Nipah virus: ನಿಪಾ ವೈರಸ್‌ ಬಗ್ಗೆ ನಿಗಾ ಇರಲಿ! ಇದರ ಲಕ್ಷಣವೇನು? ಕೋವಿಡ್‌ಗೂ ಅದಕ್ಕೂ ವ್ಯತ್ಯಾಸವೇನು? ಇಲ್ಲಿದೆ ವಿವರ - Vistara News

ಆರೋಗ್ಯ

Nipah virus: ನಿಪಾ ವೈರಸ್‌ ಬಗ್ಗೆ ನಿಗಾ ಇರಲಿ! ಇದರ ಲಕ್ಷಣವೇನು? ಕೋವಿಡ್‌ಗೂ ಅದಕ್ಕೂ ವ್ಯತ್ಯಾಸವೇನು? ಇಲ್ಲಿದೆ ವಿವರ

ನಿಪಾ ವೈರಸ್‌ಗೆ (Nipah virus) ಸದ್ಯ ಯಾವುದೇ ಔಷಧವಿಲ್ಲ; ಲಸಿಕೆಯಿಲ್ಲ. ಇದರ ಮರಣ ಪ್ರಮಾಣ ಕೂಡ ಹೆಚ್ಚು, ಹೀಗಾಗಿ ಎಚ್ಚರಿಕೆ ವಹಿಸುವುದೇ ಸದ್ಯಕ್ಕೆ ಪರಿಹಾರ.

VISTARANEWS.COM


on

Nipah Virus
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇರಳದಲ್ಲಿ ನಿಪಾ ವೈರಸ್‌ (Nipah virus) ಪೀಡಿತವಾಗಿರುವ 5ನೇ ಪ್ರಕರಣ ಪತ್ತೆಯಾಗಿದೆ. ನಿಪಾ ರೋಗಿಯೊಂದಿಗೆ ನಿಕಟ ಸಂಪರ್ಕಕ್ಕೆ ಬಂದ 24 ವರ್ಷದ ಆರೋಗ್ಯ ಕಾರ್ಯಕರ್ತರಿಗೂ ಇದು ಅಂಟಿಕೊಂಡಿದ್ದು, ರಾಜ್ಯದಲ್ಲಿ ಒಟ್ಟು ಪಾಸಿಟಿವ್ (nipah positive) ಪ್ರಕರಣಗಳ ಸಂಖ್ಯೆ ಐದಾಗಿದೆ.

ನಿಪಾ ವೈರಸ್ ಹರಡುವುದನ್ನು ತಡೆಯಲು ಕೇರಳ ರಾಜ್ಯ ಸರ್ಕಾರ ಕಂಟೈನ್‌ಮೆಂಟ್ ಝೋನ್‌ಗಳು ಮತ್ತು ನಿರ್ಬಂಧಗಳನ್ನು ಘೋಷಿಸಿದೆ. ಸುಮಾರು 700 ಜನರು ರೋಗಿಗಳ ಸಂಪರ್ಕಕ್ಕೆ ಬಂದಿದ್ದು, ಇವರನ್ನು ಟ್ರ್ಯಾಕಿಂಗ್‌ ಮಾಡಲಾಗುತ್ತಿದೆ. ಈ 700 ಮಂದಿಯಲ್ಲಿ ಸುಮಾರು 77 ಮಂದಿ ಹೈರಿಸ್ಕ್ ವಿಭಾಗದಲ್ಲಿದ್ದಾರೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಏನಿದು ನಿಪಾ ವೈರಸ್?

ನಿಪಾ ವೈರಸ್ (NiV) ಅನ್ನು ಝೂನೋಟಿಕ್ ವೈರಸ್ (Zoonotic virus) ಎಂದು ವಿವರಿಸಬಹುದು. ಹಣ್ಣಿನ ಬಾವಲಿಗಳು (Fruit bats) ಇದರ ಮೂಲ. ಇದು ಪ್ರಾಣಿಗಳ ಮೂಲಕ ಮನುಷ್ಯರಿಗೆ ಹರಡುತ್ತದೆ. ಬಾವಲಿಗಳು ಮತ್ತು ಹಂದಿಗಳಿಂದ ಹರಡುತ್ತದೆ. ಇದು ಮನುಷ್ಯರಿಗೆ ಮಾತ್ರವಲ್ಲ ಪ್ರಾಣಿಗಳಿಗೂ ಮಾರಕ. ಕಲುಷಿತ ಆಹಾರದ ಮೂಲಕ ಅಥವಾ ನೇರ ಸಂಪರ್ಕದ ಮೂಲಕ ಜನರ ನಡುವೆ ಹರಡಬಹುದು. ಇದರ ಸೋಂಕಿಗೆ ಒಳಗಾದವರು ತೀವ್ರವಾದ ಉಸಿರಾಟದ ಸಮಸ್ಯೆ ಎದುರಿಸಬಹುದು. ಮಾರಣಾಂತಿಕ ಎನ್ಸೆಫಲೈಟಿಸ್‌ನಂತಹ ತೀವ್ರ ಸಮಸ್ಯೆಗಳನ್ನು ಎದುರಿಸಬಹುದು. ಇದು ವಾಯುವಿನ ಮೂಲಕ ಹರಡುವ ಸೋಕು ಅಲ್ಲ.

ನಿಪಾ ವೈರಸ್‌ನ ಲಕ್ಷಣಗಳು

ನಿಪಾ ವೈರಸ್ ಸೋಂಕಿತರು ಕೋವಿಡ್ (covid- 19 virus) ತರಹದ ರೋಗಲಕ್ಷಣಗಳನ್ನು (Nipah virus symptoms) ಪ್ರದರ್ಶಿಸಬಹುದು. ನಿಪಾ ವೈರಸ್‌ನ ಸಾಮಾನ್ಯ ಲಕ್ಷಣಗಳೆಂದರೆ ಕೆಮ್ಮು, ನೋಯುತ್ತಿರುವ ಗಂಟಲು, ತಲೆತಿರುಗುವಿಕೆ, ಅರೆಮಂಪರು, ಸ್ನಾಯು ನೋವು, ದಣಿವು. ಮೆದುಳಿನ ಊತದ ಪರಿಣಾಮ ತಲೆನೋವು, ಕುತ್ತಿಗೆ ಬಿಗಿತ, ಬೆಳಕಿಗೆ ಕಿರಿಕಿರಿ, ಮಾನಸಿಕ ಗೊಂದಲ ಮತ್ತು ಸುಸ್ತು ಕಾಣಿಸಿಕೊಳ್ಳಬಹುದು. ಇದು ಗಂಭೀರ ಸ್ಥಿತಿಗೆ ಹೋದಾಗ ಪ್ರಜ್ಞಾಹೀನರಾಗಬಹುದು; ಅಂತಿಮವಾಗಿ ಸಾವಿಗೂ ಕಾರಣವಾಗಬಹುದು. ಆದರೆ ಕೋವಿಡ್‌ನಂತೆ ಇದರಲ್ಲಿ ವ್ಯಕ್ತಿ ವಾಸನೆ, ರುಚಿ ಕಳೆದುಕೊಳ್ಳುವುದಿಲ್ಲ. ಆದರೆ ಜ್ವರ ತೀವ್ರಗೊಂಡಾಗ ಸಹಜವಾಗಿಯೇ ರುಚಿಶಕ್ತಿ ಹಾಗೂ ಘ್ರಾಣಶಕ್ತಿ ಕಡಿಮೆಯಾಗಬಹುದು.

ಚಿಕಿತ್ಸೆ ಏನು?

ಈ ವೈರಸ್‌ಗೆ ಯಾವುದೇ ಯಶಸ್ವಿ ನಿರ್ದಿಷ್ಟ ಚಿಕಿತ್ಸೆ ಲಭ್ಯವಿಲ್ಲ. ಯಾವುದೇ ಲಸಿಕೆಯನ್ನೂ ಇನ್ನೂ ಕಂಡುಹಿಡಿದಿಲ್ಲ. ಮೇಲಿನ ರೋಗಲಕ್ಷಣಗಳನ್ನು ಗುರುತಿಸಿದರೆ ವೈದ್ಯರನ್ನು ತಕ್ಷಣ ಸಂಪರ್ಕಿಸಬೇಕು. ಎನ್ಸೆಫಲೈಟಿಸ್ ಮತ್ತು ಇತರ ರೋಗಲಕ್ಷಣಗಳ ಚಿಕಿತ್ಸೆಗೆ ವೈದ್ಯರು ಔಷಧಿಗಳನ್ನು ಸಹ ಶಿಫಾರಸು ಮಾಡುತ್ತಾರೆ. ಸ್ವಯಂ-ಔಷಧಿ ಮಾಡಬೇಡಿ. ಅದು ಅಪಾಯಕಾರಿ ಮತ್ತು ಸ್ಥಿತಿಯನ್ನು ಇನ್ನಷ್ಟು ಹದಗೆಡಿಸಬಹುದು.

ಮುನ್ನೆಚ್ಚರಿಕೆ ಏನು?

ನೆಲದ ಮೇಲೆ ಬಿದ್ದಿರುವ ಪೇರಳೆ ಮುಂತಾದ ಹಣ್ಣುಗಳನ್ನು ತಿನ್ನುವುದನ್ನು ತಪ್ಪಿಸಿ. ಏಕೆಂದರೆ ಅವು ಕಲುಷಿತವಾಗಿರಬಹುದು. ವೈರಸ್‌ ಹೊಂದಿರುವ ಬಾವಲಿ ಅದನ್ನು ಕಚ್ಚಿರಬಹುದು. ಸೋಂಕಿತ ಪ್ರಾಣಿಗಳು ಮತ್ತು ಮನುಷ್ಯರ ಸಂಪರ್ಕಕ್ಕೆ ಬರುವುದನ್ನು ತಪ್ಪಿಸಿ. ಹಣ್ಣಿನ ಬಾವಲಿಗಳನ್ನು ನಿಮ್ಮಿಂದ ದೂರವಿಡಿ. ಹಂದಿ ಮಾಂಸ ಸೇವನೆಯನ್ನೂ ದೂರವಿಡಿ. ರೋಗಲಕ್ಷಣಗಳ ಬಗ್ಗೆ ಅನುಮಾನ ಹೊಂದಿದ್ದರೆ ವೈದ್ಯರನ್ನು ಸಂಪರ್ಕಿಸಿ.

ಇದನ್ನೂ ಓದಿ: Nipah Virus: ಕೇರಳದಲ್ಲಿ ನಿಫಾ ವೈರಸ್‌ ಹಾವಳಿ; ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆ, ಲಾಕ್‌ಡೌನ್ ಜಾರಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

ಬಿಸಿಲಾಘಾತಕ್ಕೆ ಜೀವ ತೆತ್ತವರ ವಿಷಯಗಳೂ ಕೇಳಿಬರುತ್ತಿವೆ. ನಾವು ಹೊರಗೆ ಛತ್ರಿ ಹಿಡಿದೇ ಹೋಗುತ್ತೇವೆ, ಚೆನ್ನಾಗಿ ನೀರು ಕುಡಿಯುತ್ತೇವೆ. ಆದರೂ ಬಿಸಿಳ ಝಳ ತಡೆಯಲಾಗುತ್ತಿಲ್ಲ. ಒಮ್ಮೆ ಶಾಖದ ಆಘಾತಕ್ಕೆ ಅಥವಾ ನಿರ್ಜಲೀಕರಣಕ್ಕೆ ತುತ್ತಾದರೆ, ಚೇತರಿಸಿಕೊಳ್ಳಲು ನಾಲ್ಕಾರು ದಿನಗಳಾದರೂ ಬೇಕಾಗುತ್ತದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದಿದ್ದರೆ, ಜೀವಕ್ಕೆ ಅಪಾಯ ತಪ್ಪಿದ್ದಲ್ಲ. ಹಾಗಾದರೆ ಇವುಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲವೇ? ಈ ಉಪಯುಕ್ತ (Summer Tips) ಲೇಖನ ಓದಿ.

VISTARANEWS.COM


on

Summer Tips
Koo

ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದಲ್ಲ, ಇನ್ನೂ ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಈ ಘೋರ ಬಿಸಿಲಿನಲ್ಲಿ ಸ್ಮೃತಿ ತಪ್ಪಿದವರ ಸುದ್ದಿಗಳು ಅಲ್ಲಲ್ಲಿ ಕೇಳುತ್ತಿವೆ. ಬಿಸಿಲಾಘಾತಕ್ಕೆ ಜೀವ ತೆತ್ತವರ ವಿಷಯಗಳೂ ಕೇಳಿಬರುತ್ತಿವೆ. ಛತ್ರಿ ಹಿಡಿದೇ ಹೋಗುತ್ತೇವೆ ಹೊರಗೆ, ಚೆನ್ನಾಗಿ ನೀರು ಕುಡಿಯುತ್ತೇವೆ ನಾವು. ನಮಗೇನು ಬಿಸಿಲಿನ ಭಯವಿಲ್ಲ ಎನ್ನುವವರಿದ್ದಾರೆ. ವಿಷಯ ಹಾಗಲ್ಲ, ಬಿಸಿಲ ದಿನಗಳಲ್ಲಿ ಆರೋಗ್ಯದ ಕಾಳಜಿಯನ್ನು ಎಷ್ಟು ಮಾಡಿದರೂ ಸಾಲದು. ಒಮ್ಮೆ ಶಾಖದ ಆಘಾತಕ್ಕೆ ಅಥವಾ ನಿರ್ಜಲೀಕರಣಕ್ಕೆ ತುತ್ತಾದರೆ, ಚೇತರಿಸಿಕೊಳ್ಳಲು ನಾಲ್ಕಾರು ದಿನಗಳಾದರೂ ಬೇಕಾಗುತ್ತದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದಿದ್ದರೆ, ಜೀವಕ್ಕೆ ಅಪಾಯ ತಪ್ಪಿದ್ದಲ್ಲ. ಹಾಗಾದರೆ ಇವುಗಳಿಂದ (Summer Tips) ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲವೇ?

Dry weather Summer Heat

ಏಕೆ ಹೀಗಾಗುತ್ತದೆ?

ಮೊದಲಿಗೆ, ಬಿಸಿಲಿಗೆ ಎಚ್ಚರ ತಪ್ಪುವುದೇಕೆ ಎಂಬುದನ್ನು ಅರ್ಥ ಮಾಡಿಕೊಳ್ಳೋಣ. ಹೊರಗಿನ ವಾತಾವರಣದ ಉಷ್ಣತೆಯನ್ನು ಆಧರಿಸಿ, ನಮ್ಮ ದೇಹ ತನ್ನ ಉಷ್ಣತೆಯನ್ನು ಮಾರ್ಪಾಡು ಮಾಡಿಕೊಳ್ಳುತ್ತದೆ. ಹೊರಗಿನ ತಾಪಮಾನ ತೀವ್ರವಾಗಿ ಏರಿಕೆಯಾದಾಗ, ದೇಹದೊಳಗಿನ ಉಷ್ಣತೆಯನ್ನು ತಗ್ಗಿಸುವುದಕ್ಕೆ ಶರೀರ ಬೆವರಲು ಪ್ರಾರಂಭಿಸುತ್ತದೆ. ಇದರಿಂದಲೇ ದೇಹ ತಣ್ಣಗಾಗಬೇಕು, ಆಂತರಿಕ ಉಷ್ಣತೆ ನಿಯಂತ್ರಣದಲ್ಲಿ ಇರಬೇಕು. ಆದರೆ ಈ ಎಲ್ಲ ತಂತ್ರಗಳು ಕೈಕೊಟ್ಟಾಗ, ಸಾಕಾಗದೆ ಇದ್ದಾಗ ಅಥವಾ ಅತಿಯಾಗಿ ಬೆವರಿ ದೇಹದಲ್ಲಿ ನೀರಿನಂಶ ಕಡಿಮೆ ಆದಾಗ, ಎಚ್ಚರ ತಪ್ಪುತ್ತದೆ. ಇದರಿಂದ ಮೆದುಳಿಗೆ ಅಗತ್ಯವಾದಷ್ಟು ರಕ್ತಸಂಚಾರ ಆಗದಿದ್ದರೆ, ಪಾರ್ಶ್ವವಾಯು ಸಂಭವಿಸಿ ಜೀವಹಾನಿಯೂ ಆಗಬಹುದು.

ಮಾನವ ಶರೀರ ತನ್ನಷ್ಟಕ್ಕೆ ತಡೆದುಕೊಳ್ಳಲು ಸಾಧ್ಯವಾಗುವ ಗರಿಷ್ಟ ಉಷ್ಣತೆಯೆಂದರೆ ೪೨.೩ ಡಿಗ್ರಿ ಸೆ. ಇದಿಷ್ಟು ತಡೆಯುವುದೂ ಸುಲಭವಿಲ್ಲ. ಇನ್ನು ಇದಕ್ಕಿಂತಲೂ ಹೆಚ್ಚಿನ ತಾಪಮಾನವನ್ನು ಸಹಿಸಿಕೊಳ್ಳಲು ಏನೆಲ್ಲ ಉಪಚಾರ ಸಾಧ್ಯವೋ ಅದನ್ನು ನಮಗೆ ನಾವೇ ಮಾಡಿಕೊಳ್ಳಬೇಕು. ಸಿಕ್ಕಾಪಟ್ಟೆ ನೀರು ಕುಡಿಯುವುದು, ಎಲೆಕ್ಟ್ರೋಲೈಟ್‌ ಮರುಪೂರಣ ಮಾಡುವುದು, ಚೆನ್ನಾಗಿ ಗಾಳಿಯಾಡುವ ವಾತಾವರಣದಲ್ಲಿರುವುದು- ಇಂಥವೆಲ್ಲ ನಾವು ಅಗತ್ಯವಾಗಿ ಮಾಡಬೇಕಾದ ಕೆಲಸಗಳು.

ಉಷ್ಣತೆಗೆ ಮಾತ್ರವಲ್ಲ

ತೀವ್ರ ತಾಪಮಾನಗಳಿಗೆ ಎಚ್ಚರ ತಪ್ಪುವುದು ಬಿಸಿ ಹೆಚ್ಚಾದಾಗ ಮಾತ್ರವಲ್ಲ, ತೀವ್ರ ಚಳಿಯಲ್ಲೂ ಆಗುತ್ತದೆ. ಈ ಎರಡೂ ಅತಿರೇಕದ ತಾಪಮಾನಗಳಲ್ಲಿ ದೇಹದ ಉಷ್ಣತಾ-ನಿಯಂತ್ರಕ ವ್ಯವಸ್ಥೆ ಕೈಕೊಡಬಹುದು. ಬಿಸಿ ಹೆಚ್ಚಾದಾಗ ಮೆದುಳಿಗೆ ರಕ್ತಸಂಚಾರ ಸರಾಗ ಆಗದಿರುವ ಸಂಭವ ಇರುವದಂತೆಯೇ, ಚಳಿ ಹೆಚ್ಚಾದಾಗಲೂ ಆಗುತ್ತದೆ. ಹೊರಗಿನ ಚಳಿ ತೀವ್ರವಾಗಿ ಹೆಚ್ಚಾದರೆ, ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳುವುದಕ್ಕೆ ರಕ್ತ ನಾಳಗಳು ಸಂಕೋಚಗೊಳ್ಳುತ್ತವೆ. ಹೀಗೆ ಸಂಕೋಚಗೊಳ್ಳುವುದು ಅತಿಯಾದರೆ ಆಗಲೂ ಮೆದುಳಿಗೆ ಬೇಕಾದಷ್ಟು ರಕ್ತಸಂಚಾರ ಆಗದೆ ಜ್ಞಾನ ತಪ್ಪಬಹುದು.

Summer Fashion

ತಪ್ಪಿಸಿಕೊಳ್ಳಲಾಗದೆ?

ಖಂಡಿತ ಸಾಧ್ಯವಿದೆ. ಮೊದಲಿಗೆ, 40 ಡಿ.ಸೆ. ಉಷ್ಣತೆಯನ್ನು ತಲುಪಿದಾಗ ಮನೆಯಿಂದ ಹೊರಗೆ ಹೋಗಬೇಡಿ. ಹೋಗುವುದು ಅನಿವಾರ್ಯವಾದರೆ, ಸಡಿಲವಾದ ಬಿಳಿ ಅಥವಾ ತಿಳಿ ಬಣ್ಣದ ಹತ್ತಿಯ ಬಟ್ಟೆಗಳನ್ನೇ ಧರಿಸಿ. ತಲೆಗೆ ಟೋಪಿ, ಛತ್ರಿಗಳಂಥವು ಇದ್ದರೆ ಒಳ್ಳೆಯದು. ನಿಲ್ಲಿಸಿದ ಕಾರಿನೊಳಗೆ ಯಾರನ್ನೂ ಬಿಡಬೇಡಿ. ಈ ಸೆಕೆಯಲ್ಲಿ ದಿನಕ್ಕೆ ಐದು ಲೀಟರ್‌ ನೀರು ಅಥವಾ ಪೇಯಗಳನ್ನು ಕುಡಿಯುವ ಗುರಿ ಇರಿಸಿಕೊಳ್ಳಿ. ಆಲ್ಕೋಹಾಲ್‌ ಮತ್ತು ಕೆಫೇನ್‌ ಸೇವನೆಯ ಮೇಲೆ ಕಡಿವಾಣ ಅಗತ್ಯ. ಇಲ್ಲದಿದ್ದರೆ ದೇಹ ಬೇಗನೇ ನಿರ್ಜಲೀಕರಣಕ್ಕೆ ತುತ್ತಾಗುತ್ತದೆ. ಜೊತೆಗೆ, ಸೆಕೆಯಲ್ಲಿ ದೇಹವನ್ನು ತಂಪಾಗಿಸುವ ಶಾರೀರಿಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ತಲೆನೋವು, ಅತಿಯಾಗಿ ಬೆವರುವುದು, ಬಾಯಿ ಒಣಗುವುದು, ತೀರದ ದಾಹ, ಮೈಯೆಲ್ಲ ಬಿಸಿಯಾದ ಅನುಭವಗಳು ಆದರೆ ಜಾಗ್ರತೆ ಮಾಡಿ. ತಕ್ಷಣವೇ ದೇಹವನ್ನು ತಂಪಾಗಿಸುವ ಬಗ್ಗೆ ಕ್ರಮ ಕೈಗೊಳ್ಳಿ. ತಂಪಾದ ಬಟ್ಟೆಯಿಂದ ಇಡೀ ದೇಹವನ್ನು ಒರೆಸಬಹುದು. ಒಆರೆಸ್‌, ಎಳನೀರು ಮುಂತಾದ ಎಲೆಕ್ಟ್ರೋಲೈಟಿಕ್‌ ಪೇಯಗಳು ಬೇಕಾಗುತ್ತವೆ. ಕೂಲರ್‌, ಎಸಿಯಂಥ ಉಪಕರಣಗಳ ಮೂಲಕ ಮನೆಯ ವಾತಾವರಣವನ್ನು ತಂಪಾಗಿಸಲು ಪ್ರಯತ್ನಿಸಿ. ಈ ಹೊತ್ತಿನಲ್ಲಿ ಮನೆಯಿಂದ ಹೊರಗಿದ್ದರೆ, ತಂಪಾದ ನೆರಳಿನಂಥ ಜಾಗಕ್ಕೆ ಹೋಗಿ. ಬಿಸಿಲಿನ ಆಘಾತ ತಾಗಿದಾಗ ತ್ವರಿತವಾಗಿ ಕ್ರಮ ಕೈಗೊಳ್ಳದಿದ್ದರೆ ಜೀವಕ್ಕೇ ಎರವಾಗುತ್ತದೆ, ನೆನಪಿರಲಿ.

ಇದನ್ನೂ ಓದಿ: Stress can cause neck pain: ಕುತ್ತಿಗೆ ನೋವೇ?‌ ಮಾನಸಿಕ ಒತ್ತಡವೂ ಕಾರಣವಾಗಿರಬಹುದು!

Continue Reading

ಆರೋಗ್ಯ

Summer Health Tips: ಬೇಸಿಗೆಯಲ್ಲಿ ತಂಪಾಗಿರಲು ಬೇಕು ಈ ಆಹಾರ!

ಬಿರುಬೇಸಿಗೆಯಲ್ಲಿ ಕುಡಿಯುವುದಕ್ಕೆ ಪೌಷ್ಟಿಕವಾದ ಪೇಯಗಳು ಬೇಕು. ಆ ಪೇಯಗಳು ದೀರ್ಘಕಾಲದವರೆಗೆ ದೇಹಕ್ಕೆ ಬೇಕಾದ ಶಕ್ತಿಯನ್ನು ಒದಗಿಸುತ್ತಿರಬೇಕು. ಇದರಿಂದ ಸೆಕೆಗೆ ಸೊರಗದೆ, ದೇಹವನ್ನು ಸಶಕ್ತವಾಗಿ ಇರಿಸಿಕೊಳ್ಳಬಹುದು. ಇವೆಲ್ಲವೂ ಇರುವ ಆಹಾರವೆಂದು ಹುರಿಹಿಟ್ಟು. ಏನು ಲಾಭ ಇದರ ಸೇವನೆಯಿಂದ? ಈ (Summer Health Tips) ಲೇಖನ ಓದಿ.

VISTARANEWS.COM


on

Summer Health Tips
Koo

ಪುಟ್ಟ ಮಕ್ಕಳಿಗೆ ಘನ ಆಹಾರವನ್ನು ಪ್ರಾರಂಭಿಸುವ ದಿನಗಳಲ್ಲಿ ಸಾಮಾನ್ಯವಾಗಿ ಬಳಕೆಯಾಗುವುದು ಹುರಿದ ಹಿಟ್ಟುಗಳು ಅಥವಾ ಹುರಿಟ್ಟುಗಳು. ಧಾನ್ಯಗಳು, ಸಿರಿಧಾನ್ಯಗಳು, ಕಾಳುಗಳನ್ನು ತೊಳೆದು, ಮೊಳಕೆ ಬರಿಸಿ, ಅದನ್ನು ಹುರಿದು, ಹಿಟ್ಟು ಮಾಡಲಾಗುತ್ತದೆ. ಈ ಪೌಷ್ಟಿಕ ಪುಡಿಯನ್ನು ಅಂಬಲಿ ಅಥವಾ ಗಂಜಿಯಂತೆ ಕಾಯಿಸಿ ಪುಟ್ಟ ಮಕ್ಕಳಿಗೆ ಉಣಿಸಲಾಗುತ್ತದೆ. ಜೊತೆಗೆ ಹಾಲು, ಬೆಲ್ಲ ಎಂದೆಲ್ಲ ಹಾಕಿ, ರುಚಿಕಟ್ಟಾಗಿಸಿದರೆ ಪುಟಾಣಿಗಳು ತಿನ್ನುವುದಕ್ಕೆ ʻಒಲ್ಲೆʼ ಎನ್ನುವುದಿಲ್ಲ. ಅದನ್ನು ಪುಟ್ಟ ಮಕ್ಕಳಿಗೆ ಮಾತ್ರವೇ ಬಳಸಬೇಕೆಂದಿಲ್ಲ. ಈ ಪೌಷ್ಟಿಕ ಪುಡಿಯನ್ನು ಹಲವು ರೀತಿಯಲ್ಲಿ ಉಪಯೋಗಿಸಬಹುದು. ಅದರಲ್ಲೂ ಬೇಸಿಗೆ ದಿನಗಳಲ್ಲಿ ಊಟ ಮಾಡುವುದೇ ಬೇಡ ಎನಿಸುವಾಗ, ಕುಡಿಯುವುದಕ್ಕೆ ಏನಾದರೂ ಇದ್ದೆ ಸಾಕು ಎನಿಸುವಾಗ ಇಂಥ ಹುರಿಹಿಟ್ಟುಗಳು ದೇಹಕ್ಕೆ ಚೈತನ್ಯ ನೀಡುತ್ತವೆ. ಇದನ್ನು ಅಂಬಲಿಯಂತೆ ಮಾಡಿ ಕುಡಿಯಬಹುದು; ಹಾಲು ಸೇರಿಸಿ ಸೇವಿಸಬಹುದು; ಮಜ್ಜಿಗೆ ಬೆರೆಸಿ ಕುಡಿಯಬಹುದು. ಬೇರೆ ವ್ಯಂಜನಗಳೊಂದಿಗೆ ಬೆರೆಸಿ ಖೀರಿನಂತೆ ಮಾಡಿದರೆ ರುಚಿ ಹೆಚ್ಚು. ಇದರಿಂದ ಬೇಶಿಗೆಯ ದಿನಗಳಲ್ಲಿ ದೇಹಕ್ಕೆ ಬೇಕಾದ ಸತ್ವಗಳು ಸುಲಭವಾಗಿ ದೊರೆಯುತ್ತವೆ ಮತ್ತು ಪಚನಕ್ಕೂ ಕಷ್ಟವಾಗುವುದಿಲ್ಲ. ಏನು ಈ (Summer Health Tips) ಹುರಿಹಿಟ್ಟಿನ ಲಾಭಗಳು?

ragi powder

ಹಲವು ಬಗೆ

ಈ ಹಿಟ್ಟಿನಲ್ಲೇ ಹಲವು ಬಗೆಗಳಿವೆ. ಆದರೆ ಜನಪ್ರಿಯವಾಗಿ ಬಳಕೆಯಲ್ಲಿರುವುದು ರಾಗಿ ಹುರಿಹಿಟ್ಟು. ಅದಲ್ಲದೆ, ಕಡಲೆ, ಹೆಸರು, ಹುರುಳಿ ಮುಂತಾದ ಕಾಳುಗಳು, ಗೋದಿ, ಜೋಳದಂಥ ಧಾನ್ಯಗಳು, ಚಿಯಾ, ಅಗಸೆಯಂಥ ಬೀಜಗಳು, ಬಾದಾಮಿ, ಗೋಡಂಬಿ ಮುಂತಾದ ಯಾವುದನ್ನೂ ಈ ಹಿಟ್ಟಿಗೆ ಹುರಿದು ಸೇರಿಸಿಕೊಳ್ಳಬಹುದು. ಇದರಿಂದ ಪೌಷ್ಟಿಕಾಂಶ ಮತ್ತು ರುಚಿ ಹೆಚ್ಚುತ್ತದೆ. ಯಾವುದೆಲ್ಲ ಪರಿಕರಗಳನ್ನು ಇದಕ್ಕೆ ಸೇರಿಸಲಾಗಿದೆ ಎನ್ನುವುದರ ಮೇಲೆ ಇದರ ಸತ್ವಗಳ ಏನೇನು ಎಂಬುದು ನಿರ್ಧಾರವಾಗುತ್ತದೆ.

ಸ್ನಾಯುಗಳಿಗೆ ಬೇಕು

ಈ ಹಿಟ್ಟಿನಲ್ಲಿ ಪ್ರೊಟೀನ್‌ ಸಾಂದ್ರವಾಗಿದೆ. ಚಿಕನ್‌, ಮೊಟ್ಟೆ, ಪನೀರ್‌ನಂಥ ಹೆಚ್ಚು ಕೊಬ್ಬಿರುವ ಆಹಾರಗಳು ಕೆಲವೊಮ್ಮೆ ಬಿರುಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ಹೆಚ್ಚಿಸುತ್ತವೆ. ಹಾಗೆಂದು ಪ್ರೊಟೀನ್‌ ಕಡಿಮೆಯಾದರೆ ದೇಹ ಸೊರಗುವುದು ಖಚಿತ. ಬದಲಿಗೆ, ಪ್ರೊಟಿನ್ಭರಿತವಾದ ಇಂಥ ಲಘು ಆಹಾರದ ಆಯ್ಕೆಗಳು ಬೇಸಿಗೆಗೆ ಸೂಕ್ತವಾದವು. ಇವು ದೇಹಕ್ಕೆ ಬೇಕಾದ ಪುಷ್ಟಿಯನ್ನು ನೀಡಿ, ದಿನವಿಡೀ ಚೈತನ್ಯಪೂರ್ಣವಾಗಿ ಇರುವಂತೆ ನೋಡಿಕೊಳ್ಳುತ್ತವೆ.

ealthy internal organs of human digestive system / highlighted blue organs

ಪಚನಕಾರಿ

ಧಾನ್ಯ, ಕಾಳುಗಳ ತೌಡಿನ ಜೊತೆಗೇ ಮಾಡಿರುವಂಥ ಪುಡಿಯಿದು. ಹಾಗಾಗಿ ಇದರಲ್ಲಿ ನಾರಿನಂಶವೂ ಹೇರಳವಾಗಿರುತ್ತದೆ. ಇದರಿಂದ ಜೀರ್ಣಾಂಗಗಳಲ್ಲಿ ಒಳ್ಳೆಯ ಬ್ಯಾಕ್ಟೀರಿಯಗಳ ಸಂಖ್ಯೆಯನ್ನು ಹೆಚ್ಚಿಸಬಹುದು. ಈ ಮೂಲಕ ಸತ್ವಗಳ ಹೀರಿಕೊಳ್ಳುವಿಕೆ ಸಹ ಹೆಚ್ಚುತ್ತದೆ. ಜೊತೆಗೆ ಅಧಿಕ ನಾರಿನಂಶದ ಆಹಾರದಿಂದ ಮಲಬದ್ಧತೆಯೂ ದೂರಾಗುತ್ತದೆ.

ಮಧುಮೇಹಿಗಳಿಗೆ ಸೂಕ್ತ

ಹುರಿಹಿಟ್ಟುಗಳ ಗ್ಲೈಸೆಮಿಕ್‌ ಸೂಚಿ ಕಡಿಮೆ. ಜೊತೆಗೆ ನಾರು, ಪ್ರೊಟೀನ್‌ ಮತ್ತು ಸಂಕೀರ್ಣಪಿಷ್ಟಗಳಿರುವ ಆಹಾರಗಳು ಮಧುಮೇಹಿಗಳಿಗೆ ಒಳ್ಳೆಯದು. ಇದರಿಂದ ರಕ್ತದಲ್ಲಿ ಸಕ್ಕರೆಯಂಶ ದಿಢೀರ್‌ ಏರಿಕೆ ಆಗುವುದನ್ನು ತಡೆಯಬಹುದು. ಹುರಿಹಿಟ್ಟುಗಳಲ್ಲಿ ರಾಗಿ, ಜೋಳ ಮುಂತಾದ ಸಿರಿಧಾನ್ಯಗಳ ಪ್ರಮಾಣವನ್ನು ಹೆಚ್ಚಿಸಿದರೆ, ಅದನ್ನು ಪ್ರಮುಖ ಆಹಾರವಾಗಿಯೂ ಮಧುಮೇಹಿಗಳು ಬಳಸಬಹುದು.

Heart Health In Winter

ಹೃದಯದ ಮಿತ್ರ

ಇದರಲ್ಲಿರುವ ಕರಗಬಲ್ಲ ನಾರಿನಂಶವು ರಕ್ತದಲ್ಲಿ ಕೊಲೆಸ್ಟ್ರಾಲ್‌ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ. ಜೊತೆಗೆ, ಮೆಗ್ನೀಶಿಯಂ, ಪೊಟಾಶಿಯಂನಂಥ ಖನಿಜಗಳು ರಕ್ತದೊತ್ತಡ ಕಡಿಮೆ ಮಾಡುವಲ್ಲಿ ನೆರವಾಗುತ್ತವೆ. ದೇಹದಲ್ಲಿರುವ ಅಧಿಕ ಕೊಬ್ಬಿನಂಶವನ್ನು ಕರಗಿಸಿ, ರಕ್ತದೊತ್ತಡವನ್ನೂ ನಿಯಂತ್ರಿಸಲು ನೆರವಾಗುವ ಮೂಲಕ, ಈ ಹಿಟ್ಟು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

ತೂಕ ಇಳಿಗೆ

ಪ್ರೊಟೀನ್‌ ಮತ್ತು ನಾರು ಹೆಚ್ಚಿರುವ ಆಹಾರಗಳು ತೂಕ ಇಳಿಕೆಗೆ ಪೂರಕವಾದವು. ಇವುಗಳ ಜೊತೆಗೆ ಸರಳ ಪಿಷ್ಟದ ಆಹಾರದ ಬದಲಿಗೆ, ಸಂಕೀರ್ಣ ಪಿಷ್ಟವಿರುವ ಆಹಾರ ಬೇಕು. ಅವೆಲ್ಲವೂ ಹುರಿಹಿಟ್ಟಿನಲ್ಲಿ ಲಭ್ಯವಿದೆ. ಈ ಎಲ್ಲ ಅಂಶಗಳು ವಿಘಟನೆಗೊಂದು ರಕ್ತ ಸೇರಲು ಹೆಚ್ಚು ಕಾಲ ತೆಗೆದುಕೊಳ್ಳುತ್ತವೆ. ಅಂದರೆ ಬೇಗ ಹಸಿವಾಗುವುದಿಲ್ಲ. ಹೆಚ್ಚು ಆಹಾರ ತಿನ್ನದಿದ್ದರೂ, ದೀರ್ಘ ಸಮಯದವರೆಗೆ ದೇಹಕ್ಕೆ ಬೇಕಾದ ಶಕ್ತಿಯನ್ನು ಒದಗಿಸುತ್ತವೆ.

ಇದನ್ನೂ ಓದಿ: Drinks for Summer: ಬೇಸಿಗೆಯಲ್ಲಿ ತಂಪಾಗಿರಬೇಕೆ? ಈ ಪೇಯಗಳನ್ನು ತಪ್ಪದೇ ಕುಡಿಯಿರಿ

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮ ಆತಂಕಕಾರಿ

ಕೋವಿಡ್‌ ನಂತರದ ದಿನಗಳಲ್ಲಿ ಯುವಜನರಲ್ಲಿಯೂ ವಿವರಿಸಲಾಗದ ತೀವ್ರ ಅಸ್ವಸ್ಥತೆ, ಹೃದಯಸ್ತಂಭನ ಮುಂತಾದವುಗಳು ಕಂಡುಬಂದಿವೆ. ಭಾರತದಲ್ಲಿಯೂ ಹಲವಾರು ಪ್ರಕರಣಗಳು ನಡೆದಿದ್ದು, ಕೋವಿಡ್‌ ಹಾಗೂ ಅದರ ಲಸಿಕೆಯ ಬಗ್ಗೆ ಅನುಮಾನ ಮೂಡಿಸಿದ್ದವು. ಕಳೆದ ವರ್ಷ ಕೇಂದ್ರ ಸರ್ಕಾರ, “ಕೊರೊನಾ ವೇಳೆ ಸಾವು ಗೆದ್ದು ಬಂದವರು ಜಾಸ್ತಿ ಕೆಲಸ ಮಾಡಬಾರದು” ಎಂದು ಸೂಚಿಸಿತ್ತು.

VISTARANEWS.COM


on

Covishield Vaccine
Koo

ಕೊರೊನಾ ಸೋಂಕು (coronavirus, Covid 19) ಎದುರಿಸಲು ನಾವು ನೀವೆಲ್ಲ ತೆಗೆದುಕೊಂಡ ಕೋವಿಶೀಲ್ಡ್‌ ಲಸಿಕೆ (Covishield Vaccine) ಅಡ್ಡ ಪರಿಣಾಮವನ್ನು (Side effects) ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿಯೇ ಇದೀಗ ಒಪ್ಪಿಕೊಂಡಿದೆ. ಇದರೊಂದಿಗೆ, ಕೊರೊನಾ ನಂತರದ ದಿನಗಳ ಅಸ್ವಸ್ಥತೆ, ಹೃದಯಾಘಾತಗಳ ಬಗ್ಗೆ ಮೂಡಿದ್ದ ಆತಂಕಕ್ಕೆ ಇನ್ನಷ್ಟು ಆಧಾರ ದೊರೆತಿದೆ. ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ತನ್ನ ಕೋವಿಡ್ ಲಸಿಕೆ ಕೋವಿಶೀಲ್ಡ್‌ ಅಪರೂಪವಾಗಿ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ನ್ಯಾಯಾಲಯದಲ್ಲಿ ಒಪ್ಪಿಕೊಂಡಿದೆ. ರಕ್ತ ಹೆಪ್ಪುಗಟ್ಟುವಿಕೆ ಮತ್ತು ರಕ್ತದಲ್ಲಿ ಪ್ಲೇಟ್‌ಲೆಟ್ ಕಡಿಮೆಯಾಗುವ ಪರಿಸ್ಥಿತಿಯನ್ನು ಉಂಟುಮಾಡಬಹುದು ಎಂದು ಲಸಿಕೆ ತಯಾರಕರು ಹೇಳಿದ್ದಾರೆ. ಆದರೆ ಇದು ಅಪರೂಪದ ಸಂದರ್ಭಗಳಲ್ಲಿ ಆಗಬಹುದು ಎಂದಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿತ್ತು. ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾದ ಲಸಿಕೆ ಇದೇ ಆಗಿದೆ. ಅಸ್ಟ್ರಾಜೆನೆಕಾ ಯುಕೆಯಲ್ಲಿ ತನ್ನ ಲಸಿಕೆಯು ಹಲವಾರು ಪ್ರಕರಣಗಳಲ್ಲಿ ಸಾವುಗಳು ಮತ್ತು ತೀವ್ರ ಅಸ್ವಸ್ಥತೆಗೆ ಕಾರಣವಾಯಿತು ಎಂಬ ಆರೋಪದ ಮೇಲೆ ಮೊಕದ್ದಮೆಯನ್ನು ಎದುರಿಸುತ್ತಿದೆ. 51 ಪ್ರಕರಣಗಳಲ್ಲಿ ಸಂತ್ರಸ್ತರು ಲಕ್ಷಗಟ್ಟಲೆ ಪೌಂಡ್‌ ನಷ್ಟ ಪರಿಹಾರ ಬಯಸಿದ್ದಾರೆ. ಅಸ್ಟ್ರಾಜೆನೆಕಾ ಒಪ್ಪಿಕೊಂಡಿರುವ ಆರೋಗ್ಯ ಸಮಸ್ಯೆಯ ಹೆಸರು ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (Thrombosis with Thrombocytopenia Syndrome– TTS). ಇದರಲ್ಲಿ ದೇಹದಲ್ಲಿನ ಅಸಾಮಾನ್ಯ ಸ್ಥಳಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಉಂಟಾಗುತ್ತದೆ. ರಕ್ತದಲ್ಲಿನ ಪ್ಲೇಟ್‌ಲೆಟ್‌ಗಳ ಸಂಖ್ಯೆಯು ಕಡಿಮೆಯಾಗುತ್ತದೆ. ಪ್ಲೇಟ್‌ಲೆಟ್‌ಗಳು ರಕ್ತ ಹೆಪ್ಪುಗಟ್ಟಲು ಸಹಾಯ ಮಾಡುವ ಸಣ್ಣ ಕೋಶಗಳು. ಆದ್ದರಿಂದ ಅವು ತುಂಬಾ ಕಡಿಮೆ ಇರುವುದು ಅಪಾಯಕಾರಿ. ದೇಹದ ರೋಗನಿರೋಧಕ ವ್ಯವಸ್ಥೆಯು ಲಸಿಕೆಗೆ ಪ್ರತಿಕ್ರಿಯಿಸಿ, ರಕ್ತದ ಹೆಪ್ಪುಗಟ್ಟುವಿಕೆಯಲ್ಲಿ ಒಳಗೊಂಡಿರುವ ಪ್ರೋಟೀನ್ ಮೇಲೆ ದಾಳಿ ಮಾಡುವ ಪ್ರತಿಕಾಯಗಳನ್ನು ತಯಾರಿಸುವುದರಿಂದ TTS ಸಂಭವಿಸುತ್ತದೆ.

ಕೋವಿಡ್‌ ನಂತರದ ದಿನಗಳಲ್ಲಿ ಯುವಜನರಲ್ಲಿಯೂ ವಿವರಿಸಲಾಗದ ತೀವ್ರ ಅಸ್ವಸ್ಥತೆ, ಹೃದಯಸ್ತಂಭನ ಮುಂತಾದವುಗಳು ಕಂಡುಬಂದಿವೆ. ಭಾರತದಲ್ಲಿಯೂ ಹಲವಾರು ಪ್ರಕರಣಗಳು ನಡೆದಿದ್ದು, ಕೋವಿಡ್‌ ಹಾಗೂ ಅದರ ಲಸಿಕೆಯ ಬಗ್ಗೆ ಅನುಮಾನ ಮೂಡಿಸಿದ್ದವು. ಕಳೆದ ವರ್ಷ ಕೇಂದ್ರ ಸರ್ಕಾರ, “ಕೊರೊನಾ ವೇಳೆ ಸಾವು ಗೆದ್ದು ಬಂದವರು ಜಾಸ್ತಿ ಕೆಲಸ ಮಾಡಬಾರದು” ಎಂದು ಸೂಚಿಸಿತ್ತು. “ಕೊರೊನಾ ಸೋಂಕು ತಗುಲಿ, ಐಸಿಯುನಲ್ಲಿ ಚಿಕಿತ್ಸೆ ಪಡೆಯುವುದು ಸೇರಿ ಆರೋಗ್ಯ ಸ್ಥಿತಿ ಗಂಭೀರವಾಗಿ, ಬದುಕಿ ಬಂದವರು ಯಾವುದೇ ಕಾರಣಕ್ಕೂ ಹೆಚ್ಚು ದಣಿಯುವ ಕೆಲಸ ಮಾಡಬಾರದು. ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ICMR) ಅಧ್ಯಯನ ವರದಿ ಪ್ರಕಾರ, ಹೃದಯಾಘಾತದ ಭೀತಿ ಇರುವ ಕಾರಣ ಒಂದಷ್ಟು ಸಮಯದವರೆಗೆ ಕೊರೊನಾ ಸೋಂಕಿತರು ಹೆಚ್ಚು ಸಮಯದವರೆಗೆ ಅಥವಾ ಹೆಚ್ಚು ಭಾರ ಹೊರುವ ಕೆಲಸ ಮಾಡಬಾರದು. ಒಂದು ವರ್ಷ ಅಥವಾ ಎರಡು ವರ್ಷಗಳವರೆಗೆ ಇಂತಹ ವ್ಯಕ್ತಿಗಳು ಅತಿಯಾದ ವ್ಯಾಯಾಮ, ಜಿಮ್‌ನಲ್ಲಿ ವರ್ಕೌಟ್‌ ಕೂಡ ಮಾಡಬಾರದು” ಎಂದು ಅಧ್ಯಯನ ವರದಿ ಉಲ್ಲೇಖಿಸಿ ಕೇಂದ್ರ ಆರೋಗ್ಯ ಸಚಿವರು ತಿಳಿಸಿದ್ದರು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕೊರೊನಾ ಸೋಂಕಿನ ನಂತರ ಹೃದಯಾಘಾತ ಪ್ರಮಾಣ ಏರಿಕೆಯಾಗಿರುವುದನ್ನು ಜಾಗತಿಕ ವರದಿಗಳೇ ದೃಢಪಡಿಸಿವೆ. ಜಾಗತಿಕ ವರದಿಯೊಂದರ ಪ್ರಕಾರ, ಸಾಂಕ್ರಾಮಿಕದ ನಂತರ 24-45 ವರ್ಷದೊಳಗಿನವರಲ್ಲಿ ಹೃದಯಾಘಾತ ಪ್ರಮಾಣ ಶೇ.30ರಷ್ಟು ಏರಿಕೆಯಾಗಿದೆ. ಆ ಮೂಲಕ ಅಂತಾರಾಷ್ಟ್ರೀಯವಾಗಿಯೂ ಕೊರೊನಾ ನಂತರ ಹೃದಯಾಘಾತ ಪ್ರಮಾಣ ಹೆಚ್ಚಾಗಿದೆ ಎಂಬುದು ದೃಢಪಟ್ಟಿದೆ. ಕೊರೊನಾ ನಂತರ ಹೃದಯಾಘಾತ ಪ್ರಮಾಣ ಶೇ.3ರಿಂದ ಶೇ.5ರಷ್ಟು ಏರಿಕೆಯಾಗಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರಾಗಿದ್ದ ಡಾ.ಸಿ.ಎನ್.ಮಂಜುನಾಥ್‌ ಕೂಡ ಹೇಳಿದ್ದರು. ಈಗ ಯುವಕರಿಗೂ ಹೃದಯಾಘಾತ ಹೆಚ್ಚುತ್ತಿದೆ. ಅಧಿಕ ಒತ್ತಡ, ಜೀವನ ಶೈಲಿ, ಆಹಾರ ಶೈಲಿ ಇದಕ್ಕೆ ಕಾರಣವಾಗಿದೆ ಎಂದಿದ್ದಾರೆ. ಇದರ ಜೊತೆಗೆ ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮ ಕೂಡ ಸೇರಿಕೊಂಡಿರುವುದು ಆತಂಕಕಾರಿ.

ಇವೆಲ್ಲ ಕಾರಣಗಳಿಂದಾಗಿ, ಕೊರೊನಾದಿಂದಾಗಿ ಪೀಡಿತರಾದವರು ಈ ಬಗ್ಗೆ ಅತೀವ ಎಚ್ಚರ ವಹಿಸಲೇಬೇಕಿದೆ. ಸೂಕ್ತ ಆಹಾರ ಸೇವನೆ, ವ್ಯಾಯಾಮ ಸೇರಿದಂತೆ ಆರೋಗ್ಯಕರ ಜೀವನಶೈಲಿಯನ್ನು ಬರಮಾಡಿಕೊಳ್ಳಬೇಕು. ಸರ್ಕಾರ ಎಷ್ಟೇ ಆರೋಗ್ಯಸೇವೆ ನೀಡಿದರೂ ವ್ಯಕ್ತಿ ತನ್ನ ಆರೋಗ್ಯವನ್ನು ನೋಡಿಕೊಳ್ಳದಿದ್ದರೆ ಯಾರೂ ಏನೂ ಮಾಡಲು ಸಾಧ್ಯವಿಲ್ಲ. ಕೋವಿಡ್‌ ಹಾಗೂ ಲಸಿಕೆಯಿಂದ ಉಂಟಾಗಿರಬಹುದಾದ ಆರೋಗ್ಯ ಸಮಸ್ಯೆಗಳನ್ನೂ ಇನ್ನೊಂದು ತುರ್ತುಸ್ಥಿತಿ ಎಂದೇ ತಿಳಿದು ಸರ್ಕಾರ ಕೂಡ ಕಾರ್ಯಪ್ರವೃತ್ತವಾಗಬೇಕು.

Continue Reading

ಕರ್ನಾಟಕ

Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

Fortis Hospital: ಪಾರ್ಕಿನ್ಸನ್‌ನಿಂದ ಉಂಟಾಗುವ ನರಮಂಡಲದ ಸಮಸ್ಯೆಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಥೆರಪಿಗಾಗಿ ಬೆಂಗಳೂರಿನ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಪಾರ್ಕಿನ್ಸನ್‌ ಮತ್ತು ಡೀಪ್‌ ಬ್ರೇನ್‌ ಸ್ಟಿಮುಲೇಷನ್‌ (ಡಿಬಿಎಸ್) ಎನ್ನುವ ಪ್ರತ್ಯೇಕ ಕ್ಲಿನಿಕ್‌ನ ಉದ್ಘಾಟನೆ ನಡೆದಿದೆ. ಈ ಕುರಿತ ವರದಿ ಇಲ್ಲಿದೆ.

VISTARANEWS.COM


on

Fortis Hospital Launches Deep Brain Stimulation DBS Clinic to Treat Parkinson Disease
Koo

ಬೆಂಗಳೂರು: ಪಾರ್ಕಿನ್ಸನ್‌ನಿಂದ ಉಂಟಾಗುವ ನರಮಂಡಲದ ಸಮಸ್ಯೆಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಥೆರಪಿಗಾಗಿ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ (Fortis Hospital) ಪಾರ್ಕಿನ್ಸನ್‌ ಮತ್ತು ಡೀಪ್‌ ಬ್ರೇನ್‌ ಸ್ಟಿಮುಲೇಷನ್‌ (ಡಿಬಿಎಸ್) ಎನ್ನುವ ಪ್ರತ್ಯೇಕ ಕ್ಲಿನಿಕ್‌ ಪ್ರಾರಂಭಿಸಲಾಗಿದೆ.

ಫೋರ್ಟಿಸ್‌ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ನಿರ್ದೇಶಕ ಡಾ. ರಾಜಕುಮಾರ್ ದೇಶಪಾಂಡೆ, ನೂತನ ಕ್ಲಿನಿಕ್‌ ಅನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇಂದು ಸಾಕಷ್ಟು ಜನರು ವಯಸ್ಸಾದ ಬಳಿಕ ಪಾರ್ಕಿನ್ಸನ್‌ ಕಾಯಿಲೆಗೆ ತುತ್ತಾಗುತ್ತಿದ್ದಾರೆ, ಇದಕ್ಕೆ ಸೂಕ್ತ ಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆ ಈಗಾಗಲೇ ಪರಿಚಯಿಸಿದೆ, ಆದರೆ ಕೆಲವರಿಗೆ ಚಿಕಿತ್ಸೆಗಿಂತ ಹೆಚ್ಚಾಗಿ ಕೆಲವು ದೈಹಿಕ ಅಭ್ಯಾಸಗಳ ಮೂಲಕವೂ ಪಾರ್ಕಿನ್ಸನ್‌ನ ಲಕ್ಷಣಗಳಾದ ಕೈ-ಕಾಲು ನಡುಕ ಇತರೆ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಾಧ್ಯವಾಗಲಿದೆ. ಇದಕ್ಕಾಗಿಯೇ ಪ್ರತ್ಯೇಕ ಕ್ಲಿನಿಕ್‌ ತೆರೆದಿದ್ದೇವೆ. ಇದರ ಜತೆಗೆ, ಡೀಪ್‌ ಬ್ರೇನ್ ಸ್ಟಿಮ್ಯುಲೇಶನ್ (ಡಿಬಿಎಸ್‌) ಚಿಕಿತ್ಸೆಯೂ ದೊರೆಯಲಿದೆ. ಡೀಪ್‌ ಬ್ರೇನ್ ಸ್ಟಿಮ್ಯುಲೇಶನ್ ಪಾರ್ಕಿನ್ಸನ್‌ ಸಮಸ್ಯೆಗೆ ಚಿಕಿತ್ಸೆಯ ಭಾಗ ಎಂದು ವಿವರಿಸಿದರು.

ಇದನ್ನೂ ಓದಿ: Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ಡಾ. ರಘುರಾಮ್ ಜಿ. ಮಾತನಾಡಿ, ಪಾರ್ಕಿನ್ಸನ್‌ ಕಾಯಿಲೆಯಿಂದ ಕೈ-ಕಾಲುಗಳಲ್ಲಿ ನಡುಕ, ತಲೆಯಲ್ಲಿ ನಡುಕ, ಸ್ನಾಯುಗಳ ಬಿಗಿತ, ಚಲನೆಯ ನಿಧಾನತೆ, ಖಿನ್ನತೆ ಮತ್ತು ಭಾವನಾತ್ಮಕ ಬದಲಾವಣೆಗಳು ಸೇರಿದಂತೆ ಸಾಕಷ್ಟು ಸಮಸ್ಯೆಗಳು ಕಂಡು ಬರುತ್ತವೆ. ಇಂತಹ ಕಾಯಿಲೆಗೆ ಕೆಲವೊಮ್ಮೆ ಚಿಕಿತ್ಸೆಗಿಂತ ಥೆರಪಿ ಮುಖ್ಯವಾಗಲಿದೆ.

ಹೀಗಾಗಿ ಡೀಪ್‌ ಬ್ರೇನ್‌ ಸ್ಟಿಮುಲೇಷನ್‌ ಥೆರಪಿಗೆ ಇಲ್ಲಿ ಅವಕಾಶ ನೀಡಲಾಗಿದೆ. ವಯಸ್ಸಾದವರು ಈ ರೀತಿಯ ಕಾಯಿಲೆ ಹೊಂದಿದ್ದರೆ, ಈ ಥೆರಪಿ ತೆಗೆದುಕೊಳ್ಳಬಹುದು. ಈ ಕ್ಲಿನಿಕ್‌ ವಾರದ ದಿನಗಳಲ್ಲಿ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 3:00 ರವರೆಗೆ ತೆರೆದಿರಲಿದೆ. ಇಂದು ಉದ್ಘಾಟನೆಗೊಂಡ ಕ್ಲಿನಿಕ್‌ನಲ್ಲಿ ಮಾನಸಿಕ ಆರೋಗ್ಯ ತಜ್ಞರು ಮತ್ತು ಯೋಗ ತರಬೇತುದಾರರು, ಮಾನಸಿಕ ಯೋಗಕ್ಷೇಮ ಮತ್ತು ಯೋಗ ಅಭ್ಯಾಸಗಳ ಕುರಿತು ಸೆಷನ್‌ಗಳನ್ನು ನಡೆಯಲಿದೆ ಎಂದರು.

ಇದನ್ನೂ ಓದಿ: Multivitamin Pill: ಮಲ್ಟಿವಿಟಮಿನ್‌ ಮಾತ್ರೆಗಳ ಮೊರೆ ಹೋಗದೆ, ನೈಸರ್ಗಿಕವಾಗಿ ಪೋಷಣೆ ಪಡೆಯುವುದು ಹೇಗೆ?

ಕಾರ್ಯಕ್ರಮದಲ್ಲಿ ಫೋರ್ಟಿಸ್ ಆಸ್ಪತ್ರೆಯ ನರವಿಜ್ಞಾನದ ಹೆಚ್ಚುವರಿ ನಿರ್ದೇಶಕ ಡಾ.ಗುರುಪ್ರಸಾದ್ ಹೊಸೂರ್ಕರ್, ಫೋರ್ಟಿಸ್ ಹಾಸ್ಪಿಟಲ್ಸ್ ಬೆಂಗಳೂರಿನ ಬಿಸಿನೆಸ್ ಹೆಡ್ ಅಕ್ಷಯ್ ಒಲೆಟಿ ಉಪಸ್ಥಿತರಿದ್ದರು.

Continue Reading
Advertisement
Manvita Kamath marriage with arun Pics are here
ಸ್ಯಾಂಡಲ್ ವುಡ್55 seconds ago

Manvita Kamath: ಅರುಣ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ʼಟಗರು ಪುಟ್ಟಿʼ

Mallikarjuna Kharge
ರಾಜಕೀಯ8 mins ago

Mallikarjuna Kharge: ಶಿವ, ಶ್ರೀರಾಮನ ಬಗ್ಗೆ ಖರ್ಗೆ ವಿವಾದಾತ್ಮಕ ಹೇಳಿಕೆ; ಬಿಜೆಪಿ ಕಿಡಿ

Job Alert
ಉದ್ಯೋಗ16 mins ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

bomb threat delhi ncr schools
ಪ್ರಮುಖ ಸುದ್ದಿ16 mins ago

‌Bomb Threat: ಬಾಂಬ್‌ ಬೆದರಿಕೆ ಇಮೇಲ್ ಮೂಲ ಪತ್ತೆ, ದಿಲ್ಲಿಯ 100ಕ್ಕೂ ಅಧಿಕ ಶಾಲೆ ಕ್ಲೋಸ್

prajwal revanna actress swara bhasker angry government silence on prajwal revanna
ರಾಜಕೀಯ21 mins ago

Prajwal Revanna: ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ; ಮೋದಿ ವಿರುದ್ಧ ನಟಿಯ ಆಕ್ರೋಶ!

Hassan Pen Drive Case Victims reluctance to sit investigation and Suicide threat if he is disturbed by trial
ಕ್ರೈಂ23 mins ago

Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

Koppala ZP CEO Rahul Ratnam Pandeya Spoke in Progress review meeting at kanakagiri
ಕೊಪ್ಪಳ28 mins ago

Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

LPG Price Cut
ದೇಶ38 mins ago

LPG Price Cut: ತಿಂಗಳ ಆರಂಭದಲ್ಲೇ ಗುಡ್‌ನ್ಯೂಸ್‌; ಎಲ್‌ಪಿಜಿ ಬೆಲೆ 19 ರೂ. ಇಳಿಕೆ

Ambedkar Statue in kalaburagi news
ಕಲಬುರಗಿ47 mins ago

Ambedkar Statue: ಅಂಬೇಡ್ಕರ್‌ ಪ್ರತಿಮೆ ಅಪಮಾನ ಕೇಸ್‌; ಜಾಮೀನು ಪಡೆದ ಆರೋಪಿ ಮನೆಗೆ ಕಲ್ಲು ತೂರಾಟ

gold rate today 18
ಚಿನ್ನದ ದರ1 hour ago

Gold Rate Today: ಬಂಗಾರ‌ ಇಂದೇ ತಗೊಳ್ಳಿ! ಚಿನ್ನದ ಬೆಲೆ ಭಾರೀ ಇಳಿಕೆ; ಇಂದು ಇಷ್ಟಿದೆ ನೋಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌