Mouthwashes: ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ? ಇದರ ಇತಿಮಿತಿ ಬಗ್ಗೆಯೂ ತಿಳಿದಿರಲಿ - Vistara News

ಆರೋಗ್ಯ

Mouthwashes: ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ? ಇದರ ಇತಿಮಿತಿ ಬಗ್ಗೆಯೂ ತಿಳಿದಿರಲಿ

ಮೌತ್‌ವಾಷ್‌ಗಳನ್ನು (Mouthwashes) ಬಳಸದವರ ಸಂಖ್ಯೆ ವಿರಳ. ಕೆಲವರು ನಿಯಮಿತವಾಗಿ ಬಳಸಿದರೆ, ಹಲವರು ಅಪರೂಪಕ್ಕಾದರೂ ಬಳಸುತ್ತಾರೆ. ವ್ಯಾಪಕವಾಗಿ ಬಳಕೆಯಲ್ಲಿರುವ ಈ ಮೌತ್‌ವಾಷ್‌ನ ಇತಿ-ಮಿತಿಗಳೇನು? ಇದನ್ನು ಬಳಸಬೇಕಾದರೆ ಗಮನಿಸಬೇಕಾದ ಅಂಶಗಳು ಯಾವುವು? ಇಲ್ಲಿದೆ ವಿವರ.

VISTARANEWS.COM


on

Mouthwashes
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜಾಹೀರಾತುಗಳನ್ನು ನೋಡಿ ಮರುಳಾಗುವುದು, ಅದನ್ನೇ ಅನುಸರಿಸುವುದು ಹೊಸದೇನಲ್ಲ. ಉದಾಹರಣೆಗೆ ಹೇಳುವುದಾದರೆ, ಯಾವುದೋ ಟೂತ್‌ಪೇಸ್ಟ್‌ ಉಪಯೋಗಿಸಿದರೆ ಹಲ್ಲುಗಳೆಲ್ಲ ಫಳಫಳಿಸಿ, ಉಸಿರು ತಾಜಾ ಆಗುತ್ತದೆ ಎಂದಿದ್ದರೆ, ಅದು ಸತ್ಯ ಎಂದು ಭಾವಿಸಿಯೇ ನಾವು ಉಪಯೋಗಿಸುತ್ತೇವೆ. ಮೌತ್‌ವಾಷ್‌ ಸಹ ಅದೇ ಸಾಲಿಗೆ ಸೇರುವಂಥದ್ದು. ಯಾವುದೇ ಮನೆಯ ಬಾತ್‌ರೂಂಗಳಲ್ಲಿ ಅದೀಗ ಖಾಯಂ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ಬಣ್ಣದ ಬಾಟಲಿಗಳ ಮೇಲಿನ ಮೋಹವನ್ನೋ ಅಥವಾ ಜಾಹೀರಾತುಗಳ ಭರವಸೆಯನ್ನೋ ಒಂದೆಡೆ ಇಟ್ಟು, ಮೌತ್‌ವಾಷ್‌ (Mouthwashes) ಬಳಕೆ ಇತಿ-ಮಿತಿಗಳೇನು ಎಂಬುದನ್ನು ಅರ್ಥ ಮಾಡಿಕೊಳ್ಳೋಣ.

Mouthwashes

ದುರ್ಗಂಧ ದೂರ

ಬಾಯಿಯ ದುರ್ಗಂಧ ಎಷ್ಟೋ ಸಂದರ್ಭಗಳಲ್ಲಿ ಮುಜುಗರ ತರುವಂತಹದ್ದು. ಸಾಮಾಜಿಕ, ವೈಯಕ್ತಿಕ ಅಥವಾ ವೃತ್ತಿಯ ಸಂದರ್ಭಗಗಳಲ್ಲಿ ಇದನ್ನು ನಿಭಾಯಿಸುವುದು ಕಷ್ಟವಾಗಬಹುದು. ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು, ಜೀರ್ಣಾಂಗಗಳ ಆರೋಗ್ಯ ನಿಭಾಯಿಸುವುದು, ಆಗಾಗ ನೀರು ಕುಡಿಯುವುದು- ಇಂಥವೆಲ್ಲ ಬಾಯಿಯ ದುರ್ಗಂಧ ನಿವಾರಣೆಯಲ್ಲಿ ಮುಖ್ಯವಾದವು. ಜೊತೆಗೆ ಮೌತ್‌ವಾಷ್‌ ಬಳಕೆ ಸಹ ಈ ಸಮಸ್ಯೆಗೆ ಸಮರ್ಥ ಪರಿಹಾರವನ್ನು ಒದಗಿಸಬಲ್ಲದು.

ಒಸಡಿನ ಸಮಸ್ಯೆ ದೂರ

ಕೆಲವು ಮೌತ್‌ವಾಷ್‌ಗಳು ಬ್ಯಾಕ್ಟೀರಿಯ ವಿರೋಧಿ ಸಾಮರ್ಥ್ಯವನ್ನು ಹೊಂದಿರುತ್ತವೆ. ಇಂಥವುಗಳ ನಿಯಮಿತ ಬಳಕೆಯಿಂದ ಒಸಡಿನ ಸೋಂಕುಗಳನ್ನು ಮಟ್ಟ ಹಾಕಬಹುದು. ಪ್ಲೇಕ್‌ಗಳು ನಿರ್ಮಾಣವಾಗಿ ಒಸಡಿನ ಆರೋಗ್ಯಕ್ಕೆ ಸವಾಲೊಡ್ಡುವ ಸಾಧ್ಯತೆ ಇರುತ್ತದೆ. ಇವುಗಳಿಗೂ ಕೆಲವು ಮೌತ್‌ವಾಷ್‌ಗಳು ಪರಿಹಾರ ಒದಗಿಸಬಲ್ಲವು.

Woman using mouthwash after brushing

ಉಪಯೋಗ ಸುಲಭ

ಮನೆಯಲ್ಲಿದ್ದರೂ, ಪ್ರಯಾಣದಲ್ಲಿದ್ದರೂ ಇವುಗಳನ್ನು ಕೊಂಡೊಯ್ಯುವುದು ಮತ್ತು ಬಳಸುವುದು ಸುಲಭ. ಫ್ಲೋಸಿಂಗ್‌ನಂಥ ಕ್ರಮಗಳು ಸಮಯ ಬೇಡುತ್ತವೆ. ಮಾತ್ರವಲ್ಲ, ವಿಮಾನದಲ್ಲಿ, ಟ್ರೇನ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಇದನ್ನು ಮಾಡಲೂ ಸಾಧ್ಯವಿಲ್ಲ. ಆದರೆ ಮೌತ್‌ವಾಷ್‌ ಬಳಕೆಗೆ ಅಂಥ ಯಾವುದೇ ಅಡೆ-ತಡೆಗಳಿಲ್ಲ; ಇದರ ಬಳಕೆ ಅತಿ ಸುಲಭ.

ಹೆಚ್ಚುವರಿ ರಕ್ಷಣೆ

ಫ್ಲೂರೈಡ್‌ ಹೊಂದಿರುವ ಮೌತ್‌ವಾಷ್‌ಗಳು ಬಾಯಿಯ ಆರೋಗ್ಯದ ವಿಚಾರದಲ್ಲಿ ಹೆಚ್ಚುವರಿ ರಕ್ಷಣೆಯನ್ನು ಒದಗಿಸುತ್ತವೆ. ದಂತಗಳ ಎನಾಮಲ್‌ ರಕ್ಷಣೆ ಮಾಡಿ, ಒಡಸುಗಳನ್ನು ಸುರಕ್ಷಿತವಾಗಿ ಇರಿಸಿ, ಹಲ್ಲುಗಳ ಬೇರನ್ನು ಭದ್ರ ಮಾಡುತ್ತವೆ. ಎಲ್ಲಕ್ಕಿಂತ ಮುಖ್ಯವಾಗಿ, ಹಲ್ಲುಗಳು ಹುಳುಕಾಗಿ, ಕುಳಿಯಾಗದಂತೆ ರಕ್ಷಣೆ ನೀಡುತ್ತವೆ. ಒಟ್ಟಾರೆಯಾಗಿ ಬಾಯಿಯ ಆರೋಗ್ಯಕ್ಕೆ ಇದೊಂದು ಒಳ್ಳೆಯ ಆಯ್ಕೆ.

Woman with mouthwash

ಮಿತಿಗಳಿಲ್ಲವೇ?

ಹಾಗೆಂದು ಮೌತ್‌ವಾಷ್‌ ಬಳಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲವೇ? ಅದನ್ನು ಬಳಸಿದಾಗ ಆಗುವುದೆಲ್ಲ ಒಳ್ಳೆಯದು ಎಂದು ತೀರ್ಮಾನಿಸಲು ಸಾಧ್ಯವೇ? ಎಂದು ಕೇಳಿದರೆ, ಹಾಗೇನಿಲ್ಲ. ಅದರಲ್ಲೂ ಸಮಸ್ಯೆಗಳು ಇಲ್ಲದಿಲ್ಲ. ಬಾಯಿಯ ಸರ್ವರೋಗಗಳಿಗೆ ಇದೊಂದೇ ಮದ್ದು ಎಂದು ಖಂಡಿತಕ್ಕೂ ಭಾವಿಸುವಂತಿಲ್ಲ. ಹಾಗಾದರೆ ಮೌತ್‌ವಾಷ್‌ ಬಳಸುವುದರಲ್ಲಿ ಇರುವಂಥ ಸಮಸ್ಯೆಗಳೇನು? ಯಾವುದರ ಬಗ್ಗೆ ಗಮನ ನೀಡಬೇಕು ಇದನ್ನು ಬಳಸುವಾಗ?

ಆಲ್ಕೋಹಾಲ್‌ ಕಿರಿಕಿರಿ

ಬಹಳಷ್ಟು ಮೌತ್‌ವಾಷ್‌ಗಳು ಆಲ್ಕೋಹಾಲ್‌ ಅಂಶವನ್ನು ಹೊಂದಿರುತ್ತವೆ. ಇದು ಬಾಯಿ ಒಣಗಿದಂತೆ ಮಾಡಿ, ಕಿರಿಕಿರಿ ಉಂಟುಮಾಡಬಹುದು. ದೀರ್ಘಕಾಲ ಇಂಥ ಮೌತ್‌ವಾಷ್‌ ಬಳಸುವುದರಿಂದ, ಈ ಸಮಸ್ಯೆಗಳು ಹೆಚ್ಚುತ್ತವೆ. ಹಾಗಾಗಿ ಸೂಕ್ಷ್ಮ ಒಸಡುಗಳು ಇರುವವರಿಗೆ ಮತ್ತು ಗರ್ಭಿಣಿಯರಿಗೆ ಆಲ್ಕೋಹಾಲ್‌ ಇಲ್ಲದಂಥ ಮೌತ್‌ವಾಷ್‌ ಬಳಕೆಯನ್ನು ವೈದ್ಯರು ಶಿಫಾರಸು ಮಾಡುತ್ತಾರೆ.

Female with mouthwash

ಸಮಸ್ಯೆ ತಿಳಿಯದು

ಬಾಯಿಯ ದುರ್ಗಂಧದ ಸಮಸ್ಯೆಗಳನ್ನು ಮೌತ್‌ವಾಷ್‌ಗಳು ತಡೆಯುವುದು ಹೌದಾದರೂ ಅದು ತಾತ್ಕಾಲಿಕ. ಬಾಯಿಯ ದುರ್ಗಂಧಕ್ಕೆ ಮೂಲ ಕಾರಣವೇನು ಎಂಬುದನ್ನು ಹುಡುಕಿ, ಅದನ್ನು ಪರಿಹರಿಸಿಕೊಳ್ಳುವುದು ಮುಖ್ಯ. ಹಲ್ಲುಗಳು ಹುಳುಕಾಗಿವೆಯೇ ಅಥವಾ ಜೀರ್ಣಾಂಗಗಳ ಸಮಸ್ಯೆಯಿಂದ ಹೀಗಾಗುತ್ತಿದೆಯೇ- ಅಂತೂ ಕಾರಣವೇನು ಎಂಬುದನ್ನು ಪತ್ತೆ ಮಾಡುವುದು ಅಗತ್ಯ. ಹಾಗಾಗಿ ಸಮಸ್ಯೆಗಳನ್ನು ಮೌತ್‌ವಾಷ್‌ ತಾತ್ಕಾಲಿಕವಾಗಿ ಮಾತ್ರವೇ ನಿವಾರಣೆ ಮಾಡಬಲ್ಲದು.

ಇದನ್ನೂ ಓದಿ: Mint Leaf Water: ಪುದಿನ ಎಲೆಗಳ ನೀರನ್ನು ನಿತ್ಯವೂ ಕುಡಿಯಿರಿ, ಈ ಲಾಭಗಳನ್ನು ಪಡೆಯಿರಿ!

ಬಿಡುವಂತಿಲ್ಲ

ಮೌತ್‌ವಾಷ್‌ಗಳ ಬಳಕೆಯ ನೆವದಿಂದ ನಿತ್ಯದ ಸ್ವಚ್ಛತೆಯ ಅಭ್ಯಾಸಗಳನ್ನು ಬಿಡುವಂತಿಲ್ಲ. ಅಂದರೆ ನಿಯಮಿತವಾಗಿ ಬ್ರಷ್‌ ಮಾಡುವುದು, ಫ್ಲೋಸ್‌ ಮಾಡುವುದು, ಊಟ-ತಿಂಡಿಯ ನಂತರ ಬಾಯಿಗೆ ನೀರು ಹಾಕಿ ಮುಕ್ಕಳಿಸುವುದು- ಇವೆಲ್ಲ ಅಗತ್ಯ ಅಭ್ಯಾಸಗಳು. ಎಂದೋ ಪ್ರಯಾಣದ ಸಂದರ್ಭದಲ್ಲಿ ಬ್ರಷ್‌ ಮಾಡುವುದಕ್ಕೆ ಅನುಕೂಲವಿಲ್ಲ ಎನ್ನುವಾಗ ಮಾತ್ರವೇ ಮೌತ್‌ವಾಷ್‌ ಬಳಕೆಯನ್ನು ಪರ್ಯಾಯ ಆಗಿಸಿಕೊಳ್ಳಬಹುದೇ ಹೊರತು, ಸದಾ ಅಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Health Tips Kannada: ನೆನಪಿಡಿ, ನಾಲಿಗೆ ಬಯಸುವ ಆಹಾರಗಳನ್ನೆಲ್ಲ ನಿಮ್ಮ ಮಿದುಳು ಬಯಸದು!

Health Tips Kannada: ಆಧುನಿಕ ಜೀವನಶೈಲಿಯೂ ಒಂದಿಲ್ಲೊಂದು ಬಗೆಯ ತಿನಿಸುಗಳನ್ನು ವಾರಕ್ಕೆರಡು ಬಾರಿಯಾದರೂ ತಿನ್ನುವಂತೆ ಮಾಡುತ್ತದೆ. ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ತಿಳಿದಿದ್ದರೂ ಇವನ್ನು ನೋಡಿದಾಗ, ನೆನೆಸಿಕೊಂಡಾಗ ಬಾಯಲ್ಲಿ ನೀರೂರುವಂತೆ ಮಾಡುತ್ತವೆ. ಈ ಎಲ್ಲ ಆಹಾರಗಳು ನಮಗೆ ಆಯಾ ಕ್ಷಣಕ್ಕೆ ಸಂತೋಷವನ್ನು ನೀಡಬಲ್ಲವಾದರೂ, ನಿಜಕ್ಕೂ ನಮ್ಮ ಮಿದುಳಿಗೆ ಸಂತೋಷ ನೀಡಬಲ್ಲವೇ? ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Health Tips Kannada
Koo

ಬಗೆಬಗೆಯ (Health Tips Kannada) ಐಸ್‌ಕ್ರೀಂ, ಚಾಕೋಲೇಟ್‌, ಬ್ರೌನಿ ಡೋನಟ್‌ಗಳು, ಕೇಕ್‌-ಪೇಸ್ಟ್ರಿಗಳು, ಪಿಜ್ಜಾ ಬರ್ಗರ್‌ಗಳು ಬಾಯಲ್ಲಿ ನೀರೂರಿಸುವ ತಿನಿಸುಗಳೇ ಎಂಬುದರಲ್ಲಿ ಎರಡು ಮಾತಿಲ್ಲ. ಇವೆಲ್ಲ ನಮಗಿಷ್ಟವಿಲ್ಲ ಎಂದು ಹೇಳುವ ಮಂದಿ ಸಿಗುವುದು ಬಹಳ ಕಷ್ಟ. ಪುಟಾಣಿ ಮಕ್ಕಳಿಂದ ಹಿಡಿದು, ಮುದುಕರವರೆಗೆ ಎಲ್ಲರೂ ಇಂತಹ ಆಹಾರದ ಹೆಸರು ಕೇಳುತ್ತಲೇ ಬಾಯಿ ಚಪ್ಪರಿಸುವವರೇ. ಗೆಳೆಯರೆಲ್ಲ ಜೊತೆ ಸೇರಿದಾಗ, ಯಾಕೋ ಬೇಸರವೆನಿಸಿದಾಗ, ಬೇಸಿಗೆಯ ಬಿಸಿಲಿಗೆ, ಮಳೆಗಾಲದ ಚಳಿಗೆ ಅಥವಾ ʻಯಾರು ಅಡುಗೆ ಮಾಡುತ್ತಾರೆʼ ಎಂದೆನಿಸುವ ಉದಾಸೀನದ ಸಂಜೆಗಳಲ್ಲಿ ಈ ಎಲ್ಲ ತಿನಿಸುಗಳೂ ನಮ್ಮನ್ನು ತಮ್ಮ ಬಳಿಗೆ ಕರೆಯುತ್ತವೆ. ಆಧುನಿಕ ಜೀವನಶೈಲಿಯೂ ಕೂಡಾ ಇಂತಹ ಒಂದಿಲ್ಲೊಂದು ಬಗೆಯ ತಿನಿಸುಗಳನ್ನು ವಾರಕ್ಕೆರಡು ಬಾರಿಯಾದರೂ ತಿನ್ನುವಂತೆ ಮಾಡುತ್ತವೆ. ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ತಿಳಿದಿದ್ದರೂ ಇವನ್ನು ನೋಡಿದಾಗ,, ನೆನೆಸಿಕೊಂಡಾಗ ಬಾಯಲ್ಲಿ ನೀರೂರುವಂತೆ ಮಾಡುತ್ತವೆ. ಈ ಎಲ್ಲ ಆಹಾರಗಳು ನಮಗೆ ಆಯಾ ಕ್ಷಣಕ್ಕೆ ಸಂತೋಷವನ್ನು ನೀಡಬಲ್ಲವಾದರೂ, ನಿಜಕ್ಕೂ ನಮ್ಮ ಮಿದುಳಿಗೆ ಸಂತೋಷ ನೀಡಬಲ್ಲವೇ?

Health Tips Kannada

ಖಿನ್ನತೆಗೆ ದೂಡಬಹುದು:

ಖಂಡಿತಾ ಇಲ್ಲ. ಇವಾವುವೂ ನಿಮ್ಮ ಮಿದುಳಿಗೆ ಸಂತೋಷ ನೀಡುವ ಆಹಾರಗಳಲ್ಲ. ಬದಲಾಗಿ ನಿಮ್ಮ ದುಃಖವನ್ನು, ಬೇಸರವನ್ನು, ಏಕತಾನತೆಯ ಭಾವವನ್ನು ಇನ್ನಷ್ಟು ಹೆಚ್ಚು ಮಾಡುತ್ತದೆ. ಹೌದು. ಆ ಕ್ಷಣದಲ್ಲಿ, ಸಂತೋಷ ಸಿಕ್ಕರೂ, ಖುಷಿಯೆನಿಸದರೂ, ಇಂತಹ ಆಹಾರಗಳಿಗೆ ನಮ್ಮನ್ನು ಬೇಸರಕ್ಕೆ ತಳ್ಳುವ ಗುಣವಿದೆ. ಇನ್ನಷ್ಟು ಮತ್ತಷ್ಟು ಇಂತಹ ಆಹಾರವನ್ನು ಬಯಸುವ ನಮ್ಮ ಮನಸ್ಸು ನಮ್ಮನ್ನು ಮತ್ತಷ್ಟು ಖಿನ್ನತೆಗೆ ದೂಡುತ್ತದೆ.

ಒಂದು ಅಧ್ಯಯನದ ಪ್ರಕಾರ, ಇಂತಹ ಆಹಾರಗಳನ್ನು ಅಥವಾ, ಪೋಷಕಾಂಶಗಳ ಕೊರತೆಯಿರುವ ಆಹಾರವನ್ನೇ ತಿಂದ ಮಂದಿಯ ಮಿದುಳಿನ ಆರೋಗ್ಯ ದಿನೇದಿನೇ ಹದಗೆಟ್ಟಿವೆ. ಅಷ್ಟೇ ಅಲ್ಲ, ಕಾಲಕ್ರಮೇಣ ಇಂತಹ ಆಹಾರ ತಿಂದವರು ಬಹುಬೇಗನೆ ಖಿನ್ನತೆ ಹಾಗೂ ಮಾನಸಿಕ ಒತ್ತಡದಂತಹ ಸಮಸ್ಯೆಗಳಿಗೆ ಒಳಗಾಗಿರುವುದು ಅದ್ಯಯನಗಳಿಂದ ತಿಳಿದುಬಂದಿದೆ.

ನಮಗೆ ಖುಷಿಯೆನಿಸುವ ಆಹಾರ ನಮ್ಮ ಮಿದುಳಿಗೆ ಖುಷಿಕೊಡಬೇಕೆಂದೇನಿಲ್ಲ. ಮಿದುಳಿಗೆ ಖುಷಿ ಕೊಡುವ ಆಹಾರಗಳೇ ಬೇರೆ. ತಾಜಾ ಹಣ್ಣುಗಳು ಹಾಗೂ ತರಕಾರಿಗಳು, ಬೇಳೆ ಕಾಳುಗಳು, ಹಿತಮಿತವಾಗಿ ಎಣ್ಣೆ (ಒಳ್ಳೆಯ ಎಣ್ಣೆ), ಮೊಳಕೆ ಕಾಳುಗಳು, ಮೀನು, ಒಣ ಬೀಜಗಳು, ಹಾಲು ಹಾಗೂ ಹಾಲಿನ ಉತ್ಪನ್ನಗಳು, ಮೊಟ್ಟೆ, ಕೋಳಿ ಇತ್ಯಾದಿ ನಮ್ಮ ಮಿದುಳನ್ನೂ ಆರೋಗ್ಯವಾಗಿ ಖಷಿಯಾಗಿ ಇಡುವಂತಹ ಆಹಾರಗಳು ಎಂದು ಅದ್ಯಯನ ಹೇಳುತ್ತದೆ.

Health Tips Kannada

ಮಿದುಳಿನ ಮೇಲೆ ಪರಿಣಾಮ:

ಈ ಎಲ್ಲ ಆಹಾರಗಳೂ ನಮ್ಮ ಮಿದುಳನ್ನು ಇದ್ದಕ್ಕಿದ್ದಂತೆ ಉಲ್ಲಾಸದಾಯಕವನ್ನಾಗಿ ಮಾಡಲಾಗದಿದ್ದರೂ, ಇವು ದೀರ್ಘಕಾಲಿಕವಾಗಿ ಮಿದುಳಿನ ಮೇಲೆ ಉತ್ತಮ ಪರಿಣಾಮ ಬೀರುವ ಸಾಮರ್ಥ್ಯ ಉಳ್ಳವಾಗಿವೆ. ಸಂಸ್ಕರಿಸಿದ ಆಹಾರಗಳು ಹಾಗೂ ಫಟಾಫಟ್‌ ಆಧುನಿಕ ತಿನಿಸುಗಳು ನಮ್ಮನ್ನು ದಿಢೀರ್‌ ಸೆಳೆವ ಹಾಗೂ ಉಲ್ಲಾಸದಾಯಕವನ್ನಾಗಿ ಮಾಡುವ ಗೂಣ ಹೊಂದಿದ್ದರೂ ನಮ್ಮ ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವಂತೆಯೇ ಮಿದುಳಿನ ಮೇಲೆಯೂ ಕೆಟ್ಟ ಪರಿಣಾಮ ಬೀರಬಲ್ಲವು.

ಇದನ್ನೂ ಓದಿ:Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

ಮಾನಸಿಕವಾಗಿ ಖಿನ್ನತೆ ಹಾಗೂ ಇನ್ನಿತರ ಸಮಸ್ಯೆಗಳಿಂದ ಬಳಲುವ ಮಂದಿಯ ಆಹಾರಕ್ರಮ ಗಮನಿಸಿದರೂ ಇದಕ್ಕೆ ಪುಷ್ಟಿ ದೊರೆಯುತ್ತದೆ. ನಿಮ್ಮ ನಾಲಿಗೆ ಬಯಸುವ ಆಹಾರಗಳನ್ನು ನಿಮ್ಮ ಮಿದುಳು ಬಯಸದು ಎಂಬುದನ್ನು ನೆನಪಿನಲ್ಲಿಡಿ. ಪ್ಯಾಕೇಜ್ಡ್‌ ಸ್ನ್ಯಾಕ್‌ಗಳು, ಆಲ್ಕೋಹಾಲ್‌, ಸೋಡಾ ಹಾಗೂ ಮಾರುಕಟ್ಟೆಯ ಇತರ ಪ್ಯಾಕೇಜ್ಡ್‌ ಡ್ರಿಂಕ್‌ಗಳು, ಪ್ರೆಂಚ್‌ ಫ್ರೈಗಳು, ಡೋನಟ್‌, ವೈಟ್‌ ಬ್ರೆಡ್‌, ಸಂಸ್ಕರಿಸಿದ ಮಾಂಸ, ಬೆಣ್ಣೆ ಹಾಗೂ ಫುಲ್‌ ಕೊಬ್ಬಿರುವ ಚೀಸ್‌, ಕೆಚಪ್‌, ಸಿರಪ್‌, ಡಿಪ್‌ ಹಾಗೂ ಡ್ರೆಸ್ಸಿಂಗ್‌ಗಳು ಎಲ್ಲವೂ ಮಿದುಳಿಗೆ ನಿಜಕ್ಕೂ ಖುಷಿ ಕೊಡದ ಆಹಾರಗಳು ಎಂಬುದನ್ನು ನೆನಪಿಡಿ.

Continue Reading

Latest

International Yoga Day 2024: ಕುತ್ತಿಗೆ ನೋವಿನ ನಿವಾರಣೆಗೆ ಯಾವ ಆಸನಗಳು ಸೂಕ್ತ?

International Yoga Day 2024: ನಿಯಮಿತವಾದ ಯೋಗಾಭ್ಯಾಸದಿಂದ ಶರೀರವನ್ನು ಕಾಡುವ ಹಲವು ಬಗೆಯ ನೋವುಗಳನ್ನು ಕಡಿಮೆ ಮಾಡಿಕೊಳ್ಳಬಹುದು. ಈ ನಿಟ್ಟಿನಲ್ಲಿ, ಬಾಧಿಸುವ ಕುತ್ತಿಗೆ ನೋವನ್ನು ಕಡಿಮೆ ಮಾಡಲು ಉಪಯುಕ್ತವಾದ ಆಸನಗಳನ್ನು ಇಲ್ಲಿ ತಿಳಿಸಲಾಗಿದೆ. ಆದರೆ ಇದಕ್ಕೆಲ್ಲ ಸ್ವಯಂ ವೈದ್ಯ ಮಾಡದೆಯೆ, ಸರಿಯಾದ ಮಾರ್ಗದರ್ಶನದ ಜೊತೆಗೆ ಇದನ್ನು ಅಭ್ಯಾಸ ಮಾಡುವುದು ಅಗತ್ಯ.

VISTARANEWS.COM


on

International Yoga Day 2024
Koo

ದೇಹ ಮತ್ತು ಮನಸ್ಸುಗಳ ಮೇಲಿನ ಮನಸ್ಸಿನ ಒತ್ತಡ ನಿವಾರಣೆಗೆ ಯೋಗ (International Yoga Day 2024) ಬಹು ಉಪಯುಕ್ತ. ಸರಿಯಾದ ಉಸಿರಾಟ ಕ್ರಮದೊಂದಿಗೆ ಸೂಕ್ತ ಮಾರ್ಗದರ್ಶನದ ಜೊತೆಗೆ ಇದನ್ನು ನಿಯಮಿತವಾಗಿ ಅಭ್ಯಾಸ ಮಾಡಿದರೆ ಮೈ-ಮನಗಳ ಸಮನ್ವಯವನ್ನು ಸಾಧಿಸಬಹುದು. ಜೊತೆಗೆ, ಹಲವಾರು ನೋವುಗಳಿಗೆ, ಶರೀರದ ತೊಂದರೆಗಳಿಗೆ ಉಪಶಮನವನ್ನೂ ಪಡೆಯಬಹುದು. ಈ ನಿಟ್ಟಿನಲ್ಲಿ, ಕುತ್ತಿಗೆ ನೋವಿನ ಶಮನಕ್ಕೆ ಉಪಯುಕ್ತವಾದ ಆಸನಗಳನ್ನು ಇಲ್ಲಿ ನೀಡಲಾಗಿದೆ. ಆದರೆ ಇವುಗಳನ್ನೆಲ್ಲ ಅಭ್ಯಾಸ ಮಾಡುವ ಮುನ್ನ ವೈದ್ಯರ ಸಲಹೆಯನ್ನು ಪಡೆಯುವುದು ಅಗತ್ಯ. ಜೊತೆಗೆ ಅನುಭವಿಯಾದ ಯೋಗ ತರಬೇತುದಾರರ ಮಾರ್ಗದರ್ಶನವೂ ಅಗತ್ಯ.

ಕುತ್ತಿಗೆ ನೋವು:

ಬೆನ್ನು ಹುರಿಯ ಸರ್ವೈಕಲ್‌ ಭಾಗದಲ್ಲಿ ನೋವು ಕಾಣಿಸಿಕೊಳ್ಳುವುದು ಇತ್ತೀಚಿನ ವರ್ಷಗಳ ಬಹಳಷ್ಟು ಜನರು ಅನುಭವಿಸುವ ತೊಂದರೆ. ಜೀವನಶೈಲಿಯ ದೋಷಗಳು, ಸ್ಕ್ರೀನ್‌ ಸಮಯ ಅತಿಯಾಗುವುದು, ಜೀರ್ಣಾಂಗದ ತೊಂದರೆಗಳು, ಗಾಯ, ವಯಸ್ಸು ಮುಂತಾದ ಹಲವು ಕಾರಣಗಳು ಇದಕ್ಕಿರಬಹುದು. ತಲೆಯ ಹಿಂಭಾಗದಲ್ಲಿ ನೋವು, ಕುತ್ತಿಗೆ, ಭುಜ, ಮೊಣಕೈಗಳಲ್ಲಿ ನೋವು, ತಲೆಸುತ್ತು ಮುಂತಾದ ಹಲವು ಲಕ್ಷಣಗಳು. ಈ ನೋವು ಕಡಿಮೆ ಮಾಡುವುದಕ್ಕೆ ಉಪಯುಕ್ತ ಎನ್ನಬಹುದಾದ ಆಸನಗಳಿವು.

International Yoga Day 2024

ಮಕರಾಸನ:

ಕುತ್ತಿಗೆಯಿಂದ ಹಿಡಿದು ಬೆನ್ನಿನ ಕೆಳಭಾಗದವರೆಗಿನ ನೋವು ಶಮನಕ್ಕೆ ಇದು ಪರಿಣಾಮಕಾರಿ. ಮೊದಲಿಗೆ, ಹೊಟ್ಟೆ ಅಡಿ ಮಾಡಿ, ಕಾಲುಚಾಚಿ ನೇರ ಮಲಗಿ. ಕೈಗಳೆರಡನ್ನೂ ಮುಖದ ಅಡಿಭಾಗಕ್ಕೆ ಬರುವಂತೆ ಮಡಿಸಿಟ್ಟುಕೊಳ್ಳಿ. ಕೈಗಳ ಮೇಲೆ ಗಲ್ಲ ಇರಿಸಿ, ಅದಾಗದಿದ್ದರೆ ಹಣೆಯನ್ನಾದರೂ ಇರಿಸಬಹುದು. ಹಲವು ನಿಮಿಷಗಳವರೆಗೆ ಹೀಗೆ ಮಲಗಿ, ದೇಹವನ್ನೆಲ್ಲ ಸಡಿಲ ಬಿಡಿ.

International Yoga Day 2024

ಸೇತುಬಂಧಾಸನ:

ದೇಹಕ್ಕೆ ಬಲ ನೀಡುವುದು ಮಾತ್ರವಲ್ಲದೆ, ಶರೀರದ ಸಮನ್ವಯವನ್ನೂ ಈ ಆಸನ ಹೆಚ್ಚಿಸುತ್ತದೆ. ಸಾಮಾನ್ಯವಾಗಿ ಯಾವುದೇ ‌ʻಬ್ರಿಜ್ ಪೋಸ್ʼ ಎಂದು ಕರೆಸಿಕೊಳ್ಳುವಂಥ ಆಸನಗಳು ಕಾಲಿನಿಂದ ಹಿಡಿದು ಕುತ್ತಿಗೆಯವರೆಗಿನ ನಾನಾ ಭಾಗಗಳ ಬಲವನ್ನು ಹೆಚ್ಚಿಸುತ್ತವೆ. ಎರಡೂ ಪಾದಗಳನ್ನು ಊರಿ ನೆಲಕ್ಕೆ ಒತ್ತಿ, ಮುಂಡದ ಭಾಗವನ್ನು ಮೇಲಕ್ಕೆತ್ತುವ ಈ ಆಸನ ರಕ್ತಪರಿಚಲನೆಯನ್ನೂ ಸುಧಾರಿಸುತ್ತದೆ.

International Yoga Day 2024

ಭುಜಂಗಾಸನ:

ಬೆನ್ನುಹುರಿಯ ಬಲವರ್ಧನೆಗೆ ಅಗತ್ಯವಾದ ಆಸನವಿದು. ಬೆನ್ನುಹುರಿಯ ಅಕ್ಕಪಕ್ಕದ ಸ್ನಾಯುಗಳು ಸಹ ಇದರಿಂದ ಬಲಗೊಳ್ಳುತ್ತವೆ. ಜೊತೆಗೆ, ಸೊಂಟ, ಕಿಬ್ಬೊಟ್ಟೆ, ಎದೆ, ಭುಜ ಮತ್ತು ತೋಳುಗಳ ಸ್ನಾಯುಗಳ ಮೇಲೂ ಇದು ಕೆಲಸ ಮಾಡುತ್ತದೆ. ಹೆಡೆ ಎತ್ತಿದ ಹಾವಿನಂತೆ ಕಾಣುವ ಭಂಗಿಯಿದು. ಮೊದಲಿಗೆ ಮುಖ ಅಡಿ ಮಾಡಿ ಮಲಗಿ. ಹಸ್ತಗಳನ್ನು ಎದೆಯ ಪಕ್ಕದಲ್ಲಿ ಊರಿ, ಕಟಿಯಿಂದ ಮೇಲೆ ಭಾಗವನ್ನು ನಿಧಾನಕ್ಕೆ ಮೇಲೆತ್ತಿ ನಿಲ್ಲಿಸಿ.

International Yoga Day 2024

ಧನುರಾಸನ:

ಈ ಆಸನ ಮಾಡುವ ಲಾಭಗಳು ಬಹಳಷ್ಟಿವೆ. ಬೆನ್ನು ಮತ್ತು ಸೊಂಟದ ಬಲವರ್ಧನೆಗೆ ಇದು ಸಹಾಯಕ. ಇದಲ್ಲದೆ, ದೇಹದ ಚಯಾಪಚಯವನ್ನು ಹೆಚ್ಚಿಸಿ, ಹೊಟ್ಟೆ ಮತ್ತು ತೊಡೆಗಳು ಬೊಜ್ಜು ನಿವಾರಿಸಿ, ಜೀರ್ಣಾಂಗಗಳ ಆರೋಗ್ಯ ಸುಧಾರಿಸುತ್ತದೆ ಮತ್ತು ಮಲಬದ್ಧತೆಯನ್ನು ಶಮನ ಮಾಡುತ್ತದೆ. ಮುಟ್ಟಿನ ಹೊಟ್ಟೆ ನೋವಿನ ಉಪಶಮನಕ್ಕೂ ಇದು ಉಪಯುಕ್ತವಾಗಿದೆ. ಮೊದಲಿಗೆ, ಮುಖ ಅಡಿಯಾಗುವಂತೆ ಮಲಗಿ, ಕೈಕಾಲುಗಳನ್ನು ನೇರವಾಗಿ ಚಾಚಬೇಕು. ಕಾಲು ಮಡಿಸಿ, ಗಜ್ಜೆ ಹಾಕುವ ಭಾಗವನ್ನು ಕೈಗಳಿಂದ ಹಿಡಿಯಬೇಕು. ಕಾಲುಗಳನ್ನು ದೇಹದ ಅಗಲಕ್ಕಿಂತ ಹೆಚ್ಚು ಅಗಲ ಇರಿಸುವಂತಿಲ್ಲ. ಈಗ ಕೈಗಳಿಂದ ಕಾಲೆಳೆಯುತ್ತಾ, ಕಾಲುಗಳಿಂದ ಕೈ ಎಳೆಯುತ್ತಾ ಎರಡೂ ಕಾಲುಗಳನ್ನು ಮತ್ತು ಮುಖವನ್ನು ಮೇಲಕ್ಕೆತ್ತಬೇಕು. ನೋಡುವುದಕ್ಕೆ ಬಿಲ್ಲಿನಂತೆ ಬಾಗಿರುವಂತೆ ಕಾಣುತ್ತದೆ ದೇಹ.

ಇದನ್ನೂ ಓದಿ:Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

International Yoga Day 2024

ಗೋಮುಖಾಸನ:

ಎದೆ, ತೋಳು, ಭುಜ, ಕುತ್ತಿಗೆ, ಕಾಲುಗಳನ್ನು ಬಲಗೊಳಿಸುವ ಆಸನವಿದು. ಹೆಚ್ಚಿನ ವ್ಯಾಯಾಮವಿಲ್ಲದೆ ಜಡ ಬದುಕನ್ನು ನಡೆಸುತ್ತಿರುವವರಿಗೆ ಇದು ಹೆಚ್ಚು ಉಪಯುಕ್ತ. ಈ ಆಸನದಲ್ಲಿ ಬೆನ್ನು ಹುರಿ ಸರಿಯಾಗಿ ಹಿಗ್ಗಿ, ಅದರ ಮೇಲಿನ ಒತ್ತಡ ಕಡಿಮೆ ಆಗುತ್ತದೆ. ಬೆನ್ನು ನೇರವಾಗಿರಿಸಿಕೊಂಡು, ಕಾಲುಗಳೆರನ್ನು ಮುಂದೆ ಚಾಚಿ ಕುಳಿತುಕೊಳ್ಳಿ. ಮೊದಲಿಗೆ, ಬಲಗಾಲನ್ನು ಮಡಿಸಿ, ಬಲಪಾದ ಎಡಪೃಷ್ಠದ ಪಕ್ಕ ಬರುವಂತೆ ಇರಿಸಿ, ನಂತರ ಎಡಮಂಡಿಯನ್ನು ಬಲಮಂಡಿಯ ಮೇಲೆ ಬರುವಂತೆ ಮಡಿಸಿಡಿ. ಬಲಗೈ ಮೇಲೆತ್ತಿ, ಬೆನ್ನಿನ ಹಿಂದೆ ಮಡಿಸಿ, ಎಡಗೈಯನ್ನು ಕೆಳಗಿನಿಂದಲೇ ಮಡಿಸಿ, ಬಲಗೈ ಬೆರಳುಗಳನ್ನು ಹಿಡಿದುಕೊಳ್ಳಿ.

Continue Reading

ಬೆಂಗಳೂರು

MAHE Manipal: ಕೆಎಂಸಿಯಲ್ಲಿ 1 ದಿನದ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

MAHE Manipal: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ನ ಸಾಂಸ್ಥಿಕ ಸಂಪರ್ಕ ಕಚೇರಿಯಿಂದ ಬೆಂಗಳೂರು ನಗರದ ಕೆಎಂಸಿಯಲ್ಲಿ ಫಿಲಿಪ್ಸ್‌ ಎಂಜಿನಿಯರ್‌ಗಳಿಗಾಗಿ ಒಂದು ದಿನದ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ನಡೆಯಿತು.

VISTARANEWS.COM


on

MAHE Manipal 1 Day Treatment Capacity Development Training Program at KMC
Koo

ಬೆಂಗಳೂರು: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ನ ಸಾಂಸ್ಥಿಕ ಸಂಪರ್ಕ ಕಚೇರಿಯಿಂದ ನಗರದ ಕೆಎಂಸಿಯಲ್ಲಿ ಫಿಲಿಪ್ಸ್‌ ಎಂಜಿನಿಯರ್‌ಗಳಿಗಾಗಿ ಒಂದು ದಿನದ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು (MAHE Manipal) ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ನ ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹ-ಉಪಕುಲಪತಿ ಡಾ. ನಾರಾಯಣ ಸಭಾಹಿತ್‌ ಮಾತನಾಡಿ, ಸಾಮಾಜಿಕ ಸ್ವಾಸ್ಥ್ಯದ ಅವಶ್ಯಕತೆಯನ್ನು ಪೂರೈಸುವ ನಿಟ್ಟಿನಲ್ಲಿ ಆರೋಗ್ಯ ಆರೈಕೆ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತರುವಲ್ಲಿ ಪ್ರಸ್ತುತ ಕಾರ್ಯಕ್ರಮವು ಪ್ರಮುಖ ಹೆಜ್ಜೆಯಾಗಿದೆ ಎಂದು ತಿಳಿಸಿದರು.

ಎಂಜಿನಿಯರ್‌ಗಳನ್ನು ವೈದ್ಯಕೀಯ ಜ್ಞಾನದೊಂದಿಗೆ ಸಿದ್ಧಗೊಳಿಸುವುದರ ಅಗತ್ಯದ ಕುರಿತು ಮಾತನಾಡಿದರು.

ಇದನ್ನೂ ಓದಿ: Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

ಮಾಹೆಯ ತಾಂತ್ರಿಕ ಮತ್ತು ಯೋಜನಾ ವಿಭಾಗದ ಸಹ-ಉಪಕುಲಪತಿ ಡಾ. ಎನ್‌.ಎನ್‌. ಶರ್ಮಾ ಮಾತನಾಡಿ, ‘ಎರಡೂ ಜ್ಞಾನಶಿಸ್ತುಗಳ ಸಹಭಾಗಿತ್ವದಿಂದಾಗಿ ಕೇವಲ ತಾಂತ್ರಿಕ ಸುಧಾರಣೆಯಷ್ಟೇ ಅಲ್ಲ, ವೈದ್ಯಕೀಯ ಶುಶ್ರೂಷಾ ವಿಭಾಗದ ನವೀನ ಸಂಶೋಧನೆಗಳ ಪರಿಣಾಮವನ್ನು ಅರ್ಥಮಾಡಿಕೊಳ್ಳುವಲ್ಲಿಯೂ ಪರಿಣಾಮ ಬೀರಲಿದೆ. ಅಂತಿಮವಾಗಿ ರೋಗಿಗಳ ಶುಶ್ರೂಷೆಯಲ್ಲಿ ಸುಧಾರಣೆ ತರುವ ಜೀವಪರ ಧೋರಣೆಯೇ ಈ ಕಾರ್ಯಕ್ರಮದ ಮುಖ್ಯ ಆಶಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: GPF Interest: ಸರ್ಕಾರಿ ನೌಕರರೇ ಗಮನಿಸಿ; 5 ಲಕ್ಷ ಮೀರಿದ ಜಿಪಿಎಫ್‌ಗೆ ಬಡ್ಡಿ ಪಾವತಿಸಲು ಸರ್ಕಾರ ಆದೇಶ

ಬಳಿಕ ಮಾಹೆಯ ನಿಯೋಜಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಯೋಜನೆ ಮತ್ತು ಆರ್ಥಿಕ ವಿಭಾಗದ ನಿರ್ದೇಶಕ ಡಾ. ರವಿರಾಜ ಎನ್‌. ಎಸ್‌. ಮಾತನಾಡಿ, ಕೃತಕ ಬುದ್ದಿಮತ್ತೆ (ಆರ್ಟಿಫಿಶಲ್‌ ಇಂಟಲಿಜೆನ್ಸ್‌) ನಿಯಂತ್ರಿತ ಶುಶ್ರೂಷಾ ವಿಧಾನ, ವೈಯಕ್ತಿಕ ಶುಶ್ರೂಷೆ, ದೂರನಿಯಂತ್ರಿತವಾಗಿ ರೋಗಿಯ ಚಿಕಿತ್ಸೆ ಮುಂತಾದ ಅತ್ಯಾಧುನಿಕ ಸೌಲಭ್ಯಗಳ ನಿರ್ವಹಣೆಯಲ್ಲಿ ತಂತ್ರಜ್ಞಾನ ಮತ್ತು ವೈದ್ಯಕೀಯ ವ್ಯವಸ್ಥೆ ಜತೆಯಾಗಿ ಕಾರ್ಯನಿರ್ವಹಿಸಬೇಕಾಗಿರುವುದರ ಅಗತ್ಯವನ್ನು ಒತ್ತಿಹೇಳಿದರು.

ತರಬೇತಿಯ ವಿಶೇಷತೆ

ತರಬೇತಿ ಕಾರ್ಯಕ್ರಮದಲ್ಲಿ ವಿಶೇಷವಾಗಿ ಹೃದಯದಲ್ಲಿ ವಿದ್ಯುತ್‌ಕ್ರಿಯೆಯನ್ನು ಪರಿಶೀಲಿಸುವ ಮತ್ತು ಕಾಯಿಲೆಯನ್ನು ನಿರ್ಧರಿಸುವ ವಿಚಾರದ ಬಗ್ಗೆ ಕೇಂದ್ರೀಕೃತವಾಗಿದ್ದು, ಇದು ತಂತ್ರಜ್ಞಾನ ಮತ್ತು ಆರೋಗ್ಯ ಆರೈಕೆಯ ವಿಭಾಗಗಳ ನಡುವಿನ ಅಂತರವನ್ನು ಕಡಿಮೆಗೊಳಿಸುವ ಮತ್ತು ಭಾಗಿಗಳಾದವರಿಗೆ ಸಮಗ್ರ ಪ್ರಾಯೋಗಿಕ ಅನುಭವವನ್ನು ನೀಡುವ ಕಾರ್ಯಕ್ರಮವಾಗಿತ್ತು.

ಕೆಎಂಸಿಯ ನುರಿತ ಬೋಧಕರು ತರಗತಿಗಳನ್ನು ನಡೆಸಿಕೊಟ್ಟರಲ್ಲದೆ, ಹೃದಯ ಚಿಕಿತ್ಸೆಗೆ ಸಂಬಂಧಿಸಿದ ಉಪಕರಣಗಳ ಕಾರ್ಯ ವೈಖರಿ, ಅವುಗಳ ಅನ್ವಯಗಳು, ಮತ್ತು ರೋಗಿಗಳ ಚಿಕಿತ್ಸೆಯ ಸವಾಲುಗಳ ಬಗ್ಗೆ ತಿಳಿಸಿಕೊಡಲಾಯಿತು. ಕಾರ್ಯಕ್ರಮದಲ್ಲಿ ವಿಷಯಗಳ ಅರಿವಿನ ಜತೆಗೆ ಪ್ರಾಯೋಗಿಕ ಅನುಭವಗಳನ್ನು ನೀಡುವ ಕುರಿತು ಒತ್ತು ನೀಡಲಾಯಿತು.

ಇದನ್ನೂ ಓದಿ: Gold Rate Today: ಆಭರಣ ಖರೀದಿಸುವವರಿಗೆ ರಿಲೀಫ್‌; ಇಳಿದ ಚಿನ್ನದ ದರ

ತರಬೇತಿಯಲ್ಲಿ ಬೆಂಗಳೂರಿನ ಫಿಲಿಪ್ಸ್‌ ಇನ್ನೋವೇಶನ್‌ ಸೆಂಟರ್‌ನ ಆ್ಯಂಬುಲೇಟರಿ ಮಾನಿಟರಿಂಗ್‌ ಮತ್ತು ಡಯಾಗ್ನಿಸ್ಟಿಕ್ಸ್‌ ವಿಭಾಗದ 14 ಜನ ಎಂಜಿನಿಯರ್‌ಗಳು ಪಾಲ್ಗೊಂಡಿದ್ದರು.

Continue Reading

ಆರೋಗ್ಯ

Flesh-Eating Bacteria: ಆತಂಕ ಮೂಡಿಸಿದ ಮಾಂಸ ಭಕ್ಷಕ ಬ್ಯಾಕ್ಟೀರಿಯಾ; ಸೋಂಕು ತಗುಲಿದ 48 ಗಂಟೆಯಲ್ಲೇ ಸಾವು!

Flesh-Eating Bacteria: ಅಪಾಯಕಾರಿ ಕಾಯಿಲೆಯೊಂದು ಜಪಾನ್‌ನಲ್ಲಿ ಪತ್ತೆಯಾಗಿದ್ದು, ಸೋಂಕು ತಗುಲಿದ 48 ಗಂಟೆಯಲ್ಲೇ ಮಾನವನ ಸಾವಿಗೆ ಕಾರಣವಾಗುತ್ತದೆ. ಈ ಸೋಂಕಿಗೆ ಮಾಂಸ-ಭಕ್ಷಕ ಬ್ಯಾಕ್ಟೀರಿಯಾ ಕಾರಣವಾಗಿದ್ದು, ಜಪಾನ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಈ ಅಪರೂಪದ ಕಾಯಿಲೆಯನ್ನು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ.

VISTARANEWS.COM


on

Flesh-Eating Bacteria
Koo

ಟೋಕಿಯೊ: ವಿಶ್ವವನ್ನೇ ನಡುಗಿಸಿದ ಕೋವಿಡ್‌ ಹೊಡೆತದಿಂದ ಜಗತ್ತು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಈ ಮಧ್ಯೆ ಮತ್ತೊಂದು ಅಪಾಯಕಾರಿ ಕಾಯಿಲೆ ಜಪಾನ್‌ನಲ್ಲಿ ಪತ್ತೆಯಾಗಿದ್ದು, ಸೋಂಕು ತಗುಲಿದ 48 ಗಂಟೆಯಲ್ಲೇ ಮಾನವನ ಸಾವಿಗೆ ಕಾರಣವಾಗುತ್ತದೆ. ಈ ಸೋಂಕಿಗೆ ಮಾಂಸ ಭಕ್ಷಕ ಬ್ಯಾಕ್ಟೀರಿಯಾ (Flesh-Eating Bacteria)ಕಾರಣವಾಗಿದ್ದು, ಜಪಾನ್‌ನಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಈ ಅಪರೂಪದ ಕಾಯಿಲೆಯನ್ನು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ (Streptococcal Toxic Shock Syndrome-STSS) ಎಂದು ಕರೆಯಲಾಗುತ್ತದೆ.

ಜಪಾನ್‌ನಲ್ಲಿ ಈಗಾಗಲೇ ಈ ಮಾಂಸ ಭಕ್ಷಕ ಬ್ಯಾಕ್ಟೀರಿಯಾದಿಂದ ಕಾಣಿಸಿಕೊಳ್ಳುವ ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್ ಪ್ರಕರಣ 977ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ಒಟ್ಟು 941 ಪ್ರಕರಣಗಳು ವರದಿಯಾಗಿದ್ದವು. ಈ ವರ್ಷದ ಅರ್ಧ ಭಾಗದಲ್ಲಿಯೇ ಅದನ್ನೂ ಮೀರಿದ ಪ್ರಕರಣಗಳು ದಾಖಲಾಗಿದ್ದು ಆತಂಕ ಸೃಷ್ಟಿಸಿದೆ ಎಂದು ಮೂಲಗಳು ತಿಳಿಸಿವೆ.

“ಹೆಚ್ಚಿನ ಸಾವು ಸೋಂಕು ತಗುಲಿದ 48 ಗಂಟೆಗಳ ಒಳಗೆ ಸಂಭವಿಸುತ್ತವೆ. ಸೋಂಕು ಬಾಧಿತರ ಪಾದ ಬೆಳಿಗ್ಗೆ ಊದಿಕೊಂಡರೆ ಮಧ್ಯಾಹ್ನದ ವೇಳೆಗೆ ಊತ ಮೊಣಕಾಲಿನವರೆಗೆ ಹರಡುತ್ತದೆ ಮತ್ತು ಅವರು 48 ಗಂಟೆಗಳಲ್ಲಿ ಸಾಯುವ ಸಾಧ್ಯತೆ ಇದೆ” ಎಂದು ಟೋಕಿಯೊ ಮಹಿಳಾ ವೈದ್ಯಕೀಯ ವಿಶ್ವವಿದ್ಯಾಲಯದ ಸಾಂಕ್ರಾಮಿಕ ರೋಗಗಳ ಪ್ರಾಧ್ಯಾಪಕ ಕೆನ್ ಕಿಕುಚಿ ಆಘಾತಕಾರಿ ಮಾಹಿತಿ ಹಂಚಿಕೊಂಡಿದ್ದಾರೆ.

ಯಾವ ಬ್ಯಾಕ್ಟೀರಿಯಾ?

ಗ್ರೂಪ್ ಎ ಸ್ಟ್ರೆಪ್ಟೋಕಾಕಸ್ (ಜಿಎಎಸ್) ಬ್ಯಾಕ್ಟೀರಿಯಾ ಸಾಮಾನ್ಯವಾಗಿ ಸ್ಟ್ರೆಪ್ಟೋಕಾಕಸ್ ಪಿಯೋಜೆನೆಸ್ (Streptococcus Pyogenes) ಎಂದು ಕರೆಯಲ್ಪಡುತ್ತದೆ. ಇದು ವಿವಿಧ ರೀತಿಯ ಸೋಂಕುಗಳಿಗೆ ಕಾರಣವಾಗುತ್ತದೆ. ಗ್ರೂಪ್ ಎ ಸ್ಟ್ರೆಪ್ಟೋಕಾಕಸ್‌ನ ಕೆಲವು ತಳಿಗಳು ಗಂಟಲು ಅಥವಾ ಚರ್ಮದ ಸೋಂಕುಗಳಂತಹ ಸೌಮ್ಯ ಕಾಯಿಲೆಗಳಿಗೆ ಕಾರಣವಾಗಬಹುದು. ಜತೆಗೆ ನೆಕ್ರೋಟೈಸಿಂಗ್ ಫಾಸಿಟಿಸ್ ಅಥವಾ ಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನಂತಹ ಅಪಾಯಕಾರಿ ಕಾಯಿಲೆಗಳಂತಹ ಗಂಭೀರ ಸೋಂಕುಗಳೂ ಸಂಭವಿಸಬಹುದು. ಈ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆ ಅಗತ್ಯ.

ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನ ಲಕ್ಷಣ

ದೇಹದ ಭಾಗಗಳಲ್ಲಿ ನೋವು, ಊತ, ಜ್ವರ ಹಾಗೂ ಕಡಿಮೆ ರಕ್ತದೊತ್ತಡ ಮುಂತಾದವು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ನ ಲಕ್ಷಣಗಳು. ಇದು ಜೀವಕೋಶಗಳ ಸಾವು, ತೀವ್ರ ಜ್ವರ, ಉಸಿರಾಟದ ತೊಂದರೆ, ಅಂಗಾಂಗ ವೈಫಲ್ಯ ಹಾಗೂ ಸಾವಿಗೆ ಕೂಡ ಕಾರಣವಾಗಬಹುದು. ವಯಸ್ಕರು, ಮುಖ್ಯವಾಗಿ 50 ವರ್ಷ ದಾಟಿದವರಿಗೆ ಈ ಕಾಯಿಲೆ ಹೆಚ್ಚು ಅಪಾಯಕಾರಿ. ಇದರ ತಡೆಗೆ ಕೈಗಳನ್ನು ಸ್ವಚ್ಛವಾಗಿ ಇರಿಸಿಕೊಳ್ಳುವುದು ಬಹಳ ಮುಖ್ಯ. ಜತೆಗೆ ಯಾವುದೇ ತೆರೆದ ಗಾಯಗಳನ್ನು ನಿರ್ಲಕ್ಷಿಸಬಾರದು. ಮಾತ್ರವಲ್ಲ ಸೋಂಕಿತ ವ್ಯಕ್ತಿಗಳೊಂದಿಗೆ ನಿಕಟ ಸಂಪರ್ಕವನ್ನು ತಪ್ಪಿಸಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ.

ಜಪಾನ್ ಜತೆಗೆ ಯುರೋಪ್‌ನ ಐದು ದೇಶಗಳು ಸ್ಟ್ರೆಪ್ಟೋಕೊಕ್ಕಾಲ್ ಟಾಕ್ಸಿಕ್ ಶಾಕ್ ಸಿಂಡ್ರೋಮ್‌ ಪ್ರಕರಣಗಳ ಹೆಚ್ಚು ವರದಿಯಾಗುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಗೆ (WHO) ವರದಿ ಮಾಡಿದೆ. ಕೋವಿಡ್ -19 ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಸೋಂಕಿನ ಪ್ರಮಾಣ ಹೆಚ್ಚಿದೆ ಎಂದು ತಿಳಿಸಿದೆ. ಪ್ರಸ್ತುತ ಸೋಂಕಿನ ದರ ಗಮನಿಸಿದರೆ ಜಪಾನ್​ನಲ್ಲಿ ಈ ವರ್ಷ 2,500 ಪ್ರಕರಣಗಳ ದಾಖಲಾಗಬಹುದು ಎನ್ನುವ ಆತಂಕ ಮೂಡಿದೆ.

ಇದನ್ನೂ ಓದಿ: Health Tips: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

Continue Reading
Advertisement
Narendra Modi
ಪ್ರಮುಖ ಸುದ್ದಿ32 mins ago

Narendra Modi: ಅಮೆರಿಕ ಭದ್ರತಾ ಸಲಹೆಗಾರ-ನರೇಂದ್ರ ಮೋದಿ ಭೇಟಿ; ಯಾವೆಲ್ಲ ವಿಷಯ ಚರ್ಚೆ?

Actor Chikkanna
ಕರ್ನಾಟಕ2 hours ago

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Kalki 2898 AD Movie Bhairava Anthem Released
ಕರ್ನಾಟಕ2 hours ago

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Union Minister HD Kumaraswamy visit Shira
ತುಮಕೂರು2 hours ago

Shira News: ಶಿರಾಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೇಟಿ

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
ಬೆಳಗಾವಿ2 hours ago

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

District administration failed to prevent illegal activities in the district MLA Janardhana Reddy alleges
ಕರ್ನಾಟಕ2 hours ago

Koppala News: ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ; ಶಾಸಕ ಜನಾರ್ದನ ರೆಡ್ಡಿ ಆರೋಪ

Pushpa 2
ಸಿನಿಮಾ2 hours ago

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

HD Kumaraswamy
ಕರ್ನಾಟಕ3 hours ago

HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

Narendra Modi
ದೇಶ3 hours ago

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Health Tips Kannada
Latest3 hours ago

Health Tips Kannada: ನೆನಪಿಡಿ, ನಾಲಿಗೆ ಬಯಸುವ ಆಹಾರಗಳನ್ನೆಲ್ಲ ನಿಮ್ಮ ಮಿದುಳು ಬಯಸದು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು10 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು11 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌