನೇ ಬಯಸುವ ಹಣ್ಣು. ಇದರ ಘಮಕ್ಕೆ ಎಂಥ ಸಮಯದಲ್ಲೂ ನಮ್ಮನ್ನು ಬಡಿದೆಚ್ಚರಿಸುವ, ಉಲ್ಲಾಸವನ್ನು ತರುವ ಗುಣವಿದೆ. ಸಿಪ್ಪೆ ಸುಲಿದು ರಸಭರಿತ ಕಿತ್ತಳೆಯನ್ನು ಬಾಯಿಗಿಟ್ಟರೆ, ಅಥವಾ ಜ್ಯೂಸ್‌ ಕುಡಿದರೆ, ಎಂಥಾ ಸೆಖೆಯಲ್ಲೂ ತಂಪಿನ, ಎಂಥಾ ಬಾಯಾರಿಕೆಯ ಸುಸ್ತಿನಲ್ಲೂ ಉಲ್ಲಾಸವನ್ನೂ ಶಕ್ತಿಯನ್ನೂ ಮತ್ತೆ ಜಿನುಗಿಸುವ ಶಕ್ತಿ ಇದೆ. ಆದರೆ, ಘಮಘಮಿಸುವ ಕಿತ್ತಳೆಯ ಸಿಪ್ಪೆಯನ್ನು ಮಾತ್ರ ನಾವು ಯಾವುದೇ ಯೋಚನೆ ಮಾಡದೆ ಎಸೆದು ಬಿಡುತ್ತೇವೆ. ನೀವು ವೇಸ್ಟ್‌ ಎಂದುಕೊಳ್ಳುವ ಈ ಸಿಪ್ಪೆಯಲ್ಲೂ (Orange Peel Benefits) ಬೇಕಾದಷ್ಟು ವಿಟಮಿನ್‌ ಸಿ, ನಾರಿನಂಶ ಹಾಗೂ ಪಾಲಿ ಫಿನಾಳ್‌ಗಳು ಇವೆ ಎಂದರೆ ನಂಬುತ್ತೀರಾ?

Orange Peel

ಹೌದು. ಒಂದು ಚಮಚದಷ್ಟು ಕಿತ್ತಳೆ ಸಿಪ್ಪೆಯ ಪುಡಿಯಲ್ಲಿ ನಮ್ಮ ದೇಹಕ್ಕೆ ನಿತ್ಯವೂ ಬೇಕಾಗುವ ವಿಟಮಿನ್‌ ಸಿಯ ಶೇ.14ರಷ್ಟಿದೆಯಂತೆ. ಅಂದರೆ ಅದು ಒಳಗಿರುವ ಕಿತ್ತಳೆ ಹಣ್ಣಿನ ಮೂರು ಪಟ್ಟು ಹೆಚ್ಚು! ಕಿತ್ತಳೆ ಸಿಪ್ಪೆಯಲ್ಲಿ ಒಳಗಿನ ಹಣ್ಣಿಗಿಂತ ನಾಲ್ಕು ಪಟ್ಟು ಹೆಚ್ಚು ನಾರಿನಂಶವಿದೆಯಂತೆ. ಫ್ಲಾರಿಡಾ ವಿಶ್ವವಿದ್ಯಾಲಯವು ಕಿತ್ತಳೆ ಸಿಪ್ಪೆಯ ಸೇವನೆಯಿಂದ ಹೃದಯದ ಆರೋಗ್ಯಕ್ಕೆ ಸಾಕಷ್ಟು ಲಾಭವಿದೆ ಎಂದು ತನ್ನ ಸಂಶೋಧನಾ ವರದಿಯಲ್ಲಿ ಹೇಳಿದೆ. ನಮ್ಮ ದೇಹದಲ್ಲಿರುವ ಕೆಲವೊಂದು ಬ್ಯಾಕ್ಟೀರಿಯಾಗಳು ಹೃದಯದ ಕಾಯಿಲೆಯನ್ನು ಉಲ್ಬಣಗೊಳಿಸುವ ತಾಕತ್ತನ್ನು ಹೊಂದಿದೆಯಂತೆ. ಈ ಬ್ಯಾಕ್ಟೀರಿಯಾಗಳ ಬೆಳವಣಿಗೆಯನ್ನು ಕುಂಠಿತಗೊಳಿಸುವ ಶಕ್ತಿ ಈ ಕಿತ್ತಳೆ ಸಿಪ್ಪೆಯಲ್ಲಿದೆಯಂತೆ. ಕಿತ್ತಳೆ ಸಿಪ್ಪೆಯಲ್ಲಿರುವ ಫೈಟೋ ಕೆಮಿಕಲ್‌ಗಳು ಹೃದಯದ ಕಾಯಿಲೆಗೆ ಪೂರಕವಾದ ಟ್ರೈಮೀಥೈಲಾಮೈನ್‌ ಉತ್ಪಾದನೆಯನ್ನು ತಗ್ಗಿಸುವ ಮೂಲಕ ಹೃದಯಸ್ನೇಹಿಯಾಗಿ ವರ್ತಿಸುತ್ತದೆ.

ನಿತ್ಯ ಸೇವಿಸಬೇಕಿಲ್ಲ

ಹಾಗಂತ ಕಿತ್ತಳೆ ಹಣ್ಣಿಸ ಸಿಪ್ಪೆ ಒಳ್ಳೆಯದು ಎಂದು ಅದನ್ನು ನಿತ್ಯವೂ ಸೇವಿಸಬಹುದು ಎಂದಲ್ಲ. ಹಾಗೆ ಸೇವಿಸುವುದೂ ಕೂಡಾ ಒಳ್ಳೆಯದಲ್ಲ. ಕಿತ್ತಳೆಯ ಸಿಪ್ಪೆ ಕಹಿ ರುಚಿಯನ್ನು ಹೊಂದಿರುತ್ತದೆ ಹಾಗೂ ಇದನ್ನು ಹಾಗೆಯೇ ತಿನ್ನಲಾಗುವುದಿಲ್ಲ ಎಂಬುದೂ ನಿಮಗೆ ಗೊತ್ತು. ಅಷ್ಟೇ ಅಲ್ಲ. ಕಿತ್ತಳೆಯ ಸಿಪ್ಪೆಯಲ್ಲಿ ಅದನ್ನು ಬೆಳೆಸುವ ಸಂದರ್ಭ ಸಿಂಪಡಿಸಿದ ರಾಜಾಯನಿಕಗಳೂ, ಕೀಟನಾಶಕಗಳೂ ಇರುವ ಸಂಭವ ಹೆಚ್ಚು. ಹೀಗಾಗಿ ಅದನ್ನು ಸರಿಯಾಘಿ, ಸರಿಯಾದ ಕ್ರಮದಲ್ಲಿ ತೊಳೆದುಕೊಂಡು ಕೆಲವು ಆಹಾರ ತಯಾರಿಕೆಯಲ್ಲಿ ಬಳಸಿಕೊಳ್ಳಬಹುದು.

ಕ್ಯಾಂಡಿ

ಕಿತ್ತಳೆ ಸಿಪ್ಪೆಯನ್ನು ಸಕ್ಕರೆ ಪಾಕದಲ್ಲಿ ಹಾಕಿ ಮಕ್ಕಳಿಗಾಗಿ ಸಿಹಿ ಕ್ಯಾಂಡಿಗಳನ್ನು ಮಾಡಬಹುದು. ಸಿಪ್ಪೆಯನ್ನು 15 ನಿಮಿಷ ನೀರಿನಲ್ಲಿ ಹಾಕಿಟ್ಟು ನಂತರ ಚೆನ್ನಾಗಿ ತೊಳೆದು, ಅದನ್ನು ನೀರಿನಲ್ಲಿ ೧೫ ನಿಮಿಷ ಕುದಿಸಿ, ಸಿಪ್ಪೆಯನ್ನು ಸಕ್ಕರೆ ಪಾಕಕ್ಕೆ ಹಾಕಿ ಒಣಗಿಸುವ ಮೂಲಕ ಒಳ್ಳೆಯ ನೈಸರ್ಗಿಕ ಕ್ಯಾಂಡಿ ಮಾಡಬಹುದು.

ಸ್ಮೂದಿ

ಸಣ್ಣ ಸಣ್ಣ ತುಂಡುಗಳನ್ನು ನೀವು ಮಾಡುವ ಸ್ಮೂದಿಗೆ ಹಾಕಬಹುದು.

ಕಿತ್ತಳೆ ಕೇಕ್‌

ಕಿತ್ತಳೆ ಕೇಕ್‌ಗಳನ್ನು ಮಾಡುವಾಗ ಕಿತ್ತಳೆಯ ಸಿಪ್ಪೆಯನ್ನು ತುರಿದು ಒಂದೆರಡು ಚಮಚದಷ್ಟು ಪೇಸ್ಟ್‌ ತಯಾರಿಸಿ ಹಾಕಿದರೆ, ಯಾವುದೇ ಕೃತಕ ಘಮದ ಅವಶ್ಯಕತೆಯೇ ಇಲ್ಲ.

ಕಿತ್ತಳೆ ಸಿಪ್ಪೆಯ ಚಹಾ

ಕಿತ್ತಳೆ ಸಿಪ್ಪೆಯ ಚಹಾ ಮಾಡಿ ಕುಡಿಯಬಹುದು. ನಿತ್ಯವೂ ಅಲ್ಲದಿದ್ದರೂ, ಯಾವಾಗಲಾದರೊಮ್ಮೆ ಕುಡಿಯುವ ಮೂಲಕ ಇದರ ಲಾಭ ಪಡೆಯಬಹುದು.

ಇದನ್ನೂ ಓದಿ: Internet Addiction: ಈ 10 ಲಕ್ಷಣಗಳು ನಿಮ್ಮಲ್ಲಿದ್ದರೆ, ನೀವೂ ಇಂಟರ್ನೆಟ್‌ ಚಟಕ್ಕೆ ಬಿದ್ದಿದ್ದೀರಿ ಎಂದರ್ಥ!

ಕಿತ್ತಳೆ ಸಿಪ್ಪೆಯನ್ನು ಚೆನ್ನಾಗಿ ತೊಳೆದು ಒಣಗಿಸಿ ಪುಡಿ ಮಾಡಿಟ್ಟುಕೊಂಡರೆ, ನೀವು ಮನೆಯಲ್ಲೇ ಮಾಡುವ ಫೇಸ್‌ಪ್ಯಾಕ್‌ಗಳಿಗೆ ಇವನ್ನು ಸೇರಿಸಿ ಮುಖಕ್ಕೆ ಹಚ್ಚಿಕೊಳ್ಳಬಹುದು. ಮುಖದ ಮೇಲಿನ ಕಲೆಗಳು, ಸುಕ್ಕು ನಿರಿಗೆಗಳಿಗೆ ಇದು ಬಹಳ ಒಳ್ಳೆಯದು. ಇದರ ನಿಯಮಿತ ಬಳಕೆಯಿಂದ ಮುಖ ತಾಜಾತನದಿಂದ ಹೊಳೆಯುತ್ತದೆ.

Continue Reading

ಆರೋಗ್ಯ

Sadhguru Jaggi Vasudev: ಮಕ್ಕಳಲ್ಲಿ ಅಲರ್ಜಿ ಸಮಸ್ಯೆಗೆ ಏನು ಪರಿಹಾರ? ಸದ್ಗುರು ಸಲಹೆ ಇಲ್ಲಿದೆ ಕೇಳಿ

ಅಲರ್ಜಿ ತೊಂದರೆಗಳು ಈಗ ಎಲ್ಲರಲ್ಲೂ ಸಾಮಾನ್ಯ. ಇದಕ್ಕೆ ಮುಖ್ಯ ಕಾರಣ ನಮ್ಮ ಆಹಾರ. ಆದರೆ ಅದು ಹೇಗೆ ಬಂತು, ಕಡಿಮೆ ಮಾಡುವುದು ಹೇಗೆ ಎನ್ನುವುದಕ್ಕೆ ನಮ್ಮಲ್ಲಿ ಉತ್ತರವಿರುವುದಿಲ್ಲ. ವೈದ್ಯರನ್ನು ಸಂಪರ್ಕಿಸಿ ಒಂದೆರಡು ದಿನ ಔಷಧ ಪಡೆದು ಸುಮ್ಮನಾಗುತ್ತೇವೆ. ಇದು ಮತ್ತೊಮ್ಮೆ , ಮಗದೊಮ್ಮೆ ಉಂಟಾಗುತ್ತಲೇ ಇರುತ್ತದೆ. ಮಕ್ಕಳಲ್ಲಿ ಕಾಣಿಸಿಕೊಳ್ಳುವ ಅಲರ್ಜಿಯನ್ನು ನಾವು ಸಣ್ಣ ವಯಸ್ಸಿನಲ್ಲೇ ದೂರ ಮಾಡಬಹುದು. ಅದು ಹೇಗೆ ಎಂಬುದನ್ನು ಸದ್ಗುರು (Sadhguru Jaggi Vasudev) ಹೇಳಿರುವುದು ಹೀಗೆ.

VISTARANEWS.COM


on

By

Sadhguru Jaggi Vasudev
Koo

ಇತ್ತೀಚಿನ ದಿನಗಳಲ್ಲಿ ಸಣ್ಣ ಮಕ್ಕಳು (children’s) ಅಲರ್ಜಿ (allergies ) ತೊಂದರೆಯಿಂದ ಬಳಲುತ್ತಿರುತ್ತಾರೆ. ಎಷ್ಟೇ ಆರೈಕೆ ಮಾಡಿದರೂ ಸಂಪೂರ್ಣ ಗುಣಮುಖರಾಗುವುದಿಲ್ಲ. ಎಷ್ಟೋ ಬಾರಿ ಪೋಷಕರು (parents) ತಮ್ಮ ಮಕ್ಕಳಿಗೆ ಏಕೆ ಈ ತೊಂದರೆ ಕಾಣಿಸಿಕೊಂಡಿತು ಎಂದು ತಮ್ಮನ್ನು ತಾವು ಪ್ರಶ್ನಿಸುತ್ತಲೇ ಇರುತ್ತಾರೆ. ಆದರೆ ಅವರಿಗೆ ಇದಕ್ಕೆ ಉತ್ತರವೇ ಸಿಗುವುದಿಲ್ಲ. ಪ್ರಸಿದ್ಧ ಆಧ್ಯಾತ್ಮಿಕ ಮಾರ್ಗದರ್ಶಿ ಮತ್ತು ಆರೋಗ್ಯ ತಜ್ಞ ಸದ್ಗುರು ಜಗ್ಗಿ ವಾಸುದೇವ್ (Sadhguru Jaggi Vasudev) ಅವರು ಇದೀಗ ಮಕ್ಕಳಲ್ಲಿ ಉಂಟಾಗುವ ಅಲರ್ಜಿ ಸಮಸ್ಯೆಗಳಿಗೆ ಕಾರಣ ಮತ್ತು ಪರಿಹಾರವನ್ನು ಹೇಳಿದ್ದಾರೆ.

ಅಲರ್ಜಿ ತೊಂದರೆಗಳು ಈಗ ಎಲ್ಲರಲ್ಲೂ ಸಾಮಾನ್ಯ. ಇದಕ್ಕೆ ಮುಖ್ಯ ಕಾರಣ ನಮ್ಮ ಆಹಾರ. ಆದರೆ ಅದು ಹೇಗೆ ಬಂತು, ಕಡಿಮೆ ಮಾಡುವುದು ಹೇಗೆ ಎನ್ನುವುದಕ್ಕೆ ನಮ್ಮಲ್ಲಿ ಉತ್ತರವಿರುವುದಿಲ್ಲ. ವೈದ್ಯರನ್ನು ಸಂಪರ್ಕಿಸಿ ಒಂದೆರಡು ದಿನ ಔಷಧ ಪಡೆದು ಸುಮ್ಮನಾಗುತ್ತೇವೆ. ಇದು ಮತ್ತೊಮ್ಮೆ , ಮಗದೊಮ್ಮೆ ಉಂಟಾಗುತ್ತಲೇ ಇರುತ್ತದೆ. ಮಕ್ಕಳಲ್ಲಿ ಕಾಣಿಸಿಕೊಳ್ಳುವ ಅಲರ್ಜಿಯನ್ನು ನಾವು ಸಣ್ಣ ವಯಸ್ಸಿನಲ್ಲೇ ದೂರ ಮಾಡಬಹುದು ಎಂದಿದ್ದಾರೆ ಅವರು.

ಮಗುವು ಅಲರ್ಜಿಯೊಂದಿಗೆ ಹೋರಾಡುವುದನ್ನು ನೋಡುವುದು ಪ್ರತಿಯೊಬ್ಬ ಪೋಷಕರಿಗೂ ಸಂಕಟ ಮತ್ತು ಅಸಮಾಧಾನವನ್ನು ಉಂಟುಮಾಡುತ್ತದೆ. ಎಷ್ಟೇ ಔಷಧ ಮಾಡಿದರೂ ಇದು ಗುಣವಾಗದೇ ಇರುವುದು ನಮ್ಮನ್ನು ಚಿಂತೆಗೆ ಈಡಾಗುವಂತೆ ಮಾಡುತ್ತದೆ. ಎಷ್ಟೋ ಬಾರಿ ಇದು ಪುಟ್ಟ ಮಕ್ಕಳಿಗೆ ತಮ್ಮ ಬದುಕಿನಲ್ಲಿ ಬೇಸರ, ನಿರಾಸೆಯನ್ನು ಉಂಟು ಮಾಡಬಹುದು. ಆದರೂ ಮಕ್ಕಳ ಈ ಅಲರ್ಜಿ ಸಮಸ್ಯೆಗಳನ್ನು ನೈಸರ್ಗಿಕವಾಗಿ ಪರಿಹರಿಸಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು, ಆಧ್ಯಾತ್ಮಿಕ ಚಿಂತಕರಾದ ಜಗ್ಗಿ ವಾಸುದೇವ್.

ಮಕ್ಕಳಲ್ಲಿ ಅಲರ್ಜಿಯನ್ನು ನಿರ್ವಹಿಸುವ ಕುರಿತು ಅವರು ತಮ್ಮ ಸಲಹೆಯನ್ನು ನೀಡಿದ್ದಾರೆ. ಸುಲಭವಾದ ಜೀವನಶೈಲಿ ಹೊಂದಾಣಿಕೆಯಿಂದ ಶಕ್ತಿಯುತವಾದ ಮನೆ ಚಿಕಿತ್ಸೆಗಳವರೆಗೆ ಎಲ್ಲವೂ ಅಲರ್ಜಿಯ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ ಮತ್ತು ಮಕ್ಕಳ ಸಾಮಾನ್ಯ ಆರೋಗ್ಯವನ್ನು ಹೆಚ್ಚಿಸಲು ಪ್ರೇರಣೆಯಾಗುತ್ತದೆ ಎನ್ನುತ್ತಾರೆ ಅವರು.
ಇತ್ತೀಚಿಗೆ ಅವರು ಅಲರ್ಜಿಯ ಪ್ರಮುಖ ವಿಷಯವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅಲರ್ಜಿಯನ್ನು ಜಯಿಸಲು ಪ್ರಮುಖ ಮಾರ್ಗಗಳನ್ನು ಸೂಚಿಸಿದ್ದಾರೆ.

ಇದನ್ನೂ ಓದಿ: Priyanka Chopra: ಬೆಳ್ಳುಳ್ಳಿ ಎಸಳು ಪಾದಗಳಿಗೆ ಉಜ್ಜುವುದರಿಂದ ಏನು ಪ್ರಯೋಜನ? ನಟಿ ಪ್ರಿಯಾಂಕಾ ಚೋಪ್ರಾ ಹೇಳಿದ್ದೇನು?

ಮಕ್ಕಳ ಬಗ್ಗೆ ಮಾತನಾಡಿದ ಅವರು, ಅಲರ್ಜಿಯಿಂದ ಪರಿಹಾರ ಪಡೆಯಲು ಹಲವು ದಾರಿಗಳಿವೆ. ಆರೋಗ್ಯಕರ ಜೀವಿಗಳಿಗೆ ಆಹಾರ ಸೇವನೆಯಲ್ಲಿ ಕೆಲವು ಬದಲಾವಣೆಗಳನ್ನು ಸಲಹೆ ನೀಡಿದ್ದಾರೆ.

ಮಕ್ಕಳಿಗೆ ಅಲರ್ಜಿಗಳು ಹೋಗಬೇಕಾದರೆ ಹಾಲು ಮತ್ತು ಮಾಂಸದ ಉತ್ಪನ್ನಗಳಿಂದ ಅವರನ್ನು ದೂರವಿರಿಸಿ. ಇವು ತುಂಬಾ ಕೆಟ್ಟದಾಗಿ ಅಲರ್ಜಿ ಉಂಟು ಮಾಡಬಲ್ಲದು. ಸ್ವಲ್ಪ ಅಲರ್ಜಿ ಕಾಣಿಸಿ ಕೊಂಡರೆ ಪರವಾಗಿಲ್ಲ. ತುಂಬಾ ಕೆಟ್ಟದಾಗಿ ಅಲರ್ಜಿಯಾಗಿದ್ದರೆ ಮಾಂಸ ಉತ್ಪನ್ನಗಳನ್ನು ತ್ಯಜಿಸಿ ಸಾಕಷ್ಟು ತರಕಾರಿ, ತಾಜಾ ಹಣ್ಣು ಮತ್ತು ವಸ್ತುಗಳನ್ನೇ ಅವರಿಗೆ ಸೇವಿಸಲು ಕೊಡಿ. ಇದರಿಂದ ಅವರು ಬಹುಬೇಗನೆ ಅಲರ್ಜಿ ತೊಂದರೆಯಿಂದ ಗುಣಮುಖರಾಗುತ್ತಾರೆ ಎಂದು ಸದ್ಗುರು ತಿಳಿಸಿದ್ದಾರೆ.

Continue Reading
Advertisement
swim benefits
ಆರೋಗ್ಯ34 mins ago

Swim Benefits: ನಿತ್ಯವೂ ಈಜಿದರೆ ಸಾಕು; ಇದಕ್ಕಿಂತ ದೊಡ್ಡ ಬೇರೆ ವ್ಯಾಯಾಮ ಇನ್ನೊಂದು ಬೇಡ!

T20 World Cup 2024
ಕ್ರಿಕೆಟ್35 mins ago

T20 World Cup 2024: ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡ ಭಾರತ; ರಾಜ್ಯದ ವಿವಿಧೆಡೆ ಸಂಭ್ರಮಾಚರಣೆ ಹೀಗಿತ್ತು

tamanna bhatia gold
ಸಿನಿಮಾ1 hour ago

Actress Tamanna Bhatia: ಬೆಂಗಳೂರಿನ ಶಾಲೆಯಲ್ಲಿ ನಟಿ ತಮನ್ನಾ ಭಾಟಿಯಾ ಬಗ್ಗೆ ಪಾಠ; ಪೋಷಕರ ಆಕ್ಷೇಪ

Viral Video
Latest1 hour ago

Viral Video: ಮನೆಯ ಹೊರಗೆ ತಾಯಿಯ ಜೊತೆ ಆಡುತ್ತಿದ್ದ ಮಗುವಿನ ಮೇಲೆ ಕಾರು ಹತ್ತಿಸಿದ ಚಾಲಕ!

Parenting Tips
ಶಿಕ್ಷಣ1 hour ago

Parenting Tips: ಕಾಲೇಜಿಗೆ ಹೊರಡಲು ಸಿದ್ಧವಾಗಿರುವ ಮಕ್ಕಳಿಗೆ ಪೋಷಕರು ತಿಳಿಸಲೇಬೇಕಾದ ಸಂಗತಿಗಳಿವು!

ದಶಮುಖ back to school
ಅಂಕಣ1 hour ago

ದಶಮುಖ ಅಂಕಣ: ಮಳೆಯ ನಡುವೆ ಮರಳಿ ಶಾಲೆಗೆ!

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಗೆಲುವಿನ ಸಂಭ್ರಮದಲ್ಲಿ ಪಾಂಡ್ಯ ಕೆನ್ನೆಗೆ ಮುತ್ತಿಟ್ಟ ನಾಯಕ ರೋಹಿತ್; ಇಲ್ಲಿದೆ ವಿಡಿಯೊ

Railway Rules
Latest2 hours ago

Railway Rules: ರೈಲು ಪ್ರಯಾಣಿಕರು ತಿಳಿದುಕೊಳ್ಳಲೇಬೇಕಾದ ನಿಯಮಗಳು

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಒಂದೇ ಒಂದು ಸೋಲು ಕಾಣದೆ ವಿಶ್ವ ಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ತಂಡ

karnataka weather Forecast
ಮಳೆ2 hours ago

Karnataka Weather : ಜುಲೈ ಮೊದಲ ವಾರ ಮತ್ತಷ್ಟು ಅಬ್ಬರಿಸಲಿದೆ ಗುಡುಗು ಸಹಿತ ಮಳೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ16 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ22 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌