Weight Loss: ಬೊಜ್ಜು ಕರಗಿಸಲು ಸಕ್ಕರೆ ಬಿಟ್ಟರೆ ಸಿಹಿಗೆ ಪರ್ಯಾಯ ಯಾವುದು!? - Vistara News

ಆರೋಗ್ಯ

Weight Loss: ಬೊಜ್ಜು ಕರಗಿಸಲು ಸಕ್ಕರೆ ಬಿಟ್ಟರೆ ಸಿಹಿಗೆ ಪರ್ಯಾಯ ಯಾವುದು!?

ನೈಸರ್ಗಿಕವಿರಲಿ ಅಲ್ಲದಿರಲಿ ಸಕ್ಕರೆ, ಆರೋಗ್ಯಕರವಲ್ಲ ನಿಜವೇ ಆದರೂ, ಸಕ್ಕರೆಗಿಂತ ನೈಸರ್ಗಿಕ ಸಿಹಿಯ ಇತರ ಮೂಲಗಳನ್ನು ಕೆಲವಕ್ಕಾದರೂ ಬಳಸಿ ನಮ್ಮನ್ನು ನಾವು ಸಂತೈಸಿಕೊಳ್ಳಬಹುದು.

VISTARANEWS.COM


on

sugar substitute
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಜೀವನಪದ್ಧತಿ, ಬೇಕು ಬೇಕಾದ್ದೆಲ್ಲ ನಾಲಿಗೆಗೆ ರುಚಿಯೆನಿಸಿದ್ದನ್ನೇ ಬಯಸಿ ಬಯಸಿ ತಿನ್ನುವುದು, ಒತ್ತಡ, ಕುಳಿತೇ ಮಾಡುವ ಕೆಲಸ, ವ್ಯಾಯಾಮವಿಲ್ಲದ ಏಕತಾನತೆಯ ಜೀವನ, ಹೆಚ್ಚಿದ ಸ್ಕ್ರೀನ್‌ಟೈಮ್‌ ಸೇರಿದಂತೆ ನಾನಾ ಕಾರಣಗಳಿಂದ ಹಲವರಿಗೆ ಬೊಜ್ಜು ಸಾಮಾನ್ಯ. ಹೊಟ್ಟೆಯ ಸುತ್ತ, ಸೊಂಟದ ಸುತ್ತ ಸಂಗ್ರಹವಾದ ಬೊಜ್ಜಿನಿಂದ ಮುಕ್ತಿ (Weight Loss) ಸುಲಭಕ್ಕೆ ಸಾಧ್ಯವಿಲ್ಲ. ಹಿತಮಿತವಾದ ಆಹಾರ ಸೇವನೆ, ಸಕ್ಕರೆಯ ನಿಯಂತ್ರಣ, ನಿಯಮಿತ ವ್ಯಾಯಾಮ, ಶಿಸ್ತುಬದ್ಧ ಶೈಲಿಯ ಜೀವನ ಇತ್ಯಾದಿಗಳಿಂದ ಮತ್ತೆ ಬೊಜ್ಜನ್ನು ಕರಗಿಸಿ (health tips) ಬಳುಕುವ ಬಳ್ಳಿಯಂಥ ದೇಹ ಪಡೆಯಲು ಸಾಧ್ಯವಿದೆ. ಆದರೆ, ಇದನ್ನು ಪಡೆಯಲು, ಶಿಸ್ತು, ಸಂಯಮ ಅಷ್ಟೇ ಅಲ್ಲ, ಗುರಿಯೆಡೆಗೆ ನಡೆವ ಪರಿಶ್ರಮವೂ ಬೇಕಾಗುತ್ತದೆ. ಅದರಲ್ಲೂ ಹೊಟ್ಟೆಯಲ್ಲಿ ಸೇರಿಕೊಳ್ಳುವ ಬೊಜ್ಜನ್ನು ಕಡಿಮೆ ಮಾಡುವುದು ಎಂದರೆ ಅದು ಸುಲಭದ ಮಾತಲ್ಲ. ಯಾಕೆಂದರೆ ಇಲ್ಲಿ ಸಂಗ್ರಹವಾಗುವ ಕೊಬ್ಬು ಬಹಳ ಸಮಯದಿಂದ ಉಂಡ ಹೆಚ್ಚು ಕೊಬ್ಬಿನ ಆಹಾರ ಪದಾರ್ಥಗಳಿಂದ ಸಂಗ್ರಹವಾದುದೇ ಆಗಿರುತ್ತದೆ. ಸಕ್ಕರೆಯೂ ಅವುಗಳಲ್ಲಿ ಪ್ರಮುಖವಾದದ್ದು.

ಬಹಳಷ್ಟು ಮಂದಿ ಸಕ್ಕರೆಯನ್ನು ಕಡಿಮೆ ಮಾಡಿ ಎಂದಾಗ ಚಿಂತೆಗೀಡಾಗುವುದು ಸಹಜ. ಒಂದು ಚಹಾ, ಒಂದು ಕಾಫಿ, ಆಗಾಗ ಜಿಹ್ವೆಯ ಚಪಲಕ್ಕೆ ಅಂತ ಒಂದಿಷ್ಟು ಸಿಹಿ ಹೊಟ್ಟೆ ಸೇರುವುದು ಎಲ್ಲರ ಬದುಕಿನ ಅವಿಭಾಜ್ಯ ಅಂಗ. ಸಿಹಿ ಪ್ರಿಯರಿಗಂತೂ ಸಿಹಿ ಬಿಡಿ ಎಂದರೆ ಆಕಾಶವೇ ತಲೆಕಳಚಿ ಬಿದ್ದಂತಾಗುವುದು ಸಹಜ. ಆದರೆ, ನಮ್ಮ ಏರುವ ತೂಕಕ್ಕೆ ಮೂಲ ಕಾರಣವೂ ಈ ಸಿಹಿಯೇ ಎಂದರೆ ಸತ್ಯ ಕಹಿಯಾದರೂ ಒಪ್ಪಲೇಬೇಕು. ನಾವು ತಿಂದ ಹೆಚ್ಚು ಸಕ್ಕರೆಯ ಪ್ರಮಾಣವು ಕೊಬ್ಬಿನ ರೂಪದಲ್ಲಿ ಯಾವಾಗಲೂ ಹೊಟ್ಟೆ ಹಾಗೂ ಹೃದಯದ ಅಕ್ಕಪಕ್ಕ ಸಂಗ್ರಹವಾಗುವುದರಿಂದ ಇದು ಅನಾರೋಗ್ಯಕರ. ಹಾಗಾಗಿ ಮಧುಮೇಹ ಇರಲಿ ಇಲ್ಲದಿರಲಿ, ಸಕ್ಕರೆಯ ನಿಯಂತ್ರಣ ಅತ್ಯಂತ ಅಗತ್ಯ ಹಾಗೂ ಇದರ ಮೂಲಕವಷ್ಟೇ ಬೊಜ್ಜು ಕರಗಿಸುವಲ್ಲಿ ನಾವು ಸಫಲತೆ ಸಾಧಿಸಬಹುದು.

ಹಾಗಾದರೆ, ಸಕ್ಕರೆಯನ್ನು ಬಿಡುವುದು ಹೇಗೆ ಎಂಬ ಸಮಸ್ಯೆ ಹಲವರದ್ದು. ಆರೋಗ್ಯಕರವಾದ ಸಕ್ಕರೆ ಯಾವುದು ಎಂಬ ಶೋಧವನ್ನೂ ನಾವು ನಡೆಸುತ್ತೇವೆ. ನೈಸರ್ಗಿಕವಿರಲಿ ಅಲ್ಲದಿರಲಿ ಸಕ್ಕರೆ, ಆರೋಗ್ಯಕರವಲ್ಲ ನಿಜವೇ ಆದರೂ, ಸಕ್ಕರೆಗಿಂತ ನೈಸರ್ಗಿಕ ಸಿಹಿಯ ಇತರ ಮೂಲಗಳನ್ನು ಕೆಲವಕ್ಕಾದರೂ ಬಳಸಿ ನಮ್ಮನ್ನು ನಾವು ಸಂತೈಸಿಕೊಳ್ಳಬಹುದು. ಹಾಗಾದರೆ ಬನ್ನಿ, ಆಗಾಗ ಸಕ್ಕರೆಯ ಬದಲಿಗೆ ಯಾವ ಸಿಹಿಯನ್ನು ನಾವು ಬಳಸಬಹುದು ಎಂಬುದನ್ನು ನೋಡೋಣ.

1. ಜೇನುತುಪ್ಪ: ಎಲ್ಲರಿಗೂ ಗೊತ್ತಿರುವ ಹಾಗೆ ಜೇನುತುಪ್ಪ ಆರೋಗ್ಯಕರ. ಹಾಗಂತ ಇದನ್ನೇ ಎಲ್ಲದಕ್ಕೂ ಸುರಿಸುರಿದು ತಿನ್ನುತ್ತಿರುವುದು ಒಳ್ಳೆಯದಲ್ಲ. ಹಿತಮಿತವಾಗಿ ಕೆಲವಕ್ಕೆ ಜೇನುತುಪ್ಪ ಬಳಸಬಹುದು. ಸಪ್ಪೆ ಎನಿಸುವ ಜ್ಯೂಸ್‌ಗೆ ಯಾಔಆಗಲಾದರೊಮ್ಮೆ ಒಂದೆರಡು ಚಮಚ ಜೇನುತುಪ್ಪ ಸೇರಿಸಿ ಹೀರಬಹುದು. ಆದರೆ, ನಿತ್ಯವೂ ಅಲ್ಲ.

2. ಬೆಲ್ಲ: ಬೆಲ್ಲ ಕಬ್ಬಿಣಾಂಶವನ್ನು ಸಾಕಷ್ಟು ಹೊಂದಿರುವ ಆಹಾರ. ನಮ್ಮ ರೋಗನಿರೋಧಕ ಶಕ್ತಿಯನ್ನೂ ಹೆಚ್ಚಿಸುವ ಶಕ್ತಿ ಇದಕ್ಕಿದೆ. ಹಾಗಾಗಿ ಬೆಲ್ಲವನ್ನು ನಮ್ಮ ಆಹಾರದಲ್ಲಿ ಬಳಸಬಹುದು. ಆದರೆ ಇದಕ್ಕೂ ಮಿತಿಯಿದೆ. ಚಹಾಕ್ಕೆ ಸಕ್ಕರೆಯ ಬದಲು ಬೆಲ್ಲ ಉಪಯೋಗಿಸಿಯೋ ಅಥವಾ ಕೊಂಚ ಪ್ರಪಾಣದಲ್ಲಿ ಸಕ್ಕರೆಯ ಬದಲು ಬೆಲ್ಲ ಬಳಸಬಹುದು.

ಇದನ್ನೂ ಓದಿ: Weight Loss: ವೇಗವಾಗಿ ತೂಕ ಇಳಿಸುವ ಶಾರ್ಟ್‌ಕಟ್‌ ಇದೆಯೇ? ಇಲ್ಲಿವೆ ಟಿಪ್ಸ್!

3. ತೆಂಗಿನಕಾಯಿ ಸಕ್ಕರೆ: ಇದೇನಿದು ಎಂದು ಆಶ್ಚರ್ಯವಾದರೆ ಇಲ್ಲಿ ಕೇಳಿ. ತೆಂಗಿನಕಾಯಿ ಹೂವಿನಿಂದ ತೆಗೆಯುವ ಸಕ್ಕರೆ ಇದಾಗಿದ್ದು, ಮಾರುಕಟ್ಟೆಯಲ್ಲಿಯೂ ಲಭ್ಯವಿದೆ. ಇದು ಸಕ್ಕರೆಗೆ ಅತ್ಯುತ್ತಮ ಪರಿಹಾರ. ಸಕ್ಕರೆಯ ಬದಲಿಗೆ ಕೆಲವು ಆಹಾರಗಳಿಗೆ ಇದು ಬಳಸಬಹುದು.

Health Benefits of Dates

4. ಖರ್ಜೂರ: ಎಲ್ಲರಿಗೂ ತಿಳಿದಿರುವ ಇನ್ನೊಂದು ಸಿಹಿಯಾದ ನೈಸರ್ಗಿಕ ಆಹಾರವಿದು. ಕೇಕ್‌, ಕುಕ್ಕೀಸ್‌, ಸ್ಮೂದಿ, ಎನರ್ಜಿ  ಬಾರ್‌ ಮತ್ತಿತರ ತಿನಿಸುಗಳನ್ನು ಸಕ್ಕರೆ ಹಾಕದೆ ಮಾಡುವಾಗ ಬಳಸಬಹುದಾದ ಪರ್ಯಾಯವಿದು. ಇದರಲ್ಲಿ ಆಂಟಿ ಆಕ್ಸಿಡೆಂಟ್‌ಗಳು ಹೇರಳವಾಗಿ ಇರುವುದರಿಂದ ಇದನ್ನು ಆಹಾರದಲ್ಲಿ ಕೆಲವೊಮ್ಮೆ ಬಳಸಬಹುದು.

5. ಮೇಪಲ್‌ ಸಿರಪ್:‌ ಮೇಪಲ್‌ ಮರಗಳಿಂದ ತಯಾರಿಸುವ ನೈಸರ್ಗಿಕ ಸಕ್ಕರೆಯಿದು. ವಿದೇಶಗಳಲ್ಲಿ, ಚಳಿಪ್ರದೇಶಗಳಲ್ಲಿ ಈ ಮರಗಳು ಹೆಚ್ಚಿರುವ ಜಾಗಗಳಲ್ಲಿ ಈ ಸಕ್ಕರೆಯೂ ಸುಲಭವಾಗಿ ಲಭ್ಯವಿರುತ್ತದೆ. ಕೇಕ್‌, ಸ್ಮೂದಿಗಳು, ಸಲಾಡ್‌ ಮತ್ತಿತರ ಆಹಾರಗಳಲ್ಲಿ ಸಕ್ಕರೆಯ ಬದಲು ಇದನ್ನು ಬಳಸಬಹುದು.

ಇದನ್ನೂ ಓದಿ: Heath Tips For Weight Loss: ತೂಕ ಇಳಿಸುವ ಪ್ರಯತ್ನವೇ? ಹೀಗೆ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Healthcare Tips For Women: 30 ವರ್ಷದ ಬಳಿಕ ಮಹಿಳೆಯರು ಮಾಡಿಸಿಕೊಳ್ಳಲೇಬೇಕಾದ ಆರೋಗ್ಯ ಪರೀಕ್ಷೆಗಳಿವು

ಇತ್ತೀಚಿನ ದಿನಗಳಲ್ಲಿ ಪೌಷ್ಟಿಕತೆ ಮತ್ತು ಫಿಟ್‌ನೆಸ್‌ ಬಗ್ಗೆ ನಗರ ಪ್ರದೇಶದ ಒಂದಿಷ್ಟು ಮಹಿಳೆಯರು ಗಮನ ನೀಡುತ್ತಿದ್ದಾರೆ. ಆದರೆ ಮಹಿಳೆಯರ ಸ್ವಾಸ್ಥ್ಯ ರಕ್ಷಣೆಗೆ ಇದಿಷ್ಟೇ ಸಾಲದು. ಕೆಲವು ವೈದ್ಯಕೀಯ ಪರೀಕ್ಷೆಗಳನ್ನು ನಿಯಮಿತವಾಗಿ ಮಾಡಿಸಿಕೊಳ್ಳುವುದು ಒಳ್ಳೆಯದು. ಯಾವುದವು? ಈ ಬಗ್ಗೆ (Healthcare tips for women) ಇಲ್ಲಿದೆ ಮಾಹಿತಿ.

VISTARANEWS.COM


on

Healthcare Tips For Women
Koo

ಕುಟುಂಬದ ಎಲ್ಲರ ದೇಖರೇಖಿ ಮಾಡುವ ಭರದಲ್ಲಿ, ವೃತ್ತಿಯ ಅಥವಾ ಉದ್ಯೋಗದ ಒತ್ತಡಗಳನ್ನು ಎದುರಿಸುವ ನಡುವಲ್ಲಿ, ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ಹೋಗುವುದು ಕಡಿಮೆ. ಆದರೆ ವೈಯಕ್ತಿಯ ಸ್ವಾಸ್ಥ್ಯ ಎನ್ನುವ ಕಲ್ಪನೆ ಇತ್ತೀಚೆಗೆ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ, ಫಿಟ್‌ನೆಟ್‌ ಮತ್ತು ಸತ್ವಭರಿತ ಆಹಾರದ ಸೇವನೆಯತ್ತ ನಗರ ಪ್ರದೇಶಗಳ ಒಂದಿಷ್ಟು ಮಹಿಳೆಯರು ಮನಮಾಡಿದ್ದಾರೆ. ಇದಿಷ್ಟೇ ಅಲ್ಲ, 30ರ ವಯೋಮಾನದ ನಂತರ ಮಹಿಳೆಯರು (Healthcare tips for women) ತಮ್ಮ ದೇಹಾರೋಗ್ಯದ ಬಗ್ಗೆ ಹಲವು ರೀತಿಯಲ್ಲಿ ಗಮನ ನೀಡಬೇಕಾಗುತ್ತದೆ. ಇದಕ್ಕೆ ನೆರವಾಗುವಂಥ ಒಂದಿಷ್ಟು ವೈದ್ಯಕೀಯ ಪರೀಕ್ಷೆಗಳನ್ನೂ ಕಾಲಕಾಲಕ್ಕೆ ಮಾಡಿಸಬೇಕಾಗುತ್ತದೆ. ಯಾವುವು ಆ ಪರೀಕ್ಷೆಗಳು? ಅದರಿಂದ ಏನಾಗುತ್ತದೆ?

HPV and Pap test

ಎಚ್‌ಪಿವಿ ಮತ್ತು ಪ್ಯಾಪ್‌ ಟೆಸ್ಟ್‌

ಗರ್ಭ ಕೊರಳಿನ ಕ್ಯಾನ್ಸರ್‌ ಪತ್ತೆಗೆ ಅಗತ್ಯವಾದ ಪರೀಕ್ಷೆಗಳಿವು. 30 ವರ್ಷದ ನಂತರ ಮಹಿಳೆಯರು ಪ್ರತಿ ಐದು ವರ್ಷಗಳಿಗೊಮ್ಮೆ ಈ ಪರೀಕ್ಷೆಗಳನ್ನು ಮಾಡಿಸಬೇಕು. ಇದರಿಂದ ಗರ್ಭಕೊರಳಿನ ಕೋಶಗಳಲ್ಲಿ ಯಾವುದಾದರೂ ಅಸಾಮಾನ್ಯ ಬೆಳವಣಿಗೆಗಳಿದ್ದರೆ ಮುಂಚಿತವಾಗಿಯೇ ಪತ್ತೆಯಾಗುತ್ತದೆ. ಇಂಥ ಕ್ಯಾನ್ಸರ್‌ಕಾರಕ ಕೋಶಗಳ ಇರುವಿಕೆ ಪ್ರಾರಂಭದಲ್ಲೇ ಪತ್ತೆಯಾದರೆ ಚಿಕಿತ್ಸೆಯನ್ನೂ ಪರಿಣಾಮಕಾರಿಯಾಗಿ ನೀಡುವುದಕ್ಕೆ, ಪೂರ್ಣ ಗುಣವಾಗುವುದಕ್ಕೆ ಸಾಧ್ಯವಿದೆ. ಎಚ್‌ಪಿವಿ ಪರೀಕ್ಷೆಯಿಂದ ಕ್ಯಾನ್ಸರ್‌ಗೆ ಕಾರಣವಾಗುವ ಹ್ಯೂಮನ್‌ ಪ್ಯಾಪಿಲೋಮ ವೈರಸ್‌ನ ಇರುವಿಕೆ ಪತ್ತೆ ಮಾಡಬಹುದು.

Mammogram

ಮ್ಯಾಮೊಗ್ರಾಮ್‌

ಸ್ತನ ಕ್ಯಾನ್ಸರ್‌ನ ಪತ್ತೆಗೆ ಈ ಪರೀಕ್ಷೆಯನ್ನು ಮಾಡಲಾಗುತ್ತದೆ. 30ರ ನಂತರ ಸ್ತನ ಪರೀಕ್ಷೆಗಳನ್ನು ಮಾಡಿಕೊಳ್ಳುವುದು ಅಗತ್ಯ. 40ರ ನಂತರ ಎರಡು ವರ್ಷಕ್ಕೊಮ್ಮೆ ಮ್ಯಾಮೊಗ್ರಾಮ್‌ ಮಾಡಿಸಿಕೊಳ್ಳುವುದು ಸೂಕ್ತ. ಈ ಪರೀಕ್ಷೆಯಲ್ಲಿ ಪ್ರಾರಂಭಿಕ ಹಂತದಲ್ಲಿರುವ ಕ್ಯಾನ್ಸರ್‌ ಕೋಶಗಳನ್ನು ಪತ್ತೆ ಮಾಡಬಹುದು. ಇದರಿಂದ ಚಿಕಿತ್ಸೆಯೂ ಪರಿಣಾಮಕಾರಿಯಾಗಿ, ಬದುಕುಳಿಯುವ ಪ್ರಮಾಣವೂ ಹೆಚ್ಚುತ್ತದೆ.

Bone Health In Winter

ಮೂಳೆ ಸಾಂದ್ರತೆ ಪರೀಕ್ಷೆ

ವಯಸ್ಸು ಹೆಚ್ಚುತ್ತಿದ್ದಂತೆ ಮಹಿಳೆಯರನ್ನು ಕಾಡುವ ಹಲವು ತೊಂದರೆಗಳ ಪೈಕಿ ಆಸ್ಟಿಯೊಪೊರೊಸಿಸ್‌ ಸಹ ಒಂದು. ಈ ಕಾಯಿಲೆಯಲ್ಲಿ, ಮೂಳೆಗಳು ಅಲ್ಲಲ್ಲಿ ಟೊಳ್ಳಾಗಿ ಮುರಿಯುವ ಸಾಧ್ಯತೆ ಉಂಟಾಗುತ್ತದೆ. ಮೂಳೆ ಸಾಂದ್ರತೆ ಪರೀಕ್ಷೆ ಅಥವಾ ಡೆಕ್ಸಾ ಸ್ಕ್ಯಾನ್‌ನಿಂದ ಮೂಳೆಗಳ ಸಾಂದ್ರತೆ ಎಲ್ಲಾದರೂ ಕಡಿಮೆಯಿದೆಯೇ ಎಂಬುದನ್ನು ಪರೀಕ್ಷಿಸಿಕೊಳ್ಳಬಹುದು.

Drinks That Control Blood pressure

ಬಿಪಿ ಪರೀಕ್ಷೆ

ಒತ್ತಡದ ಜೀವನದಿಂದಾಗಿ ರಕ್ತದ ಏರೊತ್ತಡದ ಸಮಸ್ಯೆ 30ರ ನಂತರವೇ ಕಾಣಬರುತ್ತಿದೆ. ಇದರಿಂದ ಹೃದಯದ ತೊಂದರೆಗಳು, ಪಾರ್ಶ್ವವಾಯುವಿನಂಥ ಸಮಸ್ಯೆಗಳಿಗೆ ದಾರಿಯಾಗುತ್ತದೆ. ಹಾಗಾಗಿ ಸಮಸ್ಯೆಯ ಆರಂಭವನ್ನು ಗುರುತಿಸಿದರೆ, ಅದನ್ನು ಹತೋಟಿಯಲ್ಲಿ ತರುವುದಕ್ಕೆ ಬೇಕಾದ ಜೀವನಶೈಲಿಯ ಬದಲಾವಣೆಗಳನ್ನು ಮಾಡಿಕೊಳ್ಳಲು ಅನುಕೂಲ

Image Of Diabetes Control

ಮಧುಮೇಹ ಪರೀಕ್ಷೆ

ಸಕ್ಕರೆ ಕಾಯಿಲೆಯಂತೂ ಮಕ್ಕಳಾದಿಯಾಗಿ ಎಲ್ಲ ವಯೋಮಾನದ ಜನರನ್ನು ಬಾಧಿಸುತ್ತಿದೆ. 30ರ ನಂತರ ಮಹಿಳೆಯರು ಈ ಪರೀಕ್ಷೆಯನ್ನು ಮಾಡಿಸಿಕೊಳ್ಳುತ್ತಿದ್ದರೆ ಮಧುಮೇಹ-ಪೂರ್ವ ‍ಸ್ಥಿತಿಯಲ್ಲೇ ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಡಯಾಬಿಟಿಸ್‌ ರಿವರ್ಸಲ್‌ ಎನ್ನುವುದು ಈಗಿನ ಹೊಸ ಸಾಧ್ಯತೆ.

ಕೊಲೆಸ್ಟ್ರಾಲ್‌ ತಪಾಸಣೆ

ಲಿಪಿಡ್‌ ಪರೀಕ್ಷೆ ಅಥವಾ ಕೊಲೆಸ್ಟ್ರಾಲ್‌ ಪರೀಕ್ಷೆಯೂ 30 ನಂತರ ಬೇಕಾಗುತ್ತದೆ. ದೇಹದ ಚಯಾಪಚಯ ಸರಿಯಾಗಿ ಇಲ್ಲದಿದ್ದಾಗ ಬಾಧಿಸಬಹುದಾದ ತೊಂದರೆಗಳಲ್ಲಿ ಕೊಲೆಸ್ಟ್ರಾಲ್‌ ಹೆಚ್ಚಳವೂ ಒಂದು. ಇದನ್ನೂ ಪ್ರಾರಂಭದಲ್ಲಿ ಪತ್ತೆ ಮಾಡಿದರೆ ಜೀವನಶೈಲಿಯಲ್ಲಿ ಬದಲಾವಣೆಗಳನ್ನು ಮಾಡಿಕೊಂಡು, ವೈದ್ಯರ ಸಲಹೆಯ ಮೇಲೆಗೆ ಚಿಕಿತ್ಸೆಯನ್ನೂ ತೆಗೆದುಕೊಂಡರೆ ಹೃದಯವನ್ನು ಜೋಪಾನ ಮಾಡಿಕೊಳ್ಳಬಹುದು.

ಥೈರಾಯ್ಡ್‌ ಪರೀಕ್ಷೆ

ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿ ಕಾಣಬರುತ್ತಿರುವ ಸಮಸ್ಯೆಯಿದು. ಕೆಲವೊಮ್ಮ ಅಟೊಇಮ್ಯೂನ್‌ ಕಾಯಿಲೆಗಳೂ ಇದಕ್ಕೆ ಕಾರಣವಾಗಿರಬಹುದು. ಆದರೆ ಥೈರಾಯ್ಡ್‌ ಹೆಚ್ಚು-ಕಡಿಮೆ ಇಲ್ಲದಂತೆ ಸರಿಯಾಗಿ ಕಾರ್ಯ ನಿರ್ವಹಿಸುತ್ತಿದೆಯೇ ಎಂಬುದನ್ನು ೩೦ರ ನಂತರ ನೋಡಬೇಕಾಗುತ್ತದೆ. ತೂಕ ಏರಿಳಿತ, ಸುಸ್ತು, ಕೂದಲು ಉದುರುವುದು ಮುಂತಾದ ಲಕ್ಷಣಗಳಿದ್ದರೆ ವೈದ್ಯರ ಸಲಹೆಯ ಮೇರೆಗೆ ಈ ಪರೀಕ್ಷೆಯನ್ನು ಶೀಘ್ರವಾಗಿ ಮಾಡಿಸಬೇಕಾಗಬಹುದು. ಥೈರಾಯ್ಡ್‌ ಸಮಸ್ಯೆಯ ಲಕ್ಷಣಗಳು ಇಲ್ಲದಿದ್ದರೆ, 30ರ ನಂತರ ಪ್ರತಿ ಎರಡು ವರ್ಷಗಳಿಗೆ ನೋಡಿದರೆ ಸಾಕಾಗುತ್ತದೆ.

Cancer test

ಕೊಲೊರೆಕ್ಟಲ್‌ ಕ್ಯಾನ್ಸರ್‌ ಪರೀಕ್ಷೆ

ಇದು ಕರುಳು ಮತ್ತು ಗುದದ್ವಾರದ ನಡುವಿನ ಭಾಗದ ಪರೀಕ್ಷೆ. ಇದನ್ನು ಸಾಮಾನ್ಯವಾಗಿ 50ರ ನಂತರ ಮಾಡಿಸಲು ಸೂಚಿಸಲಾಗುತ್ತದೆ. ಆದರೆ ಕುಟುಂಬದಲ್ಲಿ ಇಂಥ ಪ್ರಕರಣಗಳಿದ್ದರೆ, ಮುಂಚಿತವಾಗಿಯೇ ಮಾಡಿಸುವುದು ಸೂಕ್ತ. ಕೊಲೊನೊಸ್ಕೊಪಿಯಂಥ ಪರೀಕ್ಷೆಗಳಲ್ಲಿ ಪ್ರಾರಂಭಿಕ ಹಂತದಲ್ಲೇ ಸಮಸ್ಯೆಗಳನ್ನು ಪತ್ತೆ ಮಾಡಬಹುದು.

ಇದನ್ನೂ ಓದಿ: Benefits of Bamboo Shoots: ಮೂಳೆಗಳ ನೋವು, ಮಲಬದ್ಧತೆ ನಿವಾರಣೆಗೆ ಎಳೆಯ ಬಿದಿರು ಸೇವನೆ ಮದ್ದು

Continue Reading

ಆರೋಗ್ಯ

Mangoes for Health: ದಿನಕ್ಕೆ ಎಷ್ಟು ಮಾವಿನ ಹಣ್ಣು ತಿಂದರೆ ಆರೋಗ್ಯಕ್ಕೆ ಒಳ್ಳೆಯದು?

ಮಾವಿನ ಹಣ್ಣು (Mangoes for Health) ಕೊಟ್ಟರೆ ಎಷ್ಟೂ ತಿನ್ನುತ್ತೇವೆ ಎನ್ನುವವರಿದ್ದಾರೆ. ಹಾಗಂತ ದಿನಕ್ಕೆ 10 ಮಾವಿನ ಹಣ್ಣು ತಿನ್ನಲಾದೀತೇ? ಹಾಗೆ ತಿಂದರೆ ಆರೋಗ್ಯದ ಗತಿ ಏನು? ಹಾಗಾದರೆ ಒಂದೇ ತಿನ್ನಬೇಕೆ? ಎರಡು ತಿಂದರೆ ಸಾಕೇ? ಮಾವಿನ ಹಣ್ಣು ಇಷ್ಟವೆಂದು ಕಷ್ಟ ಬೀಳುವಷ್ಟು ಸೇವಿಸಬಹುದೇ? ದಿನಕ್ಕೆ ಎಷ್ಟು ಮಾವಿನ ಹಣ್ಣು ತಿಂದರೆ ಸಾಕು ಮತ್ತು ಬೇಕು? ಅದನ್ನು ಹೇಗೆ ತಿಳಿಯುವುದು? ಈ ಲೇಖನ ಓದಿ.

VISTARANEWS.COM


on

Mangoes for Health
Koo

ಮಾವಿನ ಹಣ್ಣಿನ (Mangoes for Health) ಋತು ಪ್ರಾರಂಭವಾಗಿದೆ. ಆ ಹಣ್ಣಿನ ಜಾತಿ, ಬಣ್ಣ, ಆಕೃತಿ, ಗಾತ್ರ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ, ಅದರ ರುಚಿ ಮತ್ತು ಪರಿಮಳಕ್ಕೆ ಮನಸೋಲುವ ದೇಶ ನಮ್ಮದು. ಹಾಗಾಗಿ ಮಾವಿನ ಕಾಲವನ್ನು ದೊಡ್ಡ ಹಬ್ಬದಂತೆಯೇ ಸಂಭ್ರಮಿಸುತ್ತೇವೆ. ಮಿಡಿಯಾಗಿದ್ದಾಗ ಉಪ್ಪಿನಕಾಯಿ ಹಾಕುವುದರಿಂದ ಹಿಡಿದು, ಕಾಯಿ, ಹಣ್ಣುಗಳವರೆಗೆ ಸಿಹಿ-ಖಾರದ ಹಲವು ಅಡುಗೆಗಳನ್ನು ಮಾಡುತ್ತೇವೆ. ಇನ್ನು ಹಣ್ಣುಗಳನ್ನು ಹಾಗೆಯೇ ತಿನ್ನುವುದಕ್ಕೆ ದಾಕ್ಷಿಣ್ಯ ಮಾಡಿಕೊಳ್ಳುವವರು ಹುಡುಕಿದರೂ ಸಿಗಲಿಕ್ಕಿಲ್ಲ. ಈ ಹಣ್ಣಿನ ಘಮ-ರುಚಿಯ ಮೇಲೆ ಆಣೆ-ಭಾಷೆಗಳನ್ನು ಹಾಕುವವರೂ ಇರಬಹುದೆಂದರೆ ಇದರ ಜನಪ್ರಿಯತೆಯನ್ನು ಯಾರೂ ಊಹಿಸಬಹುದು. ವಿಷಯವೀಗ ಅದಲ್ಲ, ದಿನಕ್ಕೆ ಎಷ್ಟು ಮಾವಿನ ಹಣ್ಣು ತಿನ್ನಬಹುದು?
ಕೊಟ್ಟರೆ ಎಷ್ಟೂ ತಿನ್ನುತ್ತೇವೆ ಎನ್ನುವವರಿದ್ದಾರೆ. ಹಾಗಂತ ದಿನಕ್ಕೆ 10 ಮಾವಿನ ಹಣ್ಣು ತಿನ್ನಲಾದೀತೇ? ಹಾಗೆ ತಿಂದರೆ ಆರೋಗ್ಯದ ಗತಿ ಏನು? ಹಾಗಾದರೆ ಒಂದೇ ತಿನ್ನಬೇಕೆ? ಎರಡು ತಿಂದರೆ ಸಾಕೇ? ಅದರಲ್ಲೂ ಮಧುಮೇಹವಿದ್ದವರು ಮಾವಿನ ಹಣ್ಣಿನ ಪ್ರಿಯರಾಗಿದ್ದರೆ… ಅವರ ಕಷ್ಟ ಹೇಳಿ ಸುಖವಿಲ್ಲ. ಹಾಗಾದರೆ ಮಧುಮೇಹಿಗಳು ಮಾವು ತಿನ್ನಲೇಬಾರದೇ? ತಿಂದರೆ ಎಷ್ಟು?- ಇಂಥ ಹಲವು ಪ್ರಶ್ನೆಗಳು ಕಾಡಬಹುದು ಮಾವಿನ ಪ್ರಿಯರನ್ನು. ಈ ಪ್ರಶ್ನೆಗಳಿಗೆ ಉತ್ತರಿಸಲು ಈ ಲೇಖನದಲ್ಲಿ ಯತ್ನಿಸಲಾಗಿದೆ.

National Mango Day 2023

ಸತ್ವಗಳೇನಿವೆ?

ಒಂದು ಮಾವಿನ ಹಣ್ಣನ್ನು ಸಣ್ಣದು, ದೊಡ್ಡದು- ಹೀಗೆಲ್ಲ ವರ್ಣಿಸಿದರೆ ಗೊಂದಲ ಹೆಚ್ಚಾಗುತ್ತದೆ. ಹಾಗಾಗಿ ಒಂದು ಕಪ್‌ ಅಥವಾ 165 ಗ್ರಾಂ ಮಾವಿನ ಹಣ್ಣು ಎಷ್ಟು ಕ್ಯಾಲರಿಗಳನ್ನು ನಮಗೆ ನೀಡುತ್ತದೆ ಎಂಬುದನ್ನು ತಿಳಿಯೋಣ. 165 ಗ್ರಾಂ ತಾಜಾ ಮಾವಿನ ಹಣ್ಣಿನಲ್ಲಿ ಅಂದಾಜು 100 ಕ್ಯಾಲರಿ ದೊರೆಯುತ್ತದೆ. ಅದರಲ್ಲಿ 1.4 ಗ್ರಾಂ ಪ್ರೊಟೀನ್‌, 25 ಗ್ರಾಂ ಪಿಷ್ಟ, 2.8ಗ್ರಾಂ ನಾರು ಮತ್ತು 23 ಗ್ರಾಂ ಸಕ್ಕರೆ ಪ್ರಮುಖವಾದವು. ಅದಲ್ಲದೆ, ದೈನಂದಿನ ಅಗತ್ಯದ ಶೇ. 67ರಷ್ಟು ವಿಟಮಿನ್‌ ಸಿ ಇದಿಷ್ಟೇ ಮಾವಿನ ಹಣ್ಣಿನಿಂದ ದೊರೆಯುತ್ತದೆ. ಜೊತೆಗೆ, ಫೋಲೇಟ್‌, ತಾಮ್ರ, ಮೆಗ್ನೀಶಿಯಂ ಹಲವು ವಿಟಮಿನ್‌ಗಳು ಈ ಹಣ್ಣಿನಲ್ಲಿವೆ.

ಎಷ್ಟು ತಿನ್ನಬಹುದು?

ಎರಡು ಕಪ್‌ ಮಾವಿನ ಹಣ್ಣು ಅಥವಾ 330 ಗ್ರಾಂ ಮಾವಿನ ಹಣ್ಣನ್ನು (ಮಧ್ಯಮ ಗಾತ್ರದ ಎರಡು ಹಣ್ಣು ಎಂದಿಟ್ಟುಕೊಳ್ಳಿ) ಒಂದು ದಿನಕ್ಕೆ ಸೇವಿಸಿದರೆ ಸಾಕು ಎಂಬುದು ಆಹಾರ ತಜ್ಞರ ಲೆಕ್ಕಾಚಾರ. ಇಷ್ಟೊಂದು ರುಚಿಯಾದ ಹಣ್ಣನ್ನು ದಿನಕ್ಕೊಂದು ನಾಲ್ಕಾರು ತಿನ್ನುವಂತಿಲ್ಲವೇ ಎಂದು ಮರುಗಿದರೆ, ಊಹುಂ. ಇದರಲ್ಲಿರುವ ಸಕ್ಕರೆಯಂಶವೇ ಈ ಮಿತಿಯನ್ನು ಅನುಸರಿಸಲು ಕಾರಣ. ಜೊತೆಗೆ ನಾರು ಸಹ ಇರುವುದರಿಂದ, ಅತಿಯಾಗಿ ತಿಂದರೆ ಅತಿಸಾರ ಅಥವಾ ಡಯರಿಯ ಕಾಡುವುದರಲ್ಲಿ ಅನುಮಾನವಿಲ್ಲ. ಮಿತಿಮೀರಿ ತಿಂದರೆ ತೂಕ ಹೆಚ್ಚುವುದಂತೂ ನಿಶ್ಚಿತ. ಹಾಗಾಗಿ ಮಾವಿನ ಹಣ್ಣನ್ನು ದಿನವೂ ಸೇವಿಸಬಹುದು, ಆದರೆ ಮಿತವಾಗಿ.

Health Tips For diabetic patients

ಮಧುಮೇಹಿಗಳು…?

ಅವರಿಗೆ ಈ ಹಣ್ಣು ನಿಷಿದ್ಧವಂತೂ ಅಲ್ಲ. ಆದರೆ ಸರಿಯಾದ ಪ್ರಮಾಣದ ಹಣ್ಣನ್ನು ಸರಿಯಾದ ರೀತಿಯಲ್ಲಿ ತಿನ್ನುವುದು ಮುಖ್ಯ. ಯಾವುದೇ ಆಹಾರವನ್ನು ತಿಂದರೂ ಸಕ್ಕರೆಯಂಶ ವ್ಯತ್ಯಾಸವಾಗುವುದು ಖಚಿತ. ಆದರೆ ಗ್ಲೈಸೆಮಿಕ್‌ ಸೂಚಿ ಕಡಿಮೆಯಿರುವ ಆಹಾರಗಳಿಂದ ಈ ಏರಿಳಿತವನ್ನು ಮಿತಿಯಲ್ಲಿ ಇರಿಸಿಕೊಳ್ಳಲು ಸಾಧ್ಯವಾಗುತ್ತದೆ. ಅದರಲ್ಲೂ ಋತುಮಾನದ ಹಣ್ಣುಗಳು ಎಲ್ಲರ ಆರೋಗ್ಯಕ್ಕೂ ಅಗತ್ಯ.
ಊಟ, ತಿಂಡಿಯ ಜೊತೆಗೆ ಅಥವಾ ನಂತರ ಮಾವಿನ ಹಣ್ಣನ್ನು ಮಧುಮೇಹಿಗಳು ಸೇವಿಸದಿದ್ದರೆ ಒಳ್ಳೆಯದು. ಅವೆರಡರ ನಡುವಿನ ತಿಂಡಿಯಂತೆ ಇದನ್ನು ಅಲ್ಪಪ್ರಮಾಣದಲ್ಲಿ ಸೇವಿಸಿ ನೋಡಿ. ಉದಾ, ಮೊದಲಿಗೆ ಅರ್ಧ ಹಣ್ಣು ಸೇವಿಸಿ, ಎರಡು ತಾಸುಗಳ ನಂತರ ರಕ್ತದಲ್ಲಿನ ಸಕ್ಕರೆಯಂಶವನ್ನು ಅಳೆಯಿರಿ. ಇದು ಮಿತಿಯಲ್ಲಿ ಇದೆಯೆಂದಾದರೆ ಅರ್ಧ ಹಣ್ಣನ್ನು ನೀವು ಸೇವಿಸಬಹುದು. ಒಂದೊಮ್ಮೆ ಸಕ್ಕರೆಯಂಶ ಏರಿದೆಯೆಂದರೆ, ಹಣ್ಣಿನ ಪ್ರಮಾಣವನ್ನು ಕಡಿಮೆ ಮಾಡಿ. ಈ ಹಣ್ಣನ್ನು ಜ್ಯೂಸ್‌ ಅಥವಾ ಶೇಕ್‌ ಮಾಡಿ ಸೇವಿಸುವುದಕ್ಕಿಂತ ಹಣ್ಣನ್ನು ಹಾಗೆಯೇ ತಿನ್ನಿ. ಇದರಿಂದ ಹಣ್ಣಿನ ನಾರೂ ದೇಹ ಸೇರುತ್ತದೆ. ಉಳಿದ ಹಣ್ಣು, ತರಕಾರಿಗಳ ಜೊತೆಗೆ ಸಲಾಡ್‌ ಮಾಡಿ ಅದಕ್ಕೆ ಕೊಂಚ ಮಾವು ಸೇರಿಸಿದರೆ ಸಮಸ್ಯೆಯಾಗದು.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

Continue Reading

ಆರೋಗ್ಯ

ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ನಮಗೆ ನಿಜಕ್ಕೂ ಒಆರ್‌ಎಸ್‌ (ORS) ಅಗತ್ಯ ಬೀಳುವುದು ಯಾವಾಗ? ಮಧುಮೇಹ ಇದ್ದವರೂ ಇದನ್ನು ಕುಡಿಯಬಹುದೇ? ಮಕ್ಕಳಿಗೂ ಸೂಕ್ತವೇ? ಒಆರ್‌ಎಸ್‌ ಪುಡಿ ಒಳ್ಳೆಯದೋ ಅಥವಾ ಜ್ಯೂಸ್‌ ರೀತಿಯಲ್ಲಿರುವ ಒಆರ್‌ಎಸ್‌ ಒಳ್ಳೆಯದೋ? ಈ ಕುರಿತು ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

drinking ors
Koo

ಬಿಸಿಲಿನ ಝಳ (ORS) ನೆತ್ತಿ ಸುಡುವಂತಿದೆ. ತಾಪಮಾನ 40 ಡಿಗ್ರಿ ಸೆ. ಆಚೀಚೆ ಬರುತ್ತಿದ್ದಂತೆ ನಿರ್ಜಲೀಕರಣಕ್ಕೆ ತುತ್ತಾಗದಂತೆ ಕಾಪಾಡಿಕೊಳ್ಳಲು ಹಲವು ಪ್ರಯತ್ನಗಳಲ್ಲಿ ಜನ ನಿರತರಾಗಿರುವುದು ಕಂಡುಬರುತ್ತದೆ. ಅವುಗಳಲ್ಲಿ ಪ್ರಮುಖ ಪೇಯವೆಂದರೆ ಒಆರ್‌ಎಸ್‌ ಅಥವಾ ಓರಲ್‌ ರಿಹೈಡ್ರೇಶನ್‌ ಸೊಲ್ಯೂಶನ್‌. ದೇಹಕ್ಕೆ ಅಗತ್ಯವಾದ ನೀರು, ಸಕ್ಕರೆ ಮತ್ತು ಲವಣಗಳನ್ನು ಹೊಂದಿರುವ ಈ ದ್ರಾವಣದ ಸೇವನೆಯಿಂದ ನಿರ್ಜಲೀಕರಣಕ್ಕೆ ತುತ್ತಾಗಿ ಪ್ರಾಣಾಪಾಯ ಆಗುವುದರಿಂದ ಪಾರಾಗಬಹುದು. ಆದರೆ ಇದನ್ನು ಯಾರು, ಎಷ್ಟು ಕುಡಿಯಬಹುದು? ಸೆಕೆಗೆ ತತ್ತರಿಸುತ್ತಿರುವ ಈ ದಿನಗಳಲ್ಲಿ ಒಆರ್‌ಎಸ್‌ನಂಥವು ಎಷ್ಟು ಬೇಕಿದ್ದರೂ ಹೊಟ್ಟೆ ಸೇರುತ್ತವೆ. ಆದರೆ ಇದನ್ನು ಎಷ್ಟು ಕುಡಿದರೆ ಸಾಕು ಮತ್ತು ಬೇಕು? ನಿರ್ಜಲೀಕರಣದಿಂದ ಕಳೆದುಕೊಂಡ ಖನಿಜಾಂಶಗಳನ್ನು ಮತ್ತು ನೀರನ್ನು ದೇಹಕ್ಕೆ ಮರಳಿ ಒದಗಿಸಿಕೊಡುವ ವ್ಯವಸ್ಥಿತವಾದ ಮಾರ್ಗವಿದು. ಬೇಸಿಗೆಯ ತೀವ್ರತೆ ವಿಪರೀತವಾದ ಮೇಲೆ ರಾಜಧಾನಿಯೊಂದರಲ್ಲೇ ಒಆರೆಸ್‌ ಮಾರಾಟ ಶೇ. ೬೦ರಷ್ಟು ಹೆಚ್ಚಿದೆ. ಅದರಲ್ಲೂ ವಾಂತಿ, ಡಯರಿಯಾ, ಸುಸ್ತು ಮತ್ತು ನಿರ್ಜಲೀಕರಣದ ಲಕ್ಷಣಗಳು ಕಾಣುತ್ತಿದ್ದಂತೆ ಒಂದು ಸ್ಯಾಶೆ ಒಆರೆಸ್‌ ನೀರಿಗೆ ಬೆರೆಸಿ ಕುಡಿದರೆ, ಜೀವಕ್ಕೆ ತಂಪಾಗುತ್ತದೆ ಎಂಬುದು ಬಹುತೇಕ ಮಂದಿಗೆ ಅನುಭವಕ್ಕೆ ಬಂದಿದೆ. ಆದರೆ ನಮಗೆ ನಿಜಕ್ಕೂ ಓಆರೆಸ್‌ ಅಗತ್ಯ ಬೀಳುವುದು ಯಾವಾಗ? ಮಧುಮೇಹ ಇದ್ದವರೂ ಇದನ್ನು ಕುಡಿಯಬಹುದೇ? ಮಕ್ಕಳಿಗೂ ಸೂಕ್ತವೇ? ಒಆರೆಸ್‌ ಪುಡಿ ಒಳ್ಳೆಯದೋ ಅಥವಾ ಜ್ಯೂಸ್‌ ರೀತಿಯಲ್ಲಿರುವ ಒಆರೆಸ್ಸೆಲ್‌ ಒಳ್ಳೆಯದೋ?

ors drink

ಏನಿದು ಒಆರ್‌ಎಸ್‌

ರಾಬರ್ಟ್‌ ಕ್ರೇನ್‌ ಎಂಬಾತ ಇದರ ಮಹತ್ವವನ್ನು ತಿಳಿಸಿಕೊಟ್ಟವ. 1960ರ ಸುಮಾರಿಗೆ ವಾಂತಿ, ಅತಿಸಾರದಿಂದ ಆಗುತ್ತಿದ್ದ ಪ್ರಾಣಾಪಾಯಗಳನ್ನು ತಡೆಯುವುದಕ್ಕೆ ಈ ದ್ರಾವಣದ ಸೇವನೆಯನ್ನು ಜಾರಿಗೆ ತರಲಾಗಿತ್ತು. ವಾಂತಿ-ಭೇದಿಯಿಂದ ಆಗುತ್ತಿದ್ದ ನಿರ್ಜಲೀಕರಣ ತಪ್ಪಿಸಲು ರಕ್ತನಾಳಕ್ಕೆ ಗ್ಲೂಕೋಸ್‌ ಕೊಡುವ ಪದ್ಧತಿ ಆಗ ಚಾಲ್ತಿಯಲ್ಲಿತ್ತು. ಆದರೆ ಎಲ್ಲ ಕಡೆಯೂ ಚಿಕಿತ್ಸೆಯನ್ನು ನೀಡಲಾಗುತ್ತಿರಲಿಲ್ಲ. ಆಗ ಒಆರೆಸ್‌ ಎಂಬ ಜೀವಜಲದ ಸೇವನೆ ವರದಾನವಾಗಿ ಪರಿಣಮಿಸಿತ್ತು. ಇದು ಗ್ಲೂಕೋಸ್‌, ಸೋಡಿಯಂ ಕ್ಲೋರೈಡ್‌, ಪೊಟಾಶಿಯಂ ಕ್ಲೋರೈಡ್‌ ಮತ್ತು ಸೋಡಿಯಂ ಸಿಟ್ರೇಟ್‌ಗಳ ಮಿಶ್ರಣವಾಗಿದೆ. ಜೊತೆಗೆ ಜಿಂಕ್‌ ಸಹ ಸೇರಿರುವುದರಿಂದ ವಾಂತಿ- ಅತಿಸಾರದ ಲಕ್ಷಣಗಳ ಉಪಶಮನಕ್ಕೆ ನೆರವಾಗುತ್ತದೆ.

ಯಾವಾಗ ಕುಡಿಯಬೇಕು?

ನಿರ್ಜಲೀಕರಣದ ಪ್ರಾರಂಭಿಕ ಲಕ್ಷಣಗಳು ಗೋಚರವಾಗುತ್ತಿದ್ದಂತೆ ಒಆರೆಸ್‌ ಸೇವನೆಯನ್ನು ಪ್ರಾರಂಭಿಸುವುದು ಸೂಕ್ತ. ಅಂದರೆ ತೀವ್ರ ಬಾಯಾರಿಕೆ. ತುಟಿಗಳೆಲ್ಲ ಒಣಗಿದಂತಾಗುವುದು, ಮೂತ್ರ ಕಡಿಮೆಯಾಗುವುದು, ಮೂತ್ರದ ಬಣ್ಣ ಗಾಢವಾಗುವುದು, ಸುಸ್ತು, ಆಯಾಸ, ತಲೆ ಸುತ್ತುವುದು, ತಲೆಯೊಳಗೆ ನೋವು… ಇಂಥ ಯಾವುದೇ ಅನುಭವಕ್ಕೆ ಬಂದರೂ ಒಆರೆಸ್‌ ಸೇವನೆಯನ್ನು ಆರಂಭಿಸಬಹುದು. ಬಿಸಿಲಿನ ತೀವ್ರತೆ ಸಿಕ್ಕಾಪಟ್ಟೆ ಇರುವ ದಿನಗಳಲ್ಲಿ, ಮನೆಯೊಳಗಿದ್ದರೂ ಸುಸ್ತು, ಆಯಾಸ, ಸಂಕಟ ಕಾಡುತ್ತಿರುವ ಹೊತ್ತಿನಲ್ಲಿ ಒಂದು ಲೋಟ ಒಆರೆಸ್‌ ನೀರು ಕುಡಿಯುವುದು ಜೀವವನ್ನು ತಂಪಾಗಿಸುತ್ತದೆ.

ಎಷ್ಟು ಕುಡಿಯಬೇಕು?

ಇದು ಆ ವ್ಯಕ್ತಿಯ ದೇಹಸ್ಥಿತಿಯನ್ನು ಅವಲಂಬಿಸಿದೆ. ನಿರ್ಜಲೀಕರಣದ ಲಕ್ಷಣಗಳು ಸ್ವಲ್ಪ ಅಥವಾ ಮಧ್ಯಮ ಪ್ರಮಾಣದಲ್ಲಿದ್ದರೆ, ಸುಮಾರು 20-25 ಎಂ.ಎಲ್‌ನಷ್ಟು ಒಆರೆಸ್‌ ದ್ರಾವಣವನ್ನು ಒಮ್ಮೆ ಗುಟುಕರಿಸುವುದು. ಪ್ರತಿ 10-15 ನಿಮಿಷಗಳಿಗೆ ಇದನ್ನೇ ನಿಯಮಿತವಾಗಿ ಮುಂದುವರಿಸುವುದು. ದಾಹ ಕಡಿಮೆಯಾಗಿ, ಬಾಯಿ ಒಣಗುವುದು ನಿಂತು, ಮೂತ್ರ ಹೆಚ್ಚಾಗಿ, ಮೂತ್ರದ ಬಣ್ನ ತಿಳಿಯಾಗಿ, ಸುಸ್ತು ಕಡಿಮೆಯಾಗುವವರೆಗೂ ಇದನ್ನೇ ಮುಂದುವರಿಸಬೇಕು. ಅಗತ್ಯವಿದ್ದರೆ ಇದನ್ನು ದಿನವಿಡೀ ಮಾಡಬಹುದು. ಆದರೆ ನಿರ್ಜಲೀಕರಣ ತೀವ್ರವಾಗಿದ್ದರೆ ಒಆರೆಸ್‌ ಪ್ರಮಾಣ ಹೆಚ್ಚು ಬೇಕಾಗುತ್ತದೆ. ಇದಕ್ಕೆ ವೈದ್ಯರಲ್ಲಿ ಸಲಹೆ ಕೇಳುವುದು ಒಳಿತು.

ಯಾರೆಲ್ಲ ಕುಡಿಯಬಹುದು?

ಬೇಸಿಗೆಯ ಹೊಡೆತ ತೀವ್ರವಾಗಿರುವ ಈ ದಿನಗಳಲ್ಲಿ ಬಹುತೇಕ ಎಲ್ಲರೂ ಇದನ್ನು ಸೇವಿಸಬಹುದು. ಆದರೆ ಹೃದ್ರೋಗಿಗಳು, ಕಿಡ್ನಿ ಸಮಸ್ಯೆ ಇರುವವರು ವೈದ್ಯರ ಸಲಹೆಯನ್ನು ತೆಗೆದುಕೊಳ್ಳಬೇಕು. ಅಗತ್ಯವಿದ್ದಾಗ ಮಧುಮೇಹಿಗಳು ಸಹ ಇದನ್ನು ಸೇವಿಸಬಹುದು. ಆದರೆ ನಿಯಮಿತವಾಗಿ ಸೇವಿಸುವ ಅಗತ್ಯವಿದ್ದರೆ ಸಕ್ಕರೆಯಂಶದ ಮೇಲೆ ಕಣ್ಣಿಡಬೇಕಾಗುತ್ತದೆ. ಹಾಗಾಗಿ ಅವರೂ ವೈದ್ಯರಲ್ಲಿ ಸಮಾಲೋಚನೆ ಮಾಡುವುದು ಕ್ಷೇಮ. ಇದರಿಂದ ಯಾವಾಗ, ಎಷ್ಟು ಕುಡಿಯಬಹುದು ಎಂಬುದು ಸ್ಪಷ್ಟವಾಗುತ್ತದೆ.

Boy Drinking Water from Glass

ಮಕ್ಕಳಿಗೆ ನೀಡಬಹುದೇ?

ಖಂಡಿತ. ಆರು ತಿಂಗಳ ನಂತರದ ಶಿಶುಗಳಿಗೂ ಒಆರೆಸ್‌ನಿಂದ ಅನುಕೂಲವಾಗುತ್ತದೆ. ಬಿಸಿಲ ದಿನಗಳಲ್ಲಿ, 6-24 ತಿಂಗಳ ಮಕ್ಕಳಿಗೆ, ದಿನಕ್ಕೆ 20 ಚಮಚ ಒಆರೆಸ್‌ ನೀಡಬಹುದು. 2-5 ವರ್ಷದ ಮಕ್ಕಳಿಗೆ 40 ಚಮಚ ಒಆರೆಸ್‌ ನೀಡಬಹುದು. 5 ವರ್ಷಕ್ಕೆ ಮೇಲ್ಪಟ್ಟ ಮಕ್ಕಳಿಗೆ ಅವು ಕುಡಿದು ತಡೆಯುವಷ್ಟು ನೀಡಬಹುದು. ವಯಸ್ಕರಿಗಿಂತ ಮಕ್ಕಳೇ ಹೆಚ್ಚು ನಿರ್ಜಲೀಕರಣಕ್ಕೆ ತುತ್ತಾಗುವುದರಿಂದ ಒಆರೆಸ್‌ ದ್ರಾವಣ ಎಳೆಯರ ಪಾಲಿನ ಜೀವಜಲ.

ಯಾವುದು ಒಳ್ಳೆಯದು?

ವಾಂತಿ, ಅತಿಸಾರದಂಥ ತೊಂದರೆ ಇರುವಾಗ ಒಆರ್‌ಎಸ್‌ ಪುಡಿಯೇ ಸೂಕ್ತವಾದದ್ದು. ಅದರ ಮೇಲೆ ನಮೂದಿಸಿರುವ ಪ್ರಮಾಣವನ್ನು ತಪ್ಪದೆ ಪಾಲಿಸಬೇಕು. ಒಆರೆಸೆಲ್‌ನಲ್ಲಿ ಬಣ್ಣ ಮತ್ತು ಸುವಾಸನೆಯನ್ನು ಸೇರಿಸಿರುವ ಸಾಧ್ಯತೆ ಹೆಚ್ಚಿರುವುದರಿಂದ, ಚಿಕಿತ್ಸೆಗೆ ಪುಡಿಯೇ ಸೂಕ್ತ. ಹಾಗಲ್ಲದೆ ಬೇಸಿಗೆಯ ಹೊಡೆತ ತಡೆಯುವಾಗ, ಸಾಮಾನ್ಯ ಸುಸ್ತು, ಆಯಾಸಗಳ ಪರಿಹಾರಕ್ಕಾದರೆ ಯಾವುದನ್ನಾದರೂ ಬಳಸಬಹುದು.

ಇದನ್ನೂ ಓದಿ: Baking Soda: ಅಡುಗೆ ಸೋಡಾ ನಿಜಕ್ಕೂ ಆರೋಗ್ಯಕ್ಕೆ ಕೆಟ್ಟದ್ದಾ?

Continue Reading

ಆರೋಗ್ಯ

World Malaria Day: ಮಲೇರಿಯಾದಿಂದ ಮಕ್ಕಳನ್ನು ರಕ್ಷಿಸಿಕೊಳ್ಳುವುದು ಹೇಗೆ?

ಮಲೇರಿಯಾವನ್ನು (World Malaria Day) ನಿಯಂತ್ರಿಸಲು ಮತ್ತು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಜಾಗತಿಕ ಮಟ್ಟದಲ್ಲಿ ಜಾಗೃತಿಯನ್ನು ಮೂಡಿಸುವ ಹಿನ್ನೆಲೆಯಲ್ಲಿ ಪ್ರತಿವರ್ಷ ಏಪ್ರಿಲ್ 25 ರಂದು ʼವಿಶ್ವ ಮಲೇರಿಯಾ ದಿನʼವನ್ನು ಆಚರಿಸಲಾಗುತ್ತದೆ. ಪ್ರಸಕ್ತ ವರ್ಷ ಈ ದಿನವನ್ನು ʼಜಗತ್ತಿನಾದ್ಯಂತ ಮಲೇರಿಯಾ ವಿರುದ್ಧದ ಹೋರಾಟಕ್ಕೆ ಒತ್ತುʼ ಎಂಬ ಥೀಮ್‌ನೊಂದಿಗೆ ಆಚರಿಸಲಾಗುತ್ತಿದೆ. ಮಲೇರಿಯಾ ಕಾಯಿಲೆಯು ಮಕ್ಕಳ ಮೇಲೆ ಬೀರುವ ಪರಿಣಾಮ ಮತ್ತು ಪೋಷಕರು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

World Malaria Day April 25
Koo

ಪ್ರಪಂಚದಾದ್ಯಂತ ಮಲೇರಿಯಾವನ್ನು (World Malaria Day) ನಿಯಂತ್ರಿಸಲು ಮತ್ತು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಜಾಗತಿಕ ಮಟ್ಟದಲ್ಲಿ ಜಾಗೃತಿಯನ್ನು ಮೂಡಿಸುವ ಹಿನ್ನೆಲೆಯಲ್ಲಿ ಪ್ರತಿವರ್ಷ ಏಪ್ರಿಲ್ 25 ರಂದು ʼವಿಶ್ವ ಮಲೇರಿಯಾ ದಿನʼವನ್ನು ಆಚರಿಸಲಾಗುತ್ತದೆ. ಪ್ರಸಕ್ತ ವರ್ಷ ಈ ದಿನವನ್ನು ʼಜಗತ್ತಿನಾದ್ಯಂತ ಮಲೇರಿಯಾ ವಿರುದ್ಧದ ಹೋರಾಟಕ್ಕೆ ಒತ್ತುʼ ಎಂಬ ಥೀಮ್‌ನೊಂದಿಗೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಲೇರಿಯಾ ಕಾಯಿಲೆಯು ಮಕ್ಕಳ ಮೇಲೆ ಬೀರುವ ಪರಿಣಾಮ ಜೊತೆಗೆ ಪೋಷಕರು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಬೆಂಗಳೂರಿನ ಕಿಂಡರ್ ಆಸ್ಪತ್ರೆಯ ಮಕ್ಕಳ ತಜ್ಞರಾದ ಶಿಲ್ಪಾ ಪಾಂಡ್ಯ ಅವರು ವಿವರಿಸಿದ್ದಾರೆ.

Dr. Shilpa Pandya Consultant Neonatology and Paediatrics

ಪ್ರಶ್ನೆ: ಮಲೇರಿಯಾ ಹರಡುವುದು ಹೇಗೆ?

ಉತ್ತರ: ಮಲೇರಿಯಾವು ಸೊಳ್ಳೆಯಿಂದ ಹರಡುವ ರೋಗವಾಗಿದ್ದು, ಪ್ಲಾಸ್ಮೋಡಿಯಂ ಫಾಲ್ಸಿಪಾರಮ್‌ ಎಂಬುದು ಇದಕ್ಕೆ ಕಾರಣವಾಗಿದೆ. ಈ ಕಾಯಿಲೆಯು ಮಕ್ಕಳು ಮತ್ತು ವಯಸ್ಕರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ವ್ಯಕ್ತಿಯು ಸೊಳ್ಳೆಯ ಕಡಿತಕ್ಕೆ ಒಳಗಾದ ನಂತರ ಮಲೇರಿಯಾದ ಪರಾವಲಂಬಿಗಳು ಆ ವ್ಯಕ್ತಿಯ ಯಕೃತ್ ಅನ್ನು ಸೇರಿಕೊಂಡು ಯಕೃತ್ತಿನ ಜೀವಕೋಶಗಳಲ್ಲಿ ದ್ವಿಗುಣಗೊಂಡು ಕೆಂಪು ರಕ್ತ ಕಣಗಳನ್ನು ಸೋಂಕಿಗೆ ಒಳಪಡಿಸುತ್ತವೆ. ಜ್ವರ, ತಲೆನೋವು, ವಾಕರಿಕೆ, ವಾಂತಿ ಮತ್ತು ಕೆಲವೊಮ್ಮೆ ಅತಿಸಾರ ಬೇಧಿಯಾಗುವುದು ಈ ಕಾಯಿಲೆಯ ಲಕ್ಷಣಗಳು. ಕಾಯಿಲೆ ಅತಿಯಾದಾಗ ಅಂಗಾಂಗ ವೈಫಲ್ಯಕ್ಕೆ ಕಾರಣವಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಸಕಾಲಕ್ಕೆ ಚಿಕಿತ್ಸೆ ತೆಗೆದುಕೊಳ್ಳುವುದು ಅತ್ಯಗತ್ಯ ಎನ್ನುತ್ತಾರೆ ಮಕ್ಕಳ ತಜ್ಞರಾದ ಶಿಲ್ಪಾ ಪಾಂಡ್ಯ.

ಪ್ರಶ್ನೆ: ಮಕ್ಕಳಲ್ಲಿ ಕಂಡುಬರುವ ಮಲೇರಿಯಾದ ಸಾಮಾನ್ಯ ಲಕ್ಷಣಗಳೇನು?

ಉತ್ತರ: ಮಲೇರಿಯಾ ಸೋಂಕಿತ ಮಕ್ಕಳು ಸಾಮಾನ್ಯವಾಗಿ ಜ್ವರದಿಂದ ಬಳಲುತ್ತಿರುತ್ತಾರೆ. ಅದಲ್ಲದೆ ಶೀತ, ತಲೆನೋವು, ವಾಕರಿಕೆ, ವಾಂತಿ ಮತ್ತು ಭೇದಿ ಲಕ್ಷಣಗಳು ಕೂಡ ಕಾಣಿಸಿಕೊಳ್ಳುತ್ತದೆ. ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ ಮಲೇರಿಯಾ ಹೊಂದಿರುವ ಎಲ್ಲಾ ಮಕ್ಕಳು ಜ್ವರದ ಜೊತೆಗೆ ಶೀತವನ್ನು ಹೊಂದಿರುವುದಿಲ್ಲ. ಆದರೆ ಅಸ್ವಸ್ಥತೆ ಅಥವಾ ಆಯಾಸದಂತಹ ಇತರ ರೋಗಲಕ್ಷಣಗಳನ್ನೂ ಹೊಂದಿರಬಹುದು.

Image Of Foods For Fight Against Dengue Fever

ಪ್ರಶ್ನೆ: ಮಲೇರಿಯಾ ಪೀಡಿತ ಮಗುವಿನ ಆರೈಕೆ ಹೇಗಿರಬೇಕು?

ಉತ್ತರ: ಮಲೇರಿಯಾ ಪೀಡಿತ ಮಗುವಿನ ಆರೈಕೆಯಲ್ಲಿ ಪೋಷಕರು ಪ್ರಮುಖ ಪಾತ್ರವಹಿಸುತ್ತಾರೆ. ಕಾಯಿಲೆಯಿಂದ ಕೂಡಿರುವ ಮಗುವಿಗೆ ಪ್ಯಾರಾಸಿಟಮಾಲ್‌ನಂತಹ ಜ್ವರ ನಿಯಂತ್ರಿಸುವ ಔಷಧಗಳನ್ನು ನೀಡುವುದು, ಮಗುವಿಗೆ ಸಾಕಷ್ಟು ವಿಶ್ರಾಂತಿ ನೀಡುವುದು ಮತ್ತು ಮಗುವಿನ ದೇಹ ಹೈಡ್ರೇಟೆಡ್ ಆಗಿರಲು ಸಾಕಷ್ಟು ನೀರು ಕುಡಿಯಲು ಅವರನ್ನು ಪ್ರೋತ್ಸಾಹಿಸುವುದರ ಜೊತೆಗೆ ಉತ್ತಮ ಆರೈಕೆಯನ್ನು ಒದಗಿಸುವುದು ಅತ್ಯಗತ್ಯ. ಮುಖ್ಯವಾಗಿ ವೈದ್ಯರ ಸಲಹೆಯ ಮೇರೆಗೆ ಮಗುವನ್ನು ಆರೈಕೆ ಮಾಡುವ ಮೂಲಕ ಸೋಂಕು ಮುಕ್ತವಾಗುವಂತೆ ನೋಡಿಕೊಳ್ಳುವುದು ಪೋಷಕರ ಜವಾಬ್ದಾರಿ.

ಪ್ರಶ್ನೆ: ಮಲೇರಿಯಾ ಪೀಡಿತ ಮಗುವಿನಲ್ಲಿ ಕಂಡುಬರುವ ಅಪಾಯಕಾರಿ ಚಿಹ್ನೆಗಳು ಯಾವುವು?

ಉತ್ತರ: ಮಲೇರಿಯಾದಿಂದ ಬಳಲುತ್ತಿರುವ ಮಗುವು ಕಾಮಾಲೆ (ಚರ್ಮ ಮತ್ತು ಕಣ್ಣುಗಳು ಹಳದಿ ಬಣ್ಣಕ್ಕೆ ತಿರುಗುವುದು), ರೋಗಗ್ರಸ್ತವಾಗುವಿಕೆ, ಮೂತ್ರ ಅಥವಾ ಮಲದಲ್ಲಿ ರಕ್ತ ಕಂಡುಬರುವುದು ಅಥವಾ ಸೂಕ್ತ ಔಷಧಿಗಳನ್ನು ತೆಗೆದುಕೊಂಡರೂ ನಿರಂತರವಾಗಿ ಜ್ವರ ಕಾಣಿಸಿಕೊಳ್ಳುವಂತಹ ಅಪಾಯಕಾರಿ ಚಿಹ್ನೆಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರ ಸಲಹೆ ತೆಗೆದುಕೊಳ್ಳುವುದು ಪೋಷಕರ ಕರ್ತವ್ಯ.

ಪ್ರಶ್ನೆ: ಮಲೇರಿಯಾದ ಬಗೆಗೆ ಪೋಷಕರಲ್ಲಿ ಇರುವ ತಪ್ಪುಕಲ್ಪನೆಗಳೇನು?

ಉತ್ತರ: ಮಲೇರಿಯಾ ಕಾಯಿಲೆಯ ಬಗೆಗೆ ಪೋಷಕರಲ್ಲಿ ಹಲವಾರು ತಪ್ಪುಕಲ್ಪನೆಗಳಿವೆ. ಅವುಗಳ ಕುರಿತಾಗಿ ಮಕ್ಕಳ ತಜ್ಞೆ ಶಿಲ್ಪಾ ಪಾಂಡ್ಯ ಅವರು ಹೇಳುತ್ತಾರೆ.

ತಪ್ಪುಕಲ್ಪನೆ: ಮಲೇರಿಯಾವು ಕಲುಷಿತ ನೀರಿನ ಸೇವನೆ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಿಂದ ಹರಡುತ್ತದೆ.
ಸತ್ಯಾಂಶ: ಮಲೇರಿಯಾವು ಸೊಳ್ಳೆ ಕಡಿತ ಅಥವಾ ರಕ್ತ ವರ್ಗಾವಣೆಯ ಮೂಲಕ ಮಾತ್ರ ಹರಡುತ್ತದೆ. ನೀರು ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಿಂದ ಹರಡುವುದಿಲ್ಲ.

ತಪ್ಪುಕಲ್ಪನೆ: ಮಲೇರಿಯಾ ಸೋಂಕಿತ ತಾಯಂದಿರು ಸ್ತನ್ಯಪಾನ ಮಾಡಬಾರದು!
ಸತ್ಯಾಂಶ: ಮಲೇರಿಯಾ ಪರಾವಲಂಬಿಗಳು ಎದೆ ಹಾಲಿನ ಮೂಲಕ ಹರಡುವುದಿಲ್ಲ. ಆದರೆ ತಾಯಿಯು ಮಗುವಿಗೆ ಹಾಲುಣಿವಾಗ ಕೆಲವು ಔಷಧಿಗಳ ಸೇವನೆ ಬಗೆಗೆ ಎಚ್ಚರಿಕೆವಹಿಸುವುದು ಅತ್ಯಗತ್ಯ.

ತಪ್ಪುಕಲ್ಪನೆ: ಸೋಂಕಿತ ಮಗುವಿನ ಸಂಪರ್ಕದಿಂದ ಮಕ್ಕಳಿಗೆ ಮಲೇರಿಯಾ ಹರಡುತ್ತದೆ.
ಸತ್ಯಾಂಶ: ಸೋಂಕಿತ ಮಗುವಿನ ಸಂಪರ್ಕದಿಂದ, ಸೋಂಕಿತ ಮಗು ಬಳಸುವ ಬಟ್ಟೆ ಅಥವಾ ಪಾತ್ರೆಗಳಂತಹ ವಸ್ತುಗಳನ್ನು ಹಂಚಿಕೊಳ್ಳುವುದರಿಂದ ಮಕ್ಕಳಿಗೆ ಮಲೇರಿಯಾ ಹರಡುವುದಿಲ್ಲ.

ತಪ್ಪುಕಲ್ಪನೆ: ಮಲೇರಿಯಾ ಸೋಂಕು ರೋಗನಿರೋಧಕ ಶಕ್ತಿಯನ್ನು ಒದಗಿಸುತ್ತದೆ.
ಸತ್ಯಾಂಶ: ವಿಭಿನ್ನ ಜಾತಿಯ ಪರಾವಲಂಬಿಗಳಿಂದ ಮನುಷ್ಯರಲ್ಲಿ ಮತ್ತೆ ಮಲೇರಿಯಾ ಸೋಂಕು ಕಾಣಿಸಿಕೊಳ್ಳಬಹುದು. ಹೀಗಾಗಿ ರೋಗನಿರೋಧಕ ಶಕ್ತಿ ಶಾಶ್ವತವಲ್ಲ.

ತಪ್ಪುಕಲ್ಪನೆ: ಮಲೇರಿಯಾ ಕಾಯಿಲೆಗೆ ಲಸಿಕೆ ಲಭ್ಯವಿದೆ!
ಸತ್ಯಾಂಶ: ಈ ಕಾಯಿಲೆಗೆ ಲಸಿಕೆ ಕಂಡುಹಿಡಿಯಲು ಸಂಶೋಧನೆ ನಡೆಯುತ್ತಿದ್ದು, ಸದ್ಯ ಮಾರುಕಟ್ಟೆಯಲ್ಲಿ ಯಾವುದೇ ಲಸಿಕೆ ಲಭ್ಯವಿಲ್ಲ.

How to control mosquitoes?

ಪ್ರಶ್ನೆ: ಪೋಷಕರು ತಮ್ಮ ಮಕ್ಕಳನ್ನು ಮಲೇರಿಯಾದಿಂದ ಹೇಗೆ ರಕ್ಷಿಸಿಕೊಳ್ಳಬಹುದು ?

ಉತ್ತರ: ಪೋಷಕರು ತಮ್ಮ ಮಕ್ಕಳನ್ನು ಮಲೇರಿಯಾದಿಂದ ರಕ್ಷಿಸಿಕೊಳ್ಳಲು ಹಲವು ಕ್ರಮಗಳನ್ನು ತೆಗೆದುಕೊಳ್ಳಬಹುದು. ಅವುಗಳೆಂದರೆ

  • ಸೊಳ್ಳೆಗಳನ್ನು ದೂರವಿಡಲು ಸೊಳ್ಳೆ ನಿವಾರಕಗಳು ಮತ್ತು ಸೊಳ್ಳೆ ಬತ್ತಿಗಳನ್ನು ಬಳಸುವುದು.
  • ಬೆಳಗ್ಗೆ ಮತ್ತು ಮುಸ್ಸಂಜೆ ವೇಳೆ ಸೊಳ್ಳೆಗಳು ಹೆಚ್ಚು, ಹೀಗಾಗಿ ಮಕ್ಕಳು ಮೈತಂಬಾ ಉಡುಪುಗಳನ್ನು ಧರಿಸುವಂತೆ ನೋಡಿಕೊಳ್ಳಬೇಕು.
  • ಮನೆಯ ಆವರಣದಲ್ಲಿ ನೀರು ನಿಂತಿದ್ದರೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹಾಗಾಗಿ ಮನೆಯ ಸುತ್ತ ನಿಂತ ನೀರನ್ನು ಸ್ವಚ್ಛಗೊಳಿಸುವುದು ಪ್ರಮುಖವಾದುದು.
  • ಎರಡು ತಿಂಗಳೊಳಗಿನ ಶಿಶುಗಳಿಗೆ ಸೊಳ್ಳೆ ಪರದೆಗಳನ್ನು ಬಳಸುವುದು ಮುಖ್ಯ.
  • ಸೊಳ್ಳೆಗಳು ಹೆಚ್ಚಿರುವ ಮುಂಜಾನೆ ಮತ್ತು ಮುಸ್ಸಂಜೆ ಸಮಯದಲ್ಲಿ ಮಕ್ಕಳು ಹೊರಾಂಗಣ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ಪೋಷಕರು ನೋಡಿಕೊಳ್ಳಬೇಕು.
  • ಸೊಳ್ಳೆ ಕಡಿತ ಮತ್ತು ನೈರ್ಮಲ್ಯ ಅಭ್ಯಾಸಗಳ ಬಗ್ಗೆ ಮಕ್ಕಳಿಗೆ ಶಿಕ್ಷಣ ನೀಡಬೇಕು ಎನ್ನುವುದು ತಜ್ಞರ ಸಲಹೆ.
Mosquitoes Dangerous Animal Mosquitoes: Responsible for transmitting diseases like malaria, dengue fever, and Zika virus, mosquitoes are considered one of the most dangerous animals due to the diseases they carry.

ಈ ವರ್ಷ 2024ರ ಥೀಮ್/ವಿಷಯದ ಕುರಿತಾಗಿ “ಮಲೇರಿಯಾವು ತಡೆಗಟ್ಟಬಹುದಾದ ಕಾಯಿಲೆಯಾಗಿದೆ. ಆದರೆ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಮಲೇರಿಯಾದಿಂದ ಮೃತಹೊಂದುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮಲೇರಿಯಾ ನಿಯಂತ್ರಣಕ್ಕೆ ಮುಂದಾಗೋಣ ಮತ್ತು ಅನಗತ್ಯ ಜೀವಹಾನಿಯನ್ನು ತಡೆಗಟ್ಟೋಣ” ಎಂದು ವೈದ್ಯೆ ಶಿಲ್ಪಾ ಪಾಂಡ್ಯ (ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು: 6364409651, 6364466240) ಅಭಿಪ್ರಾಯ ಪಡುತ್ತಾರೆ.

ಇದನ್ನೂ ಓದಿ: World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

Continue Reading
Advertisement
Implement the work without damaging the drinking water pipelines says ZP CEO Sadashiva Prabhu
ವಿಜಯನಗರ3 hours ago

Vijayanagara News: ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹಾಳಾಗದಂತೆ ಕಾಮಗಾರಿ ಅನುಷ್ಠಾನಗೊಳಿಸಿ: ಜಿಪಂ ಸಿಇಒ

Congress leader Rahul Gandhi speech in Ballari
ಕರ್ನಾಟಕ3 hours ago

Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

lok sabha election
ಪ್ರಮುಖ ಸುದ್ದಿ4 hours ago

ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

Neha Murder Case
ಕರ್ನಾಟಕ4 hours ago

Neha Murder Case: ನೇಹಾ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆ ಏರ್ಪಡಿಸಿದ ರಾಜ್ಯ ಸರ್ಕಾರ

IPL 2024
ಪ್ರಮುಖ ಸುದ್ದಿ4 hours ago

IPL 2024 : ಬೈರ್​ಸ್ಟೋವ್​ ಸ್ಫೋಟಕ ಶತಕ; ಕೆಕೆಆರ್​ ವಿರುದ್ಧ ಪಂಜಾಬ್​​ಗೆ ವಿಶ್ವ ದಾಖಲೆಯ ವಿಜಯ

Bike Accident
ಕರ್ನಾಟಕ5 hours ago

Bike Accident: ಮತದಾನ ಮಾಡಿ ತೆರಳುತ್ತಿದ್ದ ವೇಳೆ ಬೈಕ್‌ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

lok sabha election
Lok Sabha Election 20245 hours ago

Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Hassan News
ಕರ್ನಾಟಕ5 hours ago

Hassan News: ಎರಡು ಗುಂಪುಗಳ ನಡುವೆ ಮಾರಾಮಾರಿ; ಕೈ ಕಾರ್ಯಕರ್ತನಿಗೆ ಗಂಭೀರ ಗಾಯ

Pandya brothers
ಕ್ರೀಡೆ5 hours ago

Pandya Brothers : ಪಾಂಡ್ಯ ಸಹೋದರರ ಮನೆಗೆ ಹೊಸ ಅತಿಥಿ ಆಗಮನ, ಖುಷಿಯಲ್ಲಿ ಕುಟುಂಬ

ಕರ್ನಾಟಕ6 hours ago

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ16 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202416 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202417 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ23 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌