Curry leaves water: ಕರಿಬೇವಿನ ನೀರು ಕುಡಿದರೆ ಎಷ್ಟೊಂದು ಪ್ರಯೋಜನ! - Vistara News

ಆರೋಗ್ಯ

Curry leaves water: ಕರಿಬೇವಿನ ನೀರು ಕುಡಿದರೆ ಎಷ್ಟೊಂದು ಪ್ರಯೋಜನ!

ಬೆಳಗಿನ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಡಿಟಾಕ್ಸ್‌ ಪೇಯಗಳು ದೇಹಕ್ಕೆ ಹಲವು ರೀತಿಯ ಪ್ರಯೋಜನಗಳನ್ನು ಒದಗಿಸಬಲ್ಲವು. ಕರಿಬೇವಿನ ನೀರು (curry leaves water) ಸಹ ಅಂಥ ಪೇಯಗಳಲ್ಲಿ ಒಂದು. ಏನಿದನ್ನು ಸೇವಿಸುವ ಲಾಭಗಳು ಎನ್ನುವುದನ್ನು ನೋಡೋಣ.

VISTARANEWS.COM


on

Curry leaves water
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರಿಬೇವಿನ ಸೊಪ್ಪು ಒಗ್ಗರಣೆಗೆ ಮಾತ್ರ ಎಂದು ಭಾವಿಸುವುದು ಸಾಮಾನ್ಯ. ಅಲ್ಲಾದರೂ ಊಟದ ನಡುವೆ ಸಿಕ್ಕರೆ ತೆಗೆದಿರಿಸುವವರೇ ಹೆಚ್ಚು. ಹಾಗೆಂದು ಈ ಎಲೆಗಳಲ್ಲಿ ಸತ್ವಗಳು ಕಡಿಮೆಯಿಲ್ಲ. ಅಡುಗೆಮನೆಯ ಉಪಯೋಗಕ್ಕೆಂದು ಬೆಳೆಸಿಕೊಂಡ ಗಿಡಗಳ ಸಾಲಿನಲ್ಲಿ ಕರಿಬೇವಿನ ಸೊಪ್ಪಿಗೆ ಸ್ಥಾನವನ್ನು ಕೊಟ್ಟೇ ಇರುತ್ತೇವೆ. ನಮ್ಮ ಜೀರ್ಣಾಂಗಗಳಿಗೆ ಅನುಕೂಲ ಒದಗಿಸುವುದರಿಂದ ಹಿಡಿದು ರಕ್ತಹೀನತೆಯನ್ನು ಕಡಿಮೆ ಮಾಡುವವರೆಗೆ ಹಲವು ರೀತಿಯ ಸದ್ಗುಣಗಳು ಕರಿಬೇವಿನ ಎಲೆಗಳಿಗಿವೆ. ಬೆಳಗಿನ ಖಾಲಿ ಹೊತ್ತಿನಲ್ಲಿ ಸೇವಿಸುವ ಕೆಲವು ಡಿಟಾಕ್ಸ್‌ ಪೇಯಗಳು ನಮ್ಮ ದೇಹದಲ್ಲಿನ ಅನಗತ್ಯ ಅಂಶಗಳನ್ನು ಹೊರಹಾಕಲು ನೆರವಾಗುತ್ತವೆ. ಇವೆಲ್ಲ ಸರಳ, ಸುಲಭ, ನೈಸರ್ಗಿಕ ಆಯ್ಕೆಗಳು. ಕರಿಬೇವಿನ ಸೊಪ್ಪಿನ ನೀರಿನಿಂದಲೂ ಇಂಥ ಅನುಕೂಲಗಳನ್ನು ಪಡೆಯಬಹುದು. ಈ ಸೊಪ್ಪಿನ ರಸವನ್ನು ರುಬ್ಬಿ, ಸೋಸಿ ಅದನ್ನು ಕುಡಿಯಿರಿ ಎಂದರೆ ಮುಖ ಕಿವುಚುವವರೇ ಹೆಚ್ಚು. ಹಾಗಾಗಿ ಚೆನ್ನಾಗಿ ತೊಳೆದ ಕೆಲವು ಎಲೆಗಳನ್ನು ರಾತ್ರಿ ನೀರಿಗೆ ಹಾಕಿ, ಬೆಳಗ್ಗೆ ಆ ಸೊಪ್ಪುಗಳನ್ನು ಕೊಂಚ ಕಿವುಚಿ, ಖಾಲಿ ಹೊಟ್ಟೆಯಲ್ಲಿ ಆ ನೀರನ್ನು ಮಾತ್ರವೇ ಕುಡಿದರೆ ಸಾಕು. ಅದಿಲ್ಲದಿದ್ದರೆ, ಬೆಳಗ್ಗೆ ಬಿಸಿ ನೀರಿನಲ್ಲಿ ಕರಿಬೇವಿನ ಎಲೆಗಳನ್ನು ಕೆಲಕಾಲ ನೆನೆಸಿಟ್ಟು, ಆ ನೀರನ್ನು ಸೋಸಿ ಕಡಿದರೂ (curry leaves water) ಆದೀತು. ಇದರ ಲಾಭಗಳು ಬಹಳಷ್ಟಿವೆ.

Curry leaves water image

ಉತ್ಕರ್ಷಣ ನಿರೋಧಕಗಳು

ಈ ನೀರಿನಲ್ಲಿ ಹಲವು ರೀತಿಯ ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಿರುತ್ತವೆ. ಇದರಿಂದ ದೇಹದ ಚಯಾಪಚಯ ಚುರುಕಾಗಿ, ಜೀರ್ಣಾಂಗಗಳ ಕ್ಷಮತೆ ಹೆಚ್ಚುತ್ತದೆ. ಮಾತ್ರವಲ್ಲ, ಮೊದಲಿಗೆ ದೇಹಕ್ಕೆ ದೊರೆಯುವ ಈ ನೀರಿನಲ್ಲಿರುವ ಸತ್ವಗಳು ತ್ವರಿತವಾಗಿ ದೇಹದೊಳಗೆ ಹೀರಲ್ಪಡುತ್ತವೆ. ಇದರಿಂದ ಉತ್ಕರ್ಷಣ ನಿರೋಧಕ ಅಂಶಗಳು ದೇಹಕ್ಕೆ ಹೇರಳವಾಗಿ ದೊರೆತು, ಉರಿಯೂತ ತಗ್ಗಿಸುವುದಕ್ಕೆ ಅನುಕೂಲವಾಗುತ್ತದೆ.

Preventing grey hair growth

ಕೂದಲು ಬೆಳೆಯಲು

ಇದರಲ್ಲಿರುವ ಕಬ್ಬಿಣದ ಸತ್ವಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದಾಗಿ ಕೂದಲುಗಳ ಮೇಲೆ ಪೂರಕ ಪರಿಣಾಮ ಬೀರುತ್ತದೆ. ಕೂದಲಿನ ಬುಡವನ್ನು ಭದ್ರಪಡಿಸಿ, ಬೆಳವಣಿಗೆಗೆ ಸಹಾಯ ಮಾಡುತ್ತದೆ. ತಲೆಯ ಚರ್ಮವನ್ನು ಆರೋಗ್ಯವಾಗಿರಿಸಿ, ಅಕಾಲದಲ್ಲಿ ಕೂದಲು ಬೆಳ್ಳಗಾಗುವುದನ್ನು ತಡೆಯುತ್ತದೆ. ಈ ಎಲ್ಲವುಗಳಿಂದ ದಡ್ಡವಾದ, ಕಪ್ಪಾದ ಕೂದಲುಗಳನ್ನು ಪಡೆಯಬಹುದು.

healthy internal organs of human digestive system

ಪಚನಕಾರಿ

ಜೀರ್ಣಕಾರಿ ಕಿಣ್ವಗಳು ಕರಿಬೇವಿನ ಎಲೆಗಳಲ್ಲಿವೆ. ಮಾತ್ರವಲ್ಲ, ಇದು ಲಘುವಾದ ವಿರೇಚಕದಂತೆಯೂ ಕೆಲಸ ಮಾಡುತ್ತದೆ. ಹಾಗಾಗಿ ಆಹಾರ ಜೀರ್ಣವಾಗಿ, ಜೀರ್ಣಾಂಗಗಳು ಶುದ್ಧವಾಗುವವರೆಗಿನ ಕೆಲಸವನ್ನು ಇದು ನಿರ್ವಹಿಸುತ್ತದೆ. ಹಾಗಾಗಿ ಬೆಳಗಿನ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ನೀರು ಕುಡಿಯುವುದು ಬಹಳಷ್ಟು ಪ್ರಯೋಜನಗಳನ್ನು ಒದಗಿಸಬಲ್ಲದು.

Woman Meditating in the Workplace Sitting in Front of a Laptop Practicing Stress Relief Exercises Diabetes Control

ಒತ್ತಡ ಶಮನ

ಮನಸ್ಸಿಗೆ ಇಷ್ಟವಾಗುವಂಥ ಪರಿಮಳಗಳು ಸಾಮಾನ್ಯವಾಗಿ ಮಾನಸಿಕ ಒತ್ತಡವನ್ನು ನಿವಾರಿಸಬಲ್ಲವು. ಕರಿಬೇವಿನ ಪರಿಮಳ ನಮ್ಮ ನಾಲಿಗೆಯಲ್ಲಿ ನೀರೂರಿಸಿ, ಜೀರ್ಣಾಂಗಗಳನ್ನು ಉದ್ದೀಪಿಸುವುದು ಮಾತ್ರವಲ್ಲ, ಮನಸ್ಸಿಗೂ ಮದ್ದಾಗಬಲ್ಲದು. ಕರಿಬೇವಿನ ನೀರು ಸ್ನಾಯುಗಳ ಮೇಲಿನ ಒತ್ತಡ ನಿವಾರಿಸಿ, ನರಗಳನ್ನು ತಂಪಾಗಿಸಿ, ದೇಹ-ಮನಸ್ಸುಗಳನ್ನು ಶಾಂತಗೊಳಿಸಬಲ್ಲದು. ಬೆಳಗಿನ ಹೊತ್ತು ಒತ್ತಡಗಳನ್ನೆಲ್ಲ ಕಳೆದುಕೊಂಡು, ಶಾಂತ ಮನಸ್ಸಿನಿಂದ ದಿನವನ್ನು ಪ್ರಾರಂಭಿಸುವುದು ಒಳ್ಳೆಯದಲ್ಲವೇ?

ಹಲವು ಸತ್ವಗಳು

ದೇಹಾರೋಗ್ಯಕ್ಕೆ ಅನುಕೂಲಗಳನ್ನು ಒದಗಿಸಬಲ್ಲ ಹಲವು ರೀತಿಯ ಸತ್ವಗಳು ಇದರಲ್ಲಿವೆ. ವಿಟಮಿನ್‌ಗಳು, ಖನಿಜಗಳು, ನಾರು ಮತ್ತಿತರ ಸೂಕ್ಷ್ಮ ಪೋಷಕಾಂಶಗಳು ಕರಿಬೇವಿನ ಸೊಪ್ಪಿನಲ್ಲಿವೆ. ಆಲ್ಕಲಾಯ್ಡ್‌ಗಳು, ಗ್ಲೈಕೋಸೈಡ್‌ಗಳು ಮತ್ತು ಫೆನಾಲಿಕ್‌ ಸಂಯುಕ್ತಗಳು ಬಹಳಷ್ಟು ರೀತಿಯಲ್ಲಿ ಪ್ರಯೋಜನಗಳನ್ನು ಒದಗಿಸಬಲ್ಲವು. ಕೊಲೆಸ್ಟ್ರಾಲ್‌ ಮತ್ತು ಟ್ರೈಗ್ಲಿಸರೈಡ್‌ ಕಡಿಮೆ ಮಾಡಲು, ಚರ್ಮದ ಕಾಂತಿಗೆ, ಶ್ವಾಸಕೋಶಗಳ ಕ್ಷೇಮಕ್ಕೆ ಸಹ ಈ ಸತ್ವಗಳು ನೆರವು ನೀಡುತ್ತವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಆಹಾರ ಸುರಕ್ಷತೆಗಾಗಿ ನಿಷೇಧ ಆದೇಶ ಹೊರಡಿಸಿದರೆ ಸಾಕೆ?

1999ರಿಂದ 2016ರವರೆಗೆ ಪ್ಲಾಸ್ಟಿಕ್ ನಿಷೇಧ ಕುರಿತು ಹಲವು ಕಾನೂನುಗಳು ಬಂದಿವೆ. ಆದರೆ, ಸಂಪೂರ್ಣವಾಗಿ ಬಳಕೆ ನಿಲ್ಲಿಸಲು ಸಾಧ್ಯವಾಗಿಲ್ಲ. 2022ರ ಜುಲೈ 1ರಿಂದ ದೇಶದಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅದು ಆರೋಗ್ಯದ ಮೇಲೆ ಮಾಡುವ ದುಷ್ಪರಿಣಾಮದ ಜೊತೆಗೆ ಪರಿಸರದ ಮೇಲೆ ಮಾಡುವ ದಾಳಿಯೂ ಇದಕ್ಕೆ ಕಾರಣ. ಆದರೆ ಅದು ಕಟ್ಟುನಿಟ್ಟಾಗಿ ಜಾರಿಯಾಗಿಲ್ಲ. ಉಳಿದ ನಿಷೇಧಗಳ ಕತೆಯೂ ಇದೇ ಆಗಿದೆ.

VISTARANEWS.COM


on

Food Safety
Koo

ಆಹಾರ ಪದಾರ್ಥಗಳಲ್ಲಿ ಲಿಕ್ವಿಡ್ ನೈಟ್ರೋಜನ್ (Liquid Nitrogen) ಬಳಕೆ ಮಾಡಿದರೆ 10 ಲಕ್ಷ ರೂ. ದಂಡ, ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ. ಇತ್ತೀಚೆಗಂತೂ ಆಹಾರ ಪದಾರ್ಥಗಳಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ಹೆಚ್ಚಾಗುತ್ತಿದೆ. ಜನರು ತಮಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಅಪಾಯದ ಬಾಗಿಲು ತಟ್ಟುತ್ತಿದ್ದಾರೆ. ಲಿಕ್ವಿಡ್ ನೈಟ್ರೋಜನ್ ಮೂಲಕ ಸ್ಮೋಕ್‌ ಐಸ್‌ಕ್ರೀಂ, ಸ್ಮೋಕ್‌ ಬಿಸ್ಕತ್ತು, ಬಿಯರ್‌ನಲ್ಲಿ ಬಳಸಲಾಗುತ್ತಿದ್ದು, ಇದು ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದೆ. ಸ್ಮೋಕಿಂಗ್ ಲಿಕ್ವಿಡ್ ನೈಟ್ರೋಜನ್ ಸೇವನೆ ಅಂಗಾಂಗಗಳ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ. ಮುಖ್ಯವಾಗಿ ಲಿಕ್ವಿಡ್‌ ನೈಟ್ರೋಜನ್‌ ಸೇವನೆಯಿಂದ ಕರಳು, ಗಂಟಲುಗಳಲ್ಲಿ ಹುಣ್ಣಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿರ್ಬಂಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆದೇಶ ಹೊರಡಿಸಿದೆ. ಇದು ಸ್ವಾಗತಾರ್ಹ ನಿರ್ಧಾರ.

ಕಲರ್ ಕಾಟನ್‌ ಕ್ಯಾಂಡಿ, ಗೋಬಿ ಮಂಚೂರಿಗೆ ಬಳಸುವ ಬಣ್ಣಗಳನ್ನು ಇತ್ತೀಚೆಗೆ ರಾಜ್ಯದಲ್ಲಿ ನಿಷೇಧಿಸಲಾಗಿದೆ. ಕಾಟನ್ ಕ್ಯಾಂಡಿಯಲ್ಲಿ ಪಿಂಕ್ ಕಲರ್ ಬರಲು ರೊಡಮೈನ್ ಬಿ ಬಳಸುತ್ತಾರೆ. ಗೋಬಿ ಮಂಚೂರಿಯಲ್ಲಿ ಟಾರ್ಟ್ರಾಸೈನ್ ಎಂಬ ಕೃತಕ ಬಣ್ಣಕಾರಕವನ್ನು ಬಳಸಲಾಗುತ್ತದೆ. ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ. ಕಲಬೆರಕೆ ಕಲರ್ ಬಳಕೆ ಮತ್ತು ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ. ಇಂಥ ಆಹಾರ ಈಗ ನಿಷೇಧಿತ. ಇದನ್ನು ಉಲ್ಲಂಘಿಸಿದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಅಡಿಯಲ್ಲಿ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಜೊತೆಗೆ 10 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುತ್ತದೆ.

ರೆಸ್ಟೋರಂಟ್‌ಗಳಲ್ಲಿ , ಬೀದಿ ಬದಿಯ ಸ್ಟಾಲ್‌ಗಳಲ್ಲಿ ಫುಡ್‌ ಪ್ರಿಯರನ್ನು ಆಕರ್ಷಿಸಲೆಂದೇ ಈ ಥರದ ಬಣ್ಣಗಳನ್ನು ಬಳಸುವುದು ರೂಢಿಯಾಗಿಬಿಟ್ಟಿದೆ. ಜನರೂ ಇದರ ಅಪಾಯದ ಅರಿವಿಲ್ಲದೆ ಬಳಸುತ್ತಲೇ ಇರುತ್ತಾರೆ. ಈ ನಡುವೆ ಚಿಕನ್‌ ಕಬಾಬ್‌ನಲ್ಲೂ ಕೆಲವರು ಬಣ್ಣಕಾರಕಗಳನ್ನು ಬಳಸುತ್ತಾರೆ. ಇದು ಕೂಡಾ ಅಪಾಯಕಾರಿ. ಆಹಾರ ಇಲಾಖೆಯ ಕಣ್ಣು ಇದರ ಮೇಲೂ ಬಿದ್ದಿದೆ. ಕಬಾಬ್ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.

ಕಾನೂನುಗಳನ್ನೇನೋ ಮಾಡಬಹುದು. ಆದರೆ ಅನುಷ್ಠಾನದ ಕತೆಯೇನು? ನೋಟೀಸ್ ನೀಡಿ ಬಿಟ್ಟುಬಿಟ್ಟರೆ ಜನ ಬಣ್ಣದ ಬಳಕೆ ಬಿಡುತ್ತಾರೆಯೇ? ಬೀದಿ ಬೀದಿಗಳಲ್ಲಿ ಕಲರ್‌ಫುಲ್ ಕಾಟನ್ ಕ್ಯಾಂಡಿಗಳು ಹಾಗೂ ಗೋಬಿ ಮಂಚೂರಿ ಬಳಕೆ ನಡೆದೇ ಇದೆ. ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ನಿಗಾ ವ್ಯವಸ್ಥೆ ಬೇಡವೇ?

1999ರಿಂದ 2016 ರವರೆಗೆ ಪ್ಲಾಸ್ಟಿಕ್ ನಿಷೇಧ ಕುರಿತು ಹಲವು ಕಾನೂನುಗಳು ಬಂದಿವೆ. ಆದರೆ, ಸಂಪೂರ್ಣವಾಗಿ ಬಳಕೆಯನ್ನು ನಿಲ್ಲಿಸಲು ಸಾಧ್ಯವಾಗಿಲ್ಲ. 2022ರ ಜುಲೈ 1ರಿಂದ ದೇಶದಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅದು ಆರೋಗ್ಯದ ಮೇಲೆ ಮಾಡುವ ದುಷ್ಪರಿಣಾಮದ ಜೊತೆಗೆ ಪರಿಸರದ ಮೇಲೆ ಮಾಡುವ ದಾಳಿಯೂ ಇದಕ್ಕೆ ಕಾರಣ. ಆದರೆ ಅದು ಕಟ್ಟುನಿಟ್ಟಾಗಿ ಜಾರಿಯಾದಂತಿಲ್ಲ. ಏಕಬಳಕೆ ಪ್ಲಾಸ್ಟಿಕ್ ಮುಂದುವರಿದಿರುವುದು ಕಾಣಿಸುತ್ತದೆ.

ಇದೆಲ್ಲದರ ಬಗ್ಗೆ ಕಾನೂನು ಮಾಡಿದರೆ ಸಾಲದು, ದೃಢವಾದ ಜಾರಿ ಮಾಡುವಿಕೆ ಇರಬೇಕು. ಸಾರ್ವಜನಿಕರು ಕೂಡ ಇದನ್ನು ಮನಗಂಡು, ಈ ಹಾನಿಕರ ವಸ್ತುಗಳಿಗೆ ಉತ್ತೇಜನ ನೀಡುವುದು ನಿಲ್ಲಿಸಬೇಕು. ಆಗ ಮಾತ್ರ ತಜ್ಞರ, ಆರೋಗ್ಯ ಇಲಾಖೆಯ ಕಳಕಳಿ ಸಾರ್ಥಕ ಆಗಬಹುದು.

ಇದನ್ನೂ ಓದಿ: Summer Food Tips: ಬೇಸಿಗೆಯಲ್ಲಿ ನಮ್ಮ ದೇಹವನ್ನು ತಂಪಾಗಿರಿಸುವ ಸರಳ ಆಹಾರಗಳಿವು!

Continue Reading

ಆರೋಗ್ಯ

Juices Side Effect: ಅಂಗಡಿಯಲ್ಲಿ ಸಿಗುವ ಜ್ಯೂಸ್‌ ಕುಡಿದರೆ ಏನಾಗುತ್ತದೆ?

ನಾವು ಮನೆಯಲ್ಲೇ ಮಾಡಿದ ಹಣ್ಣಿನ ರಸಗಳು (Juices Side Effect) ಒಮ್ಮೆ ಸಿಹಿ, ಒಮ್ಮೆ ಸಪ್ಪೆ, ಇನ್ನೊಮ್ಮೆ ಹುಳಿ- ಹೀಗೆ ನಾನಾ ರುಚಿಯಲ್ಲಿ ದೊರೆಯುತ್ತವೆ. ಆದರೆ ಬಾಟಲಿಯ ಜ್ಯೂಸ್‌ಗಳು ಸಿಹಿಯಾಗಿಯೇ ಇರುತ್ತವೆ. ರುಚಿಯಾಗಿರಲಿ ಎಂಬ ಕಾರಣಕ್ಕೆ ಹೆಚ್ಚುವರಿ ಸಕ್ಕರೆಯನ್ನು ತಯಾರಿಕೆಯ ಹಂತದಲ್ಲಿ ನಿಶ್ಚಿತವಾಗಿ ಸೇರಿಸಲಾಗುತ್ತದೆ. ಇದರಿಂದ ಆರೋಗ್ಯದ ಪಾಡೇನು? ಬಾಟಲಿಗಳಲ್ಲಿರುವ ರೆಡಿ-ಟು-ಯೂಸ್‌ ಜ್ಯೂಸ್‌ಗಳನ್ನು ಯಾಕೆ ಕುಡಿಯಬಾರದು? ಕುಡಿದರೇನಾಗುತ್ತದೆ? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

Juices Side Effect
Koo

ಹಣ್ಣಿನ ರಸ (Juices Side Effect) ಒಳ್ಳೆಯದು ಎಂಬುದು ಎಲ್ಲರ ಮಾತು. ಹಾಗಂತ ಅಂಗಡಿಗಳಲ್ಲಿ ದೊರೆಯುವ ಬಾಟಲಿಯಲ್ಲಿರುವ ನಾನಾ ಕಂಪೆನಿಗಳ ಫ್ರೂಟ್‌ ಜ್ಯೂಸ್‌ಗಳ ಬಗ್ಗೆ ಒಳ್ಳೆಯ ಅಭಿಪ್ರಾಯಗಳಿಲ್ಲ. ಯಾವುದೋ ಒಂದು ಬ್ರಾಂಡ್‌ ಎಂದಲ್ಲ, ಅಂಥ ಯಾವ ಜ್ಯೂಸ್‌ಗಳೂ ಬೇಡ ಎನ್ನುವುದು ಆರೋಗ್ಯದ ಕಾಳಜಿ ಇರುವಂಥ ಎಲ್ಲರೂ ಹೇಳುವ ಮಾತು. ಹಣ್ಣಿನ ರಸವನ್ನೇ ಕುಡಿಯುವುದಾದರೆ ತಾಜಾ ಸಿದ್ಧಪಡಿಸಿಕೊಂಡೇ ಕುಡಿಯಿರಿ ಎಂಬ ಕಿವಿ ಮಾತನ್ನು ಹೇಳುತ್ತಾರೆ. ಹಾಗೇಕೆ? ಬಾಟಲಿಗಳಲ್ಲಿರುವ ರೆಡಿ-ಟು-ಯೂಸ್‌ ಜ್ಯೂಸ್‌ಗಳನ್ನು ಯಾಕೆ ಕುಡಿಯಬಾರದು? ಕುಡಿದರೇನಾಗುತ್ತದೆ? ರುಚಿ ಎನ್ನುವುದಕ್ಕೆ ಬಹಳಷ್ಟು ಕಲ್ಪನೆಗಳಿವೆ. ಆದರೆ ಎಲ್ಲಕ್ಕಿಂತ ಜನಪ್ರಿಯ ಕಲ್ಪನೆಯೆಂದರೆ ʻಸಿಹಿʼ ಎಂಬುದು. ನಾವು ಮನೆಯಲ್ಲೇ ಮಾಡಿದ ಹಣ್ಣಿನ ರಸಗಳು ಒಮ್ಮೆ ಸಿಹಿ, ಒಮ್ಮೆ ಸಪ್ಪೆ, ಇನ್ನೊಮ್ಮೆ ಹುಳಿ- ಹೀಗೆ ನಾನಾ ರುಚಿಯಲ್ಲಿ ದೊರೆಯುತ್ತವೆ. ಹಣ್ಣಿನ ಮೂಲ ರುಚಿ ಹೇಗಿದೆಯೋ ಹಾಗೆಯೇ ಹಣ್ಣಿನ ರಸ ಇರುತ್ತದೆ, ಇರಬೇಕು. ಆದರೆ ಬಾಟಲಿಯ ಜ್ಯೂಸ್‌ಗಳು ಹಾಗಲ್ಲ. ಎಲ್ಲವೂ ಸಿಹಿಯಾಗಿಯೇ ಇರುತ್ತವೆ. ರುಚಿಯಾಗಿರಲಿ ಎಂಬ ಕಾರಣಕ್ಕೆ ಹೆಚ್ಚುವರಿ ಸಕ್ಕರೆಯನ್ನು ತಯಾರಿಕೆಯ ಹಂತದಲ್ಲಿ ನಿಶ್ಚಿತವಾಗಿ ಸೇರಿಸಲಾಗುತ್ತದೆ. ಅದೇ ಕಾರಣಕ್ಕಾಗಿಯೇ ಬಾಟಲಿಯ ಜ್ಯೂಸ್‌ ಬೇಡ ಎಂದು ಹೇಳುವುದು.

Lump sugar and a wooden spoon with white sugar on a wooden background.

ಎಷ್ಟು ಸಕ್ಕರೆ?

ಹೆಚ್ಚುವರಿ ಸಕ್ಕರೆ ಅಂದರೆ ಎಷ್ಟು? ಈ ಪ್ರಮಾಣ ಆಯಾ ಬ್ರಾಂಡ್‌ಗಳು ಮತ್ತು ಆಯಾ ಉತ್ಪನ್ನಗಳ ಮೇಲೆ ನಿರ್ಧಾರವಾಗುತ್ತದೆ. ಜ್ಯೂಸ್‌ನ ಪ್ರತಿಯೊಂದು ನಿಗದಿತ ಸರ್ವಿಂಗ್‌ನಲ್ಲಿ 6 ರಿಂದ 20 ಗ್ರಾಂಗಳವರೆಗೆ ಅಧಿಕ ಸಕ್ಕರೆಯನ್ನು ಸೇರಿಸಲಾಗುತ್ತದೆ. ಅಂದರೆ, ಆ ಉತ್ಪನ್ನದಲ್ಲಿ ಸೇರಿರುವ ನೈಸರ್ಗಿಕ ಸಿಹಿಯಂಶದ ಮೇಲಿನ ಸಕ್ಕರೆ ಪ್ರಮಾಣವಿದು. ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ, ಒಂದು ಗ್ಲಾಸ್‌ ಜ್ಯೂಸ್‌ನಲ್ಲಿ 1.5 ಚಮಚದಿಂದ 5 ಚಮಚದವರೆಗೂ ಹೆಚ್ಚುವರಿ ಸಕ್ಕರೆಯನ್ನು ನಾವು ಸೇವಿಸುತ್ತೇವೆ. ಇದು ಕೇವಲ ಜ್ಯೂಸ್‌ ಬಗೆಗಷ್ಟೇ ಅಲ್ಲ, ಫ್ಲೇವರ್‌ ಹೊಂದಿರುವ ಕಾಫಿ, ಮಿಲ್ಕ್‌ಶೇಕ್‌, ಚಹಾ, ಎನರ್ಜಿ ಡ್ರಿಂಕ್‌ಗಳು ಅಥವಾ ಎಳನೀರಾದರೂ ಸರಿ- ಇವೆಲ್ಲದಕ್ಕೂ ಹೆಚ್ಚುವರಿ ಸಕ್ಕರೆಯನ್ನು ಸೇರಿಸಲಾಗುತ್ತದೆ. ಇದರಿಂದ ಆ ಉತ್ಪನ್ನದ ಬಣ್ಣ, ರುಚಿಯನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ.

Image Of Fruit Juices Role in Managing Blood Sugar Levels

ಏನಾಗುತ್ತದೆ?

ಬೇಸಿಗೆಯಲ್ಲಿ ಹಣ್ಣಿನ ರಸಗಳನ್ನು ಹೆಚ್ಚೆಚ್ಚು ಕುಡಿಯಬೇಕೆಂಬ ಬಯಕೆ ಇರುವುದು ಸಹಜ. ಆದರೆ ಒಂದೊಂದು ಗ್ಲಾಸ್‌ನಲ್ಲೂ ಇಷ್ಟೊಂದು ಪ್ರಮಾಣದ ಸಕ್ಕರೆ ದೇಹ ಸೇರುತ್ತದೆ ಎಂದಾದರೆ, ಆರೋಗ್ಯದ ಗತಿ ಏನು? ತೂಕ ಹೆಚ್ಚುವುದು, ಇನ್‌ಸುಲಿನ್‌ ಪ್ರತಿರೋಧಕತೆ, ಹೃದಯದ ಸಮಸ್ಯೆಗಳು- ಹೀಗೆ ತರಹೇವಾರಿ ತೊಂದರೆಗಳು ಸಾಲುಗಟ್ಟುತ್ತವೆ. ಅದರಲ್ಲೂ ಮಧುಮೇಹ ಇರುವವರು ಇಂಥವನ್ನು ನಿಯಮಿತವಾಗಿ ಕುಡಿದರೆ, ಸಕ್ಕರೆ ಕಾಯಿಲೆಯನ್ನು ನಿಯಂತ್ರಣಕ್ಕೆ ತರುವುದು ಬಹಳ ಕಷ್ಟವಾಗುತ್ತದೆ.

ಏನು ಮಾಡಬೇಕು?

ಎಲ್ಲಕ್ಕಿಂತ ಸುರಕ್ಷಿತವೆಂದರೆ ತಾಜಾ ಹಣ್ಣಿನ ರಸದ ಸೇವನೆ. ಯಾವುದೇ ಸಕ್ಕರೆ-ಬೆಲ್ಲಗಳನ್ನೆಲ್ಲ ಸೇರಿಸದಿದ್ದರೂ, ಹಣ್ಣಿನ ತಾಜಾ ಪರಿಮಳವೇ ಇದಕ್ಕೆ ಅದ್ಭುತ ರುಚಿಯನ್ನು ಒದಗಿಸುತ್ತದೆ. ಜ್ಯೂಸ್‌ ಮಾತ್ರವಲ್ಲ, ಸ್ಮೂದಿ, ಮಿಲ್ಕ್‌ಶೇಕ್‌ ಮುಂತಾದ ಯಾವುದನ್ನೂ ಮಾಡಿಕೊಳ್ಳುವುದು ಕಷ್ಟವಲ್ಲ. ಆರೋಗ್ಯ ಏನಾದೀತೊ ಎಂಬ ಚಿಂತೆ ಬಿಟ್ಟು ಹಾಯಾಗಿ ಇವುಗಳನ್ನು ಗುಟುಕರಿಸಬಹುದು.

Juices

ಗಮನಿಸಿ

ಒಂದೊಮ್ಮೆ ಬಾಟಲಿಯ ಜ್ಯೂಸ್‌ಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ ಎಂದಾದರೆ, ಅವುಗಳನ್ನು ಖರೀದಿಸುವಾಗ ಬಾಟಲಿಯ ಮೇಲಿನ ಸ್ಟಿಕ್ಕರ್‌ ಗಮನಿಸಿ. ಇದರಲ್ಲಿ ಹೆಚ್ಚುವರಿ ಸಕ್ಕರೆ ಎಷ್ಟಿದೆ ಎಂಬುದನ್ನು ನೋಡಿ. ಈ ಪೈಕಿ ಯಾವುದರಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಸಕ್ಕರೆ ಸೇರಿಸಲಾಗಿದೆ ಎಂಬುದನ್ನು ಇದರಿಂದ ತಿಳಿಯಬಹುದು. ಕಡಿಮೆ ಸಕ್ಕರೆ ಇರುವುದನ್ನೇ ಖರೀದಿಸಿ. ಇರುವುದರಲ್ಲಿ ಇದು ಒಳ್ಳೆಯ ಉಪಾಯ.

ಇದನ್ನೂ ಓದಿ: Tips To Find The Juiciest Lemon: ಜ್ಯೂಸಿಯಾದ ನಿಂಬೆಹಣ್ಣನ್ನು ಮಾರುಕಟ್ಟೆಯಿಂದ ಆರಿಸಿ ತರುವುದೂ ಒಂದು ಕಲೆ! ಇಲ್ಲಿವೆ ಟಿಪ್ಸ್

ಪರ್ಯಾಯಗಳು

ಬೇಸಿಗೆಯ ದಾಹ ತಣಿಸಿಕೊಳ್ಳುವುದಕ್ಕೆ ಆರೋಗ್ಯಕರ ಪರ್ಯಾಯಗಳಿವೆ. ಅವುಗಳತ್ತ ನಾವು ಗಮನ ನೀಡಬೇಕಷ್ಟೆ. ಘಮಘಮಿಸುವ ಹರ್ಬಲ್‌ ಚಹಾಗಳು, ಗ್ರೀನ್‌ ಟೀಗಳು ದೇಹಕ್ಕೆ ಆರಾಮ ನೀಡುತ್ತವೆ. ಸುಡು ಬೇಸಿಗೆಯಲ್ಲಿ ಈ ಬಿಸಿ ಪೇಯಗಳನ್ನು ಹೇಗೆ ಕುಡಿಯುವುದೆಂಬ ಚಿಂತೆ ಇದ್ದರೆ, ಇವುಗಳನ್ನು ಆರಿಸಿ, ಫ್ರಿಜ್‌ನಲ್ಲಿರಿಸಿಯೂ ಸೇವಿಸಬಹುದು. ಪುದೀನಾ, ಅನಾನಸ್‌ ಮುಂತಾದವುಗಳನ್ನು ನೀರಿಗೆ ಸೇರಿಸಿದ ಇನ್‌ಫ್ಯೂಸ್ಡ್‌ ವಾಟರ್‌ ತಯಾರಿಸಿಕೊಳ್ಳಬಹುದು. ಮನೆಯಿಂದ ನಾಲ್ಕು ಹೆಜ್ಜೆ ಹೊರ ನಡೆದು ಎಳನೀರು ದೊರೆಯುತ್ತದೋ ನೋಡಿ. ಇವೆಲ್ಲ ಹೆಚ್ಚುವರಿ ಸಕ್ಕರೆ ಇಲ್ಲದೆಯೆ, ನೈಸರ್ಗಿಕವಾಗಿ ದೇಹವನ್ನು ತಂಪಾಗಿಡುವ ಮಾರ್ಗಗಳು.

Continue Reading

ಆರೋಗ್ಯ

Guava Leaves Benefits: ಕೇವಲ ಸೀಬೆ ಹಣ್ಣಲ್ಲ, ಎಲೆಯಿಂದಲೂ ಎಷ್ಟೊಂದು ಪ್ರಯೋಜನಗಳು!

ಸೀಬೆಯ ಎಲೆಯಿಂದ (guava leaves benefits) ನಿಮ್ಮ ಕೂದಲೂ ಸೇರಿದಂತೆ ನಿತ್ಯವೂ ಕಾಡುವ ಹಲವಾರು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣದಂತಹ ಉತ್ತರವಿದೆ. ಇದರಿಂದ ಆಗಬಹುದಾದ ಲಾಭಗಳನ್ನು ನೀವು ತಿಳಿದುಕೊಂಡರೆ ಖಂಡಿತಾ ನೀವು ಸೀಬೆ ಮರವನ್ನು ಅರಸಿಕೊಂಡು ಹೋಗುವುದರಲ್ಲಿ ಯಾವ ಸಂಶಯವೂ ಇಲ್ಲ. ಬನ್ನಿ ಸೀಬೆ ಮರದ ಎಲೆಯ ಲಾಭಗಳನ್ನು ತಿಳಿದುಕೊಳ್ಳೋಣ.

VISTARANEWS.COM


on

guava leaves benefits
Koo

ಪೇರಳೆ ಅಥವಾ ಸೀಬೆ ಹಣ್ಣಿನ (guava leaves benefits) ಮಹತ್ವದ ಬಗ್ಗೆ ನಿಮಗೆ ಕೇಳಿ ಗೊತ್ತಿರಬಹುದು. ಅದರ ಆರೋಗ್ಯದ ಲಾಭಗಳನ್ನು ನೀವು ಕೇಳಿ ತಿಳಿದುಕೊಂಡು ತಿನ್ನುತ್ತಲೂ ಇರಬಹುದು. ಆದರೆ ಸೀಬೆಕಾಯಿಯ ಎಲೆಯ ಲಾಭಗಳ ಬಗ್ಗೆ ನಿಮಗೆ ಗೊತ್ತೇ? ಸೀಬೆಯ ಎಲೆಯಿಂದ ನಿಮ್ಮ ಕೂದಲೂ ಸೇರಿದಂತೆ ನಿತ್ಯವೂ ಕಾಡುವ ಹಲವಾರು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣದಂತಹ ಉತ್ತರವಿದೆ. ಇದರಿಂದ ಆಗಬಹುದಾದ ಲಾಭಗಳನ್ನು ನೀವು ತಿಳಿದುಕೊಂಡರೆ ಖಂಡಿತಾ ನೀವು ಸೀಬೆ ಮರವನ್ನು ಅರಸಿಕೊಂಡು ಹೋಗುವುದರಲ್ಲಿ ಯಾವ ಸಂಶಯವೂ ಇಲ್ಲ. ಬನ್ನಿ ಸೀಬೆ ಮರದ ಎಲೆಯ ಲಾಭಗಳನ್ನು ತಿಳಿದುಕೊಳ್ಳೋಣ.

Guava Leaves

ಪೋಷಕಾಂಶಗಳು

ಸೀಬೆಯ ಎಲೆಯಲ್ಲಿ ಸಾಕಷ್ಟು ವಿಟಮಿನ್‌ಗಳೂ ಪೋಷಕಾಂಶಗಳೂ ಇರುವುದರಿಂದ ಕೂದಲನ್ನು ಶಕ್ತಿಯುತವಾಗಿಸುವಲ್ಲಿ ಇದರ ಪಾತ್ರ ದೊಡ್ಡದು. ಕೂದಲನ್ನು ಬೇರಿನಿಂದಲೇ ಶಕ್ತಿಯುತಗೊಳಿಸಿ ಗಟ್ಟಿಗೊಳಿಸುತ್ತದೆ. ಬುಡದಿಂದಲೇ ಕೂದಲನ್ನು ಆರೋಗ್ಯಯುತವಾಗಿಸಿ ಕೂದಲುದುರುವಿಕೆಯನ್ನು ತಡೆಯುತ್ತದೆ. ಕೂದಲು ಸೊಂಪಾಗಿ ದೃಢವಾಗಿ ಬೆಳೆಯುತ್ತದೆ.

ಕೂದಲು ದೃಢ

ಫ್ರೀ ರ್ಯಾಡಿಕಲ್ಸ್‌ ವಿರುದ್ಧ ಹೋರಾಡುವ ಗುಣವನ್ನು ಇದು ಹೊಂದಿರುವುದರಿಂದ ಕೂದಲಿನ ಬುಡಕ್ಕಾಗುವ ಹಾನಿಯನ್ನು ಇದು ತಪ್ಪಿಸುತ್ತದೆ. ಆ ಮೂಲಕ ಕೂದಲು ದೃಢವಾಗಿ ಬೆಳೆಯುತ್ತದೆ.

Image Of Guava Leaves Benefits

ರಕ್ತ ಸಂಚಾರ ಚುರುಕು

ಸೀಬೆ ಎಲೆಯು ಕೂದಲ ಬುಡದಲ್ಲಿ ರಕ್ತಸಂಚಾರವನ್ನು ಚುರುಕುಗೊಳಿಸುವಲ್ಲಿ ನೆರವಾಗುತ್ತದೆ. ಇದರಿಂದ ಕೂದಲ ಆರೋಗ್ಯ ಹೆಚ್ಚುತ್ತದೆ. ಕೂದಲಿಗೆ ಪೋಷಣೆ ಸರಿಯಾಗಿ ಆಗುವ ಮೂಲಕ ಸಂಪೂರ್ಣವಾಗಿ ಕೂದಲ ಆರೋಗ್ಯ ದ್ವಿಗುಣಗೊಳ್ಳುತ್ತದೆ.

ಕೂದಲ ಹೊಟ್ಟು ನಿವಾರಣೆ

ನಿಮಗೆ ಕೂದಲ ಹೊಟ್ಟಿನ ಸಮಸ್ಯೆ ಇದ್ದರೆ ಸೀಬೆ ಎಲೆ ಅತ್ಯುತ್ತಮ ಮನೆಮದ್ದು. ಸೀಬೆ ಎಲೆಯು ಕೂದಲ ಹೊಟ್ಟನ್ನು ತರುವ ಬ್ಯಾಕ್ಟೀರಿಯಾದ ವಿರುದ್ಧ ಹೋರಾಡಿ ಕೂದಲ ಬುಡವನ್ನು ನಯವಾಗಿಸುತ್ತದೆ. ಕೂದಲ ಬುಡದ ಚರ್ಮ ಒಣಗಿ ಏಳುವುದನ್ನು ಇದು ತಡೆಯುತ್ತದೆ. ತುರಿಕೆ ಮತ್ತು ಕಜ್ಜಿಯ ಸಮಸ್ಯೆಗಳಿಗೂ ಇದು ಒಳ್ಳೆಯದು.

Hair Growth Tips

ಕೂದಲ ಬೆಳವಣಿಗೆ

ಸೀಬೆ ಎಲೆಯನ್ನು ಆಗಾಗ ಬಳಸುವ ಮೂಲಕ ಕೂದಲ ತುದಿ ಕವಲೊಡೆಯವ ಸಮಸ್ಯೆಯಿಂದಲೂ ಮುಕ್ತಿ ಪಡೆಯಬಹುದು. ಕೂದಲು ನಯವಾಗಿ ಉದ್ದ ಬೆಳೆಯುತ್ತದೆ.

ಮಿದುಳಿನ ಆರೋಗ್ಯಕ್ಕೆ ಸಹಕಾರಿ

ಸೀಬೆ ಎಲೆಯಲ್ಲಿ ವಿಟಮಿನ್‌ ಬಿ3 ಹಾಗೂ ಬಿ6 ಇರುವುದರಿಂದ ಮಿದುಳಿನ ಆರೋಗ್ಯಕ್ಕೂ ಇದು ಒಳ್ಳೆಯದು.

ಹೊಟ್ಟೆ ನೋವಿಗೆ ಪರಿಹಾರ

ಕೇವಲ ಇವಷ್ಟೇ ಅಲ್ಲ, ಸೀಬೆಯ ಎಲೆಗಳಿಂದ ಹೊಟ್ಟೆಯ ಸಮಸ್ಯೆಗಳಿಗೆ ಪರಿಹಾರ ಕಾಣಬಹುದು. ಹೊಟ್ಟೆಯಲ್ಲಿ ಹುಣ್ಣು, ಅಲ್ಸರ್‌, ಹೊಟ್ಟೆ ನೋವು ಮತ್ತಿತರ ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಸೀಬೆ ಎಲೆಗಿದೆ.

heart attack and Diabetes control

ಮಧುಮೇಹಕ್ಕೂ ಮದ್ದು

ಸೀಬೆ ಎಲೆ ಮಧುಮೇಹಕ್ಕೆ ಒಳ್ಳೆಯ ಮನೆಮದ್ದು. ಸೀಬೆ ಎಲೆಯ ಚಹಾ ಮಾಡಿ ಕುಡಿಯುವುದರಿಂದ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣವನ್ನು ಸಮತೋಲನಕ್ಕೆ ತರಬಹುದು.

ಗಾಯಕ್ಕೆ ಔಷಧ

ಗಾಯ ಮಾಗಲು, ಗುಣವಾಗಲು, ನೋವು ನಿವಾರಕವಾಗಿ, ರೋಗ ನಿರೋಧಕವಾಗಿಯೂ ಸೀಬೆ ಎಲೆಯು ಸಹಾಯ ಮಾಡುತ್ತದೆ.

Anti-inflammatory properties Guava Leaves Benefits

ಬಾಯಿ ಹುಣ್ಣು ನಿವಾರಣೆ

ಬಾಯಿಯ ಆರೋಗ್ಯಕ್ಕೂ ಸೀಬೆ ಎಲೆ ಒಳ್ಳೆಯದು. ಬಾಯಿಹುಣ್ಣು, ಹಲ್ಲು ನೋವು, ವಸಡಿನ ಸಮಸ್ಯೆ ಮತ್ತಿತರ ಸಮಸ್ಯೆಗಳಿಗೆ ಸೀಬೆ ಎಲೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಒಂದೆಡರಡು ಸೀಬೆ ಎಲೆಯನ್ನು ಅಥವಾ ಸೀಬೆಯ ಎಳೆ ಎಲೆಯನ್ನು ಬಾಯಲ್ಲಿಟ್ಟು ಜಗಿಯುವ ಮೂಲಕ ಇದರ ಪ್ರಯೋಜನ ಪಡೆಯಬಹುದು.

ಭೇದಿಗೆ ತಡೆ

ಭೇದಿಯ ಸಮಸ್ಯೆಗೆ ಸೀಬೆ ಎಲೆ ಒಳ್ಳೆಯ ಮನೆಮದ್ದು. ಇದು ಬೇದಿಯನ್ನು ತರುವ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ತಡೆಯುವ ಮೂಲಕ ಭೇದಿಯನ್ನು ತಡೆಯುತ್ತದೆ. ಖಾಲಿ ಹೊಟ್ಟೆಯಲ್ಲಿ ಸೀಬೆ ಎಲೆಯ ಟೀ ಮಾಡಿ ಕುಡಿಯುವ ಮೂಲಕ ಪರಿಹಾರ ಕಾಣಬಹುದು.

happy woman hand in heart

ಹೃದಯ ಆರೋಗ್ಯಕ್ಕೆ ಪೂರಕ

ಹೃದಯದ ಆರೋಗ್ಯಕ್ಕೂ ಸೀಬೆ ಎಲೆಯ ಉಪಯೋಗದಿಂದ ಫಲ ಕಾಣಬಹುದು. ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸುವುದಲ್ಲದೆ, ಕೊಲೆಸ್ಟೆರಾಲ್‌ ಅನ್ನೂ ಕಡಿಮೆಗೊಳಿಸುವ ತಾಕತ್ತನ್ನು ಹೊಂದಿದೆ.

Continue Reading

ಬೆಂಗಳೂರು

Liquid Nitrogen : ಕಾಟನ್ ಕ್ಯಾಂಡಿ ಬಳಿಕ ಕರ್ನಾಟಕದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿಷೇಧ

Liquid Nitrogen: ಆರೋಗ್ಯಕ್ಕೆ ಕುತ್ತು ತರುವ ಕಾಟನ್‌ ಕ್ಯಾಂಡಿ, ಗೋಬಿ ಮಂಚೂರಿ ಬ್ಯಾನ್‌ ಬಳಿಕ ಇದೀಗ ಆಹಾರದಲ್ಲಿ ಲಿಕ್ವಿಡ್‌ ನೈಟ್ರೋಜನ್‌ ಬಳಕೆಯನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಆದೇಶವನ್ನು ಹೊರಡಿಸಿದೆ. ಆ ಪ್ರಕಾರ ಯಾರಾದರೂ ಲಿಕ್ವಿಡ್‌ ನೈಟ್ರೋಜನ್‌ ಬಳಸಿದ್ರೆ ಜೀವಾವಧಿ ಶಿಕ್ಷೆಯೊಂದಿಗೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

VISTARANEWS.COM


on

By

LIQUID NITROGEN
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆಹಾರ ಪದಾರ್ಥಗಳಲ್ಲಿ ಲಿಕ್ವಿಡ್ ನೈಟ್ರೋಜನ್ (Liquid Nitrogen) ಬಳಕೆ ಮಾಡಿದರೆ 10 ಲಕ್ಷ ರೂ. ದಂಡ, ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ. ಲಿಕ್ವಿಡ್ ನೈಟ್ರೋಜನ್‌ನ ಒಂದು ತುತ್ತು ಜೀವಕ್ಕೆ ಕುತ್ತು ತರಬಹುದು. ಹೀಗಾಗಿ ಕಲರ್ ಕಾಟನ್‌ ಕ್ಯಾಂಡಿ, ಗೋಬಿ ಮಂಚೂರಿ ಬಳಿಕ ಇದೀಗ ರಾಜ್ಯದಲ್ಲಿ ಆಹಾರದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆಯನ್ನು ಬ್ಯಾನ್ ಮಾಡಲಾಗಿದೆ.

ಕೆಲವು ರೆಸ್ಟೋರಂಟ್‌ಗಳಲ್ಲಿ ಫುಡ್‌ ಪ್ರಿಯರನ್ನು ಆಕರ್ಷಿಸಲೆಂದೇ ತರಹೇವಾರಿ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಇತ್ತೀಚೆಗಂತೂ ಆಹಾರ ಪದಾರ್ಥಗಳಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ಹೆಚ್ಚಾಗುತ್ತಿದೆ. ಜನರು ತಮಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಅಪಾಯದ ಬಾಗಿಲು ತಟ್ಟುತ್ತಿದ್ದಾರೆ. ಲಿಕ್ವಿಡ್ ನೈಟ್ರೋಜನ್ ಮೂಲಕ ಸ್ಮೋಕ್‌ ಐಸ್‌ಕ್ರೀಂ, ಸ್ಮೋಕ್‌ ಬಿಸ್ಕತ್ತು, ಬಿಯರ್‌ನಲ್ಲಿ ಬಳಸಲಾಗುತ್ತಿದ್ದು,ಇದು ಜೀವಕ್ಕೆ ಅಪಾಯವನ್ನುಂಟು ಮಾಡುತ್ತಿದೆ. ಹೀಗಾಗಿ ಲಿಕ್ವಿಡ್ ನೈಟ್ರೋಜನ್ ಬಳಸಿದ ಆಹಾರ ಸೇವಿಸುವ ಮುನ್ನ ಎಚ್ಚರವಾಗಿರಿ.

ಈ ಸ್ಮೋಕಿಂಗ್ ಲಿಕ್ವಿಡ್ ನೈಟ್ರೋಜನ್ ಸೇವನೆಯಿಂದ ಅಂಗಾಂಗಗಳ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ. ಮುಖ್ಯವಾಗಿ ಲಿಕ್ವಿಡ್‌ ನೈಟ್ರೋಜನ್‌ ಸೇವನೆಯಿಂದ ಕರಳು, ಗಂಟಲುಗಳಲ್ಲಿ ಹುಣ್ಣಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿರ್ಬಂಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆದೇಶ ಹೊರಡಿಸಿದೆ. ಲಿಕ್ವಿಡ್ ನೈಟ್ರೋಜನ್ ಬಳಕೆ ಮಾಡಿದರೆ 10 ಲಕ್ಷ ರೂ. ದಂಡ, ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಈಗಾಗಲೇ ಪಕ್ಕದ ತಮಿಳುನಾಡಲ್ಲಿ ಬಿಸ್ಕತ್‌ ಮತ್ತು ಐಸ್‌ಕ್ರೀಮ್‌ನಂತಹ ಆಹಾರ ಪದಾರ್ಥಗಳ ಜತೆ ಲಿಕ್ವಿಡ್‌ ನೈಟ್ರೋಜನ್‌ ನೇರ ಬಳಕೆಯನ್ನು ನಿಷೇಧಿಸಿದೆ. ಇದೀಗ ಕರ್ನಾಟಕದಲ್ಲೂ ಲಿಕ್ವಿಡ್‌ ನೈಟ್ರೋಜನ್‌ ಬಳಕೆಯನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: Cotton Candy Ban : ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ ಬ್ಯಾನ್‌, ಗೋಬಿ ಮಂಚೂರಿಗೂ ಡೇಂಜರ್‌

ಈ ಲಿಕ್ವಿಡ್‌ ನೈಟ್ರೋಜನ್‌ ಅಥವಾ ದ್ರವ ಸಾರಜನಕವನ್ನು ಔಷಧ ಮತ್ತು ರಾಸಾಯನಿಕ ಕಂಪನಿಗಳು ತಮ್ಮ ಉತ್ಪನ್ನಗಳನ್ನು 40 ಡಿಗ್ರಿ ಸೆಂಟಿಗ್ರೇಡ್‌ನಷ್ಟು ತಂಪಾಗಿಸಲು ಬಳಸುತ್ತವೆ. ಅಲ್ಲದೆ, ಫ್ರೀಜ್‌ ಮಾಡುವ ಹಲವು ವಿಧಾನಗಳಲ್ಲಿ ಬಳಸುತ್ತಾರೆ. ಈ ಲಿಕ್ವಿಡ್‌ ನೈಟ್ರೋಜನ್‌ ಸುರಿದರೆ ಥಟ್ಟನೆ ಹಿಗ್ಗಿ ಬಿಳಿಯ ಹೊಗೆಯಂತೆ ಆವಿಯಾಗಿ ಬಿಡುತ್ತದೆ.

ಇನ್ನೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ-2006 ಪ್ರಕಾರ ಲಿಕ್ವಿಡ್‌ ನೈಟ್ರೋಜನ್‌ ಆಹಾರದಲ್ಲಿ ಬಳಸಬಾರದು ಎಂಬುದು ಈ ಮೊದಲಿನಿಂದಲೂ ಇದೆ. ಆದರೂ ಕೆಲವರು ಜನರನ್ನು ಆಕರ್ಷಿಸಲು, ಹೊಸ ಮೆನುವಿಗಾಗಿ ಇದನ್ನು ಬಳಸುತ್ತಿದ್ದಾರೆ. ಇದು ಆರೋಗ್ಯಕ್ಕೆ ಹಾನಿಕಾರಕ. ಇದನ್ನು ಬಳಸುವವರ ವಿರುದ್ಧ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ಆದೇಶದಲ್ಲಿ ಏನಿದೆ?

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ನಿಯಮಗಳು 2011ರಡಿ ಲಿಕ್ವಿಡ್‌ ನೈಟ್ರೋಜನ್‌ ಅನ್ನು ಡೈರಿ ಆಧಾರಿತ ಸಿಹಿತಿಂಡಿಗಳು -ಐಸ್ ಕ್ರೀಮ್‌ನಲ್ಲಿ ಘನೀಕರಣ ಮತ್ತು ಕೂಲಿಂಗ್ (Contact Freezing and Cooling Agent en Dairy- based desserts -Ice Cream) ಗಳ ತಯಾರಿಕೆಯ ಸಮಯದಲ್ಲಿ ಮಾತ್ರ ಬಳಸಲು ಅನುಮತಿ ಇದೆ. ಆದರೆ ಸ್ಮೋಕಿಂಗ್‌ ಬಿಸ್ಕತ್‌, ಡೆಸರ್ಟ್‌ ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ ಉಪಯೋಗಿಸಲು ಅನುಮತಿ ಇಲ್ಲ. ಈ ಲಿಕ್ವಿಡ್‌ ನೈಟ್ರೋಜನ್‌ ಬಳಸಿದ ಆಹಾರ ತಿಂದರೆ ಜೀರ್ಣಾಂಗದ ಭಾಗಗಳಿಗೆ ಹಾನಿಯುಂಟಾಗುತ್ತದೆ.

LIQUID-NITROGEN

ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಲಿಕ್ವಿಡ್‌ ನೈಟ್ರೋಜನ್‌ ಅನ್ನು ತಿನಿಸುಗಳಿಗೆ ಉಪಯೋಗಿಸುವುದನ್ನು ನಿರ್ಬಂಧಿಸಿ ಆದೇಶಿಸಲಾಗಿದೆ. ಉಲ್ಲಂಘನೆಯ ಪ್ರಕರಣಗಳು ಕಂಡು ಬಂದರೆ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಕೇಸ್‌ ದಾಖಲಿಸಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
chikkaballapur woman murder case
ಕ್ರೈಂ40 mins ago

Murder Case: ಪ್ರಿಯತಮೆ ಎದುರೇ ಮಹಿಳೆಯ ಅತ್ಯಾಚಾರ ಮಾಡಿ ಕೊಂದ ಪಾಪಿ!

Covishield Vaccine
ದೇಶ41 mins ago

Covishield Vaccine: ಕೋವಿಶೀಲ್ಡ್‌ ಲಸಿಕೆ ಹಿಂಪಡೆಯುವುದಾಗಿ ಅಸ್ಟ್ರಾಜೆನೆಕಾ ಘೋಷಣೆ

Aishwarya Arjun Umapathy Ramaiah Wedding Date Venue Revealed
ಸ್ಯಾಂಡಲ್ ವುಡ್47 mins ago

Aishwarya Arjun: ಅರ್ಜುನ್ ಸರ್ಜಾ ಪುತ್ರಿ ಮದುವೆ ಮುಹೂರ್ತ ಫಿಕ್ಸ್!

toilet video shooting in mangalore
ಕ್ರೈಂ1 hour ago

Toilet Video: ಮೆಡಿಕಲ್‌ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣ!

Ranveer Singh Wedding Pics With Deepika Padukone
ಸ್ಯಾಂಡಲ್ ವುಡ್1 hour ago

Ranveer Singh: ಮಗುವಿನ ನಿರೀಕ್ಷೆ ಹೊಸ್ತಿಲಲ್ಲೇ ಮದುವೆ ಫೋಟೊಗಳು ಡಿಲಿಟ್‌! ದೀಪಿಕಾ ಜತೆ ರಣವೀರ್ ಕಿರಿಕ್‌?

EVMs damage
ದೇಶ1 hour ago

EVMs Damage: ಚುನಾವಣಾ ಸಿಬ್ಬಂದಿ ಇದ್ದ ಬಸ್‌ನಲ್ಲಿ ಬೆಂಕಿ ಅವಘಡ; ಮತಯಂತ್ರಗಳು ಡ್ಯಾಮೇಜ್‌

Manali Tour
ಪ್ರವಾಸ2 hours ago

Manali Tour: ಭೂಲೋಕದ ಸ್ವರ್ಗ ಮನಾಲಿಗೆ ಪ್ರವಾಸ ಮಾಡಲು ಯಾವ ಸಮಯ ಸೂಕ್ತ?

Akshaya Tritiya 2024
ಧಾರ್ಮಿಕ2 hours ago

Akshaya Tritiya 2024: ಅಕ್ಷಯ ತೃತೀಯ ಅಂದರೆ ಚಿನ್ನ ಖರೀದಿಯೊಂದೇ ಅಲ್ಲ! ಹೀಗೆ ಮಾಡಿಯೂ ಸಮೃದ್ಧಿ ಹೊಂದಬಹುದು!

Prajwal Revanna Case HD Revanna bail plea to be heard tomorrow Jail or Bela
ಕ್ರೈಂ2 hours ago

Prajwal Revanna Case: ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

woman murder case divya
ಕ್ರೈಂ2 hours ago

Murder Case: ಮಾಜಿ ಪ್ರಿಯಕರನಿಂದ ಮಹಿಳೆಯ ಕೊಲೆ, ಕಾರಣ ನಿಗೂಢ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ13 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ16 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ18 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌