Heart attack info: ಎದೆಯುರಿಯೇ… ಎದೆನೋವೇ… ಸಂಶಯಕ್ಕೊಂದು ಕನ್ನಡಿ! - Vistara News

ಆರೋಗ್ಯ

Heart attack info: ಎದೆಯುರಿಯೇ… ಎದೆನೋವೇ… ಸಂಶಯಕ್ಕೊಂದು ಕನ್ನಡಿ!

ಕೆಲವೊಮ್ಮೆ ಗ್ಯಾಸ್ಟ್ರಿಕ್‌ನಿಂದ ಆಗುವ ಎದೆಯುರಿ ಮತ್ತು ಹೃದಯಾಘಾತದ ನೋವು ಒಂದೇ ಥರ ಕಾಣಿಸುತ್ತವೆ. ಆದರೆ ಇವುಗಳ ನಡುವೆ ವ್ಯತ್ಯಾಸ ಗುರುತಿಸುವುದು ಅಗತ್ಯ.

VISTARANEWS.COM


on

heart attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಶ್ವದೆಲ್ಲಡೆ ಬಹಳಷ್ಟು ಸಾವುಗಳಿಗೆ ಹೃದ್ರೋಗದ ಕಾರಣವೂ ಒಂದು. ವಿಶ್ವದಲ್ಲಾಗುವ ಸಾವಿನ ಮೂರನೇ ಒಂದು ಭಾಗ ಸಾವು ಹೃದ್ರೋಗಕ್ಕೆ ಸಂಬಂಧಿಸಿದ ಸಾವೇ ಆಗಿರುತ್ತದೆ ಎಂದು ದಾಖಲೆಗಳು ಹೇಳುತ್ತವೆ. ಚೀನಾದಲ್ಲಿ ಅತೀ ಹೆಚ್ಚು ಹೃದಯ ಸಂಬಂಧೀ ಸಾವಾದರೆ, ಭಾರತ ಎರಡನೇ ಸ್ಥಾನದಲ್ಲಿಯೂ ರಷ್ಯಾ, ಯುಎಸ್‌ ಹಾಗೂ ಇಂಡೋನೇಷ್ಯಾಗಳು ನಂತರದ ಸ್ಥಾನಗಳಲ್ಲಿವೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಪ್ರಪಂಚದಲ್ಲಿ ಇಂದು ೧.೭೯ ಕೋಟಿ ಮಂದಿ ಹೃದ್ರೋಗ ಸಮಸ್ಯೆ ಹೊಂದಿದ್ದಾರೆ.

ಹಿರಿಯ ವಯಸ್ಸಿನ ಮಂದಿಯಲ್ಲಿ ಹೃದಯ ಸಂಬಂಧೀ ತೊಂದರೆ ಜಾಸ್ತಿ ಎಂಬುದು ನಿಜವೇ ಆದರೂ, ಇತ್ತೀಚೆಗೆ ಸಣ್ಣ ವಯಸ್ಸಿನಲ್ಲೂ ಇದಕ್ಕೆ ಸಾವಿಗೀಡಾಗುವವರ ಸಂಖ್ಯೆ ಹೆಚ್ಚಾಗಿದೆ. ಬಹಳ ಸಾರಿ ಹೃದಯದ ತೊಂದರೆಗಳನ್ನು ಸಾಮಾನ್ಯ ಎದೆಯುರಿಯೆಂದು ತಪ್ಪಾಗಿ ಅರ್ಥೈಸಿಕೊಂಡು ನಿರ್ಲಕ್ಷಿಸಲಾಗುತ್ತದೆ. ಎದೆಯ ಭಾಗದಲ್ಲಾಗುವ ಕಿರಿಕಿರಿ, ನೋವನ್ನು, ಸ್ವಲ್ಪ ಮೊದಲು ಹೆಚ್ಚು ಊಟ ಮಾಡಿದ್ದರ ಪರಿಣಾಮ ಎಂದು ಅಂದುಕೊಂಡು ಮನೆ ಮದ್ದು ಮಾಡಿಕೊಂಡು ಸುಮ್ಮನಾಗುವ ಸಂಭವ ಹೆಚ್ಚಿದೆ. ತನಗೆ ಆಗುತ್ತಿರುವ ನೋವು ಹೃದಯ ಸಂಬಂಧಿಯೋ ಅಥವಾ ಸರಿಯಾಗಿ ಜೀರ್ಣವಾಗದ್ದರ ಫಲವೋ ಎಂದು ಕಂಡುಕೊಳ್ಳುವುದು ಇಲ್ಲಿ ಮುಖ್ಯವಾಗುತ್ತದೆ. ಹಾಗಾದರೆ ಈ ಎರಡರ ವ್ಯತ್ಯಾಸ ತಿಳಿಯೋಣ.

೧. ಎದೆ ಉರಿ ಹಾಗೂ ಹೃದಯಾಘಾತ ಇವೆರಡರ ಅನುಭವ ಹೆಚ್ಚು ಕಡಿಮೆ ಒಂದೇ ರೀತಿ ಇರುತ್ತದೆ, ಮುಖ್ಯವಾಗಿ ಲಕ್ಷಣಗಳಲ್ಲಿ ಹೋಲಿಕೆ ಇರುವುದು ಹೌದಾದರೂ, ತೀವ್ರತೆಯಲ್ಲಿ ಎರಡೂ ಬೇರೆಬೇರೆಯಾಗಿರುತ್ತದೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ಹೃದಯಾಘಾತ ಎಂಬುದು ರಕ್ತನಾಳಗಳಲ್ಲಿ ಸಂಗ್ರಹವಾದ ಕೊಬ್ಬು ಕೊಲೆಸ್ಟೆರಾಲ್‌ನಿಂದ ತಡೆ ಉಂಟಾಗಿ ರಕ್ತಪರಿಚಲನೆ ಸಾಧ್ಯವಾಗದೆ ಇರುವುದಕ್ಕೆ ಸಂಬಂಧಿಸಿದ್ದು. ಇದು, ಜೀವಕ್ಕೇ ಅಪಾಯ ತಂದೊಡ್ಡುವ ಅಪಾಯವೂ ಇರುವುದರಿಂದ ಇದನ್ನು ನಿರ್ಲಕ್ಷಿಸುವ ಹಾಗಿಲ್ಲ.

ಆದರೆ ಎದೆಯುರಿ ಹಾಗಲ್ಲ. ಉಂಡ ಆಹಾರ ಸರಿಯಾಗಿ ಜೀರ್ಣವಾಗದೆ ಅನ್ನನಾಳದಲ್ಲಿ ಉತ್ಪತ್ತಿಯಾಗುವ ಆಮ್ಲದ ಜೊತೆಗೆ ಸೇರಿ ಹೆಚ್ಚಿನ ಆಮ್ಲೀಯತೆಯ ಪರಿಣಾಮವನ್ನುಂಟು ಮಾಡಿದರೆ ಅದು ಎದೆಯುರಿಗೆ ಕಾರಣವಾಗುತ್ತದೆ. ಆದರೆ ಕೆಲವೊಮ್ಮೆ ಹೃದಯಾಘಾತದ ಲಕ್ಷಣಗಳೂ, ಜೀರ್ಣಕ್ರಿಯೆಯಲ್ಲಾದ ತೊಂದರೆಗಳೊಂದಿಗೆ ಸೇರಿಕೊಂಡು ನಿಜವಾದ ತೊಂದರೆ ಯಾವುದು ಎಂದು ಕಂಡು ಹಿಡಿವಲ್ಲಿ ಸೋಲುವಂತೆ ಮಾಡುತ್ತದೆ. ಹೀಗಾಗಿ ಎಷ್ಟೋ ಪ್ರಕರಣಗಳಲ್ಲಿ ಹೃದಯಾಘಾತವನ್ನು ಎದೆಯುರಿ ಅಷ್ಟೇ ಎಂದುಕೊಂಡು ತೊಂದರೆ ತಂದುಕೊಳ್ಳುತ್ತಾರೆ.

೨. ಹಾರ್ವರ್ಡ್‌ ಹೆಲ್ತ್‌ ಪಬ್ಲಿಶಿಂಗ್‌ ಪ್ರಕಾರ, ಎದೆನೋವು ಕಾಣಿಸಿಕೊಳ್ಳುವುದು ಎದೆಯೆಲುಬಿನಿಂದ. ಎದೆಯುರಿಯ ಲಕ್ಷಣವೂ ಹೀಗೆಯೇ. ಆದರೆ ಒಂದು ವಿಚಾರವನ್ನು ಗಮನಿಸಬೇಕು. ಬಹಳಷ್ಟು ಹೃದಯಾಘಾತಗಳಲ್ಲಿ ಎದೆಯ ಮಧ್ಯಭಾಗದಲ್ಲಿ ತೀವ್ರ ನೋವು ಕಾಣಿಸಿಕೊಳ್ಳುತ್ತದೆ. ಇದು ಕೆಲವು ನಿಮಿಷಗಳವರೆಗೆ ಇರುತ್ತದೆ. ಅಥವಾ ಒಮ್ಮೆ ನೋವಿನಲ್ಲಿ ಹೆಚ್ಚು ಕಡಿಮೆ ಆಗುತ್ತಿರುತ್ತದೆ. ಅತಿಯಾದ ಒತ್ತಡದಂತಹ ಅನುಭವ, ಹಿಂಡಿದಂಥ ನೋವು, ಹಾಗೂ ಭಾರವಾದಂಥ ಅನುಭವ ಉಂಟಾಗುತ್ತದೆ.

ಹಾಗಾಗಿ ಇಂತಹ ನೋವು ಕಾಣಿಸಿದ ತಕ್ಷಣ ಎದೆಯುರಿ ಎಂದು ನಿರ್ಲಕ್ಷ್ಯ ಮಾಡದೆ ಕೂಡಲೇ ವೈದ್ಯರಿಗೆ ತೋರಿಸಿ. ನೋವು ಎದೆಯ ಮದ್ಯಭಾಗದಿಂದ ಭುಜ, ಕುತ್ತಿಗೆ, ಬೆನ್ನು ಮತ್ತಿತರ ಇತರ ಭಾಗಗಳಿಗೂ ಪಸರಿಸುತ್ತಿದ್ದರೆ, ಕೂಡಲೇ ವೈದ್ಯರ ನೆರವು ಪಡೆಯುವುದು ಉತ್ತಮ.

ಇದನ್ನೂ ಓದಿ: ಹೃದಯ ಆರೋಗ್ಯ ಚೆನ್ನಾಗಿರಬೇಕಾ? ಸಾಕಷ್ಟು ನಿದ್ರೆ ಮಾಡಿ!

೩. ತಲೆಸುತ್ತುವುದು, ಹೊಟ್ಟೆ ತೊಳಸಿದಂತಾಗುವುದು ಹಾಗೂ ವಾಂತಿಯಂತಹ ಲಕ್ಷಣಗಳೂ ಹೃದಯಾಘಾತದ ಸಂದರ್ಭ ಕಂಡುಬರುತ್ತದೆ. ಹೃದಯಾಘಾತವಾದಾಗ ರಕ್ತನಾಳಗಳಲ್ಲಿ ತಡೆ ಇರುವುದರಿಂದಾಗಿ ಅಗತ್ಯವಿದ್ದಷ್ಟು ರಕ್ತ ಹಾಗೂ ಆ ಮೂಲಕ ಆಮ್ಲಜನಕವನ್ನು ಸರಬರಾಜು ಮಾಡುವಲ್ಲಿ ರಕ್ತನಾಳ ಸೋಲುವುದರಿಂದ, ಜಠರದಲ್ಲಿನ ಪಿಎಚ್‌ ಮಟ್ಟವೂ ಕುಸಿಯುತ್ತದೆ. ಇದು ಹೊಟ್ಟೆ ತೊಳೆಸುವಿಕೆ ಹಾಗೂ ವಾಂತಿಯಂತಹ ತೊಂದರೆಗಳನ್ನು ಉಂಟುಮಾಡುತ್ತದೆ. ಆದರೆ ಕೆಲವೊಮ್ಮೆ ಇಂತಹ ತೊಂದರೆಗಳು ಎದೆಯುರಿಯ ಸಂದರ್ಭದಲ್ಲಿಯೂ ಕಂಡುಬರುತ್ತವೆ.

೪. ಈ ಎಲ್ಲ ಲಕ್ಷಣಗಳು ಎರಡರಲ್ಲೂ ಇದ್ದರೂ ಹೃದಯಾಘಾತವು ಸಾಮಾನ್ಯ ಎದೆಯುರಿಯಿಂದ ಬೇರೆಯೇ ಆಗಿ ನಿಲ್ಲುತ್ತದೆ. ಹೃದಯಾಘಾತದಲ್ಲಿ ಈ ಲಕ್ಷಣಗಳ ಜೊತೆಗೆ ಉಸಿರಾಟಕ್ಕೆ ಕಷ್ಟವಾಗಬಹುದು, ಅತಿಯಾದ ಒತ್ತಡ ಅಥವಾ ಟೆನ್ಶನ್‌ನಂತಹ ಮಾನಸಿಕ ವೈಪರೀತ್ಯಗಳೂ ಕಾಣಿಸಿಕೊಳ್ಳಬಹುದು.

೫. ಇದಲ್ಲದೆ ಬದಲಾದ ಜೀವನಕ್ರಮ, ಆಹಾರ ಅಭ್ಯಾಸಗಳು, ಧೂಮಪಾನ, ಮದ್ಯಪಾನ ಮತ್ತಿತರ ಅಭ್ಯಾಸಗಳು ಕೂಡಾ ಹೃದಯಾಘಾತಕ್ಕೆ ಕಾರಣವಾಗುತ್ತದೆ. ಕೊಲೆಸ್ಟೆರಾಲ್‌ ಹೆಚ್ಚಾಗಿರುವುದು, ಹೈಪರ್‌ ಟೆನ್ಶನ್‌, ತೂಕ ಹೆಚ್ಚಿರುವುದು, ಬೊಜ್ಜು, ಅತಿಯಾದ ಒತ್ತಡದ ಜೀವನಶೈಲಿ, ಕುಟುಂಬದಲ್ಲಿ ಇಂತಹ ಪ್ರಕರಣಗಳಿರುವುದು, ಹಾಗೂ ಇತರ ಕೆಲವು ಅನಾರೋಗ್ಯಕರ ಅಭ್ಯಾಸಗಳಿಂದಲೂ ಹೃದಯಾಘಾತದ ಸಂಭವ ಹೆಚ್ಚು.

ಇದನ್ನೂ ಓದಿ: ಹಸೆಮಣೆಯೇರಿದ ಹತ್ತೇ ಗಂಟೆಯಲ್ಲಿ ಮದುಮಗ ಹೃದಯಾಘಾತದಿಂದ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಲೈಫ್‌ಸ್ಟೈಲ್

Gut Health: ನಿಮ್ಮ ಕರುಳಿನ ಆರೋಗ್ಯಕ್ಕಾಗಿ ಬೇಸಿಗೆಯಲ್ಲಿ ಈ ಡ್ರಿಂಕ್ಸ್ ಸೇವಿಸಿ

Gut Health ಬೇಸಿಗೆಯ ತಾಪದ ಕಿರಿಕಿರಿ ಒಂದು ಕಡೆಯಾದರೆ ಹೊಟ್ಟೆಯ ಆರೋಗ್ಯದ ಸಮಸ್ಯೆ ಇನ್ನೊಂದು ಕಡೆ ಎಂದು ಪರಿತಪಿಸುತ್ತಿದ್ದೀರಾ…?ಬೇಸಿಗೆಯಲ್ಲಿ ಹೊಟ್ಟೆಯ ಸಮಸ್ಯೆ ಕಾಡುವುದು ಸಹಜ. ನಿಮ್ಮ ಕರುಳಿನ ಆರೋಗ್ಯ ಚೆನ್ನಾಗಿದ್ದರೆ ಹೊಟ್ಟೆಯ ಸಮಸ್ಯೆಯಿಂದ ಪಾರಾಗಬಹುದು. ಅದಕ್ಕೆ ಏನು ಮಾಡಬೇಕು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Gut Health
Koo

ಬೆಂಗಳೂರು: ಬೇಸಿಗೆಯಲ್ಲಿ ಹಲವು ಹೊಟ್ಟೆಯ ಸಮಸ್ಯೆಗಳು ಕಾಡುತ್ತದೆ. ಹೊಟ್ಟೆಯ ಉರಿ, ಹೊಟ್ಟೆ ತುಂಬಿರುವಂತಹ ಅನುಭವವಾಗುತ್ತದೆ. ಇದರಿಂದ ಊಟವನ್ನು ಸರಿಯಾಗಿ ಮಾಡಲು ಆಗುವುದಿಲ್ಲ. ನಿಮಗೆ ಇಷ್ಟವಾದ ಆಹಾರವನ್ನು (Food) ತಿನ್ನಲು ಹೊಟ್ಟೆ ಬಯಸುವುದಿಲ್ಲ. ಹಾಗಾಗಿ ಈ ಎಲ್ಲಾ ಸಮಸ್ಯೆಗಳನ್ನು ನಿವಾರಿಸಲು ನೀವು ನಿಮ್ಮ ಕರುಳಿನ ಆರೋಗ್ಯದ (Gut Health) ಬಗ್ಗೆ ಕಾಳಜಿವಹಿಸಬೇಕು.

ನಮ್ಮ ದೇಹದಲ್ಲಿ ಕರುಳು ಬಹಳ ಮುಖ್ಯ ಅಂಗಗಳಲ್ಲಿ ಒಂದು. ಇದು ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ದೇಹಕ್ಕೆ ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿಕೊಳ್ಳಲು ಮತ್ತು ದೇಹದಿಂದ ತ್ಯಾಜ್ಯ ಪದಾರ್ಥಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಹಾಗಾಗಿ ಕರುಳನ್ನು ಆರೋಗ್ಯವಾಗಿಟ್ಟುಕೊಳ್ಳುವುದು ಬಹಳ ಮುಖ್ಯ. ಹಾಗಾಗಿ ಬೇಸಿಗೆಯಲ್ಲಿ ಕರುಳಿನ ಆರೋಗ್ಯವನ್ನು ಉತ್ತಮವಾಗಿಡಲು ಈ ಪಾನೀಯಗಳನ್ನು ಸೇವಿಸಿ.

Gut Health

ಕೊಂಬುಚಾ

ಇದು ಪ್ರೋಬಯಾಟಿಕ್ ಗಳನ್ನು ಹೊಂದಿರುವಂತಹ ಹುದುಗಿಸಿದ ಚಹಾವಾಗಿದೆ. ಚೀನಾದ ಒಂದು ವಿಶೇಷವಾದ ಪಾನೀಯವಿದು. ಇದರಲ್ಲಿ ಉತ್ತಮ ಬ್ಯಾಕ್ಟೀರಿಯಾಗಳು ಹೆಚ್ಚಿನ ಪ್ರಮಾಣದಲ್ಲಿದೆ. ಇದು ಕರುಳಿನ ಆರೋಗ್ಯವನ್ನು ಉತ್ತೇಜಿಸುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು  ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಗೊಳಿಸುತ್ತದೆ. ಉರಿಯೂತವನ್ನು ಕಡಿಮೆ ಮಾಡುತ್ತದೆ.

Gut Health

ಕೆಫಿರ್

ಮೊಸರಿನಂತೆಯೆ ಇದು ಕೂಡ ಪ್ರೋಬಯಾಟಿಕ್ ಗಳನ್ನು ಹೊಂದಿರುವಂತಹ ಡೈರಿ ಉತ್ಪನ್ನವಾಗಿದೆ. ಇದು ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾಗಳ ಪ್ರಮಾಣವನ್ನು ಹೆಚ್ಚಿಸುತ್ತದೆ. ಇದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ ಮತ್ತು ಕರುಳು ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ ಮತ್ಯು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಹಣ್ಣುಗಳ ರಸ

ಇದನ್ನು ಕುಡಿಯುವುದರಿಂದ ದೇಹದಲ್ಲಿ ನೀರಿನ ಸಂಚಯನ ಹೆಚ್ಚಾಗುತ್ತದೆ. ಇದು ದೇಹಕ್ಕೆ ವಿಟಮಿನ್ ಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒದಗಿಸುತ್ತದೆ. ಇದು ಕರುಳಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ.

Gut Health

ಹಸಿರು ಸ್ಮೂಥಿಗಳು

ಇದನ್ನು ಹಸಿರು ಸೊಪ್ಪುಗಳಿಂದ ತಯಾರಿಸಲಾಗುತ್ತದೆ. ಪಾಲಕ್, ಕೇಲ್ ನಂತಹ ಸೊಪ್ಪುಗಳನ್ನು ಬಳಸಿ ಇದನ್ನು ತಯಾರಿಸಿ ಕುಡಿಯಿರಿ. ಇದರಲ್ಲಿ ಫೈಬರ್, ವಿಟಮಿನ್ ಗಳು ಮತ್ತು ಖನಿಜಗಳು ಸಮೃದ್ಧವಾಗಿದೆ. ಇದು ಕರುಳಿನ ಆರೋಗ್ಯ ಮತ್ತು ಜೀರ್ಣಕ್ರಿಯೆಗೆ ಒಳ್ಳೆಯದು. ಇದು ದೇಹದ ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ.

ಎಳನೀರು

ಇದು ದೇಹವನ್ನು ನೈಸರ್ಗಿಕವಾಗಿ ಹೈಡ್ರೀಕರಿಸುತ್ತದೆ. ಇದರಲ್ಲಿ ಪೊಟ್ಯಾಸಿಯಂನಂತಹ ಎಲೆಕ್ಟ್ರೋಲೈಟ್ ಗಳನ್ನು ಹೊಂದಿರುತ್ತದೆ. ಇದು ದೇಹದಲ್ಲಿ ಜಲಸಂಚಯನ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಕರುಳಿನ ಆರೋಗ್ಯವನ್ನು ಉತ್ತಮವಾಗಿಡುತ್ತದೆ. ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ.

ಗಿಡಮೂಲಿಕೆ ಚಹಾಗಳು

ಪುದೀನಾ, ಶುಂಠಿ ಅಥವಾ ಕ್ಯಾಮೊಮೈಲ್ ನಂತಹ ಗಿಡಮೂಲಿಕೆ ಚಹಾಗಳು ಜೀರ್ಣಾಂಗ ವ್ಯವಸ್ಥೆಯನ್ನು ಶಾಂತವಾಗಿಡುತ್ತದೆ. ಇದರಿಂದ ಹೊಟ್ಟೆಯುಬ್ಬರ, ಸುಡುವ ವೇಧನೆ ಸಮಸ್ಯೆ ಕಾಡುವುದಿಲ್ಲ. ಇದು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಯನ್ನು ನಿವಾರಿಸುತ್ತದೆ.

Gut Health

ಅಲೋವೆರಾ ರಸ

ಇದು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಇದು ಕರುಳಿನ ಉರಿಯೂತವನ್ನು ಕಡಿಮೆ ಮಾಡಲು ಮತ್ತು ಜೀರ್ಣಕ್ರಿಯೆಯನ್ನು ಉತ್ತಮವಾಗಿಡಲು ಸಹಾಯ ಮಾಡುತ್ತದೆ. ಹಾಗಾಗಿ ಶುದ್ಧ ಅಲೋವೆರಾ ರಸಗಳನ್ನು ಸೇವಿಸಿ. ಇದು ಹೊಟ್ಟೆಯ ಉರಿ ಮತ್ತು ಕಿರಿಕಿರಿಯನ್ನು ನಿವಾರಿಸುತ್ತದೆ.

ಆ್ಯಪಲ್ ಸೈಡರ್ ವಿನೆಗರ್

ಇದು ಅಸಿಟಿಕ್ ಆಮ್ಲವನ್ನು ಹೊಂದಿದ್ದು, ಜೀರ್ಣಕ್ರಿಯೆಗೆ ಒಳ್ಳೆಯದು. ಇದು ಕರುಳಿನಲ್ಲಿ ಪಿಹೆಚ್ ಮಟ್ಟವನ್ನು ಸಮತೋಲನಗೊಳಿಸುತ್ತದೆ. ಮತ್ತು ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾಗಳ ಬೆಳವಣಿಗೆಯನ್ನು ಹೆಚ್ಚಿಸುತ್ತದೆ. ಇದರಿಂದ ಕರುಳಿನ ಆರೋಗ್ಯ ಉತ್ತಮವಾಗಿರುತ್ತದೆ.

ಇದನ್ನೂ ಓದಿ: Drunken Groom: ಕುಡಿದ ಮತ್ತಿನಲ್ಲಿಯೇ ಮಂಟಪಕ್ಕೆಬಂದ ವರ; ಒದ್ದೋಡಿಸಿದ ವಧು!

ಹುದುಗಿಸಿದ ತರಕಾರಿಗಳು

ಸೌರ್ ಕ್ರಾಟ್, ಕಿಮ್ಚಿ ಅಥವಾ ಉಪ್ಪಿನಕಾಯಿಯಂತಹ ಹುದುಗಿಸಿದ ತರಕಾರಿಗಳು ಪ್ರೋಬಯಾಟಿಕ್ ಗಳು ಮತ್ತು ಫೈಬರ್ ಅನ್ನು ಹೊಂದಿದ್ದು, ಇದು ಕರುಳಿನ ಆರೋಗ್ಯ ಮತ್ತು ಜೀರ್ಣಕ್ರಿಯೆಗೆ ಒಳ್ಳೆಯದು. ಇದು ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ.

Continue Reading

ಲೈಫ್‌ಸ್ಟೈಲ್

Kids Sleep: ಪೋಷಕರೇ ಎಚ್ಚರ; ನಿಮ್ಮ ಮಕ್ಕಳ ನಿದ್ರೆ ಕಸಿದುಕೊಳ್ಳುವ ಈ ವಸ್ತುಗಳನ್ನು ಕೊಡಲೇಬೇಡಿ

Kids Sleep ಹಾಸಿಗೆಯ ಮೇಲೆ ಬಿದ್ದುಕೊಂಡಾಗ ಸುಖವಾದ ನಿದ್ರೆ ಆವರಿಸಿದರೆ ಅವರಷ್ಟೂ ಪುಣ್ಯವಂತರು ಇಲ್ಲ ಎನ್ನಬಹುದೇನೋ. ದೊಡ್ಡವರು ಯಾವುದೋ ಒತ್ತಡದ ಕಾರಣದಿಂದ ನಿದ್ರೆ ಮಾಡದೇ ಇರಬಹುದು ಆದರೆ ಈಗಿನ ಮಕ್ಕಳಿಗೆ ಏನಾಗಿದೆ….? ಅವರು ಕೂಡ ಈಗ ನಿದ್ರೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.

VISTARANEWS.COM


on

Kids Sleep
Koo

ಬೆಂಗಳೂರು: ನಿದ್ರೆ ಯಾರಿಗೆ ಬೇಡ ಹೇಳಿ? ಈಗ ಚಿಕ್ಕಮಕ್ಕಳು ಕೂಡ ರಾತ್ರಿ ಸರಿಯಾಗಿ ನಿದ್ದೆ ಇಲ್ಲದೇ ಯಾವುದೋ ಒತ್ತಡದಲ್ಲಿ ಬಳಲುತ್ತಿರುವವರ ಹಾಗೇ ಇರುತ್ತಾರೆ. ಮಕ್ಕಳ ಬೆಳವಣಿಗೆಗೆ ಆಹಾರದ ಜೊತೆಗೆ ನಿದ್ರೆಯೂ ಬಹಳ ಮುಖ್ಯವಾದದ್ದು. ನಿದ್ರೆಯಿಂದ ದೇಹಕ್ಕೆ ವಿಶ್ರಾಂತಿ ಸಿಗುತ್ತದೆ ಮತ್ತು ಮನಸ್ಸನ್ನು ಶಾಂತವಾಗಿರುತ್ತದೆ. ಹಾಗಾಗಿ ನಿದ್ರೆ ಎನ್ನವುದು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಉತ್ತಮ ನಿದ್ರೆ ಮಕ್ಕಳ ದೇಹದ ಅಂಗಾಂಶಗಳನ್ನು ಸರಿಪಡಿಸಲು ಸಹಾಯ ಮಾಡುತ್ತದೆ. ಇದರಿಂದ ಆರೋಗ್ಯಕರವಾದ ಹಾರ್ಮೋನ್ ಬಿಡುಗಡೆಯಾಗುತ್ತದೆ. ಹಾಗಾಗಿ ಇದು ಮಕ್ಕಳ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಆದರೆ ಈ ಕೆಲವು ಅಂಶಗಳು ನಿಮ್ಮ ಮಕ್ಕಳ ನಿದ್ರೆಯನ್ನು (Kids Sleep) ಕೆಡಿಸುತ್ತದೆಯಂತೆ. ಅವು ಯಾವುವು ಎಂಬುದರ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.

  • ಮಕ್ಕಳು ಹೆಚ್ಚು ಹೊತ್ತು ಟಿವಿ ನೋಡುವುದು, ಮೊಬೈಲ್ ಬಳಸುವುದು. ಇವು ನಿದ್ರೆಯ ಮಟ್ಟವನ್ನು ಕಡಿಮೆ ಮಾಡುತ್ತದೆಯಂತೆ. ಯಾಕೆಂದರೆ ಟಿವಿ, ಮೊಬೈಲ್ ನಿಂದ ಹೊರಬರುವ ನೀಲಿ ಬೆಳಕು ದೇಹದಲ್ಲಿ ಮೆಲಟೋನಿನ್ ಹಾರ್ಮೋನ್ ನ ಉತ್ಪಾದನೆಯನ್ನು ಕಡಿಮೆಮಾಡುತ್ತದೆ. ಇದರಿಂದ ಸರಿಯಾಗಿ ನಿದ್ರೆ ಬರುವುದಿಲ್ಲ.
  • ಹಾಗೇ ಪ್ರತಿದಿನ ಮಕ್ಕಳನ್ನು ಒಂದೇ ಸಮಯದಲ್ಲಿ ಮಲಗುವಂತೆ ರೂಢಿ ಮಾಡಬೇಕು. ಇದರಿಂದ ಅವರ ದೇಹ ಆ ಸಮಯಕ್ಕೆ ಸರಿಯಾಗಿ ನಿದ್ರೆಗೆ ಜಾರುವಂತೆ ಮಾಡುತ್ತದೆ. ಹಾಗಾಗಿ ಪೋಷಕರು ಮಕ್ಕಳ ನಿದ್ರೆಯ ದಿನಚರಿಯನ್ನು ಸರಿಯಾಗಿ ರೂಢಿ ಮಾಡಿಸಿ.
  • ಕೆಲವು ಒತ್ತಡದ ಘಟನೆಗಳು ಮಕ್ಕಳ ನಿದ್ರೆಗೆ ಭಂಗವನ್ನುಂಟುಮಾಡುತ್ತದೆ. ಶಾಲೆ, ಸ್ನೇಹಿತರು ಮತ್ತು ಕುಟುಂಬದವರ ಸಮಸ್ಯೆಗಳು ಮಕ್ಕಳಲ್ಲಿ ಆತಂಕವನ್ನುಂಟುಮಾಡುತ್ತದೆ. ಇದರಿಂದ ನಿದ್ರೆಯಲ್ಲಿ ಮಕ್ಕಳು ಬೆಚ್ಚಿ ಬೀಳುತ್ತಾರೆ. ಇದು ಅವರ ನಿದ್ರೆಯನ್ನು ಕೆಡಿಸುತ್ತದೆ.
  • ಮಕ್ಕಳು ಸುಖವಾಗಿ ನಿದ್ರೆ ಮಾಡಲು ಅವರು ಮಲಗುವ ವಾತಾವರಣ ಅನುಕೂಲಕರವಾಗಿರಬೇಕು. ಅವರು ಮಲಗುವಂತಹ ಹಾಸಿಗೆ , ಅತಿಯಾದ ಶಬ್ದ, ರೂಂನ ತಾಪಮಾನ ಮಕ್ಕಳ ನಿದ್ರೆಗೆ ಭಂಗ ತರುತ್ತದೆಯಂತೆ. ಹಾಗಾಗಿ ಮಕ್ಕಳು ಮಲಗುವ ಕೋಣೆ ಆರಾಮದಾಯವಾಗಿರುವಂತೆ ನೋಡಿಕೊಳ್ಳಿ.
  • ಹಾಗೇ ಮಕ್ಕಳು ಮಲಗುವಾಗ ಅತಿಯಾಗಿ ಸಕ್ಕರೆಯುಕ್ತ ತಿಂಡಿಗಳನ್ನು ಅಥವಾ ಪಾನೀಯಗಳನ್ನು ಸೇವಿಸುವುದು ನಿದ್ರೆಗೆ ಅಡ್ಡಿಯನ್ನುಂಟುಮಾಡುತ್ತದೆಯಂತೆ. ಹಾಗಾಗಿ ಇವುಗಳನ್ನು ಕಡಿಮೆ ಮಾಡಿ. ಮಕ್ಕಳು ಮಲಗುವ ಮುನ್ನ ಇವುಗಳನ್ನು ನೀಡುವುದು ತಪ್ಪಿಸಿ.
  • ಮಕ್ಕಳಲ್ಲಿ ಕಂಡುಬರುವಂತಹ ಅಲರ್ಜಿ, ಉಸಿರಾಟದ ಸಮಸ್ಯೆಗಳು, ಮೈಕೈ ನೋವು ಮುಂತಾದ ದೈಹಿಕ ಅಸ್ವಸ್ಥಗಳಿಂದ ಅವರಿಗೆ ನಿದ್ರೆ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಮಕ್ಕಳ ದೈಹಿಕ ಸಮಸ್ಯೆಗೆ ಸೂಕ್ತವಾದ ಚಿಕಿತ್ಸೆ ನೀಡಿ.
  • ಮಕ್ಕಳಿಗೆ ಅತಿಯಾಗಿ ಓದಲು ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತೆ ಒತ್ತಾಯಿಸುವುದು ಮಕ್ಕಳಲ್ಲಿ ಒತ್ತಡವನ್ನು ಉಂಟುಮಾಡುತ್ತದೆ. ಇದರಿಂದ ಅವರಿಗೆ ನಿದ್ರೆ ಬರುವುದಿಲ್ಲ. ಹಾಗಾಗಿ ಅವರಿಗೆ ಇಷ್ಟವಾದಂತಹ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸಹಾಯ ಮಾಡಿ.
  • ನಿದ್ರೆ ಮಕ್ಕಳ ಆರೋಗ್ಯಕ್ಕೆ ಉತ್ತಮ ನಿಜ. ಅಂದಮಾತ್ರಕ್ಕೆ ಅವರಿಗೆ ಹಗಲಿನಲ್ಲಿ ನಿದ್ರೆ ಮಾಡಿಸಬೇಡಿ. ಇದರಿಂದ ಅವರಿಗೆ ರಾತ್ರಿ ನಿದ್ರೆ ಬರುವುದಿಲ್ಲ.
  • ಸ್ಲೀಪ್ ಅಪ್ನಿಯ, ರೆಸ್ಟ್ ಲೆಸ್ ಲೆಗ್ಸ್ ಸಿಂಡ್ರೋಮ್, ನೈಟ್ ಟೆರರ್ಸ್  ಅಥವಾ ಸ್ಲೀಪ್ ವಾಕಿಂಗ್ ನಂತಹ ನಿದ್ರೆಗೆ ಸಂಬಂಧಪಟ್ಟ ಕಾಯಿಲೆಗಳು ನಿದ್ರೆಗೆ ಭಂಗವನ್ನುಂಟುಮಾಡುತ್ತವೆ. ಹಾಗಾಗಿ ಇವುಗಳಿಗೆ ಚಿಕಿತ್ಸೆ ನೀಡಲು ಮಕ್ಕಳ ತಜ್ಞರನ್ನು ಭೇಟಿ ಮಾಡಿ.
  • ಮಕ್ಕಳು ಹೆಚ್ಚಾಗಿ ತಮ್ಮ ಹೆತ್ತವರ ನಿದ್ರಾಶೈಲಿಯನ್ನು ಅನುಸರಿಸುತ್ತಾರೆ. ಪೋಷಕರು ಆರೋಗ್ಯಕರ ನಿದ್ರೆಯ ಅಭ್ಯಾಸವನ್ನು ರೂಢಿಸಿಕೊಂಡರೆ ಮಕ್ಕಳು ಅದನ್ನೇ ಅನುಸರಿಸುತ್ತಾರೆ.

ಇದನ್ನೂ ಓದಿ: Viral Video: ಶಾಲೆಯಲ್ಲಿ ಪಾಠ ಮಾಡುವ ಬದಲು ಫೇಶಿಯಲ್ ಮಾಡಿಕೊಂಡು ಸಿಕ್ಕಿಬಿದ್ದ ಪ್ರಿನ್ಸಿಪಾಲ್!

ಮಕ್ಕಳು ಸರಿಯಾಗಲಿಲ್ಲ ನಿದ್ರೆ ಮಾಡಲಿಲ್ಲ ಎಂದರೆ ಯಾವ ರೀತಿ ಆರೈಕೆ ಮಾಡಬೇಕು ಎಂಬುದರ ಬಗ್ಗೆ ಪೋಷಕರು ಸರಿಯಾಗಿ ತಿಳಿದುಕೊಂಡಿರಬೇಕು. ಇದರಿಂದ ಮಕ್ಕಳ ದೈಹಿಕ, ಮಾನಸಿಕ ಆರೊಗ್ಯವನ್ನು ಸುಧಾರಿಸಬಹುದು.

Continue Reading

ಲೈಫ್‌ಸ್ಟೈಲ್

Diabetic Control: ಕಾಡುವ ಮಧುಮೇಹ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ತಂತ್ರ

Diabetic Controle ಯಾವುದೇ ಸಭೆ ಸಮಾರಂಭಗಳಿಗೆ ಹೋದಾಗ ಪಾಯಸ, ಹೋಳಿಗೆ, ಲಾಡು ನೀಡುವಾಗ ಎಲ್ಲರೂ ಬಾಯಿ ಚಪ್ಪರಿಸಿಕೊಂಡು ತಿಂದರೆ ಮಧುಮೇಹಿಗಳು ಮಾತ್ರ ಬಾಯಿ ಬಿಟ್ಟುಕೊಂಡು ನೋಡುತ್ತಾರೆ. ಈ ಸಮಸ್ಯೆಯನ್ನು ನಿವಾರಿಸಿಕೊಳ್ಳಲು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸರಿಯಾದ ವಿಧಾನದಲ್ಲಿ ನಿಯಂತ್ರಿಸಿಕೊಳ್ಳಿ.

VISTARANEWS.COM


on

Diabetic Controle
Koo

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಧುಮೇಹ ಎಂದರೆ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದು. ಹಾಗಾಗಿ ಮಧುಮೇಹ ಸಮಸ್ಯೆ ಇದೆ ಎಂದಾಗ ಹಲವರಿಗೆ ಬೇಸರವಾಗುತ್ತದೆ. ಯಾಕೆಂದರೆ ಇದರಿಂದ ಸಿಹಿ ಪದಾರ್ಥಗಳನ್ನು ತಿನ್ನಲು ಆಗುವುದಿಲ್ಲ. ಯಾವುದೇ ಸಭೆ ಸಮಾರಂಭಗಳಿಗೆ ಹೋದಾಗ ಬಡಿಸುವ ಪಾಯಸ, ಹೋಳಿಗೆ ತಿಂದು ಎಲ್ಲರೂ ಬಾಯಿ ಚಪ್ಪರಿಸಿಕೊಂಡರೆ ಮಧುಮೇಹಿಗಳು ಮಾತ್ರ ಬಾಯಿ ಬಿಟ್ಟುಕೊಂಡು ನೋಡುತ್ತಾರೆ. ಈ ಸಮಸ್ಯೆಗಳಿಂದ ಪಾರಾಗಲು ಸುಲಭ ತಂತ್ರವಿದೆ. ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Diabetic Controle) ನಿಯಂತ್ರಿಸಿಕೊಳ್ಳಬೇಕು. ಅದಕ್ಕಾಗಿ ಈ ಸಲಹೆಗಳನ್ನು ಪಾಲಿಸಿ.

  • ಆರೋಗ್ಯಕರ ಕೊಬ್ಬಿನ ಆಹಾರ ಸೇವನೆ: ನೀವು ಬೆಳಗ್ಗಿನ ಉಪಹಾರದಲ್ಲಿ ಬಾದಾಮಿ ಮತ್ತು ವಾಲ್ ನಟ್ಸ್ ನಂತಹ ನೆನೆಸಿದ ಬೀಜಗಳನ್ನು ಸೇವಿಸಿ. ಇವುಗಳಲ್ಲಿ ಕೊಬ್ಬಿನ ಪ್ರಮಾಣ ಹೆಚ್ಚಾಗಿದೆ. ಇದರಿಂದ ಇನ್ಸುಲಿನ್ ಮಟ್ಟ ಸುಧಾರಿಸುತ್ತದೆ.
  1. ಬೆಳಗಿನ ಉಪಹಾರದಲ್ಲಿ ಪ್ರೋಟೀನ್ ಸೇವನೆ: ನಿಮ್ಮ ಬೆಳಗಿನ ಉಪಹಾರದಲ್ಲಿ ಪ್ರೋಟೀನ್ ಸಮೃದ್ಧವಾಗಿರುವ ಆಹಾರ ಸೇವಿಸಿ. ಪ್ರೋಟೀನ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಮತ್ತು ನೀವು ದಿನವಿಡೀ ಉತ್ಸಾಹದಿಂದ ಇರಬಹುದು.
  2. ಆ್ಯಪಲ್ ಸೈಡರ್ ವಿನೆಗರ್ ಸೇವನೆ : ಇದರಲ್ಲಿ ಅಸಿಟಿನ್ ಆಮ್ಲವಿದ್ದು, ಇದು ಇನ್ಸುಲಿನ್ ಸೂಕ್ಷ್ಮತೆ ಹೆಚ್ಚಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಹಾಗಾಗಿ ಊಟಕ್ಕೆ ಅರ್ಧ ಗಂಟೆಯ ಮೊದಲು ಆ್ಯಪಲ್ ಸೈಡರ್ ವಿನೆಗರ್ ಅನ್ನು ನೀರಿನಲ್ಲಿ ಬೆರೆಸಿ ಕುಡಿಯಿರಿ.
  3. ಮೆಗ್ನೀಸಿಯಂ ಭರಿತ ಆಹಾರ ಸೇವನೆ: ಆಹಾರದಲ್ಲಿ ಬಾಳೆಹಣ್ಣು, ಬಾದಾಮಿ, ಕೋಕೋ ಮತ್ತು ಹಸಿರು ಸೊಪ್ಪುಗಳನ್ನು ಸೇರಿಸಬೇಕು. ಇವುಗಳಲ್ಲಿ ಮೆಗ್ನೀಸಿಯಂ ಸಮೃದ್ಧವಾಗಿರುತ್ತದೆ. ಇದು ಜೀವಕೋಶಗಳಿಗೆ ಗ್ಲೂಕೋಸ್ ಅನ್ನು ಹೀರಿಕೊಳ್ಳುವಂತೆ ಉತ್ತೇಜಿಸುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ.
  4. ಊಟದ ಬಳಿಕ ವಾಕಿಂಗ್ : ಊಟವಾದ ತಕ್ಷಣ ನಿದ್ರೆ ಮಾಡಬಾರು. ಬದಲಾಗಿ ಊಟವಾದ ನಂತರ 10-15 ನಿಮಿಷ ಕಾಲ ಲಘು ವಾಕಿಂಗ್ ಮಾಡಬೇಕು. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುತ್ತದೆ.
  5. ಸರಿಯಾದ ಪ್ರಮಾಣದಲ್ಲಿ ಊಟದ ಸೇವನೆ : ನೀವು ಮಧ್ಯಾಹ್ನದ ವೇಳೆ 12ರಿಂದ 2 ಗಂಟೆಯೊಳಗೆ ನಿಮ್ಮ ಹೊಟ್ಟೆ ತುಂಬುವಷ್ಟು ಊಟ ಮಾಡಿ. ಯಾಕೆಂದರೆ ಈ ಸಮಯದಲ್ಲಿ ಜೀರ್ಣಕ್ರಿಯೆ ವೇಗವಾಗಿರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಉತ್ತೇಜಿಸುತ್ತದೆ.
  6. ದಾಲ್ಚಿನ್ನಿ- ಗ್ರೀನ್ ಟೀ ಸೇವನೆ : ಸಂಜೆಯ ವೇಳೆ ಗ್ರೀನ್ ಟೀಗೆ ದಾಲ್ಚಿನ್ನಿಯನ್ನು ಬೆರೆಸಿ ಕುದಿಸಿ ಕುಡಿಯಿರಿ. ಈ ಮಿಶ್ರಣವು ಜೀರ್ಣಕ್ರೀಯೆ ಮತ್ತು ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ.
  7. ರಾಗಿ ಸೇವನೆ : ನಿಮ್ಮ ಆಹಾರದಲ್ಲಿ ರಾಗಿ ಸೇರಿಸಿ. ಇದರಲ್ಲಿ ಫೈಬರ್ ಸಮೃದ್ಧವಾಗಿದೆ. ಇದು ಗ್ಲೂಕೋಸ್ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ.
  8. ಸರಿಯಾಗಿ ತಿನ್ನುವ ಅಭ್ಯಾಸ ಮಾಡಿಕೊಳ್ಳಿ : ನೀವು ಅತಿಯಾಗಿ ಆಹಾರ ಸೇವಿಸುವುದನ್ನು ತಪ್ಪಿಸಿ. ಅದಕ್ಕಾಗಿ ನೀವು ಹೊಟ್ಟೆ 80% ತುಂಬುವವರೆಗೆ ತಿನ್ನಿ. ಇದು ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ. ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಬೆಂಬಲಿಸುತ್ತದೆ.

ಇದನ್ನೂ ಓದಿ:Nestle Company: ಮಕ್ಕಳ ಜೀವದ ಜತೆ ನೆಸ್ಲೆ ಕಂಪನಿ ಚೆಲ್ಲಾಟ? ಸೆರೆಲಾಕ್‌ ಕುಡಿಸೋ ಮುನ್ನ ಎಚ್ಚರ!

Continue Reading

ಲೈಫ್‌ಸ್ಟೈಲ್

Cardiac Arrest: ಮಹಿಳೆಯರೇ ಹುಷಾರು; ನೀವು ಮಾಡುವ ಈ ತಪ್ಪುಗಳೇ ಹೃದಯಾಘಾತಕ್ಕೆಕಾರಣ!

Cardiac Arrest ಹೃದಯದ ಸಮಸ್ಯೆ ಇಂದು ಸಾಕಷ್ಟು ಮಹಿಳೆಯರನ್ನು ಕಾಡುತ್ತಿದೆ. ಮಹಿಳೆಯರು ಗಂಡ, ಮಕ್ಕಳು, ಕೆಲಸ ಎಂದುಕೊಂಡು ತಮ್ಮ ಆರೋಗ್ಯದ ಬಗ್ಗೆ ಸರಿಯಾಗಿ ಕಾಳಜಿ ವಹಿಸುವುದಿಲ್ಲ. ಮಹಿಳೆಯರನ್ನು ಕಾಡುವ ಈ ಹೃದಯದ ಕಾಯಿಲೆಗೆ ಮುಖ್ಯ ಕಾರಣಗಳು ಇಲ್ಲಿವೆ.

VISTARANEWS.COM


on

Cardiac Arrest
Koo

ಬೆಂಗಳೂರು: ಹೃದಯ ಸ್ತಂಭನ (Cardiac Arrest) ಈ ಹೆಸರು ಕೇಳುತ್ತಲೇ ಹೃದಯವೇ ಬಾಯಿಗೆ ಬಂದ ಹಾಗೇ ಆಗುತ್ತದೆ. ಅಷ್ಟೊಂದು ನಡುಕ ಹುಟ್ಟಿಸುತ್ತದೆ. ಕುಳಿತಲ್ಲಿಯೇ ಹೃದಯ ಸ್ತಂಭನದಿಂದ ಕುಸಿದು ಬಿದ್ದರು, ರಾತ್ರಿ ಮಲಗಿದವರು ಏಳಲೇ ಇಲ್ಲ ಇಂತಹ ಸುದ್ದಿಗಳನ್ನು ದಿನಂಪ್ರತಿ ಕೇಳುತ್ತೇವೆ. ಸಣ್ಣಮಕ್ಕಳು ಕೂಡ ಈಗ ಈ ಕಾಯಿಲೆಗೆ ತುತ್ತಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಸಾಕಷ್ಟು  ಮಹಿಳೆಯರು ಈ ಕಾಯಿಲೆಯಿಂದ ಬಳಲುತ್ತಿದ್ದಾರಂತೆ. ಇನ್ನು ಒತ್ತಡದ ಜೀವನ ಶೈಲಿ ಹಾಗೂ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ ಇರುವುದು ಈ ಹೃದಯಾಸ್ತಂಭನಕ್ಕೆ ಕಾರಣ ಎನ್ನುತ್ತದೆ ಹೊಸ ಸಂಶೋಧನೆ. ಪ್ರಮುಖವಾಗಿ ಮಹಿಳೆಯರ ಜೀವಕ್ಕೆ ಕುತ್ತನ್ನುಂಟು ಮಾಡುವ ಈ ಹೃದಯದ ಕಾಯಿಲೆಗೇ ಮುಖ್ಯ ಕಾರಣಗಳೇನು ಹಾಗೂ ಅದನ್ನು ಹೇಗೆ ತಡೆಗಟ್ಟಬಹುದು ಎಂಬ ವಿವರ ಇಲ್ಲಿದೆ.

  • ಹೃದಯದ ರಕ್ತವನ್ನು ಪೂರೈಸುವ ರಕ್ತನಾಳಗಳಲ್ಲಿ ಪ್ಲೇಕ್ ರಚನೆಯಾದಾಗ ರಕ್ತನಾಳಗಳಲ್ಲಿ ತಡೆ ಉಂಟಾಗುತ್ತದೆ. ಇದರಿಂದ ಹೃದಯದ ಸ್ನಾಯುಗಳಿಗೆ ರಕ್ತದ ಹರಿಯುವಿಕೆ ಕಡಿಮೆಯಾಗುತ್ತದೆ. ಇದರಿಂದ ಹೃದಯ ಸ್ತಂಭನ ಸಂಭವಿಸುತ್ತದೆ.
  • ಅಧಿಕ ರಕ್ತದೊತ್ತಡದಿಂದ ಈ ಸಮಸ್ಯೆ ಕಾಡುತ್ತದೆ. ಅಧಿಕ ರಕ್ತದೊತ್ತಡವು ಹೃದಯ ಮತ್ತು ರಕ್ತನಾಳಗಳ ಮೇಲೆ ಹೆಚ್ಚುವರಿ ಒತ್ತಡವನ್ನು ಉಂಟುಮಾಡುತ್ತದೆ. ಇದರಿಂದ ಹೃದ್ರೋಗ, ಪಾರ್ಶ್ವವಾಯು ಮತ್ತು ಹೃದಯ ಸ್ತಂಭನ ಸಮಸ್ಯೆ ಕಾಡುತ್ತದೆ.
  • ಮಧುಮೇಹದಿಂದ ಹೃದಯದ ರಕ್ತನಾಳಗಳು ಹಾನಿಗೊಳಗಾಗುತ್ತದೆ. ಇದರಿಂದ ಹೃದಯ ಸ್ತಂಭನದ ಅಪಾಯ ಹೆಚ್ಚಾಗುತ್ತದೆ. ಹಾಗಾಗಿ ಮಧುಮೇಹವನ್ನು ನಿಯಂತ್ರಿಬೇಕು
  • ಬೊಜ್ಜು, ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಹೃದಯ ಸ್ತಂಭನಕ್ಕೆ ಕಾರಣವಾಗುತ್ತದೆ. ಹಾಗಾಗಿ ತರಕಾರಿ, ಹಣ್ಣುಗಳು, ತರಕಾರಿ ಮತ್ತು ಧಾನ್ಯಗಳನ್ನು ಹಾಗೂ ಪ್ರೋಟೀನ್ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಮತ್ತು ಆರೋಗ್ಯಕರವಾದ ತೂಕವನ್ನು ಹೊಂದಿರಬೇಕು.
  • ಧೂಮಪಾನವು ರಕ್ತನಾಳಗಳನ್ನು ಹಾನಿಗೊಳಿಸುತ್ತದೆ. ಇದು ರಕ್ತದಲ್ಲಿನ ಆಮ್ಲಜನಕದ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಿಂದ ಹೃದಯ ಸ್ತಂಭನ ಉಂಟಾಗುತ್ತದೆ. ಹಾಗಾಗಿ ಧೂಮಪಾನವನ್ನು ತ್ಯಜಿಸಿದಷ್ಟು ಒಳ್ಳೆಯದು.
  • ದೇಹದಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಹೃದಯ ಅಪಧಮನಿಗಳಲ್ಲಿ ಫ್ಲೇಕ್​ ಸಂಗ್ರಹವಾಗಲು ಕಾರಣವಾಗುತ್ತದೆ. ಇದು ಹೃದಯ ಸ್ತಂಭನದ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಆಗಾಗ ಕೊಲೆಸ್ಟ್ರಾಲ್ ಮಟ್ಟವನ್ನು ಕಾಲಕಾಲಕ್ಕೆ ಪರೀಕ್ಷಿಸಬೇಕು.
  • ದೈಹಿಕ ಚಟುವಟಿಕೆಯ ಕೊರತೆಯು ಹೃದಯ ಸ್ನಾಯುವನ್ನು ದುರ್ಬಲಗೊಳಿಸುತ್ತದೆ. ನೀವು ನಿಯಮಿತವಾಗಿ ದೈಹಿಕ ಚಟುವಟಿಕೆಯಲ್ಲಿ ತೊಡಗದಿದ್ದರೆ ಬೊಜ್ಜು, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಅಪಾಯ ಹೆಚ್ಚಾಗುತ್ತದೆ. ಹಾಗಾಗಿ ಪ್ರತಿದಿನ ವ್ಯಾಯಾಮಗಳನ್ನು ಅಭ್ಯಾಸ ಮಾಡಬೇಕು. ಏರೋಬಿಕ್ ವ್ಯಾಯಾಮ ಅತ್ಯುತ್ತಮ.
  • ದೀರ್ಘಕಾಲದವರೆಗೆ ಒತ್ತಡ, ಖಿನ್ನತೆ ಮತ್ತು ಆತಂಕವನ್ನು ಎದುರಿಸುತ್ತಿದ್ದರೆ ರಕ್ತದೊತ್ತಡ ಹೆಚ್ಚಾಗುತ್ತದೆ. ಇದರಿಂದ ಹೃದಯ ಸ್ತಂಭನ ಸಂಭವಿಸುತ್ತದೆ. ಆಗಾಗಿ ಒತ್ತಡವನ್ನು ನಿವಾರಿಸುವಂತಹ ತಂತ್ರಗಳನ್ನು ಅಳವಡಿಸಿಕೊಳ್ಳಿ. ಅಗತ್ಯವಿದ್ದರೆ ಮಾನೋವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಿರಿ.

ಇದನ್ನೂ ಓದಿ: Pesticide: ಎವರೆಸ್ಟ್‌ ಫಿಶ್‌ ಕರಿ ಮಸಾಲೆಯಲ್ಲಿ ಕೀಟನಾಶಕ; ಬ್ಯಾನ್‌ ಮಾಡಿದ ಸಿಂಗಾಪುರ

  • ಋತುಬಂಧ, ಗರ್ಭಾಧಾರಣೆ, ಮತ್ತು ಹಾರ್ಮೋನ್ ಚಿಕಿತ್ಸೆಗಳಿಗೆ ಸಂಬಂಧಿಸಿದ ಹಾರ್ಮೋನ್ ಬದಲಾವಣೆಗಳು ರಕ್ತನಾಳದ ಕಾರ್ಯ ಮತ್ತು ಕೊಲೆಸ್ಟ್ರಾಲ್ ಮಟ್ಟಗಳ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಹೃದಯ ಸ್ತಂಭನ ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಹಾರ್ಮೋನ್ ಚಿಕಿತ್ಸೆ ನೀಡುವ ಮುನ್ನ ಆರೋಗ್ಯ ತಜ್ಞರ ಸಲಹೆ ಪಡೆಯಿರಿ.
Continue Reading
Advertisement
Kalki 2898 AD
ಸಿನಿಮಾ1 min ago

Kalki 2898 AD: ನಾಳೆ ಮಹತ್ವದ  ಅಪ್‌ಡೇಟ್‌ ನೀಡಲಿದೆ ಪ್ರಭಾಸ್‌ ಅಭಿನಯದ ʼಕಲ್ಕಿ 2898 ಎಡಿʼಚಿತ್ರತಂಡ; ಹೊಸ ರಿಲೀಸ್‌ ದಿನಾಂಕ ಘೋಷಣೆ?

Lok Sabha Election
ದೇಶ10 mins ago

Lok Sabha Election: ನಿನ್ನೆ ಈ ಗ್ರಾಮದ ಒಬ್ಬರೂ ಮತ ಹಾಕಲಿಲ್ಲ; ಇದ್ದಿದ್ದು ಯಾರ ಭಯ?

Ashutosh Sharma
ಕ್ರೀಡೆ11 mins ago

Ashutosh Sharma: ಖಿನ್ನತೆಗೆ ಒಳಗಾಗಿದ್ದ ಬಿಗ್​ ಹಿಟ್ಟರ್​ ಅಶುತೋಷ್‌ ಶರ್ಮ; ಕ್ರಿಕೆಟ್​ ಜರ್ನಿಯೇ ರೋಚಕ

DK Shivakumar
ಕರ್ನಾಟಕ11 mins ago

DK Shivakumar: ಮತಯಾಚನೆ ವೇಳೆ ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಎಫ್‌ಐಆರ್‌

Karnataka Weather Forecast
ಮಳೆ27 mins ago

Karnataka Weather : ಎತ್ತಿನ ಬಂಡಿಯಲ್ಲಿ ಬರುವಾಗ ಸಿಡಿಲು ಬಡಿದು ಬಾಲಕ ಸಾವು; ಭಾರಿ ಮಳೆಗೆ ನಲುಗಿದ ಜನರು

Trust Of The Nation 2024
ಪ್ರಮುಖ ಸುದ್ದಿ44 mins ago

Trust Of The Nation 2024 : ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತ; ಡೈಲಿಹಂಟ್ ಸಮೀಕ್ಷೆ

Modi in Karnataka PM Modi to address rally in Bengaluru Here live video
Lok Sabha Election 20241 hour ago

Modi in Karnataka: ಬೆಂಗಳೂರಲ್ಲಿ ಮೋದಿ ಸಮಾವೇಶ; ಇಲ್ಲಿದೆ LIVE ವಿಡಿಯೊ

Narendra Modi
ದೇಶ1 hour ago

Narendra Modi: ಅಮೇಥಿಯಂತೆ ವಯನಾಡಿನಲ್ಲೂ ರಾಹುಲ್‌ ಗಾಂಧಿಗೆ ಸೋಲು; ಮೋದಿ ಭವಿಷ್ಯ!

Horseshoe Septum Ring Fashion
ಫ್ಯಾಷನ್1 hour ago

Horseshoe Septum Ring Fashion: ಅಲ್ಟ್ರಾ ಮಾಡರ್ನ್‌ ಸ್ಟೈಲಿಂಗ್‌ ಪ್ರಿಯರ ಮನಗೆದ್ದ ಹಾರ್ಸ್‌ ಶೂ ಸೆಪ್ಟಮ್‌ ರಿಂಗ್‌

Mrunal Thakur and Siddhant Chaturvedi to start shoot
ಟಾಲಿವುಡ್1 hour ago

Mrunal Thakur: ಸಿದ್ಧಾಂತ್ ಚತುರ್ವೇದಿ ಜತೆ ಮೃಣಾಲ್ ಠಾಕೂರ್ ರೊಮ್ಯಾನ್ಸ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ2 hours ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20242 hours ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20244 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ6 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ7 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌