World Thyroid Day: ವಿಶ್ವ ಥೈರಾಯ್ಡ್ ದಿನ: ಸೂಕ್ತ ನಿರ್ವಹಣೆಯೇ ಸಮಸ್ಯೆಗೆ ಮದ್ದು - Vistara News

ಆರೋಗ್ಯ

World Thyroid Day: ವಿಶ್ವ ಥೈರಾಯ್ಡ್ ದಿನ: ಸೂಕ್ತ ನಿರ್ವಹಣೆಯೇ ಸಮಸ್ಯೆಗೆ ಮದ್ದು

World Thyroid Day: ಥೈರಾಯ್ಡ್ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮೇ ತಿಂಗಳ 25ನೇ ದಿನವನ್ನು ವಿಶ್ವ ಥೈರಾಯ್ಡ್ ದಿನ (World Thyroid Day) ಎಂದು ಗುರುತಿಸಲಾಗಿದೆ.

VISTARANEWS.COM


on

Thyroid Problem
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಶ್ವದಲ್ಲಿ ಅತಿ ಹೆಚ್ಚು ಕಾಡುತ್ತಿರುವ ಅಂತಃಸ್ರಾವಕ ಗ್ರಂಥಿಗಳ ಸಮಸ್ಯೆಗಳ ಪೈಕಿ ಥೈರಾಯ್ಡ್ ಎರಡನೇ ಸ್ಥಾನದಲ್ಲಿದೆ. ಮೊದಲನೆಯ ಸ್ಥಾನ ಮಧುಮೇಹದ್ದು. ವಿಶ್ವದಲ್ಲಿ ಹತ್ತರಲ್ಲಿ ಒಬ್ಬರಿಗೆ ಥೈರಾಯ್ಡ್ ಸಂಬಂಧೀ ಸಮಸ್ಯೆಯಿದೆ. (World Thyroid Day) ಸಾಮಾನ್ಯವಾಗಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಾಗಿ ಈ ಸಮಸ್ಯೆಯಿಂದ ಬಳಲುವುದು ಕಂಡುಬಂದಿದೆ.

ಗಂಟಲಿನಲ್ಲಿರುವ ಸಣ್ಣ ಚಿಟ್ಟೆಯಾಕಾರದ ಗ್ರಂಥಿ ಎಲ್ಲರಿಗೂ ಪರಿಚಿತವಿರುವುದು ಥೈರಾಯ್ಡ್ ಗ್ರಂಥಿ ಎಂದೇ. ಪರಿಚಿತವಾಗಿರುವ ಕಾರಣ ಏನೇ ಇದ್ದರೂ, ಈ ಗ್ರಂಥಿ ಸೂಕ್ತವಾಗಿ ಕಾರ್ಯನಿರ್ವಹಿಸುವುದು ದೇಹದ ಒಟ್ಟಾರೆ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯವಾದದ್ದು. ಇದೇ ಹಿನ್ನೆಲೆಯಲ್ಲಿ, ಥೈರಾಯ್ಡ್ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮೇ ತಿಂಗಳ 25ನೇ ದಿನವನ್ನು ವಿಶ್ವ ಥೈರಾಯ್ಡ್ ದಿನ (World Thyroid Day) ಎಂದು ಗುರುತಿಸಲಾಗಿದೆ.

ವಿಶ್ವದಲ್ಲಿ ಅತಿ ಹೆಚ್ಚು ಕಾಡುತ್ತಿರುವ ಅಂತಃಸ್ರಾವಕ ಗ್ರಂಥಿಗಳ ಸಮಸ್ಯೆಗಳ ಪೈಕಿ ಥೈರಾಯ್ಡ್ ಎರಡನೇ ಸ್ಥಾನದಲ್ಲಿದೆ. ಮೊದಲನೆಯ ಸ್ಥಾನ ಮಧುಮೇಹದ್ದು. ವಿಶ್ವದಲ್ಲಿ ಹತ್ತರಲ್ಲಿ ಒಬ್ಬರಿಗೆ ಥೈರಾಯ್ಡ್ ಸಂಬಂಧೀ ಸಮಸ್ಯೆಯಿದೆ. ಸಾಮಾನ್ಯವಾಗಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಾಗಿ ಈ ಸಮಸ್ಯೆಯಿಂದ ಬಳಲುವುದು ಕಂಡುಬಂದಿದೆ. ಆದರೆ ಹೆಚ್ಚಿನವರಿಗೆ ಈ ಸಮಸ್ಯೆ ತಮಗಿರುವುದು ಗೊತ್ತೇ ಇರುವುದಿಲ್ಲ.

ಥೈರಾಯ್ಡ್ ಗ್ರಂಥಿ ಚೋದಕಗಳನ್ನು ಹೆಚ್ಚಾಗಿ ಸ್ರವಿಸಿದರೆ ಅದನ್ನು ಹೈಪರ್ ಥೈರಾಯ್ಡ್ ಸಮಸ್ಯೆ ಎನ್ನಲಾಗುತ್ತದೆ. ಯುವಜನತೆಯಲ್ಲಿ ಇದು ಹೆಚ್ಚಾಗಿ ಕಾಣುತ್ತಿದೆ. ಥೈರಾಯ್ಡ್ ಸ್ರವಿಸುವಿಕೆ ಕಡಿಮೆ ಆದರೆ ಅದನ್ನು ಹೈಪೋಥೈರಾಯ್ಡ್ ಎನ್ನಲಾಗುತ್ತದೆ. ಈ ತೊಂದರೆ ವಯಸ್ಸಾದವರಲ್ಲಿ ಹೆಚ್ಚು. ಇವುಗಳನ್ನು ಸರಿಯಾಗಿ ನಿರ್ವಹಿಸದಿದ್ದರೆ ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ತುತಾಗಬೇಕಾಗುತ್ತದೆ. ಹಾಗಾಗಿ ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಂಡು, ಚಿಕಿತ್ಸೆ ತೆಗೆದುಕೊಂಡರೆ ಥೈರಾಯ್ಡ್ ಸಮಸ್ಯೆಗಳನ್ನು ಸಮರ್ಥವಾಗಿ ನಿರ್ವಹಿಸಬಹುದು.

ಇದ್ದಕ್ಕಿದ್ದಂತೆ ತೂಕ ಹೆಚ್ಚುವುದು ಅಥವಾ ಇಳಿಯುವುದು, ಸುಸ್ತು, ಆಯಾಸ, ಕೂದಲು ಉದುರುವುದು, ಅನಿಯಮಿತವಾದ ಎದೆಬಡಿತ, ಮೂಡ್ ಬದಲಾವಣೆ ಮುಂತಾದ ಲಕ್ಷಣಗಳು ಕಂಡುಬಂದರೆ ಥೈರಾಯ್ಡ್ ತಪಾಸಣೆಯನ್ನು ಮಾಡಿಸುವಂತೆ ವೈದ್ಯರು ಸೂಚಿಸಬಹುದು. ಥೈರಾಯ್ಡ್ ಸಮಸ್ಯೆಗೆ ಸೂಕ್ತ ಚಿಕಿತ್ಸೆ ದೊರೆಯದಿದ್ದರೆ ಹೃದಯದ ತೊಂದರೆ, ಆಸ್ಟಿಯೊಪೊರೊಸಿಸ್, ಒಳಾಂಗಗಳ ಕಾರ್ಯದಲ್ಲಿ ಏರುಪೇರು, ಫಲವಂತಿಕೆಯ ತೊಂದರೆ, ದೇಹದ ಚಯಾಪಚಯದಲ್ಲಿ ವ್ಯತ್ಯಾಸದಂಥ ಇನ್ನಷ್ಟು ಸಮಸ್ಯೆಗಳು ಗಂಟುಬೀಳಬಹುದು. ಗರ್ಭಿಣಿಯರಲ್ಲಿ ಈ ತೊಂದರೆ ಕಂಡುಬಂದರೆ ಹುಟ್ಟಲಿರುವ ಶಿಶುವಿಗೆ ಆಪತ್ತು.

ಈ ಸಮಸ್ಯೆಯನ್ನು ಸೂಕ್ತವಾಗಿ ನಿರ್ವಹಿಸುವುದೇ ಇದಕ್ಕಿರುವ ಮದ್ದು. ನಿಯಮಿತವಾದ ದೈಹಿಕ ಚಟುವಟಿಕೆಗಳು, ಒತ್ತಡ ನಿರ್ವಹಣೆ, ಅಯೋಡಿನ್, ಸೆಲೆನಿಯಂ ಮತ್ತು ಪ್ರೊಬಯಾಟಿಕ್ ಸಹಿತವಾದ ಆಹಾರ ಸೇವನೆಯಂಥವು ಥೈರಾಯ್ಡ್ ಸಮಸ್ಯೆಯನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲು ನೆರವಾಗುತ್ತದೆ. ಜೊತೆಗೆ ವೈದ್ಯರು ಸೂಚಿಸಿದ ಪ್ರಮಾಣದಲ್ಲಿ ಔಷಧವೂ ಅಗತ್ಯವಾಗುತ್ತದೆ.

ಹೈಪೊ ಥೈರಾಯ್ಡ್ ಸಮಸ್ಯೆ ಇರುವವರಿಗೆ ಈ ಪೇಯಗಳು ಲಾಭದಾಯಕವಾಗಬಹುದು

ಅರಿಶಿನ ಹಾಲು: ಇದರಲ್ಲಿರುವ ಕರ್ಕುಮಿನ್ ಅಂಶದಿಂದ ಥೈರಾಯ್ಡ್ ಗ್ರಂಥಿಯ ಆರೋಗ್ಯ ಸುಧಾರಿಸುತ್ತದೆ. ಇದಕ್ಕೆ ಚಿಟಿಕೆ ಕಪ್ಪು ಕಾಳುಮೆಣಸಿನ ಪುಡಿಯನ್ನೂ ಸೇರಿಸುವ ಕ್ರಮವಿದೆ

ಮಜ್ಜಿಗೆ: ಸಾಮಾನ್ಯವಾಗಿ ದೇಹದಲ್ಲಿ ಉರಿಯೂತ ನಿಯಂತ್ರಿಸುವ ಆಹಾರಗಳು ಹೈಪೊ ಥೈರಾಯ್ಡ್ ಸಮಸ್ಯೆ ಇರುವವರಿಗೆ ಲಾಭದಾಯಕ. ದೇಹಕ್ಕೆ ಅಗತ್ಯ ಪ್ರೊಬಯಾಟಿಕ್ ಒದಗಿಸಿ, ಜೀರ್ಣಾಂಗದ ಆರೋಗ್ಯ ಸುಧಾರಿಸುವ ಮೂಲಕ ಹೈಪೊಥೈರಾಯ್ಡ್ ಸಮಸ್ಯೆಗೆ ಪರೋಕ್ಷವಾಗಿ ಮಜ್ಜಿಗೆ ನೆರವಾಗುತ್ತದೆ.

ಕೆಂಪು ಜ್ಯೂಸ್: ಬೀಟ್ರೂಟ್ ಮತ್ತು ಕ್ಯಾರೆಟ್ ಗಳನ್ನು ಮಿಶ್ರ ಮಾಡಿ ತಯಾರಿಸುವ ಜ್ಯೂಸ್ ಸಹ ಈ ವಿಷಯದಲ್ಲಿ ಪರಿಣಾಮಕಾರಿ. ಇದರಲ್ಲಿರುವ ಫೈಟೋನ್ಯೂಟ್ರಿಯೆಂಟ್ಸ್ ಮತ್ತು ಲೈಕೋಪೇನ್ ಸತ್ವದಿಂದ ದೇಹದಲ್ಲಿನ ಉರಿಯೂತವನ್ನು ಶಮನ ಮಾಡಿ, ಥೈರಾಯ್ಡ್ ಸಾಮರ್ಥ್ಯ್ ಹೆಚ್ಚಿಸಲು ಸಾಧ್ಯ.

ಇದನ್ನೂ ಓದಿ: Thyroid Awareness Month | ನಮ್ಮ ಆರೋಗ್ಯದಲ್ಲಿ ಥೈರಾಯ್ಡ್‌ ಪಾತ್ರ ಅತಿ ಮುಖ್ಯ, ತಿಳಿದಿರಲಿ!

ಹಸಿರು ಜ್ಯೂಸ್: ಪಾಲಕ್, ಕೊತ್ತಂಬರಿ, ಪುದೀನಾ ಮುಂತಾದ ಸೊಪ್ಪುಗಳ ಜ್ಯೂಸ್ ಸಹ ಉಪಯುಕ್ತ. ಇದರಲ್ಲಿ ಇರುವ ಹರಿತ್ತಿನ ಅಂಶವು ಥೈರಾಯ್ಡ್ ಆರೋಗ್ಯ ಸುಧಾರಿಸುವಲ್ಲಿ ಪರಿಣಾಮಕಾರಿ

ಇದಲ್ಲದೆ, ಅಶ್ವಗಂಥ, ಶತಾವರಿಯಂಥವು ಥೈರಾಯ್ಡ್ ಗ್ರಂಥಿಯ ಕ್ಷಮತೆ ಹೆಚ್ಚಿಸುವಲ್ಲಿ ನೆರವಾಗಬಲ್ಲವು. ಆದರೆ ಈ ಮನೆಮದ್ದುಗಳ ಜೊತೆಗೆ ನಿಯಮಿತವಾಗಿ ವೈದ್ಯರೊಂದಿಗೆ ಸಮಾಲೋಚನೆ ನಡೆಸುವುದು ಅಗತ್ಯ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

ಬಿಸಿಲು ಬ್ರಹ್ಮಾಂಡವನ್ನೇ (Heat stroke) ಸುಡುತ್ತಿದೆ. ಈ ತೀಕ್ಷ್ಣ ಬಿಸಿಲಿಗೆ ದೀರ್ಘಕಾಲ ಒಡ್ಡಿಕೊಳ್ಳುವುದರಿಂದ, ಸಾಕಷ್ಟು ನೀರು ಕುಡಿಯದಿರುವುದರಿಂದ ಮೊದಲಿಗೆ ಸುಸ್ತು, ಆಯಾಸ ಕಾಣಿಸಿಕೊಳ್ಳುತ್ತದೆ. ಇದನ್ನು ಸೂಕ್ತವಾಗಿ ನಿರ್ವಹಿಸದಿದ್ದಲ್ಲಿ ಹೀಟ್‌ಸ್ಟ್ರೋಕ್‌ (heat stroke) ಉಂಟಾಗಬಹುದು. ಈ ಬಿಸಿಲ ಆಘಾತದಿಂದ ಪಾರಾಗುವುದು ಹೇಗೆ? ಈ ಲೇಖನದಲ್ಲಿದೆ ಮಾಹಿತಿ.

VISTARANEWS.COM


on

Heat Stroke
Koo

ಬಿಸಿಲಿನ ತಾಪ (Heat stroke) ಮುಗಿಲು ಮುಟ್ಟುತ್ತಿದೆ. ಮಾರ್ಚ್‌ ತಿಂಗಳಲ್ಲಿ ವಿಪರೀತ ಎನಿಸುವಷ್ಟು ಸೂರ್ಯ ತನ್ನ ಕಿರಣಗಳನ್ನು ಝಳಪಿಸುತ್ತಿದ್ದಾನೆ. ರಾಜ್ಯದ ಹಲವು ಕಡೆಗಳಲ್ಲಿ ತಾಪಮಾನ 40 ಡಿ.ಸೆ. ಈಗಾಗಲೇ ದಾಟಿದ್ದು, ಈ ಬೇಸಿಗೆ ಕಳೆಯುವುದು ಹೇಗಪ್ಪಾ ಎಂಬ ಚಿಂತೆ ಎಲ್ಲರ ಮುಖದಲ್ಲಿ ಕಾಣುತ್ತಿದೆ. ಉಷ್ಣತೆ ಇನ್ನೂ ಹೆಚ್ಚಬಹುದು ಎಂಬ ಎಚ್ಚರಿಕೆ ಸರಕಾರದಿಂದ, ತಜ್ಞರಿಂದ ಬಂದಿದೆ. ಇಂಥ ತೀಕ್ಷ್ಣ ಉರಿ ಸೆಕೆಯಲ್ಲಿ ಬಿಸಿಲಿನ ಆಘಾತದ ಅಪಾಯ ಹೆಚ್ಚುತ್ತದೆ. ಕಾರಣ, ದೇಹದ ತಾಪಮಾನವನ್ನು ಕಾಯ್ದುಕೊಳ್ಳುವ ಸಹಜ ತಂತ್ರಗಳು ಕೆಲವೊಮ್ಮೆ ದೇಹಕ್ಕೇ ಕೈಕೊಟ್ಟಾಗ ಆರೋಗ್ಯ ಏರುಪೇರಾಗುವುದು ನಿಶ್ಚಿತ. ಸುಸ್ತು, ಆಯಾಸ, ಡಯರಿಯಾ, ವಾಂತಿ, ನಿರ್ಜಲೀಕರಣ, ಮಾನಸಿಕ ಗೊಂದಲ, ಹೀಟ್‌ ಸ್ಟ್ರೋಕ್‌ ಮುಂತಾದ ಹಲವು ರೀತಿಯ ಸಮಸ್ಯೆಗಳು ಎರಗಬಹುದು. ಈಗಾಗಲೇ ಇರುವಂಥ ಆರೋಗ್ಯ ಸಮಸ್ಯೆಗಳು ಉಲ್ಭಣಿಸಬಹುದು. ಬಿಸಿಲಿನ ಆಘಾತದಿಂದ ವ್ಯಕ್ತಿಗಳ ವರ್ತನೆಯಲ್ಲೂ ವ್ಯತ್ಯಾಸ ಕಾಣಬಹುದು.

drink water

ನೀರು ಕಡಿಮೆ ಕುಡಿಯಬೇಡಿ

ತೀಕ್ಷ್ಣ ಬಿಸಿಲಿಗೆ ದೀರ್ಘಕಾಲ ಒಡ್ಡಿಕೊಳ್ಳುವುದರಿಂದ, ಚೆನ್ನಾಗಿ ನೀರು ಕುಡಿಯದಿರುವುದರಿಂದ ಮೊದಲಿಗೆ ಸುಸ್ತು, ಆಯಾಸ ಕಾಣಿಸಿಕೊಳ್ಳುತ್ತದೆ. ಇದನ್ನು ಸೂಕ್ತವಾಗಿ ನಿರ್ವಹಿಸದಿದ್ದಲ್ಲಿ ಹೀಟ್‌ಸ್ಟ್ರೋಕ್‌ ಉಂಟಾಗಬಹುದು. ಅಂದರೆ, ಜ್ವರದ ಯಾವುದೇ ಲಕ್ಷಣವಿಲ್ಲದಿದ್ದರೂ, ದೇಹದ ಉಷ್ಣತೆ 104 ಡಿಗ್ರಿ ಫ್ಯಾರನ್‌ಹೀಟ್‌ ಅಥವಾ ಅದಕ್ಕಿಂತಲೂ ಹೆಚ್ಚು ತಲುಪಬಹುದು. ಇದಕ್ಕೆ ತಕ್ಷಣವೇ ವೈದ್ಯಕೀಯ ಚಿಕಿತ್ಸೆ ಬೇಕು. ಸೂಕ್ತ ಚಿಕಿತ್ಸೆ ದೊರೆಯದಿದ್ದಲ್ಲಿ ಜೀವಕ್ಕೆ ಅಪಾಯ ಕಟ್ಟಿಟ್ಟಿದ್ದು. ಏನಿದರ ಲಕ್ಷಣಗಳು?

sun stroke sunny hot day heat migraine pain.

ತೀವ್ರವಾಗಿ ಹೆಚ್ಚುವ ದೇಹದ ಉಷ್ಣತೆ

ತೀವ್ರವಾದ ಜ್ವರದಲ್ಲಿ ಏರುವ ದೇಹದ ಉಷ್ಣತೆಯಂತೆಯೇ 40 ಡಿ. ಸೆ. ಅಥವಾ 104 ಡಿ. ಫ್ಯಾರನ್‌ಹೀಟ್‌ ತಲುಪುತ್ತದೆ. ಕೆಲವೊಮ್ಮೆ ಅದಕ್ಕಿಂತ ಹೆಚ್ಚೂ ಇರಬಹುದು. ಹೃದಯದ ಬಡಿತ ತೀವ್ರಗತಿಯಲ್ಲಿರುತ್ತದೆ. ಈ ಹಂತದಲ್ಲಿ ತಕ್ಷಣ ಎಚ್ಚೆತ್ತುಕೊಂಡು ಆಸ್ಪತ್ರೆಗೆ ಧಾವಿಸುವುದು ಕ್ಷೇಮ. ಚರ್ಮ ಒಣಗುವುದು, ಕೆಂಪಾಗುವುದು ಇಂಥವೆಲ್ಲಾ ಈ ಲಕ್ಷಣಗಳ ಜೊತೆಜೊತೆಗೇ ಕಾಣಬಹುದು.

Relaxed woman at home breathing fresh air Horse Gram Benefits

ಉಸಿರಾಟ

ಹೃದಯದ ಬಡಿತಕ್ಕೆ ಪೂರಕವಾಗಿ ಉಸಿರಾಟವೂ ತೀವ್ರವಾಗಿರುತ್ತದೆ. ಬಡಿತ ಮತ್ತು ಉಸಿರಾಟದ ಮೂಲಕ ಹೆಚ್ಚಿನ ಆಮ್ಲಜನಕ ಒದಗಿಸಿ, ಶರೀರವನ್ನು ತಂಪಾಗಿಸುವ ಯತ್ನವನ್ನು ದೇಹ ತಂತಾನೇ ಮಾಡುತ್ತಿರುತ್ತದೆ. ಈ ಹಂತದಲ್ಲಿ ಉಸಿರಾಟದ ತೊಂದರೆ ಮತ್ತು ಅತೀವ ಬೆವರು ಸಹ ಗೋಚರಿಸಬಹುದು ಅಥವಾ ಬೆವರೇ ಬಾರದೆಯೂ ಇರಬಹುದು.

ಗೊಂದಲ

ದೇಹದಲ್ಲಿನ ಈ ಬದಲಾವಣೆಯಿಂದ ಮೆದುಳಿನಲ್ಲೂ ಸಮಸ್ಯೆಗಳು ಕಂಡು ಬರುತ್ತವೆ. ಬಿಸಿಲಿನ ಆಘಾತಕ್ಕೆ ಒಳಗಾದ ವ್ಯಕ್ತಿಗಳಲ್ಲಿ ಗೊಂದಲ, ಕೋಪ, ದೇಹದ ಅಸಮತೋಲನ, ಕೆಲವೊಮ್ಮೆ ಅಪಸ್ಮಾರವೂ ಕಂಡುಬಂದೀತು. ಇಂಥವರಿಗೆ ವೈದ್ಯಕೀಯ ಚಿಕಿತ್ಸೆ ಅಗತ್ಯವಾಗಿ ಬೇಕು.

Unexplained frequent headaches Excessive Use Of Electronic Gadgets

ತಲೆನೋವು

ತೀವ್ರವಾದ ತಲೆನೋವು, ತಲೆಸುತ್ತುವುದು, ಹೊಟ್ಟೆ ತೊಳೆಸುವುದು, ವಾಂತಿ- ಇವೆಲ್ಲವೂ ನಿರ್ಜಲೀಕರಣದ ಲಕ್ಷಣಗಳಾಗಿರಬಹುದು. ಮೈ ಮುಟ್ಟಿದರೆ ಬಿಸಿಯ ಅನುಭವ ಮತ್ತು ಚರ್ಮ ಒಣಗಿದಂಥ ಲಕ್ಷಣಗಳು ಕಾಣಬಹುದು. ಮೊದಲಿಗೆ ಸಿಕ್ಕಾಪಟ್ಟೆ ಬೆವರುವ ದೇಹದಿಂದ ಕ್ರಮೇಣ ಒಂದು ಹನಿ ಬೆವರೂ ಬಾರದಿರಬಹುದು. ಇಂಥ ಸಂದರ್ಭಗಳಲ್ಲೂ ಚಿಕಿತ್ಸೆ ಬೇಕಾಗುತ್ತದೆ.

ಮಾಂಸಖಂಡಗಳಲ್ಲಿ ನೋವು

ಬಿಸಿಲಿನ ಆಘಾತದಿಂದ ಮಾಂಸಖಂಡಗಳಲ್ಲಿ ನೋವು, ಏಳಲಾರದಂಥ ಸುಸ್ತು ಆರಂಭವಾಗಿ ನಂತರ ಎಚ್ಚರ ತಪ್ಪಬಹುದು. ತೀವ್ರವಾದ ಸೆಖೆಯ ದಿನಗಳಲ್ಲಿ ಸಿಕ್ಕಾಪಟ್ಟೆ ವ್ಯಾಯಾಮ ಮಾಡಿದಾಗ ಮೊದಲಿಗೆ ಕಾಣುವ ಲಕ್ಷಣಗಳೆಂದರೆ ಕಾಲು, ತೋಳು ಅಥವಾ ಕಿಬ್ಬೊಟ್ಟೆಯಲ್ಲಿ ನೋವು. ಚೆನ್ನಾಗಿ ನೀರು, ಒಆರೆಸ್‌ನಂಥ ಎಲೆಕ್ಟ್ರೋಲೈಟಿಕ್‌ ಪೇಯಗಳು ದೇಹಕ್ಕೆ ತುರ್ತಾಗಿ ಬೇಕಾಗುತ್ತದೆ.

summer clothes

ತಂಪಾಗಿಸಿ

ದೇಹದ ಬಿಸಿ ಹೆಚ್ಚುತ್ತ ಹೋದಂತೆ ಜೀವಾಪಾಯವೂ ಹೆಚ್ಚುತ್ತಲೇ ಹೋಗುತ್ತದೆ. ಇಂಥ ಸಂದರ್ಭಗಳಲ್ಲಿ ಚಿಕಿತ್ಸೆಗಾಗಿ ಧಾವಿಸುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಆ ವ್ಯಕ್ತಿಯ ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು. ವ್ಯಕ್ತಿಯನ್ನು ನೆರಳಿರುವ, ತಂಪಾದ, ತಾಜಾ ಗಾಳಿ ಬರುವ ಜಾಗಕ್ಕೆ ಸ್ಥಳಾಂತರಿಸಿ. ಒಆರೆಸ್‌ನಂಥ ಎಲೆಕ್ಟ್ರೋಲೈಟಿಕ್‌ ಪೇಯಗಳನ್ನು ಸ್ವಲ್ಪ ಸ್ವಲ್ಪವಾಗಿ ಕುಡಿಸುತ್ತಿರಿ. ಸಾಧ್ಯವಾದರೆ ಮೈಯನ್ನೆಲ್ಲಾ ತಂಪಾದ ಒದ್ದೆ ಬಟ್ಟೆಯಲ್ಲಿ ಒರೆಸಿ, ಚೆನ್ನಾಗಿ ಗಾಳಿ ಹಾಕಿ.

Continue Reading

ಮಳೆ

Karnataka Weather: 28 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ತಾಪಮಾನ; ಇನ್ನೊಂದು ವಾರ ಕಾದ ಕೆಂಡ

Heat Wave : ವಿಪರೀತ ತಾಪಮಾನವು ಜನರಿಗೆ ತಲೆ ಬಿಸಿ (highest temperature) ಮಾಡಿದೆ. ಅನಾರೋಗ್ಯ ಸಮಸ್ಯೆ ಹೆಚ್ಚಾಗುತ್ತಿದ್ದು, ಈ ನಡುವೆ ದಾಖಲೆಯಲ್ಲಿ ಉಷ್ಣಾಂಶ ಏರಿಕೆ ಆಗುತ್ತಿದೆ. ಮುಂದಿನ ಐದು ದಿನಗಳಿಗೆ ಹೀಟ್‌ ವೇವ್ಸ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬೇಸಿಗೆಯ ಬೇಗೆ ಶುರುವಾಗಿದ್ದು, ಜನರು ಹನಿ ನೀರಿಗೂ (Karnataka Weather Forecast) ಹೆಣಗಾಡುತ್ತಿದ್ದಾರೆ. ಈ ಮಧ್ಯೆ ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಉಷ್ಣಾಂಶ ಏರಿಕೆ ಆಗಿದೆ. ಇದರಿಂದಾಗಿ ಜನರು ಪರಿತಪಿಸುವಂತಾಗಿದೆ (bangalore temperature) ಈ ಬಗ್ಗೆ ಹವಾಮಾನ ಇಲಾಖೆ (bangalore weather) ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನಿನ್ನೆ ಗುರುವಾರ ಒಂದೇ ದಿನ ತಾಪಮಾನ ಏರಿಕೆ ಆಗಿದೆ.

ರಾಜಧಾನಿ ಬೆಂಗಳೂರಲ್ಲಿ ಗರಿಷ್ಠ ತಾಪಮಾನವು 37.8 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಕಳೆದ 28 ವರ್ಷದಲ್ಲೇ ಗರಿಷ್ಠ ತಾಪಮಾನ ಇದಾಗಿದೆ. ಕಳೆದೊಂದು ವಾರದಿಂದ 36 ಡಿಗ್ರಿ ಸೆಲ್ಸಿಯಸ್ ಇದ್ದ ತಾಪಮಾನವು ನಿನ್ನೆ ಗುರುವಾರ 37.8 ಡಿ.ಸೆಗೆ ಏರಿಕೆ ಆಗಿತ್ತು. 1996ರಲ್ಲಿ ಬೆಂಗಳೂರಲ್ಲಿ 37.3 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತು, ಇದೀಗ ಈ ದಾಖಲೆಯು ನಿನ್ನೆ ಉಡೀಸ್‌ ಆಗಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಬೆಂಗಳೂರು ಮಾತ್ರವಲ್ಲ ಕಲಬುರಗಿ, ಬಾಗಲಕೋಟೆ, ರಾಯಚೂರು, ಬಳ್ಳಾರಿ ಹಾಗೂ ವಿಜಯಪುರ, ಕೊಪ್ಪಳದಲ್ಲಿ ಅತ್ಯಾಧಿಕ ತಾಪಮಾನ ದಾಖಲಾಗಿದೆ. ಈ ಬಗ್ಗೆ ಗರಿಷ್ಠ ಉಷ್ಣಾಂಶ ದಾಖಲಾದ ಬಗ್ಗೆ ಹವಾಮಾನ ಇಲಾಖೆ ಪಟ್ಟಿ ಬಿಡುಗಡೆ ಮಾಡಿದೆ.

ಜಿಲ್ಲೆಗರಿಷ್ಠ ತಾಪಮಾನದಿನ ಹಾಗೂ ವರ್ಷ
ಬೆಂಗಳೂರು37.3 ಡಿ.ಸೆ29th 1996
ಕಲಬುರಗಿ4331st 1996
ಬಾಗಲಕೋಟೆ41.631st 1996
ರಾಯಚೂರು44.627th 1992
ಬಳ್ಳಾರಿ4330th 1996
ಕೊಪ್ಪಳ40.224th 2019
ವಿಜಯಪುರ41.929, 30th 1996

ಇನ್ನೂ 5 ದಿನಗಳು ಸುಡುವ ಕೆಂಡ

ಬೇಸಿಗೆ ಆರಂಭವಾಗುವ ಮೊದಲೇ ಜನರು ಬೇಸಿಗೆಯ ಅನುಭವಿಸಿದ್ದರು. ಮಾರ್ಚ್‌ ಮುಗಿಯುವ ಮೊದಲೇ ಸೂರ್ಯ ದಿನೇದಿನೆ ಪ್ರಖರವಾಗುತ್ತಿದ್ದಾನೆ. ಎಲ್ಲ ರಾಜ್ಯಗಳಲ್ಲೂ ಬೇಸಿಗೆಯನ್ನು ಎದುರಿಸಲು, ಅಗತ್ಯ ಪರಿಹಾರ ಕ್ರಮ ತೆಗೆದುಕೊಳ್ಳಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

ಈ ಬೆನ್ನಲ್ಲೇ ಮುಂದಿನ ಐದು ದಿನಗಳು ಕೆಲವು ಕಡೆ 40 ರಿಂದ 50 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇದು ಖಂಡಿತವಾಗಿಯೂ ಆರೋಗ್ಯಕ್ಕೆ ತುಂಬಾ ಅಪಾಯಕಾರಿಯಾದ ತಾಪಮಾನವಾಗಿದೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿ ಹೀಗಿದೆ..

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆಯು (Health Department) ಕೆಲವು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಸಲಹೆಗಳನ್ನೂ ನೀಡಲಾಗಿದೆ. ಜತೆಗೆ ಮಾಲೀಕರು ಹಾಗೂ ಕೆಲಸಗಾರರಿಗೂ ಒಂದಷ್ಟು ಮುಂಜಾಗ್ರತಾ ಕ್ರಮಗಳನ್ನು (Health Tips) ಕೈಗೊಳ್ಳಲಾಗಿದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಇದನ್ನೂ ಓದಿ: Side Effects Of Pillow: ಎತ್ತರದ ದಿಂಬು ಬಳಸುತ್ತೀರಾ? ಸಮಸ್ಯೆ ತಪ್ಪಿದ್ದಲ್ಲ!

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಅಗ್ನಿ ಅವಘಡದ ಕುರಿತು ಎಚ್ಚರಿಕೆ ವಹಿಸಿ

ಬೇಸಿಗೆ ಸಮಯದಲ್ಲಿ ಅತಿಯಾದ ತಾಪಮಾನದಿಂದ ಆರೋಗ್ಯ ಕೇಂದ್ರಗಳಲ್ಲಿ ಅಗ್ನಿ ಅನಾಹುತಗಳಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತೆಯನ್ನು ವಹಿಸುವಂತೆ ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್‌ ಎಲ್ಲಾ ಆಸ್ಪತ್ರೆಗಳಿಗೂ ಸೂಚನೆ ನೀಡಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳೂ ಸೇರಿದಂತೆ ಎಲ್ಲಾ ಹಂತದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ, ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ, ಬೆಂಕಿ ನಂದಿಸುವ ಉಪಕರಣಗಳ ಲಭ್ಯತೆ ಇರಬೇಕು. ಅಗ್ನಿಶಾಮಕ ದಳದಿಂದ No Objection Certificate ಅನ್ನು ಹೊಂದಿರಬೇಕು. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಂಡು ಆರೋಗ್ಯ ಸಂಸ್ಥೆಗಳಲ್ಲಿ ಅಗ್ನಿ ಅವಘಡಗಳನ್ನು ತಡೆಗಟ್ಟುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Heart Attack : ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

BMTC Bus: ಬಿಎಂಟಿಸಿ ಬಸ್‌ ಏರಿದ ವೃದ್ಧರೊಬ್ಬರು ಟಿಕೆಟ್ ಪಡೆದು ಸೀಟ್‌ನಲ್ಲಿ ಕುಳಿತುಕೊಂಡಾಗ ಹಠಾತ್‌ ಹೃದಯಾಘಾತ (Heart Attack) ಸಂಭವಿಸಿದೆ. ಬಸ್‌ ಹತ್ತಿದ ಹತ್ತೇ ನಿಮಿಷದಲ್ಲಿ ಪ್ರಾಣ ಪಕ್ಷಿ ಹಾರಿ ಹೋಗಿದೆ.

VISTARANEWS.COM


on

By

Heart Attack
Koo

ಬೆಂಗಳೂರು: ಹೃದಯಾಘಾತ (Heart Attack) ವೃದ್ಧರೊಬ್ಬರ ಪ್ರಾಣವನ್ನು ಬಲಿ ಪಡೆದಿದೆ. ಈಗೀಗ ಹೃದಯಾಘಾತ (Heart attack) ಯಾವುದೇ ಕ್ಷಣದಲ್ಲಿ ಆಗಿಬಿಡಬಹುದು ಎನ್ನುವಷ್ಟು ಭಯಾನಕವಾಗಿದೆ. ಕುಳಿತಲ್ಲೇ, ಕುಸಿದುಬಿದ್ದು ಪ್ರಾಣ ಕಳೆದುಕೊಳ್ಳುವ, ನಿಂತಲ್ಲೇ ಉಸಿರು ನಿಲ್ಲುವ, ಮಲಗಿದ್ದಲ್ಲೇ ಉಸಿರು ಚೆಲ್ಲುವ ವಿದ್ಯಮಾನಗಳು ಏಕಾಏಕಿ ಹೆಚ್ಚಾಗಿದೆ.

ಇಂಥಹುದೇ ಒಂದು ಆತಂಕ ಮೂಡಿಸುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೃದ್ಧರೊಬ್ಬರು ಕುಳಿತಲ್ಲೇ ಕುಸಿದಿದ್ದು, ಕ್ಷಣಾರ್ಧದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹಠಾತ್ ಹೃದಯಾಘಾತದಿಂದ ವೃದ್ಧ ಪ್ರಾಣ ಕಳೆದುಕೊಂಡಿದ್ದಾರೆ.

ಕೃಷ್ಣ (60) ಮೃತ ದುರ್ದೈವಿ. 11 ಗಂಟೆ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಿಂದ ಬಸ್ ಹತ್ತಿದ್ದ ಕೃಷ್ಣ ಅವರು ಟಿಕೆಟ್ ಪಡೆದು ಸೀಟ್‌ನಲ್ಲಿ ಕುಳಿತುಕೊಂಡಿದ್ದರು. ನವರಂಗ್ ಬಳಿ ಬರುತ್ತಿದ್ದಂತೆ ಹದಿನೈದು ನಿಮಿಷದಲ್ಲೇ ಹೃದಯಾಘಾತವಾಗಿದೆ. ನೋಡನೋಡುತ್ತಿದ್ದಂತೆ ಬಸ್ಸಿನಲ್ಲೇ ಉಸಿರು ಚೆಲ್ಲಿದ್ದಾರೆ.

ಏಕಾಏಕಿ ವ್ಯಕ್ತಿ ಮೃತಪಟ್ಟಿದ್ದು ಕಂಡ ಸಹಪ್ರಯಾಣಿಕರು ಆತಂಕಗೊಂಡು ಕಿರುಚಾಡಿದ್ದಾರೆ. ಕೂಡಲೇ ಚಾಲಕ ಹಾಗು ನಿರ್ವಾಹಕರು ಬಿಎಂಟಿಸಿ ಬಸ್‌ನಲ್ಲೇ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾಗಿ ಘೋಷಿಸಿದ್ದಾರೆ. ಬಳಿಕ ಮೃತ ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಹಾಸನದಲ್ಲಿ ಅಕ್ರಮ ಗೋಮಾಂಸ ಜಾಲ; 60 ಗೋವುಗಳನ್ನು ಕೊಂದ ರಾಕ್ಷಸರು!

ಚಿಕ್ಕಬಳ್ಳಾಪುರದಲ್ಲಿ ಅತ್ತೆಯನ್ನು ಎಳೆದೊಯ್ದು ತಿಪ್ಪೆಗೆ ಎಸೆದ ಕ್ರೂರ ಸೊಸೆ; ವೃದ್ಧೆಯ ತಪ್ಪೇನು?

ಚಿಕ್ಕಬಳ್ಳಾಪುರ‌: ಹೆತ್ತ ತಂದೆ-ತಾಯಿಯನ್ನೇ ವಯಸ್ಸಾಗುತ್ತಲೇ ವೃದ್ಧಾಶ್ರಮಕ್ಕೆ ಸೇರಿಸುವ ಮಕ್ಕಳಿದ್ದಾರೆ. ಇನ್ನು, ತಾಯಿ ಸಮಾನಳಾದ ಅತ್ತೆ ಮೇಲೆ ಸೊಸೆಯಂದಿರುವ ತೋರುವ ದರ್ಪ, ಹಲ್ಲೆಯ ಸುದ್ದಿಗಳಂತೂ ಆಗಾಗ ಕೇಳಿಸುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ (Chikkaballapur District) ಮಹಿಳೆಯೊಬ್ಬರು 80 ವರ್ಷದ ಅತ್ತೆಯನ್ನು (Mother In Law) ಎಳೆದೊಯ್ದು, ತಿಪ್ಪೆಗೆ ಎಸೆಯುವ ಮೂಲಕ ಅಮಾನವೀಯತೆ ತೋರಿದ್ದಾರೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪಗಾರಿಪಲ್ಲಿ ಗ್ರಾಮದಲ್ಲಿ ಸೊಸೆಯು ಅತ್ತೆಯ ಮೇಲೆ ಮೃಗೀಯ ವರ್ತನೆ ತೋರಿದ್ದಾಳೆ. 80 ವರ್ಷದ ವೆಂಕಟಲಕ್ಷ್ಮಮ್ಮ ಅವರು ಮನೆಯ ಎದುರು ಮಲಗಿದ್ದಾಗ ಲಕ್ಷ್ಮೀದೇವಮ್ಮ ಎಂಬ ಮಹಿಳೆಯು ಅವರನ್ನು ಎಳೆದಿದ್ದಾರೆ. ವೃದ್ಧೆ ಎಂಬುದನ್ನೂ ಲೆಕ್ಕಿಸದ ಸೊಸೆಯು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಬಿಸಿಲು ಎಂದು ನೆರಳಿನಲ್ಲಿ ಮಲಗಿದ್ದ ಅತ್ತೆಯ ಮೇಲೆ ಸೊಸೆ ತೋರಿದ ಕ್ರೌರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಳಿಯ ವಯಸ್ಸಿನಲ್ಲಿ ಎರಡು ಹೊತ್ತು ಊಟ ಸಿಕ್ಕರೆ ಸಾಕು ಎಂದು ಬಯಸುವ ಜೀವಕ್ಕೆ ಕಿರುಕುಳ ನೀಡಲು ಅವರು ಮಾಡಿದ ತಪ್ಪೇನು ಎಂಬುದು ತಿಳಿದುಬಂದಿಲ್ಲ. ವೆಂಕಟಲಕ್ಷ್ಮಮ್ಮ ಅವರನ್ನು ಎಳೆದು, ತಿಪ್ಪೆಗೆ ಎಸೆಯುವಾಗ ಅವರ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮರೆಯಾದ ಮಾನವೀಯತೆ: ಮಹಿಳೆ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ ಮೆರವಣಿಗೆ; ನಾಲ್ವರು ಮಹಿಳೆಯರ ಬಂಧನ

ನನಗೇಕೆ ಕುಕ್ಕರ್‌ ನೀಡಿಲ್ಲ ಎಂದ ವೃದ್ಧೆ ಮೇಲೆ ಹಲ್ಲೆ

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಉಜ್ಜನಿ ಗ್ರಾಮದಲ್ಲಿ ಮತದಾರರಿಗೆ ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ಹಂಚಿಕೆ ಆರೋಪ ಕೇಳಿಬಂದಿದೆ. ಇನ್ನು, ಗ್ರಾಮದಲ್ಲಿ ಕುಕ್ಕರ್ ವಿತರಣೆಯಲ್ಲಿ ತಾರತಮ್ಯ ಮಾಡಿದ್ದಾರೆ, ನನಗ್ಯಾಕೆ ಕುಕ್ಕರ್‌ ನೀಡಿಲ್ಲ ಎಂದು ಕೇಳಿದ ವೃದ್ಧೆ ಮೇಲೆ ಹಲ್ಲೆ ಮಾಡಿರುವುದು ಕಂಡುಬಂದಿದೆ.

ಉಜ್ಜನಿ ಗ್ರಾಮದ ಗಂಗಮ್ಮ (75) ಹಲ್ಲೆಗೊಳಗಾದ ವೃದ್ಧೆ. ಕಾಂಗ್ರೆಸ್ ಕಾರ್ಯಕರ್ತ ನಾರಾಯಣ್ ಎಂಬಾತನ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ಗಾಯಗೊಂಡ ವೃದ್ಧೆಗೆ ಹುಲಿಯೂರುದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆರೋಗ್ಯ

Health Tips: ನಮ್ಮ ಅನಾರೋಗ್ಯದಲ್ಲಿ ನಾವು ಬಳಸುವ ಪಾತ್ರೆಗಳ ಪಾತ್ರವೇ ಮುಖ್ಯ!

ನಾವು ಅಡುಗೆ ಮಾಡುವ ಪಾತ್ರೆಗಳು ಸಹ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆಂಬುದು ಗೊತ್ತೇ? ಹಾಗಾಗಿಯೇ ಹಳೆಯ ಕಾಲದ ಹಿತ್ತಾಳೆ, ತಾಮ್ರ, ಮಣ್ಣಿನ ಪಾತ್ರೆಗಳು ಮತ್ತೆ ಜನಪ್ರಿಯಗೊಳ್ಳುತ್ತಿವೆ. ಏನು ಈ ಪಾತ್ರೆಗಳ ಮಹತ್ವ? ಇಲ್ಲಿದೆ ಈ ಕುರಿತ (Health Tips) ಉಪಯುಕ್ತ ಮಾಹಿತಿ.

VISTARANEWS.COM


on

Cooking utensils Health Tips
Koo

ಅಡುಗೆ ಮನೆಯ ಸ್ವರೂಪಗಳು ಹಿಂದಿನ ಕಾಲಕ್ಕಿಂತ ಇಂದಿಗೆ ನೂರಕ್ಕೆ ನೂರರಷ್ಟು ಬದಲಾಗಿವೆ. ಮಾಡುವ ಅಡುಗೆಯ ವಿಷಯದಲ್ಲಿ ಅಲ್ಲ ಇಲ್ಲಿ ಹೇಳುತ್ತಿರುವುದು; ಅಡುಗೆ ಮನೆಯ ಕಾಣುವ-ಮನಗಾಣುವ ವಿಷಯಕ್ಕೆ ಇದು ಅನ್ವಯ. ಉದಾ, ಸ್ಟೀಲ್‌ ಪಾತ್ರೆಗಳು, ಗಾಜಿನ ಅಥವಾ ನಾನ್‌ಸ್ಟಿಕ್‌ ಪಾತ್ರೆಗಳು ಮಾತ್ರವೇ ಈಗಿನ ಅಡುಗೆ ಮನೆಗಳಲ್ಲಿ ಕಾಣಸಿಗುತ್ತವೆ. ಕಾಲಕ್ಕೆ ತಕ್ಕಂತೆ ನಡೆಯುವುದರಲ್ಲಿ ತಪ್ಪೇನಿಲ್ಲ. ಇದರರ್ಥ ಹಳೆಯದನ್ನೆಲ್ಲಾ ಬಿಡಬೇಕೆಂದೂ ಅಲ್ಲ. ಹಳೆಯ ಕಾಲದ ತಾಮ್ರ, ಹಿತ್ತಾಳೆಯ ಪಾತ್ರೆಗಳನ್ನು ನಿಭಾಯಿಸುವುದು ಕಷ್ಟ. ಫಳಫಳ ಎನಿಸುವುದಕ್ಕೆ ಪದೇಪದೆ ಹುಳಿ ಹಾಕಿ ಉಜ್ಜಬೇಕು, ಮೊದಲಿನಂತೆ ಕಲಾಯಿ ಹಾಕುವವರೂ ಇಲ್ಲ ಈಗ- ಇಂಥ ಎಲ್ಲಾ ತಕರಾರುಗಳೂ ಸಮ್ಮತವೇ. ಆದರೆ ಆರೋಗ್ಯಕ್ಕೆ ಆಗುವ ಅನುಕೂಲಗಳ ಬಗ್ಗೆ ನಾವೀಗ ಒಮ್ಮತಕ್ಕೆ ಬರಬಹುದಲ್ಲ. ಅದರಲ್ಲೂ ಇತ್ತೀಚೆಗೆ ದೊರೆಯುವ ತಾಮ್ರ, ಪಿಂಗಾಣಿ ಮತ್ತು ಹಿತ್ತಾಳೆಯ ಪಾತ್ರೆಗಳು ಬಳಕೆಗೆ ಸರಳ ಮತ್ತು ನೋಡುವುದಕ್ಕೆ ಸುಂದರ. ಕೆಲವು ಅಡುಗೆಗಳಿಗೆ ಕಬ್ಬಿಣ ಅಥವಾ ಮಣ್ಣಿನ ಪಾತ್ರೆಗಳು ಸೂಕ್ತ. ಏನು (Health Tips) ಅವುಗಳ ಮಹತ್ವ?

kitchen utensil

ಪೌಷ್ಟಿಕಾಂಶ ಕಾಪಾಡುತ್ತದೆ

ತಾಮ್ರ, ಹಿತ್ತಾಳೆಯ ಪಾತ್ರೆಗಳು ಒಮ್ಮೆ ಬಿಸಿಯಾದರೆ ದೀರ್ಘಕಾಲದವರೆಗೆ ಬಿಸಿ ಕಾಯ್ದುಕೊಂಡಿರುತ್ತವೆ. ಮಾತ್ರವಲ್ಲ, ಇಡೀ ಪಾತ್ರೆ ಒಂದೇಸಮ ಬಿಸಿಯಾಗುತ್ತದೆ, ಹೆಚ್ಚು-ಕಡಿಮೆ ಇಲ್ಲದಂತೆ. ಇದರಿಂದ ಇಂಥ ಪಾತ್ರೆಗಳಲ್ಲಿ ಮಾಡುವ ಅಡಿಗೆಗಳನ್ನು ದೀರ್ಘಕಾಲ ಬೆಂಕಿಯಲ್ಲಿ ಇಡುವುದು ಬೇಡ. ಸ್ವಲ್ಪ ಕಾಲ ಉರಿಯಲ್ಲಿಟ್ಟರೂ ಸಾಕು, ಉಳಿದಂತೆ ಪಾತ್ರೆಯ ಶಾಖಕ್ಕೇ ಬೇಯುವ ಪ್ರಕ್ರಿಯೆ ಜಾರಿಯಲ್ಲಿರುತ್ತದೆ. ಒಲೆಯ ಕಾವಿನಲ್ಲಿ ಹಾಗೆಯೇ ಬಿಟ್ಟರೆ ದೀರ್ಘಕಾಲದವರೆಗೆ ಬಿಸಿ ಕಾಪಾಡಿಕೊಂಡು, ಮತ್ತೆಮತ್ತೆ ಬಿಸಿ ಮಾಡುವ ಸಮಸ್ಯೆಯನ್ನು ನಿವಾರಿಸುತ್ತದೆ. ಹಾಗಾಗಿ ಪೌಷ್ಟಿಕಾಂಶ ಮತ್ತು ಇಂಧನ- ಎರಡೂ ಉಳಿಯುತ್ತವೆ.

ಸೋಂಕುಗಳಿಗೆ ಕಡಿವಾಣ

ತಾಮ್ರ ಮತ್ತು ಹಿತ್ತಾಳೆಯಲ್ಲಿಟ್ಟ ಆಹಾರದ ಸೇವನೆಯಿಂದ ದೇಹದ ರೋಗನಿರೋಧಕ ಶಕ್ತಿ ವರ್ಧಿಸುತ್ತದೆ. ಅದರಲ್ಲೂ ನೆಗಡಿ-ಕೆಮ್ಮು-ದಮ್ಮಿನಂಥ ಸಮಸ್ಯೆಗಳಿಗೆ ಪದೇಪದೆ ತುತ್ತಾಗುವವರಿಗೆ ಬೆಳ್ಳಿ, ತಾಮ್ರ ಅಥವಾ ಹಿತ್ತಾಳೆ ಪಾತ್ರೆಯಲ್ಲಿಟ್ಟ ನೀರು ಕುಡಿಸುವ ಪದ್ಧತಿ ಹಿಂದಿನಿಂದಲೂ ಜಾರಿಯಲ್ಲಿದೆ. ಹಿತ್ತಾಳೆ ಪಾತ್ರೆಗಳಲ್ಲಿ ಅಡುಗೆ ಮಾಡುವುದರಿಂದ, ರಕ್ತದಲ್ಲಿ ಹಿಮೋಗ್ಲೋಬಿನ್‌ ವೃದ್ಧಿಗೆ ಸಹಾಯಕವಾಗುತ್ತದೆ. ತಾಮ್ರದ ಪಾತ್ರೆಯ ನೀರು ಕುಡಿಯುವುದರಿಂದ ದೇಹದಲ್ಲಿ ಉರಿಯೂತಗಳು ಕಡಿಮೆಯಾಗುತ್ತವೆ. ಕೀಲುನೋವಿನಂಥ ಸಮಸ್ಯೆಗಳಿಗೆ ಇದು ಉಪಯುಕ್ತ.

ಕಬ್ಬಿಣದ ಪಾತ್ರೆಗಳು

ಇಂಥವು ಬಳಕೆಯಲ್ಲಿರುವುದೇ ಬೆರಳೆಣಿಕೆಯಷ್ಟು. ಅದರಲ್ಲೂ ಬಾಣಲೆ ಮತ್ತು ತವಾಗಳು ಕಬ್ಬಿಣದ್ದಾದರೆ ಸೂಕ್ತ. ದೋಸೆ, ರೊಟ್ಟಿ, ಪಡ್ಡು ಇಂಥ ಕಾವಲಿಗಳು ಮೊದಲಿನಿಂದಲೂ ಕಬ್ಬಿಣದ್ದೇ ಇರುತ್ತಿದ್ದವು. ಇವುಗಳನ್ನೆಲ್ಲ ನಾನ್‌ಸ್ಟಿಕ್‌ಗೆ ಬದಲಾಯಿಸಿ ಹಲವು ಕಾಲ ಸಂದಿದೆ. ಆದರೆ ಹುರಿಯುವ, ಕರಿಯುವ, ಬೇಯಿಸುವ ಪಾತ್ರೆ ಕಬ್ಬಿಣದ್ದಾದರೆ ದೇಹದಲ್ಲಿ ಕಬ್ಬಿಣಾಂಶದ ಕೊರತೆಯನ್ನು ನೀಗಿಸಲು ಸಹಾಯವಾಗಬಹುದು. ರಕ್ತಹೀನತೆಯಂಥ ತೊಂದರೆಗಳು ಗಂಟಿಕ್ಕಿಕೊಳ್ಳದಂತೆ ಕಾಪಾಡಿಕೊಳ್ಳಬಹುದು.

weight loss

ತೂಕ ಇಳಿಕೆ

ನಮ್ಮ ದೇಹದ ಜೀರ್ಣಾಂಗವನ್ನು ಚುರುಕುಗೊಳಿಸುವಂಥ ಅಂಶಗಳು ಈ ಲೋಹಗಳಿಗಿವೆ. ಹಾಗಾಗಿ ಆಸಿಡಿಟಿ, ಅಜೀರ್ಣ, ವಾಯುಪ್ರಕೋಪ, ಮಲಬದ್ಧತೆಯಂಥ ಸಮಸ್ಯೆಗಳನ್ನು ದೂರಮಾಡಲು ನೆರವಾಗುತ್ತದೆ. ಹೊಟ್ಟೆಯನ್ನು ಸ್ವಚ್ಛವಾಗಿಟ್ಟು, ಪೌಷ್ಟಿಕಾಂಶಗಳನ್ನು ಹೀರಿಕೊಳ್ಳಲು ದೇಹಕ್ಕೆ ನೆರವಾಗುತ್ತದೆ. ಜೀರ್ಣಾಂಗದ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮೂಲಕ, ದೇಹದಲ್ಲಿ ಕೊಬ್ಬು ಶೇಖರವಾಗುವುದನ್ನು ತಡೆದು, ತೂಕ ಇಳಿಸುವುದಕ್ಕೂ ಸಹಕಾರಿಯಾಗುತ್ತದೆ. ಮಾತ್ರವಲ್ಲ, ನಮ್ಮ ಕಣ್ಣು ಮತ್ತು ಚರ್ಮದ ಆರೋಗ್ಯವನ್ನೂ ಉತ್ತಮಪಡಿಸುತ್ತದೆ.

Heart Health In Winter

ಹೃದಯಾರೋಗ್ಯ

ರಕ್ತದೊತ್ತಡವನ್ನು ಕಡಿಮೆ ಮಾಡುವ ಗುಣ ತಾಮ್ರಕ್ಕಿದೆ. ಈ ಲೋಹಗಳನ್ನು ನಿಯಮಿತವಾಗಿ ಬಳಸಿದಲ್ಲಿ ಕೊಲೆಸ್ಟ್ರಾಲ್‌ ಮತ್ತು ರಕ್ತದೊತ್ತಡ ನಿಯಂತ್ರಣಕ್ಕೆ ನೆರವು ದೊರೆತು ಹೃದಯಾರೋಗ್ಯ ಉತ್ತಮಪಡಿಸಲು ಅನುಕೂಲವಾಗಲಿದೆ. ದೇಹಕ್ಕೆ ಅಗತ್ಯವಿರುವ ಸೂಕ್ಷ್ಮ ಪೋಷಕಾಂಶಗಳನ್ನು ಒದಗಿಸಿ, ಆಹಾರದ ಗುಣಮಟ್ಟ ಮತ್ತು ರುಚಿಯನ್ನು ಹೆಚ್ಚಿಸುವಲ್ಲಿ ತಾಮ್ರ ಮತ್ತು ಹಿತ್ತಾಳೆಯ ಪಾತ್ರೆಗಳು ಉತ್ತಮ ಆಯ್ಕೆ.

ಗಾಜು, ಪಿಂಗಾಣಿ

ಕೆಲವು ಆಹಾರಗಳ ತಯಾರಿಕೆ ಮತ್ತು ಶೇಖರಣೆಗೆ ಈ ಪಾತ್ರೆಗಳು ಸೂಕ್ತ. ಉದಾ, ತುಪ್ಪವನ್ನು ಗಾಜು ಅಥವಾ ಪಿಂಗಾಣಿಯ ಪಾತ್ರೆಗಳಲ್ಲಿ ಇಡಬಹುದು. ಇದೇ ರೀತಿಯಲ್ಲಿ ಉಪ್ಪು, ಖಾರ ಮುಂದಿರುವಂಥ ಉಪ್ಪಿನ ಕಾಯಿ, ತೊಕ್ಕುಗಳಿಗೂ ಈ ಪಾತ್ರೆಗಳೇ ಯೋಗ್ಯ. ಆದರೆ ಇವುಗಳು ಕೈತಪ್ಪಿ ಬೀಳದಂತೆ ಜಾಗ್ರತೆ ಮಾಡುವುದು ಸವಾಲಿನದ್ದು. ಮಣ್ಣಿನ ಪಾತೆರಗಳು ಸಹ ಇತ್ತೀಚೆಗೆ ಜನಪ್ರಿಯವಾಗಿವೆ. ಮೆಗ್ನೀಶಿಯಂ, ಫಾಸ್ಫರಸ್‌, ಕ್ಯಾಲ್ಶಿಯಂನಂಥ ಖನಿಜಗಳು ನಮಗೆ ದಕ್ಕಬೇಕೆಂದರೆ ಮಣ್ಣಿನ ಗಡಿಗೆಗಳಲ್ಲಿ ಅಡುಗೆ ಮಾಡುವುದು ಒಳ್ಳೆಯದು. ಇವುಗಳನ್ನು ಸುಟ್ಟು ಒಮ್ಮೆ ಹದಗೊಳಿಸಿಕೊಂಡರೆ (ಅಂಥದ್ದೇ ದೊರೆಯುತ್ತದೆ) ಮತ್ತೆ ವರ್ಷಾನುವರ್ಷಗಳ ಕಾಲ ಬಳಸಬಹುದು.

ಇದನ್ನೂ ಓದಿ: Weight Loss Tips: ದಾಲ್ಚಿನ್ನಿ ಚಕ್ಕೆಯ ನೀರು ಸೇವಿಸಿ, ನಿರಾಯಾಸವಾಗಿ ತೂಕ ಇಳಿಸಿ!

Continue Reading
Advertisement
Summer Nail Colours Trend
ಫ್ಯಾಷನ್16 mins ago

Summer Nail Colours Trend: ಸಮ್ಮರ್‌ ಸೀಸನ್‌ನಲ್ಲಿ ಬದಲಾಯ್ತು ನೇಲ್‌ ಕಲರ್ಸ್‌ ಟ್ರೆಂಡ್‌

Lok Sabha Election 2024 and BJP files complaint with Election Commission against Yathindra for calling Amit Shah a rowdy and also CM Siddaramaiah in this Photo
Lok Sabha Election 202420 mins ago

Lok Sabha Election 2024: ಅಮಿತ್‌ ಶಾ ರೌಡಿ ಎಂದಿದ್ದ ಯತೀಂದ್ರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Board Exam
ಬೆಂಗಳೂರು25 mins ago

Board Exams: ಬೋರ್ಡ್‌ ಎಕ್ಸಾಂ ವ್ಯಾಲ್ಯುವೇಶನ್‌; 3 ದಿನದ ಗಡುವು ಆದೇಶ ವಾಪಸ್‌

income Tax - how to save tax
ಪ್ರಮುಖ ಸುದ್ದಿ36 mins ago

Income Tax : ತೆರಿಗೆ ಉಳಿತಾಯ ಮಾಡಲು ಇನ್ನೆರಡೇ ದಿನ ಅವಕಾಶ, ಏನೇನು ಮಾಡಬಹುದು ಇನ್ನು?

Utthana Essay Competition 2023
ಕರ್ನಾಟಕ58 mins ago

Utthana Essay Competition 2023: ಉತ್ಥಾನ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಬೆಂಗಳೂರಿನ ಕಾವ್ಯಜೋಗಿ ಪ್ರಥಮ

Lok Sabha Election 2024 R Ashok attack on Yathindra Siddaramaiah for he says Amit Shah is Rowdy and goonda
Lok Sabha Election 202459 mins ago

Lok Sabha Election 2024: ಸಿದ್ದರಾಮಯ್ಯ ಗೂಂಡಾ ಗುರು; ಯತೀಂದ್ರ ಜೈಲಿಗೆ ಹೋಗ್ತಾರೆ: ಆರ್.‌ ಅಶೋಕ್‌ ಕೆಂಡ

Kodagu University
ಕೊಡಗು60 mins ago

Kodagu University : ಉದ್ಯೋಗ ಸೃಷ್ಟಿ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ

Alia Bhatt wore diamond jewellery
ಸಿನಿಮಾ1 hour ago

Alia Bhatt: ಲಂಡನ್‌ ʻಹೋಪ್ ಗಾಲಾʼದಲ್ಲಿ ಆಲಿಯಾ ಭಟ್‌ ಧರಿಸಿದ ವಜ್ರದ ನೆಕ್ಲೇಸ್ ಬೆಲೆ ಎಷ್ಟು?

Heat Stroke
ಆರೋಗ್ಯ1 hour ago

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

Rahul Gandhi And Tejashwi Yadav
Lok Sabha Election 20241 hour ago

Lok Sabha Election: ಬಿಹಾರದಲ್ಲಿ ಕಾಂಗ್ರೆಸ್‌, ಆರ್‌ಜೆಡಿ ಸೀಟು ಹಂಚಿಕೆ; ಯಾರಿಗೆ ಎಷ್ಟು ಕ್ಷೇತ್ರ?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌