National Mango Day: ಮಾವಿಗೊಂದು ದಿನವೇಕೆ?: ಸುಲಿದು ಸವಿದರೆ ಸಾಲದೇ! - Vistara News

ಆರೋಗ್ಯ

National Mango Day: ಮಾವಿಗೊಂದು ದಿನವೇಕೆ?: ಸುಲಿದು ಸವಿದರೆ ಸಾಲದೇ!

ಹೊಟ್ಟೆ ಸೇರುವ ಹಣ್ಣಿಗೆಂಥಾ ಇತಿಹಾಸ ಎನ್ನುವಂತಿಲ್ಲ. ಸುಮಾರು 5000 ವರ್ಷಗಳಿಂದ ಭಾರತದ ಜನಪದದ ಭಾಗವಾಗಿಯೇ ಇರುವಂಥ ಹಣ್ಣಿನ ಪ್ರವರವನ್ನು ಒಂದಿಷ್ಟಾದರೂ ತಿಳಿಯದಿದ್ದರೆ ಹೇಗೆ? ಮಾಂಗಿಫೆರಾ ಇಂಡಿಕಾ (Mangifera indica) ಎಂಬ ವೈಜ್ಞಾನಿಕ ಹೆಸರಿನ ಈ ಹಣ್ಣಿನ ಕೃಷಿ ಮೊದಲಿಗೆ ಪ್ರಾರಂಭವಾಗಿದ್ದು ಭಾರತದಲ್ಲೇ.

VISTARANEWS.COM


on

National Mango Day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಎಲ್ಲದಕ್ಕೂ ಒಂದೊಂದು ದಿನವುಂಟು ಎನ್ನುವಾಗ ಮಾವಿಗೇಕೆ ನೋವು ಎಂದು ಅದಕ್ಕೂ ಒಂದು ದಿನವನ್ನು ಮೀಸಲಿರಿಸಿದ್ದಾರೆ ಎಂದುಕೊಂಡರೆ, ಹಾಗಲ್ಲ. ಆದರೆ ಇದಕ್ಕೊಂದು ದಿನವನ್ನೇಕೆ ಆಚರಿಸುತ್ತಿದ್ದಾರೆ (National Mango Day) ಎಂದು ಕೇಳಿದರೆ- ಅದಕ್ಕೆ ಒಂದೇ ಕಾರಣ ಎಂಬುದಿಲ್ಲ. ಭಾರತೀಯ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿರುವ ಈ ಹಣ್ಣಿನ ಹೆಸರಿನಲ್ಲಿ, ಸಂಭ್ರಮಿಸುವುದಕ್ಕೆ ಮತ್ತೊಂದು ಕಾರಣ ಎಂದು ಭಾವಿಸಿದರೆ ತಪ್ಪೇನಿಲ್ಲ.

National Mango Day 2023

ಬಾಯಿ ಖಾರ ಮಾಡುವುದಕ್ಕೆ ಉಪ್ಪಿನಕಾಯಿ, ಚಟ್ಣಿ, ತೊಕ್ಕು, ಮೊರಬ್ಬ ಮತ್ತು ಖಾರದ ಗೊಜ್ಜುಗಳು ಕಾಯುತ್ತಿದ್ದರೆ, ಸಿಹಿ ಪ್ರಿಯರಿಗಾಗಿ ಸೀಕರಣೆ, ಜ್ಯಾಮ್‌, ಶೇಕ್‌, ಕುಲ್ಫಿ, ಕಸ್ಟರ್ಡ್‌, ಹಲ್ವಾ ಮತ್ತು ಸಿಹಿ ಶ್ಯಾವಿಗೆ ಮಾಡುವವರೂ ಇದ್ದಾರೆ. ನಿತ್ಯದ ಊಟಕ್ಕೆ ಚಿತ್ರಾನ್ನ, ತಂಬುಳಿ, ಸಾಸಿವೆ, ಅಪ್ಪೆಸಾರುಗಳು, ಇದ್ಯಾವುದೂ ಬೇಡ ಎನಿಸಿದರೆ, ಹಣ್ಣಾದ ಮಾವನ್ನು ಹಾಗೆಯೇ ಹೊಟ್ಟೆಗಿಳಿಸಿ, ಕಾಯಿ ಮಾವಿಗೆ ಉಪ್ಪ-ಖಾರ ಹಾಕಿದರೆ… ಸ್ವರ್ಗಕ್ಕೆ ಕಿಚ್ಚು! ಮಾವಿನ ದಿನ (National Mango Day) ಆಚರಣೆಗೆ ಇದಕ್ಕಿಂತ ದೊಡ್ಡ ಪ್ರವರ ಇನ್ನೇನು ಬೇಕು?

History of the Mango

ಮಾವಿನ ಇತಿಹಾಸ

ಹೊಟ್ಟೆ ಸೇರುವ ಹಣ್ಣಿಗೆಂಥಾ ಇತಿಹಾಸ ಎನ್ನುವಂತಿಲ್ಲ. ಸುಮಾರು ೫೦೦೦ ವರ್ಷಗಳಿಂದ ಭಾರತದ ಜನಪದದ ಭಾಗವಾಗಿಯೇ ಇರುವಂಥ ಹಣ್ಣಿನ ಪ್ರವರವನ್ನು ಒಂದಿಷ್ಟಾದರೂ ತಿಳಿಯದಿದ್ದರೆ ಹೇಗೆ? ಮಾಂಗಿಫೆರಾ ಇಂಡಿಕಾ (Mangifera indica) ಎಂಬ ವೈಜ್ಞಾನಿಕ ಹೆಸರಿನ ಈ ಹಣ್ಣಿನ ಕೃಷಿ ಮೊದಲಿಗೆ ಪ್ರಾರಂಭವಾಗಿದ್ದು ಭಾರತದಲ್ಲೇ. ಪೋರ್ಚುಗೀಸರು ಮೊದಲು ಭಾರತಕ್ಕೆ ಬಂದಾಗ ಇದರ ರುಚಿಗೆ ಮಾರುಹೋಗಿ, ತಮಗೆ ತಿಳಿದಂತೆ ಇದನ್ನು ಮ್ಯಾಂಗ ಎಂದು ಕರೆದರಂತೆ. ಅದೇ ಕಡೆಗೆ ಮ್ಯಾಂಗೊ ಎನಿಸಿಕೊಂಡಿದೆ. ಭಾರತದಿಂದಲೇ ವಿಶ್ವದ ಬಹಳಷ್ಟು ಉಷ್ಣವಲಯದ ದೇಶಗಳಿಗೆ ಮಾವು ಸೀಮೋಲ್ಲಂಘನ ಮಾಡಿದೆ. ಇದೀಗ ಭಾರತ ಮಾತ್ರವಲ್ಲ, ಪಾಕಿಸ್ತಾನ, ಫಿಲಿಪ್ಪೀನ್ಸ್‌ ದೇಶಗಳಲ್ಲೂ ಈ ಹಣ್ಣಿಗೆ ರಾಷ್ಟ್ರಫಲದ ಮಾನ್ಯತೆ ನೀಡಲಾಗಿದೆ. ಆದರೆ ಭಾರತವೇ ವಿಶ್ವದ ಅಗ್ರಗಣ್ಯ ಮಾವು ಕೃಷಿಕ.

Mango Breeds

ತಳಿಗಳು

ಭಾರತದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚಿನ ಪ್ರಭೇದಗಳಿವೆ ಎಂದು ಅಂದಾಜಿಸಲಾಗಿದೆ. ಮೊದಲಿಗೆ ಭಾರತದಿಂದಲೇ ಇತರ ದೇಶಗಳಿಗೆ ಹೋಗಿದ್ದರೂ, ಸ್ಥಳೀಯವಾಗಿ ನೂರಾರು ಪ್ರಭೇದಗಳು ಅಲ್ಲಿನ ಮಣ್ಣಿಗೆ ಹೊಂದುವಂತೆ ಸೃಷ್ಟಿಯಾಗಿವೆ. ಏಷ್ಯಾದಲ್ಲಿ ಬೆಳೆಯುವ ತಳಿಗಳಿಗೂ, ಅಮೆರಿಕ ಮತ್ತು ಆಸ್ಟ್ರೇಲಿಯಾದಲ್ಲಿ ಬೆಳೆಯುವ ತಳಿಗಳಿಗೂ ಅಂತರವಿದೆ. ಭಾರತದಲ್ಲಿ ಆಲ್ಫಾನ್ಸೋ, ಆಮ್ರಪಾಲಿ, ಬಾದಾಮಿ, ಬಂಗನಪಲ್ಲಿ, ಬೆನೆಟ್‌, ದಶೇರಿ, ಹಿಮಸಾಗರ್‌, ಕೇಸರ್‌, ಮಲ್ಲಿಕಾ, ಮನೋಹರ್‌, ನೀಲಂ, ರಸಪುರಿ, ತೋತಾಪುರಿ ಮುಂತಾದ ಬಹಳಷ್ಟು ತಳಿಯ ಮಾವುಗಳು ಮಾವುಪ್ರಿಯರ ಮನ ತಣಿಸುತ್ತವೆ.

ಸೂಪರ್‌ ಫುಡ್

ಹೌದು. ಪೌಷ್ಟಿಕಾಂಶಗಳ ಆಗರವೇ ಆದಂಥ ಮಾವಿನ ಹಣ್ಣು ಸೂಪರ್‌ ಫುಡ್‌ಗಳ ಸಾಲಿಗೆ ಸೇರುತ್ತದೆ. ಇದರಲ್ಲಿ ವಿಟಮಿನ್‌ ಸಿ ಹೆಚ್ಚಾಗಿದ್ದು, ರೋಗನಿರೋಧಕ ಶಕ್ತಿಯನ್ನು ಜಾಗೃತಗೊಳಿಸುತ್ತದೆ. ಉತ್ಕರ್ಷಣ ನಿರೋಧಕಗಳು ಹೇರಳವಾಗಿದ್ದು, ಮಾರಕ ರೋಗಗಳನ್ನು ದೂರ ಮಾಡುತ್ತದೆ. ವಿಟಮಿನ್‌ ಎ ಅಂಶ ಧಾರಾಳವಾಗದ್ದು, ದೃಷ್ಟಿಯನ್ನು ಚುರುಕಾಗಿಸುತ್ತದೆ ಮತ್ತು ಚರ್ಮಕ್ಕೆ ಹೊಳಪು ನೀಡುತ್ತದೆ. ಫೈಬರ್‌ ಭರಪೂರ ಇರುವುದರಿಂದ ಹೆಚ್ಚಿಗೆ ಸಮಯ ಹೊಟ್ಟೆಯನ್ನು ತುಂಬಿದಂತಿರಿಸಿ, ಕಳ್ಳ ಹಸಿವನ್ನು ನಿಯಂತ್ರಿಸುತ್ತದೆ; ಆದರೆ ಅತಿಯಾಗಿ ತಿಂದರೆ ತೂಕ ಏರಿಸುತ್ತದೆ. ಹೊಟ್ಟೆಯ ಆರೋಗ್ಯ ಸುಧಾರಿಸಿ, ಮಲಬದ್ಧತೆಯನ್ನು ನಿವಾರಿಸುತ್ತದೆ. ಸಿಹಿಯಂಶ ಹೆಚ್ಚಿದ್ದರೂ ಮಧುಮೇಹಿಗಳಿಗೆ ಈ ಹಣ್ಣು ವರ್ಜ್ಯವಲ್ಲ. ನಿಯಂತ್ರಿತ ಪ್ರಮಾಣದಲ್ಲಿ ಅವರೂ ಮಾವಿನ ಹಣ್ಣನ್ನು ತಿನ್ನಬಹುದು.

Mango Cultural

ಸಾಂಸ್ಕೃತಿಕವಾಗಿ

ಹಬ್ಬ ಬಂತೆಂದರೆ- ಹೊರಗೆ ತೋರಣ, ಒಳಗೆ ಹೂರಣ! ತೋರಣವೆಂದರೆ ಅದು ಮಾವಿನದ್ದೇ ಆಗಬೇಕು. ಯಾವುದೇ ಸಂಭ್ರಮಕ್ಕೆ ತೋರಣವಿಲ್ಲದೆ ಕಳೆಯೇ ಇಲ್ಲ. ಹೊಸಫಲವನ್ನು ಬಂಧುಮಿತ್ರರಿಗೆಲ್ಲಾ ಹಂಚುವುದರಿಂದ ಹಿಡಿದು ಬಾಂಧವ್ಯ ವೃದ್ಧಿಗೂ ಮಾವಿಗೂ ಅಂಟು-ನಂಟು. ಮಿಡಿ ಉಪ್ಪಿನ ಕಾಯಿ ವಿನಿಮಯವೂ ಈ ಬಾಂಧವ್ಯವೃದ್ಧಿಯ ಭಾಗವೇ ಆಗಿದೆ.

ಭಾರತದ ಯಾವುದೇ ಭಾಷೆ, ಪ್ರಾಂತ್ಯಗಳಲ್ಲಿ ಮಾವಿನ ಬಳಕೆ ಇದ್ದೇಇರುವ ಹಿನ್ನೆಲೆಯಲ್ಲಿ, ದೇಶೀಯ ಸಾಹಿತ್ಯದಲ್ಲಿ ಮಾವು ನಾನಾ ರೂಪದಲ್ಲಿ ಕಾಣಿಸಿಕೊಂಡಿದೆ. ವಸಂತಾಗಮನದ ವರ್ಣನೆಗಳಲ್ಲಿ, ಬೇಸಿಗೆ ಸಂಭ್ರಮಗಳ ವಿಸ್ತಾರಗಳಲ್ಲಿ, ಹಬ್ಬ-ಹರಿದಿನ ಬಣ್ಣಿಸುವಲ್ಲಿ, ಮದುವೆ-ಶುಭಕಾರ್ಯಗಳ ಸಂದರ್ಭದಲ್ಲಿ- ಹೀಗೆ ಸಂಸ್ಕೃತಿಯ ಭಾಗವೇ ಆಗಿರುವ ಮಾವು, ಸಾಹಿತ್ಯಕ್ಕೂ ಹಲವು ರೀತಿಯಲ್ಲಿ ಸಂದಿದೆ. ನಮ್ಮ ಕನ್ನಡದ ಆದಿಕವಿ ಪಂಪನಂತೂ, “ನೀನೆ ಭುವನಕ್ಕಾರಾಧ್ಯನಯ್‌ ಚೂತರಾಜ ತರುಗಳ್‌ ನಿನ್ನಂತೆ ಚೆನ್ನಂಗಳೇ” ಎಂದು ಮಾವನ್ನು ಹಾಡಿ ಕೊಂಡಾಡಿದ್ದಾನೆ.

ಇದನ್ನೂ ಓದಿ: Foods For Healthy Joints And Muscles: ಬಲವಾದ ಕೀಲು, ಸ್ನಾಯುಗಳು ಬೇಕೆ? ಈ ಆಹಾರಗಳು ಬೇಕು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Skin Care Tips: ಬಿಸಿಲಿನಿಂದ ಚರ್ಮ ಕಪ್ಪಾಗಿದೆಯಾ? ಇಲ್ಲಿದೆ ಸರಳ ಮನೆಮದ್ದು

ಬೇಸಿಗೆಯಲ್ಲಿ ಚರ್ಮ (Skin Care Tips) ಸುಟ್ಟಂತಾಗಿ ಕೆಂಪಾಗುವುದು, ಅನಂತರ ಕಪ್ಪಾಗುವುದು ಮಾಮೂಲಿ. ಹೀಗಾದರೆ ಚರ್ಮ ಕಳೆಗೆಟ್ಟಂತಾಗುತ್ತದೆ. ದಿನವಿಡೀ ಸನ್‌ಸ್ಕ್ರೀನ್‌ ಹಚ್ಚಿಕೊಂಡಿರುವುದು ಆಗದ ಮಾತು. ಅದಕ್ಕೇ, ಬಿಸಿಲಲ್ಲಿ ಅಡ್ಡಾಡಿದಾಗ ಕಪ್ಪಾಗುವ ಚರ್ಮದ ರಕ್ಷಣೆ ಹೇಗೆ ಮಾಡುವುದು ಎಂಬ ಚಿಂತೆ ಬೇಡ. ಇಲ್ಲಿದೆ ಸರಳ ಮನೆ ಮದ್ದು.

VISTARANEWS.COM


on

By

Skin Care Tips
Koo

ಬಿಸಿಲಲ್ಲಿ (sunny) ಅಡ್ಡಾಡುವುದು (Skin Care Tips) ಎಲ್ಲರಿಗೂ ಪ್ರಿಯವೇನಲ್ಲ. ಆದರೆ ಬೇಸಿಗೆಯಲ್ಲಿ (summer) ಮನೆಯಿಂದ ಹೊರಬೀಳುತ್ತಿದ್ದಂತೆ ಬಿಸಿಲಿಗೆ ಸೋಕುವುದು ಬಿಟ್ಟರೆ ಬೇರೆ ದಾರಿ ಇರುವುದಿಲ್ಲ. ಇದರ ಪರಿಣಾಮವಾಗಿ ಚರ್ಮವೆಲ್ಲ (skin) ಕೆಂಪಾಗಿ ಸುಟ್ಟಂತಾಗುವುದು, ಕಪ್ಪಾಗುವುದು ಸಾಮಾನ್ಯ. ಬಿಸಿಲಿಗೆ ಚರ್ಮ ಕೆಂಪಾಗಿ, ಕಪ್ಪಾಗುವುದರಿಂದ ತ್ವಚೆಯ ಹೊಳಪು ಮಾಯವಾಗುತ್ತದೆ, ಸುಕ್ಕಾಗುತ್ತದೆ. ಕ್ರಮೇಣ ಕುಂದಿದಂತೆ ಕಾಣಲಾರಂಭಿಸುತ್ತದೆ.

ಜಾಹೀರಾತುಗಳಲ್ಲಿ ತೋರಿಸಿದಂತೆ ಮೈ-ಮುಖಗಳನ್ನೆಲ್ಲ ಮುಚ್ಚಿಕೊಂಡು ಅಡ್ಡಾಡುವುದು ಸಾಧ್ಯವಿಲ್ಲದ್ದು. ಇದಕ್ಕಾಗಿ ದಿನಕ್ಕೆ ಹಲವು ಬಾರಿ ದೇಹಕ್ಕೆಲ್ಲ ಸನ್‌ಬ್ಲಾಕ್‌ ಬಳಿದುಕೊಳ್ಳುವುದು ಎಲ್ಲರಿಗೂ ಅಸಾಧ್ಯ. ಹಾಗಾದರೆ ಬೇಸಿಗೆಯಲ್ಲಿ ಕಪ್ಪಾಗುವ ಚರ್ಮದ ರಕ್ಷಣೆ ಹೇಗೆ?

ಮಾರುಕಟ್ಟೆಯಲ್ಲಿ ʻಟ್ಯಾನ್‌ ರಿಮೂವ್‌ʼ ಎಂಬ ಹಣೆಪಟ್ಟಿಯೊಂದಿಗೆ ಬಹಳಷ್ಟು ಕ್ರೀಮ್‌ಗಳು ದೊರೆಯುತ್ತವೆ. ಅವಲ್ಲವೂ ಕಿಸೆಯ ಭಾರ ಇಳಿಸಿದಷ್ಟೇ ಸರಾಗವಾಗಿ ಸುಟ್ಟ ಗುರುತು ತೆಗೆಯುತ್ತವೆ ಎಂಬ ಖಾತ್ರಿಯೇನಿಲ್ಲ. ಕೆಲವೊಂದು ಕ್ರೀಮುಗಳು ಎಲ್ಲರ ಚರ್ಮಕ್ಕೆ ಒಗ್ಗುವುದೂ ಇಲ್ಲ. ಹಾಗಾಗಿ ಮನೆಮದ್ದುಗಳ ಮೊರೆ ಹೋಗುವುದೇ ಉತ್ತಮ ಎನಿಸುತ್ತದೆ. ಇದಕ್ಕಾಗಿ ಕೆಲವು ಸರಳವಾದ ಫೇಸ್‌ಮಾಸ್ಕ್‌ಗಳ ಕ್ರಮವನ್ನು ಇಲ್ಲಿ ವಿವರಿಸಲಾಗಿದೆ.


ಜೇನು-ಪಪ್ಪಾಯ ಮಾಸ್ಕ್‌

ಪಪ್ಪಾಯದ ಹೋಳುಗಳನ್ನು ಜೇನು ತುಪ್ಪದೊಂದಿಗೆ ಸೇರಿಸಿ ಬ್ಲೆಂಡ್‌ ಮಾಡಿ. ಈ ಮಿಶ್ರಣವನ್ನು ಉದಾರವಾಗಿ ಮುಖಕ್ಕೆಲ್ಲ ಲೇಪಿಸಿ. 30 ನಿಮಿಷಗಳ ಅನಂತರ ಬೆಚ್ಚಗಿನ ನೀರಿನಿಂದ ಮುಖ ತೊಳೆಯಿರಿ. ಇದನ್ನು ವಾರದಲ್ಲಿ ಮೂರು ಬಾರಿ ಮಾಡಬಹುದು.

ಓಟ್‌ಮೀಲ್‌-ಮೊಸರು

ಮುಖದ ಮೇಲಿನ ಜಡ ಕೋಶಗಳನ್ನು ತೆಗೆಯುವ ಸಾಮರ್ಥ್ಯ ಓಟ್‌ಮೀಲ್‌ಗಿದ್ದರೆ, ಮೊಸರಿನಲ್ಲಿರುವ ಲ್ಯಾಕ್ಟಿಕ್‌ ಆಮ್ಲವು ಚರ್ಮದ ತೇವವನ್ನು ಕಾಪಾಡಿ ಮೃದುವಾಗಿಸಬಲ್ಲದು. ಟ್ಯಾನ್‌ ತೆಗೆಯುವುದಕ್ಕೆ ಇದು ಒಳ್ಳೆಯ ಉಪಾಯ. ಓಟ್‌ಮೀಲ್‌ ಪುಡಿಯನ್ನು ಮಂದವಾದ ಮೊಸರಿನಲ್ಲಿ ಕಲೆಸಿ, ಮುಖಕ್ಕೆಲ್ಲ ಲೇಪಿಸಿ. 20 ನಿಮಿಷಗಳ ನಂತರ ಉಗುರು ಬಿಸಿ ನೀರಿನಲ್ಲಿ ತೊಳೆಯಿರಿ. ವಾರಕ್ಕೆರಡು ಬಾರಿ ಮಾಡಬಹುದು ಇದನ್ನು.

ಶ್ರೀಗಂಧ-ತೆಂಗಿನೆಣ್ಣೆ

ಸುಟ್ಟು ಕೆಂಪಾದಂಥ ಚರ್ಮಕ್ಕೆ ಇದು ಒಳ್ಳೆಯ ಉಪಶಮನ ನೀಡುತ್ತದೆ. ಶ್ರೀಗಂಧ ಸುಟ್ಟ ಚರ್ಮವನ್ನು ತಂಪಾಗಿಸಿದರೆ, ಕೊಬ್ಬರಿ ಎಣ್ಣೆ ದುರಸ್ತಿ ಮಾಡಿ, ತೇವವನ್ನು ಹೆಚ್ಚಿಸುತ್ತದೆ. ಸುಟ್ಟು ಕೆಂಪಾದ ಚರ್ಮವನ್ನು ಶೀಘ್ರವೇ ಗುಣ ಪಡಿಸುತ್ತದೆ. 30 ನಿಮಿಷಗಳ ನಂತರ ಉಗುರು ಬಿಸಿ ನೀರಿನಲ್ಲಿ ತೊಳೆಯಬಹುದು. ಆದರೆ ಒಂದು ಎಚ್ಚರಿಕೆ ತೆಗೆದುಕೊಳ್ಳಬೇಕು. ಮುಖದಲ್ಲಿ ಮೊಡವೆಗಳಿದ್ದರೆ, ಇಂಥ ಎಣ್ಣೆಯುಕ್ತ ಪೇಸ್ಟ್‌ಗಳು ಮೊಡವೆಯ ಸಮಸ್ಯೆಯನ್ನು ಹೆಚ್ಚಿಸಬಹುದು.

ಇದನ್ನೂ ಓದಿ: Health Tips in Kannada: ಬೇಸಿಗೆಯಲ್ಲಿ ನಿಜಕ್ಕೂ ನಮ್ಮ ದೇಹಕ್ಕೆ ಬೇಕಾಗಿರುವುದು ಈ ಆಹಾರಗಳು

ಮೊಸರು-ಕಾಫಿ

ಕಾಫಿಗೆ ಚರ್ಮವನ್ನು ಎಕ್ಸ್‌ಫಾಲಿಯೇಟ್‌ ಮಾಡುವ ಸಾಮರ್ಥ್ಯವಿದೆ. ಮೊಸರು ತ್ವಚೆಯನ್ನು ಮೃದುವಾಗಿಸುತ್ತದೆ. ಇದರ ಜೊತೆಗೆ ಕೊಂಚ ಟೊಮೇಟೊ ರಸವನ್ನೂ ಬೆರೆಸಿದರೆ, ಸುಟ್ಟಂತಾದ ಚರ್ಮಕ್ಕೆ ಉತ್ಕರ್ಷಣ ನಿರೋಧಕಗಳ ಆರೈಕೆಯೂ ದೊರೆತಂತಾಗುತ್ತದೆ. ಈ ಮೂರು ವಸ್ತುಗಳನ್ನು ಬ್ಲೆಂಡ್‌ ಮಾಡಿ, ಬಿಸಿಲಿಗೆ ಕೆಂಪಾದ ಭಾಗಕ್ಕೆಲ್ಲ ಹಚ್ಚಿ. 20 ನಿಮಿಷಗಳ ನಂತರ ಬೆಚ್ಚಗಿನ ನೀರಿನಿಂದ ತೊಳೆಯಿರಿ. ಇದನ್ನು ವಾರಕ್ಕೊಮ್ಮೆ ಮಾಡಿದರೆ ಸಾಕಾಗುತ್ತದೆ.

Continue Reading

ಆರೋಗ್ಯ

Food Tips Kannada: ಶಕ್ತಿವರ್ಧಕಗಳಲ್ಲ, ನಿಮ್ಮ ಶಕ್ತಿಯನ್ನೇ ಬಸಿದು ತೆಗೆಯುವ ಆಹಾರಗಳಿವು!

EXCREPT
ಇತ್ತೀಚಿನ ದಿನಗಳಲ್ಲಿ ನಾವು (Food Tips Kannada) ಸೇವಿಸುವ ಆಹಾರ, ಜೀವನಶೈಲಿ ನಮ್ಮ ಶಕ್ತಿಯನ್ನು ಹೆಚ್ಚಿಸುತ್ತಿಲ್ಲ ಬದಲಾಗಿ ದಿಢೀರ್‌ ಕಡಿಮೆಗೊಳಿಸುವಲ್ಲಿಯೂ ಮುಖ್ಯ ಪಾತ್ರ ವಹಿಸುತ್ತಿದೆ. ಶಕ್ತಿ ಬೇಕೆಂದು ನಾವು ಮೊರೆ ಹೋಗುವ ದಿಢೀರ್‌ ಆಹಾರಗಳಿಂದ ಮೇಲ್ನೋಟಕ್ಕೆ ಶಕ್ತಿ, ಉಲ್ಲಾಸ ಹೆಚ್ಚಿದಂತೆ ಅನಿಸಿದರೂ ಇವು ನಮ್ಮ ಶಕ್ತಿಸಾಮರ್ಥ್ಯವೆಲ್ಲವನ್ನೂ ಬಸಿದು ತೆಗೆಯುವ, ನಮ್ಮನ್ನು ಸೋಮಾರಿಗಳನ್ನಾಗಿ ಮಾಡುವ, ತೂಕ ಹೆಚ್ಚಿಸುವ, ಚುರುಕುತನವನ್ನು ಕಸಿದುಕೊಳ್ಳುವ ಆಹಾರಗಳಾಗಿವೆ.

VISTARANEWS.COM


on

By

Food Tips Kannada
Koo

ಬೆಳಗಿನ ಹೊತ್ತು ನಮ್ಮ (Food Tips Kannada) ಶಕ್ತಿ ಕೊಂಚ ಹೆಚ್ಚಿರುವುದು, ಸಂಜೆಯಾಗುತ್ತಿದ್ದಂತೆ ಇದು ಕಡಿಮೆಯಾಗುತ್ತ ಬರುವುದು ಬಹಳ ಸಾಮಾನ್ಯ. ಮನುಷ್ಯನ ದೇಹ ಪ್ರಕೃತಿಯೇ ಹಾಗೆ. ಆದರೆ, ಇತ್ತೀಚಿನ ದಿನಗಳಲ್ಲಿ ನಾವು ಸೇವಿಸುವ ಆಹಾರ (food), ಜೀವನಶೈಲಿಯೂ (life style) ಕೂಡಾ ನಮ್ಮ ಶಕ್ತಿಯನ್ನು ಹೆಚ್ಚಿಸುವುದಕ್ಕಿಂತ ದಿಢೀರ್‌ ಕಡಿಮೆಗೊಳಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತಿದೆ.

ಶಕ್ತಿ ಬೇಕೆಂದು ನಾವು ಮೊರೆ ಹೋಗುವ ದಿಢೀರ್‌ ಆಹಾರಗಳಿಂದ ಮೇಲ್ನೋಟಕ್ಕೆ ಶಕ್ತಿ, ಉಲ್ಲಾಸ ಹೆಚ್ಚಿದಂತೆ ಅನಿಸಿದರೂ ಇವು ನಮ್ಮ ಶಕ್ತಿ ಸಾಮರ್ಥ್ಯವೆಲ್ಲವನ್ನೂ ಬಸಿದು ತೆಗೆಯುವ, ನಮ್ಮನ್ನು ಸೋಮಾರಿಗಳನ್ನಾಗಿ ಮಾಡುವ, ತೂಕ ಹೆಚ್ಚಿಸುವ, ಚುರುಕುತನವನ್ನು ಕಸಿದುಕೊಳ್ಳುವ ಆಹಾರಗಳಾಗಿ ಬದಲಾಗಬಹುದು. ಬನ್ನಿ, ನಿಜವಾಗಿಯೂ ಶಕ್ತಿವರ್ಧಕದಂತೆ ಅನಿಸಿದರೂ, ನಮ್ಮ ಶಕ್ತಿಯನ್ನೆಲ್ಲ ಹಿಂಡಿ ತೆಗೆಯುವ ಆಹಾರಗಳಾವುವು ಎಂಬುದನ್ನು ನೋಡೋಣ.

ಬ್ರೆಡ್‌, ಪಾಸ್ತಾ

ಬಿಳಿ ಬ್ರೆಡ್‌ ಹಾಗೂ ಮೈದಾವೇ ಹೆಚ್ಚಿರುವ ಪಾಸ್ತಾ ಮತ್ತಿತರ ಆಹಾರಗಳು ದೇಹಕ್ಕೆ ಶಕ್ತಿ ನೀಡಿದಂತೆ ಅನಿಸಿದರೂ ಇವೆಲ್ಲ ಖಾಲಿ ಕ್ಯಾಲರಿಗಳು. ಇವೆಲ್ಲವೂ ಸಂಸ್ಕರಿಸಿದ ಆಹಾರಗಳಾಗಿರುವುದರಿಂದ ನಿಜವಾದ ಧಾನ್ಯ, ಬೇಳೆ ಕಾಳುಗಳ ಮೂಲಕ ದೇಹಕ್ಕೆ ಸಿಗುವ ಶಕ್ತಿ ಇದರಿಂದ ದೊರೆಯಲಾರದು. ಆ ಕ್ಷಣಕ್ಕೆ ಇವು ಹೊಟ್ಟೆ ತುಂಬಿಸಿದರೂ, ದೇಹಕ್ಕೆ ಒಳ್ಳೆಯದನ್ನು ಮಾಡುವ ಉದ್ದೇಶ ಈ ಆಹಾರಗಳಲ್ಲಿಲ್ಲ ಎಂಬುದನ್ನು ನೆನಪಿಡಿ.


ಬ್ರೇಕ್‌ಫಾಸ್ಟ್‌ ಸಿರಿಯಲ್‌ಗಳು ಹಾಗೂ ಫ್ಲೇವರ್ಡ್‌ ಮೊಸರು

ರೆಡಿಮಾಡಿ ಫುಡ್ ಗಳು ಹೆಸರಿಗೆ ಮಾತ್ರ ಆರೋಗ್ಯಕರ ಆಹಾರ ಎಂದೆನಿಸಿದರೂ ಇವು ಆರೋಗ್ಯಕರವಲ್ಲ. ಇದರಲ್ಲಿ ಒಳ್ಳೆಯ ಅಂಶಗಳಿಗಿಂತಲೂ ದೇಹಕ್ಕೆ ಮಾರಕವಾದ ಅಂಶಗಳೇ ಹೆಚ್ಚಿವೆ. ಇವುಗಳು ಸಂಸ್ಕರಿಸಿದ ಆಹಾರಗಳಷ್ಟೇ ಅಲ್ಲ, ಇವುಗಳಲ್ಲಿ ಹೆಚ್ಚುವರಿ ಸಕ್ಕರೆಯೂ ಇರುವುದರಿಂದ ದೇಹಕ್ಕೆ ಒಳ್ಳೆಯದಕ್ಕಿಂತ ಕೆಟ್ಟ ಪರಿಣಾಮವೇ ಆಗುತ್ತದೆ.


ಆಲ್ಕೋಹಾಲ್‌

ಆಲ್ಕೋಹಾಲ್‌ ಸೇವನೆಯಿಂದ ದಿನದ ಇಡೀ ಸುಸ್ತು ಬಸಿದು ಹೋಗಿ ಜೀವ ಬಂದಂತಾಗಬಹುದು. ದೇಹವಿಡೀ ಉಲ್ಲಾಸದಿಂದ, ಕುಣಿಯಬಹುದು. ಚಿಂತೆಯೆಲ್ಲ ಮರೆತುಹೋಗಬಹುದು. ಆದರೆ, ಇದು ಕ್ಷಣಿಕ. ದೇಹಕ್ಕೆ ನಿಜವಾಗಿ ಬೇಕಾದ ಶಕ್ತಿ ಇದರಿಂದ ಎಳ್ಳಷ್ಟೂ ಸಿಗಲಾರದು.


ಕಾಫಿ, ಚಹಾ

ಕಾಫಿ ಹಾಗೂ ಚಹಾಗಳೆಂಬ ಎರಡು ಪೇಯಗಳು ಭಾರತೀಯರ ಪಾಲಿನ ಆರಾಧ್ಯ ದೈವ. ಬೆಳಗ್ಗೆದ್ದ ಕೂಡಲೇ ಬಹುಪಾಲು ಮಂದಿಗೆ ಚಹಾ ಕಾಫಿ ಬೇಕೇ ಬೇಕು. ಬೆಳಗಿನ ಕೆಲಸಗಳಲ್ಲಿ ಮತ್ತೆ ತೊಡಗಿಕೊಳ್ಳಲು ಚಹಾ ಕಾಫಿಗಳು ಚೈತನ್ಯದಂತೆ ಅನಿಸಬಹುದು. ಅಭ್ಯಾಸವೂ ಆಗಿರಬಹುದು.

ಕಚೇರಿಯ ಒತ್ತಡದ ಕೆಲಸದ ನಡುವೆ ಆಹಾ ಎಂದು ಉಸಿರೆಳೆದುಕೊಂಡು ಕೊಂಚ ಬ್ರೇಕ್‌ ಬೇಕಾದರೆ ಚಹಾ ಕಾಫಿಗಳು ಮತ್ತೆ ಕೆಲಸಕ್ಕೆ ಪ್ರೇರಣೆ ನೀಡಬಹುದು. ಆದರೆ, ಇವೆಲ್ಲವೂ ನೀಡುವ ಉದ್ದೀಪನ ಕ್ಷಣಿಕ. ಇದರಿಂದ ದೇಹಕ್ಕೆ ಲಾಭಕ್ಕಿಂತಲೂ ನಷ್ಟ ಹೆಚ್ಚು. ಅತಿಯಾದ ಇವುಗಳ ಅಭ್ಯಾಸದಿಂದ ದೇಹದ ಶಕ್ತಿ ಹೆಚ್ಚದು. ಬದಲಾಗಿ ನಮ್ಮ ಶಕ್ತಿಯನ್ನೇ ಹಿಂಡಿಬಿಡುತ್ತವೆ. ಈ ಚಟದ ದಾಸನನ್ನಾಗಿಸುತ್ತವೆ.


ಶಕ್ತಿವರ್ಧಕ ಪೇಯಗಳು

ಮಾರುಕಟ್ಟೆಯಲ್ಲಿ ಜಾಹೀರಾತುಗಳ ಮೂಲಕ ಯುವಜನರನ್ನೂ ಸೇರಿದಂತೆ ಬಹುಜನರನ್ನು ಆಕರ್ಷಿಸುವ ಶಕ್ತಿವರ್ಧಕ ಪೇಯಗಳು ಹೆಸರಿಗೆ ಮಾತ್ರ ಶಕ್ತಿವರ್ಧಕ. ಆ ಕೆಲವು ಕ್ಷಣಕ್ಕೆ ಇದರಿಂದ ಶಕ್ತಿ ಹೆಚ್ಚಿದಂತಾಗಿ ಚೈತನ್ಯ ಸಿಗುವುದು ನಿಜವಾದರೂ ದೇಹಕ್ಕೆ ಒಳ್ಳೆಯದನ್ನು ಮಾಡಲಾರವು.

ಇದನ್ನೂ ಓದಿ: MDH, Everest Spices: ಸಿಂಗಾಪುರ, ಹಾಂಕಾಂಗ್‌ ಬಳಿಕ ಇದೀಗ ನೇಪಾಳದಲ್ಲಿಯೂ ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ

ಬದಲಾಗಿ ಇದರಲ್ಲಿ ಅತ್ಯಂತ ಹೆಚ್ಚು ಪ್ರಮಾಣದಲ್ಲಿರುವ ಸಕ್ಕರೆ ಹಾಗೂ ರಾಸಾಯನಿಕಗಳು ದೇಹಕ್ಕೆ ಮಾರಕ. ಇವುಗಳನ್ನು ಆಗಾಗ ಕುಡಿಯುವುದರಿಂದ ತೂಕದಲ್ಲಿ ಹೆಚ್ಚಳವೂ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳೂ ಕಾಣಿಸಿಕೊಳ್ಳಬಹುದು. ಹಾಗಾಗಿ ಇಂತಹ ಶಕ್ತಿವರ್ಧಕ ಪೇಯಗಳಿಂದ ನಾವು ದೂರವಿರುವುದು ಒಳ್ಳೆಯದು. ಕ್ಷಣಿಕ ಮಾತ್ರದ ಶಕ್ತಿವರ್ಧಕಗಳಿಗಿಂತ ಉತ್ತಮ ಪೋಷಕಾಂಶಯುಕ್ತ ಆರೋಗ್ಯಕರ ಆಹಾರಗಳ ಸೇವನೆಯಿಂದ ಆರೋಗ್ಯವನ್ನು ಹೆಚ್ಚಿಸಬಹುದು.

Continue Reading

ದೇಶ

World Aids Vaccine Day: ಇಂದು ವಿಶ್ವ ಏಡ್ಸ್ ಲಸಿಕೆ ದಿನ; ಈ ದಿನದ ಹಿನ್ನೆಲೆ ಏನು?

ಕೆಲವೊಂದು ಕಾಯಿಲೆಗಳಿಗೆ ಔಷಧವನ್ನು ಇನ್ನೂ ಕಂಡು ಹಿಡಿಯಲಾಗಿಲ್ಲ. ಮುನ್ನೆಚ್ಚರಿಕೆಯಿಂದ ಮಾತ್ರ ಕಾಯಿಲೆ ಒಬ್ಬರಿಂದ ಇನ್ನೊಬ್ಬರಿಗೆ ಹರಡದಂತೆ ತಡೆಯಬಹುದು. ಅಂತಹ ಒಂದು ಸಾಂಕ್ರಾಮಿಕ ಕಾಯಿಲೆಯಲ್ಲಿ ಹೆಚ್ ಐವಿ ಏಡ್ಸ್ ಕೂಡ (World Aids Vaccine Day) ಒಂದು. ಈ ಬಗ್ಗೆ ಪ್ರತಿಯೊಬ್ಬರೂ ಜಾಗರೂಕರಾಗಿರುವುದೇ ಇದರಿಂದ ರಕ್ಷಿಸಿಕೊಳ್ಳುವ ಒಂದು ಉತ್ತಮ ಉಪಾಯ.

VISTARANEWS.COM


on

By

World Aids Vaccine Day
Koo

ಜಗತ್ತಿನ ಬಹುತೇಕ ಕಾಯಿಲೆಗಳಿಗೆ ಈಗ ಔಷಧ ಲಭ್ಯವಿದೆ. ಆದರೆ ಎಚ್‌ಐವಿ (HIV) ಸೋಂಕಿಗೆ ಮಾತ್ರ ಇನ್ನೂ ಯಾವುದೇ ಚಿಕಿತ್ಸೆ ಕಂಡು ಹಿಡಿಯಲಾಗಿಲ್ಲ. ಹೀಗಾಗಿಯೇ ಇದರ ಬಗ್ಗೆ ಜಾಗೃತಿ ಮೂಡಿಸಲು ವಿಶ್ವದಾದ್ಯಂತ (world) ಮೇ 18 ರಂದು ವಿಶ್ವ ಏಡ್ಸ್ (AIDS) ಲಸಿಕೆ ದಿನ ಅಥವಾ ಎಚ್ಐವಿ ಲಸಿಕೆ ಜಾಗೃತಿ ದಿನವನ್ನು (World Aids Vaccine Day) ಆಚರಿಸಲಾಗುತ್ತದೆ. ಎಚ್ಐವಿ ಸೋಂಕಿಗೆ ಯಾವುದೇ ಚಿಕಿತ್ಸೆ ಇಲ್ಲ. ಇದಕ್ಕೆ ಆಂಟಿರೆಟ್ರೋವೈರಲ್ ಔಷಧಗಳೊಂದಿಗೆ ಚಿಕಿತ್ಸೆ ನೀಡಲಾಗುತ್ತದೆ. ಇದು ದೇಹದಲ್ಲಿ ವೈರಸ್ ಪುನರಾವರ್ತನೆಯಾಗದಂತೆ ತಡೆಯುತ್ತದೆ.

ವಿಶ್ವ ಏಡ್ಸ್ ಲಸಿಕೆ ದಿನ ಅಥವಾ ಎಚ್‌ಐವಿ ಲಸಿಕೆ ಜಾಗೃತಿ ದಿನವನ್ನು ಮೇ 18ರಂದು ಎಚ್‌ಐವಿ ಲಸಿಕೆ, ರೋಗನಿರೋಧಕ ಪ್ರಯೋಜನಗಳು ಮತ್ತು ವ್ಯಾಕ್ಸಿನೇಷನ್‌ಗೆ ಸಂಬಂಧಿಸಿದ ಇತರ ವಿವರಗಳ ಬಗ್ಗೆ ಜಾಗೃತಿ ಮೂಡಿಸಲು ಆಚರಿಸಲಾಗುತ್ತದೆ. ಎಚ್ಐವಿ ಸೋಂಕನ್ನು ತಡೆಗಟ್ಟಲು ಈ ಅರಿವು ಎಲ್ಲರಿಗೂ ಮುಖ್ಯವಾಗಿದೆ.
ಈ ದಿನವು ಲಸಿಕೆ ಸಂಶೋಧನೆಯ ಭಾಗವಾಗಿರುವ ಆರೋಗ್ಯ ವೃತ್ತಿಪರರು ಮತ್ತು ಸಹಾಯಕ ಸಿಬ್ಬಂದಿಯ ನಿರಂತರ ಕೊಡುಗೆಯನ್ನು ಸ್ಮರಿಸಲು ಆಚರಿಸಲಾಗುತ್ತದೆ.

ಎಷ್ಟು ಸೋಂಕಿತರು?

ಎಚ್ಐವಿ ಜಾಗತಿಕ ಸಾಂಕ್ರಾಮಿಕವಾಗಿದ್ದು, ಇದು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರಿದೆ. ಇತ್ತೀಚಿನ ಅಂದಾಜಿನ ಪ್ರಕಾರ ಸರಿಸುಮಾರು 38.4 ಮಿಲಿಯನ್ ಜನರು HIVಯೊಂದಿಗೆ ವಾಸಿಸುತ್ತಿದ್ದಾರೆ, ಅವರಲ್ಲಿ ಮೂರನೇ ಎರಡರಷ್ಟು ಜನರು WHO ಆಫ್ರಿಕನ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಪ್ರಪಂಚದಾದ್ಯಂತ ಸುಮಾರು ಏಳು ಜನರಲ್ಲಿ ಒಬ್ಬರು HIV ಯೊಂದಿಗೆ ವಾಸಿಸುತ್ತಿದ್ದಾರೆ. ಇದು ವಿಶ್ವದ ಜನಸಂಖ್ಯೆಯ 37.9 ಮಿಲಿಯನ್ ನಷ್ಟಾಗುತ್ತದೆ.

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ 2022 ರ ಅಂತ್ಯದ ವೇಳೆಗೆ 39 ಮಿಲಿಯನ್ ಎಚ್ಐವಿ ಪಾಸಿಟಿವ್ ಜನರಿದ್ದಾರೆ. ಅದರಲ್ಲಿ 1.5 ಮಿಲಿಯನ್ 0- 14 ವರ್ಷಗಳ ನಡುವಿನ ಮಕ್ಕಳು ಇದ್ದಾರೆ.

ಹರಡಲು ಕಾರಣ ಏನು?

ಬಡ ಮತ್ತು ಅತ್ಯಂತ ಹಿಂದುಳಿದ ಸಮುದಾಯಗಳಲ್ಲಿ ವೈರಸ್ ಹೆಚ್ಚು ಹರಡುತ್ತದೆ. ಶೈಕ್ಷಣಿಕ ಮಾಹಿತಿಯ ಕೊರತೆ, ತಡೆಗಟ್ಟುವ ಕ್ರಮಗಳು ಮತ್ತು ವೈದ್ಯಕೀಯ ಚಿಕಿತ್ಸೆಗಳು ಎಚ್ಐವಿ ಹರಡುವಿಕೆಗೆ ಪ್ರಮುಖ ಕಾರಣಗಳಾಗಿವೆ. ಸಾಂಕ್ರಾಮಿಕ ರೋಗವನ್ನು ಎದುರಿಸಲು ಮಾಡಿದ ಗಮನಾರ್ಹ ಪ್ರಯತ್ನಗಳ ಹೊರತಾಗಿಯೂ ಹೆಚ್ ಐವಿಯೊಂದಿಗೆ ವಾಸಿಸುವ ಜನರ ಸಂಖ್ಯೆಯು ಹೆಚ್ಚಾಗಿದೆ. ಇದರಿಂದಾಗಿ ವೈರಸ್ ಮತ್ತಷ್ಟು ಹರಡುವುದನ್ನು ತಡೆಗಟ್ಟಲು ಪರಿಣಾಮಕಾರಿ ಲಸಿಕೆಗಾಗಿ ಸಂಶೋಧನೆಯನ್ನು ಮುಂದುವರಿಸುವುದು ಅತ್ಯಗತ್ಯ.


ವಿಶ್ವ ಏಡ್ಸ್ ಲಸಿಕೆ ದಿನದ ಇತಿಹಾಸ

1997ರ ಮೇ 18ರಂದು ಮೇರಿಲ್ಯಾಂಡ್‌ನ ಮೋರ್ಗಾನ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಮಾಡಿದ ಭಾಷಣದಲ್ಲಿ ಆಗಿನ ಯುಎಸ್ ಅಧ್ಯಕ್ಷ ಬಿಲ್ ಕ್ಲಿಂಟನ್, ಪರಿಣಾಮಕಾರಿ ಎಚ್‌ಐವಿ ತಡೆಗಟ್ಟುವ ಲಸಿಕೆ ಮಾತ್ರ ಏಡ್ಸ್ ಬೆದರಿಕೆಯನ್ನು ನಿಯಂತ್ರಣದಲ್ಲಿ ಇರಿಸುತ್ತದೆ ಮತ್ತು ಅಂತಿಮವಾಗಿ ತೆಗೆದುಹಾಕುತ್ತದೆ ಎಂದು ಹೇಳಿದರು. ಪರಿಣಾಮಕಾರಿ ಲಸಿಕೆಯ ತುರ್ತು ಅಗತ್ಯವನ್ನು ಒತ್ತಿ ಹೇಳುವ ಕ್ಲಿಂಟನ್ ಅವರ ಭಾಷಣದ ಗೌರವಾರ್ಥವಾಗಿ ಮೇ 18 ಅನ್ನು ವಿಶ್ವ ಏಡ್ಸ್ ಲಸಿಕೆ ದಿನವೆಂದು ಘೋಷಿಸಲಾಗಿದೆ. ವಿಶ್ವ ಏಡ್ಸ್ ಲಸಿಕೆ ದಿನವನ್ನು ಮೊದಲ ಬಾರಿಗೆ 1998ರಲ್ಲಿ ಆಚರಿಸಲಾಯಿತು.

ಇದನ್ನೂ ಓದಿ: Ambulance Booking : ಬೆಂಗಳೂರಿನಲ್ಲಿ ಆ್ಯಪ್ ​ಮೂಲಕವೇ ಮಾಡಬಹುದು ಆಂಬ್ಯುಲೆನ್ಸ್​ ಬುಕಿಂಗ್

ವಿಶ್ವ ಏಡ್ಸ್ ಲಸಿಕೆ ದಿನದ ಮಹತ್ವ

ಎಚ್‌ಐವಿ ಮತ್ತು ಏಡ್ಸ್ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸಲು ಈ ದಿನ ಮಹತ್ವದ್ದಾಗಿದೆ. ಸರ್ಕಾರಗಳು ಮತ್ತು ಎನ್‌ಜಿಒಗಳ ಉಪಕ್ರಮಗಳ ಬಗ್ಗೆ ಜನರಿಗೆ ತಿಳಿಸಲು ಮತ್ತು ತಡೆಗಟ್ಟುವ ಎಚ್‌ಐವಿ ಲಸಿಕೆಯ ಅಗತ್ಯತೆಯ ಕಡೆಗೆ ಗಮನ ಸೆಳೆಯಲು ಜಾಗೃತಿ ಅಭಿಯಾನಗಳನ್ನು ನಡೆಸಲಾಗುತ್ತದೆ.

Continue Reading

ಆರೋಗ್ಯ

Health Tips Kannada: ಕೂತಲ್ಲೇ ತೂಕಡಿಸುತ್ತೀರಾ? ಇದು ಒಳ್ಳೆಯದು!

ಇದ್ದಲ್ಲೇ ನಿದ್ದೆ ಮಾಡುವವರಿಗೆ (Health Tips Kannada) ಸುಖ ಹೆಚ್ಚು, ಚಿಂತೆ ಇಲ್ಲ ಎಂದೆಲ್ಲ ಹೇಳುವುದು ಸಾಮಾನ್ಯ. ಆದರೆ ಹೀಗೆ ಕೋಳಿಗಳಂತೆ ಕೂತಲ್ಲೇ ಚುಟುಕು ನಿದ್ದೆ ಮಾಡುವುದು ಒಳ್ಳೆಯದು ಎಂಬುದು ಗೊತ್ತೇ? ಎಲ್ಲೆಂದರಲ್ಲಿ ನಿದ್ದೆ ತೆಗೆಯುವವರನ್ನು ಕಂಡು ʻಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆʼ ಎಂದೆಲ್ಲಾ ಗಾದೆ ಸೃಷ್ಟಿಯಾಗಿರುವುದುಂಟು. ಹಾಗೆ ಕೂತಲ್ಲಿ ತೂಕಡಿಸುವವರೆಲ್ಲರೂ ಸುಖವಾಗಿದ್ದಾರೆ ಎಂದು ಅರ್ಥವೇ? ಚಿಂತೆ ಇಲ್ಲದವರೆಂದು ತಿಳಿಯಬಹುದೇ? ಸುಸ್ತಾದಾಗಲೂ ಸಣ್ಣದೊಂದು ನಿದ್ದೆ ಮಾಡಿದರೆ ಆರಾಮ ಎನಿಸುತ್ತದಲ್ಲ, ಏನಿದರ ಮರ್ಮ? ಇಲ್ಲಿದೆ ವಿವರ.

VISTARANEWS.COM


on

Health Tips Kannada sleepy is good
Koo

ಕೂತಲ್ಲೇ (Health Tips Kannada) ತೂಕಡಿಸುವವರು, ಬಸ್ಸಲ್ಲಿ, ರೈಲಲ್ಲಿ ಓಡಾಡುವಾಗ ಗೊರಕೆ ಹೊಡೆಯುವವರು, ಕಾರಲ್ಲಿ ಹಿಂದೆ ಕೂತಾಗ ನಿದ್ದೆ ಮಾಡುವವರು…ಹೀಗೆ ಎಲ್ಲೆಂದರಲ್ಲಿ ನಿದ್ದೆ ತೆಗೆಯುವವರನ್ನು ಕಂಡು ʻಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆʼ ಎಂದೆಲ್ಲಾ ಗಾದೆ ಸೃಷ್ಟಿಯಾಗಿರುವುದುಂಟು. ಹಾಗೆ ಕೂತಲ್ಲಿ ತೂಕಡಿಸುವವರೆಲ್ಲರೂ ಸುಖವಾಗಿದ್ದಾರೆ ಎಂದು ಅರ್ಥವೇ? ಚಿಂತೆ ಇಲ್ಲದವರೆಂದು ತಿಳಿಯಬಹುದೇ? ಸುಸ್ತಾದಾಗಲೂ ಸಣ್ಣದೊಂದು ನಿದ್ದೆ ಮಾಡಿದರೆ ಆರಾಮ ಎನಿಸುತ್ತದಲ್ಲ, ಏನಿದರ ಮರ್ಮ? ಹಾಗೆ ಹಗಲಿನಲ್ಲಿ ನಿದ್ದೆ ಮಾಡಿದರೆ ರಾತ್ರಿಯ ನಿದ್ದೆಗೆ ತೊಂದರೆ ಆಗುವುದಿಲ್ಲವೇ? ಇಂಥ ಹಲವು ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಚುಟುಕು ನಿದ್ದೆ

ಈ ಹೆಸರಿನಲ್ಲೇ ಸಾಮಾನ್ಯವಾಗಿ ಕರೆಸಿಕೊಳ್ಳುವ ಹಗಲಿನ ನಿದ್ದೆ ದೀರ್ಘವಾದರೆ ʻಪವರ್‌ ನ್ಯಾಪ್‌ʼ ಎನಿಸಿಕೊಳ್ಳುವುದಿಲ್ಲ. ತೀರಾ ಆಯಾಸವಾದಾಗ 20 ನಿಮಿಷ ನಿದ್ದೆ ಮಾಡಿದರೆ, ಎಚ್ಚರಾದಮೇಲೆ ದೇಹದ ಚೈತನ್ಯ ಹೆಚ್ಚಿದಂತೆ ಭಾಸವಾಗುತ್ತದೆ. ಇದು ಹೌದೇ ಎಂಬುದನ್ನು ತಿಳಿಯಲು ಯೂನಿವರ್ಸಿಟಿ ಕಾಲೇಜ್‌ ಲಂಡನ್‌ನ ವಿಜ್ಞಾನಿಗಳು ಅಧ್ಯಯನವೊಂದನ್ನು ನಡೆಸಿದ್ದರು. ಇದಕ್ಕಾಗಿ 40ರಿಂದ 69 ವರ್ಷ ವಯಸ್ಸಿನ ನಡುವಿನ ಸುಮಾರು ೩೫ ಸಾವಿರ ಮಂದಿಯನ್ನ್ ಅ‍ಧ್ಯಯನಕ್ಕೆ ಒಳಪಡಿಸಿದ್ದರು. ಇದರಲ್ಲಿ ಗಮನಿಸಿದಾಗ, ನಿಯಮಿತವಾಗಿ ಹಗಲಿಗೆ ಚುಟುಕು ನಿದ್ದೆ ಮಾಡುವವರ ಮೆದುಳು, ಪವರ್‌ ನ್ಯಾಪ್‌ ಮಾಡದವರ ಮೆದುಳಿಗಿಂತ ದೊಡ್ಡದಾಗಿತ್ತು. ಏನಿದರರ್ಥ?
ಮೆದುಳಿನ ಗಾತ್ರ ಕಿರಿದಾಗುವುದಕ್ಕೂ ಮೆದುಳಿಗೆ ವಯಸ್ಸಾಗುವುದಕ್ಕೂ ಸಂಬಂಧವಿದೆ. ಹಾಗಾಗಿ ನಿಯಮಿತವಾಗಿ ಚುಟುಕು ನಿದ್ದೆ ಮಾಡುವವರಲ್ಲಿ ಮೆದುಳು ಕುಗ್ಗಿಲ್ಲ ಎಂದರೆ, ಮೆದುಳಿಗೆ ಬೇಗ ವಯಸ್ಸಾಗುವುದನ್ನು ಪವರ್‌ ನ್ಯಾಪ್‌ ಮುಂದೂಡುತ್ತದೆ ಎನ್ನುತ್ತಾರೆ ಅಧ್ಯಯನಕಾರರು. ಅಂದರೆ, ಅಲ್‌ಜೈಮರ್ಸ್‌ನಂಥ ಮೆದುಳು ಸಂಬಂಧಿ ರೋಗಗಳು, ಹೃದಯದ ತೊಂದರೆಗಳನ್ನು ಮುಂತಾದವು ಬರುವುದನ್ನು ಮುಂದೂಡಲು ಸಾಧ್ಯವಾಗಬಹುದು ಎಂಬುದು ಅವರ ಅನಿಸಿಕೆ.

ಇದನ್ನೂ ಓದಿ: Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

ಕೋಳಿ ನಿದ್ದೆಯ ಮ್ಯಾಜಿಕ್!

ಇಷ್ಟು ಮಾತ್ರವಲ್ಲ, 5ರಿಂದ 20 ನಿಮಿಷಗಳವರೆಗಿನ ಕೋಳಿ ನಿದ್ದೆಯಿಂದ ತಕ್ಷಣಕ್ಕೆ ಮೆದುಳಿನ ಕ್ಷಮತೆಯನ್ನು ಹೆಚ್ಚಿಸಬಹುದು. ತೀರಾ ಆಯಾಸವಾಗಿ ಕೆಲಸ ಮಾಡಲೇ ಆಗುತ್ತಿಲ್ಲ, ಓದಿದರೆ ತಲೆಗೇ ಹೋಗುತ್ತಿಲ್ಲ ಎಂಬಂಥ ಸಂದರ್ಭದಲ್ಲಿ, ಹತ್ತಿಪ್ಪತ್ತು ನಿಮಿಷಗಳ ಕೋಳಿ ನಿದ್ದೆ ನಿಜಕ್ಕೂ ಮ್ಯಾಜಿಕ್‌ ಮಾಡಬಲ್ಲದು. ನಿದ್ದೆ ಮುಗಿಸಿ ಎದ್ದ ಸುಮಾರು ಮೂರು ತಾಸುಗಳವರೆಗೆ ದೇಹ-ಮನಸ್ಸುಗಳು ಚೈತನ್ಯಪೂರ್ಣವಾಗಿ ಇರುತ್ತವೆ ಎಂಬುದು ಖಚಿತವಾಗಿದೆ. ಕ್ರೀಡಾಳುಗಳ ಸಹ ತಮ್ಮ ತರಬೇತಿಯ ನಡುವಿನಲ್ಲಿ ಚುಟುಕು ನಿದ್ದೆಗಾಗಿಯೇ ಸಮಯ ನಿಗದಿ ಮಾಡಿಕೊಂಡಿದ್ದರೆ, ದೇಹ ಬಳಲುವುದನ್ನು ತಪ್ಪಿಸಬಹುದು. ಹಲವು ಅಥ್ಲೀಟ್‌ಗಳು ಇದನ್ನು ತಮ್ಮ ಕ್ರೀಡಾ ಜೀವನದ ಭಾಗವೆಂದೇ ಭಾವಿಸುತ್ತಾರೆ.

ಇನ್ನಷ್ಟು ಲಾಭಗಳು

ದೇಹ-ಮನಸ್ಸು ಚೈತನ್ಯಪೂರ್ಣ ಆಗುವುದು ಮಾತ್ರವೇ ಅಲ್ಲದೆ ಹೆಚ್ಚಿನ ಲಾಭಗಳಿವೆ ಇದರಿಂದ. ಮೂಡ್‌ ಸುಧಾರಿಸಿ, ಮನಸ್ಸಿನ ಉಲ್ಲಾಸ ಹೆಚ್ಚಿಸುತ್ತದೆ. ನೆನಪಿನ ಶಕ್ತಿ ವೃದ್ಧಿಸುತ್ತದೆ, ಸೃಜನಶೀಲತೆ ವರ್ಧಿಸುತ್ತದೆ. ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವಾಗ ಇಂಥ ನಿದ್ದೆಗಳು ದೇಹದ ದುರಸ್ತಿಗೆ ಗಣನೀಯ ಕೊಡುಗೆ ನೀಡುತ್ತವೆ.

ರಾತ್ರಿ ನಿದ್ದೆಗೆ ಬದಲಲ್ಲ

ಇದಕ್ಕಾಗಿ ರಾತ್ರಿಯೆಲ್ಲ ನಿದ್ದೆಗೆಟ್ಟು ಮೊಬೈಲು ಗೀರುತ್ತಾ, ಸಿನೆಮ ನೋಡುತ್ತಾ ಕೂತು, ಹಗಲಿಗೆ ನಿದ್ದೆ ಮಾಡಿ, ಮೆದುಳನ್ನು ಚುರುಕಾಗಿ ಇಟ್ಟುಕೊಳ್ಳುತ್ತೇವೆ ಎಂದು ಬೀಗುವುದಲ್ಲ. ಮಾತ್ರವಲ್ಲ, ಹಗಲಿನ ನಿದ್ದೆ ಚುಟುಕಾಗದೆ ತೀರಾ ದೀರ್ಘವಾದರೆ, ರಾತ್ರಿಯ ಪಾಲಿಗೆ ಕುಟುಕು ನಿದ್ದೆಯಾಗಬಹುದು. ಹಾಗಾಗಿ ಹಗಲಿಗೆ ಮಾಡುವ ನಿದ್ದೆಯಿಂದ ರಾತ್ರಿಯ ನಿದ್ದೆಯ ಗುಣಮಟ್ಟದಲ್ಲಿ ವ್ಯತ್ಯಾಸವಾಗುತ್ತಿದೆ ಎಂದಾದರೆ, ಹಗಲಿನ ನಿದ್ದೆಯ ಪ್ರಮಾಣವನ್ನು ಕಡಿಮೆ ಮಾಡಬೇಕು. ರಾತ್ರಿಯ ನಿದ್ರಾಹೀನತೆಗೆ ಚುಟುಕು ನಿದ್ದೆ ಮದ್ದೂ ಅಲ್ಲ. ರಾತ್ರಿಗೆ 7-8 ತಾಸಿನ ನಿದ್ದೆಯ ಅವಧಿಯಲ್ಲಿ ತೊಂದರೆಯಾದರೆ, ಅದನ್ನು ಪ್ರತ್ಯೇಕವಾಗಿಯೇ ಸರಿ ಪಡಿಸಿಕೊಳ್ಳುವುದು ಸೂಕ್ತ. ಹಗಲಿನ ಸುಸ್ತು, ಒತ್ತಡ, ಆಯಾಸಗಳ ನಡುವೆ ಕೆಲಸ ಮಾಡುವುದಕ್ಕೆ ತೊಂದರೆಯಾಗದಂತೆ ಮಾತ್ರವೇ ಕೋಳಿ ನಿದ್ದೆಯನ್ನು ಉಪಯೋಗಿಸಿಕೊಳ್ಳುವುದು ಜಾಣತನ.

ಎಷ್ಟು ಹೊತ್ತು?

ಮಧ್ಯಾಹ್ನದ 1 ಗಂಟೆಯಿಂದ 4 ಗಂಟೆಯ ನಡುವೆ, 20 ನಿಮಿಷಕ್ಕಿಂತ ಕಡಿಮೆ ಸಮಯದ ನಿದ್ದೆ ಎಲ್ಲ ರೀತಿಯಲ್ಲೂ ಒಳ್ಳೆಯ ಪರಿಣಾಮವನ್ನು ನೀಡುತ್ತದೆ. ಇನ್ನೂ ದೀರ್ಘ ಕಾಲ ನಿದ್ದೆ ಮಾಡಿದರೆ, ಎದ್ದಾಗ ಮಂಕು ಕವಿದಂತೆ, ದೇಹವೆಲ್ಲ ಜಡವಾದಂತೆ ಭಾಸವಾಗುತ್ತದೆ. ಇದಕ್ಕೆ ಕಾರಣ, ಗಾಢ ನಿದ್ದೆಯ ಆವರ್ತನವನ್ನು ದೇಹ ಪ್ರವೇಶಿಸುವುದು. ವ್ಯಾಯಾಮ ಅಥವಾ ಕ್ರೀಡಾ ಚಟುವಟಿಕೆಗಳಿಂದ ದೇಹಕ್ಕೆ ತೀವ್ರ ಆಯಾಸವಾದಾಗಲೂ ನಿದ್ದೆಯ ಅವಧಿ 30 ನಿಮಿಷ ಮೀರದಿದ್ದರೆ ಒಳ್ಳೆಯದು.

Continue Reading
Advertisement
Crime News
ಕ್ರೈಂ10 mins ago

Crime News: ಪತ್ನಿಯನ್ನು ಕೊಂದು ಶವದ ಫೋಟೊ ಸಂಬಂಧಿಕರಿಗೆ ಕಳುಹಿಸಿ ನೇಣಿಗೆ ಶರಣಾದ ಪತಿ; ಅನಾಥವಾಯ್ತು ಹೆಣ್ಣು ಮಗು

RCB vs CSK
ಕ್ರೀಡೆ14 mins ago

RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

sarjapura boy murder case
ಕ್ರೈಂ45 mins ago

Murder Case: ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌, ಮೊಬೈಲ್‌ ಗೀಳಿಗಾಗಿ ಅಣ್ಣನೇ ಕೊಂದ

Skin Care Tips
ಆರೋಗ್ಯ1 hour ago

Skin Care Tips: ಬಿಸಿಲಿನಿಂದ ಚರ್ಮ ಕಪ್ಪಾಗಿದೆಯಾ? ಇಲ್ಲಿದೆ ಸರಳ ಮನೆಮದ್ದು

karnataka Weather Forecast
ಮಳೆ2 hours ago

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Food Tips Kannada
ಆರೋಗ್ಯ2 hours ago

Food Tips Kannada: ಶಕ್ತಿವರ್ಧಕಗಳಲ್ಲ, ನಿಮ್ಮ ಶಕ್ತಿಯನ್ನೇ ಬಸಿದು ತೆಗೆಯುವ ಆಹಾರಗಳಿವು!

World Aids Vaccine Day
ದೇಶ3 hours ago

World Aids Vaccine Day: ಇಂದು ವಿಶ್ವ ಏಡ್ಸ್ ಲಸಿಕೆ ದಿನ; ಈ ದಿನದ ಹಿನ್ನೆಲೆ ಏನು?

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರ ಬೆನ್ನ ಹಿಂದೆ ನಡೆಯುತ್ತೆ ಪಿತೂರಿ..ಎಚ್ಚರವಾಗಿರಿ

ipl 2024
ಪ್ರಮುಖ ಸುದ್ದಿ7 hours ago

IPL 2024 : ಲಕ್ನೊ ವಿರುದ್ಧವೂ ಸೋತ ಮುಂಬೈ; ಹತ್ತನೇ ಸ್ಥಾನ ಕಾಯಂ

Anjali Murder Case
ಕರ್ನಾಟಕ8 hours ago

Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ12 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌