Collagen Foods: ಕೊಲಾಜಿನ್‌ ಇರುವ ಆಹಾರಗಳು ನಮಗೇಕೆ ಬೇಕು? - Vistara News

ಆರೋಗ್ಯ

Collagen Foods: ಕೊಲಾಜಿನ್‌ ಇರುವ ಆಹಾರಗಳು ನಮಗೇಕೆ ಬೇಕು?

ಸೌಂದರ್ಯ ಹಾಗೂ ಫಿಟ್‌ನೆಸ್‌ ಮಾರುಕಟ್ಟೆಗಳಲ್ಲಿ ದೊಡ್ಡ ಸದ್ದು ಮಾಡುತ್ತಿರುವ ಕೊಲಾಜಿನ್‌ಅನ್ನು ಪೂರಕಗಳ ರೂಪದಲ್ಲೇ ತೆಗೆದುಕೊಳ್ಳಬೇಕೆಂದಿಲ್ಲ. ಅವು ನೈಸರ್ಗಿಕವಾಗಿ ಆಹಾರದ ಮೂಲಕವೂ ದೇಹ ಸೇರುತ್ತದೆ. ಯಾವೆಲ್ಲಾ ಆಹಾರಗಳಲ್ಲಿ (Collagen foods) ಲಭ್ಯವಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Collagen Foods
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೀಲುಗಳು, ಕೂದಲು ಮತ್ತು ಚರ್ಮ ತೊಂದರೆ ಕೊಡದಂತೆ ಇರಬೇಕೆ? ಹಾಗಾದರೆ ಹೆಚ್ಚು ಕೊಲಾಜಿನ್‌ ಇರುವ ಆಹಾರಗಳ ಬಗ್ಗೆ ಗಮನ ಕೊಡಿ. ಇತ್ತೀಚಿನ ದಿನಗಳಲ್ಲಿ ಸೌಂದರ್ಯ ಹಾಗೂ ಫಿಟ್‌ನೆಸ್‌ ಮಾರುಕಟ್ಟೆಗಳಲ್ಲಿ ದೊಡ್ಡ ಸದ್ದು ಮಾಡುತ್ತಿರುವ ಕೊಲಾಜಿನ್ನನ್ನು ಪೂರಕಗಳ ರೂಪದಲ್ಲೇ ತೆಗೆದುಕೊಳ್ಳಬೇಕೆಂದಿಲ್ಲ. ಅವು ನೈಸರ್ಗಿಕವಾಗಿ ಆಹಾರದ ಮೂಲಕವೂ ದೇಹ ಸೇರುತ್ತದೆ. ಆದರೆ ಯಾವೆಲ್ಲಾ ಆಹಾರಗಳಲ್ಲಿ (Collagen foods) ಲಭ್ಯವಿದೆ ಎಂಬುದನ್ನು ತಿಳಿಯಬೇಕು.

Food rich in collagen. Healthy products

ಯಾಕೆ ಬೇಕು?

ಇದಕ್ಕೂ ಮೊದಲು ಕೊಲಾಜಿನ್‌ ಎಂದರೇನು ಎಂಬುದನ್ನು ತಿಳಿಯೋಣ. ನಮ್ಮ ದೇಹದ ಕೋಶಗಳನ್ನು ಕಟ್ಟುವುದಕ್ಕೆ ಅಗತ್ಯವಾಗಿ ಬೇಕಾದಂಥ ಪ್ರೊಟೀನ್‌ಗಳಲ್ಲಿ ಕೊಲಾಜಿನ್‌ ಸಹ ಒಂದು. ನಮ್ಮ ಚರ್ಮದ ಹಿಗ್ಗುವಿಕೆಗೆ ಕೊಲಾಜಿನ್‌ ಮುಖ್ಯ ಕಾರಣ. ಸಾಕಷ್ಟು ಪ್ರಮಾಣದಲ್ಲಿ ಚರ್ಮದಲ್ಲಿ ಕೊಲಾಜಿನ್‌ ಇದ್ದರೆ, ತ್ವಚೆಯ ಮೇಲೆ ನೆರಿಗೆ ಮೂಡುವುದು, ಬಿಗಿ ಕಳೆದುಕೊಳ್ಳುವುದು- ಇಂಥದ್ದೆಲ್ಲಾ ಆಗದೆ ಚರ್ಮ ತಾರುಣ್ಯಭರಿತವಾಗಿ ಇರುತ್ತದೆ. ಉಗುರು ಮತ್ತು ಕೂದಲುಗಳನ್ನು ಕಾಂತಿಯುಕ್ತವಾಗಿ ಇರಿಸುವ ಸಾಧ್ಯತೆ ಈ ಪ್ರೊಟೀನ್‌ಗಿದೆ. ದೇಹದ ಕೀಲುಗಳ ಕ್ಷೇಮಕ್ಕೆ ಕೊಲಾಜಿನ್‌ ಅತ್ಯಗತ್ಯ. ಕೀಲುಗಳ ಸುತ್ತಲಿನ ಅಂಗಾಂಶಗಳು (ಕಾರ್ಟಿಲೇಜ್‌) ಸರಿಯಾಗಿರಬೇಕೆಂದರೆ ದೇಹದಲ್ಲಿ ಸೂಕ್ತ ಪ್ರಮಾಣದಲ್ಲಿ ಕೊಲಾಜಿನ್‌ ಇರಲೇಬೇಕು. ಅದಿಲ್ಲದಿದ್ದರೆ ಉರಿಯೂತಕ್ಕೆ ಕಾರಣವಾಗುತ್ತದೆ.
ಮೂಳೆಗಳ ಸಾಂದ್ರತೆ ಕುಸಿಯದಂತೆ ಮಾಡಿ, ಅಸ್ಥಿಹಂದರ ಸದೃಢವಾಗಿ ಇರಬೇಕಾದರೂ ಕೊಲಾಜಿನ್‌ ಬೇಕಾಗುತ್ತದೆ. ಅದಲ್ಲದೆ, ಜೀರ್ಣಾಂಗಗಳನ್ನು ಸುಸ್ಥಿತಿಯಲ್ಲಿ ಇರಿಸುವುದಕ್ಕೆ ಇದು ಅಗತ್ಯ. ಒಟ್ಟಾರೆ, ದೇಹದ ಸ್ಥಿತಿಸ್ಥಾಪಕತ್ವ ಮತ್ತು ಬಲ- ಈ ಎರಡಕ್ಕೂ ಇದು ಬೇಕಿರುವುದರಿಂದ, ಸೌಂದರ್ಯ ಮತ್ತು ಫಿಟ್‌ನೆಸ್‌ ಉತ್ಸಾಹಿಗಳ ದೃಷ್ಟಿ ಇದರತ್ತ ಹೊರಳಿದೆ. ನಾವು ನಿತ್ಯ ಸೇವಿಸುವ ಆಹಾರದಲ್ಲೂ ಹಲವಾರು ಮೂಲಗಳಿಂದ ನಮಗೆ ಕೊಲಾಜಿನ್‌ ದೊರೆಯುತ್ತದೆ. ಆದರೆ ಯಾವುದರಲ್ಲಿ ಸಾಂದ್ರವಾಗಿದೆ ಎಂಬುದನ್ನು ತಿಳಿದರೆ ದೇಹಾರೋಗ್ಯವನ್ನು ನೈಸರ್ಗಿಕ ಮೂಲದಿಂದಲೇ ಕಾಪಾಡಿಕೊಳ್ಳಲು ಸಾಧ್ಯವಿದೆ

ಪ್ರಾಣಿಜನ್ಯ ಆಹಾರಗಳು

ಯಾವುದೇ ಪ್ರಾಣಿಯ ಮೂಳೆಗಳ ಸೂಪ್‌ನಲ್ಲಿ ಹೆಚ್ಚಿನ ಕೊಲಾಜಿನ್‌ ಇರುತ್ತದೆ. ಸೂಪ್‌ ಮಾತ್ರವಲ್ಲ, ಚಿಕನ್‌ ಸೇವಿಸುವವರಿಗೂ ಕೊಲಾಜಿನ್‌ ಕೊರತೆ ಆಗುವುದು ಕಡಿಮೆ. ಕೆಲವು ಜಾತಿಯ ಮೀನುಗಳಲ್ಲಿ ಕೊಲಾಜಿನ್‌ ಸಾಕಷ್ಟು ದೊರೆಯುತ್ತದೆ. ಹಾಗಾಗಿ ಮಾಂಸಾಹಾರಿಗಳಿಗೆ, ಅದರಲ್ಲೂ ಮುಖ್ಯವಾಗಿ ಮೀನು ಸೇವಿಸುವವರಿಗೆ ಆಹಾರದಲ್ಲೇ ಕೊಲಾಜಿನ್‌ ಹೇರಳವಾಗಿ ದೊರೆಯುತ್ತದೆ. ಇಂಥವರಿಗೆ ಪೂರಕ ಮಾತ್ರೆಗಳ ಅಗತ್ಯವಿಲ್ಲ.

the egg

ಮೊಟ್ಟೆ

ಕೆಲವೊಮ್ಮೆ ದೇಹಕ್ಕೆ ನೇರವಾಗಿ ಕೊಲಾಜಿನ್‌ ದೊರೆಯುವ ಪ್ರಮಾಣವೆಷ್ಟೋ ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕೊಲಾಜಿನ್‌ ಉತ್ಪತ್ತಿಗೆ ಕೆಲವು ಆಹಾರಗಳು ಸಹಾಯ ಮಾಡುತ್ತವೆ. ಮೊಟ್ಟೆಯ ಬಿಳಿ ಭಾಗವು ಹಲವು ರೀತಿಯ ಪ್ರೊಟೀನ್‌ಗಳಿಂದ ಸಮೃದ್ಧವಾಗಿದೆ. ಅವುಗಳಲ್ಲಿರುವ ಪ್ರೊಲಿನ್‌ ಎಂಬ ಪ್ರೊಟೀನ್‌ ಕೊಲಾಜಿನ್‌ ಉತ್ಪಾದನೆ ಮಾಡಲು ದೇಹಕ್ಕೆ ನೆರವಾಗುತ್ತದೆ.

Vitamin c

ವಿಟಮಿನ್‌ ಸಿ ಆಹಾರಗಳು

ಬ್ಲೂಬೆರಿ, ಸ್ಟ್ರಾಬೆರಿ ಮುಂತಾದ ಯಾವುದೇ ರೀತಿಯ ಬೆರ್ರಿಗಳಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇವುಗಳಿಂದಲೂ ಕೊಲಾಜಿನ್‌ ಉತ್ಪಾದನೆಗೆ ದೇಹಕ್ಕೆ ಸಹಾಯ ದೊರೆಯುತ್ತದೆ. ಕಿತ್ತಳೆ, ನಿಂಬೆಯಂಥ ಸಿಟ್ರಸ್‌ ಹಣ್ಣುಗಳಲ್ಲಿ ವಿಟಮಿನ್‌ ಸಿ ಹೇರಳವಾಗಿದೆ. ಸಿ ಜೀವಸತ್ವವೂ ಉತ್ಕರ್ಷಣ ನಿರೋಧಕವೇ ಆಗಿದ್ದು, ಕೊಲಾಜಿನ್‌ ಹೆಚ್ಚಿಸುತ್ತದೆ.
ಕೀಲುಗಳ ಆರೋಗ್ಯ ಸುರಕ್ಷಿತವಾಗಿ ಇರಬೇಕಾದರೆ, ಮಂಡಿನೋವು, ಕುತ್ತಿಗೆನೋವಿನಂಥವು ತೊಂದರೆ ಕೊಡಬಾರದೆಂದರೆ, ಉಗುರು, ಕೂದಲು, ಚರ್ಮದ ಸೌಂದರ್ಯ ಮಾಸಬಾರದೆಂದರೆ ದೇಹಕ್ಕೆ ಸಾಕಷ್ಟು ಕೊಲಾಜಿನ್‌ ದೊರೆಯಬೇಕು. ಹಾಗೆಂದು ಅತಿಯಾಗಿ ಪೂರಕ ಮಾತ್ರೆಗಳನ್ನು ಸೇವಿಸಿದರೂ ಅಡ್ಡ ಪರಿಣಾಮಗಳು ಆಗಬಹುದು. ಉದಾ, ಹೊಟ್ಟೆಯಲ್ಲಿ ಉಬ್ಬರ, ಕಿರಿಕಿರಿ ಇಂಥವು ಕಾಣಿಸಿಕೊಳ್ಳಬಹುದು. ಹಾಗಾಗಿ ಆಹಾರದಲ್ಲೇ ಕೊಲಾಜಿನ್‌ ದೊರೆಯುವ ಸಾಧ್ಯತೆಯಿದ್ದರೆ ಉತ್ತಮ. ಪೂರಕ ಮಾತ್ರೆಗಳ ಅಗತ್ಯವಿದ್ದರೆ ವೈದ್ಯರ ಸಲಹೆ ಅನುಸರಿಸುವುದು ಸೂಕ್ತ.

ಇದನ್ನೂ ಓದಿ: Weight Gain: ನೀವು ಪ್ರೀತಿಯಲ್ಲಿದ್ದೀರಾ? ಹಾಗಾದರೆ ನಿಮ್ಮ ತೂಕ ಏರಿಕೆಯಾದೀತು, ಎಚ್ಚರ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಲೈಫ್‌ಸ್ಟೈಲ್

Weight Loss Tips Kannada: ಈ ಐದರಲ್ಲಿ ಒಂದು ಜ್ಯೂಸ್‌ ಕುಡಿಯುತ್ತಿದ್ದರೂ ಸಾಕು, ನಿಮ್ಮ ದೇಹ ತೂಕ ಇಳಿಯುತ್ತದೆ!

ಒಮ್ಮೆ ಹೆಚ್ಚಾದ ತೂಕವನ್ನು ನಿಯಂತ್ರಿಸುವುದು ಬಹು ಕಷ್ಟ. ಆದರೆ ನಿತ್ಯ ಈ ಐದು ಪಾನೀಯಗಳನ್ನು ಸೇವಿಸುವುದರಿಂದ ಉತ್ತಮ ಆರೋಗ್ಯದೊಂದಿಗೆ ದೇಹದ ತೂಕ ನಷ್ಟವನ್ನು (Weight Loss Tips Kannada) ಸುಲಭವಾಗಿ ಮಾಡಬಹುದು. ತೂಕ ಇಳಿಸುವ ಸುಲಭ ವಿಧಾನಗಳ ಪರಿಚಯ ಇಲ್ಲಿದೆ.

VISTARANEWS.COM


on

By

Weight Loss Tips kannada
Koo

ದೇಹದ ತೂಕವನ್ನು ಸಮತೋಲನದಲ್ಲಿ ಇರಿಸುವುದು ಸುಲಭದ ಕೆಲಸವೇನಲ್ಲ. ಅದಕ್ಕಾಗಿ ನಾವು ತಿನ್ನುವ ಆಹಾರ (food), ನಿತ್ಯದ ದೈಹಿಕ ಚಟುವಟಿಕೆ (exercise) ಕೂಡ ಕಾರಣವಾಗುತ್ತದೆ. ಒಮ್ಮೆ ತೂಕ ಹೆಚ್ಚಾದರೆ ಅದನ್ನು ಇಳಿಸುವುದು ಸುಲಭದ ಪ್ರಕ್ರಿಯೆಯಲ್ಲ. ದೇಹದ ತೂಕ ಹೆಚ್ಚಳವು ಸಾಮಾನ್ಯವಾಗಿ ಆತಂಕ ಉಂಟು ಮಾಡುತ್ತದೆ. ಆದರೆ ಸರಿಯಾದ ಆಹಾರ ಮತ್ತು ದೈಹಿಕ ಚಟುವಟಿಕೆಯಿಂದ ದೇಹದ ತೂಕವನ್ನು ನಿಯಂತ್ರಿಸಿ (Weight Loss Tips Kannada) ಮತ್ತೆ ಹಿಂದಿನಂತೆ ಸ್ಮಾರ್ಟ್ ಆಂಡ್ ಸ್ಲಿಮ್ (smart and slim) ಆಗಲು ಸಾಧ್ಯವಿದೆ.

ತೂಕ ಇಳಿಸುವ ಪ್ರಕ್ರಿಯೆಯಲ್ಲಿ ಒಂದು ಆಹಾರದ ಸಲಹೆಯನ್ನು ನಿತ್ಯ ಪಾಲಿಸಿದರೆ ಆರೋಗ್ಯವಾಗಿಯೂ ಇರಬಹುದು ಮತ್ತು ದೇಹದ ತೂಕವನ್ನು ಸಮತೋಲನದಲ್ಲಿಯೂ ಇರಿಸಬಹುದು. ನಿತ್ಯವೂ ಬೆಳಗ್ಗೆ ಖಾಲಿ ಹೊಟ್ಟೆಗೆ ಕೆಲವು ಫ್ರೆಶ್ ಜ್ಯೂಸ್‌ಗಳನ್ನು ಕುಡಿಯುವುದರಿಂದ ದೇಹಕ್ಕೆ ಬೇಕಾದ ಫೈಬರ್, ಖನಿಜಾಂಶ ಮತ್ತು ವಿಟಮಿನ್‌ ಗಳನ್ನು ಪಡೆಯಬಹುದು. ಅಲ್ಲದೇ ಇದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಿ ಆರೋಗ್ಯವನ್ನು ಸುಸ್ಥಿತಿಯಲ್ಲಿ ಇಡುತ್ತದೆ. ದೇಹದ ತೂಕ ಇಳಿಸಬೇಕು ಎನ್ನುವ ಯೋಜನೆ ಇದ್ದರೆ ನಿತ್ಯವೂ ಕುಡಿಯಬೇಕಾದ ಕೆಲವು ಅದ್ಭುತ ಜ್ಯೂಸ್‌ ಗಳಿವೆ.


ಕೊತ್ತಂಬರಿ ನೀರು

ಖಾಲಿ ಹೊಟ್ಟೆಯಲ್ಲಿ ಬೆಳಗ್ಗೆ ಒಂದು ಲೋಟ ಕೊತ್ತಂಬರಿ ಸೊಪ್ಪಿನ ನೀರನ್ನು ಸೇವಿಸಿ. ಕೊತ್ತಂಬರಿ ನೈಸರ್ಗಿಕ ಮೂತ್ರವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ, ದೇಹದಲ್ಲಿ ನೀರಿನ ಧಾರಣವನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ಯಕೃತ್ತಿನ ಆರೋಗ್ಯ ಮತ್ತು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಚಯಾಪಚಯವನ್ನು ಧನಾತ್ಮಕವಾಗಿ ವೃದ್ಧಿಸುತ್ತದೆ.


ನಿಂಬೆ ನೀರು

ತೂಕ ನಷ್ಟ ಮಾಡಬೇಕು ಎಂದು ಬಯಸುವವರು ನಿಂಬೆ ನೀರಿನ ಬಗ್ಗೆ ಸಾಕಷ್ಟು ಕೇಳಿರುತ್ತಾರೆ. ಆದರೆ ಬಹುತೇಕ ಮಂದಿ ಪ್ರಯೋಗ ಮಾಡಿರುವುದಿಲ್ಲ. ಮಾಡಿದ್ದರೂ ಒಂದೆರಡು ದಿನ ಮಾಡಿ ಸುಮ್ಮನಾಗಿರುತ್ತಾರೆ. ನಿಂಬೆ ನೀರು ತೂಕವನ್ನು ಅತ್ಯಂತ ವೇಗವಾಗಿ ನಷ್ಟ ಮಾಡುತ್ತದೆ. ಇದು ದೇಹದಲ್ಲಿ ಚಯಾಪಚಯ ಕ್ರಿಯೆಯನ್ನು ವೃದ್ಧಿಸುತ್ತದೆ.


ನೆಲ್ಲಿಕಾಯಿ ಜ್ಯೂಸ್

ನೆಲ್ಲಿಕಾಯಿ ಚಯಾಪಚಯವನ್ನು ಉತ್ತೇಜಿಸಲು ಮತ್ತು ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ತ್ವರಿತವಾಗಿ ತೂಕವನ್ನು ಕಳೆದುಕೊಳ್ಳಲು ಬಯಸುವವರು ಆರೋಗ್ಯಕರ ಚಯಾಪಚಯವನ್ನು ಹೊಂದಿರುವುದು ಅಗತ್ಯ. ನೈಸರ್ಗಿಕ ಸಕ್ಕರೆಯ ರೂಪದಲ್ಲಿ ಒಂದು ಹನಿ ಜೇನುತುಪ್ಪವನ್ನು ಸೇರಿಸಿ ಸೇವಿಸಿದರೆ ಅದು ದಿನವಿಡೀ ನಮ್ಮನ್ನು ಶಕ್ತಿಯುತವಾಗಿರಿಸುತ್ತದೆ.


ಹಾಗಲಕಾಯಿ ಜ್ಯೂಸ್

ಹಾಗಲಕಾಯಿಯ ರಸವು ತೂಕ ನಷ್ಟಕ್ಕೆ ಉತ್ತಮವಾದ ಕೊಬ್ಬನ್ನು ಸುಡುವ ರಸಗಳಲ್ಲಿ ಒಂದಾಗಿದೆ. ಹಾಗಲಕಾಯಿ ಜ್ಯೂಸ್ ಅನ್ನು ನಿಯಮಿತವಾಗಿ ಕುಡಿಯುವುದರಿಂದ ಚಯಾಪಚಯ ಕ್ರಿಯೆಯಲ್ಲಿ ಸುಧಾರಣೆಯಾಗುತ್ತದೆ. ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ. ತೂಕವನ್ನು ಕಳೆದುಕೊಳ್ಳಲು ಸಾಕಷ್ಟು ಪ್ರಯೋಜನಕಾರಿಯಾಗಿದೆ.


ಇದನ್ನೂ ಓದಿ: Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

ಸೌತೆಕಾಯಿ ಜ್ಯೂಸ್

ನೀರು ಸಮೃದ್ಧವಾಗಿರುವ ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವ ಸೌತೆಕಾಯಿ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಅದ್ಭುತವಾದ ಆಹಾರ. ಇದರಲ್ಲಿರುವ ಅತಿಯಾದ ನೀರು ಮತ್ತು ನಾರಿನಂಶವು ನಿಮ್ಮನ್ನುದೀರ್ಘಕಾಲದವರೆಗೆ ಹಸಿವನ್ನು ತಡೆಯಲು ಸಹಾಯ ಮಾಡುತ್ತದೆ. ಇದರಿಂದಾಗಿ ಅನಗತ್ಯ ಕಡುಬಯಕೆಗಳನ್ನು ನಿಯಂತ್ರಿಸಿ ದೇಹದ ತೂಕ ನಿರ್ವಹಣೆ ಮಾಡಬಹುದು.

Continue Reading

ಆರೋಗ್ಯ

No Diet Day: ಬೇಕಾಬಿಟ್ಟಿ ಡಯಟ್‌ ಮಾಡಿದರೆ ಏನಾಗುತ್ತದೆ? ಈ ಸಂಗತಿ ತಿಳಿದಿರಲಿ

ಹಲವರು ತಪ್ಪು ಸಲಹೆಗಳಿಂದ ಡಯಟ್‌ ಮಾಡಲು ಹೋಗಿ ಬೇಗ ತೂಕ ಇಳಿಸಿಕೊಳ್ಳುವ ಆಹಾರ ಕ್ರಮಗಳನ್ನು ಅನುಸರಿಸುತ್ತಾರೆ. ಇದರಿಂದ ತೂಕ ಕಡಿಮೆಯಾಗುವ ಬದಲು ಆಸ್ಪತ್ರೆಗೆ ಸೇರಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಡಯಟ್ ಮಾಡುವುದು ಮುಖ್ಯ, ಆದರೆ ಪರಿಶೀಲಿಸದೆ ವಾಟ್ಸಾಪ್ ಅಥವಾ ಬೇರೆ ಎಲ್ಲೋ ಕೇಳಿದ ಮಾಹಿತಿಯನ್ನು ಅನುಸರಿಸುವುದಕ್ಕಿಂತ, ನಿಪುಣ ಆಹಾರ ತಜ್ಞರು ಅಥವಾ ವೈದ್ಯರ ಶಿಫಾರಸ್ಸುಗಳನ್ನು ಪಾಲಿಸುವುದು ಮುಖ್ಯವಾಗಿರುತ್ತದೆ. ಈ ಕುರಿತು (No Diet Day) ತಜ್ಞ ವೈದ್ಯರ ಸಲಹೆ ಇಲ್ಲಿದೆ.

VISTARANEWS.COM


on

No Diet Day
Koo

ಡಯಟ್‌ ಎಂಬುದು ಇಂದಿನ ಜೀವನಶೈಲಿಯ ಭಾಗವಾಗಿ ಮಾರ್ಪಟ್ಟಿದೆ. ಏನು ತಿನ್ನಬೇಕು? ಏಷ್ಟು ತಿನ್ನಬೇಕು..? ಎಂಬುದರ ಕುರಿತಂತೆ ತರಹೇವಾರಿ ಪುಕ್ಕಟೆ ಸಲಹೆಗಳು ಇಂಟರ್‌ನೆಟ್‌ ತುಂಬಾ ಹರದಾಡುತ್ತವೆ. ಇಂಥ ಸಮಯದಲ್ಲಿ ಹಲವರು ತಪ್ಪು ಸಲಹೆಗಳಿಂದ ಬೇಗ ತೂಕ ಇಳಿಸಿಕೊಳ್ಳುವ ಆಹಾರ ಕ್ರಮಗಳನ್ನು ಅನುಸರಿಸುತ್ತಾರೆ, ಇದರಿಂದ ತೂಕ ಕಡಿಮೆಯಾಗುವ ಬದಲು ಆಸ್ಪತ್ರೆಗೆ ಸೇರಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಡಯಟ್ ಮಾಡುವುದು ಮುಖ್ಯ, ಆದರೆ ಪರಿಶೀಲಿಸದೆ ವಾಟ್ಸಾಪ್ ಅಥವಾ ಬೇರೆ ಎಲ್ಲೋ ಕೇಳಿದ ಮಾಹಿತಿಯನ್ನು ಅನುಸರಿಸುವುದಕ್ಕಿಂತ, ನಿಪುಣ ಆಹಾರ ತಜ್ಞರು ಅಥವಾ ವೈದ್ಯರ ಶಿಫಾರಸ್ಸುಗಳನ್ನು ಪಾಲಿಸುವುದು (No Diet Day) ಮುಖ್ಯವಾಗಿರುತ್ತದೆ.

Girl having a cheat day

ಪ್ರತಿ ವರ್ಷ ಮೇ 6 ರಂದು ಅಂತಾರಾಷ್ಟ್ರೀಯ ನೋ ಡಯಟ್ ದಿನವನ್ನು ಆಚರಿಸಲಾಗುತ್ತದೆ. ಈ ಮೂಲಕ ಉತ್ತಮ ಆಹಾರ ಸೇವನೆಯೊಂದಿಗೆ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಲು ಪ್ರೇರಣೆ ನೀಡುವುದಾಗಿದೆ. ಈ ಕುರಿತಂತೆ ಕಿಂಡರ್‌ ಆಸ್ಪತ್ರೆಯ ಡಯಟಿಷಿಯನ್ ತಜ್ಞೆ ಆಗಿರುವ ಡಾ. ಸಂಜನಾ ಪ್ರೇಮಲಾಲ್‌ ಮಾತನಾಡಿ, ಎಲ್ಲದಕ್ಕೂ ಡಯಟ್‌ ನೆಪವೊಡ್ಡಿ ನಿರಾಕರಿಸುವುದಕ್ಕಿಂತ ಸಮತೋಲಿತ ಪೋಷಣೆಯುಳ್ಳ ಆಹಾರ ಸೇವನೆಯ ಬಗ್ಗೆ ಈ ದಿನ ಅರಿವು ಮೂಡಿಸುವುದಾಗಿದೆ.
ಸಾಮಾನ್ಯವಾಗಿ ಬಹುಪಾಲು ಜನರ ಡಯಟ್‌ ಕೆಲ ದಿನ, ತಿಂಗಳು ಅವಧಿಗೆ ಮಾತ್ರ ಸೀಮಿತವಾಗಿರುತ್ತದೆ. ತೂಕ ಇಳಿಸಿಕೊಳ್ಳಲು ಅಥವಾ ಸಮಾಜದಲ್ಲಿ ದೈಹಿಕ ಸೌಂದರ್ಯಕ್ಕೆ ಪ್ರಾಧಾನ್ಯತೆ ನೀಡಲಾಗುತ್ತದೆ ಎಂಬ ಕಾರಣಕ್ಕೆ. ಆದ್ರೆ ನೋ ಡಯಟ್‌ ಡೇ ದೈಹಿಕ ಕ್ಷಮತೆ ಕಾಪಾಡಿಕೊಳ್ಳುವುದರ ಜೊತೆಗೆ ಕೆಟ್ಟ ಡಯಟ್‌ ಪದ್ಧತಿಗಳನ್ನ ತಿರಸ್ಕರಿಸುವ ಕುರಿತಂತೆ ಜಾಗೃತಿ ಮೂಡಿಸುತ್ತದೆ ಎಂದವರು ಹೇಳುತ್ತಾರೆ.

Diet women

ಅಸಂಬದ್ಧ ಡಯಟ್‌ನಿಂದ ಆಸ್ಪತ್ರೆ ಸೇರಬಹುದು

ಹಲವು ಕಾರಣಗಳಿಗಾಗಿ ಆರೋಗ್ಯಕರವಲ್ಲದ ಡಯಟ್‌ ಮಾಡಿ ಜನರು ಆಸ್ಪತ್ರೆಗೆ ದಾಖಲಾಗುತ್ತಾರೆ. ಸಾಮಾನ್ಯ ಸನ್ನಿವೇಶಗಳಲ್ಲಿ ಅಗತ್ಯ ಪೋಷಕಾಂಶಗಳನ್ನ ಸೇವಿಸದೆ, ಕ್ಯಾಲೋರಿಗಳುಳ್ಳ ಆಹಾರದಿಂದ ದೂರ ಉಳಿಯುವ ಮೂಲಕ ಅಪೌಷ್ಟಿಕತೆಗೆ ತುತ್ತಾಗುತ್ತಾರೆ. ಇದಲ್ಲದೆ, ಬಹುಅಂಗಾಂಗ ವೈಫಲ್ಯ ಉಂಟಾಗಬಹುದು. ಎಲೆಕ್ಟ್ರೋಲೈಟ್‌ ಅಸಮತೋಲನ, ಹೃದಯಾಘಾತ ಹಾಗೂ ಮೂತ್ರಪಿಂಡದ ಸಮಸ್ಯೆಗಳು ಕೂಡ ಎದುರಾಗುತ್ತವೆ. ಅಗತ್ಯ ಆಹಾರ ಪದಾರ್ಥಗಳನ್ನು ಸೇವಿಸದಿದ್ದರೆ, ನಿರ್ಜಲೀಕರಣ, ದೌರ್ಬಲ್ಯ, ವಾಕರಿಕೆ, ಮಲಬದ್ಧತೆ ಜೊತೆಗೆ ವಿಟಮಿನ್ಸ್‌ ಹಾಗೂ ಖನಿಜಗಳ ಅಸರ್ಮಕ ಸೇವನೆಯಿಂದ ಪೋಷಕಾಂಶಗಳ ಕೊರತೆ ಉಂಟಾಗುತ್ತದೆ. ಉತ್ತಮ ಆಹಾರ ಸೇವನೆಯನ್ನು ಬಿಡುವುದು ಎಂದರೆ ದೇಹದ ರಕ್ಷಣಾ ವ್ಯವಸ್ಥೆಗೆ ಹಾನಿ ಮಾಡುವುದಾಗಿದೆ. ಉತ್ತಮ ಆಹಾರ ಪದ್ದತಿ ದೀರ್ಘಕಾಲ ಪರಿಣಾಮಕಾರಿಯಾಗುವುದರ ಜೊತೆಗೆ ಸಮತೋಲಿತ ಆಹಾರ ಕ್ರಮವನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ಎತ್ತಿ ತೋರಿಸುತ್ತದೆ ಎಂದು ಡಾ. ಸಂಜನಾ ಪ್ರೇಮ್‌ಲಾಲ್‌ ಹೇಳಿದರು.

ಸೇವನೆಯಲ್ಲಿ ತಪ್ಪಾದ ಕ್ರಮಗಳು

ಅತಿಯಾದ ಡಯಟ್‌ನಿಂದಾಗಿ ಅನೋರೆಕ್ಸಿಯಾ ನರ್ವೋಸಾ ಅಥವಾ ಬುಲಿಮಿಯಾ ನರ್ವೋಸಾದಂತಹ ಸೇವನೆಯ ಅಸ್ವಸ್ಥತೆ ಉಂಟಾಗುತ್ತದೆ. ಇದರಿಂದ ಗಂಭೀರವಾದ ದೈಹಿಕ ಮತ್ತು ಮಾನಸಿಕ ಪರಿಣಾಮಗಳು ಉಂಟಾಗುತ್ತವೆ. ಆಗ ವೈದ್ಯರ ಸಲಹೆ ಹಾಗೂ ಚಿಕಿತ್ಸೆಯ ಮೊರೆ ಹೋಗುವುದು ಅನಿವಾರ್ಯವಾಗುತ್ತದೆ. ಕೆಲ ಸಂದರ್ಭಗಳಲ್ಲಿ ಅಸಮರ್ಪಕ ಪೋಷಣೆಯೊಂದಿಗೆ ಅತಿಯಾದ ವ್ಯಾಯಾಮದಿಂದ ಗಾಯಗಳು, ನಿರ್ಜಲೀಕರಣ ಮತ್ತು ಎಲೆಕ್ಟ್ರೋಲೈಟ್ ಅಸಮತೋಲನ ಕೂಡ ಉಂಟಾಗುತ್ತದೆ. ಆಗ ವೈದ್ಯರನ್ನ ಕಾಣಬೇಕಾಗುತ್ತದೆ. ತಪ್ಪಾದ ಡಯಟ್ನಿಂದ ಆಸ್ಪತ್ರೆಗೆ ದಾಖಲಾಗುವುದನ್ನು ತಪ್ಪಿಸಲು ನಿಪುಣ ಆರೋಗ್ಯ ತಜ್ಞರಿಂದ ಮಾಗರ್ದರ್ಶನ ಪಡೆದುಕೊಳ್ಳುವುದು ಮುಖ್ಯವಾಗಿರುತ್ತದೆ. ಜೊತೆಗೆ ಪೋಷಣೆ ಹಾಗೂ ತೂಕ ನಿರ್ವಹಣೆಗೆ ಸಮತೋಲಿತ ಆಹಾರ ಸೇವನೆಯ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಡಾ. ಸಂಜನಾ ಪ್ರೇಮ್‌ಲಾಲ್ ಸಲಹೆ ನೀಡುತ್ತಾರೆ.

Woman dieting and eating a salad

ಋಣಾತ್ಮಕ ಪರಿಣಾಮಗಳು

ತಪ್ಪಾದ ಡಯಟ್‌ ಅನುಸರಿಸುವುದು ಹಾಗೂ ಕಡಿಮೆ ಕ್ಯಾಲೋರಿ ಆಹಾರ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ನೆಗೆಟಿವ್ ಪರಿಣಾಮಗಳು ಉಂಟಾಗುತ್ತವೆ. ಅತೃಪ್ತಿ, ಸ್ವಗೌರವ ಕಡಿಮೆ ಆಗುವುದು, ತಿನ್ನುವ ಅಸ್ವಸ್ಥತೆ, ಮಾಂಸಖಂಡಗಳು ಬಲಹೀನವಾಗುವುದು, ಮೂಳೆಗಳು ದುರ್ಬಲಗೊಳ್ಳುವುದು, ಹೃದ್ರೋಗ ಹಾಗೂ ಹಾರ್ಮೋನ್‌ಗಳ ಅಸಮತೋಲನದಂತಹ ಹಾನಿಕಾರಕ ಅಡ್ಡಪರಿಣಾಮಗಳು ಎದುರಾಗುತ್ತವೆ. ಇವುಗಳನ್ನು ತಡೆಗಟ್ಟಲು ಕೆಟೋಜೆನಿಕ್‌ ಆಹಾರವನ್ನು ಸೇವಿಸುವುದು ಉತ್ತಮ ಪರಿಣಾಮಗಳನ್ನು ಉಂಟು ಮಾಡುತ್ತದೆ. ಆದರೆ ತುಂಬಾ ದಿನಗಳ ಕಾಲ ಸೇವಿಸುವುದರಿಂದ ಹೆಪಾಟಿಕ್ ಸ್ಟೀಟೋಸಿಸ್, ಮೂತ್ರಪಿಂಡದ ಕಲ್ಲುಗಳು, ಹೈಪೋಪ್ರೋಟೀನೆಮಿಯಾ ಮತ್ತು ವಿಟಮಿನ್ ಕೊರತೆಯಂತಹ ದೀರ್ಘಕಾಲಿಕ ಪರಿಣಾಮಗಳು ಎದುರಾಗುತ್ತವೆ. ಆಗ ಕೆಟೋಜೆನಿಕ್‌ ಆಹಾರ ಸೇವಿಸುವುದನ್ನು ನಿಲ್ಲಿಸಬೇಕಾಗುತ್ತದೆ ಎಂದು ಡಾ.. ಸಂಜನಾ ಪ್ರೇಮ್‌ಲಾಲ್‌ ಹೇಳುತ್ತಾರೆ

ಇದನ್ನೂ ಓದಿ: Pain Relievers: ಸೈಡ್‌ ಎಫೆಕ್ಟ್‌ ಇಲ್ಲದ ಪ್ರಕೃತಿದತ್ತ ನೋವು ನಿವಾರಕಗಳಿವು

ಪರಿಪೂರ್ಣ ಆರೋಗ್ಯ

ತಪ್ಪಾದ ಡಯಟ್ ಆರೋಗ್ಯ ಮತ್ತು ದೈಹಿಕ ಕ್ಷಮತೆಯ ಮೇಲೆ ದುಷ್ಪಾರಿಣಾಮವನ್ನು ಬೀರುತ್ತದೆ. ಹೀಗಾಗಿ ಜೀವಶೈಲಿಗೆ ಅನುಗುಣವಾಗಿ ಪೋಷಣೆಗೆ ಬೇಕಾದಂತಹ ಸಮತೋಲಿತ ಆಹಾರ ಸೇವಿಸುವ ವಿಧಾನಕ್ಕೆ ಆದ್ಯತೆ ನೀಡಿದರೆ ಹಲವು ಆರೋಗ್ಯಕರ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು ಎನ್ನುತ್ತಾರೆ ಡಾ. ಸಂಜನಾ ಪ್ರೇಮ್‌ಲಾಲ್‌.

Continue Reading

ಆರೋಗ್ಯ

No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

ಸಮಾಜದಲ್ಲಿ ಎಲ್ಲರೂ ಒಪ್ಪುವಂಥ, ಮೆಚ್ಚುವಂಥ ದೇಹವನ್ನು ಹೊಂದಬೇಕೆಂಬ (No Diet Day 2024) ಆಸೆ ಜನರಿಗೆ ಇರುತ್ತದೆ. ಹಾಗಾಗಿ, ಹೇಗೆಹೇಗೋ ಡಯೆಟ್‌ ಮಾಡುತ್ತಾ, ಹಲವು ರೀತಿಯ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಾರೆ. ಇದನ್ನು ತಡೆದು ದೇಹದ ಬಗ್ಗೆ ಧನಾತ್ಮಕ ಚಿಂತನೆ ಬೆಳೆಸಿಕೊಳ್ಳಲೆಂದು ʻಡಯೆಟ್‌ ರಹಿತ ದಿನʼ ಆಚರಿಸಲಾಗುತ್ತದೆ. ʻನೊ ಡಯೆಟ್‌ʼ ಎನ್ನುತ್ತಿದ್ದಂತೆ ಸಿಕ್ಕಿದ್ದೆಲ್ಲಾ ಕಬಳಿಸುವ ದಿನ ಎಂದು ಗ್ರಹಿಸುವುದಲ್ಲ. ಧನಾತ್ಮಕವಾಗಿ ದೇಹವನ್ನು ಗ್ರಹಿಸುವ ಮತ್ತು ಸೌಂದರ್ಯದ ಭ್ರಮೆಯಲ್ಲಿ ಶರೀರದ ಮೇಲೆ ಹುಚ್ಚು ಡಯೆಟ್‌ ಪ್ರಯೋಗಗಳನ್ನು ಮಾಡುವುದನ್ನು ನಿಲ್ಲಿಸಬೇಕೆಂಬ ಸಂದೇಶವನ್ನು ಸಾರುವ ದಿನವಿದು. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

No Diet Day 2024
Koo

ಪ್ರತಿಯೊಬ್ಬರಿಗೂ ಲೋಕದ ಅತಿ ಸುಂದರ (No Diet Day 2024) ಕಾಯವನ್ನೇ ಹೊಂದಬೇಕೆಂಬ ಅಭಿಲಾಷೆ ಇದ್ದರೆ, ಅದೇನು ಅತಿಯಲ್ಲ. ಫ್ಯಾಷನ್‌ ನಿಯತಕಾಲಿಕಗಳಲ್ಲಿ ಫೋಟೋಶಾಪ್‌ ಮಾಡಿದ ತಾರೆಗಳ ಚಿತ್ರಗಳು ಇದಕ್ಕೆ ಇನ್ನಷ್ಟು ಪ್ರೇರಣೆ ನೀಡುತ್ತವೆ. ಹುಡುಗಿಯರಿಗೆ ಬೆನ್ನು-ಹೊಟ್ಟೆ ಒಂದಾಗಿರುವಂತೆ, ಬಳುಕುವ ದೇಹ ಹೊಂದುವ ಮಹದಾಸೆಯಿದ್ದರೆ, ಹುಡುಗರಿಗೆ ದೇಹದ ನರ-ನರಗಳೆಲ್ಲ ಎದ್ದುಬರುವಂತೆ ಸ್ನಾಯುಗಳನ್ನು ಬೆಳೆಸಬೇಕೆಂಬ ಬಯಕೆ ಇರುತ್ತದೆ. ಇವುಗಳ ಹಿಂದೆ ಫಿಟ್‌ನೆಸ್‌ ಉದ್ದೇಶ ಇದ್ದರೆ ಒಂದು ಲೆಕ್ಕ. ಹೆಚ್ಚಿನ ಬಾರಿ ಹಾಗಾಗುವುದೇ ಇಲ್ಲ. ಬದಲಿಗೆ, ಸಮಾಜದಲ್ಲಿ ಎಲ್ಲರೂ ಒಪ್ಪುವಂಥ ಮೆಚ್ಚುವಂಥ ದೇಹವನ್ನು ಹೊಂದಬೇಕೆಂಬ ಆಸೆ ಇದರ ಹಿಂದಿರುತ್ತದೆ. ಹಾಗಾಗಿ, ಹುಕಿಗೆ ಬಿದ್ದವರಂತೆ ಏನಕ್ಕೇನೋ ಡಯೆಟ್‌ ಮಾಡುತ್ತಾ, ಹಲವು ರೀತಿಯ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಾರೆ ಅಥವಾ ಜೀವವನ್ನೇ ಕಳೆದುಕೊಳ್ಳುತ್ತಾರೆ. ಇಂಥ ಅನಾರೋಗ್ಯಕರ ಪ್ರವೃತ್ತಿಗೆ ಕಡಿವಾಣ ಹಾಕುವ ಉದ್ದೇಶದಿಂದಲೇ ʻಅಂತಾರಾಷ್ಟ್ರೀಯ ಡಯೆಟ್‌ ರಹಿತ ದಿನʼವನ್ನಾಗಿ ಮೇ ತಿಂಗಳ 6ನೇ ದಿನವನ್ನು ಗುರುತಿಸಲಾಗಿದೆ.

Girl having a cheat day

ಏನಿದರರ್ಥ?

ʻನೊ ಡಯೆಟ್‌ʼ ಎನ್ನುತ್ತಿದ್ದಂತೆ ಸಿಕ್ಕಿದ್ದೆಲ್ಲಾ ಕಬಳಿಸುವ ದಿನ ಎಂದು ಗ್ರಹಿಸುವುದಲ್ಲ. ನಮ್ಮ ದೇಹದ ಬಗೆಗಿನ ಕೀಳರಿಮೆಯನ್ನು ಬಿಟ್ಟು, ಧನಾತ್ಮಕವಾಗಿ ದೇಹವನ್ನು ಗ್ರಹಿಸುವ ಮತ್ತು ಸೌಂದರ್ಯದ ಭ್ರಮೆಯಲ್ಲಿ ಶರೀರದ ಮೇಲೆ ಹುಚ್ಚು ಡಯೆಟ್‌ ಪ್ರಯೋಗಗಳನ್ನು ಮಾಡುವುದನ್ನು ನಿಲ್ಲಿಸಬೇಕೆಂಬ ಸಂದೇಶವನ್ನು ಸಾರುವ ದಿನವಿದು. ನಾವಿದ್ದಂತೆಯೇ ನಮ್ಮನ್ನು ಒಪ್ಪಿಕೊಳ್ಳುವುದು ಸಕಾರಾತ್ಮಕ ಜೀವನಕ್ಕೆ ಎಷ್ಟು ಮುಖ್ಯ ಎಂಬ ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶ. ಸೌಂರ್ಯದ ಹೆಸರಿನಲ್ಲಿ ಎಲ್ಲರೂ ಒಂದೇ ಮಾನದಂಡಕ್ಕೆ ಒಳಪಡುವುದು ಸಾಧ್ಯವಿಲ್ಲ. ಬದಲಿಗೆ, ವಿವಿಧತೆಯೇ ಸೌಂದರ್ಯ ಎಂಬ ಸರಳ ಸೂತ್ರ ಇದರ ಹಿಂದಿದೆ.

ಯಾಕೆ ಬಂತು ಈ ದಿನ?

ಇದು ಪ್ರಾರಂಭವಾಗಿದ್ದು ಬ್ರಿಟನ್‌ನಲ್ಲಿ 1992ರಲ್ಲಿ. ಅಲ್ಲಿನ ಮೇರಿ ಇವಾನ್ಸ್‌ ಯಂಗ್‌ ಈ ದಿನವನ್ನು ಮೊದಲಿಗೆ ಉದ್ದೇಶಿಸಿದ್ದು. ತನ್ನ ದೇಹ ಇರುವ ರೀತಿಯನ್ನು ಒಪ್ಪಿಕೊಳ್ಳಲಾರದೆ, ಆಹಾರ ಕ್ರಮವನ್ನು ಸಿಕ್ಕಾಪಟ್ಟೆ ಏರುಪೇರಾಗಿಸಿಕೊಂಡು, ಅದರಿಂದ ಅನೊರೆಕ್ಸಿಯ ರೋಗಕ್ಕೆ ಆಕೆ ತುತ್ತಾಗಿದ್ದರು. ಇದರಿಂದ ಚೇತರಿಸಿಕೊಂಡ ನಂತರ, ಸೌಂದರ್ಯದ ಹೆಸರಿನಲ್ಲಿ ಅವೈಜ್ಞಾನಿಕ ಡಯೆಟ್‌ಗಳನ್ನು ಪಾಲಿಸುವ ಪದ್ಧತಿಯ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ, ಲಂಡನ್‌ನ ಹೈಡ್‌ ಪಾರ್ಕ್‌ನಲ್ಲಿ ಇದನ್ನು ಪ್ರಾರಂಭಿಸಿದರು. ಅದೊಂದು, ಹತ್ತಿಪ್ಪತ್ತು ಮಂದಿ ಮಹಿಳೆಯರು ಭಾಗವಹಿಸಿದ್ದ, ಸಣ್ಣ ಪಿಕ್‌ನಿಕ್‌ ರೂಪದಲ್ಲಿ ಮೊದಲಾಯಿತು. ಡಯೆಟ್‌ ಹೆಸರಿನಲ್ಲಿ ತಲೆಬುಡವಿಲ್ಲದ ಆಹಾರ ಕ್ರಮಗಳಿಂದ ದೇಹ-ಮನಸ್ಸುಗಳ ಮೇಲೆ ಆಗುವ ವಿಪರೀತ ಪರಿಣಾಮಗಳನ್ನು ತಿಳಿಸುವುದು ಅಂದಿನ ಉದ್ದೇಶವಾಗಿತ್ತು. ತೂಕದ ವಿಷಯಕ್ಕೆ ಅತಿ ಮಹತ್ವ ನೀಡುವುದು, ಯಾವುದೋ ಒಪ್ಪಿತ ಅಳತೆಗಳಿಗೆ ಒಗ್ಗದವರತ್ತ ತಾರತಮ್ಯ ಮಾಡುವುದು ಇಂಥವನ್ನೆಲ್ಲ ಬಿಟ್ಟು, ಆಹಾರದೊಂದಿಗೆ ಆರೋಗ್ಯಕರ ನಂಟು ಬೆಳೆಸಿಕೊಳ್ಳುವುದು ಅಗತ್ಯ. ಇದನ್ನೇ ಇಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ಆದರೆ ಡಯೆಟ್‌ ಮಾಡಬಾರದೆಂದರೆ ಏನೆಂಬುದನ್ನು ಇನ್ನಷ್ಟು ನಿಖರವಾಗಿ ಸ್ಪಷ್ಟಪಡಿಸುವ ಅಗತ್ಯವಿದೆ. ಹಾಗಲ್ಲದಿದ್ರೆ ತಪ್ಪು ಕಲ್ಪನೆಗಳಿಗೆ ಎಡೆಯಾಗಬಹುದು.

Woman dieting and eating a salad

ಏನು ಮಾಡಬೇಕು?

ಮನಸ್ಸಿಗೆ ಬಂದಿದ್ದೆಲ್ಲ ತಿನ್ನುವುದನ್ನು ಪ್ರಚಾರ ಮಾಡುವ ದಿನವಲ್ಲ ಇದು. ಬದಲಿಗೆ ಆರೋಗ್ಯಕರ ಆಹಾರ ಕ್ರಮವನ್ನು ರೂಢಿಸಿಕೊಳ್ಳಲು ಅಂದು ಪ್ರೋತ್ಸಾಹ ನೀಡುವುದು ಮಹತ್ವದ್ದು. ದೇಹ-ಮನಸ್ಸಿಗೆ ಚೈತನ್ಯ ನೀಡುವಂಥ ಸಮತೋಲಿತ ಆಹಾರವನ್ನು ಸೇವಿಸುವುದಕ್ಕಿಂತ ದೇಹದ ತೂಕ, ಸಪೂರ ಕಾಣುವುದು ಮುಖ್ಯವಲ್ಲ. ದೇಹದ ತೂಕ ಕೆಲವೊಮ್ಮೆ ಆನುವಂಶಿಕವಾಗಿ ಬರಬಹುದು, ಹಾರ್ಮೋನುಗಳ ಏರುಪೇರಿನಿಂದ ಬರಬಹುದು, ಔಷಧಿಗಳ ಅಡ್ಡ ಪರಿಣಾಮಗಳಾಗಿರಬಹುದು. ಹಾಗಾಗಿ ಎಲ್ಲವನ್ನೂ ಒಂದೇ ತಕ್ಕಡಿಯಲ್ಲಿ ಹಾಕದೆ, ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವತ್ತ ಗಮನ ಕೊಡಿ. ಯಾರದ್ದೋ ಫೋಟೋಶಾಪ್‌ ಮಾಡಿದ ದೇಹಗಳಂತೆ ತಮ್ಮದಿಲ್ಲ ಎಂದು ಕೊರಗಬೇಡಿ. ಒತ್ತಡ ರಹಿತವಾಗಿ ಬದುಕುವತ್ತ ಗಮನ ನೀಡಿ. ಧನಾತ್ಮಕ ಸಿಂತನೆಗಳನ್ನು ಬೆಳೆಸಿಕೊಳ್ಳಿ. ಆರೋಗ್ಯವಂತ ದೇಹದ ಸುಂದರ ನಗುವಿಗಿಂತ ಸುಂದರವಾಗಿದ್ದು ಲೋಕದಲ್ಲಿ ಇನ್ನಾವುದೂ ಇಲ್ಲ.

ಇದನ್ನೂ ಓದಿ: Cooking Oils: ಈ 5 ಅಡುಗೆ ಎಣ್ಣೆಗಳು ನಮ್ಮ ಆರೋಗ್ಯಕ್ಕೆ ಅಪಾಯಕಾರಿ!

Continue Reading

ಆರೋಗ್ಯ

Cooking Oils: ಈ 5 ಅಡುಗೆ ಎಣ್ಣೆಗಳು ನಮ್ಮ ಆರೋಗ್ಯಕ್ಕೆ ಅಪಾಯಕಾರಿ!

ನಿತ್ಯವೂ ಮನೆಗಳಲ್ಲಿ ಅಡುಗೆಗೆ ಒಳ್ಳೆಯ ಎಣ್ಣೆಯನ್ನು ನಾವು ಬಳಕೆ ಮಾಡುತ್ತೇವೆ ಎಂದುಕೊಂಡರೂ, ಹೊರಗಿನಿಂದ ತರುವ ಕುರುಕಲು ತಿಂಡಿಗಳು, ಹೊರಗೆ ತಿನ್ನುವ ಆಹಾರ ಇತ್ಯಾದಿಗಳಲ್ಲಿ ಅತ್ಯಂತ ಹೆಚ್ಚು ಬಳಕೆಯಾಗುವುದು ಸುಲಭವಾಗಿ ಸಿಗುವ ಎಣ್ಣೆಗಳೇ ಆಗಿವೆ. ಹೀಗಾಗಿ, ಒಂದಲ್ಲ ಒಂದು ಬಗೆಯಲ್ಲಿ ಅನಾರೋಗ್ಯಕರ ಎಣ್ಣೆ ನಾವು ಬೇಡವೆಂದರೂ ನಮ್ಮ ಹೊಟ್ಟೆ ಸೇರುತ್ತವೆ. ಈ ಕುರಿತ (Cooking oils) ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

Cooking Oils
Koo

ಎಣ್ಣೆಯ ಬಳಕೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬ ಸತ್ಯ ಎಲ್ಲರಿಗೂ ತಿಳಿದಿರುವ ಸತ್ಯವೇ ಆದರೂ, ಸಾಕಷ್ಟು ಆಹಾರಗಳಲ್ಲಿ ಇಂದು ವ್ಯಾಪಕವಾಗಿ ಎಣ್ಣೆಯ ಬಳಕೆಯಾಗುತ್ತದೆ. ಅದರಲ್ಲೂ ಕೆಲವು ಅಗ್ಗದ ಎಣ್ಣೆಗಳು ಇಂದು ಸಂಸ್ಕರಿಸಿದ ಆಹಾರಗಳ ಮೂಲಕ ನಮ್ಮ ಹೊಟ್ಟೆ ಸೇರುವುದು ನಮಗೆ ಗೊತ್ತೇ ಆಗುವುದಿಲ್ಲ. ನಿತ್ಯವೂ ಮನೆಗಳಲ್ಲಿ ಅಡುಗೆಗೆ ಒಳ್ಳೆಯ ಎಣ್ಣೆಯನ್ನು ನಾವು ಬಳಕೆ ಮಾಡುತ್ತೇವೆ ಎಂದು ನಾವು ಅಂದುಕೊಂಡರೂ, ಹೊರಗಿನಿಂದ ತರುವ ಕುರುಕಲು ತಿಂಡಿಗಳು, ಹೊರಗೆ ತಿನ್ನುವ ಆಹಾರಗಳು ಇತ್ಯಾದಿಗಳಲ್ಲಿ ಅತ್ಯಂತ ಹೆಚ್ಚು ಬಳಕೆಯಾಗುವುದು ಸುಲಭವಾಗಿ ಸಿಗು ಎಣ್ಣೆಗಳೇ ಆಗಿವೆ. ಹೀಗಾಗಿ, ಒಂದಲ್ಲ ಒಂದು ಬಗೆಯಲ್ಲಿ ಅನಾರೋಗ್ಯಕರ ಎಣ್ಣೆ ನಾವು ಬೇಡವೆಂದರೂ ನಮ್ಮ ಹೊಟ್ಟೆ ಸೇರುತ್ತವೆ. ಬನ್ನಿ, ಯಾವೆಲ್ಲ ಎಣ್ಣೆಗಳನ್ನು ನಾವು ನಮ್ಮ ಆಹಾರದಲ್ಲಿ ನಿತ್ಯವೂ ಬಳಸಬಾರದು (Cooking oils) ಎಂಬುದನ್ನು ನೋಡೋಣ.

Palm oil

ಪಾಮ್‌ ಎಣ್ಣೆ

ಇಂದು ಮಾರುಕಟ್ಟೆಯಲ್ಲಿ ಸಿಗುವ ಬಹುತೇಕ ಸಂಸ್ಕರಿಸಿದ ಆಹಾರಗಳಲ್ಲಿ, ಪ್ಯಾಕೇಟ್‌ಗಳಲ್ಲಿ ಬಳಸುವ ಎಣ್ಣೆ ಬಹುಪಾಲು ಪಾಮ್‌ ಎಣ್ಣೆ ಎಂಬುದು ನಿಜವಾದರೂ, ಇದು ಆರೋಗ್ಯಕ್ಕೆ ಕೆಟ್ಟ ಪರಿಣಾಮ ಬೀರುವ ಎಣ್ಣೆಗಳಲ್ಲಿ ಅಗ್ರಸ್ಥಾನದಲ್ಲಿದೆ. ಕಡಿಮೆ ದರ ಹಾಗೂ ಸುಲಭವಾಗಿ ದೊರೆಯಬಲ್ಲ ಅಗ್ಗದ ಎಣ್ಣೆ ಇದಾಗಿರಿವುದರಿಂದ ಇದನ್ನು ಇಂದು ಆಹಾರ ಉದ್ಯಮದಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಆದರೆ, ಇದರಲ್ಲಿ ಅತ್ಯಂತ ಹೆಚ್ಚು ಸ್ಯಾಚುರೇಟೆಡ್‌ ಫ್ಯಾಟ್‌ ಇರುವುದರಿಂದ ಇದು ಎಲ್‌ಡಿಎಲ್‌ ಕೊಲೆಸ್ಟೆರಾಲ್‌ ಮಟ್ಟವನ್ನು ಏರಿಸುವ ಕಾರಣ ಹೃದಯದ ಆರೋಗ್ಯಕ್ಕೆ ಇದು ಅತ್ಯಂತ ಕೆಟ್ಟದ್ದು.

Soybean oil

ಸೋಯಾಬೀನ್‌ ಎಣ್ಣೆ

ಕಡಿಮೆ ವಾಸನೆಯುಳ್ಳ ಹಾಗೂ ಅತ್ಯಂತ ಕಡಿಮೆ ಬೆಲೆಗೆ ವ್ಯಾಪಕವಾಗಿ ದೊರೆಯುವ ಸೋಯಾಬೀನ್‌ ಎಣ್ಣೆಯಲ್ಲಿ ಒಮೆಗಾ 6 ಫ್ಯಾಟಿ ಆಸಿಡ್‌ಗಳು ಹೇರಳವಾಗಿವೆ. ಒಮೆಗಾ 3 ಫ್ಯಾಟಿ ಆಸಿಡ್‌ನ ಅದೇ ಗುಣಗಳನ್ನು ಇದೂ ಹೊಂದಿರುವುದರಿಂದ ಹಾಗೂ ಉರಿಯೂತವನ್ನು ಹೆಚ್ಚಿಸುವ ಸಂಭವ ಇದರಲ್ಲಿ ಹೆಚ್ಚಿರುವುದರಿಂದ ಈ ಎಣ್ಣೆಯ ಬಳಕೆ ಅತಿಯಾಗಬಾರದು. ಒಮೆಗಾ 3 ಫ್ಯಾಟಿ ಆಸಿಡ್‌ನ ಮೂಲಗಳ ಜೊತೆಗೆ ಸಮತೋಲನದಲ್ಲಿ ಇದನ್ನು ಸೇಔಇಸುವುದು ಉತ್ತಮ. ಇದರ ಅತಿಯಾದ ಬಳಕೆ ಸಲ್ಲದು.

Cottonseed oil

ಹತ್ತಿಬೀಜದ ಎಣ್ಣೆ

ಹತ್ತಿಯನ್ನು ತೆಗೆದ ಮೇಳೆ ಅದರ ಬೀಜದಿಂದ ಮಾಡುವ ಎಣ್ಣೆಯಾದ ಕಾಟನ್‌ ಸೀಡ್‌ ಆಯಿಲ್‌ ಅಥವಾ ಹತ್ತಿಬೀಜದ ಎಣ್ಣೆ ಬಹಳಷ್ಟು ಸಂಸ್ಕರಿಸಿದ ಆಹಾರಗಳಲ್ಲಿ ವ್ಯಾಪಕವಾಗಿ ಇಂದು ಬಳಕೆಯಾಗುತ್ತಿದೆ. ಇದರಲ್ಲಿಯೂ ಒಮೆಗಾ 6 ಫ್ಯಾಟಿ ಆಸಿಡ್‌ ಹೇರಳವಾಗಿದೆ. ಹಾಗಾಗಿ ಇದನ್ನು ಅತಿಯಾಗಿ ಬಳಸುವುದರಿಂದ ಉರಿಯೂತ ಹಾಗೂ ಇತರ ಆರೋಗ್ಯದ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನೂ ಓದಿ: Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

ವೆಜಿಟೆಬಲ್‌ ಆಯಿಲ್

ಈ ಸಾಮಾನ್ಯೀಕರಿಸಿದ ಹೆಸರಿಂದ ಬಹುತೇಕರು ಮೋಸಕ್ಕೆ ಒಳಗಾಗುವುದೇ ಹೆಚ್ಚು. ವೆಜಿಟೆಬಲ್‌ ಆಯಿಲ್‌ ಅಂದಾಕ್ಷಣ, ಆರೋಗ್ಯಕ್ಕೆ ಸಮಸ್ಯೆಯೇನಿಲ್ಲ ಎಂದು ಅಂದುಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದರೂ, ಈ ಎಣ್ಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜೋಳ, ಸೋಯಾಬೀನ್‌ ಹಾಗೂ ಸೂರ್ಯಕಾಂತಿ ಎಣ್ಣೆ ಬಳಕೆಯಾಗುತ್ತದೆ. ತೀರಾ ಕೆಟ್ಟದ್ದೇನೂ ಅಲ್ಲದಿದ್ದರೂ, ರಿಫೈನ್ಡ್‌ ಎಣ್ಣೆ ಇದಾಗಿರುವುದರಿಂದ ಹಾಗೂ ಸಾಕಷ್ಟು ರಾಸಾಯನಿಕಗಳು ಈ ಸಂದರ್ಭ ಬಳಕೆಯಾಗಿರುವುದರಿಂದ, ಒಮೆಗಾ 6 ಫ್ಯಾಟಿ ಆಸಿಡ್‌ ಹೆಚ್ಚಿರುವುದರಿಂದ ಈ ಎಣ್ಣೆಯೂ ಹೆಚ್ಚು ಬಳಕೆ ಮಾಡುವುದು ಒಳ್ಳೆಯದಲ್ಲ. ನಿತ್ಯದ ಉಪಯೋಗಕ್ಕೆ ಈ ಎಣ್ಣೆ ಅಷ್ಟು ಯೋಗ್ಯವಲ್ಲ.

Hydrogenated oils

ಹೈಡ್ರೋಜಿನೇಟೆಡ್‌ ಆಯಿಲ್‌ಗಳು

ಹೈಡ್ರೋಜಿನೇಷನ್‌ ಎಂಬ ಪ್ರಕ್ರಿಯೆಗೆ ಒಳಪಡಿಸುವ ಎಣ್ಣೆಗಳು ಇದಾಗಿದ್ದು, ಇದರಲ್ಲಿ ದ್ರವರೂಪದ ಎಣ್ಣೆಯನ್ನು ಘನರೂಪಕ್ಕೆ ಪರಿವರ್ತಿಸಲಾಗುತ್ತದೆ. ಇಂತಹ ಎಣ್ಣೆಗಳಲ್ಲಿ ಟ್ರಾನ್ಸ್‌ ಫ್ಯಾಟ್‌ ಅಧಿಕವಾಗಿರುವುದಲ್ಲದೆ, ಎಲ್‌ಡಿಎಲ್‌ ಕೊಲೆಸ್ಟೆರಾಲ್‌ ಮಟ್ಟವನ್ನು ಇದು ಏರಿಸುವ ಕಾರಣ ಹೃದಯದ ಆರೋಗ್ಯಕ್ಕೆ ಒಳ್ಳೆಯದಲ್ಲ.

Continue Reading
Advertisement
Bengaluru Rain
ಕರ್ನಾಟಕ2 hours ago

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Rohit Sharma
ಪ್ರಮುಖ ಸುದ್ದಿ2 hours ago

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

PM Narendra Modi
ದೇಶ2 hours ago

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

School Children
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

IPL 2024
ಕ್ರೀಡೆ3 hours ago

IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

Narendra Modi
ದೇಶ3 hours ago

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

DK Shivakumar
ಕರ್ನಾಟಕ3 hours ago

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

T20 World Cup 2024
ಕ್ರೀಡೆ3 hours ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ3 hours ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

IPL 2024
ಪ್ರಮುಖ ಸುದ್ದಿ3 hours ago

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ7 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ8 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ8 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ21 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌