Reasons For Dreams: ನಮಗೆ ಕನಸು ಬೀಳಲು ಕಾರಣ ಏನು? ಇಲ್ಲಿದೆ ವೈಜ್ಞಾನಿಕ ವಿವರಣೆ - Vistara News

ಆರೋಗ್ಯ

Reasons For Dreams: ನಮಗೆ ಕನಸು ಬೀಳಲು ಕಾರಣ ಏನು? ಇಲ್ಲಿದೆ ವೈಜ್ಞಾನಿಕ ವಿವರಣೆ

ಕನಸು (Reasons For Dreams) ಕಾಣದವರು ಯಾರಿದ್ದಾರೆ? ರಾತ್ರಿ ಮಲಗಿದಾಗ ನಮಗೆ ಒಂದಲ್ಲ ಒಂದು ಕನಸು ಬೀಳುತ್ತಲೇ ಇರುತ್ತದೆ. ಕೆಲವು ಕನಸಂತೂ ನಿಜವಾಗಿಯೂ ಘಟನೆ ನಡೆದೇ ಬಿಟ್ಟಿದೆಯೇನೋ ಎಂಬಂತೆ ಭಾಸವಾಗುತ್ತದೆ. ಹಾಗಾದರೆ ಈ ಕನಸು ಬೀಳಲು ಕಾರಣ ಏನು? ಈ ಲೇಖನ ಓದಿ.

VISTARANEWS.COM


on

Reasons For Dreams
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಾವು ನಿದ್ರೆಗೆ (Reasons For Dreams) ಜಾರುತ್ತಿದ್ದಂತೆ, ನಮ್ಮ ದೇಹವೂ ವಿಶ್ರಾಂತಿಗೆ ಜಾರುವುದು ಹೌದಾದರೂ, ಮೆದುಳಿಗೆ ವಿಶ್ರಾಂತಿಯಿಲ್ಲ. ನಮ್ಮ ನಿದ್ರೆಯ ಬಹಳಷ್ಟು ಹೊತ್ತು ಕನಸುಗಳನ್ನು ಕಾಣುತ್ತಲೇ ಇರುತ್ತದೆ ನಮ್ಮ ಮೆದುಳು. ಬಾಲ್ಯದ ಗೆಳೆಯರು ಸಿಕ್ಕಂತೆ, ಹಳೆಯ ಶಾಲೆಗೆ ಹೋದಂತೆ, ಗುಡ್ಡದ ತುದಿಯಿಂದ ಇಣುಕಿದಂತೆ, ಯಾರೋ ಅಟ್ಟಿಸಿಕೊಂಡು ಬಂದಂತೆ, ಯಾವುದೋ ಚಕ್ರವ್ಯೂಹದಲ್ಲಿ ಸಿಕ್ಕಿದಂತೆ… ಹೀಗೆ ಗಾಢವಾದ ಭಾವನೆಗಳನ್ನು ಕೆರಳಿಸಿದ ಕನಸುಗಳು (Vivid Dreams) ಮಾತ್ರವೇ ನೆನಪಿರುತ್ತವೆ.

Sea Dreaming

ಕನಸು ಕಾಣದವರು ಯಾರಿದ್ದಾರೆ? ಕೂತಲ್ಲಿ, ನಿಂತಲ್ಲಿ, ನಡೆಯುವಲ್ಲಿ ಕನಸು ಕಾಣುವವರ ಬಗ್ಗೆ ಅಲ್ಲ ಇಲ್ಲಿ ಹೇಳುತ್ತಿರುವುದು. ಯಾವುದೋ ನನಸು ಮಾಡುವಂಥ ಕನಸನ್ನು ಕಣ್ಣಲ್ಲಿ ತುಂಬಿಕೊಂಡವರ ಬಗ್ಗೆಯೂ ಇಲ್ಲಿ ಮಾತಾಡುತ್ತಿಲ್ಲ. ರಾತ್ರಿ ಮಲಗಿ ನಿದ್ದೆಯಲ್ಲಿ ಯಾವ್ಯಾವುದೋ ಲೋಕಕ್ಕೆ ಕರೆದೊಯ್ಯುವ ಸ್ವಪ್ನಗಳ ಬಗ್ಗೆ ಇಲ್ಲೀಗ ಪ್ರಸ್ತಾಪ. ನಗಿಸುವ, ಅಳಿಸುವ, ಹೆದರಿಸುವ, ಚೀರಿಸುವ, ಎಬ್ಬಿಸುವ, ಖುಷಿ ಪಡಿಸುವ- ಹೀಗೆ ಹಲವು ಭಾವನೆಗಳನ್ನು ಕೆರಳಿಸಲು ಈ ಕನಸುಗಳಿಗೆ ಸಾಧ್ಯವಿದೆ.

Photo of a Woman Sleeping Near Fluffy Clouds

ಕನಸುಗಳು ಬೀಳೋದೇಕೆ

ಆದರೆ ಕನಸುಗಳೇಕೆ ಬೀಳುತ್ತವೆ ಎಂಬುದನ್ನು ತಿಳಿದವರು ಮಾತ್ರ ಯಾರೂ ಇಲ್ಲ. ನಾವು ನಿದ್ರೆಗೆ ಜಾರುತ್ತಿದ್ದಂತೆ, ನಮ್ಮ ದೇಹವೂ ವಿಶ್ರಾಂತಿಗೆ ಜಾರುವುದು ಹೌದಾದರೂ, ಮೆದುಳಿಗೆ ವಿಶ್ರಾಂತಿಯಿಲ್ಲ- ನಮ್ಮ ನಿದ್ರೆಯ ಬಹಳಷ್ಟು ಹೊತ್ತು ಕನಸುಗಳನ್ನು ಕಾಣುತ್ತಲೇ ಇರುತ್ತದೆ ನಮ್ಮ ಮೆದುಳು. ನಿದ್ದೆ ಮುಗಿಸಿ ಎದ್ದಾಗ, ಕನಸುಗಳು ನೆನಪಿರುವುದು ಕಡಿಮೆ. ಗಾಢವಾದ ಭಾವನೆಗಳನ್ನು ಕೆರಳಿಸಿದ ಕನಸುಗಳು ಮಾತ್ರವೇ ಸಾಮಾನ್ಯವಾಗಿ ನೆನಪಿರುತ್ತವೆ. ಬಾಲ್ಯದ ಗೆಳೆಯರು ಸಿಕ್ಕಂತೆ, ಹಳೆಯ ಶಾಲೆಗೆ ಹೋದಂತೆ, ಗುಡ್ಡದ ತುದಿಯಿಂದ ಇಣುಕಿದಂತೆ, ಯಾರೋ ಅಟ್ಟಿಸಿಕೊಂಡು ಬಂದಂತೆ, ಯಾವುದೋ ಚಕ್ರವ್ಯೂಹದಲ್ಲಿ ಸಿಕ್ಕಿದಂತೆ… ಹೀಗೆ ತೀವ್ರವಾದ ಭಾವನೆಗಳನ್ನು ಕೆರಳಿಸಿದ ಕನಸುಗಳು (Vivid dreams) ಸಾಮಾನ್ಯವಾಗಿ ಎಚ್ಚರವಾದ ಮೇಲೂ ಕೆಲವು ಕಾಲ ನೆನಪಿನಲ್ಲಿ ಇರುತ್ತವೆ.

ಕನಸುಗಳೇಕೆ ಬೀಳುತ್ತವೆ ಎಂಬುದು ನಿಖರವಾಗಿ ಗೊತ್ತಿಲ್ಲದಿದ್ದರೂ, ನೆನಪಿಗೆ ಮತ್ತು ಕನಸಿಗೆ ಗಾಢವಾದ ನಂಟಿದೆ ಎನ್ನುತ್ತಾರೆ ವಿಜ್ಞಾನಿಗಳು. ಬೇಡದ್ದನ್ನು ಮೆದುಳಿನಿಂದ ಅಳಿಸಿ, ಬೇಕಾದ್ದನ್ನು ಮಾತ್ರವೇ ಇರಿಸಿಕೊಳ್ಳುವಲ್ಲಿ ಕನಸುಗಳಿಗೂ ಪಾತ್ರವಿದೆಯಂತೆ. ಹಾಗಾಗಿ ಕೆಲವೊಮ್ಮೆ ಗಾಢವಾದ ನಿದ್ದೆಯಿಂದ ಎದ್ದಾಗ, ಕನಸುಗಳು ನೆನಪಿಲ್ಲದಿದ್ದರೂ, ತೀವ್ರ ಲವಲವಿಕೆಯ ಅನುಭವವಾಗುತ್ತದೆ. ಎಲ್ಲಕ್ಕಿಂತ ಕಡೆಯದಾಗಿ ಬಿದ್ದ ಕನಸುಗಳು ಮಾತ್ರವೇ ಹೆಚ್ಚಾಗಿ ನೆನಪಿನಲ್ಲಿ ಉಳಿಯುವುದು. ಇದನ್ನೇ ನಾವು ಆಡುಮಾತಿನಲ್ಲಿ ಬೆಳಗಿನ ಜಾವದ ಕನಸು ಎಂಬಂತೆ ಹೇಳುತ್ತೇವೆ.

Sleeping girl. Flying in a dream. Clouds on grey background. Sleep

ಸ್ಪಷ್ಟ ಕನಸು

(Lucid dreaming) ಒಂದಲ್ಲಾ ಒಂದು ಬಾರಿ ಎಲ್ಲರಿಗೂ ಅನುಭವಕ್ಕೆ ಬಂದೇ ಇರುತ್ತದೆ. ಅಂದರೆ ಕನಸು ಕಾಣುತ್ತಿರುವ ವ್ಯಕ್ತಿಗೆ, ಇದು ನಿಜವಲ್ಲ- ಕನಸು ಎಂಬುದು ತಿಳಿದಿರುತ್ತದೆ. ಇಡೀ ಕನಸಿನ ವಿವರಗಳನ್ನು ತಾನೇ ನಿರ್ದೇಶಿಸಬಲ್ಲೆ ಎಂದು ಭಾಸವಾಗುತ್ತದೆ. ತನ್ನದೇ ನಿರ್ದೇಶನದ ಸಿನೆಮಾ ಇದು ಎಂಬಂತೆ, ಎಚ್ಚರವೋ ಅಥವಾ ನಿದ್ದೆಯೋ ತಿಳಿಯದ ಸ್ಥಿತಿಯಲ್ಲಿ ಕನಸು ಬೀಳುತ್ತಲೇ ಹೋಗುತ್ತದೆ. ಇವೆಲ್ಲವೂ ಕನಸು ಎಂಬುದು ಕಾಣುತ್ತಿರುವ ವ್ಯಕ್ತಿಗೆ ಸ್ಪಷ್ಟವಾಗಿ ಗೊತ್ತಿರುತ್ತದೆ.

ನಿದ್ದೆಯ ಆರ್‌ಇಎಂ (rapid eye movement ) ಹಂತದಲ್ಲಿ ಸ್ಪಷ್ಟ ಕನಸುಗಳು ಬೀಳುತ್ತದೆ ಎನ್ನುತ್ತಾರೆ ವಿಜ್ಞಾನಿಗಳು. ಇದೇ ಕಾರಣಕ್ಕಾಗಿ ಕನಸು ನೆನಪಿರುತ್ತದೆ ಮತ್ತು ಅದನ್ನು ನಿರ್ದೇಶಿಸಲು ತನಗೆ ಸಾಧ್ಯ ಎಂಬ ಭಾವ ಕನಸುಗಾರನಿಗೆ ಬರುತ್ತದೆ. ತಮ್ಮ ಅನುಭವಕ್ಕೆ ಬಂದಿದ್ದು ನಿಜವೋ ಕನಸೋ ಎಂದು ಗೊಂದಲ ಮೂಡುವುದೂ ಇದೇ ಹಂತದಲ್ಲಿ. ಆದರೆ ಸ್ಪಷ್ಟ ಕನಸುಗಳಿಗೆ ಚಿಕಿತ್ಸಕ ಗುಣವಿದೆ. ಇಂಥ ಕನಸುಗಳ ಮೂಲಕ ಮಾನಸಿಕ ಚಿಕಿತ್ಸೆಯನ್ನೂ ನೀಡಬಹುದು ಎಂಬುದು ಮನೋಚಿಕಿತ್ಸಕರ ಮಾತು.

ಈ ಗಾಢ ಅಥವಾ ತೀವ್ರಭಾವದ ಕನಸುಗಳ ಪೂರ್ವಾಪರವನ್ನೊಮ್ಮೆ ನೋಡೋಣ. ಗಾಢ ಕನಸುಗಳು ಸಿಕ್ಕಾಪಟ್ಟೆ ಬೀಳುತ್ತಿದ್ದರೆ, ರಾತ್ರಿಗಳನ್ನು ಕಾಡುತ್ತಿದ್ದರೆ ಹಗಲಿನಲ್ಲಿ ಮನಸ್ಸಿನ ಮೇಲೆ ಬೀಳುವ ಒತ್ತಡಗಳು ಕಾರಣವಾಗಿರಬಹುದು. ಪೂರ್ಣ ಪ್ರಜ್ಞೆಯ ಅವಸ್ಥೆಯಲ್ಲಿ ನಡೆಯುವುದನ್ನು ಸುಪ್ತ ಮನಸ್ಸುಗಳು ತಮ್ಮದೇ ರೀತಿಯಲ್ಲಿ ಪ್ರತಿಫಲಿಸುತ್ತವೆ. ಇದರಿಂದಾಗಿ ಕನಸುಗಾರನಿಗೆ ಸಮಸ್ಯೆಗಳು ಬೆಂಬತ್ತಬಹುದು. ನಿದ್ದೆ ಅಪೂರ್ಣ ಎನಿಸಿ, ಹಗಲೆಲ್ಲಾ ಸುಸ್ತಾಗಿ, ಸರಿಯಾಗಿ ಯೋಚಿಸಲಾಗದೆ, ನಿರ್ಧಾರಗಳಲ್ಲಿ ಎಡವಿ, ದಿನಪೂರಾ ಹಾಳು ಎಂಬ ಸ್ಥಿತಿಗೆ ಬರಬಹುದು. ಏನೆಲ್ಲಾ ಸಮಸ್ಯೆಗಳಾಗಬಹುದು ಎಂಬ ವಿವರಗಳಿವು-

Portrait of a Sleeping Man

ಮಾನಸಿಕ ಆಯಾಸ

ದಿನದ ಸಮಯದಲ್ಲಿ ಒತ್ತಡ ಮಿತಿ ಮೀರಿದ್ದರೆ, ರಾತ್ರಿಯಲ್ಲಿ ತೀವ್ರಭಾವ ಕೆರಳಿಸುವ ಸ್ವಪ್ನಗಳು ಬೀಳಬಹುದು ಎನ್ನುತ್ತದೆ ವಿಜ್ಞಾನ. ಹಗಲಿನ ಒತ್ತಡದಿಂದ ರಾತ್ರಿಯೂ ನಿದ್ದೆಯಿಲ್ಲದೆ, ಮರುದಿನ ಮತ್ತೆ ಒತ್ತಡ ಹೆಚ್ಚಾಗಿ, ರಾತ್ರಿ ಪುನಃ ನಿದ್ದೆಯಿಲ್ಲದೆ… ವಿಷಮ ವೃತ್ತ ಮುಂದುವರಿಯುತ್ತದೆ. ಹಾಗಾಗಿ ಧ್ಯಾನ, ಸಂಗೀತ, ಪ್ರಾಣಾಯಾಮ, ಯೋಗ- ಅಂತೂ ದಾರಿ ಯಾವುದಾದರೂ ಸರಿ, ಒತ್ತಡವನ್ನು ಕಡಿಮೆ ಮಾಡಲೇಬೇಕು.

ಔಷಧಗಳು

ಕೆಲವು ಔಷಧಗಳು ನಮ್ಮ ನಿದ್ದೆಯನ್ನು ವ್ಯತ್ಯಾಸ ಮಾಡಿ, ಹೀಗೆ ವಿಚಿತ್ರ ಕನಸುಗಳನ್ನು ಉದ್ದೀಪಿಸುತ್ತವೆ. ಖಿನ್ನತೆ ನಿವಾರಕ ಔಷಧಗಳು ನಮ್ಮ ಕನಸುಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ದಟ್ಟವಾಗಿವೆ.

Snore problem concept.Man in bed snoring and sleeping

ನಿದ್ದೆ ಸಂಬಂಧೀ ಸಮಸ್ಯೆಗಳು

ಕೆಲವೊಂದು ನಿದ್ದೆ-ಸಂಬಂಧೀ ಸಮಸ್ಯೆಗಳು ಇಂಥ ತೊಂದರೆಗಳನ್ನು ಹುಟ್ಟುಹಾಕಬಲ್ಲವು. ರೆಸ್ಟ್‌ಲೆಸ್‌ ಲೆಗ್‌ ಸಮಸ್ಯೆ, ನಾರ್ಕೊಲೆಪ್ಸಿ ಮುಂತಾದವು ನಿದ್ದೆಯನ್ನು ಕನಸುಗಳ ಮೂಲಕ ದಿಸೆಗೆಡಿಸಬಲ್ಲವು.

ಜೀವನಶೈಲಿ

ಎರ್ರಾಬಿರ್ರಿ ಜೀವನಶೈಲಿಗಳೂ ಇದರಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಪೋಷಕಾಂಶಗಳ ಕೊರತೆಯಿದ್ದರೆ, ಮಲಗುವುದಕ್ಕೆ ನಿಯಮಿತ ಸಮಯವೇ ಇಲ್ಲದಿದ್ದರೆ, ಅತಿಯಾದ ಕೆಫೇನ್‌ ಅಥವಾ ಆಲ್ಕೋಹಾಲ್‌ ಸೇವನೆ, ಮಾದಕವಸ್ತುಗಳ ವ್ಯಸನ ಮುಂತಾದವು ನಿದ್ದೆಯನ್ನು ಇನ್ನಿಲ್ಲದಂತೆ ಹಾಳು ಮಾಡುತ್ತವೆ. ಭೀಕರವಾದ ಕನಸುಗಳನ್ನು ತರುತ್ತವೆ.

ಹಳೆಯ ಮಾನಸಿಕ ಸಮಸ್ಯೆಗಳು

ಎಂದೋ ಮನಸ್ಸಿಗಾದ ಗಾಯ, ನೋವುಗಳು ದೇಹ ಮತ್ತು ಮನಸ್ಸುಗಳ ಮೇಲೆ ಸಿಕ್ಕಾಪಟ್ಟೆ ಒತ್ತಡವನ್ನು ಹಾಕಲು ಸಾಧ್ಯವಿದೆ. ದೇಹ ನಿದ್ದಗೆ ಜಾರಿದಾಗ ಸುಪ್ತ ಮನಸ್ಸು ಜಾಗೃತವಾಗಿಯೇ ಇರುವುದರಿಂದ ಹಳೆಯದ್ದೆಲ್ಲಾ ಕೆದಕಿ, ವಿವರವಾದ ಮತ್ತು ಕೆಲವೊಮ್ಮೆ ಅಸಂಬದ್ಧವಾದ ಕನಸುಗಳನ್ನು ಮೂಡಿಸಬಲ್ಲವು.

ಪರಿಹಾರವೇನು?

ನಿತ್ಯದ ಬದುಕನ್ನೇ ಬುಡಮೇಲು ಮಾಡುವಷ್ಟು ಕನಸುಗಳು ತೊಂದರೆ ಕೊಡುತ್ತಿವೆ ಎಂದಾದರೆ, ಇದಕ್ಕೆ ತಜ್ಞರಲ್ಲಿ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ. ಆಪ್ತ ಸಮಾಲೋಚನೆ ಮುಖಾಂತರ ಯಾವ ಕಾರಣಕ್ಕಾಗಿ ನಮ್ಮ ಸುಪ್ತ ಮನಸ್ಸು ಇಂಥ ಕನಸುಗಳನ್ನು ನಮ್ಮತ್ತ ತಳ್ಳುತ್ತಿದೆ ಎಂಬುದನ್ನು ಒಂದು ಹಂತದವರೆಗೆ ಅರ್ಥ ಮಾಡಿಕೊಳ್ಳುವುದು ಸಾಧ್ಯವಿದೆ. ಒತ್ತಡ ನಿವಾರಣೆಯಂತೂ ನಿಜಕ್ಕೂ ಪರಿಣಾಮಕಾರಿ ಪರಿಹಾರಗಳನ್ನು ನೀಡಬಲ್ಲದು.

ಇದನ್ನೂ ಓದಿ: Nutmeg Health benefits: ಜಾಯಿಕಾಯಿ ಮಸಾಲೆ ಪದಾರ್ಥವಷ್ಟೇ ಅಲ್ಲ, ಆರೋಗ್ಯಕ್ಕೂ ಸಂಜೀವಿನಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Vaccin for Hiv: ಪ್ರಯೋಗದಲ್ಲಿರುವ ಚುಚ್ಚುಮದ್ದೊಂದು ಎಚ್‌ಐವಿ ಸೋಂಕು ಅಂಟದಂತೆ ತಡೆಯುವಲ್ಲಿ ಶೇ. ನೂರರಷ್ಟು ಸಾಮರ್ಥ್ಯವನ್ನು ತೋರಿಸಿದ್ದು, ಈ ಮಾರಕ ರೋಗವನ್ನು ತಡೆಯುವಲ್ಲಿ ಹೊಸ ಆಶಾಕಿರಣವೊಂದು ಮೂಡಿದೆ. ಎಲ್ಲಿ, ಯಾರ ಮೇಲೆ ನಡೆದ ಪ್ರಯೋಗಗಳಿವು? ಏನೀ ಅಧ್ಯಯನದ ವಿವರಗಳು? ಇಲ್ಲಿದೆ ಮಾಹಿತಿ.

VISTARANEWS.COM


on

Vaccin for Hiv
Koo

ಎಚ್‌ಐವಿ ಸೋಂಕು ಬಾರದಂತೆ (Vaccine for HIV) ತಡೆಯುವಲ್ಲಿ ಹೊಸ ಆಶಾಕಿರಣವೊಂದು ಕಂಡು ಬಂದಿದ್ದು, ವರ್ಷಕ್ಕೆ ಎರಡು ಡೋಸ್‌ನಂತೆ ನೀಡಲಾಗುತ್ತಿರುವ ಚುಚ್ಚುಮದ್ದೊಂದು ಕಿಶೋರಿಯರು ಮತ್ತು ಯುವತಿಯರಲ್ಲಿ ಸೋಂಕುಗಳನ್ನು ಪೂರ್ಣ ಪ್ರಮಾಣದಲ್ಲಿ ತಡೆಗಟ್ಟುವ ಭರವಸೆಯನ್ನು ಮೂಡಿಸಿದೆ. ಈಗಾಗಲೇ ಮೂರನೇ ಹಂತದ ಪ್ರಯೋಗದಲ್ಲಿರುವ ಲೇನಕಾಪವಿರ್‌ (lenacapavir) ಎನ್ನುವ ಚುಚ್ಚುಮದ್ದಿನ ಬಗೆಗೆ ಆಫ್ರಿಕಾದಲ್ಲಿ ನಡೆಸಲಾದ ಪ್ರಯೋಗದ ದತ್ತಾಂಶಗಳು ಈ ಹೊಸ ಭರವಸೆಯನ್ನು ಮೂಡಿಸಿವೆ. ಈ ಚುಚ್ಚುಮದ್ದನ್ನು ಎಚ್‌ಐವಿ ಸೋಂಕು ಇಲ್ಲದಿರುವ ಸುಮಾರು 5000 ಯುವತಿಯರು ಮತ್ತು ಹದಿಹರೆಯದ ಹುಡುಗಿಯರಿಗೆ ನೀಡಲಾಗಿತ್ತು. ಈ ಅಧ್ಯಯನ ನಡೆಯುತ್ತಿರುವಾಗ ಇವರಾರಿಗೂ ಎಚ್‌ಐವಿ ಸೋಂಕು ಹೊಸದಾಗಿ ಅಂಟಿಲ್ಲ ಎನ್ನುವುದು, ಈ ಸೋಂಕನ್ನು ಶೇ. ನೂರರಷ್ಟು ತಡೆಯಲು ಸಾಧ್ಯವಾಗುವ ಆಸೆಯನ್ನು ಹುಟ್ಟಿಸಿದೆ. ಎಚ್‌ಐವಿ ಸೋಂಕುಗಳನ್ನು ತಡೆಗಟ್ಟಲು ಟ್ರುವಾಡದಂಥ ಮಾತ್ರೆಗಳು ಈಗಾಗಲೇ ಬಳಕೆಯಲ್ಲಿವೆ. ಈ ಭೀತಿಯನ್ನು ಕಡಿಮೆ ಮಾಡುವ ಇಂಜೆಕ್ಷನ್‌ಗಳು ಸಹ ಈಗಾಗಲೇ ಚಾಲ್ತಿಯಲ್ಲಿವೆ.

HIV vaccine

ಏನಿದರ ಪ್ರಾಮುಖ್ಯತೆ?

ಈ ಸೂಜಿಮದ್ದಿನ ಪ್ರಾಮುಖ್ಯತೆಯನ್ನು ಅರಿಯುವುದಕ್ಕೆ ಪ್ರಯೋಗದ ವಿವರಗಳನ್ನು ಚುಟುಕಾಗಿಯಾದರೂ ತಿಳಿದುಕೊಳ್ಳಬೇಕು. ದಕ್ಷಿಣ ಆಫ್ರಿಕಾ ಮತ್ತು ಉಗಾಂಡ ದೇಶಗಳ ಯುವತಿಯರು ಮತ್ತು ಕಿಶೋರಿಯರನ್ನು ಒಳಗೊಂಡು ಈ ಪ್ರಯೋಗ ನಡೆಸಲಾಗಿದೆ. ಈ ಪ್ರದೇಶಗಳಲ್ಲಿ ಎಚ್‌ಐವಿ ಸೋಂಕು ತೀರಾ ವ್ಯಾಪಕವಾಗಿದ್ದು, ಅರಿವು ಮತ್ತು ಮುನ್ನೆಚ್ಚರಿಕೆಯ ಕೊರತೆಯೇ ಇದಕ್ಕೆ ಪ್ರಮುಖ ಕಾರಣವೆಂದು ಹೇಳಬಹುದು. 26 ವಾರಗಳ ಅವಧಿಯಲ್ಲಿ ಒಂದು ಬಾರಿಯಂತೆ ಲೇನಕಾಪವಿರ್‌ ಇಂಜೆಕ್ಷನ್‌ ನೀಡಿದ ಒಂದು ಗುಂಪು, ಖಾಲಿ ಇಂಜೆಕ್ಷನ್‌ ನೀಡಿದ ಇನ್ನೊಂದು ಗುಂಪು, ನಿತ್ಯವೂ ಎಚ್‌ಐವಿ ನಿರೋಧಕ ಮಾತ್ರೆ ತೆಗೆದುಕೊಳ್ಳುವ ಮತ್ತೊಂದು ಗುಂಪುಗಳು ಅಧ್ಯಯನಕ್ಕೆ ಒಳಪಟ್ಟಿದ್ದವು.

ಪ್ರಯೋಗ ಯಶಸ್ವಿ

26 ವಾರಗಳ ನಂತರ ಈ ಗುಂಪುಗಳನ್ನು ಪರಿಶೀಲಿಸಿದಾಗ 55 ಮಂದಿಗೆ ಸೋಂಕು ಉಂಟಾಗಿತ್ತು. ಅದರಲ್ಲಿ ಲೇನಕಾಪವಿರ್‌ ತೆಗೆದುಕೊಂಡಿದ್ದ ಗುಂಪಿನಲ್ಲಿ ಮಾತ್ರ ಯಾರೊಬ್ಬರಿಗೂ ಸೋಂಕು ತಾಗಿರಲಿಲ್ಲ. ಉಳಿದ ಗುಂಪುಗಳಲ್ಲಿ- ಒಂದರಲ್ಲಿ 39 ಮಂದಿಗೆ, ಇನ್ನೊಂದರಲ್ಲಿ 16 ಮಂದಿಗೆ ಸೋಂಕು ಅಂಟಿತ್ತು. ಹಾಗಾಗಿ ಎಚ್‌ಐವಿ ಹೊಸದಾಗಿ ಅಂಟದಂತೆ ತಡೆಯುವಲ್ಲಿ ಈ ಔಷಧಿ ಶೇ. ನೂರರಷ್ಟು ಪರಿಣಾಮ ಬೀರಬಹುದು ಎಂಬ ಭರವಸೆ ಇಡೀ ಜಗತ್ತಿನ ಸಂಶೋಧಕರ ಪಾಲಿಗೆ ಮಹತ್ವದ್ದೆನಿಸಿದೆ.
ಯುವತಿಯರಲ್ಲಿ ಮಾತ್ರವೇ ಈ ಔಷಧಿ ಕೆಲಸ ಮಾಡುತ್ತದೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ. ಇದನ್ನು ಪುರುಷರಿಗೆ ನೀಡಿ ನಡೆಸಲಾಗುತ್ತಿರುವ ಅಧ್ಯಯನ ಇನ್ನೂ ಚಾಲ್ತಿಯಲ್ಲಿದೆ. ಅಲ್ಲಿಂದ ಹೊರಹೊಮ್ಮುವ ದತ್ತಾಂಶಗಳ ಬಗೆಗೂ ಸಂಶೋಧಕರು ಕುತೂಹಲ ಹೊಂದಿದ್ದಾರೆ. ಮುಂದಿನ ಹಂತದ ಪ್ರಯೋಗಗಳಲ್ಲಿ ಪುರುಷರು, ಲಿಂಗ ಬದಲಾಯಿಸಿಕೊಂಡಿರುವ ಮತ್ತು ಲಿಂಗತ್ವ ಅಲ್ಪಸಂಖ್ಯಾತರನ್ನೂ ಒಳಗೊಳ್ಳಲಾಗಿದೆ. ಅರ್ಜೆಂಟೀನಾ, ಬ್ರೆಜಿಲ್, ಮೆಕ್ಸಿಕೊ, ಪೆರು, ಥಾಯ್ಲೆಂಡ್, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ನಡೆಯುತ್ತಿದೆ.

ಚುಚ್ಚು ಮದ್ದಿನಿಂದ ರಕ್ಷಣೆ

ಈಗಾಗಲೇ ಪರಿಣಾಮಕಾರಿ ಎನಿಸಿಕೊಂಡಿರುವ Pre-exposure prophylaxis (or PrEP) ಮಾತ್ರೆಗಳ ಜೊತೆಗೆ, ಈ ಚುಚ್ಚುಮದ್ದು ಸಹ ಹೆಚ್ಚಿನ ರಕ್ಷಣೆಯನ್ನು ನೀಡಲಿದೆ. PrEP ಮಾತ್ರೆಗಳನ್ನು ಪ್ರತಿದಿನ ಅಥವಾ ವೈದ್ಯರು ಸೂಚಿಸಿದ ರೀತಿಯಲ್ಲೇ ತೆಗೆದುಕೊಳ್ಳುವುದು ಅಗತ್ಯ. ಆದರೆ ಈ ಹೊಸ ಭರವಸೆಯನ್ನು ಆರು ತಿಂಗಳಿಗೊಮ್ಮೆ ಮಾತ್ರವೇ ತೆಗೆದುಕೊಂಡರೆ ಸಾಕು ಎನ್ನುವುದು, ಬಳಕೆಯನ್ನು ಇನ್ನಷ್ಟು ಸರಳಗೊಳಿಸುವ ಮತ್ತು ಪರಿಣಾಮಕಾರಿ ಫಲಿತಾಂಶವನ್ನು ಪಡೆಯುವ ನಿಟ್ಟಿನಲ್ಲಿ ಮಹತ್ವದ್ದು ಎನಿಸಿದೆ.

ಇದನ್ನೂ ಓದಿ: Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

ಈಗ ಪ್ರಯೋಗದಲ್ಲಿರುವ ಲೇನಕಾಪವಿರ್‌ ಚುಚ್ಚುಮದ್ದು ವಿಶ್ವದಲ್ಲಿ ಎಲ್ಲಿಯೂ ಎಚ್‌ಐವಿ ತಡೆಯುವ ಔಷಧಿಯೆಂದು ಮಾನ್ಯತೆ ಪಡೆದಿಲ್ಲ. ಆದರೆ ಇನ್ನೂ ಕೆಲವು ಔಷಧಿಗಳ ಜೊತೆಯಲ್ಲಿ ಇದನ್ನೂ ನೀಡುವುದಕ್ಕೆ ಅಮೆರಿಕದಲ್ಲಿ ಪರವಾನಗಿ ಇದೆ. ಇದಕ್ಕೆ ವರ್ಷಕ್ಕೆ ಸುಮಾರು 40,000 ಡಾಲರ್‌ ವೆಚ್ಚ ಈಗಾಗಲೇ ತಗುಲುತ್ತಿದೆ. ಒಂದೊಮ್ಮೆ ಎಚ್‌ಐವಿ ಸೋಂಕು ಬಾರದಂತೆ ತಡೆಯುವಲ್ಲಿ ಇದು ಸಂಪೂರ್ಣ ಯಶಸ್ವಿ ಎಂದಾದರೆ, ಈ ವೆಚ್ಚವನ್ನು ತಗ್ಗಿಸದಿದ್ದರೆ ಬಳಕೆದಾರರಿಗೆ ಪ್ರಯೋಜನ ಆಗದಿರಬಹುದು ಎನ್ನುತ್ತಾರೆ ಅಧ್ಯಯನಕಾರರು.

Continue Reading

ದೇಶ

Chandipura Virus: ಗುಜರಾತ್‌ನಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ಗೆ 48 ಬಲಿ; 39 ಮಂದಿಗೆ ಚಾಂದಿಪುರ ವೈರಸ್ ದೃಢ

Chandipura Virus: ಕಳೆದ ಒಂದು ತಿಂಗಳಲ್ಲಿ ಗುಜರಾತ್‌ನಲ್ಲಿ ಮಾರಣಾಂತಿಕ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ನಿಂದ ಕನಿಷ್ಠ 48 ಮಂದಿ ಮೃತಪಟ್ಟಿದ್ದಾರೆ. ಆ ಪೈಕಿ ಹೆಚ್ಚಿನವರ ಸಾವಿಗೆ ಚಾಂದಿಪುರ ವೈರಸ್ ಕಾರಣ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಗುಜರಾತ್‌ನಲ್ಲಿ ಜುಲೈ 26ರವರೆಗೆ ಒಟ್ಟು 127 ಎಇಎಸ್ (AES) ಪ್ರಕರಣಗಳು ವರದಿಯಾಗಿವೆ.

VISTARANEWS.COM


on

Koo

ಗಾಂಧಿನಗರ: ಕಳೆದ ಒಂದು ತಿಂಗಳಲ್ಲಿ ಗುಜರಾತ್‌ (Gujarat)ನಲ್ಲಿ ಮಾರಣಾಂತಿಕ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್ (Acute Encephalitis Syndrome)ನಿಂದ ಕನಿಷ್ಠ 48 ಮಂದಿ ಮೃತಪಟ್ಟಿದ್ದಾರೆ. ಆ ಪೈಕಿ ಹೆಚ್ಚಿನವರ ಸಾವಿಗೆ ಚಾಂದಿಪುರ ವೈರಸ್ (Chandipura Virus) ಕಾರಣ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಗುಜರಾತ್‌ನಲ್ಲಿ ಜುಲೈ 26ರವರೆಗೆ ಒಟ್ಟು 127 ಎಇಎಸ್ (AES) ಪ್ರಕರಣಗಳು ವರದಿಯಾಗಿವೆ. ಈ ಪೈಕಿ 39 ಮಂದಿಗೆ ಚಾಂದಿಪುರ ವೈರಸ್ (CHPV) ಇರುವುದು ದೃಢಪಟ್ಟಿದೆ. ಪಾಸಿಟಿವ್ ಪ್ರಕರಣಗಳನ್ನು ಹೊಂದಿರುವ ಸಬರ್ಕಾಂತ ಮತ್ತು ಪಚ್ಮಹಲ್‌ನಲ್ಲಿ ತಲಾ 6, ಅರಾವಳಿ ಮತ್ತು ಖೇಡಾದಲ್ಲಿ ತಲಾ 3, ಮೆಹ್ಸಾನಾದಲ್ಲಿ 4, ಅಹಮದಾಬಾದ್ ನಗರದಲ್ಲಿ 3 ಮತ್ತು ದಾಹೋಡ್‌ನಲ್ಲಿ 2 ಪ್ರಕರಣಗಳು ವರದಿಯಾಗಿವೆ.

ಜುಲೈ 17ರಂದು ಅರಾವಳಿಯ ಮೋಟಾ ಕಾಂತರಿಯಾ ಎಂಬ ನಾಲ್ಕು ವರ್ಷದ ಮಗು ಸಬರ್ಕಾಂತದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಇದು ಚಾಂದಿಪುರ ವೈರಸ್‌ನಿಂದ ರಾಜ್ಯದಲ್ಲಿ ಸಂಭವಿಸಿದ ಮೊದಲ ಸಾವಿನ ಪ್ರಕರಣ ಎಂದು ಗುಜರಾತ್ ಸರ್ಕಾರ ದೃಢಪಡಿಸಿತ್ತು. ಮುಖ್ಯವಾಗಿ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಪರಿಣಾಮ ಬೀರುವ ಚಾಂದಿಪುರ ವೈರಸ್ ಸದ್ಯ ಆತಂಕಕ್ಕೆ ಕಾರಣವಾಗಿದೆ. ಸೋಂಕು ತಗುಲಿದಾಗ ಜ್ವರ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಮಾರಣಾಂತಿಕವಾಗುತ್ತದೆ.

ಮೆದುಳಿನ ಉರಿಯೂತ

ಎಇಎಸ್ ಮೆದುಳಿನ ಉರಿಯೂತವನ್ನು ಉಂಟು ಮಾಡುತ್ತದೆ. ಜತೆಗೆ ತೀವ್ರವಾದ ಎನ್ಸೆಫಾಲಿಟಿಕ್ ಕಾಯಿಲೆಗೆ ಕಾರಣವಾಗುತ್ತದೆ. ಇದು ಹರ್ಪಿಸ್ ಸಿಂಪ್ಲೆಕ್ಸ್ ವೈರಸ್, ಎಂಟರೊವೈರಸ್‌, ಮತ್ತು ಚಾಂದಿಪುರ ವೈರಸ್‌ಗಳಿಂದ ಕಾಣಿಸಿಕೊಳ್ಳುತ್ತದೆ. ಪ್ರಸ್ತುತ ಈ ರೋಗ ಲಕ್ಷಣವಿರುವ 54 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 26 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ರೋಗ ಲಕ್ಷಣ

ಚಾಂದಿಪುರ ವೈರಸ್ ಸೋಂಕು ಬಾಧಿತರಲ್ಲಿ ಸಾಮಾನ್ಯ ಜ್ವರದ ಲಕ್ಷಣವೇ ಕಂಡು ಬರುತ್ತದೆ. ಬಾಧಿತರಲ್ಲಿ ದಿಢೀರ್ ಜ್ವರ, ತೀವ್ರ ತಲೆನೋವು, ವಾಂತಿ, ಸ್ನಾಯು ಸೆಳೆತ, ಪ್ರಜ್ಞಾಹೀನತೆ, ಅರೆನಿದ್ರಾವಸ್ಥೆ ಕಂಡು ಬರುತ್ತದೆ. ತಕ್ಷಣ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಮಾರಣಾಂತಿಕವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ರಾಬ್ಡೋವೆರಿಡೆ ವರ್ಗಕ್ಕೆ ಸೇರಿದ ವೈರಸ್ ಈ ರೋಗಕ್ಕೆ ಕಾರಣ.

ಆರೋಗ್ಯ ಅಧಿಕಾರಿಗಳಿಂದ ಕ್ರಮ

ಆರೋಗ್ಯ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯ ಪ್ರವೃತ್ತರಾಗಿದ್ದು, ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ. ರಾಜ್ಯವು ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ಸಜ್ಜುಗೊಳಿಸಿದೆ. ಪೀಡಿತ ಪ್ರದೇಶಗಳು 41,000ಕ್ಕೂ ಹೆಚ್ಚು ಮನೆಗಳನ್ನು ಒಳಗೊಂಡಿದೆ. ರಾಜ್ಯಾದ್ಯಂತ ಸುಮಾರು 5,00,000 ಮನೆಗಳು, 19,000ಕ್ಕೂ ಹೆಚ್ಚು ಶಾಲೆಗಳು ಮತ್ತು 21,000ಕ್ಕೂ ಹೆಚ್ಚು ಅಂಗನವಾಡಿಗಳಲ್ಲಿ ಕೀಟನಾಶಕಗಳನ್ನು ಸಿಂಪಡಿಸುವ ಕಾರ್ಯ ನಡೆಯುತ್ತಿದೆ. ಮಲಾಥಿಯಾನ್ ಫಾಗಿಂಗ್, ಸ್ಯಾಂಡ್ ಫ್ಲೈಗಳು ಮತ್ತು ಸೊಳ್ಳೆಗಳ ಸಂಖ್ಯೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿಶೇಷವಾಗಿ ಹೆಚ್ಚಿನ ಪ್ರಕರಣಗಳು ವರದಿಯಾದ ಪ್ರದೇಶಗಳಲ್ಲಿ ತಡೆಗಟ್ಟುವ ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Chandipura Virus: ಡೆಂಗ್ಯೂ ಹಾವಳಿ ನಡುವೆ ಕಾಡುತ್ತಿದೆ ಚಾಂದಿಪುರ ವೈರಸ್; ಇದುವರೆಗೆ 6 ಮಕ್ಕಳು ಬಲಿ: ಏನಿದರ ಲಕ್ಷಣ?

Continue Reading

ಆರೋಗ್ಯ

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Health Tips Kannada: ಎದ್ದ ಕೂಡಲೇ ಚಹಾ ಕುಡಿಯದಿದ್ದರೆ ಅದೇನೋ ಕಳೆದುಕೊಂಡ ಭಾವ ಹಲವರನ್ನು ಕಾಡುತ್ತದೆ. ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದು ಒಳ್ಲೆಯದಲ್ಲ ಎಂಬುದು ಗೊತ್ತಿದ್ದರೂ, ಈ ಚಹಾ ಕುಡಿಯುವ ಅಭ್ಯಾಸವನ್ನು ಬಿಡಲು ಬಹುತೇಕರಿಗೆ ಸಾಧ್ಯವಾಗುವುದಿಲ್ಲ. ಅದೇನೇ ಆಗಲಿ, ಚಹಾ ಮಾತ್ರ ಬೇಕು. ಆದರೆ, ನೆನಪಿಡಿ. ಎಲ್ಲ ಸಮಯದಲ್ಲೂ ಚಹಾ ಕಾಫಿ ಸೇವನೆ ಒಳ್ಳೆಯದಲ್ಲ.

VISTARANEWS.COM


on

Health Tips Kannada
Koo

ಬಹುತೇಕರಿಗೆ ದಿನದ ಆರಂಭ ಎಂದರೆ ಒಂದು ಕಪ್‌ ಚಹಾ ಅಥವಾ ಕಾಫಿ. ಇದೊಂದು ಸಂಪ್ರದಾಯದಂತೆ ಎಷ್ಟೋ ವರ್ಷಗಳಿಂದ ನಮ್ಮನ್ನು ಪೊರೆಯುತ್ತಿದೆ. ಎದ್ದ ಕೂಡಲೇ ಚಹಾ ಕುಡಿಯದಿದ್ದರೆ ಅದೇನೋ ಕಳೆದುಕೊಂಡ ಭಾವ ಹಲವರನ್ನು ಕಾಡುತ್ತದೆ. ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದು ಒಳ್ಲೆಯದಲ್ಲ ಎಂಬುದು ಗೊತ್ತಿದ್ದರೂ, ಈ ಚಹಾ ಕುಡಿಯುವ ಅಭ್ಯಾಸವನ್ನು ಬಿಡಲು ಬಹುತೇಕರಿಗೆ ಸಾಧ್ಯವಾಗುವುದಿಲ್ಲ. ಅದೇನೇ ಆಗಲಿ, ಚಹಾ ಮಾತ್ರ ಬೇಕು. ಆದರೆ, ನೆನಪಿಡಿ. ಎಲ್ಲ ಸಮಯದಲ್ಲೂ ಚಹಾ ಕಾಫಿ ಸೇವನೆ ಒಳ್ಳೆಯದಲ್ಲ. ಕೆಲವು ಸಮಯಗಳಲ್ಲಿ ಇವುಗಳ ಸೇವನೆ ಮಾಡುವುದರಿಂದ ನಾವು ಸೇವಿಸುವ ಆಹಾರಗಳಲ್ಲಿರುವ ಪೋಷಕಾಂಶಗಳು ದೇಹಕ್ಕೆ ಸರಿಯಾಗಿ ಸೇರದೆ ನಷ್ವಾಗಬಹುದು. ಇನ್ನೂ ಕೆಲವೊಮ್ಮೆ ಇವು ಜೀರ್ಣಕ್ರಿಯೆಯನ್ನೇ ಬಾಧಿಸಬಹುದು. ಅಷ್ಟೇ ಅಲ್ಲ, ನಮ್ಮ ದೇಹದ ಹಲವು ಸಮಸ್ಯೆಗಳಿಗೆ ಮೂಲ ಕಾರಣ ಈ ನಮ್ಮ ಕೆಟ್ಟ ಅಭ್ಯಾಸದಿಂದಲೂ ಇರಬಹುದು. ಬನ್ನಿ, ಚಹಾ ಹಾಗೂ ಕಾಫಿಯನ್ನು ನಾವು ಯಾವ ಸಮಯದಲ್ಲಿ ಕುಡಿಯಬಾರದು (Health Tips Kannada) ಎಂಬುದನ್ನು ನೋಡೋಣ.

drink tea

ಬೆಳಗ್ಗೆ ಎದ್ದ ಕೂಡಲೇ

ಬಹುತೇಕ ಎಲ್ಲರಿಗೂ ಇರುವ ಅಭ್ಯಾಸವಿದು. ಬೆಳಗ್ಗೆ ಎದ್ದ ಕೂಡಲೇ ಒಂದು ಕಪ್‌ ಚಹಾ ಕೈಯಲ್ಲಿದ್ದರೇ ದಿನ ಆರಂಭವಾದ ಹಾಗೆ. ಈ ಅಭ್ಯಾಸ ಅನೇಕರಿಗಿದೆ. ಇದನ್ನು ಬಿಡುವುದು ಕಷ್ಟ ನಿಜವೇ. ಆದರೆ, ಬೆಳಗ್ಗೆ ಎದ್ದ ಕೂಡಲೇ ಚಹಾ ಅಥವಾ ಕಾಫಿಯನ್ನು ಹೊಟ್ಟೆಗಿಳಿಸುವುದರಿಂದ ಇದರಲ್ಲಿರುವ ಕೆಫೀನ್‌ ಅಂಶವು ಖಾಲಿ ಹೊಟ್ಟೆಯ ವ್ಯವಸ್ಥೆಯನ್ನು ಹದಗೆಡಿಸುತ್ತದೆ. ಹಾರ್ಮೋನ್‌ ಉತ್ಪಾದನೆಯ ವ್ಯವಸ್ಥೆಯನ್ನೂ ಇದೂ ಹದಗೆಡಿಸುವುದಲ್ಲದೆ, ಇದರಿಂದ ಮಾನಸಿಕವಾಗಿಯೂ ಒತ್ತಡ ಇತ್ಯಾದಿ ಸಮಸ್ಯೆಗಳು ಬರಬಹುದು.

ಇದನ್ನೂ ಓದಿ: Contact Lens: ಕಾಂಟ್ಯಾಕ್ಟ್‌ ಲೆನ್ಸ್‌ ಬಳಸುತ್ತೀರಾ? ಈ ವಿಷಯಗಳು ತಿಳಿದಿರಲಿ!

ಊಟ ತಿಂಡಿಯ ಜೊತೆಗೆ

ನಿಮಗೆ ಊಟ ತಿಂಡಿಯ ಜೊತೆಗೆ ಕಾಫಿ ಅಥವಾ ಚಹಾ ಕುಡಿಯುವ ಅಭ್ಯಾಸ ಇದ್ದರೆ ಮತ್ತೊಮ್ಮೆ ಯೋಚಿಸಿ. ಚಹಾ ಮತ್ತು ಕಾಫಿ ಆಮ್ಲೀಯ ಗುಣವನ್ನೂ ಹೊಂದಿರುವುದರಿಂದ ಇದು ನಿಮ್ಮ ಜೀರ್ಣಕ್ರಿಯೆಯನ್ನೇ ಹಾಳುಗೆಡವಬಹುದು. ನೀವು ಪ್ರೊಟೀನ್‌ಯುಕ್ತ ಆಹಾರ ತೆಗೆದುಕೊಂಡರೆ, ಅದರ ಜೊತೆಗೆ ಚಹಾ/ಕಾಫಿಯನ್ನೂ ಸೇವಿಸಿದರೆ ಪ್ರೊಟೀನ್‌ ನಿಮ್ಮ ದೇಹದಕ್ಕೆ ಒದಗದು. ಅಷ್ಟೇ ಅಲ್ಲ, ಪ್ರೊಟೀನ್‌ ಕರಗಲು ಕಷ್ಟವಾಗುತ್ತದೆ. ನಿಮ್ಮ ಆಹಾರದಲ್ಲಿರುವ ಕಬ್ಬಿಣದಂಶವೂ ಕೂಡಾ ದೇಹಕ್ಕೆ ಸೇರಲು ಕಷ್ಟವಾಗಬಹುದು. ಹಾಗಾಗಿ, ಆಹಾರದ ಜೊತೆಗೆ ಚಹಾ ಕಾಫಿ ಸೇವನೆ ಮಾಡುವುದರಿಂದ ನಿಮ್ಮ ಆಹಾರದಲ್ಲಿರುವ ಪೋಷಕಾಂಶಗಳು ಕರಗಿ ನಿಮ್ಮ ದೇಹಕ್ಕೆ ಸೇರುವ ಕ್ರಿಯೆ ನಿಧಾನವಾಗುತ್ತದೆ. ಹಾಗೆಯೇ ಪೋಷಕಾಂಶಗಳು ನಷ್ಟವಾಗಲೂಬಹುದು.

drink coffe

ಸಂಜೆ ನಾಲ್ಕು ಗಂಟೆಯ ನಂತರ

ಸಂಜೆ ಕಾಫಿ ಅಥವಾ ಚಹಾ ಕುಡಿಯುವುದನ್ನು ಅಭ್ಯಾಸ ಮಾಡಿಕೊಂಡ ಮಂದಿ ಇಲ್ಲೊಮ್ಮೆ ಕೇಳಿ. ಚಹಾ ಅಥವಾ ಕಾಫಿಯನ್ನು ನೀವು ಮಲಗುವುದಕ್ಕೂ ಹತ್ತು ಗಂಟೆಗಳ ಮೊದಲು ಸೇವಿಸಬೇಕಂತೆ. ಆದರೆ ಇದು ಸಾಧ್ಯವಾಗದಿದ್ದರೆ, ಕನಿಷ್ಟ ಆರು ಗಂಟೆಗಳ ಮೊದಲು ಸೇವಿಸಬಹುದಂತೆ. ಅಂದರೆ, ಸಂಜೆ ನಾಲ್ಕು ಗಂಟೆಗೂ ಮೊದಲು ಕಾಫಿ ಚಹಾ ಸೇವಿಸಿ. ಇದು ನಿಮ್ಮ ನಿದ್ದೆಯ ಗುಣಮಟ್ಟವನ್ನು ಹೆಚ್ಚಿಸುವುದಲ್ಲದೆ, ಪಿತ್ತಕೋಶವನ್ನೂ ಆರೋಗ್ಯವಾಗಿಡುತ್ತದೆ. ಕಾರ್ಟಿಸಾಲ್‌ ಮಟ್ಟವನ್ನೂ ಕಡಿಮೆ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಪ್ರಚೋದಿಸುತ್ತದೆ.
ಈ ಸಮಯವನ್ನು ಹೊರತುಪಡಿಸಿ, ಉಳಿದ ಸಮಯಗಳಲ್ಲಿ ನೀವು ನಿಮ್ಮ ಇಷ್ಟದ ಚಹಾ ಕಾಫಿಯನ್ನು ಕುಡಿಯಬಹುದು. ಆದರೆ, ಇದು ಅತಿಯಾಗದಿರಲಿ. ಅಂದು ದಿನಕ್ಕೆ 300 ಮಿಲಿಗ್ರಾಂಗಿಂತ ಹೆಚ್ಚಿನ ಕೆಫೀನ್‌ ನಿಮ್ಮ ಹೊಟ್ಟೆ ಸೇರದಿರಲಿ. ಸುಮಾರು 150 ಎಂಎಲ್‌ ಕಾಫಿಯಲ್ಲಿ 80ರಿಂದ 120 ಮಿಲಿಗ್ರಾಂ ಕೆಫೀನ್‌ ಇದೆ. ಇನ್‌ಸ್ಟ್ಯಾಂಟ್‌ ಕಾಫಿಯಲ್ಲಿ 50-65 ಎಂಜಿ ಕೆಫೀನ್‌ ಇದ್ದರೆ, ಚಹಾದಲ್ಲಿ 30-65 ಎಂಜಿ ಕೆಫೀನ್‌ ಇದೆ. ಹೀಗಾಗಿ, ಈ ಬಗ್ಗೆ ಎಚ್ಚರ ವಹಿಸಿ ಹಿತಮಿತವಾಗಿ ನಿಮ್ಮ ಪ್ರೀತಿಯ ಪೇಯವನ್ನು ನಿತ್ಯವೂ ಕುಡಿಯಬಹುದು ಎಂಬುದು ತಜ್ಞರ ಮಾತು.

Continue Reading

ಧಾರ್ಮಿಕ

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

Shravan 2024: ಶ್ರಾವಣ ಮಾಸದಲ್ಲಿ (Shravan Month 2024) ಹೆಚ್ಚಾಗಿ ದೇವರ ಭಕ್ತಿ, ಪ್ರಾರ್ಥನೆಯಲ್ಲಿ ತೊಡಗುವುದರಿಂದ ಆಹಾರ ನಿಯಮಗಳನ್ನು ಕಠಿಣವಾಗಿ ಅನುಸರಿಸಲಾಗುತ್ತದೆ. ಉಪವಾಸ ಇರುವವರು ಈ ಸಂದರ್ಭದಲ್ಲಿ ಆಹಾರದ ಮಾರ್ಗಸೂಚಿಗಳನ್ನು ಅನುಸರಿಸಿ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆಧ್ಯಾತ್ಮಿಕ ಗಮನವನ್ನು ಕೇಂದ್ರೀಕರಿಸಬಹುದು.

VISTARANEWS.COM


on

By

Shravan Month 2024
Koo

ಶ್ರಾವಣಾ ಬಂತು ಕಾಡಿಗೆ.. ಬಂತು ನಾಡಿಗೆ.. ಬಂತು ಬೀಡಿಗೆ.. ಕವಿ ದ. ರಾ. ಬೇಂದ್ರೆಯವರ (da.ra. bendre) ಕವನದ ಸಾಲುಗಳು ಶ್ರಾವಣ ಮಾಸದ (Shravan 2024) ಸಂಭ್ರಮವನ್ನು ವರ್ಣಿಸುವಂತೆ ಶ್ರಾವಣ ಮಾಸವು (Shravan Month) ಹಬ್ಬ ಹರಿದಿನಗಳನ್ನು ಹೊತ್ತುಕೊಂಡು ಬರುತ್ತದೆ. ಈ ಮಾಸವು ಶಿವನಿಗೆ ಸಮರ್ಪಿತವಾಗಿದ್ದು, ಈ ಸಂದರ್ಭದಲ್ಲಿ ಹಿಂದೂಗಳು ಉಪವಾಸ, ಪ್ರಾರ್ಥನೆಯಲ್ಲಿ ಕಳೆಯುತ್ತಾರೆ.

ಈ ಬಾರಿ ಆಗಸ್ಟ್ 4ರಿಂದ ಶ್ರಾವಣ ಮಾಸ ಆರಂಭಗೊಳ್ಳಲಿದ್ದು, ಈ ಮಂಗಳಕರ ಅವಧಿಯಲ್ಲಿ ವಿಶೇಷ ಪ್ರಾರ್ಥನೆ, ಆಚರಣೆ ಮತ್ತು ಆಹಾರದ ನಿರ್ಬಂಧ ಇರುತ್ತದೆ. ಶ್ರಾವಣ ಮಾಸದಲ್ಲಿ ಭಕ್ತರು ತಮ್ಮ ದೇಹ ಮತ್ತು ಮನಸ್ಸನ್ನು ಶುದ್ಧೀಕರಿಸಲು ನಿರ್ದಿಷ್ಟ ಆಹಾರ ಮಾರ್ಗಸೂಚಿಗಳನ್ನು ಅನುಸರಿಸುತ್ತಾರೆ. ಈ ಪವಿತ್ರ ಮಾಸದಲ್ಲಿ ಯಾವ ಆಹಾರಗಳನ್ನು ಸೇವಿಸಬೇಕು ಮತ್ತು ತಪ್ಪಿಸಬೇಕು ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಶ್ರಾವಣ ಮಾಸದಲ್ಲಿ ತಿನ್ನಬಹುದಾದ ಆಹಾರಗಳು

Shravan Month 2024
Shravan Month 2024


ತಾಜಾ ಹಣ್ಣುಗಳು: ಶ್ರಾವಣ ಮಾಸದಲ್ಲಿ ತಾಜಾ ಹಣ್ಣುಗಳು ಆಹಾರದ ಅತ್ಯಗತ್ಯ ಭಾಗವಾಗಿದೆ. ಅವುಗಳನ್ನು ಶುದ್ಧ ಮತ್ತು ಜೀರ್ಣಿಸಿಕೊಳ್ಳಲು ಸುಲಭವೆಂದು ಪರಿಗಣಿಸಲಾಗುತ್ತದೆ. ಅಗತ್ಯವಾದ ಪೋಷಕಾಂಶಗಳು ಮತ್ತು ಜಲಸಂಚಯನವನ್ನು ಒದಗಿಸುತ್ತದೆ.ಇದರಲ್ಲಿ ಬಾಳೆಹಣ್ಣು, ಸೇಬು, ದಾಳಿಂಬೆ ಮತ್ತು ಕಲ್ಲಂಗಡಿಗಳು ಸೇರಿವೆ.

ಡೇರಿ ಉತ್ಪನ್ನಗಳು: ಹಾಲು, ಮೊಸರು, ಪನೀರ್ ಮತ್ತು ತುಪ್ಪವನ್ನು ಶ್ರಾವಣ ಮಾಸದಲ್ಲಿ ಸೇವಿಸಬಹುದು. ಈ ಡೇರಿ ಉತ್ಪನ್ನಗಳು ಪೌಷ್ಟಿಕಾಂಶ ಮಾತ್ರವಲ್ಲದೇ ದೇಹವನ್ನು ತಂಪಾಗಿಸುತ್ತದೆ.

ಸಾಬುದಾನ: ಉಪವಾಸದ ಸಮಯದಲ್ಲಿ ಸಾಬುದಾನ ಖಿಚಡಿ ಅಥವಾ ವಡಾ ಶ್ರಾವಣ ಮಾಸದ ಮುಖ್ಯವಾದ ಆಹಾರವಾಗಿದೆ. ಸಾಬುದಾನವು ಕಾರ್ಬೋಹೈಡ್ರೇಟ್‌ಗಳು ಸಮೃದ್ಧವಾಗಿದ್ದು ದಿನವಿಡೀ ಶಕ್ತಿಯನ್ನು ನೀಡುತ್ತದೆ.

ಹುರುಳಿಕಾಳಿನ ಹಿಟ್ಟು: ಪೂರಿ, ಚಪಾತಿ ಅಥವಾ ಪ್ಯಾನ್ ಕೇಕ್‌ಗಳನ್ನು ತಯಾರಿಸಲು ಹುರುಳಿಕಾಳಿನ ಹಿಟ್ಟನ್ನು ಬಳಸಲಾಗುತ್ತದೆ. ಇದು ಜೀರ್ಣಿಸಿಕೊಳ್ಳಲು ಸುಲಭವಾಗಿದೆ ಮತ್ತು ಉಪವಾಸಕ್ಕೆ ಸೂಕ್ತವಾಗಿದೆ.

ಚೆಸ್ ನೆಟ್ ಹಿಟ್ಟು: ಹುರುಳಿ ಹಿಟ್ಟಿನಂತೆಯೇ ಇದು ಪೂರಿ ಮತ್ತು ಹಲ್ವಾದಂತಹ ವಿವಿಧ ಭಕ್ಷ್ಯಗಳನ್ನು ತಯಾರಿಸಲು ಬಳಸುವ ಮತ್ತೊಂದು ಉಪವಾಸ ಸ್ನೇಹಿ ಹಿಟ್ಟಾಗಿದೆ.

ಆಲೂಗಡ್ಡೆಗಳು ಮತ್ತು ಸಿಹಿ ಆಲೂಗಡ್ಡೆಗಳು: ಇದನ್ನು ವಿವಿಧ ಪಾಕವಿಧಾನಗಳಲ್ಲಿ ಬಳಸಬಹುದು. ಇದರಿಂದ ಉಪವಾಸದಲ್ಲಿರುವವರು ಅಗತ್ಯ ಶಕ್ತಿಯನ್ನು ತುಂಬುತ್ತಾರೆ ಮತ್ತು ಒದಗಿಸುತ್ತಾರೆ.

ಬೀಜಗಳು ಮತ್ತು ಒಣ ಹಣ್ಣುಗಳು: ಬಾದಾಮಿ, ವಾಲ್ ನಾಟ್, ಒಣದ್ರಾಕ್ಷಿ ಮತ್ತು ಇತರ ಒಣ ಹಣ್ಣುಗಳು ಲಘು ಆಹಾರಕ್ಕಾಗಿ ಮತ್ತು ಹೆಚ್ಚುವರಿ ಪೌಷ್ಟಿಕಾಂಶ ಮತ್ತು ಶಕ್ತಿಗಾಗಿ ಭಕ್ಷ್ಯಗಳಿಗೆ ಸೇರಿಸಲು ಉತ್ತಮವಾಗಿದೆ.

ತೆಂಗಿನಕಾಯಿ: ಶ್ರಾವಣ ಮಾಸದಲ್ಲಿ ತಾಜಾ ತೆಂಗಿನಕಾಯಿ, ತೆಂಗಿನ ನೀರು ಮತ್ತು ತೆಂಗಿನ ಹಾಲು ಸಾಮಾನ್ಯವಾಗಿ ಸೇವಿಸಲಾಗುತ್ತದೆ.

Shravan Month 2024
Shravan Month 2024


ಶ್ರಾವಣ ಮಾಸದಲ್ಲಿ ತಪ್ಪಿಸಬೇಕಾದ ಆಹಾರಗಳು

ಮಾಂಸಾಹಾರ: ಮಾಂಸ, ಮೀನು ಮತ್ತು ಮೊಟ್ಟೆಗಳನ್ನು ಶ್ರಾವಣ ಮಾಸದಲ್ಲಿ ಕಟ್ಟುನಿಟ್ಟಾಗಿ ತಪ್ಪಿಸಲಾಗುತ್ತದೆ. ಶುದ್ಧತೆ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಉತ್ತೇಜಿಸಲು ಸಸ್ಯಾಹಾರಿ ಆಹಾರಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ.

ಈರುಳ್ಳಿ ಮತ್ತು ಬೆಳ್ಳುಳ್ಳಿ: ಇವುಗಳು ದೇಹದಲ್ಲಿ ಶಾಖವನ್ನು ಉಂಟುಮಾಡುತ್ತವೆ ಎಂದು ನಂಬಲಾಗಿದೆ. ಆದ್ದರಿಂದ ಶ್ರಾವಣ ಮಾಸದಲ್ಲಿ ಅವುಗಳನ್ನು ತಪ್ಪಿಸಲಾಗುತ್ತದೆ. ಇದು ನಕಾರಾತ್ಮಕ ಶಕ್ತಿಯನ್ನು ಉತ್ತೇಜಿಸುತ್ತದೆ.

ಧಾನ್ಯಗಳು ಮತ್ತು ಬೇಳೆಕಾಳುಗಳು: ಗೋಧಿ, ಅಕ್ಕಿ, ಧಾನ್ಯ ಮತ್ತು ಬೇಳೆಕಾಳುಗಳನ್ನು ಸಾಮಾನ್ಯವಾಗಿ ಶ್ರಾವಣ ಮಾಸದಲ್ಲಿ ಬಳಸಲಾಗುವುದಿಲ್ಲ. ಇದರ ಬದಲು ಹುರುಳಿ ಕಾಳು, ಚೆಸ್ಟ್ ಹಿಟ್ಟನ್ನು ಬಳಸಲಾಗುತ್ತದೆ.

ಮದ್ಯ ಮತ್ತು ತಂಬಾಕು: ಶ್ರಾವಣ ಮಾಸ ಪವಿತ್ರ ತಿಂಗಳಾಗಿರುವುದರಿಂದ ಮದ್ಯ ಮತ್ತು ತಂಬಾಕು ಸೇವನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಇದನ್ನೂ ಓದಿ: Home Remedies for Dengue: ಡೆಂಗ್ಯು ಜ್ವರ ಬಂದರೂ ಪ್ಲೇಟ್‌ಲೆಟ್‌ ಸಂಖ್ಯೆ ಕುಸಿಯದಿರಲು ಯಾವ ಆಹಾರ ಸೇವಿಸಬೇಕು?

ಸಂಸ್ಕರಿಸಿದ ಮತ್ತು ಜಂಕ್ ಆಹಾರಗಳು: ಆರೋಗ್ಯಕರ ಮತ್ತು ನೈಸರ್ಗಿಕ ಆಹಾರಕ್ಕೆ ಹೆಚ್ಚಿನ ಒತ್ತು ನೀಡುವುದರಿಂದ ಚಿಪ್ಸ್, ಪ್ಯಾಕೆಟ್ ತಿಂಡಿಗಳು ಮತ್ತು ಇತರ ಸಂಸ್ಕರಿಸಿದ ಆಹಾರಗಳನ್ನು ಸೇವಿಸಲಾಗುವುದಿಲ್ಲ.

ಮಸಾಲೆಯುಕ್ತ ಮತ್ತು ಎಣ್ಣೆಯುಕ್ತ ಆಹಾರಗಳು: ಮಸಾಲೆಯುಕ್ತ ಮತ್ತು ಎಣ್ಣೆಯುಕ್ತ ಆಹಾರವನ್ನು ಸಾಮಾನ್ಯವಾಗಿ ತಪ್ಪಿಸಲಾಗುತ್ತದೆ ಏಕೆಂದರೆ ಅವು ಜೀರ್ಣಕ್ರಿಯೆಗೆ ಅಡ್ಡಿಪಡಿಸಬಹುದು ಮತ್ತು ಉಪವಾಸಕ್ಕೆ ತೊಂದರೆ ಉಂಟು ಮಾಡುವುದು.

Continue Reading
Advertisement
Vaccin for Hiv
ಆರೋಗ್ಯ33 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ41 mins ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ56 mins ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ58 mins ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ59 mins ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ1 hour ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ1 hour ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

DK Shivakumar
ಕರ್ನಾಟಕ2 hours ago

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Drone Prathap Eye surgery for an old woman with her own money
ಬಿಗ್ ಬಾಸ್2 hours ago

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

ದೇಶ2 hours ago

Chandipura Virus: ಗುಜರಾತ್‌ನಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ಗೆ 48 ಬಲಿ; 39 ಮಂದಿಗೆ ಚಾಂದಿಪುರ ವೈರಸ್ ದೃಢ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ23 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌