Sankranti 2023 | ಸಂಕ್ರಾಂತಿಯಲ್ಲಿ ಎಳ್ಳನ್ನೇಕೆ ತಿನ್ನಬೇಕು? - Vistara News

ಆರೋಗ್ಯ

Sankranti 2023 | ಸಂಕ್ರಾಂತಿಯಲ್ಲಿ ಎಳ್ಳನ್ನೇಕೆ ತಿನ್ನಬೇಕು?

ಹಲವಾರು ಉತ್ತಮ ಗುಣಗಳ ಖನಿ ಈ ಎಳ್ಳು. ಪ್ರೊಟೀನ್‌, ಕಬ್ಬಿಣ, ಮೆಗ್ನೀಶಿಯಂ, ಸತು, ಕ್ಯಾಲ್ಶಿಯಂ, ಸೆಲೆನಿಯಂ ಮುಂತಾದ ಬಹಳಷ್ಟು ಉತ್ಕೃಷ್ಟ ಸತ್ವಗಳನ್ನು ಹೊಂದಿರುವ ಎಳ್ಳು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

VISTARANEWS.COM


on

Sankranti 2023
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಕರ ಸಂಕ್ರಾಂತಿ (Sankranti 2023)  ಸಮೀಪಿಸುತ್ತಿದೆ. ಚಳಿಗಾಲ ಕಳೆದು ಸುಗ್ಗಿಯನ್ನು ಸಂಕೇತಿಸುವ ಈ ಹಬ್ಬವನ್ನು ದೇಶದ ವಿವಿಧೆಡೆಗಳಲ್ಲಿ ಆಚರಿಸಲಾಗುತ್ತದೆ. ಈ ದಿನ ಸಿಹಿ ಮತ್ತು ಖಾರ ಪೊಂಗಲ್‌, ಹುಗ್ಗಿ- ಹುಣಸೆಹಣ್ಣಿನ ಗೊಜ್ಜು- ಇಂಥವೆಲ್ಲಾ ಮಾಡುವುದು ಇದ್ದಿದ್ದೇ. ಜೊತೆಗೆ ನಾವು ಕಡ್ಡಾಯವಾಗಿ ತಿನ್ನುವ ಇನ್ನೊಂದು ಖಾದ್ಯವೆಂದರೆ ಎಳ್ಳು-ಬೆಲ್ಲ. ಈ ದಿನಗಳಲ್ಲಿ ಎಳ್ಳನ್ನು ಏಕೆ ತಿನ್ನಬೇಕು?

ಹಲವಾರು ಉತ್ತಮ ಗುಣಗಳ ಖನಿ ಈ ಎಳ್ಳು. ಪ್ರೊಟೀನ್‌, ಕಬ್ಬಿಣ, ಮೆಗ್ನೀಶಿಯಂ, ಸತು, ಕ್ಯಾಲ್ಶಿಯಂ, ಸೆಲೆನಿಯಂ ಮುಂತಾದ ಬಹಳಷ್ಟು ಉತ್ಕೃಷ್ಟ ಸತ್ವಗಳನ್ನು ಹೊಂದಿರುವ ಎಳ್ಳು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎಳ್ಳನ್ನು ಬೆಲ್ಲದೊಂದಿಗೆ ತಿನ್ನುವುದರಿಂದ ದೇಹದಲ್ಲಿ ಅಗತ್ಯ ಉಷ್ಣತೆಯನ್ನು ಕಾಪಾಡಿಕೊಳ್ಳುವುದು ಅನುಕೂಲ. ಹಾಗಾಗಿಯೇ ಚಳಿಗಾಲದಲ್ಲಿ ಎಳ್ಳು-ಬೆಲ್ಲದ ಮಿಶ್ರಣವನ್ನು ಅಗತ್ಯವಾಗಿ ತಿನ್ನಬೇಕು. ಇದಲ್ಲದೆ, ಶರೀರದ ಚಯಾಪಚಯವನ್ನು ಸಮತೋಲನದಲ್ಲಿ ಇಟ್ಟು, ಪಚನ ಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳ್ಳಿಗಿದೆ. ಜೊತೆಗೆ, ಇದರಲ್ಲಿರುವ ಉತ್ತಮ ಕೊಬ್ಬಿನಂಶದಿಂದ ಕೊಲೆಸ್ಟ್ರಾಲ್‌ ಕಡಿಮೆ ಮಾಡಿ, ಹೃದ್ರೋಗ ತಡೆಗಟ್ಟಿ, ರಕ್ತದಲ್ಲಿನ ಸಕ್ಕರೆ ಅಂಶವನ್ನೂ ನಿಯಂತ್ರಿಸಲು ಅನುಕೂಲವಾಗುತ್ತದೆ.

Sankranti 2023

ಹೃದಯದ ಮಿತ್ರ
ಹೃದಯದ ಮಾಂಸಖಂಡಗಳನ್ನು ಬಲಗೊಳಿಸುವ ಸಾಮರ್ಥ್ಯ ಎಳ್ಳಿಗಿದೆ. ಅಷ್ಟೇ ಅಲ್ಲ, ಇದರಲ್ಲಿರುವ ಬಿ೧ ಜೀವಸತ್ವದಿಂದ ರಕ್ತ ಪರಿಚಲನೆ ಸರಾಗವಾಗುತ್ತದೆ. ಮೆಗ್ನೀಶಿಯಂ ಸತ್ವದಿಂದ ರಕ್ತದೊತ್ತಡ ಕಡಿಮೆಯಾಗುತ್ತದೆ. ಇದರಲ್ಲಿರುವ ಆಂಟಿ ಆಕ್ಸಿಡೆಂಟ್‌ಗಳಿಗೆ ದೇಹದಲ್ಲಿ ಉರಿಯೂತ ಶಮನ ಮಾಡುವ ಗುಣವಿರುವುದರಿಂದ ಹೃದಯದ ಒಟ್ಟಾರೆ ಆರೋಗ್ಯಕ್ಕೆ ಬಹಳಷ್ಟು ಅನುಕೂಲ ಕಲ್ಪಿಸುತ್ತದೆ.

ಮಧುಮೇಹಿಗಳಿಗೂ ಉತ್ತಮ
ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿರ್ವಹಿಸಲು ಮತ್ತು ಇನ್ಸುಲಿನ್‌ ಪ್ರಮಾಣ ಸ್ಥಿರವಾಗಿಡಲು ಎಳ್ಳು ಉತ್ತಮ ಆಯ್ಕೆ. ಇದರಲ್ಲಿ ನಾರಿನಂಶ ವಿಫುಲವಾಗಿದ್ದು, ದೇಹದ ತೂಕವನ್ನು ಕಾಯ್ದುಕೊಳ್ಳಲೂ ನೆರವಾಗುತ್ತದೆ. ಮಾತ್ರವಲ್ಲ, ದೀರ್ಘ ಸಮಯದವರೆಗೆ ಹೊಟ್ಟೆ ತುಂಬಿದ ಅನುಭವ ನೀಡುವ ಇದು ಹಸಿವು ನಿಯಂತ್ರಿಸಲು ಒಳ್ಳೆಯ ಉಪಾಯ.

Sankranti 2023

ಜೀರ್ಣಕಾರಿ
ನಾರಿನಂಶ ಹೆಚ್ಚಿರುವ ಈ ಆಹಾರ ಜೀರ್ಣಾಂಗಗಳ ಕ್ಷಮತೆಯನ್ನು ಹೆಚ್ಚಿಸುತ್ತದೆ. ಇದರಿಂದ ಮಲಬದ್ಧತೆಯನ್ನೂ ದೂರ ಮಾಡಬಹುದು. ಕರುಳನ್ನು ರಕ್ಷಿಸುವ ತಿಲದಿಂದ ಜಠರ ರೋಗಗಳೂ ಪರಿಹಾರವಾಗುತ್ತವೆ. ಹೊಟ್ಟೆಯಲ್ಲಿ ಉತ್ತಮ ಬ್ಯಾಕ್ಟೀರಿಯಾಗಳು ವೃದ್ಧಿಸುವಂತಾಗುತ್ತದೆ.

ಮೂಳೆಗಳ ಬಲವರ್ಧನೆ
ಪ್ರೊಟೀನ್‌, ಮೆಗ್ನೀಶಿಯಂ ಮತ್ತು ಕ್ಯಾಲ್ಶಿಯಂಗಳ ಭಂಡಾರವಿದು. ಇವು ಮೂಳೆಗಳನ್ನು ಆರೋಗ್ಯಕರ ಮತ್ತು ಸಶಕ್ತವಾಗಿ ಇರಿಸುತ್ತವೆ. ಎಲುಬುಗಳ ಶಕ್ತಿ ವರ್ಧನೆಗೆ ಮಾತ್ರವೇ ಅಲ್ಲ, ಹಲವಾರು ಹಾರ್ಮೋನುಗಳ ಸರಿಯಾಗಿ ಸ್ರವಿಸುವಂತೆ ಮಾಡುವುದಕ್ಕೂ ದೇಹಕ್ಕೆ ಕ್ಯಾಲ್ಶಿಯಂ ಅಗತ್ಯವಿದೆ.

ಇದನ್ನೂ ಓದಿ| Healthy Food | ನಾಲಿಗೆಯ ಮಾತು ಕೇಳಬೇಡಿ, ದೇಹಕ್ಕೆ ಕಲಿಸಿ ಆರೋಗ್ಯದ ಪಾಠ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

Tips for Mothers: ಕೆಲಸದ ಧಾವಂತದಲ್ಲಿ, ಗಡಿಬಿಡಿಯಲ್ಲಿ ಇಂಥ ಅಮ್ಮಂದಿರು ಮನೆಯವರಿಗೆ ಬೇಕಾದ್ದೆಲ್ಲವನ್ನೂ ಮಾಡಿ ಕೊಟ್ಟರೂ ತಮ್ಮ ಆಹಾರ, ಕಾಳಜಿಯ ಬಗ್ಗೆ ಅತ್ಯಂತ ಕಡಿಮೆ ಗಮನ ಹರಿಸುತ್ತಾರೆ. ಎಲ್ಲರ ಬೇಕು ಬೇಡಗಳ ಬಗ್ಗೆ ಗಮನ ಹರಿಸುವುದರಲ್ಲೇ ಅವರ ದಿನ ಕಳೆದು ಹೋಗುತ್ತದೆ. ಆದರೆ ದುಡಿಯುವ ತಾಯಂದಿರು ತಮ್ಮ ಆಹಾರ, ಆರೋಗ್ಯದ ಕಾಳಜಿಯನ್ನು ಮೊದಲು ಮಾಡಿಕೊಳ್ಳಬೇಕು. ಯಾಕೆಂದರೆ ಅವರು ಆರೋಗ್ಯವಾಗಿದ್ದರೆ ಮಾತ್ರ ಮನೆ ಮಂದಿ ಎಲ್ಲ ಆರೋಗ್ಯ ಚೆನ್ನಾಗಿರಲು ಸಾಧ್ಯ.

VISTARANEWS.COM


on

By

Tips for Mothers
Koo

ದುಡಿಯುವ ಅಮ್ಮಂದಿರಿಗೆ (Tips for Mothers) ತಮ್ಮ ವೃತ್ತಿಯನ್ನೂ ಮಕ್ಕಳನ್ನೂ (children) ಸಂಸಾರವನ್ನೂ (family) ತೂಗಿಸಿಕೊಂಡು ಹೋಗುವುದೇ ದೊಡ್ಡ ಸವಾಲು. ಕೆಲಸದ (work) ಧಾವಂತದಲ್ಲಿ, ಗಡಿಬಿಡಿಯಲ್ಲಿ ಇಂಥ ಅಮ್ಮಂದಿರು ಮನೆಯವರಿಗೆ ಬೇಕಾದ್ದೆಲ್ಲವನ್ನೂ ಮಾಡಿ ಕೊಟ್ಟರೂ ತಮ್ಮ ಆಹಾರ, ಕಾಳಜಿಯ ಬಗ್ಗೆ ಅತ್ಯಂತ ಕಡಿಮೆ ಗಮನ ಹರಿಸುತ್ತಾರೆ.

ಮಕ್ಕಳಿಗೆ ಬೇಕಾದ ಆಹಾರವನ್ನು, ಅವರ ಬೇಕು ಬೇಡಗಳನ್ನು ಗಮನ ಹರಿಸುವುದರಲ್ಲೇ ದಿನ ಕಳೆದು ಹೋಗಿ ತಮ್ಮ ಆಹಾರದ, ಆರೋಗ್ಯದ ಕಾಳಜಿಯನ್ನು ಮಾಡುವುದು ಗೌಣವಾಗುತ್ತದೆ. ಆದರೆ, ಮಹಿಳೆಯರ ಅತ್ಯಂತ ಅಗತ್ಯವಿರುವ ಇಂಥ ನಡುವಯಸ್ಸಿನಲ್ಲಿಯೇ ಬೇಕಾದ ಅಗತ್ಯ ಪೋಷಕಾಂಶಗಳು ಮಹಿಳೆಯರಿಗೆ ದಕ್ಕದೆ, ಹಲವಾರು ಆರೋಗ್ಯದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾಗಿ, ಈ ಸುಲಭ ಅಭ್ಯಾಸಗಳನ್ನಾದರೂ ಬೆಳೆಸಿಕೊಳ್ಳುವ ಮೂಲಕ ದುಡಿಯುವ ಮಹಿಳೆಯರು ತಮ್ಮ ಆರೋಗ್ಯದ ಕಾಳಜಿಯನ್ನು ವಹಿಸಿಕೊಳ್ಳಬಗಹುದು. ಅವು ಯಾವುವು ಎಂಬುದನ್ನು ನೋಡೋಣ.

ಬಾದಾಮಿ ಗೆಳೆಯನಾಗಲಿ

ಬಾದಾಮಿ ನಿಮ್ಮ ಗೆಳೆಯನಾಗಲಿ. ಕಚೇರಿಗೆ ಹೋಗುವಾಗ ಒಂದಿಷ್ಟು ಬಾದಾಮಿ ನಿಮ್ಮ ಬ್ಯಾಗ್‌ನಲ್ಲಿರಲಿ. ಇದು ನಿಮ್ಮ ಆಪತ್ಬಾಂಧವನಾಗಿ, ಗೆಳೆಯನಾಗಿ ಸದಾ ನಿಮಮ ಸಹಾಯಕ್ಕೆ ಬರುತ್ತದೆ. ಪ್ರೊಟೀನ್‌, ಆರೋಗ್ಯಯುತ ಕೊಬ್ಬು, ನಾರಿನಂಶ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ಹೊಂದಿರುವ ಬಾದಾಮಿಯನ್ನು ಕಚೇರಿಯ ಬಿಡುವಿನಲ್ಲಿ ಹೊಟ್ಟೆಗಿಳಿಸಬಹುದು. ಆಗ, ಏನೋ ಸಿಕ್ಕಿದ್ದನ್ನು ತಿನ್ನುವ ಅಭ್ಯಾಸಕ್ಕೆ ಕಡಿವಾಣ ಬೀಳುತ್ತದೆ. ಮಹಿಳೆಯರ ದೇಹಕ್ಕೆ ಅಗತ್ಯ ಪೋಷಕಾಂಶಗಳೂ ದಕ್ಕುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ಚರ್ಮ, ಕೂದಲ ಆರೋಗ್ಯವೂ ಇಮ್ಮಡಿಗೊಳ್ಳುತ್ತದೆ.

ಸಮಯ ಮೀಸಲಿಡಿ

ವಾರಾಂತ್ಯದಲ್ಲಿ ಒಂದಿಷ್ಟು ಸಮಯ ಕೇವಲ ನಿಮಗಾಗಿ ಮೀಸಲಿಡಿ. ಆ ವಾರವಿಡೀ, ಕಚೇರಿಯಲ್ಲಿ ನೀವು ತಿನ್ನಬಹುದಾದ ಆರೋಗ್ಯಯುತ ಆಹಾರಗಳ ಸೇವನೆಗಾಗಿ ಪಟ್ಟಿ ತಯಾರಿಸಿ. ಮುಂಚಿತವಾಗಿ ಪಟ್ಟಿ ರೆಡಿ ಮಾಡುವುದರಿಂದ ಪ್ರತಿ ದಿನ ಯಾವ ಸ್ನ್ಯಾಕ್ಸ್‌ ತಾನು ತಿನ್ನಬೇಕೆಂಬ ಮುಂಚಿತ ಅರಿವು ಇರುತ್ತದೆ.

ಸರಳ ಆಹಾರ ತಯಾರಿಸಿ

ಸುಲಭ ಹಾಗೂ ಸರಳವಾದ ಆಹಾರ ತಯಾರಿಸಿ. ವಾರಾಂತ್ಯದಲ್ಲೇ, ಈ ಬಗ್ಗೆ ತಯಾರಿ ನಡೆಸಿ, ಒಂದಿಷ್ಟು ಅಡುಗೆಗೆ ಪೂರಕ ತಯಾರಿಯನ್ನು ಮಾಡಿಡಬಹುದು. ಉದಾಹರಣೆಗೆ ಮಾರುಕಟ್ಟೆಯ ಕೆಚಪ್‌ ಪದೇ ಪದೇ ಬಳಸುವ ಮೊದಲು ಟೊಮೇಟೋ ಚಟ್ನಿ ತಯಾರಿಸಿ ಇಟ್ಟುಕೊಳ್ಳಬಹದು. ಒಂದಿಷ್ಟು ಚಟ್ನಿಪುಡಿಗಳು, ತರಕಾರಿ ಕತ್ತರಿಸಿಡುವುದು, ಹಿಟ್ಟು ಮೊದಲೇ ರೆಡಿ ಮಾಡಿಡುವುದು ಇತ್ಯಾದಿ ಕೆಲಸಗಳನ್ನು ಮಾಡಿದರೆ, ಕೆಲಸ ಸುಲಭವಾಗುತ್ತದೆ.


ಆರೋಗ್ಯಕರ ಸ್ನ್ಯಾಕ್

ಕಚೇರಿಗೆ ಒಯ್ಯುವಾಗ ಆರೋಗ್ಯಕರ ಸ್ನ್ಯಾಕ್‌ ತೆಗೆದುಕೊಂಡು ಹೋಗಿ. ಉದಾಹರಣೆ, ಒಂದು ಹಣ್ಣು, ಒಂದಿಷ್ಟು ಬಾದಾಮಿ ಅಥವಾ ಬೀಜಗಳು, ಒಣ ಹಣ್ಣುಗಳು, ಮೊಳಕೆಕಾಳು ಹಸಿ ತರಕಾರಿಗಳು, ಸಲಾಡ್‌ ಇತ್ಯಾದಿಗಳನ್ನು ತೆಗೆದುಕೊಂಡು ಹೋಗಬಹುದು.

ಇದನ್ನೂ ಓದಿ: Food Tips Kannada: ಶಕ್ತಿವರ್ಧಕಗಳಲ್ಲ, ನಿಮ್ಮ ಶಕ್ತಿಯನ್ನೇ ಬಸಿದು ತೆಗೆಯುವ ಆಹಾರಗಳಿವು!

ಪೋಷಕಾಂಶಗಳ ಆಹಾರ

ಆಹಾರದ ಆಯ್ಕೆ ಮಾಡುವಾಗ ಪೋಷಕಾಂಶಗಳಿಂದ ಸಮೃದ್ಧವಾದ್ದನ್ನೇ ಆಯ್ಕೆ ಮಾಡಿ. ಸಂಪೂರ್ಣ ಆಹಾರದತ್ತ ಗಮನ ಇರಲಿ. ನಿತ್ಯವೂ ಬಗೆಬಗೆಯ ಪೋಷಕಾಂಶಗಳ ವೆರೈಟಿ ಆಹಾರಗಳು ಹೊಟ್ಟೆ ಸೇರಲಿ. ಒಂದೇ ಬಗೆಯ ನೀರಸ ಆಹಾರಗಳ ಅಭ್ಯಾಸವಿದ್ದರೆ ಬಿಟ್ಟುಬಿಡಿ.

ಮೈಂಡ್‌ಫುಲ್‌ ಈಟಿಂಗ್‌

ಮೈಂಡ್‌ಫುಲ್‌ ಈಟಿಂಗ್‌ ಬಗ್ಗೆ ಗಮನ ಹರಿಸಿ. ಅಂದರೆ ಪ್ರತಿ ತುತ್ತನ್ನೂ ಅನುಭವಿಸಿ ತಿನ್ನಿ. ನಿಧಾನವಾಗಿ ತಿನ್ನಲು ಅಭ್ಯಾಸ ಮಾಡಿ. ಊಟ ಮಾಡುವಾಗ ಬೇರೆ ಕೆಲಸಗಳ ಮೇಲೆ ಗಮನ ಹರಿಸಬೇಡಿ. ಊಟವನ್ನು ಅನುಭವಿಸಿ ಚೆನ್ನಾಗಿ ಜಗಿದು ನಿಧಾನವಾಗಿ ತಿನ್ನಿ. ನಿಧಾನವಾಗಿ ತಿನ್ನುವುದರಿಂದ ಹೆಚ್ಚು ತಿನ್ನುವ ಬಯಕೆಯಾಗುವುದಿಲ್ಲ. ಅಗತ್ಯಕ್ಕಿಂದ ಹೆಚ್ಚು ಉಣ್ಣುವುದು ತಪ್ಪುತ್ತದೆ. ಸರಿಯಾಗಿ ನಮ್ಮ ದೇಹಕ್ಕೆ ಎಷ್ಟು ಬೇಕೋ ಅಷ್ಟೇ ಆಹಾರ ಸೇರುತ್ತದೆ.

Continue Reading

ಆರೋಗ್ಯ

Health Tips in Kannada: ಕಾಮಕಸ್ತೂರಿ ಬೀಜದ ಪಾನಕ ಕುಡಿದರೆ ಆರೋಗ್ಯ ವೃದ್ಧಿ ಪಕ್ಕಾ!

ರಾತ್ರಿ ಮಲಗುವಾಗ (Health Tips in Kannada) ಒಂದು ಗ್ಲಾಸ್‌ ನೀರಿಗೆ ಒಂದು ಚಮಚ ತುಂಬಾ ಕಾಮಕಸ್ತೂರಿ ಬೀಜಗಳನ್ನು ಹಾಕಿಟ್ಟರೆ ಬೆಳಗಿನ ಹೊತ್ತಿಗೆ ಚೆನ್ನಾಗಿ ನೆನೆದ ಬೀಜಗಳು ಸೇವನೆಗೆ ಸಿದ್ಧವಾಗಿರುತ್ತವೆ. ಜೆಲ್‌ನಂತೆ ಕಾಣುವ ಇದಕ್ಕೆ ಹಾಲು ಅಥವಾ ಇನ್ನಷ್ಟು ನೀರು ಇಲ್ಲವೇ ನಿಂಬೆರಸ… ಹೀಗೆ ನಿಮ್ಮಿಷ್ಟದ ಯಾವುದನ್ನಾದರೂ ಸೇರಿಸಿಕೊಂಡು ಕುಡಿದರೆ ಆರೋಗ್ಯಕರ ಲಾಭಗಳು ದೊರೆಯುವುದು ನಿಶ್ಚಿತ.

VISTARANEWS.COM


on

By

Health Tips in Kannada
Koo

ಹಲವು ಪ್ರಶ್ನೆಗಳಿಗೆ ಒಂದೇ (Health Tips in Kannada) ಉತ್ತರ ನೀಡುವ ಒಗಟನ್ನು ಚಿಕ್ಕಂದಿನಲ್ಲಿ ಆಡಿರಬಹುದು. ಆದರೆ ಆರೋಗ್ಯದ (health) ವಿಷಯದಲ್ಲಿ ಇಂಥ ಒಗಟುಗಳು ಕಡಿಮೆ. ಹಲವು ಸಮಸ್ಯೆಗಳಿಗೆ ಒಂದೇ ಮದ್ದು ಹುಡುಕುವುದು ಕೊಂಚ ಕಷ್ಟವೇ. ಆದರೂ ಸಬ್ಜ (sabja seeds) ಅಥವಾ ಕಾಮಕಸ್ತೂರಿ ಬೀಜಗಳು ಇಂಥ ಕೆಲಸವನ್ನು ಮಾಡಬಲ್ಲವು. ಅದರಲ್ಲೂ ಬೆಳಗಿನ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು ಅನುಕೂಲಗಳನ್ನು ಒದಗಿಸಬಲ್ಲದು. ಈ ಬಗೆಗಿನ ವಿವರಗಳು ಇಲ್ಲಿವೆ.

ರಾತ್ರಿ (night) ಮಲಗುವಾಗ ಒಂದು ಗ್ಲಾಸ್‌ ನೀರಿಗೆ ಒಂದು ಚಮಚ ತುಂಬಾ ಕಾಮಕಸ್ತೂರಿ ಬೀಜಗಳನ್ನು ಹಾಕಿಟ್ಟರೆ ಕೆಲಸ ಮುಗಿಯಿತು. ಬೆಳಗಿನ ಹೊತ್ತಿಗೆ ಚೆನ್ನಾಗಿ ನೆನೆದ ಬೀಜಗಳು ಸೇವನೆಗೆ ಸಿದ್ಧವಾಗಿರುತ್ತವೆ. ಜೆಲ್‌ನಂತೆ ಕಾಣುವ ಇದಕ್ಕೆ ಹಾಲು ಹಾಕಿ ಸೇವಿಸಬಹುದು, ಇನ್ನಷ್ಟು ನೀರು, ನಿಂಬೆರಸ ಹಾಕಿ ಕುಡಿಯಬಹುದು. ಅಂತೂ ನಿಮ್ಮಿಷ್ಟದ ಯಾವುದನ್ನೂ ಇದಕ್ಕೆ ಸೇರಿಸಿಕೊಂಡು ಕುಡಿದರೆ ಆರೋಗ್ಯಕರ ಲಾಭಗಳು ದೊರೆಯುವುದು ನಿಶ್ಚಿತ.

ಪ್ರೊಟೀನ್‌ಗಳ ಖಣಜ

ಬೆಸಿಲ್‌ ಬೀಜಗಳೆಂದೂ ಕರೆಸಿಕೊಳ್ಳುವ ಇವುಗಳ ಬಳಕೆ ಇಂದು-ನಿನ್ನೆಯದಲ್ಲ. ಶತಮಾನಗಳಿಂದ ಚಾಲ್ತಿಯಲ್ಲಿ ಇರುವಂಥದ್ದು. ನೋಡುವುದಕ್ಕೆ ಚಿಯಾ ಬೀಜಗಳ ಸೋದರ ಸಂಬಂಧಿಯಂತೆ ಕಾಣುವ ಈ ಬೀಜಗಳು ಪ್ರೊಟೀನ್‌ಗಳ ಪುಟ್ಟ ಪೊಟ್ಟಣವಿದ್ದಂತೆ. ಜೊತೆಗೆ ಅಗತ್ಯವಾದ ನಾರು, ಖನಿಜಗಳು ಮತ್ತು ಜೀವಸತ್ವಗಳಿಂದ ಭರಿತವಾಗಿವೆ. ಇದರಿಂದ ಮೂಳೆಗಳು ಬಲವಾಗುವುದಲ್ಲದೆ, ಜೀರ್ಣಾಂಗಗಳ ಕ್ಷಮತೆಯೂ ಹೆಚ್ಚುತ್ತದೆ.

ಸತ್ವಗಳೇನಿವೆ?

ಪ್ರೊಟೀನ್‌ ಪರಿಪೂರ್ಣವಾಗುವಂಥ ಎಲ್ಲ ಅಮೈನೊ ಆಮ್ಲಗಳು ಮತ್ತು ಕೊಬ್ಬಿನಾಮ್ಲಗಳು ಇದರಲ್ಲಿವೆ. ಜೊತೆಗೆ ಹೇರಳವಾಗಿ ನಾರು, ಕ್ಯಾಲ್ಸಿಯಂ, ಮೆಗ್ನೀಶಿಯಂ, ಕಬ್ಬಿಣ ಮುಂತಾದ ಖನಿಜಗಳು ಮತ್ತು ವಿಟಮಿನ್‌ಗಳು ತುಂಬಿವೆ. ಈ ಸತ್ವಭರಿತ ಸಬ್ಜ ಬೀಜಗಳನ್ನು ಬೆಳಗಿನ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ದಿನವಿಡೀ ದೇಹದ ಶಕ್ತಿ ಕುಂದದಂತೆ ಕಾಪಾಡಿಕೊಳ್ಳಬಹುದು.


ಜೀರ್ಣಾಂಗಗಳ ಕ್ಷಮತೆ ಹೆಚ್ಚಳ

ಇದರಲ್ಲಿ ನಾರು ಅಧಿಕ ಪ್ರಮಾಣದಲ್ಲಿದೆ. ಹಾಗಾಗಿ ಮಲಬದ್ಧತೆಯನ್ನು ನಿವಾರಿಸುವಲ್ಲಿ ಇದು ಪ್ರಧಾನವಾಗಬಲ್ಲದು. ದಿನವೂ ಬೆಳಗಿನ ಹೊತ್ತು ಇದನ್ನು ಸೇವಿಸುವ ಅಭ್ಯಾಸ ಮಾಡಿಕೊಂಡರೆ, ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ನೀಡುವುದರ ಜೊತೆಗೆ ನಿಯಮಿತವಾಗಿ ವಿರೇಚನದ ಕೆಲಸವನ್ನೂ ನಿರ್ವಹಿಸುತ್ತದೆ. ಹಾಗಾಗಿ ಹೊಟ್ಟೆಯುಬ್ಬರ, ಅಜೀರ್ಣದಂಥ ತೊಂದರೆಗಳನ್ನೂ ನಿವಾರಿಸಬಲ್ಲದು.

ತೂಕ ನಿರ್ವಹಣೆ

ನೆನೆದು ಜೆಲ್‌ನಂತಾಗುವ ಕಾಮಕಸ್ತೂರಿ ಬೀಜಗಳು ತೂಕ ನಿರ್ವಹಣೆಯಲ್ಲೂ ನೆರವಾಗಬಲ್ಲವು. ಇದರಲ್ಲಿರುವ ಅಧಿಕ ನಾರು ಮತ್ತು ಪ್ರೊಟೀನ್‌ ಅಂಶಗಳು ಹೆಚ್ಚು ಸಮಯ ಹೊಟ್ಟೆ ತುಂಬಿರುವ ಅನುಭವ ನೀಡಿ, ಕಳ್ಳ ಹಸಿವೆಯನ್ನು ನಿವಾರಿಸುತ್ತವೆ. ಜೊತೆಗೆ ಕಡಿಮೆ ಕ್ಯಾಲರಿಯನ್ನು ಹೊಂದಿರುವ ಈ ಬೀಜಗಳು ಅಧಿಕ ಪೋಷಕ ಸತ್ವಗಳನ್ನು ನೀಡುತ್ತವೆ. ಈ ಮೂಲಕ ತೂಕ ಇಳಿಸುವವರಿಗೆ ಉಪಯುಕ್ತ ಎನಿಸಿವೆ.

ಮಧುಮೇಹಿಗಳಿಗೆ ಸೂಕ್ತ

ದೇಹದಲ್ಲಿ ಪಿಷ್ಟವನ್ನು ದಿಢೀರನೆ ಹೀರಿಕೊಂಡು ರಕ್ತಕ್ಕೆ ಗ್ಲೂಕೋಸ್‌ ಬಿಡುಗಡೆ ಒಮ್ಮೆಲೆ ಆಗುವುದನ್ನು ಸಬ್ಜ ಬೀಜಗಳು ತಡೆಯುತ್ತವೆ. ಹಾಗಾಗಿ ರಕ್ತದಲ್ಲಿ ಸಕ್ಕರೆಯಂಶ ಏರಿಳಿತ ಆಗುವುದನ್ನು ತಡೆಯಬಹುದು. ಹಾಗಾಗಿ ಬೆಳಗಿನ ಹೊತ್ತು ಕಾಮಕಸ್ತೂರಿ ಬೀಜವನ್ನು ಕುಡಿಯುವುದು ಮಧುಮೇಹಿಗಳಿಗೆ ಒಳ್ಳೆಯ ಫಲಿತಾಂಶ ನೀಡಬಹುದು.

ಇದನ್ನೂ ಓದಿ: Skin Care Tips: ಬಿಸಿಲಿನಿಂದ ಚರ್ಮ ಕಪ್ಪಾಗಿದೆಯಾ? ಇಲ್ಲಿದೆ ಸರಳ ಮನೆಮದ್ದು

ಡಿಟಾಕ್ಸ್‌

ದೇಹದಲ್ಲಿ ಬೇಡದ ಅಂಶವನ್ನು ಹೊರಹಾಕುವಲ್ಲಿ ಕಾಮಕಸ್ತೂರಿ ಬೀಜಗಳು ಪ್ರಯೋಜನಕಾರಿ. ಬೆಳಗಿನ ಹೊತ್ತು ನೆನೆದು ಜೆಲ್‌ನಂತಾದ ಬೀಜಗಳನ್ನು ದೊಡ್ಡ ಗ್ಲಾಸ್‌ ನೀರಿಗೆ ಬೆರಸಿ, ಜೊತೆಗೆ ಕೆಲವು ಹನಿ ನಿಂಬೆರಸ ಸೇರಿಸಿ ಕುಡಿಯುವುದರಿಂದ ಡಿಟಾಕ್ಸ್‌ ಮಾಡುವುದಕ್ಕೆ ಅನುಕೂಲ. ಇದರಿಂದ ದೇಹದ ಚಯಾಪಚಯ ಕ್ರಿಯೆ ಸುಧಾರಿಸಿ, ಜೀರ್ಣಾಂಗಗಳು ಶುದ್ಧಗೊಂಡು, ದೇಹದ ಸ್ವಾಸ್ಥ್ಯ ಹೆಚ್ಚುತ್ತದೆ.

ಚರ್ಮದ ಕಾಂತಿ

ಇದರಲ್ಲಿರುವ ಉತ್ಕರ್ಷಣ ನಿರೋಧಕಗಳಿಂದಾಗಿ ಕೂದಲು ಮತ್ತು ಚರ್ಮದ ಆರೋಗ್ಯ ಸುಧಾರಿಸುತ್ತದೆ. ಚರ್ಮದ ಮೇಲಿನ ಸುಕ್ಕುಗಳು ಕಡಿಮೆಯಾಗಿ, ಕಾಂತಿ ಹೆಚ್ಚುತ್ತದೆ. ಮೊಡವೆ ಮತ್ತು ಕಪ್ಪು ಕಲೆಗಳು ಮಾಯವಾಗಿ ವಯಸ್ಸಾಗುವುದನ್ನು ಮುಂದೂಡುತ್ತದೆ. ದೇಹಕ್ಕೆ ಬೇಕಾದ ಸೂಕ್ಷ್ಮ ಸತ್ವಗಳು ದೊರೆಯುತ್ತಿದ್ದಂತೆ ಕೂದಲಿನ ಸಮಸ್ಯೆಗಳು ಕಡಿಮೆಯಾಗಿ, ಕೇಶರಾಶಿ ನಳನಳಿಸಬಹುದು.

Continue Reading

ಉತ್ತರ ಕನ್ನಡ

Uttara Kannada News: ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಿ: ಡಿಸಿ ಮಾನಕರ್‌

Uttara Kannada News: ಪ್ರಸಕ್ತ ಮಳೆಗಾಲದ ಅವಧಿಯಲ್ಲಿ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌, ಮಳೆಗಾಲದಲ್ಲಿ ಕಂಡುಬರಬಹುದಾದ ಡೆಂಗ್ಯು, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ನಿಯಂತ್ರಣ ಕುರಿತಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಿ, ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಗಳನ್ನು ಆಯೋಜಿಸುವಂತೆ ಅವರು ಸೂಚಿಸಿದ್ದಾರೆ.

VISTARANEWS.COM


on

Uttara Kannada News Take precautionary measures to prevent the spread of infectious diseases in the district says DC Gangubai manakar
Koo

ಕಾರವಾರ: ಪ್ರಸಕ್ತ ಮಳೆಗಾಲದ (Rain) ಅವಧಿಯಲ್ಲಿ ಜಿಲ್ಲೆಯಲ್ಲಿ (Uttara Kannada News) ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಸಮಿತಿಯ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ: RCB vs CSK: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಚೆನ್ನೈ ಸೂಪರ್​ ಕಿಂಗ್ಸ್​

ಮಳೆಗಾಲದಲ್ಲಿ ಕಂಡುಬರಬಹುದಾದ ಡೆಂಗ್ಯು, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ನಿಯಂತ್ರಣ ಕುರಿತಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಿ, ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಗಳನ್ನು ಆಯೋಜಿಸಿ ಎಂದ ಅವರು, ಎಲ್ಲಾ ಸಾಂಕ್ರಾಮಿಕ ರೋಗಗಳಿಗೆ ಅಗತ್ಯವಿರುವ ಚುಚ್ಚುಮದ್ದು ಮತ್ತು ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇಟ್ಟುಕೊಳ್ಳುವಂತೆ ನಿರ್ದೇಶನ ನೀಡಿದರು.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಇದುವರೆಗೆ 1 ಮಲೇರಿಯಾ, 1 ಚಿಕನ್ ಗುನ್ಯಾ, 46 ಡೆಂಗಿ ಪ್ರಕರಣಗಳು ವರದಿಯಾಗಿರುವ ಬಗ್ಗೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಡೆಂಗ್ಯು ಪ್ರಕರಣಗಳು ಹೆಚ್ಚಾಗದಂತೆ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಸೋಂಕಿತರನ್ನು ಶೀಘ್ರದಲ್ಲಿ ಪತ್ತೆ ಹಚ್ಚಿ, ತಕ್ಷಣ ಚಿಕಿತ್ಸೆ ನೀಡುವುದರ ಮೂಲಕ ರೋಗ ಹರಡದಂತೆ ನೋಡಿಕೊಳ್ಳಿ. ಸೊಳ್ಳೆಗಳ ಉತ್ಪತ್ತಿ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ ಎಂದರು.

ಇದನ್ನೂ ಓದಿ: Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

ಜಿಲ್ಲೆಯಲ್ಲಿ ಈ ಬಾರಿ ಮಂಗನ ಕಾಯಿಲೆಯ 106 ಪ್ರಕರಣಗಳು ಕಂಡು ಬಂದಿದ್ದು, 9 ಸಾವುಗಳು ಸಂಭವಿಸಿದ್ದು, ಮಂಗನ ಕಾಯಿಲೆಯ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಿ ಎಂದರು.

ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಚರಂಡಿಗಳಲ್ಲಿ ಮಳೆ ನೀರು ನಿಲ್ಲದೇ ಸರಾಗವಾಗಿ ಹರಿದು ಹೋಗುವಂತೆ ಮಾಡಲು ತಕ್ಷಣದಿಂದಲೇ ಸ್ವಚ್ಚತಾ ಕ್ರಮಗಳನ್ನು ಕೈಗೊಂಡು, ಚರಂಡಿಯಲ್ಲಿ ತುಂಬಿರುವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್ಲಾ ತಾಲೂಕುಗಳಲ್ಲಿ 108 ಸೇರಿದಂತೆ ಎಲ್ಲಾ ಆಂಬ್ಯುಲೆನ್ಸ್ ಗಳು ಸುಸ್ಥಿತಿಯಲ್ಲಿರಬೇಕು. ತುರ್ತು ಸಂದರ್ಭದಲ್ಲಿ ತಕ್ಷಣವೇ ಸಾರ್ವಜನಿಕರ ಸೇವೆಗೆ ಲಭ್ಯವಿರಬೇಕು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಕುದಿಸಿ, ಆರಿಸಿದ ಕುಡಿಯುವ ನೀರು ಬಳಕೆ, ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು ಸೇರಿದಂತೆ‌, ತೆಗೆದುಕೊಳ್ಳಬೇಕಾದ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಮಾಹಿತಿಯನ್ನು ಜಿಲ್ಲೆಯ ಎಲ್ಲಾ ಮನೆ ಮನೆಗಳಿಗೆ ತಲುಪಿಸಬೇಕು ಹಾಗೂ ಸೋಷಿಯಲ್ ಮೀಡಿಯಾಗಳ ಮೂಲಕ ಕೂಡಾ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅರ್ಚನಾ ನಾಯಕ್, ಆರ್.ಸಿ.ಎಚ್ ಅಧಿಕಾರಿ ಡಾ. ನಟರಾಜ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ರಮೇಶ್ ರಾವ್, ನಗರಸಭೆ ಪೌರಾಯುಕ್ತ ರವಿಕುಮಾರ್ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಆರೋಗ್ಯ

Health Tips in Kannada: ಟೊಮ್ಯಾಟೊ ಜ್ಯೂಸ್‌ ಆರೋಗ್ಯಕ್ಕೇಕೆ ಒಳ್ಳೆಯದು ಗೊತ್ತೆ?

ಋತುಮಾನದಲ್ಲಿ ಕಾಡುವ (Health Tips in Kannada) ಸೋಂಕು ರೋಗಗಳನ್ನು ದೂರ ಮಾಡುವುದರಿಂದ ಹಿಡಿದು, ದೇಹದ ಪ್ರತಿರೋಧಕ ಶಕ್ತಿ ಹೆಚ್ಚಿಸುವವರೆಗೆ ಹಲವು ರೀತಿಯ ಉಪಕಾರವನ್ನು ಟೊಮ್ಯಾಟೊ ನಮಗೆ ಮಾಡುತ್ತದೆ. ಲೈಕೋಪೇನ್‌ನಂಥ ಪ್ರಬಲ ಉತ್ಕರ್ಷಣ ನಿರೋಧಕವು ಹೃದಯದ ಆರೋಗ್ಯ ರಕ್ಷಣೆಯಲ್ಲಿ ಸಹಾಯ ಮಾಡುತ್ತದೆ. ಟೊಮೊಟೊ ಜ್ಯೂಸ್‌ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Health Tips in Kannada tomato juice is good for health
Koo

ಬೆಂಗಳೂರು: ಬೇಸಿಗೆಯಲ್ಲಿ ನಾವು ತಂಪಾಗಿ (Health Tips in Kannada) ಕುಡಿಯಬಹುದಾದ ಹಲವು ಹಣ್ಣಿನ ರಸಗಳ ಪೈಕಿ ಟೊಮ್ಯಾಟೊ ಜ್ಯೂಸ್‌ ಸಹ ಒಂದು. ಟೊಮ್ಯಾಟೊ ಹಣ್ಣೊ, ತರಕಾರಿಯೊ ಎಂಬ ಅನಾದಿ ಕಾಲದ ಗೊಂದಲ ಇನ್ನೂ ಇದ್ದರೆ, ಅದು ತರಕಾರಿಯಂತೆ ಉಪಯೋಗಿಸಲಾಗುವ ಹಣ್ಣು. ಹೌದು, ನಿಜಕ್ಕೂ ಅದು ಹಣ್ಣೇ. ಹಾಗಾಗಿ ಬೇಸಿಗೆಯಲ್ಲಿ ಉಳಿದೆಲ್ಲ ಹಣ್ಣಿನ ರಸಗಳ ಜೊತೆಗೆ ಟೊಮ್ಯಾಟೊ ರಸವನ್ನೂ ಖುಷಿಯಾಗಿ ಗುಟುಕರಿಸಬಹುದು. ಇದು ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕಾಗುವ ಲಾಭಗಳ ವಿಷಯದಲ್ಲೂ ಎತ್ತಿದ ಕೈ. ಏನು ಪ್ರಯೋಜನಗಳಿವೆ ಟೊಮೇಟೊ ಜ್ಯೂಸ್‌ ಕುಡಿಯುವುದರಿಂದ?

ಋತುಮಾನದಲ್ಲಿ ಕಾಡುವ ಸೋಂಕು ರೋಗಗಳನ್ನು ದೂರ ಮಾಡುವುದರಿಂದ ಹಿಡಿದು, ದೇಹದ ಪ್ರತಿರೋಧಕ ಶಕ್ತಿ ಹೆಚ್ಚಿಸುವವರೆಗೆ ಹಲವು ರೀತಿಯ ಉಪಕಾರವನ್ನು ಟೊಮ್ಯಾಟೊ ನಮಗೆ ಮಾಡುತ್ತದೆ. ಲೈಕೋಪೇನ್‌ನಂಥ ಪ್ರಬಲ ಉತ್ಕರ್ಷಣ ನಿರೋಧಕವು ಹೃದಯದ ಆರೋಗ್ಯ ರಕ್ಷಣೆಯಲ್ಲಿ ಸಹಾಯ ಮಾಡುತ್ತದೆ. ಜೊತೆಗೆ, ಹೇರಳವಾದ ವಿಟಮಿನ್‌ ಸಿ, ಎ, ಬಿ ಮತ್ತು ಖನಿಜಗಳು ಟೊಮ್ಯಾಟೊ ದಿಂದ ದೊರೆಯುತ್ತವೆ. ಇವೆಲ್ಲ ಟೊಮ್ಯಾಟೊ ಬೆರೆಸಿದ ರುಚಿಕರ ಖಾದ್ಯಗಳಿಂದಲೂ ನಮಗೆ ದೊರೆಯುವುದಕ್ಕೆ ಸಾಧ್ಯವಿದೆ.

ಇದನ್ನೂ ಓದಿ: Health Tips in Kannada: ಬೇಸಿಗೆಯಲ್ಲಿ ನಿಜಕ್ಕೂ ನಮ್ಮ ದೇಹಕ್ಕೆ ಬೇಕಾಗಿರುವುದು ಈ ಆಹಾರಗಳು

ಟೊಮ್ಯಾಟೊ ಜ್ಯೂಸ್‌

ಸಿದ್ಧ ಮಾಡುವುದು ಕಷ್ಟವಿಲ್ಲ. 2-3 ಜ್ಯಾಮ್‌ ಟೊಮ್ಯಾಟೊ ತೆಗೆದುಕೊಳ್ಳಿ. ಇದಕ್ಕೆ ಕೊಂಚ ಪುದೀನಾ ಎಲೆಗಳು, ಚಿಟಿಕೆ ಉಪ್ಪು, ಸ್ವಲ್ಪ ಕರಿಮೆಣಸಿನ ಪುಡಿ ಸೇರಿಸಿ ಚೆನ್ನಾಗಿ ಬ್ಲೆಂಡ್‌ ಮಾಡಿ. ನಾರಿನಂಶ ಬೇಡ ಎನಿಸಿದರೆ ಸೋಸಿಕೊಳ್ಳಿ. ದಾಹ ತಣಿಸಿಕೊಳ್ಳಲು ತಂಪಾದ ಐಸ್‌ ಬೇಕಿದ್ದರೆ ತೇಲಿಸಿ. ಇವಿಷ್ಟು ಮಾಡಿದರೆ ಟೊಮ್ಯಾಟೊ ಜ್ಯೂಸ್‌ ಸಿದ್ಧ.
ಇದರಲ್ಲಿರುವ ಸತ್ವಗಳನ್ನು ಗಮನಿಸುವುದಾದರೆ, ಸುಮಾರು 250 ಗ್ರಾಂ ಟೊಮ್ಯಾಟೊ ಜ್ಯೂಸ್‌ನಲ್ಲಿ, 45 ಕ್ಯಾಲರಿ ಶಕ್ತಿ ದೊರೆಯುತ್ತದೆ. 2 ಗ್ರಾಂ ಪ್ರೊಟೀನ್‌, 2 ಗ್ರಾಂ ನಾರು, ದಿನದ ಶೇ. 22ರಷ್ಟು ವಿಟಮಿನ್‌ ಎ, ಶೇ. 74ರಷ್ಟು ವಿಟಮಿನ್‌ ಸಿ, ಶೇ. 7ರಷ್ಟು ವಿಟಮಿನ್‌ ಕೆ, ಹಲವು ರೀತಿಯ ಬಿ ವಿಟಮಿನ್‌ಗಳು, ಫೋಲೇಟ್‌, ಮೆಗ್ನೀಶಿಯಂ, ಪೊಟಾಶಿಯಂ, ತಾಮ್ರ ಮತ್ತು ಮ್ಯಾಂಗನೀಸ್‌ನಂಥ ಖನಿಜಗಳು ದೇಹಕ್ಕೆ ದೊರೆಯುತ್ತವೆ.

ಕೆರೊಟಿನಾಯ್ಡ್‌ಗಳು

ಇದರಲ್ಲಿ ಹಲವು ರೀತಿಯ ಪಾಲಿಫೆನಾಲ್‌ಗಳು ಮತ್ತು ಕೆರೊಟಿನಾಯ್ಡ್‌ಗಳಿವೆ. ಇವೆಲ್ಲವೂ ವಿಟಮಿನ್‌ ಎ ರೂಪಕ್ಕೆ ದೇಹದೊಳಗೆ ಪರಿವರ್ತನೆಗೊಳ್ಳುವಂಥವು. ಕಣ್ಣಿನ ಆರೋಗ್ಯ ರಕ್ಷಣೆಗೆ ಅಗತ್ಯವಾಗಿ ಬೇಕಾದ ಸತ್ವಗಳಿವು. ಮಾತ್ರವಲ್ಲ, ದೇಹದೊಳಗೆ ಮುಕ್ತ ಕಣಗಳು ಸೃಷ್ಟಿಯಾಗದಂತೆ ಮಾಡುವ ಸಾಮರ್ಥ್ಯ ಇವುಗಳಿಗಿದೆ. ಇದರಿಂದ ಕ್ಯಾನ್ಸರ್‌ನಂಥ ಮಾರಕ ರೋಗಗಳ ಭೀತಿಯಿಂದ ಪಾರಾಗಬಹುದು.

ಉತ್ಕರ್ಷಣ ನಿರೋಧಕಗಳು

ಟೊಮ್ಯಾಟೊದಲ್ಲಿ ಲೈಕೋಪೇನ್‌ ಎಂಬ ಪ್ರಬಲ ಉತ್ಕರ್ಷಣ ನಿರೋಧಕವೊಂದಿದೆ. ಒಂದು ಗ್ಲಾಸ್‌ ಸಾಂದ್ರವಾದ ಟೊಮೇಟೊ ರಸದಲ್ಲಿ ಅಂದಾಜು 22 ಎಂ.ಜಿ. ಲೈಕೋಪೇನ್‌ ದೊರೆಯಬಹುದು. ಈ ಲೈಕೋಪೇನ್‌ಗಳ ಉರಿಯೂತ ನಿವಾರಣೆಯ ಸಾಮರ್ಥ್ಯದ ಬಗ್ಗೆ ಹಲವು ಅಧ್ಯಯನಗಳನ್ನು ವಿಜ್ಞಾನಿಗಳು ನಡೆಸಿದ್ದಾರೆ. ಅವೆಲ್ಲದರಲ್ಲೂ, ಇದೊಂದು ಸಮರ್ಥವಾದ ಉರಿಯೂತ ಶಾಮಕ ಎಂಬುದು ಸಾಬೀತಾಗಿದೆ. ಕೀಲುಗಳ ಆರೋಗ್ಯದಿಂದ ಹಿಡಿದು, ಹೃದಯದ ಯೋಗಕ್ಷೇಮ ನೋಡಿಕೊಳ್ಳುವವರೆಗೆ ಇದರ ಸಾಮರ್ಥ್ಯ ವಿಸ್ತರಿಸಿದೆ.

ಕೊಲೆಸ್ಟ್ರಾಲ್‌ ಕಡಿತ

ಈ ಹಣ್ಣಿನಲ್ಲಿರುವ ಬೀಟಾ ಕ್ಯಾರೊಟಿನ್‌ ಅಂಶವು ಲೈಕೋಪೇನ್‌ ಜೊತೆಗೆ ಸೇರಿ ಕೆಲವು ಉತ್ತಮ ಫಲಿತಾಂಶಗಳನ್ನು ನೀಡಬಲ್ಲದು. ಅಂದರೆ, ರಕ್ತದೊತ್ತಡ ಕಡಿಮೆ ಮಾಡುವುದರ ಜೊತೆಗೆ ಕೊಲೆಸ್ಟ್ರಾಲ್‌ ಜಮೆಯಾಗಿದ್ದನ್ನೂ ಕಡಿತಗೊಳಿಸುತ್ತದೆ. ಕೊಲೆಸ್ಟ್ರಾಲ್‌ ಕಡಿತಕ್ಕೆ ಟೊಮೇಟೊ ನೆರವಾಗುವುದನ್ನು ಹಲವು ಅಧ್ಯಯನಗಳು ದೃಢಪಡಿಸಿವೆ. ಜೊತೆಗೆ ರಕ್ತದೊತ್ತಡ ನಿಯಂತ್ರಣಕ್ಕೂ ನೆರವಾಗುವುದರಿಂದ ಹೃದಯ ಸ್ನೇಹಿತನಂತೆ ವರ್ತಿಸುತ್ತದೆ.

ಅತಿ ಬೇಡ

ಇಷ್ಟೆಲ್ಲ ಸದ್ಗುಣಗಳು ಟೊಮ್ಯಾಟೊದಲ್ಲಿದ್ದರೂ, ದಿನವೂ ಟೊಮೇಟೊ ರಸ ಕುಡಿಯುವ ಮುನ್ನ ಸ್ವಲ್ಪ ಜಾಗ್ರತೆ ಮಾಡುವುದು ಒಳ್ಳೆಯದು. ಮನೆಯಲ್ಲೇ ಮಾಡಿಕೊಂಡರೆ ಅಷ್ಟೇನೂ ಸಮಸ್ಯೆಯಾಗದು. ಆದರೆ ಅಂಗಡಿಯಿಂದ ತರುವ ಟೋಮೇಟೋ ಜ್ಯೂಸ್‌ಗಳಲ್ಲಿ ಸೋಡಿಯಂ ಅಂಶ ಹೆಚ್ಚಿರಬಹುದು. ಮನೆಯಲ್ಲಿ ಮಾಡಿದಾಗ ನಾರಿನಂಶ ತೆಗೆಯದೆ ಕುಡಿಯುವ ಆಯ್ಕೆ ಇರುತ್ತದೆ. ಆದರೆ ಅಂಗಡಿಯಿಂದ ತರುವ ಯಾವುದೇ ಬ್ರಾಂಡ್‌ಗಳಲ್ಲಿ ನಾರಿನಂಶವನ್ನು ಸಂಪೂರ್ಣ ತೆಗೆಯಲಾಗುತ್ತದೆ. ಇದು ಅಂಥಾ ಒಳ್ಳೆಯದೇನಲ್ಲ. ಐಬಿಎಸ್‌ ಅಥವಾ ಜಿಇಆರ್‌ಡಿ ಯಂಥ ಜೀರ್ಣಾಂಗಗಳ ಸಮಸ್ಯೆ ಇರುವವರು ಟೋಮೇಟೊ ರಸವನ್ನು ಅತಿಯಾಗಿ ಸೇವಿಸುವುದು ಸೂಕ್ತವಲ್ಲ. ಇದರಲ್ಲಿರುವ ಹುಳಿ ಅಂಶದಿಂದ ಜೀರ್ಣಾಂಗಗಳ ತೊಂದರೆ ಹೆಚ್ಚಬಹುದು.

Continue Reading
Advertisement
IPL 2024
ಐಪಿಎಲ್ 20242 mins ago

IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

New Criminal Laws
ದೇಶ9 mins ago

New Criminal Laws: ಜುಲೈ 1ರಿಂದ ಜಾರಿಗೆ ಬರಲಿವೆ ಮೂರು ಹೊಸ ಕ್ರಿಮಿನಲ್ ಕಾನೂನುಗಳು; ಏನಿದರ ಹೈಲೈಟ್ಸ್?

IPL 2024
ಕ್ರೀಡೆ16 mins ago

IPL 2024 : ಗೆಲುವೊಂದೇ ಗುರಿ; ಅಂಪೈರ್​ಗಳ ಜತೆ ಮತ್ತೆ ವಾಗ್ವಾದ ನಡೆಸಿದ ಕೊಹ್ಲಿ

IPL 2024
ಪ್ರಮುಖ ಸುದ್ದಿ31 mins ago

IPL 2024 : ಕ್ಯಾಚ್​ ಆಫ್​​ ದಿ ಸೀಸನ್​, ಫಾಫ್​ ಡು ಪ್ಲೆಸಿಸ್​ ಹಿಡಿದ ಅದ್ಭುತ್​ ಕ್ಯಾಚ್​​ನ ವಿಡಿಯೊ ಇಲ್ಲಿದೆ

Virat kohli
ಕ್ರೀಡೆ47 mins ago

Virat kohli : ಡ್ಯಾರಿಲ್​ ಮಿಚೆಲ್ ಕ್ಯಾಚ್ ಹಿಡಿದ ಬಳಿಕ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮ ಹೀಗಿತ್ತು; ಇಲ್ಲಿದೆ ವಿಡಿಯೊ

Tips for Mothers
ಆರೋಗ್ಯ49 mins ago

Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

virat kohli
ಕ್ರಿಕೆಟ್1 hour ago

Virat kohli : ಕೇಕೆ ಹಾಕುತ್ತಿದ್ದ ಸಿಎಸ್​ಕೆ ಅಭಿಮಾನಿಗಳ ಬಾಯ್ಮುಚ್ಚಿಸಿದ ಕೊಹ್ಲಿ; ಇಲ್ಲಿದೆ ವಿಡಿಯೊ

IPL 2024
ಕ್ರಿಕೆಟ್1 hour ago

IPL 2024 : ಚೆನ್ನೈ ಮಣಿಸಿ ಪ್ಲೇಆಫ್​ಗೇರುವ ಮುನ್ನವೇ ಸಿಕ್ಸರ್​​ಗಳ ವಿಶೇಷ ದಾಖಲೆ ಬರೆದ ಆರ್​ಸಿಬಿ

Karnataka weather Forecast
ಮಳೆ1 hour ago

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

Virat kohli
ಪ್ರಮುಖ ಸುದ್ದಿ2 hours ago

Virat kohli : ಚೆನ್ನೈ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್​ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌