Cooking Soda: ಅಡುಗೆ ಸೋಡಾ ಬಳಕೆ ಆರೋಗ್ಯಕ್ಕೆ ನಿಜಕ್ಕೂ ಮಾರಕವೆ? - Vistara News

ಆರೋಗ್ಯ

Cooking Soda: ಅಡುಗೆ ಸೋಡಾ ಬಳಕೆ ಆರೋಗ್ಯಕ್ಕೆ ನಿಜಕ್ಕೂ ಮಾರಕವೆ?

ಎಲ್ಲವೂ ಚುರುಕಾಗಿ ಆಗಬೇಕು. ಅಜ್ಜಿಯರ ಕಾಲದಂತೆ ಒರಳಲ್ಲಿ ಅಕ್ಕಿ ಹಾಕಿಕೊಂಡು ರುಬ್ಬುತ್ತಾ ಕೂರಲು ಸಾಧ್ಯವಿಲ್ಲ. ಬೆಳಗ್ಗೆ ದೋಸೆ ಬೇಕು ಎಂದು ರಾತ್ರಿ ಮಲಗುವಾಗ ಅನಿಸಿದರೂ, ಬೆಳಗಿಗೆ ದೋಸೆ ಸಿದ್ಧವಾಗುತ್ತದೆ. ಹೀಗೆ ಇನ್ಸ್‌ಟಂಟ್‌ಗಳ ಕಾಲದಲ್ಲಿ ನಾವಿರುವಾಗ, ಅಡುಗೆಗೆ ಸೋಡಾ (Cooking Soda) ಬಳಸುವುದು ಸರಿಯೇ ಎಂಬ ಪ್ರಶ್ನೆ ಇಲ್ಲಿದೆ.

VISTARANEWS.COM


on

Cooking Soda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಬ್ಬದಿರುವ ಇಡ್ಲಿ, ವಡೆ, ಗರಿಯಾಗದ ದೋಸೆ ಇವೆಲ್ಲ ಯಾರಿಗೆ ಇಷ್ಟವಾಗುತ್ತದೆ? ಹಾಗೆಂದು ಎಲ್ಲ ಸಾರಿಯೂ ಸರಿಯಾದ ಪ್ರಮಾಣದಲ್ಲಿ ಹಿಟ್ಟು ಹುದುಗು ಬರುವುದಕ್ಕೆ ಸಾಧ್ಯವಿಲ್ಲ. ರುಬ್ಬುವುದು ವ್ಯತ್ಯಾಸವಾದೀತು, ಚಳಿಯಿಂದ ಹುದುಗು ಬಾರದಿರಬಹುದು… ಇಂಥವೆಲ್ಲ ಏನೇ ಆದರೂ ಅಡುಗೆ ಮಾತ್ರ ಸರಿಯಾಗಿಯೇ ಇರಬೇಕು ಎನ್ನುವ ಕಾಲವಿದು. ಇಂಥ ದಿನಗಳಿಗೆಂದೇ ಇರಿಸಿಕೊಂಡ ಆಪತ್‌ಬಾಂಧವ ಅಡುಗೆ ಸೋಡಾವನ್ನು ಕೊಂಚ ಬೆರೆಸಿಬಿಟ್ಟರೆ, ಎಲ್ಲವೂ ಸರಿಯಾಗಿ ಬಿಡುತ್ತದೆ. ದೋಕ್ಲಾ ಮಾಡುವಾಗ ಸೋಡಾ ಬೆರೆಸದವರು, ಇನೊ ಸೇರಿಸಬಹುದು. ಆಂಟಾಸಿಡ್‌ನಂತೆ ಬಳಕೆಯಾಗುವ ಸ್ಯಾಶೆ ಇನೊ. ಬೇಕಿಂಗ್‌ ಸೋಡಾ (Cooking Soda), ಇನೊ ಇಂಥವುಗಳು ಹಿಟ್ಟನ್ನು ತ್ವರಿತವಾಗಿ ಹುದುಗು ಬರುವಂತೆ ಸುಲಭದಲ್ಲಿ ಮಾಡುತ್ತವೆ. ಅವಸರಕ್ಕೆ ಹಿಟ್ಟು ಹುದುಗು ಬರಿಸುವ ಈ ವಸ್ತುಗಳು ಎಷ್ಟೋ ಜನರಿಗೆ ಮೆಚ್ಚು ಎನಿಸಿವೆ. ಸೋಡಾ ಬಳಕೆ ಆರೋಗ್ಯಕ್ಕೆ ಹಿತವೇ ಎಂಬುದು ಪ್ರಶ್ನೆ.

Baking soda for Fungal Infection Home Remedies

ಅತಿ ಬಳಕೆ ಸರಿಯಲ್ಲ

ಯಾವತ್ತೋ ಒಂದೆರಡು ಬಾರಿ ಉಪಯೋಗಿಸಿದರೆ ಇವುಗಳಿಂದ ಹಾನಿಯಿಲ್ಲ. ಆದರೆ ಸದಾ ಕಾಲ ಇವುಗಳನ್ನೇ ನೆಚ್ಚಿಕೊಂಡಿದ್ದರೆ ಆರೋಗ್ಯ ಹದಗೆಡುತ್ತದೆ. ಸೋಡಾ ಅಥವಾ ಸೋಡಿಯಂ ಬೈಕಾರ್ಬೊನೇಟ್‌ಗೆ ಇರುವ ಸಹಜ ಗುಣವೆಂದರೆ ಕ್ಷಾರ ಅಥವಾ ಆಲ್ಕಲೈನ್. ಇದನ್ನು ಅತಿಯಾಗಿ ದೇಹಕ್ಕೆ ಸೇರಿಸಿದರೆ ರಕ್ತ ಪಿಎಚ್‌ ವ್ಯತ್ಯಾಸವಾಗಬಹುದು. ರಕ್ತದ ಪಿಎಚ್‌ ಸಾಮಾನ್ಯವಾಗಿ ಸೂಕ್ಷ್ಮ ಪ್ರಕ್ರಿಯೆಗಳಿಂದ ಸಮತೋಲನಕ್ಕೆ ಒಳಪಡುತ್ತದೆ. ಒಂದೊಮ್ಮೆ ಈ ಸಮತೋಲನ ವ್ಯತ್ಯಾಸವಾದರೆ ಅನಾರೋಗ್ಯ ನಿಶ್ಚಿತ. ದೇಹದ ಚಯಾಪಚಯದ ಮೇಲೆ ತೀವ್ರತರ ಪರಿಣಾಮ ಇದರಿಂದ ಕಾಣಿಸಿಕೊಳ್ಳಬಹುದು. ಈ ಹಂತದಲ್ಲಿ ಮೂತ್ರಪಿಂಡಗಳ ಮೇಲಿನ ಒತ್ತಡ ಹೆಚ್ಚುವುದು ಸಾಮಾನ್ಯ. ಸೋಡಾ ಬಳಕೆ ಹೆಚ್ಚಾದರೆ ಯಕೃತ್ತಿನ ಮೇಲೆ ಪರಿಣಾಮ ಬೀರುತ್ತದೆ. ಇನ್ಸುಲಿನ್‌ ಉತ್ಪಾದನೆ ಹೆಚ್ಚಾಗಿ, ರಕ್ತದಲ್ಲಿ ಸಕ್ಕರೆ ಅಂಶ ಏರಿ, ಆಹಾರದಲ್ಲಿರುವ ಸಕ್ಕರೆಯ ಅಂಶವು ಕೊಬ್ಬಾಗಿ ಪರಿವರ್ತನೆ ಹೊಂದುತ್ತದೆ. ಮಾತ್ರವಲ್ಲ, ಸರಿಯಾದ ಪ್ರಮಾಣದಲ್ಲಿ ಆಹಾರದಲ್ಲಿ ಕ್ಯಾಲ್ಶಿಯಂ ಇದ್ದರೂ ಅದನ್ನು ಹೀರಿಕೊಳ್ಳಲು ಮೂಳೆಗಳಿಗೆ ಸೋಡಿಯಂ ತಡೆಯೊಡ್ಡುತ್ತದೆ. ಆಸ್ಟಿಯೊಪೊರೊಸಿಸ್‌ನಂಥ ಮಾರಕ ಕಾಯಿಲೆಗಳು ಅಮರಿಕೊಳ್ಳುವುದಕ್ಕೆ ಇಷ್ಟು ಸಾಲದೇ?

Baking soda

ಹಾಗಾಗಿಯೇ ಸೋಡಾ ಅಥವಾ ಸೋಡಿಯಂ ಬೈಕಾರ್ಬೊನೇಟ್‌ ಬಳಕೆ ಅತಿಯಾದರೆ, ಅದರ ದೂರಗಾಮಿ ಪರಿಣಾಮವಾಗಿ ಮೂತ್ರಪಿಂಡಗಳು ಸಂಕಷ್ಟಕ್ಕೆ ಒಳಗಾಗುತ್ತವೆ. ಇನೊದಲ್ಲಿರುವುದು ಶೇ. ೬೦ರಷ್ಟು ಸೋಡಿಯಂ. ಈ ವಸ್ತುಗಳನ್ನು ಎಂದಾದರೊಮ್ಮೆ ಉಪಯೋಗಿಸಬಹುದೇ ಹೊರತು ನಿತ್ಯದ ಅಡುಗೆಯಲ್ಲಿ ಇವುಗಳನ್ನು ಉಪ್ಪು, ಸಕ್ಕರೆಯಂತೆ ಬಳಸುವ ಹಾಗಿಲ್ಲ. ಸೋಡಾಗಿಂತಲೂ ಇನೊ ಕಡಿಮೆ ತೀವ್ರತೆಯದ್ದು ಹೌದಾದರೂ, ಇಡ್ಲಿ, ದೋಕ್ಲಾ ಮುಂತಾದವುಗಳ ತಯಾರಿಕೆಯಲ್ಲಿ ಇದನ್ನು ಪದೇಪದೆ ಬಳಸಿದರೆ ರಕ್ತದೊತ್ತಡ ಹೆಚ್ಚುವುದು ಖಂಡಿತ ಎನ್ನುತ್ತಾರೆ ಆಹಾರ ತಜ್ಞರು. ಇದಕ್ಕೆ ಆಂಟಾಸಿಡ್‌ನಂತೆ ಬಳಸುವಾಗಲೂ ೫ ಗ್ರಾಂ ಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಉಪಯೋಗಿಸುವುದು ಸಲ್ಲದು. ಅದರಲ್ಲೂ ರಕ್ತದೊತ್ತಡ, ಮೂತ್ರಪಿಂಡ, ಯಕೃತ್‌ ಮತ್ತು ಹೃದಯದ ಆರೋಗ್ಯಗಳ ಸಮಸ್ಯೆ ಇರುವವರು ಇಂಥ ವಸ್ತುಗಳನ್ನು ಆದಷ್ಟೂ ಬಳಸದೇ ಇರುವುದೇ ಕ್ಷೇಮ. ಹೆಚ್ಚಿನ ಸೋಡಿಯಂ ದೇಹಕ್ಕೆ ಹೊರೆಯೇ.

Baking soda

ಆಂಟಾಸಿಡ್‌ ಬಗ್ಗೆ ಎಚ್ಚರ

ಯಾವುದೇ ಆಂಟಾಸಿಡ್‌ಗಳು ದೇಹದ ಪ್ರತಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರಬಹುದು. ಇದರಿಂದ ಸೋಂಕುಗಳು ಹೆಚ್ಚುವ ಸಾಧ್ಯತೆಯಿದೆ. ಹಾಗಾಗಿ ಹೆಚ್ಚಾಗುವ ಆಸಿಡಿಟಿ ನಿಯಂತ್ರಣಕ್ಕೆ ಆಂಟಾಸಿಡ್‌ ಮೊರೆ ಹೋಗುವ ಬದಲು, ಜೀವನಶೈಲಿಯ ಬದಲಾವಣೆಯಿಂದ ಈ ಸಮಸ್ಯೆಯನ್ನು ಹತೋಟಿಗೆ ತರುವುದಕ್ಕೆ ಯತ್ನಿಸುವುದು ಕ್ಷೇಮ. ಸೋಡಾದಲ್ಲಿ ಹೇಳುವಂಥ ಯಾವುದೇ ಪೋಷಕಾಂಶ ಇಲ್ಲ. ಇದರಲ್ಲಿರುವ ಫಾಸ್ಫಾರಿಕ್‌ ಆಮ್ಲವು ಹೊಟ್ಟೆಯಲ್ಲಿರುವ ಜೀರ್ಣ ರಸದೊಂದಿಗೆ ಬೆರೆತು, ಪಚನವನ್ನು ಇನ್ನಷ್ಟು ನಿಧಾನಗೊಳಿಸುತ್ತದೆ; ಸತ್ವಗಳನ್ನು ಹೀರಿಕೊಳ್ಳುವ ದೇಹದ ಕೆಲಸಕ್ಕೆ ಅಡ್ಡಿ ಮಾಡುತ್ತದೆ. ಇದರಿಂದ ಆರೋಗ್ಯ ಹಾಳು ಹೊರತಾಗಿ ಮತ್ತೇನಿಲ್ಲ.
ಹಾಗಾಗಿ ಬೇಕ್ ಮಾಡುವಾಗ ಮೊಟ್ಟೆ, ಮೊಸರು ಅಥವಾ ಅಗಸೆಯಂಥ ಲೋಳೆ ಬರುವ ಬೀಜಗಳ ಬಳಕೆಯಂಥ ಇತರ ಮಾರ್ಗಗಳ ಉಪಯೋಗ ಸಾಧ್ಯವೇ ಎಂಬುದನ್ನು ಪರಿಶೀಲಿಸುವುದು ಕ್ಷೇಮ. ಹಿಟ್ಟು ಹುದುಗು ಬರಬೇಕೆಂದರೆ, ಎಂಟು ತಾಸುಗಳ ಅಥವಾ ರಾತ್ರಿ-ಬೆಳಗಿನ ಸಮಯ ನೀಡುವುದೇ ಸರಿ. ಇಷ್ಟಕ್ಕೂ ಕಾಳು-ಬೇಳೆ ಸಾಕಷ್ಟು ಬಳಸಿದಲ್ಲಿ ಹಿಟ್ಟು ತಾನಾಗಿಯೇ ಹುದುಗುತ್ತದೆ, ಸೋಡಾ ಅಗತ್ಯವೂ ಬೀಳುವುದಿಲ್ಲ. ಅಂತೂ ಅಜ್ಜಿ ಕಾಲದ್ದೇ ಕೆಲವೊಮ್ಮೆ ಕ್ಷೇಮ ಎಂಬುದರಲ್ಲಿ ಅತಿಶಯವಿಲ್ಲ.

ಇದನ್ನೂ ಓದಿ: Healthy Weight Gain: ತೂಕ ಹೆಚ್ಚಿಸಿಕೊಳ್ಳಬೇಕೆ? ಇಲ್ಲಿದೆ ಆರೋಗ್ಯಕರ ಆಯ್ಕೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

108 Ambulance : 3 ತಿಂಗಳ ವೇತನ ಬಾಕಿ; ನಾಳೆ ರಾತ್ರಿಯಿಂದಲೇ 108 ಆಂಬ್ಯುಲೆನ್ಸ್‌ ಸೇವೆ ಬಂದ್‌!

Ambulance Service: ಜನರಿಗೆ ತುರ್ತು ಚಿಕಿತ್ಸೆ ಸಿಗಲೆಂದು ಆರಂಭವಾದ 108 ಆ್ಯಂಬುಲೆನ್ಸ್ (108 ambulance) ಸೇವೆಗೆ ಮಂಕು ಕವಿದಿದೆ. ಪದೇಪದೆ ಆಂಬ್ಯುಲೆನ್ಸ್‌ ಸಿಬ್ಬಂದಿಗೆ ವೇತನ ಸಮಸ್ಯೆಯು ಉದ್ಭವಿಸುತ್ತಿದೆ. ಇದೀಗ 3 ತಿಂಗಳ ಬಾಕಿ ಸಂಬಳ ನೀಡಲು ವಿಳಂಬ ಮಾಡುತ್ತಿರುವುದಕ್ಕೆ ಸಿಟ್ಟಾಗಿರುವ 108 ಆಂಬ್ಯುಲೆನ್ಸ್‌ ಸಿಬ್ಬಂದಿ ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ.

VISTARANEWS.COM


on

By

108 ambulance
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆರೋಗ್ಯ ಕವಚ 108 ಆಂಬ್ಯುಲೆನ್ಸ್‌ (108 Ambulance) ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ (Salary Problem) ಕಾರಣಕ್ಕೆ ಮತ್ತೆ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ನಾಳೆ ಅಂದರೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಆಂಬ್ಯುಲೆನ್ಸ್ ಸೇವೆ ಬಂದ್ (Ambulance Service) ಆಗಲಿದೆ.

ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಬ್ಬಂದಿ ತಿರುಗಿ ಬಿದ್ದಿದ್ದಾರೆ. ಮೂರು ತಿಂಗಳಿಂದ ವೇತನ ಸಿಗದೆ 108 ಸಿಬ್ಬಂದಿ ಜೀವನ ಹೈರಾಣಾಗಿದೆ. ಒಂದು ಕಡೆ ಮೂರು ತಿಂಗಳಿಂದ ಸಂಬಳವಿಲ್ಲ. ಮತ್ತೊಂದು ಕಡೆ ಜಿವಿಕೆ ಸಂಸ್ಥೆ ವೇತನ ಕಡಿತಗೊಳಿಸಿದೆ ಎಂದು ಕಿಡಿಕಾರಿದ್ದಾರೆ.

ಈ ಎಲ್ಲ ಕಾರಣಗಳಿಗೆ ಸೋಮವಾರ ರಾತ್ರಿಯಿಂದ ಆಂಬ್ಯುಲೆನ್ಸ್‌ ಓಡಾಟವನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಕಳೆದ ಫೆಬ್ರವರಿ, ಮಾರ್ಚ್, ಏಪ್ರಿಲ್ ತಿಂಗಳ ವೇತನ ಬಾಕಿ ಇದೆ. ಜಿವಿಕೆ ಸಂಸ್ಥೆ ಈಗಾಗಲೇ ಡಿಸೆಂಬರ್, ಜನವರಿ ತಿಂಗಳ ವೇತನವನ್ನು 30 ಸಾವಿರ ರೂ. ಕಡಿತ ಮಾಡಿ, ಕೇವಲ 13 ಸಾವಿರ ರೂ. ವೇತನ ನೀಡುತ್ತಿದೆ.

ಇದನ್ನೂ ಓದಿ: Accident News: ಸೆಕೆ ಎಂದು ಕೆರೆಗೆ ಜಿಗಿದ ವ್ಯಕ್ತಿ ಸಾವು; ವಿದ್ಯುತ್‌ ತಂತಿ ತುಳಿದು ಪ್ರಾಣಬಿಟ್ಟ ರೈತ

ಹೀಗಾಗಿ ನಾಳೆ ಸಂಜೆಯೊಳಗೆ ವೇತನ ಪಾವತಿ ಮಾಡುವಂತೆ ಆರೋಗ್ಯ ಇಲಾಖೆಗೆ ಮನವಿ ಮಾಡಲಾಗಿದೆ. ಕಡಿತ ಮಾಡಿದ ವೇತನವನ್ನು ಬಿಡುಗಡೆ ಮಾಡಬೇಕು. ಒಂದು ವೇಳೆ ವೇತನ ಪಾವತಿ ಮಾಡದಿದ್ದರೆ ಮುಷ್ಕರದ ಎಚ್ಚರಿಕೆಯನ್ನು ಕರ್ನಾಟಕ ರಾಜ್ಯ ಆರೋಗ್ಯ ಕವಚ 108 ನೌಕರರ ಸಂಘ ನೀಡಿದೆ.

ರಸ್ತೆಗಿಳಿಯಲ್ಲ ಆಂಬ್ಯುಲೆನ್ಸ್‌

ಸೋಮವಾರ ರಾತ್ರಿ (ಮೇ 6) 8 ಗಂಟೆಯಿಂದ ರಾಜ್ಯದ 3,500 ಆರೋಗ್ಯ ಕವಚ ಸಿಬ್ಬಂದಿ ಮುಷ್ಕರ ನಡೆಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 711 ಆಂಬ್ಯುಲೆನ್ಸ್‌ಗಳು ಕಾರ್ಯ ನಿರ್ವಹಿಸುತ್ತಿದೆ. ರಾತ್ರಿಯಿಂದ ಸಂಪೂರ್ಣ ಬಂದ್‌ ಆಗಲಿದ್ದು, ರೋಗಿಗಳಿಗೆ ತೊಂದರೆ ಆದರೆ ಸರ್ಕಾರವೇ ನೇರ ಹೊಣೆ ಎಂದು ಆಂಬ್ಯುಲೆನ್ಸ್‌ ನೌಕರರ ಸಂಘದ ಉಪಾಧ್ಯಕ್ಷ ದಯಾನಂದ ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆರೋಗ್ಯ

Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

Bood Pressure: ಅತ್ಯಂತ ಅಪಾಯಕಾರಿ ಕಾಯಿಲೆಯಾಗಿ ಪ್ರಸ್ತುತ ರಕ್ತದೊತ್ತಡ ಕಾಣಿಸುತ್ತಿದೆ. ಇದನ್ನು ನಿಯಂತ್ರಿಸಲು ಆಹಾರ ಕ್ರಮದೊಂದಿಗೆ ಜೀವನ ಶೈಲಿಯನ್ನೂ ಬದಲಾಯಿಸಬೇಕಿದೆ. ಯಾವ ಆಹಾರಗಳನ್ನು, ತರಕಾರಿಗಳನ್ನು ಸೇವಿಸಿದರೆ ರಕ್ತದೊತ್ತಡ ಕಡಿಮೆ ಮಾಡಬಹುದು? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Blood Pressure
Koo

ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಎಲ್ಲರಲ್ಲೂ ಕಂಡು ಬರುತ್ತಿರುವ ಕಾಯಿಲೆ (Illness) ಮಧುಮೇಹ (diabetes) ಮತ್ತು ಅಧಿಕ ರಕ್ತದೊತ್ತಡ (Blood Pressure). ಇವೆರಡನ್ನೂ ನಿರ್ಲಕ್ಷಿಸಿದರೆ ಅಪಾಯ ಹೆಚ್ಚು. ಅದರಲ್ಲೂ ಅಧಿಕ ರಕ್ತದೊತ್ತಡವು (HIGH bp) ಸಾಮಾನ್ಯವಾಗಿ ನಾವು ಯೋಚಿಸುವುದಕ್ಕಿಂತ ಹೆಚ್ಚು ಅಪಾಯಕಾರಿಯಾಗಿರುತ್ತದೆ. ಅನಿಯಂತ್ರಿತ ರಕ್ತದೊತ್ತಡವು ಅಪಧಮನಿಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ.


ಇಂದಿನ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿ, ಅತಿಯಾದ ಒತ್ತಡ ಮತ್ತು ದೈಹಿಕ ನಿಷ್ಕ್ರಿಯತೆಯು ಅಧಿಕ ರಕ್ತದೊತ್ತಡಕ್ಕೆ ಮುಖ್ಯ ಕಾರಣವಾಗುತ್ತದೆ. ಆರೋಗ್ಯಕರ ರಕ್ತದೊತ್ತಡದ ಸಂಖ್ಯೆಯನ್ನು ಕಾಪಾಡಿಕೊಳ್ಳಲು ಸಮತೋಲಿತ ಆಹಾರದಿಂದ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಬಹುಮುಖ್ಯ. ಹಲವಾರು ಸರಳ ಬದಲಾವಣೆಗಳು ರಕ್ತದೊತ್ತಡವನ್ನು ನೈಸರ್ಗಿಕವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೂ ನೈಸರ್ಗಿಕವಾಗಿ ರಕ್ತದೊತ್ತಡವನ್ನು ಕಡಿಮೆ ಮಾಡಲು ಏನು ತಿನ್ನಬೇಕು ಎನ್ನುವುದು ಹೆಚ್ಚಿನವರಿಗೆ ತಿಳಿದಿಲ್ಲ.

ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿರುವ ತರಕಾರಿಗಳನ್ನು ನಮ್ಮ ದೈನಂದಿನ ಆಹಾರಕ್ರಮದಲ್ಲಿ ಸೇರಿಸಿಕೊಳ್ಳುವುದರಿಂದ ರಕ್ತದೊತ್ತಡದ ನಿಯಂತ್ರಿಸಿಕೊಳ್ಳಬಹುದು. ಅವುಗಳು ಯಾವುದು ಗೊತ್ತೇ?


ಬೀಟ್ರೂಟ್

ಅಧ್ಯಯನಗಳ ಪ್ರಕಾರ ಬೀಟ್ರೂಟ್ ನಲ್ಲಿರುವ ನೈಟ್ರೇಟ್ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್ ರಸವನ್ನು ಕುಡಿಯುವುದು ಅಥವಾ ಸಲಾಡ್, ಸೂಪ್ ಅಥವಾ ಮೇಲೋಗರಗಳಿಗೆ ಸೇರಿಸುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಪ್ರಯೋಜನಕಾರಿಯಾಗಿದೆ.


ಹಸಿರು ಸೊಪ್ಪು ತರಕಾರಿಗಳು

ಹಸಿರು ಸೊಪ್ಪು ತರಕಾರಿಗಳು ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿವೆ. ಸೊಪ್ಪು ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಒಟ್ಟಾರೆ ಹೃದಯರಕ್ತನಾಳದ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆ ತೋರಿಸಿದೆ. ಪಾಲಕ್, ಹಸಿರು ಬಾಳೆ ಮತ್ತು ಸಾಸಿವೆ ಗ್ರೀನ್ಸ್ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.


ಬೆಳ್ಳುಳ್ಳಿ

ಆಂಟಿಫಂಗಲ್ ಮತ್ತು ಆ್ಯಂಟಿಬಯೋಟಿಕ್ ಗುಣಗಳಿರುವ ಬೆಳ್ಳುಳ್ಳಿ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬೆಳ್ಳುಳ್ಳಿ ಕೂಡ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.


ಸಿಹಿ ಆಲೂಗಡ್ಡೆ

ಫೈಬರ್, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಹೇರಳವಾಗಿರುವ ಸಿಹಿ ಆಲೂಗಡ್ಡೆ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


ಬ್ರೊಕೊಲಿ

ಬ್ರೊಕೊಲಿಯನ್ನು ಆಹಾರದಲ್ಲಿ ಸೇರಿಸುವುದು ಅಧಿಕ ಬಿಪಿಯನ್ನು ನಿಯಂತ್ರಿಸಲು ಪರಿಣಾಮಕಾರಿ ಮಾರ್ಗವಾಗಿದೆ. ಕೋಸುಗಡ್ಡೆಯು ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ, ಪೊಟ್ಯಾಸಿಯಮ್, ವಿಟಮಿನ್ ಕೆ, ಪ್ರೋಟೀನ್ ಮತ್ತು ಫೈಬರ್‌ನಿಂದ ಕೂಡಿದೆ.


ಆಲೂಗಡ್ಡೆ

ಆಲೂಗಡ್ಡೆ ಪೊಟ್ಯಾಸಿಯಮ್‌ನ ರಕ್ತದೊತ್ತಡ ನಿಯಂತ್ರಿಸಲು ಉತ್ತಮ ಮಾರ್ಗವಾಗಿದೆ. ಆಲೂಗಡ್ಡೆಯನ್ನು ಆಹಾರದಲ್ಲಿ ಹಲವಾರು ವಿಧದಲ್ಲಿ ಸೇರಿಸಿ ರಕ್ತದೊತ್ತಡವನ್ನು ದೂರವಿಡಬಹುದು.


ಇದನ್ನೂ ಓದಿ: Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

ಕ್ಯಾರೆಟ್

ದೃಷ್ಟಿಯ ಸಮಸ್ಯೆಯನ್ನು ನಿವಾರಿಸುವ ಕ್ಯಾರೆಟ್ ಹಲವಾರು ಪ್ರಯೋಜನಕಾರಿ ಸಸ್ಯ-ಆಧಾರಿತ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ನಿಯಂತ್ರಿತ ರಕ್ತದೊತ್ತಡ ಸೇರಿದಂತೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
ಅಧಿಕ ರಕ್ತದೊತ್ತಡ ಹೊಂದಿದ್ದರೆ ಇದಕ್ಕೆ ಕೇವಲ ಆಹಾರ ಮಾತ್ರ ಸಹಾಯ ಮಾಡುವುದಿಲ್ಲ. ದೈಹಿಕವಾಗಿ ಸಕ್ರಿಯವಾಗಿರುವುದು ಕೂಡ ಅಷ್ಟೇ ಅಗತ್ಯವಾಗಿದೆ. ಉಪ್ಪು ಸೇವನೆ, ಕೆಫೀನ್ ಅನ್ನು ಕಡಿಮೆ ಮಾಡುವುದು ಮತ್ತು ಒತ್ತಡದ ಮಟ್ಟವನ್ನು ನಿರ್ವಹಿಸುವುದು ಕೂಡ ಅತ್ಯಗತ್ಯ. ದೀರ್ಘಕಾಲದ ಅಧಿಕ ರಕ್ತದೊತ್ತಡ ಹೊಂದಿದ್ದರೆ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯುವುದು ಮುಖ್ಯ.

Continue Reading

ಆರೋಗ್ಯ

Summer Health Tips: ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

ವಿಟಮಿನ್‌ ಸಿ ಅಂಶವನ್ನು ಹೇರಳವಾಗಿ ತುಂಬಿಕೊಂಡಿರುವ ಬೆಟ್ಟದ ನೆಲ್ಲಿಕಾಯಿಗಳನ್ನು ಹಲವು ರೀತಿಯಲ್ಲಿ ಸೇವಿಸುವುದರಿಂದ ಬಿಸಿಲ ದಿನಗಳಲ್ಲಿ ದೇಹ ನಿತ್ರಾಣಗೊಳ್ಳದಂತೆ ಮತ್ತು ರೋಗನಿರೋಧಕ ಶಕ್ತಿ ಕುಂಠಿತವಾಗದಂತೆ ಕಾಪಾಡಿಕೊಳ್ಳಬಹುದು. ಬಿಸಿಲಿನ ದಿನಗಳಿಗೆ ಪೂರಕವಾಗುವಂತೆ ನೆಲ್ಲಿಕಾಯಿಯನ್ನು ಬಳಸುವುದು ಹೇಗೆ? ಈ (summer Health Tips) ಲೇಖನ ಓದಿ.

VISTARANEWS.COM


on

Summer Health Tips
Koo

ದೇಹದ ಪ್ರತಿರೋಧಕ ಶಕ್ತಿಯನ್ನು ಕುಂದಿಸುವಂಥ ಹವಾಮಾನ ಯಾವುದೇ ದಿನಗಳಲ್ಲೂ ಎದುರಾಗಬಹುದು. ಅದಕ್ಕೇನು ಮಳೆಯೇ ಬೇಕು. ಚಳಿಯೇ ಇರಬೇಕು ಎಂದಿಲ್ಲ. ಈ ಬಿರು ಬೇಸಿಗೆಯಲ್ಲೂ ಕಾಟ ಕೊಡುವ ವೈರಸ್‌ಗಳು ತಪ್ಪುವುದಿಲ್ಲ. ಇದಕ್ಕಾಗಿ ಭದ್ರವಾದ ಪ್ರತಿರೋಧಕ ವ್ಯವಸ್ಥೆಯನ್ನ ನಮ್ಮ ದೇಹ ಹೊಂದಬೇಕಾಗುತ್ತದೆ. ಅದಿಲ್ಲದಿದ್ದರೆ ಬಿಸಿಲಾಘಾತ, ನಿರ್ಜಲೀಕರಣದಿಂದಲೂ ತಪ್ಪಿಸಿಕೊಳ್ಳುವುದಕ್ಕೆ ದೇಹ ಸೋಲುತ್ತದೆ. ಇಂಥ ದಿನಗಳಲ್ಲಿ ನಮ್ಮ ನೆರವಿಗೆ ಬರುವುದು ಹುಳಿ-ಸಿಹಿಯ ಬೆಟ್ಟದ ನೆಲ್ಲಿಕಾಯಿ. ವಿಟಮಿನ್‌ ಸಿ ಅಂಶವನ್ನು ಹೇರಳವಾಗಿ ತುಂಬಿಕೊಂಡಿರುವ ಈ ಪುಟ್ಟ ಕಾಯಿಗಳನ್ನು ಹಲವು ರೀತಿಯಲ್ಲಿ ಸೇವಿಸುವುದರಿಂದ ಬಿಸಿಲ ದಿನಗಳಲ್ಲಿ ದೇಹ ನಿತ್ರಾಣಗೊಳ್ಳದಂತೆ ಮತ್ತು ರೋಗನಿರೋಧಕ ಶಕ್ತಿ ಕುಂಠಿತವಾಗದಂತೆ (summer Health Tips) ಕಾಪಾಡಿಕೊಳ್ಳಬಹುದು. ಬಿಸಿಲಿನ ದಿನಗಳಿಗೆ ಪೂರಕವಾಗುವಂತೆ ನೆಲ್ಲಿಕಾಯಿಯನ್ನು ಬಳಸುವುದು ಹೇಗೆ?

pudina gooseberry juice

ಪುದೀನಾ-ನೆಲ್ಲಿ ಪಾನಕ

ವಿಟಮಿನ್‌ ಸಿ, ಇ ಮತ್ತು ಎ, ನಾರು ಹಾಗೂ ವಿಟಮಿನ್‌ ಬಿ1 ಸತ್ವಗಳನ್ನು ಈ ಪಾನಕ ಭರಪೂರ ತುಂಬಿಕೊಂಡಿರುತ್ತದೆ. ಬೇಸಿಗೆಯಲ್ಲಿ ಕಾಡುವ ಜೀರ್ಣಾಂಗಗಳ ಸಮಸ್ಯೆಯಿಂದ ಮುಕ್ತಿ ನೀಡುವಂಥ ಪೇಯವಿದು. ಬೆಟ್ಟದ ನೆಲ್ಲಿಕಾಯಿಗೆ ಚಿಟಿಕೆ ಉಪ್ಪು ಮತ್ತು ಪುದೀನಾ ಎಲೆಗಳನ್ನು ಸೇರಿಸಿ ರುಬ್ಬಿ, ರಸ ತೆಗೆಯಿರಿ. ಇದಕ್ಕೆ ರುಚಿಗೆ ತಕ್ಕಷ್ಟು ಬೆಲ್ಲ ಸೇರಿಸಿ ಅಥವಾ ಹಾಗೆಯೇ ಕುಡಿಯುವವರು ಅಂತೆಯೇ ಕುಡಿಯಬಹುದು.

ನೆಲ್ಲಿ ಸ್ಮೂದಿ

ಇದಕ್ಕಾಗಿ ಮೊಸರು, ಬಾಳೆಹಣ್ಣು, ಕೊಂಚ ಪಾಲಕ್‌ ಎಲೆಗಳು ಮತ್ತು ನೆಲ್ಲಿಕಾಯಿಯನ್ನು ಬ್ಲೆಂಡರ್‌ಗೆ ಹಾಕಿ ತಿರುಗಿಸಿ. ಇದರನ್ನು ಸೋಸಬಾರದು. ಎಲ್ಲ ನಾರಿನಂಶ ಇರುವಂತೆಯೇ ಸೇವಿಸಬೇಕು. ಇದರಿಂದ ಬಾಳೆಹಣ್ಣಿನಲ್ಲಿರುವ ಶರ್ಕರಪಿಷ್ಟಗಳು, ಮೊಸರಿನಲ್ಲಿರುವ ಕೊಬ್ಬು ಮತ್ತು ಪ್ರೊಬಯಾಟಿಕ್‌ ಅಂಶಗಳು, ಪಾಲಕ್‌ನಲ್ಲಿರುವ ಖನಿಜಗಳು ಎಲ್ಲವೂ ನೆಲ್ಲಿ ಕಾಯಿಯ ಜೊತೆಗೆ ಹೊಟ್ಟೆ ಸೇರುತ್ತವೆ. ತೂಕ ಇಳಿಸುವವರು ಇದನ್ನು ಬೆಳಗಿನ ಉಪಹಾರವಾಗಿಯೂ ಸೇವಿಸಬಹುದು.

ನೆಲ್ಲಿ ಸಲಾಡ್‌

ಬೇಸಿಗೆಯಲ್ಲಿ ತಂಪಾದ ಸಲಾಡ್‌ಗಳು ಎಲ್ಲರಿಗೂ ಇಷ್ಟವಾಗುವಂಥವು. ಅದರಲ್ಲೂ ಹುಳಿ-ಸಿಹಿ ರುಚಿಯ ಸಲಾಡ್‌ಗಳು ಮತ್ತೂ ಇಷ್ಟವಾಗುತ್ತವೆ. ಇದಕ್ಕಾಗಿ ನೆಲ್ಲಿಕಾಯಿಯ ಜೊತೆ ಸೌತೇಕಾಯಿ, ದಾಳಿಂಬೆ, ಸೇಬು ಮತ್ತು ಮೊಳಕೆ ಬರಿಸಿದ ಹೆಸರು ಕಾಳುಗಳನ್ನು ತೆಗೆದುಕೊಳ್ಳಿ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ಬೇಕಿದ್ದರೆ ಕೊಂಚ ಕಾಳುಮೆಣಸಿನ ಪುಡಿ ಸೇರಿಸಿ. ನಿಮ್ಮ ರುಚಿಕರ ಸಲಾಡ್‌ ಸಿದ್ಧ.

Image Of Gooseberry Benefits

ನೆಲ್ಲಿ ಪಾಪ್ಸಿಕಲ್‌

ತಂಪಾದ ಏನನ್ನು ಕೊಟ್ಟರೂ ಕೈಯೊಡ್ಡುವಂಥ ಸ್ಥಿತಿ ಈ ಬೇಸಿಗೆಯಲ್ಲಿ. ಅದರಲ್ಲೂ ಫ್ರೋಜನ್‌ ತಿಂಡಿಗಳು ಮತ್ತೂ ಇಷ್ಟವಾಗುತ್ತವೆ. ಪಾಪ್ಸಿಕಲ್‌ ರೂಪದಲ್ಲಿ ನಮಗೆ ಪ್ರಿಯವಾದ್ದನ್ನು ಸವಿಯುವುದು ಬೇರೆಯದೇ ಸೊಗಸನ್ನು ನೀಡುತ್ತದೆ. ನೆಲ್ಲಿಕಾಯನ್ನು ರುಬ್ಬಿ ರಸ ತೆಗೆಯಿರಿ. ಇದಕ್ಕೆ ಕೊಂಚ ಜೇನುತುಪ್ಪ ಮತ್ತು ಸಿಹಿ ಮೊಸರು ಬೆರೆಸಿ. ಈ ಮಿಶ್ರಣವನ್ನು ಪಾಪ್ಸಿಕಲ್‌ ಅಚ್ಚಿಗೆ ಸುರಿಯಿರಿ. ಫ್ರೀಜ್‌ ಮಾಡಿ ತೆಗೆದು ಬಾಯಿ ಚಪ್ಪರಿಸಿದರಾಯಿತು.

ಡಿಟಾಕ್ಸ್‌ ನೀರು

ಬರೀ ನೀರು ಕುಡಿಯುವುದಕ್ಕೆ ಸಾಧ್ಯವಿಲ್ಲ ಎನಿಸಿದರೆ, ಐದು ಲೀ ಪಾತ್ರೆಯಲ್ಲಿ ಹತ್ತಿಪ್ಪತ್ತು ಪುದೀನಾ ಎಲೆಗಳು, ಸೌತೆಕಾಯಿ ಗಾಲಿಗಳು ಮತ್ತು ನೆಲ್ಲಿಯ ತುಂಡುಗಳನ್ನು ಧಾರಾಳವಾಗಿ ಸೇರಿಸಿ. ಒಂದೆರಡು ತಾಸು ಹಾಗೆಯೇ ಬಿಡಿ. ನಂತರ ದಿನವಿಡೀ ಈ ನೀರು ಕುಡಿದು ಸಂತೃಪ್ತಿಯಿಂದಿರಿ. ಇದರಿಂದ ಜೀರ್ಣಾಂಗಗಳ ಕ್ಷಮತೆ ಹೆಚ್ಚುತ್ತದೆ.

indian gooseberry

ನೆಲ್ಲಿ ಐಸ್‌ ಟೀ

ಆರೆಂಟು ಪುದೀನಾ ಚಿಗುರುಗಳ ಜೊತೆಗೆ ನೆಲ್ಲಿ ಕಾಯಿಯ ತುಣುಕುಗಳನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ. ಇದು ಆರಿದ ಮೇಲೆ ಕೊಂಚ ಜೇನುತುಪ್ಪ ಸೇರಿಸಿ, ಫ್ರಿಜ್‌ನಲ್ಲಿಡಿ. ಬೇಕಾದಾಗ ಈ ಈ ಪೇಯವನ್ನು ತೆಗೆದು, ಕುಡಿದು ಸಂಭ್ರಮಿಸಿ. ನೆಲ್ಲಿಕಾಯಿಯನ್ನು ಅತಿಯಾಗಿ ಸೇವಿಸುವುದೂ ಸಮಸ್ಯೆಗಳನ್ನು ತರಬಹುದು. ಈಗಾಗಲೇ ತೂಕ ಕಡಿಮೆ ಇರುವವರು ಇನ್ನೂ ತೂಕ ಇಳಿದ ನಿದಾರ್ಶನಗಳಿವೆ. ಹಾಗಾಗಿ ತೂಕ ಇಳಿಸುವವರು ಇದನ್ನು ಸೇವಿಸಿದಷ್ಟು, ಕಡಿಮೆ ತೂಕದವರಿಗೆ ಬೇಕಾಗುವುದಿಲ್ಲ.

ಇದನ್ನೂ ಓದಿ: Weight Loss Tips: ಸುಸ್ಥಿರವಾಗಿ ತೂಕ ಇಳಿಸಬೇಕೆ?; ಇಲ್ಲಿದೆ ದಾರಿ!

Continue Reading

ಆರೋಗ್ಯ

Drinking Water Before Meals: ಊಟಕ್ಕಿಂತ ಎಷ್ಟು ಮೊದಲು ನೀರು ಕುಡಿದರೆ ಒಳ್ಳೆಯದು?

ನೀರು ಶರೀರಕ್ಕೆ ದೊರೆತಷ್ಟೂ ಒಳ್ಳೆಯದು. ಹಾಗೆಂದು ಹೊಟ್ಟೆ ತುಂಬಾ ನೀರು ಕುಡಿದು ಊಟ ಮಾಡಬಹುದೇ? ಆಹಾರ ಸೇವಿಸಿದ ತಕ್ಷಣ ಚೊಂಬುಗಟ್ಟಲೆ ನೀರು ಕುಡಿಯುವ (Drinking Water) ಅಭ್ಯಾಸ ಸರಿಯೇ? ಇಂಥ ಹಲವು ಪ್ರಶ್ನೆಗಳು ನಮ್ಮ ಮನದಲ್ಲಿರಬಹುದು. ಒಂದಿಷ್ಟು ಪ್ರಶ್ನೆಗಳಿಗೆ (Drinking water before meals) ಇಲ್ಲಿದೆ ಉತ್ತರ.

VISTARANEWS.COM


on

Drinking Water Before Meals
Koo

ಬೇಸಿಗೆಯ ಬಿರುಸಿಗೆ ದಿನವಿಡೀ ನೀರು (Health Tips Kannada) ಕುಡಿಯುತ್ತಲೇ ಇರುತ್ತೇವೆ. ಬಿಸಿಲಿನ ದಿನಗಳಲ್ಲಿ ಆರೋಗ್ಯವನ್ನು ಕ್ಷೇಮವಾಗಿ ಇರಿಸಿಕೊಳ್ಳಲು ನೀರು ಕುಡಿಯುವುದು (Drinking Water) ಅಗತ್ಯ. ಆದರೆ ಕುಡಿಯುವ ಸಮಯ ಯಾವುದು ಎಂಬುದು ಕೆಲವೊಮ್ಮೆ ಮುಖ್ಯವಾಗುತ್ತದೆ. ಅಂದರೆ ದಿನವಿಡೀ ಗುಟುಕರಿಸುತ್ತಲೇ ಇರುತ್ತೇವೆ ಎಂಬುದು ಹೌದಾದರೂ, ಊಟಕ್ಕಿಂತ ಎಷ್ಟು ಮೊದಲು-ನಂತರ ಕುಡಿಯಬಹುದು, ಊಟ ಮಾಡುವಾಗಲೂ ಬಾಯಾರಿಕೆ ಎನಿಸಿದರೆ ಆಗೇನು ಮಾಡಬಹುದೆಂಬ ಅನುಮಾನ ಕೆಲವರಿಗಾದರೂ ಬಂದೀತು. ಇನ್ನೇನು ಊಟದ ಹೊತ್ತು ಎನ್ನುವಾಗ ಚೆನ್ನಾಗಿ ನೀರು ಕುಡಿದರೆ ಪಚನಕ್ರಿಯೆಗೆ ಅಡ್ಡಿಯಾಗುತ್ತದೆ. ಇದರಿಂದ ಸತ್ವಗಳನ್ನು ಸರಿಯಾಗಿ ಹೀರಿಕೊಳ್ಳಲಾಗದು ದೇಹಕ್ಕೆ. ಹಾಗಾದರೆ ಬೇಸಿಗೆಯಾದರೂ ನೀರು ಕುಡಿಯುವ ಹೊತ್ತುಗಳನ್ನು ನಿರ್ವಹಿಸುವುದು ಹೇಗೆ? ಈ ಮೂಲಕ ಜೀರ್ಣಕ್ರಿಯೆ ಹೆಚ್ಚು-ಕಡಿಮೆ ಆಗದಂತೆ ಕಾಪಾಡಿಕೊಳ್ಳುವುದು ಹೇಗೆ?

drinking water

ಊಟದ ಮುನ್ನ

ಆಹಾರ ತೆಗೆದುಕೊಳ್ಳುವ ಮುನ್ನ ನೀರು ಕುಡಿಯುವ ಬಗ್ಗೆಯೂ ತಜ್ಞರಲ್ಲಿ ಒಮ್ಮತ ಇದೆ. ಬೆಳಗಿನ ತಿಂಡಿಯ ವಿಷಯಕ್ಕೆ ಬಂದರೆ, ಎದ್ದ ತಕ್ಷಣ ಒಂದೆರಡು ಗ್ಲಾಸ್‌ ನೀರು ಕುಡಿಯುವುದು ಸರಿಯಾದ ಕ್ರಮ. ಕೇವಲ ನೀರೆಂದಲ್ಲ, ಡಿಟಾಕ್ಸ್‌ ಪೇಯಗಳು, ಬಿಸಿ-ತಣ್ಣೀರು ಯಾವುದಾದರೂ ಸರಿ. ಇದನ್ನು ಕುಡಿದ ನಂತರ 45 ನಿಮಿಷಗಳು ಬಿಟ್ಟು ಉಪಾಹಾರ ಸೇವಿಸುವುದು ಒಳ್ಳೆಯದು. ಇದರಿಂದ ಜೀರ್ಣಕ್ರಿಯೆಗೆ ಸರಿಯಾದ ವಾತಾವರಣ ಹೊಟ್ಟೆಯಲ್ಲಿ ನಿರ್ಮಾಣ ಆಗುತ್ತದೆ. ಸತ್ವಗಳನ್ನು ಹೀರಿಕೊಳ್ಳಲು, ಅದನ್ನು ಜೀರ್ಣಿಸಿಕೊಳ್ಳಲು ಪಚನಾಂಗಗಳಿಗೆ ನೆರವಾಗುತ್ತದೆ. ಉಳಿದೆರಡು ಹೊತ್ತಿನ ಊಟಗಳ ವಿಷಯದಲ್ಲಿ ಸ್ವಲ್ಪ ವ್ಯತ್ಯಾಸ ಬೇಕು. 30 ನಿಮಿಗಳ ಮೊದಲು ಬೇಕಾದಷ್ಟು ನೀರು ಕುಡಿಯುವುದು ಹಲವು ರೀತಿಯಲ್ಲಿ ಒಳ್ಳೆಯದು. ಮೊದಲನೇದಾಗಿ, ಊಟ ಮಾಡುವ ಮುನ್ನ ನೀರು ಕುಡಿಯುವುದರಿಂದ ಜೀರ್ಣಕ್ರಿಯೆಗೆ ತೊಂದರೆಯಾಗುವುದು ತಪ್ಪುತ್ತದೆ. ಎರಡನೇದಾಗಿ, ಹೊಟ್ಟೆ ಅತಿಯಾಗಿ ಹಸಿದಿದ್ದರೆ ಸಿಕ್ಕಾಪಟ್ಟೆ ತಿನ್ನುವಂತಾಗುತ್ತದೆ. ಇದೀಗ ಹೊಟ್ಟೆ ಅತಿಯಾಗಿ ಹಸಿದಂತೆಯೂ ಅನಿಸದೆ, ಅಗತ್ಯಕ್ಕಿಂತ ಹೆಚ್ಚು ತಿನ್ನುವುದರ ಮೇಲೆ ಕಡಿವಾಣ ಹಾಕಿದಂತಾಗುತ್ತದೆ. ಹಾಗಾಗಿ ಊಟಕ್ಕಿಂತ 30 ನಿಮಿಷ ಮುನ್ನ ಬೇಕಾದಷ್ಟು ನೀರು ಕುಡಿಯುವುದು ಸರಿಯಾದ ಕ್ರಮ.

ಊಟ ಮಾಡುವಾಗ

ತಿಂಡಿ-ಊಟ ಮಾಡುವಾಗ ನೀರಿಟ್ಟುಕೊಳ್ಳುವುದು ಬಹಳಷ್ಟು ಜನರ ಪದ್ಧತಿ. ʻನೀರಿಲ್ಲದಿದ್ದರೆ ತುತ್ತು ಗಂಟಲಲ್ಲಿ ಇಳಿಯುವುದೇ ಇಲ್ಲʼ ಎನ್ನುವವರೂ ಇದ್ದಾರೆ. ಊಟ ಮಾಡುವಾಗ ನೀರು ಕುಡಿಯುವುದು ತಪ್ಪಲ್ಲದಿದ್ದರೂ, ಅತಿಯಾಗಿ ಕುಡಿಯುವುದು ಸರಿಯಲ್ಲ. ಹಾಗಾಗಿ ಬೇಕಾದಾಗ ಒಂದೊಂದೇ ಗುಟುಕು ಕುಡಿಯುವುದು ಒಳ್ಳೆಯದು. ಊಟದ ನಡುವೆ ಅಲ್ಪ ಪ್ರಮಾಣದ ನೀರು ಕುಡಿಯುವುದು ಒಳ್ಳೆಯದೇ ಎನ್ನುತ್ತಾರೆ ಕೆಲವು ಪೋಷಕಾಂಶ ತಜ್ಞರು. ಇದರಿಂದ ಆಹಾರವನ್ನು ನುಚ್ಚುನುರಿ ಮಾಡುವುದಕ್ಕೆ, ಅನ್ನನಾಳದಲ್ಲಿ ಸರಾಗವಾಗಿ ಕೆಳಗಿಳಿಯುವುದಕ್ಕೆ ಅನುಕೂಲವಾಗುತ್ತದೆ. ಈ ಮೂಲಕ ಪಚನವಾಗುವುದಕ್ಕೂ ಸುಲಭವಾಗುತ್ತದೆ. ಆದರೆ ಲೋಟಗಟ್ಟಲೆ ಕುಡಿಯುವ ಬದಲು ಸ್ವಲ್ಪ ಕುಡಿದರೆ ಒಳ್ಳೆಯದು.

drink water

ಊಟದ ನಂತರ

ಊಟವಾದ ನಂತರ ಸಿಕ್ಕಾಪಟ್ಟೆ ನೀರು ಕುಡಿಯುವ ಅಭ್ಯಾಸವಿದ್ದರೆ, ಅದನ್ನು ದೂರ ಮಾಡುವುದು ಕ್ಷೇಮ. ಕಾರಣ, ಆಹಾರ ಹೊಟ್ಟೆ ಸೇರಿದ ಕೂಡಲೆ ಚೊಂಬುಗಟ್ಟಲೆ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಏರುಪೇರಾಗುತ್ತದೆ. ಅಜೀರ್ಣ, ಹೊಟ್ಟೆಯುಬ್ಬರದಂಥ ತೊಂದರೆಗಳು ಕಾಣಬಹುದು. ಬದಲಿಗೆ, ಆಹಾರ ಸೇವನೆಯ ನಂತರ ಅಗತ್ಯವಿರುವಷ್ಟೇ ನೀರು ಕುಡಿಯಿರಿ. ಅಲ್ಲಿಂದ 30-60 ನಿಮಿಷಗಳ ವಿರಾಮ ನೀಡಿ. ಆನಂತರ ಬೇಕಾದಷ್ಟು ನೀರು ಕುಡಿಯಿರಿ. ಇದರಿಂದ ಪಚನಕ್ರಿಯೆ ಸುಲಲಿತವಾಗಿ ನೆರವೇರುತ್ತದೆ. ಊಟದ ನಂತರ ಅತಿಯಾಗಿ ನೀರು ಕುಡಿಯುವುದು ಸಲ್ಲದಿದ್ದರೂ, ನೀರನ್ನಂತೂ ಕುಡಿಯಲೇ ಬೇಕು. ಇದರಿಂದ ಹೊಟ್ಟೆ ಚೆನ್ನಾಗಿ ತುಂಬಿದ ಅನುಭವ ದೊರೆಯುತ್ತದೆ. ಹಾಗಾಗಿ ನಡುವೆ ಚುಟುಕು ತಿನಿಸುಗಳನ್ನು ಬಾಯಾಡುವ ಬಯಕೆಗೆ ಕಡಿವಾಣ ಹಾಕುವುದು ಸುಲಭವಾಗುತ್ತದೆ. ಆದರೆ ಆಹಾರದ ನಂತರ ಔಷಧ ತೆಗೆದುಕೊಳ್ಳುವುದಿದ್ದರೆ, ಯಾವುದಾದರೂ ಆರೋಗ್ಯ ಸಮಸ್ಯೆಗಳಿದ್ದರೆ ಅವರ ಅಗತ್ಯಕ್ಕೆ ತಕ್ಕಂತೆ ನೀರು ಕುಡಿಯುವುದು ಸೂಕ್ತ.

ಇದನ್ನೂ ಓದಿ: Weight Loss Tips: ಸುಸ್ಥಿರವಾಗಿ ತೂಕ ಇಳಿಸಬೇಕೆ?; ಇಲ್ಲಿದೆ ದಾರಿ!

8-8 ನಿಯಮ

ಬೇಸಿಗೆಯಲ್ಲಿ ಮಾತ್ರವೇ ಅಲ್ಲ, ಎಲ್ಲಾ ದಿನಗಳಲ್ಲೂ 8 ಔನ್ಸ್‌ ಗ್ಲಾಸಿನ ತುಂಬಾ 8 ಬಾರಿ ನೀರು ಕುಡಿಯಲೇ ಬೇಕು ಎನ್ನುತ್ತಾರೆ ಆಹಾರ ತಜ್ಞರು. ದೇಹಕ್ಕೆ ಸಾಕಷ್ಟು ನೀರುಣಿಸುವುದರಿಂದ ಜೀರ್ಣಾಂಗಗಲ್ಲಿರುವ ಬ್ಯಾಕ್ಟೀರಿಯಗಳ ಸಮತೋಲನವನ್ನು ಕಾಪಾಡಿಕೊಳ್ಳಬಹುದು. ಇದರಿಂದ ಜೀರ್ಣಕ್ರಿಯೆ ಸರಾಗ ಆಗಿ, ಮಲಬದ್ಧತೆ ದೂರವಾಗಿ, ದೇಹ-ಮನಸ್ಸುಗಳಿಗೆ ಚೈತನ್ಯ ದೊರೆತು, ಪ್ರತಿರೋಧಕ ಶಕ್ತಿ ಪ್ರಬಲವಾಗುತ್ತದೆ. ಹಾಗಾಗಿ ಸಾಕಷ್ಟು ನೀರು ಕುಡಿಯಿರಿ.

Continue Reading
Advertisement
Lok Sabha Election 2024
Lok Sabha Election 20244 mins ago

Lok Sabha Election 2024: ಬಿಜೆಪಿಯ ʼಮೊಟ್ಟೆʼ ವಿಡಿಯೊ ವಿರುದ್ಧ ಕಾಂಗ್ರೆಸ್‌ ಕೆಂಡಾಮಂಡಲ; ಅಂತಹದ್ದೇನಿದೆ?

Prajwal Revanna Case Siddaramaiah tweets vote for Prajwal Full class from BJP!
ಕ್ರೈಂ16 mins ago

Prajwal Revanna Case: ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

bajrang punia Suspended
ಕ್ರೀಡೆ17 mins ago

Bajrang Punia: ಬಜರಂಗ್​ಗೆ ಅಮಾನತು ಶಿಕ್ಷೆ ವಿಧಿಸಿದ ರಾಷ್ಟ್ರೀಯ ಉದ್ದೀಪನ ನಿಗ್ರಹ ಸಂಸ್ಥೆ; ಪ್ಯಾರಿಸ್ ಒಲಿಂಪಿಕ್ಸ್​ಗೆ ಹಿನ್ನಡೆ

Kannada New Movie Adhipatra audio rights
ಸಿನಿಮಾ22 mins ago

Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ರೂಪೇಶ್ ಶೆಟ್ಟಿ-ಜಾಹ್ನವಿ ಸಿನಿಮಾ ಆಡಿಯೊ ರೈಟ್ಸ್!

assault case
Lok Sabha Election 202430 mins ago

Assault Case : ಕಾಂಗ್ರೆಸ್‌ಗೆ ಅಲ್ಲ.. ಬಿಜೆಪಿಗೆ ಮತ ಹಾಕುವೆ ಎಂದಿದ್ದಕ್ಕೆ ರಸ್ತೆಗೆ ಎಳೆದು ತಂದು ಕೈ-ಕಾಲು ಮುರಿದರು ದುರುಳರು

Viral News
ವೈರಲ್ ನ್ಯೂಸ್39 mins ago

Viral News: ಅಣ್ಣನ ಕತ್ತು ಸೀಳಿದ ತಂಗಿ; ಮೊಬೈಲ್‌ಗಾಗಿ ನಡೀತು ಘೋರ ಕೃತ್ಯ

FIFA World Cup qualifiers
ಕ್ರೀಡೆ1 hour ago

FIFA World Cup qualifiers: ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ; ಬಲಿಷ್ಠ ಸಂಭಾವ್ಯ ತಂಡ ಪ್ರಕಟಿಸಿದ ಭಾರತ

Prajwal Revanna Case HD Revanna mobile phone seized SIT to collect technical evidence
ಕ್ರೈಂ1 hour ago

Prajwal Revanna Case: ಎಚ್.ಡಿ. ರೇವಣ್ಣ ಮೊಬೈಲ್‌ ವಶಕ್ಕೆ? ಟೆಕ್ನಿಕಲ್‌ ಎವಿಡೆನ್ಸ್‌ ಕಲೆ ಹಾಕಲು ಮುಂದಾದ ಎಸ್‌ಐಟಿ!

Prajwal Revanna Case reaction by Harshika Poonacha
ಸಿನಿಮಾ1 hour ago

Prajwal Revanna Case: ವೈರಲ್ ಆಗುತ್ತಿರುವ 2976 ವಿಡಿಯೊಗಳಲ್ಲಿ ಒಂದನ್ನು ನಾನು ನೋಡಿದೆ ಎಂದ ಹರ್ಷಿಕಾ ಪೂಣಚ್ಚ!

Prajwal Revanna Case Women officers say face morphed in video
ಕ್ರೈಂ1 hour ago

Prajwal Revanna Case: ಪ್ರಜ್ವಲ್‌ ವಿಡಿಯೊ ಕೇಸ್‌; ವಿಡಿಯೊದಲ್ಲಿರುವ ಮಹಿಳಾ ಅಧಿಕಾರಿಗಳಿಗೆ SIT ನೋಟಿಸ್‌: ‘ನಾನವಳಲ್ಲ’ ಎಂದು ಹೇಳಿಕೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌