Tips To Prevent Vegetables: ಬೇಸಿಗೆಯಲ್ಲಿ ತರಕಾರಿಗಳು ಹಾಳಾಗದಂತೆ ರಕ್ಷಿಸಿಕೊಳ್ಳುವುದು ಹೇಗೆ? - Vistara News

ಆರೋಗ್ಯ

Tips To Prevent Vegetables: ಬೇಸಿಗೆಯಲ್ಲಿ ತರಕಾರಿಗಳು ಹಾಳಾಗದಂತೆ ರಕ್ಷಿಸಿಕೊಳ್ಳುವುದು ಹೇಗೆ?

ಬೇಸಿಗೆಯಲ್ಲಿ ಕ್ಷಣಮಾತ್ರದಲ್ಲಿ ಬಾಡಿ, ಒಣಗಿ ಹೋಗುವಂತಾಗುತ್ತವೆ ತರಕಾರಿ ಹಣ್ಣುಗಳು. ಅವುಗಳಲ್ಲಿ ಸಂರಕ್ಷಿಸಿ ಇರಿಸಿಕೊಳ್ಳುವುದು ಹೇಗೆ? (Tips To Prevent Vegetables From Spoiling In Summer) ಅವುಗಳ ಸತ್ವ ನಶಿಸದಂತೆ ಕಾಪಾಡಿಕೊಳ್ಳುವುದು ಸಾಧ್ಯವೇ? ಈ ಲೇಖನ ಓದಿ.

VISTARANEWS.COM


on

Tips To Prevent Vegetables From Spoiling In Summer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತರಕಾರಿ ತರುವುದಕ್ಕೆ ಹೋಗುತ್ತೀರಿ. ಅಂಗಡಿಯ ಅಟ್ಟಲುಗಳಲ್ಲಿ ತಂಪಾಗಿ ಕುಳಿತಿದ್ದ ಸೊಪ್ಪು-ತರಕಾರಿಗಳು ನಿಮ್ಮ ಬುಟ್ಟಿ ಸೇರುವಾಗ ನಳನಳಿಸುತ್ತಲೇ ಇರುತ್ತವೆ. ಆದರೆ ನೀವು ಮನೆಗೆ ಬಂದು, ಸೆಕೆ ತಡೆಯಲಾರದೆ ಉಸ್ಸಪ್ಪಾ ಎಂದು ಕುಳಿತು, ನೀರು ಕುಡಿದು ಸುಧಾರಿಸಿಕೊಂಡು, ತಂದ ತರಕಾರಿಯನ್ನು ಎತ್ತಿಡುವುದಕ್ಕೆ ಹೋಗುವಷ್ಟರಲ್ಲಿ ಅವು ಬಾಡಿ, ತಲೆ ಮುದುರಿಕೊಂಡಿರುತ್ತವೆ. ಅರೆ! ಅಂಗಡಿಯಿಂದ ತರುವಾಗ ಚೆನ್ನಾಗೇ ಇದ್ದವಲ್ಲ ಎಂದು ಚಿಂತಿಸುತ್ತೀರಿ.

Fresh HealthY Vegetables

ಕೆಲವೊಮ್ಮೆ ಮನೆಗೆ ತರುವಾಗಲೂ ತಾಜಾ ನಗುವನ್ನೇ ಬೀರುವ ಸೊಪ್ಪು-ತರಕಾರಿಗಳು, ಮನೆಗೆ ತಂದ ಒಂದೆರಡೇ ದಿನಗಳಲ್ಲಿ ಮುಖ ಬಾಡಿಸಿಕೊಳ್ಳುತ್ತವೆ. ಮಳೆಗಾಲದಲ್ಲಿ ಮಳೆನೀರು ತಾಗಿದ ಕಾಯಿಪಲ್ಲೆಗಳು ಕೊಳೆಯುವುದು ಎಷ್ಟು ಸಹಜವೋ, ಬೇಸಿಗೆಯಲ್ಲಿ ಉರಿತಾಪಕ್ಕೆ ಕಾಯಿಪಲ್ಲೆಗಳು ಬಾಡುವುದೂ ಅಷ್ಟೇ ಸಹಜ. ಬೇಸಿಗೆಯಲ್ಲಿ ತರಕಾರಿಗಳು ಯಾವ ಮಟ್ಟಿಗೆ ಬಾಡುತ್ತವೆ ಎಂದರೆ, ಕ್ಯಾರೆಟ್‌, ಹುರುಳಿಕಾಯಿ, ಆಲೂಗಡ್ಡೆ, ಸೋರೇಕಾಯಿಯಂಥವು ರಬ್ಬರಿನಂತಾಗಿ ಎಳೆದಷ್ಟೂ ಹಿಗ್ಗಿ ಮತ್ತೆ ಮೊದಲಿನ ಗಾತ್ರಕ್ಕೇ ಕುಗ್ಗುವ ಸ್ಥಿತಿಸ್ಥಾಪಕ ಗುಣವನ್ನು ಹೊಂದಿಬಿಡುತ್ತವೆ. ಸ್ವಲ್ಪ ಎಳೆಯ ತರಕಾರಿಗಳ ಕಥೆ ಹೀಗಾದರೆ, ಚೆನ್ನಾಗಿ ಬಲಿತವು ಮರದಂತಾಗಿ, ಅದನ್ನು ಕತ್ತರಿಸುವುದಕ್ಕೆ ಗರಗಸವೇ ಬೇಕು ಎಂಬ ಸ್ಥಿತಿ ಬರುತ್ತದೆ. ಇನ್ನು ಹಣ್ಣುಗಳಲ್ಲಂತೂ ರಸವೇ ಉಳಿಯದೆ, ನಿಸ್ಸಾರವಾಗಿ ಬಿಡುತ್ತವೆ. ಕಾಲಕ್ಕೆ ತಕ್ಕಂತೆ ಹಣ್ಣು-ತರಕಾರಿಗಳು ಇರುತ್ತವೆ ಎಂಬುದು ಸಹಜವಾದರೂ ಬಾಡಿದ್ದು, ಬೆಳೆದಿದ್ದು, ಕೊಳೆತಿದ್ದನ್ನೆಲ್ಲಾ ತಿನ್ನಲಾದೀತೇ? ಬೇಸಿಗೆಯ ತಾಪಕ್ಕೆ ಒಣಗಿ, ಚಿರುಟಿದಂತಾಗುವ ಹಣ್ಣು, ಕಾಯಿಪಲ್ಲೆಗಳನ್ನು ಕಾಪಾಡಿಕೊಳ್ಳುವುದು ಹೇಗೆ? (Tips To Prevent Vegetables From Spoiling In Summer) ಅದರಲ್ಲಿರುವ ಪೋಷಕಾಂಶಗಳನ್ನು ಸಂರಕ್ಷಿಸಿಟ್ಟುಕೊಳ್ಳುವುದು ಸಾಧ್ಯವೇ?

Lots of vegetables

ದಾರಿ ಯಾವುದು?

ಇದಕ್ಕೆ ಮಾರ್ಗಗಳು ಇಲ್ಲವೆಂದಲ್ಲ. ಮೊದಲನೇದಾಗಿ, ಸ್ಥಳೀಯವಾಗಿ ಬೆಳೆಯುವ ಕಾಯಿಪಲ್ಲೆಗಳಿಗೆ ಆದ್ಯತೆ ನೀಡಿ. ಯಾವುದೋ ದೂರದ ಊರಿನ ತರಕಾರಿಗಳು, ಬೇರೆ ದೇಶದ ಹಣ್ಣುಗಳನ್ನು ದುಬಾರಿ ಬೆಲೆ ತೆತ್ತು ತಂದರೂ, ಅವುಗಳ ಆಯಸ್ಸು ಹೆಚ್ಚಿರುವುದಿಲ್ಲ. ಕಾರಣ, ಶೀತಲ ಪೆಟ್ಟಿಗೆಯಲ್ಲೋ ಅಥವಾ ಪ್ರಿಸರ್ವೇಟಿವ್‌ ಹೊತ್ತೋ ಬರುವ ಈ ವಸ್ತುಗಳು ವಾರಗಟ್ಟಲೆ ಅಥವಾ ತಿಂಗಳುಗಟ್ಟಲೆ ಹಿಂದೆಯೇ ಮೂಲ ಸಸ್ಯದಿಂದ ಬೇರೆಯಾದಂಥವು. ಹಾಗಾಗಿ ಸ್ಥಳೀಯ ಉತ್ಪನ್ನಗಳೇ ಹೆಚ್ಚು ತಾಜಾ ಆಗಿರಲು ಸಾಧ್ಯ. (Health tips) ಜೊತೆಗೆ, ತರಕಾರಿ-ಹಣ್ಣುಗಳನ್ನು ಮುಂದಿನ ನಾಲ್ಕಾರು ದಿನಗಳಿಗೆ ಮಾತ್ರವೇ ಖರೀದಿಸಿ. ವಾರಗಟ್ಟಲೆ ಆಗುವಷ್ಟು ಫ್ರಿಜ್‌ನಲ್ಲಿ ಇರಿಸಿದರೆ, ಶೇಖರಣೆ ಕಷ್ಟವಾದೀತು. ಅವುಗಳ ಸತ್ವಗಳೂ ನಶಿಸಿಯಾವು.

Washing fruit and vegetables to remove pesticides.

ಚೆನ್ನಾಗಿ ತೊಳೆಯಿರಿ

ಸೊಪ್ಪುಗಳನ್ನು ತಂದಾಗ, ಅವುಗಳ ಬೇರಿಗೆ ಮಣ್ಣು ಅಂಟಿದ್ದರೆ, ಅದನ್ನು ತೊಳೆದು ಶುಚಿ ಮಾಡಿ. ನಂತರ ಆ ಸೊಪ್ಪಿನ ಕಂತೆ ಬಿಚ್ಚಿ ಅದನ್ನು ಯಥಾವತ್‌ ಒಂದು ಪಾತ್ರೆ ನೀರಿನಲ್ಲಿ, ಬೇರು ಮುಳುಗುವಂತೆ ಇಡಿ. ಎಲೆಗಳಿಗೆ ನೀರು ತಾಗುವುದು ಬೇಡ. ಹೀಗಿಟ್ಟರೆ ಒಂದೆರಡು ದಿನಗಳವರೆಗೂ ಸೊಪ್ಪುಗಳು ಅಗ್ದಿ ತಾಜಾ ಆಗಿರಬಲ್ಲವು. ಬೇರು ಇಲ್ಲದಿದ್ದರೆ, ಅವುಗಳನ್ನು ಸೋಸಿ, ನೀರಿದ್ದರೆ ಆರಿಸಿ, ಫ್ರಿಜ್‌ನಲ್ಲಿ ಇಡಬಹುದು. ಆದರೆ ಈರುಳ್ಳಿ, ಆಲೂಗಡ್ಡೆ, ಗೆಣಸು, ಬೆಳ್ಳುಳ್ಳಿ, ಟೊಮೇಟೊಗಳನ್ನು ಫ್ರಿಜ್‌ನಲ್ಲಿ ಇರಿಸದೆ, ತಂಪಾದ ಸ್ಥಳದಲ್ಲಿ ಶೇಖರಿಸುವುದೇ ಸರಿ.
ಮಾವು, ಬಾಳೆ, ಅವಕಾಡೊ, ಕಿವಿ, ಪೇರ್‌, ಪ್ಲಮ್‌ ಮುಂತಾದ ಹಣ್ಣುಗಳು ಕಳಿತಾಗ ಇಥಲೀನ್‌ ಅನಿಲ ಬಿಡುಗಡೆಯಾಗುತ್ತದೆ. ಇದರಿಂದ ಈ ಹಣ್ಣುಗಳಿಗೆ ಯಾವುದೇ ಸಮಸ್ಯೆಯಿಲ್ಲ. ಆದರೆ ಸೇಬುಹಣ್ಣು, ಕಲ್ಲಂಗಡಿ, ಗಜ್ಜರಿ, ಬ್ರೊಕೊಲಿಯಂಥ ಹಸಿರು ತರಕಾರಿ ಮುಂತಾದವುಗಳು ಇಥಲೀನ್‌ನಿಂದಾಗಿ ಅವಧಿಗೆ ಮೊದಲೇ ಆಯಸ್ಸು ಕಳೆದುಕೊಳ್ಳುತ್ತವೆ. ಹಾಗಾಗಿ ಈ ಎರಡು ಜಾತಿಯ ಹಣ್ಣ-ತರಕಾರಿಗಳನ್ನು ಪ್ರತ್ಯೇಕವಾಗಿಯೇ ಶೇಖರಿಸಿಡಿ.

ಕೆಲವನ್ನು ಮೊದಲೇ ತೊಳೆಯಬೇಡಿ

ಕೆಲವರಿಗೆ ತಂದ ಹಣ್ಣು-ತರಕಾರಿಗಳನ್ನೆಲ್ಲಾ ತೊಳೆದು ಶುಚಿ ಮಾಡಿ ಶೇಖರಿಸುವ ಅಭ್ಯಾಸವಿರುತ್ತದೆ. ಆದರೆ ಬೆರ್ರಿಗಳು, ದ್ರಾಕ್ಷಿಯಂಥವನ್ನು ತಿನ್ನುವ ಮೊದಲಷ್ಟೇ ತೊಳೆದರೆ ಸಾಕು. ಮೊದಲೇ ಅವುಗಳನ್ನು ನೀರಿಗೆ ಹಾಕಿದರೆ, ಎಷ್ಟು ಪ್ರಯತ್ನಿಸಿದರೂ, ಅವುಗಳಲ್ಲಿನ ನೀರು ಆರಿಸುವುದು ಸಾಧ್ಯವಿಲ್ಲ. ಹಾಗಾಗಿ ಈ ಫಲಗಳು ಶೀಘ್ರವೇ ಕೊಳೆಯಲಾರಂಭಿಸುತ್ತವೆ. ಶುಂಠಿಯನ್ನು ಸಹ ಮಣ್ಣಿನೊಂದಿಗೇ ತಂಪಾದ ಜಾಗದಲ್ಲಿರಿಸಿ, ಬೇಕಾದಾಗ ತೊಳೆದು ಉಪಯೋಗಿಸಿದರೆ ಅದರ ಆಯಸ್ಸು ಹೆಚ್ಚು.

Vegetables on a Basket

ಬೇರ್ಪಡಿಸಿ ಶೇಖರಿಸಿಡಿ

ಕ್ಯಾರೆಟ್‌, ಮೂಲಂಗಿ, ಬೀಟ್‌ನಂಥ ಗಡ್ಡೆಗಳನ್ನು ತಂದಾಗ, ಅವುಗಳ ಮೇಲೆ ಸೊಪ್ಪುಗಳಿರಬಹುದು. ಈ ಸೊಪ್ಪನ್ನು ಬೇರ್ಪಡಿಸಿಯೇ ಶೇಖರಿಸಿಡಿ. ಪ್ಲಾಸ್ಟಿಕ್‌ ಚೀಲಗಳಲ್ಲಿ ಫ್ರಿಜ್‌ನಲ್ಲಿಟ್ಟರೆ ಇವುಗಳನ್ನು ವಾರಗಟ್ಟಲೆ ಕೆಡದಂತೆ ಕಾಪಾಡಿಕೊಳ್ಳಬಹುದು. ಹೂಕೋಸು, ಎಲೆಕೋಸು, ಬ್ರೊಕೊಲಿಯಂಥ ತರಕಾರಿಗಳನ್ನು ಡಬ್ಬಿಗಳಲ್ಲಿ ಬಿಗಿಯಾಗಿ ಮುಚ್ಚಿಡಿ. ಕತ್ತರಿಸದೇ ಇರುವುದನ್ನು ಪ್ಲಾಸ್ಟಿಕ್‌ ಚೀಲಗಳಲ್ಲಿ ಇರಿಸಬಹುದು. ಒಮ್ಮೆ ಕತ್ತರಿಸಿಯಾದ ಮೇಲೆ ಡಬ್ಬಿಗಳಲ್ಲಿ ಸೀಲ್‌ ಮಾಡಿ ಶೇಖರಿಸಿ. ಹಾಗಿಲ್ಲದಿದ್ದರೆ ಅವುಗಳು ಬೇಗನೇ ಕಪ್ಪಾಗುತ್ತವೆ.

ಇದನ್ನೂ ಓದಿ: Walnut Health Benefits: ದುಬಾರಿಯಾದರೂ ವಾಲ್‌ನಟ್‌ನ ಆರೋಗ್ಯ ಪ್ರಯೋಜನ ಅಪಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

Fortis Hospital: ಹೃದ್ರೋಗ ಸಮಸ್ಯೆ, ಕರುಳಿನ ಕ್ಯಾನ್ಸರ್‌ ಹಾಗೂ ಪಿತ್ತಕೋಶದಲ್ಲಿ ಕಲ್ಲು ಹೊಂದಿದ್ದ 44 ವರ್ಷದ ವ್ಯಕ್ತಿಗೆ ಏಕಕಾಲದಲ್ಲೇ ಮೂರು ಶಸ್ತ್ರಚಿಕಿತ್ಸೆಯನ್ನು ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಿದೆ. ಫೋರ್ಟಿಸ್ ಆಸ್ಪತ್ರೆಯ ಹೃದಯ ತಜ್ಞ ಡಾ. ವಿವೇಕ್ ಜವಳಿ ಮತ್ತು ಮಿನಿಮಲ್ ಆಕ್ಸೆಸ್ ಮತ್ತು ಬಾರಿಯಾಟ್ರಿಕ್ ಸರ್ಜರಿ ನಿರ್ದೇಶಕ ಡಾ. ಜಿ. ಐ. ಗಣೇಶ್ ಶೆಣೈ ಅವರ ವೈದ್ಯರ ತಂಡ ಈ ಚಿಕಿತ್ಸೆಯನ್ನು ನೆರವೇರಿಸಿದೆ

VISTARANEWS.COM


on

Fortis Hospital doctors team performed complex surgery for three different diseases simultaneously
Koo

ಬೆಂಗಳೂರು: ವಿಶ್ವದಲ್ಲೇ ಮೊದಲ ಬಾರಿಗೆ ಏಕಕಾಲದಲ್ಲೇ ಒಬ್ಬ ವ್ಯಕ್ತಿಗೆ ಮೂರು ವಿಭಿನ್ನ ಕಾಯಿಲೆಗಳಿಗೆ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯಕೀಯ ತಂಡ ಯಶಸ್ವಿಯಾಗಿ ನಡೆಸಿದೆ.

ನಗರದ ಕನ್ನಿಂಗ್‌ಹ್ಯಾಮ್‌ ರಸ್ತೆಯ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಹೃದ್ರೋಗ ಸಮಸ್ಯೆ, ಕರುಳಿನ ಕ್ಯಾನ್ಸರ್‌ ಹಾಗೂ ಪಿತ್ತಕೋಶದಲ್ಲಿ ಕಲ್ಲು ಹೊಂದಿದ್ದ 44 ವರ್ಷದ ವ್ಯಕ್ತಿಗೆ ಏಕಕಾಲದಲ್ಲೇ ಮೂರು ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು, ಇದು ವಿಶ್ವದಲ್ಲೇ ಮೊದಲ ಪ್ರಕರಣವಾಗಿದೆ.

ಫೋರ್ಟಿಸ್ ಆಸ್ಪತ್ರೆಯ ಹೃದಯ ತಜ್ಞ ಡಾ. ವಿವೇಕ್ ಜವಳಿ ಮತ್ತು ಮಿನಿಮಲ್ ಆಕ್ಸೆಸ್ ಮತ್ತು ಬಾರಿಯಾಟ್ರಿಕ್ ಸರ್ಜರಿ ನಿರ್ದೇಶಕ ಡಾ. ಜಿ. ಐ. ಗಣೇಶ್ ಶೆಣೈ ಅವರ ವೈದ್ಯರ ತಂಡ ಈ ಚಿಕಿತ್ಸೆಯನ್ನು ನೆರವೇರಿಸಿದೆ.

ಇದನ್ನೂ ಓದಿ: Karnataka Congress: ಬೂತ್ ಮಟ್ಟದಲ್ಲಿ ‘ಕಾಂಗ್ರೆಸ್ ಕುಟುಂಬ’ ಕಾರ್ಯಕ್ರಮ; ಪಕ್ಷ ಬಲವರ್ಧನೆಗೆ ಡಿ.ಕೆ.ಶಿ ಪ್ಲ್ಯಾನ್‌

ಈ ಕುರಿತು ಮಾತನಾಡಿದ ಡಾ. ವಿವೇಕ್‌ ಜವಳಿ, 44 ವರ್ಷದ ಕೊಪ್ಪರಂ ಎಂಬ ವ್ಯಕ್ತಿಯು ಹೃದ್ರೋಗ ಸಮಸ್ಯೆಯನ್ನು ಹೊಂದಿದ್ದರು. ಇದಕ್ಕೆ ಚಿಕಿತ್ಸೆ ಪಡೆಯಲು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಇವರಿಗೆ ಕೊರೊನರಿ ಆರ್ಟರಿ ಬೈಪಾಸ್ ಸರ್ಜರಿ ಮಾಡುವ ಅವಶ್ಯಕತೆ ಇತ್ತು.

ರೋಗಿಯು ತಾವು ಮೊದಲಿನಿಂದಲೂ ಹೊಟ್ಟೆ ನೋವು ಅನುಭವಿಸುತ್ತಿರುವ ಬಗ್ಗೆಯೂ ನಮಗೆ ತಿಳಿಸಿದರು, ಇದಕ್ಕೆ ಅಲ್ಟ್ರಾಸೌಂಡ್ ಪರೀಕ್ಷೆ ನಡೆಸಿದೆವು. ಈ ವೇಳೆ ಅವರಿಗೆ ಪಿತ್ತಕೋಶದಲ್ಲಿ ಕಲ್ಲು ಇರುವುದು ಕಂಡು ಬಂತು. ಹೀಗಾಗಿ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕರುಳಿನ ಕ್ಯಾನ್ಸರ್‌ ಇರುವುದು ಸಹ ಪತ್ತೆಯಾಯಿತು. ಕರುಳಿನ ಕ್ಯಾನ್ಸರ್‌ ಬಹುಪಾಲು ದೊಡ್ಡಮಟ್ಟದಲ್ಲಿಯೇ ಅವರಿಗೆ ಹಾನಿ ಮಾಡುತ್ತಿತ್ತು. ಹೀಗಾಗಿ ಅವರಿಗೆ ಹೃದಯ ಬೈಪಾಸ್‌ ಸರ್ಜರಿಯ ಜತೆಗೆ ಕರುಳಿನ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆಯೂ ಹೆಚ್ಚು ಅನಿವಾರ್ಯವಾಗಿತ್ತು.

ಆದರೆ, ಹೃದಯದ ಬೈಪಾಸ್‌ ಸರ್ಜರಿ ಬಳಿಕ 3 ತಿಂಗಳು ಯಾವುದೇ ಚಿಕಿತ್ಸೆಗೆ ಒಳಪಡುವುದು ಹೆಚ್ಚು ಅಪಾಯಕಾರಿ. ಆದರೆ, ಮೂರು ತಿಂಗಳವರೆಗೂ ಕರುಳಿನ ಕ್ಯಾನ್ಸರ್‌ನನ್ನು ಹಾಗೇ ಬಿಡಲು ಸಹ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಈ ವ್ಯಕ್ತಿಗೆ ಏಕಕಾಲದಲ್ಲೇ ಹೃದಯದ ಬೈಪಾಸ್‌ ಸರ್ಜರಿ, ಕರುಳಿನ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆ ಹಾಗೂ ಪಿತ್ತಕೋಶದಲ್ಲಿ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆಯನ್ನು ನಡೆಸಲು ಅವರ ಕುಟುಂಬದವರ ಒಪ್ಪಿಗೆ ಪಡೆದುಕೊಂಡೆವು.

ಇದನ್ನೂ ಓದಿ: IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

ಮೊದಲಿಗೆ ಆಫ್-ಪಂಪ್ ಕರೋನರಿ ಆರ್ಟರಿ ಬೈಪಾಸ್ (OPCAB)ನ ವಿಶೇಷ ಶಸ್ತ್ರಚಿಕಿತ್ಸಾ ತಂತ್ರದ ಮೂಲಕ ಕೊರೊನರಿ ಆರ್ಟರಿ ಬೈಪಾಸ್ ಸರ್ಜರಿಗೆ ನಡೆಸಿದೆವು. ಈ ಅವಧಿಯಲ್ಲೇ ಬಾರಿಯಾಟ್ರಿಕ್ ಸರ್ಜನ್‌ ಡಾ. ಜಿ. ಐ. ಗಣೇಶ್ ಶೆಣೈ ಅವರು, ಲ್ಯಾಪರೊಸ್ಕೋಪಿಕ್ ತಂತ್ರಜ್ಞಾನ ಬಳಸಿಕೊಂಡು, ಲ್ಯಾಪರೊಸ್ಕೋಪಿಕ್ ಎಕ್ಸ್ಟೆಂಡೆಡ್ ರೈಟ್ ಹೆಮಿಕೊಲೆಕ್ಟಮಿ (LERHC) ಅನ್ನು ಕ್ಯಾನ್ಸರ್‌ನ ಕರುಳಿನ ಭಾಗವನ್ನು ತೆಗೆದುಹಾಕಿದರು, ಜತೆಗೆ ಪಿತ್ತಕೋಶದ ಕಲ್ಲುಗಳನ್ನು ಸಹ ಲ್ಯಾಪರೊಸ್ಕೋಪಿಕ್ ಕೊಲೆಸಿಸ್ಟೆಕ್ಟಮಿ (LC) ಮೂಲಕ ತೆಗೆದು ಹಾಕುವಲ್ಲಿ ಯಶಸ್ವಿಯಾದರು. ಈ ಎಲ್ಲಾ ಶಸ್ತ್ರಚಿಕಿತ್ಸೆಯನ್ನು 7 ಗಂಟೆಗಳಲ್ಲಿ ನಡೆಸಲಾಯಿತು. ರೋಗಿಯು ಶಸ್ತ್ರಚಿಕಿತ್ಸೆಯಾದ 15 ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ಅವರು ವಿವರಿಸಿದರು.

Continue Reading

ಆರೋಗ್ಯ

Mouthwashes: ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ? ಇದರ ಇತಿಮಿತಿ ಬಗ್ಗೆಯೂ ತಿಳಿದಿರಲಿ

ಮೌತ್‌ವಾಷ್‌ಗಳನ್ನು (Mouthwashes) ಬಳಸದವರ ಸಂಖ್ಯೆ ವಿರಳ. ಕೆಲವರು ನಿಯಮಿತವಾಗಿ ಬಳಸಿದರೆ, ಹಲವರು ಅಪರೂಪಕ್ಕಾದರೂ ಬಳಸುತ್ತಾರೆ. ವ್ಯಾಪಕವಾಗಿ ಬಳಕೆಯಲ್ಲಿರುವ ಈ ಮೌತ್‌ವಾಷ್‌ನ ಇತಿ-ಮಿತಿಗಳೇನು? ಇದನ್ನು ಬಳಸಬೇಕಾದರೆ ಗಮನಿಸಬೇಕಾದ ಅಂಶಗಳು ಯಾವುವು? ಇಲ್ಲಿದೆ ವಿವರ.

VISTARANEWS.COM


on

Mouthwashes
Koo

ಜಾಹೀರಾತುಗಳನ್ನು ನೋಡಿ ಮರುಳಾಗುವುದು, ಅದನ್ನೇ ಅನುಸರಿಸುವುದು ಹೊಸದೇನಲ್ಲ. ಉದಾಹರಣೆಗೆ ಹೇಳುವುದಾದರೆ, ಯಾವುದೋ ಟೂತ್‌ಪೇಸ್ಟ್‌ ಉಪಯೋಗಿಸಿದರೆ ಹಲ್ಲುಗಳೆಲ್ಲ ಫಳಫಳಿಸಿ, ಉಸಿರು ತಾಜಾ ಆಗುತ್ತದೆ ಎಂದಿದ್ದರೆ, ಅದು ಸತ್ಯ ಎಂದು ಭಾವಿಸಿಯೇ ನಾವು ಉಪಯೋಗಿಸುತ್ತೇವೆ. ಮೌತ್‌ವಾಷ್‌ ಸಹ ಅದೇ ಸಾಲಿಗೆ ಸೇರುವಂಥದ್ದು. ಯಾವುದೇ ಮನೆಯ ಬಾತ್‌ರೂಂಗಳಲ್ಲಿ ಅದೀಗ ಖಾಯಂ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ಬಣ್ಣದ ಬಾಟಲಿಗಳ ಮೇಲಿನ ಮೋಹವನ್ನೋ ಅಥವಾ ಜಾಹೀರಾತುಗಳ ಭರವಸೆಯನ್ನೋ ಒಂದೆಡೆ ಇಟ್ಟು, ಮೌತ್‌ವಾಷ್‌ (Mouthwashes) ಬಳಕೆ ಇತಿ-ಮಿತಿಗಳೇನು ಎಂಬುದನ್ನು ಅರ್ಥ ಮಾಡಿಕೊಳ್ಳೋಣ.

Mouthwashes

ದುರ್ಗಂಧ ದೂರ

ಬಾಯಿಯ ದುರ್ಗಂಧ ಎಷ್ಟೋ ಸಂದರ್ಭಗಳಲ್ಲಿ ಮುಜುಗರ ತರುವಂತಹದ್ದು. ಸಾಮಾಜಿಕ, ವೈಯಕ್ತಿಕ ಅಥವಾ ವೃತ್ತಿಯ ಸಂದರ್ಭಗಗಳಲ್ಲಿ ಇದನ್ನು ನಿಭಾಯಿಸುವುದು ಕಷ್ಟವಾಗಬಹುದು. ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು, ಜೀರ್ಣಾಂಗಗಳ ಆರೋಗ್ಯ ನಿಭಾಯಿಸುವುದು, ಆಗಾಗ ನೀರು ಕುಡಿಯುವುದು- ಇಂಥವೆಲ್ಲ ಬಾಯಿಯ ದುರ್ಗಂಧ ನಿವಾರಣೆಯಲ್ಲಿ ಮುಖ್ಯವಾದವು. ಜೊತೆಗೆ ಮೌತ್‌ವಾಷ್‌ ಬಳಕೆ ಸಹ ಈ ಸಮಸ್ಯೆಗೆ ಸಮರ್ಥ ಪರಿಹಾರವನ್ನು ಒದಗಿಸಬಲ್ಲದು.

ಒಸಡಿನ ಸಮಸ್ಯೆ ದೂರ

ಕೆಲವು ಮೌತ್‌ವಾಷ್‌ಗಳು ಬ್ಯಾಕ್ಟೀರಿಯ ವಿರೋಧಿ ಸಾಮರ್ಥ್ಯವನ್ನು ಹೊಂದಿರುತ್ತವೆ. ಇಂಥವುಗಳ ನಿಯಮಿತ ಬಳಕೆಯಿಂದ ಒಸಡಿನ ಸೋಂಕುಗಳನ್ನು ಮಟ್ಟ ಹಾಕಬಹುದು. ಪ್ಲೇಕ್‌ಗಳು ನಿರ್ಮಾಣವಾಗಿ ಒಸಡಿನ ಆರೋಗ್ಯಕ್ಕೆ ಸವಾಲೊಡ್ಡುವ ಸಾಧ್ಯತೆ ಇರುತ್ತದೆ. ಇವುಗಳಿಗೂ ಕೆಲವು ಮೌತ್‌ವಾಷ್‌ಗಳು ಪರಿಹಾರ ಒದಗಿಸಬಲ್ಲವು.

Woman using mouthwash after brushing

ಉಪಯೋಗ ಸುಲಭ

ಮನೆಯಲ್ಲಿದ್ದರೂ, ಪ್ರಯಾಣದಲ್ಲಿದ್ದರೂ ಇವುಗಳನ್ನು ಕೊಂಡೊಯ್ಯುವುದು ಮತ್ತು ಬಳಸುವುದು ಸುಲಭ. ಫ್ಲೋಸಿಂಗ್‌ನಂಥ ಕ್ರಮಗಳು ಸಮಯ ಬೇಡುತ್ತವೆ. ಮಾತ್ರವಲ್ಲ, ವಿಮಾನದಲ್ಲಿ, ಟ್ರೇನ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಇದನ್ನು ಮಾಡಲೂ ಸಾಧ್ಯವಿಲ್ಲ. ಆದರೆ ಮೌತ್‌ವಾಷ್‌ ಬಳಕೆಗೆ ಅಂಥ ಯಾವುದೇ ಅಡೆ-ತಡೆಗಳಿಲ್ಲ; ಇದರ ಬಳಕೆ ಅತಿ ಸುಲಭ.

ಹೆಚ್ಚುವರಿ ರಕ್ಷಣೆ

ಫ್ಲೂರೈಡ್‌ ಹೊಂದಿರುವ ಮೌತ್‌ವಾಷ್‌ಗಳು ಬಾಯಿಯ ಆರೋಗ್ಯದ ವಿಚಾರದಲ್ಲಿ ಹೆಚ್ಚುವರಿ ರಕ್ಷಣೆಯನ್ನು ಒದಗಿಸುತ್ತವೆ. ದಂತಗಳ ಎನಾಮಲ್‌ ರಕ್ಷಣೆ ಮಾಡಿ, ಒಡಸುಗಳನ್ನು ಸುರಕ್ಷಿತವಾಗಿ ಇರಿಸಿ, ಹಲ್ಲುಗಳ ಬೇರನ್ನು ಭದ್ರ ಮಾಡುತ್ತವೆ. ಎಲ್ಲಕ್ಕಿಂತ ಮುಖ್ಯವಾಗಿ, ಹಲ್ಲುಗಳು ಹುಳುಕಾಗಿ, ಕುಳಿಯಾಗದಂತೆ ರಕ್ಷಣೆ ನೀಡುತ್ತವೆ. ಒಟ್ಟಾರೆಯಾಗಿ ಬಾಯಿಯ ಆರೋಗ್ಯಕ್ಕೆ ಇದೊಂದು ಒಳ್ಳೆಯ ಆಯ್ಕೆ.

Woman with mouthwash

ಮಿತಿಗಳಿಲ್ಲವೇ?

ಹಾಗೆಂದು ಮೌತ್‌ವಾಷ್‌ ಬಳಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲವೇ? ಅದನ್ನು ಬಳಸಿದಾಗ ಆಗುವುದೆಲ್ಲ ಒಳ್ಳೆಯದು ಎಂದು ತೀರ್ಮಾನಿಸಲು ಸಾಧ್ಯವೇ? ಎಂದು ಕೇಳಿದರೆ, ಹಾಗೇನಿಲ್ಲ. ಅದರಲ್ಲೂ ಸಮಸ್ಯೆಗಳು ಇಲ್ಲದಿಲ್ಲ. ಬಾಯಿಯ ಸರ್ವರೋಗಗಳಿಗೆ ಇದೊಂದೇ ಮದ್ದು ಎಂದು ಖಂಡಿತಕ್ಕೂ ಭಾವಿಸುವಂತಿಲ್ಲ. ಹಾಗಾದರೆ ಮೌತ್‌ವಾಷ್‌ ಬಳಸುವುದರಲ್ಲಿ ಇರುವಂಥ ಸಮಸ್ಯೆಗಳೇನು? ಯಾವುದರ ಬಗ್ಗೆ ಗಮನ ನೀಡಬೇಕು ಇದನ್ನು ಬಳಸುವಾಗ?

ಆಲ್ಕೋಹಾಲ್‌ ಕಿರಿಕಿರಿ

ಬಹಳಷ್ಟು ಮೌತ್‌ವಾಷ್‌ಗಳು ಆಲ್ಕೋಹಾಲ್‌ ಅಂಶವನ್ನು ಹೊಂದಿರುತ್ತವೆ. ಇದು ಬಾಯಿ ಒಣಗಿದಂತೆ ಮಾಡಿ, ಕಿರಿಕಿರಿ ಉಂಟುಮಾಡಬಹುದು. ದೀರ್ಘಕಾಲ ಇಂಥ ಮೌತ್‌ವಾಷ್‌ ಬಳಸುವುದರಿಂದ, ಈ ಸಮಸ್ಯೆಗಳು ಹೆಚ್ಚುತ್ತವೆ. ಹಾಗಾಗಿ ಸೂಕ್ಷ್ಮ ಒಸಡುಗಳು ಇರುವವರಿಗೆ ಮತ್ತು ಗರ್ಭಿಣಿಯರಿಗೆ ಆಲ್ಕೋಹಾಲ್‌ ಇಲ್ಲದಂಥ ಮೌತ್‌ವಾಷ್‌ ಬಳಕೆಯನ್ನು ವೈದ್ಯರು ಶಿಫಾರಸು ಮಾಡುತ್ತಾರೆ.

Female with mouthwash

ಸಮಸ್ಯೆ ತಿಳಿಯದು

ಬಾಯಿಯ ದುರ್ಗಂಧದ ಸಮಸ್ಯೆಗಳನ್ನು ಮೌತ್‌ವಾಷ್‌ಗಳು ತಡೆಯುವುದು ಹೌದಾದರೂ ಅದು ತಾತ್ಕಾಲಿಕ. ಬಾಯಿಯ ದುರ್ಗಂಧಕ್ಕೆ ಮೂಲ ಕಾರಣವೇನು ಎಂಬುದನ್ನು ಹುಡುಕಿ, ಅದನ್ನು ಪರಿಹರಿಸಿಕೊಳ್ಳುವುದು ಮುಖ್ಯ. ಹಲ್ಲುಗಳು ಹುಳುಕಾಗಿವೆಯೇ ಅಥವಾ ಜೀರ್ಣಾಂಗಗಳ ಸಮಸ್ಯೆಯಿಂದ ಹೀಗಾಗುತ್ತಿದೆಯೇ- ಅಂತೂ ಕಾರಣವೇನು ಎಂಬುದನ್ನು ಪತ್ತೆ ಮಾಡುವುದು ಅಗತ್ಯ. ಹಾಗಾಗಿ ಸಮಸ್ಯೆಗಳನ್ನು ಮೌತ್‌ವಾಷ್‌ ತಾತ್ಕಾಲಿಕವಾಗಿ ಮಾತ್ರವೇ ನಿವಾರಣೆ ಮಾಡಬಲ್ಲದು.

ಇದನ್ನೂ ಓದಿ: Mint Leaf Water: ಪುದಿನ ಎಲೆಗಳ ನೀರನ್ನು ನಿತ್ಯವೂ ಕುಡಿಯಿರಿ, ಈ ಲಾಭಗಳನ್ನು ಪಡೆಯಿರಿ!

ಬಿಡುವಂತಿಲ್ಲ

ಮೌತ್‌ವಾಷ್‌ಗಳ ಬಳಕೆಯ ನೆವದಿಂದ ನಿತ್ಯದ ಸ್ವಚ್ಛತೆಯ ಅಭ್ಯಾಸಗಳನ್ನು ಬಿಡುವಂತಿಲ್ಲ. ಅಂದರೆ ನಿಯಮಿತವಾಗಿ ಬ್ರಷ್‌ ಮಾಡುವುದು, ಫ್ಲೋಸ್‌ ಮಾಡುವುದು, ಊಟ-ತಿಂಡಿಯ ನಂತರ ಬಾಯಿಗೆ ನೀರು ಹಾಕಿ ಮುಕ್ಕಳಿಸುವುದು- ಇವೆಲ್ಲ ಅಗತ್ಯ ಅಭ್ಯಾಸಗಳು. ಎಂದೋ ಪ್ರಯಾಣದ ಸಂದರ್ಭದಲ್ಲಿ ಬ್ರಷ್‌ ಮಾಡುವುದಕ್ಕೆ ಅನುಕೂಲವಿಲ್ಲ ಎನ್ನುವಾಗ ಮಾತ್ರವೇ ಮೌತ್‌ವಾಷ್‌ ಬಳಕೆಯನ್ನು ಪರ್ಯಾಯ ಆಗಿಸಿಕೊಳ್ಳಬಹುದೇ ಹೊರತು, ಸದಾ ಅಲ್ಲ.

Continue Reading

ಆರೋಗ್ಯ

Colour In Food: ನಾವು ಸೇವಿಸುವ ಕಲ್ಲಂಗಡಿ ಸುರಕ್ಷಿತವೇ?; ಆಹಾರ ತಜ್ಞರು ಏನು ಹೇಳಿದ್ದಾರೆ?

ಕೆಂಪುಕೆಂಪಾಗಿರುವ ಕಲ್ಲಂಗಡಿ ಹಣ್ಣುಗಳಿಗೆ ನಿಜವಾಗಲೂ ಬಣ್ಣ ಬರಲು (Colour In Food) ಚುಚ್ಚು ಮದ್ದು ನೀಡಲಾಗುತ್ತದೆಯೇ? ಈ ಕುರಿತು ಆಹಾರ ತಜ್ಞರು ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ.

VISTARANEWS.COM


on

By

Color In Food
Koo

ಮಾರುಕಟ್ಟೆಯಲ್ಲಿ (market) ಕೆಂಪು ಕೆಂಪಾಗಿರುವ (Colour In Food) ಕಲ್ಲಂಗಡಿ (Watermelon) ಹಣ್ಣನ್ನು ಕಂಡರೆ ಎಂಥವರ ಬಾಯಲ್ಲೂ ನೀರೂರುತ್ತದೆ. ಆದರೆ ಇತ್ತೀಚೆಗಂತೂ ಈ ಹಣ್ಣುಗಳಿಗೆ ಚುಚ್ಚು ಮದ್ದು (inject the harmful colour) ನೀಡಲಾಗುತ್ತದೆ ಎಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ (social media) ಭಾರಿ ಚರ್ಚೆಯಾಗುತ್ತಿದೆ. ಆದರೆ ಇದು ನಿಜ ಹೌದೋ ಅಲ್ಲವೋ ಎನ್ನುವ ಕುರಿತು ಆಹಾರ ತಜ್ಞರು (Food expert) ಹೇಳುವುದೇನು ಗೊತ್ತೇ?

ಮಾರುಕಟ್ಟೆಯಲ್ಲಿ ಸಿಗುವ ಕಲ್ಲಂಗಡಿ ಹಣ್ಣುಗಳ ಬಗ್ಗೆ ಚಿಂತಿಸುವುದು ಬಿಡಿ. ಇದಕ್ಕೆ ಹಾನಿಕಾರಕ ಬಣ್ಣಗಳಿಂದ ಚುಚ್ಚಲಾಗುತ್ತದೆ ಎಂಬ ವರದಿ ಸರಿಯಲ್ಲ ಎಂದು ಆಹಾರ ಪರಿಣತರು ಹೇಳಿದ್ದಾರೆ.

ಹಣ್ಣು ಮಾರಾಟಗಾರರು ಕಲ್ಲಂಗಡಿಗಳಿಗೆ ರೆಡ್-ಬಿ ಎಂದು ಕರೆಯಲ್ಪಡುವ ಹಾನಿಕಾರಕ ಬಣ್ಣದ ಎರಿಥ್ರೋಸಿನ್- ಬಿ ಅನ್ನು ಚುಚ್ಚುತ್ತಾರೆ ಎನ್ನುವ ಮಾಧ್ಯಮ ವರದಿಗಳ ಕುರಿತು ಮಾಧ್ಯಮದವರನ್ನು ಹಿರಿಯ ಆಹಾರ ಪರಿಣತರು ತರಾಟೆಗೆ ತೆಗೆದುಕೊಂಡಿದ್ದಾರೆ.

ಅವರ ಪ್ರಕಾರ, ಕಲ್ಲಂಗಡಿ ಹಣ್ಣಿಗೆ ಒಂದೇ ಸ್ಥಳದಲ್ಲಿ ಬಣ್ಣವನ್ನು ಚುಚ್ಚುವುದರಿಂದ ನಿರ್ದಿಷ್ಟ ಭಾಗದಲ್ಲಿ ಮಾತ್ರ ಹಣ್ಣು ಕೆಂಪಾಗಲು ಸಾಧ್ಯ. ಸಂಪೂರ್ಣ ಹಣ್ಣು ಕೆಂಪಾಗುವುದಿಲ್ಲ. ಒಂದು ಸ್ಥಳದಲ್ಲಿ ಕಲ್ಲಂಗಡಿಗೆ ಬಣ್ಣವನ್ನು ಚುಚ್ಚಿದರೆ ಅಲ್ಲಿನ ಪ್ರದೇಶ ಮಾತ್ರ ಬಣ್ಣ ಪಡೆಯುತ್ತದೆ. ಆದರೆ ಮಾಧ್ಯಮಗಳಲ್ಲಿ ತೋರಿಸಿರುವ ಹಣ್ಣುಗಳು ಸಂಪೂರ್ಣವಾಗಿ, ಸಮವಾಗಿ ಕೆಂಪು ಬಣ್ಣದಲ್ಲಿದೆ. ಇದು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಅವರು ಇದರಲ್ಲಿ ಫೋಟೋಶಾಪ್ ಕಾರ್ಯನಿರ್ವಹಿಸಿದೆ.


ಅನೇಕ ಮಂದಿ ಕಲ್ಲಂಗಡಿಯಲ್ಲಿ ಬಳಸುವ ಸಾಮಾನ್ಯ ಕಲಬೆರಕೆ ಎರಿಥ್ರೋಸಿನ್ ಬಿ ಎಂದು ಹೇಳಿದ್ದಾರೆ. ಇದು ಕೆಂಪು ಬಣ್ಣವಾಗಿದ್ದು ಅದು ಹಣ್ಣನ್ನು ಮಾಗಿದ ಮತ್ತು ರಸಭರಿತವಾಗಿ ಕಾಣುವಂತೆ ಮಾಡುತ್ತದೆ. ಇದು ಕಲ್ಲಂಗಡಿಗಳ ಬಾಳಿಕೆ ಅವಧಿಯನ್ನು ಹೆಚ್ಚಿಸುತ್ತದೆ ಎನ್ನಲಾಗುತ್ತದೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಇದರ ವಿಡಿಯೋ ಭಾರಿ ವೈರಲ್ ಆಗಿದೆ. ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ಕ್ಲಿಪ್ ನಲ್ಲಿ ಈ ಪ್ರಯೋಗ ಮಾಡುತ್ತಿರುವ ವ್ಯಕ್ತಿಯೊಬ್ಬ ಕಲ್ಲಂಗಡಿಗೆ ರಾಸಾಯನಿಕಗಳನ್ನು ಚುಚ್ಚುತ್ತಿರುವುದನ್ನು ಕಾಣಬಹುದು.


ಎರಿಥ್ರೋಸಿನ್ ಬಿ ಸೇವನೆ ಪರಿಣಾಮ

WebMD ಪ್ರಕಾರ, ಎರಿಥ್ರೋಸಿನ್ ಬಿ ಸೇವನೆಯಿಂದ ವಾಕರಿಕೆ, ವಾಂತಿ, ಅತಿಸಾರ, ಹೊಟ್ಟೆ ನೋವು ಮತ್ತು ಹಸಿವಾಗದಿರುವುದಕ್ಕೆ ಕಾರಣವಾಗಬಹುದು. ಪ್ರಸ್ತುತ ಸಂಶೋಧನೆ ಮತ್ತು ಆಹಾರ ವಿಜ್ಞಾನ ಜರ್ನಲ್‌ನಲ್ಲಿನ ಅಧ್ಯಯನವು ಈ ವಿಷಕಾರಿ ಸಂಯುಕ್ತವು ಗರ್ಭಿಣಿಯರ ಹೊಟ್ಟೆಯಲ್ಲಿರುವ ಭ್ರೂಣಗಳ ಮೇಲೆ ಪರಿಣಾಮ ಬೀರುತ್ತದೆ. ಇದು ಬಂಜೆತನದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: Fruit Juice Side Effects: ಹಣ್ಣು ತಿಂದರೆ ಒಳ್ಳೆಯದೋ, ಹಣ್ಣಿನ ಜ್ಯೂಸ್‌ ಕುಡಿದರೆ ಒಳ್ಳೆಯದೋ?

ಈ ಚುಚ್ಚುಮದ್ದು ಹಾಕಿರುವ ಹಣ್ಣುಗಳು ವೇಗವಾಗಿ ಕೊಳೆಯಲು ಪ್ರಾರಂಭಿಸುತ್ತದೆ. ಹೀಗಾಗಿ ಇದು ಹೆಚ್ಚಿನ ಕಲ್ಲಂಗಡಿಗಳಿಗೆ ಬಳಸಲು ಸಾಧ್ಯವಿಲ್ಲ ಎಂದು ಆಹಾರ ಪರಿಣತರು ಹೇಳಿದ್ದಾರೆ.

ಚುಚ್ಚುಮದ್ದುಗಳನ್ನು ಹಾಕಿರುವ ಹಣ್ಣುಗಳಲ್ಲಿ ರಂಧ್ರಗಳು ಕಾಣಿಸುತ್ತವೆ. ಭಾರತದ ಬೇಸಿಗೆಯಲ್ಲಿ ಈ ಹಣ್ಣುಗಳು ವೇಗವಾಗಿ ಕೊಳೆಯಲು ಕಾರಣವಾಗುತ್ತವೆ. ಹೀಗಾಗಿ ಭಾರತೀಯ ರೈತರು ಈ ಅಪಾಯವನ್ನು ತೆಗೆದುಕೊಳ್ಳುವುದಿಲ್ಲ ಎಂದವರು ಅಭಿಪ್ರಾಯಪಟ್ಟಿದ್ದಾರೆ.

Continue Reading

ಆರೋಗ್ಯ

FSSAI Warning: ಎದೆಹಾಲು ಮಾರಾಟ ಮಾಡುವಂತಿಲ್ಲ: ಎಫ್‌ಎಸ್‌ಎಸ್‌ಎಐ ಖಡಕ್ ಎಚ್ಚರಿಕೆ

ಮಾನವ ಹಾಲು ಮತ್ತು ಅದರ ಉತ್ಪನ್ನಗಳ ಬಗ್ಗೆ ವಾಣಿಜ್ಯ ಉದ್ದೇಶಗಳಿಗಾಗಿ ವಿವಿಧ ಸಮಾಜದ ನಾಗರಿಕರನ್ನು ಸಂಪರ್ಕಿಸಲಾಗಿದೆ ಎನ್ನುವ ಕುರಿತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ ಮಾಹಿತಿ ಬಂದಿದ್ದು, ಎಫ್‌ಎಸ್‌ಎಸ್‌ಎಐ ಯು (FSSAI Warning) ಇಂತಹ ಯಾವುದೇ ಅಭ್ಯಾಸಗಳಲ್ಲಿ ತೊಡಗಿರುವ ಘಟಕಗಳಿಗೆ ಯಾವುದೇ ರೀತಿಯ ಪರವಾನಗಿಗಳನ್ನು ನೀಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಪರವಾನಗಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

VISTARANEWS.COM


on

By

FSSAI Warning
Koo

ವಾಣಿಜ್ಯ ಉದ್ದೇಶಗಳಿಗಾಗಿ ಮನುಷ್ಯರ ಎದೆಹಾಲು (Breast Milk ) ಮತ್ತು ಅದರಿಂದ ಪಡೆದ ಉತ್ಪನ್ನಗಳ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಆಹಾರ ವ್ಯಾಪಾರ ನಿರ್ವಾಹಕರಿಗೆ (FBO) ಎಚ್ಚರಿಕೆಯನ್ನು (FSSAI Warning) ನೀಡಿದೆ. 2006ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (FSS) ಕಾಯಿದೆ ಮತ್ತು ಅದಕ್ಕೆ ಸಂಬಂಧಿಸಿದ ನಿಯಮಗಳ ಅಡಿಯಲ್ಲಿ ಇಂತಹ ಉತ್ಪನ್ನಗಳ ಸಂಸ್ಕರಣೆ ಮತ್ತು ಮಾರಾಟಕ್ಕೆ ಅನುಮತಿ ನೀಡಲಾಗಿಲ್ಲ ಎಂದು ಆಹಾರ ಸುರಕ್ಷತಾ ನಿಯಂತ್ರಕ ಶುಕ್ರವಾರ ನೀಡಿದ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಪರವಾನಗಿ ನೀಡುವುದಿಲ್ಲ

ಮಾನವ ಹಾಲು ಮತ್ತು ಅದರ ಉತ್ಪನ್ನಗಳ ಬಗ್ಗೆ ವಾಣಿಜ್ಯ ಉದ್ದೇಶಗಳಿಗಾಗಿ ವಿವಿಧ ಸಮಾಜದ ನಾಗರಿಕರನ್ನು ಸಂಪರ್ಕಿಸಲಾಗಿದೆ ಎನ್ನುವ ಕುರಿತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ ಮಾಹಿತಿ ಬಂದಿದ್ದು, ಎಫ್‌ಎಸ್‌ಎಸ್‌ಎಐ ಯು ಇಂತಹ ಯಾವುದೇ ಅಭ್ಯಾಸಗಳಲ್ಲಿ ತೊಡಗಿರುವ ಘಟಕಗಳಿಗೆ ಯಾವುದೇ ರೀತಿಯ ಪರವಾನಗಿಗಳನ್ನು ನೀಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಪರವಾನಗಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಮಾನವ ಹಾಲು ಅಥವಾ ಅದರ ಉತ್ಪನ್ನಗಳ ವಾಣಿಜ್ಯೀಕರಣದಲ್ಲಿ ತೊಡಗಿರುವ ಯಾವುದೇ ಆಹಾರ ವ್ಯಾಪಾರ ನಿರ್ವಾಹಕರು ಭಾರಿ ದಂಡವನ್ನು ತೆರಬೇಕಾಗುವುದು ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಎಚ್ಚರಿಸಿದೆ.

ಎಚ್ಚರಿಕೆ ಏನು?

ಮಾನವನ ಎದೆ ಹಾಲು ಮಾರಾಟಕ್ಕೆ ಸಂಬಂಧಿಸಿ ಯಾವುದೇ ಉಲ್ಲಂಘನೆಯ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಎಚ್ಚರಿಕೆಯನ್ನು ನೀಡಿದೆ. ಮಾನವ ಹಾಲು ಮತ್ತು ಅದರ ಉತ್ಪನ್ನಗಳ ವಾಣಿಜ್ಯೀಕರಣಕ್ಕೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಸಲಹೆ ನೀಡಲಾಗಿದೆ.

ಇದರ ಯಾವುದೇ ಉಲ್ಲಂಘನೆಯನ್ನು ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ 2006 ಮತ್ತು ಅದರ ಅಡಿಯಲ್ಲಿ ಮಾಡಿದ ನಿಯಮಗಳಿಗೆ ಅನುಸಾರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದೆ.

ಇದನ್ನೂ ಓದಿ: Egg Benefits: ನೀವು ಮೊಟ್ಟೆ ಪ್ರಿಯರೆ? ಹಾಗಾದರೆ ಎಷ್ಟು ಮೊಟ್ಟೆ ತಿನ್ನಬಹುದು ಎಂಬುದೂ ಅರಿವಿರಲಿ!

ಪ್ರೊಟೀನ್‌ ಪುಡಿಗಳಿಂದ ದೂರವಿರಿ: ಎಚ್ಚರಿಕೆ

ಬಹಳಷ್ಟು ಮಂದಿಗೆ ನಿತ್ಯವೂ ಪ್ರೊಟೀನ್‌ ಪುಡಿಗಳಿಂದ ಮಾಡಿದ ಶೇಕ್‌ಗಳನ್ನು ಕುಡಿಯುವ ಅಭ್ಯಾಸವಿರಬಹುದು. ಜಿಮ್‌ಗೆ ಹೋಗುವ, ವ್ಯಾಯಾಮ ಮಾಡುವ, ತೂಕ ಇಳಿಸುವ ಪ್ರಯತ್ನದಲ್ಲಿರುವ ಎಲ್ಲ ಮಂದಿಯೂ ಈಗ ಯಾವ ವೈದ್ಯರ ಸಲಹೆಯನ್ನೂ ಕೇಳದೆ ನೇರವಾಗಿ ಪ್ರೊಟೀನ್‌ ಪೌಡರ್‌ಗಳು ಸಿಗುವ ಔಟ್‌ಲೆಟ್‌ಗಳಿಂದ ಪೌಡರನ್ನು ಕೊಂಡು ತಂದು ಸೇವಿಸಲು ಆರಂಭಿಸುತ್ತಾರೆ.

ಮಾಂಸಖಂಡಗಳ ಬಲವರ್ಧನೆಗೆ, ಪ್ರೊಟೀನ್‌ ಡಯಟ್‌ನಲ್ಲಿರುವ ಮಂದಿ, ಅಥ್ಲೀಟ್‌ಗಳು ಸೇರಿದಂತೆ ಎಲ್ಲರೂ ಇತ್ತೀಚೆಗೆ ಪ್ರೊಟೀನ್‌ ಪೌಡರ್‌ ಶೇಕ್‌ ಮಾಡಿ ಕುಡಿಯುವ ಟ್ರೆಂಡ್‌ ಹೆಚ್ಚಾಗುತ್ತಿದೆ. ಇದು ನಿಜಕ್ಕೂ ಆರೋಗ್ಯಕ್ಕೆ ಒಳ್ಳೆಯದನ್ನೇ ಮಾಡುತ್ತದೆಯೋ ಅಥವಾ ಇದರಿಂದ ಅಡ್ಡ ಪರಿಣಾಮಗಳೇನಾದರೂ ಇವೆಯೇ ಎಂಬ ಯೋಚನೆಯನ್ನೂ ಮಾಡುವುದಿಲ್ಲ.

ಇತ್ತೀಚೆಗೆ ಹೆಚ್ಚುತ್ತಿರುವ ಈ ಟ್ರೆಂಡ್‌ಗೆ ಉತ್ತರವಾಗಿ ಇಂಡಿಯನ್‌ ಕೌನ್ಸಿಲ್‌ ಆಫ್‌ ಮೆಡಿಕಲ್‌ ರೀಸರ್ಚ್‌- ನ್ಯಾಷನಲ್‌ ಆಫ್‌ ನ್ಯೂಟ್ರಿಷನ್‌ ಇದೀಗ ಮಾರ್ಗಸೂಚಿಗಳನ್ನೂ ಬಿಡುಗಡೆ ಮಾಡಿದ್ದು ಪ್ರೊಟೀನ್‌ ಪೌಡರುಗಳ ಕುರಿತಾದ ಆಘಾತಕಾರಿ ಸತ್ಯವನ್ನು ವಿವರಿಸಿದೆ. ಇದರ ಅಧಿಕ ಸೇವನೆಯಿಂದ ಯಾವೆಲ್ಲ ಪರಿಣಾಮಗಳನ್ನು ಎದುರಿಸಬೇಕಾದೀತು ಎಂಬ ಎಚ್ಚರವನ್ನೂ ನೀಡಿದೆ.

ಅಥ್ಲೀಟ್‌ಗಳೂ ಸೇರಿದಂತೆ, ಕ್ರೀಡಾಳುಗಳಿಗೆ ನಿತ್ಯವೂ ಆಹಾರ ಮೂಲಗಳಿಂದಲೇ ಪ್ರೊಟೀನ್‌ ನಮ್ಮ ದೇಹಕ್ಕೆ ಸೇರುವಂತೆ ಮಾಡಬೇಕು ಎಂಬ ನಿಯಮಾವಳಿ ಇದೆ. ಸಪ್ಲಿಮೆಂಟ್‌ಗಳ ಮೂಲಕ ಪ್ರೊಟೀನ್‌ ಅಥವಾ ಪೋಷಕಾಂಶಗಳು ದೇಹಕ್ಕೆ ಸೇರುವಂತೆ ಮಾಡುವುದು ಉತ್ತಮ ವಿಧಾನವಲ್ಲ ಎಂದು ಹೇಳಿದೆ.

ನಿತ್ಯವೂ ಹೀಗೆ ಪ್ರೊಟೀನ್‌ ಪುಡಿಗಳು ಹಾಗೂ ಇತರ ಸಪ್ಲಿಮೆಂಟ್‌ಗಳನ್ನು ಹೆಚ್ಚು ಪ್ರಮಾಣದಲ್ಲಿ ಸೇವಿಸುತ್ತಲೇ ಇದ್ದರೆ ಎಲುಬಿನಲ್ಲಿ ಖನಿಜಾಂಶಗಳ ನಷ್ಟ ಸೇರಿದಂತೆ ಕಿಡ್ನಿಯ ಸಮಸ್ಯೆಗಳು ಬರುವ ಸಾಧ್ಯತೆಗಳು ಹೆಚ್ಚು ಎಂದು ಎಚ್ಚರಿಕೆ ನೀಡಿದೆ.

Continue Reading
Advertisement
Vijayapura news
ಪ್ರಮುಖ ಸುದ್ದಿ4 hours ago

Vijayapura News : ಪ್ರೀತಿಸಿದವಳನ್ನೇ ಮದುವೆಯಾಗಲು ಯುವಕನ ಹಠ; ಪರಸ್ಪರ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದರು!

Prajwal Revanna Case
ಪ್ರಮುಖ ಸುದ್ದಿ5 hours ago

Prajwal Revanna Case : ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಚೇತನ್​ಗೆ ಎಸ್ಐಟಿ ನೋಟಿಸ್

Yuvraj Singh
ಕ್ರೀಡೆ5 hours ago

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Kavya Maran
ಪ್ರಮುಖ ಸುದ್ದಿ6 hours ago

Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

Viral Video
ದೇಶ6 hours ago

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

Samsung Galaxy F55 5G Smartphone Released With Exciting Classy Veegan Leather Design
ದೇಶ6 hours ago

Samsung Galaxy: ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಫ್ 55 5ಜಿ ಸ್ಮಾರ್ಟ್‌ಫೋನ್ ರಿಲೀಸ್‌; ಏನಿದರ ವಿಶೇಷತೆ?

Kannada New Movie
ಕರ್ನಾಟಕ6 hours ago

Kannada New Movie: ʼಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿʼ ಚಿತ್ರದ ಅನಿಮೇಷನ್‌ ಟೀಸರ್‌ ರಿಲೀಸ್‌

Golden Star Ganesh Krishnam Pranaya Sakhi movie first song release in Mysore
ಕರ್ನಾಟಕ6 hours ago

Golden Star Ganesh: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ʼಕೃಷ್ಣಂ ಪ್ರಣಯ ಸಖಿʼ

Mandya News
ಪ್ರಮುಖ ಸುದ್ದಿ6 hours ago

Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

11th Annual Mahotsav of Sri Annapurneswari Temple in Belagavi from 29th May
ಬೆಳಗಾವಿ6 hours ago

Belagavi News: ಬೆಳಗಾವಿಯಲ್ಲಿ ಮೇ 29ರಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ11 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌