Footwear Tips: ಸರಿಯಾದ ಪಾದರಕ್ಷೆ ಧರಿಸದಿರುವುದೇ ನಮ್ಮ ಹಲವು ಸಮಸ್ಯೆಗಳಿಗೆ ಕಾರಣ! - Vistara News

ಆರೋಗ್ಯ

Footwear Tips: ಸರಿಯಾದ ಪಾದರಕ್ಷೆ ಧರಿಸದಿರುವುದೇ ನಮ್ಮ ಹಲವು ಸಮಸ್ಯೆಗಳಿಗೆ ಕಾರಣ!

ಚಪ್ಪಲಿ, ಶೂಗಳನ್ನೆಲ್ಲ ಅಂದ-ಚಂದ ನೋಡಿ (Footwear Tips) ತೆಗೆದುಕೊಳ್ಳುವ ಬದಲು, ಧರಿಸಿದಾಗ ಯಾವುದು ಹಿತ ಎಂಬುದಕ್ಕೆ ಮೊದಲ ಆದ್ಯತೆ ನೀಡಬೇಕು. ಹೇಗಿರಬೇಕು ನಮ್ಮ ಪಾದರಕ್ಷೆ? ಪಾದರಕ್ಷೆಗಳು ನಮ್ಮ ಪಾದಗಳ ಆರೋಗ್ಯವನ್ನು ಮಾತ್ರವೇ ಅಲ್ಲ, ನಮ್ಮ ಮಂಡಿ, ಇಡೀ ಕಾಲು, ಬೆನ್ನು, ಸೊಂಟಗಳ ಆರೋಗ್ಯವನ್ನೂ ನಿರ್ಧರಿಸಬಲ್ಲವು. ಹಾಗಾಗಿ ಸರಿಯಾದ ಚಪ್ಪಲಿ ಧರಿಸುವುದು ಮುಖ್ಯ.

VISTARANEWS.COM


on

Footwear Tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾರದ್ದೋ ಬಗ್ಗೆ ಹೇಳುವಾಗ ʻಅವರು ನನ್ನ ಚಪ್ಲಿಗೆ ಸಮʼ (Footwear Tips) ಎಂದು ಹೇಳಿದ್ದರೆ ಅದರ ಅರ್ಥವೇನು? ಅಷ್ಟು ಕನಿಷ್ಠ ಎಂದಲ್ಲವೇ? ಆದರೆ ಪಾದರಕ್ಷೆಗಳು ಖಂಡಿತಕ್ಕೂ ಕನಿಷ್ಠವಲ್ಲ. ಹಾಗೆಂದುಕೊಂಡು ಸರಿಯಾದ ಪಾದರಕ್ಷೆಗಳನ್ನು ಧರಿಸದಿದ್ದರೆ, ಪಾದಗಳ ಆರೋಗ್ಯ ತಳಮಟ್ಟಕ್ಕೆ ಇಳಿಯುವುದು ಖಚಿತ! ನಮ್ಮ ತೊಡುಗೆಗಳು ನಮ್ಮ ಆಯ್ಕೆ ಎನ್ನುವುದು ಹೌದಾದರೂ, ಅದಕ್ಕಾಗಿ ಆರೋಗ್ಯವನ್ನು ಕಡೆಗಣಿಸಬೇಕೆಂದಿಲ್ಲ. ಚಪ್ಪಲಿ, ಶೂಗಳನ್ನೆಲ್ಲ ಅಂದ-ಚಂದ ನೋಡಿ ತೆಗೆದುಕೊಳ್ಳುವ ಬದಲು, ಧರಿಸಿದಾಗ ಯಾವುದು ಹಿತ ಎಂಬುದಕ್ಕೆ ಮೊದಲ ಆದ್ಯತೆ ನೀಡಬೇಕು. ಹೇಗಿರಬೇಕು ನಮ್ಮ ಪಾದರಕ್ಷೆ?

Row of High Heels in a Fast Fashion Store

ಆರೋಗ್ಯಕ್ಕೂ ಮುಖ್ಯ

ಪಾದರಕ್ಷೆಗಳು ನಮ್ಮ ಪಾದಗಳ ಆರೋಗ್ಯವನ್ನು ಮಾತ್ರವೇ ಅಲ್ಲ, ನಮ್ಮ ಮಂಡಿ, ಇಡೀ ಕಾಲು, ಬೆನ್ನು, ಸೊಂಟಗಳ ಆರೋಗ್ಯವನ್ನೂ ನಿರ್ಧರಿಸಬಲ್ಲವು. ಸರಿಯಾದ ಚಪ್ಪಲಿಗಳನ್ನು ಧರಿಸದಿದ್ದರೆ ಗಾಯಗಳ ಸಮಸ್ಯೆ ಕಾಡಬಹುದು; ಬಿದ್ದು ಮೂಳೆ ಮುರಿಯಬಹುದು. ಅದರಲ್ಲೂ ವಯಸ್ಸಾದ ಮೇಲೆ ಇಂಥ ಗಾಯಗಳಾದರೆ ಕಡೆಯವರೆಗೂ ಗುಣವಾಗದೆಯೇ ಇರುವ ಸಾಧ್ಯತೆಯಿದೆ. ಹಾಗಾಗಿ ಪಾದರಕ್ಷೆಗಳನ್ನು ಖರೀದಿಸುವಾಗ ನಿಮಗೆ ಎಂಥದ್ದು ಬೇಕು, ಯಾವ ಉದ್ದೇಶಕ್ಕಾಗಿ ಬೇಕು ಎಂಬುದರ ಬಗ್ಗೆ ಗಮನ ಹರಿಸಬೇಕು.

Woman Holding High Heeled Shoes

ಹೊಂದಾಣಿಕೆ

ಖರೀದಿಸುತ್ತಿರುವ ಚಪ್ಪಲಿ ನಿಮ್ಮ ಕಾಲಿಗೆ ಹೊಂದಿಕೆ ಆಗುತ್ತಿದೆಯೇ? ಉದಾ, ಆರನೇ ನಂಬರಿನ ಚಪ್ಪಲಿ ಇರುವಷ್ಟು ನಿಮ್ಮ ಕಾಲಿನ ಉದ್ದ ಇದೆ. ಆದರೆ ಇದಕ್ಕೆ ಹೊಂದಿಕೆಯಾಗದಷ್ಟು ಅಗಲವಿದೆ. ಹೀಗಿರುವಾಗ ಅಳತೆಗಿಂತ ಹೆಚ್ಚಿನ ಗಮನ ನೀಡಬೇಕಾದ್ದು, ಧರಿಸಿದಾಗ ಅದರ ಉದ್ದ-ಅಗಲಗಳು ನಿಮ್ಮ ಕಾಲಿನ ಉದ್ದಗಲಗಳಿಗೆ ಹೊಂದಾಣಿಕೆ ಆಗಬೇಕು. ಪಾದರಕ್ಷೆ ಎಷ್ಟು ಬಿಗಿಯಾಗಿರಬೇಕು ಎನ್ನುವುದನ್ನು ಹೊಂದಿಸಿಕೊಳ್ಳಲು ಲೇಸ್‌, ವೆಲ್‌ಕ್ರೊಗಳಿದ್ದರೆ ಒಳ್ಳೆಯದು. ಸ್ನೀಕರ್‌ಗಳಿಗೆ ಮಾರು ಹೋದರೆ ಕೆಲವೇ ದಿನಗಳಲ್ಲಿ ಅದು ಸಡಿಲವಾಗಿ ಪಾದಗಂಟಿನ ನೋವು ಅಂಟಿಕೊಳ್ಳುತ್ತದೆ.

ಜಾಗವಿರಲಿ

ನಿಮ್ಮ ಪಾದವನ್ನು ಶೂ ಅಥವಾ ಚಪ್ಪಲಿಗಳು ಬಿಗಿಯಾಗಿ ಉಸಿರುಗಟ್ಟುವಂತೆ ಅವಚಿಕೊಳ್ಳಬಾರದು. ಪಾದದ ಚರ್ಮಕ್ಕೆ ಉಸಿರಾಡುವಷ್ಟು ಜಾಗಬೇಕು. ಅಂದರೆ ನಿಮ್ಮ ಉದ್ದವಾದ ಕಾಲ್ಬೆರಳಿಗೂ ಶೂನ ಮುಂತುದಿಗೂ ಒಂದು ಕೈಹೆಬ್ಬೆರಳಿನಷ್ಟು ಜಾಗ ಬೇಕು. ಇದರಿಂದ ಚಟುವಟಿಕೆಯಲ್ಲಿ ತೊಡಗಿದಾಗ ಕಾಲಿಗೆ ಸಾಕಷ್ಟು ಜಾಗವಿರುತ್ತದೆ.
ಎಂಥ ವಸ್ತುಗಳಿಂದ ಶೂ ಮಾಡಲ್ಪಟ್ಟಿದೆ ಎಂಬುದು ಮುಖ್ಯ. ಒರಟಾದ ವಸ್ತುಗಳಿಂದ ಮಾಡಲಾಗಿದ್ದರೆ, ತಾಳಿಕೆ ಹೆಚ್ಚು ಬರಬಹುದು. ಆದರೆ ಪಾದದ ಚರ್ಮಕ್ಕೆ ಗಾಳಿಯಾಡದಿರಬಹುದು. ಹಾಗಾಗಿ ಗಾಳಿ ಸಂಚರಿಸಲು ಈ ಶೂನಲ್ಲಿ ಸೂಕ್ಷ್ಮ ಕಿಂಡಿ/ ರಂಧ್ರಗಳಿವೆಯೇ ಎಂಬುದನ್ನು ನೋಡಿಕೊಳ್ಳಿ. ಇದರಿಂದ ಬೆವರಿನ ದುರ್ವಾಸನೆ, ಫಂಗಸ್‌ ಸೋಂಕುಗಳನ್ನು ಕಡಿಮೆ ಮಾಡಬಹುದು.

People Wearing Running Shoes

ಶೂ ಒಳಭಾಗ ಹೇಗಿರಬೇಕು?

ಶೂ ಧರಿಸುವವರು ನೀವಾಗಿದ್ದರೆ, ಹಿಮ್ಮಡಿಯಿಂದ ನಡುಪಾದದ ಬಾಗು ಒಂದು ಇಂಚಿಗಿಂತ ಎತ್ತರ ಇರುವ ಅಗತ್ಯವಿಲ್ಲ. ಅದಕ್ಕೂ ಮೀರಿದ ಆರ್ಚ್‌ ನಿಮ್ಮ ಪಾದಕ್ಕಿದ್ದರೆ ಮಾತ್ರ ಈ ಬಗ್ಗೆ ಎಚ್ಚರವಹಿಸಿ. ಹಿಮ್ಮಡಿಗೆ ಪಾದರಕ್ಷೆಯ ಒಳಭಾಗದಲ್ಲಿ ಸರಿಯಾದ ಕುಷನ್‌ ಇದೆಯೇ ಎಂಬುದನ್ನೂ ಪರೀಕ್ಷಿಸಿಕೊಳ್ಳಿ. ಶೂ ಒಳಭಾಗದಲ್ಲಿ ಒಳ್ಳೆಯ ಕುಷನ್‌ ಇದ್ದಷ್ಟೂ ಪಾದಗಂಟು ಮತ್ತು ಮಂಡಿಯ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಅದರಲ್ಲೂ ಚಾರಣಿಗರು ನೀವಾಗಿದ್ದರೆ, ಒಳಭಾಗದಲ್ಲಿ ಚೆನ್ನಾದ ಕುಷನಿಂಗ್‌ ಇರುವಂಥ ಪಾದರಕ್ಷೆಗಳನ್ನು ಮಾತ್ರವೇ ಧರಿಸಿ.

ಗುಣಮಟ್ಟ

ಒಳ್ಳೆಯ ಬ್ರಾಂಡ್‌ನ ಗುಣಮಟ್ಟದ ಪಾದರಕ್ಷೆಗಳನ್ನೇ ಧರಿಸಿ. ಇವು ಸಾಮಾನ್ಯವಾಗಿ ದುಬಾರಿಯಾಗಿರುವುದರಿಂದ ನಾಲ್ಕೆಂಟು ಜೊತೆ ಶೂಗಳನ್ನು ಇರಿಸಿಕೊಳ್ಳಲು ಕಷ್ಟವಾಗಬಹುದು. ಆದರೆ ಅದರ ಅಗತ್ಯವಿಲ್ಲ. ಎರಡೇ ಜೊತೆ ಇರಿಸಿಕೊಂಡರೂ ನಿಮ್ಮ ಅಗತ್ಯಕ್ಕೆ ತಕ್ಕುದಾದದ್ದು ಇರಲಿ. ಇವೇ ಹೆಚ್ಚು ದಿನ ಬಾಳಿಕೆ ಬಂದು, ನಿಮ್ಮ ಕಾಲುಗಳ ಆರೋಗ್ಯ ಕಾಪಾಡುತ್ತವೆ.

flip flop Footwear

ಇವು ಬೇಡ

ಫ್ಲಿಪ್‌-ಫ್ಲಾಪ್‌ ಅಥವಾ ಹವಾಯ್‌ ಮಾದರಿಯ ಚಪ್ಪಲಿಗಳು ಸಿಕ್ಕಾಪಟ್ಟೆ ಜನಪ್ರಿಯ ಎನ್ನುವುದು ನಿಜ. ಆದರೆ ಕಾಲಿಗೆ ಅಗತ್ಯ ಆಧಾರವನ್ನು ಅವು ನೀಡಲಾರವು. ಮನೆ ಹತ್ತಿರದ ತುರ್ತು ಬಳಕೆಗೆ ಆದೀತು ಹೊರತಾಗಿ, ಅದಕ್ಕಿಂತ ಹೆಚ್ಚಿನ ಬಳಕೆ ಬೇಡ. ಯಾವುದೋ ಪಾರ್ಟಿಗೆ ಹೋಗಬೇಕೆಂದು ‌ʻಕಿಲ್ಲಿಂಗ್ ಹೀಲ್ಸ್‌ʼ ಹಾಕುವ ಇರಾದೆಯೇ? ಎತ್ತರದ ಚಪ್ಪಲಿಗಳು, ಅದರಲ್ಲೂ ಪೆನ್ಸಿಲ್‌ ಹೀಲ್ಸ್‌, ಹಾಕಿದಷ್ಟೂ ಕಾಲು ಮತ್ತು ಬೆನ್ನು ನೋವು ಬೆನ್ನಿಗಂಟುವುದು ನಿಶ್ಚಿತ. ಇನ್ನು, ಯಾವುದೇ ಆರ್ಚ್‌ ಆಧಾರವಿಲ್ಲದ ಮಣೆಯಂಥ ಸಪಾಟು ಚಪ್ಪಲಿಗಳನ್ನು ಹಾಕುವವರು ನೀವಾದರೆ ಜಾಗ್ರತೆ ಮಾಡಿ. ಇಂಥವುಗಳನ್ನು ಎಂದಿಗೂ ವಾಕಿಂಗ್‌ಗೆ ಉಪಯೋಗಿಸಬೇಡಿ. ಪಾದಗಂಟಿನ ನೋವು ಗಂಟುಬಿದ್ದರೆ ಅಚ್ಚರಿಯಿಲ್ಲ. ಸರಿಯಾದ ಆಧಾರ ನೀಡುವಂಥ ಶೂ/ಚಪ್ಪಲಿಗಳು ಮಾತ್ರವೇ ದೈಹಿಕ ಚಟುವಟಿಕೆಗಳಿದೆ ಸೂಕ್ತ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಆರೋಗ್ಯ

World Asthma Day: ಅಸ್ತಮಾದಿಂದ ಪಾರಾಗಲು ಈ ಸಂಗತಿ ತಿಳಿದುಕೊಂಡಿರಿ

ವಿಶ್ವದಲ್ಲಿ 260 ದಶಲಕ್ಷ ಮಂದಿ ಅಸ್ತಮಾ ತೊಂದರೆಯಿಂದ ಬಳಲುತ್ತಿದ್ದಾರೆ. ಪ್ರತಿ ವರ್ಷ 4.5 ಲಕ್ಷ ಮಂದಿ ಈ ಸಮಸ್ಯೆಯಿಂದ ಸಾವಿಗೀಡಾಗುತ್ತಿದ್ದಾರೆ. ಇವುಗಳಲ್ಲಿ ಹೆಚ್ಚಿನ ಪ್ರಕರಣಗಳಲ್ಲಿ ಸಾವನ್ನು ತಡೆಯುವ ಸಾಧ್ಯತೆ ಇರುತ್ತದೆ. ಹಾಗಾಗಿ ಅಸ್ತಮಾ ಬಗ್ಗೆ ಅರಿವು ಹೊಂದುವುದು ಮತ್ತು ತಡೆಯಲು ಮುನ್ನೆಚ್ಚರಿಕೆ (World Asthma Day) ತೆಗೆದುಕೊಳ್ಳುವುದು ಅಗತ್ಯ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

World Asthma Day
Koo

ಯಾವುದೇ ವಯಸ್ಸಿನವರನ್ನು ಕಾಡಬಹುದಾದ ದೀರ್ಘಕಾಲೀನ ರೋಗಗಳಲ್ಲಿ ಅಸ್ತಮಾ ಸಹ ಒಂದು. ಶ್ವಾಸಕೋಶದಲ್ಲಿನ ಗಾಳಿ ಕೊಳವೆಗಳು ಮತ್ತದರ ಕೋಶಗಳು ಊದಿಕೊಂಡು ಉಸಿರಾಟಕ್ಕೆ ತೊಂದರೆಯಾಗುವ ಅವಸ್ಥೆಯಿದು. ಇದರಿಂದಾಗಿ ಉಬ್ಬಸ, ಉಸಿರಾಟದ ತೊಂದರೆ, ಎದೆ ಬಿಗಿಯುವುದು, ನೆಗಡಿ, ಕೆಮ್ಮು, ವಿಪರೀತ ಕಫ, ಅಲರ್ಜಿ ಇತ್ಯಾದಿ ಸಮಸ್ಯೆಗಳು ಕಾಡಿಸುತ್ತವೆ. ಹಗಲಿನಲ್ಲಿ ಕಡಿಮೆ ಇದ್ದು ರಾತ್ರಿ ಸಮಯದಲ್ಲಿ ಈ ಸಮಸ್ಯೆಯ ತೀವ್ರತೆ ಹೆಚ್ಚಬಹುದು. ಈ ರೋಗದ ಬಗ್ಗೆ ಜಾಗೃತಿ ಹೆಚ್ಚಿಸುವ ಉದ್ದೇಶದಿಂದ ಮೇ ತಿಂಗಳ ಮೊದಲ ಮಂಗಳವಾರವನ್ನು (ಈ ಬಾರಿ ಮೇ 7ರಂದು) ವಿಶ್ವ ಅಸ್ತಮಾ ಜಾಗೃತಿ ದಿನವನ್ನಾಗಿ (World Asthma Day) ಆಚರಿಸಲಾಗುತ್ತದೆ.

Young Woman Having Asthma Attack at Home

ಜಾಗತಿಕವಾಗಿ ವಾಯು ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವಿಶ್ವದೆಲ್ಲೆಡೆ ಅಸ್ತಮಾ ಚಿಕಿತ್ಸೆಯನ್ನು ಉತ್ತಮಗೊಳಿಸುವುದು ಈ ಜಾಗೃತಿ ದಿನದ ಉದ್ದೇಶಗಳಲ್ಲಿ ಒಂದು. ಈ ವರ್ಷ ಮೇ 7ರಂದು ಆಚರಿಸಲಾಗುವ ಈ ದಿನಂದು, ಶ್ವಾಸನಾಳಗಳಿಗೆ ತೀವ್ರ ತೊಂದರೆ ನೀಡುವ ಈ ರೋಗದಿಂದ ನರಳುತ್ತಿರುವವರಿಗೆ ಕಾಳಜಿ, ಚಿಕಿತ್ಸೆ ಮತ್ತು ನೆರವು ನೀಡುವ ಬಗ್ಗೆ ಎಲ್ಲೆಡೆ ಅರಿವು ಮೂಡಿಸುವುದು ಮಹತ್ವದ್ದೆನಿಸಿದೆ. ಈ ವರ್ಷದ ಘೋಷವಾಕ್ಯ- “ಅಸ್ತಮಾ ಕುರಿತ ಅರಿವು ಸಬಲಗೊಳಿಸುತ್ತದೆ” ಮೊದಲ ಬಾರಿಗೆ 1993ರಲ್ಲಿ ವಿಶ್ವ ಅಸ್ತಮಾ ದಿನವನ್ನು ಘೋಷಿಸುವ ಸಂದರ್ಭದಲ್ಲಿ 35 ದೇಶಗಳು ಭಾಗವಹಿಸಿದ್ದವು. ಸಾಮಾನ್ಯವಾಗಿ ಅಸ್ತಮಾ ಕಾಡುವುದು ಚಳಿಗಾಲದಲ್ಲಿ ಹೆಚ್ಚು. ಹಾಗೆಂದು ವರ್ಷದ ಉಳಿದ ದಿನಗಳಲ್ಲಿ ತೊಂದರೆ ಕೊಡಬಾರದೆಂದೇನೂ ಇಲ್ಲ. ಮಳೆಗಾಲದಲ್ಲಿ ಮೋಡ ಕವಿದ ಸ್ಥಿತಿ ಇದ್ದಾಗ ಉಸಿರಾಡುವುದು ಕಷ್ಟವಾಗಬಹುದು. ಬೇಸಿಗೆಯಲ್ಲಿ ಶುಷ್ಕತೆ ಹೆಚ್ಚಾದಾಗ ವಾತಾರವಣದಲ್ಲಿ ಧೂಳಿನ ಕಣಗಳು ತೀವ್ರವಾಗಿ, ಅಸ್ತಮಾ ತೊಂದರೆ ಕೊಡುವ ಸಾಧ್ಯತೆಯಿದೆ. ಒಬ್ಬರಿಂದೊಬ್ಬರಿಗೆ ಹರಡದೆ ಇರುವ ರೋಗಗಳ ಪೈಕಿ ತೀವ್ರವಾಗಿ ಬಾಧಿಸುವ ರೋಗಗಳಲ್ಲಿ ಅಸ್ತಮಾ ಸಹ ಒಂದು. ವಿಶ್ವದಲ್ಲಿ 260 ದಶಲಕ್ಷ ಮಂದಿ ಈ ತೊಂದರೆಯಿಂದ ಬಳಲುತ್ತಿದ್ದಾರೆ. ಪ್ರತಿ ವರ್ಷ 4.5 ಲಕ್ಷ ಮಂದಿ ಈ ಸಮಸ್ಯೆಯಿಂದ ಸಾವಿಗೀಡಾಗುತ್ತಿದ್ದಾರೆ. ಇವುಗಳಲ್ಲಿ ಹೆಚ್ಚಿನ ಪ್ರಕರಣಗಳಲ್ಲಿ ಸಾವನ್ನು ತಡೆಯುವ ಸಾಧ್ಯತೆ ಇರುತ್ತದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ, ಸರಿಯಾದ ಪ್ರಮಾಣದಲ್ಲಿ ಸ್ಟೆರಾಯ್ಡ್‌ ಇನ್‌ಹೇಲರ್‌ಗಳ ಬಳಕೆ, ಶ್ವಾಸಕೋಶಗಳ ಆರೋಗ್ಯದ ದೇಖರೇಖಿ- ಇಂಥ ಹಲವು ವಿಷಯಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಕಾಳಜಿ ವಹಿಸದಿರುವುದು ಇದಕ್ಕೆ ಕಾರಣವಾಗುತ್ತದೆ.

ಇದನ್ನೂ ಓದಿ: No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

ರಾತ್ರಿ ಹೆಚ್ಚಬಹುದು

ಕೆಲವರಿಗೆ ಹಗಲಿಗೆ ಈ ತೊಂದರೆ ಕಡಿಮೆ ಇದ್ದು, ರಾತ್ರಿಗೆ ತೀವ್ರಗೊಳ್ಳಬಹುದು. ಹೀಗಾಗುವುದಕ್ಕೂ ಹಲವಾರು ಕಾರಣಗಳಿವೆ. ಒಂದು ಕಾರಣವೆಂದರೆ, ದೇಹದ ಸರ್ಕೇಡಿಯನ್‌ ಲಯ. ಅಂದರೆ ಹಗಲು ಕಳೆದು ರಾತ್ರಿ ಆವರಿಸುತ್ತಿದ್ದಂತೆ ದೇಹದ ನೈಸರ್ಗಿಕ ಗಡಿಯಾರವೂ ಬದಲಾಗುತ್ತದೆ. ಹೀಗೆ ಬದಲಾಗುವ ಸರ್ಕೇಡಿಯನ್‌ ಲಯದಿಂದಾಗಿ ಶ್ವಾಸನಾಳಗಳಲ್ಲಿ ಉರಿಯೂತ ಹೆಚ್ಚಬಹುದು. ಇನ್ನೊಂದು ಕಾರಣವೆಂದರೆ, ಮಲಗುವ ಭಂಗಿ. ನೆಲಕ್ಕೆ ಸಮಾಂನಾಂತರವಾಗಿ ಮಲಗಿದಾಗ ಶ್ವಾನನಾಳಗಳಲ್ಲಿ ಕಫ ಕಟ್ಟುವುದು ಹೆಚ್ಚುತ್ತದೆ. ಹಾಗಾಗಿ ಪೂರ್ಣ ಮಲಗುವ ಬದಲು ಹಿಂದೆ ಮಲಗಿದಂಥ ಭಂಗಿಯಲ್ಲಿ ಉಸಿರಾಟ ಕೊಂಚ ಸರಾಗವಾಗುತ್ತದೆ.

Woman Using an Asthma Inhaler

ಇನ್ನಷ್ಟು ಕಾರಣಗಳು

ಹುಳಿತೇಗಿನ ಸಮಸ್ಯೆಯಿದ್ದರೆ ಉಸಿರಾಟದ ತೊಂದರೆಯೂ ಕಾಣಬಹುದು. ಅದರಲ್ಲೂ ಜಿಇಆರ್‌ಡಿ (GERD) ನಂಥ ಕಿರಿಕಿರಿಗಳಿದ್ದರೆ ರಾತ್ರಿಯಲ್ಲಿ ಅಸ್ತಮಾ ತೊಂದರೆ ಕೊಡುವುದು ಸ್ವಲ್ಪ ಹೆಚ್ಚೆ. ಜೊತೆಗೆ, ಮನೆಯ ಒಳ-ಹೊರಗಿನ ವಾತಾವರಣ ಆದಷ್ಟು ಶುಚಿಯಾಗಿ ಇರುವಂತೆ ನೋಡಿಕೊಳ್ಳಿ. ಇದರಿಂದ ಅಲರ್ಜಿಯ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಬಹುದು. ಹೊಗೆ, ಧೂಳು, ಫಂಗಸ್, ಪರಾಗಗಳು ಇತ್ಯಾದಿಗಳು ಆದಷ್ಟು ದೂರವೇ ಇದ್ದಾರೆ ಕ್ಷೇಮ. ಹಾಸಿಗೆ ಬಟ್ಟೆಗಳನ್ನು ಆಗಾಗ ಬದಲಿಸಿ. ಅಲರ್ಜಿ ತರುವಂಥ ಆಹಾರಗಳನ್ನು ಮುಟ್ಟದಿರುವುದು ಕ್ಷೇಮ. ಸೋಂಕುಗಳಿಂದ ದೂರ ಇರುವುದಕ್ಕೆ ಶಕ್ತಿಯುತ ಆಹಾರ ಸೇವನೆ ಅಗತ್ಯ. ಇಡೀ ದೇಹದ ಆರೋಗ್ಯ, ಅದರಲ್ಲೂ ಶ್ವಾಸಕೋಶಗಳು ಚೆನ್ನಾಗಿರಬೇಕೆಂದರೆ, ನಿಯಮಿತವಾದ ವ್ಯಾಯಾಮ ಬೇಕು. ಯಾವುದೇ ಕಾಲದಲ್ಲೂ ಅಸ್ತಮಾ ಕಾಣಿಸಿಕೊಳ್ಳಬಹುದು. ಹಾಗಾಗಿ ಅಗತ್ಯ ಔಷಧಗಳನ್ನು ತಪ್ಪದೆ ಇರಿಸಿಕೊಳ್ಳಬೇಕು. ಇನ್ಹೇಲರ್ ಮುಂತಾದವುಗಳನ್ನು ತಂಪಾದ ಸ್ಥಳದಲ್ಲಿ ಇರಿಸುವುದು ಅಗತ್ಯ. ಕಾಲಕಾಲಕ್ಕೆ ಪೀಕ್ ಪ್ಲೊ ಮೀಟರ್ ನಿಂದ ಶ್ವಾಸಕೋಶದ ಸ್ಥಿತಿಗತಿಯ ಬಗ್ಗೆ ತಪಾಸಣೆ ಮಾಡಿಕೊಳ್ಳಿ. ಈ ರೋಗದ ನಿಯಂತ್ರಣಕ್ಕೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸುವುದು ಮತ್ತು ಉರಿಯೂತದ ಕಾರಣ ಅರ್ಥ ಮಾಡಿಕೊಳ್ಳುವುದು ಮಹತ್ವದ್ದು.

Continue Reading

ಆಹಾರ/ಅಡುಗೆ

Summer Food Tips: ಬೇಸಿಗೆಯಲ್ಲಿ ನಮ್ಮ ದೇಹವನ್ನು ತಂಪಾಗಿರಿಸುವ ಸರಳ ಆಹಾರಗಳಿವು!

ಹೊರಗೆ ಕಾಲಿಟ್ಟರೆ ಸಾಕು, ಸ್ನಾನ ಮಾಡಿದಂತೆ ಬೆವರಿನಿಂದಲೇ ತೊಯ್ದು ಹೋಗುವ ಮಂದಿ ಬಿಸಿಲನ್ನು ನೋಡಿ ಉಸ್ಸಪ್ಪ ಎನ್ನುತ್ತಿದ್ದಾರೆ. ಇಂತಹ ಬಿಸಿಲಿನ ವಿರುದ್ಧ ನಮ್ಮ ದೇಹವನ್ನು ಶಕ್ತವನ್ನಾಗಿ ಮಾಡಲು, ದೇಹವನ್ನು ತಂಪಾಗಿರಿಸಲು ಸೂಕ್ತ ಆಹಾರ ಸೇವನೆಯೂ ಮುಖ್ಯ. ಯಾವೆಲ್ಲ ಸರಳ ಆಹಾರಕ್ರಮ ನಮ್ಮ ದೇಹವನ್ನು ತಂಪಾಗಿರಿಸುತ್ತದೆ ಎಂಬುದನ್ನು ನೋಡೋಣ. ಈ ಆಹಾರ ಸೇವನೆಯಿಂದ ಬೇಸಿಗೆಯಲ್ಲಿ ನೀವು ಅಸಿಡಿಟಿ, ತಲೆಸುತ್ತು, ನಿತ್ರಾಣ, ನಿದ್ರಾಹೀನತೆ, ಹಸಿವಿನ ಕೊರತೆಯಂತಹ (summer food tips) ಸಮಸ್ಯೆಗಳಿಂದಲೂ ಪಾರಾಗಬಹುದು.

VISTARANEWS.COM


on

Summer Food Tips
Koo

ಬಹಳಷ್ಟು ಮಂದಿಯ ಬಾಯಿಯಲ್ಲಿ ಈಗ ಬರುವ ಮಾತು ಒಂದೇ: ಏನು ಸೆಖೆಯಪ್ಪಾ ಈ ಬಾರಿ! ಸೂರ್ಯ ಉದಯಿಸಿದ ಕೆಲವೇ ಗಂಟೆಗಳಲ್ಲಿ ಧಗಧಗಿಸಿ ಉರಿದು ಈ ಬಾರಿಯ ಬಿಸಿಲನ್ನು ಇನ್ನಷ್ಟು ತೀವ್ರಗೊಳಿಸಿದ್ದು ಸುಳ್ಳಲ್ಲ. ಬೆಂಗಳೂರಿಗರೂ ಕೂಡ ಈ ಬಾರಿಯ ಸೆಖೆಯಿಂದ ತತ್ತರಿಸಿ ಹೋಗಿದ್ದಾರೆ. ಹೊರಗೆ ಕಾಲಿಟ್ಟರೆ ಸಾಕು, ಸ್ನಾನ ಮಾಡಿದಂತೆ ಬೆವರಿನಿಂದಲೇ ತೊಯ್ದು ಹೋಗುವ ಮಂದಿ ಬಿಸಿಲನ್ನು ನೋಡಿ ಉಸ್ಸಪ್ಪ ಎನ್ನುತ್ತಿದ್ದಾರೆ. ಇಂತಹ ಬಿಸಿಲಿನ ವಿರುದ್ಧ ನಮ್ಮ ದೇಹವನ್ನು ಶಕ್ತವನ್ನಾಗಿ ಮಾಡಲು, ದೇಹವನ್ನು ತಂಪಾಗಿರಿಸಲು ಸೂಕ್ತ ಆಹಾರ (summer food tips) ಸೇವನೆಯೂ ಕೂಡ ಮುಖ್ಯ. ಹಾಗೆ ನೋಡಿದರೆ ನಾವು ಸಾಂಪ್ರದಾಯಿಕ ಶೈಲಿಯತ್ತ ಮುಖ ಮಾಡಿದರೆ ನಮ್ಮ ಪೂರ್ವಜರು, ಹಿರಿಯರು, ಋತುಮಾನಕ್ಕೆ ಅನುಗುಣವಾಗಿ ಆಹಾರವನ್ನು ತೆಗೆದುಕೊಳ್ಳುವ ಬಗೆಯನ್ನು ನಮಗೆ ದಾಟಿಸಿದ್ದಾರೆ. ಆದರೆ ಬಹಳಷ್ಟು ಬಾರಿ ಅವರ ಅಂತಹ ಸಂದೇಶವನ್ನು ನಾವು ನಿರಾಕರಿಸಿ ನಮ್ಮದೇ ಹಾದಿಯಲ್ಲಿ ಸಾಗಿದ್ದೂ ಕೂಡ ಇಂತಹ ಸಮಸ್ಯೆಗಳಿಗೆ ಕಾರಣವೇನೋ ಅನ್ನಬಹುದು. ನಾವು ಎಸಿ ಸ್ವಿಚ್‌ ಆನ್‌ ಮಾಡಿ ದೇಹವನ್ನು ಹೊರಗಿನಿಂದ ತಂಪಾಗಿಸಬಹುದು ನಿಜವೇ ಆಗಿದ್ದರೂ, ಒಳಗಿನಿಂದ ದೇಹವನ್ನು ತಂಪಾಗಿರಿಸಲು ಕೆಲವು ಆಹಾರ ಸೇವನೆಯ ಮೊರೆ ಹೋಗಲೇಬೇಕು. ಬನ್ನಿ, ಯಾವೆಲ್ಲ ಸರಳ ಆಹಾರಕ್ರಮ ನಮ್ಮ ದೇಹವನ್ನು ತಂಪಾಗಿರಿಸುತ್ತದೆ ಎಂಬುದನ್ನು ನೋಡೋಣ. ಈ ಆಹಾರ ಸೇವನೆಯಿಂದ ಬೇಸಿಗೆಯಲ್ಲಿ ನೀವು ಅಸಿಡಿಟಿ, ತಲೆಸುತ್ತು, ನಿತ್ರಾಣ, ನಿದ್ರಾಹೀನತೆ, ಹಸಿವಿನ ಕೊರತೆಯಂತ ಸಮಸ್ಯೆಗಳ ವಿರುದ್ಧ ಹೋರಾಡಿ ಫಲವನ್ನೂ ಕಾಣಬಹುದು.

Citrus fruits

ಸ್ಥಳೀಯ ಹಣ್ಣುಗಳು

ಬೆಳಗ್ಗಿನ ತಿಂಡಿಯ ನಂತರ ಮಧ್ಯಾಹ್ನದೂಟದ ಮೊದಲು ಏನಾದರೂ ಸ್ನ್ಯಾಕ್ಸ್‌ ತಿನ್ನುವ ಅಭ್ಯಾಸ ನಿಮಗಿದೆ ಎಂದಾದಲ್ಲಿ ಬೇಸಿಗೆಯಲ್ಲಿ ನಿಮ್ಮ ಸ್ಥಳೀಯ ಹಣ್ಣುಗಳನ್ನು ತಿನ್ನಲು ಮರೆಯಬೇಡಿ. ಸ್ಥಳೀಯವಾಗಿ ಸಿಗುವ, ಬೇಸಿಗೆಯಲ್ಲಿ ಮಾತ್ರ ಲಭ್ಯವಿರುವ ಹಣ್ಣುಗಳನ್ನು ಹೊಟ್ಟೆಗಿಳಿಸಿದರೆ ನಿಮ್ಮ ದೇಹ ತಂಪಾಗುತ್ತದೆ. ಬಿಸಿಲಿನಲ್ಲಿ ಓಡಾಡಿದರೂ ದೇಹಕ್ಕೆ ಶಕ್ತಿ ಸಾಮರ್ಥ್ಯ ಬರುತ್ತದೆ. ನಿತ್ರಾಣಗೊಳ್ಳುವ, ತಲೆಸುತ್ತಿ ಬವಳಿ ಬೀಳುವಂಥ ಸಮಸ್ಯೆಗಳು ನಿಮ್ಮನ್ನು ಕಾಡದು. ಉದಾಹರಣೆಗೆ, ತಾಳೆಹಣ್ಣು ಅಥವಾ ತಾಟಿನಿಂಗು, ಕಲ್ಲಂಗಡಿ ಹಣ್ಣು, ಖರ್‌ಬೂಜ, ಸೌತೆಕಾಯಿ ಇತ್ಯಾದಿಗಳ ಸೇವನೆ ಚೈತನ್ಯ ನೀಡುತ್ತದೆ. ಯಾವುದೇ ರಸಭರಿತವಾಗಿರುವ ಹಣ್ಣು ನೀವು ತಿನ್ನಬಹುದು. ಇವು ನಿಮ್ಮ ದೇಹವನ್ನು ಅಷ್ಟೇ ಅಲ್ಲ, ಮನಸ್ಸನ್ನೂ ತಂಪಾಗಿಯೇ ಇರಿಸುತ್ತದೆ. ಯಾವಾಗಲೂ ತಾಜಾ ಆಗಿರಿಸಲು ಸಹಾಯ ಮಾಡುತ್ತದೆ.

Health Benefits Of Curd Rice

ಮೊಸರನ್ನ

ಬಹಳಷ್ಟು ಮಂದಿ ಬೇಸಿಗೆಯಲ್ಲಿ ಹಸಿವನ್ನೇ ಕಳೆದುಕೊಳ್ಳುತ್ತಾರೆ. ಏನಾದರೂ ಕುಡಿದರೆ ಸಾಕು, ತಿನ್ನುವ ಮನಸ್ಸಾಗುವುದೇ ಇಲ್ಲ ಎನ್ನುತ್ತಾರೆ. ಬೇಸಿಗೆಯ ಬಿಸಿಲಿಗೆ ಇದು ಸಹಜ ಕೂಡಾ. ಆದರೆ, ಇಂತಹ ಸಂದರ್ಭ ಬೇಸಿಗೆಯಲ್ಲಿ ನಿಮಗೆ ಒಳ್ಳೆಯದನ್ನೇ ಬಯಸುವ ಅತ್ಯುತ್ತಮ ಮಧ್ಯಾಹ್ನದೂಟ ಎಂದರೆ ಅದು ಮೊಸರನ್ನ. ಮೊಸರನ್ನಕ್ಕೆ ಒಂದಿಷ್ಟು ಉಪ್ಪಿನಕಾಯಿ, ಹಪ್ಪಳ ಸೇರಿಸಿಕೊಂಡು ತಿಂದರೆ ಸ್ವರ್ಗಸುಖ. ಇದಲ್ಲವಾದರೆ ಗಂಜಿ ಉಪ್ಪಿನಕಾಯಿಯ ಊಟವಾದರೂ ಸರಿ, ಒಡನೆಯೇ ದೇಹಕ್ಕೆ ಶಕ್ತಿ ಚೈತನ್ಯವನ್ನು ನೀಡುತ್ತದೆ. ಹೊಟ್ಟೆಯನ್ನು ತಂಪಾಗಿರಿಸುತ್ತದೆ. ಮೊಸರನ್ನ ಒಳ್ಳೆಯ ಪ್ರೊಬಯಾಟಿಕ್‌ ಕೂಡಾ ಆಗಿರುವುದರಿಂದ ಇದು ಉತ್ತಮ ಅನುಭವ ನೀಡುತ್ತದೆ. ಹೊಟ್ಟೆಗೆ ಆರಾಮದಾಯಕ ಆಹಾರದ ಅನುಭವ ನೀಡುತ್ತದೆ.

ಇದನ್ನೂ ಓದಿ: Summer Health Tips: ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

ಗುಲ್ಕಂಡ್‌ ನೀರು

ಬೇಸಿಗೆಯಲ್ಲಿ ಅಸಿಡಿಟಿ, ಹೊಟ್ಟೆಯಲ್ಲಿ ಬೆಂಕಿ ಬಿದ್ದಂತೆ ಉರಿ ಇತ್ಯಾದಿ ಸಮಸ್ಯೆಗಳು ಕಾಣಿಸುತ್ತಿದ್ದರೆ ಹಾಗೂ ನಿಮ್ಮ ನಿದ್ರೆಯ ಗುಣಮಟ್ಟ, ಕಣ್ಣು ಊದಿದಂತಾಗುವುದು, ಕೈಕಾಲು ಜೋಮು ಹಿಡಿದಂತಾಗುವುದು, ಅಲ್ಲಲ್ಲಿ ನೋವು, ಉರಿಯೂತ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಬೇಕೆಂದರೆ ಒಂದು ಚಮಚ ಗುಲ್ಕಂಡ್‌ ಅನ್ನು ನೀರಿನಲ್ಲಿ ಬೆರೆಸಿ ಮಲಗುವ ಮುನ್ನ ಕುಡಿಯಿರಿ. ಈ ಗುಲಾಬಿಯ ದಳದ ಡ್ರಿಂಕ್‌ ನಿಮ್ಮ ಈ ಸಮಸ್ಯೆಗಳಿಂದ ಬಚಾವು ಮಾಡುವುದಷ್ಟೇ ಅಲ್ಲ, ಒಂದು ರಿಲ್ಯಾಕ್ಸ್‌ ಅನುಭವವನ್ನೂ ನೀಡುತ್ತದೆ.

Continue Reading

ಲೈಫ್‌ಸ್ಟೈಲ್

Weight Loss Tips Kannada: ಈ ಐದರಲ್ಲಿ ಒಂದು ಜ್ಯೂಸ್‌ ಕುಡಿಯುತ್ತಿದ್ದರೂ ಸಾಕು, ನಿಮ್ಮ ದೇಹ ತೂಕ ಇಳಿಯುತ್ತದೆ!

ಒಮ್ಮೆ ಹೆಚ್ಚಾದ ತೂಕವನ್ನು ನಿಯಂತ್ರಿಸುವುದು ಬಹು ಕಷ್ಟ. ಆದರೆ ನಿತ್ಯ ಈ ಐದು ಪಾನೀಯಗಳನ್ನು ಸೇವಿಸುವುದರಿಂದ ಉತ್ತಮ ಆರೋಗ್ಯದೊಂದಿಗೆ ದೇಹದ ತೂಕ ನಷ್ಟವನ್ನು (Weight Loss Tips Kannada) ಸುಲಭವಾಗಿ ಮಾಡಬಹುದು. ತೂಕ ಇಳಿಸುವ ಸುಲಭ ವಿಧಾನಗಳ ಪರಿಚಯ ಇಲ್ಲಿದೆ.

VISTARANEWS.COM


on

By

Weight Loss Tips kannada
Koo

ದೇಹದ ತೂಕವನ್ನು ಸಮತೋಲನದಲ್ಲಿ ಇರಿಸುವುದು ಸುಲಭದ ಕೆಲಸವೇನಲ್ಲ. ಅದಕ್ಕಾಗಿ ನಾವು ತಿನ್ನುವ ಆಹಾರ (food), ನಿತ್ಯದ ದೈಹಿಕ ಚಟುವಟಿಕೆ (exercise) ಕೂಡ ಕಾರಣವಾಗುತ್ತದೆ. ಒಮ್ಮೆ ತೂಕ ಹೆಚ್ಚಾದರೆ ಅದನ್ನು ಇಳಿಸುವುದು ಸುಲಭದ ಪ್ರಕ್ರಿಯೆಯಲ್ಲ. ದೇಹದ ತೂಕ ಹೆಚ್ಚಳವು ಸಾಮಾನ್ಯವಾಗಿ ಆತಂಕ ಉಂಟು ಮಾಡುತ್ತದೆ. ಆದರೆ ಸರಿಯಾದ ಆಹಾರ ಮತ್ತು ದೈಹಿಕ ಚಟುವಟಿಕೆಯಿಂದ ದೇಹದ ತೂಕವನ್ನು ನಿಯಂತ್ರಿಸಿ (Weight Loss Tips Kannada) ಮತ್ತೆ ಹಿಂದಿನಂತೆ ಸ್ಮಾರ್ಟ್ ಆಂಡ್ ಸ್ಲಿಮ್ (smart and slim) ಆಗಲು ಸಾಧ್ಯವಿದೆ.

ತೂಕ ಇಳಿಸುವ ಪ್ರಕ್ರಿಯೆಯಲ್ಲಿ ಒಂದು ಆಹಾರದ ಸಲಹೆಯನ್ನು ನಿತ್ಯ ಪಾಲಿಸಿದರೆ ಆರೋಗ್ಯವಾಗಿಯೂ ಇರಬಹುದು ಮತ್ತು ದೇಹದ ತೂಕವನ್ನು ಸಮತೋಲನದಲ್ಲಿಯೂ ಇರಿಸಬಹುದು. ನಿತ್ಯವೂ ಬೆಳಗ್ಗೆ ಖಾಲಿ ಹೊಟ್ಟೆಗೆ ಕೆಲವು ಫ್ರೆಶ್ ಜ್ಯೂಸ್‌ಗಳನ್ನು ಕುಡಿಯುವುದರಿಂದ ದೇಹಕ್ಕೆ ಬೇಕಾದ ಫೈಬರ್, ಖನಿಜಾಂಶ ಮತ್ತು ವಿಟಮಿನ್‌ ಗಳನ್ನು ಪಡೆಯಬಹುದು. ಅಲ್ಲದೇ ಇದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಿ ಆರೋಗ್ಯವನ್ನು ಸುಸ್ಥಿತಿಯಲ್ಲಿ ಇಡುತ್ತದೆ. ದೇಹದ ತೂಕ ಇಳಿಸಬೇಕು ಎನ್ನುವ ಯೋಜನೆ ಇದ್ದರೆ ನಿತ್ಯವೂ ಕುಡಿಯಬೇಕಾದ ಕೆಲವು ಅದ್ಭುತ ಜ್ಯೂಸ್‌ ಗಳಿವೆ.


ಕೊತ್ತಂಬರಿ ನೀರು

ಖಾಲಿ ಹೊಟ್ಟೆಯಲ್ಲಿ ಬೆಳಗ್ಗೆ ಒಂದು ಲೋಟ ಕೊತ್ತಂಬರಿ ಸೊಪ್ಪಿನ ನೀರನ್ನು ಸೇವಿಸಿ. ಕೊತ್ತಂಬರಿ ನೈಸರ್ಗಿಕ ಮೂತ್ರವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ, ದೇಹದಲ್ಲಿ ನೀರಿನ ಧಾರಣವನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ಯಕೃತ್ತಿನ ಆರೋಗ್ಯ ಮತ್ತು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಚಯಾಪಚಯವನ್ನು ಧನಾತ್ಮಕವಾಗಿ ವೃದ್ಧಿಸುತ್ತದೆ.


ನಿಂಬೆ ನೀರು

ತೂಕ ನಷ್ಟ ಮಾಡಬೇಕು ಎಂದು ಬಯಸುವವರು ನಿಂಬೆ ನೀರಿನ ಬಗ್ಗೆ ಸಾಕಷ್ಟು ಕೇಳಿರುತ್ತಾರೆ. ಆದರೆ ಬಹುತೇಕ ಮಂದಿ ಪ್ರಯೋಗ ಮಾಡಿರುವುದಿಲ್ಲ. ಮಾಡಿದ್ದರೂ ಒಂದೆರಡು ದಿನ ಮಾಡಿ ಸುಮ್ಮನಾಗಿರುತ್ತಾರೆ. ನಿಂಬೆ ನೀರು ತೂಕವನ್ನು ಅತ್ಯಂತ ವೇಗವಾಗಿ ನಷ್ಟ ಮಾಡುತ್ತದೆ. ಇದು ದೇಹದಲ್ಲಿ ಚಯಾಪಚಯ ಕ್ರಿಯೆಯನ್ನು ವೃದ್ಧಿಸುತ್ತದೆ.


ನೆಲ್ಲಿಕಾಯಿ ಜ್ಯೂಸ್

ನೆಲ್ಲಿಕಾಯಿ ಚಯಾಪಚಯವನ್ನು ಉತ್ತೇಜಿಸಲು ಮತ್ತು ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ತ್ವರಿತವಾಗಿ ತೂಕವನ್ನು ಕಳೆದುಕೊಳ್ಳಲು ಬಯಸುವವರು ಆರೋಗ್ಯಕರ ಚಯಾಪಚಯವನ್ನು ಹೊಂದಿರುವುದು ಅಗತ್ಯ. ನೈಸರ್ಗಿಕ ಸಕ್ಕರೆಯ ರೂಪದಲ್ಲಿ ಒಂದು ಹನಿ ಜೇನುತುಪ್ಪವನ್ನು ಸೇರಿಸಿ ಸೇವಿಸಿದರೆ ಅದು ದಿನವಿಡೀ ನಮ್ಮನ್ನು ಶಕ್ತಿಯುತವಾಗಿರಿಸುತ್ತದೆ.


ಹಾಗಲಕಾಯಿ ಜ್ಯೂಸ್

ಹಾಗಲಕಾಯಿಯ ರಸವು ತೂಕ ನಷ್ಟಕ್ಕೆ ಉತ್ತಮವಾದ ಕೊಬ್ಬನ್ನು ಸುಡುವ ರಸಗಳಲ್ಲಿ ಒಂದಾಗಿದೆ. ಹಾಗಲಕಾಯಿ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯುವುದರಿಂದ ಚಯಾಪಚಯ ಕ್ರಿಯೆಯಲ್ಲಿ ಸುಧಾರಣೆಯಾಗುತ್ತದೆ. ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ. ತೂಕವನ್ನು ಕಳೆದುಕೊಳ್ಳಲು ಸಾಕಷ್ಟು ಪ್ರಯೋಜನಕಾರಿಯಾಗಿದೆ.


ಇದನ್ನೂ ಓದಿ: Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

ಸೌತೆಕಾಯಿ ಜ್ಯೂಸ್

ನೀರು ಸಮೃದ್ಧವಾಗಿರುವ ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವ ಸೌತೆಕಾಯಿ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಅದ್ಭುತವಾದ ಆಹಾರ. ಇದರಲ್ಲಿರುವ ಅತಿಯಾದ ನೀರು ಮತ್ತು ನಾರಿನಂಶವು ನಿಮ್ಮನ್ನುದೀರ್ಘಕಾಲದವರೆಗೆ ಹಸಿವನ್ನು ತಡೆಯಲು ಸಹಾಯ ಮಾಡುತ್ತದೆ. ಇದರಿಂದಾಗಿ ಅನಗತ್ಯ ಕಡುಬಯಕೆಗಳನ್ನು ನಿಯಂತ್ರಿಸಿ ದೇಹದ ತೂಕ ನಿರ್ವಹಣೆ ಮಾಡಬಹುದು.

Continue Reading

ಆರೋಗ್ಯ

No Diet Day: ಬೇಕಾಬಿಟ್ಟಿ ಡಯಟ್‌ ಮಾಡಿದರೆ ಏನಾಗುತ್ತದೆ? ಈ ಸಂಗತಿ ತಿಳಿದಿರಲಿ

ಹಲವರು ತಪ್ಪು ಸಲಹೆಗಳಿಂದ ಡಯಟ್‌ ಮಾಡಲು ಹೋಗಿ ಬೇಗ ತೂಕ ಇಳಿಸಿಕೊಳ್ಳುವ ಆಹಾರ ಕ್ರಮಗಳನ್ನು ಅನುಸರಿಸುತ್ತಾರೆ. ಇದರಿಂದ ತೂಕ ಕಡಿಮೆಯಾಗುವ ಬದಲು ಆಸ್ಪತ್ರೆಗೆ ಸೇರಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಡಯಟ್ ಮಾಡುವುದು ಮುಖ್ಯ, ಆದರೆ ಪರಿಶೀಲಿಸದೆ ವಾಟ್ಸಾಪ್ ಅಥವಾ ಬೇರೆ ಎಲ್ಲೋ ಕೇಳಿದ ಮಾಹಿತಿಯನ್ನು ಅನುಸರಿಸುವುದಕ್ಕಿಂತ, ನಿಪುಣ ಆಹಾರ ತಜ್ಞರು ಅಥವಾ ವೈದ್ಯರ ಶಿಫಾರಸ್ಸುಗಳನ್ನು ಪಾಲಿಸುವುದು ಮುಖ್ಯವಾಗಿರುತ್ತದೆ. ಈ ಕುರಿತು (No Diet Day) ತಜ್ಞ ವೈದ್ಯರ ಸಲಹೆ ಇಲ್ಲಿದೆ.

VISTARANEWS.COM


on

No Diet Day
Koo

ಡಯಟ್‌ ಎಂಬುದು ಇಂದಿನ ಜೀವನಶೈಲಿಯ ಭಾಗವಾಗಿ ಮಾರ್ಪಟ್ಟಿದೆ. ಏನು ತಿನ್ನಬೇಕು? ಏಷ್ಟು ತಿನ್ನಬೇಕು..? ಎಂಬುದರ ಕುರಿತಂತೆ ತರಹೇವಾರಿ ಪುಕ್ಕಟೆ ಸಲಹೆಗಳು ಇಂಟರ್‌ನೆಟ್‌ ತುಂಬಾ ಹರದಾಡುತ್ತವೆ. ಇಂಥ ಸಮಯದಲ್ಲಿ ಹಲವರು ತಪ್ಪು ಸಲಹೆಗಳಿಂದ ಬೇಗ ತೂಕ ಇಳಿಸಿಕೊಳ್ಳುವ ಆಹಾರ ಕ್ರಮಗಳನ್ನು ಅನುಸರಿಸುತ್ತಾರೆ, ಇದರಿಂದ ತೂಕ ಕಡಿಮೆಯಾಗುವ ಬದಲು ಆಸ್ಪತ್ರೆಗೆ ಸೇರಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಡಯಟ್ ಮಾಡುವುದು ಮುಖ್ಯ, ಆದರೆ ಪರಿಶೀಲಿಸದೆ ವಾಟ್ಸಾಪ್ ಅಥವಾ ಬೇರೆ ಎಲ್ಲೋ ಕೇಳಿದ ಮಾಹಿತಿಯನ್ನು ಅನುಸರಿಸುವುದಕ್ಕಿಂತ, ನಿಪುಣ ಆಹಾರ ತಜ್ಞರು ಅಥವಾ ವೈದ್ಯರ ಶಿಫಾರಸ್ಸುಗಳನ್ನು ಪಾಲಿಸುವುದು (No Diet Day) ಮುಖ್ಯವಾಗಿರುತ್ತದೆ.

Girl having a cheat day

ಪ್ರತಿ ವರ್ಷ ಮೇ 6 ರಂದು ಅಂತಾರಾಷ್ಟ್ರೀಯ ನೋ ಡಯಟ್ ದಿನವನ್ನು ಆಚರಿಸಲಾಗುತ್ತದೆ. ಈ ಮೂಲಕ ಉತ್ತಮ ಆಹಾರ ಸೇವನೆಯೊಂದಿಗೆ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಲು ಪ್ರೇರಣೆ ನೀಡುವುದಾಗಿದೆ. ಈ ಕುರಿತಂತೆ ಕಿಂಡರ್‌ ಆಸ್ಪತ್ರೆಯ ಡಯಟಿಷಿಯನ್ ತಜ್ಞೆ ಆಗಿರುವ ಡಾ. ಸಂಜನಾ ಪ್ರೇಮಲಾಲ್‌ ಮಾತನಾಡಿ, ಎಲ್ಲದಕ್ಕೂ ಡಯಟ್‌ ನೆಪವೊಡ್ಡಿ ನಿರಾಕರಿಸುವುದಕ್ಕಿಂತ ಸಮತೋಲಿತ ಪೋಷಣೆಯುಳ್ಳ ಆಹಾರ ಸೇವನೆಯ ಬಗ್ಗೆ ಈ ದಿನ ಅರಿವು ಮೂಡಿಸುವುದಾಗಿದೆ.
ಸಾಮಾನ್ಯವಾಗಿ ಬಹುಪಾಲು ಜನರ ಡಯಟ್‌ ಕೆಲ ದಿನ, ತಿಂಗಳು ಅವಧಿಗೆ ಮಾತ್ರ ಸೀಮಿತವಾಗಿರುತ್ತದೆ. ತೂಕ ಇಳಿಸಿಕೊಳ್ಳಲು ಅಥವಾ ಸಮಾಜದಲ್ಲಿ ದೈಹಿಕ ಸೌಂದರ್ಯಕ್ಕೆ ಪ್ರಾಧಾನ್ಯತೆ ನೀಡಲಾಗುತ್ತದೆ ಎಂಬ ಕಾರಣಕ್ಕೆ. ಆದ್ರೆ ನೋ ಡಯಟ್‌ ಡೇ ದೈಹಿಕ ಕ್ಷಮತೆ ಕಾಪಾಡಿಕೊಳ್ಳುವುದರ ಜೊತೆಗೆ ಕೆಟ್ಟ ಡಯಟ್‌ ಪದ್ಧತಿಗಳನ್ನ ತಿರಸ್ಕರಿಸುವ ಕುರಿತಂತೆ ಜಾಗೃತಿ ಮೂಡಿಸುತ್ತದೆ ಎಂದವರು ಹೇಳುತ್ತಾರೆ.

Diet women

ಅಸಂಬದ್ಧ ಡಯಟ್‌ನಿಂದ ಆಸ್ಪತ್ರೆ ಸೇರಬಹುದು

ಹಲವು ಕಾರಣಗಳಿಗಾಗಿ ಆರೋಗ್ಯಕರವಲ್ಲದ ಡಯಟ್‌ ಮಾಡಿ ಜನರು ಆಸ್ಪತ್ರೆಗೆ ದಾಖಲಾಗುತ್ತಾರೆ. ಸಾಮಾನ್ಯ ಸನ್ನಿವೇಶಗಳಲ್ಲಿ ಅಗತ್ಯ ಪೋಷಕಾಂಶಗಳನ್ನ ಸೇವಿಸದೆ, ಕ್ಯಾಲೋರಿಗಳುಳ್ಳ ಆಹಾರದಿಂದ ದೂರ ಉಳಿಯುವ ಮೂಲಕ ಅಪೌಷ್ಟಿಕತೆಗೆ ತುತ್ತಾಗುತ್ತಾರೆ. ಇದಲ್ಲದೆ, ಬಹುಅಂಗಾಂಗ ವೈಫಲ್ಯ ಉಂಟಾಗಬಹುದು. ಎಲೆಕ್ಟ್ರೋಲೈಟ್‌ ಅಸಮತೋಲನ, ಹೃದಯಾಘಾತ ಹಾಗೂ ಮೂತ್ರಪಿಂಡದ ಸಮಸ್ಯೆಗಳು ಕೂಡ ಎದುರಾಗುತ್ತವೆ. ಅಗತ್ಯ ಆಹಾರ ಪದಾರ್ಥಗಳನ್ನು ಸೇವಿಸದಿದ್ದರೆ, ನಿರ್ಜಲೀಕರಣ, ದೌರ್ಬಲ್ಯ, ವಾಕರಿಕೆ, ಮಲಬದ್ಧತೆ ಜೊತೆಗೆ ವಿಟಮಿನ್ಸ್‌ ಹಾಗೂ ಖನಿಜಗಳ ಅಸರ್ಮಕ ಸೇವನೆಯಿಂದ ಪೋಷಕಾಂಶಗಳ ಕೊರತೆ ಉಂಟಾಗುತ್ತದೆ. ಉತ್ತಮ ಆಹಾರ ಸೇವನೆಯನ್ನು ಬಿಡುವುದು ಎಂದರೆ ದೇಹದ ರಕ್ಷಣಾ ವ್ಯವಸ್ಥೆಗೆ ಹಾನಿ ಮಾಡುವುದಾಗಿದೆ. ಉತ್ತಮ ಆಹಾರ ಪದ್ದತಿ ದೀರ್ಘಕಾಲ ಪರಿಣಾಮಕಾರಿಯಾಗುವುದರ ಜೊತೆಗೆ ಸಮತೋಲಿತ ಆಹಾರ ಕ್ರಮವನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ಎತ್ತಿ ತೋರಿಸುತ್ತದೆ ಎಂದು ಡಾ. ಸಂಜನಾ ಪ್ರೇಮ್‌ಲಾಲ್‌ ಹೇಳಿದರು.

ಸೇವನೆಯಲ್ಲಿ ತಪ್ಪಾದ ಕ್ರಮಗಳು

ಅತಿಯಾದ ಡಯಟ್‌ನಿಂದಾಗಿ ಅನೋರೆಕ್ಸಿಯಾ ನರ್ವೋಸಾ ಅಥವಾ ಬುಲಿಮಿಯಾ ನರ್ವೋಸಾದಂತಹ ಸೇವನೆಯ ಅಸ್ವಸ್ಥತೆ ಉಂಟಾಗುತ್ತದೆ. ಇದರಿಂದ ಗಂಭೀರವಾದ ದೈಹಿಕ ಮತ್ತು ಮಾನಸಿಕ ಪರಿಣಾಮಗಳು ಉಂಟಾಗುತ್ತವೆ. ಆಗ ವೈದ್ಯರ ಸಲಹೆ ಹಾಗೂ ಚಿಕಿತ್ಸೆಯ ಮೊರೆ ಹೋಗುವುದು ಅನಿವಾರ್ಯವಾಗುತ್ತದೆ. ಕೆಲ ಸಂದರ್ಭಗಳಲ್ಲಿ ಅಸಮರ್ಪಕ ಪೋಷಣೆಯೊಂದಿಗೆ ಅತಿಯಾದ ವ್ಯಾಯಾಮದಿಂದ ಗಾಯಗಳು, ನಿರ್ಜಲೀಕರಣ ಮತ್ತು ಎಲೆಕ್ಟ್ರೋಲೈಟ್ ಅಸಮತೋಲನ ಕೂಡ ಉಂಟಾಗುತ್ತದೆ. ಆಗ ವೈದ್ಯರನ್ನ ಕಾಣಬೇಕಾಗುತ್ತದೆ. ತಪ್ಪಾದ ಡಯಟ್ನಿಂದ ಆಸ್ಪತ್ರೆಗೆ ದಾಖಲಾಗುವುದನ್ನು ತಪ್ಪಿಸಲು ನಿಪುಣ ಆರೋಗ್ಯ ತಜ್ಞರಿಂದ ಮಾಗರ್ದರ್ಶನ ಪಡೆದುಕೊಳ್ಳುವುದು ಮುಖ್ಯವಾಗಿರುತ್ತದೆ. ಜೊತೆಗೆ ಪೋಷಣೆ ಹಾಗೂ ತೂಕ ನಿರ್ವಹಣೆಗೆ ಸಮತೋಲಿತ ಆಹಾರ ಸೇವನೆಯ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಡಾ. ಸಂಜನಾ ಪ್ರೇಮ್‌ಲಾಲ್ ಸಲಹೆ ನೀಡುತ್ತಾರೆ.

Woman dieting and eating a salad

ಋಣಾತ್ಮಕ ಪರಿಣಾಮಗಳು

ತಪ್ಪಾದ ಡಯಟ್‌ ಅನುಸರಿಸುವುದು ಹಾಗೂ ಕಡಿಮೆ ಕ್ಯಾಲೋರಿ ಆಹಾರ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ನೆಗೆಟಿವ್ ಪರಿಣಾಮಗಳು ಉಂಟಾಗುತ್ತವೆ. ಅತೃಪ್ತಿ, ಸ್ವಗೌರವ ಕಡಿಮೆ ಆಗುವುದು, ತಿನ್ನುವ ಅಸ್ವಸ್ಥತೆ, ಮಾಂಸಖಂಡಗಳು ಬಲಹೀನವಾಗುವುದು, ಮೂಳೆಗಳು ದುರ್ಬಲಗೊಳ್ಳುವುದು, ಹೃದ್ರೋಗ ಹಾಗೂ ಹಾರ್ಮೋನ್‌ಗಳ ಅಸಮತೋಲನದಂತಹ ಹಾನಿಕಾರಕ ಅಡ್ಡಪರಿಣಾಮಗಳು ಎದುರಾಗುತ್ತವೆ. ಇವುಗಳನ್ನು ತಡೆಗಟ್ಟಲು ಕೆಟೋಜೆನಿಕ್‌ ಆಹಾರವನ್ನು ಸೇವಿಸುವುದು ಉತ್ತಮ ಪರಿಣಾಮಗಳನ್ನು ಉಂಟು ಮಾಡುತ್ತದೆ. ಆದರೆ ತುಂಬಾ ದಿನಗಳ ಕಾಲ ಸೇವಿಸುವುದರಿಂದ ಹೆಪಾಟಿಕ್ ಸ್ಟೀಟೋಸಿಸ್, ಮೂತ್ರಪಿಂಡದ ಕಲ್ಲುಗಳು, ಹೈಪೋಪ್ರೋಟೀನೆಮಿಯಾ ಮತ್ತು ವಿಟಮಿನ್ ಕೊರತೆಯಂತಹ ದೀರ್ಘಕಾಲಿಕ ಪರಿಣಾಮಗಳು ಎದುರಾಗುತ್ತವೆ. ಆಗ ಕೆಟೋಜೆನಿಕ್‌ ಆಹಾರ ಸೇವಿಸುವುದನ್ನು ನಿಲ್ಲಿಸಬೇಕಾಗುತ್ತದೆ ಎಂದು ಡಾ.. ಸಂಜನಾ ಪ್ರೇಮ್‌ಲಾಲ್‌ ಹೇಳುತ್ತಾರೆ

ಇದನ್ನೂ ಓದಿ: Pain Relievers: ಸೈಡ್‌ ಎಫೆಕ್ಟ್‌ ಇಲ್ಲದ ಪ್ರಕೃತಿದತ್ತ ನೋವು ನಿವಾರಕಗಳಿವು

ಪರಿಪೂರ್ಣ ಆರೋಗ್ಯ

ತಪ್ಪಾದ ಡಯಟ್ ಆರೋಗ್ಯ ಮತ್ತು ದೈಹಿಕ ಕ್ಷಮತೆಯ ಮೇಲೆ ದುಷ್ಪಾರಿಣಾಮವನ್ನು ಬೀರುತ್ತದೆ. ಹೀಗಾಗಿ ಜೀವಶೈಲಿಗೆ ಅನುಗುಣವಾಗಿ ಪೋಷಣೆಗೆ ಬೇಕಾದಂತಹ ಸಮತೋಲಿತ ಆಹಾರ ಸೇವಿಸುವ ವಿಧಾನಕ್ಕೆ ಆದ್ಯತೆ ನೀಡಿದರೆ ಹಲವು ಆರೋಗ್ಯಕರ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು ಎನ್ನುತ್ತಾರೆ ಡಾ. ಸಂಜನಾ ಪ್ರೇಮ್‌ಲಾಲ್‌.

Continue Reading
Advertisement
IPL 2024
ಕ್ರೀಡೆ17 mins ago

IPL 2024: ಶತಕ ಬಾರಿಸಿ ಟಿ20ಯಲ್ಲಿ ದಾಖಲೆ ಬರೆದ ಸೂರ್ಯಕುಮಾರ್ ಯಾದವ್​​

chikkaballapur road accident
ಕ್ರೈಂ20 mins ago

Road Accident: ಕಲ್ಲು ಸಾಗಿಸುತ್ತಿದ್ದ ಕ್ಯಾಂಟರ್‌ ಪಲ್ಟಿಯಾಗಿ ಮೂವರ ಸಾವು

World Asthma Day
ಆರೋಗ್ಯ29 mins ago

World Asthma Day: ಅಸ್ತಮಾದಿಂದ ಪಾರಾಗಲು ಈ ಸಂಗತಿ ತಿಳಿದುಕೊಂಡಿರಿ

IPL 2024 Points Table
ಕ್ರೀಡೆ39 mins ago

IPL 2024 Points Table: ಕೊನೆಯ ಸ್ಥಾನದಿಂದ ಮೇಲೆದ್ದ ಮುಂಬೈ ಇಂಡಿಯನ್ಸ್​

Lok Sabha Election 2024
Lok Sabha Election 202441 mins ago

Lok Sabha Election 2024: ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ; ಮತದಾನ ಮಾಡಲು ಕನ್ನಡದಲ್ಲೇ ಕರೆ

Google doodle
ದೇಶ43 mins ago

Lok Sabha Elections 2024: ಗೂಗಲ್‌ ಡೂಡಲ್‌ನಲ್ಲೂ ಪ್ರಜಾಪ್ರಭುತ್ವ ಹಬ್ಬದ ಸಂಭ್ರಮ

lok sabha electon 2024 voting navadurge
ಪ್ರಮುಖ ಸುದ್ದಿ1 hour ago

Lok Sabha Election 2024: ಮುಂಜಾನೆಯಿಂದಲೇ ಮತದಾನ ಬಿರುಸು, ಎಲ್ಲೆಡೆ ಶಾಂತಿಯುತ

Road rage
ಕ್ರೈಂ1 hour ago

Road rage: BMW ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಪುಂಡರ ಅಟ್ಟಹಾಸ, ಇಲ್ಲಿದೆ ವಿಡಿಯೋ

Lok Sabha Election 2024
Lok Sabha Election 20242 hours ago

Lok Sabha Election 2024: ಮೂರನೇ ಹಂತದ ಮತದಾನ ಆರಂಭ; ಇಂದು ವೋಟು ಮಾಡಲಿದ್ದಾರೆ ಮೋದಿ, ಅಮಿತ್‌ ಶಾ

rajamarga column voting 1
ಪ್ರಮುಖ ಸುದ್ದಿ2 hours ago

ರಾಜಮಾರ್ಗ ಅಂಕಣ: ಭಾರತದಲ್ಲಿ ಕಡ್ಡಾಯ ಮತದಾನ ಕಾನೂನು ಯಾಕೆ ಸಾಧ್ಯವಿಲ್ಲ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ14 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ15 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ15 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌