Health Tips | ಮೆದುಳಿಗೆ ಮರೆವು ಆವರಿಸದಿರಲು ಬೇಕು ವಿಟಮಿನ್‌ ಬಿ12 - Vistara News

ಆರೋಗ್ಯ

Health Tips | ಮೆದುಳಿಗೆ ಮರೆವು ಆವರಿಸದಿರಲು ಬೇಕು ವಿಟಮಿನ್‌ ಬಿ12

ವಿಟಮಿನ್‌ ಬಿ12 ಪೋಷಕಾಂಶ ಕಡಿಮೆಯಾದರೆ ವ್ಯಕ್ತಿ ಖಿನ್ನತೆಗೆ ಜಾರುವ ಸಾಧ್ಯತೆ, ಉಳಿದವರಿಗೆ ಹೋಲಿಸಿದಲ್ಲಿ, ದುಪ್ಪಟ್ಟು ಎಂದು ಹೇಳಲಾಗುತ್ತದೆ. ಹೀಗಾಗಿ ನಿಮ್ಮ ಆಹಾರದಲ್ಲಿ ವಿಟಮಿನ್‌ b12 ಸಾಕಷ್ಟಿರಲಿ.

VISTARANEWS.COM


on

vitamin
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅತ್ಯಂತ ಕ್ಲಿಷ್ಟವಾದ ಹತ್ತು-ಹಲವಾರು ಕ್ರಿಯೆಗಳನ್ನು ನಡೆಸುವ ಮಾನವ ದೇಹಕ್ಕೆ ವಿವಿಧ ರೀತಿಯ ಪೋಷಕಾಂಶಗಳು ಒದಗಬೇಕು. ಆಗಷ್ಟೇ ಶರೀರ ಆರೋಗ್ಯಪೂರ್ಣವಾಗಿರಲು ಸಾಧ್ಯ. ದೇಹಕ್ಕೆ ಅಗತ್ಯವಾದ ಪೋಷಕಾಂಶಗಳ ಬಗ್ಗೆ ನಮಗೆ ಒಂದಿಷ್ಟು ಅರಿವಂತೂ ಇದೆ. ಆದರೆ ಕೆಲವು ಪೋಷಕಾಂಶಗಳು ಅತ್ಯಗತ್ಯ ಎಂದಾದರೂ ನಮ್ಮ ಗಮನದಲ್ಲಿ ಇರುವುದೇ ಇಲ್ಲ. ತಜ್ಞರ ಪ್ರಕಾರ, ವಿಟಮಿನ್‌ ಬಿ೧೨ ಅಂಥದ್ದೊಂದು ಅಗತ್ಯವಾದ, ಆದರೆ ನಮ್ಮ ನೆನಪಿಗೆ ಬಾರದ ಪೋಷಕ. ವಿಟಮಿನ್‌ ಬಿ೧೨ ನಮಗೇಕೆ ಬೇಕು ಮತ್ತು ಅದನ್ನು ಯಾವ ಆಹಾರಗಳ ಮೂಲಕ ಪಡೆಯಬಹುದು ಎಂಬ ಬಗ್ಗೆ ಒಂದಿಷ್ಟು ಮಾಹಿತಿಯಿದು.

ಕಣ್ಣಿನ ಆರೋಗ್ಯಕ್ಕೆ: ಅಗತ್ಯವಾಗಿ ಬೇಕು. ಕಣ್ಣಿನ ಮೆಕ್ಯುಲ ಹಾಳಾಗದೆ, ದೃಷ್ಟಿ ಪರಿಪೂರ್ಣವಾಗಿ ಇರಬೇಕೆಂದರೆ ವಿಟಮಿನ್‌ ಬಿ೧೨ ನಮ್ಮ ಆಹಾರದಲ್ಲಿ ಇರಲೇಬೇಕು. ಸಾಮಾನ್ಯವಾಗಿ ವೃದ್ಧಾಪ್ಯದಲ್ಲಿ ತಲೆದೋರುವ ಈ ಬಗೆಯ ದೃಷ್ಟಿದೋಷ, ವಿಟಮಿನ್‌ ಬಿ೧೨ ಕೊರತೆಯಿಂದ ಕಡಿಮೆ ವಯಸ್ಸಿನವರಿಗೂ ಬಾಧಿಸುತ್ತದೆ.

ಖಿನ್ನತೆ ದೂರವಿಡಲು: ಸಾಕಷ್ಟು ಪ್ರಮಾಣದಲ್ಲಿ ವಿಟಮಿನ್‌ ಬಿ೧೨ ನಮ್ಮ ಆಹಾರದ ಭಾಗವಾಗಿರಬೇಕು. ನಮ್ಮನ್ನು ಸಂತೋಷದಿಂದಿಡಲು ಅಗತ್ಯವಾದ ಸೆರೋಟೋನಿನ್‌ ಚೋದಕಗಳು ಬಿಡುಗಡೆ ಆಗುವಲ್ಲಿ ವಿಟಮಿನ್‌ ಬಿ೧೨ ಪಾತ್ರ ಗಣನೀಯ. ಈ ಪೋಷಕತತ್ವ ಕಡಿಮೆ ಆದವರು ಖಿನ್ನತೆಗೆ ಜಾರುವ ಸಾಧ್ಯತೆ, ಉಳಿದವರಿಗೆ ಹೋಲಿಸಿದಲ್ಲಿ, ದುಪ್ಪಟ್ಟು ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ವಿಜ್ಞಾನಿಗಳಿಂದ ನ್ಯಾನೋ ಹಚ್ಚೆ ಸಂಶೋಧನೆ; ಆರೋಗ್ಯ ಸಮಸ್ಯೆಗಳಿಂದ ರಕ್ಷೆ?

ಮೆದುಳಿನ ಆರೋಗ್ಯಕ್ಕೆ: ಮಾತ್ರವಲ್ಲ, ನಮ್ಮ ನರಗಳ ಆರೋಗ್ಯಕ್ಕೂ ವಿಟಮಿನ್‌ ಬಿ೧೨ ಅತಿ ಮುಖ್ಯ. ಮೆದುಳಿನ ನ್ಯೂರಾನ್‌ಗಳು ಸಾಯುತ್ತಾ ಬರುವ ಅಟ್ರೋಫಿಯಂಥ ಅವಸ್ಥೆಗೆ ತುತ್ತಾಗಬಾರದೆಂದರೆ ವಿಟಮಿನ್‌ ಬಿ೧೨ ಸೇವನೆ ಸಾಕಷ್ಟಿರಬೇಕು. ಇರುವುದೆಲ್ಲಾ ಮರೆವಂಥ ಡಿಮೆನ್ಶಿಯದಂಥ ಖಾಯಿಲೆ ದೂರವಿಡುವಲ್ಲಿ ಈ ಪೋಷಕಾಂಶದ ಪಾತ್ರ ಪ್ರಮುಖ. ಮೆದುಳಿಗೆ ಅಗತ್ಯ ಶಕ್ತಿಯನ್ನೂ ಇದು ಪೂರೈಸುವುದರಿಂದ, ನಮ್ಮ ಬುದ್ಧಿಯನ್ನೂ ಚುರುಕಾಗಿಸುವಲ್ಲಿ ಸಹಾಯ ಮಾಡುತ್ತದೆ.

ಯಾವೆಲ್ಲಾ ಆಹಾರಗಳಲ್ಲಿ ಇದು ಲಭ್ಯ?: ಹಲವು ರೀತಿಯ ಸಸ್ಯ ಮತ್ತು ಪ್ರಾಣಿ ಜನ್ಯ ಆಹಾರಗಳಿಂದ ಈ ಪೋಷಕಾಂಶವನ್ನು ಪಡೆಯಲು ಸಾಧ್ಯವಿದೆ

ಅಂಗಾಂಗಗಳಲ್ಲಿ: ಅಂದರೆ ಯಕೃತ್ತು, ಕಿಡ್ನಿಯಂಥ ಅಂಗಾಂಗಗಳ ಮಾಂಸದಲ್ಲಿ ವಿಟಮಿನ್‌ ಬಿ೧೨ ಹೇರಳವಾಗಿದೆ. ಇದೊಂದೇ ಅಲ್ಲ, ಹಲವು ರೀತಿಯ ಪೋಷಕಾಂಶಗಳ ಆಗರ ಈ ಮಾಂಸ ಎನ್ನುತ್ತಾರೆ ತಜ್ಞರು.

ಡೈರಿ ಉತ್ಪನ್ನಗಳಲ್ಲಿ: ಹಾಲು, ಮೊಸರು, ಬೆಣ್ಣೆಯಂಥ ಯಾವುದೇ ಡೈರಿಯ ಉತ್ಪನ್ನಗಳಲ್ಲಿ ಈ ಅಂಶ ಲಭ್ಯವಿದೆ. ಹಾಗಾಗಿ ಸಸ್ಯಾಹಾರಿಗಳು ವಿಟಮಿನ್‌ ಬಿ೧೨ ಕೊರತೆಯನ್ನು ಅನುಭವಿಸುವ ಅಗತ್ಯವೇ ಇಲ್ಲ.

ಮೊಟ್ಟೆ: ವಿಟಮಿನ್‌ ಬಿ೧೨ ಮಾತ್ರವೇ ಅಲ್ಲ, ಹಲವು ರೀತಿಯ ಪೋಷಕಾಂಶಗಳನ್ನು ಪೂರೈಸುವ, ಪ್ರಚಲಿತವಿರುವ ಮತ್ತು ಕೈಗೆಟುಕುವ ಆಹಾರವಿದು.

ಇದನ್ನೂ ಓದಿ: Monsoon diet | ಮಳೆಗಾಲದಲ್ಲಿ ಈ ತರಕಾರಿಗಳನ್ನು ತ್ಯಜಿಸಿದರೆ ಆರೋಗ್ಯ

ಮೀನು: ಮತ್ಸಾಹಾರಿಗಳಂತೂ ವಿಟಮಿನ್‌ ಬಿ೧೨ ಕೊರತೆಯನ್ನು ಸುಲಭದಲ್ಲಿ ನೀಗಿಸಿಕೊಳ್ಳಬಹುದು. ಟ್ಯೂನಾ, ಸಾಲ್ಮನ್‌ ರೀತಿಯ ಮೀನುಗಳಲ್ಲಿ ಪ್ರೊಟೀನ್.‌ ಫಾಸ್ಫರಸ್‌, ವಿಟಮಿನ್‌ ಎ, ವಿಟಮಿನ್‌ ಬಿ೩ ಯಂಥ ಬಗೆಬಗೆಯ ಪೋಷಕಾಂಶಗಳು ಲಭ್ಯವಿವೆ.

ಫಾರ್ಟಿಫೈಡ್‌ ಸೀರಿಯಲ್‌: ಅಂದರೆ, ಪ್ರಾಕೃತಿಕವಾಗಿ ಇಲ್ಲದ ಫೋಷಕಗಳನ್ನು ಕೃತಕವಾಗಿ ಸೇರಿಸಿ ತಯಾರಿಸಿದ ಸೀರಿಯಲ್‌. ಕೆಲವು ರೀತಿಯ ಆಹಾರಕ್ಕೆ ಅಲರ್ಜಿ ಇರುವವರಿಗೂ ಇಂಥ ಆಯ್ಕೆಗಳು ಲಭ್ಯವಿದೆ. ಉಳಿದಂತೆ, ಪೋಷಕಾಂಶಗಳು ನೈಸರ್ಗಿಕವಾಗಿಯೇ ದೇಹಕ್ಕೆ ದೊರಕಿದರೆ ಉತ್ತಮ.

ವಿಟಮಿನ್‌ ಬಿ೧೨ ಕೊರತೆ ಇದೆಯೆನಿಸಿದರೆ ವೈದ್ಯರನ್ನು ಕಾಣುವುದು ಮೊದಲ ಆಯ್ಕೆ. ನಮ್ಮ ದೇಹಕ್ಕೆ ಸೂಕ್ತವೆನಿಸುವ ಚಿಕಿತ್ಸೆಯನ್ನು ಅವರಿಂದಲೇ ಪಡೆಯುವುದು ಸರಿಯಾದ ಮಾರ್ಗ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

Covishield Vaccine: ಕೋವಿಶೀಲ್ಡ್ ಲಸಿಕೆ ಅಡ್ಡಪಾರಿಣಾಮಗಳ ಸಂಬಂಧ ಸೂಚನಾ ಪತ್ರ ಹೊರಡಿಸಿ ಎಡವಟ್ಟು ಮಾಡಿಕೊಂಡಿದ್ದ ಚಿಕ್ಕಬಳ್ಳಾಪುರದ ಹಲವು ಕಾಲೇಜು ಆಡಳಿತ ಮಂಡಳಿಗಳ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.

VISTARANEWS.COM


on

Covishield Vaccine
Koo

ಚಿಕ್ಕಬಳ್ಳಾಪುರ: ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ದಿಢೀರ್‌ ಹೃದಯಾಘಾತ, ರಕ್ತ ಹೆಪ್ಪುಗಟ್ಟುವುದು ಸೇರಿ ಹಲವು ರೀತಿಯ ಅಡ್ಡಪರಿಣಾಮಗಳು ಉಂಟಾಗಲಿವೆ ಎಂಬ ಸುದ್ದಿಗಳು ವರದಿಯಾದ ಹಿನ್ನೆಲೆಯಲ್ಲಿ ಲಸಿಕೆ ಪಡೆದವರಲ್ಲಿ ಆತಂಕ ಮೂಡಿದೆ. ಈ ನಡುವೆ ಕೋವಿಶೀಲ್ಡ್ ಲಸಿಕೆ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ ಹಾಗೂ ತಂಪು ಪಾನೀಯ ಸೇವನೆ ಮಾಡದಂತೆ ಹಲವು ಕಾಲೇಜು ಆಡಳಿತ ಮಂಡಳಿಗಳು ಸೂಚನಾ ಪತ್ರದ ಮೂಲಕ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದವು. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ, ತಪ್ಪು ಮಾಹಿತಿ ನೀಡಿದ ನಗರದ ವಿವಿಧ ಕಾಲೇಜುಗಳ ವಿರುದ್ಧ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದೆ.

ನಗರದ ಸಿದ್ದರಾಮಯ್ಯ ಲಾ ಕಾಲೇಜು ಹಾಗೂ ಜಚನಿ ಪ್ರಥಮ ದರ್ಜೆ ಕಾಲೇಜುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳಿಂದ ನೋಟಿಸ್ ನೀಡಲಾಗಿದೆ. ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ದಿಢೀರ್ ಹೃದಯಾಘಾತ, ರಕ್ತ ಹೆಪ್ಪುಗಟ್ಟುವ ಸಾಧ್ಯತೆ ಇದೆ. ಹೀಗಾಗಿ ಆರೋಗ್ಯ ಇಲಾಖೆ ಸೂಚನೆ ಪ್ರಕಾರ ಈ ಲಸಿಕೆ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ ಹಾಗೂ ತಂಪು ಪಾನೀಯಗಳು ಸೇವನೆ ಮಾಡಬಾರದು ಎಂದು ಕಾಲೇಜು ಆಡಳಿತ ಮಂಡಳಿಗಳು ಸೂಚನಾ ಪತ್ರ ಹೊರಡಿಸಿದ್ದವು.

ವಾಟ್ಸ್‌ಆ್ಯಪ್‌ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಕಾಲೇಜುಗಳ ಸೂಚನಾ ಪತ್ರಗಳು ವೈರಲ್‌ ಆಗಿದ್ದರಿಂದ ತಕ್ಷಣ ಎಚ್ಚೆತ್ತ ಜಿಲ್ಲಾಡಳಿತ, ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿದ ಹಿನ್ನೆಲೆ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ನೇತೃತ್ವದ ಡಿಜಾಸ್ಟರ್ ಮ್ಯಾನೇಜ್ಮೆಂಟ್ ಕಮಿಟಿ ಮುಂದಾಗಿದೆ. ಸೂಚನಾ ಪತ್ರಗಳ ಬಗ್ಗೆ ಸೂಕ್ತ ಸ್ಪಷ್ಟನೆ ನೀಡುವಂತೆ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿ | Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

ಆರೋಗ್ಯ ಇಲಾಖೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ

ಕೋವಿಶೀಲ್ಡ್‌ ಲಸಿಕೆ ಪಡೆದವರು ಫ್ರಿಡ್ಜ್‌ನಲ್ಲಿಟ್ಟ ನೀರು, ತಂಪು ಪಾನೀಯಗಳು ಹಾಗೂ ಐಸ್‌ಕ್ರೀಂ ಸೇವಿಸಬಾರದು ಎಂಬ ಕಾಲೇಜು ಆಡಳಿತ ಮಂಡಳಿಗಳ ಸೂಚನಾ ಪತ್ರ ವೈರಲ್‌ ಆಗಿದ್ದರಿಂದ ಸಾರ್ವಜನಿಕರಲ್ಲಿ ಗೊಂದಲ ಮೂಡಿತ್ತು. ಹೀಗಾಗಿ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮಗಳ ಬಗ್ಗೆ ಇಲಾಖೆಯಿಂದ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ತಿಳಿಸಿದೆ.

ರಕ್ಷಿತ್‌ ಗಣಪತಿ ಎಂಬುವವರು, ಎಕ್ಸ್‌ ಖಾತೆಯಲ್ಲಿ ಚಿಕ್ಕಬಳ್ಳಾಪುರದ ಸಿದ್ದರಾಮಯ್ಯ ಲಾ ಕಾಲೇಜಿನ ಸೂಚನಾ ಪತ್ರ ಹಾಕಿ, “ಇದು ನಿಜವೇ? ಈ ಪತ್ರ ನೆನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ, ದಯವಿಟ್ಟು ಸ್ಪಷ್ಟನೆ ನೀಡಿ ಎಂದು ಕೋರಿ, ಸಿಎಂ ಸಿದ್ದರಾಮಯ್ಯ, ಆರೋಗ್ಯ ಇಲಾಖೆಗೆ ಟ್ಯಾಗ್‌ ಮಾಡಿದ್ದರು. ಇದಕ್ಕೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

Continue Reading

ಆರೋಗ್ಯ

Health Tips Kannada: ಕೊಲೆಸ್ಟ್ರಾಲ್‌ ತಗ್ಗಿಸಲು ಈ ಬೆಳಗಿನ ಪೇಯಗಳಿಂದ ಸಾಧ್ಯ! ಪ್ರಯತ್ನಿಸಿ

ಆಹಾರದ ಬದಲಾವಣೆಗಳಿಂದ ಕೊಲೆಸ್ಟ್ರಾಲ್‌ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ ದೋಷವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ ಎನ್ನುತ್ತಾರೆ ಸ್ವಾಸ್ಥ್ಯ ಪರಿಣಿತರು. ಎಂಥಾ ಆಹಾರಗಳವು? ಈ (Health Tips Kannada) ಲೇಖನ ಓದಿ.

VISTARANEWS.COM


on

Health Tips Kannada
Koo

ಜೀವನಶೈಲಿಯ ದೋಷಗಳಿಂದಾಗಿ ಹಲವಾರು ರೋಗಗಳು ನಮಗೆ ಗಂಟಿಕ್ಕಿಕೊಳ್ಳುತ್ತಿವೆ. ಆಹಾರ ಕ್ರಮದಲ್ಲಿನ ದೋಷ ಮತ್ತು ವ್ಯಾಯಾಮ ಇಲ್ಲದಿರುವಂಥ ಕಾರಣದಿಂದ ದೇಹದಲ್ಲಿ ಜಮೆಯಾಗುವ ಕೊಬ್ಬು ಹೆಚ್ಚುತ್ತಿದೆ. ನಮ್ಮ ಶರೀರ ಚೆನ್ನಾಗಿ ಕೆಲಸ ಮಾಡಲು ಸಣ್ಣ ಪ್ರಮಾಣದಲ್ಲಿ ಕೊಲೆಸ್ಟ್ರಾಲ್‌ ಅಗತ್ಯವಿದೆ. ಅದು ನಮಗೆ ನಿತ್ಯದ ಆಹಾರದಿಂದಲೇ ದೊರೆಯುತ್ತದೆ. ಆದರೆ ಅತಿಯಾದ ಕೊಬ್ಬಿನ ಆಹಾರದ ಸೇವನೆ, ಸಂಸ್ಕರಿತ ಸಕ್ಕರೆಯ ಮೇಲಿನ ನಮ್ಮ ಪ್ರೀತಿಯಿಂದಾಗಿ ಶರೀರದಲ್ಲಿ ಕೊಲೆಸ್ಟ್ರಾಲ್‌ ಪ್ರಮಾಣ ಹೆಚ್ಚುತ್ತಿದೆ. ಇದರಿಂದ ಹೃದಯದ ತೊಂದರೆ ಮತ್ತು ಪಾರ್ಶ್ವವಾಯುವಿನಂಥ ಮಾರಣಾಂತಿಕ ಸಮಸ್ಯೆಗಳು ಗಂಟಿಕ್ಕಿಕೊಳ್ಳಬಹುದು. ಇದಕ್ಕಾಗಿ ವೈದ್ಯರು ಸೂಚಿಸುವ ಔಷಧಿ ಮತ್ತು ವ್ಯಾಯಾಮ ಕಡ್ಡಾಯವಾಗಿ ಬೇಕಾಗುತ್ತದೆ. ಇದಲ್ಲದೆ, ಇನ್ನೂ ಕೆಲವು ಆಹಾರದ ಬದಲಾವಣೆಗಳಿಂದ ಈ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಬಹುದು. ನಾರು ಹೆಚ್ಚಿರುವ ಆಹಾರಗಳು, ನೈಸರ್ಗಿಕವಾಗಿ ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಗುಣವುಳ್ಳವು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಿರುವ ಆಹಾರಗಳಿಂದ ಈ ದೋಷವನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ ಎನ್ನುತ್ತಾರೆ ಸ್ವಾಸ್ಥ್ಯ ಪರಿಣಿತರು. ಬೆಳಗಿನ ಖಾಲಿ ಹೊಟ್ಟೆಯಲ್ಲಿ ನಾವು ದೇಹಕ್ಕೆ ನೀಡುವಂಥ ಆಹಾರಗಳು ಹಲವು ರೀತಿಯಲ್ಲಿ ಮಹತ್ವವನ್ನು ಪಡೆದಿವೆ. ಅದರಲ್ಲೂ ಬೆಳಗಿನ ಪೇಯಗಳು ಕೊಲೆಸ್ಟ್ರಾಲ್‌ ಕಡಿತ ಮಾಡುವುದಕ್ಕೆ ಸೂಕ್ತವಾದಂಥವು. ಎಂಥ ಪೇಯಗಳನ್ನು ಬೆಳಗಿನ ಹೊತ್ತು ದೇಹಕ್ಕೆ ನೀಡಿದರೆ (Health Tips Kannada) ಸೂಕ್ತ?

Green tea

ಗ್ರೀನ್‌ ಟೀ

ಹಲವು ರೀತಿಯ ಉತ್ತಮ ಪಾಲಿಫೆನಾಲ್‌ಗಳನ್ನು ಹೊಂದಿರುವ ಗ್ರೀನ್‌ ಟೀ, ಉತ್ಕರ್ಷಣ ನಿರೋಧಕಗಳ ಖಜಾನೆಯಂತಿದೆ. ಅದರಲ್ಲೂ ಗ್ರೀನ್‌ ಟೀದಲ್ಲಿರುವ ಕೆಟಿಚಿನ್‌ ಅಂಶಗಳು ಕೊಲೆಸ್ಟ್ರಾಲ್‌ಗಳ ಜೊತೆ ಕೆಲಸ ಮಾಡುತ್ತವೆ. ಇದರಿಂದ ಆಹಾರದಲ್ಲಿನ ಕೊಲೆಸ್ಟ್ರಾಲ್‌ ಅಂಶವನ್ನು ದೇಹ ಹೀರಿಕೊಳ್ಳುವುದನ್ನು ಕಡಿಮೆ ಮಾಡಲು ಸಾಧ್ಯವಿದೆ. ಹಾಗಾಗಿ ನಿಯಮಿತವಾಗಿ ಗ್ರೀನ್‌ ಟೀ ಕುಡಿಯುವುದರಿಂದ ದೇಹದಲ್ಲಿ ಎಲ್‌ಡಿಎಲ್‌ ಮತ್ತು ಒಟ್ಟಾರೆ ಕೊಲೆಸ್ಟ್ರಾಲ್‌ಗಳನ್ನು ಕಡಿಮೆ ಮಾಡಲು ಸಾಧ್ಯವಿದೆ.

Chia seeds and soy milk

ಚಿಯಾ ಬೀಜ ಮತ್ತು ಸೋಯ್‌ ಹಾಲು

ಈ ಮಿಶ್ರಣ ಕೊಲೆಸ್ಟ್ರಾಲ್‌ ನಿರ್ವಹಣೆಯಲ್ಲಿ ಸಾಕಷ್ಟು ದಕ್ಷತೆಯನ್ನು ಪ್ರದರ್ಶಿಸಿದೆ. ನಾರು, ಪ್ರೊಟೀನ್‌ ಮತ್ತು ಒಮೇಗಾ ೩ ಕೊಬ್ಬಿನಾಮ್ಲಗಳ ಜೊತೆಗೆ ಹಲವು ಸೂಕ್ಷ್ಮ ಸತ್ವಗಳು ಇದರಿಂದ ದೇಹ ಸೇರುತ್ತವೆ. ದೇಹದಲ್ಲಿ ಎಚ್‌ಡಿಎಲ್‌ ಅಥವಾ ಉತ್ತಮ ಕೊಬ್ಬನ್ನು ಹೆಚ್ಚಿಸುವ ಸಾಧ್ಯತೆ ಚಿಯಾ ಬೀಜಗಳಿಗಿದೆ. ಎಲ್‌ಡಿಎಲ್‌ ಅಥವಾ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವ ಕ್ಷಮತೆ ಸೋಯಾ ಹಾಲಿಗಿದೆ. ಹಾಗಾಗಿ ಈ ಮಿಶ್ರಣವನ್ನೂ ಬೆಳಗಿನ ಪೇಯವಾಗಿ ಉಪಯೋಗಿಸಬಹುದು.

Beetroot and carrot juice

ಬೀಟ್‌ರೂಟ್‌ ಮತ್ತು ಕ್ಯಾರೆಟ್‌ ರಸ

ಹೆಚ್ಚಿನ ನೈಟ್ರೇಟ್‌ ಅಂಶವಿರುವ ಬೀಟ್‌ರೂಟ್‌ ರಸ ಕೊಲೆಸ್ಟ್ರಾಲ್‌ ತಗ್ಗಿಸುವ ಸಾಧ್ಯತೆಯನ್ನು ಹೊಂದಿದೆ. ಇನ್ನು, ಬೀಟಾ ಕ್ಯಾರೋಟಿನ್‌ನಂಥ ಕೆರೋಟಿನಾಯ್ಡ್‌ಗಳನ್ನು ಹೊಂದಿರುವ ಕ್ಯಾರೆಟ್‌ ಸಹ ಕೊಲೆಸ್ಟ್ರಾಲ್‌ ಹೀರಿಕೊಳ್ಳುವುದನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಈ ಬಗ್ಗೆ ಹಲವು ಅಧ್ಯಯನಗಳು ನಡೆಯುತ್ತಿದ್ದು, ಪೂರಕ ಪರಿಣಾಮವನ್ನು ದಾಖಲಿಸಿವೆ.

Ginger, lemon juice

ಶುಂಠಿ, ನಿಂಬೆ ರಸ

ಬೆಳಗಿನ ಹೊತ್ತು ಬೆಚ್ಚಗಿನ ನೀರಿಗೆ ಕೆಲವು ಹನಿ ನಿಂಬೆ ರಸ ಮತ್ತು ಅರ್ಧ ಚಮಚ ಶುಂಠಿ ರಸ ಸೇರಿಸಿ ಕುಡಿಯುವುದು ಸಹ ಉತ್ತಮ ಪರಿಣಾಮಗಳನ್ನ ತೋರಿಸಬಲ್ಲದು. ಉತ್ಕರ್ಷಣ ನಿರೋಧಕಗಳನ್ನು ನಿಂಬೆ ರಸ ದೇಹಕ್ಕೆ ನೀಡಿದರೆ, ಟ್ರೈಗ್ಲಸರೈಡ್‌ ಮತ್ತು ಎಲ್‌ಡಿಎಲ್‌ ತಗ್ಗಿಸುವ ಗುಣವನ್ನು ಶುಂಠಿ ಹೊಂದಿದೆ. ಜೊತೆಗೆ, ಬೆಳಗಿನ ಹೊತ್ತು ಚೈತನ್ಯವನ್ನು ನೀಡಿ, ವ್ಯಾಯಾಮ ಮಾಡುವ ಉತ್ಸಾಹವನ್ನೂ ಹೆಚ್ಚಿಸುತ್ತದೆ ಈ ಪೇಯ.

Tomato juice

ಟೊಮೇಟೊ ರಸ

ಟೊಮೆಟೊದ ಕೆಂಪು ಬಣ್ಣಕ್ಕೆ ಕಾರಣವಾಗುವುದು ಅದರಲ್ಲಿರುವ ಲೈಕೊಪೇನ್‌ ಅಂಶ. ಇದು ಎಲ್‌ಡಿಎಲ್‌ ಕಡಿಮೆ ಮಾಡುವ ಗುಣವನ್ನು ಢಾಳಾಗಿ ತೋರಿಸಿದೆ. ಅಧ್ಯಯನಗಳ ಪ್ರಕಾರ, ಅತಿ ಹೆಚ್ಚು ಪ್ರಮಾಣದ ಲೈಕೊಪೇನ್‌ ಅಂಶವು (ದಿನಕ್ಕೆ 25 ಎಂಜಿಗಿಂತ ಹೆಚ್ಚು), ಕಡಿಮೆ ತೀವ್ರತೆಯ ಸ್ಟ್ಯಾಟಿನ್‌ಗಳು (ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಔಷಧಿಗಳು) ಬೀರುವ ಪರಿಣಾಮವನ್ನೇ ತೋರುತ್ತವೆ.

Turmeric and soy milk

ಅರಿಶಿನ ಮತ್ತು ಸೋಯ್‌ ಹಾಲು

ಸೋಯ್‌ ಹಾಲಿನಲ್ಲಿ ಎಲ್‌ಡಿಎಲ್‌ ಅಥವಾ ಕೆಟ್ಟ ಕೊಬ್ಬನ್ನು ಕಡಿಮೆ ಮಾಡುವ ಸಾಧ್ಯತೆಯಿದೆ. ಇನ್ನು ಅರಿಶಿನದಲ್ಲಿರುವ ಕರ್ಕುಮಿನ್‌ ಎಂಬ ಪ್ರಬಲ ಉತ್ಕರ್ಷಣ ನಿರೋಧಕವು ಎಲ್‌ಡಿಎಲ್‌ ಮತ್ತು ಟ್ರೈಗ್ಲಿಸರೈಡ್‌ಗಳನ್ನು ತಗ್ಗಿಸುವ ಗುಣವನ್ನು ತೋರಿಸಿದೆ. ಹಾಗಾಗಿ ಪ್ರಾಣಿಜನ್ಯ ಹಾಲಿಗೆ ಅರಿಶಿನ ಸೇರಿಸುವ ಬದಲು, ಸೋಯಾ ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು ಕೊಲೆಸ್ಟ್ರಾಲ್‌ ತಗ್ಗಿಸುವುದಕ್ಕೆ ಒಳ್ಳೆಯ ಉಪಾಯ.

ಇದನ್ನೂ ಓದಿ: Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

Continue Reading

ಆರೋಗ್ಯ

Health Tips Kannada: ಕಣ್ಣಿನ ಕೆಳಗೆ ಕಪ್ಪಾಗಿದೆಯೇ? ಇಲ್ಲಿದೆ ಸರಳ ಮನೆಮದ್ದು

ಕಣ್ಣಿನ ಕೆಳಭಾಗದಲ್ಲಿ ಕಾಣುವ ಗಾಢಬಣ್ಣದ ವರ್ತುಲಗಳು ಇಡೀ ಮುಖಕ್ಕೆ ವಯಸ್ಸಾದ, ಸುಸ್ತಾದ ಮತ್ತು ನಿದ್ದೆಗೆಟ್ಟ ಕಳೆಯನ್ನು ನೀಡುವುದಂತೂ ಹೌದು. ಅದೇನು ಗಂಭೀರವಾದ ಆರೋಗ್ಯ ಸಮಸ್ಯೆಯ ಲಕ್ಷಣ ಅಲ್ಲದಿದ್ದರೂ, ಇದನ್ನು ಸರಿ ಮಾಡುವುದು ಹೇಗೆಂಬ ಪ್ರಶ್ನೆ ಮೂಡುವುದಂತೂ ಹೌದು. ಈ ಕುರಿತು (Health Tips Kannada) ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

Health Tips Kannada
Koo

ಅಂದದ ಮೊಗಕ್ಕೆ ಕಣ್ಣೇ ಭೂಷಣ ಎಂದು ಹಾಡಿದವರಿದ್ದಾರೆ. ಅಂಥ ಸುಂದರ ಕಣ್ಣಿನ ಕೆಳಗೆ ಕಪ್ಪು ವರ್ತುಲಗಳು ಕಾಣಿಸಿಕೊಂಡರೆ… ಅದೇ ದೋಷ ಎನಿಸಿಬಿಡುತ್ತದೆ. ಜೊತೆಗೆ, ಆರೋಗ್ಯದ ಬಗ್ಗೆಯೂ ಪ್ರಶ್ನೆಗಳು ಏಳುತ್ತವೇ? ಸಾಕಷ್ಟು ನಿದ್ದೆ ಮಾಡಿ, ಚೆನ್ನಾಗಿ ನೀರು ಕುಡೀರಿ, ಸೊಪ್ಪು ತಿನ್ನಿ ಎಂದೆಲ್ಲಾ ಆರೋಗ್ಯ ಸಲಹೆಗಳು ಕೇಳಿ ಬಂದರೆ ಸಹಜವೇ. ಕಣ್ಣಿನ ಕೆಳಭಾಗದಲ್ಲಿ ಕಾಣುವ ಗಾಢಬಣ್ಣದ ವರ್ತುಲಗಳು ಇಡೀ ಮುಖಕ್ಕೆ ವಯಸ್ಸಾದ, ಸುಸ್ತಾದ ಮತ್ತು ನಿದ್ದೆಗೆಟ್ಟ ಕಳೆಯನ್ನು ನೀಡುವುದಂತೂ ಹೌದು. ಅದೇನು ಗಂಭೀರವಾದ ಆರೋಗ್ಯ ಸಮಸ್ಯೆಯ ಲಕ್ಷಣ ಅಲ್ಲದಿದ್ದರೂ, ಇದನ್ನು ಸರಿ ಮಾಡುವುದು ಹೇಗೆಂಬ (Health Tips Kannada) ಪ್ರಶ್ನೆ ಮೂಡುವುದಂತೂ ಹೌದು.

dark circles

ಇದು ಬರುವುದೇಕೆ?

ಕೆಲವರಿಗೆ ಆನುವಂಶಿಕವಾಗಿ ಈ ಲಕ್ಷಣಗಳು ಬರಬಹುದು. ಕುಟುಂಬದ ಹತ್ತಿರದ ರಕ್ತ ಸಂಬಂಧಿಗಳಲ್ಲಿ ಈ ತೊಂದರೆಯಿದ್ದರೆ, ಅದು ವರ್ಗಾವಣೆಗೊಂಡಿರಬಹುದು. ನಿದ್ದೆ ಸಾಕಾಗದಿದ್ದರೆ, ನಿದ್ರಿಸುವ ಸಮಯ ಅನಿಯಮಿತವಾಗಿದ್ದರೆ, ಕಪ್ಪು ವರ್ತುಲಗಳು ಬರುತ್ತವೆ. ಕಣ್ಣಿನ ಕೆಳಗಿನ ಭಾಗದ ಚರ್ಮ ಅತಿ ಸೂಕ್ಷ್ಮವಾದ್ದರಿಂದ ಈ ಭಾಗದಲ್ಲಿನ ರಕ್ತನಾಳಗಳ ಚಟುವಟಿಕೆ ಢಾಳಾಗಿ ಕಾಣುತ್ತದೆ. ಪಿಗ್ಮೆಂಟೇಶನ್‌ ಸಹ ಎದ್ದು ಕಾಣುವಂತಾಗುತ್ತದೆ. ವಯಸ್ಸು ಹೆಚ್ಚಿದಂತೆ. ಕೊಲಾಜಿನ್‌ ಕಡಿಮೆಯಾಗಿ ಚರ್ಮದ ಬಿಗಿ ನೈಸರ್ಗಿಜವಾಗಿಯೇ ಕಡಿಮೆಯಾಗುತ್ತದೆ. ಇದರಿಂದ ಕಣ್ಣಿನ ಕೆಳಗೆ ಚರ್ಮ ಜೋತಾಡಬಹುದು; ಮತ್ತೂ ಕಪ್ಪಾಗಿ ಕಾಣಬಹುದು. ಇದನ್ನು ಕಡಿಮೆ ಮಾಡಲು ಕೆಲವು ಮನೆಮದ್ದುಗಳು ನೆರವಾಗುತ್ತವೆ.

Cold compress

ತಣ್ಣನೆಯ ಕಂಪ್ರೆಸ್‌

ತಂಪಾದ ನೀರಲ್ಲಿ ಅದ್ದಿದ ಬಟ್ಟೆ, ಫ್ರಿಜ್‌ನಲ್ಲಿ ಕೆಲಕಾಲ ಇರಿಸಿದ ತೇವದ ಟೀ ಬ್ಯಾಗ್‌ ಮುಂತಾದವುಗಳನ್ನು ಕಣ್ಣಿನ ಮೇಲೆ 10-15 ನಿಮಿಷ ಇರಿಸಿಕೊಳ್ಳಿ. ಅದರಲ್ಲೂ ಗ್ರೀ ಟೀ ಅಥವಾ ಕ್ಯಾಮೊಮೈಲ್‌ ಟೀ ಹೆಚ್ಚು ಉಪಯುಕ್ತ. ಇದರಿಂದ ಈ ಭಾಗದಲ್ಲಿ ಉಬ್ಬಿದಂತೆ ಕಾಣುವ ರಕ್ತನಾಳಗಳು ಸಂಕೋಚಗೊಳ್ಳುತ್ತವೆ. ಇದರಿಂದ ಕಣ್ಣಿನ ಕೆಳಗಿನ ಭಾಗ ಉಬ್ಬಿದಂತಾಗಿ ಕಪ್ಪಾಗಿದ್ದರೆ ಕಡಿಮೆಯಾಗುತ್ತದೆ.

Nutrient Rich Cucumber Benefits

ಸೌತೇಕಾಯಿ

ತಂಪಾದ ಸೌತೇಕಾಯಿಯ ಗಾಲಿಯಂಥ ತುಂಡನ್ನು ಕಣ್ಣುಗಳ ಮೇಲಿರಿಸಿ 20 ನಿಮಿಷ ಬಿಡಿ. ಇದನ್ನು ದಿನವೂ ಮಾಡಬಹುದು. ಇದರಿಂದ ಕಣ್ಣಿನ ಕೆಳಗೆ ಉಬ್ಬಿದ್ದರೆ ಕಡಿಮೆಯಾಗಿ, ಗಾಢಬಣ್ಣವೂ ತಿಳಿಯಾಗುತ್ತದೆ. ಜೊತೆಗೆ ಕಣ್ಣನ್ನು ತಂಪಾಗಿಸಿ, ದೃಷ್ಟಿಗೂ ಅನುಕೂಲ ಒದಗಿಸುತ್ತದೆ.

Nutrient-Rich Potato Benefits

ಆಲೂಗಡ್ಡೆ

ಸೌತೇಕಾಯಿಯಂತೆ, ಆಲೂಗಡ್ಡೆಗೂ ನೈಸರ್ಗಿಕವಾದ ಬ್ಲೀಚಿಂಗ್‌ ಗುಣವಿದೆ. ಹಾಗಾಗಿ ಕಪ್ಪಾದ ಚರ್ಮವನ್ನು ನಿಧಾನಕ್ಕೆ ತಿಳಿಯಾಗಿಸುತ್ತದೆ. ಫ್ರಿಜ್‌ನಲ್ಲಿಟ್ಟ ಆಲೂಗಡ್ಡೆಯನ್ನು ತುರಿದು ರಸ ತೆಗೆಯಿರಿ, ಈ ತಂಪಾದ ರಸದಲ್ಲಿ ಸ್ವಚ್ಛ ಹತ್ತಿಯ ಬಟ್ಟೆಯನ್ನು ಅದ್ದಿ ಕಣ್ಣುಗಳ ಕೆಳಗಿರಿಸಿಕೊಳ್ಳಿ. 15 ನಿಮಿಷಗಳ ನಂತರ ತಂಪಾದ ನೀರಲ್ಲಿ ತೊಳೆಯಿರಿ.

Tomato juice

ಟೊಮಾಟೊ ರಸ

ಇದೂ ಸಹ ಗಾಢ ಬಣ್ಣವನ್ನು ತಿಳಿಯಾಗಿಸಬಲ್ಲ ಗುಣವನ್ನು ಹೊಂದಿದೆ. ಟೊಮಾಟೊ ರಸ ತೆಗೆದು, ಕೆಲವು ಹನಿ ನಿಂಬೆರಸ ಸೇರಿಸಿ. ಇದರಲ್ಲಿ ಸ್ವಚ್ಛ ವಸ್ತ್ರವನ್ನು ಅದ್ದಿ, ಕಣ್ಣುಗಳ ಕೆಳಗಿರಿಸಿಕೊಳ್ಳಿ. ೧೦ ನಿಮಿಷಗಳ ನಂತರ ಬೆಚ್ಚಗಿನ ನೀರಲ್ಲಿ ತೊಳೆಯಿರಿ.

Almond Oil

ಬಾದಾಮಿ ಎಣ್ಣೆ

ವಿಟಮಿನ್‌ ಇ ಹೇರಳವಾಗಿದೆ ಬಾದಾಮಿ ತೈಲದಲ್ಲಿ. ರಾತ್ರಿ ಮಲಗುವ ಮುನ್ನ, ಇದರ ಕೆಲವು ಹನಿಗಳನ್ನು ಕಣ್ಣ ಕೆಳಭಾಗದಲ್ಲಿ ಲಘುವಾಗಿ ಹಚ್ಚಿ ಮಸಾಜ್‌ ಮಾಡಿ. ರಾತ್ರಿಡೀ ಇದನ್ನು ಹಾಗೆಯೇ ಬಿಡಿ. ಹಚ್ಚಿದ ಎಣ್ಣೆ ಅತಿಯಾದರೆ ಕಣ್ಣುರಿ ಬಂದೀತು. ಹಾಗಾಗಿ ಸ್ವಲ್ಪವೇ ಹಚ್ಚಿ.

ರೋಸ್‌ ವಾಟರ್‌

ಗುಲಾಬಿ ಜಲ

ಹತ್ತಿಯ ಪ್ಯಾಡ್‌ಗಳಲ್ಲಿ ತಂಪಾದ ಗುಲಾಬಿ ಜಲದಲ್ಲಿ ಅದ್ದಿ, ಮುಚ್ಚಿದ ಕಣ್ಣುಗಳ ಮೇಲೆ ಇರಿಸಿಕೊಳ್ಳಿ. ಸೌತೇಕಾಯಿಯಂಥದ್ದೇ ಪರಿಣಾಮಗಳನ್ನು ಗುಲಾಬಿ ಜಲವೂ ನೀಡಬಲ್ಲದು. ೧೫ ನಿಮಿಷಗಳ ನಂತರ ತಂಪಾದ ನೀರಲ್ಲಿ ತೊಳೆಯಿರಿ.

Aloe Vera Home Remedies For Stretch Marks

ಲೋಳೆಸರ

ಇದರ ತಂಪಾದ ತಾಜಾ ಜೆಲ್‌ ತೆಗೆಯಿರಿ. ಅದನ್ನು ಕಣ್ಣಿನ ಕೆಳಭಾಗದಲ್ಲಿ ಇರಿಸಿಕೊಂಡು 20 ನಿಮಿಷ ಬಿಡಿ. ನಂತರ ತಂಪಾದ ನೀರಿನಿಂದ ತೊಳೆಯಿರಿ. ಇದು ಚರ್ಮವನ್ನು ಬಿಗಿಯಾಗಿಸಿ, ತೇವವನ್ನು ಹಿಡಿದಿಡುತ್ತದೆ. ಜೊತೆಗೆ ಕಣ್ಣಿನ ಕೆಳಭಾಗದ ಕಪ್ಪು ಚರ್ಮವನ್ನು ತಿಳಿಯಾಗಿಸುತ್ತದೆ. ಇವೆಲ್ಲವುಗಳ ಜೊತೆಗೆ, ದೇಹಕ್ಕೆ ಚೆನ್ನಾಗಿ ನೀರು ಬೇಕು. ಋತುಮಾನದ ಸೊಪ್ಪು-ತರಕಾರಿ-ಹಣ್ಣುಗಳು ಬೇಕು. ಕಣ್ತುಂಬಾ ನಿದ್ದೆಯಂತೂ ಕಡ್ಡಾಯ.

ಇದನ್ನೂ ಓದಿ: Aloe Vera Benefits: ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಲೋಳೆಸರದ ಮಾಸ್ಕ್‌ ಬಳಸಿ

Continue Reading

ದೇಶ

Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

Covaxin: ಕೊವ್ಯಾಕ್ಸನ್‌ ಲಸಿಕೆಯನ್ನು ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯವು ಕೂಡ ಮೌಲ್ಯಮಾಪನ ಮಾಡಿದೆ. ಕೊವ್ಯಾಕ್ಸಿನ್‌ ಲಸಿಕೆಯ ಸುರಕ್ಷತೆ ಹಾಗೂ ಅದರ ದಕ್ಷತೆಯ ಕುರಿತು ಕೂಡ ಮೌಲ್ಯಮಾಪನ ಮಾಡಲಾಗಿದೆ. ಇದುವರೆಗೆ ವ್ಯಾಕ್ಸಿನ್‌ ಸಂಬಂಧಿಸಿದಂತೆ ಯಾವುದೇ ಅಡ್ಡ ಪರಿಣಾಮಗಳು ಉಂಟಾಗಿಲ್ಲ ಎಂಬುದಾಗಿ ಭಾರತ್‌ ಬಯೋಟೆಕ್‌ ಪ್ರಕಟಣೆ ಹೊರಡಿಸಿದೆ. ಕೋವಿಶೀಲ್ಡ್‌ ಅಡ್ಡಪರಿಣಾಮಗಳ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಭಾರತ್‌ ಬಯೋಟೆಕ್‌ ಕಂಪನಿಯು ಸ್ಪಷ್ಟನೆ ನೀಡಿದೆ.

VISTARANEWS.COM


on

Covaxin
Koo

ನವದೆಹಲಿ: ಬ್ರಿಟನ್‌ನಲ್ಲಿ (UK) ಅಸ್ಟ್ರಾಜೆನಿಕಾ ಕಂಪನಿಯ ಕೋವಿಶೀಲ್ಡ್‌ ಲಸಿಕೆಯ (Covishield vaccine) ಅಡ್ಡ ಪರಿಣಾಮಗಳ (Side effects) ಬಗ್ಗೆ ಕೋಲಾಹಲ ಹೆಚ್ಚುತ್ತಿರುವಂತೆಯೇ ಭಾರತದಲ್ಲಿಯೂ ಕೋವಿಶೀಲ್ಡ್‌ ಲಸಿಕೆ ಸೈಡ್‌ ಎಫೆಕ್ಟ್‌ಗಳ ಕುರಿತು ಅಧ್ಯಯನ ನಡೆಯಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ, ಕೊವ್ಯಾಕ್ಸಿನ್‌ (Covaxin) ಅತ್ಯಂತ ಸುರಕ್ಷಿತವಾಗಿ ತಯಾರಿಸಲಾದ ಲಸಿಕೆಯಾಗಿದೆ ಎಂಬುದಾಗಿ ಭಾರತದ ಲಸಿಕಾ ತಯಾರಿಕಾ ಕಂಪನಿಯಾದ ಭಾರತ್‌ ಬಯೋಟೆಕ್‌ (Bharat Biotech) ಪ್ರಕಟಣೆ ತಿಳಿಸಿದೆ.

“ಸುರಕ್ಷತೆ ಹಾಗೂ ದಕ್ಷತೆಯೇ ಮೊದಲು ಎಂಬ ದೃಷ್ಟಿಕೋನದಿಂದ ಹಲವು ಮಾನದಂಡಗಳನ್ನು ಇಟ್ಟುಕೊಂಡು ಲಸಿಕೆಯನ್ನು ಉತ್ಪಾದಿಸಲಾಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರದ ಲಸಿಕಾಕರಣ ಯೋಜನೆಯ ವೇಳೆ ಅತಿ ಹೆಚ್ಚು ಪ್ರಯೋಗಕ್ಕೀಡಾದ ಲಸಿಕೆ ಎಂದರೆ ಅದು ಕೊವ್ಯಾಕ್ಸಿನ್‌ ಮಾತ್ರ. ಪರವಾನಗಿ ಪ್ರಕ್ರಿಯೆಯ ವೇಳೆ ಸುಮಾರು 27 ಸಾವಿರ ಅಂಶಗಳ ಕುರಿತು ಅಧ್ಯಯನ, ಪರಿಶೀಲನೆ ನಡೆಸಲಾಗಿದೆ. ವೈದ್ಯಕೀಯ ಪ್ರಯೋಗಕ್ಕೂ ಲಸಿಕೆಯನ್ನು ಒಳಪಡಿಸಲಾಗಿದೆ” ಎಂಬುದಾಗಿ ಭಾರತ್‌ ಬಯೋಟೆಕ್‌ ಕಂಪನಿಯು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದೆ.

“ಕೊವ್ಯಾಕ್ಸನ್‌ ಲಸಿಕೆಯನ್ನು ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯವು ಕೂಡ ಮೌಲ್ಯಮಾಪನ ಮಾಡಿದೆ. ಕೊವ್ಯಾಕ್ಸಿನ್‌ ಲಸಿಕೆಯ ಸುರಕ್ಷತೆ ಹಾಗೂ ಅದರ ದಕ್ಷತೆಯ ಕುರಿತು ಕೂಡ ಮೌಲ್ಯಮಾಪನ ಮಾಡಲಾಗಿದೆ. ಇದುವರೆಗೆ ವ್ಯಾಕ್ಸಿನ್‌ ಸಂಬಂಧಿಸಿದಂತೆ ಯಾವುದೇ ಅಡ್ಡ ಪರಿಣಾಮಗಳು, ರಕ್ತ ಹೆಪ್ಪುಗಟ್ಟುವುದು, ಥ್ರಂಬೊಸಿಟೋಪೇನಿಯಾ, ಪೆರಿಕಾರ್ಡಿಟಿಸ್‌ ಹಾಗೂ ಮೈಯೋಕಾರ್ಡಿಟಿಸ್‌ ಸೇರಿ ಯಾವುದೇ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ. ಹಾಗಾಗಿ, ಕೊವ್ಯಾಕ್ಸಿನ್‌ ಲಸಿಕೆಯು ಅತ್ಯಂತ ಸುರಕ್ಷಿತವಾಗಿದೆ” ಎಂದು ಮಾಹಿತಿ ನೀಡಿದೆ.

ಅಸ್ಟ್ರಾಜೆನೆಕಾ ಕೋವಿಶೀಲ್ಡ್‌ ಲಸಿಕೆ ಮತ್ತು ಥ್ರಂಬೋಸಿಸ್ (ಟಿಟಿಎಸ್) ನಡುವಿನ ಸಂಬಂಧವನ್ನು ಒಪ್ಪಿಕೊಂಡಿದೆ. ಅಸ್ಟ್ರಾಜೆನೆಕಾ ಲಸಿಕೆ ಸೂತ್ರವನ್ನು ಪುಣೆ ಮೂಲದ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ನೀಡಲಾಗಿದೆ. ಕೋವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿ ಕೋಟ್ಯಂತರ ಮಂದಿ ಪಡೆದಿದ್ದಾರೆ. ಈಗ ಅಮೆರಿಕದಲ್ಲಿ ಅಡ್ಡಪರಿಣಾಮದ ಕುರಿತು ಕಂಪನಿಯೇ ಒಪ್ಪಿಕೊಂಡಿರುವುದರಿಂದ ಭಾರತದಲ್ಲೂ ಈ ಕುರಿತು ಅಧ್ಯಯನ ನಡೆಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಇದನ್ನೂ ಓದಿ: CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

Continue Reading
Advertisement
training for election duty staff in Karwar
ಉತ್ತರ ಕನ್ನಡ1 min ago

Lok Sabha Election 2024: ಗೊಂದಲಕ್ಕೆ ಅವಕಾಶವಿಲ್ಲದೆ ಚುನಾವಣೆ ನಡೆಸಲು ಉ.ಕ ಡಿಸಿ ಸೂಚನೆ

IPL 2024
ಕ್ರೀಡೆ15 mins ago

IPL 2024 : ರಾಜಸ್ಥಾನ್​ ಸೋಲಿನ ಬಳಿಕ ಮೊಹಮ್ಮದ್ ಕೈಫ್​ ಟ್ರೋಲ್ ಮಾಡಿದ ವಾಸಿಮ್ ಜಾಫರ್​!

Rohith Vemula
ದೇಶ36 mins ago

Rohith Vemula: ರೋಹಿತ್‌ ವೇಮುಲ ದಲಿತನೇ ಅಲ್ಲ ಎಂದ ಪೊಲೀಸರು; ಕೇಸ್‌ ಕ್ಲೋಸ್‌, ಸ್ಮೃತಿ ಇರಾನಿ ಸೇರಿ ಹಲವರಿಗೆ ಕ್ಲೀನ್‌ ಚಿಟ್

IPL 2024
Latest41 mins ago

IPL 2024 : ನನ್ನ ನಿದ್ದೆಗೆಡಿಸಿದ್ದ ರೋಹಿತ್​ ಶರ್ಮಾ; ಗಂಭೀರ್​ ಹೀಗೆ ಹೇಳಲು ಕಾರಣವೇನು?

Vidyashree HS
ಬೆಂಗಳೂರು50 mins ago

Vidyashree HS: ಬೆಂಗಳೂರಿನಲ್ಲಿ ಮೇ 4ರಂದು ವಿದ್ಯಾಶ್ರೀ ಎಚ್.ಎಸ್. ಭರತನಾಟ್ಯ ರಂಗಪ್ರವೇಶ

Prajwal Revanna Case
ಕರ್ನಾಟಕ1 hour ago

Prajwal Revanna Case: ರೇವಣ್ಣ ಮನೆ ಕೆಲಸದ ಮಹಿಳೆ ಕಿಡ್ನ್ಯಾಪ್‌ ಕೇಸ್; 2ನೇ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

Summer Fashion
ಫ್ಯಾಷನ್2 hours ago

Summer Fashion: ಬೇಸಿಗೆಯಲ್ಲಿ ಹುಡುಗಿಯರನ್ನು ಸವಾರಿ ಮಾಡುತ್ತಿರುವ 5 ಶೈಲಿಯ ಗ್ಲಾಮರಸ್‌ ಟಾಪ್‌ಗಳಿವು

Summer Tour
ಪ್ರವಾಸ2 hours ago

Summer Tour: ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್! ಐ ಆರ್ ಸಿ ಟಿ ಸಿಯಿಂದ ವಿಶೇಷ ಪ್ಯಾಕೇಜ್

IPL 2024
ಕ್ರೀಡೆ2 hours ago

IPL 2024 : ಐಪಿಎಲ್​ಗೆ ಅರ್ಧದಲ್ಲೇ ವಿದಾಯ ಹೇಳಿದ ಮುಸ್ತಾಫಿಜುರ್​ಗೆ ಸಹಿ ಹಾಕಿದ ಜೆರ್ಸಿ ನೀಡಿದ ಧೋನಿ

Tips for bedroom corner
ಲೈಫ್‌ಸ್ಟೈಲ್2 hours ago

Tips for Bedroom Corner: ಮಲಗುವ ಕೋಣೆಯ ಮೂಲೆಗಳನ್ನು ಆಕರ್ಷಕವಾಗಿಸಲು ಕೆಲವು ಟಿಪ್ಸ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ4 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ15 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌